ಒಟ್ಟು 3512 ಕಡೆಗಳಲ್ಲಿ , 124 ದಾಸರು , 2504 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪವಮಾನ ಜಗದ ಪ್ರಾಣ ಸಂಕರುಷಣ ಭವನೇ ಭಯಾರಣ್ಯದಹನ ಪ ಶ್ರವಣವೆ ಮೊದಲಾದ ನವವಿಧ ಭಕುತಿಯ ತವಕದಿಂದಲಿ ಕೊಡು ಕವಿಗಳ ಪ್ರೀಯ ಅ.ಪ. ಹೇಮ ಕಚ್ಚುಟ ಉಪವೀತ-ಧರಿಪ ಮಾರುತ ಕಾಮಾದಿ ವರ್ಗರಹಿತ ವ್ಯೋಮಾದಿ ಸರ್ವವ್ಯಾಪುತ-ಸತತ ನಿರ್ಭೀತ ರಾಮಚಂದ್ರನ ನಿಜದೂತ ಯಾಮ ಯಾಮಕೆ ನಿನ್ನರಾಧಿಪುದಕೆ ಕಾಮಿಪೆ ಎನಗಿದ ನೇಮಿಸಿ ಪ್ರತಿದಿನ ಪಾಮರ ಮತಿಯನು ನೀ ಮಾಣಿಪುದು 1 ವಜ್ರ ಶರೀರ ಗಂಭೀರ-ಮಕುಟಧರ ದುರ್ಜನವನ ಕುಠಾರ ನಿರ್ಜರಮಣಿ ದಯಾ ಪಾರಾ-ವಾರ ಉದಾರ ಸಜ್ಜನರಘ ಪರಿಹಾರ ಅರ್ಜುನಗೊಲಿದಂದು ಧ್ವಜವಾನಿಸಿ ನಿಂದು ಮೂರ್ಜಗವರಿವಂತೆ ಗರ್ಜನೆಮಾಡಿದೆ ಹೆಜ್ಜೆ ಹೆಜ್ಜೆಗೆ ನಿನ್ನ ಅಬ್ಜಪಾದದ ಧೂಳಿ- ಮೂರ್ಜನದಲಿ ಭವವರ್ಜಿತನೆನಿಸೊ 2 ಪ್ರಾಣ ಅಪಾನ ಉದಾನ-ವ್ಯಾನ ಸಮಾನ ಆನಂದ ಭಾರತೀರಮಣ ನೀನೆ ಯಾಮ ಯಾಮಕೆ ಜ್ಞಾನ ಧನಪಾಲಿಪ ವರೇಣ್ಯ ನಾನು ನಿರುತದಲಿ ಏನೇನನೆಸಗಿದೆ ಕರ್ಮ ನಿನಗೊಪ್ಪಿಸಿದೆನೊ ಪ್ರಾಣನಾಥ ಸತ್ಯ ವಿಜಯವಿಠ್ಠಲನಕಾಣಿಸಿ ಕೊಡುವುದು ಭಾನು ಪ್ರಕಾಶ 3
--------------
ವಿಜಯದಾಸ
ಪವಮಾನ-ಪಾವನಾ ಜಗಜ್ಜೀವನ ಪ ಶಿವ ಖಗಪತಿ ಅಹಿಸುರ ವಂದಿತಪದ ಅ.ಪ ಸೇವಾ ಕೃಷ್ಣ ಸಾಧನಾ ಕಾವಕರುಣಿ ಕಿಂಪುರುಷ ಖಂಡಾಧಿಪ ಕಾವಳದೊಳು ನಿನ್ನವರನು ಕಾಯ್ದೆ ಭೂವಳಯದೊಳವಿದ್ಯೆಯನಳಿಸಿದ ಸದ್ವರ್ತನು ನೀನೆನ್ನನುದ್ಧರಿಸಯ್ಯ 1 ಶರಧಿ ಹಾರಿದೆ | ಕೌರವ ಕಲಿಯಾ ನೀ ಗದೆಯಿಂ ಛೇದಿಸಿದೆ ಧಾರುಣಿಯೊಳು ಯತಿಪುಂಗವನೆಂದೆನಿಸಿದೆ ನಿರುತದಿ ರಾಮರ ಕಾರ್ಯವ ಸಾಧಿಸಿ ವಿರಥರ ಮಾಡಿದೆ ಅತಿರಥರುಗಳ ಹರಿಸರ್ವೋತ್ತಮ ತರತÀಮ ಸತ್ತತ್ವಗ ಳರುಹಿದ ಸದ್ವರ್ತನು ನೀನೆ 2 ರಾಮಪದಕುಮುದಸೋಮ ಭೀಮಾ ರಿಪುಕುಲ ಧೂಮ ನಿಸ್ಸೀಮ ಶ್ರೀಮದಾನಂದಮುನಿ ಸಾರ್ವಭೌಮ ಭೂಮಿಜೆ ಕುರುಹ ಶ್ರೀರಾಮರಿಗರ್ಪಿಸಿ ಅ ಮಹ ಬಕ ಕೀಚಕರ ಸಂಹರಿಸಿ ತಾಮಸ ಗ್ರಂಥವನಳಿಸಿ ಜನಕೆ ಸದ್ಬೋಧೆ ಇತ್ತ ಗುರು ಪೂರ್ಣಬೋಧನೆ 3 ದ್ರೋಣಾಚಲವ ತಂದ ಪ್ರಾಣ ಎಣೆಯುಂಟೆ ಬಲದೊಳು ನೀನೆ ನಿಸ್ಸೀಮ ಕಾಣೆನೊ ಜಗದಿ ಪರಮಹಂಸರ ಪ್ರಾಣ ಪ್ರಾಣಿಗಳೊಳಗೆ ಮುಖ್ಯಪ್ರಾಣನೆಂದೆನಿಸಿದೆ ಕ್ಷೋಣಿಯೊಳು ಕುರುಸೇನೆ ಸಂಹರಿಸಿ ಕ್ಷೀಣವಾಗುತಲಿಹ ಸುಜನರ ಮನಸ ತ್ರಾಣ ಮಾಡಿ ಸತ್ಪ್ರಮಾಣಗಳಿತ್ತೆ4 ಋಜುಪುಂಗವ ದೇವಾ ಹನುಮಾ ಗಜಪುರಾಗ್ರಣಿ ಕೌರವನಿಗೆ ನೀ ಕಾಲಯಮ ಕುಲಿಶ ನಿಸ್ಸೀಮ ಅಜಪದ ಪಡೆದಿ ಶ್ರೀ ಆಂಜನೇಯನೆ ವಿಜಯಸಾರಥಿನೊಲಿಸಿ ಪೂಜಿಸಿ ಸೃಜಿಸಿ ಮರೆದೆ ಸಚ್ಛಾಸ್ತ್ರದಿಂದ ಈ ಚತುರ್ದಶಭುವನಾಚಾರ್ಯನೆನಿಸಿದೆ 5 ಖೂಳ ಅಕ್ಷಕುವರನ ಹರಿಸೆ ಖಳರ ಕಾಳೋರಗ ಬಾಧೆ ಲೆಕ್ಕಿಸದೆ ಖಳ ಭೂದೈತ್ಯರ ಬಾಧೆ ಹರಿಸಿದೆ ಬಾಲತನದಲಿ ಭಾನುಮಂಡಲ ಹಾರಿದೆ ಲೋಲತನದಿ ಸತಿಗೆ ಪೂವಿತ್ತೆ ಶೀಲಮೂರುತಿ ಮಾಯ ಜಾಲ ಹರಿಸಿ ಜಗಖ್ಯಾತನಾದೆ ಯತಿದಶಪ್ರಮತಿಯೆ 6 ಮಾರುತಿ ಧೀಮಂತಮೂರುತಿ ಭಾರತದಿ ಭೂಭಾರನಿಳುಹಿದ ಖ್ಯಾತಿ ಸಾರ ಶ್ರೀ ಬಾದರಾಯಣಗೆ ಅತಿಪ್ರೀತಿ ಅರಿಪುರ ವೈಶ್ವಾನರನಿಗರ್ಪಿಸಿ ವಾರಣಪುರದೊಳು ಅತಿರಥನೆನಿಸಿ ದುರ್ವಾದಿಮತ್ತಗಜಸಿಂಹನಾಗಿ ನೀ ನಿವ್ರ್ಯಾಜÀದ ಭಕ್ತಿಯ ಹರಿಗರ್ಪಿಸಿದೆಯೊ 7 ಹನುಮಾ ಭೀಮಾ ಆನಂದ ಮುನಿಪಾ ಆ ವಾನರಾಧಿಪಾ ಗಜಪುರಾಧಿಪ ಯತಿಪಾ ಧ್ಯಾನನಿರತ ರಾಮಪದದಿ ಮಾನಸದಲ್ಲಿ ಯದುಪತಿಯ ಪೂಜಿಸಿ ದೀನಜನರುದ್ಧಾರಮಾಡಿ ಸದ್ಬೋಧೆ ಯನಿತ್ತ ಮಧ್ವಮುನಿಯೆ 8 ರಾಮಾಲಿಂಗನ ಮಾಡಿದಾ ರೋಮ ರೋಮಕೆ ಕೋಟಿಲಿಂಗವ ಸೃಜಿಸಿದಾ ಶ್ರೀಮಧ್ಯಗೇಹಾರ್ಯಸೂನುವೆಂದೆನಿಸಿದಾ ಆ ಮಹಾರ್ಣವ ಲಂಘಿಸಿದಾ ಧೀರಾ ಭೀಮಭಯಂಕರ ದ್ರೌಪದೀಪ್ರಿಯಕರ ಈ ಮಹಿಮೆಯೊಳಾರೆಣೆಯೋ ನಿನಗೆ ನಿ ಸ್ಸೀಮನಹುದೋ ಯತಿಸಾರ್ವಭೌಮನೆ 9 ಸುರಜೇಷ್ಠಾನಸ್ತ್ರ ಮಾನಿಸಿದಾ| ಜರೆಯನ ಸೀಳಿ ನಿರಪರ ಸೆರೆಯ ಬಿಡಿಸಿದಾ ಧರೆಯೊಳ್ ಸುರಶ್ರೇಷ್ಠನೆಂದೆನಿಸಿದಾ ಭರದೊಳು ಭರತೆಗೆ ಕುಶಲವ ತಿಳಿಸಿ ಕರುಳಮತಿಯಿಂ ಸತಿಯ ಸಂತೈಸಿ ದುರುಳ ಭಾಷ್ಯಂಗಳ ತತ್ತ್ವವನಳಿಸಿದಾ ಪರಮದಯಾಂಬುನಿಧಿ ಶ್ರೀಮದಾನಂದ 10 ರಕ್ಷಕ ನೀನೆ ಸಜೀವ ಲಾಕ್ಷ್ಯಾಗಾರದ ಬಾಧೆÉಯಿಂ ರಕ್ಷಿಸಿ ಮೆರೆದಯ್ಯ ಈ ಕ್ಷಿತಿಯೊಳು ದೈತ್ಯ ಶಿಕ್ಷಕನೆನಿಸಿದೆ ತಕ್ಷಣ ಸಿಂಹಿಕೆ ಕುಕ್ಷಿಯ ಸೀಳ್ದೆ ಭಿಕ್ಷೆಯಿಂದ ನಿನ್ನವರನು ಕಾಯ್ದೆ ದಕ್ಷನಹುದೊ ನೀನಚ್ಯುತ ಪ್ರೇಕ್ಷರಿಂ ದೀಕ್ಷೆಯ ವಹಿಸಿ ಸತ್ಸಿಕ್ಷಕನಾದ್ಯೊ 11 ನೀ ರಂಜಿಸಿ ಮೆರೆದೆಯೊ ಗುರು ಮಧ್ವಾರ್ಯ ಧೀರ ಕೇಸರಿಕುವರ ಪುರುಷಾಮೃಗವ ಸಾಧಿಸಿ ತಂದ ಶೂರ ಈ ಧರಾವಲಯದಿ ತೋರಿದೆ ತತ್ವಸಾರ ತೋರಿ ಭಕ್ತಿ ಶ್ರೀರಾಮರ ಪದದಿ ಕಂ ಸಾರಿಯ ಸೇವಿಸಿ ಭಾರವನಿಳುಹಿದೆ ಸಾರಿದೆ ಹರಿಸರ್ವೋತ್ತಮ ತರತಮಭೇದವನರುಹಿದ ಪರಮದಯಾಳೊ12 ಅಂಜನೆ ಕುವರಾ ಧೀರಾ ಕುಂಜರಪುರದ ಅರಿಗಳಂಜಿಸಿದ ಶೂರ ಧರಣಿ ದುರ್ಮದಾಂಧರ ದುರ್ವಾದ ಪಂಕಜೋದ್ಭವನ ಪದವ ಪಡೆವೆ ನೀ ಅಂಜದೆ ಗದೆಯಿಂ ಕೊಂದೆ ಕುರುಪನ ಮಂಜುಳವಾಣಿಯ ಜಗಕೆ ಇತ್ತು ನೀ ರಂಜಿಸಿ ಮರೆದೆಯೊ ಗುರುಮಧ್ವಾರ್ಯ 13 ರೋಚಕ ನಾಮಕನೆನಿಸಿ ಪು ರೋಚನನ ಕಾರ್ಯವನೆಲ್ಲಾ ಕೆಡಿಸಿ ಪಾಜಕ ಕ್ಷೇತ್ರ ಪವಿತ್ರ ಮಾಡಿದೀ ಖೇಚರಮಾರ್ಗದಿ ನೆಗಹಿ ನಿ ಶಾಚರರೆÉಲ್ಲರ ಸದೆದೆ ಗದೆಯಿಂ ಸೂಚಿತ ಗ್ರಂಥ ವಿರಚಿಸಿ ಜಗಕೆ ನೀ ಗೋಚರಿಸಿದೆಯೊ ತ್ರಿಜಗಾಚಾರ್ಯ 14 ರಣದೊಳು ಘುಣಿವಿರೂಪಾನೆತ್ತಿದೆ ಬಾಣಸಿಗನೆನಿಸಿ ಮತ್ಸ್ಯದೇಶವ ಸೇರ್ದೆ ಕ್ಷೋಣಿಯೊಳು ಗುಣವಾರಿಧಿ ಎನಿಸಿದೆ ಗಣನೆ ಇಲ್ಲದೆ ಗಿರಿಯನೆಗಹಿದೆ ಹಣಿದೆ ಹಿಡಿಂಬಾಸುರನ ಸೀಳಿದೆ ಮಣಿಮಂತಾದಿ ದುರಾತ್ಮರಿಗೆ ನೀನಂತಕನೆನಿಸಿದೆ ಶಾಂತಮೂರುತಿಯೆ15 ವಿಜಯರಥಕೆ ನೀ ಕೇತುನಾಥ ವಿಜಯಸಾರಥಿಯಾ ದೂತ ವಿಜಯದಶಮಿಯೊಳ್ ಜನಿತ ಸೋಜಿಗ ತೋರಿ ಸಂಜೀವನ ತಂದೆ ಆ ಜಗಜಟ್ಟಿಗಳೆಲ್ಲರ ಸದೆದೆ ಈ ಜಗದೊಳು ಸರಿಗಾಣೆ ಜಗದೊ ಳು ಜಗದ್ಗುರುವಹುದೋ ನೀ ಗುರುಪೀಳಿಗೆಗೆ16 ಮಂಗಳಮೂರುತಿ ಮಾರುತಿ ಸೌಗಂಧಿಕ ನೆವದಿ ಮರುತನೊಳ್ ನೀ ಸೆಣೆಸಿದಿ ಶೃಂಗಾರ ಗೋಪಿನಂದನನ ಸ್ಥಾಪಿಸಿದೆ ಭಂಗಿಸಿ ವನವನು ಉಂಗುರವನು ತಂದೆ ಸಂಗರ ಹನುಮನೊಳ್ ನೀಡಿ ಮೋಹ ತೋರ್ದೆ ಅಂಗಜಪಿತನ ಇಂಗಿತವರಿತು ಭಂಗಿಸಿದೆಯೊ ದುಶ್ಯಾಸ್ತ್ರಂಗಳನು 17 ಕೇಸರಿ ಕ್ಷೇತ್ರ ಜನಿತಾಭೂಸು ರ ಸುತನ ಭೀತಿಯ ನೀ ಬಿಡಿಸಿದೆ ವಸುಮತಿಯೊಳು ಸುರಶ್ರೇಷ್ಠನೆಂದೆನಿಸಿದೆ ಕೋಸಲನಗರಾಧೀಶನ ಪ್ರೀಯ ವಾಸುದೇವಗರ್ಪಿಸಿದೆ ಅಧ್ವರ್ಯ ಶ್ರೀಶನಾಜ್ಞೆಯ ತಾ ಶಿರದಿ ಧರಿಸಿ ಪ್ರ ಕಾಶ ಮಾಡ್ದೆ ಸರ್ವಮೂಲಗ್ರಂಥವ 18 ಶ್ವಾಸನಿಯಾಮಕನೆನಿಸಿದೆ ಪ್ರ ಯಾಸವಿಲ್ಲದೆ ವನವಾಸಂಚರಿಸಿದೆ ಶ್ರೀ ವ್ಯಾಸರಿಗೆ ಅತಿಮೋದವ ಪಡಿಸಿದೆ ಶ್ರೀಶನಾಜ್ಞೆಯಲ್ಲಿ ಕೀಶನಾಗಿ ನಿಂದು ನಿಶಾಚರರೆÉಲ್ಲರ ಸದೆದೆ ಗದೆಯಿಂದ ಶ್ರೀಶನೆ ಸರ್ವೋತ್ತಮನೆಂಬ ಸತ್ಸಿದ್ಧಾಂತವ ತೋರಿದ ಸದ್ಗುಣಪೂರ್ಣ 19 ಸರ್ವಜೀವರ ತ್ರಾಣ ಪ್ರಾಣ ಗರ್ವಿಸಿದವರೊಳು ನೀ ಗರ್ವ ಹರಣ ಸರ್ವಜ್ಞಾಚಾರ್ಯ ಗುರುವರೇಣ್ಯ ಪೂರ್ವದೇವರ ಗರ್ವವನಿಳುಹಿ ಸರ್ವ ಕೌರವರ ಪಡೆಯನು ಸವರಿದೆ ಉರ್ವಿಯೊಳು ಜನಿಸಿದ ದುರ್ಮದಾಂಧರ ಗರ್ವಹರಣಮಾಡಿ ಕರುಣವ ತೋರಿದೆ 20 ಶ್ರೀರಾಮನೇಕಾಂತ ಭಕ್ತ ಶೌರಿಯ ಆಜ್ಞೆಯಿಂ ಸರ್ವಕಾರ್ಯಸಕ್ತ ಧಾರುಣಿಯೊಳು ಸಚ್ಛಾಸ್ತ್ರಕರ್ತ ಹಾರಿದೆ ಶರಧಿಯ ಅಣುಮಹದ್ರೂಪದಿ ತೋರಿದೆ ಶಕ್ತಿಯ ಗಿರಿ ತರುತೃಣವತ್ ಸಾರಿದೆ ಧರಣಿಯ ಸುರಜನುಮದಿ ನೀ ಬೀರಿದೆ ಸುಜನಕೆ ತತ್ವಾಮೃತವ 21 ಕಾಶಿ ಕಂಚುಕವ ಧರಿಸಿದೆ ಕಾಶ್ಯಪಿಯೊಳು ಕಾವಿಶಾಟಿಯ ಧರಿಸಿದೆ ಕೀಶತನದಿ ಹರಿಕಾರ್ಯವ ಸಾಧಿಸಿ ಜಗ ದೀಶಕುಲದೊಳು ಜನಿಸಿ ಮೆರೆದೆ ವೇದ ವ್ಯಾಸ ಪದಕಮಲ ಮಧುಪ ಜಗಖ್ಯಾತನಾ ದ ಶ್ರೀ ಮಧ್ವಸೂರ್ಯನೆ 22 ಸುಗ್ರೀವಗಭಯ ಕೊಡಿಸಿದಾ ಮ ಹೋಗ್ರರಾದ ದ್ವೇಷಿಗಳ ಸವರಿದಾ ಸ ಮಗ್ರ ಸಿದ್ಧಾಂತ ರಚಿಸಿದಾ ವಿಗ್ರಹದೊಳು ಧಾತಾಸ್ತ್ರವ ಮಾನಿಸಿ ಅಗ್ರಹರಿಪುಕುಲ ಕಾಲನೆಂದೆನಿಸಿ ಉಗ್ರವಾದಿಗಳ ದುರಾಗ್ರಹ ವಿಗ್ರಹ ಶೀಘ್ರದಿ ಮಾಡಿ ಅನುಗ್ರಹವಿತ್ತೇ23 ಸೋಮಕುಲದೊಳು ನೀನೆ ಅತಿ ಬಲವಂತ ಈ ಮಹಿಯೊಳು ರೌಪ್ಯಪೀಠದಿ ಜನಿತ ರಾಮಾಂಗನೆಯ ಪ್ರೇಮದ ದೂತ ಸೋಮಶೇಖರನ ಕೇದಾರಕಟ್ಟಿದ ಸ್ವಾಮಿಗೆ ಪ್ರಕೃತಿಯ ಮಾಯವ ಪೇಳ್ವ ಕೇಸರಿ ಎನಿಸಿದೆ 24 ಮಾರ್ಜಾಲರೂಪವ ಧರಿಸಿದೆ ನೀ ನರ್ಜುನಾಗ್ರಜಾದಿಗಳ ಪೊರೆದೇ ನೀ ಸರ್ಜಿಸಿ ತೋರ್ದೆ ಸತ್ಸತ್ವಗಳೆಲ್ಲ ಘರ್ಜಿಸಿ ಅರ್ಜುನನ ರಥದಲಿ ನೆಲೆಸಿದೆ ಮೂರ್ಜಗಜಟ್ಟಿಗಳೆಲ್ಲರ ಸದೆದೆ ವರ್ಜಿಸಿ ಅರಿಷಡ್ವರ್ಗಗಳೆಲ್ಲವ ದುರ್ಜಯವಾದಕೆ ಘರ್ಜನೆ ಮಾಡಿದೆ 25 ವಾಯುಕುವರ ಅಸುವರ ಕಾಯಜನಯ್ಯನ ಅತಿಪ್ರೀಯಾ ಶೂರಾ ಜೀಯಾ ನೀನಿತ್ತೆ ಸದ್ಗ್ರಂಥವಿಸ್ತಾರಾ ಕಾಯಕಭಕುತಿ ಶ್ರೀರಾಮರಿಗರ್ಪಿಸಿ ಮಾನಸದಲಿ ಯದುಪತಿಯ ಪೂಜಿಸಿ ಮಾಯಮತವ ನಿರಾಕರಿಸಿ ವಾಚದಿ ಶ್ರೀಯರಸನ ಮೆಚ್ಚಿಸಿದೆ ಯತೀಂದ್ರ 26 ವಾತಜಾತ ಹನುಮಂತ ಖ್ಯಾತ ದ್ವಾಪರದಿ ದ್ರೌಪದೀಕಾಂತ ಭೂತಳದೊಳು ಯತಿನಾಥ ಅತಿಶಾಂತ ಧತಾಜನಕ ಶ್ರೀ ವೇಂಕಟೇಶನ ಪ್ರೀತಿಪಾತ್ರ ಶ್ರೀಕೃಷ್ಣನಂಘ್ರಿಗೆ ಖ್ಯಾತನಾದೆ ಸೂತ್ರಾರ್ಥಪೇಳಿ ಕೃಪಾಪಾತ್ರನಾದೆ ಶ್ರೀ ಬಾದರಾಯಣಗೆ27
--------------
ಉರಗಾದ್ರಿವಾಸವಿಠಲದಾಸರು
ಪವಮಾನಾ ಮದ್ಗುರವೆ ಪವಮಾನಾ ಪ ಪರಾಕು | ನಾನು | ವಾಕು || ಆಹಾ | ತವಕದಿಂದಲಿ ಸಂಭವಿಸುವ ಮತಿಯಿತ್ತು | ಭವದಿಂದ ಕಡೆಗಿತ್ತು ಅ.ಪ. ಆಶ್ರಿತಜನ ಕಲ್ಪವೃಕ್ಷಾ | ನಿನ್ನ | ಆಶೆಮಾಡಿದೆ ಬಲು ದೀಕ್ಷಾ | ಗುಣರಾಶಿವಿರಾಗ ಪ್ರತ್ಯಕ್ಷ | ವಾಗಿ | ದಾಸತ್ವ ಕೊಡು ಬಲುದೀಕ್ಷಾ || ಆಹಾ || ಏಸು ಜನ್ಮಗಳಿಂದ | ದೋಷವ ಕಳೆದು ಸಂ | ಕರ್ಣ | ಭೂಷಣ ಕೃಪೆ ಮಾಡೊ 1 ಜ್ಞಾನ ಪ್ರಾಣೋತ್ತಮ ರೂಪ | ನಿನ್ನ | ನಾನು ನಂಬಿದೆನೊ ಪ್ರತಾಪ | ಸುರ | ಧೇನು ಭಕ್ತರಿಗೆ ಸಮೀಪ | ಜಗ | ತ್ರಾಣ ಕಪಿಕುಲ ದೀಪ || ಆಹಾ || ಆನಾದಿಯಲಿ ಬಂದು | ಙÁ್ಞನವ ನೋಡಿಸಿ | ಮಾನಸದಲಿ ಭೇದ | ವನ್ನು ಕರುಣಿಸು ನಿತ್ಯಾ 2 ಹರಿದಾಸರೊಳು ಅಗ್ರಣಿಯೆ | ನೋಡು | ಸುರರೊಳು ನಿನಗಾರು ಯೆಣೆಯಾ | ಚಿಂತಿ | ಪರಿಗೆ ಆವಾವಾ ಹೊಣೆಯೇ | ಆಹಾ | ಕರವ ಮುಗಿವೆ ಸಂ | ತೈಸು ಸ್ವಧÀರ್ಮವ | ಮೊರೆ ಹೊಕ್ಕವರ ವಿ | ಸ್ತರವಾಗಿ ಪ್ರತಿದಿನ 3 ತತ್ವೇಶ ಜನರೆಲ್ಲ ನೆರೆದು | ಅಹಂ | ಮತಿಯಲ್ಲಿ ಸತ್ಕರ್ಮ ಮರೆದು | ನಿನ್ನ | ನುತಿಸದೆ ಅತಿಶಯ ಜರೆದು | ತಮ್ಮ | ಗತಿಯೆಲ್ಲ ಅಲ್ಲಲ್ಲೆ ಮರೆದು || ಆಹಾ || ಚತುರಾನನ ಶ್ರೀ | ಪತಿನೋಡುತಲಿರೆ | ಪ್ರತಿಕಕ್ಷಿಯಲ್ಲಿ ಸಂ | ತತಿಯೆನಿಸಿಕೊಂಡೇ 4 ಇಂದ್ರಿಯಂಗಳ ನಿಯಾಮಕನೇ | ಗುಣ | ನಿರ್ಜರ ನಾಯಕನೆ | ಪಾಪ | ಸಿಂಧು ಬತ್ತಿಪ ಪಾವಕನೆ | ನಿಜ | ಬಂಧು ಸಂಶ್ರಿತ ತಾರಕನೇ ||ಆಹಾ || ಇಂದು ಮಹಾದಯ | ಕರ | ತಂದು ಉದ್ದರಿಸಿದ | ಇಂದ್ರಪ್ರಸ್ತನೇ 5 ವಾಕು | ದೇವ | ಯೆನ್ನ ಕುತ್ಸಿತ ಮನ ನೂಕು | ಮುನ್ನೆ | ಘನ್ನ ಭಕುತಿಯ ನೀಡಬೇಕು | ಇಂತು | ಪುಣ್ಯಮಾಡಿಸಿ ಬಿಡದೆ ಸಾಕು ||ಆಹಾ || ಕಣ್ಣುಕಾಣದೆ ಘೋರಾ | ರಣ್ಯದಿ ಬಿದ್ದಿಹೆ | ಬನ್ನ ಬಡಿಸುವದು | ನಿನ್ನ ಧರ್ಮವಲ್ಲಾ 6 ಎಣೆಗಾಣೆನೊ ನಿನ್ನ ಪ್ರೇಮ | ಅನು | ಗುಣ್ಯವಾಗಲಿ ನಿಸ್ಸೀಮ | ಸುಪ್ರ | ಧಾಮ | ಗುಣ | ಪೂರ್ಣ ಮಧ್ವ ಹನುಮ ಭೀಮ ||ಆಹಾ|| ಪನ್ನಂಗಾರಿ ವಾ | ಹನ್ನ ವಿಜಯವಿಠ್ಠ | ಲನ್ನ ಮೂರುತಿಯನ್ನು |ನಿನ್ನೊಳು ತೋರಿಸೋ7
--------------
ವಿಜಯದಾಸ
ಪಾದ 1ಸುರರ ಮಣಿಮಕುಟಗಳು ಸೋಕಿ ಶೋಭಿಪ ಪಾದಪರಮ ಪಾವನೆ ಲಕ್ಷ್ಮಿ ಪಿಡಿದೊತ್ತುವ ಪಾದಧುರದಿ ನರರಥವೇರಿ ದೇದೀಪಿಸಿದ ಪಾದಹರಿವೈರಿಕರಗಳಲಿ ಹೊಳೆವ ಪಾದ 2ಸಿರಿಯುಳ್ಳ ಕುರುಪತಿಯ ಶಿರವೆರಗಿಸಿದ ಪಾದಪರಿದು ನಾಗನ ಶಿರಗಳೊಳು ಹೊಳೆದ ಪಾದಅರವಿಂದಮುಖಿಯರೊಡನತಿ ನರ್ತಿಸಿದ ಪಾದನೆರೆ ಜರೆದ ಶಿಶುಪಾಲನ್ನೊಳಗಿಟ್ಟ ಪಾದ 3ಕರುಗಳೊಡಗೂಡಿ ಕಾನನದಲಾಡಿದ ಪಾದಕರುಣದಿಂ ಪಾಂಡವರ ಕಾಯ್ದ ಪಾದಮರೆಯೊಕ್ಕ ಸುಜನರಿಗೆ ಮುಕ್ತಿಗೊಡುತಿಹ ಪಾದಸ್ಮರಿಸಲಘರಾಶಿಗಳ ಸಂಹರಿಪ ಪಾದ 4ಬಲಿ ಯಜ್ಞವಾಟಕ್ಕೆ ಬಂದು ನೆಲಸಿದ ಪಾದಬಲು ಬೆಳೆದು ಲೋಕಗಳ ಬಂಧಿಸಿದ ಪಾದಕಲಕಿ ಗಂಗೆಯ ಧರೆಗೆ ಕೋಡಿವರಿಸಿದ ಪಾದಸುಲಭದಿಂ ಭಕ್ತರಿಗೆ ಸುಖವೀವ ಪಾದ 5ಧ್ವಜರೇಖೆುಂ ಕೂಡಿ ಥಳಿಥಳಿಸುತಿಹ ಪಾದವಿಜಯವಹ ವಜ್ರದಿಂದೊಪ್ಪುತಿಹ ಪಾದಗಜವ ಶಿಕ್ಷಿಪಮುದ್ರೆ ಗೋಚರಿಸುತಿಹ ಪಾದನಿಜಪದ್ಮದಿಂ ಲೋಕನಿಧಿಯಾದ ಪಾದ 6ಅರೆಯಾದ ಸತಿಯನಂಗನೆಯ ಮಾಡಿದ ಪಾದಧರೆಯ ಧರಿಸಿಹ ಶೇಷ ಧ್ಯಾನಿಸುವ ಪಾದತರುಣನಾಯಕ ಪುರದಿ ಸ್ಥಿರದಿ ನೆಲಸಿದ ಪಾದತಿರುಪತಿಯ ವೆಂಕಟೇಶ್ವರ ನಿಮ್ಮ ಪಾದ 7ಓಂ ವೃಷಭಾಸುರ ವಿಧ್ವಂಸಿನೇ ನಮಃ
--------------
ತಿಮ್ಮಪ್ಪದಾಸರು
ಪಾದ ನಾ ನಿಮ್ಮ ಧ್ರುವ ಮಹಾಮಹಿಮೆ ನೀ ದಾನತಹುದೋ ಶ್ರೀ ಅವಧೂತ ಗುಹ್ಯಗುಪಿತ ಶ್ರೀನಾಥ ಸುಹೃದಯದಲಿ ಸಾಕ್ಷಾತ 1 ಅನಾಥರ ಸಹಕಾರ ಮುನಿಜನರ ಮಂದಾರ ಘನಗುರು ಜ್ಞಾನಾಸಾಗರ ದೀನಜನರ ಉದ್ಧಾರ 2 ಮಹಾಗುರು ನಿಜನಿಧಾನ ಬಾಹ್ಯಾಂತ್ರದಲಿ ಪರಿಪೂರ್ಣ ಮಹಿಪತಿ ಜೀವನಪ್ರಾಣ ಇಹ್ಯಪರ ನೀ ಭೂಷಣ3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಪಾದ ನಿಜವಾಗಿ ಕಂಡೆನು ಪ್ರೇಮದಿಂದಲಿಯೆನ್ನ ಸೇರಿ ಕೊಂಡಾಡೋ ಪ ನಿತ್ಯ ನಲಿಯುತ್ತಲಿರುವದು ಕಾಲಕಾಲಕೆ ಮತ್ತೆ ಸೇವೆಗೊಳುವದು ಬಾಲರು ಪಿಡಿದರೆ ಇಷ್ಟವ ಕೊಡುವದು ಓಲೈಸಿ ಭಕ್ತಗೆ ವರವನೀಯುವÀದು 1 ಪಾದ ಮಧ್ಯದಿ ಪದ್ಮ ರೇಖೆಯ ಕಂಡೆನು ಸಾಧು ಸಜ್ಜನರು ಪೂಜೆಯ ಮಾಡುವುದನು ಖೇದವ ನೀಗುವ ಬೆರಳನು ಕಂಡೆನು ಆದ್ಯಂತವಿಲ್ಲದೆ ನಿರುತವಾದುದನು2 ಮನದಣಿ ನೋಡಿದೆ ಪಾದಯುಗ್ಮಗಳನ್ನು ಮನಲೇಪ ಮಾಡಿದೆ ಹರಿಪಾದಗಳಿಗೇ ಅನುದಿನ ದೂರ್ವಾಪುರದಿ ನೆಲೆಸಿರುವಂಥ ಘನಕೋಟಿ ತೇಜದ ಕೇಶವ ಪದವ 3
--------------
ಕರ್ಕಿ ಕೇಶವದಾಸ
ಪಾದ ಪಂಕಜವನು ಪ ಮಂಕುಮತಿಯ ಬಿಡಿಸಿ ನಿನ್ನ ಕಿಂಕರನೆಂದೆನಿಸೊ ಅ.ಪ. ಕಲಿಯುಗದೊಳು ನೀನು ಸಕಲ ಸುಜನರ ಕಲುಷ ಕಳೆಯುವೆನೆಂದು ಬಹುಮೋದದಿಂದ ಎಲರುಣಿ ಪರುವತದೊಳಗೆ ವಾಸನಾಗಿ ಕರ ಪಿಡಿದಂಥ 1 ತೆತ್ತೀಸಕೋಟಿ ದೇವತೆಗಳು ತನ್ನ ಸುತ್ತಲು ನಿಂತು ಪರಿಚರಿಯವನು ಮಾಡೆ ಎತ್ತ ನೋಡಲು ಸಿರಿಯು ಓ ಎನುತಿರೆ ಚಿತ್ತಜನೈಯ್ಯನು ನಗುತ ನಿಂದಿರುವಂಥ 2 ಭುವನತ್ರಯಂಗಳನೆಲ್ಲ ಲೀಲೆಯಿಂ ಕಾವ ಪವನವಂದಿತನೆ ಮಹಾನುಭಾವ ನವ ಮೋಹನಾಂಗ ಶ್ರೀ ರಂಗೇಶವಿಠಲಜವನ ಬಾಧೆಯ ಬಿಡಿಸಯ್ಯಾ ಶ್ರೀಲೋಲ 3
--------------
ರಂಗೇಶವಿಠಲದಾಸರು
ಪಾದ ವನಜ | ಸೂಸಿ ಭಜಿಸಿರೋ |ವ್ಯಾಸ ತೀರ್ಥ ಶಿಷ್ಯರೆಂದು | ಭಾಸಿಸಿದ್ದರೋ ಪ ಪುರಂದರ ಗಡದಿ | ವಾಸರಿದ್ದರಾಪರಮ ಲೋಭಿ ನವ ಕೋಟಿ | ದ್ರವ್ಯವಿದ್ದರಾ 1 ಬಂದ ಕಾರ್ಯ ಮರೆತನೆಂದು | ಹರಿಯು ಚಿಂತಿಸೀಇಂದಿರೇಶ ದ್ವಿಜನಾಗಿ | ಹುಡುಗನಾವೆರಸೀ ||ಬಂದು ಮಗನ ಮುಂಜಿಗಾಗಿ | ಧನವನು ಬಯಸೀ ||ನಂದ ಕಂದ ತಿರುಗುತ್ತಿದ್ದ | ಅಂಗಲಾಚಿಸೀ 2 ಭಿಕ್ಷುಕನ್ನ ಬಿಡದಂತೆ | ಅಂಗಡಿಯಲ್ಲಿಶಿಕ್ಷಿಸೀದ ಆಳುಗಳ | ಲೋಭಿ ತಾನಲ್ಲಿ ||ತ್ರ್ಯಕ್ಷಸೇವ್ಯ ತಿಂಗಳಾರು | ತಿರುಗಿದನಲ್ಲೀಲಕ್ಷಿಸಾದೆ ಮೆರೆಯುತಿದ್ದ | ಕಾಣದಂತಲ್ಲಿ3 ಕಟ್ಟಕಡೆಗೆ ಸವೆದ ನಾಣ್ಯ | ಚೀಲ ವೆಸೆಯುತ್ತಕಟ್ಟು ಮಾಡ್ದ ದುಡ್ಡೊಂದನ್ನು | ಕೊಳ್ಳೆಂದೆನುತ್ತ ||ಅಟ್ಟುಗಳಿಗೆ ಬೇಸರಿಸಿ | ಮುಂದೆ ಹೋಗುತ್ತ |ಥಟ್ಟನ್ಹೋದ ಹಿತ್ತಲಿನ | ಕದವ ಸಾರುತ್ತ 4 ಅಲ್ಲಿನಿಂತ ಲೋಭಿ ಸತಿಯ | ಬಳಿಗೆ ಪೋಗುತ್ತಬಲ್ಲ ಹರಿಯ ಧನವ ಬೇಡ್ದ | ಮುಂಜಿಗೆನ್ನುತ್ತ ||ನಲ್ಲ ಬೈವನೆಂದು ಬೆದರಿ | ಇಲ್ಲವೆನ್ನುತ್ತಚೆಲ್ವ ಸತಿಯು ಪೇಳೆ ಅವಳ | ಮೂಗ್ತಿ ನೋಡುತ್ತ 5 ತವರು ಮನೆಯ ದ್ರವ್ಯದಾನ | ಮಾಡು ನೀನೆಂದಅವಳು ತನ್ನ ಮೂಗುತಿಯ | ಕೊಟ್ಟುದೆ ಛಂದ ||ಇವನು ಅದನ ಸಾಹುಕಾರ್ನ | ಮುಂದಾಕಿ ಅಂದಜವದಿ ನಾನೂರ್ಪಾಕಿ ಹಣ | ತನಗೆ ಬೇಕೆಂದ 6 ನಾಯಕನು ಕೈಲಿ ತೆಗೆದು ನೋಡುತ್ತಲಿರೇಶ್ರೀಯರಸ ಪೋದತಾನು | ಕಣ್ಣಿಗೆ ಮರೇ ||ಕಾಯುತ್ತಿದ್ದ ಆಳು ಹಿಡುಕಿ | ಸಿಗದೆತಾಬರೇನಾಯಕನದ ಭದ್ರಮಾಡಿ | ಸತಿಬಳಿಗೆ ಬರೇ 7 ಬರಿಯ ನಾಸಿಕವ ನೋಡಿ | ಮೂಗ್ತಿ ಎಲ್ಲೆನಲುಸರಿಯ ಪಡಿಸಲಿಕ್ಕೆ ಕೊಟ್ಟು | ಇರುವೆ ನೆನ್ನಲುತ್ವರದಿ ತೋರದಿರೆ ನಿನ್ನ | ಅರೆವೆ ನೆನ್ನಲು |ಬರುವೆ ಬೇಗ ಎಂದು ಪೋಗಿ | ಗರದ ಬಟ್ಟಲು 8 ಕರದಿ ಪಿಡಿದು ತುಳಸಿ ಮುಂದೆ | ಮೊರೆಯ ನಿಡುತಿರೇಗರದ ಬಟ್ಟಲೊಳು ಬಿದ್ದ | ಶಬ್ದವು ಬರೇ ||ಹರುಷದಿ ದಿಗ್ಗನೆ ಎದ್ದು | ಪತಿಗೆ ತಾತೋರೇಗರ ಹೊಡೆದಂತವನಾಗಿ | ಮೋರೆಯ ತೋರೇ 9 ಹೆಂಡತಿಯ ಕೇಳಿ ತಿಳಿದ | ಆದ ಪರಿಯಾಮಂಡೆ ಬಾಗಿ ತಾನು ಆದ | ಹೊಸ ಪರಿಯಾ ||ಕೊಂಡಾಡಿದ ಪತ್ನಿ ಚರ್ಯ | ಹರಿಯ ಭಕ್ತಿಯಬಂಡುಣಿ ಹರಿಪಾದಾಬ್ಜದಿ | ತೊರೆದ ಮನೆಯ 10 ಪಾದ ನಮಿಸೀಬಾರಿ ಬಾರಿ ಹರಿಯ ತತ್ವ | ಕೇಳಿ ಸುಖಿಸೀ 11 ಪುರಂದರ ಸಾರ ಭಾಷೆ | ಪ್ರಾಕೃತ ವೆನಿಸೀ 12 ಮೂರ್ತಿ ಸುಂದರತೊಂಡನಾದ ಮೇಲೆ ತನ್ನ | ಹೃದಯ ಮಂದಿರ ||ಪಿಂಡ ಅಂಡದೊಳಗೆ ಕಂಡು | ಹಿಗ್ಗಿದ ವಿವರ |ಕಂಡವನೆ ಪೇಳ ಬಲ್ಲ | ಅದರ ವಿಸ್ತಾರ 13 ಪೊಂದಿ ಅಪರೋಕ್ಷವನ್ನು | ಸುಜನರುದ್ಧಾರಛಂದದಿಂದ ಮಾಡಿದಂಥ | ದಾಸವರ್ಯರ ||ಅಂದ ಚರಿತೆ ಕೇಳಿ ತೋಷ | ಪೊಂದಿದವರನಂದ ಕಂದ ಪಾಲಿಸುವ | ಬಿಡದೆ ಅವರಾ 14 ಗೋವ ಕಾವ ಗೊಲ್ಲರೊಡೆಯ | ಗೋಪಿಯ ಬಾಲತಾವಕ ಭಕ್ತರ ಪೊರೆವ | ಪಾಂಡವ ಪಾಲಆವ ದಾಸರ ಪೊರೆದಂತೆ ಮೈದುನ ಪಾಲದೇವ ದೇವ ಪೊರೆವ ಗುರು | ಗೋವಿಂದ ವಿಠಲ 15
--------------
ಗುರುಗೋವಿಂದವಿಠಲರು
ಪಾದ ಸೇವೆಯಿಂದಲಿ ಸುಖಿಸೋಳೊ ಲಕ್ಷ್ಮೀಲೋಲ ಪಾಡಿ ತೂಗುವಳೊ ಮೋಹದಲಿ ಯಶೋದ ಯೋಗಿ ಜನರು ಕೊಂಡಾಡಲ್ವಿನೋದ 1 ಜಲಧಿ ಭೂದೇವಿ ಪ್ರಜ್ವಲಿಸುವ ಆಲದೆಲೆಯು ತಾನಾಗಿ ನಿದ್ರೆಹಸಿವು ಬಿಟ್ಟು ನಿರುತದಿ ಆತನ- ಲ್ಲಿದ್ದಳಂಭ್ರಣಿ ಸ್ತೋತ್ರದಲಿ ಭೂದೇವಿ 2 ವಟದ ಎಲೆಯ ಮೇಲೆ ವಟುವಾಗಿ ಮಲಗಿ ಉಂ- ಗುಟವ ಬಾಯೊಳಗಿಟ್ಟು ಮುದದಿ ಚಪ್ಪರಿಸೆ ಕಟುತರದಲಿ ನಾಲ್ಕು ವೇದವ ತೋರುತ ಪಟುತರದಲಿ ಯೋಗನಿದ್ರೆ ಮಾಡಿದನು 3 ಹದಿನಾಲ್ಕು ಲೋಕ ತನ್ನುದರದಲ್ಲಿಡುವ ಪದುಮಾಕ್ಷ ಶ್ರೀಕೃಷ್ಣ ಪರಮಾತ್ಮ ಲಾಲಿ ಅಜಭವಸುರರೆಲ್ಲ ಭಜನೆಯ ಗೈವರು ಮುದದಿ ಶಯನವ ಮಾಡೊ ಮಧು ಮುರಾಂತಕನೆ 4 ಕಡಲಶಯನ ಹರಿ(ಯ) ತೊಟ್ಟಿಲೊಳಿಟ್ಟು ಬಿಡದೆ ನಾರಿಯರೆಲ್ಲ ಪಾಡಿ ತೂಗುವರು ಪೊಡವಿಗೊಡೆಯ ನಿನ್ನ ನಾಮ ಕೊಂಡಾಡಲು ಬಿಡದೆ ಭಕ್ತರ ಕಾಯೊ ಭೀಮೇಶಕೃಷ್ಣ 5
--------------
ಹರಪನಹಳ್ಳಿಭೀಮವ್ವ
ಪಾದ ನಿತ್ಯ 1 ವಾಸುದೇವ ನಿನಗೆ ಒಲಿವ ತಾ ಭಾಸುರ ಕೀರ್ತಿ ತರುವ ಬೇಸರಿಸದೆ ಭಾಸಿ ಪಂಥದಿ ವಾಸುದೇವದಾಸರ ಸೇವಿಸು 2 ಕರುಣ ತೋರಿ ಸಲಹುವಂಥ ಗರುಡಗಮನನಿರಲು ನೀನು ಅರಿಯದಂತೆ ಇರಲು ನಿನ್ನ ಮರುಳು ಮನವೆ ಕಾರಣಿದಕೆ 3 ಕೂಡು ಸಜ್ಜನ ಸಂಗ ತವಕದಿ ಜಾಡುಕೋರ್ವ ಹರಿಭಕ್ತರ ನೋಡು ನಿನ್ನಕ್ಷಿ ತೆರೆದು ಮನುಜ 4 ಜಗಜನ್ಮಾದಿ ಕಾರಣ ಅಘಟನಘಟನಾದ ಹರಿಯ ಮಿಗೆ ಧ್ಯಾನವಿಟ್ಟು ಮನವೆ 5 ಸಲ್ಲ ದುರ್ಜನರಾಸಂಗವು ಸಜ್ಜನರಿಗೆ ಅಲ್ಲ ತಿಂದ ತಿಮ್ಮನಂದದಿ ಬೆಲ್ಲ ಬೇವಿನಂತೀ ಸಂಸಾರದಲ್ಲಿ ಸಿಲುಕಬೇಡ ಮನವೆ 6 ಹರುಷದಿಂದ ಜಡದೇಹದೊಳಗಿಹ ಶ್ರೀ ಹರಿ ಎಂದರಿದು ಪರರ ವಾರ್ತೆ ಆಡದೆ ಪರಮಪುರುಷ ಹರಿಯ ನೆನೆ ಮನುಜ 7 ಹದಿನಾಲ್ಕು ಲೋಕದೊಡೆಯ ಒದಗಿರಲು ನಿನ್ನ ಸಾಕೆ ಬರಿದೆ ಚಿಂತೆ ಮಾಡಬೇಡ ಸ್ಮರಿಸು ಹರಿಯ ಚರಣವನ್ನು8 ಸ್ವಕಾರ್ಯ ಸ್ವಾಮಿಕಾರ್ಯ ನಿನ್ನ ಅಖಿಲ ಕಾರ್ಯಾಂಗತನು ಹರಿಯು ಸಖನಂತೆ ಸಲಹುತಿರಲು ಸುಖಿಸು ಅವನ ದಾಸನೆಂದು 9 ಪಾದ ನಿತ್ಯ ಸಂಗ 10 ಸಕಲರಲ್ಲು ಅವನೇ ನಿಂತು ಸಲಹುವನೆಂದರಿತು ನೀ 11 ನಿತ್ಯ ಅಜ್ಞಾನವನ್ನು ಪರಿಹರಿಸುತ ನಿತ್ಯ ವಂದಿಸು ಮನದಿ 12 ಪಾದ ಧ್ಯಾಸದಿಂದ ಅರಿತೆನಲದೆ ಎಂದರಿತು 13 ಪ್ರಾಣನಾಥನೊ ಹರಿ ಶ್ರೀ ರಾಮಚಂದ್ರನೆಂದು ಅರುಹಿಕೊಟ್ಟು ಸಲಹುವರ 14 ತ್ರಿವಿಧ ಜೀವರಿಗೆ ಹರಿಪರದೈವನೆಂದರುಹಿದ ಪರಮಗುರು ಮತವ ಬಿಟ್ಟು 15
--------------
ಸರಸ್ವತಿ ಬಾಯಿ
ಪಾದುಕೆಗಳ ಭಾಗ್ಯಶ್ರೀಗುರುವು ಶ್ರೀರಂಗಪಟ್ಟಣಕಾಗಿ ಬಿಜಯಂಗೈದು ಮಠದಲಿಯೋಗಪೀಠದಲಿರ್ದ ಸಮಯದಿ 'ಪ್ರಕುಲ ಬಂದುಆಗ ಚಾತುರ್ಮಾಸ್ಯ ಒದಗಿರಲಾಗಿ ಪ್ರಾರ್ಥನೆಗೈದ ಕಾರಣರಾಗರ'ತನು ವಾಸುದೇವನು ನೆಲಸಿದನು ದಯದಿ 1ತೀರಿ ವ್ರತವನು 'ಶ್ವರೂಪದ ದಾರಿಯಲಿ ಸಂಚರಿಸಿ ಪುನರಪಿಮಾರಹರನಾಲಯದ ಮುಂದಣ ಮಠಕೆ ಬಂದಿರುತಾಸಾರಿ ಸಾಯಂಕಾಲದಲಿ ಕಾವೇರಿಯಲಿ ಸ್ನಾನವನು ಮಾಡಿಯೆನಾರೆಯಣನಾಮವನು ಸ್ಮರಿಸುತ ಬಹುದ ನಾಂ ಕಂಡೆಂ 2ಕಂಡ ಬಳಿಯಲೆ ಭಕ್ತಿಭಾವದಿ ದಂಡದಂತಾನೆರಗೆ ಕೃಪೆುಂಮಂಡೆಯೆತ್ತೇಳಾರು ನೀನೆಂದಾಗ ಮಂದಲಿಸಿಪುಂಡಾರೀಕಾಂಬಕನ ದಾಸನೆ ಗಂಡುಗಲಿಯಾಗಿಹೆಯ ಕ್ಷೇಮವೆಕಂಡೆ'ಂದಿಗೆ ಬಹುದಿವಸಕೆಂದಾಗ ನುಡಿಯುತಿರೆ 3ಆ ಬಳಿಯ ಮನೆುರಲು ಮಾಳಿಗೆ ಶೋಭಿಸುತ ಬೆಳುದಿಂಗಳಿಗೆ ಬಲುಗಾಬರಿಯ ಸಂದಣಿ ಮಹಾನವ'ುಯ ಮಹೋತ್ಸವದಾಕಾಬರಿದ ಮೇಲಿದ್ದ 'ಪ್ರನು ತಾ ಭುಜಿಸಿ ತಾಂಬೂಲಶೇಷವತೂಬಿರಿಯೆ ಮುಕ್ಕುಳಿಸಿ ಗುರುಶಿರದೊಳಗೆ ಬಿದ್ದುದದು4ಹರಹರಾಗುರುಕೃಪೆಯೆಕೋಪವುಬರಬಹುದುನಿನಗೆನುತನುಡಿಯಲು ಗುರುವು ಕಂಡಾ ಬಳಿಯ ಕೇಶವಮೂರ್ತಿಯೆಂಬವನುಅರಿಯದಾದೈ ಮೇಲೆ ಕುಳಿತೀ ಬರುವ ಯತಿಗಳ ನ್ಯಾಯವೇಯೆಂದರುಹಲಾ ದ್ವಿಜಬೆದರಿ ಧುಂ'ುಕ್ಕಿದನು ಭೂತಳಕೆ 5ತಪ್ಪಿದೆನು ದಮ್ಮೈಯ ಗರ್ವವನೊಪ್ಪಿಕೊಳಬೇಕೆನಗೆ ಗತಿಯೇನಪ್ಪುದೋ ಕಂಗಾಣದಾದೆನು ವಾಸುದೇವಾರ್ಯಾತಪ್ಪಿದೆನು ತಪ್ಪಿದೆನು ತಪ್ಪಿದೆ ತಪ್ಪಿದೆನು ತಪ್ಪಿದೆನೆನುತ್ತಲಿಧೊಪ್ಪನಡಗೆಡ'ದರ ತನುವನು ನೋಡ್ದ ಗುರುವರನು 6ತಂದೆ ಬಾ ಯನ್ನಯ್ಯ ಬೆದರದಿರೆಂದಭಯವನು ಕೊಡುತ ಕರುಣಾಸಿಂಧು ವಾಗಮೃತದಲಿ ನೆನಸಿದ ಪರಿಯನೇನೆಂಬೆಕಂದನಪ್ಪನು ಸುಗುಣವಂತನು ಮುಂದಣೀ ದಿವಸಕ್ಕೆ ನಿನಗೆನುತೆಂದು ಮತ್ತವರಾಡಿದುಕ್ತಿಯನೆಂತು ಬಣ್ಣಿಪೆನು 7ಸಹಜ ತಂಬುಲ ಶಿರದ ಮೇಲಕೆ ಬಹುದು ಗುರುಕೃಪೆ ರೂಪವೆತ್ತೀ''ತ ಪ್ರಾಯಶ್ಚಿತ್ತಗೈದುರು 'ರತಿಯನು ಕಲಿಸಿಸಹಜ ಸುಖಸಂ'ತ್ಪದ' ತಾ ಬಹುದುನೊದಗಿಸಿತಾಗಿ ಮುಂದೀಬಹು ಜನರ ಗ್ಠೋಯನು ಬಿಡಿಸಿದುದೆಂದರುತ್ತರವಾ 8ಇರುವುದನುಚಿತ ಜನಸಮೂಹದಿ ಬರುವುದನುಚಿತ ಬರದ ಮಾರ್ಗದಿಕರದು ಮನ್ನಿಸಿ ಜನರ ಕ್ಷೇಮವ ಕೇಳ್ವುದನುಚಿತವುಅರಿಕೆದಟ್ಟಿತು ಮನಕೆ ಗುರು ತಾನುರುಹು ಸಂನ್ಯಾಸವನು ಥೂಯೆಂದಿರದೆ ಮೋರೆಯ ಮೇಲೆ ತಾನುಗುಳಿದನು ಸಿದ್ಧ'ದೂ 9ಪ್ರೇಷೆ ತಾ ಜ್ಞಾನಕ್ಕೆ ಮಾತೃವು ಪ್ರೇಷೆಯೇ ಜ್ಞಾನಕ್ಕೆ ತಂದೆಯುಪ್ರೇಷೆ ಭವಸಾಗರವ ದಾಂಟಿಪ ನಾವೆ ಸುಖಕರವೂಪ್ರೇಷೆ ಸರ್ವೋತ್ಕರುಷವಪ್ಪುದು ಪ್ರೇಷೆಯನ್ನುಚ್ಚರಿಸಿ ಮತ್ತಭಿಲಾಷೆುಂ ಜನಸಂಗಗೈಯ್ಯಲ್ಕಾಯ್ತೆ ನಿಗ್ರಹವೂ 10ಭಲರೆ ಗುರುವರ ಧನ್ಯನಾದೆನು ಮರೆತೆ ತಪ್ಪಿದೆ ಮುಂದೆ ಜನರೊಳಗಿರೆನು ಗುಹೆಯನು ಪೊಕ್ಕು ಮೌನವ್ರತ ಸಮಾಧಿಯಲಿುರುವವೋಲ್ ವೈರಾಗ್ಯವನು ನೀ ಕುರುಣಿಸಿದೆಯೆಂದೆನುತ ನಗುತಲಿಹರುಷದಿಂ ಕಾವೇರಿಗೈತಂದನು ಗುರೂತ್ತಮನು11ಸಾ'ರದ ಸಂಖ್ಯೆಯಲಿ ಮೃತ್ತಿಕೆ ುೀವುದಕ್ಕೆನ್ನುವನು ನೇ'ುಸಿಭಾ'ಸುತ ಪ್ರಣವವನು ಸ್ನಾನವ ಮಾಡಿ ನಿಯಮದಲಿಭಾವವಳಿಸಿ ಕಮಂಡಲವ ಜಲಕೀವ ಸಮಯದಲುಗುಳ್ದ 'ಪ್ರನಭಾವದಲಿ ನಡುಗದಿರು ಸುತನಹನೆಂದ ಗುರುವರನು 12ಏನನೆನ್ನುವೆನಾ ದ್ವಿಜನು ಸುತ 'ೀನನತಿ ಯತ್ನಗಳ ಮಾಡುತಭಾನು'ಂಗೆರಗುತ್ತಲಿದ್ದನು ಪುತ್ರಕಾಮುಕನುಏನು ಕೃಪೆಯೋ ತಿಂಗಳೆರಡಕೆ ಮಾನಿನಿಯು ತಾ ಗರ್ಭದಾಳಿಯೆಸೂನುವನು ತಾ ಪಡೆದಳೀ ಗುರು ಪೇಳ್ದ ದಿವಸದಲಿ 13'ುಂದು ಕಾವೇರಿಯಲಿ ಗುರುವರ ಬಂದು ಮಠಕಾಕ್ಷಣವೆ 'ಪ್ರರಸಂದಣಿಯ ನೆರೆ ಕಳು'ಯೆನಗಪ್ಪಣೆಯ ಕೊಡಲಾಗಿಬಂದು ಮನೆಯೊಳಗಿದ್ದು ರಾತ್ರಿಯು ಸಂದ ಬಳಿಕಾನೈದಿ ನದಿಯೊಳು'ುಂದು ಗುರವರಗೆರಗಲೈದಿಯೆ ಕಾಣೆ ನಾನಲ್ಲಿ 14ಸ್ನಾನಕೈದಿದರೇನೊ ಬಂದರೆ ಕಾಣುವೆನು ನ'ುಸುವೆನುಯೆಂದೇನಾನು ನೋಡಿದೆ ಬಾರದಿರೆ ಮಧ್ಯಾಹ್ನ ಪರಿಯಂತಭಾನು'ಂಗಘ್ರ್ಯವನು ಕೊಟ್ಟು ಮಹಾನುಭಾವರ ನೆನನೆನದು ದುಂಮಾನದಿಂದಿರುತಿದ್ದೆ ಸಾಯಂಕಾಲ ಪರಿಯಂತ 15ಇರುಳಿಗೂ ಬರದಿರಲು ಪಾದುಕೆುರಲು ಪೂಜಿಸಿ ನ'ುಸಿಯಗಲಿದಪರಮ ತಾಪದಿ ಕುದಿದು ರೋದನಗೈದೆ ಪಂಬಲಿಸಿಗುರುವರನೆ ನಿನ್ನಂಘ್ರಿಕಮಲದ ದರುಶನವು ಮರೆಯಾಯ್ತೆ ದೀನನಕರೆದು ಮನ್ನಿಸಿ ಕಾಯ್ದೆಯಲ್ಲೈ ವಾಸುದೇವಾರ್ಯಾ 16ಏನು ಗತಿ ಮುಂದೆನಗೆ ಮಾರ್ಗವದೇನನುಗ್ರ'ಸಿಪ್ಪ ಮಂತ್ರ 'ದೇನು ಜಪಿಸುವ ಮಾನವೆಂತಿದರರ್ಥವೇನಹುದುನಾನರಿಯದವನೆಂಬುದನು ನೀ ಜ್ಞಾನದ್ಟೃಯೊಳರಿದು ರಕ್ಷಿಸುದೀನನನು ಕೈ'ಡಿದು ಬಿಡುವರೆ ವಾಸುದೇವಾರ್ಯಾ 17ಭವಸಮುದ್ರದಿ ಮುಳುಗುತೇಳುತ ಲವಚಿ ತೆಗೆವರ ಕಾಣದಳಲುತಕ'ದು ತಮ ಕಂಗಾಣದಿರೆ ನೀನಾಗಿ ದಯತೋರಿಭವಭವಾಂತರದುರಿತಗಳ ಪರಿಭ'ಸಿಯಭಯವನಿತ್ತು ಸಲ'ದದಿ'ಜವಂದ್ಯನೆಯಗಲಿದೈ ಶ್ರೀ ವಾಸುದೇವಾರ್ಯಾ 18ಅರಿಯೆ ಹೃತ್ಕಮಲದಲಿ ಭಾ'ಪ ಪರಿಯನಿದಿರಿಟ್ಟಿರಲು ನೀ ಶುಭಕರದ ಮೂರುತಿಯಾಗಿ ಗ್ರಂಥಾರ್ಥಗಳ ಶೋಧಿಸಿಯೆಅರಿಯಬೇಕೆಂಬಿಚ್ಛೆ ಬರಲಿಲ್ಲುರುವ ನಿನ್ನಯ ವಾಗಮೃತ ರಸಸುರಿಯೆ ತಾನೇ ಪಾನಗೈಯುತ ಮತ್ತನಾಗಿದ್ದೆ 19ಜೀ'ಸುವೆ ನಾನೆಂತು ಧರೆಯೊಳು ಪಾವನದ ಮೂರುತಿಯ ಕಾಣದೆಭಾವದಲಿ ಸುಖಗೊಳಿಪ ವಾಕ್ಸುಧೆಯರತ ಕಾರಣದಿಂದೇವ ಮರೆಯಪರಾಧ'ದ್ದರು ಕಾವ ಕರುಣೆಗೆ ಕೋಪವೇ ಸಂಜೀವ ನೀ ಭುವನಕ್ಕೆ ತೋರೈ ವಾಸುದೇವಾರ್ಯಾ 20ಮೊರೆುಡುತಲೀ ರೀತಿುಂದಿರುತಿರಲು ಪಾದುಕೆಗಳಿಗೆ ನ'ುಸುತಬರಲು ಪಲ್ಲವ ಬಾಯ್ಗೆ ಗುರುಕೃಪೆುಂದ ತಾನಾಗಿತಿರುಪತಿಯ ವೆಂಕಟನೆ ಮೂರ್ತಿಯ ಧರಿಸಿ ಯತಿವರನೆನಿಸಿದುದನಾಹರುಷದಿಂ ಪಾಡಿದೆನು ಕೀರ್ತನ ನೆವದಿ ಮೈಮರೆದೂ 21
--------------
ತಿಮ್ಮಪ್ಪದಾಸರು
ಪಾಪಿಯೆಂದೆನಲು ನಾ ತಗ್ಗೆ ಪುಣ್ಯ ರೂಪಿಯೆಂದೆನಲು ನಾ ಹಿಗ್ಗೆ ವ್ಯಾಪಿಸಿ ನೀ ಎನ್ನ ಕುಣಿಸಿದ ಮೇಲೆ ನಿ ಪರಿ ಜನರೆನ್ನ ಪ ನಡೆಸಿದಂತೆ ನಾ ನಡೆವೆ ಉಡಿಸಿದಂತೆ ನಾನುಡುವೆ ನೀ ತೊಡಿಸಿದಂತೆ ನಾ ತೊಡುವೆ ಎ ನ್ನೊಡೆಯ ಸೂತ್ರಧಾರ ನೀನೆಂದರಿಯದೆ ಪೊಡವಿ ಜನರು ಬಾಯಿ ಬಡಿಕ ತನದೊಳೆನ್ನ 1 ಬಿಂಬಕ್ಕೆ ಸ್ವತಂತ್ರವೇನು ತುತ್ತು ಗೊಂಬಾತ ಉಂಬಾತ ನೀನು ಗೊಂಬೆಯಂತಿರಲದಕೇನು ಬರಿಯ ಹಂಬಲಿಪರು ಬರಿ ಕುಂಭಿನಿ ಜನರೆನ್ನ 2 ಭಾಗ್ಯವುಂಟೆಂದು ನಾ ಮೆರೆಯೆ ವೈ ರಾಗ್ಯವುಂಟೆಂದು ನಾ ಜರಿಯೆ ಯೋಗಿಗಳಿಗೆ ನಾ ಸರಿಯೇ ಯಾ ವಾಗಲು ನಡಿಸಿದ ಪರಿಯೆ ಈಗ ಕಾಯದ ಬರಿಯ ಡಂಬವ ಕಂಡು ಭಾಗ್ಯವಂತನೆಂದು ಜನರು ಕೊಂಡಾಡಲು 3 ಬರಿಯ ಸುಖವ ನಾ ತೊಟ್ಟೆ ಸರ್ವ ಸಿರಿಯ ಹೆಡತಲೆಯೊಳಿಟ್ಟೆ ಅರಿತರಿತು ಮಾಯದ ಲೊಟ್ಟೆ ಕಂಡು ಬೆರಗಾಗಿ ನಂಬಿ ನಾ ಕೆಟ್ಟೆ ಗುರು ವಿಮಲಾನಂದವರ ಮಾಂಗೀರೀಶನು ಇರಿಸಿದ್ಹಾಗೆ ನಾನಿರಬೇಕಲ್ಲದೆ4
--------------
ಭಟಕಳ ಅಪ್ಪಯ್ಯ
ಪಾಮರ ಜನರಿಗೆಲ್ಲ ಪ ಕಾಮಮದ ಮತ್ಸರಗಳಿಂದಲಿ ತಾಮಸೌಘಕೆಅ.ಪ ಸ್ನಾನ ಮೌನ ಜಪತಪಗಳನರಿಯದೆ ಸ್ವಾಮಿ ನಿನ್ನನು ಮುಟ್ಟಿ ಪೂಜಿಸದೆ ಸೀಮೆಯರಿಯದ ಕಾಮಕರ್ಮದಿ ನೇಮವಿಲ್ಲದ ಕ್ಷುದ್ರಸ್ವಾರ್ಥದಿ ತಾಮಸರ ಸಂಸರ್ಗದಿಂದ ವಿ ರಾಮವರಿಯದ ಜನರ ಪಾಲಿಗೆ 1 ಜ್ಞಾನ ಭಕ್ತಿ ವೈರಾಗ್ಯಗಳರಿಯದೆ ಜ್ಞಾನಿಜನರ ಸಂಗವ ಬಯಸದೆ ಹೀನದುಷ್ಕರ್ಮಗಳ ಮಾಡುತ ನಾನು ತಾನೆಂಬ ಕೊಬ್ಬಿಲಿ ಜಾನಕೀಪತಿ ನಿನ್ನ ಮಹಿಮೆಯ ಕಾಣದಿಹ ದುಷ್ಕರ್ಮಿಜನರಿಗೆ 2 ಶ್ರೀನಿಧಿ ನೀ ಕರುಣಿಸಿ ರಕ್ಷಿಸದಿರೆ ದೀನಜನರ ಪಾಲಿಪರಾರೋ ಸಾನುರಾಗದಿ ಬೇಡಲರಿಯದ ಜ್ಞಾನಹೀನರ ತಪ್ಪನೆಣಿಸದೆ ನೀನೆ ಕೈಪಿಡಿದೆತ್ತಿ ರಕ್ಷಿಸು ಮಾನನಿಧಿ ರಘುರಾಮವಿಠಲ 3
--------------
ರಘುರಾಮವಿಠಲದಾಸರು
ಪಾರಾಯಣ ಮಾಡಿರೋ ಭವ ಪಾರಾವಾರದೊಳುತ್ತಾರಕವಿದು ನೋಡಿರೋಪ ಶರೀರನೆಚ್ಚಿರಬೇಡಿರೋ ಸಾರುವ ಮೃತ್ಯುವ ದಾರಿಗೆ ಗೋಚರ ಧಾರಿಣಿಯಲಿ ಪೇಳಿರೋ1 ಸಾಹಸ ಪಡಬೆಡಿರೋ ದೇಹಗೇಹಂಗಳನೂಹಿಸಿ ಸಂಗಡ ಬಾಹವೆಂದಿರ ಬೇಡಿರೊ2 ದೇಹರಕ್ಷಣೆಗೆಂದು ಗೇಹವನಿರ್ಮಿಸಿ ನೇಹದಿ ನಾರಿಯೊಳು ಗೇಹಿನಿಯೆಂದತಿ ಮೋಹದಿ ಕೆಡುವನು ದೇಹಿಸಂಸಾರದೊಳು3 ಮಾರಿಯಲ್ಲವೆ ಕೇಳಿರೋ ನಾರಿಯಾರಿಗೆ ಮಕ್ಕಳಾರಿಗೆ ಜೀವಿತದಾರಿಯೆಲ್ಲಿಗೆ ಪೇಳಿರೋ4 ಬಾರಳು ಕಂಚುಕನ್ನಡಿಬಾರದೀ ಸಂಚಿತ ದ್ರವ್ಯದಿ ಕೊಂಚವು ಬಾರದು ವಿಸಂಚಿಗೆ ದೇಹವಿದು5 ಹಲವು ಸಾಹಸದಿಂದ ಘಳಿಸಿದರ್ಥಗಳೆಲ್ಲ ಬಳಸಿನ ಬಾಂಧವರು ಒಲಿದುಕೊಂಡಾಡುವರು6 ಅರ್ಥವಿದ್ದವನ ಸಮರ್ಥನೀತನ ಜನ್ಮಸಾರ್ಥಕವೆಂಬುವರು ಜನ್ಮವ್ಯರ್ಥವೆಂದುಸುರುವರು 7 ರೊಕ್ಕವಿದ್ದರೆ ಕೈಲಿ ಸಕ್ಕರೆ ಮಾತಿನೊಳಕ್ಕರೆ ಪಡಿಸುವರು ರೊಕ್ಕವಿಲ್ಲದವನ ಮಕ್ಕಳು ಮಡದಿಯರು ಲೆಕ್ಕಿಸದಿರುತಿಹರು 8 ಮರಣವ ಪೊಂದುವರು ಮರಳು ಜಗಳಕೆ ತರಳರು ಚಾಚುತೆ ಕೊರಳನು ಕೊಯ್ಯುವರೋ 9 ಬಂಧುಗಳನ್ನು ಕೊಲ್ವರು ಒಂದಿಗೆ ಜನಿಸಿದರೆಂದು ನೋಡರುನಿಜ ದಂದುಗಕ್ಕೊಳಗಹರು10 ನಂಟರು ನಮಗಿವರುಂಟೆಂದು ಮೋಹದ ಗಂಟುಕಟ್ಟಿರೆ ಮನದಿ ಕಂಟಕ ಯಮಬಂದು ಗಂಟಲಬಿಗಿವಾಗ ನಂಟರಿಲ್ಲವು ಜಗದಿ11 ಅಪತ್ತುಬಂದಾಗ ಪಾಪಿಯು ಮನದನು ತಾಪದಿ ನೆನೆಯುತಿರೆ ಕಾಪಾಡುವನಾಗ ಶ್ರೀಪತಿ ಪುಲಿಗಿರಿ ಭೂಪನು ನಮ್ಮದೊರೆ12 ನೊಂದ ಗಜೇಂದ್ರನ ಕಂದ ಪ್ರಹ್ಲಾದನ ಬಂದವಿಭೀಷಣನ ಚಂದಿರಮುಖಿ ನೃಪನಂದನ ಧ್ರುವರನು ಚಂದದಿ ಸಲಹಿದನ 13 ಅಜಮಿಳಗೊಲಿದನ ಕುಜನರ ತರಿದನ ಸುಜನರನಾಳಿದನ ಭಜಕರದಾತನ ತ್ರಿಜಗಕ್ಕೆ ನಾಥನ ವಿಜಯನ ರಥಸೂತನ14 ಅಂಗಜಜನಕನ ಮಂಗಳ ಮಹಿಮನ ಗಂಗೆಯ ಪಡೆದವನ ರಂಗನ ಸುಗುಣ ತರಂಗನ ಶಂಖರಥಾಂಗವ ಪಿಡಿದಿಹಿನ15 ಖ್ಯಾತ ಪಾದಾಂಬುಜನ ವಾತನ ಮಗನೊಳು ಪ್ರೀತಿಯ ಬೆಳಸಿದ ಸೇತು ವಿಧಾತನ16 ರಾಮನ ಜಗದಭಿ ರಾಮನ ದೈತ್ಯವಿರಾಮನ ಭಜಕಜನಾ ರಾಮನ ದಶರಥರಾಮನ ಸೀತಾರಾಮನ ಗುಣಧಾಮನ17 ಪಂಕಜನೇತ್ರನ ಪರಮ ಪವಿತ್ರನ ಶಂಕರನುತಿಪಾತ್ರನ ವೆಂಕಟರಮಣನ ಕಿಂಕರ ಶರಣನ ಸಂಕಟ ಹರನಾಮನ18 ವರದ ವಿಠಲ ದೇವನ ಪೊರೆಯುವದಾನರನ 19
--------------
ಸರಗೂರು ವೆಂಕಟವರದಾರ್ಯರು
ಪಾರುಗಾಣಿಸೊ ಎನ್ನ ಪಾವನಕಾಯ ಶ್ರೀ ಗುರು ರಾಘವೇಂದ್ರಾರ್ಯನೇ ಪ. ಶ್ರೀ ರಮಾಪತಿ ಗುಣವ ನೀ ಮನದೊಳು ತಿಳಿಸಿ ಭವ ಬಂಧ ಬಿಡಿಸೋ ಅ.ಪ. ಮಿಂಚಿನಂತಿಹ ಎನ್ನ ಚಂಚಲ ಮನದಲ್ಲಿ ಸಂಚಿತನೆ ಎನೆ ನೆಲಸೋ ಸಂಚಿತಾಗಮಿಗಳು ಕೊಂಚ ಉಳಿಯದ ತೆರದಿ ಪಂಚ ಭೇದಾರ್ಥ ತಿಳಿಸೊ ಪಂಚವಕ್ತ್ರನ ತಾತ ಮಿಂಚಿನಂದದಿ ಪೊಳೆವೊ ಹಂಚಿಕೆಯ ಎನಗೆ ತೋರೋ | ಮನಕ್ಹರುಷ ಬೀರೋ 1 ಶ್ರೀ ನರಹರಿ ಕೃಷ್ಣ ರಾಮ ವ್ಯಾಸರ ಪದವ ನೀ ನಿರ್ಮಲದಲಿ ನೆನೆವೆ ಮಾನನಿಧಿ ಮುರಹರಿಯ ಧಾಮತ್ರಯಗಳ ಮಾರ್ಗ ಕಾಮಿಸಿದ ಭಕ್ತಗೀವೆ ನಾನಧಮೆ ನಿನ್ನಡಿಗೆ ಬಾಗಿ ಭಜಿಸುವೆ ಗುರುವೆ ನೀನಿತ್ತ ನೋಡಿ ಪೊರೆಯೊ | ನೀ ದಯವ ಗರೆಯೊ 2 ತರಳತನದಲಿ ಶ್ರೀ ನರಹರಿಯ ಭಜಿಸುತ್ತ ಉರುತರದಿ ಭಾದೆ ಸಹಿಸಿ ಹರಿಯು ಸರ್ವತ್ರ ವ್ಯಾಪಕನೆಂಬೊ ಮಹಿಮೆಯ ಉರ್ವಿಯೊಳಗೆಲ್ಲ ನೆಲಸಿ ಸಿರಿ ಕೃಷ್ಣನಾ ಭಜಿಸಿ ಮರುತ ಮತವನೆ ಸ್ಥಾಪಿಸಿ | ಗುರುರಾಯನೆನಸಿ 3 ತುಂಗ ತೀರದಿ ನಿಂದು ಮಂಗಳರೂಪದಲಿ ಪಂಗು ಬಧಿರರ ಸಲಹುತ ಸಂಗೀತ ಪ್ರಿಯನೆನಿಸಿ ಶೃಂಗಾರರಾಮನ ಮಂಗಳರೂಪ ಭಜಿಸಿ ಹಿಂಗದೇ ಸುಜನರಿಗೆ ವರವ ಕೊಡುವೊ ಬಿರುದು ರಂಗನಾ ಪದದೊಲುಮೆಯೋ | ನಿನ್ನಯ ಮಹಿಮೆಯೋ 4 ಗೋಪಾಲಕೃಷ್ಣವಿಠ್ಠಲನ ಪರಿಪರಿಯಿಂದ ಪಾದ ಮೌಳಿ ನೋಳ್ಪೆ ಶ್ರೀ ಪತಿಯ ತೋರೆನಗೆ ಪಾಪ ಕಲುಷವ ಕಳದು ತಾಪಪಡಲಾರೆ ಭವದಿ ಕಾಪಾಡುವವರಿಲ್ಲ ನೀ ಕೃಪಾನಿಧಿಯೆಂದು ಪರಿ ಕೇಳ್ದೆ ಗುರುವೆ | ಭಕ್ತರ ಕಲ್ಪ ತರುವೆ5
--------------
ಅಂಬಾಬಾಯಿ