ಒಟ್ಟು 22462 ಕಡೆಗಳಲ್ಲಿ , 136 ದಾಸರು , 9185 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎಷ್ಟು ಕೂಗಲು ದಯ | ಪುಟ್ಟಲಿಲ್ಲವೊ ನಿನಗೆ ಬೆಟ್ಟದೊಡೆಯ ಹರಿಯೆ ಪ. ಸಿಟ್ಟೇಕೆ ಎನ್ನೊಳು ಕೃಷ್ಣಮೂರುತಿ ನಿನಗೆ ಬಿಟ್ಟರೆ ನೀ ಎನ್ನ ಸೃಷ್ಟಿಯೊಳಾರುಂಟೊ ಅ.ಪ. ಪರಮ ಪಾತಕಿಯೆಂದು | ತೊರೆದರೆ ನೀ ಎನ್ನ ಮೊರೆಬೀಳಲಿನ್ನಾರಿಗೆ ಕರುಣಾಮೂರುತಿ ಎಂಬೊ ಬಿರುದು ಪೊತ್ತಿಲ್ಲವೆ ಸರಿಯೆ ನಿನಗಿದು ಕೊರಗಿಸುವುದು ಜರಿದು ಬಳಲುವೆ ಧರೆಯೊಳೀಗ ನಾ ಸುರರ ರಕ್ಷಕ ಪರಮಪಾವನ ಕರವ ಮುಗಿವೆ ದರುಶನವ ನೀಡೊ 1 ನೀನಲ್ಲದೆ ಇನ್ನು | ನಾನಾರ ಭಜಿಸಲೊ ಗಾನವಿಲೋಲ ಹರಿ ಕಾನನದೊಳು ಕಣ್ಣು ಕಾಣದಂತಾಗಿದೆ ಧ್ಯಾನಕೆ ಸಿಲುಕದೆ ನೀನೆನ್ನ ಕಾಡುವೆ ಮಾನ ಪ್ರಾಣ ಶರೀರ ನಿನ್ನದೊ ನಾನು ಅನ್ಯರ ಭಜಿಸಲಾರೆನೊ ಹೀನಬುದ್ಧಿಯ ಬಿಡಿಸಿ ಗುರುಗಳ ಧ್ಯಾನವೆನಗಿತ್ತು ನೀನು ಕಾಯೊ 2 ಅನ್ನಪಾನವ ಬಿಟ್ಟು | ನಿನ್ನನು ಸ್ತುತಿಸಲು ಇನ್ನು ಕರುಣವಿಲ್ಲವೆ ಇನ್ನು ಸೈರಿಸಲಾರೆ ಘನ್ನ ಮಹಿಮನೆ ದುಃಖ ನಿನ್ನ ಮನಸು ಕರಗಲಿನ್ನೇನಗೈಯ್ಯಲೊ ಎನ್ನ ಯತ್ನವು ವ್ಯರ್ಥವಾಯಿತು ಇನ್ನು ನೀ ದಯೆಗೆಯ್ಯಬೇಕೊ ಮುನ್ನ ಮಾಡಿದ ತಪ್ಪನೆಣಿಸದೆ ಎನ್ನ ದೃಷ್ಟಿಗೆ ನಿನ್ನ ತೋರೊ 3 ಸುತನ ಮೊರೆಯನೆ ಕೇಳಿ | ಹಿತದಿ ವೇದವನಿತ್ತೆ ಶರಧಿ ಅಮೃತ ಸುರರಿಗಿತ್ತೆ ಕ್ಷಿತಿಯ ಬಾಧೆಯ ಬಿಡಿಸಿ ಸುತನ ಬಾಧಿಸೊವೊನ ಹತಮಾಡಿ ಇಂದ್ರಗೆ ಗತಿಸಿದ ಪದವಿತ್ತೆ ಕ್ಷಿತಿಯನಾಳ್ವರ ಹತವಗೈಸಿದೆ ಕ್ಷಿತಿಸುತೆಯ ಪ್ರೇಮದಲಿ ತಂದೆ ಹಿತದಿ ಪಾಂಡವ ಸುತರ ಕಾಯ್ದೆ ವ್ರತವ ಕೆಡಿಸಿ ಕಲಿಹತವಗೈದೆ 4 ಕಂತು ಜನಕನೆ ನಿನಗೆ ನ್ನಂತರ ತಿಳಿಯದೇನೋ ಸಂತತ ಗೋಪಾಲಕೃಷ್ಣವಿಠ್ಠಲ ನಿನ್ನ ಶಾಂತರೂಪವ ಎನ್ನ ಅಂತರಂಗದಿ ತೋರೊ ಚಿಂತಿತಾರ್ಥ ಪಂಥಗಾರನೆ ಎಂತು ದಿನಗಳು ಸಂದು ಹೋದುವೊ ಸಂತತಾನಂದನಂತಶಯನ 5
--------------
ಅಂಬಾಬಾಯಿ
ಎಷ್ಟು ಚಲುವರೋ ರಾಮಕೃಷ್ಣರೆಷ್ಟು ಚಲುವರೊಎಷ್ಟು ಚಲುವರಿವರ ಶಿರದಿ ಬಿಟ್ಟ ಜುಲುಪಿ ಕೇಶ ಚಂದ ಪುಟ್ಟ ಬಾಲಕಾರು ಕೂಡಿ ಗೋಷ್ಟದೊಳಗೆ ಚಲಿಸಿದಾರೊ ಪ ನಿನಗು ಇದ್ದವೋ ಈ ಜುಲುಪಿ ನಿನ್ನನುಜಗಿದ್ದವೊಮುನಿಯ ಕೂಡಿ ಪೋಗುವಾಗ ವನದಿ ನಾಲ್ಕು ಹತ್ತು ವರುಷಜನತೆಗಾದ ನಯನ ಸುಖದ ಘನತೆ ನೀನು ತಿಳಿದು ಪೇಳೋ 1 ಬಹಳ ಶೂರನೋ ತಥೋಪಿ ಧೈರ್ಯಶೀಲನಾಮನೋಶೂಲ ಪಾಣಿ ಧನದ ಭೂಮಿ ಪಾಲು ಸಾಧಿಸಿ ಮುರಿದು ನಿಂತಬಾಲಕೃಷ್ಣ ಶತ್ರುಗಣದಿ ಬಾಲೆಯೆತ್ತಿಕೊಂಡು ಪೋದ 2 ಕಾಲ ಎತ್ತಜೀವ ಎತ್ತಕಾಯಪುತ್ರ ವೃತ್ತಿ ಮಾತೆ ಗುರು ಸುಪಾತ್ರರನ್ನು ಸುಖಿಸಿದಾರು 3 ಪಿತೃನಾಗ್ಞದಿ ನೋಡುತಲೆ ವನದೊಳ್ಹೆತ್ತೆ ಮಾಡಿದೆಮತ್ತ ಆನೆಯಮಲ್ಲ ಕಂಸನೊತ್ತಿ ತುಳಿದು ಮಧುರೆಯಲ್ಲಿಹತ್ತು ಒಂದು ವಯದ ಬಾಲ ಮುತ್ಯಾ ಮಾತೆಯರನು ಕಾಯ್ದ 4 ಕೂಸುಪಿಡಿಯಿತು ಪೂಥಣಿಯ ಮೊಲೆಯ ತಾಸು ತಿಂದಿತುಈ ಶರೀರದೊಳಗೆ ತಾಟಕಾಸುರೀಯ ಕೊಂದ ಇಂದಿರೇಶಅದ್ಭುತಾವದಿದರೊಳಾರು ಪೇಳೊ ದಾಶರಥಿಯೆ 5
--------------
ಇಂದಿರೇಶರು
ಎಷ್ಟು ದಿನದ ಪೂಜೆ ಹಿಡಿದೆಣ್ಣಾ ಸತಿಯೆಂಬ ಮಾರಿದಿ- ನ್ನೆಷ್ಟು ದಿನ ಪೂಜೆ ಮಾಡಬೇಕಣ್ಣಾ ಪ ಎಷ್ಟು ದಿನದ ಪೂಜೆ ಹಿಡಿದಿ ನ್ನೆಷ್ಟುದಿನ ಮುಂದೆ ಬಾಕಿ ಉಳಿದಿದೆ ಕಷ್ಟಕಂಜದೆ ಬಿಡದೆ ಅನುದಿನ ನಿಷ್ಠೆಯಿಂದ ಪೂಜೆ ಮಾಡುವಿ ಅ.ಪ ಒಬ್ಬರ ಮನೆ ಮುರಿದು ತರುವಿ ಅವಳಿಗೇನೆ ಹಬ್ಬಮಾಡಿ ಉಣಿಸುತಿರುವಿ ಮತ್ತು ಇನ್ನು ಒಬ್ಬರೈತರ ಬೊಬ್ಬೆ ಹೊಡೆಯುವಿ ದಬ್ಬಿ ಓಡಿಸುವಿ ಹಬ್ಬ ಹುಣ್ಣಿಮೆ ಬರಲು ವೈಭವದುಬ್ಬಿಉಬ್ಬಿವಸ್ತ್ರ ಒಡವೆ ಅಬ್ಬರದಿಂದುಡಿಸಿ ತೊಡಿಸಿ ಮಬ್ಬಿನಿಂದ ಹಿಗ್ಗುತಿರುವಿ 1 ಧನವ ತಂದು ಅವಳಿಗರ್ಪಿಸಿ ಮತ್ತು ನಿನ್ನಯ ಮನವ ಅವಳ ವಶಕೆ ಸಲ್ಲಿಸಿ ಎಂಟುಗೇಣಿನ ತನುವು ಅವಳಾಧೀನದಲ್ಲಿರಿಸಿ ಕುಣಿವಿ ಪಶುವೆನಿಸಿ ಪಾಲಿಸಿ ದಿನಗಳೆಯುವಿ ನೋಡಿಕೊಳ್ಳದೆ 2 ಬಂದಕಾರ್ಯ ಮರೆದುಬಿಟ್ಟ್ಯಲ್ಲ ಹೆಡತಲೆಮೃತ್ಯು ಹಿಂದೆ ನಿಂತು ನಲಿಯುತಾಳಲ್ಲ ಹೇ ಪಾಪಿ ನೀನು ಒಂದೂ ವಿಚಾರ ಮಾಡಿ ಅರೀಲಿಲ್ಲ ಮಂದನಾದೆಲ್ಲ ತಂದೆ ಶ್ರೀರಾಮನ್ನಂತಂಘ್ರಿಗೊಂದಿ ಭಜಿಸಿ ದಾಸನಾಗಿ ಅಂದಮಾದ ನಿತ್ಯಮುಕ್ತಿ ಪಡೆವ ಸುಸಂಧಿ ನಡುವೆ ಹೋಗುತಾದರ್ಲ3
--------------
ರಾಮದಾಸರು
ಎಷ್ಟು ದಿವಸ ಹೀಗೆ ಕಳೆಯಲೊ ಗೋಪಾಲಕೃಷ್ಣ ಎಷ್ಟು ದಿವಸ ಹೀಗೆ ಕಳೆಯಲೊ ಪ. ಎಷ್ಟು ದಿವಸ ಹೀಗೆ ಎನ್ನ ಸೃಷ್ಟಿಗೊಡೆಯ ಬಳಲಿಸುವೆಯೊ ಕಷ್ಟಪಡಲಾರೆ ಭವದಿ ದೃಷ್ಟಿಯಿಂದ ನೋಡಿ ಸಲಹೋ ಅ.ಪ. ನಾನಾ ಜನ್ಮದಿ ತೊಳಲಿಸಿ ಎನ್ನನು ನೀನೆ ತಂದೆಯೊ ಮಾನವತ್ವದಿ ನಾನು ಎಂಬುದು ಬಿಡಿಸಿ ಈಗ ನೀನೆ ಕರ್ತನೆನಿಸಿ ಕಾಯೋ1 ದೇಹಸ್ಥನೆಂದೆನಿಸಿ ಎನ್ನ ದೇಹ ಮಧ್ಯದಿ ಕಾಣದಿಹರೆ ದೇಹಗಳನು ಧರಿಸಲಾರೆ ದೇಹ ಮೋಹ ಬಿಡಿಸದಿಪ್ಪರೆ 2 ಭೃತ್ಯವತ್ಸಲನೆಂದು ನಿನ್ನ ಭಕ್ತರೆಲ್ಲರು ಕರೆಯುತಿಹರೊ ಪೊತ್ತ ಬಿರುದು ಬಿಡುವರೇನೊ ಭೃತ್ಯಳೆಂದು ಎನ್ನ ಸಲಹೊ3 ಪೋಗುತಿದÉ ದಿವಸ ನೋಡು ಬೇಗ ಬೇಗನೆ ದಯವ ಮಾಡು ಭೋಗದಲಿ ವೈರಾಗ್ಯ ನೀಡು ಭಾಗವತರ ಸಂಗ ಕೊಡು 4 ಕರ್ಮದಲ್ಲಿ ಶ್ರದ್ಧೆಯಿಲ್ಲ ಧರ್ಮದಲ್ಲಿ ಬುದ್ಧಿಯಿಲ್ಲ ನಿರ್ಮಲದ ಜ್ಞಾನವಿಲ್ಲ ನಿರ್ಮಲಾತ್ಮ ಬಲ್ಲೆಯಲ್ಲ 5 ಅಂಧಕಾರದಿ ಎನ್ನನಿರಿಸಿ ಚಂದವೇನೋ ಹೀಗೆ ಮಾಳ್ಪದು ಕರ್ಮ ಸ್ವೀಕರಿಸಿ ಮುಂದೆ ಕರ್ಮವಿಡದೆ ಸಲಹೋ 6 ಅಪಾರ ಜನುಮದಲ್ಲಿನ ಪಾಪ ಸಮೂಹಗಳ ತರಿದು ಶ್ರೀಪಾದ ಸ್ಮರಣೆ ನೀಡೋ ಗೋಪಾಲಕೃಷ್ಣವಿಠಲ 7
--------------
ಅಂಬಾಬಾಯಿ
ಎಷ್ಟು ಪರೀಕ್ಷಿಸಿ ನೋಡುವೆಯೋ ಇನ್ನು ಎಷ್ಟು ಶೋಧಿಸೆ ನಿನಗಿಷ್ಟವೋ ರಂಗಾ ಪ ಹಣವಿರುವನಕ ಕುಣಿಕುಣಿದು ಮೆರೆದೆನೊ ಹಣವನಪಾತ್ರಕೆ ಮಣಿದು ಕಳೆದೆನೋ ಋಣವಮಾಡಿ ಯೆನ್ನ ಬಣಗುಹೊಟ್ಟೆಯ ಹೊರೆದೆ ಉಣಲುಡಲಿಲ್ಲದೆ ನೋಡದವೋಲಲೆದೇ 1 ಹೆಣ್ಣು ಹೊನ್ನು ಮಣ್ಣು ಕಣ್ಣಿಗಿಂಪಾಗಲು ಬಣ್ಣಿಸಿ ಭಾಗ್ಯವನುಣ್ಣಲು ಬಯಸಲು ಬೆಣ್ಣೆಯಂತಿದ್ದುದು ಸುಣ್ಣವಾಯಿತೊ ದೇವ ಕಣ್ಣು ಮಂಜಾಗಿ ಮೈಗಿಣ್ಣು ಮುರಿಯಿತಿನ್ನು 2 ಬಹು ಜನುಮದಿ ಸಂಗ್ರಹಿಸಿದ ಪಾತಕ ಬೃಹದಾಕಾರವಾಗಿದ್ದು ರಂಗಯ್ಯ ಅಹಿಶಯನನೆ ನಿನ್ನ ಮಹಿಮೆಯಿಂದೆಲ್ಲವು ದಹಿಸುವುದೆಂದು ನಂಬಿದೆ ಮಾಂಗಿರೀಶ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಎಷ್ಟು ಪುಣ್ಯ ಮಾಡಿ ಇಲ್ಲಿ ಇಟ್ಟಿಗೆ ನೆಲಸಿತೋ ವಿಠ್ಠಲನ್ನ ಚರಣ ಶಿರದಿ ಮೆಟ್ಟಿಸಿ ಕೊಂಡಿತೋ ಪ. ಭಕ್ತನಾದ ಪುಂಡಲೀಕನ ಕರಕೆ ಸೋಕಿತೋ ಚಿತ್ತಧೃಡನು ಎಸೆಯೆ ರಂಗನ ಪಾದಕೆರಗಿತೋ 1 ಹರಿಯೆ ಎನ್ನ ಶಿರವ ಮೆಟ್ಟೆಂದ್ಹರಿಕೆ ಮಾಡಿತೋ ಪರಮ ಪುರುಷ ಬಂದು ನಿಲ್ಲೆ ಖ್ಯಾತಿ ಪೊಂದಿತೋ 2 ಪಾದ ಶಿರದಿ ಪೊತ್ತಿತೋ ಪಾದ ಇಲ್ಲಿ ಅಡಿಗಿಸಿಕೊಂಡಿತೋ 3 ಪಾದ ಸೋಕಿಸಿಕೊಂಡಿತೋ ಪಾದ ನನ್ನದೆಂದಿತೋ 4 ಯಮುನ ದಡದಿ ಸುಳಿದ ಪಾದಯತ್ನದಿ ಪೊಂದಿತೋ ಪಾದ ರಜವ ಧರಿಸಿತೋ 5 ಬಂಧ ಬಿಡಿಸುವಂಥ ಪದದಿ ಬಂಧಿಸಿಕೊಂಡಿತೋ ಪಾದ ಸೂಕ್ಷ್ಮದಿ ಪೊತ್ತಿತೋ 6 ಪಾದ ಘಳಿಗೆ ಬಿಡದಾಯ್ತೋ ಜಗದಲಿಟ್ಟಿಗೆ ನಿಲಯನೆಂಬೊ ಲಾಭ ಹೊಂದಿತೋ 7 ನಂದ ಕಂದ ಬಂದನೆಂದು ನಲಿದು ನಿಂತಿತೋ ಇಂದಿರೇಶ ಪೋಗದಿರೆಂದು ಇಲ್ಲೆ ಹಿಡಿದಿತೋ 8 ಪಾಪ ಕಳೆದು ಪಾವನ್ನದಲಿ ಮುಕ್ತಿ ಪೊಂದಿತೋ ಗೋಪಾಲಕೃಷ್ಣವಿಠ್ಠಲನ ಚರಣ ಸೇರಿತೋ9
--------------
ಅಂಬಾಬಾಯಿ
ಎಷ್ಟು ಪುಣ್ಯ ಮಾಡೀ ಕಂಬ ವಿಠ್ಠಲನ್ನ ಗುಡಿ ಸೇರಿತೋ ಪ. ಪುರಂದರ ದಾಸರನ್ನು ಕಟ್ಟಿಸಿಕೊಂಡು ತಾ ಪೂಜೆಗೊಂಡಿತೊ ಅ. ಎಲ್ಲಾ ಕಂಬಗಳಿದ್ದರೂ ಇಂತು ಇಲ್ಲೀ ಇದಕೆ ಈ ಖ್ಯಾತಿಯು ಬಂತು ಸುಜನ ವಂದಿಪರಿ ಪುಲ್ಲನಾಭನ್ನ ಕೃಪೆಯ ಪಡೆದಿತು 1 ಮಾಯಾಕಾರನು ನೀರನು ತಂದು ಈಯಲು ಪುರಂದರದಾಸರಿಗಂದು ನೋಯಿಸೆ ತಿಳಿಯದೆ ಮನಕದ ತಂದು ನ್ಯಾಯದಿ ಕಟ್ಟಿಸಿ ಹೊಡೆಸಿದನಂದು 2 ದಾಸರಂತೆ ತಾನು ವೇಷವ ಧರಿಸಿ ವೇಶ್ಯೆಗೆ ತನ್ನ ಕಂಕಣವನ್ನೆ ಕೊಡಿಸಿ ತಾಸೊತ್ತಿನಾ ರಾತ್ರೆ ಹೊಡೆದದ್ದ ನೆನಸಿ ವಾಸುದೇವ ಬೈಲಿಗೆಳೆಸಿದ ಬಿಗಿಸಿ 3 ಜ್ಞಾನ ಪುಟ್ಟಲು ಹರಿಮಾಯವಿದೆಂದು ಶ್ರೀನಿವಾಸ ತಾ ವಲಿದನು ಅಂದು ಆನಂದದಿಂದೊಂದು ಕವನ ಗೈದು ಶ್ರೀನಿಧೆ ಮುಟ್ಟಿತು ಮುಯ್ಯವಿದೆಂದು4 ದಾಸರ ಅಂಗವು ಸೋಕಿದ್ದರಿಂದ ಶ್ರೀಶನು ಹಗ್ಗದಿ ಬಿಗಿಸಿದ್ದರಿಂದ ದಾಸರ ಪೆಸರಲಿ ಮೆರೆವುದರಿಂದ ಭವ ಬಂಧ5 ಹಿಂದೆ ಕಂಬದಿ ನರಹರಿ ಅವತರಿಸೆ ಅಂದಿನ ಕಂಬವೆ ಈಗಿಲ್ಲ್ಲಿ ಉದಿಸೆ ಸಿಂಧುಶಯನನ್ನ ದಾಸತ್ವ ವಹಿಸೆ ಬಂದಿತು ವಿಠಲನ್ನ ಗುಡಿಯನಾಶ್ರೈಸೆ6 ಕರ್ಮ ಕಳೆವುದು ದಾಸರ ವಾಕ್ಶ್ರವಣ ಜ್ಞಾನವೀಯುವುದು ದಾಸರ ಉಪದೇಶ ಹರಿಯ ತೋರುವುದು ದಾಸರ ಸ್ಪರ್ಶವು ಮುಕ್ತಿಗೊಯ್ಯವುದು7 ಕಂಭವೆ ಸಾಕ್ಷಿಯು ಈ ಕಲಿಯುಗದಿ ಡಾಂಭಿಕ ಜನರಿಗೆ ತಿಳಿಯದು ಹಾದಿ ಬೆಂಬಿಡದೆ ಹರಿ ಕಾಯುವ ಭರದಿ ಇಂಬುಗೊಟ್ಟು ತನ್ನ ನಿಜ ದಿವ್ಯ ಪುರದಿ 8 ದಾಸರ ಮಾರ್ಗವೆ ಸುಲಭವೆಂತೆಂದು ದಾಸರ ಕೃಪೆ ದ್ವಾರ ವಲಿಯುವೆನೆಂದು ದಾಸರ ದೂಷಿಸೆ ಗತಿ ಇಲ್ಲೆಂದು ಶ್ರೀಶ ತಾನಿಲ್ಲೀ ನಿಂತನು ಬಂದು 9 ಶ್ರೀ ರಮಾಪತಿ ಓಡಿ ಬಂದ ನಿಲ್ಲೆಂದೂ ದ್ವಾರಕ ಪುರದೊಂದು ಕಂಭವೆ ಬಂದು ಸೇರಿತೊ ವಿಠಲನ ಮಂದಿರವಂದು ಸೂರೆಗೈದರೊ ಖ್ಯಾತಿ ದಾಸರು ಬಂದು 10 ನಿಜದಾಸರಂಗಸಂಗದ ಫಲದಿ ರಜತದ ಕಟ್ಟಿನಿಂ ಮೆರೆದಿತು ಜಗದಿ ಸುಜನರ ಸಂಗದಿ ಮುಕುತಿಯ ಹಾದಿ ಭುಜಗಶಯನ ತೋರುವ ನಿರ್ಮಲದಿ 11 ತತ್ವವನಿದರಿಂದ ತಿಳಿವುದು ಒಂದು ಉತ್ತಮತ್ವ್ವವು ಜಡಕಾಯಿತು ಬಂದು ಪಾದ ಸೋಂಕಲು ಅಂದು ವ್ಯರ್ಥವಾಗದು ಹರಿಭಕ್ತರೆ ಬಂಧು12 ಪಾಪ ನಿರ್ಲೇಪವಾಗೋದು ವಿಠ್ಠಲನ್ನ ಆಪಾದ ಮೌಳಿಯ ರೂಪ ದರುಶನ್ನ ಪರಿ ಖ್ಯಾತಿ ಪೊಂದಿತು ಕಂಬ ಘನ್ನ ಗೋಪಾಲಕೃಷ್ಣವಿಠ್ಠಲ ಸುಪ್ರಸನ್ನ 13
--------------
ಅಂಬಾಬಾಯಿ
ಎಷ್ಟು ಪೊಗಳಲಿ ನಾನು ಎನ್ನೊಡೆಯ ನಿನ್ನ ವಿ- ಶಿಷ್ಟ ಮಹಿಮೆಗಳನು ಭಕ್ತರಿಗೆ ಬಂದಾ ಕಷ್ಟ ಕಳೆಯುವೆಯೋ ನೀನು ಸುರಕಾಮಧೇನು ವಿಷ್ಣುವೇ ಪರದೈವವೆಂದು ದುಷ್ಟರಾಕ್ಷಸರನ್ನೆ ಕೊಂದು ಸೃಷ್ಟಿಪಾಲಿಪ ಶ್ರೀ ರಮೇಶನೇ ಇಷ್ಟ ಭಕುತರೊಳು ಶ್ರೇಷ್ಠನೆನಿಶಿದಿ ಪ ತಾಯಿಯೂ ಬಂದು ಸೇವೆಗೆ ರಘುಪತಿ ರಾಯನಲೆ ನಿಂದು ಬಯಸಲಿಲ್ಲಾ ಒಂದು ಶ್ರೀಹರಿಗೆ ಬಂದು ಕಾಯಬೇಕು ಸುಗ್ರೀವನೆನುತಲಿ ತೋಯಜಾಕ್ಷಗೆ ಪೇಳಿ ವಾಲಿಯ ಉ- ಪಾಯದಿಂದಲಿ ಕೊಲಿಸಿ ರವಿಜಗೆ ಸ- ಹಾಯ ಮಾಡಿದಿ ವಾಯುತನಯನೆ 1 ಕಡಲ ಬೇಗನೆ ಹಾರೀ ಶ್ರೀರಾಮನ ಮಡದಿಗುಂಗುರ ತೋರಿ ಅಲ್ಲಿದ್ದ ಅಸುರರ ಜಡಿದೆ ಬಲು ಹೊಂತಕಾರಿ ಮಾಡಿಯೊ ಸೂರಿ ಒಡೆಯಗ್ವಾರ್ತೆಯ ಪೇಳಿ ಶೀಘ್ರದಿ ನಡೆಸಿ ಸೈನ್ಯವ ದಶಮುಖನ ಶಿರ ಹೊಡೆಸಿದಾಕ್ಷಣ ಲೋಕಮಾತೆಯ ಒಡಗೂಡಿಸಿದೆಯೋ ಶ್ರೀರಾಮಚಂದ್ರಗೆ 2 ಮೂರು ರೂಪವ ತಾಳ್ದಿ ಮಹಯೋಗ್ಯ ಜನರಿಗೆ ಸಾರ ತತ್ವವ ಪೇಳ್ದಿ ಶರಣ್ಹೊಕ್ಕ ಜನರಪಾರ ದುಃಖವ ಶೀಳ್ದಿ ಮೊರೆಯ ಕೇಳ್ದಿ ಧೀರ ಕದರುಂಡಲಗಿ ಹನುಮಯ್ಯ ಸೇರಿದೆನೊ ನಿನ್ನಂಘ್ರಿ ಕಮಲವ ಗಾರು ಮಾಡದೆ ಸಲಹೊ ಕರುಣವಾರಿಧಿ ನೀಯೆನ್ನನೀಗಲೆ 3
--------------
ಕದರುಂಡಲಗಿ ಹನುಮಯ್ಯ
ಎಷ್ಟು ಪೊಗಳಲಿ ನಾನು ಎನ್ನೊಡೆಯ ನಿಮ್ಮ ವಿ- ಶಿಷ್ಟ ಮಹಿಮೆಗಳನು ಸುಜನರಿಗೆ ಬಂದ ಕಷ್ಟವಳಿಯಲ್ಕೆ ನೀ ಸುರಕಾಮಧೇನು ಪ ವಿಷ್ಣುವೆ ಪರಮದೈವವೆಂದು ದುಷ್ಟ ರಾಕ್ಷಸರ ಕೊಂದೆ ಸೃಷ್ಟಿಸಿ ಪಾಲಿಪ ಶ್ರೀರಾಮರ ಇಷ್ಟ ಭಕ್ತರೊಳು ಶ್ರೇಷ್ಠನೆಂದೆನಿಸಿದೆ ಅ ತಾಯಿಯಪ್ಪಣೆಗೊಂಡು ಸೇವೆಗೆ ರಘುಪತಿ ರಾಯನಲ್ಲಿ ನಿಂದು ತನ್ನಾತ್ಮ ಸುಖ ಬಯಸೆನೆಂದು ಶ್ರೀ ಹರಿಗೆ ನುಡಿದುಕಾಯಬೇಕು ಸುಗ್ರೀವನನೆನುತಲಿ ತೋಯಜಾಕ್ಷಗೆ ಪೇಳಿ ವಾಲಿಯನು ಪಾಯದಿಂದಲಿ ಕೊಲ್ಲಿಸಿ ರವಿಜಗೆ ಸ- ಹಾಯ ಮಾಡಿದೆ ವಾಯುತನಯ1 ಶೌರಿ ಒಡೆಯಗೆ ವಾರ್ತೆಯ ಪೇಳಿ ಶೀಘ್ರದಿ ನಡೆಸಿ ಸೈನ್ಯವ ದಶಮುಖನ ಶಿರವ ನೊಡಿಸಿದಾಕ್ಷಣ ಲೋಕಮಾತೆಯ ನೊಡಗೂಡಿಸಿದೆ ಶ್ರೀವಾಸುದೇವರಿಗೆ 2 ಸಾರ ತತ್ತ್ವವ ಪೇಳ್ದೆ ಶರಣು ಹೊಕ್ಕ ಮನುಜರ ಘೋರ ದುರಿತವ ಸೀಳ್ದೆ ಧೀರ ತನು ಧುರದುಂಡಿ ಹನುಮಯ್ಯರಿಂ ಸೇವಿಸಿದ ನಿಮ್ಮಂಘ್ರಿ ಕಮಲವದೂರ ಮಾಡದೆ ಎನ್ನ ಸಲಹಯ್ಯ ಕರುಣಾವಾರಿಧಿ ಕಾಗಿನೆಲೆಯಾದಿಕೇಶವ ಮುತ್ತತ್ತಿ ದೊರೆಯೆ3
--------------
ಕನಕದಾಸ
ಎಷ್ಟು ಪೊಗಳಿದರೇನೀ ಭ್ರಷ್ಟಮಾನವರು ಪಾದ ಪ ಸ್ವಾಭಿಮಾನ ನೀಗಿ ದೇಹಾಭಿಮಾನ ತೊರೆಯದೆ ಪ್ರಭುನಿನ್ನ ನಿಜಲೀಲೆ ಸೊಬಗು ತಿಳಿಯುವುದೆ 1 ಭ್ರಷ್ಟ ಭ್ರಾಂತಿಗಳಳಿದು ದುಷ್ಟನಡೆ ನೀಗದೆ ಶಿಷ್ಟರೊಡೆಯ ನಿನ್ನ ನಿಜಗುಟ್ಟು ತಿಳಿಯುವುದೆ 2 ವಿಷಯವಾಸನೆ ನೀಗಿ ಹಸನುಮಾಡದೆ ಮನವ ಶ್ರೀಶ ಶ್ರೀರಾಮ ನಿನ್ನ ದಾಸತ್ವಬಹುದೆ3
--------------
ರಾಮದಾಸರು
ಎಷ್ಟು ಭಜಿಸಿದರು ಸಾಕಷ್ಟು ನನಗಾಗದೊ ಪ ಮೂರ್ತಿ ಅಂಗಜಪಿತ ಮೋಹನಾಂಗಚೆಂಗೊಳಲನು ನುಡಿಸುತಲಿರುವಭಂಗಿಯಲಿ ನಿನ್ನ ರೂಪಕಂಗಳಿಂದ ನೋಡಿ ನೋಡುತ 1 ಪೂರ್ಣ ಗುಣ ನಿರ್ದೋಷನೆಸುವರ್ಣಗರ್ಭ ನಿನ್ನ ಲೀಲೆವರ್ಣಿಸುತಿಹ ಕೀರ್ತನೆಯನುಕರ್ಣದಿಂದ ಕೇಳಿ ಕೇಳುತ 2 ನಿತ್ಯ ಮನಕೆ ಮುದವತಪ್ಪ ನಿನ್ನ ನಾಮ ಸುಧೆಯಚಪ್ಪರಿಸುತ ನಾಲಗೆಯಲಿಒಪ್ಪಿ ಸವಿದು ಸವಿಯುತಿರಲು 3 ಅಮಮ ನಿನ್ನ ತನುವಿನಿಂದಘಮಘಮಿಸುತ ಬರುವ ಗಂಧಅಮಿತ ಮುದವ ಮೂಗಿಗಿಡಲುರಮಿಸಿ ಮೂಸಿ ನೋಡುತಿರಲು 4 ಪಾವನತರ ನಿನ್ನಡಿಯಲಿಸೇವೆಗೊಳ್ಳು ನಿರುತದಲಿಕಾವುದಯ್ಯ ಶ್ರೀ ಗದುಗಿನದೇವ ವೀರನಾರಯಣ 5
--------------
ವೀರನಾರಾಯಣ
ಎಷ್ಟು ಮಾತ್ರ ನಿಂದಲ್ಲದ್ದು ಹರಿ ಸೃಷ್ಟಿಯೊಳಗೆ ಎನ್ನ ಹುಟ್ಟಿಸಿದ್ದು ಪ ನಷ್ಟದೇಹ ಕೊಟ್ಟು ದುಷ್ಟ ಬವಣೆಯಿಂದ ಕಷ್ಟದೊಳಗೆ ಎನ್ನ ನೂಕಿದ್ದುಅ.ಪ ಉಳಿದ ಪಾಪಶೇಷ ಕಳೆಯದಲೆ ಎನ್ನ ಇಳೆಯವಾಸಕ್ಯಾಕೆಳೆಸಿದಲೇ ನಳಿನನಾಭ ನಿನ್ನ ಬಳಿ ಇದೆ ನ್ಯಾಯವೆ ಕಳವಳಪಡಲು ನಾನೊಳಿತೇನು ನಿನಗೆ 1 ಎಷ್ಟು ರೀತಿ ಕಷ್ಟ ತಡಿಬೇಕೊ ಇ ನ್ನೆಷ್ಟುದಿನ ಹೀಗೆ ಕಳೀಬೇಕೊ ಕರ್ಮ ಎನ್ನದಿರಲಿಕ್ಕಾಗಿನು ಶಿಷ್ಟಜನುಮ ಮತ್ತು ಕೊಟ್ಟ್ಯಾಕೊ 2 ಭಕ್ತವತ್ಸಲನೆಂಬ ಬಿರುದೇನೋ ನಿನ್ನ ಭಕ್ತರ ಅಭಿಮಾನ ತೊರೆದೇನೊ ಭಕ್ತರಿಗೀತೆರ ಮೃತ್ಯುಬಾಧೆಯೇನು ಮುಕ್ತಿದಾಯಕ ಜಗತ್ಕರ್ತ ಶ್ರೀರಾಮನೆ 3
--------------
ರಾಮದಾಸರು
ಎಷ್ಟು ಸಾಹಸವಂತ ನೀನೆ ಬಲವಂತದಿಟ್ಟಮೂರುತಿ ಭಳಭಳಿರೆ ಹನುಮಂತ ಪ. ಅಟ್ಟುವ ಖಳರೆದೆ ಮೆಟ್ಟಿ ತುಳಿದು ತಲೆಗಳಕುಟ್ಟಿ ಚೆಂಡಾಡಿದ ದಿಟ್ಟ ನೀನಹುದೊ ಅ.ಪ. ರಾಮರಪ್ಪಣೆಯಿಂದ ಶರಧಿಯ ದಾಟಿಆ ಮಹಾ ಲಂಕೆಯ ಕಂಡೆ ಕಿರೀಟಸ್ವಾಮಿಕಾರ್ಯವನು ಪ್ರೇಮದಿ ನಡೆಸಿದಿಈ ಮಹಿಯೊಳು ನಿನಗಾರೈ ಸಾಟಿ1 ದೂರದಿಂದಸುರನ ಪುರವ[ನ್ನು] ನೋಡಿಭರದಿ ಶ್ರೀರಾಮರ ಸ್ಮರಣೆಯನು ಮಾಡಿಹಾರಿದೆ ಹರುಷದಿ ಸಂಹರಿಸಿ ಲಂಕಿಣಿಯನುವಾರಿಜಮುಖಿಯನು ಕಂಡು ಮಾತಾಡಿ 2 ರಾಮರ ಕ್ಷೇಮವ ರಮಣಿಗೆ ಪೇಳಿತಾಮಸ ಮಾಡದೆ ಮುದ್ರೆನೊಪ್ಪಿಸಿಪ್ರೇಮದಿಂ ಜಾನಕಿ ಕುರುಹನು ಕೊಡಲಾಗಆ ಮಹಾ ವನದೊಳು ಫಲವನು ಬೇಡಿ 3 ಕಣ್ಣ್ಣಿಗೆ ಪ್ರಿಯವಾದ ಹಣ್ಣ[ನು] ಕೊಯ್ದುಹಣ್ಣಿನ ನೆವದಲಿ ಅಸುರರ ಹೊಯ್ದುಪಣ್ಣಪಣ್ಣನೆ ಹಾರಿ ನೆಗೆನೆಗೆದಾಡುತಬಣ್ಣಿಸಿ ಅಸುರರ ಬಲವನು ಮುರಿದು4 ಶೃಂಗಾರವನದೊಳಗಿದ್ದ ರಾಕ್ಷಸರಅಂಗವನಳಿಸಿದೆ ಅತಿರಣಶೂರನುಂಗಿ ಅಸ್ತ್ರಗಳ ಅಕ್ಷಯಕುವರನಭಂಗಿಸಿ ಬಿಸುಟಿಯೊ ಬಂದ ರಕ್ಕಸರ 5 ದೂರ ಪೇಳಿದರೆಲ್ಲ ರಾವಣನೊಡನೆಚೀರುತ್ತ ಕರೆಸಿದ ಇಂದ್ರಜಿತುವನೆಚೋರಕಪಿಯನು ನೀ ಹಿಡಿತಹುದೆನ್ನುತಶೂರರ ಕಳುಹಿದ ನಿಜಸುತನೊಡನೆ 6 ಪಿಡಿದನು ಇಂದ್ರಜಿತು ಕಡುಕೋಪದಿಂದಹೆಡೆಮುರಿ ಕಟ್ಟಿದ ಬ್ರಹ್ಮಾಸ್ತ್ರದಿಂದಗುಡುಗುಡುಗುಟ್ಟುತ ಕಿಡಿಕಿಡಿಯಾಗುತನಡೆದನು ಲಂಕೆಯ ಒಡೆಯನಿದ್ದೆಡೆಗೆ 7 ಕಂಡನು ರಾವಣನುದ್ದಂಡ ಕಪಿಯನುಮಂಡೆಯ ತೂಗುತ್ತ ಮಾತಾಡಿಸಿದನುಭಂಡುಮಾಡದೆ ಬಿಡೆನೋಡು ಕಪಿಯೆನೆಗಂಡುಗಲಿಯು ದುರಿದುರಿಸಿ ನೋಡಿದನು 8 ಬಂಟ ಬಂದಿಹೆನೊಹಲವು ಮಾತ್ಯಾಕೊ ಹನುಮನು ನಾನೆ 9 ಖುಲ್ಲ ರಕ್ಕಸನೆತೊಡೆವೆನೊ ನಿನ್ನ ಪಣೆಯ ಅಕ್ಷರವ 10 ನಿನ್ನಂಥ ದೂತರು ರಾಮನ ಬಳಿಯೊಳುಇನ್ನೆಷ್ಟು ಮಂದಿ ಉಂಟು ಹೇಳೊ ನೀ ತ್ವರಿಯಾನನ್ನಂಥ ದೂತರು ನಿನ್ನಂಥ ಪ್ರೇತರುಇನ್ನೂರು ಮುನ್ನೂರು ಕೋಟಿ ಕೇಳರಿಯಾ11 ಕಡುಕೋಪದಿಂದಲಿ ಖೂಳರಾವಣನು ಸುಡಿರೆಂದ ಬಾಲವ ಸುತ್ತಿ ವಸನವನುಒಡೆಯನ ಮಾತಿಗೆ ತಡೆಬಡೆಯಿಲ್ಲದೆಒಡನೆಮುತ್ತಿದರು ಗಡಿಮನೆಯವರು 12 ತÀಂದರು ವಸನವ ತಂಡತÀಂಡದಲಿಒಂದೊಂದು ಮೂಟೆ ಎಂಬತ್ತು ಕೋಟಿಯಲಿಚಂದದಿ ಹರಳಿನ ತೈಲದೊಳದ್ದಿಸೆನಿಂದ ಹನುಮನು ಬಾಲವ ಬೆಳೆಸುತ 13 ಶಾಲು ಸಕಲಾತ್ಯಾಯಿತು ಸಾಲದೆಯಿರಲುಬಾಲೆರ ವಸ್ತ್ರವ ಸೆಳೆದುತಾರೆನಲುಬಾಲವ ನಿಲ್ಲಿಸೆ ಬೆಂಕಿಯನಿಡುತಲಿಕಾಲಮೃತ್ಯುವ ಕೆಣಕಿದರಲ್ಲಿ14 ಕುಣಿಕುಣಿದಾಡುತ ಕೂಗಿ ಬೊಬ್ಬಿಡುತಇಣಿಕಿನೋಡುತ ಅಸುರರನಣಕಿಸುತಝಣಝಣಝಣರೆನೆ ಬಾಲದಗಂಟೆಯುಮನದಿ ಶ್ರೀರಾಮರ ಪಾದವ ನೆನೆಯುತ 15 ಮಂಗಳಂ ಶ್ರೀರಾಮಚಂದ್ರ ಮೂರುತಿಗೆಮಂಗಳಂ ಸೀತಾದೇವಿ ಚರಣಂಗಳಿಗೆಮಂಗಳವೆನುತ ಲಂಕೆಯ ಸುಟ್ಟುಲಂಘಿಸಿ ಅಸುರನ ಗಡ್ಡಕೆ ಹಿಡಿದ 16 ಹತ್ತಿತು ಅಸುರನ ಗಡ್ಡಮೀಸೆಗಳುಸುತ್ತಿತು ಹೊಗೆ ಬ್ರಹ್ಮಾಂಡಕೋಟಿಯೊಳುಚಿತ್ತದಿ ರಾಮರು ಕೋಪಿಸುವರು ಎಂದುಚಿತ್ರದಿ ನಡೆದನು ಅರಸನಿದ್ದೆಡೆಗೆ 17 ಸೀತೆಯಕ್ಷೇಮವ ರಾಮರಿಗ್ಹೇಳಿಪ್ರೀತಿಯಿಂ ಕೊಟ್ಟಕುರುಹ ಕರದಲ್ಲಿಸೇತುವೆ ಕಟ್ಟಿ ಚತುರಂಗ ಬಲಸಹಮುತ್ತಿತು ಲಂಕೆಯ ಸೂರೆಗೈಯುತಲಿ 18 ವೆಗ್ಗಳವಾಯಿತು ರಾಮರ ದಂಡುಮುತ್ತಿತು ಲಂಕೆಯ ಕೋಟೆಯ ಕಂಡುಹೆಗ್ಗದ ಕಾಯ್ವರ ನುಗ್ಗುಮಾಡುತಿರೆಝಗ್ಗನೆ ಪೇಳ್ದರು ರಾವಣಗಂದು 19 ರಾವಣಮೊದಲಾದ ರಾಕ್ಷಸರ ಕೊಂದುಭಾವಶುದ್ಧದಲಿ ವಿಭೀಷಣ ಬಾಳೆಂದುದೇವಿ ಸೀತೆಯನೊಡಗೊಂಡಯೋಧ್ಯದಿದೇವ ಶ್ರೀರಾಮರು ರಾಜ್ಯವಾಳಿದರು 20 ಶಂಖದೈತ್ಯನ ಕೊಂದೆ ಶರಣು ಶರಣಯ್ಯಶಂಖಗಿರಿಯಲಿ ನಿಂದೆ ಹನಮಂತರಾಯಪಂಕಜಾಕ್ಷ ಹಯವದನನ ಕಟಾಕ್ಷದಿಬಿಂಕದಿ ಪಡೆದೆಯೊ ಅಜನಪದವಿಯ21
--------------
ವಾದಿರಾಜ
ಎಷ್ಟು ಹೇಳಲಿ ವೆಂಕಟಗಿರಿಯ ದೃಷ್ಟಿಗೆ ಬಹು ಸಿರಿಯ ಬೆಟ್ಟವನೆ ಮನಸಿಟ್ಟೇರಲು ಬೇಡಿದ ಇಷ್ಟಾರ್ಥಗಳ ಈಡಾಡುವ ದೊರೆಯ ಪ ಚಿತ್ರ ವಿಚಿತ್ರದ ಮಹಾದ್ವಾರ ಚಿನ್ನದ ಗೋಪುರ ಸ್ವಚ್ಛವಾದ ಸ್ವಾಮಿ ಪುಷ್ಕರಣಿ ತೀರ ಸುತ್ತಲು ಪ್ರಾಕಾರ ಹೆಚ್ಚಿನ ತೀವ್ರತವೆ ಮನೋಹರ ಮಾರುವ ವಿಸ್ತಾರ ಚಿತ್ತಜನಯ್ಯನ ಶೈಲವೆ ದೂರದಿಂ- ದ್ಹತ್ತಿ ಬರುವುದೀತನ ಪರಿವಾರ 1 ಕಟ್ಟಿದ ಉಡಿದಾರ ಉಟ್ಟಿದ್ದ ನಿರಿಜರಪೀತಾಂಬರ ಕೌಂಸ್ತುಭ ಮಣಿಹಾರ ಗಟ್ಟಿ ಕರಕಂಕಣ ಕುಂಡಲಧರ ಚತುರ್ಭುಜದಲಂಕಾರ ವಕ್ಷಸ್ಥಳದಲ್ಲಿ ಹೊಂದಿದ ಶ್ರೀ ಮಹಾ- ಲಕ್ಷ್ಮಿದೇವಿಯರಿಂದೊಲಿವ ಶೃಂಗಾರ 2 ಆಕಾಶರಾಜನ ಕಿರೀಟ ಚಿತ್ರವು ಬಹುಮಾಟ ಹಾಕಿದ್ದ ಹರಿ ಕಡೆಗಣ್ಣಿನ ನೋಟ ಭಕ್ತರ ಕುಣಿದಾಟ ಭವ ಪಡಿಪಾಟ ಬಿಡಿಸುವ ಯಮಕಾಟ ಕೋಟಿ ಜನರ ಓಡ್ಯಾಟವೆ ನಮ್ಮ ಕಿ- ರೀಟಿಯ ಸಖ ಕೇಶವನ ಮಂದಿರದೊಳ್ 3 ತಪ್ಪುಗಾಣಿಕೆಯ ಬೇಡುವ ಸರ್ಪ ಶೈಲದ ತಿಮ್ಮಪ್ಪ ಕಪ್ಪವ ಕಾಸು ಕವಡೆ ಮುಡುಪು ಹಾಕದೆ ತಾನೊಪ್ಪ ಜಪ್ಪಿಸಿ ನೋಡುವ ಜನರ ತಪ್ಪ ಹುಡಿಕ್ಯಾಡುತಲಿಪ್ಪ ಅಪ್ಪ ಮಹಿಮಾನಂತ ಮೂರುತಿ ತಾ- ನೊಪ್ಪಿದರೊಲಿದು ಕೊಡುವ ಸಾರೂಪ್ಯ 4 ದೇಶದೇಶದೊಳು ಈತನ ವಾರುತೆಯು ತುಂಬಿದ ಕೀರುತಿಯು ಆಸೆಯ ದೈವ ಈ ಮೂರುತಿಯು ಫಲ್ಗುಣ ಸಾರಥಿಯು ಲೇಸಾಗಿ ಜನರ ನೋಡುವ ರತಿಯು ಕರ್ಪುರದಾರತಿಯು ವಾಸವಾಗಿರುವ ಈ ಶೇಷಾದ್ರಿಯಲಿ ಭೀ- ಮೇಶ ಕೃಷ್ಣ ಶ್ರೀನಿವಾಸ ಕೃಪಾಳು 5
--------------
ಹರಪನಹಳ್ಳಿಭೀಮವ್ವ
ಎಷ್ಟೆಂದು ಸಾರುವೆ ನಿಮ್ಮ ನಾಮ ಮಹಿಮಾ| ಶ್ರೀ ಪರಬೊಮ್ಮಾ ಶಿಷ್ಟ ಜನರ ಸಂಭ್ರಮಾ ಪ ಹರಿಹರಿಯಂದೊದರೆ ಮರೆದರಿದೊಮ್ಮಾ| ಹರದ್ಹರ ದೋಹುದುಪಾಪ ಪುಣ್ಯವು ಮೋಪಾ| ತಿರು ತಿರುಗಿ ಯಾತ್ರೆಗಳಾ ಮಾಡಿದ ಫಲಾ| ಪರತರಾಸುಖ ನೀವುದು ರಕ್ಷಿಸುವುದು 1 ರಮ ರಾಮಯಂದು ಕಾಮಿಕಾಮಿ ಅಂದು| ನಾಮಾ ನೇಮದಿ ನುಡಿಯೆ ಗಿಳಿಯ ಕರಿಯೆ| ಪ್ರೇಮ ಪ್ರೇಮಕರ ತಂದೆ ಗತಿ ನೀಡದೇ| ಸೋಮ ಸೋಮಾರಿ ಕುಲೇಶ ಕೋಟಿ ಪ್ರಕಾಶಾ 2 ಪರಿ ಪರೀವದಾನಂದಾ| ಕರೆ ಕರೆದುಂಡು ನಲಿದರು ನಾರದಾದ್ಯರು| ತರಿಸಿ ತಾರಿಸುತಿಹರು ಸಾಧು ಸಂತರು| ಗುರುವರ ಮಹಿಪತಿ ಜನು ಧನ್ಯನಾದನು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು