ಒಟ್ಟು 1946 ಕಡೆಗಳಲ್ಲಿ , 107 ದಾಸರು , 1460 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸ್ವಾಮಿ ಅವಧೂತ ಕಾವ ಕರುಣನೆ ಪೂರ್ಣ ನೀನೆ ಸದೋದಿತ ಧ್ರುವ ಕರುಣ ದಯದ ಹುದಯ್ಯ ನೀಆಧಾರ ಶರಣ ಜನರಿಗಹುದಯ್ಯ ನೀಆಧಾರ ತಾರಿಸುವ ಸ್ವಾಮಿ ಅಹುದಯ್ಯ ನೀ ನಿರ್ಧಾರ ಪರಮ ದಯಾನಿಧಿ ನೀ ಸುಙÁ್ಞನದ ಸಾಗರ 1 ಅನಾಥನಾಥನಹುದೊ ಪೂರ್ಣ ದೀನಾನಾಥ ಸನಾಥ ಮಾಡುತಿಹ್ಯ ಶ್ರೀಸದ್ಗುರು ನೀ ಸಾಕ್ಷಾತ ಅನಾದಿ ನಿಜವಸ್ತು ಅಹುದಯ್ಯ ನೀ ಪ್ರಖ್ಯಾತ ಮುನಿ ಜನರಿಗೆ ನೀ ಆನಂದ ಸುಪಥ 2 ದೇಶಿಕರ ದೇವನಹುದಯ್ಯ ಕೃಪಾಕರ ಲೇಸು ಲೇಸಾಗೆನ್ನ ಪಾಲಿಸುವ ನೀ ದಾತಾರ ಭಾಸುತಿಹ ಭಾನುಕೋಟಿತೇಜ ಮನೋಹರ ದಾಸ ಮಹಿಪತಿ ಗುರು ನೀನೆ ಸಹಕಾರ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸ್ವಾಮಿ ನಮ್ಮ ದೇವದತ್ತ ಬ್ರಹ್ಮಾನಂದ ಅವಧೂತ ಸಮಸ್ತಜನದಾತ ಬ್ರಹ್ಮಾದಿಗಳೊಂದಿತ ಧ್ರುವ ಕುಡಲಿಕ್ಕೆ ತಾ ಉದಾರಿ ಬಲು ದೊಡ್ಡ ಉಪಕಾರಿ ಕಡೆಗಾಣಿಸುವ ಧೊರಿ ನಿಜ ನೀಡುತಿಹ್ಯ ಸಾರಿ ಬಡವರಿಗೆ ಆಧಾರಿ ಭಕ್ತಜನ ಸಹಕಾರಿ ಪರಿ ಮಾಡುತಿಹ್ಯ ಮನೋಹರಿ 1 ಬೀರುತಿಹ್ಯ ನಿಜನೋಡಿ ಕರದಲ್ಲಭಯ ನೀಡಿ ಗುರುತಿಟ್ಟಿದೆ ಸೂರ್ಯಾಡಿ ಶರಣರು ನಿಜಗೂಡಿ ಅರುವ್ಹೆ ಅಂಜನ ಮಾಡಿ ಕುರುವ್ಹೆದೋರುದಿದರಡಿ ಧರೆಯೊಳಿದೆ ಕೊಂಡಾಡಿ ಗುರುನಾಥನೆಂದು ಪಾಡಿ 2 ಅನಾಥ ಬಂಧುನೀತ ದೀನದಯಾಳು ಸಾಕ್ಷಾತ ಅನುದಿನದೆ ಪ್ರಖ್ಯಾತ ಘನಗುರು ಶ್ರೀನಾಥ ಮನೋಭಾವ ಪೂರಿತ ಎನಗುಳ್ಳ ದೇವದತ್ತ ದಾತ ಭಾನುಕೋಟಿ ಉದಿತ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸ್ವಾಮಿ ನೀನೆ ಸಾರ್ವಭೌಮ ಶ್ರೀ ರಘುರಾಮ ಸೋಮಶೇಖರ ಪ್ರಿಯ ದಿವ್ಯ ನಿನ್ನ ನಾಮ ಧ್ರುವ ಕಾಕುಸ್ಥತಿಲಕ ಕಾರುಣ್ಯನಿಧಿ ಕೃಪಾಲ ಪ್ರಕಟ ಪ್ರಖ್ಯಾತಲಿಹ ಸತ್ಯಶೀಲ ನಾಕಜರ ಸೆರೆಬಿಡಿಸ್ಯಾದೆ ಸಾನುಕೂಲ ಸಕಲ ಸುಖದೀವ ಮೂಲೋಕಪಾಲ 1 ಖರದೂಷಣಾರಿ ಶರಣಾಗತರ ಸಹಕಾರಿ ಸರ್ವರಾಧಾರಿ ಕೋದಂಡ ಧಾರಿ ದುರುಳ ದುಷ್ಟ ಜನಸಂಹಾರಿ ವರಪೂರ್ಣವೀವ ಪರಮ ಉದಾರಿ 2 ಅನುದಿನದಲಿ ನಿನ್ನ ನಡಿನುಡಿಗಳೊಂದವೆ ನೇಮ ಅನಂತಗುಣ ಪೂರ್ಣಾನಂದ ಮಹಮಹಿಮ ದೀನ ಮಹಿಪತಿ ಅತ್ಮಾರಾಮ ಪೂರಿತ ಕಾಮ ಭಾನುಕೋಟಿ ತೇಜ ಘನದಯ ನಿಸ್ಸೀಮ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸ್ವಾಮಿ ನೀನೆ ಸ್ವಹಿತ ಗುರುನಾಥ ಬ್ರಹ್ಮಾನಂದ ಸದ್ಘನ ಸದೋದಿತ ಧ್ರುವ ನೀನಹದೋ ಬಡವನಾಧಾರಿ ಸಾನುಕೂಲ ನೀನೆವೆ ಪರೋಪರಿ ಅನುದಿನದಲಿ ನೀ ಸಹಕಾರಿ ಮನೋಹರ ಮೂರುತಿ ನೀ ಶ್ರೀ ಹರಿ 1 ದಯಗುಣಕೆ ನಿಮ್ಮ ನಾ ಸರಿಗಾಣೆ ತಾಯಿ ತಂದೆ ಸಕಲ ಬಂಧು ನೀನೆ ತ್ರೈಲೋಕ್ಯವಂದ್ಯ ನೀ ದೇವನೆ ಶ್ರೇಯ ಸುಖದಾಯಕ ಎನ್ನ ನೀನೆ 2 ಶ್ರುತಿ ಸಾರುತಲ್ಯದ ನಿಮ್ಮ ಖ್ಯಾತಿ ಸ್ತುತಿ ಮಾಡಲೇನು ನಾ ಮಂದಮತಿ ಅತಿ ದೀನ ನಾ ನಿಮ್ಮ ಮಹಿಪತಿ ಪ್ರತಿಪಾಲಕಹುದೋ ನೀ ಶ್ರೀಪತಿ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸ್ವಾಮಿ ಯಾತಕೆನ್ನೊಳುಪೇಕ್ಷೆ ಮಾಡುವಿ ದೀನನಾಥ ಸುಮ್ಮನೆ ನಿಂತು ನೋಡುವಿ ಪ. ನಡೆವನ ಕಣ್ಣ ಕಟ್ಟಿ ಕೆಡಹುವುದುಚಿತವೆ ಒಡೆಯ ನಿನ್ನಡಿಗಳ ಪೊಗಳುವ ಪಾಡಿ ನುಡಿವ ಕಾರ್ಯಕೆ ಬಾಡಿ ಬಳಲುತ ನಾ ನಿತ್ಯ ನೋಡುತ ಬಡವನ ಬಿಡದಿರು ಕಡಲಶಯನ ನಿಜ ಮಡದಿ ಸಹಿತನಾಗಿ ಶ್ರೀಶನೆ ಕೃಪೆ ಕಂಜಕರ ಶ್ರೀನಿವಾಸನೆ1 ಭಾವಜ ಪಿತ ನಿನ್ನ ಸೇವೆ ಮಾಳ್ಪರಿಗೆಂದು ನೋವ ನೀಡದೆ ಕಾವ ಬಿರುದನು ಭವ ಸಾರÀ ನೀ ಮರೆವುದು ನೀತಿಯೆ ಎನ್ನ ನೀ ವಿಧ ಮಾಳ್ಪುದು ಖ್ಯಾತಿಯೆ ಪಾವನ ಚರಿತ ಪುರಾಣ ಪುರುಷ ಮಹ ದೇವ ನೀ ಕರಪಿಡಿದೆನ್ನನು ಕರು- ಣಾವಲಂಬನವಿತ್ತು ಪೊರೆವುದು 2 ದುರುಳ ಭಾವನೆಯಿಂದ ಸರಿದು ಹೋಗುವ ಪಂಚ ಕರಣಕೆ ನೀನರಸನಲ್ಲವೆ ಭಕ್ತಾ- ಭರಣಕೆ ನಿನ್ನೊಳಿರಿಸು ಮಾರ್ಗವನಂತ:- ಕರಣಕೆ ತರಿದು ಪಾಪಗಳನು- ದ್ಧರಿಸೆನ್ನ ವೆಂಕಟಗಿರಿವರ ದೀನಾರ್ತಿ ಚಕ್ರಧರ ಸಕಲಾನಂದ ಕಾರಣ 3
--------------
ತುಪಾಕಿ ವೆಂಕಟರಮಣಾಚಾರ್ಯ
ಸ್ವಾಮಿ ಸದ್ಗುರುದಯವೆ ತಾ ನಿಜ ನೇಮ Pರಿಗಿದೇವೆ ಹಿತಗುಜ ಸಮಸ್ತ ಜನರಿಗಿದೆ ಸುಬೀಜ ಪ್ರೇಮವಿಟ್ಟವರಿಗ್ಹೊಳೆವದು ಸಹಜ 1 ಗುರು ಉಪಾಸನೆ ಎಲ್ಲಕೆ ಮೇಲು ಸುರಜನರಿಗಿದೊಂದೇ ಕೀಲು ಅರಿತವರಿಗೆ ಮುಕ್ತಿ ಬಾಗಿಲು ತ್ಯರ ತಿಳಿಯದವರಿಗಿದೇ ಸೋಲು 2 ನಂಬಿ ನಡೆಯಬೇಕು ಸದ್ಗುರುಪಾದ ಇಂದುದೋರಿಕೊಡುವದು ಸುಬೋಧ ಗುಂಭಗುರುತಾಗಿದೋರುದು ಸ್ವಾದ ಹಂಬಲಿಸಿಕೊಳಬೇಕು ಸುಪ್ರಸಾದ 3 ಗುರುಮಾರ್ಗವೆಂಬುದೆ ಸಾಕ್ಷಾತ್ಕಾರ ಸೂರೆಗೊಂಡು ಮ್ಯಾಲೆ ಸುಖಸಾಗರ ಮರುಳ ಬಲ್ಲವೇನಿದರ ವಿಚಾರ ಶರಣಜನರಿಗಿದೇ ಸಹಕಾರ 4 ಗುರುಕೃಪೆಯಾದವಗೆ ಪ್ರಾಂಜಳ ಸಾರಾಯ ಕೊಂಬುವನೆ ತಾ ವಿರಳ ಅರಿಯೋ ಮಹಿಪತಿ ನಿನ್ನೊಳು ಸಕಳ ಹರುಷವಾಗೆದಿಂತು ಈ ಸುಖಕಲ್ಲೋಳ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸ್ವಾಮಿ ಸೀತಾರಾಮ ಪತಿತ ಪಾವನ ನಾಮ ಧ್ರುವ ಅಮಿತವಾದ ಗುಣ ನಿರ್ಮಳಾಚರಣಿ ಕಮಲಭವಾರ್ಚಿತ ಕಾರ್ಮುಕಪಾಣಿ ನೇಮದಿಂದಾಡುವ ಅಮೃತವಾಣಿ 1 ಸಮಸ್ತ ಹೃದಯಾಂತ್ರ ವಿಮಲಸುಚರಿತ್ರ ಸುಮನ ಸುಗಾತ್ರ ಅಮರಜ ನೇತ್ರ ಸೋಮಶೇಖರಪ್ರಿಯ ಪುಣ್ಯಪವಿತ್ರ 2 ಸಾಹ್ಯಸಹಕಾರ ಬಾಹ್ಯಾಂತ್ರ ಸ್ಥಿರ ಸ್ವಹಿತದಾಗರ ಮಹಿಪತಿ ಮನೋಹರ ಮಹಾಮಹಿಯನ್ನುಳ್ಳನಹುದೋ ಉದಾರ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಹಗಲು ಸಮಯದಲಿ ಇರುಳು ನೋಡಿದ ಬಾವಿ ಗುರುಳಬಹುದೇ ನರರು ಈ ಜಗದೊಳು ಪ ಮರುಳು ಮಾಡುವ ಭವದುರುಳು ಬಂಧನದೊಳು ಸಿಗಲು ಬಯಸಬಹುದೇ ಅವಿವೇಕದಿ ಅ.ಪ ಅಡಿ ಐದು ಉದ್ದದ ಒಡಕು ಒಂಭತ್ತಿನ ಕಡು ದುಃಖ ದೇಹಕೆ ಸಿಡಿವುದು ತರವೆ ಪೊಡವೀಶನಾದರೂ ಮಡಿಯಲು ನಿನ್ನಯ ಸಡಗರವೆಲ್ಲವು ಹಿಡಿಯೊಳಗಲ್ಲವೇ 1 ಅನುದಿನದಲಿ ನೀನು ಹಣ ಹಣವೆನ್ನುತ ಕುಣಿಯುವುದನು ನೋಡಿ ಅಣಕಿಸುವರು ನಿನ್ನ ತನುಮನ ಕ್ಲೇಶವನನುಭವಿಸುತ ಸದಾ ಹಣವಗಳಿಸಲದನುಣುವರು ಬೇರಿಹರು 2 ಗೃಹಿಣಿ ಗೃಹಿಗಳೆಲ್ಲ ಕುಹಕವೆಂದರಿಯದೆ ಗೃಹವು ಎನ್ನದು ಎಂದು ಗೃಹಿಣಿ ಎನ್ನವಳೆಂದು ಬಹುವಿಧ ವೈಭವವೆನಗಿಹುದೆನ್ನುವ ಮಹದಾಗ್ರವನ್ನು ಸಹಿಸುವನೇ ಹರಿ 3 ಸಿರಿ ಸಂತತ ಗಳಿಸಲು ಅಂತಕ ತನುವನು ಸೆಳೆಯಲು ಗಳಿಸಿದ ಕಂತೆಗಳೆಲ್ಲವೂ ಎಂತು ನಿಲ್ಲಿಸುವುವು ಚಿಂತಿಸಿ ಮನದೊಳು ಹರಿಯನು ನಿಲಿಸೊ 4 ಊಹಿಸುತೆಲ್ಲವ ಈ ಮಹಿಯೊಳಗಿನ ಮೋಹವ ಜರಿಯುತ ಪಾಹಿ ಎಂದು ಆ ಮಹಾಮಹಿಮ ಪ್ರಸನ್ನ ಹರಿಯ ದಿವ್ಯ ಸ್ನೇಹಸುಜಲದ ಪ್ರವಾಹದೊಳಗೆ ನಲಿಯೊ 5
--------------
ವಿದ್ಯಾಪ್ರಸನ್ನತೀರ್ಥರು
ಹಚ್ಚಡವಗೆಯ ಬೇಕಮ್ಮಾ | ಬಹುಕೊಳೆ ಮುಚ್ಚಿ ಕೊಂಡಿಹುದು ನೋಡಮ್ಮಾ ಪ. ಸ್ವಚ್ಛವ ಮಾಡುತ ಅಚ್ಯುತನಂಘ್ರಿಗೆ ಬೆಚ್ಚಗೆ ಹೊದಿಸಲು ಇಚ್ಛೆಯ ಮಾಡುತ ಅ.ಪ. ಏಳು ಪದರವಿಹುದೊ | ಬಹು ಕಾಲದಿಂ ಬಾಳುತ ಬಂದಿಹುದೂ ಕಾಲಕಾಲಕೆ ಬದಲಾವಣೆ ಪೊಂದುತ ಬೀಳುತೇಳುತ ಬೆನ್ನು ಬಿಡದಿರುತಿಹುದೊ 1 ಹೊರಗಡೆ ನವ ದುರ್ಗಂಧಾ | ಒಳಗಡೆ ಇನ್ನು ಅರುಹಲಾರದ ಕಲ್ಮಷಾ ಸುರರೆಲ್ಲ ಇದಕಿನ್ನು ಸರಿ ಇಲ್ಲವೆಂಬೋರು ಮರುತಾಂತರ್ಯಾಮಿಗೆ ಸರಿತೋರುವಂದದಿ 2 ಎಪ್ಪತ್ತೆರಡು ಸಾಸಿರಾ | ನೂಲುಗಳಿಂದ ವಪ್ಪಾಗಿ ಹೊಲಿದ ಪಾರ ಕಪ್ಪು ಕೆಂಪು ಬಿಳಿ ವಪ್ಪೆ ಬಣ್ಣಗಳಿಂದ ಸರ್ಪಶಯನ ಸತತ ಸಲಹಿ ಕೊಡುವಂಥ 3 ನಿರ್ಮಲೋದಕವ್ಯಾವುದೇ | ಇದನೊಗೆಯಲು ಸಮ್ಮತ ಶಿಲೆಯಾವುದೇ ಬೊಮ್ಮನೈಯ್ಯನ ಸುಜ್ಞಾನ ಸುಕೊಳದೊಳು ವಮ್ಮನಸಿನೊಳದ್ದಿ ವದ್ದೆ ಮಾಡುತಲಿನ್ನು 4 ವ್ಯಕ್ತಿ ವೈರಾಗ್ಯ ಶಿಲೇ | ಶ್ರೀ ಹರಿಗುರು ಭಕ್ತಿ ಎರಡು ಕೈಗಳೇ ಎತ್ತಿ ವಗೆದು ಎಲ್ಲಾ ಕಶ್ಮಲ ಕಳೆಯುತ ಮತ್ತೆ ಜಾಲಾಡಿ ಹಿಂಡಿಕೆ ಮಾಡಿ ಶುಭ್ರದಿ 5 ಎತ್ತಿ ತಂದು ಕೊಡುವುತಾ | ಮತ್ತೆ ಕೊಳೆ ಹತ್ತದಂದದಿ ನೋಡುತಾ ಉತ್ತಮವಾದ ಮೈದಾನದೊಳಗೆ ಹರಹಿ ನೆತ್ತಿ ಜ್ಯೋತಿಯ ಘನ ದೀಪ್ತಿಯಲ್ಲೊಣಗಿಸು 6 ಶುದ್ಧ ಸಾತ್ವಿಕವರ್ಣದೀ | ಹೊಳೆವಂಥ ಈ ಶುದ್ಧ ಹೊದ್ದಿಕೆ ಸ್ಥಾನದೀ ಮುದ್ದುಕೃಷ್ಣನು ತನ್ನ ಪರಿವಾರ ಸಹಿತದಿ ಪೊದ್ದಿಕೊಂಡಿಪ್ಪ ಬಲು ಭದ್ರವ ಮಾಡುತ 7 ಹಿಂದೆ ಮುಂದಿನ ಭಯವೆಲ್ಲಾ | ತಪ್ಪುವುದಿನ್ನು ಸಂದೇಹಪಡಲು ಸಲ್ಲಾ ತಂದೆ ಮುದ್ದುಮೋಹನ್ನ ಗುರುಗಳು ಪೇಳಿದ ಒಂದೆ ವಾಕ್ಯವ ಆನಂದದಿ ನಂಬುತ 8 ನೂತನ ಹಚ್ಚಡವೂ | ನೂಲುಗಾರ ಜಾತಿಯರರಿಯರಿವೂ ಪ್ರೀತಿಯೋಳ್ ಗೋಪಾಲಕೃಷ್ಣವಿಠ್ಠಲ ಕೊಟ್ಟ ಖ್ಯಾತಿಯೊಳ್ ಬಾಳಿ ಶ್ರೀನಾಥನ್ನ ಪೊಂದುವೋ 9
--------------
ಅಂಬಾಬಾಯಿ
ಹಡಪ ಕಾಳಾಂಜಿ ಚಾಮರ ಛತ್ರ ವ್ಯಜನ ಪಾ ವಡಗಾಡಿ ವಸಡುಗ ಪಾವುಗೆ ಸುವರ್ಣದರ್ಪಣವಾ ಪ ಪಿಡಿದ ನಾರಿಯರು ಯಡಬಲದ ಕೈದೀವಿಗೆಯ ಕೊಡುತ ಕೈಲಾಗಿನವರಡಿಗಳೆಚ್ಚರಿಕೇ ಅ.ಪ ವೀಣೆ ದಂಡಿಗೆ ತಾಳ ಮೇಳ ಸನಕಾದಿ ಸುರ ನಾರಿಯರು ಗೀತ ಪ್ರಬಂಧ ನರ್ತನದ ಪು ರಾಣ ಕೋವಿದರು ಪಾಠಕನಿಕರ ಸಹಿತ ಗೀ ರ್ವಾಣರೈದಿರಲು ಅವಧಾನವೆಚ್ಚರಿಕೇ 1 ಗಂಧ ಪರಿಮಳ ಪುಷ್ಪ ತಾಂಬೂಲ ಫಲಗಳನು ತಂದು ಉಡುಗೊರೆಯ ಕಾಣೆಕೆಯಿಟ್ಟು ಜಯವೆನುತ ನಂದ ಮುಕುಂದ ಗೋವಿಂದ ಕೇಶವಯೆನುತ ವಂದನೆಗಳನೆ ಮಾಡಿ ನಿಂದರೆಚ್ಚರಿಕೇ 2 ಭಾಗವತ ಜನರು ಬಿರುದಾವಳಿಯ ಪೊಗಳೆ ಮುನಿ ಯೋಗಿಗಳು ತತ್ವ ಪ್ರಬಂಧದಧ್ಯಾಪಕರು ಮೇಘವಾಹನ ಪೂಮಳೆಗರೆಯೆ ಸಕಲ ವಿನಿ ಯೋಗದವರನು ಕಳುಹುವಾಗಲೆಚ್ಚರಿಕೇ3 ಸರಸಿಜೋದ್ಭವನು ದಿಕ್ಪಾಲನಾರದ ಧ್ರುವನು ಗರುಡ ಗಂಧರ್ವ ವಿದ್ಯಾಧರರು ಅನಿಲಜನು ಪರಮ ಭಕ್ತಿಯಲಿ ಊಳಿಗಕೆ ಬಂದೈದಾರೆ ಧರೆಗಧಿಕ ವೈಕುಂಠ ಚನ್ನ ಕೇಶವ ಚಿತ್ತೈಸೋ 4
--------------
ಬೇಲೂರು ವೈಕುಂಠದಾಸರು
ಹನುಮ-ಭೀಮ-ಮಧ್ವರು ಅಸುರರನು ಅಳಿಯ ಬಂದೆನು ನಾನು ನಿನ್ನ ವೈರಿದಶರಥರಾಮನಾಳೆಂದ ಪ. ಹೊಸಕಪಿಯೆ ನೀನು ಬಂದುದೇನುಕಾರಣವೆನಲುದಿ[ಶೆÀ]ಗೆ ಬಲ್ಲಿದ ಹನುಮ ನಾ ಕೇಳೊ ನಿ-ನ್ನಸುರ ಪಡೆಯ ಮಡುಹಬಂದೆ ನಿನ್ನಎಸೆವ ಪಾದದಲೊದೆಯ ಬಂದೆ ವನದಸಸಿಯ ಕಿತ್ತೀಡ್ಯಾಡಿ ನಿಂದೆ ನಿನ್ನದಶಶಿರವ ಕತ್ತರಿಸಿ ಎಸೆವ ರಾಮರ ಮಡದಿಹಸುಳೆ ಸೀತೆಯ ಅರಸಲು ಬಂದೆ 1 ಎನ್ನ ವೈರಿಗಳು ಇನ್ಯಾರೆಂದು ರಾವಣನುಹೊನ್ನಕುಂಡಲದ ಹನುಮನೆ ಕೇಳೊಮುನ್ನವರ ಸಾಹಸವಯೇನೆಂಬೆ ಅವರಪರ್ಣಶಾಲೆಯ ಹೊಕ್ಕು ಬಂದೆ ರಾಮ-ಕನ್ಯೆ ಸೀತಾಂಗನೆಯ ತಂದೆತನ್ನ ಬಿಲ್ಲ ತಾ ಹೊತ್ತು ತಿರುಗುವುದ ಕಂಡೆ 2 ಇನ್ನು ಹೆಮ್ಮೆಮಾತ್ಯಾತಕೊ ಕಪಿಯೆಕಚ್ಚಿ ಕೀಳಲೋ ಕಣ್ಣು ಹತ್ತುತಲೆಯನೆ ಹಿಡಿದುನುಚ್ಚುನುರಿ ಮಾಡಿ ಕೊ[ಲ್ಲಲೊ]ನಿನ್ನ ಇಷ್ಟುಹೆಚ್ಚಿನ ಮಾತ್ಯಾಕೊ ನಿನಗೆ ಬಹಳಕಿಚ್ಚು ತುಂಬಿತು ಕೇಳೋ ಎನಗೆ ಒಂದುಮೆಚ್ಚು ಹೇಳುವೆನೊ ರಾಮರಿಗೆಅಚ್ಚುತನ ಬಣಕೆ ಮೀಸಲಾಗಿರು ನೀನು 3 ವಿಧಿ ಕಾಲಮ[ಣೆ]ಯಾಗಿಬೆನ್ನಬಿಡದಿಹ ಪರಿಯ ನೋಡೊ 4 ಎನ್ನ ಸೋದರಮಾವ ವಾಲಿಯನು ಕೊಂದೀಗತಮ್ಮ ಸುಗ್ರೀವಗೊಲಿದು ವರವಿತ್ತುನಿನ್ನ ಕೊಂಡೊ[ಯ್ದ]ನೆಂಬುವರೊ ನಿನ್ನಚಿನ್ನನ ತೊಟ್ಟಿಲಿಗೆ ಕಟ್ಟುವರೊ ನಿನ್ನಹೊನ್ನತುಂಬೆಂದು ಆಡ್ಸುವರೊನಿನ್ನ ಶಿರವರಿದು ವಿಭೀಷಣಗೆÀ ಪುರವ ಕೊಡಬೇಕೆನುತಎನ್ನೊಡೆಯ ಬರುತಾನೆ ತಾಳೊ ಎಂದ 5 ಎತ್ತಿಹಿಡಿವ ಕೈಪಂಜು ಲೆಕ್ಕವಿಲ್ಲ ನಾ ಹಿಡಿದವಕತ್ತಿ ಇಪ್ಪÀತ್ತು ಕಾಣೋ ಕಪಿಯೆಎತ್ತಿ ಕಡಿವೆನು ಬಾಹುದಂಡ ಬೆ-ನ್ನ್ಹ್ಹತ್ತಿ ಬಡಿಯದೆ ಬಿಡೆನು ಕಂಡ್ಯಾ ನಿನ್ನಚಿತ್ತದಲಿ ತಿಳಿದುಕೊಳ್ಳೆಂದಮತ್ತೆ ನಾ ತಾಳಿ ಕೈಗಾಯಿದೆನಲ್ಲದೆ ಬಾಯಬತ್ತಿಸದೆ ಬಿಡುವೆನೇನೋ ಕಪಿಯೆ 6 ಮತ್ತ ರಾವಣ ನೀನು ಹೊತ್ತಿದ ಭೂಮಿ ಹಣತಿಸುತ್ತಣ ಸಮುದ್ರವೆ ತೈಲಎತ್ತಿ ಹಿಡಿವಳು ಸೀತೆ ದೀಪ ನಮ್ಮಚಿತ್ತದೊಲ್ಲಭನ ಪ್ರತಾಪ ನಿನ್ನಲಂಕಪಟ್ಟಣವು ಸುಡುವಂತೆ ಶಾಪಹತ್ತು ತಲೆ ಹುಳ ಹಾರಿಬಂದು ಬ್ಯಾಗಸುತ್ತಿ ಬೀಳುವುದು ದೀಪದೊಳಗೆ7 ಹೆಚ್ಚಿನ ಮಾತಿಷ್ಟು ಇವಗ್ಯಾಕೆ ಹಿಡಿತಂದುಕಿಚ್ಚು ಹಚ್ಚಿರೊ ಬಾಲಕೆ ಎಂದ ಆಗಪೊಚ್ಚಸೀರೆಗಳ ಸುತ್ತಿದರು ತ್ವರಿತಅಚ್ಚ ಎಣ್ಣೆಯಲಿ ತೋಯಿಸಿದರು ಬಾಲಹೆಚ್ಚಿಸಲು ಕಂಡು ಬೆದರಿದರುಕಿಚ್ಚು ಹಚ್ಚಲು ರಕ್ಕಸರ ಗಡ್ಡಮೀಸೆ ಸಹಎಚ್ಚರಿಸಿ ಸುಟ್ಟ ಲಂಕಾಪುರವ8 ಮುಖ್ಯಪ್ರಾಣ ವರದ ಮೆರದ 9
--------------
ವಾದಿರಾಜ
ಹನುಮಂತ ದೇವರು (ದಂಡಕ) ಅಂಜನಿಯ ಉದರದಿಂ ಪುಟ್ಟುತಾರ್ಭಟಿಸುತಲಿ ಕಂಜಮಿತ್ರಂಗೆ ಹಾರ್ದೆ ಧೀರಾ ವಾಯುಕುಮಾರಾ ರಣರಂಗಧೀರಾ ಕದನಕಂಠೀರಾ ದಿನಮಣಿಯ ಪಿಡಿದು ನುಂಗುವೆನೆಂಬೊ ಸಮಯದೋಳ್ ಬರಲು ದೇವತೆ ನಿಕರಗಳೆಲ್ಲಾ ಬೆದರಿಸಿದಿ ಎಲ್ಲಾ ಭಾಪು ಭಲ ಭಲ್ಲ ಭಾರತಿಯ ನಲ್ಲ ಸೂರ್ಯಸುತನಂ ಕಂಡು ಪಂಪಾಸರೋವರದಿ ಭಾಸ್ಕರಾನ್ವಯಗೆರಗಿ- ದೆಂದು ಜಯ ಜಗದ್ಬಂಧು ಕಾರುಣ್ಯಸಿಂಧು ಸೀತಾಪತಿಯ ಕರುಣದಿಂದ ಗಗನಕ್ಕೆ ಖ್ಯಾತಿಯಿಂದಲಿ ಬ್ಯಾಗ ಬೆಳದಿ ವೃಷಿಗಳನಳದಿ ದೈತ್ಯರ ತುಳದಿ ರಾಮಮುದ್ರಿಯ ಕೊಂಡು ಅಜನಸುತ ಸಹಿತಾಗಿ ನೇಮದಿಂ ಶರಧಿಯಂ ನೋಡಿ ದುರಿತಗಳ ದೂಡಿ ಪಾಡಿ ಕೊಂಡಾಡಿ ಕೋಟಿ ಸಿಡಿಲಬ್ಬರಣೆಯಿಂದ ಜಲಧಿಯ ಜಿಗಿದು ದಾಟಿದಿ ಲಂಕಾಪುರ- ವನ್ನು ಪೇಳಲಿನ್ನೇನು ಭುಜಬಲವನ್ನು ತೃಣಬಿಂದು ಋಷಿಯ ಕಾಣುತಲಲ್ಲಿ ಕುಣಿದಾಡಿ ಪರಿಪರಿಯ ಚೇಷ್ಟೆ- ಗಳಿಂದ ಮಾಡಿದೈ ಛಂದ ಅಂಜನೆಯ ಕಂದ ಪುನಹ ಲಂಕೆಗೆ ಹಾರಿ ಲಂಕಿಣಿಯ ಸಂಹರಿಸಿ ಭೂಜಾತೆಯನು ಅರಸು- ತಲ್ಲಿ ಅತಿರೋಷದಲ್ಲಿ ತಿರುತಿರುಗುತಲ್ಲಿ ರಾಮನಾಮಾಮೃತವ ಜಿಹ್ವಾಗ್ರದೋಳ್ ಸುರಿವ ಭೂವಿಜಯ ಚರಣಮಂ ಕಂಡು.... ಮಾಡಿದೈ ಗಂಡು ರಘುವರನ ಮುದ್ರೆಯನಿತ್ತು ನಿಜಮಾತೆಗೆ ಹರುಷಬಡಿಸಿದಿ ಹನೂ- ಮಂತಾ ಗುರುಮುನಿಯ ಶಾಂತಾ ದಿವಸಾಧಿಪತಿಕೋಟಿತೇಜದಿಂ ಮೆರೆವಂಥಾ ಜಯ ಹನುಮ ಭೀಮ ಬಲವಂತಾ ಬಾಲದಿಂ ಬೆಂಕಿಯಂ ಹಚ್ಚಿ ಲಂಕಾಪುರವ ಲೀಲೆಯಿಂದಲಿ ದಹನಮಾಡಿ ಸುತ್ತ ಓಡ್ಯಾಡಿ ದೈತ್ಯರಂ ಕಾಡಿ ಸುರನಿಕರವಂದು ಆಕಾಶಮಾರ್ಗದಿ ಎಲ್ಲ ದೇವದುಂದುಭಿನಾದ ಗೈದು ..................................ಮಹಿಮೆ ಹೌಧೌದು ತ್ರಿಭುವನದೊಳಗಧಿಕನೈ ಕದರುಂಡಲಗಿರಾಯಾ ಅಭಯಮಂ ಕೊಡು ಎನ್ನ ಧೊರೆಯೆ ನಾ ನಿನ್ನ ಮರೆಯೆ ಅಗಡಿಪುರದಲಿ ನಿನ್ನ ಕೃಪೆಯಿಂದ ಪೇಳ್ದೆನೈ ಸೊಗಸಿನಿಂದ ಇಡು ಮಹಾರಾಯ ಅವನಾಯುಗೇಯಾ ಹನುಮಂತರಾಯಾ ಶ್ರೀಹನುಮಂತಗೌಡರ್À ಬಹಾದ್ದೂರರನ್ನು ಸರ್ಪಸುತಪುರದಲ್ಲಿ ಕಾಯ್ವ ಇಷ್ಟಾರ್ಥವೀವ ಭಕುತ ಸಂಜೀವ ಶ್ರೀ ಹನುಮಂತ ದಂಡಕವ ಕೇಳ್ದರ್ಗೆ ಇಹಪರದಿ ಶ್ರೀಹರಿಯೆ ಬಂದು ಅವರಲ್ಲಿ ನಿಂದು ಕಾರುಣ್ಯಸಿಂಧು ಪರಾಕು ಪರಾಕು
--------------
ಕದರುಂಡಲಗಿ ಹನುಮಯ್ಯ
ಹನುಮಂತ ಬಲವಂತ ಅತಿ ದಯವಂತಾ | ಘನವಂತ ಕೀರ್ತಿವಂತ ಅತಿ ಜಯವಂತಾ || ಅನುದಿನದಲಿ ನಿನ್ನ ನೆನೆಸುವೆ ಎನ್ನ ಮನದಾಸೆ | ಯ ನೀಯೋ ದನುಜ ಕೃತಾಂತಾ ಪ ಪಾವಮಾನಿ ಸತತ ಪಾವನ್ನ ಚರಿತಾ | ಪಾವಕಾಂಬಕನುತಾ ಪ್ಲವಂಗನಾಥಾ || ದೇವ ಕರುಣಪಾಂಗಾ ಭಾವುಕತುಂಗಾ | ಗ್ರೀವಾ ಶತಶೃಂಗ ಗ್ರಾವವೆ ಭಂಗಾ || ಕಾವಾ ವರವೀವಾ ಭೋದೇವ ಸಂಭವಾ | ಸು | ಗ್ರೀವ ಸಹಾಯ ಸರ್ವ ದೇವನರಸಿ ಯತಿವರ ಹಾರಿದಾ | ಕೋವಿದಾ ಕಪಿವರ ದೇವಕಿ ತನುಜನಾ || ಮಾವನ ಮಾವನಾ | ಜೀವಕೆ ಮುನಿದನೆ | ಜೀವೇಶ ಮತವನ ಪಾವಕಾ ಜಯ ಜಯ 1 ಧರಣಿಜಾತಿಗೆ ಭದ್ರಕರವಾದ ಮುದ್ರಾದರದಿಂದ ಇತ್ತ ನಿದ್ರಾ | ಗರಳ ದುರುಳರ ವರವದ್ದಾ | ನೆರದಲ್ಲಿ ಶಲ್ಯ ಎದುರ ಬರಲಾಗಿ ಗೆದ್ದಾ | ಮರುತಾ ಸುಖ ಗುರುವೆ ಸುರತರುವೆ | ಫಲ | ನಿರ್ಜರ ಗಣದಲ್ಲಿ ಇಹ | ಪರದಲಿ ದೇವ | ಶರಧೀ ಬಾಗಿದ ಧೀರಾ | ಸೂನು ಆವಾಸ ಯೋಗಕೆ ಸಂ | ಸುರನದಿ ದಾಟಿದಾ ಪರಮಹಂಸ 2 ಕರಡಿ ವಾನರಬಲಾ ನೆರಹಿ ಮಹಾ ಪ್ರಬಲ | ಶಿರ ಹತ್ತುವುಳ್ಳವನ ಕುಲ ವರಿಸಿದಾ ಸುಬಲಾ | ಕುರುಪತಿ ನಿಜ ತಮ್ಮ ಬರಲವನ ಹಮ್ಮು | ಬೊಮ್ಮ ಪೊರೆವನೆ ನಮ್ಮ | ಮರುತಾ ಸುಖ ಭರಿತಾ ಸಂಹರಗೈಸುವ | ಸಂ | ಕರ ಗರ್ವಹರ ಸರಯು ತೀರದಲ್ಲಿದ್ದಾ | ಪುರದಲ್ಲಿ ಮೆರದನೆ | ಕರ ಕಮಲೋದ್ಭವ | ವರ ವೃಕೋದರನೆ ವಿಜಯವಿಠ್ಠಲನ |ಶರಣರ ಪಾಲಾ ಬದರಿವಾಸಾ ಯಂತ್ರೇಶಾ 3
--------------
ವಿಜಯದಾಸ
ಹಬ್ಬವನು ಮಾಡಿದನು ಗುರುರಾಯ ಇಬ್ಬರೊಡಗೂಡಿಸುವದಿಂಗಿತದ ನೆಲೆಯರಿದು ಪ ಶ್ರವಣದಕ್ಷತೆ ಕೊಟ್ಟು ಪರಮಾರ್ಥ ದೌತಣದಿ | ಅವನಿಯೊಳು ಪರಮ ಕರುಣ ಸ್ನೇಹದಿ | ಸುವಿವೇಕ ವೈರಾಗ್ಯ ವೆಂಬ ಜಲ ಸಮಬೆರಸಿ | ತವಕದಲಿ ಮಜ್ಜನವ ಗೈಸಿದನು ಮುದದಿ 1 ಸ್ಥಿರ ಚಿತ್ತ ದಾಸನದಿ ಕುಳ್ಳಿರಿಸಿ ಸದ್ಭಾವ ಬೋಧ ಸುಧೆಯಾ ಪರಿ ಪರಿಯಲುಣಿಸಿ ಅಪರೋಕ್ಷದನುಭವ ಕಲಶ ನೆರೆವಿಡಿಸಿ ಕೈದೊಳಿಸಿ ಭವದೆಂಜಲ ಗೆಳಸೀ 2 ಸಹಜಾವಸ್ಥೆ ತಾಂಬೂಲವನು ಕರದಿತ್ತು | ವಿಹರಿಸುತ ನಿರ್ವಿಕಲ್ಪ ಸಮಾಧಿಯಾ | ವಿಹಿತದುಡುಗೊರೆ ಹೆಗಲಲಿಪೊದಿಸಿ ಪಾಲಿಸಿದ | ಮಹಿಪತಿ ಸ್ವಾಮಿ ನಂದನಗ ದಯ ಬೀರಿ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಹಮ್ಮನಳಿದು ನಮ್ಮ ಮತವ- ನೆಮ್ಮ ಜಯಮುನೀಂದ್ರ ಕೃತಿಯ ರಮ್ಯರಸವ ಸವಿದು ಸವಿದು ನಿಮ್ಮ ದುರ್ಮತಗಳನೆ ಬಿಡಿರೊ ಪ. ಸುಖಮುನಿ ಚತುರ್ಮುಖರು ಕುಮತ ನಿಕರವ ನೋಡಿ ಮನಕೆ ತಂದು ಪಾದ ತೊಳೆಯಲು ಭಕುತಿಭರದಿ ಗಿರೀಶಮುಖ್ಯ ಸುರರು ಶಿರದ ಮೇಲೆ ಲಕುಮಿ ಆತ್ಮಕರಾಗಿ ಧರಿಸಿ ಸುಖಿಸಿದ ಕಥೆ ಸ್ಮøತಿಯೊಳಿರಲು 1 ಯೋಗಿ ಜಯಮುನೀಂದ್ರ ಕೃಪಾ- ಸಾಗರನಾಗಿ ಧರೆಗೆ ಬಂದು ಈ ಗುರುಕೃತಿಗಂಗೆಯ ಬೇಗ ತಾನು ತುತಿಸಿ ಮೈಯ ಯಾಗಗೊಳಿಸಿ ಸಹಸ್ರ ಮುಖದಿ ಭಾಗವತರೆಂಬ ಬುಧರಿಗಿತ್ತ ಭಾಗ್ಯವ ನೀವೆಲ್ಲ ನೋಡಿರೊ 2 ಶ್ರುತಿಮಯವಾದ ಬಹಳ ಬಲು ಯು ಕುತಿಯನೆ ಅಳವಡಿಸಿ ಸು- ಮಂದರ ಹೂಡಿ ಮಥಿಸಿ ಮಧ್ವಮತಾಬ್ಧಿಯ ಯತಿಶಿರೋಮಣಿ ಜಯಮುನಿ ಶ್ರೀ- ಪತಿ ಹಯವದನ್ನ ಬಲದಿ ಶ್ರುತಿಯಮೃತವ ರಚಿಸಿದ ನಮ್ಮ ಕ್ಷಿತಿಸುರರೆ ಕುಡಿದು ನೋಡಿರೋ3
--------------
ವಾದಿರಾಜ