ಒಟ್ಟು 3326 ಕಡೆಗಳಲ್ಲಿ , 121 ದಾಸರು , 2343 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಂದರು ಹರಿದಾಸರು ಅಲ್ಲಿ | ಗೋವಿಂದನಾಮವ ನೆನೆಯುತಲಿ ಪ ಬರುತಿಹರೂ ಹರುಷಿಪರೂ ತಿರುಪತಿಯಾತ್ರೆಗೆ ಹೋಗುವರು 1 ತಾಳದಲೀ ಮೇಳದಲೀ ಶ್ರೀ ಲೊಲಾಯೆನ್ನುತ ಕುಣಿಯುತಲಿ 2 ನೇಮದಲೀ ಪ್ರೇಮದಲೀ ಗುರು ರಾಮವಿಠಲ ಸಲಹೆನ್ನುತಲಿ 3
--------------
ಗುರುರಾಮವಿಠಲ
ಬಂದವನಾವನೋ ನಾ ಕಾಣೆ ಇಂದೀವರ ನೇತ್ರಾ ಸುಗಾತ್ರಾ ಪ ಮೆಲ್ಲಡಿ ಇಡುವ ಮರೆಯಲಿ ನಿಲುವಾ ಕಾಂತಿಯ ಚೆಲ್ಲುವ ನೋಡಲು ನಗುವಾ ಅ.ಪ ಆಕಳ ಕರೆವಾಗ ಸಾಕೆಂದೆನುವಾ ಆಕಳ ಬೆಣ್ಣೆಯೇ ಬೇಕೆನುತಿರುವಾ ಏಕೆಲೊ ಮರೆಯಾಗಿ ನಿಂತಿಹೆ ಪೇಳೆನೆ ನೀ ಕೊಡೆ ನಾ ಬಿಡೆ ಕೇಳೆಂಬಾ 1 ಮೊಸರನು ಕಡೆವಾಗ ಹಸಿವೆಂದೆನುವ ಬಿಸಿಯನ್ನವನಿಡೆ ಹಸುವಿಗೆ ಕೊಡುವಾ ನುಸುಳಿ ಬಂದು ಕೆನೆಮೊಸರನೆ ಮೆಲ್ಲುವ ಕಿಸಿಕಿಸಿ ನಗುತಲಿ ಓಡುವನಾರೋ 2 ಕಣ್ಣು ಮುಚ್ಚಲು ಬೆಣ್ಣೆಯ ಕಳುವ ಹೆಣ್ಣುಗಳೆಡೆಯಲಿ ನಗುತಲಿ ಹುದುಗುವ ಚಿಣ್ಣನು ಮಾಂಗಿರಿರಂಗನೇ ಯೇನೋ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಬಂದಳು ನೋಡೆ ಇಂದಿರ ದೇವಿ ಪ. ಬಂದಳು ನೋಡೆ ಗೋವಿಂದನ ಸತಿಯು ಸುಂದರ ಪಾದದಿಂದ ಒಂದೊಂದು ಹೆಜ್ಜೆಯನಿಡುತಾ ಅ.ಪ. ಉಲ್ಲಾಸದಿಂದಲೀ ಚೆಲ್ವೆ ಬಂದಳೀಗ 1 ವಜ್ರದಂತೆ ಕಾಂತಿ ಪ್ರಜ್ವಲಿಸುತ್ತಲೀ ಗೆಜ್ಜೆಪಾದದಿಂದ್ಹೆಜ್ಜೆಯನಿಡುತಲೀಗ2 ಮಾರನಮಾತೆಯು ಮುಂಗುರುಳನೇ ತಿದ್ದಿ ಮುಡಿಯ ಮೇಲಿನ ಮಲ್ಲಿಗೆ ಉದುರುತ್ತ 3 ಕಡಗ ಕಂಕಣವು ಬೆಡಗಿನಿಂದಾಲಿಟ್ಟು ನಡಮುಡಿಮೇಲೆ ಅಡಿಯನಿಡುತಲೀಗ 4 ಕುಕ್ಷಿಯೊಳೀರೇಳು ಜಗವಪೊತ್ತುವನಾ ವಕ್ಷಸ್ಥಳದ ಲಕ್ಷ್ಮಿ ಬಂದಾಳೀಗ 5 ಹರಿಯ ಮಂದಿರಕ್ಕೆ ಸರಸದಿಂದಲೀಗ ಓರೆನೋಟದಿಂದ ಮುಗುಳು ನಗೆಯ ನಗುತ 6 ಚಂದದಿಂದಲೀಗ ಬಂದು ಕುಳಿತುಕೊಂಡು ಮಂದ ಭಾಗ್ಯಳಿಗಾನಂದವ ಕೊಡುವಳು 7 ಇಂದಿರೆ ದೇವನ್ನ ಬಂಧನವಾ ಬಿಡಿಸಿ ತಂದೆಗೋವಿಂದನ್ನ ಕಂಡು ತೋರೆ ತಾಯಿ 8 ರಮಾವಲ್ಲಭವಿಠಲನ ಸ್ಮರಣೆಯು ನಿರುತ ಮಾಡುವಂಥ ವರವ ಕೊಡು ತಾಯೆ 9
--------------
ಸರಸಾಬಾಯಿ
ಬಂದಳು ಭಾಗ್ಯನಿಧಿ ಶ್ರೀಧರನರಸಿ ಪ. ಪೊಂದಿದ ಭಕ್ತರಾನಂದದ ಸ್ತುತಿಗಾ ನಂದ ಪಡುತ ಒಂದೊಂದ್ಹೆಜ್ಜೆನಿಡುತಾ ಅ.ಪ. ಕಡಗ ಕಂಕಣ ತೋಳ್ಬಂದಿಯ ಧರಿಶಿ ಬಡನಡು ಬಳುಕುತ ದೃಢಭಕ್ತರೆಡೆಗೆ 1 ಹೆರಳು ಬಂಗಾರದ ಶಿರದ ಮಲ್ಲಿಗೆ ಮುಡಿ ಸರಸದಿಲುದರುತ ವರಪ್ರದ ಮಾತೆ 2 ವರದ ಶ್ರೀ ಶ್ರೀನಿವಾಸ ಸ್ವರ ರಮಣಿಯು ತಾ ಥರಥರದ್ವರಗಳ ಕರುಣಿಸಲೆಮಗೆ 3
--------------
ಸರಸ್ವತಿ ಬಾಯಿ
ಬಂದಳು ಭಾಗ್ಯನಿಧಿ ಶ್ರೀವರನಿಧಿ ಬಂದಳು ಭಾಗ್ಯನಿಧಿ ಪ. ಅರಿಶಿಣ ಕುಂಕುಮ ಪರಿಮಳ ಗಂಧವು ನಿನಗರ್ಪಿಸುವೆನು ತಾಯೆ ಶ್ರೀವರನಿಧಿ 1 ಜಾಜಿ ಮಲ್ಲಿಗೆ ರೋಜಾ ಸಂಪಿಗೆ ಸೋಜಿಗಮಾಗಿಹ ಸುರಗಿ ಅರ್ಪಿಸುವೆನು 2 ಜರಿಯ ಪೀತಾಂಬರ ಝಗಝಗಿಸುತಲಿ ಜಗದೊಡೆಯನ ರಮಣಿ ಶ್ರೀ ವರಲಕ್ಷ್ಮಿ 3 ಕದಳಿ ಖರ್ಜೂರವೂ ಬದಳಿ ದಾಳಿಂಬವು ಮುದದಿ ತೆಂಗಿನಕಾಯಿ ಫಲವ ಅರ್ಪಿಸುವೆನು 4 ಶುಕ್ರವಾರದಿ ಭಕ್ತರ ಮನೆಯೊಳು ನಿತ್ಯ ಪೂಜೆಯಗೊಳ್ವ ಶ್ರೀ ವರನಿಧಿ 5 ಶ್ರೀ ಶ್ರೀನಿವಾಸನ ಪ್ರೀತಿಯ ಲಕ್ಷ್ಮಿ ನೀ ಕರುಣದಿ ಸಲಹೆ ಶ್ರೀ ವರಲಕ್ಷ್ಮಿ 6
--------------
ಸರಸ್ವತಿ ಬಾಯಿ
ಬಂದಾ ಬಂದಾ ಉಡುಪಿಲಿ ನಿಂದ ನಿಂದಾ ಪ. ಬಂದ ಗೋಪೇರ ವೃಂದಗಳ ತಾ ನಂದು ದಣಿಸುತ ಸುಂದರಾಂಗನು ಮಂದರೋದ್ಧರ ಬೃಂದೆಯಿಂದಲಿ ಅ. ಮುದ್ದುಸುರಿಸುತ ಗೋಕುಲದೊಳಿರೆ ಕದ್ದು ಬೆಣ್ಣೆಯ ತಿಂದನೆನುತಲಿ ಸುದ್ದಿ ತಾಯಿಗೆ ಪೇಳಿ ಸತಿಯರು ಗದ್ದಲದಿ ತನ್ನ ಗಾರು ಮಾಡಲು ಮುದ್ದು ಯತಿಗಳು ಎದ್ದು ಪೂಜಿಸಿ ಮುದ್ದಿ ಬೆಣ್ಣೆ ನೇವೇದ್ಯವಿಡುತಿರೆ ಸದ್ದು ಇಲ್ಲದೆ ತಿಂದು ಸುಖದಲಿ ಇದ್ದೇನೆಂಬುವ ಬುದ್ಧಿಯಿಂದಲಿ 1 ಭಾರವಿಳುಹಲು ಕೋರೆ ಭೂಮಿಯು ನಾರದಾದ್ಯರ ನುತನು ತಾ ಬರೆ ನಾರಿಯರು ಮನ ಬಂದ ತೆರದಲಿ ಜಾರ ಚೋರನೆನುತ್ತ ಬೈಯ್ಯಲು ಧೀರ ಯತಿಗಳು ಸೇರಿ ಪರಬೊಮ್ಮ ಶ್ರೀರಮಣನೆನ್ನುತ ಸ್ತುತಿಸುವೋ ವಾರುತಿಗೆ ಮೈದೋರಿ ಭಕುತರ ಪಾರಿಗಾಣಿಪೆನೆಂಬ ನೆವದಲಿ 2 ಹಸಿದುಗೋಪರÀ ಯಜ್ಞವಾಟಕೆ ಅಶನ ಬೇಡಲು ಕಳುಹೆ ಗೊಲ್ಲರ ಪಸುಳರಿಗೆ ನೈವೇದ್ಯವಿಲ್ಲದೇ ವಶವೆ ಕೊಡಲೆಂದೆನ್ನೆ ಋಷಿಗಳು ವಸುಧಿಪತಿ ಸರ್ವೇಶನೆಂದರಿ ದಸಮಯತಿಗಳು ಕ್ಷಣ ಕ್ಷಣಕ್ಕೆ ಷ ಡ್ರಸದ ಆರೋಗಣೆಯ ಮಾಡಿಸೆ ಕುಶಲದಲಿ ಮೃಷ್ಟಾನ್ನ ಭುಜಿಸಲು 3 ಬಾಲ ಕಂದಗೆ ತೊಡಿಗೆ ತೊಡಿಸಲು ಲೀಲೆಯಿಂದಲಿ ಗೋಪಿದೇವಿಯು ಕಾಳ ಮಡುವಿಲಿ ಧುಮಿಕಿ ಎಲ್ಲವ ಕಳೆದು ಬರೆ ಆಟಗಳ ಪರೆವೆಲಿ ಶೀಲಯತಿಗಳು ವಾರ ವಾರಕೆ ಬಾಲ ತೊಡಿಗೆ ಶೃಂಗಾರಗೈಯ್ಯಲು ಆಲಯವ ಬಿಟ್ಟೆಲ್ಲಿ ಪೋಗದೆ ಓಲಗವ ಕೈಕೊಳ್ವೆನೆನ್ನುತ 4 ಗೋಪಜನ ಗೋವ್ಗಳನೆ ಕಾಯಲು ಗೋಪಿಯರು ತನ್ನ ಗುಲ್ಲು ಮಾಡಲು ಪಾಪಿ ಕಂಸ ಅಟ್ಟುಳಿಯ ಪಡಿಸಲು ಭೂಪತಿಯ ಪದವಿಲ್ಲದಿರಲು ಈ ಪರಿಯ ಬವಣೆಗಳ ತಾಳದೆ ಗೋಪ್ಯದಿಂದಿಲ್ಲಡಗಿ ನಿಂತು ಗೋಪಾಲಕೃಷ್ಣವಿಠಲ ಯತಿಗಳ ಗೌಪ್ಯಪೂಜೆಯಗೊಂಬ ವಿಭವಕೆ 5
--------------
ಅಂಬಾಬಾಯಿ
ಬಂದಾಳು - ಬಂದಾಳು ಕನ್ನಿಕೆಯಾಗ || ಮೋಹನ್ನ ರೂಪದಿ ಪ ಪತಿ ಸುರವೃಂದ ಪೊರೆಯಲುಮಂದರಧರ ಆನಂದವ ಬೀರುತ ಅ.ಪ. ಪರಿ ಪರಿ ಭಾವದಿ 1 ಘಲು ಘಲ್ಲು ಘಲಿರೆನ್ನಲು ಗೆಜ್ಜೆಯನಾದ | ಅಸುರರಿಗುನ್ಮಾದ |ಕೆಲಸಾರಿ ಕೆಲ ಸಾರೆನ್ನುತಲೀ ನಾದ | ಆಯಿತು ವಿವಾದ ||ಘಳಿಗೆಯೊಳಮೃತದ | ಕಲಶ ಕನ್ನಿಕೆ ಕರತಲದೊಳಗಿರಿಸುತ | ಬಲು ಬಲು ವಂದಿಸೆ 2 ಸಾಲು ಸಾಲಾಗಿ ಕುಳ್ಳಿರಲಾಗ | ಕಣ್ಮುಚ್ಚಿರೆಂದಳಾಗ ಕಾಲಾಲಂದಿಗೆ ಝಣಿ ಝಣಿಸುವ ಸೋಗ | ಹಾಕಿದಳ್ ತಾನಾಗ | ಕೈಲಿ ಕಲಶ ಸೌಟು | ಚಾಲಿಸುತಲಿ ಸುರಪಾಳಯ ಕುಣಿಸುತ | ಜಾಲ ಮಾಡಿದ ಹೆಣ್ಣು3 ದಿವಿಜಾರ ಮಧ್ಯದಿ ರಾಹುವು ತಾನು | ಎತ್ತಲು ತನ ಗೋಣುರವಿಯು ಚಂದ್ರಮರ ಸೂಚನೆಗಳನು | ಅನುಸರಿಸುತ ಪೆಣ್ಣುಹವಣಿಸಿ ಚಕ್ರದಲವನ ಕೊರಳನೂಜವದಿ ಕಡಿಯೆ ಗ್ರಹವೆರಡೇರ್ಪಟ್ಟವು 4 ಸುರರು ಅಸುರರಿಗೇ | ಆದಾವು ಫಲ ಬೇರೊಬ್ಬಬ್ಬರಿಗೆ | ಸ್ವರ್ಯೂಪ್ಯೋಗ್ಯತೆಗೇ ||ವೇದ ವೇದ್ಯ ಗುರು ಗೋವಿಂದ ವಿಠಲನುಸಾಧು ಪೆಣ್ಣು ಸಮ ವೈಷಮ್ಯ ರಹಿತ 5
--------------
ಗುರುಗೋವಿಂದವಿಠಲರು
ಬಂದಿರುವೆನು ಭೂಜಾತೆ | ಶರ- ದಿಂದುವದನೆ ವೋ ಸೀತೆ ಪ ಕೂಗುವುದೇತಕೆ ನಿಮ್ಮಯ ಪೆಸರೇ ನೀಗ ತಿಳಿಸಿರೈ ಸ್ವಾಮಿ | ನುಡಿ ಭಾಗವತ ಜನಪ್ರೇಮಿ ಅ.ಪ ಹೀನತಮವ ಮುರಿದಜಗೆ ಶೃತಿಗಳಿತ್ತ ಮೀನಾವತಾರನೆ ನಾನು | ಬಾ ಜಾನಕಿ ಬೇಗನೆ ನೀನು ಮೀನಾದರೆ ನೀರೊಳಗಿರುವುದು ಸರಿ ಮಾನಿನಿಯಲಿ ಕಾರ್ಯವೇನು | ನಡಿ ದೀನ ಜನರ ಸುರಧೇನು 1 ಕಮಲನಯನೆ ನಾ ಪೂರ್ವದಿ | ಗಜ- ಗಮನೆಯೆ ನೋಡನುರಾಗದಿ ಭ್ರಮೆಯಾತಕೆ ಕೇಳ್ ಕಠಿಣಾಂಗಗೆ ನಾ ಸಮಳೆ ನಿನಗೆ ನೀ ನೋಡು | ಸಂ ಭ್ರಮವಿದ್ದಲಿ ನಲಿದಾಡು 2 ವರಹಾರೂಪನೆ ಕಾಮಿನಿ | ಓ ತರುಣಿಯರೊಳಗೆ ಶಿರೋಮಣಿ ವರಾಹನಾದರೆ ಅಡವಿಯ ತಿರುಗುತ- ಲಿರದೇತಕೆ ಇಲ್ಲಿ ಬಂದೆ | ನಡಿ ಪರಿಪರಿ ಮೃಗಗಳ ಹಿಂದೆ 3 ಕರುಳ ಬಗೆದ ನರಸಿಂಹ | ನಾನು ಪರಮ ಪುರಷ ಪರಬ್ರಹ್ಮ ನರಸಿಂಹನು ನೀನಾದರೆ ನಡಿನಡಿ ಗಿರಿಗುಹೆಯೊಳಗಿರು ಹೋಗೈ | ಬಹು ಪರಿನುಡಿಗಳು ನಿನಗೇಕೈ 4 ಭೂಮಿಯ ದಾನವ ಬೇಡಿ ಬಲಿಯ ಗೆದ್ದ ವಾಮನ ನಾನೆಲೆ ನಾರಿ | ಸು ತ್ರಾಮಾದ್ಯರಿಗುಪಕಾರಿ ಬ್ರಾಹ್ಮಣನಾದರೆ ನಮಿಸುವೆ ಚರಣಕೆ ಹೋಮಧ್ಯಾನ ಜಪಮಾಡೈ | ನಿ ಷ್ಕಾಮ ಜನರ ಪಥನೋಡೈ 5 ದುರುಳನೃಪರ ಸಂಹರಿಸವನಿಯ ಭೂ ಸುರರಿಗೆ ಕೊಟ್ಟೆನೆ ದಾನವು | ಕೇಳ್ ಪರಶುರಾಮಾಭಿದಾನವು ವರಮಾತೆಯ ಶಿರವರಿದವ ನೀನಂತೆ ಸರಸವೇತಕೆನ್ನಲ್ಲಿ | ಮನ ಬರುವಲ್ಲಿಗೆ ತೆರಳಲ್ಲಿ 6 ತಾಯನುಡಿಗೆ ತಮ್ಮಗೆ ರಾಜ್ಯವ ಕೊಟ್ಟು ಪ್ರಿಯದಿ ವನದೊಳಗಿದ್ದೆನೆ | ದೈ ತ್ಯೇಯ ನಿಕರವನು ಗೆದ್ದೆನೆ ಸ್ರೀಯರಲ್ಲಿ ಹಿತವೇನು | ಕಮ ಲಾಯತಾಕ್ಷ ನಡಿ ನೀನು 7 ನಾರಿಯರನು ಕೂಡಿ ರಾಸ ಕ್ರೀಡೆಯೊಳ್ ತೋರಿದೆ ಪರಿಪರಿ ಚಿತ್ರವ | ವಿ- ಜಾರ ಪುರಷನಿಗೆ ಹೋಲುವಳಲ್ಲವು ಸಾರ ಪತಿವ್ರತೆ ನಾನು | ಇ- ನ್ನ್ಯಾರು ತಿಳಿಸು ಮತ್ತೆ ನೀನು 8 ಪತಿವ್ರತೆಯರ ಸದ್‍ವ್ರತವ ಕೆಡಿಸಿದಾ ಪ್ರತಿಮ ಬುದ್ಧನೆ ಲತಾಂಗಿ | ಓ ಮತಿವಂತಳೆ ಮೋಹನಾಂಗಿ ಕೃತಕವಾಡದಿರು ಒಲ್ಲೆ | ಕೇ ಳತಿ ಮೋಹಕ ನೀ ಬಲ್ಲೆ 9 ಹಲವು ನುಡಿಗಳೇನು ಕಲಿಯುಗಾಂತದಲಿ ಮಲೆತ ಮನುಜರನು ಕೊಲ್ವೆನೆ | ಓ ಲಲನೆ ನೋಡು ಬಲು ಚೆಲ್ವನೇ ಕಲಿತನವ ತೋರಿಸದಿರು ಈ ಪರಿ ಹಲವು ವೇಷ ನಿನಗೇಕೆ | ಕೇ ಳೆಲವೊ ಸ್ವಾಮಿ ನುಡಿ ಜೋಕೆ 10 ವೇಷವಲ್ಲ ಸರ್ವೇಶ ನಾನು ಪರಿ- ಪೋಷಿಸುವೆನು ನಿಜಭಕ್ತರ | ಸಂ- ತೋಷಿಸುವೆನು ಧರ್ಮಯುಕ್ತರ ಪೋಷಿಸುವನು ನೀನಾದರೆಲ್ಲಿ ನಿನ್ನ ವಾಸಪೇಳು ನಿಜವೀಗಾ | ಪರಿ ಹಾಸವೇಕೆ ನುಡಿಬೇಗ 11 ಪರಮಾತ್ಮನು ನಾ ಕೇಳೆ | ಎನ್ನ ಮರತೆಯೇನೆ ಎಲೆ ಬಾಲೆ ಅರಿತೆನೀಗ ಬಹು ಸಂತಸವಾಯಿತು ಎರಗುವೆ ಚರಣಕೆ ನಾನು | ನಿನ್ನ ಸರಿಯಾರೈ ದೊರೆ ನೀನು 12 ಧರೆಯೊಳಯೋಧ್ಯಾ ಪುರದರಸನ ಮಗ ಗುರುರಾಮವಿಠಲನೆ ನಾನು | ಓ ತರುಣಿ ನಿನಗೊಲಿದು ಬಂದೆನು ಧರಣಿ ತನಯೆ ನಸುನಾಚಿಕೆಯಿಂದಲಿ ಣಗಳನು ತೊಳೆದಳು ಬೇಗ 13
--------------
ಗುರುರಾಮವಿಠಲ
ಬಂದಿಹೆ ನಂತರಂಗದಿ ನಡಿರಕ್ಷಿಸೊ ನಡಿ ರಕ್ಷಿಸೊ ಪ ಕಚ್ಛಪ ಚಿನ್ನಲಿ ಉಚ್ಛಸೂಕರನಿಂದಾಶ್ರಿತವಾಗಿಹೆ 1 ಶಿರದೊಳು ನರಹರಿ ಧರಿಸಿ ವಾಮನ ಮುಖದಿ ಕರದಿ ಪರಶುರಾಮನ್ನಿರಿಸಿಹೇನೋ ಸ್ವಾಮಿ 2 ಬುದ್ಧ ಕಲ್ಕಿ ಸದಾ ನರಸಿಂಹವಿಠ್ಠಲ ಧ್ಯಾನದೋಳಿಹೆ3
--------------
ನರಸಿಂಹವಿಠಲರು
ಬಂದು ನಿಮ್ಮಡಿಗಳ ನಾಶ್ರಯಿಸಿದೆ ಪ್ರಭುವೆ ಭವ ಬಂಧನಗಳ ಬಿಡಿಸಿ ನೀ ಕಾಯೊ ಸದ್ಗುರುವೇ ಪ ಎಲ್ಲೆಲ್ಲಿಯೂ ತಿರುಗಿ ಕಾಯುವರ ಕಾಣದೆಲೆ ತಡಮಾಡದೆಮ್ಮಯ ದುಗುಡಗಳ ಪರಿಹರಿಸಿ ಕರುಣದಿಂದಲಿ ಕಾಯೊ ಗುರುರಾಘವೇಂದ್ರಾ 1 ನಿಶೆ ಹಗಲು ನಿನ್ನನು ಸ್ತುತಿಸಿ ಬೇಡುವೆ ಪ್ರಭುವೆ ಗತಿಗಾಣೆ ನಿನ್ಹರತು ಈ ಪೃಥುವಿಯೊಳಗೆ ಅತಿವ್ಯಥೆಯಲೀ ನೊಂದು ಮತಿಯಿಲ್ಲದಂತಿಹೆನು ತ್ವರಿತದಿಂದಲಿ ಕಾಯೊ ಹೇ ಗುರುರಾಜ ಪ್ರಭುವೇ 2 ಜಗವೆಲ್ಲ ನಿಮ್ಮ ಮಹಿಮೆ ಸಾರುತಿರುವುದ ಕೇಳಿ ಭರದಿಂದ ಬಂದೆನೋ ಗುರುರಾಘವೇಂದ್ರಾ ಇಂದೆಮ್ಮ ಅಪರಾಧಗಳ ಎಣಿಸದೆಲೆ ಸಲಹೈಯ್ಯಾ ಕಾರುಣ್ಯಮೂರ್ತಿ ಶ್ರೀ ಗುರುರಾಘವೇಂದ್ರಾ 3
--------------
ರಾಧಾಬಾಯಿ
ಬಂದು ನಿಲ್ಲೋ ಶ್ರೀಹರೇ-ಬಂದುನಿಲ್ಲೊ ಪ ಇಂದು ಹಿಂದು ನೀನೆಂದಿಗು ತಂದೆ ಗೋ- ವಿಂದ ಅನಿಮಿತ್ತಬಂಧು ಕಣ್ಣಮುಂದೆ ಅ.ಪ ಸ್ವಾಂಶದಿಂದ ಅಭಿವ್ಯಕ್ತಿಯಾದೆ ಪಂ- ಚಾಂಶತೋರಿ ಸರಸ ಜನನ ಮಾಡಿದೆ ಸ್ವಾಂಶನಾಗಿ ಅವತರಿಸಿ ಮೆರೆವ ಸ- ರ್ವಾಂಶದಿಂದಿಹ ತ್ರಿಂಶ ರೂಪನೇ 1 ಸ್ವಗತಭೇದವಿವರ್ಜಿತನೆನಿಸಿ ತ್ರಿಗುಣಮಯದಿ ಬ್ರಹ್ಮಾಂಡ ನಿರ್ಮಿಸಿ ಅಗಣಿತಮಹಿಮಾಧಾರನಾಗಿ ನಿಂದು ಮಿಗೆ ಶೋಭಿಸುವ ವಿರಾಟಮೂರುತಿಯೆ2 ಕಾರಣನೆನಿಸಿದ ಕರ್ಮನಿವೃತ್ತಿಗೆ ಸಾರವಾದ ಜ್ಞಾನಯೋಗ ಮಾರ್ಗವ ನಾರದಾದಿ ಮಹಾಮುನಿಗಳಿಗರುಹಿದ ನರನಾರಾಯಣ ಬದರಿ ಆಶ್ರಯನೇ 3 ಹಂಸಕಪಿಲ ದತ್ತಾತ್ರೇಯ ರೂಪನೆ ಹಂಸರಹಸ್ಯಗಳೆಲ್ಲವ ಪೇಳಿ ಸಂಶಯ ಬಿಡಿಸಿದೆ-ಜೀವಪರಮಾತ್ಮರ ಅಂಶಗಳರುಹಿದ ಹಂಸಮೂರುತಿಯೆ4 ಅಜಪಿತ ನೀ ಗಜರಾಜನ ಸಲಹಿದೆ ಭಜಿಸಿದ ವಾಲಖಿಲ್ಯರ ಕಾಯ್ದೆ ಅಜಹತ್ಯವು ವೃತ್ರವಧೆಯಿಂದ ಕಾಯ್ವ ಬಿ- ಡೌಜನ ಸಲಹಿದ ಗಜರಾಜ ವರದಾ5 ಪುರುಹೂತನ ಅಹಂಕಾರ ಖಂಡಿಸಿ ಕಿರುಬೆರಳಲಿ ಗೋವರ್ಧನಗಿರಿ ಎತ್ತಿ ಪರಿಪಾಲಿಸಿ ಗೋಬೃಂದವನೆಲ್ಲವ ಸುರರಿಂದ ಪೊಗಳಿಸಿಕೊಂಡೆ ಗೋವಿಂದ6 ಬುಧರರಿಯುಲು ಆ ವೇದ ವಿಭಾಗಿಸೆ ಉದಯಿಸಿ ಮುದದಿಂದ ಬದರಿಯ ಸದನದಿ ಬೋಧಿಸುತ್ತಲಿಹ ಬಾದರಾಯಣನೇ7 ಅಖಿಳಾಂಡಕೋಟಿಬ್ರಹ್ಮಾಂಡನಾಯಕ ವಿಕುಂಠಳೆಂಬೊ ಉದರದಿ ಜನಿಸಿ ಲಕುಮಿರೂಪಿಯಾದ ಸುಂದರಿಯ ಕೂಡ ಭೂ- ವೈಕುಂಠ ನಿರ್ಮಿಸಿದ ವೈಕುಂಠಮೂರುತಿಯೆ 8 ಸತ್ಯವ್ರತನೆಂಬೊ ಮನುವಿನುದ್ಧರಿಸಿ ಉತ್ತಮ ಔಷಧಿಗಳೆಲ್ಲವ ಸಲಹಿದೆ ದೈತ್ಯನಾದ ಉನ್ಮತ್ತನ ಕೊಂದು ಶ್ರುತಿಯ ತಂದಿತ್ತ ಮತ್ಸ್ಯಮೂರುತಿಯೆ 9 ಸುರಭಿನೆವನದಿ ಶರಧಿಮಥಿಸೆ ತಾ ಭರದಿ ಬೆನ್ನೊಳು ಧರಿಸಿಹೆ ಮಂದರ ಗಿರಿಧರನೆನಿಸಿದೆ ಕಮಠರೂಪನೆ 10 ಪ್ರಳಯ ಜಲಧಿಯೊಳು ಇಳೆಯನು ಕದ್ದಾ ಖಳಹಿರಣ್ಯನಾ ಶಿರವ ಚೆಂಡಾಡಿ ಜಲಧಿಯ ಶೋಧಿಸಿ ಇಳೆಯನು ತಂದು ಜಲಜಸಂಭವಗಿತ್ತ ಕ್ರೋಢರೂಪನೆ 11 ದುರುಳತನದಿ ತನ್ನ ತರಳನ ಬಾಧಿಪ ಹಿರಣ್ಯಕಶಿಪುವಿನ ಉದರವ ಬಗೆದು ಶರಣನಿಗಭಯವ ಕರುಣಿಸಿ ತೋರಿದ ಸರ್ವವ್ಯಾಪ್ತನೆಂದರುಹಿದ ನರಹರಿಯೇ12 ಬಲಿಯಿಂದಪಹೃತವಾದ ಸಾಮ್ರಾಜ್ಯವ ಸುಲಭದಿಂದಲಿ ಪುರಂದರಗಿತ್ತು ಸಲಹಿದೆ ಒಲಿದು ಬಲಿಯ ಭಕ್ತಿಗೆ ನೀ ಬಾ- ಗಿಲ ಕಾಯ್ದ ವಟು ವಾಮನನೆ 13 ದುರುಳತನದಿ ಆ ಹೈಹಯರೆಂಬ ನರಪರದುರ್ಮದ ಮರ್ದಿಸಲೋಸುಗ ನೃಪರ ಶಿರವನೆಲ್ಲ ತರಿದು ನಿಗ್ರಹಿಸಿದ ಭಾರ್ಗವ ಮೂರ್ತೇ 14 ಶರಧಿ ಬಂಧಿಸಿ ಸೇತುಕಟ್ಟಿ ಕಪಿ- ವೀರರೊಡನೆ ಆ ರಾವಣನಡಗಿಸಿ ಭೂ ಭಾರವನಿಳುಹಿಸಿ ಭೂಮಿಜೆಯನು ತಂದ ಅ- ಸುರ ಮರ್ದನ ದಾಶರಥಿ ರಾಘವ 15 ವಸುಮತಿಭಾರವನಿಳುಹಲೋಸುಗ ವಸುದೇವಸುತ ಶ್ರೀಕೃಷ್ಣನೆನುತಲಿ ಶಿಶುಪಾಲಾದಿಗಳಾಂತಕನೆನಿಸಿದ ಶಶಿಮುಖಿರುಕ್ಮಿಣಿ ಸಹಿತ ಶ್ರೀಕೃಷ್ಣ 16 ವೇದ ಕರ್ಮಗಳಿಗನರ್ಹರೆಲ್ಲರು ಸಾದರದಿಂದಲಿ ಅಧಮರೆಸಗುತಿರೆ ವೇದವಿರುದ್ದವಾದಗಳಿಂದಲೇ ಮೋಹವ ತೋರಿದೆ ಬುದ್ಧಸ್ವರೂಪನೆ17 ದುರುಳತನದಿ ಇಳೆಯಾಣ್ಮರುಗಳು ಕ್ರೂರತನದಿ ಪರಪೀಡಕರಾಗಿರೆ ಪರಿಹರಿಸಲು ಭೂಭಾರಕ್ಕಾಗಿ ಅವ- ತರಿಸಿ ಮೆರೆಯುವ ಕಲ್ಕಿರೂಪನೆ 18 ಏಕರೂಪ ಅನೇಕರೂಪನೆ ಏಕಮೇವ ನೀ ಪ್ರಕಟ ಮಾಡುವೆ ಪಿನಾಕಿ ಪ್ರಮುಖರು ಏಕದೇಶದಿ ಸಾಕಲ್ಯವ ತಿಳಿಯರೊ 19 ದೋಷದೂರ ಶೇಷಾಚಲವಾಸ ಪೋಷಿಸೊ ನಿನ್ನಯ ದಾಸಜನರ ಸರ್ವ ದೋಷಕಳೆದು ಮನೋಕಾಶದಲಿ ನಿಲ್ಲೊ ಶೇಷಗಿರೀಶ ಶ್ರೀ ವೆಂಕಟೇಶನೆ 20
--------------
ಉರಗಾದ್ರಿವಾಸವಿಠಲದಾಸರು
ಬಂದು ಹೃದಯಮಂದಿರದೊಳಗೆಕೂಡೋ ಕೇಶವಮಾಧವ ಪ ತಂದೆಯೆನಾಂ ವಂದಿಪೆನೋ ಕಂದನ ಕುಂದನೆಣಿಸದೆ ಅ.ಪ ಭ್ರಮರ ಕೀಟನ್ಯಾಯದಿ ಬೇಗದಿ ತಾನೆ ತಾ ತನ್ಮಯತೇ ದಿವ್ಯಮಂಗಳ ವಿಗ್ರಹನೇ 1 ನಾಲಗೆಯ ನಡೆಮುಡಿ ಹಾಸುವೆ ಪಾಲ ಸುಮೃದುಪದಾ ಶುಭದ ನೀನೊಲಿಯುತೆ ನಲಿದು 2 ಗಾತ್ರ ಮೂರ್ತಿ ಶ್ರೀಕರ ತಂಗದಿರಾ ಬೆಂಗದಿರಾ ಶಂಕಚಕ್ರ ಚತುರ್ಭುಜ 3 ಸಂಚಿತವೆಂತೋ ಸ್ವಾಮಿ ಹಂಚಿ ನಿನ್ನ ಸೇವೆಯ ಗೈಸುತ 4 ಮುನಿಜನಗಳ ಪೊರೆವುದು ಹೆಚ್ಚೇ ಚಿನುಮಯಾತ್ಮನೇ ಚೆನ್ನಿಗ ಅಣುಗನು ನಾನಜ್ಞಾನಿ ಕನಿಕರದೆನ್ನ ಕಾಯ್ದರೆ ಕೀರ್ತಿ 5 ಮಾಯಮುಚ್ಚಿ ಕಾಯನೆಚ್ಚಿ ನೋಯುತ್ತಿಹೆನೋ ನರಹರಿ ಜೀಯ ಜಾಜೀಶಹರಿ ರಾಮ ರಕ್ಷಿಸು ಶ್ರೇಯ ಕೊಟ್ಟು6
--------------
ಶಾಮಶರ್ಮರು
ಬಂದೆವಯ್ಯ ಗೋವಿಂದಶೆಟ್ಟಿ - ನಿಮ್ಮಹರಿವಾಣ ತೀರ್ಥಪ್ರಸಾದ ಉಂಟೆನಲಾಗಿ ಪ ಅಪ್ಪವು ಅತಿರಸ ತುಪ್ಪವು ಚಿನಿಪಾಲುಒಪ್ಪುವ ಸಕ್ಕರೆ ಯಾಲಕ್ಕಿಯುಅಪರೂಪವಾದ ಕಜ್ಜಾಯಗಳನೆಲ್ಲಛಪ್ಪನ್ನ ದೇಶಕ್ಕೆ ಮಾರುವ ಶೆಟ್ಟಿ1 ತುಂಬಿ ಮಿಕ್ಕ ಅನ್ನವ ಮಾರಿಸಿಒಡವೆಯ ಗಳಿಸುವ ಕಡುಲೋಭಿ ಶೆಟ್ಟಿ 2 ಶೇಷಗಿರಿಯಲ್ಲಿ ವಾಸ ಮಾಡಿಕೊಂಡುದೇಶದೇಶಕ್ಕೆ ಹೆಸರಾದ ಶೆಟ್ಟಿಕಾಸುಕಾಸಿಗೆ ಬಡ್ಡಿ ಗಳಿಸಿಕೊಂಬ ಆದಿಕೇಶವ ನಾರಾಯಣ ತಿಮ್ಮಶೆಟ್ಟಿ 3
--------------
ಕನಕದಾಸ
ಬಯಗುತನಕ ಆಟ ಕೂಟ ಊಟದ ಕೆಲಸ ಉಂಡ ಮೇಲೆ ಶಯನ ಪ ಬಯಲಾಯಿತು ಈ ಒಗತನವೆಲ್ಲ ರಕ್ಷಿಸಯ್ಯ ರಘುಕುಲ ತಿಲಕ ಅ ಪುರಾಣವಿಲ್ಲ ಪುಣ್ಯಕತೆಯಿಲ್ಲ ಪಾರಾಯಣದಿ ಮನಸಿಲ್ಲತರೋಣ ಬರೋಣ ತಿನ್ನೋಣ ಮಲಗೋಣ ಮತ್ತೇಳೋಣ 1 ಕಣ್ಣಿಗೆ ಜೋಂಪು ಹತ್ತುವತನಕ ಅನ್ಯವಿಷಯ ಮಾತುಕತೆಯಾಟಹೆಣ್ಣು ಹೊನ್ನು ಮಣ್ಣು ಮಮಕಾರದಿ ಒಳಹೊರಗಿಣುಕಾಟ2 ಹೀಗಾಗಿ ನಿನ್ನಲ್ಲಿಗೆ ಬಂದೆ ಇನ್ನಾದರೂ ಸಲಹೊ ಸಿರಿಕಾಗಿನೆಲೆಯಾದಿಕೇಶವ ಶಿರಬಾಗಿ ಬೇಡಿಕೊಂಬೆ 3
--------------
ಕನಕದಾಸ
ಬರಲಾರೆ ಹರಿ ಭಜಕರು ಕರಿಯಲಿ ಪ ಹದಿನಾರು ಸಾವಿರ ಚದುರಿಯರ ಸಂಗವು ಪದುಮಾಕ್ಷ ಸಾಲದೆ ಭಾರ್ಗವಿಲೋಲನಾಗಿ 1 ಗೊಲ್ಲರ ಮನೆಪೊಕ್ಕು ನೆಲವಿಗೇರಿರಲು ಕಳ್ಳನುಯಂದು ಕೈ ಬಿಡಹೋಗೆ 2 ವರ ಹೆನ್ನೆಪುರ ನರಹರಿ ಕರುಣಾಕರ ವಾಸವ ಬಿಟ್ಟು 3
--------------
ಹೆನ್ನೆರಂಗದಾಸರು