ಒಟ್ಟು 448 ಕಡೆಗಳಲ್ಲಿ , 68 ದಾಸರು , 355 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಜಲಜನಾಭನ ಪೂಜೆ ಅತಿ ಸುಲಭವು ಪ ಚಲಿಸಿದ ಮನವನ್ನು ಪೊಂದಿರುವ ಸುಜನರಿಗೆ ಅ.ಪ ತಾಳ ಕೇಳುವನಲ್ಲ ಮೇಳ ಕೇಳುವನಲ್ಲ ಬಾಳೆ ಮಾವುಗಳ ವೈಭವವ ಕೇಳುವನಲ್ಲ ಸೂಳೆಯಂದದಿ ಬಹಳ ನಟನೆಗಳು ಬೇಕಿಲ್ಲ ಬಾಲಕೃಷ್ಣನಲಿ ದೃಢಭಕುತಿಯುಳ್ಳವಗೆ 1 ನವರತ್ನ ಮಂಟಪದ ಝವೆಯ ಬಯಸುವನಲ್ಲ ಹವಳಗಳ ಸರದ ವೈಭವವು ಬೇಕಿಲ್ಲ ಧವಳ ಮುಕ್ತಾಹಾರಗಳ ಬಯಸುವನಲ್ಲ ಭುವನ ಭೂಷಣನೊಳತಿ ಭಕುತಿಯುಳ್ಳವಗೆ 2 ಹೊನ್ನಿನಾಭರಣಗಳನ್ನು ಬಯಸನು ವಿವಿಧ ಅನ್ನಗಳ ರುಚಿಗೆ ಲೋಭವ ಪೊಂದನು ಅನ್ನಾದಿಮಯ ಹರಿಯು ತನ್ನಲ್ಲಿ ತುಳಸೀದಳ ವನ್ನು ಭಕುತಿಯೊಳಿಡೆ ಪ್ರಸನ್ನನಾಗುವನು 3
--------------
ವಿದ್ಯಾಪ್ರಸನ್ನತೀರ್ಥರು
ಜಾಣೆ ನಂಬಿದೆ ಇಸ್ಟೇಟರಾಣೀ ನೀನೊಲಿದೆನ್ನ ಪಾಣಿಯೊಳಗೆ ಬಂದು ಕಾಣಿಸಮ್ಮ ಪ ವಾಣಿ ಶ್ರೀಲಕುಮಿಶ ರುದ್ರಾಯಣಿಯರಿಗಿಂತ ಕ್ಷೋಣಿಯೊಳಗೆ ಬಹುಮಾನಿತೆ | ನೀನಮ್ಮ ಅ.ಪ ಜನಕನು ಗಳಿಸಿದ ಧನವೆಲ್ಲಾ ಕಳಕೊಂಡೆ ದನಕರ ಹೊಲಮನೆಯನು ಮಾರಿದೆ ಜನರೊಳಗಪಹಾಸ್ಯಗೊಳಗಾದೆ ಕೇಳಮ್ಮ ವನಿತೆ ಮಕ್ಕಳ ಕೈಲಿ ಕೊನೆಗೆ ಪರಟೆ ಕೊಟ್ಟೆ 1 ಉಣಲು ಅನ್ನವು ಕಾಣೆ | ಉಡಲು ವಸ್ತ್ರವು ಕಾಣೆ ಕಡುಕಷ್ಟ ಕಡಲೋಳು ಮುಳುಗಿದೆ ನೋಡಮ್ಮ ಪೊಡವಿಯೋಳ್ ನಿನ್ಹೊರತು ಕಡೆ ಹಾಯಿಸುವಂಥ ಕಾಣಿ ಕೈಪಿಡಿದು ರಕ್ಷಿಸೊ ರಕ್ಷಿಸೋ ನೀನಮ್ಮ 2 ಎಲ್ಲಾ ಹಾಳಾಯಿತು | ಸಾಲ ಬಹಳಾಯಿತು ಜೋಳಿಗೆ ಬಂದಿತು ಕೂಳಿಗೆ ಮನೆ ಮನೆ ಚಾಲುವರಿದೆನಮ್ಮಾ 3 ಹಾರಿ ಹೋಗುವದಮ್ಮಾ ಪಕ್ಕಾರಂಗು ಧಾರುಣೀಶರ ಮಧ್ಯ ತೋರೀದ ಸಮಯದಿ ಆ ರಾಣಿ ವರ್ಗವ ಥರ ಥರ ನಡುಗಿಸುವಿ 4 ಅಕ್ಕರದಲಿ ಎರಡೆಕ್ಕದೊಳು ಬಂದು ಪಕ್ಕನೆ ನೀ ಎನ್ನ ಕೈಯೊಳು ಬಾರೆ ಮುಕ್ಕಣ ಸಖ ತನ್ನ ಬೊಕ್ಕಸದೊಳಗಿನ ರೊಕ್ಕ ಹಾಕಲು ಅವನ ಲೆಕ್ಕಸೆ ನಮ್ಮ 5 ಕಾಮಿತ ದಾಯಿನಿ ಕಾಮಿನಿ ಶಿರೋಮಣಿ ಶಾಮಸುಂದರ ಸಾರ್ವಭೌಮನ ರಾಣಿ ಶ್ರೀಮಂತ ಜೋಕರನ ಪ್ರೇಮದ ಭಗಿನಿಯೆ ನಾ ಮೊರೆ ಹೊಕ್ಕೆನು ನೀ ದಯಮಾಡು ತಾಯೆ 6
--------------
ಶಾಮಸುಂದರ ವಿಠಲ
ಜೋ ಜೋ ರಂಗಯ್ಯ ಜೋ ಜೋ ಕೃಷ್ಣಯ್ಯ ಮಲಗಯ್ಯ ಜೋ ಜೋ ಪ ಕಣ್ಣೇಕೆ ನೀನು ಮುಚ್ಚಲೊಲ್ಲೆಯೊ ರಂಗ ಬೆನ್ನು ಭಾರವಾಗಿರುವುದೇನೋ ದೇವ ಮಣ್ಣಿನೊಳು ನೀನಾಡಿ ಮೈ ನೋಯುವುದೇನೊ ಹೊನ್ನು ಕಶಿಪುವಿನ ಕರುಳ ಕಂಡಂಜಿದೆಯೇನೊ 1 ಚಿಣ್ಣ ನೀ ಧರೆಯನಳೆಯಲೇತಕೆ ಪೋದೆ ಗಣ್ಡುಗೊಡಲಿ ಪಿಡಿದು ಕೈಯಿ ಉಳುಕಿಹುದೇನೊ ಅನ್ನವ ಬಿಟ್ಟು ನೀ ಪರ್ನವೇತಕೆ ತಿಂದೆ ಬೆಣ್ಣೆಯ ಮೆದ್ದು ನಿನ ಹೊಟ್ಟೆ ನೊಯ್ಯುವದೇನೊ 2 ಬತ್ತಲೆ ತಿರುಗಿ ಮೈ ಬಿಸಿಯಾಗಿರುವದೇನೊ ಕತ್ತಿಯ ಪಿಡಿದು ತೇಜಿಯ ಹತ್ತಬೇಕೇನೊ ಹೊತ್ತಾಯ್ತು ಕಂದಯ್ಯ ಮಲಗೆಂದು ಯಶೋದೆ ಮುತ್ತಿಟ್ಟು ತೂಗಿದಳು ರಂಗೇಶವಿಠಲನ 3
--------------
ರಂಗೇಶವಿಠಲದಾಸರು
ಜ್ಞಾನವಂತರ ಸಂಗವಿರಲು ಸ್ನಾನವ್ಯಾತಕೆ ಪ ನಾನು ಎಂಬುದ ಬಿಟ್ಟ ಮೇಲೆ ನರಕವ್ಯಾತಕೆ ಅ.ಪ. ಮೃತ್ತಿಕೆ ಶೌಚ ಮಾಡದವನ ಆಚಾರವ್ಯಾತಕೆಸತ್ಯವಾದಿ ಆಗದವನ ನಂಬಿಗೆ ಯಾತಕೆ ||ಚಿತ್ತಶುದ್ಧಿ ಇಲ್ಲದವನ ವೈರಾಗ್ಯವ್ಯಾತಕೆಉತ್ತಮ ಹಿರಿಯರಿಲ್ಲದಂಥ ಸಭೆಯು ಯಾತಕೆ 1 ಪತಿಯ ಆಜ್ಞೆ ಮೀರಿದವಳ ವ್ರತಗಳ್ಯಾತಕೆಸತಿಗೆ ಅಳುಕಿ ನಡಿಯುವವನ ಸಾಹಸವ್ಯಾತಕೆ ||ಯತಿಯ ನಿಂದೆ ಮಾಡುವವನ ಮತಿಯು ಯಾತಕೆಅತಿ ವಿರೋಧ ಬಡಿಸುವಂಥ ಅಣ್ಣನ್ಯಾತಕೆ 2 ಹರಿಕಥೆಯ ಕೇಳದವನ ಕಿವಿಯು ಯಾತಕೆಮುರಹರನ ಮೂರ್ತಿಯ ನೋಡದಂಥ ಕಂಗಳ್ಯಾತಕೆ ||ಮರುತ ಮತವ ಪೊಂದದವನ ಬಾಳ್ವೆ ಯಾತಕೆಎರಡಾರು ನಾಮವಿಡದ ಶರೀರವೇತಕೆ3 ತಂದೆ ತಾಯಿ ಮಾತು ಕೇಳದ ಮಕ್ಕಳ್ಯಾತಕೆಬಂಧು ಬಳಗ ಉಳ್ಳದವನ ಭಾಗ್ಯವ್ಯಾತಕೆ ||ಬಂದ ಅತಿಥಿಗನ್ನವನಿಕ್ಕದ ಸದನವೇತಕೆ ಗೋ-ವಿಂದನಂಘ್ರಿ ಸ್ಮರಿಸದಂಥ ನಾಲಿಗ್ಯಾತಕೆ 4 ಮಕ್ಕಳನ್ನ ಮಾರಿಕೊಂಬ ತಂದೆಯಾತಕೆರೊಕ್ಕಕಾಗಿ ಬಡಿದಾಡುವ ತಮ್ಮನ್ಯಾತಕೆ ||ಕಕ್ಕುಲಾತಿ ಬಡುವ ಸಂನ್ಯಾಸವ್ಯಾತಕೆಠಕ್ಕು ಭಕುತಿ ಮಾಡುವಂಥ ದಾಸನ್ಯಾತಕೆ 5 ಆಗಿ ಬರದವರ ಅನ್ನ ಉಣ್ಣಲ್ಯಾತಕೆರೋಗವಾದ ನರಗೆ ಹೆಣ್ಣಿನ ಭೋಗವ್ಯಾತಕೆ ||ಯೋಗಿಯಾದ ಮೇಲೆ ದ್ರವ್ಯದ ಆಶೆಯಾತಕೆಭಾಗೀರಥಿಯ ಮಿಂದ ಮೇಲೆ ಪಾಪವ್ಯಾತಕೆ 6 ವೇದವನ್ನು ಓದದಂಥ ವಿಪ್ರನ್ಯಾತಕೆಕಾದೊ ರಣಕೆ ಅಂಜುವಂಥ ಕ್ಷತ್ರಿಯನ್ಯಾತಕೆ ||ವಾದವನ್ನು ಮಾಡುವಂಥ ಬಂಟನ್ಯಾತಕೆಸಾಧುಗಳಿಗೆ ಎರಗದವನ ಶಿರವಿದ್ಯಾತಕೆ 7 ಯಾತ್ರೆ ತೀರ್ಥ ಮಾಡದಂಥ ಪಾದವ್ಯಾತಕೆಪಾತ್ರರ ಸಂಗವಾಗದವನ ಜನ್ಮವ್ಯಾತಕೆ ||ಸ್ತೋತ್ರಕೆ ಮರುಳಾಗುವವಗೆ ಸಾಧನ್ಯಾತಕೆಪಾರ್ಥ ಸಖನ ತಿಳಿಯದವನ ಜ್ಞಾನವ್ಯಾತಕೆ 8 ಗುರೂಪದೇಶವಿಲ್ಲದಂಥ ಮಂತ್ರವ್ಯಾತಕೆಅರಿತು ವಿದ್ಯ ಪೇಳದ ಉಪಾಧ್ಯನ್ಯಾತಕೆ ||ಹರುಷವನ್ನು ತಾಳದಂಥ ಜ್ಞಾನಿ ಯಾತಕೆಕರಣ ಶುದ್ಧಿ ಇಲ್ಲದವನ ಸ್ನೇಹವ್ಯಾತಕೆ 9 ಗಾಣ ಕಟ್ಟಿದೆತ್ತಿಗೆ ಗೆಜ್ಜೆಯಾತಕೆ ||ರಾಣಿ ಇಲ್ಲದವನು ಮಾಡುವ ಬದುಕು ಯಾತಕೆತಾನು ಉಣ್ಣದೆ ಪರರಿಗಿಕ್ಕದ ಧನವಿದ್ಯಾತಕೆ 10 ಧರ್ಮವಿಲ್ಲದೆ ರಾಜ್ಯ ಆಳುವ ಪ್ರಭುವಿದ್ದ್ಯಾತಕೆಮರ್ಮವರಿತು ನಡೆಯದಂಥ ಹೆಣ್ಣು ಯಾತಕೆ ||ನಿರ್ಮಲಾಂಗನಾದ ಮೋಹನ ವಿಠಲನ ಗುಣಕರ್ಮ ಕ್ರಿಯಾ ತಿಳಿದ ಮ್ಯಾಲೆ ನಿರ್ಣಯವ್ಯಾತಕೆ 11
--------------
ಮೋಹನದಾಸರು
ಜ್ಞಾನವಾವುದು ಅಜ್ಞಾನವಾವುದು ಮಾನವಾವುದು ದುಮ್ಮಾನವಾವುದು ಪ ಹರಿಯ ಸ್ಮರಣೆಯಿರಲದೊಂದು ಜ್ಞಾನವಲ್ಲವೆ ಕೊರಳ ಸೆರೆಯ ಕಾಣದಿಪ್ಪುದಜ್ಞಾನವಲ್ಲವೆ ಪರರ ಸತಿಯ ತೊರೆವುದೊಂದು ಮಾನವಲ್ಲವೆ ಪರರ ಸೇವೆಗಿರುವದವಮಾನವಲ್ಲವೆ 1 ಧನ್ಯರನ್ನು ಮನ್ನಿಸುವುದು ಜ್ಞಾನವಲ್ಲವೆ ಹೊನ್ನ ಹುದಿದು ಅನ್ನ ತೊರೆವುದಜ್ಞಾನವಲ್ಲವೆ ಅನ್ಯರೊಡವೆ ಕಳುವುದವಮಾನವಲ್ಲವೆ 2 ಹಸಿದವರನು ಕಂಡು ಯಿಕ್ಕಲು ಜ್ಞಾನವಲ್ಲವೆ ಹುಸಿಕನಾಗಿ ಅಸತ್ಯ ಮಾಳ್ಪುದು ಅಜ್ಞಾನವಲ್ಲವೆ ಹಸನವಾಗಿ ನಡೆವ ಕೃತ್ಯ ಮಾನವಲ್ಲವೆ ಎಸೆವ ಜೂಜು ತಪ್ಪಲವಮಾನವಲ್ಲವೆ 3 ಸ್ಥಿರವಿದಲ್ಲವೆಂಬ ಜೀವಿ ಜ್ಞಾನಿಯಲ್ಲವೆ ನರಕ ಭಯವ ಮರೆವ ಜಡನಜ್ಞಾನಿಯಲ್ಲವೆ ಹಿರಿಯರಿಂದ ಅನಿಸಿಕೊಂಬುದು ಮಾನವಲ್ಲವೆ ಬರಿಯ ಕ್ಷುದ್ರವೆಸಗಲವಮಾನವಲ್ಲವೆ 4 ಕ್ರೋಧವನ್ನು ತೊರೆದ ಮನುಜ ಜ್ಞಾನಿಯಲ್ಲವೆ ವೇದವನ್ನು ಜರೆದ ನರನಜ್ಞಾನಿಯಲ್ಲವೆ ಸೋದರರು ಕೂಡಿಯಿರಲು ಮಾನವಲ್ಲವೆ ಮಾದಿಗರ ಸಂಗವದವಮಾನವಲ್ಲವೆ 5 ಗುರು-ಹಿರಿಯರನುಸರಿಸೆ ಜ್ಞಾನವಲ್ಲವೆ ಸಿರಿಯ ವೇಶ್ಯಸ್ತ್ರೀಗೆ ಕೊಡಲಜ್ಞಾನವಲ್ಲವೆ ದೊರೆಯು ಕರೆದು ಉಚಿತವೀಯೆ ಮಾನವಲ್ಲವೆ ತಿರುಕರಂತೆ ತಿರಿವುದು ಅವಮಾನವಲ್ಲವೆ 6 ವರಾಹತಿಮ್ಮಪ್ಪ ಒಲಿದರದು ಜ್ಞಾನವಲ್ಲವೆ ಮರೆದು ಕ್ಲೇಶಕೆರಗುವುದಜ್ಞಾನವಲ್ಲವೆ ಕರೆದು ಪರರಿಗಿಕ್ಕುವುದು ಮಾನವಲ್ಲವೆ ಕರೆಕರೆಯ ಮಾತು ಅವಮಾನವಲ್ಲವೆ 7
--------------
ವರಹತಿಮ್ಮಪ್ಪ
ಜ್ಯೇಷ್ಠಾಭಿಷೇಕ ಗೀತೆ ನೋಡಿದೆ ಜ್ಯೇಷ್ಠಾಭಿಷೇಕದುತ್ಸವವ ಸೃಷ್ಟಿಯೊಳಾಶ್ಚರ್ಯವಾ ಪ. [ಒಪ್ಪುವ] ಮಿಥುನಮಾಸದ ಶುಕ್ಲಪಕ್ಷ ಚತುರ್ದಶಿಯಲ್ಲಿ ವಿಪ್ರರು ಕೂಡಿ ಸಹ್ಯೋದ್ಭವೆಯನ್ನು ತರುವೆವೆಂದೆನುತಲೆ ವಿಪ್ರರು ಪೋದ ವಿಚಿತ್ರ[ವ] ನೋಡಿದೆ 1 ಅಂದು ಗಜೇಂದ್ರನ ತಂದು ಸಿಂಗಾರ ಮಾಡಿ ಕುಂದಣದ ಛತ್ರಿ ಚಾಮರ ಬೀಸುತ್ತ ವಿಪ್ರರು ಬರುವುದ 2 ವೇದಘೋಷಗಳಿಂದ ವಿಪ್ರರು ಕೊಡಗಳ ವಿ ನೋದದಿಂದಲೆ ಪೊತ್ತು ತಾ[ಳ] ತಮ್ಮಟೆ ಭೇರಿ ನಾನಾ ವಾದ್ಯಂಗಳ ಮುಂದೆ ರಜತದಕೊಡ ಬರುವ ವೈಭೋಗವ 3 ಕರಿ ಕೊಡವನ್ನು ಇಳಿಸಲು ಅಸಮಾನ [2ನಿ2]ರಿಗಳ ಬಿಚ್ಚಿ ಹೊಸಬಟ್ಟೆಗಳ ಹಾಸಿ ಕುಶಲದಿಂದಲೆ ಹೊಲೆದು ಪೊಸದಾಗಿ ಕಟ್ಟುವತಿಶಯ[ವ] 4 ಗರ್ಭಗೃಹವು ಗಾಯಿತ್ರಿ ಮಂಟಪವನ್ನು ಶುಭ್ರವಾಗಿಯೆ ತೊಳೆದು ಘಮಘಮಿಸುವ ದಿವ್ಯ ಪರಿಮಳ ವು ಬರುವಂಥ ಗಂಧÀವ ತಳಿದರು ಅಂದು ಆಲಯಕ್ಕೆಲ್ಲ 5 ಭಕ್ತರಿಗೆ ತೊಟ್ಟಕವಚವ ಕಳೆದು ಅಭಯ ಹಸ್ತ ಪಾದವ ನಿತ್ತು ಕಸ್ತೂರಿ ಕಮ್ಮೆಣ್ಣೆ ಒತ್ತಿ ಸಂಭ್ರಮದಿಂದ ಮಿತ್ರಸಹಿತ ನಿಂದ ಭಕ್ತವತ್ಸಲ ರಂಗ 6 ಛಂದದಿ ಇಕ್ಷುರಸವು ಚೂತ ಕದಲಿ ರಸಂಗಳು ದಧಿ ತಿಂತ್ರಿಣಿ ನಿಂಬೆರಸ ಕ್ಷೀರ ಘೃತಗಳಿಂದ ಆ ನಂದದಿ ಯೆರೆದರು ಇಂದಿರೆರಮಣಗೆ 7 ಕೇಸರಿ ಪುನಗಿನ ತೈಲವನೆ ತೆಗೆದು ವಾಸುಕಿಶಯನಗೆ ಲೇಪವನು ಮಾಡಿ ಸ ಹಸ್ರಕೊಡದ ಅಭಿಷೇಕವ ಮಾಡಿದರು 8 ಪಟ್ಟುಪೀತಾಂಬರವನುಟ್ಟು ಶ್ರೀರಂಗನು ಕಳೆದ ಕವಚ ತೊಟ್ಟು ಹತ್ತುಸಾವಿರಸೇರಿನ ಅಕ್ಕಿ ಅನ್ನವ ನಿಟ್ಟು ವಿಪ್ರರು ಸುರಿದರು ವಿಸ್ತಾರವಾಗಿಯೆ9 ದಧಿ ಕದಳಿ ಫಲದಿಂದ ನೈ [ವೃಂದಕ್ಕೆ] ಕರೆಕರೆದು ಕೊಡುವ ಪರಿಯ ನಾ 10 ರಂಗನಾಯಕಿ ಪಟ್ಟದರಸಿ [ವೆರಸಿ]ನರಹರಿ ಚಕ್ರಮೂರುತಿಗೆ ಆಗ ಕಲ್ಪೋಕ್ತದಿಂದಭಿಷೇಕವ ಮಾಡೆ ಕರ್ಪೂರ ತೈಲವ [ಲೇ ಸಾಗಿ]ಹಚ್ಚಿ ಮಲಗಿದ ವೆಂಕಟರಂಗ[ನ] 11
--------------
ಯದುಗಿರಿಯಮ್ಮ
ಡಂಕವ ಸಾರಿದನೋ ಯಮ ತನ್ನ ನಗರದಿ ಘಂಟೆಯ ನುಡಿಸಿದನು ಪ ಡಂಕಸಾರಿದ ತನ್ನ ತುಂಟದೂತರಿಗ್ವೊ ಯ್ಕುಂಠನ ದಾಸರ ತಂಟೆಯು ಬೇಡೆಂದು ಅ.ಪ ಕಾಲಕಾಲದಿ ಹರಿಯಕಥೆ ಕೀರ್ತ ನಾಲಿಸುವರ ನೆರೆಯು ತಾಳದಮ್ಮಡಿ ಸಮ್ಮೇಳದೊಡನೆ ಆ ನೀಲಶ್ಯಾಮನ ಭಜಿಪರಾಳಿನಾಳನುಕಂಡು ಕಾಲನಾಲುಗಳೆಂದ್ಹೇಳದೆ ಬನ್ನಿರೆಂದು 1 ಮಂದಿರಂಗಳದಿ ವೃಂದಾವನ ದಂದ ಕಂಡಾಕ್ಷಣದಿ ಸಿಂಧುಶಯನ ಬಂಧುಭಕ್ತರ ಮಂದಿರವಿದೆಂದು ಹಿಂದಕ್ಕೆ ನೋಡದೆ ಸಂದ್ಹಿಡಿದೋಡಿ ಪುರ ಬಂದು ಸೇರಿರೆಂದು 2 ಪರರಂಗನೆಯರ ಸ್ಮರಿಸುವ ಪರಮ ನೀಚರನ್ನು ನರಹರಿ ಸ್ಮರಣೆಯ ಅರಿಯದ ಆಧಮರ ಕರುಣಿಸದೆ ತುಸುಮುರಿದು ಮುಸುಕಿಕಟ್ಟಿ ದರದರನೆಳೆತಂದು ಉರಿಯೊಳ್ಪೊಯಿರೆಂದು 3 ಪರದ್ರವ್ಯವಪಹರಿಸಿ ಲಂಚದಿಂದ ಸರುವ ತನ್ನದೆನಿಸಿ ನಿರುತ ಮಡದಿಮಕ್ಕಳೊರೆವ ದುರಾತ್ಮನರ ಗುರುತಳನೆಳತಂದು ಕರಿಗಿದಸೀಸಬಾಯೊಳ್ ವೆರಸಿ ಜನಕಕೊಂಡದುರುಳಿಸಿಬಿಡಿರೆಂದು 4 ವೇಣು ಕರದಿ ಪಿಡಿದು ಬಾಣಾರಿ ಧ್ಯಾನದೊಳಗೆ ಬರೆದು ಜಾನಕೀಶನ ಲೀಲೆ ಗಾನದಿಂ ಪಾಡುತ ಆನಂದಿಪ ಮಹಜ್ಞಾನಿಗಳನು ಕಂಡು ಕಾಣದಂತೆ ಸಿಕ್ಕ ಜಾಣ್ಣುಡಿದೋಡಿರೆಂದು 5 ಇಂದಿರೇಶನದಿನದಿ ಅನ್ನವನು ತಿಂದ ಮೂಢರ ಭರದಿ ತಂದು ಒದೆದು ಮಹಗಂಧಮದು ರ್ಗಂಧನಾರುವ ಮಲತಿಂದು ಬದುಕಿರೆಲೊ ಎಂದು ಮನೆಹೊರಗಿನ ಮಂದಿರದಿಡಿರೆಂದು 6 ವಿಮಲ ತುಳಸೀಮಣಿಯ ಧರಿಸಿ ಅಮಿತ ಮಹಿಮನ ಚರಿಯ ವಿಮಲಮನಸರಾಗಿ ಕ್ರಮದಿ ಬರುವ ಶ್ರೀ ರಾಮದಾಸರ ಪಾದಕಮಲಗಳನು ಕಂಡು ಯಮದೂತರೆನ್ನದೆ ನಮಿಸಿ ಬನ್ನಿರೆಂದು 7
--------------
ರಾಮದಾಸರು
ಡಿಂಬದಲ್ಲಿ ಇರುವ ಜೀವ ಕಂಬಸೂತ್ರ ಗೊಂಬೆಯಂತೆಎಂದಿಗಿದ್ದರೊಂದು ದಿನ ಸಾವು ತಪ್ಪದು ಪ ಬಟ್ಟೆ ಕಾಣದು1 ಹತ್ತು ಎಂಟು ಲಕ್ಷ ಗಳಿಸಿ ಮತ್ತೆ ಸಾಲದೆಂದು ಪರರಅರ್ಥಕಾಗಿ ಆಸೆಪಟ್ಟು ಸುಳ್ಳು ನ್ಯಾಯ ಮಾಡ್ವರುಬಿತ್ತಿ ಬೆಳೆದು ತನ್ನದೆಂಬ ವ್ಯರ್ಥಚಿಂತೆಯನ್ನು ಮಾಡೆಸತ್ತು ಹೋದ ಮೇಲೆ ಅರ್ಥ ಯಾರಿಗಾಹುದೊ 2 ಹೊನ್ನು ಹೆಣ್ಣು ಮಣ್ಣು ಮೂರು ತನ್ನಲಿದ್ದು ಉಣ್ಣಲಿಲ್ಲಅಣ್ಣತಮ್ಮ ತಾಯಿ ತಂದೆ ಬಯಸಲಾಗದುಅನ್ನ ವಸ್ತ್ರ ಭೋಗಕಾಗಿ ತನ್ನ ಸುಖವ ಕಾಣಲಿಲ್ಲಮಣ್ಣುಪಾಲು ಆದಮೇಲೆ ಯಾರಿಗಾಹುದೊ 3 ಬೆಳ್ಳಿ ಬಂಗರಿಟ್ಟುಕೊಂಡು ಒಳ್ಳೆ ವಸ್ತ್ರ ಹೊದ್ದುಕೊಂಡುಅಳ್ಳಾಚಾರಿ ಗೊಂಬೆಯಂತೆ ಆಡಿ ಹೋಯಿತುಹಳ್ಳ ಹರಿದು ಹೋಗುವಾಗ ಗುಳ್ಳೆ ಬಂದು ಒಡೆಯುವಂತೆಉಳ್ಳೆ ಪೊರೆಯಂತೆ ಕಾಣೊ ಸಂಸಾರದಾಟವು 4 ವಾರ್ತೆ ಕೀರ್ತಿಯೆಂಬುವೆರಡು ಸತ್ತ ಮೇಲೆ ಬಂದವಯ್ಯವಸ್ತು ಪ್ರಾಣನಾಯಕನು ಎಲ್ಲಿ ದೊರಕ್ಯಾನುಕರ್ತೃ ಕಾಗಿನೆಲೆಯಾದಿಕೇಶವನ ಚರಣಕಮಲನಿತ್ಯದಲ್ಲಿ ಭಜಿಸಿ ಸುಖಿಯಾಗಿ ಬಾಳೆಲೊ 5
--------------
ಕನಕದಾಸ
ತನ್ನ ಮನೆಯಲ್ಲಿ ಬಣ್ಣದ ಭೊಗರಿ ಚಂಡು ಯಿಲ್ಲಾ | ಹಾಸಿಕೆ ಹಾಸಿಕೆ ಎತ್ತ | ಕಾಸೆ ಬಿಸಿ ನೀರು | ದಾಸನ ಕರಿಯೆ | ಸೊಲ್ಲು ಗೋಪಿ 1 ಕುಪ್ಪಸÀ ಕೊಡಬೇಡ ನೀ | ಅಪ್ಪನ ನೋಡ ಬೇಡ | ಚಪ್ಪರದೊಳಗೆ ಕುಳಿತು ಕಾಳು | ಕುಪ್ಪೆ ನಾಡುವ ಈಗ ಪೋಗಿ 2 ಹೊತ್ತು ಹೋಯಿತು ಮಸರುಕಟಿಯಲಿಲ್ಲ್ಯಾಕೆ | ಬಿತಿ ಬಿತಿ ಬೂವಾ ಉಂದೇನು ತುತ್ತು 3 ಅನ್ನಯ್ಯಾ ಬಂದ ತಾರೆ ತನ್ನ ತಲಗೀಯ | ನಿನ್ನೆ ಮಾಡಿದ ವಬ್ಬತು ಕೊದು ಎನ್ನ ಬಟ್ಟಲೊಳಗೆ ಹಾಕ 4 ಹೊಲಗೆ ಅನ್ನಯ್ಯ ಬಿದ್ದಾನೆ ತಲಿಯಲ್ಲೆ ಮನ್ನು | ಶಲಗಿಲಿ ವಲಿಗಿಸುವೇಗ ಬಂದು ತೊಲಿಯೆ ಬಿಸಿ ನೀರಿಂದ ಕೆತರು 5 ಕೆಲಿಗೆ ಹೋದೆನು ಕುಂತಿ ತಾಲೆ ಗೋಪಮ್ಮ | ಕಾಲಿಗೆ ಪಾಪೋತು ಆ ಮೆತ್ತನೆ ವಾಲೆಕಂತ ಕೈಯಲಿ ಹಿದಿಸೊ6 ತೊದಲ ಮಾತಾ ಕೇಳಿ ಮಗನ ವದನ ಮುದ್ದಾ | ಯದುಕುಲ ಪಾವನ ವೆಂದಳು ಗೋಪಿ7
--------------
ವಿಜಯದಾಸ
ತಾತ್ವಿಕ ಹಿನ್ನೆಲೆಯ ಕೀರ್ತನೆಗಳು ಅದಕೋ ವೈರಾಗ್ಯ ಅದಕೋ ವೈರಾಗ್ಯಅದಕೋ ವೈರಾಗ್ಯ ಕೇಳದಕೋ ವೈರಾಗ್ಯ ಪ ಸತಿಸುತ ಭಾಗ್ಯವ ಸರ್ವವ ತ್ಯಜಿಸಿಯೆಮತಿಬ್ರಹ್ಮವಾದುದೆ ಅದಕೋ ವೈರಾಗ್ಯ1 ಅನ್ನೋದಕ ವಸ್ತ್ರ ಅಪೇಕ್ಷೆ ಅಡಗಿಯೆಚಿನ್ಮಾತ್ರನಾದುದೆ ಅದಕೋ ವೈರಾಗ್ಯ2 ದೂಷಣಭೂಷಣವೆರಡಕ್ಕೆ ಹೊಂದದೆವಾಸನ ಕ್ಷಯವಿರೆ ಅದಕೋ ವೈರಾಗ್ಯ 3 ಇಹಪರ ಭೋಗವ ತೊರೆದಿಹ ಭಾವವೆಮಹಾಶಿವನಾದುದೆ ಅದಕೋ ವೈರಾಗ್ಯ 4 ಇರುಳು ಹಗಲು ಚಿದಾನಂದ ಸದ್ಗುರುವಾಗಿಶರೀರವ ಕಳೆದುದೆ ಅದಕೋ ವೈರಾಗ್ಯ5
--------------
ಚಿದಾನಂದ ಅವಧೂತರು
ತಾನೆ ದೊರೆವುದೇನೋ ಸುಖ ನಾನಾಜನ್ಮದ ಪುಣ್ಯವಿಲ್ಲದೆ ಪ ಮೃಷ್ಟಾನ್ನವುಂಡು ಮೆರೆವುದೀಗ ಕೊಟ್ಟು ಅನ್ನ ಹುಟ್ಟಿದವಗಿಲ್ಲದೆ ಇಟ್ಟುತೊಟ್ಟು ಶೃಂಗಾರದಿಂದ ಸೃಷ್ಟಿಯಿಂದ್ವಸ್ತ್ರ ವಡವೆಗಳು ಕೊಟ್ಟು ಹುಟ್ಟಿದ ಪುಣ್ಯರಿಗಲ್ಲದೆ 1 ಕೋಮಲಯುವತಿ ದೊರೆವುದೀಗ ಭೂಮಿಯೋಳ್ಕನ್ಯಾದಾನಿಗಲ್ಲದೆ ಭೂಮಿಸೀಮೆಗಳಿಸಿ ಬಲು ಕ್ಷೇಮದಿಂದ ಬಾಳ್ವುದೀಗ ಭೂಮಿಸೀಮೆ ದಾನಗೈದ ಆ ಮಹಾಪುಣ್ಯವಂತರಿಗಲ್ಲದೆ 2 ನಿಖಿಲಸುಖದಿ ಮೆರೆವುದೀಗ ಭಕುತಜನರಪ್ಪ ತೃಪ್ತರಿಗಲ್ಲದೆ ಅಖಿಲಪದಕೆ ಅಧಿಕವೆನಿಪ ಮುಕುತಿಪದವಿ ಪಡೆವುದಮಿತ ಮುಕುತಿದಾಯಕ ಶ್ರೀರಾಮಪಾದ ಭಕುತಾನುಭಕುತರಿಗಲ್ಲದೆ 3
--------------
ರಾಮದಾಸರು
ತಾನೇ ಬ್ರಹ್ಮನಿರುತಲಿರೆತಾನೇ ವಸ್ತುವಿರುತಲಿರೆತಾನೇ ತನ್ನ ತಿಳಿಯಲಾರದೆಏನೇನೋ ಮಾಡುತಲಿಹರು ಪ ಆಸನವನು ಒಲಿದು ಒಲಿದುನಾಸಿಕದೊಳು ದೃಷ್ಟಿಯಿಟ್ಟುಸೂಸಲೀಯದೆ ಮನವ ನಿಲ್ಲಿಸಿಈಸು ಪರಿಯ ಕಾಂಬುದೇನೋ 1 ಅನ್ನವ ವರ್ಜಿಪುದಾರಿಗೆಅಡವಿಯೊಳು ಇಹುದು ಯಾರಿಗೆತನ್ನ ತಿಳಿಯಲಾರದ ದುಃಖತನ್ನ ನಿಂತು ಮಾಡುತಲಿಹುದು 2 ಚೇತನರಹಿತ ಶರೀರಕ್ಕೆಚೇತನವಾಗಿ ತಾನೆ ಇರ್ದುಚೇತನಾತ್ಮಕ ಚಿದಾನಂದಚೇತನನಾಗಿ ಆಡುತಲಿರೆ 3
--------------
ಚಿದಾನಂದ ಅವಧೂತರು
ತಾಯಿ ಪಾಲಿಸು ಎನ್ನ ದಯದಿ ಗಾಯತ್ರಿದೇವಿ ಸಿದ್ಧಿಯನಿತ್ತು ಸಲಹಾ ಸಾವಿತ್ರಿ ಪ ಪಾವನ ಸುಚರಿತ್ರೆ ಮಾಯೆ ತ್ರಿಜಗಸ್ತೋತ್ರೆ ಕಾಯೆ ಸಿದ್ಧಿಸಿ ಎನ್ನ ಕಾಯಾ ಮಂಗಲಗಾತ್ರೆ ಅ.ಪ ಸಾರಸಾಕ್ಷಿಯೆ ದಯಾಪಾರಾವಾರಳೆ ನಿನ್ನ ಚಾರುಚರಿತಂಗಳು ಸಾರುವೆ ನಿಜಮಂತ್ರ ಮೂರುಲೋಕದ ಸೂತ್ರಧಾರಿ ನೀ ನಿಜ ಓಂ ಕಾರಿ ಕರುಣಿಸಿ ಸುತನ ಗಾರುಮಾಡದೆ ಪೊರೆ ಅ ಪಾರ ಮಹಿಮಳೆ ಬಾರಿಬಾರಿಗೆ ಸೇರಿ ನಿನ್ನಪಾದ ವಾರಿಜಕೆ ನಾ ಸಾರಿ ಬೇಡುವೆ ಧೀರಳೆ ಸುವಿ ಚಾರಿ ನಿಜಸುಖ ತೋರು ಬೇಗನೆ 1 ಮನುಮುನಿಗಳಿಗೊಲಿದು ಘನಸುಖಸಾಮ್ರಾಜ್ಯ ವನು ಕೊಟ್ಟು ಸಲಹಿದಿ ಕನಿಕರದೊಡನೆ ಮಿನುಗುವ ಶತಕೋಟಿದಿನ ಕರಪ್ರಭಾಮಯೆ ಅನುಪಮುನಿಜಜ್ಞಾನವನು ನೀಡು ಬೇಗನೆ ಚಿನುಮಯಾತ್ಮಳೆ ಘನಕೆ ಘನ ನಿನ್ನ ವರರುಹಂಘ್ರಿಯ ನೆನೆವೆನನುದಿನ ಜನನಿ ಅಣುಗನ ಕೊನೆಯಜಿಹ್ವೆಯೊಳ್ ಪ್ರಣಮ ಬರಿಯಮೈ ಮಣಿವೆ ಕಲ್ಯಾಣೆ 2 ಪನ್ನಂಗಧರ ಸುರಸನುತ ಶ್ರೀರಾಮ ಸುನ್ನತ ಮಹಿಮಂಗಳನ್ನು ಬಲ್ಲವಳೆ ಅನ್ನ ಪೂರ್ಣೆಯೆ ಉಮೆ ಪನ್ನಂಗವೇಣಿಯೆ ಮನ್ನಿಸು ಬಡವನ ಬಿನ್ನಪ ಕರುಣೆ ಭಿನ್ನವಿಲ್ಲದೆ ನಿನ್ನ ಬೇಡುವೆ ಉನ್ನತೋನ್ನತ ಪದವನಿತ್ತು ಧನ್ಯನೆನಿಸೌ ಎನ್ನ ಮನದಿಷ್ಟವನ್ನು ಪಾಲಿಸಿ ವಿಮಲ್ಹøದಯೆ 3
--------------
ರಾಮದಾಸರು
ತಿಂಡಿಯಾಗಲಿ ಬೇಗ ಪ ತೊಂಡರೊಡನೆ ಕೂಡಿ ತ್ವರಿತದಿ ಹೊರಡೋಣ ಅ.ಪ ಅನ್ನಸಾರೆರಡೇ ಬೇಕು | ಮಿಕ್ಕಾದ್ದೆಲ್ಲಾ ಹನ್ನೊಂದು ಗಂಟೆ ಹೊತ್ತಿನೊಳಗೆ ಅಡಿಗೆಯ ಮಾಡಿ ಹರಿದಾಸರ ಕೂಡಿ ಆ ವೂರಿಗೆ ಹೋಗೋಣ1 ಕಟ್ಟಿ ಪಾತ್ರೆಯೊಳಗಿರಿಸಿ ಜಾತ್ರೆ ನೋಡುವುದಕ್ಕೆ ಜನರು ಮಿತ್ರರು ಸಹ 2 ಉಪ್ಪಿನಕಾಯಿ ತೆಗಿಯಲಿ ಹಪ್ಪಳ ಸುಟ್ಟು ನಮ್ಮಪ್ಪ ಗುರುರಾಮ ವಿಠ- ಲ್ಪಪನ ನೆನೆಯುತ ಚಪ್ಪಾಳೆ ತಟ್ಟುತ 3
--------------
ಗುರುರಾಮವಿಠಲ
ತಿರುದುಂಬುವ ನೀನು ತಿರುಮಲೇಶಾ ಮರುಗಲ್ಯಾತಕೆ ಇನ್ನು ಮನಸಿನೊಳಗೆ ಪ್ರತಿದಿನವು ಪ ಬಲಿರಾಯ ಬಲು ದಾನವನು ಮಾಡುತಿರಲಾಗಿ ಇಳಿಯ ಸುರÀವೇಷವನು ಧರಿಸಿ ಪೋಗಿ ಹಲುಬಿ ಬಾಯಿದೆರದು ತ್ರಿಪಾದ ತಿರಕೆ ಕೊಂಡು ನಿಗಮ ಕುಲದಾತಾರಾ 1 ಗೋಪಳ್ಳಿಯಲಿ ಜನಿಸಿ ಗೋವುಗಳ ಕಾವುತ್ತ ಗೋಪಾಲತತಿ ವಡನೆ ವಡನಾಡುತ ತಾಪಸರು ಯಜ್ಞ ಕರ್ಮಾದಿಗಳು ಮಾಡುತಿರೆ ಶ್ರೀಪತಿ ಅನ್ನ ತಿರಿದುಂಡು ಕ್ಷುದಿಯನ್ನ ಕಳೆದೆ 2 ಅಂದು ಈ ಪರಿಯ ಯಾಚಕ ವೃತ್ತಿಯನು ಮಾಡಿ ಇಂದೆನ್ನ ಹೃತ್ಕಮಲದೊಳಗೆ ಬಂದೂ ನಿಂದು ಮನೆಮನೆ ತಿರದುಂಬುವ ನೀನಲ್ಲವೆ ಸಂದೇಹವೇಕೆ ಎನಗೆ ವಿಜಯವಿಠ್ಠಲರೇಯಾ 3
--------------
ವಿಜಯದಾಸ