ಒಟ್ಟು 722 ಕಡೆಗಳಲ್ಲಿ , 85 ದಾಸರು , 608 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಮಲಮುಖಿಯೆ ಕಮಲಾಲಯೆ ಕಮಲೆಕಮಾಲಾಕ್ಷಿಯೆ ಕೋಮಲೆ ಪ. ಕಮಲನಾಭನ ಪಾದಕಮಲಯುಗಳ ಮಧುಪೆಕಮಲಜ ಜನನಿಯೆ ಕಮಲಮಿತ್ರೆ ಸುಪ್ರಭೆ ಅ.ಪ. ಅರುಣನ ಪೋಲುವ ಚರಣವು ಬಾಲಚಂದಿರನ ಸೋಲಿಪ ನಖವುಬೆರಳಲ್ಲಿ ಪಿಲ್ಲಿ ಕಾಲುಂಗುರ ಮೆಂಟಿಕೆ ಕಿರುಗೆಜ್ಜ್ಯಂದಿಗೆ ಪೆಂಡೆಯುಕರಿಯ ದಂತದಂತೆ ಜಾನುದರ್ಪಣ ಜಂಘೆ ಉಟ್ಟ ದಟ್ಟಿಯು ನೆರಿಗೆಯುಹರಿನಡು ಕಿಂಕಿಣಿ ಭರದಿ ಒಡ್ಯಾಣವು ಉದರ ತ್ರಿವಳಿರೇಖೆ ವರ ಕಂಚುಕಧಾರಿ1 ಉರೆ ವೈಜಯಂತೀ ಮಂದಾರಮೆರೆವ ಚುಬುಕ ಬಿಂಬಾಧರ ಕೂರ್ಮಕದಪು ಕಿರಿದಂತ ರತುನದ ಕರಡಿಗೆ ವದನೆ 2 ಸುರಭಿ ಚಂಪಕನಾಸಿಕ ಮೂಗುತಿ ಶಾಂತ ಪರಮ ಕರುಣ ನೋಟದಹರಿಣನಯನೆ ಪುಬ್ಬುಸ್ಮರನ ಚಾಪದಂತೆ ಕರ್ಣಾಭರಣಲಂಕಾರ ಸಿರಿಕುಂಕುಮ ಕಸ್ತೂರಿ ತಿಲಕದ ಮೇಲೆ ಅರಳೆಲೆ ಬೈತಲೆಯ ಸರ ಕುರುಳುಸುಳಿಯು ಪರಿಪರಿ ರತ್ನ ಖಚಿತದ ವರ ಮಕುಟವು ಕೋಟಿ ತರಣಿಯಂತೊಪ್ಪುವ 3 ತೆತ್ತೀಸಕೋಟಿ ದೇವತೆಗಳು ವಾಣಿ ಭಾರತಿ ಪಾರ್ವತಿ ಮೊದಲಾದಉತ್ತಮಸ್ತ್ರೀಯರು ಛತ್ರಚಾಮರನೆತ್ತಿ ಬೀಸುವಲಂಕಾರಸುತ್ತಗಂಧರ್ವರು ತುಂಬುರ ನಾರದರು ಸ್ವರವೆತ್ತಿ ಪಾಡುವ ಝೇಂಕಾರತತ್ತರಿತರಿಘಟ್ಟ ಝಣುತ ಝಣುತ ಎಂದು ಎತ್ತ ನೋಡಿದರತ್ತ ತಥೈ ಎಂಬೊ ಶಬ್ದ 4 ಅಜ ಫಾಲಾಕ್ಷ ಸುರವಿನುತೆಮೋಕ್ಷದಾಯಕಿ ಲೋಕರಕ್ಷಕಿ ರಮಾದೇವಿ ಇಕ್ಷುಧನ್ವನ ಜನನಿಅಕ್ಷಯಫಲದ ಗೋಪಾಲವಿಠಲನ ಪ್ರತ್ಯಕ್ಷ ತೋರಿಸೆನ್ನಪೇಕ್ಷೆ ಪೂರೈಸೆ ತಾಯೆ 5
--------------
ಗೋಪಾಲದಾಸರು
ಕರಕಮಲ ತಡೆಯುವುದೆ ಕಟುಖಾರವಾ ನಿತ್ಯ ಪೂಜಿಸುವ ಕೋಮಲದಾ ಪ. ಪರಿವಾರ ಜನವು ಭೋಜನಕೆ ಕುಳಿತಿರಲು ನರ ಹರಿಗೆ ಅರ್ಪಿತದ ಹುಳಿಯಲ್ಲಿ ಕರವಿಟ್ಟು ಪರಿಪಕ್ವ ಶಾಖದ ಹೋಳುಗಳ ಬಡಿಸಲು ಕರ ಕರೆಗೆ ಸಿಲುಕೇ 1 ಮಧ್ವದುಗ್ಧಾಭ್ಧಿಯಲಿ ಜನಿಸಿದ ಸುಧಾರಸವ ಶುದ್ಧ ದೃಷ್ಟಿಯಲ್ಲೀ ಸವಿಸವಿದು ಮಧುರಾ ಹೃದ್ವಜದಲಿ ತುಂಬಲನುವಾದ ಪುಸ್ತಕವ ಮುದ್ದಾಗಿ ಪಿಡಿಯಲನುಕೂಲವಾಗಿ ಇಂಥ 2 ಗಂಧ ಕುಸುಮಾಕ್ಷತೆಗಳಿಂದ ಶ್ರೀ ತುಳಸಿದಳ ದಿಂದ ವಿಠ್ಠಲ ಕೃಷ್ಣ ಲಕ್ಷ್ಮಿನರಹರಿಯಾ ವೃಂದ ಸಾಲಿಗ್ರಾಮ ಹನುಮ ಯತಿಕುಲಜರುಗ ಳಿಂದ ಸಹಿತದಿ ಪೂಜೆ ವಿಭವದಲಿ ಗೈದಾ 3 ಮಧುರಾನ್ನ ಸವಿದು ಮಧುಸೂದನನ ಗುಣಗಳನು ವಿಧವಿಧದಿ ಮಧ್ವಗ್ರಂಥದಿ ಕಂಡು ನಲಿದೂ ಹೃದಯ ನಿರ್ಮಲದಿ ಆಲಿಸುವ ಭಕ್ತರಿಗೆ ಮಧುರ ರಸಮನದ ಎಡೆಯಲ್ಲಿ ಬಿಡಿಸುವ ಇಂಥ 4 ಗೋಪಾಲಕೃಷ್ಣವಿಠ್ಠಲನ ಭಕ್ತರು ಬಂದು ಶ್ರೀಪಾದಕೆರಗೆ ಸಿರದಲ್ಲಿ ಅಕ್ಷತೆಯಾ ಅಪಾರ ಕರುಣದಿಂದಲಿ ಸೂಸಿ ನಲಿಯುತಲಿ ಅಪತ್ತು ಕಳೆವ ಶ್ರೀ ಪ್ರದ್ನುಮ್ನತೀರ್ಥಯತಿ 5
--------------
ಅಂಬಾಬಾಯಿ
ಕರಿಮುಖದ ಗಣಪತಿಯ ಚರಣಕ್ಕೆಯೆರಗಿ ಶಾರದೆಗೆ ಸೆರಗೊಡ್ಡಿ ವರವನು ವರವ ಬೇಡಿಕೊಂಡೆ ಸ್ಥಿರವಾದ ಭಕುತಿ ಕೊಡುಯೆಂದು 1 ವಾಯು ಬ್ರಹ್ಮ ಭಾರತಿಗೆ ಬಾಳ ಬೇಡಿಕೊಂಡ್ವೇ- ದವ್ಯಾಸರಿಗೆ ನಮೋಯೆಂಬೆ ನ- ಮೋಯೆಂದು ನಾರದರ ಪಾದಪದ್ಮಗಳಿಗೆರಗುವೆ 2 ಅತ್ರಿ ಅಂಗೀರಸ ವಸಿಷ್ಠಗೌತಮ ವಿಶ್ವಾ- ಮಿತ್ರ ಮಾರ್ಕಾಂಡೇಯ ಚ್ಯವನರು ಚ್ಯವನ ಭಾರದ್ವಾಜ ಬಕದಾಲ್ಭ್ಯರಿಗೆ ನಮಿಸುವೆ 3 ಪಂಡಿತ್ವಾಲ್ಮೀಕಿ ಕೌಂಡಿಣ್ಯ ಕೌಂಡಿಣ್ಯ ಅಗಸ್ತ್ಯಮುನಿ ಮರೀಚರಿಗೆ ನಾನು ನಮೋಯೆಂಬೆ4 ಶೇಷಗಿರಿವಾಸನ ಆಕಾಶನಳಿಯನೆ ವೆಂಕ- ಟೇಶ ನೀ ನಮ್ಮನೆ ದೈವ ಮನೆದೈ- ವ ಸಲಹೆನ್ನ ಪದ್ಮಾವತೀಶ ಪರಮಾತ್ಮ 5 ಮಂಗಳಾಂಗನೆ ನೀನು ಮಂಗಳಮಹಿಮನೆ ಮಂಗಳದೇವಿ ರಮಣನೆ ನೀನೆಮಗೆ ಜಯ ಮಂಗಳವ ಕೊಟ್ಟು ಸಲಹೆನ್ನ 6 ವಾಸುದೇವನೆ ನೀನು ವಾಸುಕಿಶಯನನೆ ವಾಸವಿಯ ರಥವ ನಡೆಸಿದೆ ನಡೆಸಿದಂಥ ಶ್ರೀನಿ- ವಾಸ ನೀನೆಮಗೆ ದಯಮಾಡು 7 ಎನ್ನಲ್ಲೆ ನೀನಿದ್ದು ನಿನ್ನಗುಣ ಬಹುರೂಪ- ವನ್ನು ತಿಳಿಸದಲೆ ಇರುವೋರೆ ಇರುವೋರೆ ನೀನು ಪ್ರ- ಸನ್ನನಾಗೆನಗೆ ದಯಮಾಡು 8 ಕಾಲ ಕಾಲಕೆ ನಿನ್ನ ನಾಮವನು ನಾಲಿಗೆ ಮ್ಯಾಲಿಟ್ಟು ನಿನ್ನ ನೆನೆವಂತೆ ನೆನೆವಂತೆ ಅನಿರುದ್ಧ 9 ಕಾಮಕ್ರೋಧವು ಮದ ಮಾತ್ಸರ್ಯ ಲೋಭಗಳು ಮೋಹ ಮಡುವಿನಲಿ ಮುಣುಗಿದೆ ಮುಣುಗಿದೆನೊ ಎನ್ನ ಕೈ ನೀನೆ ಪಿಡಿದೆತ್ತಿ ಕರೆದೊಯ್ಯೊ 10 ಐದು ಮಂದ್ಯೆನ್ನಲ್ಲಿ ಐದಾರೆ ಮಾರಾಯ ಬೈದರು ಬಿಡರೋ ಎನ್ನೀಗ ಎನ್ನೀಗ ಕಟ್ಟಿ ಕೊಂಡೊಯ್ದು ಹಾಕುವರೊ ಯಮನಲ್ಲಿ 11 ಆರು ಮಂದ್ಯರಿಗಳು ಕ್ರೂರ ಶತ್ರುಗಳುಂಟು ಘೋರಬಡಿಸುವರೊ ಅನುಗಾಲ ಅನುಗಾಲ ದುರ್ವಿಷಯ ತಾವೆನಗೆ ಕಲಿಸಿ ದಣಿಸೋರು 12 ಹತ್ತು ಮಂದಿ ಯೆನ್ನ ಸುತ್ತ ಮುತ್ತಿರುವರೊ ಕೂಪ ಭವದೊಳು ಭವದೊಳಗೆ ಬಳಲುವೆನು ಚಿತ್ತಕ್ಕೆ ತಂದು ದಯಮಾಡು 13 ಸಂಚಿತಾಗಾಮಿಗಳ ಮುಂಚೆ ದಹಿಸಿ ಈ ಪ್ರ- ಪಂಚವನು ಬಿಡಿಸೊ ಪರಮಾತ್ಮ ಪರಮಾತ್ಮ ನೀಯೆನ್ನ ವಂಚನಿಲ್ಲದಲೆ ಸಲಹೈಯ್ಯ 14 ಜ್ಞಾನ ಭಕ್ತಿ ಗಾನ ವೈರಾಗ್ಯ ಭಾಗ್ಯಗಳು ಜಾನಕಿರಮಣ ಜಗದೀಶ ಜಗದೀಶ ಜನಕನ ಜಾಮಾತ ನೀನೆ ತಿಳಿಸಯ್ಯ 15 ದ್ವಾಸುಪರುಣನಂತೆ ಈ ಶರೀರದೊಳಿದ್ದು ಏಸೇಸು ಜನ್ಮಕ್ಕಗಲದೆ ಅಗಲದಂತಿದ್ದು ಉ- ದಾಸೀನವ ಮಾಡೋದೊಳಿತಲ್ಲ 16 ಇಂದುಕುಲಜಾತ ನಿನ್ನೊ ್ಹಂದಿಕೊಂಡಿದ್ದು ಎಂದೆಂದಿಗು ಬಿಡದೆ ಗೆಳೆತನ ಗೆಳೆತನವಿದ್ದಲ್ಲಿ ಸಂದೇಹವ್ಯಾಕೊ ಸಲಹಲು 17 ಮುಕ್ತಿದಾಯಕ ನಿನ್ನ ಭಕ್ತರೇಸುಮಂದಿ ಹೆತ್ತಾಯಿಸುತರೇನವರೆಲ್ಲ ನಾ ಹುಟ್ಟಿದೆನೆ ಮತ್ತೆ ಮಲತಾಯಿ ಉದರದಿ 18 ಶ್ರೀಶನೆ ಕೇಳ್ ನಿನ್ನ ದಾಸರಂಗಳದಲ್ಲಿ ಬೀಸಿ ಬಿಸಾಕೊ ಎನ್ನನು ಎನ್ನ ಹರಿದಾಸರ ದಾಸತ್ವಯೆನಗೆ ಕೊಡಿಸಯ್ಯ 19 ಅಂಬರೀಷ್ವರದ ನಿನ್ನ ್ಹಂಬಲೆನಗಿರಲಯ್ಯ ಬಿಂಬ ಮೂರುತಿಯೆ ಬಿಡದೆನ್ನ ನಿನ್ನೂರಲ್ಲಿ ಇಂಬುಕೊಟ್ಟೆನ್ನ (ಅ)ಲ್ಲಿರಿಸಯ್ಯ 20 ಕಡಿದು ಹೊಡೆದು ಬಯ್ದು ಬಂದು ಕಾಲಿಂದೊದ್ದ- ರ್ಹಿಡಿಯದೆ ಅವರ ಅಪರಾಧ ಅಪರಾಧವೆಣಿಸದಿರೆ ನಡೆದರೊ ನಿನ್ನ ಪುರಕಾಗ 21 ಪುಟ್ಟ ಪ್ರಹ್ಲಾದ ಧ್ರುವ ಕೊಟ್ಟರೆಷ್ಟು ಭಾಗ್ಯ ಕಷ್ಟಕ್ಕೆ ಬಂದು ಒದಗಿದೆ ಒದಗಿ ಬಂದವರ ಆಪತ್ತು ಬಂಧನ ಬಿಡಿಸಿದೆ 22 ತನ್ನ ಮಗನ ಕರೆಯೆ ಎನ್ನ ಕರೆದನೆಂದು ನಿನ್ನ ದೂತರನು ಕಳಿಸಿದೆ ಕಳಿಸಿದ್ಯಜಮಿಳಗೆ ಮನ್ನಿಸಿ ಕೊಟ್ಟ್ಯೊ ನಿನಲೋಕ 23 ತಿರುಕ ತಂದವಲಕ್ಕಿ ಕರಕÀರನೆ ನೀಮುಕ್ಕಿ ದೊರೆತನವ ಕೊಟ್ಟು ದಾರಿದ್ರ್ಯ ದಾರಿದ್ರ್ಯ ಕಳೆದದ್ದು ಅರಿಕಿಲ್ಲವೇನೊ ಜನಕೆಲ್ಲ 24 ನಿಲ್ಲಬೇಕೆಂದಿಟ್ಟಿಕಲ್ಲು ಕೊಟ್ಟವಗೆ ಕೈ- ವಲ್ಯವನು ಕೊಟ್ಟ್ಯೋ ಕರುಣಾಳು ಕರುಣಾಳು ಬುಕ್ಕಿ ್ಹಟ್ಟು ಮಲ್ಲಿಗೆಯ ಮಾಲೆಗೊಲಿತೀಯೊ 25 ಕರೆದು ಕಂಸಗೆ ಕೊಟ್ಟು ಕೊಲಿಸಬಂದ- ಕ್ರೂರ(ಗೆ) ನದಿಯಲ್ಲೆ ನಿನ್ನ ನಿಜರೂಪ ನಿಜರೂಪ ತೋರಿದ್ದು ಇದುಯೇನು ನಿನ್ನ ಮಹಿಮೆಯು 26 ಗಂಧಕ್ಕೆ ಒಲಿದು ಕುಬ್ಜೆಯ ಡೊಂಕನೆ ತಿದ್ದಿ ಸುಂದರಿಯ ಮಾಡಿ ಸುಗುಣನೆ ಸುಗುಣನೆ ನೀನಾಕೆ- ಯಂಗಸಂಗ್ಯಾಕೆ ಬಯಸಿದಿ 27 ಕಲ್ಲಾದಹಲ್ಯೆಯನು ಕಡು ಚೆಲ್ವೆಯನು ಮಾಡಿ ಎಲ್ಲಿ ಮಲಗಿದ್ದ ಮುಚುಕುಂದ ಮುಚುಕಂದನ ಗುಹೆ- ಕೈವಲ್ಯ ಕೊಡಹೋದ್ಯೊ 28 ಮಗ್ಗವನೆ ಹಾಕಿ ಮಾರುಬಟ್ಟೆ ನೇದಿಲ್ಲ ರೊಕ್ಕವನೆ ಕೊಟ್ಟು ತರಲಿಲ್ಲ ತರಲಿಲ್ಲ ದ್ರೌಪದಿಗೆ
--------------
ಹರಪನಹಳ್ಳಿಭೀಮವ್ವ
ಕರಿಮುಖದ ಗಣಪತಿಯ ಚರಣಕ್ವಂದನೆ ಮಾಡಿ ಶಾರದೆಗೆ ಶಿರಬಾಗಿ ಬೇಡಿಕೊಂಬುವೆ ನಾನು ಒಲಿದೆನಗೆ ವರವ ಕೊಡುಯೆಂದು 1 ಭವ ನಾರಂದ ಸುಜನರ್ವಂದಿತ ವಾಯು ಮುದದಿಂದ ಮುದ್ದು ಮಾಲಕ್ಷ್ಮಿ ನಾರಾಯಣರ ಅಂಬುಜ ಪಾದಕ್ಕೆರಗಿ ನಮೋಯೆಂಬೆ 2 ಪದುಮನಾಭ ಹರಿಗೆ ನಿಜ ಭಕ್ತರಾದಂಥ ಬುಧ ಬೃಹಸ್ಪತಿಗಳ ಕಥೆಯ ಪೇಳುವೆ ನಾನು ಮುದದಿಂದ ಕೇಳಿ ಜನರೆಲ್ಲ3 ಇರುತಿದ್ದ ಬಡವ ಬ್ರಾಹ್ಮಣ ಒಂದು ಪಟ್ಟಣದಿ ಮಡದಿ ಮಕ್ಕಳು ನಾಲ್ಕು ಮಂದಿ ಸುತರು ಸೊಸೆಯರೊಡಗೂಡಿಕೊಂಡು ಸುಖದಿಂದ 4 ಒಬ್ಬೊಬ್ಬ ಸುತಗಿಬ್ಬಿಬ್ಬರು ಗಂಡಸು ಮಕ್ಕಳು ವಿಧ್ಯುಕ್ತದಿಂದ ಜಾವಳ ಜುಟ್ಟು ಉಪನಯನ ಶುದ್ಧಾತ್ಮರಾಗಿ ಇರುತಿಹರು 5 ಪ್ರಾತಃಕಾಲದೊಳೆದ್ದು ನಾಲ್ಕು ಮಂದಿ ಸುತರು ಗೋಪಾಳ ಜೋಳ ನಾಲ್ಕು ಸೇರು ಕಾಳು ತಂದ್ಹಾಕೋರು ಅರ್ಧಗ್ರಾಸವನು 6 ಮೂರು ಪಾವು ಹಿಟ್ಟು ಮುಂಜಾನೆಗೆ ಇಟ್ಟು ಗ್ರಾಸ ಮುದ್ದೆ ಅಂಬಲಿ ಕಾಲ ಕಳೆವೋರು 7 ಒಂದಾನೊಂದಿನದಲ್ಲಿ ಬಂದರಿಬ್ಬರು ದ್ವಿಜರು ಮಂದಿರದ ದ್ವಾರದಲಿ ನಿಂತು ಕೂಗುತಿರೆ ಬಂದಳೊಬ್ಬಿ ್ಹರಿಯ ಸೊಸೆ ತಾನು 8 ದಾರು ಬಂದವರು ನಿಮ್ಮ ನಾಮವೇನೆಂದೆನುತ ಬಾಗಿ ಶಿರಗಳನೆ ಚರಣಕ್ವಂದನೆ ಮಾಡಿ ಭಾಳ ಭಕ್ತಿಂದ ಕರೆದಳು 9 ದಾರಾದರೇನಮ್ಮ ಬಾಯಾರಿ ಬಳಲುತಲಿ ಮೂರು ನಿರಾಹಾರ ಮಾಡಿ ಬಂದೆವು ನಾವು ಆಹಾರ ನೀಡಿ ಕಳಿಸೆಂದ್ರು 10 ಭಿಕ್ಷಕೆ ಹೋದವರು ಈ ಕ್ಷಣದಿ ಬರುವೋರು ಅರೆಕ್ಷಣ ನೀವು ತಡೆದರೆ ಜೋಳದ ಭಕ್ಷ್ಯವನೆ ಮಾಡಿ ಬಡಿಸುವೆನು 11 ಹೊತ್ತು ಭಾಳಾಯಿತು ಹಸ್ತವು ನಮ್ಮೊ ್ಹಟ್ಟೆ ತುತ್ತನ್ನ ಹಾಕಿದರೆ ಈಗ ನಾವದನುಂಡು ತೃಪ್ತರಾಗ್ಹರಸಿ ನಡೆದೇವು 12 ಮಡಿವುಟ್ಟು ಮಾಡಿದೆನು ಮುಂಜಿಮನೆಗಳಿಗಡಿಗೆ ತಡೆಯದೆ ಸ್ನಾನಮಾಡಿ ಬನ್ನಿರೆಂದು ನುಡಿದಳು ಬ್ಯಾಗ ಪತಿವ್ರತೆ 13 ನಾಲ್ಕು ಭಕ್ಕರಿಯೊಳಗೆ ಎಂಟರ್ಧವನು ಮಾಡಿ ಎಂಟುಮಕ್ಕಳಿಗೆ ಬಡಿಸೋ ಗ್ರಾಸವನು ಸಂತೋಷದಿಂದ ಬಡಿಸುವೆನು 14 ಸ್ನಾನ ಸಂಧ್ಯಾನವ ಮಾಡಿ ಬಂದೇವೆನಲು ತಾನು ಎಡೆಮಾಡಿ ಎರಡೆರಡು ಭಕ್ಕರಿಯ ನೀಡಿದಳು ಭಾಳ ಭಕ್ತಿಂದೆ 15 ಬೆಣ್ಣೆ ಬೆಲ್ಲ ತುಪ್ಪ ಕರಣೆ ಕರಣೆ ಕೆನೆಮೊಸರು ನುಣ್ಣನೆ ತವ್ವೆ ಅರೆದಕೊಬ್ಬರಿ ಖಾರ ಉಣ್ಣಿರೆಂದ್ಹಾಕುತಿರಲಾಗ 16 ಸಡಗರದಲದನುಂಡು ಕುಡಿದು ಮ್ಯಾಲ್ ಮಜ್ಜಿಗೆಯ ಒಡೆದಡಿಕೆಯೆಲೆ ಕೊಟ್ಟು ಕೇಳುತ ನಿಮ್ಮ ನಡೆವೊ ನಾಮೇನು ಹೇಳೆಂದ್ಲು 17 ಇಂದುಸುತ ಸುರರ ಗುರುವೆಂದು ಪೇಳುವರ್ ನಮಗೆ ಬಂದೆವು ನಾವು ಬುಧ ಬೃಹಸ್ಪತಿಗಳು ಆ- ನಂದವಾಯಿತು ನಮಗೆಂದ್ರು 18 ಅನ್ನ ಬೇಕಾದರೆ ಅಡಿಗೆ ಒಲೆಗೋಡೆಯಲಿ ನ- ಮ್ಮನ್ನ ಬರೆದು ಪೂಜೆ ಮಾಡಿದರೀಗ ಅನ್ನವನು ನಾವು ಕೊಡುವೆವು 19 ಭಾಗ್ಯ ಬೇಕಾದರೆ ಬರೆದು ಪೆಟ್ಟಿಗೆಮ್ಯಾಲೆ ಭಾಳ ಭಕ್ತಿಂದ ಪೂಜೆ ಮಾಡಿದರೆ ಭಾಗ್ಯ ಕೊಡುವೆವೆಂದ್ಹೇಳಿ ನಡೆದರು 20 ಸುಣ್ಣಸಾರಣೆಮಾಡಿ ಬಣ್ಣ ಚಿತ್ರವ ಬರೆದು ಚೆನ್ನಾಗಿ ಬರೆದು ಬುಧ ಬೃಹಸ್ಪತಿಗಳನೆ ಮನ್ನಿಸಿ ಪೂಜಿಸಿದಳಾಗ 21 ಹಚ್ಚಿಟ್ಟು ಗಂಧಾಕ್ಷತೆ ಪುಷ್ಪಗಳ ಉತ್ರಾಣಿ ಅಕ್ಕಿ ಮಂತ್ರಾಕ್ಷತೆ ಮಾಡಿ ಭಕ್ತಿಂದೆ ಪೂಜಿಸಿದಳಾಗ 22 ಗೋಪಾಳಕ್ಕ್ಹೋದಲ್ಲಿ ಗೋಧಿ ಅಕ್ಕಿ ಬ್ಯಾಳೆ ಹಾಕುವರು ನಾಲ್ಕು ಬೀದಿಯಲಿ ಅದು ಗಂಟು ತಾವ್‍ಕಟ್ಟಿ ಹೊತ್ತರ್ಹೆಗಲಲ್ಲಿ 23 ಹಿಡಿಜೋಳ ಬೇಡಿದರೆ ಪಡಿಜೋಳ ಹಾಕುವರು ಬಡವರು ನೀವು ಬನ್ನಿರೆಂದು ಕರೆದು ಹಿಡಿಹಿಡಿ ರೊಕ್ಕ ಕೊಡುವೋರು 24 ಭರದಿಂದ ಬಂದಾಗ ಸುರುವಿದರು ಧಾನ್ಯವನು ಬರೆದಂಥ ಗೊಂಬೆ ನೋಡಿ ಕೇಳುತ ಅದರ ವಿವರವನು ಹೇಳಬೇಕೆನುತ 25 ಇವರು ಬುಧ ಬೃಹಸ್ಪತಿಗಳೆಂಬೊ ದೇವತೆಗಳು ಇವರು ಬಂದೆನ್ನ ಮನೆಯಲ್ಲೂಟವನುಂಡು ಒಲಿದ್ವರವ ಕೊಟ್ಟು ನಡೆದರು26 ಇಂಥÀವರ ಪುಣ್ಯದಿಂದೀ ಧಾನ್ಯ ದೊರಕಿದವು ನಿ ರಂತರದಿ ನಮ್ಮ ಮನೆಯಲ್ಲಿಟ್ಟವರನು ಸಂತೋಷದಲಿ ಪೂಜಿಸುವಣೆಂದ್ರು 27 ಭಾಳ ಅನ್ನವ ಮಾಡು ಜೋಳ ಭಕ್ಕರಿ ಮಾಡು ಬ್ಯಾಳೆಯ ತವ್ವೆ ಬೆಲ್ಲ ಪಲ್ಯವು ಬೆಣ್ಣೆ ಮಾಡಿ ನೈವೇದ್ಯಕ್ಕಿಡುಯೆಂದ್ರು&ಟಿbs
--------------
ಹರಪನಹಳ್ಳಿಭೀಮವ್ವ
ಕರುಣದಿ ಕೊಡು ಕಾರ್ತಿಕೇಯಾ | ತವ | ಶಿರದ ಮೇಲಿಹ ಗಂಧ ಸಿಂಗಾರ ಹೂವಾ ಪ ದುರಿತ ಕೋಟಿಗಳನು ತರಿಯೇ | ಮಹಾ | ದುರುಳರುಪದ್ರದ ಗಿರಿಯನು ಮುರಿಯೇ ಪರಮ ಕುಲಿಶದಂತೆ ಇರುವಾ | ತವ | ಶಿರದ ಮೇಲಿರುವ ಸಂಪಿಗೆ ಹೂವ | ದೇವಾ 1 ಕೆಡುಕಿನ ತಾಮಸವಳಿದೂ | ತವ | ದೃಢಭಕ್ತಿ ಎನ್ನಯ ಮನದೊಳು ಮೊಳೆದೂದೃಢವಾಗಿ ನೆಲೆಸುವ ತೆರದೀ | ತವ | ಮುಡಿ ಮೇಲಿಹ ಮಲ್ಲಿಗೆಯನತಿ ಮುದದೀ2 ಆಶಾದಿಗಳ ಪರಿತ್ಯಜಿಪಾ | ತವ | ದಾಸರ ಚರಣಯುಗ್ಮಕೆ ನಮಸ್ಕರಿಪಾ | ಲೇಸಿನ ತಿಳಿ ಜನಿಸಲಿಕೇ ಪಾವಂ- ಜೇಶ ನೀ ಪೊತ್ತು ಕೊಂಡಿರುವ ಅಶೋಕೇ 3
--------------
ಬೆಳ್ಳೆ ದಾಸಪ್ಪಯ್ಯ
ಕರುಣಾಕರ ಭಕ್ತ ಪಾರಾಯಣ ಸತ್ಯನಾರಾಯಣ ಪ ಭಕ್ತಿ ಭಾವದೆ ನಿನ್ನ ಸೇರಿದೆನು ವ್ರತ ಮಾಡಿದೆನು ಸತ್ಯ ದೇವನೆ ಕೃಪೆ ತೋರುವುದು ವರ ನೀಡುವುದು ಸತ್ಯ ದೇವೇಶನೆÀ ಬೇಡುವೆನು ನುತಿ ಮಾಡುವೆನು 1 ಗಂಧ ಪುಷ್ಪಾಕ್ಷತೆ ದೀಪಗಳಿಂ ಪಂಚಫಲಂಗಳಿಂ ಇಂದಿರೇಶನೆ ನಿತ್ಯ ಭಾವಿಸಿದೆ ವಂದಾರು ಮಂದಾರ ಪಾಲಿಸೆನ್ನನು ಬೇಡಿಕೊಂಬೆನು 2 ಮೌನೀಶ ವಂದ್ಯನೆ ಸರ್ವೇಶನೆ ದೀನಪಾಲಕನೆ ಸುಜ್ಞಾನ ಭಾವಿಪುದು ನಿಜತೋರುವುದು ದಯೆಯಿಂದ ಬಹು ವಿಧದಿಂದ 3
--------------
ಬೇಟೆರಾಯ ದೀಕ್ಷಿತರು
ಕರುಣಾಸಾಗರ ಬಂದೆಯ ಸುದಿನವಿಂದಾನಂದ ಸಂದೋಹನೆವರ ಸಿಂಹಾಸನವೀವೆ ಮಂಡಿಸು ಪದಾಂಭೋಜಂಗಳಂ ಪಾಲಿಸೈಸುರಸಿಂಧೂದಕದಿಂದ ಮುಟ್ಟಿ ತೊಳೆವೆಂ ಹಸ್ತಂಗಳಂ ನೀಡಬೇಕರವಿಂದಾಕ್ಷನೆ ತೋಯವಘ್ರ್ಯವಿದಕೋ ಶ್ರೀ ವೆಂಕಟಾದ್ರೀಶನೇ 1ಮೂರಾವರ್ತಿಯಲಾಚಮಾನಕಿದಕೋ ಕ್ಷೀರಂ ಜಗನ್ನಾಥನೇಸ್ಮೇರಾಸ್ಯಾಂಘ್ರಿ ಕರಂಗಳನ್ನೊರಸುವೆಂ ದಿವ್ಯಂಬರ ಕ್ಷೌಮದಿಂದಾರಿದ್ರ್ಯಾರ್ತಿನಿವಾರಣಾರ್ಥಕೊಲವಿಂ ಮಧ್ವಾಜ್ಯದಧ್ಯಾದಿುಂಪಾರಾವಾರಶಯನ ನಿನ್ನ ಭಜಿಪೆಂ ಶ್ರೀ ವೆಂಕಟಾದ್ರೀಶನೇ 2ಮಧುಪರ್ಕಂ ಮಧುಸೂದನಂಗೆ ನಿನಗೈ ಮತ್ತಾಚಮನೋದಕಂಬುಧರಿಂ ಪೂಜಿಪ ಪಾದಪದ್ಮಯುಗಳಕ್ಕೀ ಪಾದುಕಾಯುಗ್ಮಮಂವಿಧಿುಂದಿತ್ತೆನು ಮೆಟ್ಟಿ ದೇವ ಬಿಜಯಂಗೈ ಮಜ್ಜನಸ್ಥಾನಕಂಸುಧೆಯಂ ನಿರ್ಜರರಿಂಗೆ ಕೊಟ್ಟ ವಿಭುವೇ ಶ್ರೀ ವೆಂಕಟಾದ್ರೀಶನೇ 3ಸ್ನಾನಂ ಶುದ್ಧಜಲಂಗಳಿಂ ದಧಿಮದುಕ್ಷೀರಾಜ್ಯದಿಂ ಶರ್ಕರಾಸ್ನಾನಂ ಪೌರುಷಸೂಕ್ತ ಮಂತ್ರವಿಧಿುಂ ಸ್ನಾನಂ ರಮಾಸೂಕ್ತದಿಂಸ್ನಾನಂ ಸಾಗರ ನಾಲ್ಕರಿಂ ಶ್ರುತಿಗಳಿಂ ವಸ್ತ್ರದ್ವಯಂ ಪಾದುಕಾಶ್ರೀನಾಥಂಗುಪವೀತಯುಗ್ಮವಿದಕೋ ಶ್ರೀ ವೆಂಕಟಾದ್ರೀಶನೇ 4ಶ್ರೀಗಂಧಾಗುರು ಲೇಪನಂ ಮೃಗಮದಂ ಯೋಗೀಂದ್ರ ವಂದ್ಯಾಂಘ್ರಿಯೇಭೋಗದ್ರವ್ಯವಿದೀಗ ಭೂಷಣಚಯಂ ಕಂಠಾಂಗುಲೀಶ್ರೋತ್ರಕುಂಶ್ರೀ ಗೌರೀಪ್ರಿಯಮಿತ್ರ ದಿವ್ಯ ಮಕುಟಂ ಪುಷ್ಪಂಗಳಿಂ ಪೂಜಿಪೆಂಬೇಗಾನಂದವನಿತ್ತು ನಮ್ಮ ಸಲಹೈ ಶ್ರೀ ವೆಂಕಟಾದ್ರೀಶನೇ 5ಓಂ ಬಲಭದ್ರಪ್ರಿಯಾನುಜಾಯ ನಮಃ
--------------
ತಿಮ್ಮಪ್ಪದಾಸರು
ಕರುಣಿಸಿಯಭಯವನು ಕೊಟ್ಟು ಕಾಯುವೆನಿರತಂ ಕರಕಮಲವದಯಮಾಡೈ ಅರಿಸಿನ ಹಚ್ಚುವೆನು ಮುದದಿ ಅರಸ ನಿನಗೆ ನಾಂ 1 ಪಂಕಜರಿಪು ನಿಭವಕ್ತ್ರನೆ ಪಂಕಜ ಸೂರ್ಯನೆ ಕುಂಕುಮ ಹಚ್ಚುವೆ ನಿನಗೆ ಕೊಡು ನಡು ಪಣೆಯಂ 2 ಭವ ತ್ಕಂಧರವ ನೀಡು ಪರಿಮಳ ಗಂಧವ ಹಚ್ಚುವೆನು ನಾನು ಕಮಲದಳಾಕ್ಷ 3 ನಿರತವು ಮನ್ಮಾನಸ ಪಂ ಕರುಹದಿ ಸೇವಿಸುವೆ ನಿನ್ನ ಕರುಣಾನಿಧಿಯೆ ಸರವನು ಕಂಧರದಿ ಧರಿಸುವೆ ಜಗನ್ನಾಥಾ 4 ನಾಮಾಡಿದ ತಪ್ಪುಗಳಂ ನೀ ಮನದಲಿ ತರದೆ ಕ್ಷಮಿಸುವದು ಪ್ರಾಣೇಶಾ ಪ್ರೇಮದಿ ವೀಳ್ಯವ ಶ್ರೀಗುರು ರಾಮವಿಠಲ ಕೊಡುವೆ ನಿನಗೆ ರಮ್ಯಚರಿತ್ರ 5
--------------
ಗುರುರಾಮವಿಠಲ
ಕವಿ ಮಾತುಗಳ ಕೇಳಿ ಕೆಟ್ಹೋಗಬೇಡಿರಿಕವಿ ನಾಶ ತನವೆಂದು ಹೇಳಲಿಲ್ಲಶಿವನ ತಿಳಿದು ನಿಮ್ಮಶಿವನೆಂದು ಕಂಡರೆ ಸಾಕ್ಷಾತ್ ಬ್ರಹ್ಮನೆ ನೀವೆಯೆಲ್ಲಾ ಪ ಸೋಗೆಗಣ್ಣುಗಳೆಂದು ಹೇಳಿದನಲ್ಲವೇಸೋಗೆಗಣ್ಣಿನ ಸೀಳ ಹೇಳಲಿಲ್ಲಮೂಗನು ಸಂಪಿಗೆ ನನೆಯೆಂದನಲ್ಲವೆಮೂಗಿನ ಸಿಂಬಳ ಹೇಳಲಿಲ್ಲ 1 ಬಾಯಿ ಕರ್ಪೂರದ ಕರಡಿಗೆ ಎಂದನಲ್ಲವೆಬಾಯೊಳಗಣ ಲೊಟ್ಟೆ ಹೇಳಲಿಲ್ಲಕಾಯವು ಕನಕದ ಬಾಳ ಎಂದನಲ್ಲವೆಕಾಯ ದುರ್ಗಂಧವ ಹೇಳಲಿಲ್ಲ 2 ಮಂದಗಮನೆ ಎಂದು ನಡೆಗಂದನಲ್ಲವೆಹಂದಿದುಟಿಯನದ ಹೇಳಲಿಲ್ಲಸುಂದರ ಸರ್ಪವೇಣಿ ಎಂದನಲ್ಲವೆಸಂದಿ ಸಂದಿಯ ಹೇನ ಹೇಳಲಿಲ್ಲ3 ನರದೇಹವನು ಕೊಂಡಾಡಿದನಲ್ಲವೆನರದೇಹ ನರಕವೆಂದ್ಹೇಳಲಿಲ್ಲಗುರು ಚಿದಾನಂದ ಸದ್ಗುರುನಾಥನ ನಂಬಿಶರೀರವ ಕಳೆ ಎಂದು ಹೇಳಲಿಲ್ಲ4
--------------
ಚಿದಾನಂದ ಅವಧೂತರು
ಕವಿಗಳು ಪೊಗಳುವ ವಿವರವ ಪೇಳುವೆ ಪ ಅವನಿಯೊಳ್ ಕೃಷ್ಣನು ಅವತರಿಸುವ ಕಥೆ ಅ.ಪ ಸುರರೊಡೆಯನ ದಿವ್ಯ ತರುವನು ಬಲದಲಿ ಸರಸಿಜನಾಭನು ಧರೆಗೆ ತರುವನೆಂದು ಅರಿಯುತ ವರ ಸುಮನಸರೆಲ್ಲ ಕರಗಳಿಂದಲಿ ಸುಮ ಸುರಿದರೆಂದೆನುತಲಿ 1 ಅಂಬುಜನಾಭನು ಶಿಶುವಾಗಿರಲವನ ಸಂಭ್ರಮದಲಿ ತನ್ನ ವಶಗೊಳುವುದಕೆ ತುಂಬುರು ಗಂಧರ್ವರು ಪಾಡಿದರು ರಂಭೆ ಊರ್ವಶಿಯರು ನೃತ್ಯ ಮಾಡಿದರೆಂದು2 ವಾಸುದೇವನು ತನ್ನ ಶಿಶುವೆಂದರಿಯುತ ವಸುದೇವನ ಬಲು ಆಸೆಗೆ ನಗುತಲಿ ವಸುಗಳು ದೇವರು ವಾಸುದೇವನು ತಮ್ಮ ಕೂಸು ಏಕಲ್ಲವೆಂದು ಹರುಷ ಪೊಂದಿದರೆಂದು 3 ಇಂದುವದನನ ಅಂದವ ನೋಡುತ ಚಂದ್ರಕಲೆಯರ್ಧ ಕುಂದಿದನೆನ್ನುತ ಸುಂದರಕೃಷ್ಣನು ಅಂದು ತನ್ನಯ ಕುಲ ದಿಂದ ಬಂದಿರೆ ಬಲು ನಂದ ಪೊಂದಿದನೆಂದು 4 ಪನ್ನಗಶಯನನು ಸಣ್ಣ ಕೂಸಾಗಿರೆ ತನ್ನ ವಿಭುತನಕೆ ಇನ್ನು ಕುಂದಿಲ್ಲವೆಂದು ಉನ್ನತ ಗಗನ ಪ್ರಸನ್ನನಾಗಿ ದಿವ್ಯ ಸಣ್ಣ ತಾರೆಗಳಿಂದ ಬೆಡಗು ತೋರಿದ ಕಥೆ 5
--------------
ವಿದ್ಯಾಪ್ರಸನ್ನತೀರ್ಥರು
ಕಾಂತೆಯರುತುಂಬಿದ ನಗರಿಯಲಿ ಎಂಥ ಸೊಗಸಮ್ಮ ಬಾಹೋದೆಂಥ ಸೊಗಸಮ್ಮ ಪ. ಗಂಧ ಕಸ್ತೂರಿ ಧರಿಸಿರಾಯರು ಪರಿಮಳ ತುಂಬಿದ ನಗರಿಯಲಿ ಎನುತ 1 ರಾಶಿ ಮಲ್ಲಿಗೆ ಸಂಪಿಗೆ ಮುಡಿದು ಸೂಸಿದ ನಗರಿಯಲಿ ಎನುತ 2 ಮಿತಿ ಇಲ್ಲದೆ ಹಗಲು ಬತ್ತಿ ಶತ ಕೋಟಿ ದೀವಟಿಗಿ ದೀಪ ಪ್ರತಿಯಿಲ್ಲ ತಾಯಿ 3 ಹಾದಿ ಬೀದಿ ದ್ವಾರ ಜಗಲಿ ಸಾದಿನಥಳಿ ಕೊಟ್ಟಾವಮ್ಮ ಮಾಧವ ಬರಲಿಕ್ಕೆ ಎನುತ 4 ವಿಸ್ತರಿಸಿದ ರಂಗವಲ್ಲಿ ಜತ್ತಾಗಿ ತೋರುವವು ಎನುತ 5 ಕೇರಿ ಕೇರಿ ನಾರಿಯರೆಲ್ಲ ಸೀರೆ ಕುಪ್ಪಸ ವಸ್ತಗಳಿಟ್ಟು ವೀರರ ನೋಡಲು ಎನುತ 6 ಎತ್ತೆತ್ತ ನೋಡಿದರೂ ಜನರು ಮುತ್ತುರತ್ನದ ವಸ್ತಗಳಿಟ್ಟು ಹತ್ತಿಗೋಪುರ ಅಟ್ಟಾಲಗಳ ಧಿಟ್ಟೆಯರು ನಿಂತಾರೆ ಎನುತ 7 ಝಲ್ಲೆ ಮುತ್ತಿನ ವಸ್ತಗಳಿಟ್ಟು ಅಲ್ಲೆಲ್ಲೆ ಉಪ್ಪರಿಗೆ ಏರಿ ಚಲ್ವರ ನೋಡಲು ಎನುತ 8 ಮಲ್ಲಿಗೆ ಸಂಪಿಗೆ ಫಲಗಳ ಹಿಡಿದು ಅಲ್ಲೇ ನಿಂತಾರೆ ಎನುತ 9 ಭೆಟ್ಟಿಯ ಸೌಭಾಗ್ಯ ನೋಡಿ ಎಷ್ಟು ಹರುಷ ಬಟ್ಟೇವೆಂದು ಧಿಟ್ಟೆಯರು ನಿಂತಾರೆ ಬೀದಿಲಿ10 ಶ್ರೀ ಲೋಲ ರಾಮೇಶನ ಭಕ್ತರು ವಾಲಗೈಸೋರಮ್ಮ ಎನುತ 11
--------------
ಗಲಗಲಿಅವ್ವನವರು
ಕಾಯೆ ಶ್ರೀ ಹರಿ ಜಾಯೆ ಸಜ್ಜನಪ್ರೀಯೆ ಸುರಮುನಿ ಗೇಯೆ ಪ ಕಾಯ ನಿನ್ನದುಕಾಯೇ ಕರುಣಾಬ್ಧಿಯೇಅ.ಪ. ಪದ್ಮ ಮಂದಿರೆ ಪದ್ಮ ಗಂಧಿನಿಪದ್ಮಕುಚ ರಾಣಿ ಪದ್ಮಶರ ಮಾತೇಪದ್ಮ ಬಾಂಧವೆ ಪದ್ಮರಿಪು ತಾಯೆ ||ಪದ್ಮಿ ಪದ್ಮಾಕ್ಷಿ ಪದ್ಮಾಭಿನ್ನ ಪದ್ಮಪಾದ ಹೃ-ತ್ಪದ್ಮದೊಳಗಿಟ್ಟ ಮುದ್ದು ಮಹಾ ಲಕುಮೀ 1 ವೃಷ್ಟಿ ಗರೆಯಾಲುಈ ಕೊಲ್ಲೂರೊಳು ನೀ ಕರುಣದಿ ನಿಂದೀ 2 ನಿನ್ನ ಪಾದಾಬ್ಜವನ್ನು ಅನುದಿನಸನ್ನುತಿಸುವೆ ಚೆನ್ನ ವಿಜಯ ರಾ-ಯನ್ನ ಮನೆ ಮುಂದೆ ಕುನ್ನಿಯನ್ನೇ ಮಾಡಿ ಎನ್ನ ಪುಟ್ಟಿಪುದು ||ಪನ್ನಗವೇಣಿ ಘನ್ನ ದುರಿತಾಬ್ಧಿಯನ್ನೆ ದಾಟಿಸಿನಿನ್ನ ಆಳ್ವ ಮೋಹನ ವಿಠ್ಠಲ ರಾಯನ್ನ ಎನಗೆ ತೋರೆ 3
--------------
ಮೋಹನದಾಸರು
ಕಾವೇರಿ ಕಲುಪಾಪಹಾರಿ ಪಾವನ ಶರೀರೆ ಶುಭತೋಷಕಾರಿ ಪ ವಾಸುದೇವ ರಂಗೇಶನಾಲಯಕೆ ನೀ ನಾವರಣಳಾಗಿಪ್ಪೆ ವಿರಜೆಯಂತೇ ದೇವ ಋಷಿ ಗಂಧರ್ವ ಪಿತೃಪ ನರವರರಿಂದ ಸೇವನೀಯಳಾಗಿ ಸರ್ವಾರ್ಥ ಪೂರೈಪೆ 1 ಜಲಚರಾನ್ವೇಷಣ ಲುಬ್ಧ ಸಾಲಿಗ್ರಾಮ ತುಲಸಿ ವೃಕ್ಷವನೆ ಕೊಡಿಸಿದ ಮಾತ್ರದೀ ಕಲುಷರಾಶಿಗಳೆಲ್ಲ ಕಳೆದು ಮುಕ್ತಿಯನಿತ್ತೆ ಸಲಿಲಮಂದಿರೆ ನಿನ್ನ ಕರುಣಕೇನೆಂಬೆ 2 ರವಿ ತುಲಾರಾಶಿಗೈದಿದ ಸಮಯದೊಳಗೊಂದು ಮಜ್ಜನ ಗೈವ ಮಾನವರಿಗೆ ಪವನಾಂತರಾತ್ಮಕನ ಪಾದಕಮಲವ ತೋರಿ ಭವಜ ರೋಗವ ಕಳೆದು ಭಾಗ್ಯವಂತರ ಮಾಳ್ಪೆ 3 ಶ್ರೀ ಪವನ ಶಿವರಿಂದ ತಾ ಪೂಜೆಗೊಳುತ ಬಹು ಪರ ಮನು ವ್ಯಾಪಿಸಿಹ ನಿನ್ನೊಳದ್ಯಾಪಿ ಸ್ವರ್ಗಸ್ಥ ಜನ ರೀ ಪೊಡವಿಯೊಳು ತವ ಸಮೀಪದಲಿ ಜನಿಸುವರು 4 ಮೂಢಮತಿ ನಾನು ಕೊಂಡಾಡ ಬಲ್ಲೆನೆ ನಿನ್ನ ಬೇಡಿಕೊಂಡೆನು ಹೃದಯ ನೀಡದೊಳಗೇ ಗೂಡ ಪದ ಶಯನ ಜಗನ್ನಾಥ ವಿಠ್ಠಲನಂಘ್ರಿ ನೋಡುವ ಸೌಭಾಗ್ಯ ದಯ ಮಾಡು ಪ್ರತಿದಿನದಲ್ಲಿ ಬ 5
--------------
ಜಗನ್ನಾಥದಾಸರು
ಕುಣಿ ಕುಣಿಯಲೋ ಬಾಲಗೋಪಾಲ ಪ ಗೋಪಾಲ ನೀರದ ನೀರ ಅ.ಪ ಯಮುನಾ ತೀರದಿ ಹಿಮಕಿರಣನು ತಾ ಮಮತೆಯ ತೋರಲು ಬೆಳಗುತಿಹ ಘಮಘಮಿಸುವ ಈ ಸುಮಗಳು ಸೂಸಿರೆ ಪ್ರಮದೆಯರೆಲ್ಲರ ಪ್ರೇಮಾಂಗಣದಲಿ 1 ಗಂಧವ ಮಾರುತ ಬೀರುತಲಿರುವನು ಇಂದಿರೆ ಕೊಳಲಿನ ರೂಪದಲಿ ಚಂದದಿ ನಾದವ ತುಂಬಲು ಪರಮಾ ನಂದವು ಮಾನಸ ಮಂದಿರದಲಿ ನೀ 2 ಕಾಯವು ರೋಮಾಂಚಿತವಾಯ್ತೊ ಮಾಯಾವಾದವೊ ಮೋಹಗಳು ತಾಯಿ ಮಡಿಲು ಸೇರಿದ ಶಿಶುವಂದದಿ ಹಾಯವೆನಿಸಿತೊ ಜೀವನ ಯಾತ್ರೆಯು 3 ಕಾಮ ಕ್ರೋಧ ಲೋಭ ಮೋಹ ಮದ ಮತ್ಸರ ಬಿಡಿಸೊ ಸ್ವಾಮಿ ನಿನ್ನಯ ಪಾದಯುಗಳವೆ ಕ್ಷೇಮವೆನ್ನಿಸೊ ಸಾರಾಸಾರ ವಿವೇಕದಿ ಮೋಕ್ಷದ ಕೋರಿಕೆ ಪುಟ್ಟಿಸೊ ಭವ ಪಾರ ಸೇರಿಸೋ 4 ಸಾರದ ಕರುಣಕೆ ಕಾರಣ ಬಿಂಬದ ಮೂರುತಿ ದರುಶನವು ಭಾರತಿ ರಮಣನ ಮಂಗಳಶಾಸ್ತ್ರ ವಿಚಾರವೆ ಕಾರಣವು ಭಕುತ ಜನ ಪ್ರಸನ್ನ ಲಕುಮಿರಮಣ ಎನ್ನು ತಕಿಟ ತಕಿಟ ಎಂದು 5
--------------
ವಿದ್ಯಾಪ್ರಸನ್ನತೀರ್ಥರು
ಕುಮಾರ ಗುಹಗೆ ಎಸಗೀ ಪ ವಾಹನನಿಗೆ ಧೀರಗೆ ಜಯವೆಂದು ಆರತಿ ಅ.ಪ ವೇದೋಕ್ತ ಮಂತ್ರದಿಂದ ಶರ್ಕರ ಮೊದ-ಲಾದ ದ್ರವ್ಯದಿಂದ ಸಾಧು ವಂದಿತನಿಗೆ ಭೂದೇವರಭಿಷೇಕ ಸಾದರದಲಿ ಮಾಡಿ ಮೋದದಿ ಜಯವೆಂದು ||ಆರತಿ|| 1 ಕಲಶೋದಕ ಮಂತ್ರಿಸಿ ಭೂಸುರರೆಲ್ಲ ನಲವಿಂದಲಭಿಷೇಕಿಸಿ ತಲೆಗೆ ಗಂಧಾಕ್ಷತೆ ತುಲಸಿ ಪತ್ರವು ವುಷ್ಪಗಳ ಮಾಲೆ ಇರಿಸುತ್ತ ನಲವಿಂದೆ ಜಯವೆಂದು ||ಆರತಿ|| 2 ಓಗರ ಜಂ- ಬೂಫಲ ಭಕ್ಷ್ಯವ ಶ್ರೀಪತಿ ಸಖಗೆ ಸ-ಮಾರ್ಪಿಸಿ ಜಯವೆಂದು ||ಆರತಿ|| 3 ಮೂರು ಪ್ರದಕ್ಷಿಣೆಯ ಭಕ್ತಿಯೊಳ್ ನಮ-ಸ್ಕಾರವ ಪ್ರಾರ್ಥನೆಯ ಮಾರಾರಿಸುತಗೆ ಅ-ಪಾರ ಮಹಿಮನಿಗೆ ಹಾರುವರೆಸೆಗುತೊ-ಯ್ಯಾರದಿ ಜಯವೆಂದು ||ಆರತಿ|| 4 ಮಂಗಳ ಶರಜನಿಗೇ ಗುಹಗೆ ಜಯ ಮಂಗಲ ಸ್ಕಂಧನಿಗೇ ಮಂಗಲ ಪಾವಂಜೆ ವಾಸ ಷಡ್ಶಿರನಿಗೆ ಮಂಗಲದಾಸರ ಕಾವಗೆ ಜಯವೆಂದು ||ಆರತಿ|| 5
--------------
ಬೆಳ್ಳೆ ದಾಸಪ್ಪಯ್ಯ