ಒಟ್ಟು 248 ಕಡೆಗಳಲ್ಲಿ , 49 ದಾಸರು , 186 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬ್ರಹ್ಮಾಂಡನಾಯಕನ ಪ ಕೆಂಜೆಯ ಮೇಲÉೂಪ್ಪುವ ಶಶಿ ಹಸ್ತದ ಸದ್ಯೋಜಾತ ಸ್ವಯುಂಭುವ 1 ಬೆರಳುಕದೊಳಕ್ಷಮಾಲೆಯ ವಾಮ ದೇವನ2 ಭ್ರೂಕುಟಿ ಮುಖದ ಭಯವರದ ಜಪಮಾಲೆ ಪಾಶಾಂಕುಶ ಸರ್ಪಾಭರಣದ ಘೋರನ 3 ಉಗ್ರಾಸನ ಉರಿಗಣ್ಣಿಂದು ಮೌಳಿಯ ತುತ್ಪುರುಷನ 4 ಖಡ್ವಾಂಗ ಢಮರುಗ ಕರದ ಕಪಾಲೇಂದು ಮೌಳಿಯ ಈಶಾನ್ಯನ 5 ಕಂಡೆನು ಉತ್ತರದೊಳ್ ವಾಮದೇವನ ಕಂಡೆನು 6 ಫಣಿ ಬಂಧಿವಿದ್ದ ಕೆಳದಿ ರಾಮೇಶನ 7
--------------
ಕವಿ ಪರಮದೇವದಾಸರು
ಭಾಗಣ್ಣಾ | ಗುರು ನಿನ್ನ ಪೊಗಳುವೆನಯ್ಯಾಕರುಣದಿ ಪಿಡಿಕೈಯ್ಯಾ | ಮುರಹರ ಕುವರಯ್ಯಾ ಪ ನಗಧರ ಮೊಮ್ಮಗ ಮಗನೀ ಯೆನ್ನನುಖಗವರ ವಹ ಪ್ರಿಯ ಪಾಲಿಸೊ ಜೀಯಾ ಅ.ಪ. ಜ್ಞಾನ ಸದ್ಭಕ್ತಿ ವಿರಕ್ತಿಯ ಮೂರ್ತೀ | ಸಾರುವೆ ತವಕೀರ್ತೀಗಾನ ಲೋಲನ ಸೇವಿಸೆ ಜಾಗರ್ತೀ | ಮಾಡುವೆ ಶರಣಾರ್ತೀ |ಘನ್ನ ಮಹಿಮ ಕಾರುಣ್ಯ ಮೂರುತೀಎನ್ನವ ಗುಣ ಮರೆದು ಸಲಹೊ ವಿಶ್ವಂಭರ 1 ಜಲಧಿ ವಿಹಾರನೆಸುಲಭದಿ ಸಾಧನ ಪಾಲಿಸೋ ಜೀಯ 2 ಅರುಹಲೇತಕೊ ಎನದುರಿತ ಸಮೂಹ | ನೀನಲ್ಲವೆ ದುರಿತಹರತುರು ತನ್ನ ಕರುವನೆ ಮರೆವುದೆ ಆಹಾ | ಪಾಲಿಸು ತವನೇಹಾಸಿರಿಪತಿ ಗುರುಗೋವಿಂದ ವಿಠಲನಚರಣಾಂಬುಜದೊಳು ನಿಲಿಸೆಲೊ ಮನವಾ 3
--------------
ಗುರುಗೋವಿಂದವಿಠಲರು
ಭೀಮಸೇನ ಭಾಮಿನಿಯಾದನು ಪ. ಭೀಮಸೇನ ಭಾಮಿನಿಯಾಗಲುಪ್ರೇಮದ ಸತಿಯ ಕಾಮಿಸಿದವನಝಾಮರಾತ್ರಿಗೆ ಸೀಳುವೆನೆನ್ನುತಸಾಮಜವರದನ ಪಾಡುತಲಿ ಅ.ಪ. ರಾಜಾಧಿರಾಜನು ಗಜಪುರದಲ್ಲಿಜೂಜಾಡಿ ತಮ್ಮ ರಾಜ್ಯವನು ಸೋತುವಿಜಯಮುಖ್ಯ ಅನುಜರೊಡಗೂಡಿಭುಜಂಗಶಾಯಿಯ ಭಜಿಸುತ್ತಸೂಜಿಮೊನೆಯಷ್ಟು ಗೋಜಿಲ್ಲದೆ ಬೇರೆವ್ಯಾಜದಿಂದ ರೂಪಮಾಜಿಕೊಂಡು ಪೋಗೆರಾಜ ಮತ್ಸ್ಯನೊಳು ಭೋಜನ ಮಾಡುತ್ತಪೂಜಿಸಿಕೊಂಬೋ ಸೋಜಿಗವೇನಿದು1 ಮಾನಿನಿ ದ್ರೌಪದಿ ಶ್ರೇಣಿಯೊಳು ಬರುತ ತ್ರಾಣಿ ವಿರಾಟನ ರಾಣಿಯು ಕಾಣುತಧ್ಯಾನಿಸಿ ಯಾರೆಂದು ಮನ್ನಿಸಿ ಕೇಳಲುಮುನ್ನಿನ ಸಂಗತಿ ಪೇಳಿದಳುಆಣಿಮುತ್ತಿನಂಥಾ ವಾಣಿಯ ಕೇಳಲುಕ್ಷೋಣಿಲಿ ನಿನ್ನಂಥ ಜಾಣೆಯ ಕಾಣೆನುಪ್ರಾಣ ನೀನೆನಗೆ ವೇಣಿ ಹಾಕೆನುತಪಾಣಿ ಪಿಡಿದು ಕರೆತಂದಳಾಗ2 ಈಶ ಕೇಳೊ ಪರದೇಶದಿಂದೊಬ್ಬಳುಕೇಶಕಟ್ಟುವಂಥ ವೇಷದಿ ಬಂದಳುಸಾಸಿರಮುಖದ ಶೇಷನೀರೂಪವಲೇಶವು ತಾ ವರ್ಣಿಸಲರಿಯನುವಾಸಮಾಡುವೆನು ಮಾಸಯೀರಾರುಗ್ರಾಸವ ಕೊಟ್ಟೆನ್ನ ಪೋಷಿಸೆಂದಾ ನುಡಿದೋಸನು ಪೇಳಲು ಮೀಸೆಯ ತಿರುವುತಮೀಸಲೆನಗೆಂದು ತೋಷಿಸಿದ 3 ನಾರಿ ಅಕ್ಕನಲ್ಲಿ ಸೇರಿಕೊಂಡಿಹಳುಮೋರೆಯ ನೋಡಲು ಭಾರಿ ಗುಣವಂತೆತೋರುತಲಿದೆ ಎನ್ನ ಸೇರಿದ ಮೇಲನು-ಚಾರಿ ಎನಿಸುವೆ ಮೀರಿದ್ದಕ್ಕೆವಾರೆಗಣ್ಣಿಲೊಂದು ಸಾರಿ ನೋಡ್ಯಾಳೆಂದುಬಾರಿ ಬಾರಿಯಾಕೆ ಮೋರೆ ನೋಡುತಿರೆನೀರೆ ಆ ಕ್ರೂರನ್ನ ಘೋರರೂಪಕಂಜಿಮೋರೆ ತೋರದೆ ಗಂಭೀರದಿಂದಿರೆ 4 ಅಕ್ಕನಿಗೆ ಬಾಚಿ ಹಿಕ್ಕುವ ಸೇವೆಗೆಪುಕ್ಕಟೆ ಅನ್ನಕೆ ಸಿಕ್ಕುವರೆ ನೀನುಚಿಕ್ಕಪ್ರಾಯಕೆನ್ನ ಪಕ್ಕಕ್ಕೆ ಬಂದರೆಸಕ್ಕರೆದುಟಿಸವಿ ದಕ್ಕಿಸುವೆರಕ್ಕಸ ನಿನಗೆ ದಕ್ಕುವಳೆ ನಾನುಮುಕ್ಕಣ್ಣನಾದರು ಲೆಕ್ಕಿಸದಾ ಪತಿಗಕ್ಕನೆ ಬಂದರೆ ತಿಕ್ಕಿ ನಿನ್ನ ಕಾಯದಿಕ್ಕು ದಿಕ್ಕಿಗೆ ಬಲಿಯಿಕ್ಕುವರೊ 5 ಭಂಡಕೀಚಕನುದ್ದಂಡತನ ಕೇಳುಮಂಡೆ ಹಿಕ್ಕುವಳೆಂದು ಕಂಡಕಂಡ ಬಳಿಪುಂಡು ಮಾಡುವನು ಗಂಡಕಂಡರೆ ತಲೆಚಂಡನಾಡುವನು ಖಂಡಿತದಿಮಂಡಲಾಧಿಪನ ಹೆಂಡತಿ ನೀನಮ್ಮಉಂಡಮನೆಗೆ ಹಗೆಗೊಂಡಳೆನ್ನದಿರುಲಂಡನಿಗೆ ಬುದ್ಧಿ ದಂಡಿಸಿ ಪೇಳದೆಹಿಂಡಿಕೊಳ್ಳದಿರು ದುಂಡುಮುಖ 6 ತರಳ ನಿನ್ನಯ ದುರುಳತನದಬೆರಳ ಸನ್ನೆಯು ಗರಳವಾಯಿತೆಸರಳ ಗುರಿಗೆ ಕೊರಳ ಕೊಡದೆಪುರದೊಳಿರದೆ ತೆರಳೊ ನೀಅರಳಮೊಗ್ಗೆಯ ಹೆರಳಿಗ್ಹಾ ಕುತಕುರುಳು ತಿದ್ದುವ ತರಳೆಯ ಕಂಡುಇರಳು ಹಗಲು ಬಾರಳು ಎನ್ನುತಮರುಳುಗೊಂಡರೆ ಬರುವಳೆ 7 ನಿಷ್ಠೆ ಸೈರಂಧ್ರಿಯ ದೃಷ್ಟಿಸಿ ನೋಡಲುನಷ್ಟವಾಗುವುದು ಅಷ್ಟೈಶ್ವರ್ಯವುಭ್ರಷ್ಟ ನಿನಗೆ ನಾನೆಷ್ಟು ಪೇಳಲಿನ್ನುಕಟ್ಟಕಡೆಗೆ ನೀನು ಕೆಟ್ಟಿಕಂಡ್ಯಾಸೃಷ್ಟಿಲಿ ನನ್ನಂಥ ಗಟ್ಟಿಗನ್ಯಾರಕ್ಕದುಷ್ಟರ ಎದೆಯ ಮೆಟ್ಟಿ ಸೀಳುವೆನುಗುಟ್ಟಿಂದ ನಾರಿಯ ಕೊಟ್ಟುಕಳುಹಲುಪಟ್ಟದ ರಾಣಿಯೊಳಿಟ್ಟುಕೊಂಬೆ 8 ಕರವ ಬಾಚಿದನುಬಾಚಿ ಹಿಕ್ಕುವಂಥ ಪ್ರಾಚೀನವೇನಿದುವಾಚನಾಡು ಮೀನಲೋಚನೆ ಎನ್ನಲುಆಚರಿಸಿ ಮುಂದುತೋಚದೆ ಖಳನವಿಚಾರಿಸಿಕೊ ಶ್ರೀಚಕ್ರಪಾಣಿ 9 ಪೊಡವಿಪತಿಗಳ ಮಡದಿ ನಾನಾಗಿಬಡತನವು ಬಂದೊಡಲಿಗಿಲ್ಲದೆನಾಡದೊರೆಗಳ ಬೇಡುವುದಾಯಿತುಮಾಡುವುದೇನೆಂದು ನುಡಿದಳುಕೇಡಿಗ ಕೀಚಕ ಮಾಡಿದ ಚೇಷ್ಟೆಗೆಕಡಲಶಾಯಿ ಕಾಪಾಡಿದ ಎನ್ನನುಆಡಲಂಜಿಕೇನು ಷಡುರಸಾನ್ನದಅಡುಗೆ ರುಚಿಯ ನೋಡುವರೇ 10 ನಡುಗುವೊ ಧ್ವನಿ ಬಿಡುತ ಕಣ್ಣೀರಿಂ-ದಾಡುವ ಮಾತನು ಬಾಡಿದ ಮುಖವನೋಡಿದನಾಕ್ಷಣ ತೊಡೆದು ನೇತ್ರವಬಿಡುಬಿಡು ದುಃಖ ಮಾಡದಿರುಪುಡುಕಿ ನಿನ್ನನು ಹಿಡಿದವನನ್ನು ಬಡಿದು ಯಮಗೆ ಕೊಡುವೆ ನೋಡೀಗತಡವ ಮಾಡದೆ ಗಾಢದಿ ಪೋಗು ನೀಮಾಡಿದ ಚಿಂತೆ ಕೈಗೊಡಿತೆಂದು 11 ಶಶಿಮುಖಿ ಕೇಸರಿ ಗÀಂಧವದಾಸಿಯರಿಂದ ಪೂಸಿಕೊಂಡುಹಾಸುಮಂಚದಲ್ಲಿ ಬೀಸಿ ಕೊಳುತಲಿಗಾಸಿ ಪಡುತಿರೆ ಆ ಸಮಯದಲಿಲೇಸಾಗಿ ನಿನ್ನಭಿಲಾಷೆ ಸಲ್ಲಿಸುವೆಈಸು ಸಂಶಯ ಬೇಡ ಭಾಷೆ ಕೊಟ್ಟೆ 12 ನಳಿನಮುಖಿಯು ಪೇಳಿದ ಮಾತನುಕೇಳಿ ಹರುಷವ ತಾಳಿದನಾಕ್ಷಣಖಳನು ಹೊನ್ನಿನ ಜಾಳಿಗೆಯ[ತೊಟ್ಟಿನ್ನುಳಿಯದಲೆ] ರತಿಕೇಳಿಗಿನ್ನುಕಾಳಗದ ಮನೆಯೊಳಗೆ ಬಾರೆಂದುಪೇಳಿದ ಸುಳುವು ಪೇಳಲು ಭೀಮಗೆಖಳನ ಕಾಯವ ಸೀಳುವವೇಳೆ ಬಂತೆನ್ನುತ ತೋಳ ಹೊಯಿದ 13 ನಾರಿಯಿನ್ಯಾವಾಗ ಬರುವಳೋಯೆಂದುದಾರಿಯ ನೋಡುವ ಚೋರ ಕೀಚಕನುತೋರಿದ ಠಾವಿಲಿ ಸೇರುವ ಬೇಗನೆಊರೊಳಗಾರು ಅರಿಯದಂತೆಕ್ರೂರನು ಮೋಹಿಪತೆರದಿ ಎನಗೆನಾರಿಯ ರೂಪ ಶೃಂಗರಿಸು ನೀನೆಂದುವಾರಿಜಮುಖಿಯ ಮೋರೆಯ ನೋಡಲುನೀರೆ ದ್ರೌಪದಿ ತಾ ನಾಚಿದಳು14 ಬಟ್ಟ ಮುಖಕೆ ತಾನಿಟ್ಟಳು ಸಾದಿನಬಟ್ಟು ಫಣೆಯಲಿ ಇಟ್ಟು ಕಣ್ಣಕಪ್ಪಪಟ್ಟ್ಟೆಪೀತಾಂಬರ ಉಟ್ಟುಕೋ ನೀನೆಂದುಪುಟ್ಟಾಣಿ ಕುಪ್ಪಸ ಕೊಟ್ಟಳಾಗಕಟ್ಟಾಣಿ ಮುತ್ತು ತಾಕಟ್ಟಿ ಕೊರಳಿಗೆಗಟ್ಟ್ಯಾಗಿ ಚಿನ್ನದಪಟ್ಟಿಯುಡುದಾರದಿಟ್ಟನ ಬೆರಳಿಗಿಟ್ಟಳು ಉಂಗುರವಿಟಪುರುಷರ ದೃಷ್ಟಿತಾಕುವಂತೆ15 ಮುತ್ತಿನ ಮೂಗುತಿ ಕೆತ್ತಿದ ವಾಲೆಯುಇತ್ತೆರÀ ಬುಗುಡಿಯು ನೆತ್ತೀಗರಳೆಲೆಚಿತ್ರದ ರಾಕಟೆ ಉತ್ತಮಕ್ಯಾದಿಗೆಒತ್ತೀಲಿ ಶ್ಯಾಮಂತಿಗ್ಹ್ಹೂವು ಗೊಂಡ್ಯಾಹಸ್ತದ ಕಡಗವು ಮತ್ತೆ ಚೂಡ್ಯ ವಂಕಿಮುತ್ತಿನ ಹಾರವು ರತ್ನದ ಪದಕವುಅರ್ತಿಲಿ ನಾರಿಯು ಕುತ್ತಿಗ್ಗ್ಯೆಹಾಕಲುಹಸ್ತಿನಿಯೋ ಈಕೆ ಚಿತ್ತಿನಿಯೊ16 ಮುಡಿಗೆ ಮಲ್ಲಿಗೆ ಮುಡಿಸಿ ಸುಗಂಧತೊಡೆದು ತಾಂಬೂಲ ಮಡಿಸಿಕೊಡುತಪ್ರೌಢನ ಸ್ತ್ರೀರೂಪ ನೋಡಲು ಖಳನುಕೊಡದೆ ಪ್ರಾಣವ ಬಿಡನೆಂದಳುಮಾಡಿದ್ಯೋಚನೆ ಕೈಗೂಡಿತು ಇಂದಿಗೆನೋಡು ಆ ಕೃಷ್ಣನು ಹೂಡಿದ ಆಟವಮಡದಿ ನೀನೆನ್ನ ಒಡನೆ ಬಾರೆಂದುನಡೆದ ಖಳನ ಬಿಡಾರಕೆ 17 ಇಂದುಮುಖಿ ಅರವಿಂದನಯನದ ಮಂದಗಮನೆಯು ಬಂದಳು ಎನ್ನುತನಂದನತನಯನ ಕಂದನ ಬಾಧೆಗೆಕಂದಿ ಕುಂದಿ ಬಹು ನೊಂದೆನೆಂದಹಿಂದಿನ ಸುಕೃತದಿಂದಲಿ ನಿನ್ನೊಳಾ-ನಂದವಾಗಿಹುದು ಇಂದಿಗೆ ಕೂಡಿತುಕುಂದದಾಭರಣ ತಂದೆ ನಾ ನಿನಗೆಚಂದದಿಂದಿಟ್ಟು ನೀನಂದವಾಗೆ18 ಗುಲ್ಲುಮಾಡದಿರೊ ಮೆಲ್ಲಗೆ ಮಾತಾಡೊವಲಭರ್ತಾಕಂಡರೆ ಹಲ್ಲು ಮುರಿವರೊಬಲ್ಲವ ನಿನಗೆ ಸಲ್ಲದು ಈ ಕಾರ್ಯಗೆಲ್ಲಲರಿಯೆ ನೀ ಕೊಲ್ಲಿಸಿಕೊಂಬೆಚೆಲ್ವೆ ಕೇಳು ನಿನ್ನ ಹುಲ್ಲೆಗಣ್ಣ ನೋಟಕೊಲ್ವಬಗೆ ಗೆಲ್ಲಲಾರೆನೆಂದುಗಲ್ಲವ ಮುದ್ದಿಟ್ಟು ಮೈಯೆಲ್ಲ ಹುಡುಕಲುಕಲ್ಲೆದೆಯಲ್ಲ್ಲಿರೆ ಖೂಳ ನೊಂದ 19 ನಾರಿಯೊ ನೀನೇನು ಮಾರಿಯೊ ಇನ್ನೊಂದುಬಾರಿ ನೀ ಎನಗೆ ಮೋರೆ ತೋರಿಸೆಂದಧೀರನ ಸಮೀಪಬಾರದೆ ಓಡುವದಾರಿಯ ನೋಡುತಿರಲಾಗಬಾರದಂಥಾ ಪರದಾರರ ಮೋಹಿಪಕ್ರೂರಗೆ ಈ ರೂಪ ಘೋರವಾಗಿಹುದುಸಾರದ ಮಾತಿದು ಯಾರಾದರೇನೀಗಮಾರನ ತಾಪವ ಪರಿಹರಿಸುವೆ 20 ಸಮೀರಜ ಗುದ್ದಲು ಕೀಚಕಬಿದ್ದನು ಭೂಮಿಲಿ ಗೆದ್ದೆನೆನುತ ಅನಿ-ರುದ್ಧನ ಸ್ಮರಿಸುತಲೆದ್ದ ಭೀಮ 21 ಕೆಟ್ಟ ಕೀಚಕ ತಾ ತೊಟ್ಟ ಛಲದಿಂದಬೆಟ್ಟದಂಥ ದೇಹ ಬಿಟ್ಟಿನ್ನವನಪಟ್ಟಾಗಿ ತೋರುವೆ ದೃಷ್ಟಿಸು ಎನ್ನಲುಭ್ರಷ್ಟನ ನೋಡುವುದೇನೆಂದಳುಕೊಟ್ಟ ಭಾಷೆಯು ಈಗ ಮುಟ್ಟಿತು ನಿನಗೆಕೃಷ್ಣನ ದಯದಿ ಕಷ್ಟವು ಹಿಂಗಿತುಪಟ್ಟಣಕೀಸುದ್ದಿ ಮುಟ್ಟದ ಮುಂಚೆಗುಟ್ಟಲಿ ಪೋಗುವ ಥಟ್ಟನೆಂದ 22 ಅರಸಿ ನಿನ್ನೊಳು ಸರಸ ಬೇಕೆಂದಪುರುಷನ ಜೀವ ಒರೆಸಿ ಕೊಂದೆನುಹರುಷದೀ ಪುರದರಸು ನಮ್ಮನುಇರಿಸಿಕೊಂಡೊಂದೊರುಷವಾಯಿತುಬೆರೆಸಿದ ಸ್ನೇಹಕ್ಕೆ ವಿರಸ ಬಂತೆಂದುಸರಸಿಜಾಕ್ಷಿಯು ಕರೆಸಿ ನಿನ್ನೊಳಗಿರಿಸದಿದ್ದರೆ ಹಯವದನನಸ್ಮರಿಸಿ ಗದೆಯನು ಧರಿಸುವೆ23
--------------
ವಾದಿರಾಜ
ಮಡದಿ ಭಾಗ್ಯ ಎಂಬುವಿಯಾಕೊ ರಂಗಯ್ಯನಿನ್ನ ಬಡಿವಾರವ ಹೇಳಿಕೊಂಬೆ ಸಾಕೊ ಕೃಷ್ಣಯ್ಯ ಪ. ಬಿಡು ಬಿಡು ಸಣ್ಣ ಮಾರಿಯನ್ನು ನೀ ಮಾಡಬ್ಯಾಡ ಬಡಿವಾರವ ಹೇಳಿಕೊಂಬುವುದೇನೊಕಡುಭಾಗ್ಯ ಪುರುಷನಾಗೊ ನೀನು ಎತ್ತಿಕೊಂಡ್ಹೋಗಿ ಮಡುವು ಸೇರಿಕೊಂಡಿ ಮತ್ತೇನೊ1 ದೊರೆತನ ಹೇಳಿಕೊಂಬೆ ಸಾಕೊ ರಂಗಯ್ಯನಿನ್ನ ಕರಕರ ಹಲ್ಲು ತಿಂಬೊ ಸಿಟ್ಟು ಕೃಷ್ಣಯ್ಯಬಿರುಗಣ್ಣು ಬಿಡವೋದ್ಯಾಕಿಷ್ಟು ರಂಗಯ್ಯನಿನ್ನ ಉರಿಮಾರಿಗೆ ಅಂಜೋರೆಲ್ಲೊ ಅಷ್ಟು 2 ಧರೆ ಮ್ಯಾಲೆ ರಾಜ್ಯ ಹ್ಯಾಂಗ ರಂಗಯ್ಯನಿನ್ನ ತಗಿ ತಗಿ ಬಲುಲೀಲಾ ಕೈಯ್ಯ ಕೃಷ್ಣಯ್ಯಸುಗುಣನೆಂತೆಂಬೊ ಮತಿಯಾದುದಕ್ಕೆಜನರು ನಗದೆ ಸೈ ಸೈ ಎಂದಾರು ಬರಿಯ ಕೃಷ್ಣಯ್ಯ3 ಧೀರ ಧನವಂತನಲ್ಲೊ ಸಾಕೊ ರಂಗಯ್ಯಆದರೆ ವನದಿನಾರು ವಸ್ತ್ರವನುಟ್ಟುಕೊಂಡಿ ಯಾಕೊ ಕೃಷ್ಣಯ್ಯಚೋರನಂತಾಡಿಕೊಂಬಿ ಸಾಕೊ ರಂಗಯ್ಯಇದ ಕೇಳಿದ ವೀರರೆಂಬವರು ನಗತಾರೊ ಕೃಷ್ಣಯ್ಯ 4 ವಸ್ತ್ರವಿಲ್ಲೆಂಬೊ ಎಚ್ಚರಿಕಿಲ್ಲೊ ರಂಗಯ್ಯತೇಜಿ ಹತ್ತೇನು ಎಂದು ಬರುವಿಯಲ್ಲೊ ಕೃಷ್ಣಯ್ಯಕತ್ತಿ ಕೈ ಶೂರನೆಂಬೊದೆಲ್ಲೊ ರಂಗಯ್ಯರಾಮೇಶ ನಿನ್ನ ಹತ್ತಿಲ್ಲಿದ್ದರೆಲ್ಲ ನಗುವರೊ ಕೃಷ್ಣಯ್ಯ5
--------------
ಗಲಗಲಿಅವ್ವನವರು
ಮದನ ಜನಕ ಪುರು| ಷೋತ್ತಮ ಪರತರ ಶೇಷಗಿರಿವಾಸಾ| ಪ ಕರುಣ ನೋಟದಿ ಸರ್ವಜೀವನುಳಹಿ ಕೊಂಡು| ಅಮೃತ ನುಣಿಸಿದನು| ಧರಣಿಯ ಮೋಹಿಸಿ ಬಿಗಿದಪ್ಪಿ ತರಳನು| ಹರಣಗಾಯ್ವ ದೇವ ಶರಣೆಂದೆನಲ್ಲದೆ| ತೆರೆಗಣ್ಣಿನವನೇಂದೆನೇ ಉಬ್ಬಿಗೊಂಡ| ಬಿರುಸು ಮೈಯ್ಯವನೆಂದನೇ ದಾಡಿಲಿಂದ| ಸುರಿವ ಜೊಲ್ಲುವನೆಂದನೇ ಬ್ರಹ್ಮಾದಿಗ| ಳರಸ ಉಗ್ರಾವ ತಾರೀ ಬಾಯೆಂದೆನಲ್ಲದೆ1 ಚಿಕ್ಕಮಾಟದಿ ಬಹು ಚಲುವ ಭೂಸುರರುಗೆ ಪುಕ್ಕಟೆ ಅರಸು ತನವ ಕೊಟ್ಟನು| ಸಿಕ್ಕಿದ ದೇವರ ಸೆರೆಬಿಡಿಸಿದ ಕುಂತೀ| ಸಾರಥಿ ಶರಣೆಂದೆನಲ್ಲದೇ| ಕಕ್ಕು ಲಾತೆವನೆಂದೆನೇ ಕೊಡಲಿಹೊತ್ತ| ನಿಕ್ಕರುಣಿಕನೆಂದನೇ ವಾನರ ಕೂಡಾ| ಹೊಕ್ಕವನನೆಂದೆನೇ ಕೌರವರ| ಸೊಕ್ಕು ಮುರಿದ ಸ್ವಾಮಿ ಬಾಯೆಂದೆನಲ್ಲದೆ2 ನೊಸಲಗಣ್ಣಿನವನ ಸಾಹ್ಯಕ ಶರವಾಗಿ| ಯಶೆವ ಮುಪ್ಪುರವನು ಧರೆಗಿಳುಹೀ| ವಸುಧಿಲಿ ಕಲಿಮಲ ಬಿಡಿಸಿ ಸಜ್ಜನರಪಾ| ಲಿಸಿದ ಮಹಿಪತಿ ಸುತಪ್ರಭು ಎಂದೆನಲ್ಲದೆ ಹುಸಿನುಡಿಯುವ ನೆಂದನೇ ಯವನರ| ದೆಸಿಗೆಡಿಸಿದ ನೆಂದನೇ ಆರಿಗೆ ನೆಲೆ| ತುಸುಗುಡದವ ನೆಂದನೇ ಜಗದೊಳು| ದಶ ಅವತಾರನೇ ನಮೋ ಎಂದೆ ನಲ್ಲದೆ.3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಮನರಥದಿಂದಲಿ ಘನರಥಕೀಗಲೆ ಬೇಗನೆ ಬಾರೊ ಪ. ಶ್ರೀ ಶ್ರೀನಿವಾಸ ಶ್ರೀ ವೆಂಕಟೇಶ ದನುಜದಲ್ಲಣ ಬೇಗ ಬಾರೋ ಕೃಷ್ಣ ಅ.ಪ. ಮುತ್ತಿನ ತೋರಣ ಸುತ್ತು ಛತ್ತರಿಗೆಯು ಬೇಗನೆ ಬಾರೊ ಸಿರಿ ಸಹ ಬೇಗನೆ ಬಾರೊ ಉತ್ತಮ ಭಕ್ತರು ಎತ್ತಿ ಕೈ ಕರೆವರು ಬೇಗನೆ ಬಾರೊ ನಿತ್ಯ ಮಂಗಳ ನಿನ್ನ ಉತ್ತಮ ರೂಪವ ಚಿತ್ತದಿ ತೋರುತ ಸತ್ಯ ಸಂಕಲ್ಪನೆ 1 ಗಡಗಡ ನಡೆಯುವ ಘನರಥದಲಿ ನಿಂದು ಬೇಗನೆ ಬಾರೊ ಎಡಬಲದಲಿ ಶ್ರೀ ಭೂಮಿಯರೊಡಗೂಡಿ ಬೇಗನೆ ಬಾರೊ ಧಡಧಡ ನಡೆಯುತ ದೈತ್ಯದಲ್ಲಣನೆ ಬೇಗನೆ ಬಾರೊ ನುಡಿಸುವ ವಾದ್ಯಗಳ್ ಪಿಡಿದಿಹ ಚಾಮರ ಕಡೆಗಣ್ಣೊಳು ಭಕ್ತರನೀಕ್ಷಿಸುತಲಿ 2 ನಾರದ ತುಂಬುರ ನಾಟ್ಯವನಾಡ್ವರು ಬೇಗನೆ ಬಾರೊ ಬಾರಿ ಬಾರಿಗೆ ಭಕ್ತರು ನುತಿಗೈವರು ಬೇಗನೆ ಬಾರೊ ವಾರಿಜಾಸನ ವಂದ್ಯ ಶ್ರೀನಿವಾಸ ದೊರಿ ಬೇಗನೆ ಬಾರೊ ತೋರುತ ರೂಪವ ಬೀರುತ ಕರುಣವ ಮಾರಜನಕ ಅಪಾರ ಮಹಿಮನೆ 3 ವಂದಿಸಿ ಕರೆವರೊ ನಿಂದು ಭಕ್ತರೆಲ್ಲ ಬೇಗನೆ ಬಾರೊ ಇಂದಿರೆಯರಸನೆ ಮಂದರೋದ್ಧರ ಕೃಷ್ಣ ಬೇಗನೆ ಬಾರೊ ಇಂದು ಸ್ಥಿರವಾರ ಸ್ಥಿರವಾಗಿ ಸಲಹಲು ಬೇಗನೆ ಬಾರೊ ಹಿಂದೆ ಮುಂದೆ ಭಕ್ತ ಸಂದಣಿಯೊಳು ಗುರು ವೃಂದ ಬಿಂಬ ಮನ್ಮನ ಬಿಂಬನೆ ರಥಕೆ 4 ಅಪಾರ ಕರುಣದಿ ಭಕ್ತರ ಪೊರೆಯಲು ಬೇಗನೆ ಬಾರೊ ಶ್ರೀಪತಿ ಶೇಷಾಚಲನಿಲಯನೆ ಹರಿ ಬೇಗನೆ ಬಾರೊ ಗೋಪಾಲಕೃಷ್ಣವಿಠ್ಠಲನೆ ತ್ವರಿತದಿ ಬೇಗನೆ ಬಾರೊ ಭೂಪರೈವರ ಕಾಯ್ದ ಗೋಪಕುವರ ಕೃಷ್ಣ ಈ ಪರಿಯಿಂದಲಿ ಭಕ್ತರ ಪೊರೆಯಲು 5
--------------
ಅಂಬಾಬಾಯಿ
ಮನ್ಮಥ ಚರಿತೆ340 ವರಸಿದ್ಧಿ ಗಣೀಶನ ಬಲಗೊಂಡೀ- ಶ್ವರನ ಪದಕೆ ನಮಿಸಿ | ಶಾರದೆಯ ಹರುಷದಿ ಸಂಸ್ಮರಿಸಿ | ಚ ತುರ್ಮುಖಗಳ ನೆರೆ ಭಜಿಸಿ ಹರುಷದಿ ನುತಿ ಮಾಡಿ | ಮಾಡಿ- ದ ಕೃತಿಯ ಸುಜನರು ನೋಡಿ 1 ಕಾಮಜನಕ ನಿಷ್ಕಾಮಜನಾಪ್ತ | ಸು- ಧಾಮನ ಸಖ ಹರಿಯು | ಮೂರು ಲೋಕಗಳಿಗೆ ತಾ ದೊರೆಯು | ಎನ್ನಹೃ- ತ್ಕಮಲದೊಳೀಪರಿಯು ಕಾಮನ ಸುಚರಿತೆಯು | ಸಜ್ಜನರು- ಇಹಪರ ಸದ್ಗತಿಯು | 2 ಪೃಥಿವಿಯೊಳಿಹ ಸುಜನರು ಕೇಳಿ | ಮ ನ್ಮಥ ಚರಿತ್ರೆಯನು | ಸಹ- ರ್ಷೋತ್ಕರದಿ ನೀವ್ಗಳಿದನು | ಭಜಿಸೆ ಸ- ದ್ಗತಿಗಳನು ಕೊಡುವನು | ಶತಮುಖವಂದಿತ ಸಿರಿದೇವಿಯರಸ- ನೊಲಿದು ಪಾಲಿಸುವನು | ಜನರ ಕೋ- ರಿದ ಕೋರಿಕೆಗಳನು | ತಾ ಕೊಟ್ಟವರನು ಪಾಲಿಪ ತಾನು 3 ತಾರಕಾಸುರನ ಭಯದಿಂದಲಿ ವೃಂ- ದಾರಕರೆಲ್ಲ ಕೂಡಿ | ಮನದಿ ಆಲೋಚನೆಗಳ ಮಾಡಿ | ವನಜ ಸಂ- ಭವನಡಿಗಳ ಬೇಡಿ | ಯಾರು ನಮಗೆ ದಿಕ್ಕೆಂದು ಕಳವಳಿಸಿ ನಾರಾಯಣನ ತ್ವರಿತದಲಿ | ಕಂಡು ವಂ- ದಿಸಿದರು ತವಕದಲಿ | 4 ವಾರಿಜಾಕ್ಷ ಪರುಷೋತ್ತಮ ವಿಶ್ವಾ- ಧಾರ ಪರಾತ್ಪರನೆ | ಅನಂತನವ- ತಾರ ಕೃಪಾಕರನೆ | ನಾವೆಲ್ಲ ಸೇರಿದೆವೈ ನಿನ್ನನೆ | ತಾರಕಾಸುರನ ಬಾಧೆ ಪರಿಹರಿಪ- ರ್ಯಾರನು ನಾವ್ ಕಾಣೆವೈಯ್ಯ | ಉ-- ದ್ಧಾರ ಮಾಳ್ಪನು ನೀನೆ | ಭಕ್ತಜನ- ವಾರಿಧಿ ಚಂದ್ರಮನೆ | 5 ಎನಲು ಸುರರೊಡನೆ ನುಡಿದನಾಗಲಾ- ವನಜನಾಭ ತಾನು | ಈ ಕಾರ್ಯ- ಕೆನಾ ಮಾಡುವುದೇನು | ಭ- ವಾನೀಧವನಾಗಿ ಶಿವನು | ಘನತಪವನಾಚರಿಸುತ್ತ ಮೇರುಗಿರಿ ಗುಹೆಯೊಳು ಕುಳಿತಿಹನೊ | ಫಾಲದಲಿ ಉರಿಗುಣ್ಣುಳ್ಳವನು | ಏನಾದರು ಸರಿ ತಾ ಲೆಕ್ಕಿಸನು | 6 ಕಾಮನಿಂದ ಶಂಕರನ ತಪಕಿಡಿಸಿ ಕರುಣಿಸಬೇಕೆಂದು ಬೇಡಿ | ಕೊಂ- ಡರವ ನಿಮ್ಮೊಳು ದಯಮಾಡಿ | ತ- ಕ್ಕಯೋಚನೆಗೈಯ್ಯುವ ನೋಡೀ | ತಾಮಸನ ಮುರಿದು ನಿಮಗೆ ಸಂತತವ ಕೊಡುವನು ಮುದಗೂಡಿ | ಎಂದು ಪೇಳಿದ ಶ್ರೀಹರಿಯನುಡಿ | ಕೇಳಿ ಇಂದ್ರನು ಗುರುವನು ನೋಡಿ 7 ಚಂದದಿಂದ ಸೇರಿ | ಸ್ಮರಗೆಯಿದ- ರಂದವೆಲ್ಲವುಸುರಿ | ಅವನಮನ ಶೌರಿ ಕಂದನೆಯಂತಾದರು ತಂದರೆ ಸುಖ- ವೆಂದನುಪಕಾರಿ | ಗುರು ವಂದಿಸೆ ಸುರರ ದೊರಿ | ಬೀಳ್ಕೊಂಡು ಬಂದನು ಕುಸುಮಪುರಿ8 ಕುಸುಮಾವತಿಯಲಿ ಮೀನಕೇತನನ ಶಶಿನಿಭವದನೆಯರು | ಸೇ- ವಿಸುತಿರೆ ಹಸನಾದ ಪನ್ನೀರು | ಪುನಗು ಅಗರು | ಕುಸುಮಶರನ ಉಪಚರಿಸುತ ಬಾಲೆಯ- ರೆಸೆಯಲು ಮೋದದೊಳು | ರತಿ- ಕ್ರೀಡೆಯಲಿ ಮನಕರಗಲು | ಬೃ ಹಸ್ಪತಿಯನಿತರೊಳೈತರಲು 9 ಊಳಿಗದವರಿಂದ್ಹೇಳಿ ಕಳುಹೆ ಗುರು ಕೇಳಿ ಸುದ್ದಿ ಮಾರಾ | ತವಕ ಪರಿಪರಿಯುಪಚಾರ | ಶ್ರೀಪತಿಯ ಕುಮಾರ | ಬಂದಹದ- ನೇನೆನುತ ಪದಾರ | ವಿಂದ- ಕೆರಗಿದನಾ ಕುಸುಮಶರ 10 ಭಯದೊಳಮರರೆಲ್ಲ | ಕ್ಷೀರಸಾಗರಕೆ ಪೋಗಿ ಎಲ್ಲ | ಬಿನ್ನೈ- ಸಲು ಕೇಳಿ ಸಿರಿಯನಲ್ಲಾ | ಅರಘಳಿಗಾಲೋಚಿಸಿ ಎನ್ನೊಳುನುಡಿ- ದನುಕೇಳಿಸಿರಿಯನಲ್ಲಾ | ಖಳಗೆಧರೆ- ಪರಿ ಎಲ್ಲವನು ಬಲ್ಲ 11 ಕಾಮನು ಪುಷ್ಪ ಶರಗಳಿಂದೆಸೆಯಲು ಗೌ- ರಿಮನೋಹರನೂ | ಬ- ಹಿರ್ಮುಖನಾಗುತ ಶಂಕರನೂ | ನಿ- ಕ್ಷೇಮವ ಪಾಲಿಪನು | ರಜತಗಿ ರಿವಾಸಿ ಮಹೇಶ್ವರನು | ಇದಕೆ ಗುರಿಯಾದ ಎನ್ನ ಮಗನು 12 ನಾವು ಪೇಳಿರುವೆವೆಂದು ನಮ್ಮ ಸು- ಕುಮಾರ ಮನ್ಮಥನಿಗೆ | ಇದೆಲ್ಲಾ ಪೇ- ಳಿವಿವರಮಾಗೆ | ಕರೆದುಕೊಂ- ಡ್ಹೋಗಿ ಶಿವನ ಬಳಿಗೆ | ಪಾವಕಾಕ್ಷ ಬಲು ಕರುಣಾನಿಧಿಯಿ- ನ್ನೇನು ಚಿಂತೆ ನಮಗೆ | ಬೇಗನಡೆ ಯೆಂದ ಹರಿಯು ಎನಗೆ | ಸಕಲವೂ ತಿಳಿಸಿದೆ ನಾನಿನಗೆ | 13 ಪರಿಯೋಚನೆ ಮಾಡು | ಸ- ತ್ಕೀರ್ತಿಯ ಸಂಪಾದನೆ ಮಾಡು | ಭರದಿ ಹೂ ಶರಗಳ ನೀ ಹೂಡು | ಹರನ ತಪವ ಭಂಗಿಸಿ ನಮ್ಮೆಲ್ಲರ ಕರುಣದಿ ಕಾಪಾಡು | ತಂದೆಯ- ಪ್ಪಣೆಯ ಮನದಿ ನೋಡು | ಮೂಜಗದಿ ಯಾರು ನಿನಗೆ ಜೋಡು | 14 ಈ ಪರಿಪೇಳಿದ ಗುರುವಿನ ನುಡಿಯನು ಶ್ರೀಪತಿಯ ಕುಮಾರ | ರತಿಯೊಡನೆ ಮಾರ | ನುಡಿದಳಾ ಶಿವನು ಮಹಾಕ್ರೂರ | ಆಪತ್ತೊದಗುವುದೀಗ ಬೇಡ ಎಂ- ಕಂದರ್ಪಮನದಿ ಸೋತು | ಬೃಹಸ್ಪತಿ- ಗೆಂದ ಕಾಮನಿನಿತು 15 ಸಮ್ಮತಿಯಿದು ಕೇಳಿ | ಪೂಶರನ ಬಿಡಲು ಚಂದ್ರಮೌಳಿ | ಕೋಪಿಸಲಾ ಹಣೆಗಣ್ಣೆನಗಾಳೀ | ಬ್ರಹ್ಮಾಂಡಗಳಾದರು ದಹಿಸುವುದು ಎನ್ನಳವೇ ಎಂದಾ | ಈ ಕಾರ್ಯಕೆ ನಾನು ಬಾರೆನೆಂದ | ನುಡಿಗೆ ಸುರ- ಗುರುಮತ್ತಿಂತೆಂದ | 16 ಮರೆಹೊಕ್ಕಿರುವಮರರ ಪಾಲಿಸುನೀ ಕಂದರ್ಪ | ಜಗ- ತ್ಕಾರಣನೈನಿಮ್ಮಪ್ಪ | ಪೇಳ್ದನುಡಿ ನಡಿಸಲು ಬೇಕಪ್ಪಾ | ಪರಿಪರಿಯಲಿ ನೋಡಿದರು ಜಗದೊಳಗೆ ನಿನ್ನ ಸರಿಯಾರಪ್ಪಾ | ನಮ್ಮ ನುಡಿ ಮೀರಬಾರದಪ್ಪಾ | ಅಷ್ಟು ಪೇಳಿ- ದರು ಕಾಮವೊಪ್ಪಾ | 17 ಕಾಮನವೊಪ್ಪಿಸಿ ಕರದೊಯಿದಮರರು ಕೈಲಾಸವ ಸೇರಿ | ಅರುಹಿದರು ಗಿರಿರಾಜ ಕುಮಾರಿ | ಕೇಳಿನಡೆತಂದಳಾಗಗೌರಿ | ವ್ಯೋಮಕೇಶನಿಹ ಗವಿಯ ದ್ವಾರಕೇ ಬರಲು ನೋಡಿ ನಂದಿ | ತಾಯಿನೀ- ನಿಲ್ಲಿಗೇಕೆ ಬಂದಿ | ಏನು ಅ- ಪ್ಪಣೆಯೆಂದನು ನಂದಿ 18 ವಂದನೆ ಒಳಗೆ ಹೋಗುವನು ಇವನನೀ ತಡೆಯಬೇಡವಯ್ಯ | ಎನ್ನ ಕಂದನು ಇವ ಕೇಳಯ್ಯ | ಎಂದು ಪೇ- ಳಿದ ಗೌರಿಯ ನುಡಿಯಾ | ಮುದದಿ ಶಿರದೊಳಾಂತನು ನಂದೀಶ್ವರ ಮುಂದೆ ಕೇಳಿ ಕಥೆಯ | ಅನಿತರೊಳ್ ಬಂದ ಕಾಮರಾಯ | ಪೋಗ ಬಹು- ದೆಂದ ಪ್ರಥಮಗೇಯ | 19 ಕಾಮಪೊಕ್ಕನಂದು | ಕರದಿ ಜ- ಪಮಾಲೆ ಪಿಡಿದು ಮುಂದು | ಮ- ಹಾಮಂತ್ರಗಳ ಜಪಿಸುತಂದು | ನೇಮದೊಳೇಕೋಭಾವದೊಳಿರುತಿಹ ಸೋಮಧರನ ಕಂಡ | ಏ- ನು ಮಾಡುವದೆಂದು ಪ್ರಚಂಡಾ | ಇಕ್ಷುಧ- ನುಶರಗಳ ಕೈಕೊಂಡಾ | 20 ವಿನಯದಿಂದ ಪ್ರಾರ್ಥಿಸಿ ಮಾತಾಡಿಸು- ವೆನೆಂದು ಶಂಕರನ | ನುತಿಸಿ ಬೇಡಿ- ದನು ಶೂಲಧರನಾ | ಎಷ್ಟಾದರು ಕರಗಲಿಲ್ಲವನಮನಾ | ಪರಿಪರಿಯೋ- ಚನೆ ಮಾಡಿ ಮನ್ಮಥನು | ಬೆರಗಾಗುತಾ ನಿಂತಾ ಸಮಯನೋಡುತ- ಲಿರತಿಯ ಕಾಂತಾ | ಮನ ದಿ ಹೊಂದಿದನು ಮಹಾಚಿಂತಾ 21 ನೆಂದು ಯೋಚಿಸಿದನು | ಇ- ಕ್ಷು ಧನುವನು ಜೇ ಹೊಡೆದಾನು | ಮಹೇ- ಶನ ಮರ್ಮಸ್ಥಳಗಳನು | ಪುಷ್ಪ ಬಾಣಗಳೂಡೆಸೆಯೆ ಮ- ಶರಗಳನು ಸುರಿದಾನು | ಜ- ನರೆ ಕೇಳೀಯಾಶ್ಚರ್ಯವನು | 22 ಆ ಮಹೇಶ್ವರನ ಮೂಲ ತಿಳಿಯಲಿಂ- ದ್ರಾದಿಸುರರಿಗಳವೆ | ಕೇಳಿಯೀ ಕಾಮನೇನು ಲಕ್ಷ್ಯವೆ | ಕರಿಚರ್ಮಾಂಬರನಾ | ಮೀನ ಕೇ- ತನನ ಬಾಣಕೆ ಮನಾ | ಬಹಿರ್ಮು- ಖನಾಗಿ ನೋಡಿ ಸ್ಮರನಾ | 23 ಕಣ್ಣುತೆಗೆದು ಮುಕ್ಕಣ್ಣಯಲೋ ನಿನ- ಗೆನ್ನೊಳೇಕೆ ಪಂಥಾ | ಛೀ ಛೀನಡಿ ಹೋಗು ಹೋಗು ಭ್ರಾಂತ | ಎಂದು ತಾ- ತನ್ನನಿಜಸ್ವಾಂತ-| ವನ್ನು ಪೂರ್ವದಂದದಿ ತಪದಲ್ಲಿರಿಸಚ- ಪೋಲ್ವಂದದಲಾ ಶಾಂತಾ | ಶೂರ್ಪಕಾ- ರಿಯು ಎದುರಲಿ ನಿಂತಾ | 24 ನಾನು ಬಂದಾ ಕಾರ್ಯವ ಕೇಳದಲೆ ಇ- ದೇನೀ ಪುರಹರನು | ಛೀಹೋಗೋ- ಗೆಂದು ಗರ್ಜಿಸಿದನು | ಎನುತ ತೆ- ಗೆದೆಚ್ಚ ಪೂಶರವನು | ನಾನಾವಿಧದಲಿ ತನ್ನ | ಚಮತ್ಕಾ- ರಗಳ ತೋರಿಸಿದನು | ಮನದಿ ಭಯಗೊಳುತ ಮನಸಿಜನು | ಮುಂದಾಗುವ ಕಥೆಯ ಕೇಳಿಯಿನ್ನು 25 ಭರ್ಗಕಣ್ದೆರೆದು ನೋಡಲಾಕ್ಷಣದಿ ಭರದಿಂ ಮನ್ಮಥನಾ | ಕೋಪಕಿಡಿ- ಯಿಡುತ ಫಣೆಗಣ್ಣ | ತೆಗೆದು ನೋಡಲು ತಕ್ಷಣ | ಚಿಣ್ಣಾ ಭುಗ್ಗು ಭುಗ್ಗುಯೆಂದೇಳ್ವ ಉರಿಗಳಿಂ ದಗ್ಧನಾದ ಮದನಾ | ಭಸ್ಮದಂ- ತಿದ್ದು ಮರ್ಮಸದನಾ | ಅಗ್ನಿವ್ಯಾ ಪಿಸೆ ಬ್ರಹ್ಮಾಂಡವನಾ 26 ಸುರರು ಕಿನ್ನರರು ಗಡಗಡ ನಡುಗುತ ಬೆರಗಾದರು ನೋಡಿ | ಅವರ- ಶಿರವನಲ್ಲಾಡಿ | ಚರರು ಬಂದು ರತಿಗೀ ಸುದ್ದಿಯ ಪೇಳಿ- ದರು ದುಃಖ ಮಾಡಿ | ಕೇಳಿ ನಾರಿಯರು ಶೋಕವಮಾಡಿ | ರತಿಯು ನೆಲದೋಳ್ ಬಿದ್ಹೊರಳಾಡಿ | 27 ಹಾಹಾರಮಣಾ ಹಾ ನಿಜೇಶ ಹಾ ಪ್ರಾಣಕಾಂತಕಾಮಾ | ಎನ್ನ ಕರ್ಕಶನಿಸ್ಸೀಮ | ಸಾಹಸ ಮಾಡುವೆನೆಂದು ಪೋಗಿ ಶಂ- ಕರನಿಂದಲಿ ಮಡಿದೆ | ಪೇಳಿದಮಾ- ತ್ಕೇಳದೆ ನೀ ನಡೆದೇ | ಪೋಗಬೇ- ಡೆಂದು ನಾನು ನುಡಿದೆ 28
--------------
ಗುರುರಾಮವಿಠಲ
ಮರೆಯೊಕ್ಕೆ ನಿನ್ನನು ಮರುಗಿ ರಕ್ಷಿಸಬೇಕು ಶಂಕರೇಶಾಗಿರಿಜೆಯಾಣ್ಮನೆದೇವ ಕೆರೆಗೋಡಿಪುರದೀಶ ಶಂಕರೇಶಾ ಪಮರಳಿ ಮರಳಿ ಗರ್ಭಕುರುಳಿ ನಾನೊಂದೆನುಪರಿಪರಿ ಕರ್ಮದ ಫಲಗಳನುಣಲಾಗಿದುರಿತ ತೊಲಗದೀವರೆಗು ನಾನೇಗೈವೆಕರುಣಾರಸ ನಿನಗೇತಕುದಿಸದಿದೆ 1ಸೂತ್ರಧಾರಕ ನೀನು ಸಕಲಜೀವರಿಗೆಲ್ಲಪಾತ್ರ ಕೃಪೆಗೆ ನಾನು ಪ್ರೇಮದಿಂ ನೋಡಿನ್ನುಗೋತ್ರಾರಾತಿ ವಂದಿತ ಪಾದಕಮಲನೆಸ್ತೋತ್ರವ ಮಾಳ್ಪುದ ಮೊದಲೆ ನಾನರಿಯೆನು2ಮರತಿ ಪುಟ್ಟದು ನಾನಾವಿಧ ಭವಸುಖದಲಿವರೆತರಿತೆನೆನಿಸಿದ ಕರ್ಮದ ಬಲುಹಿನಿಂಬೆರೆತು ಬಯಲ ಮೋಹದಲಿ ಮೋಸಹೋದೆನುಕುರಿತು ಕಾಮ್ಯವ ಭಜಿಸಿದೆನೊ ನಿನ್ನನು3ಉರಿಗಣ್ಣ ದೃಷ್ಟಿಯಿಂ ದುರಿತವ ದಹಿಸಿನ್ನುವರಶಶಿನೇತ್ರದಿಂ ನೋಡಿ ತಾಪವ ಪರಿಹರಿದಶ್ವನೇತ್ರದಿ ಜ್ಞಾನವನರುಹಿಸುಶರಣಾಗತನಪರಾಧವನೆಣಿಸದೆ 4 ಪರಾಕು ಶಂಕರೇಶಾ5
--------------
ತಿಮ್ಮಪ್ಪದಾಸರು
ಮಾಕಾಂತೆಯರಸನ ತೋರೆನಗಮ್ಮ ಸಾಕುವ ಸರಸನ ತೋರೆ ಪ. ಕಣ್ಣೆರಡು ಸಾಸಿರುಳ್ಳವನಂಗದಿ ಕಣ್ಣಮುಚ್ಚಿ ಮಲಗಿಪ್ಪನ ಹೊನ್ನು ಮಣ್ಣಿನ ರಾಶಿಯಿಂದ ಕೂಡಿಪ್ಪನ ಮಣ್ಣ ಕೂಡಿದ ದಿವ್ಯಕಾಯನ 1 ಮಣ್ಣಿನ ದೇವರ ಮುಖದಿಂದ ಮಣ್ಣಿಗೆ ಸೆಣಸುವರ ಭುಜದಿಂದ ಮಣ್ಣ ಪಾ(ನಾ?)ಡುವರ ತೊಡೆಯಲ್ಲಿ ಮೂಡಿ ಮತ್ತೆ ಮಣ್ಣ ಚರಣದಿ ಪುಟ್ಟಿಸಿದನ 2 ಕಣ್ಣ ಮುಚ್ಚದನ ಕಣ್ಣ ತೋರದನ ಹೆಣ್ಣಾಳಿನುರುಬಿನಲಿ ಮುಕ್ಕಣ್ಣನ ಮಣ್ಣನಳೆದು ಮಣ್ಣಿನರಸನೊರೆಸಿದ ಮಣ್ಣಿನ ಮಗಳನಾಳಿದನ 3 ಮಣ್ಣ ಪೊತ್ತನಧರಿಸಿದ ಚಿಣ್ಣನ ಮಣ್ಣ ಮೆದ್ದ ಸಣ್ಣ ಬಾಯೊಳು ಮಣ್ಣನೆ ತೋರಿದ ನಂದನರಾಣಿಗೆ ತಲ್ಲಣ ಹಬ್ಬವ ಕೊಟ್ಟ ಧೀರ4 ಕನ್ನಗಳ್ಳರ ಕೊಂದು ಕಣ್ಣಿಲ್ಲದವರಿಗೆ ಕಣ್ಣ ತರಿಸಿಕೊಟ್ಟ ಚದುರನ ಕಣ್ಣಿಲ್ಲದವನಿಗೆ ಕಣ್ಣ ಕೊಟ್ಟನಂತ ಕಣ್ಣುಳ್ಳ ರೂಪವ ತೋರ್ದನ 5 ಹೆಣ್ಣ ಮೋಹಿಸುವನ ಸುಟ್ಟುರಿ- ಗಣ್ಣನ ಮರುಳು ಮಾಡಿದನ ಹೆಣ್ಣನುಂಗುಟದಿ ಪಡೆದು ತಮ್ಮಣ್ಣನ ಮಣ್ಣಿನೊಡೆಯ ಮಾಡಿಸಿದನ 6 ಮಣ್ಣಿಗಾಗಿ ಬಂದ ಮಣ್ಣನಾಳಿದ ದುರ್ಜನ ದಾನವರ ಕೊಂದನ ಹೆಣ್ಣು ಮಣ್ಣೊಲ್ಲದ ವಾದಿರಾಜನಿಗೆ ಪ್ರಸನ್ನನಾದ ಹಯವದನನ 7
--------------
ವಾದಿರಾಜ
ಮಾಡಿದಫಲವನುಭವಿಸಣ್ಣ ನೀ ಒಲ್ಲೆಂದರೆ ಬೆನ್ನ ಬಿಡದಣ್ಣ ದೊರಕುವುದ್ಹ್ಯಾಗಣ್ಣ ಪ ಜತೆಯಿಲ್ಲದೆ ನೀ ಮೊದಲ್ಹುಟ್ಟಿ ಮತ್ತು ಜತೆಯಿಲ್ಲದ್ಹೋಗ್ವುದು ಮರೆತುಬಿಟ್ಟಿ ಸತಿಸುತರ್ಹಿತರೆಂದು ಮತಿಗೆಟ್ಟ ಮಂದ ಮತಿಯಾಗಿ ಸಂಸಾರ ತಿಳಿದಿ ಗಟ್ಟಿ ಗತಿಸುವ ದೇಹದ ಸ್ಥಿತಿ ವಿಚಾರಿಸದೆ ಸತತ ಒದ್ದಾಡಿದಸತ್ಯದೊಳಗೆ ಭ್ರಷ್ಟ 1 ಗಳಿಸಲು ತುಸು ಬೇಸರಲ್ಲದ್ಹೋಗಿ ಕೇಳಿದಳುಕಿ ಅಳುಕಿ ಜನರಿಗೆ ಬಾಗಿ ಅಳಿದುಪೋಗುವ ಕಾಸು ಹಣಕಾಗಿ ಕೆಟ್ಟು ಬಳಲಿಬಳಲಿ ದುಡಿದೆಲೆ ಗೂಗಿ ನಳಿನಾಕ್ಷನ ಪೂಜೆ ಒಮ್ಮೆ ಮಾಡೆನ್ನಲು ಅಳುಮೋರೆ ಮಾಡಿದಿ ತಲೆಬಾಗಿ 2 ಕೆಟ್ಟ ಕೃತ್ಯದಿ ನಿನ್ನ ವಯ ಕಳೆದಿ ಮನೆ ಗಿಷ್ಟಮಿತ್ರರು ಬರಲತಿ ನೊಂದಿ ಕೊಟ್ಟದ್ದು ಕೊಡಲಿಕ್ಕೆ ಸಿಟ್ಟಿಗೆದ್ದಿ ನೀ ಶಿಷ್ಟರ ಸಂಗಕೆ ದೂರಾದಿ ಇಷ್ಟದಾಯಕ ನಮ್ಮ ಶಿಷ್ಟ ಶ್ರೀರಾಮನಡಿ ಗಟ್ಟ್ಯಾಗಿ ಭಜಿಸದೆ ಕೆಟ್ಟ್ಹೋದಿ 3
--------------
ರಾಮದಾಸರು
ಮುಟ್ಟದಿರಿಗೋಪವನಿತೆಯರು ಗಲಭೆಯದೇನುತೊಲಗಿರೇ ತೊಟ್ಟಿಲಂ ತೂಗದಿರಿ ಕೃಷ್ಣನೆದ್ದರೆ ಕಾಡದಿರನೆನ್ನಾ ಪ ಮಿಸುನಿದೊಟ್ಟಿಲೊಳಂತೆ ದುಪ್ಪದುಪ್ಪಳಿನ ಹಾಸಿನಲಿ ಮಂದಾರ ಕುಸುಮಗಳ ಜಾಜಿ ಮಲ್ಲಿಗೆ ಸೇವಂತಿಗೆ ಪಂಕೇರುಹದಾ ಎಸಳುಗಳ ಪಸರಿಸಿಯೆ ಮಲಗಿಸಿದೆ ಪಾಲೆರದು ಮೊಲೆಯೂಡಿ ಪೀತಾಂಬರವನೆ ಹೊದ್ದಿಸೀ | ಹಸುಳೆಯನಮಲ ಕೋಮಲಾಂಗನನಂಗಕೋಟಿಗಳ ನಾ ಚಿಸಿ ಚಿತ್ತಿನ ಪುತ್ಥಳಿಯ ಸಚ್ಚಿದಾನಂದ ಮೂರುತಿಯಾ ಬಿಸಜಾಕ್ಷನಂ ಕೃಷ್ಣನಂ ಬಲದೇವಸಹಜಾತನಂ ಕುಸುಮನಾಭನಂ ಜಲದನೀಲನಂ ದಿವಿಜಪಾಲನಂ 1 ಬಿಡದೊತ್ತಿಯಪ್ಪಿ ಪರಮಾನಂದ ಜಲಧಿಯೊಳಗೋಲಾಡಿ ಸಂತುಷ್ಟಿಯಿಲ್ಲವಲ್ಲಾ ಒಡೆಯನೋ [ಇವ]ಯೆಮ್ಮೊಡನೆ ಪೊಡವಿಗೆ ಜೀವಂಗಳಿಗೆ ಒಡೆಯನೆಂಬಿರಿ ಪರಲೋಕದಾನಂದಕ್ಕೆ ಒಡೆಯನೇ ನಿಮಗೆನ್ನ ಕಂದ ಮುದ್ದು ಭಾಗ್ಯದ ಬೆಳಸು ಮಡಗಿ ತೊಟ್ಟಿಲೊಳಚ್ಯುತನನಂತನಂ ಮುಕುಂದನ 2 ನೋಡಲಿಹೆವೆಂತು ಲಾವಣ್ಯಸಿಂಧುವನೊಲಿದು ಸರವೆತ್ತಿ ನಾಡ ಹೆಂಗಳ ದೃಷ್ಟಿದೋಷದಿಂ ಪಾಲ್ಗುಡಿದು ನಲವಿಂದ ಲಾಡಲೊಲ್ಲನು ವಸುಂಧರೆಯ ತೊಟ್ಟಿಲಶಿಶುಗಳಂದದಿ ಮೊಲೆಯ ನೂಡಿದರೆ ಬಾಯ್ದೆರೆಯಲೊಲ್ಲ ಮಂತ್ರದಿಯಂತ್ರದಿಂದೊಮ್ಮೆ ಯೂಡಿ ಮಲಗಿಸಿದೆ ವಿಶ್ವನಂ ತ್ರೈಜಗಪ್ರಾಜ್ಞಮೂರುತಿಯಂ3 ರವಿಯಹುದು ಬಿಸಿಗದಿರದೆಲ್ಲಿ ಚಂದಿರನಹುದು ಹಿಮವೆಲ್ಲಿ ನವದೆಲ್ಲಿ ಇಂದುಧರನಹುದು ಫಣೆಗಣ್ಣೆಲ್ಲಿಯೆಂದು ಬರಿದೇಕೆ ಮರುಳಾಗುವಿರಿ ಅವಿರಳನದ್ವಯನನಾದಿಮಧ್ಯಾಂತರಹಿತನ ಧರ್ಮಸ್ಥಾಪನಾಚಾರ್ಯ ನ[ವಂ] ಮಹೀಭಾರವ ತವಿಸಲೆಂದವÀತರಿಸೆ ಜನನವಂ ಪಡೆದ ತಂದೆಯಂ ಭುವನಪಾವನ ಸುಪ್ರಗಧಾಮೂರ್ತಿಯಂ ಶ್ರವಣಮಂಗಳಸತ್ಕೀರ್ತಿಯಂ4 ನಿಗಮವೀ ಹರಿಯ ಮಹಿಮಾ ಸಮುದ್ರದ ತಡಿಯ ತೆರೆಗಳಲಿ ಮಿಗೆ ಸಿಲುಕಿ ಮುಳುಗಲರಿಯದೆ ಬೀಳುತೇಳುತಾಳುತಲಿವೇಕೋ ಮೊಗನಾಲ್ಕನಯ್ಯನ ಸಾಸಿರದೈವವಂ ಪಡೆದ ತಂದೆಯಂಅದೆಂತಲೆಂದಾರರಿವರೂ ಸುಗುಣ ಸರ್ವಜ್ಞನಂ ಸರ್ವಭೂತರಾತ್ಮಕನಂ ಜಗದೊಳ್ ಹೊರಗೆ ಪೂರ್ಣನಾಗಿ ಭುವನವ ಜಠರದೊಳಗಿಟ್ಟ ಅಗಣಿತನ ವೈಕುಂಠ ಪತಿಯ ಘನತೆಯನರಿತು ಪೊಗಳುವರೇ ಮುಗುದೆಯರು ನೀವೆತ್ತ ಮಾಯೆಯ ಕುಣಿಸಿ ನಗುವ ಹರಿಯೆತ್ತಾ 5
--------------
ಬೇಲೂರು ವೈಕುಂಠದಾಸರು
ಮೂರನೆಯ ಸಂಧಿ ಪತ್ರವನೋದಿಕೊಂಡು ಪದ್ಮನಾಭನ ಕಿಂಕರಗೆ ವಿಷಯೆ ವಿಶಾಲದಿ ಸಖಿಯರು ಕೂಡಿ ಆಲಯದಿಂದಲಿ ಹೊರಟರು ವಸಂತಕಾಲ ಬಂದಿರೆ ನಂದನಕೆ 1 ವಚ್ಚೇರೆಗಂಗಳ ವಾರಿಜಮುಖಿಯರು ನಿಚ್ಚಳಾಂಗದ ನೀರೆಯರು ಹೆಚ್ಚ ಹಿರಿಯ ಹೆಂಗಳ ರನ್ನೇರು ಬೆಚ್ಚದೆ ಬೆರೆದು ನಡೆದರು 2 ಚೆಲ್ಲೆಗಂಗಳ ಚೆಲ್ವೆಯರು ಎಲ್ಲರೈದಿದರು ನಂದನಕೆ 3 ಕಳಸಕುಚದೋರು ಕಂಬುಕಂಧರೆಯರು ಕುಂತಳಕಾಗಿ ನಡೆದರು4 ಚೆಂದುಟಿ ಚೆಲುವಿನ ಬಾಲೆಯರು ನಟನೆಯಿಂದೆಲ್ಲ ನಡೆದರು 5 ತಬ್ಬುತ ತಾಗೊಲವುತಲಿ ಕಬ್ಬುವಿಲ್ಲನ ಕೋಲಾಹಲ ಉಲ್ಲಸದಿ ತಬ್ಬಿ ನಡೆದರು ನಂದನಕೆ 6 ಕಕ್ಕಸ ನಕ್ಕುನಲಿದು ನಾನಾ ಚೇಷ್ಟೆಗಳಿಂದ ಹೊಕ್ಕರು ನಂದನವನವ7 ಸರೋವರವಿಳಿದು ಮಾಡಿದರ್ ಕೈಚಳಕವ ಜಲಕ್ರೀಡೆಯನಾಡಿದರತಿ ಹರುಷದಲಿ 8 ಕೆಂದಾವರೆ ಮೊಗ್ಗು ಕಂಡು ಹರುಷದಿ9 ಕೋಮಲೆಯರ ನೀರಾಟದ ರಭಸಕ್ಕೆ ತಾವರೆಗಳು ಬೆರಗಾಗೆ ಹೇವದಿ ತಲೆಯ ತಗ್ಗಿದವು10 ಸಮನಾಗಿ ತೋರುತಲಿಹವು 11 ದಿವ್ಯಾಂಗ ತೋರುತಲಿ ಹೆರೆಯ ಕೂರಂಬಿನಂದದಲಿ12 ಸಡಿಲಿದಾಭರಣವನಿಟ್ಟು ಮುಡಿದರು ತುದಿವೆಣ್ಣೆಗಂಟು 13 ಕಣ್ಣಿಗೆ ಅಂಜನ ಹಚ್ಚಿ ಸಂಪಿಗೆ ಮಕರಂದ ಪತ್ರಿಕೆಯನಿಟ್ಟು ಲಲನೆಯರೆಲ್ಲ ಶೃಂಗಾರದಿ 14 ಮಾನಿನಿಯರು ತೆರಳಿದರು 15 ಕಂದರ್ಪನ ಮದದಾನೆಯಂತೆ ಕರ್ಪುರ ವೀಳ್ಯವ ಕರದಲ್ಲಿ ಪಿಡಿದು ಗುಪ್ಪವಡೆದರು ನಾರಿಯರು 16 ಘನರಾಗದಿಂದ ಪಾಡುತಲಿ ತಮ್ಮ ಮನಬಂದ ಫಲ ಪುಷ್ಪಂಗಳ 17 ಉದ್ದಂಡತನದಲಾಡುತಿಹರು 18 ಬೆರಸಿಕೊಂಡಾಡುತಲಿಹರು ಹರುಷದಿಂದಲಿ ಮಂತ್ರಿ ತನುಜೆ 19 ಚಿಕ್ಕ ಪ್ರಾಯದ ಕೋಮಲಾಂಗಿಯು ಹೆಮ್ಮಕ್ಕಳನಗಲಿ ತಾ ಚೂತ ಬೆಕ್ಕಸ ಬೆರಗಾಗಿ ನಿಂದಳ್ 20 ಮತಿಭ್ರಮೆಯಿಂದ ನೋಡಿದಳು 21 ಪಾರ್ವತಿಪತಿಯೆಂಬೆನೆ ಪಣೆಗಣ್ಣಿಲ್ಲ ವಾರಿಜೋದ್ಭವನಿವನಲ್ಲ ನಾರಾಯಣನೆಂಬೆನೆ ಶಂಖಚಕ್ರವು ತೋರುವುದಿಲ್ಲ ಕೈಯೊಳಗೆ 22 ಇಂದ್ರನೆಂಬೆನೆ ಬಿಳಿಯಾನೆ ಕೆಲದಲಿಲ್ಲ ಚಂದ್ರನೆಂಬೆನೆ ಮೃಗವಿಲ್ಲ ಬಂದಿಳಿದನೊ ಭೂತಳಕೆ 23 ಕುಸುಮ ಬಾಣವು ಕೈಯೊಳಿಲ್ಲ ವಿಷಯೆ 24 ಹತ್ತಿರೆ ಬಂದು ನಿಲ್ಲುವಳು ಹೊತ್ತಲ್ಲವೆಂದು ಸಾರುವಳು 25 ಮುಟ್ಟುವೆನೆಂದು ನಿಲ್ಲುವಳು ಥಟ್ಟನೆ ಕಡೆಗೆ ಸಾರುವಳು 26 ಲಜ್ಜೆಹೋದರು ಹೋಗಲಿ ಎನುತ ಭೇದಿಸಿ ನೋಡಿದಳವನ 27 ಚೊಗೆಯ ಕುಪ್ಪಸದ ಕೊನೆಯಲ್ಲಿ ಮಂತ್ರಿ ತನುಜೆ 28 ಹೊದ್ದಿದ್ದ ಲಜ್ಜೆ ಭಾವದಲಿ ಸಾರ್ದುಮುದ್ರೆಯೊಡೆದಳಂಬುಜಾಕ್ಷಿ 29 ಮೋಡಿಯ ಬರೆದ ಬರಹನು ಮಾಡಿದ ಸುಕೃತದ ಫಲದಿ 30 ನೇಮಿಸಿ ಕಳುಹಿದ ಕಾರ್ಯ ವಿಷವ ಕೊಡುವುದುತ್ತಮವು 31 ಭಾವಿಸಿ ನಿನ್ನ ಮನದಿ ಮುಂದಕ್ಕೆ ಲೇಸುಂಟು ನಮಗೆ 32 ಕೈತಪ್ಪೆಂದು ಮನದಲ್ಲಿ ತಿಳಿದು 33 ವಾಕಾರವನೆ ಚೆಳ್ಳುಗುರಿಂದಲಿ ತಿದ್ದಿ ಯೇಕಾರವನೆ ಮಾಡಿದಳು ಮರುಗಿದಳು 34 ಕಟ್ಟಿದ ಭರದಿಂದ ತಲೆಯನು ಎತ್ತಿ 35 ನಿಂದೊಮ್ಮೆ ನೋಡುವಳು ಕಂದಿ ಕಾತರಿಸುತಲಿಹಳು 36 ಬೆದರಿದ ಹುಲ್ಲೆಯಂದದಲಿ ಹೃದಯ ಸಂಚಲಿಸುತಲಿಹಳು 37 ಹುಸಿ ನುಡಿಗಳನು ಉಟ್ಟ ದೇವಾಂಗ 38 ಪರಿಮಳ ಮಾಜುವುದೆ
--------------
ಹೆಳವನಕಟ್ಟೆ ಗಿರಿಯಮ್ಮ
ಮೋಸ ಪೋದೆಯಲ್ಲೇ ಭಾಸುರಾಂಗಿ ನೀನು ಪ ಕಾಶಿ ನಿವಾಸಿ ವಿಶ್ವೇಶ್ವರನಹುದೆಂದು ಅ.ಪ. ವಿಶ್ವೇಶ್ವರನವನಲ್ಲ ತಿಳಿದು ನೋಡು ನೀನು ವಿಶ್ವಪತಿಯಾ ವಿಷ್ಣುವಿನಡಿಯಾಳು ಅವನು ಸುಸ್ವಭಾವದ ಸರಳ ಹೃದಯಾನ್ವಿತಳು ನೀನು ಕಪಟ ಕಿರಾತನವನು 1 ತ್ರಿಪುರ ಸುಂದರಿಯೆಂಬ ಬಿರುದು ಪೊತ್ತಿಹೆ ನೀನು ಕಪಟ ವೇಷದೊಳು ಬಂದ ವಿಷಕಂಠನವನು ಚಪಲಾಕ್ಷಿಯೆ ನಿಜಸ್ಥಿತಿ ಅರಿಯಲಿಲ್ಲ ನೀನು ಗುಪಿತದಲಿ ನಿನ ಕಂಡು ಮರುಳು ಮಾಡ್ದನವನು 2 ರಾಜರಾಜೇಶ್ವರಿಯಾಗಿ ರಾಜಿಸುವೆ ನೀನು ಭೋಜನಕಾಗಿ ಭಿಕ್ಷ ಬೇಡುವನಲ್ಲೆ ಅವನು ಮೂಜಗವು ಮೋಹಿಸುವ ಕೋಮಲಾಂಗಿಯು ನೀನು ಈ ಜಗವರಿಯೆ ಸರ್ವದ ಭಸ್ಮಾಂಗನವನು 3 ಕನಕ ಮಣಿಮಯದಂತಃಪುರವಾಸಿಯು ನೀನು ಶುನಕ ಗೋಮಾಯ್ಗಳೆಡೆ ಮಸಣವಾಸಿಯವನು ಘನ ವಿಶಾಲಾಕ್ಷಿಯೆ ಮಂದಹಾಸಮುಖಿ ನೀನು ಮಿನುಗುವ ಬೆಸಗಣ್ಣಿನುರಿಮೊಗದೊಳಿಹನವನು 4 ಚಾರು ಪೀತಾಂಬರ ಧರಿಸಿ ಶೋಭಿಸುವೆ ನೀನು ಕೋರಿ ಗಜಚರ್ಮಧರಿಸುವ ಭಿಕಾರಿಯವನು ಭೂರಿ ಸುಖಭೋಗಂಗಳನನುಭವಿಸುವೆ ನೀನು ನಾರಸಿಂಹ ಮಂತ್ರ ಜಪಿಪ ವಿರಾಗಿಯವನು5 ಕರುಣಾ ಕಟಾಕ್ಷದಿಂ ಜಗವ ಪೊರೆದಪೆ ನೀನು ಕರುಣವಿಲ್ಲದೆ ಮೂಜಗವನುರುಹುವನವನು ಪರಮ ಭಕತರಿಗೆ ಮುಕುತಿಪಥ ತೋರುವೆ ನೀನು ನರನಾದ ಭಕ್ತನೊಳು ಹೋರಾಡಿದವನು 6 ಮಂಗಳಪ್ರದೆಯೆಂದು ಖ್ಯಾತಿಗೊಂಡಿರುವೆ ನೀನು ಜಂಗಮ ಜೋಗಿಗಳಿಗೆ ನೆಲೆಯಾಗಿಹನವನೂ ಗಂಗಾಜನಕನ ಪ್ರಿಯತಮ ಸೋದರಿಯು ನೀನು ರಂಗೇಶವಿಠಲನ ಚರಣ ಸೇವಕನವನು 7
--------------
ರಂಗೇಶವಿಠಲದಾಸರು
ಯಲ್ಲರಮ್ಮನಲ್ಲವೆ ಸಿರಿದೇವಿ | ಎಲ್ಲರಮ್ಮನಲ್ಲವೆ || ಬಲ್ಲಿದರಾಗಿಪ್ಪ ಬೊಮ್ಮಾದಿಗಳಿಗೆ ಪ ಆಲದೆಲೆಯ ಮೇಲೆ ತನ್ನ ಪುರುಷನಂದು | ಕಾಲವರಿತು ಪವಡಿಸಿರಲು || ವಾಲಗವನು ಮಾಡಿ ಕೊಂಡಾಡಿ ಜೀವರ | ಮೂಲ ಕರ್ಮಂಗಳು ತೀರುವಂತೆ ಮಾಡಿದ 1 ಆಮೋಘ ವೀರ್ಯ ಗರ್ಭದಿ ಧರಿಸಿ ತಾ | ಬೊಮ್ಮಾಂಡವನೆ ಪೆತ್ತ ಲೋಕಾಮಾತಾ || ಸುಮನಸರಿಗೆ ಕಡೆಗಣ್ಣ ನೋಟದಿ | ಆ ಮಹಾ ಪದವಿಯ ಕೊಡುವ ಭಾಗ್ಯವಂತೆ 2 ಎರಡೊಂದು ಗುಣದಲ್ಲಿ ಪ್ರವಿಷ್ಠಳಾಗಿ ಜೀ ವರ ಯೋಗ್ಯತೆಯಂತೆ ಪಾಲಿಸುತಿಪ್ಪಳು || ನಿತ್ಯ 3
--------------
ವಿಜಯದಾಸ
ವಾದಿಸಿ ಗತಿಹ್ಯದೇನಣ್ಣ ನಿಜ ಹಾದಿತಿಳಿದು ನೋಡೆಲೊ ಜಾಣ ಪ ವಾದ ಭೇದ ನೀಗಿ ಮಾಧವನ ಮಹ ಪಾದ ಮಹಿಮೆಯನು ಕಾಣಣ್ಣ ಅ.ಪ ವೇದಕೆ ನಿಲುಕದ ಮಾತಣ್ಣ ನಿನ್ನ ವಾದಕೆ ಸುಲಭರುತಿಹ್ಯದೇನ ವೇದಸ್ಮøತಿಯ ನಿಜಬೋಧನರಿದು ಯಮ ಭವ ತುಳಿಯಣ್ಣ 1 ವಾಸನೆ ಹಸನ ಮಾಡಣ್ಣ ಮನ ದಾಸೆ ದ್ವೇಷಗಳ ಕಡಿಯಣ್ಣ ಶ್ರೀಶನ ದಾಸರ ವಾಸದಿರ್ದು ಅನು ಪಾದ ಭಜಿಸಣ್ಣ2 ಹಮ್ಮು ಚುಮ್ಮುಗುಣ ನೀಗಣ್ಣ ಕಾಯ ಕರ್ಮ ಕಡಿದು ನಿರ್ಮಲಾಗಣ್ಣ ನಿರ್ಮಲಾತ್ಮ ಪರಬ್ರಹ್ಮ ಶ್ರೀರಾಮನ ಮರ್ಮ ತಿಳಿದು ಮುಕ್ತಿ ಕೂಡಣ್ಣ 3
--------------
ರಾಮದಾಸರು