ಒಟ್ಟು 165 ಕಡೆಗಳಲ್ಲಿ , 56 ದಾಸರು , 158 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ರಾಮನ ನೋಡಿದೆ ರಘುಕುಲ ತಿಲಕನ ಕಾಯ ಕೌಸಲ್ಯ ತನಯನ ಪ ತಾಮಸ ದೈತ್ಯರ ಲೀಲೆಯಲಿ ಕೊಂದು ಭೂಮಿ ಭಾರವನಿಳುಹಿದ ನಿಸ್ಸೀಮನಅ.ಪ. ತಾಟಕಾದಿಗಳ ಘೋರಾಟವಿಯಲಿ ಪಾಟುಪಡಿಸಿದ ಹಾಟಕಾಂಬರನ ತೋಟಿಗೊದಗಿದ ಮಾರೀಚಾದಿಗಳ ಆಟನಾಡಿಸಿದ ನೀಟುಗಾರ 1 ಹಲವು ಕಾಲದಿ ಶಿಲೆಯಾಗಿರ್ದ ಲಲನೆ ಅಹಲ್ಯೆಯ ಶಾಪವ ಹರಿಸಿ ಕಲುಷವ ಕಳೆಯುತ ಕುಲಸತಿ ಮಾಡಿದ ನಳಿನ ನಯನನ 2 ಹರನ ಧನುವನು ಸ್ಮರನ ಧನುವಿನಂತೆ ತ್ವರದಿ ಮುರಿದು ನಿಂದ ಸುಕುಮಾರನ ಧರಣಿಪ ಜನಕನ ಭಕ್ತಿಗೆ ಒಲಿದು ಧರಣಿಜೆಯ ವರಿಸಿ ಹರುಷವಿತ್ತನ 3 ತಾತನ ಭಾಷೆಯ ಪ್ರೀತಿಯಿಂ ಸಲಿಸೆ ಸೀತೆ ಸಹಿತ ಭ್ರಾತ ಲಕ್ಷ್ಮಣವೆರಸಿ ಆತುರದಿಂದಲಿ ಅರಣ್ಯವನೈದಿ ಕೌತುಕ ತೋರುತ ಚರಿಸಿದವನ4 ಖರದೂಷಣ ತ್ರಿಶಿರಾದಿ ರಕ್ಕಸರ ಅರೆಕ್ಷಣದಲಿ ತರಿದು ಬಿಸುಟವನ ಹಿರಣ್ಯಮೃಗವ ಬೆನ್ನಟ್ಟಿ ಕೆಡಹುತ ವರ ಜಟಾಯು ಶಬರಿಗೆ ಒಲಿದವನ 5 ವಾತಸುತನ ಕಂಡಾತನ ಪದುಳಿಸಿ ತರಣಿ ಸುತಗೆ ಅಭಯವನಿತ್ತ ಜಾತವೇದನೆದುರಲಿ ಸಖ್ಯವ ಮಾಡಿ ಘಾತಕ ವಾಲಿಯ ನಿಗ್ರಹಿಸಿದನ 6 ಕೋತಿ ಕರಡಿಗಳ ಹಿಂಡನು ಕೂಡಿಸಿ ಸೇತುವೆಗಟ್ಟಿಸಿ ಜಲಧಿಯ ದಾಟಿ ಪಾತಕಿ ರಾವಣನÀ ಶಿರಗಳ ಕಡಿದು ಸೀತೆಯ ಸೆರೆಯನು ಬಿಡಿಸಿದಾತನ 7 ಮೊರೆಯನು ಪೊಕ್ಕಾ ವರ ಭೀಷಣನ ಕರುಣದಿ ಕರೆದು ಕರವನು ಪಿಡಿದು ಧರೆಯಿದು ಸ್ಥಿರವಾಗಿರುವ ಪರಿಯಂತ ದೊರೆತನ ಮಾಡೆಂದ್ಹರಸಿದಾತನ 8 ಅಕ್ಕರೆಯಿಂದಲಿ ಅರ್ಚಿಸುವರಿಗೆ ತಕ್ಕಂತೆ ವರಂಗಳ ನೀಡುತಲಿ ಮಿಕ್ಕು ರಾಜಿಸುತಿಹ ಪಂಪಾಪುರದ ಚಕ್ರತೀರ್ಥದಿ ನೆಲೆಸಿಹನ 9 ಕಂತುವೈರಿ ವಿರುಪಾಕ್ಷಗೆ ತಾರಕ ಮಂತ್ರ ನಾಮಕನಾಗಿರುತಿರ್ಪನ ಯಂತ್ರೋದ್ಧಾರನಾಗಿರುವ ಹನುಮನ ಮಂತ್ರಿಯ ಮಾಡಿಕೊಂಡು ರಾಜಿಪನ 10 ದುಷ್ಟ ರಕ್ಕಸ ದಮನವ ಮಾಡಿ ಶಿಷ್ಟ ಜನರುಗಳಿಷ್ಟವ ಸಲಿಸುತ ಶ್ರಿಷ್ಟಿಗೊಡೆಯನೆನಿಸಿ ಮೆರೆಯುತಲಿರುವ ದಿಟ್ಟ ಶ್ರೀ ರಂಗೇಶವಿಠಲನ 11
--------------
ರಂಗೇಶವಿಠಲದಾಸರು
ರಾಮಾ ನಿನ್ನಯ ದಿವ್ಯ ನಾಮಾ ನೆನೆವೆನು ರಾಮಾ ನಿನ್ನಯ ದಿವ್ಯ ನಾಮಾ ಪ್ರೇಮವ ಕೊಟ್ಟನ್ನಾ ನೇಮದೊಳಿರಿಸೊ ನೀ ಕರುಣದಿ ಪ ಚಿತ್ತ ಶುದ್ಧವ ಮಾಡಿ ಮತ್ತೆ ನಿನ್ನಯ ಪಾದ ನಿತ್ಯದಿ ನೆನೆವಂತೆ ಭಕ್ತಿಯೊಳಿರಿಸೊ ನೀ ಎನ್ನನು 1 ದಶರಥನುದರದಿ ಶಿಶುವಾಗಿ ಜನಿಸಿದೆ ಹೊಸ ಆಭರಣವಿಟ್ಟು ಕುಶಲಮಾತೆಯನು ನೋಡುವ 2 ಛಂದದಿಂದಲಿ ಆನಂದದೊಳಿಹ ರಾಮಾ ಚಂದ್ರನ ಮೊಗ ಅತಿ ಸುಂದರವಾಗಿರುವವನೇ 3 ಬಿಲ್ಲ ಬಾಣವಪಿಡಿದು ಎಲ್ಲಾ ದೈತ್ಯರ ಕೊಂದು ಅಲ್ಲೇ ಕೌಶಿಕಯಾಗ ಎಲ್ಲ ಸಲಹಿದೆ ಧೀರನೇ 4 ವಿಥುಳಾಪುರದಿ ಬಂದು ಅತುಳ ಧನುವ ಮುರಿದು ಸತಿ ಸೀತಾ ಸಹಗೂಡಿ ಪಿತನಾ ಪಟ್ಟಣವನು ಸೇರಿದೆ 5 ಮಾತೆಯ ವರ ಕೇಳಿ ನೀತಿಯಿಂದಲಿ ಅನು ಜಾತನ ಒಡಗೂಡಿ ಖ್ಯಾತಿಯಿಂದಲಿ ಪೋದಂತಹ 6 ಸರಯು ತೀರದಿ ಬಂದು ಪುರದ ಜನರ ಬಿಟ್ಟು ಭರದಿ ನಾವೆಯನೇರಿ ತ್ವರಿತದಿಂ ದಾಟಿ ನೀ ಪೋದೆ 7 ಭಕ್ತಿಯಿಂದಲಿ ಆ ಸಕ್ತ ಭರತನ ಕಂಡು ಯುಕ್ತಿಯಿಂದಲಿ ತೇಜೋಯುಕ್ತಪಾದುಕವನು ಕೊಟ್ಟೆನೀ 8 ಪುಸಿಯತಿಯಾಗಿ ಶೀತೆಯ ಅಸುರ ಕೊಂಡೊಯ್ದನೆಂದು ವ್ಯಸನದಿಂದಲಿ ಪೋಗಿ ಪಕ್ಷಿಯುದ್ಧರಿಸಿದೆ ಘಮ್ಮನೆ 9 ಶಾಂತಮೂರುತಿ ಹನುಮಂತರೆಲ್ಲರು ಕೂಡಿ ಅಂತರದಲಿ ಸೇತು ನಿಂತು ನೋಡುವೆ ನೀ ಛಂದದಿ 10 ಶರಣ ಬಂದ್ವಿಭೀಷಣನ ಕರುಣದಿಂದಲಿ ಕಾಯ್ದೆ ಸ್ಥಿರದಾಪಟ್ಟವಗಟ್ಟಿ ಹರುಷದೋಳ್ ನಿಲಿಸಿದೆ ಅವನನು 11 ವಾನರರೊಡಗೊಂಡು ಸೇನೆ ಸಹಿತಲೇ ದಶಾ ನನ ರಾವಣನಕೊಂದು ಮಾನಿನೀ ಸಹಿತನೀ ಬಂದಿಹೆ 12 ಪುಷ್ಪಕವನೆ ಏರಿ ಅಕಸ್ಮಾತದಲಿ ಬಂದು ಆಕ್ಷಣದಲಿ ಭರತ ರಕ್ಷಣ ಮಾಡಿದ ದೇವನೇ 13 ಪಟ್ಟಣದಲಿ ಮಾಹಾ ಪಟ್ಟವನೇರಿಸಿ ಶಿಷ್ಟ ಅಯೋಧ್ಯೆಯ ಪಟ್ಟಣವಾಳಿದೆ ರಾಮನೆ 14 ಬ್ರಹ್ಮಮೂರುತಿ ರಾಮಾಗಮನ ಚರಣದಿ ಸುಮ್ಮಾನದಲಿ ಶಾಂತಿ ತನ್ಮಯಗೊಳಿಸಾನಂದದಿ 15
--------------
ಶಾಂತಿಬಾಯಿ
ರಾಯ ಕಳುಹಿದ ರಂಗ ರಾಯ ಕಳುಹಿದ ಪ್ರಿಯಭಾವೆ ರುಕ್ಮಿಣಿಯರಪ್ರೇಮಭಾಳೆ ನಿಮ್ಮ ಮ್ಯಾಲೆ ಪ. ಕೇಳೋರಾಯ ನಿಮ್ಮ ಮ್ಯಾಲಿ ಬಹಳ ಪ್ರೇಮಕೃಷ್ಣರಾಯ ಹೇಳಲ್ಪಶವೆಮುಯ್ಯ ತಂದು ಏಳು ದ್ವಾರ ದಾಟಿ ಬಂದು1 ಚಂಚಲಾಕ್ಷಿ ಅರಸಿಯರು ನಿಮಗೆ ಪಂಚಪ್ರಾಣ ಕೃಷ್ಣರಾಯ ಕೆಂಚಿ ರುಕ್ಮಿಣಿಮುಯ್ಯ ತಂದುಮುಂಚಿ ಬಾಗಿಲಮನೆಯೊಳು ಇಳಿದರು 2 ಕುಂತಿದೇವಿಯರ ಅರಮನೆಗೆ ಚಿಂತಾಮಣಿಯ ತಾನೆ ಬಂದ ಎಂಥ ಸುಕೃತರಾಯ ನಿಮ್ಮಇಂಥ ಭಾಗ್ಯ ಎಲ್ಲಿ ಕಾಣೆ 3 ಸುದ್ದಿ ಕೇಳಿ ಧರ್ಮರಾಯ ಗದ್ಗದಿ ನುಡಿಯನೆ ನುಡಿದಾನಮುದ್ದು ಮುಖವ ನೋಡಿಪಾದಕೆ ಬಿದ್ದು ಧನ್ಯರಾದೆವಮ್ಮ 4 ಅಂದ ಮಾತು ಕೇಳಿರಾಯ ನಂದ ಬಟ್ಟು ನಂದ ಭಾಷ್ಪಬಿಂದು ಉದುರಿ ಬಿಗಿದು ಕಂಠಛಂದದಿ ರೋಮಗಳು ಉಬ್ಬಿ 5 ಇಂದು ಭದ್ರೆ ದ್ರೌಪತಿಗೆ ತಂದರಮ್ಮ ರುಕ್ಮಿಣಿ ಮುಯ್ಯಆನಂದದಿಂದ ಭಾವೆ ಕೃಷ್ಣಇಂದು ನಿಮ್ಮ ಅರಮನೆಗೆ 6 ಎಷ್ಟು ಸುಕೃತರಾಯ ನಿಮ್ಮ ಧಿಟ್ಟ ರಾಮೇಶತಾನೆ ಬಂದ ಅಷ್ಟ ಸೌಭಾಗ್ಯದ ಮುಯ್ಯ ಶ್ರೇಷ್ಠ ತೋರೋದಮ್ಮ ಸಭೆಯು 7
--------------
ಗಲಗಲಿಅವ್ವನವರು
ರುದ್ರ ದೇವರು ಕಂಟಕವ ಪರಿಹರಿಸೊ ಶ್ರೀ ಕಂಠಮೂರುತಿಯೇ ಪ ಬಂಟನೆಂದೆನಿಸೆನ್ನ ವೈಕುಂಠಮೂರುತಿಗೇ ಅ.ಪ ತಂಟೆಸಂಸಾರದ ಲಂಪಟದಲೆನ್ನ ಮನ ಮರ್ಕಟದÀ ತೆರದಿ ಪರ್ಯಟನ ಮಾಡೆ ಅಂಟಿಕೊಂಡಿಹ ಈ ಭವಾಟವಿಯ ದಾಂಟಿಸುವೆ ನೆಂಟ ನೀನಹುದಯ್ಯ ಶಿತಿಕಂಠದೇವಾ 1 ನಿರ್ಜರೇಶನ ಬಿಂಬ ಮೂರ್ಜಗದೊಳಗೆಲ್ಲ ಧೂರ್ಜಟಯೆ ನೀನೆ ಭವವರ್ಜಿತನ ಮಾಡೋ ದುರ್ಜಯವು ಎನ್ನ ಮನ ಆರ್ಜಿಸದೆ ಹರಿಭಕುತಿ ಪತಿ ಜನಾರ್ದನನೊಳ್ ಮನ ನಿಲ್ಲಿಸೋ2 ತ್ರ್ಯಂಬಕನೆ ಎನ್ನ ಮನದಂಬರದೋಳ್ ಹರಿಪಾದ ಅಂಬುರುಹ ತೋರಯ್ಯ ಶಂಭೋ ಮಹಾದೇವಾ ಕುಂಭಿಣಿಯೊಳು ಒಂದೆ ಇಂಬುತೋರದು ಎನಗೆ ವೈರಿ ಭವಭಯ ಹಾರೀ 3 ವಾಮದೇವನೆ ಕಾಯೊ ತಾಮಸಮತಿ ಹರಿಸಿ ಶ್ರೀ ಮನೋಹರನಲ್ಲಿ ಸನ್ಮನವ ನೀಡೋ ಸೋಮಶೇಖರ ಸುರಸ್ತೋಮದಲಿ ನಿನ್ನಂಥ ಪ್ರೇಮಿಗಳ ನಾ ಕಾಣೆ ಉಮೆಯರಸ ಸಲಹಯ್ಯ 4 ಶಿಕ್ಷಕನು ನೀ ಜ್ಞಾನಚಕ್ಷುವ ನೀಡು ವಿರೂ ಪಾಕ್ಷಮೂರುತಿ ಶ್ರೀ ವೇಂಕಟೇಶನ ಭಕ್ತ ಈ ಕ್ಷಿತಿಯೊಳ್ ಉರಗಾದ್ರಿವಾಸವಿಠಲನ ಪ್ರ ತ್ಯಕ್ಷದಲಿ ನೋಳ್ಪ ಶ್ರೀ ತ್ರ್ಯಕ್ಷಮೂರುತಿಯೇ 5
--------------
ಉರಗಾದ್ರಿವಾಸವಿಠಲದಾಸರು
ರುದ್ರಕುಮಾರನ ಚರಣಕ್ವಂದನೆ ಮಾಡಿ ವಿದ್ಯಾಭಿಮಾನಿ ವಾಣಿಯ ಸು - ಪದ್ಮ ಪಾದಗಳಿಗೆ ಎರಗಿ ನಾ ಪೇಳುವೆ ಶುದ್ಧವಾಗಿ ಕೊಡು ಮತಿಯ 1 ಶ್ರಾವಣಮಾಸ ಶುಕ್ಕುರುವಾರ ಶುಭಮೂರ್ತೆ (ಮುಹೂರ್ತೆ?) ಕಾಲದಿ ಕಮಲಾಕ್ಷಿಯನು ಆಲಯದೊಳಗಿಟ್ಟಾದರದಿಂದ ಪೂಜಿಸೆ ಬೇಡಿದಭೀಷ್ಟ ನೀಡುವಳು 2 ಇರುತಿರಲೊಂದು ಪಟ್ಟಣದಲ್ಲಿ ರಾಜನು ತನಯರಿಲ್ಲದ ಕಾರಣವು ವಿವಹದುತ್ಸವಕೆಂದು ತೆರಳೋ ಪತಿಯ ಕಂಡು ತೆಗೆದಿಟ್ಟಳಾತನಾಯುಧವ 3 ಪಟ್ಟದ ಕತ್ತಿಯ ಬಿಟ್ಟು ಬಂದೆನೆಂದು ಅಟ್ಟಿಹ ತನ್ನ ದೂತರನು ನೆಟ್ಟನೆರಡು ಕಾಲು ಚಾಚಿ ಕುಳ್ಳಿರಲಾಗ ತಟ್ಟನೆ ದಾಟಿ ನಡೆದನು 4 ಮೂರು ತಿಂಗಳು ಗರ್ಭಸಾಕ್ಯಾ (ವಾಸಕ್ಕಾ?)ಗಿ ಬಂದಿತು ನೀನೀಗ ದಾಟಿ ಪೋಗುವರೆ ಕೇಳಿ ಸಂಭ್ರಮದಿಂದ ಹೇಳೆ ರಾಜಗೆ ಬಂದು ತಾಳಿದ ಪರಮ ಹರುಷವನು 5 ಸದ್ದು ಮಾಡದೆ ಸೂಲಗಿತ್ತಿ ಕರೆಸಿ ತಾ- ನಿದ್ದ ವಾರ್ತೆಗಳ ಹೇಳಿದಳು ಮುತ್ತಿಲು ತುಂಬ್ಹೊನ್ನು ಕೊಡುವೆ 6 ಹುಡುಕುತ ಬಂದಳು ಕಡೆಯ ಬಜಾರಕ್ಕೆ ಬಡವ ಬ್ರಾಹ್ಮಣನ ಮಂದಿರದಿ ಮಡದಿಗೆ ಮೂರು ತಿಂಗಳು ಗರ್ಭವಾಗಿದೆ ಕÀಡೆಹಾಯ್ಸಲೆನ್ನ ಕರೆಸೆಂದ್ಲು 7 ಮೂರು ತಿಂಗಳ ರಾಜನರಸಿಗೆ ಮೊಗ್ಗೆಯು ಏಳು ತಿಂಗಳು ಹೂವ ಮುಡಿಸಿ ಎಂಟು ತಿಂಗಳಿಗೆ ಶ್ರೀಮಂತದುತ್ಸವ ಮಾಡಿ ಬಂತಾಗ ನವಮಾಸಗಳು 8 ವಿಪ್ರನ ಮಡದಿಗೆ ಒತ್ತಿ ಬಂದವು ಬ್ಯಾನೆ ಕಟ್ಟಿ ಕಣ್ಣುಗಳ ನಿಚ್ಚಣಿಕೆ ಹತ್ತಿ ಇಳಿದು ಹಡೆದಳ ಗಂಡುಕುಮಾರನ ಎತ್ತಿಕೊಂಡೊಯ್ದಳಾಕ್ಷಣವೆ 9 ಕಲ್ಲು ಗುಂಡನೆ ಹಡೆದಿಯೆ ನೀನೆಂಬಂಥ ಸೊಲ್ಲು ಕೇಳುತಲೆ ತಲ್ಲಣಿಸಿ ಎಲ್ಲಿದ್ದರೆನ್ನ ಕುಮಾರನು ಸುಖಬಾಳಲೆಂ- ದಲ್ಲಿ ನೇಮವ ನಡೆಸಿದಳು 10 ಜಾತಕ ಬರೆಸಿ ಸಕ್ಕರೆ ಸಗಟದಿಂದ್ಹಂಚಿ ದಕ್ಷಿಣೆ ತಾಂಬೂಲ ಸಹಿತ ಬ್ರಾಂಬರಿಗೆಲ್ಲ ಇಟ್ಟು ಭೋಜನವ ಮಾಡಿಸಿದ 11 ನಾಮಕರಣ ಜಾವಳ ಜುಟ್ಟು ಉಪÀನಯನ ಪ್ರೇಮದಿಂದ್ವಿದ್ಯವ ಕಲಿಸಿ ಸೋಮನಂದದಿ ಹೊರಗ್ಹೊರಟು ತ- ಮ್ಮಮ್ಮನ ನೋಡಿ ಮೋಹಿಸಿದÀನಾಕ್ಷಣದಿ 12 ಕತ್ತಲೊಳಗೆ ಬರುತಿರಲು ಬಾಗಿಲ ಮುಂದೆ ಕಟ್ಟಿದ ಗೋವು ಕಾಣದಲೆ ವತ್ಸದ ಕಾಲು ತುಳಿಯಲಾಗ ಅದು ಬಾಯಿ ಬಿಟ್ಟೊದರಿತು ಭಯದಿಂದ 13 ಅಮ್ಮ ನೀ ಬಾರೆ ತಮ್ಮಮ್ಮನರಿಯದವ ನಮ್ಮನು ಬಲ್ಲನೆ ಒಮ್ಮ್ಯಲ್ಲದೆರಡುಬಾರ್ಯಾಲಿಸ್ಯದರ ಮಾತು ತಮ್ಮಿ ್ಹರಿಯರನು ಕೇಳಿದನು 14 ಮಂದಾಕಿನಿಯ ಸ್ನಾನವ ಮಾಡಿ ಬಂದರೆ ಸಂದೇಹ ಪರಿಹಾರವಾಗುವುದು ಹಾ- ಗೆಂದು ಹೇಳಿದ ಹಿರಿಯರ ವಾಕ್ಯವ ಕೇಳಿ ಗಂಗಾಯಾತ್ರೆಗೆ ತೆರಳಿದನು 15 ನಡೆದು ಬಂದನು ನಡುಮಾರ್ಗದಿ ಪಟ್ಟಣ ಹಡೆದ ಮನೆಯ ಬಾಗಿಲಲ್ಲಿ ಕೊಡಬೇಕು ನಮಗಿಷ್ಟು ಸ್ಥಳಗಳೆಂದೆನುತಲಿ ನುಡಿದು ಪವಡಿಸಿದ ತಾನಲ್ಲಿ 16 ಹೊರಗಿಂದ ಶೆಟವಿ ಬಂದಳು ಮಹಾಲಕ್ಷುಮಿ ಒಳಗಿಂದ ಬಂದಳು ಎನ್ನ ವರಪುತ್ರ ಇವನ ದಾಟಲು ನಿನ್ನ ಶಿರವು ಸಿಡಿದು ಸಾ(ಸಹ?)ಸ್ರೊ ್ಹೀಳಾಗೋದೆನಲು17 ಅದು ಕೇಳಿ ಶೆಟವಿ ತಾ ತಿರುಗಿ ಪೋಗುತಲಿರೆ ಬದಿಯಲ್ಲಿ ಬದುಕಿದ್ದ ಶಿಶುವು ಇದು ನಿನ್ನ ಪುಣ್ಯದಿಂದುಳಿದಿತೆಂದೆನುತಿರೆ ಅಧಿಕ ಸಂತೋಷವಾಗಿ ಹೊರಟು 18 ಭಾಗೀರಥಿಯ ಸ್ನಾನವಮಾಡಿ ತಾನು ಪ್ರ- ಯಾಗಕೆ ನಡೆತರಲು ಬ್ಯಾಗ ಮಾಡಿದ ದಾನಧರ್ಮಕಾರ್ಯಗಳ ತಾ- ನಾಗ ಕಂಡನು ಚತುರ್ಹಸ್ತ 19 ನಾಲ್ಕು ಹಸ್ತಗಳ ಕಂಡಕಾರಣೇನೆಂದು ವ್ಯಾ- ಕುಲದಿಂದ ಕೇಳಿದನು ಸಾಕಿದವರು ಹಡೆದವರುಂಟು ನಿನಗೆಂದ್ವಿ- ವೇಕಬುದ್ಧಿ ಅವರು ಹೇಳಿದರು 20 ಗೊತ್ತಿಲೆ ಬಂದನು ಪಟ್ಟಣದೊಳಗೊಂಡು ಹೆತ್ತರಂದಿನದ (?) ಮಂದಿರದಿ ಹೊಸ್ತಿಲೊಳಗೆ ಅಡ್ಡಮಲಗಿದ್ದ ಕಾಲಕ್ಕೆ ಮತ್ತಾಗ ಬಂದಳು ಶೆಟವಿ 21 ಚೊಚ್ಚಿಲ ಮಗನ ದಾಟಲು ನಿನ್ನ ಶಿರವು ಬಿಚ್ಚಿ ಸಾಸ್ರೊ ್ಹೀಳಾಗೋದೆನಲು ಲಕ್ಷ್ಮಿ ಮಾತಿಗೆ ತಿರುಗಿದಳೆನ್ನ ತುತ್ತಿಗೆ ಮಿತ್ರ್ಯಾದ ಪಾಪಿ ಎಂದೆನುತ 22 ಸತ್ಯವಂತನೆ ನಿನ್ನ ಪುಣ್ಯದಿಂದಿಬ್ಬರು ಪುತ್ರರು ಉಳುದÀರಂತಿಹರು
--------------
ಹರಪನಹಳ್ಳಿಭೀಮವ್ವ
ಲಾಲಿ ಲಾಲಿ ಹನುಮ ಲಾಲಿ ಬಲಭೀಮ ಲಾಲಿ ಲಾಲಿ ಲಾಲಿ ಗುರು ಮಧ್ವನಾಮ ಪ ತ್ರೇತೆಯಲಿ ಸಾಗರವ ದಾಟಿ ನಿಮಿಷದಲಿ ಸೀತೆಗುಂಗರ ಕೊಟ್ಟು ಕುಶಲ ತಿಳಿಸುತಲಿ ದೂತರಾವಣಗೆ ಶೌರ್ಯಗಳ ತೋರುತಲಿ ಸೀತೆಯ ಕ್ಷೇಮ ರಘುನಾಥಗರುಹುತಲಿ 1 ದ್ವಾಪರದಿ ಕೃಷ್ಣನಿಗೆ ಪರಮಾಪ್ತನಾಗಿ ದ್ರೌಪದಿಯ ವಚನವನು ಸಲಿಸಬೇಕಾಗಿ ಕೋಪದಲಿ ಖಳನ ಸೀಳುತ ತೃಪ್ತನಾಗಿ ಈ ಪರಿಯಲಿ ಹರಿಗೆ ಅರ್ಪಿಸುತ ಚನ್ನಾಗಿ2 ಮಧ್ವಮತವನುದ್ಧರಿಸಬೇಕೆನುತ ಶ್ರದ್ಧೆಯಲಿ ಕೃಷ್ಣನ್ನ ಸೇವಿಸುತ ಸತತ ಮುದ್ದು ಕಮಲನಾಭ ವಿಠ್ಠಲನ ಸ್ಮರಿಸುತ್ತಸದ್ಗ್ರಂಥ ರಚಿಸಿ ಬದರಿಯಲಿ ವಾಸಿಸುತ 3
--------------
ನಿಡಗುರುಕಿ ಜೀವೂಬಾಯಿ
ಲಾಲಿಸಿ ರಘುವರನ ಚರಿತೆಯ ಸಾರ ಪೇಳುವೆ ಸುಖನಾಥನ ಪ ಶ್ರೀ ಲಲಾಮನು ಸುರರ ಮೊರೆಯನು ಭಾರ ಹರಿಸಲು ಲೀಲೆಯಲು ದಶರಥ ನೃಪಾಲನ ಬಾಲನೆನಿಸುತ ಅವತರಿಸಿದನು ಅ.ಪ. ಕುಶಿಸುತನ ಯಜ್ಞವ ರಕ್ಷಿಸಿ ಪಥದಿ ಋಷಿ ಪತ್ನಿಯ ಶಿಲಾರೂಪವ ಬಿಡಿಸಿದ ದೇವ ಪಶುಪತಿಯ ಕೋದಂಡ ಖಂಡಿಸಿ ಶಶಿವದನೆ ಜಾನಕಿಯ ಕರವನು ಕುಶಲದಲಿ ಪರಿಗ್ರಹಿಸಿ ಲೀಲೆಯ ನಸಮ ಭಾರ್ಗವನೊಡನೆ ತೋರಿದ 1 ತಂದೆ ವಾಕ್ಯವ ಪಾಲಿಸೆ ತಾ ಧರಣಿಗೆ ಬಂದ ಕಾರ್ಯವ ಸಲ್ಲಿಸೆ ಋಷಿಗಳಾಸೆ ತಂದು ತಾ ಮನಕಂಡು ವನಕೆ ಸತಿ ಸೋದರರ ಸಹಿತದಿ ಮುಂದೆ ಗಂಗೆಯ ದಾಟಿ ಭರದ್ವಾಜ ನಿಂದ ಸತ್ಕಾರವನು ಕೊಂಡನು2 ಚಿತ್ರಕೂಟದಲಿರಲು ವಿನಯದಿ ಬಂದು ಭಕ್ತ ಭರತನು ಬೇಡಲು ಪಾದುಕೆಯಿತು ಮತ್ತೆ ದಂಡಕವನ ಪ್ರವೇಶಿಸಿ ದೈತ್ಯರನು ಸಂಹರಿಸಿ ಶರಭಂಗ ಗಿತ್ತು ಮುಕ್ತಿಯ ಕುಂಭಸಂಭವ ನಿತ್ತ ದಿವ್ಯಾಸ್ತ್ರಗಳ ಪಡೆದನು 3 ವರಪಂಚವಟಿಯೊಳಗೆ ಶೂರ್ಪನಖಿಯು ದುರುಳ ಬುದ್ಧಿಯೊಳು ಬರೆ ಕಿವಿಮೂಗ ಕೊಯ್ಸಿ ಹರಿಣರೂಪದಿ ಬಂದ ದೈತ್ಯನ ಹರಣಗೈದಾಶ್ರಮಕೆ ತಿರುಗಲು | ಧರಣಿಸುತೆಯನು ಕಾಣದೆಲೆ ತಾ ನರರ ಪರಿಯಲಿ ಹಂಬಲಿಸಿದನು 4 ವನಜಾಕ್ಷಿ ವೈದೇಹಿಯ ಪುಡುಕುತ ಪಂಪಾ ಸನಿಹಕ್ಕೈತಂದು ವಾಲಿಯ ಸಂಹರಿಸ್ಯವನ ಅನುಜ ಸುಗ್ರೀವನಿಗೆ ಹರುಷದಿ ವಿನುತ ವಾನರ ರಾಜ್ಯದೊಡೆತನ ವನು ಕರುಣಿಸಿದ ಬಳಿಕ ಜಾನಕಿ ಯನು ಪುಡುಕೆ ಕಳುಹಿದನು ಕಪಿಗಳ 5 ಸ್ವಾಮಿಯ ಸ್ತುತಿಗೈಯುತ ಶ್ರೀ ಹನುಮಂತ ಆ ಮಹೋದದಿಯ ದಾಟುತ ಲಂಕೆಯ ಪೊಕ್ಕು ಭೂಮಿಜಾತೆಯ ಕಂಡು ರಾಮನ ಕ್ಷೇಮ ವಾರ್ತೆಯ ತಿಳುಹಿ ಬಹುಜನ ತಾಮಸರ ಸದೆಬಡಿದು ರಾವಣ ನಾ ಮಹಾ ನಗರಿಯನು ದಹಿಸಿದ 6 ಮರಳಿ ರಾಮನ ಬಳಿಗೆ ಬೇಗದಿ ಬಂದು ಮರುತ ಸುತನು ರಾಮಗೆ ಸೀತೆಯ ಕ್ಷೇಮ ವರುಹಿ ಚೂಡಾಮಣಿಯ ನೀಡಲು ಕರದಿ ಕೈಕೊಂಡದನು ನೋಡುತ ನರರ ಪರಿಯಲಿ ಹರುಷಬಾಷ್ಪವ ಸುರಿಸಿದನು ಶ್ರೀ ಕರಿಗಿರೀಶನು 7
--------------
ವರಾವಾಣಿರಾಮರಾಯದಾಸರು
ವಂದಿಸುವೆನು ನಿತ್ಯದೊಳು ವಂದಿಸುವೆನು ಪ ವಂದಿಸುವೆ ಗುರುಮಧ್ವರಾಯನಷ್ಟಾಂಗದೊಳು ನಿಂದಿರ್ದ ವೈಷ್ಣವಮತಚಂದ್ರವಾರಿಧಿಗೆ ಅ.ಪ ಕ್ರೋಧವರ್ಜಿತನಾಗಿ ವೈರಾಗ್ಯವನು ತೊಟ್ಟು ಬಾಧಿಸುವ ಇಂದ್ರಿಯಂಗಳನೆಲ್ಲ ಬಲಿದು ಆಧರಿಸಿ ಕ್ಷಮೆ ದಮೆ ಶಾಂತ ಸದ್ಗುಣದಿಂದ ಮಾಧುರ್ಯದೊಳು ಜನರ ಪ್ರೀತಿಕರನಾದವಗೆ 1 ಭಯವಿವರ್ಜಿತನಾಗಿ ಬಹುಲೋಭವನು ತೊರೆದು ಕ್ಷಯ ಮಾಡಿ ಮೋಹವನು ಹಿಂದುಗಳೆದು ನವವಿಧದ ಜ್ಞಾನವನು ದಶಲಕ್ಷಣಗಳಿಂದ ನಿಯತವತಿ ಕೈಕೊಂಡನಕ್ಷರ ತ್ರಯದೊಳು 2 ಏಳು ಕೋಟಿಯ ಮಹಾ ಮಂತ್ರ ಬಾಹ್ಯದ ಕೋಟೆ ನಾಲಿಗೆ ವಶಮಾಡಿ ನವದ್ವಾರಗಳು ಮೂಲಾಗ್ನಿಯಿಂ ಸುಟ್ಟು ದಶವಾಯುಗಳ ಕದವ ಸಾಲು ನಾದಗಳೆಂಬ ಕಹಳೆವಿಡಿದವಗೆ 3 ದಶವಿಧದ ಘೋಷಗಳ ಬಿಂದು ಪ್ರತಾಪದಿಂ ದಶಮನಾಗಿಯೆ ಮುಂದೆ ಡೆಂಕಣಿಯ ಹಾರಿ ಗಸಣಿಯನು ಬಿಟ್ಟು ಕಳೆಯಿಂದೇಳು ಧಾತುಗಳ ಎಸೆವ ದುರ್ಗಾಂತರಕೆ ತಾಗಲಿಟ್ಟವಗೆ 4 ಒಂದು ಮುಹೂರ್ತದಲಿ ವ್ಯಸನಗಳನು ಹೂಳಿ ಬಂಧಿಸಿಯೆ ಚಂದ್ರಾರ್ಕ ವೀಧಿಗಳ ಪ್ರಣವದೊಳು ಮುಂದೆ ಮೂಲಾಧಾರವೆಂಬ ಅರಮನೆ ಪೊಕ್ಕು ನಿಂದು ನಿಯಮದಿ ಸುಲಿದನದಿಷ್ಠಾನದರಮನೆಯ 5 ಪ್ರತ್ಯಾಹಾರದಿಂ ಮಣಿಹಾರಕದ ಮನೆಯ ಕಿತ್ತು ಕಿಚ್ಚಂ ಹಾಕಿ ಧ್ಯಾನ ಯೋಗದಿ ಬಂದ ಮತ್ತೆ ಸಂಶುದ್ಧ್ದವೆಂಬರಮನೆಯ ಕೋಲಾಹಲದಿ ಉತ್ತಮದ ಅಂಬಿಕಾ ಯೋಗದಿಚ್ಛೆಯೊಳು 6 ಜ್ಞಾನ ಮಂಟಪವೆಂಬ ರಾಜ ಮನೆಯೊಳು ನಿಂತು ಮನದೊಳು ಮೂಲ ಬಂಧದಿ ಆರು ಶಕ್ತಿಗಳ ಹೀನವಾಗಿಹ ಗುಣತ್ರಯವೆಂಬ ಗೊಲ್ಲರನು ವ- ಡ್ಯಾಣ ಬಂಧದಿ ಇರಿವುತಲಿ ಕ್ಷಿಪ್ರದಲಿ 7 ಖೇಚರಿಯ ಯೋಗದಿಂ ಕರಣ ಚತುಷ್ಟಯದ ನೀಚ ಪ್ರಧಾನಿಗಳ ನೆಗಳವನಿಕ್ಕಿ ಕಾಲ ಕರ್ಮದ ಕಣ್ಣುಗಳ ಕಿತ್ತು ಯೋಚನೆಯ ಮಾಡಿದನು ವೀರಾಸನದೊಳು 8 ಮಾಯಾ ಪ್ರಪಂಚವೆಂಬನ್ಯಾಯ ನಾಯಕರ ಕಾಯ ಉಳಿಸದೆ ಸವರಿ ವಾಸ್ತಿಯಿಂದನುಗೈದು- ಪಾಯದಿಂದಾರು ವಿಕಾರಗಳ ಕೈಗಟ್ಟಿ ಬಾಯ ಹೊಯ್ದ ಗುರುವಿಗೆರಗುವೆನು ನಾನು 9 ಇಪ್ಪತ್ತೊಂದು ಸಾವಿರವಾರು ನೂರಾದ ಉತ್ಪವನ ಉಶ್ವಾಸ ನಿಶ್ವಾಸಗಳನೆಲ್ಲ ತಪ್ಪಿಸದೆ ಕುಂಭಕದಿಂದ ಬಂಧಿಸಿಕೊಂಡು ಒಪ್ಪುವನು ಅರೆನೇತ್ರದಿಂದ ಬೆಳಗುವನು 10 ಮುನ್ನೂರ ಅರುವತ್ತು ವ್ಯಾಧಿಗಳ ಲವಳಿಯಿಂ ಬೆನ್ನ ಬೆಳೆಸಿ ಕಪಾಲ ಭೌತಿಯಿಂದಷ್ಟಮದ ವರ್ಣಾಶ್ರಮಂಗಳನು ಏಕವನು ಮಾಡಿಯೆ ನಿರ್ಣಯಿಸಿಕೊಂಡು ತಾ ನೋಡುವವಗೆ 11 ನುತಿಕರ್ಮದಿಂದಷ್ಟ ಆತ್ಮಕರ ಆಸನವ ಜೊತೆಗೂಡಿ ಜಾತ ಮಧ್ಯದ ದೃಷ್ಟಿಯಿಂದ ಅತಿವೇಗದೊಳು ನಡೆವ ಅವಸ್ಥಾತ್ರಯವೆಂಬ ಕೃತಿ ಕುದುರೆಗಳ ಯುಕುತಿಯಲ್ಲಿ ಪಿಡಿದವಗೆ 12 ನಾದದಿಂ ಪಂಚಕ್ಲೇಶ ಪ್ರಭುಗಳನು ಹೊಯ್ದು ಕಾದು ಇರುತಿಹ ಹರಿಗಳಾರು ಬಿಂದುವಿನಿಂ ಸಾಧಿಸುತ ಮಂತ್ರಭ್ರಮಣದಿಂದ ಮಲತ್ರಯದ ಆದಿ ಕರಣಿಕನನ್ನು ಹಿಡಿದವನಿಗೆ13 ದಾತೃತ್ವದಿಂ ಸತ್ಯಲೋಕವನು ತಾ ಕಂಡು ಕಾತರದಿ ಆಕಾರದುರ್ಗವನು ಹತ್ತಿ ಓತಿರುವ ತಿರಿಕೂಟವೆಂಬ ಬಾಗಿಲ ದಾಟಿ ಈ ತೆರದ ಮಹಾದುರ್ಗವನು ಕಂಡವಗೆ 14 ಅಣು ಮಾತ್ರ ಸೂಕ್ಷ್ಮದೊಳು ನೋಡಿ ತಾ ಜ್ಞಾನದೊಳು ಕುಣಿಯೊಳಗೆ ಆ ಪರಂಜ್ಯೋತಿ ಆಗಿರುತಿಪ್ಪ ಗುಣನಿಧಿಯು ವರಾಹತಿಮ್ಮಪ್ಪರಾಯನನು ಕಣು ಮನದಿ ದೃಢವಾಗಿ ನೋಡಿ ಸುಖಿಯಾದವಗೆ 15
--------------
ವರಹತಿಮ್ಮಪ್ಪ
ವಾಯುದೇವರು ನಿನ್ನ ನಂಬಿ ಬಂದೆ ಪಂಚಮುಖಿ ಪ್ರಾಣ ಅನ್ಯ ಹಂಬಲ ಬಿಡಿಸಿ ಬಿಂಬ ಮೂರುತಿ ತೋರೋ ಪ ಹಿಂದೆ ತ್ರೇತಾಯುಗದಿ ರಾಮನಾಜ್ಞೆಯ ಹೊಂದಿ ಸಿಂಧು ದಾಟಿ ಸೀತೆಗೆರಗಿ ನಿಂದು ಸುಂದರ ರಾಮ ಮುದ್ರಿಕೆಯಿತ್ತು ಲೀಲೆಯಲಿ ಕೊಂದ ರಕ್ಕಸ ಪುರವನನಲಗೆ ಇತ್ತೆ 1 ಬಂಡಿ ಅನ್ನವನುಂಡು ಭಂಡ ಬಕನಾ ಕೊಂದು ಹಿಂಡು ನೃಪರಾ ಜರಿದು ಕೊಂಡು ದ್ರೌಪದಿಯಾ ಮಂದಮತಿಗಳನಳಿದು ತಂದಿ ಸೌಂಗಂಧಿಕವ ಪುಂಡ ಕೀಚಕರಳಿದ ಪಾಂಡವಪ್ರಿಯದೂತ 2 ಮೋದತೀರ್ಥರೆನಿಸಿ ವಾದಿಗಳ ನಿಗ್ರಹಿಸಿ ಬೋಧಿಸಿ ಸುಜನರಿಗೆ ಮಾಧವನ ಗುಣವ ಸಾಧು ವಂದಿತ ಬಾದರಾಯಣರು ಇರುತಿರುವ ಬದರಿಯಲ್ಲಿರುವಿ ಶ್ರೀ ನರಹರಿಯ ತೋರೋ 3
--------------
ಪ್ರದ್ಯುಮ್ನತೀರ್ಥರು
ವಾಯುದೇವರು ಶಾಂತ ಜನರಿಗೀಶಾ ರವಿಕುಲ ಕಾಂತನ ನಿಜದಾಸ ಪ ಭ್ರಾಂತಿ ಬಿಡಿಸಿ ನಿಶ್ಚಿಂತ ಮನದಿ ವೇ- ದಾಂತವೇದ್ಯನಲಿ ಸಂತಸ ಕೊಡುವನ ಅ.ಪ. ಕಡಲ ದಾಟಿ ಬಂದೂ ಒಡೆಯನ ಮಡದಿಗುಂಗುರ ತಂದೂ ಸಡಗರದಲಿ ತುಡುಗ ದೈತ್ಯವ ಕೊಂದು ಅಡಿಯಿಡೆ ಲಂಕೆ ಸುಟ್ಟು ಸುಡುಭುಗಿ ಮಾಡಿದೆ 1 ಏಕಚಕ್ರದಲ್ಲೀ ಬಕಗೆಂ- ದ್ಹಾಕಿದ ಗ್ರಾಸದಲೀ ಶಾಖಡಿಸಲಬಿಡದೇಕತುತ್ತು ಮಾಡಿ ಭೀಕರ ದೈತ್ಯನವಲೋಕಿಸದ್ಹೊಡದೆಲೋ 2 ವಾಯು ಹನುಮ ಭೀಮ ಮಧ್ವಾ ಕಾಯೋ ಪೂರ್ಣಕಾಮಾ ಸಾಯ ಬಡಿದೀ ನೀ ಮಾಯಿಗಳೆಲ್ಲರ ರಾಯ ಶ್ರೀನಿಧಿವಿಠಲಾಯಗೆ ತಿಳಿಸಿದೆ ಎಲೆಲೋ 3
--------------
ಶ್ರೀನಿಧಿವಿಠಲರು
ವಿದ್ಯಾಮರವೇ ಉದ್ಯೋಗದ ಮರವೇ ಪ ಅಂಜನಾ ದೇವಿಯ ನೀ ಜಠರದಿ ಜನಿಸಿ ಕಂಜರಾಕ್ಷ ಶ್ರೀರಾಮಭದ್ರನ ಭೃತ್ಯನೆನಿಸಿ ಸಂಜೀವಿನಿಯ ತಂದೆ ಅಂಜದಾರ್ಣವ ದಾಂಟಿ ತಂದೆ ರಂಜಿಪ ಮುದ್ರಿಕೆಯ ಅವನಿಜಾತಳಿಗಿತ್ತು ಬಂದೆ1 ಹೆಸರಾದ ಕೌರವ ಬಲವ ಸವುರಿ ನೀ ಉಸುರಿಲ್ಲದವರನು ನೆಗಹಿ ನೀ ಮಿಸುಕದೆ ಅಸುರರ ಅಸುವ ಪೀಡಿಸಿದೆ ಅಸುನಾಥ ಹರಿಸಿ ನೀನತುಳ ತೋಷವನಿತ್ತೆ 2 ಧರೆಯೊಳು ನೀ ವರ ಕಾಪ್ಯಪುರದಿ ಜನಿಸಿ ಹರಿಮತವ ಹರಹಿ ಹರಿಸಿ ರೂಹುಗೊಳಿಸಿ ಹರಿಪರಬ್ರಹ್ಮನೆಂದರಿಯೆ ಜಗಕ್ಕೆ ಕೋರಿ ನರಸಿಂಹವಿಠಲನನುಗಾಲ ತೋರುವನು ದಾರಿ 3
--------------
ನರಸಿಂಹವಿಠಲರು
ವಿಷ್ಣುಶತಕ ಶಿರಿದೇವಿ ಹೃತ್ಕುಮುದ ಚಂದ್ರಮನೆ ಕರುಣಾರ್ಣವಾಗಣಿತ ಸದ್ಗುಣನೇ ಭಂಜನ ಮುರಾಂತಕನೇ ಪರಮಾತ್ಮ ಪಾಲಿಸು ಪರಾತ್ಪರನೇ 1 ಕಮಲಾಸನಾದ್ರಿಜೆ ಮನೋಹರ ಮು ಖ್ಯಮರಾಳಿಯಂ ಭಕುತಿಯಿಂ ಬಲಗೊಂಡು ಮ- ಹಾತ್ಮರಾದ ಗುರುಪಾದಕೆ ನಾಂ ನಮಿಸೀ ಪ್ರಬಂಧವನು ಹೇಳುತಿಹೇಂ2 ನೂರಾದ ಪದ್ಯಗಳೊಳಾಂ ಸಕಲಂ ಧಾರಾಳವಾಗಿ ತವ ಸನ್ನಿದಿಯೋಳ್ ಸಾರಂಗಳಂ ಗ್ರಹಿಸಿ ಬಿನ್ನಯಿಪೇಂ ಶ್ರಿರಾಮನೀಂ ದಯದಿ ಲಾಲಿಸಿ ಕೇಳ್ 3 ಕವಿತಾ ಧುರೀಣತೆಯು ಬಂದುದು ನಿ_ ನವ ಯುಕ್ತಿ ಚತುರತೆಗಳೊಂದರಿಯೇಂ 4 ಜೀವಕ್ಕೆ ನೀನು ಮಿಗೆ ಚಿತ್ತದಿ ಶ್ರೀ ದೇವೀ ಮನೀಷದೊಳು ಬ್ರಹ್ಮನಿಹಂ ಯಾ ವಿಶ್ವನಾಥ ಸಹ ರುದ್ರ ಮನೋ ಭಾವಂಗಳಿಂಗೊಡೆಯನಾಗಿರುವಂ 5 ಸಲೆ ಹಮ್ಮಿಗಾ ತ್ರಿಪುರ ಸಂಹರನೇ ಉಳಿದಿಂದ್ರಿಯಗಳಿಗೆ ಜಿಷ್ಣುಮುಖರ್ ಒಳಗಿದ್ದು ಒಳ್ಳಿದನು ಕೆಟ್ಟುದನೂ ಬಲವಿತ್ತು ಮಾಡಿಸುವರೈ ಹರಿಯೆ 6 ಜಲಜಾತ್ಮಜಾಭಿಮತ ಬಂಧು ಪಥಂ ಗಳು ಮೂರು ಬಗೆಯು ನೋಡಿದರೆ 7 ಮಿಗೆ ಕರ್ಮಕರ್ಮವು ವಿಕರ್ಮಗಳೂ ಜಗದಲ್ಲಿ ಎಲ್ಲರಿಗು ಮೂಲವಿದೂ ತ್ರಿಗುಣ ಪ್ರಬದ್ಧರಹ ಜೀವಗಣಾ ಖಗರಾಜ ವಾಹನನೆ ಸಾಕ್ಷಿಯು ನೀಂ 8 ಸದಸದ್ವಿವೇಕಾವನು ಕಾಣದೆ ಸ ಚಿದಚಿದ್ವಿಲಕ್ಷಣನು ನೀನೆನದೇ ಮದಗರ್ವದಿಂದ ಮೆರೆದಾಂ ಕೆಡುವೇಂ 9 ಕುಹುಕಾತ್ಮರಾದವರ ಸಂಗದಿ ಬಂ- ದಿಹ ನೋವು ನಾನಕಟ ಬಣ್ಣಿಸೇಂ10 ಅಂತವರ್ಗವಾರ್ವರು ಶರೀರದೊಳಿ ದುರ್‍ವೃತ್ತಿ ಪುಟ್ಟಿಸುತ ಕೊಲ್ಲುತಿಹರ್ ಪರಮಾತ್ಮ ನಿನ್ನವರ ಸೇರಿರುವೇಂ 11 ಮಲಮೂತ್ರ ಕೂಪವಹ ದೇಹವಿದು ಜಲಗುಳ್ಳೆ ಎಂದರಿತಡಂ ಬರಿದೇ ಕಲುಷಾತ್ಮನಾದೆ ಕರಿರಾಜವರದಾ 12 ಹಸನಾಗಿ ತೋರುತಿಹ ದುರ್ವಿಷಯಂ ಬಿಸಿನೀರು ತುಂಬಿರುವ ಬಾವಿಯಿದುಂ ಕುಸುಮಾಸ್ತ್ರನೆಂಬ ಕಡುಗಳ್ಳನು ತಾ ನೆಸಗೀ ಪ್ರವಾಹದಲಿ ನೂಕುತಿಹಂ13 ಪಾದ ಪದ್ಮಂಗಳ ನಂಬಿದೆ ವೆಂ- ಮ್ಮವಮಾನ ಮಾನಗಳು ನಿನ್ನದುದೆಂ- ದ್ವ್ಯವಸಾಯವಂತರೆ ಮಹಾತ್ಮಕರೂ 14 ಜನುಮಗಳನೆತ್ತುತಲಿ ಜೀವರು ನಿಂ ನನು ಕಾಂಬ ಯೋಚನೆ ತಿರಸ್ಕರಿಸೀ ಘನ ಕಾಮಭೋಗಗಳಪೇಕ್ಷಿಸಿತಾಂ ಧನಕಾಗಿ ದುರ್ಜನರ ಸೇವಿಸುವರು 15 ಹಿತದಿಂದ ಎಲ್ಲರಿಗೆ ನೀನೆ ಇದಂ ಮತಿಹೀನರಾದವರು ಬಾಹ್ಯರ ನಂ- ಬುತ ದುಃಖದಿಂದಲವಿವೇಕರಹರ್ 16 ಗುಣಶೂನ್ಯ ನೀನೆನುತ ಕೊಂಚ ಜನಂ ಗಣಿಸಲ್ಕಸಾಧ್ಯವಹ ವಾದಗಳಿಂ ಘನ ತರ್ಕದಿಂದ ಅನುವಾದಿಸಿ ದುರ್ ಜನ ಮುಖ್ಯರೆನಿಸುತಿಹರ್ ಭುವಿಯೊಳ್ 17 ಅನುಮಾನವೇ ತಮಗೆ ಮುಖ್ಯವೆನು- ತನುಸಾರಿ ರಾಜಸದಿ ತಾಂ ಮುಳುಗೀ ವನಜಾಕ್ಷ ಕೋರಿಕೆಗಳಿಂ ಭಜಿಪರ್ 18 ಉದರ ಪ್ರಯುಕ್ತ ಪರರಾಶ್ರಯಿಸಿ ಪದ್ಯ ಪದ್ಯ ಪೇಳಿ ಬಹುನೀಚನು ನಾ- ನುದಯಾಸಮುದ್ರರೆಲೆ ನೀವೆನುತೇ ಸುದುರಾತ್ಮರಂ ಪೊಗಳಿ ಕೆಟ್ಟೆನು 19 ಹಿತತತ್ವ ಭಾವದಲಿ ದುರ್ಜನರು ಮತಿವಂತರಂತೆ ಬಹಿಯೋಳ್ ನಟಿಸಿ ಸತಿ ಪುತ್ರ ವಿತ್ತಗಳ ಮೋಹದಲೀ ವ್ಯಥೆಪಟ್ಟು ಬಾಯ್ಬಿಡುತ ನೋಯುತಿಹರ್20 ಮೊದಲಾಗಿ ಎಲ್ಲರನು ಮಾಯದಿ ನಿ- ನ್ನುದ ರಾಖ್ಯ ವಾರಿನಿಧಿಯಿಂದಲಿ ತಾವ್ ಉದಿಸಿರ್ಪರೆಂದುಸುರುಗುಂ ಶ್ರುತಿಗಳ್ 21 ಅನುಮಾನವುಳ್ಳ ಜನಕೆಂದಿಗು ಪಾ- ಮೂರ್ತಿ ನಿನ್ನ ಘನ ಜ್ಞಾನ ಸುಖಂ ತೃಣ ಮಾತ್ರವೂ ಬರದು ಸ್ವಪ್ನದೊಳು ಜನದಲ್ಲಿ ಕೀರ್ತಿ ಬಹಿಯೊಳ್ ಬರಿದೆ 22 ಗುರುಸೇವೆಯಿಂದ ತನುದಂಡಿಸಿ ತಾ ನಿರುತಂ ಸುಶಾಸ್ತ್ರಗಳ ನೋಡುತಲಿ ಸ್ಥಿರ ಚಿತ್ತನಾಗಿ ಶ್ರವಣಾದಿಗಳಿಂ ಹರಿಭಕ್ತರಿಂದ ಕಡೆಸೇರುತಿಹಂ 23 ಕವಿಯಾದವರ್ ನಿರುತವುಂ ಮಿಗೆ ಭಾ- ಗವತಾದಿ ಗ್ರಂಥಗಳ ಸಜ್ಜನರಿಂ ಕಿವಿಯಿಂದ ಕೇಳುವುದಕಂ ಬಹು ಜ- ನ್ಮವು ಪಕ್ವವಾಗಿ ಸಲೆ ಪ್ರಾಪ್ತಿಸುಗುಂ 24 ಹರಿಕೃಷ್ಣ ಕೇಶವ ಮುಕುಂದ ನೃಕೇ- ಸರಿ ವಿಷ್ಣುವಾಮನ ತ್ರಿವಿಕ್ರಮ ಶ್ರೀ ಪದ್ಮನಾಭ ಮಧುಸೂದನ ಹೇ ಪುರಷೋತ್ತಮೌಚ್ಯುತ ಜನಾರ್ದನನೇ 25 ವಸುದೇವ ನಂದನ ಮುರಾಂತಕನೇ ಹೃಷಿಕೇಶ ನಾರೇಯಣ ಮಾಧವನೇ ಪರಿ ಪಾ- ಲಿಸುಪೇಂದ್ರ ಭಕ್ತರ ಅಧೋಕ್ಷಜನೇ 26 ಪರಮಾತ್ಮ ನೀನೆಮಗೆ ಎನ್ನುತನಂ- ಬರು ನಿನ್ನ ತಾಮಸರು ಸತ್ಯವಿದು ನೆರೆ ನೋವಿನಿಂಬಳಲಿ ತಾವ್ ಮಿಗೆ ಸಂ- ಸರಣ ಪ್ರವಾಹದೊಳು ಬೀಳುತಿಹರ್ 27 ದ್ಗುಣದಲ್ಲಿ ದುರ್ಗುಣಗಳೇ ಗಣಿಸಿ ಘನ ಮೋಹ ದುಃಖದೊಳು ಸತತ ನಿ- ನ್ನನು ಕಾಂಬ ಯೋಚನೆಯ ಬಿಟ್ಟಿರುವರ್ 28 ನ್ನನು ನಂಬಿ ನಂಬಿದಲೆ ತಾವ್ ನಿರತಂ- ಘನ ಕಾಮ ಕ್ರೋಧ ಮದ ಮತ್ಸರದಿಂ ಜನದಿಂದ ಯತ್ನವನು ಮಾಡುತಿಹರ್ 29 ದೇವಾದಿದೇವ ದಿವಿ ಭೂಮಿಗಳೋಳ್ ಭಾವ ಪ್ರಭೇದದಲಿ ಧ್ಯಾನಿಪರಿಂ- ಗೀ ವೇಷ್ಟಸಿದ್ಧಿಗಳ ನೀನೆ ಸದಾ 30 ಯೋಗಿ ಜನವಂದಿತ ಸ- ಜ್ಜನಕಲ್ಪವೃಕ್ಷ ಜಗದೇಕ ವಿಭೋ ವನಜಾಕ್ಷ ಇಂದಿರೆಯ ವಲ್ಲಭ ಬ್ರಾ- ಹ್ಮಣ ಪ್ರೀಯ ಭಕ್ತಸುಖದಾಯಕನೇ 31 ರವಿಕೋಟಿತೇಜ ರಮಣೀಯ ಕಥಾ- ತವನಾಮ ಕೀರ್ತನೆಯ ಮಾಳ್ಪರ ಪಾ- ಪವ ನೀನೆ ಓಡಿಸುವುದೇನರಿದೈ 32 ವರಾಹ ನೃಕೇ- ಸರಿ ವಾಮನಾವನಿ ಸುರೋತ್ತಮ ಭಾ- ಸ್ಕರ ವಂಶ ಚಂದ್ರವಸುದೇವಜ ಭಾ ಬುದ್ಧ ಕಲ್ಕ ವಪುಷೇ ನಮಃ 33 ಮುನಿಕರ್ದಮಂಗುದಿಸಿ ತಾಯಿಗೆ ಪಾ ವನ ರಾಜಯೋಗವನು ಬೋಧಿಸಿದೈ ಘನಯೋಗಿವರ್ಯ ಕಪಿಲಾಖ್ಯನೆನಿ- ನ್ನನು ನಂಬಿ ಪ್ರಾರ್ಥಿಸುವೆನಾನನಿಶಂ 34 ರ್ಜುನ ಕಾರ್ತವೀರ್ಯಗುಪದೇಶಿಸಿದೇ ಘನಯೋಗ ಬೋಧೆಯನು ಹೈಹಯರ್ ತಾ ವನುವಾದ ಶಿಷ್ಯರೆಲೆದತ್ತವಿಭೋ 35 ಋಷಭಾಖ್ಯನಾಗಿ ಸುತರಿಂಗೆ ಮಹಾ ಋಷಿಚರ್ಯ ಬೋಧಿಸಲವರ್ ತಿಳಿದು ದಶಯೋಗಿವಂದಧಿಕ ಎಂಬತ್ತು ಭೂ- ಮಿಸುರಕ್ರಿವೃತ್ತಿಯಲಿ ಶೋಭಿಸಿದರ್ 36 ಜಂಭ್ವಾಖ್ಯ ದ್ವೀಪದೊಳು ಖಂಡಗಳಿಂ ಅಂಭೋಜನಾಭ ತವನೇಮದಲೀ 37 ಹರಿ ನೀನೆ ಪುಟ್ಟಿಯದು ಸ್ಥಾಪಿಸಿ ದು ರ್ನರರನ್ನು ಕೊಂದು ಶರಣಾಗತರಂ ಪರಿಪಾಲಿಸುತ್ತಿರುವೆ ಸಂತತವುಂ 38 ಕಲಿಕಾಲವೀಗ ಖಳರೆಲ್ಲರು ಸ- ತ್ಕುಲದಲೆ ಪುಟ್ಟಿ ನೆರೆ ಸಾಧುಗಳಂ ಬಲುಬಾಧಿಸುತ್ತ ದುರಿತಂ ಘಳಿಸೇ ನರಕಂಗಳಲ್ಲಿ ನೆರೆಯಾಗುತಿಹರ್ 39 ಪರಮಾತ್ಮ ತತ್ವದಲಿಯೇ ಮರವು ದುರ್ವಿದ್ಯವಭ್ಯಸಿಪುದಕೆ ಮನವು 40 ಪರರನ್ನು ನೋಡಿಯವರಂತೆ ತಾ ವಿರಬೇಕೆನ್ನುತ್ತಲನಿಶಂ ಬಳಲೀ ಗುರುಯತ್ನಮಾಡಿ ವಿಫಲಾಗಲು ಶ್ರೀ ಹರಿ ನಿನ್ನದೂರುತಿರುವರ್ ದುರುಳರ್41 ಕರ್ಣ ಮುಖರಿಂದಲಿ ಸಂ ಗರದಲ್ಲಿ ಕಾದಿ ಮಡಿದಂ ಬರಿದೇ42 ಜಮದಗ್ನಿ ಪುತ್ರನಿಗೆ ಶಿಷ್ಯನು ಭೀ ಷ್ಮಮಹಾ ಪರಾಕ್ರಮಿಯು ದ್ರೋಣನುತಾಂ ಕಮಲಾಪ್ತಪುತ್ರ ಕಲಿ ಶಲ್ಯ ಮುಖ್ಯರ್ ಭ್ರಮೆಯಿಂದಲನ್ನಕಸುಗಳ್ ತೊರೆದರ್ 43 ಯಮಜಂ ವೃಕೋದರನು ಫಲ್ಗುಣನೂ ಯಮಳರ್ ತವಾಂಫ್ರಿಸ್ಮøತಿಯೇ ಬಲವಾ- ಗಿ ಮಹಾಪದಂಗಳನು ದಾಂಟಿದರೈ ಸುಮಬಾಣನಯ್ಯನೆ ಮಹಾತ್ಮರವರ್ 44 ಹರಿ ನಿನ್ನ ಡಿಂಗರಿಗರಿಗಾಶ್ರಯವೇ ವರಭಾಗ್ಯ ನಿತ್ಯಸುಖವೆನ್ನುತಲೀ ಅರಿದುತ್ತಮರ್ ಬಯಸರೆಂದಿಗು ಪಾ- ಮರರಂತೆ ತುಚ್ಛಗಳ ಸ್ವಪ್ನದೊಳು 45 ಸಲೆ ಚಿನ್ನ ಬೆಳ್ಳಿ ಬೆಲೆ ಹೆಚ್ಚು ಪಟ ಗಳ ಗೃಹಕ್ಷೇತ್ರ ಸುತದಾರ ಧನ- ಗಳ ನಿತ್ಯವೆಂದರಿದು ಲೆಕ್ಕಿಸದೇ ಜಲಜಾಕ್ಷ ನಿನ್ನ ಭಜಿಪರ್ ಸುಜನರ್ 46 ಸುಜನಾಬ್ಧಿ ಚಂದ್ರ ಸುಗುಣಾರ್ಣವ ನೀ ನಿತ್ಯ ನಿರವದ್ಯ ಸ್ವಭಾ ವಜ ಕರ್ಮದಿಂ ಸಕಲ ಪ್ರಾಣಿಗಳೂ ನಿಜಯೋಗ್ಯತೆಯಂತೆ ವರ್ತಿಪುದು 47 ಕರುಣಾನಿಧೇ ಕಮಲಲೋಚನನೆ ಸು- ರರಾಜ ಸೋದರನೆ ಭಾವಜನೈ ಯರಮಾಧಿನಾಥ ಯದುವಂಶ ಭೂ ರಥಾಂಗ ಪಾಣಿಯೆ ಜನಾರ್ದನನೇ 48 ರಘುವಂಶಕೇತು ರವಿಮಂಡಲದೋಳ್ ಭಗವನ್ನಿರಂತರದಿ ನೀನಿರುತೆ ಜಗಕೆಲ್ಲ ಕಾಲದನುಸಾರದಿ ನೀ ನಘನಾಳಿಯಿಂದ ಮಳೆಯಂ ಕೊಡುವೇ 49 ವಿಭುದಾಗ್ರಗಣ್ಯರಹ ಜ್ಞಾನಿಗಳೂ ಶುಭವನ್ನು ಲೋಕಕೆ ಸದಾಚರಿಸಿ ನಭ ಭೂಮಿ ಮಧ್ಯದಲಿ ಕೀರ್ತಿ ಸೌ- ರಭವಾಗಿ ಸ್ಥಾಪಿಸಿ ವಿಮುಕ್ತರಹರ್ 50 ಯೋಗ ಪ್ರವರ್ತನೆಯಲೇ ಸುಖಿಸಿ ರೋಗಾದ್ಯುಪದ್ರಗಳು ಇಲ್ಲದಲೇ ರಾಗಾದಿ ದೋಷಗಳ ಸುಟ್ಟಿರುವರ್ 51 ಮನವಾಕ್ಕು ಕಾಯಗಳೊಳೊಂದೆ ವಿಧಂ ಋಣಮುಖ್ಯ ಸೂತಕಗಳಿಲ್ಲದೆಲೇ ಗುಣವಂತರೆನ್ನಿಸಿಯೇ ಶೋಭಿಸುತಾ ಜನದಲ್ಲಿ ಮೌನದಲಿ ವರ್ತಿಸುವರ್ 52 ನರರೊಳ್ ದಿವೌಕಸರು ಪುಟ್ಟುತಲೀ ಹರಿಭಕ್ತಿಯುಕ್ತರೆನಿಸುತ್ತಲಿಸ- ತ್ವರದಿಂದ ಸಾಧನವ ಮಾಡುತಲೀ<
--------------
ಗುರುರಾಮವಿಠಲ
ವೃಂದಾವನದಿ ನಿಂದಿಹನ್ಯಾರೆ ಗೋವಿಂದನಲ್ಲದೆ ಚಂದಿರವದನೆ ನೋಡುವ ಬಾರೆ ಪ. ಕೋಟಿಸೂರ್ಯ ಪ್ರಕಾಶ ಕಿರೀಟದ ಬೆಳಕಿದು ಹಾಟಕಾಂಬರಧರನ ನೋಟದಿ ಸುಖಿಸೆ ಕೋಟಲೆ ಸಂಸಾರ ದಾಟಿ ಪೋಗಿ ಕೃಷ್ಣ ನಾಟ ನೋಡಿ ಮನ ಕವಾಟವ ಬಿಚ್ಚೆ ಪೂರ್ಣ ನೋಟದಿ ನೋಡುವ 1 ರಂಗನಾ ಕೊಳಲ ಬೆಳದಿಂಗಳ ಸೊಗವಿಲೆ ಮ್ಮಂಗವ ಅಂಗಜನೈಯ್ಯಗೀಯುತೆ ಕಂಗಳಿಗ್ಹಬ್ಬವೆ ರಂಗನ ನೋಡುತೆ ಗಂಗಾಜನಕನ ವಲಿಸಲು ನಮಗೆ ಹಿಂಗದ ಮುಕುತಿಯ ರಂಗಗೊಡುವ ಬಾರೆ 2 ಜಯ ಜಗದೀಶನ ಜಯ ರಮಕಾಂತನ ಜಯ ಕರ್ಮನೀಯನ ಜಯ ಶ್ರೀ ಶ್ರೀನಿವಾಸನ ಜಯ ಯದು ತಿಲಕನ ಜಯ ಕೂಡಾಡುವ ಜಯಪ್ರದನಾಗುತೆ ಜಗದಿ ಪೊರೆವ ಬಾರೆ 3
--------------
ಸರಸ್ವತಿ ಬಾಯಿ
ವೇಣುಗೋಪಾಲದಾಸರ ಸ್ತೋತ್ರ ಕರೆದು ಕೈ ಪಿಡಿಯೊ ಎನ್ನ ವೇಣುದಾಸದೊರೆಯೆ ಪತಿತ ಪಾವನ್ನ ಪ ಕರೆದು ಕೈ ಪಿಡಿಯೊ ನೀ ಕರಬಿಡದೆ ನಿನ್ನಚರಣವೆ ಗತಿಯೆಂದು ಮರೆ ಬಿದ್ದ ಮನುಜನ್ನ ಅ.ಪ. ಸುಜನ ಪಿನಾಕ ಜನರ ಕೂಡಾ ಸಾ-ಹಜ ಭಕುತಿಯಲಿ ಯಜಿಸಿ ಮೋಹವೃಜನ ದಾಟಿ ದ್ವಿಜವರಾಗ್ರಣಿ 1 ಸಂತರ ಸಲಹುವನೇ ಸಂಗಡಲೇ ನಿ-ಶ್ಚಿಂತರ ಮಾಡುವುದೇಎಂತು ಪೇಳಲು ಎನಗಂತು ತೋರದು ದುಷ್ಟಭ್ರಾಂತಿಯಿಂದಲಿ ಮಾಳ್ಪ ಕಂತುಗಳಿಗೆ ಲೇಶಅಂತ ಕಾಲಕ್ಕೆ ಚಿಂತಾಕಾಲಯಾಪಂಥ ಸಾರುವದಿಂತು ಸರಿ ಜಗ-ದಂತು ರಂಗನ ಮುಂತು ತಿಳಿವ-ದೆಂತುಪಾಯವು ಶಾಂತದಾತನೆ 2 ಅರಿದೇನು ಆಪ್ತ ಬಂಧು ಪಾಮರನ ಉ-ದ್ಧರಿಪದು ನಿನಗೆ ಇಂದುಸರಿಸಾ ದೂರದಿ ನಿನ್ನ ಸ್ಮರಣೆ ಮಾಡುವೆ ಆ-ಲ್ಪಿರಿದು ಬಾಯಿ ಬಿಡುವೆನೊ ಮರೆಯಲಾಗದು ತಂದೆದುರುಳ ವಿಷಯಕ್ಕೆರಗುವೆ ಅಂತಃ-ಕರುಣ ನಿಲಿಸಿ ಪೊರೆವ ಭಾರವುನಿರುತ ನಿನ್ನದು ವ್ಯಾಸವಿಠಲನಭರದಿ ಪೊಗಳುವ ಪರಮ ಧನ್ಯಾನೆ 3
--------------
ವ್ಯಾಸವಿಠ್ಠಲರು
ವೈಷ್ಣವನಾರೆಂದು ದೃಷ್ಟಿಸಿ ಸೃಷ್ಟಿಯೊಳು ವಿಷ್ಣುನರಿತವನೆ ವೈಷ್ಣವನು| 1 ಭಕ್ತಿರಸದೊಳು ಮುಣುಗಿ ಭಕ್ತಿಗೈದುವ ಗತಿಯ ಯುಕ್ತಿ ತಿಳಿದವನೆ ವೈಷ್ಣವನು 2 ಹರಿ ಪರಂದೈವೆಂದು ಹರಿಯ ಕೊಂಡಾಡುತಲಿ ಹರಿಯ ನೆನೆಯುವನೆ ವೈಷ್ಣವನು 3 ಹರಿ:ಓಂ ತತ್ಸದಿತಿಯೆಂಬ ಹರಿವಾಕ್ಯವನು ಅರಿತವನೆ ಪರಮ ವೈಷ್ಣವನು 4 ಹರಿಧ್ಯಾನ ನೆಲೆಗೊಂಡು ಹರಿನಾಮ ಬಲಗೊಂಡು ಹರಿಯ ಸ್ಮರಿಸುವವನೆ ವೈಷ್ಣವನು 5 ಪರದೆ ಇಲ್ಲದೆ ಪಾರ ಬ್ರಹ್ಮಸ್ವರೂಪನು ಗುರುತ ಕಂಡವನೇ ಪರಮ ವೈಷ್ಣವನು6 ಗುರುಕೃಪೆಯಿಂದ ಪರಗತಿ ಸಾಧನವು ಮುಟ್ಟಿ ಅರಿತು ಬೆರೆದನೆ ಪರಮ ವೈಷ್ಣವನು 7 ಮೂಲ ಮೂರುತಿಗ್ಯಾಗಿ ಮೇಲಗಿರಿಯನೇರುವ ಕೀಲ ತಿಳಿದವನೆ ವೈಷ್ಣವನು 8 ಉಂಟಾಗಿ ಇರುಳ್ಹಗಲಿ ಗಂಟ್ಹಾಕಿ ಹರಿಪಾದ ಬಂಟನಾದವನೆ ವೈಷ್ಣವನು 9 ಕಂಟಕ ನೀಗಿ ಮೂರು ಬಲೆಯನು ದಾಟಿ ಮೀರಿ ನಿಂದವನೇ ವೈಷ್ಣವನು 10 ಆಶಿಯನೆ ಜರಿದು ನಿರಾಶೆಯನು ಬಲಿದು ಹರಿದಾಸನಾದವನೆ ವೈಷ್ಣವನು 11 ದ್ವಾದಶನಾದವನು ಸಾಧಿಸಿ ಕೇಳುತಲಿ ಭೇದಿಸಿದವನೆ ವೈಷ್ಣವನು 11 ಅನುದಿನ ಘನಸುಖವು ಅನುಭವಿಸುವನೆ ವೈಷ್ಣವನು 12 ವಿಷ್ಣುಭಕ್ತಿಯ ಸುಖವು ಮುಟ್ಟಿ ಮುದ್ರಿಸಿ ಪುಷ್ಟವಾಗಿದೋರುವನೆ ವೈಷ್ಣವನು 13 ವಿಷ್ಣುಮೂರ್ತಿಯ ಧ್ಯಾನ ದೃಷ್ಟಾಂತ ಮಹಿಪತಿಗೆ ಕೊಟ್ಟಾ ಗುರು ಪರಮ ವೈಷ್ಣವನು 14
--------------
ಕಾಖಂಡಕಿ ಶ್ರೀ ಮಹಿಪತಿರಾಯರು