ಒಟ್ಟು 2131 ಕಡೆಗಳಲ್ಲಿ , 113 ದಾಸರು , 1427 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆನಂದತೀರ್ಥ ವಂದ್ಯ ಪಾಲಿಪುದು ಸು- ಜ್ಞಾನ ಭಕುತಿಯಾನಂದ ಸಾನುರಾಗದಿ ಕಾಯೊ ಸನಕಾದಿ ಮುನಿವಂದ್ಯ ಪ. ಅಖಿಳ ವೇದವಿದಿತ ದಾಸೀಕೃತ ವಿಖನಸಗಣವಿನುತ ನಿಖಿಳ ದೋಷದೂರ ಸಕಲ ಸದ್ಗುಣಪೂರ ಪ್ರಕಟನಾಗೀಗೆನ್ನಿದಿರಿನಲಿ ಸುರನಿಕರನಂದನ ನೀರದಪ್ರಭ 1 ಮಾರನಂದನ ನಿನ್ನಯ ಲೀಲಾಮೃತವಾರುಧಿಯೊಳಗಿಳಿದು ಶ್ರೀರಮಣಿಯು ಇನ್ನು ಪಾರಗಾಣದೆ ತತ್ವ- ಸಾರ ನಿನ್ನುರವನು ಸೇರಿಕೊಂಡಿಹಳು ಕ್ರೂರ ಕರ್ಮಾಚರಣ ತತ್ವವಿಚಾರಗಂಧ ವಿದೂರವಾಗಿಹ ಹಾರಕೂಪದಿ ಮುಳುಗಿರುವನ ಕರಾರವಿಂದದಿ ಪಿಡಿದು ರಕ್ಷಿಸು 2 ವೇದ ಸ್ಮøತ್ಯುಕ್ತವಾದ ಕರ್ಮಗಳೆಂಬೊ ಹಾದಿಯನರಿಯೆ ಇನ್ನು ಈ ಧರೆಯೊಳಗಿಹ ತೀರ್ಥಕ್ಷೇತ್ರಯಾತ್ರೆ- ಯಾದರು ಮಾಡದಿನ್ನು ಎನ್ನನು ಶ್ರೀಧರ ಕರಕಮಲ ಪೂಜಿತಪಾದ ನಿನಗೊಪ್ಪಿಸಿದೆ ದೈನ್ಯದಿ ಕಾದುಕೊಂಬುವ ನೀನೆ ಕರುಣಾಂಬೋಧಿ ಶೇಷಧರಾಧಿರೇಶನ 3
--------------
ತುಪಾಕಿ ವೆಂಕಟರಮಣಾಚಾರ್ಯ
ಆನಂದಮೆಂದಿದಕೆ ಹೆಸರಿಟ್ಟೀ ಪಾಪಿ ಪ ಮನಬಂದತೆರ ಸೇಂದಿ ಸೆರೆಕುಡಿದು ಉಬ್ಬಿ ಅ.ಪ ಕೊಡ ಪಡಗ ಹೆಂಡವನು ಕುಡಿದು ಎಚ್ಚರದಪ್ಪಿ ತಡೆಯದಲೆ ಮಲಮೂತ್ರ ಬಿಡುತದರೋಳುರುಳಿ ಬಡಿಸಿಕೊಂಡಟ್ಟೆಯಿಂ ಒಡನೆ ಎಚ್ಚರವೊಂದಿ ಕೆಡಿಸಿದಾನಂದಮ್ಹಿಡಿ ಕೊಡುವೆ ಶಾಪೆನುವಿ 1 ಅವಸರದಿಂ ಜಿಹ್ವೆಯ ಸವಿರುಚಿ ಲವಲವಿಕೆಯಿಂ ಭವಿಜನುಮಿಗಳು ಎಲ್ಲ ಕವಿದುಬಂದಿಳಿದು ಸವಿಯಬಾರದ್ದು ಸವಿದು ಶಿವನೆನಾವೆಂದೆನುವ ಭವಿಗಳೆಲ್ಲರು ಜಗದಿ ಶಿವನ ಪೋಲುವರೆ2 ಕದ್ದು ಮುಚ್ಚಿಲ್ಲದಲೆ ಮುದ್ದೆ ಮುದ್ದೆ ಗಾಂಜವನು ಸಿದ್ಧಪತ್ರೆಂದೆನುತ ಶುದ್ಧಮತಿಗೆಟ್ಟು ಬದ್ಧರೆಲ್ಲ ಸೇದಿ ನಿಜ ಪದ್ಧಿತಿಯನ್ಹದಗೆಡಿಸಿ ಶುದ್ಧಾತ್ಮರೆನಲು ಪರಿಶುದ್ಧರಾಗುವರೆ 3 ನಾನುನೀನೆಂದೆಂಬ ಖೂನಡಗಿ ಎತ್ತ ತಾನೆ ತಾನೆಂದು ಹೊಳೆವ ಬ್ರಹ್ಮ ಆನಂದ ಸೊಬಗು ಏನೊಂದು ತಿಳಿಯದೆ ಆನಂದವೆಂದೆನುತ ಶ್ವಾನನಂದದಿ ಕೂಗ್ವಿ ಜ್ಞಾನಾಂಧ ಅಧಮ 4 ಹುಚ್ಚುಮನುಜನೆ ನಿನಗೆ ಹೆಚ್ಚಿನ ಗೋಜ್ಯಾಕೆ ನಿಶ್ಚಲಭಕುತಿಂ ಬಚ್ಚಿಟ್ಟು ಮನದಿ ಅಚ್ಯುತ ಶ್ರೀರಾಮನ ಹೆಚ್ಚೆಂದು ದೃಢವಹಿಸಿ ಎಚ್ಚರದಿ ಭಜಿಸಿ ಭವಕಿಚ್ಚಿನಿಂದುಳಿಯೊ 5
--------------
ರಾಮದಾಸರು
ಆನಂದಾದ್ರಿ ವಾಸ | ವಿಠಲ ಪೊರೆ ಇವನಾ ಪ ಮಾನಮೇಯ ಜ್ಞಾನ | ಸಾನುಕೂಲಿಸಿ ಇವಗೆನೀನಾಗಿ ಪೊರೆಯೊ ಹರಿ | ಕೋನೇರಿವಾಸಾ ಅ.ಪ. ಚಿತ್ರ ಚಾರಿತ್ರ | ಶುಭಗಾತ್ರನೇ ಶತಪತ್ರನೇತ್ರಕರವಾದ ದ್ವಂದ್ವ | ಸೂತ್ರಾಂತರಾತ್ಮ |ಮಿತ್ರನಾನುಗ್ರಹಕೆ | ಪಾತ್ರನ ಸಲಹೊ ಮಾಕಳತ್ರನೇ ನಿನ್ನ ಸುಪ | ವಿತ್ರ ಪದ ನಮಿಪೇ 1 ಕರುಣವೆಂತುಟೊ ನಿನಗೆ | ಶರಣಜನ ವತ್ಸಲನೇಕರೆದೊಯ್ದು ಸ್ವಪ್ನದಲಿ | ಹರ ಗಿರಿಜೆ ತೋರೀ |ಮರಳಿ ಬ್ರಹ್ಮನ ಲೋಕ | ದರುಶನಾನಂದದಲಿಕರೆದೊಯ್ದು ಕರುಣಾಳು | ಸುರಸೇವ್ಯ ಬದರಿಗೆ 2 ದಶಮತಿಗೆ ಬೋಧಿಸುವ | ವ್ಯಾಸದರ್ಶನ ಭಾವಿದಶಮತಿಯ ಸಹವಿರುವ | ವ್ಯಾಸ ಭಕ್ತನ್ನಾ |ಹಸನಾಗಿ ತೋರಿ ನೀ | ವಸುಮತಿಗೆ ಕರೆತಂದುಬೆಸಸಿದೆಯಾ ಫಲದೈವ | ದರ್ಶನಕೆ ಇವನಾ 3 ಬದ್ಧನಾದರು ಇಹದಿ | ಶುದ್ಧ ಸಂಸ್ಕøತನಿಹನುಮಧ್ವಮತ ದಾಸತ್ವ | ಶ್ರದ್ಧೆಯುಳ್ಳವನೇಬುದ್ಧಿಯಲಿ ಎನಗೆ ಉ | ದ್ಬುದ್ಭವನೆ ಮಾಡ್ದ ಪರಿತಿದ್ದಿ ಅಂಕಿತವಿತ್ತು | ಬುದ್ಧಿ ಪೇಳಿಹೆನೋ 4 ಸಂಚಿತ ಕರ್ಮ | ತೀವ್ರದಲಿ ದಹಿಸೇಗೋವುಗಳ ಪಾಲ ಗುರು | ಗೋವಿಂದ ವಿಠ್ಠಲನೆಭಾವದಲಿ ಬಿನ್ನವಿಪೆ | ನೀ ವೊಲಿದು ಸಲಿಸೋ 5
--------------
ಗುರುಗೋವಿಂದವಿಠಲರು
ಆರತಿಪದ ಆರುತಿಯ ಮಾಡುವೆನೆ ಮಾರಜನನಿಯೆ ಲಕ್ಷ್ಮೀ ಪ ಭಂಗಾರದ ತಾಟಿನೊಳು ಶೃಂಗಾರದಾರುತಿ ಪಿಡಿದುರಂಗನಂಗನೀಯ ಲಕ್ಷ್ಮೀ ಮಂಗಳ ಪದವಪಾಡಿ 1 ಮುತ್ತಿನಾರತಿ ನಿನಗೆ ಎತ್ತಿನಿಂತೆನೆ ತಾಯಿಭಕ್ತಹೃದಯೆ ಇತ್ತಕಡೆ ನೋಡೆ ದೇವಿ 2 ಇಂದಿರೇಶನ ರಾಣಿ ಸುಂದರ ಸರೋಜವದನೆಇಂದುರಂಗ ರಾಮಕೃಷ್ಣರನ್ನು ತೋರಿಸಮ್ಮಾ ರಾಮೆ 3
--------------
ಇಂದಿರೇಶರು
ಆರತಿಯನೆತ್ತುವೆನು ವಾರಿಜಾಕ್ಷ ಕೃಷ್ಣ ನಿನಗೆ ಪ ಮಾರಸುಂದರ ಮೋಹನಾಂಗ ಸಾರಸಾಕ್ಷ ಕೃಪಾಪಾಂಗ ಕಮಲ ನಯನ ಹರಿಯೆ ನಿನಗೆ ವಿಮಲಮುತ್ತಿನ ಆರತಿಯ ಕಮಲ ಮುಖಿಯು ಕರದಿ ಪಿಡಿದು ಕಮಲವದನ ಕೃಷ್ಣ ನಿನಗೆ 2 ಜಾಣ ಪ್ರಾಣನಾಥ ವಿಠಲ ಆಣಿ ಮುತ್ತಿನ ಆರತಿಯ ಜಾಣತನದಿ ಕರದಿ ಪಿಡಿದು ಪ್ರಾಣಕಾಂತ ಕೃಷ್ಣ ನಿನಗೆ 3
--------------
ಬಾಗೇಪಲ್ಲಿ ಶೇಷದಾಸರು
ಆರು ಪೇಳಿದರೊ ಜೀವಾ ನಿನಗಾರು ಪೇಳಿದರೋ ಪ ಆರು ಪೇಳಿದರೋ ಈ ಸೋರುವ ಮನೆಯೊಳು ಇರುವುದು ಒಳಿತಲ್ಲಾ ತೆರಳುವುದುಚಿತನೇ ಅ.ಪ. ದುಷ್ಟರಿರುವರೋ ಈ ಗ್ರಹದೊಳು ಕಟ್ಟಿ ಸುಲಿಯುವರೋ ಇಟ್ಟಿದ್ದ ಅನ್ನದಿ ಕೆಟ್ಟ ಕ್ರಿಮಿಗಳುಂಟು ಮುಟ್ಟಿ ಬಳಸುವರಿಲ್ಲ ಹೊಟ್ಟೆ ತುಂಬಿದೋ ಅಲ್ಲಿ 1 ಛಾಯಾವೂ ಇಲ್ಲಾ ಈ ಮನೆಯೊಳು ದಾಯಾವೂ ಇಲ್ಲಾ ಬಾಯ ಬಿಡಿಸುವರೋ ಅನ್ಯಾಯ ಮಾಡುವರೋ ಉಪಾಯದಿಂದಲಿ ಬಿಟ್ಟು ಹಯವದನನ ಶೇರೋ 2 ತರುಣರಿರುವರೋ ಈ ಮನೆಯೊಳು ಮರುಳು ಮಾಡುವರೋ ಪರುಮ ಹರುಷ ನಮ್ಮ ಹನುಮೇಶ ವಿಠಲನ ನೆರೆ ನಂಬಿ ಸ್ಮರಿಸುವ ಸ್ಥಿರ ಪದವನು ಸೇರೊ 3
--------------
ಹನುಮೇಶವಿಠಲ
ಆರು ಸಂಗಡ ಬಾಹೊರೆಲೆ ಮನುಜ ನಿನಗೆ ಹಾರೈಸಿ ಬಳಲುವೆ ಬರಿದೆ ಭವದೊಳಗೆ ಪ ಗುರುಹಿರಿಯರಗ್ನಿಯ ಪರಿಮುಖದಿ ನಿನ್ನಯ ಕರಪಿಡಿದು ಮಾಂಗಲ್ಯ ಧರಿಸಿಕೊಂಡರ್ಧ ಶರೀರವೆನಿಸುವ ಸತಿಯು ಮರಣ ಕಾಲದಿ ನಯನ ತಿರುಗುವುದ ಕಂಡಂಜಿ ತಿರಿಗಿನಿಂತಳುತಿಹ್ಯಳು 1 ತನುಜಮನುಜರಿವರೆಲ್ಲ ನಿನಗತಿಹಿತ ಬಂಧು ಮಣಿದು ಸೇವಿಪರು ನಿನ್ನನುದಿನವು ಬಿಡದೆ ತನುಬಿಟ್ಟ ಕ್ಷಣದಿ ನನನಿನಗೆನುತ ಮನೆಕೀಲಿ ಘನ ಜಗಳ ಕಾಣು ಬಿದ್ದ್ಹೆಣದ ಪರಿವಿಲ್ಲದೆ 2 ಕುಲವಿದ್ಯವ್ಯವಹಾರ ಕಳವುಕೊಲೆ ನೃಪಸೇವೆ ತಲೆ ಬಾಗಿ ಜನರಲ್ಲಿ ಬಲುದೈನ್ಯ ಬಟ್ಟು ಗಳಿಸಿ ಹೂಳಿದ ದ್ರವ್ಯ ಎಳೆದೊಯ್ಯಲ್ಯಮ ನಿನ್ನ ತಲೆಯೆತ್ತಿ ನೋಡದಲೆ ನೆಲದಿ ನಿಲ್ಲುವುದು 3 ಭೂಮಿ ನಿನ್ನದು ಎಂದು ನೇಮವನು ಬರಕೊಂಡು ಕೋಮಲ ಮನೆಕಟ್ಟಿ ತಾಮಸದಿ ನಲಿವಿ ಭೂಮಿಯ ರಿಣತೀರಿ ನೀ ಮಡಿದಾಕ್ಷಣ ಬಹಿ ರ್ಭೂಮಿಯೋಳ್ಹುತಿವರೆಲೆ ಪಾಮರ ಮನುಜ 4 ಬಂಧುಬಾಂಧವರೆಲ್ಲ ಹಿಂದೆ ಉಳಿಯುವರು ಮಂದನಾಗದೆ ತಂದೆ ಶ್ರೀರಾಮ ಪಾದಾರವಿಂದಮಂ ನಂಬಿ ಭವಬಂಧವನು ಗೆಲಿಯೊ 5
--------------
ರಾಮದಾಸರು
ಆರುಸರಿ ಮಾರುತಿಯೆ ನಿನಗೆ ಆರುಯೆಂಟು ಭುವನದೊಳಗೆ ಪ ಎತ್ತಿ ತೂಗಿದಿ ಶಿವನಪುರಿ ಕಿತ್ತು ತಂದಿ ಸಂಜೀವನ ಗಿರಿ ಮತ್ತೆರಕ್ಕಸಬಲವ ತೂರಿ ಮುತ್ತಿ ತರಿದೋ ಹಾರಿ ಹಾರಿ1 ಲಂಘಿಸಿ ಬಲವಂತ ಭರದಿ ಲಿಂಗ ತಂದು ಸಮರ್ಪಿಸಿದಿ ಮಂಗಳಾತ್ಮನಿಂದ ಪಡೆದಿ ಲಿಂಗಕೋಟಿ ರೋಮರೋಮದಿ 2 ನಾಮಬಲವ ಗಳಿಸಿದಿ ಈ ಮಹಭವಸಾಗರ ತುಳಿದಿ ಭೂಮಿಗಧಿಕ ಸ್ವಾಮಿ ಶ್ರೀ ರಾಮನೊಲಿಸಿ ಧನ್ಯನಾದಿ 3
--------------
ರಾಮದಾಸರು
ಆರೋಗÀಣೆಯ ನೀ ಮಾಡಯ್ಯಾ ಯದುಕುಲ ವಾರಿಧಿ ಚಂದ್ರಮನೆ ಪ ಸಾರಸನಯನ ಅಪಾರಮಹಿಮ ಕರು ಣಾರಸ ಪರಿಪೂರ್ಣಸಾರ ಭೋಕ್ತನೆ ಸ್ವಾಮಿ ಅ.ಪ. ಬಡವನು ನಾ ನಿನಗೆ ಕೊಡಲರಿಯೆನೊ ಸ್ವಾಮಿ ಪೊಡವಿಗೊಡೆಯ ನಿನ್ನ ಅಡಿಭಕ್ತ ನಾನಯ್ಯ ಕಡಲಶಯನ ಒಂದು ಕುಡಿತೆ ಪಾಲನು ನಿನಗೆ ಕೊಡುವೆನು ನಿತ್ಯತೃಪ್ತ ಒಡನೆ ಸ್ವೀಕರಿಸಯ್ಯಾ ಮೃಡವಂದಿತ ಪದಜಡಜಯುಗಳದಲಿ ದೃಢಭಕ್ತಿಯ ನೀ ಕೊಡು ಕೈ ಬಿಡದಲೆ ನುಡಿಗೆ ನುಡಿಗೆ ನಿನ್ನ ನಾಮವ ನುಡಿಸಯ್ಯ ಬಡವರ ಬಂಧುವೆ ಕರಿಗಿರೀಶನೆ 1
--------------
ವರಾವಾಣಿರಾಮರಾಯದಾಸರು
ಆರೋಗಣೆ ಮಾಡಮ್ಮ ಮಂಗಳಗೌರಿ ಬೇಡಿಕೊಂಬೆನೆ ನಿನಗೆ ಬೇಡಿದಡಿಗೆ ಎಡೆ ಮಾಡಿ ತಂದಿಟ್ಟಿಹೆ ಜೋಡಿಸಿ ನಿನಗೆ ಕೈ ಮುಗಿವೆನೆ ಮಹಾತಾಯೆ ಪ ನಂದಿವಾಹನನರ್ಧಾಂಗಿಯ ಪೂಜಿಸಿ ಗಂಧಕುಂಕುಮದಿಂದ ತಂದು ಕಸ್ತೂರಿ ಕಮಲದ ಪುಷ್ಪಗಳುಡಿ ತುಂಬಿ ನೈವೇದ್ಯವ ತಂದಿರಿಸುವೆ ತಾಯೆ 1 ಅಚ್ಚ ಮುತ್ತಿನ ಹರಿವಾಣದಿ ಮಾಲತಿ ಬಟ್ಟ್ಟಿವಿ ಗೌಲಿಗಳು ಅಷ್ಟಗುಳ್ಳವು ಶಾವಿಗೆ ಪರಡಿ ಪಾಯಸ ಭಕ್ಷ ಎಣ್ಣೋರಿಗೆ ಭಾರಿಬಟ್ಟಲು ತುಪ್ಪ 2 ಮಂಡಿಗೆ ಚೂರ್ಮವು ಬುಂದ್ಯ ಬೀಸೋರಿಗೆ ದುಂಡುಗುಳ್ಳೋರಿಗೆಯು ಚೆಂದವಾಗಿದ್ದ ಚಕ್ಕುಲಿ ಕರ್ಜಿಕಾಯ್ಗಳು ಅಂದವಾದ ಕಾಯಿರಸ ಶಾಖ ಪಾಕವು 3 ಸಣ್ಣ ಅಕ್ಕಿಯ ಶಾಲ್ಯಾನ್ನಕೊಪ್ಪುವ ತವ್ವೆ ಇನ್ನು ದಧ್ಯನ್ನಗಳು ಸನ್ಮತವಾಗಿದ್ದ ಶಾವಿಗೆಫೇಣಿ ಸಕ್ಕರೆ ರುಬ್ಬಿದ ಆಂಬೊಡೆ ರುಚಿಯಾದ ಕಲಸನ್ನ 4 ಘೃತ ಸೀಕರ್ಣೆ ಕಾಯ್ಹಾಲು ಹೊಯ್ಗಡುವನಿಟ್ಟು ಸಾರು ಸಾಂಬಾರ ಚಟ್ಟಣಿ ಕೋಸಂಬರಿ ನೀರೆ ನಿನಗೆ ಪನ್ನೀರು ತಂದಿರಿಸುವೆ 5 ದೇವಿ ನಿನ್ನ ಮನೋಭಾವ ತಿಳಿದು ನಾ ಭೀಮೇಶಕೃಷ್ಣನಿಗೆ ಬ್ಯಾಗ ಸಮರ್ಪಣೆ ಮಾಡಲು ಮಹಾದೇವ ಸ್ವಾದ ಸವಿದಾಸುಖದಿಂದಡ್ವಿಳ್ಯವ ಕೊಳ್ಳೆ 6
--------------
ಹರಪನಹಳ್ಳಿಭೀಮವ್ವ
ಆರೋಗಣೆಯ ಮಾಡು ಶ್ರೀವೆಂಕಟೇಶ ಸಾಗರಶಯನನೆ ಸರ್ವವ್ಯಾಪಕ ಕೃಷ್ಣ ಪ ಗಂಗೆಯ ಜನಕಗೆ ಮಂಗಳ ಅಭಿಷೇಕ ಸಂಭ್ರಮದಲಿ ಮಾಡಿ ತವಕದಲಿ ಶಂಭುವಂದಿತಗೆ ಪೀತಾಂಬರನುಡಿಸಿ ಪಾ- ದಂಗಳನೆ ಪೂಜಿಸುತ ಸ್ತುತಿಪರು ಇಂದಿರಾಪತಿ ಶೀಘ್ರದಿಂದಲಿ 1 ಅಪ್ರಮೇಯನೆ ನಿನಗೆ ಅಪ್ಪಾಲು ಅತಿರಸ ವಪ್ಪಾದ ವಡೆದೋಸೆ ಚಿತ್ರಾನ್ನವೂ ಸತ್ಯಮೂರುತಿ ನಿನಗೆ ಮುತ್ತಿನಂಥಲಾಡುಓಗರ ಮತ್ತೆ ಪಾಯಸ ಮೊಸರು ಬುತ್ತಿ ವಿ- ಚಿತ್ರದಲಿ ತಂದರ್ಪಿಸಿಹರು2 ಕನಕ ಮಂಟಪದೊಳು ಕರ್ಪೂರದಾರತಿ ವಿನಯದಿ ಮಾಡುತ್ತ ನಮಿಸುವರು ಮನಕೆ ಬೇಸರ ಬೇಡ ಕಮಲನಾಭ ವಿಠ್ಠಲ ಘಮ ಘಮಿಪ ತಾಂಬೂಲ ವೀಳ್ಯವ ತವಕದಲಿ ಸ್ವೀಕರಿಸು ಶ್ರೀಶಾ 3
--------------
ನಿಡಗುರುಕಿ ಜೀವೂಬಾಯಿ
ಆರ್ತಭಾವ ಸುಳಾದಿ ಧ್ರುವತಾಳ ವೊಂದು ತೋರೆನಗರವಿಂದನಯನ ಮಂದಾಕಿನಿಯ ಪಡೆದ ಮುದ್ದು ಚರಣ ಸುಂದರಾಂಗ ತೋರೆನಗೆ ಸುರೇಂದ್ರನಾಥ ಕಂದರ್ಪಪಿತನ ಕಾಲಂದಿಗೆ ರುಳಿ ಗೆಜ್ಜೆ ಚೆಂದುಳ್ಳ ಪದ್ಮರೇಖೆಯಿಂದೊಪ್ಪುವೊ ಇಂದಿರೆ ಕರಕಮಲದಿಂದ ಪೂಜಿತನಾದ ಚಂದ್ರವದನ ನಿನ್ನ ಚೆಲುವ ಪಾದ ಇಂದ್ರಾದಿ ಹರ ನಾರಂದ ಸುರಬ್ರಹ್ಮಾದಿ ವಂದ್ಯ ನಿನಗೆ ಕೋಟಿ ನಮೋ ನಮೋ ಎಂದು ಬೇಡುವೆ ದಯಾಸಿಂಧು ಎನಿಸಿದಾತ ಕಂದನಂದದಿ ನೋಡಿ ಸಲಹೋ ಎನ್ನ ಮಂದಬುದ್ಧಿಯ ಮಹಾಮದಡ ಪಾಮರ ಭವ ಬಂಧನದೊಳು ಸಿಲುಕಿ ನೊಂದೆನಯ್ಯ ಸಂದೇಹ ಮಾಡದೆ ಸಲಹದಿದ್ದರೆ ನಿನ್ನ ಹೊಂದಿ ಬಾಳುವುದೆಂತೊ ಮುಂದರಿಯೆ ಬಿಂದು ಮಾತ್ರದಿ ನಾಮಾಮೃತವ ಭೀಮೇಶಕೃಷ್ಣ ತಂದು ನೀಡೆನಿಗೆ ಇಂದೀವರಾಕ್ಷ 1 ಮಠ್ಯತಾಳ ಯುಗಳ ಪಾದಕೆ ಕೈಯ ಮುಗಿದು ಬೇಡುವೆನಯ್ಯ ಜಗದುದರನೆ ನಿನ್ನ ಜಾಣತನವ ಬಿಟ್ಟು ಅಗಣಿತಗುಣಮಹಿಮ ಅಂತರಾತ್ಮಕ ದೇವ ಬಗೆಬಗೆಯಲಿ ಸಲಹೋ ಭಕ್ತವತ್ಸಲ ನಿನ್ನ ಮಗುವೆಂದೆನ್ನ ಕಾಯೊ ಮಂದರೋದ್ಧರ ದೇವ ನಿಗಮಗೋಚರ ಸ್ವಾಮಿ ನಿಂತು ನೋಡುತ ಎನ್ನ ಚಿಗುರುದೋಷದಕುಡಿಯ ಚಿವುಟಿ ಹಾಕುತ ನಿನ್ನ ಸುಗುಣಗಳನೆ ಬಿಟ್ಟೆನ್ನವಗುಣವೆಣಿಸಿದರೆ ಇಗೋ ನಿನಗಪಕೀರ್ತಿ ಈಗ ಒಪ್ಪಿಸುವೆನು ಬಿಗಿದ ಭವಪಾಶ ಬಿಚ್ಚಿ ಭೀಮೇಶಕೃಷ್ಣ ತೆಗೆಯದೆ ನಿನ್ಹೊರತೀ ಜಗದೊಳಗುಂಟೇನಯ್ಯ 2 ವಚನ ಸಕಲ ಸ್ನಾನವು ನೇಮ ಹೋಮ ಜಪಂಗಳು ಸಕಲ ಪುಣ್ಯಕ್ಷೇತ್ರ ಮೂರ್ತಿನಾಮಂಗಳು ಸಕಲ ಪುರಾಣ ವೇದಾದಿಗ್ರಂಥಗಳು ಸಕಲ ಕಾರ್ಯವು ಸರ್ವೇಷ್ಟ ಫಲಂಗಳು ಸಾಯುಜ್ಯ ಪದವಿಗಳು ಲಕುಮೀಶ ಇವು ನಿನ್ನ ನಖಶಿಖ ಪರಿಯಂತ್ರ ಸಾರಥಿ ಸಮದೃಷ್ಟಿಲಿ ನೋಡಲು ಸಕಲಸಿದ್ಧ್ದಿಯು ಸರಿಯಾಗಿ ಕೈಗೂಡೋದು ಶಕಟಸುರಾಂತಕ ಕಕುಲಾತಿ ಮಾಡದೆ ಬಕನ್ವೈರಿಯೆನ್ನ ಭಾರವ ನೀ ವಹಿಸಲಿ ಬೇಕೊ ಇಕೋ ನಿನ್ನ ಚರಣಕ್ಕೆ ಈ ದೇಹ ಅರ್ಪಿಸುವೆ ಗೋಕುಲಾವಾಸ ನಿನ್ನ ಪಾದಕೆ ನಮಸ್ಕರಿಸುವೆ ಮುಕುತಿದಾಯಕ ಮುದ್ದು ಭೀಮೇಶಕೃಷ್ಣನೆ ಭಕುತಿಜ್ಞಾನದಲಿಡೊ ಭಯಹಾರಿ ಎನ್ನ 3 ಗೋಪಸುತನೆ ನಿನ್ನ ಗುರುವಿನ್ವಲ್ಲಭೆ ಮಹ ದಪರಾಧವೆಣಿಸದೆ ನೀ ಕರುಣದಲೆ ಸಾಂ- ದೀಪಗೆ ಸುತರನಿಟ್ಟ ಪಯಾಂಬುಧಿವಾಸ ಕೋಪದಿ ಬಯ್ದ್ದಾ ಶಿಶುಪಾಲಗೊಲಿದೆಯೊ ಶ್ರೀಪತಿ ಶರಣೆಂದಾ ದ್ರೌಪದಿ ಕಾಯ್ದಂತೆ ಕಾಪಾಡೊ ಈ ಭವಕೂಪದೊಳಗೆ ಬಿದ್ದೆ ನೀ ಪಿಡಿಕೈಯ ದಯಾಪರಮೂರುತಿ ಆಪತ್ತು ಬಾಂಧವ ಈ ದೇಹವೃಕ್ಷದಲಿ ದ್ವಾ- ಸೂಪರಣನಂತೆ ದೂರೇನೋ ಎನ್ನ ಸ- ಮೀಪದಲ್ಲಿದ್ದು ಸ್ವರೂಪ ತೋರದಲೆ ಸಂ- ತಾಪ ಬಡಿಸದಿರೆಂದಾಪನಿತು ಪೇಳ್ವೆ ಭೂಪಾಲ ಭೀಮೇಶಕೃಷ್ಣ ನಿನ್ನ ಪಾದ ನಾ ಪೊಂದಿದೆನೊ ದೊರೆ ನೀ ಪೊರೆಯೆಂದು 4 ಜತೆ ಏಸೇಸು ಕಾಲಕೆ ಬ್ಯಾಸರದೆ ಭೀಮೇಶಕೃಷ್ಣ ಲೇಸು ನೀಡೆನಗೆ ಸದಾ ಸುಮಂಗಳವ 5
--------------
ಹರಪನಹಳ್ಳಿಭೀಮವ್ವ
ಆವ ಕಾರಣ ಮೊಗವ ತಿರುಗಿಹಿದ್ಯೊ ಪೇಳು ಭೂವರಹ ಸ್ವಾಮಿ ಪುಷ್ಕರಣಿ ತೀರಗನೆ ಪ ರಥ ಸಮೂಹಗಳೇರಿ ನೀ ಪ್ರಕಾಶಿಪ ಬಗೆಯೇ ಸತಿಯ ಲಾವಣ್ಯಾತಿಶಯವ ನೋಡುವ ಬಗೆಯೋ ಮಿತಿಯಿಲ್ಲದಸುರರ ಉಪೇಕ್ಷೆ ಮಾಡುವ ಬಗೆಯೋ ಪತಿತ ಪಾವನ ಪೂರ್ಣಕಾಮ ನಿನಗೆ ನುತಿಸಿ ಬಿನ್ನೈಸುವೆನು ಪೇಳೋ ಗುಣಧಾಮಾ 1 ಭಜಕರೆನ್ನನು ಬಿಡರೆಂಬ ಮನಸಿನಾ ಬಗೆಯೇ ಅಜಭವಾದಿಗಳ ಸಂಸ್ತುತಿಗಳಾಲಿಪ ಬಗೆಯೋ ರಜನೀಚರರ ಸದೆಯ ನಾಟ್ಯವಾಡುವ ಬಗೆಯೇ ಭುಜಗ ಭೂಷಣ ಪೂಜ್ಯ ಚರಣ ತ್ರಿಜಗದ್ವಿ ಲಕ್ಷಣ ಸುರೂಪಾ ನಿರ್ಲೇಪ 2 ಅನುಗರೊಶ ನೀನಾದಡೆಮ್ಮನ ಮರೆವರೆಂದು ವನತಿಗಾರರಿಯದಂತುಪದೇಶಿಸು ಬಗೆಯೋ ಘನಲಕ್ಷಣ ಮುಖಾಬ್ಜವನು ಚುಂಬಿಸುವ ಬಗೆಯೋ ವನಜ ಸಂಭವನ ನಾಸಜನೆ ಜಗ ಜ್ಜನಕ ಜಗನ್ನಾಥವಿಠ್ಠಲ ಕೃಪಾಸಾಂದ್ರಾ 3
--------------
ಜಗನ್ನಾಥದಾಸರು
ಆವ ಬಗೆಯಲಾದರು ಕರುಣದಿ ದೇವ ಕೃಪೆದೋರೋ ಪ. ಭಾವ ಭಕುತಿಯಲಿ ತೋಯಜಾಕ್ಷನೆ ನಿನ್ನ ಕಾವ ಕರುಣಿಯೆಂದು ಭಾವಿಸಿ ಕರೆವೆನು ಅ.ಪ. ವಿಪ್ರರಾಗಮವಾದರೂ ಸರಿ ಕ್ಷಿಪ್ರದೊಳವನ ಸಂಗದಿ ಅಪ್ಪಾ ನೀ ನೆರೆಯುವ ಸಪ್ಪಳಾ ತೋರುತ ಬಪ್ಪೆ ಎಂದೆನೆವೆನು ಅಪ್ಪ ತಿಮ್ಮಪ್ಪನೇ 1 ಮಕ್ಕಳೊಳಗಾದರೊ ನಿನ್ನಯ ಆಟ ಪಕ್ಕನೆ ತೋರೋ ದೇವನೆ ಚಿಕ್ಕ ಕೃಷ್ಣನೆ ನಿನ್ನ ರೂಪವ ನೆನೆಯುತ ಪರಿ 2 ಮನೆಗೆಲಸದೊಳು ನಿನ್ನಯ ಧ್ಯಾನ ತನು ಮನ ನೆನೆಯುತಲಿ ದಿನದಿನದಲಿ ಸುಖ ದುಃಖದೊಳು ಮನಸಿಜಪಿತ ನಿನ್ನ ನೆನಸುವ ಪರಿಯಲಿ 3 ಹಿರಿಯರಾಗಮವಾಗಲು ನಾನವರೊಳು ಕಿರಿಯಳಂದದಿ ಇರುವ ಪರಿ ಮನವನಿತ್ತೂ ಪೊರೆ ಕರುಣಾಳು ಕರಣ ಶುದ್ಧಳಾ ಮಾಡಿ ಕರೆ ನಿನ್ನ ಬಳಿಗೆ 4 ಕನಸಲಾದರೂ ನಿನ್ನ ಮನಸಿಜಪಿತನೆ ಮನನ ಮಾಡುತ ನೆನೆಯುವ ಘನಕೃಪೆಯಿತ್ತು ಎನ್ನ ಜನುಮ ಸಾರ್ಥಕಗೊಳೆ ಈತನು ನಿನಗರ್ಪಿಸಿಹೆ ದಿನಮಣಿ ಶ್ರೀ ಶ್ರೀನಿವಾಸ 5
--------------
ಸರಸ್ವತಿ ಬಾಯಿ
ಆವ ಸಿರಿಯಲಿ ನೀನು ಎನ್ನ ಮರೆತೆದೇವ ಜಾನಕೀರಮಣ ಪೇಳು ರಘುಪತಿಯೆ ಪ ಸುರರ ಸೆರೆಯನು ಬಿಡಿಸಿ ಬಂದೆನೆಂಬಾ ಸಿರಿಯೆಕರಿ ಮೊರೆಯ ಲಾಲಿಸಿದೆನೆಂಬ ಸಿರಿಯೆಶರಧಿಗೆ ಸೇತುವೆಗಟ್ಟಿದೆನೆನ್ನುವಾ ಸಿರಿಯೆಸ್ಥಿರವಾಗಿ ಹೇಳೆನಗೆ ಹೇಳು ರಘುಪತಿಯೆ 1 ಕಡಲೊಳಗೆ ಮನೆಮಾಡಿ ಮಲಗಿದೆನೆಂಬಾ ಸಿರಿಯೆಮೃಢ ನಿನ್ನ ಸಖನಾದನೆಂಬ ಸಿರಿಯೆಬಿಡದೆ ದ್ರೌಪದಿ ಮಾನ ಕಾಯ್ದೆನೆಂಬಾ ಸಿರಿಯೆದೃಢವಾಗಿ ಹೇಳೆನಗೆ ದೇವಕೀ ಸುತನೆ2 ಭೂಮಿಯನು ಮೂರಡಿಯ ಮಾಡಿದೆನೆಂಬ ಸಿರಿಯೆಕಾಮ ನಿನ್ನ ಸುತನಾದನೆಂಬ ಸಿರಿಯೆಆ ಮಹಾಲಕುಮಿ ನಿನ್ನ ಸತಿಯಾದಳೆಂಬ ಸಿರಿಯೆಪ್ರೇಮದಲಿ ಹೇಳೆನಗೆ ಸ್ವಾಮಿ ಅಚ್ಯುತನೆ 3 ಮನುಜರೆಲ್ಲರು ನಿನ್ನ ಸ್ತುತಿಸುವರೆಂಬ ಸಿರಿಯೆಹನುಮ ನಿನ್ನ ಬಂಟನಾದನೆಂಬ ಸಿರಿಯೆಬಿನುಗು ದೈವಗಳು ನಿನಗೆಣೆಯಿಲ್ಲವೆಂಬ ಸಿರಿಯೆಅನುಮಾನ ಮಾಡದೆ ಪೇಳೊ ನರಹರಿಯೆ 4 ಇಂತು ಸಿರಿಯಲಿ ನೀನು ಎನ್ನ ಮರೆತರೆ ಸ್ವಾಮಿಪಂಥವೇ ನಿನಗಿಚಿದು ಆವ ನಡತೆಕಂತುಪಿತ ಕಾಗಿನೆಲೆಯಾದಿಕೇಶವ ರಂಗಚಿಂತೆಯನು ಬಿಡಿಸಿ ಸಂತೋಷವನು ಪಡಿಸೊ5ಚಿ
--------------
ಕನಕದಾಸ