ಒಟ್ಟು 834 ಕಡೆಗಳಲ್ಲಿ , 99 ದಾಸರು , 717 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಏನು ಮಾಡಿದೆ ಮೂಢಮನುಜಾಮಾನವ ಜನುಮದಿ ಬಂದೀ ಜಗದೀ ಪ ದೇಶದ ಸೇವೆಗೆ ತನು ನೀಡಿದೆಯಾಭಾಷೆಯ ಏಳ್ಗೆಗೆ ಮನ ಮಾಡಿದೆಯಾಕಾಸಿಗಾಗಿ ವಂಚಿಸಿ ನಿನ್ನೊಡಲಿನಪೋಷಣೆಗಾಗಿ ದುಡಿದೆಯಲ್ಲದೆ 1 ಆರ್ತರ ದುಃಖವನೀಡಾಡಿದೆಯಾಸ್ವಾರ್ಥದ ಹಂಬಲ ಬಿಟ್ಟು ನಡೆದೆಯಾಪೂರ್ತಿಯಾಗಿ ಜನಹಿತ ನೋಡಿದೆಯಾಧೂರ್ತತನವ ಬರಿದೆ ತೋರಿದೆಯಲ್ಲದೆ 2 ಮದಮತ್ಸರಗಳ ನೆಲಕೆ ಬಡೆದೆಯಾಹೃದಯ ನಿರ್ಮಲಗೊಳಿಸಿ ನುಡಿದೆಯಾಮುದದಿ ಗದುಗಿನ ವೀರನಾರಾಯಣನಪದವನೊಮ್ಮೆಯಾದರೂ ಸ್ಮರಿಸಿದೆಯಾ 3
--------------
ವೀರನಾರಾಯಣ
ಏನೆಂದಳೇನೆಂದಳೋ ಪ ನಿನ್ನೊಳು ಸೀತೆ ಹನುಮಯ್ಯ ಅ ಜನಕನರಮನೆಯಲ್ಲಿ ಜನಿಸಿ ಸುಖದಲ್ಲಿರಲುಧನು ಮುರಿದು ಕೈಹಿಡಿದು ತನ್ನಘನ ಪದವಿಯನು ಬಿಟ್ಟು ವನವ ಸೇರಿದನೆಂದುವನಿತೆ ತಪಿಸುತೆ ಮನದಿ ನೊಂದು 1 ಕುರುಹಿನುಂಗುರವನು ತರಳಾಕ್ಷಿಗಿತ್ತಾಗತಿರುಳಿಗಿಂತಧಿಕವೇ ಕರಟವೆಂದುಬೆರಳಿಂದ ಚಿಮ್ಮಿದಳೆ ಅಶೋಕವನದಾಚೆಗೆನಿರುತ ಸಂತಾಪದಲಿ ಮನದಿ ನೊಂದು 2 ಸೇತುವೆಯ ಕಟ್ಟಿ ಸಿಂಧುಗೆ ವಿಭೀಷಣಾಗ್ರಜಾತ ಲಂಕಾಧಿಪನ ವಧಿಸಿಸೀತೆಯನು ಸೆರೆಯಿಂದ ಬಿಡಿಸಿದ್ದೆ ಆದರೆನಾಥಾದಿಕೇಶವಗೆ ಬಲು ಬಿರುದು ಎಂದು3
--------------
ಕನಕದಾಸ
ಏನೆಂದು ಬಣ್ಣಿಸಲಿ ಗುರುರಾಯನಾ | ತಾ ನೆನೆದವರ ಧನ್ಯಗೈಸುವನಾ ಮಹಿಮೆ ಪ ಧರಿಯೊಳಜ್ಞಾನ ತಮಹರಣ ಭಾಸ್ಕರ ನೆನಿಪ | ಕರ ಕಮಲದಲಿ ಜನಿಸೀ | ವರಮೂಲ ಮಂತ್ರವನೆ ಗುರು ಮಹಿಪತಿಯಂಬಾ | ನಿರುತ ಖ್ಯಾತಿಯ ನಾಮ ಧರಿಸಿ ಬಂದನ ಮಹಿಮೆ1 ಘನಸಾರ ವಿದ್ಯದಾಕಾರವೋ | ಶುದ್ಧಜ್ಞಾನ ಕಲ್ಪ ದ್ರುಮವಿನಾ | ಮುದ್ದು ಫಲವೋಯನಲು ಸಿದ್ಧ ಸಾಧಕರ ನಡು | ಗದ್ದುಗೆಯೊಳೆಸೆವ ಗುಣ ನದ್ವೀತಿಯನ ಮಹಿಮೆ 2 ಸ್ವಸ್ಥ ಮನದಿಂದ ಭಕುತಿ ಸ್ತವನ ಮಾಡಲಿಕೆ | ಮಸ್ತಕದ ಮ್ಯಾಲಭಯ ಹಸ್ತನೀಡೀ | ಅಸ್ತಿ ಭಾತಿ ಪ್ರಿಯಂ ವಸ್ತು ವಿದೇಶ ಸಕಲ ಹೃದ | ಯಸ್ಥನೆಂದನು ಭವವ ವಿಸ್ತರಿಸುವನ ಮಹಿಮೆ 3 ಆರಿಗಳವಡದಿಹ ನೈರಾಸ್ಯ ವೃತ್ತಿಯಾ | ತಾರದಲಿ ನಡೆದು ಮುನಿ ವೈರಾಗ್ಯದಾ | ಸಿರಿ ಸಂಪದವ ತೋರಿದನು ನೋಡಲಿಕೆ | ಸಾರ ಸಾಂಖ್ಯವು ಯೋಗ ದಾರಿ ಬಲ್ಲನ ಮಹಿಮೆ4 ಹೊಂದಿದ್ದವರ ಚಿದಾನಂದ ಸುಖಸಾಗರದಿ | ನಿಂದು ಲೋಲ್ಯಾಡಿಸಿದ ನಂದಿಗಿಂದು | ತಂದೆ ಮಹಿಪತಿ ತನ್ನ ದ್ವಂದ್ವಪಾದುಕೆಗಳನು | ನಂದನ ಸಿರದಲ್ಲಿಟ್ಟು ಛಂದ ನೋಡುವನ ಮಹಿಮೆ5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಏನೇನು ಬೇಕಯ್ಯ ಶ್ರೀ ಹರಿಯೆ ನಿನಗೇ ನೀನೆ ಗತಿಯೆಂದು ಸರ್ವಸ್ವವೊಪ್ಪಿಸುವೇ ಪ ತರಳನಾಗಿಹ ಧೃವನು ಘೋರ ತಪವಂಗೈಯ ಹರುಷದಿಂ ಬಾಲಕಗೆ ವರ ಪದವಿಯಿತ್ತೇ ಕರುಣಾಳು ಶ್ರೀ ಹರಿಯೇ ನಿಂನ ಮೆಚ್ಚಿಸಲಿಕ್ಕೆ ಉರುತರದ ತಪವು ಬೇಕೇನೊ ನಾನರಿಯೇ 1 ದೊರೆಯು ರುಕುಮುಂಗದನು ಯೇಕಾದಶೀವ್ರತವ ಸರಸದಿಂದಾಚರಿಸೆ ನಿಜಭಕ್ತಗೊಲಿದೇ ಕರುಣಾಳು ಶ್ರೀಹರಿಯ ನಿನ್ನ ಮೆಚ್ಚಿಸಲಿಕ್ಕೆ ಉರುತರದ ವ್ರತವು ಬೇಕೇನೊ ನಾನರಿಯೇ 2 ತರಳ ಪ್ರಲ್ಹಾದ ತಾ ಹರಿನಾಮ ಕೀರ್ತಿಸಲು ದುರುಳ ತಾತನ ಕೊಂದು ಕಂದನನು ಪೊರೆದೆ ಕರುಣಾಳು ಶ್ರೀ ಹರಿಯೆ ನಿಂನÀ ಮೆಚ್ಚಿಸಲಿಕ್ಕೆ ಉರುತರದ ಕೀರ್ತನೆಯು ಬೇಕೋ ನಾ ನಾನರಿಯೇ 3 ಭರದಿ ದುಶ್ಯಾಸನನು ಮಾನವಂ ಕಳಯುತಿರೆ ಸರಳೆಗೇ ನೀನೊಲಿದು ಅಕ್ಷಯವನಿತ್ತೇ ಕರುಣಾಳು ಶ್ರೀಹರಿಯೆ ನಿನ್ನ ಮೆಚ್ಚಿಸಲಿಕ್ಕೆ ಉರುತರದ ಸ್ತೋತ್ರಗಳು ಬೇಕೋ ನಾನರಿಯೇ4 ಧರಣಿಸುತೆ ಜಾನ್ಹಕಿಯೆ ಹುಡುಕಲ್ಕಿ ವಿಕ್ರಮದಿ ಶರಧಿಯನು ದಾಟಿದಗೆ ಭರದಿಂದಲೊಲಿದೇ ಕರುಣಾಳು ಶ್ರೀಹರಿಯ ನಿನ್ನ ಮೆಚ್ಚಿಸಲಿಕ್ಕೆ ಉರುತರದ ದಾಸ್ಯತ್ವ ಬೇಕೋ ನಾನರಿಯೇ 5 ನಿರುತದಾಸರು ನಿನ್ನ ಸೇವೆಯನು ಮಾಡಲ್ಕೆ ಕರುಣದಿಂ ದಾಸರಿಗೆ ಪ್ರತ್ಯಕ್ಷನಾದೇ ಕರುಣಾಳು ಶ್ರೀ ಹರಿಯ ನಿನ್ನ ಮೆಚ್ಚಿಸಲಿಕ್ಕೆ ಉರುತರದ ಸೇವೆ ಬೇಕೇನೊ ನಾನರಿಯೇ 6 ವರ ದುರ್ವಾಪುರದಲ್ಲಿನಿತ್ತು ಮೆರೆಯುವಿಯೆಂದು ಸಿರಿ ಚನ್ನಕೇಶವನೆ ಪರಮಾತ್ಮನಂದೂ ಕರುಣಾಳು ಶ್ರೀ ಹರಿಯೆ ನಿನ್ನ ನಂಬುತಲಿಂದು ಮರೆಹೊಕ್ಕೆ ಕಾಯೋ ಶ್ರೀ ಈಶ ಸರ್ವೇಶಾ 7
--------------
ಕರ್ಕಿ ಕೇಶವದಾಸ
ಏಸು ರೂಪಾಯ್ಗೆ ಕೊಂಡು ಕೊಂಡೆವ್ವಾ ಒಸರುವ ಗಡಿಗೆ ಪ ಏಸುರೂಪಾಯ್ಗೆ ಕೊಂಡುಕೊಂಡೆವ್ವಾ ಏಸುರಾಪಾಯ್ಗೆ ಕೊಂಡುಕೊಂಡಿ ಹೇಸಿಕೊಳ್ಳದೆ ಇದನು ನೀನು ಬೇಸರಿಲ್ಲದೆ ತೊಳೆಯುತಿದ್ದಿ ವಾಸನಿಕ್ಕಿ ನಾರುತಿದೆ ಅ.ಪ ಎಂಥ ಕುಂಬಾರಿದನು ಮಾಡಿದ ಎಷ್ಟುಕಾಲದಿ ಕುಂತು ಇದಕೆ ಶೋಧ ಹುಡುಕಿದ ಅವನು ದಾವ ಸಂತೆಯೊಳಗೆ ಕುಂತು ಮಾರಿದ ಕೊಂಡೇನುತಿಳಿದ ತಂತು ತಿಳಿಯದೆ ಹೊತ್ತುಕೊಂಡು ನಿಂತಿಯಿದರ ಖ್ಯಾಲಿನೊಳಗೆ ಸಂತೆ ತೀರಿಹೋಗಲಾಗೇನಂತ ಹೇಳುವಿ ಕೇಳುವವರಿಗೆ 1 ಕಷ್ಟದ್ಹೊತ್ತು ಕುದಿಯುತಿದ್ದ್ಯಲ್ಲ ಹುಚ್ಚು ಎಷ್ಟುದುಡಿದು ತುಂಬುತಿದ್ದ್ಯಲ್ಲ ನಿಲ್ಲದಿನಿತು ಅಷ್ಟು ಒಸರಿ ಬಸಿಯುತಾದಲ್ಲ ಖೂನ ನಿನಗಿಲ್ಲ ನಟ್ಟನಡುವೆ ಗಂಟುಬಿದ್ದು ಕೊಟ್ಟು ನಿನಗೆ ಕಷ್ಟ ವಿಧ ವಿಧ ಕಟ್ಟ ಕಡೆಗೆ ಕೈಯ ಬಿಟ್ಟು ಕೆಟ್ಟು ಮಣ್ಣು ಕೂಡುತಾದೆ 2 ಮಸಣಿಬುದ್ಧಿ ನೀಗಿ ಕೇಳಮ್ಮ ನಿಜವನಿರುತ ಕುಶಲರ್ಹೇಳುವ ಮಾತು ತಿಳಿಯಮ್ಮ ಮುಂದೆ ಮಹಕಾಲ ನಿಶೆಯು ಒದಗುತದೆ ತಂಗೆಮ್ಮ ಪುಸಿಯಲ್ಲವಮ್ಮ ಮಸಿಯ ಗಡಿಗ್ಹಿಡಿದು ಹಸನಮಾಡಿ ವಸುಧೆಗಧಿಕ ಶ್ರೀರಾಮಪಾದ ಕುಸುಮಕರ್ಪಿಸಿ ಧನ್ಯಳಾಗಿ ಅಸಮಮೋಕ್ಷಪದವಿ ಪಡೆಯೆ 3
--------------
ರಾಮದಾಸರು
ಏಳು ಪಂಡರಿವಾಸ ಏಳು ಶ್ರೀ ದೇವೇಶ ಏಳು ಮುಕ್ತ ಗಿರೀಶ ಏಳು ಹೃದೇಶ ಪ. ಏಳು ಮೂಲೋಕದೀಶ ಏಳು ಹೃತ್ಪದವಾಸ ಏಳು ಏಳಯ್ಯ ಶ್ರೀಶಾ ಏಳು ಸರ್ವೇಶಾ ಅ.ಪ. ಗಂಗಾ ಭಾಗೀರಥಿ ತುಂಗಭದ್ರಾ ಯಮುನ ಸಂಗಮ ತ್ರೀವೇಣಿ ಸರಸ್ವತಿ ಸರಯೂ ಮಂಗಳೆ ಚಂದ್ರಭಾಗೆಯೋಳ್ ಕೂಡಿ ಸೇವಿಸೆ ರಂಗಾ ಬಾಗಿಲೋಳ್ ನಿಂತು ಕಾದಿಹಳಯ್ಯ 1 ಪುನಗು ಜವಾಜಿ ಕಸ್ತೂರಿ ಬೆರಸಿದ ಜಲ ನಿನಗೆ ತೈಲವನೊತ್ತಿ ಎರೆವೆನೆಂದು ಕನಕ ರತ್ನದಿ ಭೂಷಿತರಾದ ದೇವ ಕನ್ನಿಕೆಯರು ಕಾದಿಹರೈಯ್ಯ ಲಕುಮಿಪತಿ 2 ಪಂಚಬಾಣನ ಪಿತನೆ ಪಂಚಾಮೃತ ತಂದು ಪಂಚಕನ್ನೆಯರು ಎರೆವೆನೆಂದು ಮಿಂಚು ಕೋಟಿಯತೇಜಾಭರಣ ಪೀತಾಂಬರ ಪಂಚ ರೂಪಗೆ ಉಡಿಸಿ ಶೃಂಗರಾಗೈಯುವರು 3 ಕಸ್ತೂರಿ ತಿಲಕವು ಕನಕಾಂಬರದ ಶಾಲು ಸುತ್ತಿದ ಮುಂಡಾಸು ಶೃಂಗರಿಸಿ ಮತ್ತೆ ಕಾಸಿದ ಹಾಲು ಹಣ್ಣು ಸಕ್ಕರೆ ಕೊಟ್ಟು ಎತ್ತಿ ಬೆಳಗುವ ಮುತ್ತಿನಾರುತಿ ವಿಠಲ 4 ಪಾಪರಹಿತ ಏಳು ಪಾವನ್ನ ರೂಪ ಏಳು ಗೋಪಾಲಕೃಷ್ಣವಿಠಲ ಹರಿ ಏಳು ಶ್ರೀಪದ್ಮಭವಮುಖರಾಪಾರ ಮುನಿಗಳು ರೂಪ ನೋಡಲು ಇಲ್ಲಿ ಕಾದಿಹರೇಳಯ್ಯ5
--------------
ಅಂಬಾಬಾಯಿ
ಒಡಿಯಾ ನಿನ್ನಡಿಗಳಿಗೆ ಬಿಡದೆ ನಾ ನಮೋ ಎಂಬೆ ಕೊಡು ಎನಗೆ ದೃಢ ಪದವಿ ಕಡಲಶಯನಾ ಪ ಪಿತನ ತೊಡಿಯ ಮೇಲೆ ಕುಳಿತಿರಲು ಮಲತಾಯಿ ಅತಿ ರೋಷದಿಂದವನ ಹೊಯಿದೆಬ್ಬಿಸೆ ಖತಿಯಿಂದ ವನಕೆ ಪೋಗಿ ನಿನ್ನ ಪೂಜಿಸಲು ಮತಿವಂತನ ಮಾಡಿ ಧ್ರುವಪದವಿ ಕೊಡಲಿಲ್ಲವೆ 1 ತಂದೆ ಬಾಧಿಸೆ ಧೃತಿಗೆಡದೆ ನರಹರಿ ಗೋ ವಿಂದ ನಾರಾಯಣ ಕೃಷ್ಣ ವಿಷ್ಣು ಇಂದಿರಾರಮಣ ಇನಕುಲತಿಲಕ ಎಂದೆನಲು ಕಂದನಿಗೆ ಕೈವಲ್ಯಪದವಿ ಕೊಡಲಿಲ್ಲವೇ2 ಜಾತಿಧರ್ಮವ ಬಿಟ್ಟು ಅಜಮಿಳನು ಚಂಡಾಲ ಜಾತಿ ವಧುವಿಗೆ ಸೋತು ಕೆಟ್ಟು ಯಮನ ದೂತರನ ನೋಡಿ ಕಂಗೆಟ್ಟು ಮಗನನು ಕರಿಯೆ ಪ್ರೀತಿಯಲಿ ವೈಕುಂಠ ಪದವಿ ಕೊಡಲಿಲ್ಲವೇ 3 ವನಿತೆ ಪತಿವ್ರತವಾನಂತನನುಚರಿಸಿ ಬಂದಿರಲು ಮನದ ಖೇದವ ತಾಳಿ ಹರಿದು ಬಿಸುಟೆ ಮುನಿಪುಂಗ ಅಡವಿಯನು ತೊಳಲಿ ನೆಂದು ಬಿದ್ದಿರಲು ಪುನರ್ವಸು ಸ್ಥಾನವು ಕೊಡಲಿಲ್ಲವೆ4 ಶೌರ್ಯದಲಿ ಅಬ್ಧಿಯನು ಹಾರಿ ಲಂಕೆಯ ಸುಟ್ಟು ಧೂರ್ಯದಲಿ ರಕ್ಕಸರನೊರಿಸಿ ಬಿಸುಟೂ ಕಾರ್ಯದಲಿ ಹನುಮಂತ ನಿನ್ನ ಮೆಟ್ಟಿಸೆ ಒಲಿದು ಸೂರ್ಯಭಾಂದವಗೆ ಜನಪದವಿ ಕೊಡಲಿಲ್ಲವೆ 5 ಸೋದರಗೆ ಬುದ್ದಿಯನು ಪೇಳೆ ಕೇಳದೆಯಿರಲು ಪಾಧಾರಿ ದಾಟಿ ನಿಮ್ಮ ಸೇವಿಸಿ ಕಾದಿ ರಾವಣನ ಛೇದಿಸಿ ಲಂಕಾಪುರ ಪದವಿ ಪರಿಯಂತ ಕೊಡಲಿಲ್ಲವೆ 6 ಚಿತ್ತದೊಳು ಆವಾಗ ನಿನ್ನ ಧ್ಯಾನವ ಮಾಡಿ ವಿತ್ತಾದಿ ದಾನಗಳು ಮಿತಿಯಿಲ್ಲದೇ ಅತ್ಯಂತ ಕೊಡುವವನ ಮೂರು ಪಾದವ ಬೇಡಿ ಭಕ್ತಗೆ ನಲಿದು ಸುರಪದವಿ ಕೊಡಲಿಲ್ಲವೆ 7 ಮಾನಿನಿಯ ಸೀರಿಯನು ಸಭೆಯೊಳಗೆ ದುರುಳರು ಅಭಿ ಮಾನ ಭಂಗವ ಮಾಡಿ ಸುಲಿವುತಿರಲು ಶ್ರೀನಾಥ ಕೇಶವ ಮುಕುಂದನೆಂದು ಮೊರೆ ಇಡೆ ನೀನರಿತು ಅಕ್ಷಯಾಂಬರ ಕೊಡಲಿಲ್ಲವೆ8 ಬಡತನ ಉಳ್ಳವನಾಗಿ ಕ್ಲೇಶದಲಿ ಸುಧಾಮ ನಡುಗುತಲಿ ನಿನ್ನ ಪಟ್ಟಣಕೆ ಬರಲು ಹಿಡಿತುಂಬಿ ಅವಲಕ್ಕಿಗೆ ಸಂತೃಪ್ತನಾಗಿ ಕಡೆಯಿಲ್ಲದೈಶ್ವರ್ಯ ಪದವಿ ಕೊಡಲಿಲ್ಲವೆ 9 ಸರಸಿಯೊಳು ಬಾಲಕನ ನೆಗಳಿ ಪಿಡಿದು ನುಂಗೆ ಗುರುದಕ್ಷಿಣವ ಬೇಡೆ ಸಾಂದೀಪನು ಭರದಿಂದ ಪೋಗಿ ಕೃತಾಂತನೊಳು ಭೂ ಸುರಗೆ ಸುಪುತ್ರ ಪದವಿ ಕೊಡಲಿಲ್ಲವೆ 10 ಭುಜಕರೆಲ್ಲರು ನಿನಗೆ ಭಾಗ್ಯವನು ಕೊಡಲಿಲ್ಲ ಭಜಿಸಿದರವರು ತಮ್ಮ ತಕ್ಕ ತೆರದಿ ಭಜಿಸುವೆನು ನಿನ್ನ ತಕ್ಕಂತೆ ದೃಢ ಪದವಿಕೊಡು ಸಿರಿ ವಿಜಯವಿಠ್ಠಲನೆ11
--------------
ವಿಜಯದಾಸ
ಒಂದಾನೊಂದು ದಿವಸದಲ್ಲಿ ಗುರುವ್ಯಾಸರಾಯರು | ಪ ಅಂದದಿಂದ ಪುರಂದರದಾಸರಿ | ಗಿಂದು ಭೋಜನಕ್ಕೆ ಬನ್ನಿರೆಂದು ಕರೆದರೂ ಅ.ಪ ಪೇಳಿತೆಂದು ದಾಸರು ಪೋಗಿ ತಾವು ನಿರ್ಮಲ ಸ್ನಾನ ಜಪಮಂತ್ರ ಹರಿಪೂಜೆಯನೆ ಮಾಡಿ || ಧಳಥಳಿಸುವ ವಿಠಲನ ದಿವ್ಯ ಪಾದ ಗಳ ಧ್ಯಾನಿಸಿ ಕುಳಿತರು ಜನಗಳೆಲ್ಲ ಕೇಳಿ 1 ವಿಠಲನ ದಿವ್ಯ ಮೂರ್ತಿಯ ಪಾಡಿ ದೃಷ್ಟಿಯಿಂದಲಿ ನೋಡಿ | ಮುಟ್ಟಿ ಮುಂದೊಲಿದು ಕುಣಿಕುಣಿದಾಡಿ || ಥಟ್ಟನೆ ವೇದಕ್ಕೆ ಸಮನಾದ ಪದಗಳು | ನಿಷ್ಠೆಯಿಂದ್ಹೇಳಿ ಅಭೀಷ್ಟವ ಪಡೆದರು2 ಎಡೆಯೊಳು ಷಡ್ರಸದನ್ನವ ನೀಡೆ | ಕಡು ಮಮತೆಗಳಿಂದ | ಬಿಡದೆ ದಾಸರ ದಾರಿಯ ನೋಡಿ || ಯೆಡ ಬಲದಷ್ಟ ದಿವ್ಯದಿಂಡೆಯರೆಲ್ಲಾ | ಕಡೆಯದೆಶೆ ಧರಿಸಿದರು ದಾಸರಾ 3 ಹಗಲು ಒಂಭತ್ತು ತಾಸಾಗಿರಲು | ಆಗೆದ್ದು ಬೇಗ ಗುರುಗಳ ಸಮೀಪಕ್ಕೆ ಬರಲು || ಮುಗಿದು ಕರಯುಗ್ಮವ ಬಗೆ ಬಗೆ ಸ್ತುತಿಸುತಾ | ಜಗದೊಳು ನಾನಪರಾಧಿಯೆಂದರೂ 4 ಭೋಜನವ ಮಾಡಿ ಗುರುಗಳಂದು ಸಿಂಹಾಸನದಲ್ಲಿ | ರಾಜಿಸುತ್ತ ಬಂದು ಕುಳಿತಿರಲಂದೂ || ಆ ಜನದೊಡಗೀ ದಾಸರು ಕರೆಯಲು | ನೈಜಭಾವದಿಂದು ಬಂದು ಕುಳಿತರೂ 5 ಪದಗಳು ಬರದ ವಹಿಯಕೊಂಡು ಪೋಗಿ | ಮಧ್ವಶಾಸ್ತ್ರದ ಮೇಲೆ ಕುಳ್ಳಿರಲಾಗ || ಅದನರಿಯದೆ ದಿಂಡೆಯನೊಬ್ಬನು ಆ | ಪದವಹಿಯ ತೆಗೆದು ಬಿಸುಟನಾಗಾ 6 ಯೆರಡಾವರ್ತಿ ತೆಗೆಯಲು ಆಗ | ತಿರುತಿರುಗಿ ಬಂದು ವರಪುಸ್ತಕದ ಮ್ಯಾಲೆ ಕುಳ್ಳಿರಲಂದೂ || ಗುರು ವ್ಯಾಸರಾಯರು ನೋಡಿ ಹರುಷದಿಂದ | ಕರೆದು ಬೈದರವಗೆ ಕಡು ಮೂರ್ಖನೆಂದೂ 7 ಪದದೊಹಿ ತೆಗೆದು ಬಿಸಾಡಿದರೆ ತಿರುತಿರು ಗ್ಯದರಮ್ಯಾಲೆ ವರನಾಲ್ಕು ವೇದಾರ್ಥದರೊಳಗುಂಟು || ನರರುತ್ತಮರೆಲ್ಲ ನೋಡಿ ಹರುಷದಿಂದ | ಪುರಂದರ ಉಪನಿಷತ್ತೆಂದರೂ 8 ಗುರುರಾಯರು ದಾಸರ ನೋಡಲಾಗ ಭರದಿಂದ ಯೆದ್ದು | ಅರಿವೆಯ ಕೈಯಿಂದೊರಸಲು ಆಗ || ತ್ವರಿತದಿ ಕೇಳಲು ವಿಠಲನ ಗುಡಿಯೊಳು | ಪಡದಗುರಿ ಹತ್ತವು ವರಿಸಿದೆವೆಂದರು 9 ಹಾಗೆಂದು ನುಡಿದಾಕ್ಷಣದಲಿ ಬೇಗ ಶಿಷ್ಯರಿಗೆ | ಹೋಗಿ ನೋಡಿ ಬಾರೆಂದೆನಲಾಗಿ || ಬೇಗದಿಂದಲಿ ಬಂದು ಕೇಳಲು ಅವರು | ಈಗ ದಾಸರು ಬಂದು ಪರಿಹರಿಸಿದರೆಂದು 10 ಆ ಮಾತು ಕೇಳಿದಾಕ್ಷಣದಿ ಬೇಗ | ಪ್ರೇಮದಿ ಬಂದು ಸ್ವಾಮಿರಾಯರಿಗೆ ಪೇಳಲು ಆಗ || ನಾಮವ ಸ್ಮರಿಸುತ ಪ್ರೇಮಾಲಿಂಗನವಿತ್ತು | ಕಾಮಿತಾರ್ಥ ಫಲವೀವ ಕಲ್ಪತರುವೆಂದರೂ 11 ಇಂತು ಅನುಭವ ಮಾತುಗಳನಾಡಿ ಲಕ್ಷ್ಮೀಕಾಂತನ | ಅಂತರಂಗದಲಿ ಅತಿಮಾನವ ಮಾಡಿ || ಮೂರ್ತಿ | ಶಾಂತತ್ವದಿ ನೋಡುತ ಶರಣು ಮಾಡಿದರೂ 12 ಗಜಪುರದಲ್ಲಿ ಇರುವರು ಕೂಡಿ ವಿಜಯವಿಠ್ಠಲನ್ನ | ಭಜನೆಯಿಂದ ದಿನ ದಿನ ಪೊಗಳಿ || ತ್ರಿಜಗದೊಡೆಯ ಗುರು ಪುರಂದರವಿಠಲನ | ನಿಜ ವೈಕುಂಠದ ಮುಕ್ತಿಯೈದಿದರೂ 13
--------------
ವಿಜಯದಾಸ
ಒಂದೇ ನಾಮದಲಡಗಿದವೊ ಅಡಗಿದವೋ ಆಪ ಅಖಿಳ ವೇದಗಳು ಅ ಪ ಒಂದೇ ನಾಮವೆ ಪ್ರಹಲ್ಲಾದನ್ನ ರಕ್ಷಿಸಿತು ಒಂದೇ ನಾಮವೆ ಅಜಾಮಿಳಗೆ ವೊಲಿದಿತು ತಂದೆ ತಾಯ ಬಿಟ್ಟ ಕಂದ ಧ್ರುವರಾಯಗೆ ಆ ನಂದ ಪದವಿಯಿತ್ತ ಅದ್ಭುತ ಮಹಿಮೆಯು 1 ಮಚ್ಛಾದ್ಯನಂತಾವತಾರಾ ಸ್ವಚ್ಛ ಅಷ್ಟಾದಶ ಪುರಾಣ ಅಮೃತದ ಸಾರಾ ಕಚ್ಛಪ ತ್ರಿಜಗಕೆ ಆಧಾರ ತನ್ನ ಸ್ವೇಚ್ಛೆಯಿಂದಲಿ ತಾ ಮಾಡೋ ವ್ಯಾಪಾರಾ 2 ಒಬ್ಬರಿಂದಲಿ ತನಗಿಲ್ಲ ತಾ ನೊಬ್ಬನೆ ಜೀವರ ರಕ್ಷಿಪನೆಲ್ಲಾ ಕಬ್ಬುಬಿಲ್ಲಿನ ಪಿತ ವಿಜಯವಿಠ್ಠಲರೇಯ- ವೈ ದರ್ಭೆಯ ರಮಣನ ಸುಗುಣಗಳೆಲ್ಲಾ 3
--------------
ವಿಜಯದಾಸ
ಒಂಬತ್ತು ಹೂವಿಗೆ ಒಂದೇ ನಾಳವು ಚಂದಮಾಮ ಪ ತುಂಬಿ ಭಾನು ಪ್ರಭೆ ಚಂದಮಾಮಅ ಗಾತ್ರ ಕಂಬ ತೆಕ್ಕೆಗಾತರ ಹೂವು ಚಂದಮಾಮಆನೆಗಾತರ ಕಾಯಿ ಒಂಟೆಗಾತರ ಹಣ್ಣು ಚಂದಮಾಮ 1 ಕಾಲಿಲ್ಲದಾತನು ಹತ್ತಿದನು ಮರವನು ಚಂದಮಾಮಕೈಯಿಲ್ಲದಾತನು ಕೊಯ್ದನಾ ಹಣ್ಣನು ಚಂದಮಾಮ 2 ನೆತ್ತಿಲ್ಲದಾತನು ಹೊತ್ತನು ಹಣ್ಣ ಚಂದಮಾಮತಳವಿಲ್ಲದಾ ಗೂಡೆಯಲಿಳಿಸಿದನಾ ಹಣ್ಣ ಚಂದಮಾಮ 3 ಮಾರ್ಗ ತಪ್ಪಿ ಮಾರ್ಗ ಹಿಡಿದು ನಡೆದರು ಚಂದಮಾಮಸದ್ದಿಲ್ಲದಾ ಸಂತೇಲಿಳಿಸಿದರಾ ಹಣ್ಣ ಚಂದಮಾಮ 4 ರೊಕ್ಕವಿಲ್ಲದಾತ ಕೊಂಡನಾ ಹಣ್ಣ ಚಂದಮಾಮಮೂಗಿಲ್ಲದಾತ ಮೂಸಿದನಾ ಹಣ್ಣ ಚಂದಮಾಮ 5 ಕಣ್ಣಿಲ್ಲದಾತನು ಕೆಂಪಾನೆ ಹಣ್ಣೆಂದ ಚಂದಮಾಮ ಅಂಗುಳಿಲ್ಲದಾತ ನುಂಗಿದನಾ ಹಣ್ಣ ಚಂದಮಾಮ 6 ಬಾಯಿಲ್ಲದಾತ ತಿಂದು ಬಸಿರಲಿಂಬಿಟ್ಟ ಚಂದಮಾಮಸುಲಭ ಪದವಿದು ನಳಿನಜಾಂಡದೊಳು ಚಂದಮಾಮ 7 ಗುರುವಿನ ಮಹಿಮೆ ಗುರುವೆ ತಾ ಬಲ್ಲನು ಚಂದಮಾಮಮೂಢನಾದವನೇನು ಬಲ್ಲನು ಈ ಮಾತು ಚಂದಮಾಮ 8 ಕನಕನಾಡಿದ ಗುಟ್ಟು ಆದಿಕೇಶವ ಬಲ್ಲ ಚಂದಮಾಮತಿಳಿದವರು ಪೇಳಿರೀ ಹಳೆಗನ್ನಡವ ಚಂದಮಾಮ 9
--------------
ಕನಕದಾಸ
ಒಲ್ಲೆ ಸಂಪದವನೆಲ್ಲವನು ತೆಗೆದುಕೊ ಚೆಲ್ವ ವೇಲಾಪುರೀಶಾ ಸ್ವಾಮಿ ಪ ಬಲ್ಲವರು ನಿನಗೆ ಸರಿಯಿಲ್ಲೆಂದು ಪೊಗಳುತಿಹ ಸೊಲ್ಲ ನಾ ಕೇಳಲಾರೆ ಸ್ವಾಮಿ ಅ.ಪ ಪೆತ್ತಯ್ಯ ತಿರುಮಲಾರ್ಯರು ವರ್ಣಕರ ಚಕ್ರ ವರ್ತಿಯೆಂಬಾ ಬಿರುದನು ಒತ್ತಿ ಪೊಗಳಿಸಿಕೊಂಡುದೇನಂದದಲಿ ತಿರು ಗುತ್ತಿರ್ದಡೇನು ಭಾಗ್ಯಾ ಮತ್ತದೆನಗಾರ್ಜಿತವೆ ಸತ್ತವರ ಸಂಪದವ- ನತ್ತಲೇ ಕಳುಹಿಕೊಡದೆ ಇತ್ತಪರೆ ನಿನ್ನ ದಾಸನುದಾಸರಿಗೆ ಸೇ ವ್ಯೋತ್ತಮನೆ ಕೆಡಿಸಬೇಡಾ ಸ್ವಾಮಿ 1 ಹರಿಯೆ ನೀ ಒಲಿದೂಳಿಗವನು ಮಾಡಲು ಬಳಿಕ ಕಿರುನುಡಿಯ ಮೀರದಿರಲು ಕರುಣದಿಂದಾಗಾಗ್ಯೆ ಕರೆದುಡುಗೊರೆಯ ಕೊಡಲು ಬಿರುದುಗಳು ಮೆರೆಯುತಿರಲೂ ಸ್ಥಿರವಿಲ್ಲದಷ್ಟ ಮಹದೈಶ್ವರ್ಯವಿರುತಿರಲು ಪಿರಿಯರೆಲ್ಲರು ಪೊಗಳಲೂ ಮೆರೆಯನೇ ಮಿಗೆ ಅಹಂಕರಿಸನೇ ಬೆರೆಯನೇ ನರಕಕಿಳಿಯನೇ ಮರಳಿ ಜನಿಸನೇ ಸ್ವಾಮಿ 2 ಸುಖವಿಲ್ಲ ಸುಖವಿಲ್ಲ ಸುಖವಿಲ್ಲ ಭಾಗ್ಯದಾ ಸಕರೆಯನು ನಾನೊಲ್ಲೆನೂ ಭಕತವತ್ಸಲನೆ ಭಾಗವತಲೋಲುಪನೆ ದುಃ ಖಕೆ ಕಾರಣವಿಲ್ಲವೆ ಅಕಳಂಕ ಚರಿತನೆ ಆದಿನಾರಾಯಣನೆ ಮಕರಧ್ವಜನ ತಾತನೆ ಸುಖವೀಯೊ ವೈಕುಂಠ ವೇಲಾಪುರಾಧೀಶ ಭಕುತಿಯನು ಕೊಟ್ಟು ಸಲಹೊ ಸ್ವಾಮಿ 3
--------------
ಬೇಲೂರು ವೈಕುಂಠದಾಸರು
ಓಡುತ ಹೋಗುತಾದೋ ಹೊತ್ತು ನೀನು ನೋಡೇನೆಂದರೆ ಆಗದು ಮತ್ತು ಪ ಬೇಡಲು ಬಿಡದೆಲೊ ಹೆಡತಲೆಮೃತ್ಯು ಹುಡುಕಾಡಿ ಪಡಕೋ ನೀ ಕೆಡದ ಸಂಪತ್ತು ಅ.ಪ ಗಜಿಬಿಜಿಸಂಸಾರ ಸೂಡಿಗೆ ನೀನು ಗಿಜಿಗಿಜ್ಯಾಗದೆ ನಿಲ್ಲು ಕಡೆಗೆ ಸುಜನರಿಗೊಂದಿಸಿ ಭುಜಗಾದ್ರಿಶಯನನ ನಿಜಪದ ಮಜದಿಂದ ಭಜಿಸಿಕೋ ತುರ್ತು 1 ಕಾಳನಾಳಿನ ದಾಳಿಗೆಲಿದು ಸ್ಥಿರ ಬಾಳುವ ನಿಜಪದವರಿದು ನೀಲಶಾಮನ ಲೀಲೆ ಮೇಲೆಂದ್ಹಿಗ್ಗುವ ದಾಸ ರ್ಹೇಳಿಕೆ ಕೇಳಿ ನೀ ಪಾಲಿಸು ತುರ್ತು 2 ನಡೆನುಡಿ ಎರಡೊಂದೆ ಮಾಡೊ ಇನ್ನು ಜಡಮತಿ ಗಡನೆ ಈಡ್ಯಾಡೋ ಪೊಡವಿಗಧಿಕ ನಮ್ಮ ಒಡೆಯ ಶ್ರೀರಾಮನೆಂ ದ್ಹೊಡಿ ಹೊಡಿ ಡಂಗುರ ದೃಢವಾಗಿ ಅರ್ತು3
--------------
ರಾಮದಾಸರು
ಕಟ್ಟಿದಳು ಕಂಕಣವ ನಾರಿ ಲಕುಮಿವಿಷ್ಣು ಮೂರುತಿ ಕರಕೆ ವೈಕುಂಠರಾಣಿ ಪ.ಅವಿಯೋಗಿಯಾದ ಶ್ರೀ ಸತಿಯ ಸೇವೆಗೆ ಒಲಿದುಪವಮಾನನೊಡೆಯ ವರ ಬೇಡೆನ್ನಲುಭುವನೇಶ ನಿನ್ನ ಕೃಪೆ ಪೂರ್ಣಳಾನೆಂದೆನುತಹವಣೆಯಿಂ ಕೇಳ್ದಳೆರಡೊರವ ಲೋಕೋದ್ಧಾರಿ 1 ಶರಣಾಗತ ರಕ್ಷಕನು ಎಂಬ ಬಿರುದೊಂದುಶರಣಾಗತ ವತ್ಸಲನು ಎಂಬುದೊಂದುಧರಿಸು ಈ ಬಿರುದು ಹರಿ ವರವು ಅದೆ ಎನಗೆನಲುಕಿರುನಗೆಯ ನಗುತ ಒಲಿದನು ಸತಿಯ ನುಡಿಗೆ 2 ನಾರಿರನ್ನಳೆ ನಿನ್ನ ಕೋರಿಕೆಯ ತೆರನಂತೆಆರಾಧನೆಯ ಮಾಳ್ಪ ಶರಣರಿಗೆ ಒಲಿವೆತೋರಲೀ ಬಿರುದುಗಳು ನಿನ್ನ ಕರಗಳಲೆಂದುಶ್ರೀ ರಮೆಯ ಕರಕೆ ಕಂಕಣಗಳನೆ ತೊಡಿಸಿದನು 3 ನಾರಿ ಈ ಕಂಕಣವ ನಿನಗ್ಯಾಕೆ ಅರ್ಪಿಸಲುತೋರದೆನ್ನುತ ನಟನೆಗೈವನಿತರೊಳ್‍ಕ್ಷೀರಸಾಗರ ಮಥನ ಕಾಲದಲಿ ಜನಿಸುತಲಿಶ್ರೀ ರಮೇಶಗೆ ಒಲಿದು ಮಾಲೆ ಹಾಕಿದಳು 4 ಭಕ್ತಿ ಪ್ರೇಮಕೆ ಒಲಿದು ಭಕ್ತವತ್ಸಲ ಅಭಯಹಸ್ತವನು ಶಿರದಲ್ಲಿ ಇಡಲು ನಾರಿಚಿತ್ತದಲಿ ಆನಂದಪುಳಕಾಂಕುರಿತಳಾಗಿಚಿತ್ತದೊಲ್ಲಭನ ಮುಖಕಮಲ ವೀಕ್ಷಿಸುತ 5ಈಕ್ಷಿಸಲು ಶ್ರೀ ಹರಿಯ ಕರಕಮಲ ಲಕ್ಷಣವಲಕ್ಷ್ಮಿ ಬೆರಗಾಗಿ ಮುನ್ನಿನಕಿಂತ ಅಧಿಕಅಕ್ಷಯದ ಸಾಮುದ್ರಿ ಲಕ್ಷಣವ ಕಾಣುತಲಿಪಕ್ಷಿವಾಹನನ ಮೊಗ ಈಕ್ಷಿಸುತ ನಗುತ 6 ನೀನಿತ್ತ ವರದಾನ ಕಂಕಣದ ಬಂಧನವನಿನಗರ್ಪಿಸುತ ಧನ್ಯಳಾಗ್ವೆನೆಂದುಆನಂದದಲಿ ಮಾಡಿ ಕಂಕಣವ ಕಟ್ಟಿದಳು 7 ಜಗವನಾಡಿಸುವಂಥ ಸೂತ್ರವನೆ ಹದಿನಾರುಬಗೆ ಕಲೆಗಳೆಂಬ ಎಳೆ ಮಾಡಿ ಹಳದಿಮಿಗೆ ಕಾಂತಿ ಬಣ್ಣದಲಿ ಮಂಗಳಾಕಾರದಜಗಕೆ ವಿೂರಿಸಿದಂಥ ಕಂಕಣವ ಕಟ್ಟಿದಳು 8 ಕರಿ ಕೆಂಪು ಬಿಳುಪು ವರ್ಣವು ಪ್ರಳಯ ಕಾಲದಲಿಇರಲಾರದೆಂದು ತ್ಯಜಿಸುತ ಹಳದಿಯವರಕಾಂತಿ ಬಣ್ಣವನು ಪೂಸಿ ಮಂಗಳವದನೆಸರದಿಂ ಮೂರು ಗ್ರಂಥಿಯ ಬಿಗಿದಳಾಗ 9 ಪರಿ ಏನು ಪೇಳೆಂದು ಸರಸದಲಿ ಹರಿ ಕೇಳೆ ಹರಿಣಾಕ್ಷಿಯು ಪರಮ ಪುರುಷನೆ ನೀನು ಅರಿಯದಿನ್ನುಂಟೆ ಕೇಳ್ ಸರಸವಾಣಿಯಲಿ ಪೇಳ್ಪೆನು ದೇವ ದೇವ 10 ಒಂದು ಮುಕ್ತಿಯ ಗ್ರಂಥಿ ಒಂದು ಕರ್ಮದ ಗ್ರಂಥಿ ಒಂದು ಅಜ್ಞಾನ ನಿನ್ನ ಬಂಧಕರ ಗ್ರಂಥಿ ಇಂದಿರೇಶನೆ ಇದರ ಗುಟ್ಟು ಅರುಹುವÉ ಕೇಳು ಒಂದೊಂದು ವಿವರಗಳ ವಂದ್ಯ ಬ್ರಹ್ಮಾದಿ 11 ಕರ್ಮಗ್ರಂಥಿಯು ಬ್ರಾಹ್ಮಣರ ಯಜ್ಞದುಪವೀತ ಕರ್ಮ ಬಿಡುಗಡೆ ಇದು ಯತಿರತ್ನಗಳಿಗೆ ನಿಮ್ಮ ಬಂಧಕರ ಗ್ರಂಥಿ ಅಜ್ಞಾನಿ ಹೃದಯಕ್ಕೆ ನಿಮ್ಮ ಕೃಪೆಯಿಂದ ಬಿಡುಗಡೆ ಕೇಳು ಜೀವರಿಗೆ 12 ಮುಕ್ತರಿಗೆ ಸಂಸಾರ ಮತ್ತೆ ಬರದಂದದಲಿ ಕತ್ತರಿಸಿ ಲಿಂಗವನು ಕಾಯ್ದು ನಾನು ಚಿತ್ತಜಾಪಿತನೆ ನಿನ್ನಸ್ತಕೊಪ್ಪಿಸಿ ಬಿಗಿದು ಸುತ್ತಿ ಕಗ್ಗಂಟು ಹಾಕಿರುವೆ ನೀ ಗ್ರಂಥಿ 13 ಬಿಚ್ಚಲಾರೆಯೊ ನೀನು ಬಿಚ್ಚಲಾರೆನೊ ನಾನು ಬಿಚ್ಚಿಕೊಳಲಾರರೊ ಮುಕ್ತ ಜನರು ಅಚ್ಯುತನೆ ಇದೆ ನಿನಗೆ ಹೆಚ್ಚಿನಾ ಬಿರುದು ನಾ ಮೆಚ್ಚಿ ಕಟ್ಟಿರುವೆ ನೀ ಗ್ರಂಥಿ ಕಂಕಣವ 14 ಎರಡು ಗ್ರಂಥಿಯ ತೊಡಕು ಹರಿದು ಭಕ್ತರ ಕಾಯ್ದು ಪರಮ ಆನಂದ ಮುಕ್ತರಿಗೆ ಶರೆ ಮಾಡಿ ಮೆರೆಯೊ ಶರಣಾಗತರ ರಕ್ಷಕನೆ ಎಂದೆನುತ ಸಿರಿ ಮುತ್ತಿನಾರತಿಯನೆತ್ತಿದಳು 15 ಸಿರಿಹರಿಯ ಏಕಾಂತ ಸರಸ ವಚನಗಳಿದನು ಅರಿತವರು ಯಾರೆಂಬ ಅನುಮಾನ ಬೇಡಿ ಹರಿಶಯನನಾದವನು ಅರಿತು ಧೈರ್ಯದಿ ಜಗದಿ ಹರಹಿದುದ ಸಜ್ಜನರು ಅರಿತು ಆನಂದಿಸಲಿ 16 ಸಿರಿ ಒಲಿಯೆ ಶ್ರೀಹರಿಯು ತ್ವರಿತದಲಿ ಒಲಿಯುವನು ಮರುತ ಒಲಿಯಲು ಸಿರಿಯು ತಾ ಒಲಿವಳು ಗುರುವು ಒಲಿಯಲು ಮರುತ ಮರುಕ್ಷಣದಿ ಒಲಿಯುವನು ಅರಿವುದಿದರಿಂ ಗುರುವ ಒಲಿಮೆ ಅಧಿಕೆಂದು 17 ಪರಮ ಸುಜ್ಞಾನದಿಂದರಿತು ತತ್ವಾರ್ಥಗಳ ಶರಣ ನಾ ನಿನಗೆನಲು ವಾತ್ಸಲ್ಯದಿ ಸಿರಿಯರಸ ತನ್ನಭಯ ಹಸ್ತ ಶಿರದಲಿಟ್ಟು ಶರಣರನು ಪಾಲಿಸುವ ಮುಕ್ತಿ ಪದವಿಯನಿತ್ತು 18 ಹರಿಸಿರಿಯ ಲೀಲೆಗಳ ಗುರುಕರುಣ ಬಲದಿಂದ ಅರುಹಿದ ಮಹಿಮೆ ಧರೆಯಲ್ಲಿ ಮೆರೆದು ಪರಮ ಮಂಗಳ ಕೊಡಲಿ ನಿರುತ ಸದ್ಭಕ್ತರಿಗೆ ಕರುಣಾಳು ಗೋಪಾಲಕೃಷ್ಣವಿಠ್ಠಲನ ದಯದಿ 19
--------------
ಅಂಬಾಬಾಯಿ
ಕಂಡ ದೈವಕ್ಕೆ ಕಂಗೆಟ್ಟು ಕೈ ಮುಗಿದು | ದಣಿದಿಯಾತಕೋ ಪ ಶರಧಿ ಗರ್ವ ಪರಿಹರನಸೇರಿ ಹೋದ ದಿವಿಜರ ಬಿಡಿಸಿ ಸಿರಿಯಿತ್ತು ಸಲಹಿದಾತನ 1 ಸುರರು ಪೊಗಳಲು |ಹುರುಳಿಲ್ಲದ ಭವವನಳಿದು ಪರಮ ಪದವಿಯನಿತ್ತನ 2 ವೈರಿ ತಮ್ಮಗೆ |ರುಕ್ಮನಗರ ಧಾರೆಯೆರೆದ ಶ್ರೀ ರಾಮಚಂದ್ರನ 3
--------------
ರುಕ್ಮಾಂಗದರು
ಕಂಡೆ ಕಮಲನಾಭನ ಕಣ್ಣಾರೆ ಪುಂಡರೀಕನ ಪಾಲಿನ ಪಂಡರಿವಾಸನ ಸಕಲ - ಬೊ ಮ್ಮಾಂಡವ ಧರಿಸಿದನಾ ಪ ಸುಲಭ ದೇವರ ದೇವ ನಾನಾ - ಪರಿ ಮಳ ತುಲಸಿಗೆ ವಲಿವನ ಕಲಿಕಾಲ ಸಲಹುವನ ಭವದ - ಸಂ ಕಲೆ ಪರಿಹರಿಸುವನ 1 ಲಿಂಗ ಸಂಗವನೀವನ ಜಗದಂತರಂಗ ಮೋಹನರಾಯನ ಮಂಗಳ ದೇವೇಶನ ಸಿರಿಪಾಂಡು ರಂಗ ನೆನಸಿಕೊಂಬನ2 ಜಗದ ಸದ್ಭರಿತ ನಾನಾ ವನದಿ ಬಿಗಿದ ಪರಾಕ್ರಮನಾ ನಗವನೆತ್ತಿದ ಧೀರನಾ ತನ್ನನು ಪೊಗಳಲು ಹಿಗ್ಗುವನಾ 3 ಯಾದÀವ ಶಿರೋರನ್ನನ ಕೊಳಲು ಊದುವ ಚೆನ್ನಿಗನಾ ವೇದ ನಿಕರಮಯನಾ 4 ಇಟ್ಟಿಗೆಯಲಿ ನಿಂದನ ವರಂಗಳ ಕೊಟ್ಟರೆ ತಪ್ಪದವನ ಅಟ್ಟಿ ಖಳನ ಕೊಂದನಾ ವಿಜಯ ವಿಠ್ಠಲ ಜಗದೀಶನಾ 5
--------------
ವಿಜಯದಾಸ