ಒಟ್ಟು 4540 ಕಡೆಗಳಲ್ಲಿ , 127 ದಾಸರು , 2949 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

(ಕೇಶವಾಯ ನಮಃ ದಿಂದ ಆರಂಭವಾಗುವ ಆಚಮನ ಸ್ತುತಿ) ಶ್ರೀನಿವಾಸಾಯ ನಮೋ ಪ. ಶ್ರೀನಿವಾಸಾಯ ಶತಭಾನುಪ್ರಕಾಶಾಯ ಶ್ರೀನಿವಾಸಾಯ ನಿಜ ಭಕ್ತಜನಪೋಷಾಯ ಶ್ರೀನಿವಾಸಾಯ ಪರಮಾನಂದಘೋಷಾಯ ಅ.ಪ. ದೋಷಗಂಧವಿದೂರ ಕೇಶಿಮುಖದಾನವ ವಿ- ನಾಶವಿಧಿಭವಸುಖನಿವಾಸ ವಾಸುಕಿಶಯನ ವಾಸವಾದ್ಯಮರಗಣಪೋಷ ಪಾವನವೇಷ ಶ್ರೀಶ ನಿರ್ಗತವಿಶೇಷ ದಾಸಜನಹೃದಯಾಬ್ಧಿಭೇಶ ಕೌಸ್ತುಭಮಣಿವಿ- ಭೂಷ ಭೂತಾತ್ಮ ಭವಪಾಶಹರ ಪರತರ ದ- ಕೇಶವಾಯ ನಮೋನಮಃ 1 ಕ್ಷೀರಸಾಗರವಾಸ ಶ್ರೀರಮಾಪ್ರಾಣೇಶ ಸಾರಭೋಕ್ತøಸ್ವತಂತ್ರ ಚಾರುಷಡ್ಗುಣಭರಿತ ಸನ್ನುತ ಪಾದನೀರರುಹದ್ವಂದ್ವನೆ ಸುರರು ತಿಳಿಯರು ನಿನ್ನ ಭೂರಿಮಹಿಮೆಗಳ ಸಾಕಾರವನು ಬಣ್ಣಿಸುವ ನಾರಾಯಣಾಯ ನಮೋ 2 ವೇದವೇದ್ಯನೆ ದುರಿತಶೋಧನೆ ದೈತ್ಯಗಣ- ಛೇದಕನೆ ಸುರಸುಪ್ರಸಾದಕನೆ ಭಕ್ತಜನ- ಸಮಾನಾಧಿಕ್ಯರಹಿತ ಸತತ ಆದಿತ್ಯ ಶತಕೋಟಿತೇಜೋವಿರಾಜ ಮಹ- ದಾದಿಕಾರಣ ಮಧುವಿರೋಧಿ ಮಂಗಲಸುಖಾಂ- ಮಾಧವಾಯ ನಮೋನಮಃ 3 ಇಂದಿರಾಹೃದಯಾಬ್ಧಿ ಚಂದ್ರ ಚಾರ್ವಂಗ ಮುಚು- ಕುಂದಾಪ್ತ ಸರ್ವಶ್ರುತಿವೃಂದಪ್ರತಿಪಾದ್ಯ ಸಾ- ಸನ್ನುತ ಮಹೇಂದ್ರ ವಂದಾರುಜನತ್ರಿದಶಮಂದಾರ ಕೋಮಲಿತ ವೃಂದಾವನವಿಹಾರ ಕಂದರ್ಪಜನಕ ಬಾ- ತುಭ್ಯಂ ನಮಃ 4 ಜಿಷ್ಣುರಥಸಾರಥಿ ತ್ರಿವಿಷ್ಟಪಸಭಾಧ್ಯಕ್ಷ ಮುಷ್ಟಿಕಾಸುರವೈರಿ ಮುನಿಜನಮನೋಹಾರಿ ಮುಟ್ಟಿ ಭಜಿಪರ ಮನೋಭೀಷ್ಟವ ಸಲ್ಲಿಸುವ ಶ್ರೇಷ್ಠ ಪೂರ್ಣಬ್ರಹ್ಮನೇ ಭ್ರಷ್ಟಸಂಸಾರದೊಳು ನಷ್ಟ ಬುದ್ಧಿಗಳಿಂಗೆ ತುಷ್ಟಿಯನು ನೀನಿತ್ತು ಸಲಹೊ ಸಾಮಜವರದ ತುಭ್ಯಂ ನಮೋ 5 ವಿಧಿಭವಾದಿ ಸಮಸ್ತ ತ್ರಿದಶಜನಸುಖದಾತ ಬುಧಜನಪ್ರಿಯ ಭೂತಭಾವನ ಜಗನ್ನಾಥ ಮದನಕೋಟಿಸ್ವರೂಪ ವಿದುರನಾಲಯದಲ್ಲಿ ಪಾಲುಂಡ ಬ್ರಹ್ಮಾಂಡ- ಕಧಿಪತಿ ಕಲಿಮಲನಾಶ ಕವಿಜನಮನೋಲ್ಲಾಸ ಮಧುಸೂದನಾಯ ನಮೋ 6 ಅಕ್ರೂರವರದ ಸದತಿಕ್ರಮರ ಗೆಲಿದ ಹಯ- ವಕ್ತ್ರ ವೈಕುಂಠಾಖ್ಯ ಪುರವಾಸ ಜಗದೀಶ ಶುಕ್ರ ಶಿಷ್ಯರನೆಲ್ಲ ಪರಿಹರಿಸಿ ಪಾಲಿಸಿದೆ ಶಕ್ರಾದಿಸುರಗಣವನು ಚಕ್ರ ಶಂಖ ಗದಾಬ್ಜಧರ ಚತುರ್ಭುಜ ದೇವ- ಚಕ್ರವರ್ತಿಯನಂತಕೀರ್ತಿ ಪಾವನಮೂರ್ತಿ ತ್ರಿವಿಕ್ರಮಾಯ ನಮೋನಮಃ 7 ರಾಮಣೀಯಕ ವಪು ನಿರಾಮಯ ನಿರಾಶ್ರಯ ಸು- ದಾಮಸಖ ಪರಿಪೂರ್ಣಕಾಮ ಕೈರವದಳ- ಸುಜನಸ್ತೋಮಸುರಕಾಮಧೇನು ಗೋಮಿನೀಪತಿ ಗೋಗಣಾನ್ವಿತನೆ ಗೋಪೀಲ- ಲಾಮ ಗೋವರ್ಧನೋದ್ಧಾರ ಗೋವಿದಾಂಪತಿ ವಿ- ಪ್ರಾಜ್ಞ ವಾಮನಾಯ ನಮೋನಮಃ 8 ಆದಿಮಧ್ಯಾಂತವಿರಹಿತ ನಿಖಿಲಸಾರ್ಚಿತ ವಿ- ರಾಧಭಂಜನ ಭವಾಂಬೋಧಿಕುಂಭಜ ಭಜಕ- ಚತುಷ್ಟಾದ ಪಾವನಚರಿತನೆ ಗಾಧಿಜಾಧ್ವರಪಾಲ ಗರುಡಧ್ವಜ ದಯಾಳು ನಾದಬಿಂದು ಕಲಾತೀತ ರುಕ್ಮಿಣಿನಾಥ ಶ್ರೀಧರಾಯ ನಮೋನಮಃ 9 ಪಾಶಧರನುತ ವೆಂಕಟೇಶ ಸರ್ವೇಂದ್ರಿಯಪ್ರ- ಕಾಶ ಪಾಲಿತನಿಖಿಳಭೂಸುರವ್ರಜ ಮಂದ- ದೂಷಣಾದ್ಯ ಸುರಹರನೆ ಈಶಪತಿಸೇವ್ಯಾಂಬರೀಶನೃಪವರದ ಪರ- ಮೇಶ ಕೋವಳಪೀತವಾಸ ಕರ್ದಮಶುಕಪ- ಹೃಷೀಕೇಶಾಯ ತುಭ್ಯಂ ನಮೋ 10 ಶುದ್ಧ ತ್ರಿಗುಣಾತೀತ ತ್ರಿವ್ರತ ತ್ರಿಜಗತ್ಪಾಲ ಪ್ರದ್ಯುಮ್ನ ಪ್ರಥಮಾಂಗದೊಡೆಯ ಪರಮಾತ್ಮ ಸುರ- ಬುದ್ಧ ಬುಧಜನಸುಲಭ ಮಧ್ವವಲ್ಲಭ ಮಂತ್ರಮೂರ್ತಿ ಕ್ಷೀರಾಬ್ಧಿ ಶ್ವೇ ತದ್ವೀಪವೈಕುಂಠಮಂದಿರತ್ರಯ ಸಾಧು- ಹೃದ್ಯ ಭಕ್ತದ್ವೇಷಭಿದ್ಯ ನಿತ್ಯಾತ್ಮ ಶ್ರೀಪದ್ಮನಾಭಾಯ ನಮಃ11 ಸಾಮಗಾನವಿನೋದ ಸಾಧುಜನಸುಖಬೋಧ ಕಾಮಿತಾರ್ಥಪ್ರದಾತ ಕಪಿಲಋಷಿ ಪ್ರಖ್ಯಾತ ಸಮರಂಗ ಭೀಮ ನಾಮಧಾರಕರ ಪರಿಣಾಮರೂಪಕ ಸುಜನ- ಕ್ಷೇಮಪ್ರಾಪಕ ನೀಲಜೀಮೂತನಿಭವರ್ಣ ದಾಮೋದರಾಯ ನಮೋ 12 ಶಂಕರಾಂತರ್ಯಾಮಿ ಶಾಙ್ರ್ಗಪಾಣಿ ಶರಣ್ಯ ವೆಂಕಟಾಚಲಸದಾಲಂಕಾರ ಶೇಷಪರಿ- ಯಂಕ ಪ್ರವಿತತನಿಷ್ಕಳಂಕಚಾರಿತ್ರ ಸುಸಂಕುಲಾರ್ಚಿತ ಪದಯುಗ ಲಂಕಾಧಿಪತ್ಯವ ವಿಭೀಷಣನಿಗೊಲಿದಿತ್ತ ಓಂಕಾರನಿಧನ ಸಾಮಕಭಕ್ತರಾನೇಕ ಸಂಕಟವ ಪರಿಹರಿಪ ಸತ್ಯ ಸಂಕಲ್ಪ ಶ್ರೀಸಂಕರ್ಷಣಾಯ ನಮೋ 13 ಈ ಸಮಸ್ತ ಜಗತ್ತು ನಿನ್ನುದರದೊಳಗಿಹುದು ಈ ಸಕಲಜೀವರೊಳಗಿಹ ನಿತ್ಯನಿರ್ಮುಖ್ಯ ನೀ ಸಲಹೊ ದೇವದೇವ ಭೂ ಸಲಿಲ ಪಾವಕಾಕಾಶಾದಿ ಭೂತಾಧಿ- ವಾಸ ರಾಕ್ಷಸವನಹುತಾಶ ನಾನಾ ರೂಪ- ವಾಸುದೇವಾಯ ನಮೋ 14 ಅದ್ವಿತೀಯನೆಯಮಿತವಿಕ್ರಮನೆ ಗುಣಕಾಲ ವಿದ್ಯಾಪ್ರವರ್ತಕನೆ ವಿಶ್ವಾದಿ ಸಾಹಸ್ರ ಸಿದ್ಧನಾಮ ನರನಾರಾಯಣಪರಾಯಣನೆ ಬುದ್ಧಿಪ್ರೇರಕಪ್ರೇರ್ಯನ ರುದ್ರರೂಪಪ್ರತಾಪ ಋಗ್ಯಜುಸ್ಸಾಮಶ್ರುತಿ- ವೇದ್ಯ ಬ್ರಹ್ಮಾಂಡಕೋಟಿಗಳ ಸಲೆ- ಪ್ರದ್ಯುಮ್ನಾಯ ತುಭ್ಯಂ ನಮಃ 15 ಉದ್ಧವಾದಿ ಸಮಸ್ತ ಭಾಗವತಜನಕಮಲ- ಮಧ್ಯಚರರಾಜಹಂಸಾಯ ಮಾನಸದ ಶ್ರೀಹರಿಯೆ ವೈದ್ಯನಾಥವಿಧಾತನೆ ಬದ್ಧನಾದೆನು ಕರ್ಮಪಾಶದಿಂದ ದೊರೆ ಸಿಕ್ಕಿ- ಬಿದ್ದೆ ಕೈಪಿಡಿದೆಬ್ಬಿಸೆನ್ನನೆಲೆದೇವ ಮರೆ ಅನಿರುದ್ಧಾಯ ತುಭ್ಯಂ ನಮಃ 16 ಕ್ಷರ ಪುರುಷರೆಲ್ಲ ಬ್ರಹ್ಮಾದಿ ಜೀವರು ರಮಾ ಕ್ಷರಪುರುಷಳೆನಿಸುವಳು ನೀನೆ ಉತ್ತಮ ಪರುಷ ಮಂಗಲರಿತ ಗುರುತಮ ಗುಣಧ್ಯಕ್ಷನೆ ಶರಧಿಸೇತುನಿಬದ್ಧ ಶಬರಿ ಹಣ್ಣನು ಮೆದ್ದ ಶರಭಂಗ ಮುನಿಪಾಲ ಶಮಿತದಾನವಜಾಲ ಪುರುಷೋತ್ತಮಾಯನ್ನಮೋ 17 ಅಕ್ಷಯಾತ್ಮನೆ ವಿಶ್ವರಕ್ಷಕನೆ ವಿಶ್ವಭುಗ್- ವಿಶ್ವತೋಮುಖ ವಿಶ್ವತೋಬಾಹು ಕರುಣಾಕ- ದಯಮಾಡು ಶ್ರೀವಕ್ಷಸ್ಥಲನಿವಾಸನೆ ಲಕ್ಷ್ಮಣಾಗ್ರಜನೆ ಸುವಿಲಕ್ಷಣನೆ ಸುಜ್ಞಾನ- ಮೋಕ್ಷದಾಯಕ ಯಜ್ಞಮೂರ್ತಿ ರೂಪತ್ರಯ ಮ- ಅಧೋಕ್ಷಜಾಯ ನಮೋನಮಃ 18 ಕ್ರೂರಕರ್ಮಿ ಹಿರಣ್ಯಕಶಿಪುವಂ ಕೊಂದ ದು- ರ್ವಾರದುರಿತಾಬ್ಧಿಬಾಡಬ ಭಕ್ತವತ್ಸಲ ಮ- ಶಿರಪ್ರಕರಧೀರ ಪ್ರಹ್ಲಾದಾಭಿವರದ ಭೂರೀಕರರೂಪ ಭೂಮಕೀರ್ತಿಕಲಾಪ ಸಾರವಜ್ರಸ್ತಂಭದಿಂ ಬಂದ ನಂದ ಸುಕು- ನಾರಸಿಂಹಾಯ ನಮೋ 19 ನಿಶ್ಚಲಾತ್ಮ ನಿರೀಹ ನಿರ್ವಿಕಾರಾನಂತ ಪ್ರೋಚ್ಛ ಸರ್ವಗ ಸದಾನಂದ ಪರಿಪೂರ್ಣ ತ- ನಿರ್ಮಿಸುವ ಆಶ್ಚರ್ಯಕೃತ ಸಲೀಲ ಮುಚ್ಚುಮರೆ ಯಾಕಿನ್ನು ಮುಗಿದು ಬೇಡುವೆ ಕೈಯ ಸ್ವಚ್ಛತರ ಭಕ್ತಿಭಾಗ್ಯವನಿತ್ತು ಸಲಹೊ ಮಹ- ಶ್ರೀಮದಚ್ಯುತಾಯ ನಮೋನಮಃ 20 ಚೈದ್ಯಮಥನ ಮನೋಜ್ಞಶುದ್ಧಾತ್ಮ ಸರ್ವಜ್ಞ ಹೊದ್ದಿಸಿದ ಪಾರ್ಥನಿಂಗೆ ಇದ್ದು ನೀ ಹೃದಯದೊಳು ತಿದ್ದೆನ್ನ ಮತಿಯ ಸ್ಮರ- ವಿದ್ದ ಮಾನಸವ ಪಾದದ್ವಯದೊಳಿರಿಸೈ ದ- ಜನಾರ್ದನಾಯ ನಮೋನಮಃ 21 ಮಂದಾಕಿನಿಯ ಪಡೆದ ಮಾತೆಯ ಶಿರವ ಕಡಿದ ನಂದಗೋಪನ ಕಂದನೆನಿಸಿ ಬಾಲಕತನದ ಸುಂದರೀರಮಣ ಜಯತು ತಂದೆತಾಯಿಯು ಸರ್ವ ಜೀವರ್ಗೆ ನೀನೆ ನಿಜ- ವೆಂದು ತಿಳಿಯದೆ ಮಾಯೆಯಿಂದ ಮಮಕರಿಸಿ ಪರ- ಉಪೇಂದ್ರಾಯ ತುಭ್ಯಂ ನಮಃ 22 ಸ್ಥಿರಚರಾತ್ಮಕ ಧೇನುಚರ ದೇವಕೀಜಠರ- ಶರಧಿಗುರುರಾಜ ಭಾಸ್ಕರಮಂಡಲಾಂತಸ್ಥ ದುರಿತದೂರ ಗಭೀರನೆ ನಿರತಿಶಯ ನಿಜನಿರ್ವಿಕಲ್ಪ ಕಲ್ಪಾಂತಸಾ- ಗರದಿ ವಟಪತ್ರಪುಟಶಯನ ಪುಣ್ಯಶ್ರವಣ ಹರಯೇ ನಮೋನಮಸ್ತೇ 23 ವೃಷ್ಟಿಕುಲತಿಲಕ ಸರ್ವೇಷ್ಟದಾಯಕ ನಿಮಿತ- ಶಿಷ್ಟಜನಪರಿಪಾಲ ಶಿವಗೌರೀ ಗಣಪಗುಹ- ಸೃಷ್ಟಿಶಕ್ತಿಯನೀವ ಗೋವರ್ಧನಾಚಲವ ಬೆಟ್ಟಿನಿಂದೆತ್ತಿದ ಮಹಾ ದುಷ್ಟ ನರಕಾದಿದಾನವರ ಮರ್ದಿಸಿದ ಜಗ- ಜಟ್ಟಿ ಜನಿಮೃತಿಭಯವಿದೂರ ವಿಷಮಯಸರ್ಪ- ಹರೇ ಕೃಷ್ಣಾಯ ತುಭ್ಯಂ ನಮಃ 24 ಅಕ್ಷೀಣ ಬಲಶಾಲಿಯಾಂಜನೇಯನಿಗಿತ್ತೆ ಅಕ್ಷಯದ ಬ್ರಹ್ಮಪದವಿಯ ಲೋಕದೊಳಗ್ಯಾವ- ದಕ್ಷಮರ್ದನ ನಿನಗೆ ಸರ್ವತಂತ್ರಸ್ವತಂತ್ರ ಪಕ್ಷೀಂದ್ರಭುಜವಿರಾಜ ಸಾಕ್ಷಿಚೈತನ್ಯರೂಪನೆ ಕಮಲನಾಭನೆ ಮು- ಮುಕ್ಷುಜನಧ್ಯಾನಗಮ್ಯನೆ ಗದಾಧರ ದನುಜ- ಲಕ್ಷ್ಮೀನಾರಾಯಣಾಯ ನಮೋ 25
--------------
ತುಪಾಕಿ ವೆಂಕಟರಮಣಾಚಾರ್ಯ
(ಕೋಲ ಹಾಡು) ಕೋಲು ಕೋಲೆನ್ನ ಕೋಲೆ ಕೋಲು ಕೋಲೆನ್ನ ಕೋಲೆ ಕೋಲು ಶ್ರೀ ರಾಮನ ಬಲಗೊಂಬೆ ರನ್ನದ ಪ. ಭೂಮಿಯೊಳಗೆ ಸೀತಾರಾಮನು ಜನಿಸಲು ಸೀಮೆಯ ನಾರಿ ಜನರೆಲ್ಲ ರನ್ನದಾ ಸೀಮೆಯ ನಾರಿ ಜನರೆಲ್ಲ ನೆರೆದು ಸು ಪ್ರೇಮದಿ ಪಾಡಿ ನಲಿದರು ರನ್ನದಾ 1 ಕುಂಡಲ ಕಂಠ ಮಾಲೆಯ ನೊಸಲಾ ತಿಲಕವು ರನ್ನದ ಮಾಲೆಯ ತಿಲಕನೊಸಲೊಳಗಿರಿಸಿದ ಬಾಲೇರು ಕೂಡಿ ನಲಿವುದ ರನ್ನದ 2 ಸಾರಸಂಭವ ಕ್ಷೀರ ವಾರುಧಿ ತಡಿಯಲ್ಲಿ ಭೋರನೆ ಬಂದು ಸ್ತುತಿಸಲು ರನ್ನದ ಭೋರನೆ ಬಂದು ಸ್ತುತಿಸಲು ರಾಮವ ತಾರನಾಗುವೆನೆಂದು ನುಡಿದನು ರನ್ನದ 3 ಪೃಥಿವಿ ನಾಯಕ ದಶರಥನಲ್ಲಿ ಜನಿಸಿದ ಕಥನೀಯ ಸುಗುಣ ಸಂಭೃತ ರಾಮರನ್ನದ ಕಥನೀಯ ಸುಗುಣ ಸಂಭೃತ ರಾಮ ಕೌಸಲ್ಯ ಸುತನೆಂದು ನಗುತ ಮನ್ಮಥನ ಜನಕನಿಗೆ 4 ಕೌಶಿಕ ಮುನಿಯ ಮಹಾಶೆ ಪೂರಿಸಿ ಯಜ್ಞ ಘಾಸಿ ಮಾಡಿದ ರಾಮ ಘಾಸಿ ಮಾಡಿದ ಜಗ ದೀಶನು ಸಕಲಾಭಿಲಾಷಾ ಪೂರಿಪೆನೆಂದು 5 ಪಾದ ಪಲ್ಲವವಿರಿಸುತ ಕಲ್ಲಾದ ಶಿಲೆಯನ್ನಹಲ್ಯೆ ಮಾಡಿದ ರಾಮ ಕಲ್ಲಾದ ಶಿಲೆಯನ್ನಹಲ್ಯೆ ಮಾಡಿದ ಸಿರಿ ನಲ್ಲ ಶಿವನ ಮಹ ಬಿಲ್ಲ ಮುರಿದನು 6 ಭೂತಳಾಧಿಪಜನವ್ರಾತಮಂಡಲದೊಳು ಸೀತೆಯನೊಲಿಸಿ ಶುಭದಿಂದ ರನ್ನದಾ ಸೀತೆಯನೊಲಿಸಿ ಶುಭದಿಂದ ಸ್ವಜನ ಸ- ಮೇತಾಯೋಧ್ಯಗೆ ಬಂದ ಖ್ಯಾತ ರಾಘವನಿಗೆ 7 ಜನಕನ ವಾಕ್ಯದಿಂದ ಜನಕಾತ್ಮಜೆಯ ಕೂಡಿ ವನಕಾಗಿ ನಡೆತಂದ ವನಜಾಕ್ಷ ರನ್ನದಾ ವನಕಾಗಿ ನಡೆ ತಂದ ವನಜಾಕ್ಷನಲ್ಲಿ ಶೂ- ರ್ಪನಖಿಯ ಮಾನಭಂಗವನು ಗೈದ ರನ್ನದಾ 8 ಖರದೂಷಣಾದಿ ದೈತ್ಯರ ಕೊಂದು ಮಾರೀಚ ದುರುಳನ ಸದೆದಾ ಧುರಧೀರ ರನ್ನದ ದುರುಳನ ಸದೆದಾ ಧುರಧೀರ ಶ್ರೀ ರಾಮ ಪರಿಪಾಲಿಸೆಮ್ಮನು ಕರುಣಾಳು ರನ್ನದ 9 ಪಾತಕಿ ದಶಕಂಠ ಸೀತೆಯನೊಯ್ದನೆಂದು ಕಾತರಗೊಂಡಂತೆ ಜನಕೆಲ್ಲ ರನ್ನದಾ ಕಾತರಗೊಂಡಂತೆ ಜನಕೆಲ್ಲ ತೋರ್ದ ರಘು ನಾಥನ ಮೊಖಲೀಲೆ ಖ್ಯಾತಿಯ ಪೊಗಳುತ10 ಮಂದರಾವಣ ಮೋಸದಿಂದ ಕೆಡಹಿದಂಥ ತಂದೆಯ ಸಖನಿಗಾನಂದ ಪದವನಿತ್ತ ತಂದೆಯ ಸಖನಿಗಾನಂದವ ಸಲಿಸಿ ಕ- ಬಂಧನ ದೈತ್ಯಯೋನಿ ಇಂದ ಬಿಡಿಸಿದಗೆ 11 ಬೇಡತಿ ಶಬರಿಯನ್ನು ನೋಡಿ ರಕ್ಷಣೆ ಮಾಡಿ ಪ್ರೌಢ ಮಾರುತಿಯಿಂದ ಕೂಡಿದ ರನ್ನದಾ ಪ್ರೌಢ ಮಾರುತಿಯನ್ನು ಕೂಡಿ ರವಿಜನ ಕಾ ಪಾಡಿ ವಾಲಿಯ ವಧೆ ಮಾಡಿದ ರನ್ನದಾ 12 ಪ್ರಾಣಾತ್ಮಜನು ನಾಗವೇಣಿಯ ವಾರ್ತೆಯ ತಾರೆ ಜಾಣತನದಲಿದ ಕ್ಷೀಣಾಂಬುಧಿಯೊಳಂದು ಜಾಣತನದಲಿದ ಕ್ಷೀಣಾಂಬುಧಿಯೊಳು- ಪ್ರ ವೀಣತನದಿ ಸೇತು ಕಾಣಿಸಿದವನಿಗೆ 13 ದೋಷಿ ರಾವಣನನು ನಾಶಗೈದಸುರಾರಿ ನೀಶ ನೀನೆನುತ ವಿಭೀಷಣಗೊರವಿತ್ತಾ ಈಶ ನೀನೆನುತಲಿವಿಭೀಷಣಗೊರವಿತ್ತ ವೈರಿ ಜಗದೀಶ ರಾಮನಿಗೆ 14 ಸೃಷ್ಟಿಜಾತೆಯ ಕೂಡಿ ಪಟ್ಟಾಭಿಷೇಕಗೊಂಡು ಶಿಷ್ಟ ರಕ್ಷಕನಾದ ಸಿರಿನಾಥ ರನ್ನದಾ ಶಿಷ್ಟ ರಕ್ಷಕನಾದ ಸಿರಿನಾಥ ವೆಂಕಟ ಬೆಟ್ಟದೊಡೆಯ ನಮ್ಮಭೀಷ್ಟವ ಕೊಡುವನ 15
--------------
ತುಪಾಕಿ ವೆಂಕಟರಮಣಾಚಾರ್ಯ
(ತುಳಸೀ ದೇವಿ ಪ್ರಾರ್ಥನೆ)* ಮದ್ದಾನಿಕ್ಕಿದೇನೆ ಹರಿಗೆ ಮುದ್ದು ತುಳಸಾ ದೇವಿ ಶುದ್ಧಾಮನದಿ ಪೂಜಿಸುವರಾ ಸಿದ್ಧವಾಗಿ ಕಾಯುವಿ ಪ. ಕಮಲ ಮಲ್ಲಿಕಾದಿ ನಾನಾ ಸುಮನ ತತಿಗಳಿಂದಾ ನಿತ್ಯ ನಮಿಸೆ ಭಕ್ತಿಯಿಂದಾ ಅಮಿತ ಮಹಿಮ ನಿನ್ನ ಹೊರತು ಕ್ಷಮಿಸನು ಮುಕುಂದಾ ಭ್ರಮಿತನಾದ ನಿನ್ನ ಮೇಲೆ ಕಮಲೇಶ ಗೋವಿಂದ 1 ಆದಿ ಲಕ್ಷ್ಮಿದೇವಿಯನ್ನು ಉರದೊಳಿಟ್ಟು ನಿನ್ನ ಪಾದದಲ್ಲಿ ಧರಿಸಿದನೆಂದಾದಿಪುರಷನನ್ನ ಬೋಧಿಸಿ ಕರ್ಣದಲ್ಲಿ ಮಸ್ತಕಾಧಿರೋಹವನ್ನ ಸಾಧಿಸಿ ತದ್ಭಕ್ತಜನರಿಗಾದಿ ಬಹು ಪಾವನ್ನ 2 ಸಂತತ ಹನ್ನೆರಡು ಕೋಟಿ ಸ್ವರ್ಣಪುಷ್ಪದಿಂದಾ- ನಂತಾಭವದಿ ಪೂಜಿಸುವುದಕ್ಕಿಂತಲಧಿಕಾನಂದಾ ಕಂತುಜನಕಗಹುದು ಕೋಮಲಾಂಶದಳಗಳಿಂದಾ ಇಂತು ಶೇಷಗಿರೀಶಗಾದಿ ಕಾಂತೆ ಮೋಹದಿಂದಾ 3
--------------
ತುಪಾಕಿ ವೆಂಕಟರಮಣಾಚಾರ್ಯ
(ಧ್ರುವನು ಜನಿಸಿದಾಗಿನ ಜೋಗುಳ ಹಾಡು) ಮುತ್ತಿನ ಸರಪಣಿ ಹಸ್ತದಿ ಪಿಡಿದು ಮತ್ತೈದೆಯರೆಲ್ಲ ಸುತ್ತಲೂ ನೆರೆದು ಪುತ್ರರತ್ನವ ತಂದು ತೊಟ್ಟಿಲೊಳಿಟ್ಟು ಮತ್ತಕಾಶಿನಿಯರು ತೂಗಿದರೊಟ್ಟು ಜೋ ಜೋ 1 ಮಾರನ ಹೋಲ್ವ ಶೃಂಗಾರನೆ ಜೋ ಜೋ ಧಾರುಣಿಪತಿ ಸುಕುಮಾರನೆ ಜೋಜೋ ಸಾರಸನೇತ್ರಪವಿತ್ರನೆ ಜೋ ಜೋ ಚಾರುಮೋಹನ ಶುಭಗಾತ್ರನೆ ಜೋಜೋ ಜೋಜೋ 2 ಜೋ ಜೋ ಮಕ್ಕಳ ಕಂಠಾಭರಣ ಜೋ ಜೋ ಸುರತರುಪಲ್ಲವಚರಣ ಜೋ ಜೋ ಸಜ್ಜನ ಹೃದಯಾನಂದ ಜೋ ಜೋ ಉತ್ತಾನಪಾದನ ಕಂದ ಜೋ ಜೋ3 ತೃವಿ ತೃವಿ ಲಕ್ಷ್ಮೀನಾರಾಯಣ ಶರಣ ತೃವಿ ತೃವಿ ಪರಿಪೂರ್ಣ ಸದ್ಗುಣಾಭರಣ ತೃವಿ ತೃವಿ ಸುಸ್ಮಿತವದನವಿಲಾಸ ತೃವಿ ತೃವಿ ಚಂದಿರಕಿರಣ ಪ್ರಕಾಶ ಜೋ ಜೋ 4
--------------
ತುಪಾಕಿ ವೆಂಕಟರಮಣಾಚಾರ್ಯ
(ನವಗ್ರಹ ಸ್ತೋತ್ರ) ಸತ್ಕಟಾಕ್ಷವಿರಿಸು ದಕ್ಷನಖವಜ್ರಿರಿಪುಪಕ್ಷದಹಿಸು ವಿರೂಪಾಕ್ಷ ಶರಣು ಪಕ್ಷವೃತ್ವಯನ ಸಂವತ್ಸರಾಖ್ಯ ದಯಮಾಡು ಶರಣೆಂದು ನಮಿಪೆ ನಿನ್ನ 1 ತೇಜೊರಾಶಿಯಾಗಿ ಮೆರೆವ ಕಮಲ ಘೂಕ ತಸ್ಕರರ ಗಣವ ನಾದಿಪತಿ ಗ್ರಹರಾಜ ನಿನ್ನ ಪದವ ವ್ಯಾಧಿಗಳ ಪರಿಹರಿಸು ಪಾವನಾತ್ಮ ಸಲಹೆನ್ನ ನಿರ್ಮಲಾತ್ಮ2 ನೀರುಮರಬಳ್ಳಿಸಕಲೌಷಧಿಗಳ ತಾರೆಗೊಲಿದಾಕೆಯಲಿ ಬುಧನಪಡದೇ ರಾಶಿ ಸಂಚಾರ ಮಾಳ್ಪೆ ಮೋಹದ ಬಲೆಯ ನೀರಜಾಕ್ಷ ಸಮನೋಜ ಮಾದೇವಿಸಹಜ 3 ಗುರುಮಿತ್ರ ಸಜ್ಜನತ್ರ ವ್ಯಾಮೋಹಗೊಳಿಸದಿರು ದಂಡಪಾಣಿ ರಾಜಕರುಣಾ ಪಾತ್ರನೆ ಕಾಮಚಾರಜ ಬಹುವಿಧಾಮಯವ ಪರಿಹರಿಸಿ ನೀ ಮನೋಹರ್ಷ ಪಾಲಿಸು ಧೀರನೆ ಕಮನೀಯ ಕಾಂತಿ ಕುಹಕಜನವಾರಿ4 ಪದುಮಗಳಿಗೆರಗುವೆನು ಪಾಲಿಸೆಂದು ಮಧು ವಿರೋಧಿಯ ಮನೋಭವನಣುಗ ಮಾತಿನಲಿ ಚದುರತೆಯನಿತ್ತು ಚಾತುರ್ಯಗೊಳಿಸು ಸದಯಾವಲೋಕ ನೀನೆಂದು ತಿಳಿದೆ ಮಾತ್ಸರ್ಯವೆಲ್ಲಬಿಡಿಸು ಪಾದ ಸ್ವರ್ಣವರ್ಣ ಸುಲಲಿತಾಂಗ 5 ಮಂತ್ರಜ್ಞ ಚೂಡಾಮಣಿ ಸದುಪಾಯಗಳ ತಿಳಿಸಿ ಸುರರ ಕಾವ ಉದಿತನಾಗಿರೆ ಸಕಲ ಬುಧರಿಗನುಕೂಲ ನಿತ್ಯದಲಿ ನಿಖಿಳ ಗ್ರಹೋನ್ನತ ಶಕ್ತಿಯೇ ಸಕಲಾರ್ಥ ಪಡದೀವನೆ ನಿನ್ನ ನಮಿಸುವೆನು ನೀನೊಲಿದು ಸಲಹೊ6 ಭಾರ್ಗವನೆ ಭಜಿಪೆ ನಿನ್ನ ತಪ್ಪು ಮರತು ಮುಖ್ಯವೆಂಬರ್ಥವರಿತು ಸೇವೆಗನುಕೂಲನಾಗಿರುವೆ ಕುರಿತು ಕಾಪಾಡು ಕರುಣ ವಹಿಸು7 ಮುನಿಸದಿರು ನಮ್ಮಮೇಲೆಂದೆಂದಿಗು ನಿನ್ನ ಘನವ ತ್ಯಜಿಸು ಭಂಗ ಶಕ್ತರಹರೆ ಪೇಳು ಮನ್ನಿಸುವ ಮಮತೆ ತಾಳು ಕನಸಿಲಾದರು ಕ್ರೋಧವಿಡದೆ ಕಾಪುವುದೆಂದು ನಿರುತದಿಂ ಕೈ ಮುಗಿದು ಬೇಡಿಕೊಳುವೆ 8 ವೀರ್ಯ ವಹಿಸಿದ ರಾಹು ಕೇತುಗಳನು ಶೌರ್ಯಾದಿಗಳ ದಯ ಮಾಡಿರಿ ಧಾರವೆಂದಿತ್ತಹರ್ಯಜ್ಞೆಯಿಂದ ನಾರ್ಯತನವೇನಿವರೊಳಿದ್ದರರಿತು ಮಂಗಳವಿತ್ತು ಸೌಖ್ಯ ಪಾಲಿಸಲಿ9
--------------
ತುಪಾಕಿ ವೆಂಕಟರಮಣಾಚಾರ್ಯ
(ನಾವೂರ ಅಗ್ರಹಾರದ ಕಟ್ಟೆ ಮುಖ್ಯಪ್ರಾಣ) ಕರವ ಪಿಡಿಯೋ ಜಾಣ ಘಟ್ಯಾಗಿರಲಿ ಕರುಣಾ ದುಷ್ಟ ಭಾವನೆಯನ್ನು ದೂರವೋಡಿಸಿ ಮನೋ- ಭೀಷ್ಟವ ದಯಮಾಡು ದುರಿತಾಬ್ಧಿ ಕಾರಣ ಪ. ಕೋಳಾಲ ಜನರಮೇಲ್ಕರುಣಾ ಕಟಾಕ್ಷಧಿ ಕೋಳಾಲ ಕರಯುಗದಿ ಪಿಡಿದು ಬಂದು ನೀಲ ಮೇಘನ ತೆರದಿ ಶೋಭಿಸುತಾಗ್ರ- ಮಾಲೆಯ ಶಿಖರದಲಿ ರಾಜಿಸುವ ಕೃಷ್ಣನ ಲೀಲೆಗಳಿಗನುಕೂಲನಾಗಿ ಸುಲೋಲ ನೇತ್ರಾವತಿ ಸರಿದ್ವರ ಕ- ಪಿಲದೊಳು ಪುಟ್ಟಾಲಯದೊಳನುಗಾಲ ನಿಂತ ಕೃಪಾಲವಾಲಾ 1 ಪ್ರಾಚೀನ ಯುಗದಿ ಮಾರೀಚ ವೈರಿಯ ಸೇರಿ ನೀಚ ರಕ್ಕಸರ ಗೆದ್ದೆ ದ್ವಾಪರದಲ್ಲಿ ಕೀಚಕ ಕುಲವ ಗೆದ್ದೆ ಕ್ಷಮೆಯೊಳು ತಿದ್ದೆ ಸೂಚಿಸಿದ ದೇವೋತ್ತಮರ ಬಲು ಸೂಚನೆಯ ಕೈಗೊಂಡು ಕಲಿಮಲ ಮೋಚನೆಯಗೊಳಿಸಿಲ್ಲಿ ನಿಂದು ನಿ- ರೋಚನಾತ್ಮಜ ವರದನೊಲಿಸುವ 2 ಕಾಯ ವಾಕ್ಕøತಾನಂತಾ ಪರಧಾಮ- ನೇನೊಂದನೆಣಿಸದಿರು ಕೃಪಾಪಾತ್ರ ನಾನೆಂದು ನೆನೆಸುತಿರು ಅಭಿಮಾನ ತೋರು ಪಾದ ಪಂಕಜ ಮಾನಿ ಕರುಣಿಸಹೀಂದ್ರ ಗಿರಿವರ ಶ್ರೀನಿವಾಸನ ಮುಖ್ಯಮಂತ್ರಿಯ 3
--------------
ತುಪಾಕಿ ವೆಂಕಟರಮಣಾಚಾರ್ಯ
(ಪೆರ್ಡೂರು ಶ್ರೀ ಅನಂತಪದ್ಮನಾಭ) ಪದ್ಮನಾಭ ಚರಣವೆನ್ನ ಶಿರದೊಳಿಟ್ಟು ಪಾಲಿಸು ಮಾತ ಲಾಲಿಸು ಪ. ಆದಿಭೌತಿಕಾದಿ ನಾನಾ ಬಾಧೆಯಿಂದ ಬಳಲಿ ಬಹಳ ನೊಂದೆನು ಇಲ್ಲಿ ಬಂದೆನು ಮೂರ್ತಿ ನಿನ್ನ ಕರುಣವಾಗಲೆಂದು ಕೈಯ್ಯ ಮುಗಿದು ಬೇಡುವೆ ಮಹಿಮೆ ಪಾಡುವೆ ಕಾದರೊಳ್ಳಿತಿನ್ನು ನಿನ್ನ ಪಾದಸೇವೆ ಮಾಳ್ಪುದನ್ನು ಮಾಧವ ಮಛ್ಛಾದಿರೂಪ 1 ದುರುಳ ಭಾವವನ್ನು ಬಿಡಿಸಿ ಸಲಹಿನ್ನು ಕೊಟ್ಟು ಫಲವನ್ನ ಒರಳಿನಲ್ಲಿ ಕೊರಳ ಸಿಕ್ಕಿ ನರಳುವಂತಾಗಿರುವ ಕಷ್ಟ ಪರಿಯಾಯ ಸ್ವಾಮಿಯರಿಯೆಯ ಶರಣು ಶರಣು ಎಂದು ಮುಂದೆ ಹೊರಳಿ ಬೇಡಿಕೊಂಡು ನಿಂದೆ ಚರಣ ಪದ್ಮದಾಸರನ್ನು ಮರಿಯದೆ ಮಾನಿಸುವ ತಂದೆ 2 ರಾಜಕದಳಿಮಾಲಿಕಾ ವಿರಾಜಕಂಠ ಭಕ್ತ ಕಲ್ಪ ಭೂಜನೆ ರಾಜ ರಾಜನೆ ಮೂಜಗನ್ನಿವಾಸ ಪೂರ್ಣ ರಾಜರಂತರಾತ್ಮ ವ್ಯಸನ ರಾಜಿಯ ಕಡಿಸು ಬೋ ಜೀಯಾ ಈ ಜಗತ್ತಿನಲ್ಲಿ ನಿನ್ನ ಸೋಜಿಗವನರಿವರುಂಟೆ ತೇಜದಾಯಿ ವೆಂಕಟಾದ್ರಿ ರಾಜನೀನೆಂದರಿದೆ ನಿಂದು 3
--------------
ತುಪಾಕಿ ವೆಂಕಟರಮಣಾಚಾರ್ಯ
(ಬಪ್ಪನಾಡ ದುರ್ಗಾಪರಮೇಶ್ವರಿ) ಬಪ್ಪನಾಡ ಭದ್ರಕಾಳಿ ತಪ್ಪು ಕ್ಷಮಿಸಿ ಸಲಹಮ್ಮ ನ- ಮ್ಮಪ್ಪ ಶ್ರೀನಿವಾಸ ದೇವನಪ್ಪುತಾನಂದಾಬ್ಧಿಗಿಳಿದ ಪ. ಸರಸಿಜಾಸನಾದಿ ದೇವ ವರರ ನೀನೆ ಸಲಹುವಿ ದುರುಳ ಜನರ ತರಿದು ಭೂಮಿ ಭರವನೆಲ್ಲ ಇಳುಹುವಿ ಚರಿಯ ತೋರ್ಪಮಾಯೆ ಅಲ್ಯ- ಲ್ಲಿರುವ ಶತ್ರು ಪುಂಜವ ಕತ್ತರಿಪದೇನಾಶ್ಚರ್ಯ ತಾಯೆ 1 ಶಂಬರಾರಿ ಪಿತನಪಾದ ನಂಬಿಕೊಂಡ ರಾತಿಯ ಅಂಬೆ ನಿನ್ನ ಕರುಣದಿಂದ ಸಂಭವಿಸಿದ ಖ್ಯಾತಿಯ ಡಂಬತನದ ಶುಂಭ ನೀಶುಂಭ ದಮನೆ ಶಕ್ತಿ ನಿನ- ಗೆಂಬುದೇನು ದಾಸದಾಸನೆಂಬದರಿತು ಸಲಹು ದೇವಿ 2 ಮೂಢಮತದಿ ಮುಂದೆ ಹೋಗಿ ಮಾಡಿದಂಥ ಕುಂದನು ಪ್ರ- ಹುಡೆ ಕ್ಷಮಿಸಬೇಕೆಂದಿಂದು ಓಡಿ ಬಂದು ನಿಂದೆನು ಮೂಡಲಾದ್ರಿವಾಸನಡಿಯ ಪಾಡುವನೆಂದೆನ್ನನು ಕಾ- ಪಾಡಿ ಕಡೆಹಾಯಿಸುವದೆಂದು ಬೇಡಿಕೊಂಬೆ ಭಯಹರಾಂಬೆ 3
--------------
ತುಪಾಕಿ ವೆಂಕಟರಮಣಾಚಾರ್ಯ
(ಬ್ರಹ್ಮಾಂಡ ಪುರಾಣದ ಕರುಣಾಕರ ಸ್ತೋತ್ರದ ಅನುವಾದ) ಶ್ರೀ ರಮಣನೆ ನಮೋ ಎಂದು ನುತಿ ಪೇಳ್ವೆನಿಂದು ಪ. ನಿನ್ನನು ದೂಡದಿರನ್ಯರ ಬಳಿಗೆ ಪಾದ ಕಾಪಾಡು ದೇಹವ ದಾಢ್ರ್ಯದೊಳಗೆ 1 ಈಶನು ನೀ ಎನಗೆಂದಿಗು ನಿನ್ನ ದಾಸನಾದುದರಿಂದ ಪೋಷಕರನು ಕೃಪೆಯಿಂದ 2 ಎನ್ನ ಭರಣಕನ್ಯರಸಡ್ಯೆಯೇನು ಕಂಬುರುಹಾಕ್ಷಾಶ್ರಿತ ಕಾಮಧೇನು 3 ಫಣಿರಾಜಶಯನ ಶ್ರೀಕಾಂತ ಎನಗೆ ಸಿದ್ಧಾಂತ 4 ಕಲ್ಕಿರುವ ಸ್ವಾಪಲ್ಕಿವರದ ನಿನ್ನ ಶುಲ್ಕದಾಸಗೆ ಭಯವಿಲ್ಲ ಫಲ್ಕಸ ಪಾವನ ಮನದಿ ನೀಯಿರಲನ್ಯ ಕಲ್ಕಗಳುಂಟೆ ಭೂನಲ್ಲ 5 ಹೆಚ್ಚಾದರ್ಥಗಳುಂಟೆ ಪೇಳು ತಡಮಾಳ್ಪದಾಶ್ಚರ್ಯ ಕೇಳು ದಯಾಳು 6 ತಾಯೆ ತನ್ನಣುಗಗೆ ಗರವನಿಕ್ಕೆ ಬೇರೆ ಕಾಯುವರುಂಟೆ ಬೇಗದಲಿ ಲೋಕದಲಿ 7 ದಾತ ಪರಿತ್ರಾತ ಜ್ಞಾತದಯಾನ್ವಿತನೆಂದು ಪಾಲಿಸು ಗುಣಸಿಂಧು 8 ನೀ ನಿರ್ವಹಿಸುವಿಯೆಂದು ತಿಳಿದೆ ಎನ್ನಯ ವಾರ್ತೆಗೊಳದೆ9 ನೀ ಬಿಡದಿರು ಹರಿಯೆ ಸರ್ವಾರ್ಥದಾಯಕ ಎನ್ನ ದೊರೆಯೆ 10 ಎಂದು ಪೇಳ್ದೆದು ಶ್ರುತಿ ನಿಂದು ಭವ ಬೇಗ ಓಡಿ ಬಂದು 11 ಎನ್ನೊಳ್ಯಾಕೆ ನಿರ್ದಯವು ಬೇಗ ಪರಿಹರಿಸಾಧ್ಯಾತ್ಮಿಕಾರ್ತಿ 12 ಶಕುತಿಯದ್ಭುತವಲ್ಲ ಸ್ವಾಮಿ ಬಹುದು ಸುಪ್ರೇಮಿ 13 ಪಂಡಿತಜನರು ಲೋಕದಲಿ ಪುಂಡರೀಕಾಕ್ಷ ನೀನರಿವಿ 14 ದಯೆದೋರು ಭೃಂಗಾಳಕಾಂತ ದಿನಕಾಂತ ದಯೆದೋರೊ ಬೇಗ ನಿಶ್ಚಿಂತಾ 15 ಕರಗಳ ಮುಗಿದು ಸ್ವೀಕರಿಪುದು ಬುಧುರರಿದು. 16
--------------
ತುಪಾಕಿ ವೆಂಕಟರಮಣಾಚಾರ್ಯ
(ಭಕ್ತಿ ಎಂಬ ಸ್ತ್ರೀಯ ವರ್ಣನೆ) ಸೇರಿರೊ ನವ ನಾರಿಕುಂಜರನನ್ನು ಧೀರಲಕ್ಷ್ಮೀವರನು ಮಂಟಪವೇರಿ ಮುಂದಕೆ ಬರುವನು ಪ. ಶ್ರವಣ ಕೀರ್ತನ ಸ್ಮರಣ ಸೇವನ ಪೂಜ ಪ್ರ- ಣವ ದಾಸ್ಯ ಸಖತ್ವ ಸರ್ವವ ವಹಿಪ ನವವಿಧ ಭಕುತಿಯ1 ದೂರ ನಿಂತರೆ ತೋರದು ಸರಿಯಾಗಿ ಸಾರಗೈಯಲು ಸಾಧನೆಗಳಿಂದಾರು ಮೂರಾಗಿರುವುದು 2 ಜೋಲುವಾ ಸೊಂಡಿಲೆಂಬುದೆ ಸುಜ್ಞಾನ ಕಾಲುಗಳೆ ಪುರುಷಾರ್ಥವೆನಿಪವು ಬಾಲ ಸದ್ಗುಣಭಾವವು 3 ಭಕ್ತಿ ಭುಕ್ತಿಗಳೆರಡು ನೇತ್ರಗಳು ವಿ- ರಕ್ತಿಯುದರವು ವಿಷ್ಣು ಗಾಥಾಸಕ್ತಿ ಸಕಲೇಂದ್ರಿಯಗಳು 4 ನಿತ್ಯ ನಿರ್ಮಲ ಚರಿತ ಲಕ್ಷ್ಮೀಶನ ಭೃತ್ಯಪಾದ ರಜಸ್ಸಮೂಹವನೆತ್ತಿ ನಾಲ್ದೆಸೆ ಸುರಿವದು 5 ಹತ್ತಿರೆಂದಿಗು ಸೇರಲೀಯದು ದು- ದುರಿತ ಕೂಪದಿ ಒತ್ತಿ ಕೆಡುಹುವ ವಹಿಲವು 6 ಛಲಕೆ ಮೆಚ್ಚುತ ನಲಿವುದು ಮನದಲಿ ಚೆಲುವ ಶೇಷಗಿರೀಂದ್ರನಾಥನ ವಲಿಸಿ ಕೊಂಡಿಲ್ಲಿಳಿವುದು 7
--------------
ತುಪಾಕಿ ವೆಂಕಟರಮಣಾಚಾರ್ಯ
(ಭಗವದ್ಭಕ್ತ ಸಂಮೋಹ ಪ್ರಾರ್ಥನೆ) ಗಜಮುಖನ ಪ್ರಪಿತಾಮಹನಹಿಮನ ಗಜೆಯರಸನ ಪಿತನ ಪೆತ್ತನ ಸಾರಥಿ ಪಾದ ಪಂಕಜವ ಭಜಿಸಿ ಭಾರತಿವರನ ನಮಿಸುವೆ ಅಜಭವಾದಿ ಗುರೂತ್ತಮರ ನಿಜ ವೃಜಿನಪಂಕ ನಿವೃತ್ತಿಗೊಳಿಸುವದೆಂದು ವಂದಿಸುವೆ 1 ಅವ್ಯವಹಿತಾಸದೃಶ ಭಕ್ತಿಯ ಸವ್ಯಸಾಚಿ ಸಹಾಯ ಸಲಿಸಾ ದಿವ್ಯ ಪದವಿಯ ಪಡೆವೆನೆಂದುಗತವ್ಯಳೀಕದಲಿ ಕಾವ್ಯ ವ್ಯಾಕರಣಗಳಿಂದ ವಹಿಸಿದ ಸೇವ್ಯ ಗುರು ಲಾ- ತವ್ಯ ಮುನಿವರರಂಘ್ರಿಕಮಲವ ನುತಿಸಿ ನಮಿಸುವೆನು 2 ಪುಂಡರೀಕ ದಲಾಯತಾಕ್ಷನೆ ಹಿಂಡು ದೈವದ ಗಂಡನೆಂದತಿ ಚಂಡ ಮೈಗಳ ಖಂಡಿಸಿದ ಯತಿಮಂಡಲೇಶ್ವರನ ಪಾಂಡ್ಯದೇಶದೊಳವತರಿಸಿದಾ ಖಂಡಲಾತ್ಮನ ನಮಿಪೆ ಮಮ ಹೃ- ನ್ಮಂಡಲದಿ ಪಾಲಿಸು ಸುಧಾರಸವುಂಡು ನಲಿವಂತೆ 3 ಮೋದತೀರ್ಥ ಮಹಾಬ್ಧಿಯನು ಕಡೆ- ದಾದಿಯಲಿ ನ್ಯಾಯಾಮೃತವ ತೆಗೆ- ದಾದರದಿ ಸಜ್ಜನರಿಗುಣಿಸಿದ ಗಾಢಮತಿಯುತನ ಮಾಧವನ ಗುಣತರ್ಕ ತಾಂಡವ ವೋದಿಸುತ ಚಂದ್ರಿಕೆಯ ತೋರಿದ ಬೋಧಕರ ಪ್ರಲ್ಹಾದಮುನಿ ಕರುಣದಲಿ ಸಲಹೆನ್ನ 4 ಮಂಗಳಾಂಬುತರಂಗ ತುಂಗಾ ಸಂಗಿ ಮಂತ್ರಾಲಯದಿ ನಿಂದು ಕು ರಂಗ ವೈರಿಯ ಪೂರ್ವ ಕರುಣಾಲಿಂಗನೋತ್ಸುಕನ ಪಂಗು ಬಧಿರಾದ್ಯಂಗ ಹೀನರ ಪಾಂಗ ನೋಟದಿ ಪಾಲಿಸುವ ಯತಿ ಪುಂಗವಾರ್ಜಿತ ರಾಘವೇಂದ್ರರ ನಮಿಪೆನನವರತ 5 ಜೋಲಿಸುವ ಕಂಠದಲಿ ತುಳಸೀ ಮಾಲೆಯನು ಕರಯುಗದಿ ವೀಣಾ ತಾಳಗಳ ಬಾರಿಸುತ ಸರ್ವತ್ರದಲಿ ಸಂಚರಿಸಿ ಶ್ರೀಲಲಾಮನ ಲೀಲೆಗಳಿಗನು- ಕೂಲರಾದ ಸುರರ್ಷಿ ನಾರದ ರಾಲಯಸಿ ತಪ್ಪುಗಳ ತಿದ್ದುವುದೆಂದು ನಮಿಸುವೆನು 6 ಸತ್ಯಭಾಮಾಕಾಂತನಿದಿರಲಿ ನಿತ್ಯ ನಡೆಸುವನೆಂಬ ಸೇವೆಗೆ ಒತ್ತಿಬಹ ವಿಘ್ನಗಳ ದೂರದಿ ಕಿತ್ತು ಬಿಸುಟುವರ ಹತ್ತು ದೆಶೆಯಲಿ ನಿಂತು ರಕ್ಷಿಪ ಕೃತ್ತಿವಾಸ ಸುರೇಶಮುಖ ದೇ- ವೋತ್ತುಮರ ನಾ ನಮಿಪೆ ತತ್ವದ ಭೃತ್ಯನಹುದೆಂದು 7 ಪಾವಮಾನ ಮತೀಯ ವೈಷ್ಣವ- ರಾವಳಿಗೆ ಶರಣೆಂಬೆ ನಿಮ್ಮ ಕೃ- ಪಾವಲಂಬನವಿತ್ತು ಕರುಣವ ಶುದ್ಧಿಕರಿಸುತಲಿ ದೇವ ದೇವವರೇಣ್ಯ ಭಕ್ತರ ಕಾವ ಶೇಷಗಿರೀಂದ್ರನಾಥನ ಸೇವಿಸುವ ಸುಖವಿತ್ತು ಸುಲಭದಿ ಸಲುಹಬೇಕೆಂದು 8
--------------
ತುಪಾಕಿ ವೆಂಕಟರಮಣಾಚಾರ್ಯ
(ಮದ್ರಾಸಿನ ತಿರ್ವಳಕೇಣಿ ಪಾರ್ಥಸಾರಥಿ) ಏನು ಮಾಡಲಿನ್ನು ನೀನಲ್ಲದೆ ಯಾದಾರ ಬೇಡಲಿನ್ನು ಪ. ಮಾನಿನಿ ದ್ರೌಪದಿ ಮೊರೆಯಿಡುವುದ ಕೇಳಿ ಸಾರಥಿ ದೇವ ಅ.ಪ. ನೀನಿತ್ತ ಸೌಭಾಗ್ಯದ ಗರ್ವದಿ ಎನ್ನ ಧ್ಯಾನಾದಿಗಳ ಮಾಡದೆ ನಾನಾ ವಿಧದ ದುರ್ಮಾನುವಾದುದರಿಂದ ನೀನೆ ಸದ್ಗತಿಯೆಂದು ಧ್ಯಾನಿಸಿಲ್ಲಿಗೆ ಬಂದೆ 1 ಬಡತನದಿಂದಿರಲು ಸಕಲ ಸುರ- ರೊಡೆಯ ನೀ ಕೈ ಪಿಡಿದು ರೂಢಿ ಮದದಿ ನಿನ್ನನು ಬಿಟ್ಟು ಕಡೆಗೆ ನಿನ್ನಯ ಪಾದದೆಡೆಗೆ ಬಂದೆನು ದೇವ 2 ಪಶ್ಚಿಮ ವಾರಿಧಿಯ ತೀರದಲಾದ ದುಶ್ಚರಿತ್ರೆಯ ತಾಳದೆ ಆಶ್ಚರ್ಯತಮವಾದ ಸಚ್ಚರಿತ್ರನೆ ನಿನ್ನ ನೆಚ್ಚಿ ಬಂದಿಹೆನೊ ವಿಪಶ್ಚಿತರೊಡೆಯನೆ 3 ನಕ್ಷತ್ರಗಳಂದಿಂದಲು ಯೆನ್ನಪರಾಧ- ವಕ್ಷಯವಾಗಿರಲು ಅಕ್ಷರಿ ವಂದ್ಯ ನೀ ಲಕ್ಷ ಬಿಡುವುದೆ ಕ- ಟಾಕ್ಷದಿಂದಲಿ ನೋಡಿ ರಕ್ಷಿಸು ಕರುಣದಿ 4 ಎಷ್ಟು ಕರ್ಮಿಯಾದರು ನಿನ್ನಲಿ ಮನ- ವಿಟ್ಟು ಬಂದಿರುವೆನಲ್ಲ ದುಷ್ಟಮರ್ದನ ಶಿಷ್ಟರಕ್ಷಣ ಭಾಜಕ ಜ- ನೇಷ್ಟದಾಯಕ ಸೃಷ್ಟ್ಯಾದೃಷ್ಟಕರ್ತ 5 ನಟನ ಮಾಡುವ ಬೊಂಬೆಯ ಪೋಲುವ ಯೆನ್ನ ಹಟದಿಂದ ದಣಿಸುವುದೆ ವಟಪತ್ರ ಶಾಯಿ ಧೂರ್ಜಟಿ ವಂದ್ಯ ಅಂಜಲಿ ಪುಟನಾಗಿ ಬೇಡುವೆ ಘಟಿಸೊಭಿಲಷಿತವ 6 ಎಂದಿಗಾದರು ನಿನ್ನಯ ಪಾದಯುಗಾರ- ವಿಂದ ದರ್ಶನವಾಗಲು ಭವ ಸಿಂಧುವ ದಾಟುವೆ- ನೆಂದು ಬಂದಿರುವೆ ಸನಂದನಾದಿ ವಂದ್ಯ 7 ಕೂರ್ಮ ವರಾಹ ನಾರಸಿಂಹ ವಾಮನ ಶ್ರೀ ಭಾರ್ಗವ ರಾಮಕೃಷ್ಣ ಬೌದ್ಧ ಕಲ್ಕಿಯಂಬ ದಿವ್ಯ ನಾಮಗಳನು ಬಿಟ್ಟು ಕಾಮಲಾಲಸನಾಗಿ 8 ಒಂದು ನಿಮಿಷವಾದರು ತತ್ವಾಧಾರ ವಿಂದ ದರ್ಶನ ಮಾಡಲು ಹೊಂದಿದಘಗಳೆಲ್ಲ ಬೆಂದು ಹೋಗುವುದೆಂದಾ- ನಂದತೀರ್ಥಚಾರ್ಯರೆಂದ ನುಡಿಯ ನಂಬಿ 9 ದ್ವೇಷಿ ಮಾನವರ ಮುಂದೆ ನಾನಾ ವಿಧ ಕ್ಲೇಶವ ತಾಳ್ದೆ ಹಿಂದೆ ಘಾಸಿಯಾಗಿ ನಾನಾ ದೇಶ ದಾಟಿ ಬಂದೆ ಮೀಸಲಾದೆ ನಿನ್ನ ದಾಸ ದಾಸ್ಯನೆಂದೆ 10 ಜನರೊಳು ಪ್ರಮಿತನಾಗಿ ಬಾಳಿದ ಮಾನ- ವನು ಮಾನಹೀನನಾಗಿ ತನುವ ಪೊರೆದನತಿ ಘನಕ್ಲೇಶವೆನುತ ಅ- ರ್ಜುನನಿಗೆ ಉಪದೇಶವನು ಪೇಳಿದವ ನೀನೆ 11 ಯುಕ್ತಿ ಒಂದನು ಕಾಣೆನು ದೇಹದಿ ದೃಢ ಶಕ್ತಿಯಿಲ್ಲದವ ನಾನು ಮುಕ್ತಾಶ್ರಯ ಸರ್ವ ಶಕ್ತಿ ನೀನಿಹ ಪರ- ಭುಕ್ತಿ ಮುಕ್ತಿದನೆಂಬ ವಿರಕ್ತಿಯಿಂದಲಿ ಬಂದೆ 12 ಕಾಸೆಲ್ಲ ವ್ಯಯವಾಯಿತು ಎನಗೆ ಪರದೇಶವಾಸವಾಯಿತು ಆಸೆ ಬಿಡದುದರ ಘೋಷಣೆಗಿನ್ನವ- ಕಾಶವೊಂದನು ಕಾಣೆ ಶ್ರೀಶ ನೀನರಿಯೆಯ 13 ನಿಲ್ಲಲಾಶ್ರಯವನು ಕಾಣೆ ಪೋಗುವೆನೆಂದ- ರೆಲ್ಯು ಮಾರ್ಗವನು ಕಾಣೆ ಬಲ್ಲಿದ ವೈರಿಗಳಲ್ಲಿ ತುಂಬಿಹರರಿ- ದಲ್ಲಣ ನೀ ಎನ್ನ ಸೊಲ್ಲ ಲಾಲಿಸು ಕೃಷ್ಣ 14 ಅಶನವಸನ ಕಾಣದೆ ದೇಶವ ಸುತ್ತಿ ಬಸಿದು ಬೆಂಡಾಗಿಹೆನು ಉಶನಾಂiÀರ್i ಶಿಷ್ಯನ ವಶದಿಂದೆತ್ತಿ ಪೃಥ್ವಿಯ ದಶನಾಯಕರಿಗಿತ್ತ ಅಸಮಸಾಹಸ ದೇವ 15 ಮಾಡಿದಪರಾಧಕೆ ಮಾನಹಾನಿ ಮಾಡಿದುದು ಸಾಲದೆ ಬೇಡುವೆ ದೈನ್ಯದಿ ಪಾಡುವೆ ಮಹಿಮೆಯ ರೂಢಿಯೊಳಗೆ ದಯಮಾಡು ಇನ್ನಾದರು 16 ಇನ್ನಾದರೂ ಮನದಿ ಪಶ್ಚಾತ್ತಾಪ ವನ್ನು ತಾಳೊ ದಯದಿ ಕಣ್ಣ ಕಟ್ಟಿ ಕಾಡಿನೊಳು ಬಿಟ್ಟ ತೆರದೊಳಿಂ- ತೆನ್ನನು ಬಳಲಿಪದನ್ಯಾಯವಲ್ಲವೆ 17 ನಷ್ಟವೇನಹುಣನು ಎನ್ನಲಿ ಕ್ರೋಧ ಬಿಟ್ಟು ಬಾಧಿಸುತ್ತಿರಲು ಕೃಷ್ಣ ನೀ ಕರುಣದಿ ಕಷ್ಟ ಬಿಡಿಸಿ ಕಡೆ ಗಿಷ್ಟು ತಾತ್ಸಾರದಿಂದ ಕಷ್ಟಗೊಳಿಸಿದೆ 18 ಇಂದ್ರಾದಿ ಸುರರುಗಳು ಕೆಲವು ಕಾಲ ನೊಂದು ಭಾಗ್ಯವ ಪಡದು ಇಂದಿರೇಶ ನಿನ್ನ ಬಂಧಕ ಶಕ್ತಿಯಾ ನಂದ ತಿಳಿದಂತೆ ಮಂದನಾನರಿವೆನೆ 19 ಆನೆಯ ಭಾರವನು ಹೊರಲು ಸಣ್ಣ ಶ್ವಾನ ಸಹಿಸಲಾಪದೆ ದೀನ ಮಾನವನೆಂದು ಧ್ಯಾನಿಸಿ ಮನದಲಿ ಘನ್ನ ದುಖ್ಖವ ಕಳೆಯಾನಂಥ ಮೂರುತಿ20 ನೀನಿತ್ತ ಮಾನವನು ನೀ ಕಳದುದ ಕಾನು ಮಾಡುವದೇನಯ್ಯ ದಾನವಾರಿ ಸುರಧೇನು ನಿನ್ಡಿಗಳ ಧ್ಯಾನ ಮಾಡುತಲಿ ಸುಮ್ಮಾನದಿಂದಿರುವೆನು 21 ಸಾಕು ಸಾಕು ಮಾಡಿದೆ ಎನ್ನನು ಬಹು ನೀಕರಿಸುತ ದೂಡಿದೆ ಬೇಕಾದರೆ ಭಕ್ತ ನೀ ಕಪಾಲನ ಪ- ರಾಕೆಂಬ ಬಿರುದಿಂದ ಸಾಕುವದುಚಿತವೆ 22 ಅಂಬರೀಷವರದ ಸ್ವಭಕ್ತ ಕು- ಟುಂಬಿಯಂಬ ಬಿರುದ ನಂಬಿದ ಮೇಲೆನಗಿಂಬುದೋರದೆ ವೃಥಾ ಡಂಬರವ್ಯಾಕಿನ್ನು ಶಂಬರಾರಿಯ ಪಿತ 23 ಹಂಸವಾಹನ ಜನಕ ದಾಸಮದ- ಭ್ರಂಶಕನೆಂದನ- ಕ ಸಂಶಯವಿಲ್ಲದೆ ತಿಳಿದೆನು ಮಾತುಳ ಕಂಸ ಮರ್ದನ ವಿಪಾಂಸ ಶೋಭಿತ ದೇವ 24 ತರಳ ಪ್ರಹ್ಲಾದ ಧ್ರುವಾದಿಗಳನೆಲ್ಲ ಪೊರೆದನೆಂಬ ಕಥೆಯ ಹಿರಿಯರು ಪೇಳ್ವರು ಭರವಸೆ ಎನಗಿಲ್ಲ ಸಿರಿನಲ್ಲ ನೀಯೆನ್ನ ಬರಿದೆ ಬಿಟ್ಟದ ಕಂಡು25 ವಿಜಯಸಾರಥಿ ನಿನ್ನಯ ಮೂರ್ತಿಯ ಕಂಡು ಭಜಿಸಿದ ಮೇಲೆನ್ನನು ವಿಜಯ ಪೊಂದಿಸದಿರೆ ತ್ರಿಜಗವು ನಗದೇನೊ ಭುಜಗ ಭೂಷಣ ವಂದ್ಯ ದ್ವಿಜರಾಜ ಗಮನನೆ 26 ಕುಂದಣ ವರ್ಣವಾದ ಕೇತಕಿಯನು ಗಂಧಕೆ ಮರುಳನಾಗಿ ಬಂದು ಕುಸುಮಧೂಳಿಯಿಂದ ಲಂಡನಾದ ತುಂದಿಲೋದರ ಮಿಳಿಂದನಂದದಿ ಸಿಕ್ಕಿ 27 ಬೇಡುವದೇನೆಂದರೆ ನಿನ್ನನು ಧ್ಯಾನ ಮಾಡಿ ಪಾಡುವ ಭಾಗ್ಯವ ನೀಡು ನೀಚರನೆಂದು ಬೇಡದಂದದಿ ಮಾಡು ರೂಢಿಯೊಳಗೆ ದಯಮಾಡು ನೀ ನಿರುಪದಿ 28 ಇನ್ನು ತಾ ತಾಳಲಾರೆ ಕ್ಷಣೆ ಕ್ಷಣೆ ನಿನ್ನ ಪೊಗಳಲಾರೆ ಪನ್ನಗಾಚಲವಾಸ ಪರಮ ಪುರುಷ ಪ್ರ- ಸನ್ನ ವೆಂಕಟೇಶ ಪಾಲಿಸು ಕೃಪೆಯಿಂದ 29
--------------
ತುಪಾಕಿ ವೆಂಕಟರಮಣಾಚಾರ್ಯ
(ಮಹಿಷಿ ಅಶ್ವತ್ಥನಾರಾಯಣ ದೇವರು) ತಪ್ಪಾ ಕ್ಷಮಿಸು ಕಲ್ಪತರುರೂಪ ತವಪಾದ- ಕೊಪ್ಪಿಸಿದೆನು ಯೆನ್ನನು ಅಪ್ಪಳಿಸಖಿಳಾಂತರಾಯವತಿದಯದಿ ತಿ- ಮ್ಮಪ್ಪರಾಜನೆ ನೀನೆಂದರಿತು ಬಂದಿರುವೆನು ಪ. ಮಂಗಲ ಮಹಿಮೆ ಮಾತಂಗ ವರದ ಶುಭ ತುಂಗಾತೀರದಿ ನಿಂದು ತಾರಕನೆಂದು ಭವ ಭಯ ಭಂಗದ ಮಹಿಮನೆಂದರಿತು ಬಂದಿಹೆನಿಂದು ಅಂಗದಾದಿ ದೇವೇಂದ್ರ ಸಂಸ್ತುತ ತುಂಗಬಲ ಹನುಮತ್ಪ್ರತಿಷ್ಠಿತ ಅಂಗುಟಾಗ್ರದೊಳಖಿಳಪಾವನ ಗಂಗೆಯನು ಪಡದಾದಿ ಪುರುಷ 1 ಪಾವಕ ದಿಋಖ(?) ದೇವ ಸತ್ಸುಖಗಣ ಭಾವನ ಭಜಕೇಷ್ಟಸಿದ್ಧಿದನೇ ಮಾವನ ಮಗನೊಳಗುಸುರಿದ ನುಡಿಯನು ಕಾವೆನಿಂದಿರುವಿಲ್ಲಿ ಕರುಣಾವಾರಿಧಿ ಕೃಷ್ಣಾ ಈ ವಸುಂಧರೆಯಲ್ಲಿ ಘಟಿಸುವ ನೋವುಗಳ ಸಂಬಂಧಗೊಳಿಸದೆ ಶ್ರೀವನಿತೆಯೊಡಗೂಡಿ ನಿನ್ನ ಕ- ರಾವಲಂಬನವಿತ್ತು ಕರುಣಿಸು 2 ತ್ರಿವಿಧ ತಾಪಗಳು ಭರಿಸಲಾರದೆ ವಂದು ನೆವನದಿಂದಲಿ ಬಂದು ನುಡಿದೆನಿಂದು ಪವಮಾನವಂದಿತ ಪತಿತ ಪಾವನನೆ ನೀ- ವಹಿಸಿ ರಕ್ಷಿಪುದೆಂದು ಒರೆವೆನು ಗುಣಸಿಂಧು ವಿರಿಂಚಿ ರಮಾ ವರಪ್ರದ ಭಾರ ನಿನ್ನಲಿರಿಸಿದವನನು ತವಕದಲಿ ಕಾಪಾಡು ವೆಂಕಟ ಮಹಿಷಿ ಕ್ಷೇತ್ರ ಪಾಲನ3
--------------
ತುಪಾಕಿ ವೆಂಕಟರಮಣಾಚಾರ್ಯ
(ಮುಳಬಾಗಿಲು ಪರಶುರಾಮ ದೇವರು) ತುಂಗಾ ತಟದಲ್ಲಿ ಥಳಥÀಳಿಸುವ ಭೃಗುಪುಂಗವ ಭೂಪತಿಯೆ ಭಂಗಿಸು ಶ್ರೀಪತಿಯೆ ಪ. ಸೂರ್ಯ ದಿನದಿ ನಿನ್ನಡಿಯಲಿ ಬೇಡಿದ ಕಾರ್ಯಗಳೆಲ್ಲವನು ಸ್ಥೈರ್ಯ ಧೈರ್ಯ ಶೌರ್ಯಗಳ ನೀಡುವಾಚಾರ್ಯ ಸಮರ್ಜಿತನೆ ಆರ್ಯ ಗ್ರಹಸ್ಥಿತ ಧಾರ್ಯಾನಲಧೃತ ವೀರ್ಯವಿಭಾವನನೆ ಮರ್ಯಾದೆಯ ಕಾಪಾಡೆಂದಿಗು ಶ್ರೀ ಭಾರ್ಯಾಲಂಗಿತನೇ 1 ವೈದಿಕ ಲೌಕಿಕ ವಿವಿಧ ಕರ್ಮಗಳ ಸಾಧಿಸು ಸುಲಭದಲಿ ಶೋದಿಸಿ ಹೃತ್ಕಮಲವನು ನಿಲ್ಲಿಸಿ ಬೋಧಿಸು ಭೂಮಿಯಲಿ ಬಾಧಿಪ ವಿಘ್ನವ ಬಡಿದೋಡಿಸಿ ಮೃದು ಪಾದಯುಗ್ಮವ ಸಾದರದೊಳ್ಮಸ್ತಕದಲ್ಲಿರಿಸುತ ಮೋದಗೊಳಿಸು ಮನವ 2 ನಿರುತದಿ ನೀನಿಲ್ಲಿರುವುದ ಕಂಡರೆ ಹರುಷವ ಹೊಂದಿಹೆನು ಮರೆಯದಿರೆನ್ನನು ಮನೆಯಲ್ಲಿದ್ದರು ಸರಸಿಜಾಸನ ಪಿತನೆ ಪರತರ ಮಂಗಳ ಪಾವನ ವೆಂಕಟ ಗಿರಿವರ ಶೋಭಿತನೆ ಸರಿ ನಿನಗಿಲ್ಲೆಂದರಿವರನೆಂದಿಗು ಪೊರೆವ ಕೃಪಾಕರನೆ3
--------------
ತುಪಾಕಿ ವೆಂಕಟರಮಣಾಚಾರ್ಯ
(ರುದ್ರದೇವರು) ಬಾರೋ ಬ್ಯಾಗನೆ ಗಿರಿಜಾರಮಣನೆ ಪ ನಾರದನುತ ಪಾದಾರವಿಂದ ತೋರಲು ಅ.ಪ ಭಕುತರ ವೃಂದಕೆ ಭಕುತಿ ಮುಕುತಿಯಿತ್ತು ಯುಕುತಿಲೆÉ ಪೊರೆಯುವ ಶಕುತಿಯ ತೋರಲು 1 ಭೂಮಿಯೊಳಿಹ ಸರ್ವ ಪಾಮರ ಜನರಿಗೆ ಕಾಮಿತಫಲವೆಲ್ಲ ಪ್ರೇಮದಿ ಈಯಲು 2 ಮಡದಿಯ ನುಡಿಗೆ ನಿನ್ನಡಿಗೆ ಬಂದಂಥ ಬಡವನ ಪೋದಂತೆ ತಡವ ಮಾಡದೆ ಈಗ 3 ಶಿರಿವತ್ಸಾಂಕಿತನೆಂದು ವರಶ್ರುತಿಗಳು ನಿನ್ನ ಕರೆದು ತ್ರಿಜಗದ ನರಪನೆ ಈಗಲೆ 4
--------------
ಸಿರಿವತ್ಸಾಂಕಿತರು