ಒಟ್ಟು 191 ಕಡೆಗಳಲ್ಲಿ , 58 ದಾಸರು , 180 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ರಕ್ಷಿಸೋ ಶ್ರೀ ವೇದವ್ಯಾಸ | ಬದರಿನಿವಾಸ | ಆಶ್ರಿತ ಜನತೋಷ ಪ ಭೃತ್ಯ ಮತ್ಸ್ಯ | ವ್ಯಕ್ತನಾದನು ಹರಿ ಅವ್ಯಕ್ತ | ಕರೆಸಿದ ಸತ್ಯ | ವತಿಯಸುತ ಗೋಪ್ತ 1 ಕಾಲ ತಾಪ | ಬಟ್ಟರು ಜನ ಪ್ರಲಾಪ |ಶ್ರೀಪತಿ ತಾಳ್ದನು ರೂಪ | ವ್ಯಾಸ ರೂಪ | ದೋಷ ನಿರ್ಲೇಪ |ದ್ವೀಪದೊಳುದಿಸಿತೀರೂಪ | ಯಮುನಾ ಸಮೀಪ | ಪರಾಶರ ಜನೆನಿಪ 2 ಸೂತ್ರ ದಾತ | ಎನ್ನೊಳು ಪ್ರೀತ | ನಾಗು ಭಕ್ತಿ ಪ್ರದಾತ 3 ಜನಿತ | ಸಕಲ ಭಸ್ಮೀಭೂತ 4 ಭೋಗಾದಿಂ ಪ್ರಾರಬ್ಧ ಪೋಗಾಡಿದಂಥ | ಕಾರ್ಯಾಖ್ಯ ಬ್ರಹ್ಮಪ್ರಾಪ್ತ |ಯೋಗೀಜನ ಪ್ರಳಯೇಪಿ ಅಜನ ಪ್ರಾಪ್ತ | ಇತ್ಯಾದ್ಯವಸ್ಥಾದಿಯೊಳ್ಗತ |ಮಾರ್ಗಗಳು ಶೇಷ ಗರುಡಾದಿಯೋಳ್ಗತ | ಈ ಪರೀಯಿಂ ಸಮಸ್ತ |ಯೋಗೀ ಜನಂಗಳಿಗೆ ಆ ಅಜಸಮೇತ | ವಿರಜಾ ಸ್ನಾನ ಪ್ರಾಪ್ತ ||ಸ್ನಾನದಿಂದಲಿ ಲಿಂಗನಾಶ | ಮಾಡುವೆ ಶ್ರೀಶ | ಆದರವರು ನಿರ್ದೋಷ |ಅನಂತರ್ಹರಿ ಉದರ ಪ್ರವೇಶ | ಕೆಲವರು ಶ್ರೀಶ | ಆನಂದವೇ ವಪುಷ |ಜ್ಞಾನಿ ಇನ್ನಿತರರು ತದ್ದೇಶ | ದಲ್ಲಿವಾಸ | ಆನಂದಾನನುಭವ ಶ್ರೀಶ |ನಾನಾ ಪರಿಯೋಗ್ಯರ ಶ್ರೀಶ | ಪ್ರಳಯದಲ್ಲೀಶ | ಧರಿಸುವಸರ್ವೇಶ 5 ಪರಿ ಕಾರಣಂಗಳಿಂದ ನಿನ್ನ | ಇಚ್ಚಾಖ್ಯ ಆವರಣವಪಸಾರಿಸೀ |ತುಷ್ಟೀಯಿಂದಲಿ ಸ್ವಸ್ತಯೋಗ್ಯಸುಖವ | ಅಭಿವ್ಯಕ್ತಿಂಗಳಂ ಗೈಯ್ಯುವಾ |ಲಕ್ಷ್ಣ ಮುಕ್ತಿದ ಮಾಯೆ ಪತಿಯು ಆದ | ಶ್ರೀವಾಸುದೇವನ ದರ್ಶನ ||ವಾಸುದೇವನ ಕಂಡನಂತರ | ಮತಿವಂತರ | ಪೊಗಿಸುವಾಗಾರ |ಶ್ರೀಸಿತ ದ್ವೀಪಾದಿ ಆಗಾರ | ವರ ಮಂದಿರ | ವೈಕುಂಠಾಗಾರ | ಲೇಸಾಗಿ ಸ್ವಯೋಗ್ಯ ಸುಖಸಾರ | ಅತಿಪರತರ | ಅನುಭವಿಪ ವಿಸ್ತಾರ | ಆಶಾಮಾತ್ರದಿ ಸರ್ವ ಸುಖಸಾರ | ಸೃಷ್ಟ್ಯಾದಿ ಇತರ | ಇತ್ತು ತೋಷಿಪೆ ಅವರ 6 ಚಾರು ಕೌಪೀನ ಮದನ ದರ ಪೋಲ್ವಧದನ | ತುಳಸಿಯ ವನ | ಮಾಲೆಗಳ್ಹಸನ |ನಂದನಂದನ ನಿನ್ನ ಕರುಣ | ಗುಣಾಭರಣ | ತೊಡಿಸಯ್ಯ ಪ್ರಧನ 6 ಪ್ರೀಯಾ ಪ್ರೀಯ ಸರ್ವ ವಿಷಯಕೆಲ್ಲ | ನೀನೇ ಮೂಲನೆಂದು ತಿಳಿಸೋ |ಕಾಯಾ ವಾಚಕ ಮಾನಸೀಕ ಸರ್ವಾ | ಕರ್ಮಾದಿಗಳೆಲ್ಲವಾ ||ಜೀಯಾ ನಿನ್ನಯ ಚರಣಕಿತ್ತು ನಮಿಪ | ಬಿಂಬಕ್ರಿಯಾಜ್ಞಾನವಾ ||ರಾಯಾ ನೀನೆನಗಿತ್ತು ಪಾಲಿಸಯ್ಯ ಮುದದೀ | ನಿನ್ನನ್ನು ನಾ ಬೇಡುವೆ ||ತುತಿಪ ಜನರ ಸುರಧೇನು | ಕಾಮಿತವನೆ | ಕರುಣಿಪ ಕಲ್ಪದ್ರುಮನೆ |ಮತಿಗೆಟ್ಟ ಮನುಜನು ನಾನೆ | ನಿನ್ನ ಪಾದವನೆ | ನಂಬಿ ಬಂದಿಹೆ ನಾನೇ |ಹಿತದಿಂದ ನೀನೆನ್ನ ಕರವನೆ | ಪಿಡಿ ಎಂಬೆನೆ | ನಾ ಬೇಡುವೆ ನಿದನೆ |ಅತುಳ ಮಹಿಮ ಜಗದೀಶನೆ | ಮಧ್ವೇಶನೆ | ಗುರು ಗೋವಿಂದ ವಿಠಲನೆ 8
--------------
ಗುರುಗೋವಿಂದವಿಠಲರು
ರಂಗವಲಿದ ಗುರುರಾಯರ ನೀ ನೋಡೋ | ಅಂತರಂಗದಿ ಪಾಡೋ ಭಂಗ ಬಡಿಪ ದುರಿತಂಗಳ ಈಡ್ಯಾಡೋ ಸತ್ ಸಂಗವ ಬೇಡೋ ಅ.ಪ ಹಿಂದೆ ಮೂರೊಂದವತಾರ ಧರಿಸಿದಾತ ಇದು ಹಿರಿಯರು ಮಾತ | ಬಂದ ಮರಳಿ ಮಹೀತಳದಿ ಜಗನ್ನಾಥ ದಾಸಾರ್ಯ ಪ್ರಖ್ಯಾತ || ತಂದೆ ನಮಗೆ ತಿಳಿ ಎಂದೆಂದಿಗು ಎಂದೆಂದಿಗು ಈತ ಆನಂದ ಪ್ರದಾತ 1 ಬಣ್ಣಿಸಲೆನಗಿನ್ನೊಶವೆ ಇವರ ಚರಿಯ ಕಣ್ಣುಗಳಿಂದಲಿ ಕಾಣುತ ಪೂರ್ಣಯ್ಯತಾನಾಗಿ ವಿಧೇಯ ಧನ್ಯನೆನಿಸಿ ಸತ್ಪುಣ್ಯ ಪಡೆದುದರಿಯ ಪುಸಿಯಲ್ಲವೊ ಖರಿಯ 2 ದಾಸವರ್ಯರಾ ವಾಸಗೈದ ಸ್ಥಾನ ಗಯಕಾಶಿ ಸಮಾನ ಲೇಸು ಭಕ್ತಿಯಲಿ ಸೇವಿಸಲನುದಿನ ಕೊಡುವುದುಸುಜ್ಞಾನ ಶ್ವಾನ | ಯಾತಕೆ ಅನುಮಾನ 3 ಸಾರ ನಿರ್ಮಿಸಿರುವ ದೇಹಾಖ್ಯ ರಥವ ಸೊಗಸಿಲಿಂದ ತಾನೇರಿ ನಗುತ ಬರುವ ಚತುರ್ದಿಕ್ಕಿಲಿ ಮೆರೆವ ಮಿಗೆ ವಿರೋಧಿಸುವ ಪಾಪಿಗೆ ಪಲ್ಮುರಿವ ಪೊಗಳುವರಷತರಿವ 4 ಶಾಮಸುಂದರನ ಸುಕಥಾಮೃತಸಾರ | ರಚಿಸಿದ ಬಹುಚತುರ ಪಾಮರ ಜನರ ಪ್ರೇಮದಿ ಉದ್ಧಾರ ಮಾಡಲು ಗಂಭೀರ ಶ್ರೀಮಾನ್ ಮಾನವಿಕ್ಷೇತ್ರನೆ | ನಿಜಾಗಾರವೆಂದೆನಿಸಿದ ಧೀರ 5
--------------
ಶಾಮಸುಂದರ ವಿಠಲ
ರಥವನೇರಿದ ರಥಗಾತ್ರ ಪಾಣಿ | ರಥಪತಿ ದಶರಥ ಸುತ ದಶರಥ ನೃಪ ಭಾಗೀ | ರಥಿ ವಿನುತಾ ಸು | ರಥನಯ್ಯ ಮನೋರಥ ದೇವ ಪ ಕರಿ ಭಯಂಕ ಹರ ಹರಿಣಾಂಕಾ | ಕಿರಣಶತ ಧಿಕ್ಕರಿಸುವ ದೇವಾ || ವರಮಣಿ ಭಕ್ತ ವರದಾಯುದಧಿ ತುರಗವು | ಪರತರ ತಮ ತರರಸ | ಪರಮ ಮಂಗಳ ಪುರುಷ ಪ್ರಧಾನಂ | ಪ್ರವಿಷ್ಠ ಭಾ | ಸುರ ಕೀರ್ತಿಹರ ನಿರುತ ಪ್ರದರು ಸುರಪತಿ 1 ಮಣಿಪ್ರಚುರ ಮುತ್ತಿನ ಮುಕುಟ ಸು | ಫಣಿ ಕಸ್ತೂರಿ ಕಂಕಣ ಕೇಯೂರ ಕಾಂ| ಕೌಸ್ತುಭ ಸೂರ್ಯನಗೆಲ್ಲ್ಲೆ | ವನಮಾಲೆ ಹರಿಮಣಿ ಪದಕ ಪಾ | ವನ ಪೀತಾಂಬರ ಮಿನಗುವ ಕಾಂಚಿ | ಝಣ ಝಣ ಮಹಾ | ಧ್ವನಿ ಚರಣ ಭೂಷಣವಾಗಿಯೂ ಮಾ | ನಿನಿ ಕೂಡಾ 2 ಎತ್ತಿದ ಶ್ವೇತಾತಪತ್ರ ಚಾಮೀಕರ | ವಿತ್ತ ನಭ ತುಳುಕುತ್ತಲಿರೆ ಧ್ವಜ | ಮಾತ್ರ ಬಂದಾಗಿ ತೂಗುತ್ತಿರಲು | ಸುತ್ತಲು ಊದುವ ತುತ್ತುರಿ ಶಂಖ | ವತ್ತಿ ಬಾರಿಸುವ ಮತ್ತೆ ವಾದ್ಯಗಳು | ತುತ್ತಿಸುವ ಮುನಿ | ಉತ್ತಮ ಜನ ಬಾ | ಗುತ್ತ ವಡನೆ ಬರುತಿರಲು 3 ವಸು ರುದ್ರಾದಿತ್ಯ ವಸುಜನರ ಪಾ | ಲಿಸುವೆನೆಂದು ದರಶನವು ಸರಸಿಜಗದಾಧರಿಸಿಕೊಂಡು ಅಷ್ಟ ರಸ ನಾಮಕ ಹರುಷದಿಂದ | ನಸುನಗುತ ನೀಕ್ಷಿಸಿಕೊಳುಂತ ಆ | ಲಸ ಮಾಡದೆ ರಂ | ಜಿಸುವ ಲೀಲಾಮಾನಸ ವಿಗ್ರಹ ಮೆ | ಚ್ಚಿಸಿದ ಜನರ | ವಶವಾಗಿಪ್ಪ ರಾಕ್ಷಸ ರಿಪು 4 ವನಧಿ ಚಿನ್ಮಯ ಉ | ಭಯಾ ಭಯ ಹಾರೆ | ಪಯೋವಾರಿ ನಿಧಿ | ಶಯನ ಚತುರ್ಬೀದಿಯಲಿ ತಿರುಗಿ | ಪ್ರೀಯದಿಂದಲಿ ಸ | ತ್ಕ್ರಿಯವಂತ ಜಯ ಜಯ ಪ್ರದಾ | ಸಾರಥಿ ನಿ | ರಯ ವಿದೂರ ವಿಜಯವಿಠ್ಠಲ ಸಾ | ಹಾಯವಾಗುವ ಗಿರಿಯ ವೆಂಕಟರಾಯ ಬಂದಾ 5
--------------
ವಿಜಯದಾಸ
ರಾಮ ವಂದಿಪೆ ಗುಣ ಧಾಮಾ ವಂದಿಪೆ ಘನ ಶ್ಯಾಮ ವಂದಿಪೆ ರಘು ರಾಮ ರಾಮ ರಾಮ ಪ ಬೋದ ಪ್ರದಾಯಕ ಸಾಧು ಜನಾವಳಿ ವೇದಾಂಗನುತ ರಘು ರಾಮ ರಾಮ ರಾಮ 1 ಇಂದ್ರಾದಿನುತ ಗುಣ ಸಾಂದ್ರಾನತಾವಳಿ ಮಂದಾರಧರ ಹರಿ ರಾಮ ರಾಮ ರಾಮ 2 ದಶರಥ ನಂದನ ದಶಶಿರ ಭಂಜನ ಶಶಿಕಲ ರಂಜನ ರಾಮ ರಾಮ ರಾಮ 3 ಸುಜನರ ಪಾಲನೆ ಕುಜನರ ಕಾಲನೆ ಭಜಕರ ಲೋಲನೆ ರಾಮ ರಾಮ ರಾಮ 4 ಅಂಬುಜನಯನನೆ ಅಬುಜೆರಮಣನೆ ನಂಬಿದೆ ತಾತನೆ ರಾಮ ರಾಮ ರಾಮ 5 ಪನ್ನಗಶಯನನೆ ಚಿನ್ಮಯ ರೂಪನೆ ಚನ್ನಕೇಶವ ರಾಮ ರಾಮ ರಾಮ 6
--------------
ಕರ್ಕಿ ಕೇಶವದಾಸ
ರಾಮನ ನೋಡಿರೋ ನಮ್ಮ ಸೀತಾರಾಮನ ನೋಡಿರೋ ಪ ರಾಮನನೋಡುತ ಪ್ರೇಮವ ಸುರಿಸುತ ನಾಮವ ನುಡಿಯುತ ನೇಮದಿ ಬೇಡುತ ಅ.ಪ ಅಜಭವಾದಿಗಳರಸನೀತಾ ಮತ್ತೆ ನಿಜಭಕುತರಿಗೆ ಮುಕ್ತಿಪ್ರದಾತ ತ್ಯಜಿಸಿ ದುಷ್ಟರಸಂಗ ಭಜಿಸಿ ಶಿಷ್ಯರ ಸಂಗ ಭುಜಗಭವವೆಂದರಿತು ನಿಜಸುಖಮೆಲ್ಲಲು 1 ಪಾದ್ಯ ಮತ್ತೆ ನಿತ್ಯಾನಿತ್ಯ ಜಗಸೃಜಿಪ ದೇವದೇವೇಶ ಮುಕ್ತಾಮುಕ್ತಾಶ್ರಯ ಸತ್ಯ ಪ್ರಾಣನ ಹೃಸ್ಥ ಉತ್ತಮೋತ್ತಮನೆಂದು ಎತ್ತಿಕೈಗಳ ಮುಗಿದು 2 ಭಕ್ತಿಯಿಂದಲಿ ನೋಡೆ ಸರ್ವಾಘಹರವೋ ಮತ್ತೆಪಾಡಲು ಕಾಮಿತ ಕರಗತವೊ ಹಸ್ತಿವರದನ ನೋಡೆ ಮತ್ತರಿಗೆ ಸಾಧ್ಯವೆ ವತ್ತುತ ಗೃಹಕೃತ್ಯ ಬೇಗ ಉತ್ತಮರಲ್ಲಿ 3 ಸುಲಭವಲ್ಲವೊ ಇಂಥಾ ಸಮಯ ಘಳಿಸಿ ನೋಡೀದವನೆ ಕೃತಾರ್ಥ ನಿತ್ಯ ಸಲಹುತ್ತಿರುವಂಥ ಅಲವ ಮಹಿಮಾರ್ಣವ ಲಲನೆ ಲಕ್ಷ್ಮಿಯ ನಾಳ್ವ 4 ಸರ್ವನಾಮಕ ನಿವನೂ ಮತ್ತೆ ಸರ್ವಪ್ರೇರಕ ಬಲಖ್ಯಾತ ನಿಹನೂ ಸರ್ವ ಸರ್ವಾಧಾರ ಸರ್ವೇಶ ಶಾಶ್ವತ ಸರ್ವಗುಣಗಣ ಪೂರ್ಣ ಸರ್ವವ್ಯಾಪ್ತನಾದ 5 ಆರಿಲ್ಲ ಸಮವಧಿಕ ಇವಗೇ ಮತ್ತೆ ಆರು ಕಾಣರು ನೆಲೆಯ ಸಾಕಲ್ಯ ಸತ್ಯ ಸಾರವಿಲ್ಲದ ಜಗದಿ ಸಾರನೊಬ್ಬನೆ ಇವನು ತೊರು ಪಾದಗಳೆಂದು ಸಾರಿಬೀಳುತ ಅಡ್ಡ 6 ಶರಣೆಂದ ವಿಭೀಷಣಗೆ ಪಟ್ಟ ಕಟ್ಟಿದನೂ ಕರುಣದಿಂದಲಿ ಶಬರಿಯ ಪೊರೆದವನು ದುರುಳ ಪಾಪಿಯ ದೊಡ್ಡ ಕವಿಯ ಮಾಡಿದ ಮಹಿಮ ಕರುಣ ಬೇಕಾದವರು 7
--------------
ಕೃಷ್ಣವಿಠಲದಾಸರು
ಲೋಕನೀತಿ (ಆ) ಇರುವುದೆಲ್ಲ ಮನೆಯೊಳಗಿದ್ದರೆ ಆಡಿಗೆಗೆ ಯಾತಕ್ಕೆ ತಡವಾಗೋದು | ಪ ತರಬೇಕೇಂದು ನೂರು ತಡವೆ ನಾ ನುಡಿದರು ಅರಿಯದವರ ಪರಿತಿರುಗುತ್ತಲಿರುವದು ಅ.ಪ ಮನೆ ಮನೆಯಲಿವಂದು ಮಾನಾರ್ಧಮಾನಗಳು ಮೆಣಸಿನಪುಡಿ ಉಪ್ಪು ಅಕ್ಕಿ ಸಾಲ ದಿನ ದಿನ ಮಧ್ಯಾಹ್ನ ತಿರುಗಿದ ಮೇಲೆ ಮನೆಗೆ ಬಂದು ಹಸಿವೆನುತ ಪೇಳುವದು 1 ಎಣ್ಣೆವಗ್ಗರಣೆಯಲ್ಲದೆ ಕಾಣೆನಭಿಗಾರ ಮುನ್ನೆ ಪಿತ್ಥ ಹೆಚ್ಚಿ ತಲೆ ನೋಯ್ವುದು ನಿನ್ನೆಮೊನ್ನೆ ಹೇಳಿದುದಕೆ ಹೊಡೆಸಿಕೊಂಡೆ ದೊಣ್ಣೆಪೆಟ್ಟಿನಿಂದ ಬೆನ್ನು ಬಾತಿರುವದು 2 ವರುಷಕ್ಕಾಗುವ ಮಟ್ಟಿಗೆಲ್ಲಾ ಪದಾರ್ಥ ಶೇ- ಖರವ ಮಾಡುವುದು ಈ ಮನೆಯೊಳಿಲ್ಲಾ ಹಿರಿಯರಿಂದ ಬಂದ ಸಂಪ್ರದಾಯವಿದೇನೊ ಇಂಥಾಮನೆಯ ಸೇರಿ ಈ ಸುಖ ಪಡುವೆ 3 ಮದುವೆಯಲ್ಲಿದ್ದದ್ದು ಪ್ರಸ್ತದೊಳಗೆಯಿಲ್ಲ ಬದಲು ಸೀರೆಯು ನಾನುಟ್ಟರಿಯೆ ವಿಧಿಲಿಖಿತವು ತಪ್ಪುವುದೆಯೆಂದಿಗಾದರು ವದರಿ ಕೊಂಡರೆಯೇನು ಇದರೊಳು ಫಲವುಂಟು 4 ಜ್ಞಾನ ಶೂನ್ಯರು ಮನೆಯೊಳಿಹರೆಲ್ಲರು ಈ ನರಜನ್ಮವು ಇಷ್ಟಕ್ಕೆಸಾಕೆಂದು ಧೇನಿಸಿ ಗುರುರಾಮವಿಠಲನ ಬೇಡುವೆ 5
--------------
ಗುರುರಾಮವಿಠಲ
ವಂದಿಸುವೆನೆಲೆ ತಾಯೆ ವಂದಿತಾಮರೆಯೆ ಪ. ಶ್ರೀಕಲಶಾಬ್ಧಿಕನ್ಯೆ ಸುರಕುಲಮಾನ್ಯೆ ಶ್ರೀಕರ ಗುಣಪೂರ್ಣೆ ಶೋಕಾಪಹರಣೆ ಲೋಕನಾಯಕೆ ಘನ್ನೆ ಪಾಕಶಾಸನಸುತೆ ಪವನಜಸೇವಿತೆ ಸಾಕೇತನಿಲಯೆ ಸರಾಗದಿ ರಕ್ಷಿಸು 1 ಆನತನುತ ಗೀರ್ವಾಣಿ ಅಂಬುಜಪಾಣಿ ಮಾನಿನೀಮಣಿ ಕಲ್ಯಾಣಿ ಭಯವಾರಿಣಿ ಭಾವಜಾತ ಜನನೀ ಭಾಗವತಾರ್ಚಿತೆ ಭಕ್ತಾಭಯಪ್ರದಾತೆ ಬಾಗುತೆ ಶಿರ ನಿನಗೇಗಳುಂ ಮನವಾರೆ 2 ಅರಿಯೆನು ನಿನಗೆಣೆಯಾರ ಕಾಣೆನು ಹಿತರ ಚರಣವ ನಂಬಿದೆ ಮನವಾರ ಪಿಡಿಯೆನ್ನ ಕರವ ಕರುಣದಿ ನೋಡೆನ್ನಿರವ ಪರಮಪಾವನ ಶೇಷಗಿರೀಶನ ಕರುಣಾರೂಪಿಣಿ ಜಗತ್ಕಾರಿಣಿ3
--------------
ನಂಜನಗೂಡು ತಿರುಮಲಾಂಬಾ
ವಸುಮತೀಶ ವಿಠ್ಠಲನೇ ನೀನಿವಗೆ | ಎಸೆವ ಜ್ಞಾನವನಿತ್ತುಹಸನಾಗಿ ಕಾಪಾಡಬೇಕೊ ಹರಿಯೆ ಪ ಕುಸುಮ ಸಂಭವ ಪಿತನೆ | ವಾಸುದೇವನೆ ಕೃಷ್ಣನಸು ನಗೆಯಲೀ ನಿನ್ನ ಉಪಾಸನವ ಕೊಡೊ ಹರಿಯೆ ಅ.ಪ. ತರತಮವು ಪಂಚಭೇದದ ಜ್ಞಾನ | ನಿರತಿಶಯ ಹರಿಭಕ್ತಿಗುರುಭಕ್ತಿಗಳ ಕರುಣಿಸೀ ಕಾಪಾಡಬೇಕೊ ಹರಿಯೇ |ವರ ಪ್ರದಾಯಕ ಸ್ವಾಮಿ ವೈರಾಗ್ಯ ಭಾಗ್ಯಗಳ ನೀನಿವರಿಗಿತ್ತುಕರುಣದಿಂ ಕಾಪಾಡಬೇಕೊ ಹರಿಯೇ 1 ನಿನ್ನ ಮೊರೆ ಹೊಕ್ಕವನ | ಇನ್ನು ಕೈ ಪಿಡಿಯುವುದುನಿನ್ನ ಧರ್ಮವಲ್ಲವೆ ಸ್ವಾಮಿ ರಾಮಚಂದ್ರ |ನನ್ನೆಯಿಂದಲಿ ಇವನ ಪಾಪಗಳ ಪರಿಹರಿಸಿನಿನ್ನ ಪದ ಸೇವಕನ ಮಾಡೊ ವೈಕುಂಠ ಪತಿಯೇ 2 ಖಗವರಧ್ವಜ ದೇವ ಜಗಜ್ಜನ್ಮಾದಿ ಕಾರಣನೆಬಗೆಬಗೆಯ ಮಹಿಮೆಗಳ ತೋರಿ ಕಾಪಾಡೊ ಹರಿಯೇ |ಸುಗುಣ ಮೂರುತಿ ದೇವ ತ್ರಿಗುಣ ವರ್ಜಿತ ಸ್ವಾಮಿಹಗರಣಗಳೀಯದಲೆ ಕಾಪಾಡೊ ಹರಿಯೇ 3 ಇಷ್ಟಮೂರುತಿ ದೇವ ಸೃಷ್ಟ್ಯಾದಿ ಕಾರ್ಯಗಳದೃಷ್ಟಿಯಿಂದಲಿ ಮಾಳ್ಪ ಮಹಮಹಿಮ ಹರಿಯೇ |ಕೃಷ್ಣಮೂರುತಿ ಹೃದಯ ಅಷ್ಟದಳ ಮಧ್ಯದಲಿದೃಷ್ಟಿಗೋಚರನಾಗಿ ಕಾಪಾಡೊ ಹರಿಯೇ 4 ಮೂರ್ತಿ ಹಯ ಮೊಗಾತ್ಮಕನೇ |ವೇದಾಣಿ ವಂದ್ಯ ಗುರುಗೋವಿಂದ ವಿಠ್ಠಲನೇನೀ ದಯದಿ ಕೈ ಪಿಡಿದು ಕಾಪಾಡೊ ಹರಿಯೇ 5
--------------
ಗುರುಗೋವಿಂದವಿಠಲರು
ವಾಣಿ ಬ್ರಹ್ಮನ ರಾಣಿ ಕಲ್ಯಾಣೀ| ಫಣಿವೇಣಿ ಸದ್ಗುಣ | ಶ್ರೇಣಿ ವೀಣಾ ಪುಸ್ತಕ ಪಾಣಿ ಪ ಜಾಣೆ ಶ್ರೀ ಜಗತ್ರಾಣಿ ಶಾಸ್ತ್ರ ಪ್ರ- ವೀಣೆ ವೇದ ಪ್ರಮಾಣಿ ನಿನಗೆಣೆ | ಗಾಣೆ ಸಂತತಕೇಣವಿಡದೆನ್ನಾಣೆ | ನೆಲಸಿರು ಮಾಣದೆನ್ನೊಳು ಅ.ಪ. ತ್ರಿಜಗ ಶುಭ ಕಾಯೇ | ಓಂಕಾರರೂಪಿಣಿ | ಮಾಯೆ ಮುನಿಜನಗೇಯೆ ಸುಖದಾಯೇ || ತೋಯಜಾಂಬಕಿ ಶ್ರೀಯರ ಸೊಸೆ | ಆಯದಿಂದಲಿ ಶ್ರೇಯಸ್ಸುಖಪದ - ವೀಯೆ ಸಂತತ ಕಾಯೆ ಶತಧೃತಿ ಪ್ರೀಯೆ | ನೀನೆನಗೀಯೆ ವಾಕ್ಸುಧೆü 1 ಅಕ್ಷರ ಸ್ವರೂಪೆ ನಿರ್ಲೇಪೇ | ಮೌನಿಜನ ಮಾನಸ | ಪಕ್ಷ ಸಕಲಾಧ್ಯಕ್ಷೆ ಶುಭಚರಿತೇ | ಸೂಕ್ಷ್ಮ ಸ್ಥೂಲ ಸುಲಕ್ಷಣಾನ್ವಿತೆ | ಮುಮುಕ್ಷು ಜನ ನಿಜ | ಭಕ್ತಿ ಭುಕ್ತಿವರ ಪ್ರದಾಯಕಿ | ಮುಕ್ತಿ ಸುಖ ಸೌಖ್ಯ ಪ್ರದಾಯಕಿ 2 ಸುಂದರಾಂಗಿ ಆನಂದ ಗುಣ ಭರಿತೇ | ವಂದಿಸುವೆ ತವಪದ -| ದ್ವಂದಕಾನತನಾಗಿ ಸಚ್ಚರಿತೇ | ಯೆಂದು ಮದ್‍ಹ್ವನ್ ಮಂದಿರದಿ ನೀ | ನಿಂದು ಆಪದ್ ಬಂಧು ಕರುಣಾ | ಸಿಂಧುವನು ನಾನೆಂದು ಪೊಗಳ್ವಾ -| ನಂದವರ ಸದಾನಂದ ಪಾಲಿಸೇ 3
--------------
ಸದಾನಂದರು
ವಿರೋಧವ್ಯಾತಕಯ್ಯ ನಿಮಗಿದರೊಳು ಪ ಪರಂಪರದ ಸಂಪ್ರದಾಯಕೆ ನಿಮಗೆ ಅ.ಪ ಈಶ ನಾನೆಂಬುವದೊಂದು ಸರ್ವೇಶ ಹರಿಯಂಬೊದೊಂದು ಲೇಸಾಗಿ ಹೆಚ್ಚು ಕಡಮೆಗಳ ತಿಳಿಯುವದಿನ್ನೊಂದು 1 ಈ ಮೂರು ಮತಗಳಿಗೆ ಪ್ರೇಮವಾದಭಿಪ್ರಾಯಗಳು ನೇಮನೇಮವಾಗಿಟ್ಟು ಕೊಂಡಿರುತಿಹರೆಲ್ಲರು 2 ನಿಮ್ಮ ನಿಮ್ಮ ಮನಗಳಿಗೆ ಸಮ್ಮತವಾಗುವ ಪರಿ ಬ್ರಹ್ಮ ಜ್ಞಾನವೊಂದು ಸಂಪಾದಿಸಿದರೆ ಸಾಕು 3 ಸರಿಯಾದರ್ಥ ತೋರಿ ದಾರಿಯ ಕೊಡುವುದು 4 ಧೀರ ಶ್ರೀಗುರುರಾಮವಿಠ್ಠಲನೊಬ್ಬನೆ 5
--------------
ಗುರುರಾಮವಿಠಲ
ವ್ಯಾಸರಾಯರ ಚರಣವನೆ ಸೇವಿಸಿ ಪ ವ್ಯಾಸರಾಯರ ಚರಣ ಸರಸಿಜದ ಸೇವೆ ಬಲು ಮೀಸಲ ಮನದಿ ಮಾಡೆ ಆಶೆಪಾಶೆಯ ತೊರೆದು ಕ್ಲೇಶವೆಲ್ಲವ ಹರಿಸಿ ಭಾಸಿಸುವ ಬಿಡದಲೇ ಹೃದ್ದೇಶ ಖೇಶದೊಳಗೇ ಅ.ಪ. ಬನ್ನೂರು ಪುರದಲ್ಲಿ ಮುನ್ನೋರ್ವ ಬ್ರಾಹ್ಮಣನಮನ್ನೆಯೋಳ್ಳುದಿಸಲೂ ಸ್ವರ್ಣ ಪಾತ್ರೆಲಿ ತರಿಸಿಘನ್ನ ಮಹಿಮನ ತಂದು ಬ್ರಹ್ಮಣ್ಯ ಯತಿವರರು ತಮ್ಮ ಆಶ್ರಮದಿ ಪೊರೆಯೆ ||ಉನ್ನತದ ಗುಡ್ಡದಲಿ ಗವಿಯ ಮನೆಯಾಗಿರಲು ಚಿಣ್ಣನಾ ತೊಟ್ಟಿಲಿನ ಮೇಲಿನ ಗವಾಕ್ಷದಿಂಚೆನ್ನಗೋವ್ ದಿನದಿನದಿ ಪಾಲ ಕರೆಯುತ ಚಿಣ್ಣನನು ತಾ ಬಲು ಸಲಹಿತು 1 ತಾಪಸೋತ್ತಮರಾದ ಶ್ರೀಪಾದರಾಯರ ಸ-ಮೀಪದೊಳು ಆ ಪರಮ ಶಾಸ್ತ್ರ ವ್ಯಾಸಂಗದೀಭಾಪು ಭಾಪನೆ ಮೆರೆದು ಭಕ್ತಿ ಸುಪಥವ ಪಿಡಿದು ಮೈ ಮರೆದು ಕುಣಿಯುತಿರುವ ||ಶ್ರೀಪಾದ ಮುನಿಪ ತಾ ಮುಚ್ಚಳವ ತೆರೆಯದಿಹ ಸಂಪುಟವ ತೆರೆಯುತ್ತ ಶ್ರೀ ಪತಿಯನೆ ನೋದುತಶ್ರೀಪ ಶ್ರೀ ವೇಣುಗೋಪಾಲ ಕೃಷ್ಣನ್ನ ಕಾಣುತ್ತ ಕುಣಿ ಕುಣಿದಾಡಿದ 2 ಶಾಲಿಗ್ರಾಮವ ಪಿಡಿದು ತಾಳವನೆ ಹಾಕುತ್ತಬಲುಭಕ್ತಿ ಭರದಿಂದ ಘಲ್ಲು ಘಲ್ಲನೆ ಕುಣಿಯೆಖುಲ್ಲ ಜನರಿದರ ವಳ ಮರ್ಮವನೆ ತಿಳಿಯದಲೆ ಗುಲ್ಲುಗುಲ್ಲೆಂದು ನಗಲೂ || ಬಲ್ಲಿದ ಶ್ರೀಪಾದರಾಯರಿದ ಕೇಳಿ ಕಂಗಳಲಿ ಗಂಬನಿ ಗಲ್ಲದಲಿ ಕೈಯಿಡುತ ಸೊಲ್ಲ ಕೇಳಿರಿ ಸುಜನರೆಲ್ಲರು ಶ್ರೀ ಕೃಷ್ಣ ನಮ್ಮ ವ್ಯಾಸರೋಶನಾದನು 3 ಸಾರಥಿ ಹರಿಯನಿಜ ಮತವ ಬೋಧಿಸುತ ನಿಜ ಜನರ ಪೊರೆಯುತ್ತಕುಜನ ಕುತ್ಸಿತ ಮಾಯಿಮತ ಜೈಸಿಅಜನನಯ್ಯನ ಪ್ರೀತಿ ಸಂಪಾದಿಸಿ ||ಸುಜನ ಪಾಲಕ ಕೃಷ್ಣರಾಜನಿಗೆ ಕುಹುಯೋಗಗಜಬಜಿಸಿ ಬರುತಿರ್ಪುದನು ನಿಜ ಮನದಿ ತಿಳಿದುಗಜವರದ ನಂಘ್ರಿಯನೆ ಭಜಿಸುತ್ತ ವಿಜಯ ಪುರಿ ಸಿಂಹಾಸನವನೇರ್ಧರ 4 ಪರಿ ಗ್ರಂಥ ರಚನೆಯಲಿ ಕಳೆಯೆ ಕಾಲವಕಲು ಮನದ ಜನರಿವರ ಬಲು ಪರಿಯ ಮಹಿಮೆಗಳನೂ ತಾವ್ ತಿಳಿಯಲೊಶವೆ 5 ಇಂಪುಗೊಳ್ಳುತ ಮನದಿ ತಂಪಿನಿಂದಲಿ ಮೆರೆವಪಂಪೆ ಸುಕ್ಷೇತ್ರದಲಿ ಬಾಂಬೊಳೆಯ ಜನಕನ್ನಸಂಪ್ರೀತಿಯನೆ ಪಡೆದಿರುವ ಯಂತ್ರ ಉದ್ಧಾರರನ ಸ್ಥಾಪಿಸುತಲಿ||ನೋಂಪಿನಿಂದಲಿ ಬ್ರಾಹ್ಮಲಕ್ಷ ಗುಂಪಿಗೆ ಉಣಿಸಿ |ಸಂಪುಲ್ಲ ಲೋಚನನ ಶಂಫಲಿಯ ಪುರಗನನುಸಾಂಪ್ರದಾಯಕದಿಂದ ಸಂಪ್ರೀತಿ ಬಡಿಸಿದರ ಪದ ಪಾಂಸುವನೆ ಸಾರಿರೋ 6 ಪರಿ ಪರಿಯ ಪೂಜೆಯನೆ ಗೈಯ್ಯುತಲಿ ||ಶ್ರೀಶನ ಸುಪೂಜಾ ವಿಧಾನವನೆ ಗೈಸುತ್ತದೋಷದೂರನ ಸೇವೆ ಮೀಸಲಳಿಯದ ಮನದಿ ಒಸೆದು ತಾವ್ ಗೈಯ್ಯುತ ಭಾಸಿಸುವ ಸತ್ಕೀರ್ತಿಯುತರಾಗಿ ಮೆರೆಯುತಿಹರ 7 ಪುರಂದರ ವಿಠಲ ದಾಸನೆಂದೂದಾಸ ಪೀಠದಿ ನಿಲಿಸಿ ದಾಸ ಕೂಟವ ರಚಿಸಿ ಸತ್ಪಂಥವನೆ ಸಾರಿದ ||ಆಶುಕವಿತೆಯ ರಚಿಸಿ ಪ್ರಾಕೃತ ಸುಭಾಷೆಯಲಿಕೇಶವನ ಗುಣಧಿಯಲಿ ಲೇಸಾಗಿ ಈಸುತಲಿದಾಸರೊಡನಾಡುತಲಿ ಮೀಸಲಾಗಿರಿಸಿ ತನು ಕೇಶವನ ಗುಣ ಪೊಗಳಿದ 8 ಜಯ ಜಯತು ಶುಭಕಾಯ ಜಯ ಜಯತು ವ್ಯಾಸಾರ್ಯಜಯ ಮಧ್ವಮುನಿ ಪ್ರೀಯ ಜಯ ಚಂದ್ರಿಕಾಚಾರ್ಯಜಯತು ವಿದ್ವದ್ದಾರ್ಯ ಜಯತು ಸುರಮುನಿ ಪ್ರೀಯ ಜಯ ಜಯತು ಯತಿವರ್ಯನೆ ||ಕಾಯಭವ ಪಿತ ಗುರೂ ಗೋವಿಂದ ವಿಠ್ಠಲಗೆಪ್ರೀಯ ಗುರು ವ್ಯಾಸಾರ್ಯ ಸ್ತೋತ್ರವನು ಭಾವ ಶುದ್ಧಿಯೊಳಾವ ಭಜಿಸುವನವಗೆ ಭವವನಧಿ ಉತ್ತರಿಸೆ ನಾವೆಯೆನಿಸುವುದಿದು 9
--------------
ಗುರುಗೋವಿಂದವಿಠಲರು
ಶರಣರ ಪರಿಪಾಲಾ ಶ್ರೀಲೋಲಾ ಪರಮ ಸುಂದರ ಬಾಲಾ ಪ. ರುಕ್ಮಿಣಿ ರಮಣಾ ರಕ್ಕಸ ಹರಣಾ ಶಕ್ರಾದಿನುತ ಚರಣಾಭರಣಾ 1 ಮಧ್ವ ಮುನೀಶಾ ಶುದ್ಧ ಪ್ರಕಾಶಾ ಪದ್ಮನಾಭ ಮನಶುದ್ಧಿಯ ನೀಡೋ 2 ಕಾಮಿತ ಫಲದಾ ಕೋಮಲ ಪಾದಾ ಶ್ರೀ ಮನೋಹರ ಸುರ ಕಾಮ್ಯ ಪ್ರದಾತಾ 3 ಮೃಡ ಸುರ ಪ್ರೀಯಾ ಧೃಡಮನ ಕೊಡು ನಿನ್ನಡಿಯಲಿ ಜೀಯಾ 4 ಗೋಪಿಯ ತನಯಾ ನೀ ಪಿಡಿ ಕೈಯ್ಯಾ ಗೋಪಾಲಕೃಷ್ಣವಿಠ್ಠಲ ಹೇ ಜೀಯ್ಯಾ 5
--------------
ಅಂಬಾಬಾಯಿ
ಶರಣಾಗತ ರಕ್ಷಾಮಣಿಯೆ ಶ್ರೀ ಹರಿಯೆ ಪ ಶರಣಾಗತ ಜನ ವರ ರಕ್ಷಾಮಣಿಯೆಂಬ ಬಿರುದಿನಿಂದಲಿ ಮೆರೆವ ಕರುಣಾ ಭರಣ ಕಾಮಿತ ವರಪ್ರದಾಯಕ ಅ.ಪ. ಜನನ ಮರಣ ರಹಿತ ಜಗದ ಜನ್ಮಾದಿ ಕರ್ತ ಜನುಮ ಜನುಮದಲ್ಲಿ ಜಗದ ಜೀವರಿಗೆಲ್ಲಾ ಅನಿಮಿತ್ತ ಬಂಧುವೆಂದು ನಿನ್ನಯ ಪಾದ ವನಜಗಳನು ನಾವಿಂದು ನಂಬಿಹೆವಿನ್ನು ವನಜನಾಭನೇ ನೀ ಬಂದು ಕಾಯಬೇಕೆಂದು ತನುಮನಂಗಳ ನಿನಗೆ ಒಪ್ಪಿಸಿ ಅನುನಯದಿ ಶಿರ ಮಣಿದು ಬೇಡುವೆ ಅನಘ ಅನುಪಮ ಗುಣಗಣಾಂಬುಧಿ ಅನಿಮಿಷೋತ್ತಮ ಅಪ್ರಮೇಯನೆ 1 ಕಾಮಜನಕ ಪೂರ್ಣಕಾಮ ಆಶ್ರಿತ ಜನ ಕಾಮಧೇನುವೆ ಕೋಟಿ ಕಾಮಲಾವಣ್ಯನೆ ಶ್ರೀ ಮನೋಹರ ಗಂಭೀರ ಸುರುಚಿರ ಘನ ಸನ್ನುತ ಮಹಿಮ ಸಾಮಜನರ ಉದ್ಧಾರ ಭಕ್ತ ಮಂದಾರ ಸಾಮಗಾನ ಪ್ರೇಮ ಜಗದಭಿ ರಾಮ ರಾಕ್ಷಸ ಭೀಮ ಮಂಗಳ ನಾಮ ಸುರಮುನಿ ಸ್ತೋಮ ಸನ್ನುತ ಸ್ವಾಮಿದೇವ ಲಲಾಮ ನಮೊ ನಮೊ 2 ಮಾಧವ ಅರ ವಿಂದಲೋಚನ ಪೂರ್ಣಾನಂದ ಸ್ವರೂಪನೆ ಎಂದೆಂದು ನೀನಲ್ಲದೆ ಗತಿ ಎಮಗಿಲ್ಲ ವೆಂದು ನಿನ್ನನು ಬಿಡದೆ ಕರಿಗಿರೀಶನೆ ತಂದೆ ಯೆಮ್ಮಯ ಕುಂದುಗಳ ನೀ ನೊಂದನೆಣಿಸದೆ ಬಂದು ಸಲಹುವು ಇಂದು ಕರುಣಾ ಸಿಂಧು ನತಜನ ಬಂಧು ನರಹರಿ3
--------------
ವರಾವಾಣಿರಾಮರಾಯದಾಸರು
ಶರಣಾಗತ ರಕ್ಷಿಸಿ ಸ್ವಾಮಿ ಪೊರೆವುದು ಎನ್ನನು ಹರಿಯೇ ಶರಣಾಗತನೊಳು ನಿರ್ದಯ ಸರಿಯೇ ಕರುಣಾಕರ ಗುಣನಿಧಿಯೇ ಪ ಅಪರಾಧಗಳನು ಕ್ಷಮಿಸಿ ಸ್ವಾಮಿ ಕಾಪಾಡೋ ಮಾಧವನೇ ಅಪಾರಪರ ಮಹಿಮನೇ ಪುರಾಣ ಪುರುಷೋತ್ತಮನೇ 1 ಸಂಕಟಪರಿಹಾರಕನೇ ನಮ್ಮ ವೆಂಕಟ ವಿಠಲನೆ 2 ಸೃಷ್ಟಿಕರ್ತನು ನೀನೆ ಸ್ವಾಮಿ ಅಷ್ಟೈಶ್ವರ್ಯವೂ ನೀನೆ ಶಿಷ್ಟರ ಪಾಲಿಪ ನೀನೆ ದುಷ್ಟರ ಸಂಹಾರಕನೇ 3 ವೇದ ಪುರಾಣವು ನೀನೆ ಮೇಧಿನಿಗಧಿಪತಿ ನೀನೆ ಮಾಧವ ಮಧುಸೂದನನೇ ಆದಿ ಮೂರುತಿ ನೀನೆ 4 ಹನುಮೇಶ ವಿಠಲನೇ ಸ್ವಾಮಿ ಜನನಿ ಜನಕನು ನೀನೆ ಜ್ಞಾನ ಪ್ರದಾಯಕ ನೀನೆ ಘನ ಮುಕ್ತಿಗೊಡೆಯನು ನೀನೆ 5
--------------
ಹನುಮೇಶವಿಠಲ
ಶಾರದೇಂದು ಸನ್ನಿಭಾನನೇ ಸರಸಿಜಲೋಚನೆ ಪ. ಶಾರದೇ ಸುವಿಶಾರದೇ ದಯೆಬಾರದೇ ನತಕಾಮದೆ ಭೂರಿಹರ್ಷದೆ ಬೀರಿ ನಲ್ಮೆಯಾಪಾರ ಸೌಖ್ಯವ ತೋರು ಕೀರ್ತಿಯ 1 ವಾಣಿ ವೀಣಾಪಾಣಿ ಮಂಜಳವಾಣಿ ಪುಸ್ತಕಧಾರಿಣಿ ವೇಣುನಾದ ವಿನೋದಿನಿ ಸುಜ್ಞಾನದಾಯಿನಿ ಪಾಹಿ ಜನನೀ 2 ಮಾತೆ ಮಂಗಳ ಗೀತೆ ಕವಿಸುಪ್ರೀತೆ ಪದ್ಮಜದಯಿತೆ ಖ್ಯಾತೆ ಶೇಷಗಿರೀಶ ಭಕ್ತಿಪ್ರದಾತೆ ಸದ್ಗುಣಪೂತೆ ಮಹಿತೆ 3
--------------
ನಂಜನಗೂಡು ತಿರುಮಲಾಂಬಾ