ಒಟ್ಟು 2477 ಕಡೆಗಳಲ್ಲಿ , 108 ದಾಸರು , 1764 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಮ್ಮಮ್ಮ ಗೋಪಿಯೆನೆ ಏನೆಂಬೆ ಪರ ಬೊಮ್ಮ ಮಗನೆಂಬೊ ಧೈರ್ಯಕೆ ಪ. ಬೊಮ್ಮನಯ್ಯನ ಸಿರಿರಮ್ಮೆ ಪತಿಯ ಘನ ಪೆರ್ಮೆ ಗುಣಗಣನಿಲಯನ ಅ.ಪ. ಹೊಳೆವ ಶ್ರೀರೂಪು ವಟಪತ್ರದಲ್ಲಿ ಪ್ರಳಯಜಲಧಿಯ ಶಯನನ ಸೆಳೆಮಂಚದ ಮ್ಯಾಲೆ ಮಗ್ಗುಲೊಳಿಟ್ಟು ತನ್ನ ಗೋಪಿ 1 ಚರಾಚರಂಗಳ ಸೃಷ್ಟಿ ಸ್ವಯಿಚ್ಛೆಯಿಂದ ಪುರುಷರೂಪವ ಧರಿಸಿದ ಪರಮಮಂಗಳ ಮೂರುತಿಯ ತನ್ನ ಗೋಪಿ 2 ಕತ್ತಲೆಯನು ನುಂಗಿ ತತ್ವಂಗಳನು ಕೊಂಡು ಮತ್ತೆ ಬೊಮ್ಮಾಂಡದೊಳಗೆ ಪೊಕ್ಕು ತತ್ವಸಾರದಿಂದೊಪ್ಪುವ ಕೊಮರನ ಗೋಪಿ 3 ಅದಭ್ರಸೃಷ್ಟಿಗಳಿಗಗೋಚರನಾದ ಆದಿಮೂರುತಿ ¸ಚ್ಚಿದಾನಂದನ ಸದಾ ತನಯನೆಂದೆತ್ತಿ ಮುದ್ದಿಸಿ ಸುಖ ಗೋಪಿ 4 ಚತುರುಭುಜ ಶಂಖ ಚಕ್ರ ಗದೆ ಪದುಮ ಸುತಪ ಪ್ರಶ್ನೆಗೆ ವರವಿತ್ತ ಶ್ರುತಿಶಿರೋಮಣಿಯೆಂದರಿಯದೆ ತಾ ಗೋಪಿ 5 ಬೊಮ್ಮಕಲುಷಾನಂತ ಸಹಸ್ರಗಳ ನಿಮಿಷಮಾತ್ರದಿ ಪಡೆದನ ಬೊಮ್ಮಾಂಡವೆ ತನ್ನ ರೋಮಕೂಪದಲ್ಲಿಪ್ಪ್ಪ ರನ್ನವೆ ಮಗನೆಂದಳೆ ಗೋಪಿ6 ಅನ್ನಂತ ರವಿತೇಜಕಿರೀಟದ ಅನ್ನಘ್ರ್ಯ ಸರ್ವಾಭರಣ ಪೊನ್ನ ವಸ್ತ್ರವನ್ನುಟ್ಟ ಅದ್ಭ್ಬುತ ಬಾಲಕನ ಗೋಪಿ 7 ಅನ್ನಂತಾನಂತ ಜೀವಗಣಗಳು ಅನ್ನಂತಾನಂತ ಕರ್ಮಗಳು ಅನ್ನಂತಾನಂತ ಗಾಯತ್ರಿಗೆ ಕÀರ್ತೃ ವಿಷ್ಣು ಗೋಪಿ 8 ಅನ್ನಂತಾಸನ ಶ್ವೇತದ್ವೀಪ ವೈಕುಂಠ ದನ್ನವರತ ವಾಸವಾಗಿಪ್ಪನ ಅನ್ನಿಮಿಷರ ಯೋಚನೆಗೆ ಒಲಿದನ ಗೋಪಿ 9 ಧರ್ಮದÀ ವೃದ್ಧಿಗೆ ಧರ್ಮದ ಹಾನಿಗೆ ತನ್ನಿಚ್ಛೆಯಲವತರಿಸಿದ ಮಮ ಪ್ರಾಣಾಹಿ ಪಾಂಡವನೆನಿಸಿದ ಗೋಪಿ 10 ಉದ್ದಾಮ ಕಾಂಚೀದಾಮ ಕಂಕಣ ಶ್ರೀ- ಮುದ್ರೆಯ ಶ್ರೀವತ್ಸಕೌಸ್ತುಭಧರನ ಮಧ್ವಮುನಿಗೆ ತಾನೊಲಿದು ಬಂದನ ಗೋಪಿ 11 ಸರಸಿಜಬೊಮ್ಮಾಂಡ ಒಡೆದಾಗ ವಿರಿಂಚಿ ತೊಳೆದ ಪಾದೋದಕವ ಹರ ಸೇವಿಸಲಾಗ ಶಿವನ ಮಾಡಿದ ಹರಿಯ ಮಗನೆಂದಳೆ [ಗೋಪಿ] 12 ದೇವಕಿ ಉದರದಲ್ಲಿದ್ದಾಗ ಬ್ರಹ್ಮಾದಿ ದೇವರಿಂದಲ್ಲಿ ಕೀರ್ತಿಸಿಕೊಂಡು ಭಾವಕಿ ದೇವಕಿ ವಸುದೇವನಲ್ಲಿ ಪಿತೃ ಗೋಪಿ 13 ಶಿಶುರೂಪವ ತೋರಿದ ಬೊಮ್ಮನ ಕಂಡು ವಸುದೇವಗೆ ನದಿ ಎಡೆ ಬಿಡೆ ಸಾಸಿರನಾಮ ಚಿತ್ರವಾಗಿದ್ದ ಜಗ- ಗೋಪಿ 14 ಪಾಲಗಡಲಲ್ಲಿ ಪವಡಿಸಿಪ್ಪನ ಕಾಲಮೇಲೆ ಮಲಗಿಸಿಕೊಂಡು ನೀಲಮೇಘಶ್ಯಾಮಯೆಂದು ಬಣ್ಣಿಸುತಲಿ ಗೋಪಿ 15 ಆದಿದೇವನು ಬ್ರಹ್ಮಸೂತ್ರವ ಕಲ್ಪಿಸಿ ವೇದ ವಿಭಾಗವ ಮಾಡಿದನ ಆದರದಿಂತುಂತೆಂದು ಕಲಿಸಿ ಸಂ ಗೋಪಿ 16 ಭಾನುಶತಕೋಟಿತೇಜಪ್ರಕಾಶನ್ನ ಆನಂದವನೆ ನೋಡಿ ಮನ ಉಬ್ಬಿ ಆನಂದನಿಧಿಯ ತೊಡೆಯ ಮ್ಯಾಲೆಯಿಟ್ಟು ಗೋಪಿ 17 ಶೃಂಗಾರನಿಧಿಯನ್ನು ಬಾಯೆಂದು ಕರೆದು ರ- ಥಾಂಗಪಾಣಿಯನೆ ಎತ್ತಿಕೊಂಡು ತಿಂಗಳನೋಡಯ್ಯ ಕಂದ ಎಂದಾತನ ಗೋಪಿ 18 ಸನ್ನಕಾದಿಗಳಯ್ಯನ ಪಿತನ ಕರೆ ದೆನ್ನ ಮಾಣಿಕವೆಯೆಂದಪ್ಪಿಕೊಂಡು ಹೊನ್ನ ತಾ ಗುಬ್ಬಿಯೆಂದಾಡು ಎನ್ನಯ್ಯನೆ ಗೋಪಿ 19 ಗಂಭೀರವಾರಿಧಿಗೆ ಅಂಬಾ ಹೂಡಿದ ತೋಳು ಇಂದಿರೆಯನೆ ಅಪ್ಪಿದ ತೋಳು ಶಂಭರಾರಿಯ ಪಿತ ತೋಳನ್ನಾಡೈ ಎಂದು ಗೋಪಿ 20 ಪಾದ ಉ- ದ್ದಂಡ ಬಲಿಯಮೆಟ್ಟಿದ ಪಾದ ಪುಂಡರೀಕಾಯತವಾದ ಪಾದದಿ ಪ್ರ- ಗೋಪಿ 21 ನಿತ್ಯತೃಪ್ತನು ಹಸ್ತ (ಸಿದ?) ನೆಂದೆನುತಲೆ ಇತ್ತ ಬಾ ಹೊರೀಯೆಂದಾದರಿಸಿ ಹೊತ್ತಾರಿಂದಮ್ಮೆ ಉಣ್ಣದಿರಲು ಹೊಟ್ಟೆ ಗೋಪಿ 22 ಅಮ್ಮೆ ಉಂಬುವ ಪುಟ್ಟ ಬಾಯ ಮುದ್ದಿನ ಮಾ ರಮ್ಮೆಯನರಸುವನಚ್ಚರಿಯ ಅಮ್ಮೆ ನೋಡಿ ನಗುವ ಮುದ್ದು ಬಾಲಕನ ಪರ ಗೋಪಿ 23 ತಾಯ ಮೊಗವ ನೋಡುತ್ತಾಕಳಿಸುತ ಬಾಯಲ್ಲೀರೇಳುಲೋಕವ ತೋರೆ ಆಯತೆ ನೋಡಿ ಮರಳಿ ಕಂಗೆಟ್ಟು ವಿಶ್ವ- ಗೋಪಿ 24 ಜ್ಞಾನಘನನ ವಿಶ್ವತೋನಯನನ ಆನಂದಚರಿತ್ರನ ಅವ್ಯಕ್ತನ ಜ್ಞಾನಿಗಳ ಹೃತ್ಕಮಲದೊಳಿಹನ ಕಣ್ಣಮುಚ್ಚಿ ಗೋಪಿ 25 ಹಾಲ ಹರವಿಯ ಒಡೆದು ಬಂದು ಗೋ- ಪಾಲ ನೀನೆಲ್ಲಿಗೆ ಪೋದೆಯೆಂದು ಕಾಲಕರ್ಮಂಗಳಿಗೆ ಕಾರಣವಾದೋನ ಗೋಪಿ 26 ಜಗದುದರ ಜಂಘಿಸುತ ಅಡಿಯಿಡೆ ಮೃಗಲೋಚನೆ ಮೈಮರೆದಿರೆ ಅಗಣಿತಮಹಿಮನು ಚರಿಸುತ ಬರ ಗೋಪಿ 27 ಆಮ್ಮಹಾ ಮತ್ತಿಯ ಮರನ ಮುರಿದು ಸುರರು ಜಯವೆನ್ನೆ ಶ್ರೀಮಣಿ ಶಿವರಿಂದ ಕೀರ್ತಿಸಿಕೊಂಬ ಗೋಪಿ 28 ಕತ್ತಲೆಯೊಳಗಿದ್ದು ಅಂಜಿದ ಮಗನೆಂದು ಶ್ರುತಿಮಂತ್ರಗಳಿಂದುಚ್ಚರಿಸಿ ಮೃತ್ಯುಂಜಯನ ಪಿರಿಯನೆತ್ತಿಕೊಂಡು ಗೋಪಿ 29 ಶೇಷಶಾಯಿಯ ಹಾಸಿ ಮಲಗಿಸಿ ಚಾರು- ವೇಷನ್ನ ನಿದ್ರಿಗೈಸುವೆನೆಂದು ಸಾಸಿರಮುಖಭೂಷಣನ ಪಾಡುತ್ತ ಸಂ- ತೋಷದಿ ಮೈಮರೆದಳೆ ಗೋಪಿ30 ತ್ರಿಗುಣಾತೀತನ್ನ ಪೊಂದೊಟ್ಟಿಲೊಳ್ಮಲಗಿಸಿ ಜೋಗುಳ ಪಾಡುವ ಯಶೋದೆÉಯ ಎಸೆವ ನೀಲವಸ್ತ್ರನು ಪಾಡೆನ್ನೆ ಕೃಷ್ಣ ಅನು- ಗೋಪಿ 31 ಹರಿಯ ಹೊರಿಸುವಳಲ್ಯಲ್ಲಿ ನಿಮ್ಮಣ್ಣ ವರ ಸಿಂಹಾಸನವಾಗಿಪ್ಪನೆಂದು ಸಿರಿಯಕೂಡೇಕಾಂತದಲಿಪ್ಪನ್ನ ಗೋಪಿ 32 ಪಾದ ನಿಮ್ಮಣ್ಣನ ಶಿರದಲೊಪ್ಪಿದೆÀಯೆಲೆ ಕಂದ ಸುರವರರ ಭಾಗ್ಯನಿಧಿಯೆ ಬಲರಾಮ ಗೋಪಿ 33 ಕಣ್ಣಮುಚ್ಚಿದ ಕೃಷ್ಣನೆಂದು ತೊಟ್ಟಿಲ ಬಿಟ್ಟು ಪುಣ್ಯಾಂಗನೆ ಮೈಮರೆದಿರೆ ಅಣ್ಣ ಆಶನು ಬೆಣ್ಣೆಯ ಕಳಹೋದ ಚಿಣ್ಣನ ಕಾಣೆನೆಂದಳೆ ಗೋಪಿ34 ನೀಲಾಂಬರನ ಬೆನ್ನ ಮೆಟ್ಟಿ ನೆಲವಿನ ಮ್ಯಾಲಿನ ಬೆಣ್ಣೆಯ ಮೆಲ್ಲೆ ಕೃಷ್ಣ ಬಾಲಕಿಯರು ಕೂಡಿ ಕಳ್ಳ ಸಿಕ್ಕಿದನೆಂದು ಗೋಪಿ 35 ಹುಟ್ಟ್ಟದ ಬೆಳೆಯದ ಹಸುಳೆ ಅಣ್ಣನ ಬೆನ್ನ ಮೆಟ್ಟಿ ನೆಲವು ಜಗ್ಗಿದನೆಂದು ರಟ್ಟು ಮಾಡಿದಿರೆಲ್ಲ ನೋಡಿರವ್ವಾ ಎನ್ನ ಗೋಪಿ 36 ಕಂದನ ಎತ್ತಿಕೊಂಡು ರಾಜ್ಯದಂಗನೆಯರ ಮಂದಿರವನೆ ಪೊಕ್ಕು ಬರುತಿರೆ ಒಂದೊಂದು ಕೌತುಕವನೆ ಕಂಡಾನಂದ ಗೋಪಿ 37 ಶಶಿಮುಖಿಯಂಗಳದ ಹಾಲಹಳ್ಳ ಮೊಸರ ಮಡುವು ಬಾಗಿಲ ಮುಂದೆ ಪ್ರಸಾದವೆಲ್ಲ ಬೆಣ್ಣೆ ಫಲಿತವಾಗಿರೆ ಗೋಪಿ 38 ವಾರಿಧಿಯೊಳಗಿದ್ದ ಪನ್ನಗಶಾಯಿಯ ತೇರ ಮೇಲೆ ಇದ್ದ ಬಾಲಕನ ಮೂರುತಿ ಒಂದೆಂಬೋ ಅ- ಗೋಪಿ 39 ದ್ರೌಪದಿಗಕ್ಷಯವಿತ್ತನ ಗುರು ಸಾಂ- ದೀಪಗೆ ಸುತನ ತಂದಿತ್ತನ ಪ್ರೀತಿಯಿಂದಲಿ ಯಜ್ಞಪತ್ಯರಿಗೊಲಿದ ಸುಪ್ರ- ಗೋಪಿ 40 ಘಾತಪುತ್ರರ ಆರು ಮಂದಿಯ ತರಹೇಳಿ ಮಾತೆಯೆಚ್ಚರಿಸೆ ಅಂಗೀಕರಿಸಿ ಅತಿ ಬೇಗದಿಂದಣ್ಣನ ತಂದು ತೋರಿದ ಅ- ಗೋಪಿ 41 ಭಕುತ ಶ್ರುತದೇವ ಬಹುಳಾಶ್ವರಾಯಗೊಲಿ ದೇಕ ಕಾಲದಿ ರೂಪೆರಡಾಗಿ ಆ ಕರುಣಾಬ್ಧಿಯ ಮಾಯಾರೂಪಿÀನ ಪರಿ- ಗೋಪಿ 42 ಪೂತನಿ ಶಕಟವತ್ಸಾಸುರ ವೃಷಭÀನ ಪಾತಕಿ ಚಾಣೂರ ಕುಂಜರನ ಘಾತಿಸಿ ಕಂಸನ್ನ ರಂಟೆಯಾಡಿದ ಬಲು ಭೂತನ್ನ ಮಗನೆಂದಳೆ ಗೋಪಿ43 ಬಾಲತನದಲ್ಲಿ ಸಖನಾಗಿ ಬಂದು ಕು- ಚೇಲ ತಂದವಲಕ್ಕಿಯ ಧರಿಸಿ ಮೇಲುತನದಿಂದ ಸೌಭಾಗ್ಯವಿತ್ತ ಶ್ರೀ ಲೋಲನ್ನ ಮಗನೆಂದಳೆ ಗೋಪಿ&ಟಿbsಠಿ
--------------
ವಾದಿರಾಜ
ಅರಿತು ನೀ ಸಾಧಿಸು ಘನಪರಮಾರ್ಥಾ ಪ ಭೇದವರ್ಜಿತನಾಗಿ ಸ್ವಾದ ಸೇವಿಸಬೇಕು ಪಾದ ತೀರ್ಥಾ 1 ಭಕ್ತಿಭಾವಾರ್ಥ ವಿರಕ್ತಿಯಿಂದಾಗಬೇಕು ಮುಕ್ತಿಮಾನಿನಿಗೆ ತಾಂ ಕರ್ತಾ 2 ವರಸಚ್ಚಿದಾನಂದ ಬ್ರಹ್ಮದಿಂದೆಸೆವ ಗುರುವಿಮಲಾನಂದ ಸಮರ್ಥಾ 3
--------------
ಭಟಕಳ ಅಪ್ಪಯ್ಯ
ಅರಿತುಕೊಳ್ಳಿರೋ ನಿಮ್ಮ ಆತ್ಮವಸ್ತುವನುಪರಮ ಗುರು ಕರುಣದಿ ನೀವು ನಿಮ್ಮನು ಪ ಬಿದಿಗೆ ಚಂದ್ರನು ಆವುದೆಂದು ಕೇಳಲಿಕೆಅದಕೋ ಶಾಖಾಗ್ರ ಎಂದೆನಲು ಅರಿದಂತೆವಿಧಿಸಿ ಗುರುಮುಖದಿ ವಿವರಿಸಿ ಕಂಡು ಅರಿದುಸದಯಲಾನಂದ ತಾವೆಂದು ಭಾವಿಪುದು 1 ಊರು ಆವುದು ಎಂದು ಕೇಳುತಿರಲಿಕೆಊರದಕೋ ಗುಡ್ಡದ ಮೇಲೆನಲು ಅರಿದಂತೆಧೀರ ಗುರು ಮುಖದಿ ದಿಟ್ಟಿಸಿ ಕಂಡು ಅರಿತುಸಾರ ಸಂಪತ್ತು ತಾವೆಂದು ಧ್ಯಾನಿಪುದು 2 ಅರಸು ಅವನು ಎಂದು ಕೇಳುತಿರಲಿಕೆಅರಸ ಅಲ್ಲಿಹನೆಂದು ನಡೆವವನೆ ಅರಿತಂತೆಪರಮ ಗುರು ದಯದಿ ಪಾಟಿಸಿ ಕಂಡು ಅರಿದುಪರಮ ಗುರು ಚಿದಾನಂದ ತಾವೆಂದು ಭಾವಿಪುದು 3
--------------
ಚಿದಾನಂದ ಅವಧೂತರು
ಅರಿವರಾರೆಲೋ ನಿನ್ನ ಅಗಮ್ಯ ಚರಿತ ಚರಣದಾಸರ ಪರಮ ಆನಂದಭರಿತ ಪ ದೇವರುಂಟೆಂಬ ಕೆಲವಾಧಾರಪುಟ್ಟಿಸಿದಿ ದೇವರಿಲ್ಲೆಂಬ ಹಲವು ಆಧಾರ ತೋರಿಸಿದಿ ಜೀವಬ್ರಹ್ವೈಕ್ಯೆಂಬುಪಾಯಗಳ ಸ್ಥಾಪಿಸಿದಿ ಆವರೀತಿಗು ಕಾವದೇವ ನಾನೆಂದಿ 1 ಜೀವವೆ ಮಾಯೆಯೆಂದು ಕಾಯವೆ ಕರ್ಮವೆಂದು ಭಾವಿಗಳ ಕೈಯಿಂದ ಬರೆಸಿದೆಯೋ ನಿಂದು ಜೀವಜೀವರಲಿ ಜಡ ಜೀವ ಬೇರೆನಿಸಿದಿ ಜೀವಜೀವರ ಜೀವ ಚೈತನ್ಯರೂಪ 2 ವೇದ ಸುಳ್ಳೆಂಬ್ಹಲವು ವಾದಿಗಳ ನಿರ್ಮಿಸಿದಿ ವೇದ ಅಹುದೆಂಬ ನಿಜವಾದಿಗಳ ಪುಟ್ಟಿಸಿದಿ ನಾದಬ್ರಹ್ಮವುಯೆಂಬ ಹಾದಿ ರಚಿಸಿದಿ ಸರ್ವಸಾಧನಕೆ ಒಲಿದು ಪ್ರಸನ್ನ ನೀನಾದಿ 3 ಬಗೆಬಗೆಯ ವಚನದಿಂ ಬಗೆಬಗೆಯ ನಿಗಮದಿಂ ಬಗೆಬಗೆಯ ರೂಪದಿಂ ನಿಗವಿಟ್ಟು ಸರ್ವರನು ಬಗೆಗೊಂಡು ಬೆಳಗುವೆಯೊ ಜಗಭರಿತನಾಗಿ 4 ಅವಸಾಧನವೊಲ್ಲೆ ಜಾವಜಾವಕೆ ನಿಮ್ಮ ದಿವ್ಯಸ್ಮರಣೆಯ ಎನ್ನ ಭಾವದೊಳು ನಿಲಿಸಿ ದೇವದೇವರ ದೇವ ದೇವ ಶ್ರೀರಾಮ ತವ ಸೇವಕನೆನಿಸೆನ್ನ ಕಾಯೊ ಕೈಪಿಡಿದು 5
--------------
ರಾಮದಾಸರು
ಅರುಕ್ಯುಳ್ಳ ಗುರುಪಾದವಾಶ್ರೈಸೊ ಎನ್ನ ಮನವೆ ಎgವಾಗ್ಯನುಭವ ಸುರಕಿ ಕೊಳ್ಳೊ ಧ್ರುವ ಮರಹುಮರದೀಡ್ಯಾಡಿ ಅರಹುವಿನೊಳರಿತು ಗೂಡಿ ಕುರುಹ ಗುರುತುಮಾಡಿ ಸ್ಥಿರವು ಕೂಡಿ 1 ತಿರಹು ಮರ್ಹವಿನ ಖೂನ ಅರಹು ಮರ್ಹವಿನ ಸ್ಥಾನ ಇರಹು ಆಗೀಹ್ಯ ಘನ ಬೆರಿಯೋ ಧ್ಯಾನಾ 2 ಜೀವ ಶಿವರಸಂದು ಠಾವಮಾಡಲು ಬಂದು ಭವಕ ಬೀಳುವನೆಂದು ಭಾವಿಕನೆಂದು 3 ಅಗ್ರಗುರು ಸುವಿದ್ಯ ಶೀಘ್ರಸಾಧ್ಯ 4 ಕೀಲು ತಿಳಿದರೆ ಸಾಕು ಜಾಲವ್ಯಾತಕೆ ಬೇಕು ಮೂಲಗುರುಪಾದ ಮಹಿಪತಿ ನೀ ಸೋಂಕು 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಅರ್ಚನೆ ಬಗೆ ಕೇಳಿ ಲೋಕ ಪ ಕಣ್ಣು ಮುಚ್ಚಿ ಕುಳಿತರೆ ಕೊಡ ಹರಿ ಮುಕ್ತಿಲೋಕಾ ಅ.ಪ ಜಡವ ಪೂಜಿಸಿದರಲ್ಲೇನೊ ತಾನು | ಜಡ ತುಲ್ಯ | ನಾಗಿದ್ದಕೆ ಸಮವೇನು || ಕೆಡದಿರು ಇದರೊಳಗೆ ನೀನು ತಿಳಿ | ಒಡನೆ ಕರ್ಮಗಳೆಲ್ಲೇನುಂಟು ಕಾಣೋ 1 ಏಕಾಂತದಲಿ ನಿನ್ನ ಮನಸು ಅ | ನೇಕವಾಗುವುದು ನಿರಂತರ ಗುಣಿಸು || ನೀ ಕೇಳು ಯೋಚಿಸಿ ಗಣಿಸು | ಸರ್ವ ಆಕಾರದಲ್ಲಿ ಶ್ರೀ ಹರಿಯನ್ನೆ ನೆನಸು 2 ತ್ರಿವಿಧ ಜೀವರು ಮಾಡುವಂಥ ನಡತಿ | ಹವಣವ ನೋಡಿದು ಬಿಡು ನಿನ್ನ ಪಂಥ || ಕವಿಗಳೊಡನೆ ಸುಪಂಥದಿಂದ | ಪವಮಾನಮತ ಪೊಂದಿ ಭಜಿಪುದು ಇಂಥ 3 ದ್ಯುಣುಕ ಪಿಡಿದು ಬಹುಕಾಲತನಕ | ನಿತ್ಯ ಸುಶೀಲ || ಗುಣವಂತನಾಗೊ ನೀ ಬಹುಳ ಸುಖ- | ವನಧಿ ರಂಗನ ವ್ಯಾಪಾರವೆನ್ನೊ ಬಾಲ 4 ಆವಾಗ ಮರೆಯದಿರು ಹರಿಯ ಕಂಡ | ಠಾವಿನಲಿ ಯೋಚಿಸು ಅರಗಳಿಗೆ ಬಯಸದಿರು ಸಿರಿಯ || ದೇವ ವಿಜಯವಿಠ್ಠಲ ದೊರೆಯ ನಿನ್ನ ಭಾವದಲಿ ತಿಳಿಯೊ ಆತನ ಚರಿಯಾ 5
--------------
ವಿಜಯದಾಸ
ಅರ್ತರಿಯದ್ಹಾಂಗೆ ಇರಬೇಕು ಮತ್ರ್ಯದೊಳಗೆ ಧ್ರುವ ಬಡಿವಾರ ಸಲ್ಲದು ತಾ ಅಹಂಕಾರ ಬಲುಸೂಕ್ಷ್ಮ ಗುರುಪಾರಾವಾರ ತಿಳಿಯಲು ವಿಚಾರ 1 ತರ್ಕತೆ ದೋರಲು ಖೂನ ಅತ್ರ್ಯುಳ್ಳವರ ನಿಧಾನ ಸರ್ಕನೆ ತಿಳಿವದು ಖೂನ ತಾರ್ಕಣ್ಯದ ಧನ 2 ಹಲವು ಮಾತಾಡಿದಂತೆ ಬಲುವಾ ಭಾವದೋರಿತು ನೆಲೆಯು ಗೊಳಬೇಕು ತಿಳುವಂತೆ ಎಲಿಮರಿಕಾಯಂತೆ 3 ಬಲ್ಲತನಕೆ ದೂರ ಸುಲಭ ಸುಜ್ಞಾನ ಸಾರಾ ಅಲ್ಲಹುದೇನು ತಾ ವಿಚಾರ ಬಲು ತುಂಬ್ಯಾದ ಸ್ಥಿರ 4 ಬೆರ್ತು ಮಹಿಪತಿ ನಿಜಹೊಂದು ಅರ್ಥಿ ನಿನಗೊಂದು 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಅರ್ಥಿಲೊಂದು ಹೇಳುವೆನಮ್ಮಅಲ್ಲಿವಾರ್ತೆಯಚಿತ್ತಗೊಟ್ಟು ಕೇಳ ತಾಯಿಅವರ ಕೀರ್ತಿಯ ಪ. ಹೋಗಿ ನಾನು ನಾಗವೇಣಿಯರ ಬಾಗಿಲು ಹೊಕ್ಕೆನುಸಾಗರಶಯನ ಮಂಚವೇರಲು ಧಕ್ಕನೆ ನಿಂತೆನು 1 ಮರ್ಯಾದಿಲೆ ಹರಿಯ ಮನೆ ಬಾಗಿಲು ಮರೆಯಲಿ ನಿಂತೆನುಸಿರಿಯರಸು ಸತಿಯರಿಂದ ಬೆರೆದು ಕುಳಿತೆ2 ಫುಲ್ಲನಾಭನು ಮಲ್ಲಿಗೆ ಮಂಚದೊಳಿರುತಿರೆವಲ್ಲಭೆಯರಿಬ್ಬರು ಗಂಧಪೂಸಿ ಅಲ್ಲೆ ಕುಳಿತಿಹರು3 ಪುನಗು ಜಾಜಿ ವನಿತೆಯರು ಹಚ್ಚುತಿಹರುಪುನಗು Pಸ್ತ್ತೂರಿ ಬೊಟ್ಟು ಮಾನಿನಿಯರು ಇಡುತಿಹರು4 ಚಾರು ಸೂರಿ ಸುಖಿಸುತ 5 ಕೃಷ್ಣರಾಯಗೆ ಕೊಟ್ಟು ಅಡಿಕೆ ತುಷ್ಟರಾಗಲಿಪಟ್ಟದ ರಾಣಿಯರಿಬ್ಬರು ಇಟ್ಟರು ತೊಡೆಮೇಲೆ 6 ಬಟ್ಟನೆ ವೀಳ್ಯ ರುಕ್ಮಿಣಿದೇವಿ ಕೊಟ್ಟೆನೆನುತಲಿಥಟ್ಟನೆ ಕೃಷ್ಣನವದನದಲ್ಲಿ ಇಟ್ಟಾಳು ಭಾವೆ ತಾ 7 ಭರದಿ ಕೋಪಿಸಿ ರುಕ್ಮಿಣಿದೇವಿ ತೆರೆದುಕಣ್ಣುತಾಹಿರಿಯಳೇನು ಮೊದಲು ಕೊಟ್ಟೆ ವೀಳ್ಯವೆನ್ನುತಲೆ 8 ಭೂಪÀ ರಾಮೇಶ ರುಕ್ಮಿಣಿದೇವಿಯ ತಾಪವ ಕಾಣುತಅಪಾರ ಕೋಪವ ಅರಘಳಿಗೆಯಲಿ ಇಳಿಸುವೆನೆಂದು ತಾ9
--------------
ಗಲಗಲಿಅವ್ವನವರು
ಅವಧೂತಾ ನೀ ಅವಗುಣಗಳ ನಿರ್ಧೂತಾ ದೇವನಹುದೋ ಶ್ರೀನಾಥಾ ಧ್ರುವ ಭಾವಿಸಿ ನೋಡಲು ಭಾವಕತೀತ ಭವಹರ ಗುರು ಸಾಕ್ಷಾತ ಪಾವನಗೈಸುವದಯ ಪ್ರಖ್ಯಾತ ದೇವಾದಿಗಳೊಂದಿತ 1 ಝಗಝಗಿಸುವ ಜಗಜ್ಯೋತಿ ಸ್ವರೂಪ ಅಗಣಿಗತುಣೋಪಮೋಪ ತ್ರಿಗುಣರಹಿತ ಚಿದ್ಛನ ಚಿದ್ರೂಪ ಯೋಗಿಜನರ ಪಾಲಿಪ 2 ಇಹಪರದಾತ ಮಹಿಪತಿ ಗುರುನಾಥ ಬಾಹ್ಯಾಂತ್ರ ಸದೋದಿತ ಮಹಾಮಹಿನು ನೀ ಆನಂದಭರಿತ ಸಹಕಾರ ನೀ ಸತತ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಅವನೆ ಧನ್ಯನೆಲಾ ಜಗದೊಳು ಇವನೇ ಮಾನ್ಯನೆಲಾಪ ಆವ ಪರಿಯಲಿಂದಾದರು ತನ್ನಯ ಭಾವ ಶುದ್ಧಿಯಲಿ ಭಗವತ್ಪರನಾದವನೆ ಧನ್ಯ 1 ಆತ್ಮೇಂತರ ಸಂಸ್ಕøತಿಯೊಳಿದ್ದು ಸ್ವಾತ್ಮಲಾಭ ಸಿದ್ಧಿಯ ಸಾಧಿಸಿಕೊಂಡವನೆ 2 ಶ್ರೀದವಿಠಲನ ಸಾಕ್ಷಾತ್ಕರಿಸಿ ಸೇವ್ಯ ಚಿತ್ಸುಖಮಯವಾದುದವನೇ ಧನ್ಯನೆಲಾ 3
--------------
ಶ್ರೀದವಿಠಲರು
ಅವನೆವೆ ಯೋಗ್ಯ ನೋಡಿರೈ ಭಕುತಿಗೆ | ಸಾಯಾಸವಿಲ್ಲದ ಯೈದನವನಿಯೊಳಗ ಮುಕುತಿಗೆ ಪ ನಿತ್ಯ ಶ್ರವಣ ಮಾಡಲೆಂದು ಬ್ಯಾಸರಾ | ಹ್ಯಾವ ಹೆಮ್ಮೆಯಲ್ಲಿ ಕಳಿಯ ವ್ಯರ್ಥವಾಸರಾ | ನೋವ ಮಾಡುತಿರಲು ತಾಪತ್ರಯದ ತೂರಾ | ಬಳಲ ಆವಗಿರುವ ಕೂಡಿಕೊಂಡು ಹರಿಯ ದಾಸರಾ 1 ನ್ಯೂನ ನೋಡದೆ ಪರರ ಸದ್ಗುಣವನೆ ಕೊಂಬನು | ದಂಭ | ಮಾನ ತೊರೆದು ಸ್ತುತಿಯ ನಿಂದ್ಯ ಸರಿಯ ಕಾಂಬನು | ಜ್ಞಾನದಿಂದ ಪಡೆದು ಗುರುಹಿರಿಯರಿಂಬನು | ತ್ವರಿತ | ಸ್ವಾನುಭವದ ಸೌಖ್ಯಸಾರ ಸವಿಯನುಂಬನು 2 ಬಲಿದು ಭಾವನಿಂದ ತಿಳಿದು ಸ್ವಹಿತುಪಾಯನು ದೃಢದಿ | ಹುಲು ಮನಿಜರಿದಿರ ಹೋಗಿ ದೆರಿಯ ಬಾಯನು | ತಳೆದು ವೇಷದಿಂದ ದಣಿಸವಾವ ಕಾಯನು | ಹೃದಯ | ದೊಳನವನ ನಲುವ ಗುರುಮಹಿಪತಿ ಪ್ರೀಯನು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಅವನೇ ನಿಜಯೋಗಿ | ವಿರಾಗಿ | ಭೋಗಿ 1 ದಾವನ ನೋಟದಲಿ | ಸಮ ವಿಷಮಾ | ಭಾವನೆಗಾಯಿತು ಸೀಮಾ 2 ಮಾಯಾ ಕಲ್ಪಿತದಾ | ಜಗಮರೆತಾ | ನ್ಯಾಯದಿ ಚಿದ್ಘನವರಿತಾ 3 ಮಂದಗೆಡನು ಚರಸೀ | ತಾನಾಗಿ | ಬಂದದನುಂಬನು ತ್ಯಾಗಿ 4 ಬಲ್ಲವಿಕಿಲಿ ಬಿಗಿಯಾ | ದಾವನು | ಎಲ್ಲರಿಗ್ಯಾಗಿಹ ಹರಿಪ್ರಿಯನು5 ಮಹಿಪತಿ ಸುತ ಪ್ರಿಯನಾ | ತಿಳಿವಿಕೆಯಾ | ಸೋಹ್ಯವ ತಿಳಿದನು ನೆಲಿಯಾ6
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಅಷ್ಟಮಠದ ಯತಿಗಳು ನೋಡಿ ದಣಿದವೆನ್ನ ಕಂಗಳು ಉಡುಪಿಯಲ್ಲಿರುವ ಅಷ್ಟಮಠದ ಶ್ರೀಪಾದಂಗಳವರ ಪ. ಸುಧಿಂದ್ರತೀರ್ಥ ಗುರುವರ್ಯರು ಬಂದ ಭಕ್ತರಿಗೆ ಕರುಣಾಮೃತ ಮಳೆಗರೆವರು ಶ್ರೀಹರಿಯ ತೋರುವರು ನೇಮದಿಂದಲಿ ಇವರ ನಾಮ ನೆನೆದರೆ ಸ್ವಾಮಿ ಶ್ರೀರಾಮನು ಪ್ರಸನ್ನನಾಗುವನು 1 ವಿಭುದಪ್ರಿಯತೀರ್ಥ ಗುರುವರ್ಯರು ಬಂದಾ ದುರ್ಜನರ ಮನವನು ಜಯಿಸುವರು ಮಹಾನುಭಾವರು ತರ್ಕನ್ಯಾಯ ವೇದಾಂತ ನಿಪುಣರು ಮಹಾಗುಣವಂತರು 2 ವಿದ್ಯಾಪುಣ್ಯತೀರ್ಥ ಶ್ರೀಪಾದಂಗಳವರು ಬಂದ ಸೇವಕರಿಗೆ ಬ್ರಹ್ಮವಿದ್ಯಾ ಪಾಲಿಸುವರು ರ್ದುಜನರ ದುರ್ಬುದ್ಧಿ ಒದ್ದಿ ಕೆಡಹುವವರು 3 ವಿಶ್ವೇಂದ್ರತೀರ್ಥರು ಈ ಗುರುವರ್ಯರು ವಾದಿರಾಜರ ಪೂಜಿಸುವರು ಜಗಕೆ ಸುಖವ ಸುರಿಸುವರು ಭೂತಪ್ರೇತಪಿಶಾಚಾದಿ ಮಾಡುವರು ಭಕ್ತರಘ ಕಡಿವರು4 ಇವರು ಭವಸಮುದ್ರವ ನೀಗಿಸುವರು ಶಿಷ್ಯರಿಗ್ಹರುಷ ಪಡಿಸುವುದು ಆನಂದದಿಂದಲ್ಲಿ ಹೃನ್ಮಂದಿರದಲಿ ಇಂದಿರೇಶನ ನೋಡುವರು 5 ರಘುಮಾನ್ವತೀರ್ಥ ಗುರುವರ್ಯರು ಲೋಕಮಾನ್ಯರು ಭಕ್ತರಿಗತಿಪ್ರಿಯರು ಮಹಾನುಭಾವರು ಅನ್ನದಾನದಲಿ ದೈನ್ಯರು ಆನಂದ ಭರಿತರು ಸುರರಿವರು 6 ಲಕ್ಷ್ಮೀಂದ್ರತೀರ್ಥ ಶ್ರೀಗಳವರು ಇವರು ತಮ್ಮ ತುಷೆಯೊಳಗಿಟ್ಟುಕೊಂಡು ರಕ್ಷಿಸುವರು ಲಕ್ಷ್ಮೀರಮಣನ್ನ ಪಾದಾ ಅಪೇಕ್ಷೆಯ ಮಾಡುಸುವರು ಹರಿಯ ಭಜಿಸುವರು 7 ವಿಶ್ವಮಾನ್ಯತೀರ್ಥ ಈ ಗುರುವರ್ಯರು ಬಂದ ಭೂಸುರರಿಂದ ಅನುವಾದ ಮಾಡುವರು ನೋಡುವರಿಗಾನಂದ ಪಡಿಸುವರು ಸುಜ್ಞಾನ ಯತಿವರ್ಯರು 8 ಅಷ್ಟಮಠದ ಯತಿಗಳ ಮಹಿಮೆಯನ್ನು ನಿಷ್ಠೆಯಿಂದಲಿ ಪೇಳುವನು ಅವನು ಸುರನು ಇವರ ದೋಷಿ ಎಂದವರನೇ ನರಕಾಧಿ ಬಾಧಿಸುವುದು ಕೃಷ್ಣನ ಪೂಜಿಸುವರು 9
--------------
ಕಳಸದ ಸುಂದರಮ್ಮ
ಅಸಾಧಾರಣ ವಿಠಲ ನೀ ಸಲಹೊ ಇವಳಾ |ಈಶಾದಿ ದಿವಿಜೇಡ್ಯ | ಶ್ರೀರಾಮಚಂದ್ರಾ ಪ ವಿಶ್ವ ಮೂರುತಿಯೇ |ಮೀಸಲ ಮನದಲಿರೆ | ನೀ ಸ್ವಪ್ನ ಸೂಚಿಸಿದೆಏಸು ಕರುಣವೊ ನಿನಗೆ | ದಾಸ ಜನರಲ್ಲೀ1 ಪರಿಪರಿಯ ಭವಣೆಗಳ | ಪರಿಹರಿಸಿ ಭಕ್ತಳಿಗೆಪೊರೆಯೊ ಕರುಣಾವನಧಿ ನರಹರಿಯೇ ಸ್ವಾಮೀ |ತರತಮದ ಜ್ಞಾನ ಸ | ದ್ವೈರಾಗ್ಯ ಭಕುತಿಯನುಕರುಣಿಸೀ ಪೊರೆ ಇವಳ | ಮರುತಾಂತರಾತ್ಮ 2 ಪಂಚಾತ್ಮಕನೆ ಪ್ರಾ | ಪಂಚ ಸುಖದೊಳಗೆ ತವಸಂಚಿಂತನೆಯ ಕೊಟ್ಟು | ಕಾಪಾಡೊ ಹರಿಯೇಪಂಚಭೇದವು ಅಂತೆ | ನೀಚೋಚ್ಚ ಕ್ರಮ ತಿಳಿಸೀವಾಂಛಿತಾರ್ಥದ ಕಳೆಯೊ | ಸಂಚಿತಾಗಮವಾ 3 ಸೃಷ್ಟಾದಿಕರ್ತನೇ | ಕೃಷ್ಣ ಮೂರುತಿ ದೇವಭ್ರಷ್ಟಸಂಗವ ಕೊಡವೆ | ಶಿಷ್ಟರಲ್ಲಿಡಿಸೋ |ಇಷ್ಟ ಮೂರ್ತಿಯ ಮನದಿ | ಸ್ಪಷ್ಟ ತೋರುತ ಸಲಹೋಶಿಷ್ಟ ಜನ ಸದ್ವಂದ್ಯ | ವಿಷ್ಣು ಪ್ರಾರ್ಥಿಸುವೇ 4 ಗೋವರ್ಧನೋದ್ದರಗೆ | ಭಾವುಕರ ಪರಿಪಾಲಪಾವನಕೆ ಪಾವನನೆ | ಕಾವುದೀಕೆಯನುದೇವನೀನಲ್ಲದಲೆ | ಕಾವರನ್ಯರನ ಕಾಣೆಗೋವಿದಾಂಪತಿ ಗುರು ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಅಸುರ ಬಾಧಿಸುತಿರಲು ಋಷಿಗಳು ಸ್ತುತಿ ಮಾಡೆ ದಶರಥನ ಗರ್ಭದಲಿ ಜನಿಸಿ ಬಂದೆ 1 ಶಿಶುವಾಗಿ ಕೌಸಲೆಗೆ ಬಾಲಲೀಲೆಯ ತೋರ್ದು ಕುಶಲದಿಂ ನಾಲ್ವರ ಕೂಡೆ ಬೆಳೆದೆ 2 ಅಸುರರನೆ ಬಡಿದಟ್ಟಿ ಋಷಿಯ ಯಾಗವ ಕಾಯ್ದು ವಸುಧೆಯೊಳು ಶಿಲೆಯನ್ನು ಸತಿಯ ಮಾಡಿ 3 ಮಿಥಿಲ ಪಟ್ಟಣಕೈದಿ ಮೃಡನ ಧನುವನೆ ಮುರಿದು ಕರವ ಪಿಡಿದು 4 ಪಥದೊಳಗೆ ಬರುತ ಭಾರ್ಗವರೊಡನೆ ಹೋರಾಡಿ ದಶರಥಗೆ ಏಕೀಭಾವವನೆ ತೋರಿ 5 ಪರಮ ಹರುಷದಲಿ ಸಾಕೇತನಗರಿಗೆ ಬಂದು ಕಿರಿಯ ಮಾತೆಯ ಕಠಿಣ ನುಡಿ ಕೇಳಿ 6 ಚಿತ್ರಕೂಟಕೆ ಬಂದು ಕೃತ್ಯವೆಲ್ಲವ ನಡೆಸಿ ಭ್ರಾತೃ ಭರತನಿಗೆ ಪಾದುಕೆಯನಿತ್ತು 7 ವನದೊಳಗೆ ಸಂಚರಿಸಿ ಘನ ಕಾರ್ಯಗಳ ಮಾಡಿ ಹನುಮನ ಕಳುಹಿ ಮುದ್ರಿಕೆಯ ಕೊಡಲು 8 ಮಿತ್ರೆ ಜಾನಕಿಗರುಹಿ ರತ್ನ ಕೊಂಡು ಬರಲು ಶರಧಿ ಕಟ್ಟಿ 9 ದುಷ್ಟ ರಾಕ್ಷಸ ಕುಲವ ಕುಟ್ಟಿ ಬೇರನೆ ಸವರಿ ಸೃಷ್ಟಿಸುತೆ ಜಾನಕಿಯ ಅಗ್ನಿ ಹೊಗಿಸಿ 10 ಪಟ್ಟಣಕೆ ಬಂದು ಭರತನಿಗೆ ಪೇಳೆ ಅಷ್ಟಗಂಗೆ ಉದಕವನೆ ತಂದು 11 ಅಷ್ಟಋಷಿಗಳು ಎಲ್ಲ ಕೂಡಿ ಕೊಂಡು ಪಟ್ಟಾಭಿಷೇಕವನು ಮಾಡುತಿರಲಂದು 12 ಸೃಷ್ಟಿಯೊಳು ಜಗನ್ನಾಥವಿಠಲನಿಗೆ ಪುಷ್ಪ ವೃಷ್ಟಿಗಳನ್ನು ಕರೆದರಾಗ13
--------------
ಜಗನ್ನಾಥದಾಸರು