ಒಟ್ಟು 575 ಕಡೆಗಳಲ್ಲಿ , 72 ದಾಸರು , 509 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗುರುರಾಜ | ನಮಿಪರ ಸುರಭೋಜ ಗುರುರಾಜ ಪ. ವರತಂದೆ ಮುದ್ದುಮೋಹನರೆಂದೆನಿಸುತ ಮೆರೆಯುತ ಜಗದೊಳು ಪೊರೆಯುವ ಕರುಣಿ 1 ಅಜ್ಞತೆ ತೊಲಗಿಸಿ ಸುಜ್ಞತೆ ಕೊಡುತಲಿ ವಿಘ್ನವ ತರಿಯುವ ಪ್ರಾಜ್ಞ ಮೂರುತಿಯೆ 2 ಸರಸಿಜಾಕ್ಷನ ಪದ ಹರುಷದಿ ಭಜಿಸುವ ಪರಮಪ್ರಿಯರು ಎಂದು ಬಿರುದು ಪೊತ್ತಿಹರೆ 3 ನಾಗಶಯನನಿಗೆ ಭೋಗವಪಡಿಸುವ ಆಗಮಜ್ಞರೆ ನಿಮಗೆ ಬಾಗುವೆ ಸತತ 4 ಸಾಸಿರ ಫಣೆಯಿಂದ ಸೂಸುವ ಕಾಂತಿಯೊಳ್ ವಾಸವ ವಿನುತ 5 ದೇವತಾಂಶದ ಗುರು ಪವಮಾನಿಗೆ ಪ್ರಿಯ ಭಾವಿಸಿ ಭಜಿಪರ ಕಾವ ಕರುಣಾಳು 6 ಶಾಂತಚಿತ್ತದಿ ಬಹು ಸಂತೋಷಪಡುತಲಿ ಅಂತರಂಗದಿ ಹರಿಯ ಚಿಂತಿಸುತಿರುವ 7 ಉದ್ಭವಿಸಿ ಜಗದಿ ಅಧ್ಭುತ ಮಹಿಮೆಯ ಒಬ್ಬೊಬ್ಬರಿಗೆ ತೋರಿ ಹಬ್ಬಿಪೆ ಹರುಷ 8 ಸೃಷ್ಟೀಶ ಗೋಪಾಲಕೃಷ್ಣವಿಠ್ಠಲನನು ದೃಷ್ಟಿಗೆ ತೋರಿಸಿ ಕಷ್ಟ ಬಿಡಿಸಿರಿ 9
--------------
ಅಂಬಾಬಾಯಿ
ಗುರುವಿನ ಧರ್ಮ ಕೋರಾಣ್ಯದ ಭಿಕ್ಷಅರಿತು ನೀಡಲು ಮೋಕ್ಷ ಪ ಮರೆತು ಬಿಟ್ಟರೆ ಕಪಾಳ ಮೋಕ್ಷಯಮನಲ್ಲಾಹೋದು ಶಿಕ್ಷ ಅ.ಪ. ಖಂಡುಗ ಜೀವವ ಕೈಲ್ಹಿಡಕೊಂಡುಮಂಡೆ ಬಾಗಿ ನಿಮ್ಮಂಗಳದೊಳಗೆಅಂಡಲೆಯಲು ಮೋರೆ ಹಿಂಡಿ-ಕೊಂಡರೆ ಯಮ ದಂಡನೆ ತಪ್ಪದೋ 1 ಜಂಗಮರು ಜಗತ್ಪಾವನರುಲಿಂಗಾಂಗಿಗಳು ನಿಸ್ಸಂಗಿಗಳುಹಿಂಗದೆ ಸೀತಾಂಗನೆ ಭರ್ತನ ಪದಉಂಗುಟ ತೊಳೆದು ಅಗ್ಗಣಿ ಧರಿಸಿರೋ 2 ಐವತ್ತಾರು ದೇಶದ ಒಳಗೆ ಇಪ್ಪತ್ತೊಂದುಸಾವಿರದಾರ್ನೂರುಕೈವಲ್ಯ ಸಾಧನ ನಮಗಿರಲು ಭಯ-ವೆತ್ತಣದೋ ಮೋಹನ್ನ ವಿಠ್ಠಲ 3
--------------
ಮೋಹನದಾಸರು
ಗುರುವೆ ನಮ್ಮ ತಾಯಿ ತಂದೆ | ಗುರುವೆ ನಮ್ಮ ಬಂಧುಬಳಗಗುರುವೆ ನಮ್ಮ ಸರ್ವಸ್ವವು ಗತಿಗೋತ್ರರಯ್ಯಾ ಪ ತಂದೆ ತಾಯಿ ಮಗುವಿಗಾಗಿ | ನೊಂದಿ ಬಳಲಿ ಸಾಕುವಂತೆಎಂದೆಂದು ಅವರೆ ನಮ್ಮ ಸದುಪದೇಶದೀ |ಬಂಧನಕ್ಕೊಳಗಾಗದಂತೆ | ಮಂದರೋದ್ಧರನ ನಾಮಅಂದದಿಂದ ಬೋಧಿಸುತ್ತ | ಉದ್ಧರಿಸುವರಯ್ಯಾ 1 ಮುದ್ದು ಮೋಹನದಾಸರಿಂದ | ಬದ್ಧಶಿಷ್ಯರೆನಿಸಿಕೊಂಡುಶುದ್ಧರು ಅವಧೂತರು | ಹರಿಯನ್ನೆ ಕಂಡೂ |ಗೆದ್ದು ತಾವು ಬಂಧದಿಂದ | ಉದ್ಧರಿಸಲನ್ಯರನುಸಿದ್ಧರಾಗಿ ಕರಿಗಿರೀಲಿ | ದಾಸಕೂಟ ನೆರೆಸೀದ 2 ಸನ್ನುತ ಪರ | ವಸ್ತುವೆಂದು ಬೋಧಿಸಿದ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಗುರುವೆ ನಿಮ್ಮನು ನಾ ಮೊರೆಹೊಕ್ಕೆನಲ್ಲದೆ ಅರಿಯೆ ಅನ್ಯರನಿನ್ನು ಪೊರೆಯಿರೀಗ ಪ. ಸಿರಿಯರಸನ ತೋರಿ ಗುರುವೆ ಕರುಣಿಸಿರಿ ತರತಮ್ಯ ತಿಳಿಸುತ ಹರಿಸಿರಿ ಭವದುಃಖಅ.ಪ. ಬಂದೆನು ಭವದೊಳು ನಿಂದೆನು ತಾಪದಿ ಹಿಂದು ಮುಂದರಿಯದೆ ಕುಂದಿದೆನು ಬಂದು ಕರುಣದಿ ಆನಂದವ ನೀಡುತ ನಂದಕಂದನ ಲೀಲೆಯಿಂದ ರಕ್ಷಿಸಿದಿರಿ1 ಮುಸುಕಿದ ಅಜ್ಞಾನ ಹಸನಾಗಿ ತೊಲಗಿಸಿ ಕುಶಲದ ಮತಿಯಿತ್ತು ಪಾಲಿಸುತ ಬಿಸಜಾಕ್ಷನು ದಯ ಎಸೆವ ಕರುಣದಿಯಿತ್ತು ಘಸಣೆಗೊಳಿಸದಲೆ ವಸುಮತಿಯೊಳು ಪೊರೆವ 2 ಕಷ್ಟವಪಡಲಾರೆ ಸೃಷ್ಟಿಯೊಳಗಿನ್ನು ತಟ್ಟದೆ ಎನ್ನ ಮೊರೆ ಮನಸಿಗೀಗ ಕೊಟ್ಟು ಅಭಯವನು ಘಟ್ಯಾಗಿ ಪೊರೆಯಿರಿ ಕೆಟ್ಟ ಕಲ್ಮಷ ಕಳೆದು ಸೃಷ್ಟಿಗೊಡೆಯನ ತೋರಿ 3 ತಲ್ಲಣಿಸುತಿಹೆ ಕ್ಷುಲ್ಲ ದೇಹದಿ ಬಂದು ಒಲ್ಲೆನು ಈ ದುಃಖಭವ ಎಲ್ಲ ಮನಸು ನಿಮ್ಮ ಪಾದದಲಿರುವುದು ತಲ್ಲಣಗೊಳಿಸದೆ ಪೊರೆಯಿರಿ ಗುರುದೇವ 4 ತಂದೆ ಮುದ್ದುಮೋಹನವಿಠ್ಠಲನೆಂಬೊ ಇಂದಿರೇಶನ ಅಂಕಿತದಿ ಮೆರೆವೊ ಸುಂದರ ಗೋಪಾಲಕೃಷ್ಣವಿಠ್ಠಲನ ಎಂದೆಂದಿಗೂ ಮನಮಂದಿರದಲಿ ಕಾಂಬ 5
--------------
ಅಂಬಾಬಾಯಿ
ಗುರುವೇ ನೀ ಕರುಣಿಸದಿರಲಿನ್ಯಾರು ಕರುಣಿಪರೋ ಪ ಕರಿಗಿರಿಪುರ ತಂದೆ ಮುದ್ದು ಮೋಹನ್ನ ಅ.ಪ. ಮೊರೆಹೊಕ್ಕ ಜನರ ಕೈ ಬಿಡುವರೇನೋಚರಣ ಯುಗ್ಮಕೆ ನಿನ್ನ ನಮಿಸುವೆನೋ |ಭಾರ ವಹಿಸಿ ಬೇಗ ಸಲಹಬೇಕೋ |ಜರೆಯು ನುಂಗುವ ಮುನ್ನ ಪೊರೆಯ ಬೇಕೋ 1 ಭವ ರೋಗವ ಕಳೆಯೋಉನ್ನತ ಪದವಿಗೇರುವ ದಾರಿ ತೋರೋ |ಘನ್ನ ಮಹಿಮ ನಿನ್ನ ಹೊರತು ಮತ್ಯಾರೋಎನ್ನ ಅಂಕಿತ ನಾಮ ಹರಿಯನ್ನ ತೋರೋ 2 ಹಂಬಲ ಕೊಡು ಎನಗೆ ಹರಿಪಾದದಲ್ಲೀನಂಬಿ ತುತಿಪೆನಯ್ಯ ತವ ಪಾದದಲ್ಲೀ |ಬಿಂಬ ಗುರು ಗೋವಿಂದ ವಿಠ್ಠಲನಲ್ಲಿಹಂಬಲ ಸ್ಥಿರವಾಗಿ ನಿಲಿಸೋ ನೀನಲ್ಲೀ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಗೋಪಾಲಕೃಷ್ಣರಾಯ ತಾಪತ್ರಯಗಳೆಲ್ಲ ನೀ ಪರಿಹರಿಸು ಜೀಯ್ಯಾ ಪ ವಿದ್ಯಾಶ್ರೀ ಸಿಂಧುತೀರ್ಥ ಶುದ್ಧ ಪದ್ಧತಿಯಿಂದ ಶುದ್ಧ ಪೂರ್ವಕ ನಿನ್ನ ಭಜಿಪೆನು ಅನುದಿನ ಮುದ್ದುಮೋಹನ ನೀನು ತಿದ್ದಿ ಸರ್ವರ ಹೃದಯ ಬದ್ಧನಾಗಿರುತಿ ಪ್ರಸಿದ್ಧ ಮೂರುತಿ ವೇಣು 1 ಸುರಪನ ಗರ್ವವ ಹರಣವ ಮಾಡಿ ನೀ ವರವಿತ್ತೆ ಕಾಳಿಂಗ ಉರಗನಿಗೆ ಸುರರ ವೃಂದಗಳೆಲ್ಲ ಪೊರೆವುತ ಸರ್ವದಾ ವರ ಕಲ್ಪತರುವೆಂದು ಮೆರೆಯುವಿ ಧರೆಯೊಳು 2 ಗಿರಿಯನು ಪೊತ್ತು ನೀ ಪೊರೆದಿಹ ತುರುಗಳ ಮರೆಯೋದು ಯನ್ನನು ಸರಿಯೆನೊ ಹರಿಯೆ ಶರಣ ರಕ್ಷಕ ಬೇಗ ಕರುಣಾಳು ಕಾಯಯ್ಯ ಶ್ರೀವತ್ಸಾಂಕಿತನಾದ ವರಜಾರಚೋರ ವೇಣು 3
--------------
ಸಿರಿವತ್ಸಾಂಕಿತರು
ಗೌರೀಕರಪಂಜರಕೀರ ಜೋ ಜೋ ಶೌರಿ ದಯಾರಸಪೂರನೆ ಜೋ ಜೋ ಧೀರ ಮುಕ್ಕಣ್ಣ ಕುಮಾರನೆ ಜೋ ಜೋ ದಾರಿದ್ರ್ಯ ದುಃಖ ಪ್ರಭಂಜನ ಜೋ ಜೋ 1 ಸಾವಿರನಯನ ತುರಂಗನೆ ಜೋ ಜೋ ದೇವರಾಜಸಂಭಾವಿತ ಜೋ ಜೋ ತಾವರೆನಯನ ಸನ್ಮೋಹನ ಜೋ ಜೋ ಸೇವಕವಿಬುಧಸಂಜೀವನ ಜೋ ಜೋ 2 ಪೃಥ್ವಿಯೊಳ್ವಾವಂಜೆ ಕ್ಷೇತ್ರಾಧಿವಾಸ ಕರ್ತ ಲಕ್ಷ್ಮೀನಾರಾಯಣಪಾದ ದಾಸ ಭೃತ್ಯವರ್ಗವ ಕಾವ ಭವಹರ ಜೋ ಜೋ ಕಾರ್ತಿಕೇಯ ಕೃತಕೃತ್ಯನೆ ಜೋ ಜೋ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಗೌರೀಕರಪಂಜರಕೀರ ಜೋ ಜೋ ಶೌರಿ ದಯಾರಸಪೂರನೆ ಜೋ ಜೋ ಧೀರ ಮುಕ್ಕಣ್ಣ ಕುಮಾರನೆ ಜೋ ಜೋ ದಾರಿದ್ರ್ಯ ದುಃಖ ಪ್ರಭಂಜನ ಜೋ ಜೋ 1 ಸಾವಿರನಯನ ತುರಂಗನೆ ಜೋ ಜೋ ದೇವರಾಜಸಂಭಾವಿತ ಜೋ ಜೋ ತಾವರೆನಯನ ಸನ್ಮೋಹನ ಜೋ ಜೋ ಸೇವಕವಿಬುಧಸಂಜೀವನ ಜೋ ಜೋ 2 ಪೃಥ್ವಿಯೊಳ್ವಾವಂಜೆ ಕ್ಷೇತ್ರಾಧಿವಾಸ ಕರ್ತ ಲಕ್ಷ್ಮೀನಾರಾಯಣಪಾದ ದಾಸ ಭೃತ್ಯವರ್ಗವ ಕಾವ ಭವಹರ ಜೋ ಜೋ ಕಾರ್ತಿಕೇಯ ಕೃತಕೃತ್ಯನೆ ಜೋ ಜೋ 3
--------------
ತುಪಾಕಿ ವೆಂಕಟರಮಣಾಚಾರ್ಯ
ಘನವೇನೋ ನಿನಗಿದು ಗುಣವನದೀ | ಮಾನದ ಮಾನ್ಯ ||ಮನವ ನಿನ್ನಲಿ ನಿಲ್ಲಿಸೋ ಪ ತನುಮನ ಸಕಲ ಸಾಧನವೆಲ್ಲ ಎನಗಿತ್ತುಮನ ಆದಿ ಕರಣವ ಎನಗೊಶಪಡಿಸದೆ ಅ.ಪ. ಅಚ್ಯುತ ಮೂರ್ತಿ | ಸತತ ಎನ್ನಲ್ಲಿ ಇದ್ದುಹಿತವ ಮಾಡಿದೆ ಎನ್ನ | ಹತಭಾಗ್ಯನೆನಿಪುದು 1 ಹೀನ ಬುದ್ಧಿಯ ಕಳೆಯದೇ | ಮುನಿಜನ ವಂದ್ಯಾ |ವಾನರ ನಾನಾದೆ ಹರಿಯೇ ||ಶ್ವಾನ ಮತಿಯ ನೀಗಿ | ಧ್ಯಾನ ಸಾಧನ ನೀಡೋ |ಗಾನ ಲೋಲನೆ ನಿಧಾನ ಮಾಡಲಿ ಬೇಡ 2 ತಂದೆ ಮುದ್ದು ಮೋಹನರೂ | ಮಂದನು ಎನ್ನ |ತಂದೆ ನಿನ್ನಡಿಗ್ಹಾಕಿದರೊ ||ಇಂದಿರೆಯರಸ ಗುರು | ಗೋವಿಂದ ವಿಠಲಯ್ಯ |ಛಂದಾಗೀಯೆನ್ನ ಮನ | ಮಂದಿರದೊಳು ನಿಲ್ಲೊ 3
--------------
ಗುರುಗೋವಿಂದವಿಠಲರು
ಚದುರಂಗನಾಡುವ ನೋಡಿರೇ | ಮದನಮೋಹನ ಕೃಷ್ಣ ನಿಜ ಶಕ್ತಿಯೊಡನೆ ಪ ಭೂಮಿಯ ಹಲಗಿಲಿ ಕಾಯದ ಮನೆಯೊಳು | ವ್ಯಾಮೊಹಿ ಜೀವನು ಅರಸನಿಲ್ಲಿ | ನೇಮದಿ ಪುಣ್ಯ ಪಾಪದ ಪಲಗಳಿಸುವ | ಈ ಮನೆವೆಂಬ ಪ್ರಧಾನಿಯನಿಟ್ಟು 1 ಪ್ರಾಣಪಾನವೆಂಬ ಎರಡಾನೆ ನಿಲ್ಲಿಸಿ | ನಾನು ನನ್ನದು ಎಂಬ ಒಂಟೆಗಳ | ಜಾಣತನದ ಬುದ್ದಿ ಚಿತ್ತದ ಕುದುರೆ | ನಿ ಧಾನ ದಶೇಂದ್ರಿಯ ಕಾಲಾಳಿನಿಂದ 2 ಕಾಲಸೂತ್ರದಿ ನಡಿಸ್ಯಾಡುತ ಕೃತಕರ್ಮ | ಮೂಲದಿ ಹಾನಿವೃದ್ದಿಗಳಿಹವೋ | ಮೇಲೆ ಯಶಾಪಯಶ ಪಾಲಿಗೆ ತರುವ | ನೃ ಪಾಲಕ ಮಹಿಪತಿನಂದನ ಜೀವನ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಚಿಂತಯಾಮಿ | ರಘುರಾಮಂ | ಸುತ ಕೌಸಲ್ಯೋದರಜಂ |ಸಂತತ ಶರಣರ ಕೃಪಾ | ಪಾಂಗವೀಕ್ಷಾ ಹಸಿತಂ ಪ ಸರಿ ಗ ಸರೀ | ಮಪ ಧಪ ಧಾ | ರಿಸ ನಿಧ ನಿಧ | ಪಮ ಗರಿ ಸದದ್ರುತ - ಸರಿಮಾ ಗರಿ | ಮಪ ದಾಪಮ | ಪಧಸಾ ನಿಧ | ನಿಧ ಪದಪಧ ||ಗರಿ ಸಧ | ``ರಿ ಸ ಧಾ ಸ | ಧಾ ಗ ರಿ ನಿಧಮ | ಗರಿಸಧ | ರವಿ ಕುಲಾನ್ವಯತಿಲಕಂ | ಋಷಿ ವಿಶ್ವಾಮಿತ್ರ ಕೃತಹವನ ಹೋಮ, ಬಾಧಾಗ್ರಸ್ತ | ವಿಮೋಚನ, ಶೀಲಂಅವನಿಜೆ ವೈವಾ, ಹಕ್ಕಾನೀತಂ | ಲಕ್ಷ್ಮಣ ಸಹ, ವಿಧಿಲಾಗ5ನಂ |ಶಿವಧನುವಂ, ಮುರಿದು ರಾಜ | ರುಗಳ ಗರ್ವಹರ | ಶ್ರೀರಾಮಂ 1 ಮಗ ಸಾ ನಿóದ | ನಿóಸಾ ರಿಗಮ | ನಿಧ ಮಾಗರಿ | ಗಮ ಪಗರಿಸದ್ರುತ - ನಿಧನಿಸ ರಿಗಮ ಧನಿಪಧ | ನಿಸ ನಿಧ ನಿಸರಿಗ ಮಗಸನಿ ||ಗರಿಸಧ, ರಿಸ ಧಾ, ಸ ಧಾಆ, ಗರಿ || ನಿದಮ | ಗರಿಸಧ || ರಾಗ - ಧನ್ಯಾಸಿ : ಅನುಜ ಸತಿಸಹ | ವನವಾಸಂ |ನಿಶಿಚರ ಹನನ | ಶೂರ್ಪನಖಿ | ನಾಸಛೇದಂ | ಚರಿತಂ 2 ರಾಗ :ಧಾನಿಸಿ :ನಿಸ ಗಾಮ ಪ | ಗಮ ಪಾನಿಸ | ರಿಸ ರಿನಿ ಸಪ | ಧಪಗಾರಿಸನೀ ಸ ಗ ಮಪ ಗಾ ಮಪನಿಸ | ಪಾ ನಿಸ ಗರಿ ಸನಿಧಪ ನಿಸಗರಿಸಧಾ, ಆರಿಸ ಧಾಸ, ಧಾ, ಗರಿ ನಿಧಮ ಗರಿಸದ || ರಾಗ - ಪರ | ಮಾನುಗ್ರಹ ಶೀಲಂ ರಾಮಂ 3 ಗಾ ಪ ಗರಿ, ಗರಿ ಸಧಸರಿ | ಗಾಪ ದಸದಪ ಗರಿ ಸರಿಗಪಗಗ, ರಿಸ | ರಿಗ, ರಿರಿಸ ಧ | ಸರಿಗರಿ ನಪಗಪ ಧಪಧಸ |ಗರಿಸಧಾ, ಆರಿಸ ಧಾ, ಸದಾ, ಗರಿನಿಧಮ, ಗರಿಸದ || ರಾಗ ಪೂರ್ವಕಲ್ಯಾಣಿ : ಲೇಸು ಕಪಿಗಳ ನಿಚಯ | ಸೀತಾಕೃತಿ ಹುಡುಕುತ |ಆ ಸಮೀರನು | ವಾರಿಧಿಯನು | ಹಾರಿ ಲಂಕೆಯ ಪುರದಲ್ಲಿಅಣುರೂಪದಿ ಹುಡುಕುತ | ಸೀತಾಕೃತಿಯ | ಕಂಡನುದೇಶ ಪುಚ್ಛಾಗ್ನಿಯಲಿ | ದಹಿಸಿ ಸೀತೆ | ವಾರ್ತೆ ಪೇಳಿದನು 4 ಗಾಮಗರಿಸ | ಧ ಸರಿ ಗಮ | ಪಾ ಧಪಸ | ನಿಧಪ ಮಗರಿ |ಗಮಪ ಮಾಪಗಾ | ಮರೀಗ | ಸಾರಿಗಆಮ ಪಧ ಪಸಾ ನಿ |ಗರಿಸಧಾ, ಆಸಧಾ ಸಧಾ ಗರಿ ನಿಧ ಮ ಗರಿಸಧ || ರಾಗ :ಮುಖಾರಿ : ಸತಿ ಪರಿವಾರ ಪುಷ್ಪಕವಿ | ಸ್ವಪುರ ಖೊರಟ 5 ಪಾ ಮಗರಿ | ಸಾ ನಿಧ ಸರಿ | ಮಾಗರಿಸ | ರಿಮ ಪದ ನಿಧ ಸಾ ಸನಿ ಧಪ ಪಾ | ಮಗರಿಸ | ನಿಧಸರಿ ಮಪನಿಧ ಮಪಧಸ ||ಗರಿಸಧಾ ಆರಿಸ ಧಾಅಸ | ಧಾಅ ಗರಿ ನಿಧಮ ಗರಿಸಧ || ರಾಗ ಮಧ್ಯಮಾವತಿ : ಸುರರು ಭಾರ ಕಳೆದ5ುರು ಗೋವಿಂದ ವಿಠಲ 6 ರೀ ಮರಿ ಮಪ | ನೀ ಪಮ ಪನಿ ಸಾ ರಿಸನಿ | ಪಪ ಮಮರಿ ಸ || ರೀಪಮ ರಿಸನಿಪ ರಿಮಪಾ || ರಾಗ :ಪೂರ್ವಕಲ್ಯಾಣಿ || ಧಪ ಸಾ ನಿಧಪಮ | ಮಪಗರಿರಾಗ :ಮೋಹನ || ಸರಿಮಾ ಗರಿ ಸರಿಗಾ | ಪಗರಿ ಸರಿ ಪದಸ ರಾಗ :ಮುಖಾರಿ | ರೀ ಸದಾ ಪದಪ ಗಾರಿ ಸರಾಗ :ನಾಟಿಕುರಂಜಿ || ನಿಸ ಮಗ ಧನಿ ಪಧನಿಸ ರಾಗ : ಸಾವೇರಿ || ಗರಿ ಸದಾ ರಿಸ ಧಾ ಸ | ಧಾ ಗ ರಿ ನಿದಮ ಗರಿಸದ
--------------
ಗುರುಗೋವಿಂದವಿಠಲರು
ಚೆಲ್ವೇರಾರತಿಯ ತಂದೆತ್ತಿರೆ ಪ ಹುಟ್ಟಿದಳಾ ಕ್ಷೀರಸಾಗರದಲಿ ಸ- ಮಸ್ತ ಜನರಿಗೆ ಸುಖವ ನೀಡುತ ಶ್ರೇಷ್ಠರೊಳಗೆ ಜೇಷ್ಠಾದೇವಿ ಶ್ರೀನಾಥನ ಪಟ್ಟದರಸಿ ಮುದ್ದು ಮಾಲಕ್ಷ್ಮಿಗೆ 1 ಮುದ್ದು ಮೋರೆಗೆ ತಕ್ಕ ಮುಖುರ್ಯ ಬುಲಾಕ- ನಿಟ್ಟ ್ವಜ್ರದ ಬುಗುಡಿ ವೈಯಾರದಿಂದ ತಿದ್ದಿ ಬೈತಲು ಜಡೆಬಂಗಾರ ರಾಗಟೆ ಪದ್ಮನಾಭನ ರಾಣಿ ಮಾಲಕ್ಷ್ಮಿಗೆ 2 ವಾಲೆ ಸರಪಳಿ ಚಳತುಂಬು ಚಿನ್ನದ ಸರಿಗೆ ಮೋಹನ್ನಮಾಲೆ ಕಣ್ಣಕಾಡಿಗೆ ಹಚ್ಚಿ ಕಸ್ತೂರಿ ಕುಂಕುಮ ಚೆನ್ನಾರ ಚೆಲುವೆ ಶ್ರೀ ಮಾಲಕ್ಷ್ಮಿಗೆ 3 ಸೆಳೆನಡುವಿಗೆ ತಕ್ಕ ಬಿಳಿಯ ಪೀತಾಂಬರ ನಳಿತೋಳಿನಲಿ ನಾಗಮುರಿಗೆ ವಂಕಿ ಕಮಲ ದ್ವಾರ್ಯ ಹರಡಿ ಕಂಕಣನಿಟ್ಟು ಕಳೆಯ ಸುರಿವ ಚೆಲ್ವೆ ಮಾಲಕ್ಷ್ಮಿಗೆ 4 ಗರುಡವಾಹನನ್ಹೆಗಲಿಳಿದು ಶ್ರೀನಾಥನ ಹರಡಿ ಕಂಕಣ ಕರವ್ಹಿಡಿದುಕೊಂಡು ಮುಡಿದ ಮಲ್ಲಿಗೆ ಪಾರಿಜಾತಗಳುದುರುತ ನಡೆದು ಬರುವೊ ಮುದ್ದು ಮಾಲಕ್ಷ್ಮಿಗೆ 5 ಪಾದದಿ ರುಳಿ ಗೆಜ್ಜೆ ನಾದ ಝೇಂಕರಿಸುತ ಆದರದಿಂದೆನ್ನ ಮನೆಗೆ ಬಂದು ಶ್ರೀಧರ ಭೀಮೇಶಕೃಷ್ಣನೆದೆಯ ಮ್ಯಾಲ್ವಿ- ನೋದದಿ ಕುಳಿತಿದ್ದ ಮಾಲಕ್ಷ್ಮಿಗೆ 6
--------------
ಹರಪನಹಳ್ಳಿಭೀಮವ್ವ
ಜಗಜೀವನಾ ಪ ಶಾಮಸುಂದರ ಮುನಿಜನ ಮಾನಸ ಪಂಕಜ ಲೋಚನಾ ದಾಮೋದರ ಗೋಪೀಜನ ಮೋಹನಾ ಅಹಿಲ್ಯಾ ಶಾಪ ವಿಮೋಚನಾ 1 ಮಾಧವ ಹರಿ ಶ್ರೀ ವತ್ಸಾಂಕ ಜನಾರ್ಧನಾ ಯಶೋದಾ ನಂದನ ಯದುಕುಲ ಮಂಡಲಾ ಕಂಸ ಚಾಣೂರ ಮರ್ದನಾ2 ಸರಸಿಜ ಭವಭೆವ ಸುರಪತಿ ಪೂಜಿತ ಗುರುವರ ಮಹಿಪತಿ ನಂದನ ಸಾರಥಿ ಭವ ಭಂಜನಾ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಜಗದಯ್ಯಾ ಜಗದಯ್ಯಾ ಜಗತ್ರಾಣ ಜಗಜೀವನ ಪಾವನ ಪ ಸಾವು ಹುಟ್ಟುಯೆಂಬ ಹೇಯಕುಣಿಯೊಳು ಬಿದ್ದು ನೋಯಲಾರದೆ ಬಲು ಬಾಯಬಿಡುತ ನಿಮ್ಮ ಪಾವನ ಪಾದಕ್ಕೆ ಮರೆಯಬಿದ್ದೆನಯ್ಯ ಸೇವಕಜನರಯ್ಯಾ ಕಾಯೋ ಎನ್ನಾರ್ಯ 1 ಪರಿಭವಶರಧೆಂಬ ಉರಿವಕಿಚ್ಚಿನೊಳು ಪರಿಪರಿಮರುಗುತ ಕರುಣಾಂಬುಧಿ ನಿನ್ನ ಅರಿವಿಟ್ಟರಿದೆ ವರ ಪರಮ ಬಿರುದುಗಳು ಶರಣಾಗತರ ಪ್ರಿಯಕರ ಪಿಡಿದೆತ್ತಯ್ಯ 2 ವಿಷಯಲಂಪಟವೆಂಬ ವ್ಯಸನಕೂಪದಿ ಬಿದ್ದು ಬಸವಳಿದನುಪಮ ದೆಸೆಗೆಟ್ಟೆ ಕುಸುಮಾಕ್ಷ ಶಿಶುವಿನ ತವಪಾದ ಅಸಮದಾಸಜನ ರೊಶದಿ ಇಟ್ಟು ಪೊರೆ ಕುಶಲಮತಿಯ ನೀಡಿ3 ಭವಭವದಲಿ ಬೇಡುವೆನಭವನೆ ಬಾಗಿ ದಯಪಾಲಿಸಿ ಸ್ಥಿರಜ್ಞಾನಸುಪದವ ಭವಗುಣಹಿಂಗಿಸಿ ದಿವನಿಶೆನ್ನುವುದಕೆ ಸವಿನಾಮವಿತ್ತು ಕಾಯೋ ಭವರೋಗವೈದ್ಯನೆ 4 ಮೂರರಿಂ ಗೆಲುವಿತ್ತು ಮೂರರಿಂದಾಂಟಿಸಿ ಮೂರರ ಮೋಹನಿವಾರಿಸು ದೇವ ಮೂರು ನಿನಗರ್ಪಿಸಿ ಸಾರಿಬೇಡುವೆ ನೀಡ ಪಾರಮೋಕ್ಷಪದ ಧೀರ ಶ್ರೀರಾಮಯ್ಯ 5
--------------
ರಾಮದಾಸರು
ಜಗದೀಶ ಜಗದೊಡೆಯ ಜಗಮೋಹನ ಬಗೆ ಕೇಳು ಭಜನ ಭಯದೂರಣ ಪ ಅಧಮ ಸಂಸಾರದ ನದಿಯದಾಂಟಿಸಿ ಎನಗೆ ಸದಮಲದ ಪದವಿಯನು ಮುದದೀಯೋದೇವ 1 ಮರವೆಯಿಂ ಗೈದಂಥ ದುರಿತಪರ್ವತ ತರಿದು ಪರಮನುಪಮಸುಜ್ಞಾನವನು ಕರುಣಿಸೈ ಹರಿಯೆ 2 ಭಕ್ತವತ್ಸಲ ನಿನ್ನ ಭಕ್ತಿಯಿಂ ಭಜಿಸುವೆನು ಕರ್ತು ಶ್ರೀರಾಮ 3
--------------
ರಾಮದಾಸರು