ಒಟ್ಟು 8803 ಕಡೆಗಳಲ್ಲಿ , 129 ದಾಸರು , 4024 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

--------ಹರಿಯೆನ್ನ ಕೂಡಿಸೊ ಬಿಡದಿನ್ನು ಕೂಡಿಸು ಕೃಪಾನಿಧಿಯೆ ಕೂಡಿಸೆನ್ನ ಧೊರಿಯೆ ಪ ಉದಯದಲಿ ಏಳುತಲಿ ಊರ್ವೀಶ ನಿಮ್ಮಸ್ಮರಣೆ ಹೃದಯದಲಿ ಅನುಗಾಲ ಉಚಿತನಾಗಿ ಪದುಮನಾಭ ನಿಮ್ಮ ಪಾದವನೆ ಪೂಜಿಸುವ ಸದಮಲ ಜ್ಞಾನಿಗಳ ಸಂಗದೊಳಗೆ ಎನ್ನ 1 ನಿತ್ಯನೇಮ ವ್ರತದಲ್ಲಿ ಬೇಕಾಗಿ ಇರುತಲಿ ಅತ್ಯಂತ ಪುರುಷ ಆನಂದದಲ್ಲಿ ಕರ್ತೃ ನೀನಲ್ಲದೆ ಸರ್ವೋತ್ತಮರು ದಾರೆಂದು ನಿತ್ಯ ನೀನೆಂದು ತಿಳಿಯುವ (ತಿಳಿಸುವ ) ಆತ್ಮಕರಸಂಗ 2 ಅನುದಿನವು ನಿಮ್ಮ ಧ್ಯಾನ ಮನದಲ್ಲಿ ಮರೆಯದೆ ದಿನಗಳನು ಕಳೆವಂಥಾ ದ್ವಿಜೋತ್ತಮರಾ ಅನುಸರಿಸಿ ಅವರನನು ಅತಿಮೋದದಿಂದ ಬೆರೆದು ವನಜನಾಭನೆ ನಿಮ್ಮ ಭಜನೆ ಮಾಡುವರ ಸಂಗ 3 ವೇದಶಾಸ್ತ್ರಾದಿಗಳ ಭೇದಗಳನರಿತು ಸತ್ಯ ಬೋಧಗುರು ಕರುಣದಲಿ ಪೂರ್ಣರಾಗಿ ಸಾಧು ಸಜ್ಜನರಾದಂಥ ಸತ್ಪುರುಷರಾ ಸಂಗ 4 ಉಪವಾಸವನೆ ಮಾಡಿ ಉಚಿತ ಕರ್ಮಗಳಿಂದ ತಪಗಳನೆ ಮಾಡುವಂಥ ಧನ್ಯಜನರಾ ಸುಫಲಂಗಳನೆ ಪಡೆದು ಸೂತುತಲಿ ಇರುವರಾ ಅಪರಿಮಿತ ಮಹಿಮ ನಿನ್ನ ಹಾಡಿ ಪಾಡುವರಸಂಗ 5 ಪರಮಾತ್ಮ ನಿನ್ನ ಮಹಿಮೆ ಭಾವದಲಿ ಶೋಧಿಸಿ ಪರಿಪರಿಯಲಿರುವಂಥ ಭಾವಜ್ಞರಾ- ಚರಣೆಯನು ಮಾಡಿ ನಿಮ್ಮ ಸೇವೆಯನು ಮಾಡುವಂಥ ಪರಮ ಭಕ್ತರಾದ ಪುಣ್ಯವಂತರ ಸಂಗ 6 ಗಂಗಾದಿ ಸಕಲ ತೀರ್ಥಂಗಳನು ಆಚರಿಸಿ ಅಂಗಾದಿ ದೋಷವ ಕಳೆದ ಅಧಿಕ ಜನರಾ ಸಂಗಸುಖ ಅಬ್ಧಿಯೊಳು ಸಂತತವು ಬೆರೆವಂಥರಂಗ ' ಹೊನ್ನ ವಿಠ್ಠಲ’ ರಾಯ ಗೋವಿಂದ 7
--------------
ಹೆನ್ನೆರಂಗದಾಸರು
-------ಅರಿಯೆ ----ನಡತಿ ಮಾರ್ಗವನೂ ಹೀನಮಾನವ ನಾನು ಯಂ ---- ಹರೇ ಪ ನಾನಾಯೋನಿಗಳಲ್ಲಿ ನಟಿಸಿನಟಿಸಿ ಇಲ್ಲದೆ ಇರೊ ವಿಧಾನ ಒಂದಲ್ಲದೆ 1 ದರಿ----ರ್- ಸರತಿ ತಿಳಿದಿನ್ನು ಧೀನ ರಕ್ಷಕ ನಿನ್ನ ದಿನಚರ್ಯ ವರ್ಣಿಸುವರ ಕಾಣುತಲೆ ವಂದಿಸಿ ಕಾಲುಹಿಡಿವದು ಅರಿಯೆ 2 ವೇದಾದಿ ಸಕಲವು ವಿದ್ಯಶಾಸ್ತ್ರವನರಿಯೆ ಮೇದಿನಿಯೊಳು ನಡೆವ ಸುಮಾರ್ಗ ನಾನರಿಯೆ ಗಾಧಿ ಬೋಧಿಗಳೀಗೆ ಒಳಗಾಗಿ ಈ ಪರಿಯೆಗಾಧೆಯೊಳಗೆ ಬಿದ್ದನ ಕೈ ಪಿಡಿಯೊಧೊರಿಯೆ 3 ಆಗ ಅಂತರಂಗದಾ ಭಾವನರಿಯೆ ನಾಗಶಯನ ನಿಮ್ಮ ನಾಮವೆಂಬುದು ಅರಿಯೆ ಕೃಪೆತೋರಿ ರಕ್ಷಿಸಯ್ಯಾ ಹರಿಯೆ 4 ಸಕಲಾವು ನೀನೆಂದು ಸಾರುವ ಧರೆಯಾ ಭಕ್ತವತ್ಸಲನೆಂಬ ಬಿರುದು ನಿಂದರಿಯಾ ಅಕಳಂಕ ಮಹಿಮ `ಹೊನ್ನವಿಠ್ಠಲನೆ’ ಪ್ರೀಯಾ ಮುಕುತಿದಾಯಕ ಆಲಸ್ಯನಾದವನ ಪೊರೆಯಾ 5
--------------
ಹೆನ್ನೆರಂಗದಾಸರು
------ಯು ಮಾಡಿದರು ಏನು ಹರಿಯೆ ಸ್ಪಷ್ಟ ನಿಮ್ಮ ಹರುಷರನು ಮುಟ್ಟುವ ಪರಿ-----ರದೆ ಪ ಹಗಳಿರಳು ಬಗೆ ಬಗೆಯ ಹಲವುÀ ಯೋಚನೆಮಾಡಿ ಸೊಗಸಾಗಿ ದೇಹವನು ಸಲುವದೊಂದೆ ನಿಗಮಗೋಚರ ನಿಮ್ಮ ನಾಮಧ್ಯಾನವು ತೊರೆದು ಭುಗಲಿಗೆ ಒಳಗಾಗಿ ಪರಿಪರಿ ವಿಧದಿಂದಾ 1 ನರಳುತ ನೀ ಎನಗೆ ಇನ್ನಿಲ್ಲವೆಂದು ಹೊರಳಿ ಹೊರಳಿ ದು:ಖ ಹೊಂದಿ ಬಿಡುವುದ ಒಂದೇ ಕರುಣಾ------- 2 ಕರುಣೆ ತೋರಿ ತೋರದೆ ಇನ್ನು ದುರುಳ ಬುದ್ಧಿಯ ಮಾಡಿ ಮೀರಿ ಒಬ್ಬರ ------------- ಮಾಡಿಬಾಳು--------- 3 ಫಣೆಯಲ್ಲಿ ಬರೆದಂಥ ಬರಹವು ತಪ್ಪದಿನ್ನು ನಾನು ಅಪೇಕ್ಷೆಗೆ ಒಳಗಾಗಿ ಬಹಳ----- ---ಲ್ಲದೆ ಉದರ ಧ್ಯಾಸಕ್ಕೆ ಒಳಗಾಗಿ ಮನಸು ನಿಲ್ಲದೊ ಮರಳಿ ಮರುಳುತಲಿ ಇನ್ನೂ 4 ಇಂಥ ಪರಿ-----ಗೆ ಒಳಗಾಗಿ ಭ್ರಾಂತನಾಗಿ ನಿಮ್ಮ ಚರಣ ಭಜನೆ ಮರೆದು ಸಂತತಯಿರುವುದು ವಂದೇ ನಾಥ ----- ಕಂತುಪಿತನಾಥ ಶ್ರೀ ಘನಹೆನ್ನವಿಠ್ಠಲಾ 5
--------------
ಹೆನ್ನೆರಂಗದಾಸರು
(1) ಸತಿ-ಪತಿ ಭಾವದ ಸ್ತುತಿಗಳು (ಜಾವಡಿಗಳು) ಎಂದಿಗೆ ತೀರಿದೆ ಸುಂದರನಾಯಕಿ ಅಂಗಜ ಬಾಣದ ಅತುರವನ್ನೂ ಪ ಚಂದ್ರಮುಖಿಯೇ ನೀ ನಾದಿನ ಹೇಳಲ್ ಬಂದೆನುನಾನಹುದೇ ಭಾವಕರನ್ನೇ ಕುಂದುಗಳನೀಪರಿ ಉಸುರುವೆ ಉಚಿತವೆ ಸಂದಣಿಯಾಗೆನ್ನೊಳಿಂದಿನ ಕಾಲಯೆಂದಿಗೆ 1 ಬಲ್ಲೆನು ನಿನ್ನಂ ಭಾವದ ಸೊಲ್ಲಂ ಬೆಲ್ಲದ ಮಾತನಾಡಿ ಕಳುಹಿಪೆನೇಂ ಬೊಲ್ಲಿದಿಗೆ ಸಾಕುಬಿಡು ಇಂಪಿನ ಕವಚತೊಡು ಸಲ್ಲಿದೆ ಸುಂಕವ ಸಮ್ಮತಿಯಿಂದಾ 2 ಮಾರನು ಬಂದೂ ಮನದೊಳು ನಿಂದೂ ದಾರಿಯನು ತಪ್ಪಿಸಿ ಧಣಿಸುವ ಕಾಣೆ ಓರದೆ ಕೋರಿದ ಕಾರ್ಯವ ತೀರಿಸೆ ಕಾಂಕಳು ನೀನಾಗಿ ಕಾಮಶಾಸ್ತ್ರವಂ 3 ಈ ಸುಖಸಂಪದ ಈಶ್ವರ ಬಲ್ಲಂ ಆಸೆಯ ತೋರಿ ನೀ ಮೋಸವಗೆಯ್ವೆ ದಾಸನು ವಂದಿಪ ಸುಖತೋರಿದೆ ದೇಶಿಕನಲೆ ತುಲಸಿರಾಮಾ 4
--------------
ಚನ್ನಪಟ್ಟಣದ ಅಹೋಬಲದಾಸರು
(2) ಆಂಡಾಳ್ ಸ್ತುತಿ ಆಂಡಾಳ್ ದೇವಿ ಶರಣೆಂಬೆ ಶ್ರೀಗೋದಾದೇವಿ ಪೊರೆಯೆಂಬೆ ಪ ಮುಡಿದು ಕೊಟ್ಟ ನಾಯಕಿ ತಾಯೆ ರಂಗನಾಥನ ಪರಮಪ್ರಿಯೆ ಮುಡಿಪುಹೊತ್ತು ಸೇವಿಪೆವಮ್ಮ ಶರಣಾಗತಿಯನ್ನ ಅ.ಪ ಅಂದುಗೋಪಿಯರು ಕೃಷ್ಣನ ಸೇರಲು ಚಂದದಿಮಾಡಿದ ಕಾತ್ಯಾಯನಿವ್ರತವ ತಂದೆಯಮತದಿ ಹೊಂದಿಸೇವಿಸಿದೆ ಒಂದು ತಿಂಗಳ ತಿರುಪ್ಪಾವೈಯಲಿ 1 ದಿನಕೊಂದು ಪಾಶುರ ಕಟ್ಟಿಪಾಡುತ ದಿನದಿನ ಸಖಿಯರೊಳು ಮಾರ್ಗಳಿಯಲಿ ದಿನ ಮೂಡುವಮೊದಲೆ ತಣ್ಣೀರ್ಮೀಯುತ ದಿನಪ ಕೃಷ್ಣನ ಕಲೆತ ಕನ್ಯಾಮಣಿಯೆ 2 ಧನುರ್ಮಾಸವನು ಧರಿಸಿ ಭಜಿಸುವೆವು ಧನಂಜಯನ ತೋರೆ ಸಿರಿಬಾಯ್ನುಡಿಯೆ ಧನಕನಕಚಂದನೂ ಬಲ್ಲೆವು ತಾಯೆ ತನು ಕರಗಿಸು ಜಾಜಿಪುರೀಶನಡಿಯಲ್ಲಿ 3
--------------
ನಾರಾಯಣಶರ್ಮರು
(3) ಶ್ರೀಕೃಷ್ಣ ಲಾಲಿ ಜೋ ಜೋ ಶ್ರೀಕೃಷ್ಣ ಗೋಪಾಲಕನೆ ಜೋ ಜೋ ಗೋಪಿಯ ಕುಮಾರನೆ ಪ ಪಾಡಿತೂಗುವೆನಯ್ಯ ಜೋಜೋಜೋ ಅ.ಪ ಹಾಲಿನ ಹೊಳೆಯಲಿ ಹರಿದು ಬಂದವನೆ ಆಲದೆಲೆಯ ಮೇಲೆ ಮಲಗಿ ಬಂದವನೆ ಕಾಲಿನ ಹೆಬ್ಬೆರಳ ಬಾಯಲಿಟ್ಟವನೆ ಹಾಲುಗಲ್ಲದ ಶಿಶುವೆನಿಸಿಕೊಂಡವನೆ ಪಾಡಿತೂಗುವೆನಯ್ಯ ಜೋಜೋಜೋ 1 ಕೆತ್ತಿದ ಚಿನ್ನದ ತೊಟ್ಟಿಲು ಇಲ್ಲ ಮುತ್ತಿನ ಮಣಿಗಳ ಸರಗಳು ಇಲ್ಲ ಮೆತ್ತನೆ ಹಾಸಿದ ಬಟ್ಟೆಯ ಮೇಲೆ ಹೊತ್ತು ಮೀರಿದೆ ಮಲಗೋ ಕಂದ ಪಾಡಿತೂಗುವೆನಯ್ಯ ಜೋಜೋಜೋ 2 ಚೆನ್ನಯ್ಯ ನೀನು ಮುದ್ದರಂಗಯ್ಯ ಅಣ್ಣಯ್ಯ ಕಾಣೋ ತುಂಟ ಕೃಷ್ಣಯ್ಯ ಸುಮ್ಮನೆ ಮಲಗಯ್ಯ ರಂಪಾಟ ಮಾಡದೆ ಕಣ್ಮುಚ್ಚಿ ಪವಡಿಸೋ ಪರಮಾನಂದನೆ ಪಾಡಿತೂಗುವೆನಯ್ಯ ಜೋಜೋಜೋ 3 ಅಂಗೈಯಲ್ಲೆ ಅದ್ಭುತ ಮಾಡುವೆ ಅಂಗಾಂಗದಲ್ಲಿ ಬ್ರಹ್ಮಾಂಡ ತೋರುವೆ ಭಂಗ ಪಾಂಡುರಂಗ ಚಂಗನೇಳದೆ ಮಲಗೊ ಜಾಜಿಪುರಿರಂಗ ಪಾಡಿತೂಗುವೆನಯ್ಯ ಜೋಜೋಜೋ 4
--------------
ನಾರಾಯಣಶರ್ಮರು
(41ನೇ ವರ್ಷದ ವರ್ಧಂತಿ) ಸತ್ಯ ಸಂಕಲ್ಪಾನುಸಾರದಿ ನಡೆಸುವುದುತ್ತಮ ಬಿರುದಾದರು ಭೃತ್ಯನ ಬಿಟ್ಟನೆಂಬಪಕೀರ್ತಿ ಬರದಂತೆ ಚಿತ್ತದಲ್ಲಿರಲಾದರು ಪ. ಕಳೆದಿತು ಐದೆಂಟು ಮೇಲೊಂದು ವತ್ಸರ ಬೆಳೆದಿತು ಬಲು ಮತ್ಸರ ನೆಲನ ಮೇಲಡಿಯಿಡಲಿಲ್ಲ ಶಕ್ತಿಯು ಇಂಥ ಛಲದಿ ತೋರುವಿ ತಾತ್ಸಾರ ಬಳುಕಿ ಬಾಡಿದ ದೇಹವುಳುಹಲುತ ಸೇವಾ ಫಲಕೆ ಕಾರಣವೆಂಬೆನು ನಳಿನನಾಭನೆ ನಿನ್ನ ಮನವೆಂತಿರುವುದೆಂದು ತಿಳಿಯದೆ ಬಳಲುವೆನು 1 ವಯಿನು ತಪ್ಪಿದ ಬಳಿ- ಕ್ಯಾತರಗುಣವಪ್ಪುದು ಭೂತಪಂಚಕ ಸನ್ನಿಪಾತ ಸೂಚಿಸುವಂತೆ ಕಾತರತೆಯು ತಪ್ಪದು ಈ ತೆರದಲಿ ದೇಹ ರೀತಿಯಾಗಿರುವುದ ನೀ ತಿಳಿದಿರಲೆನ್ನಯ ಮಾತ ಕೇಳದೆ ಲಕ್ಷ್ಮೀನಾಥ ತಾತ್ಸಾರವಿಂತು ನೀತಿಯಾಗದು ಚಿನ್ಮಯ 2 ಜನನ ಮರಣ ಜೋಡಾಗಿರುವುದೆಂಬ ಸಿದ್ಧ ನಿನಗಿದು ಸುಲಭಸಾಧ್ಯ ಮನೆವಾರ್ತೆ ಮಡದಿ ಮಕ್ಕಳು ಮುಂತಾದುದಕೆಲ್ಲ ವನಜಾಕ್ಷ ನೀನೆ ಬಾಧ್ಯ ಕನಸಿಲಾದರು ನಿನ್ನ ನೆನವ ತಪ್ಪಿಸದಿರು ವಿನಯ ವೆಂಕಟರಾಯನೆ ನಿನಗಿಲ್ಲದಪಕೀರ್ತಿ ಎನಗಿಲ್ಲ ಮಹದಾರ್ತಿ ಘನಕಲ್ಪ ಸುರಭೂಜನೆ 3
--------------
ತುಪಾಕಿ ವೆಂಕಟರಮಣಾಚಾರ್ಯ
(5) ಶ್ರೀನಿವಾಸ ವಿಪ್ರವಂದಿತ ಪಾಪಕೋಟಿ ಕುಲನಾಶಾ ಶ್ರೀವೆಂಕಟೇಶಾ ಪ ನಿಜನುಡಿಯ ಭೃಗುನುಡಿಯೆ ಮುನಿಮಂಡಲಿಯ ನಡೆಯೆ ತ್ರಿಜಗಾಗ್ರಪೂಜಿತ ಪರಬ್ರಹ್ಮ ನೀನೇ 1 ಪಶುವತ್ಸಗೋಪಾಲ ಸರ್ವವೂ ನೀನಾಗೆ ಬಿಸಜಭವ ಬೆದರುತ್ತ ಪದಕೆರಗಿದ 2 ಮೋಹಿನಿಯವೇಶದಿಂ ರಕ್ಕಸನ ಭಸ್ಮಿಸಿ ಪಾಹಿಮೆನಲಾ ದಕ್ಷ ವೈರಿಯ ರಕ್ಷಿಸಿದೆ 3 ಗಿರಯನೇ ಕೊಡೆವಿಡಿದು ಗೋಕುಲವನೆ ಕಾಯ್ದೆ ಸುರರಾಜ ಗರಿಮುದುರಿ ಶರಣೆಂದು ಬಂದ 4 ವಿಧವರದಿ ಬೆರೆದ ಹಿರಣ್ಯಕಶಿಪುವ ಬಗೆದು ಸದೆದೆ ಶಿವಕಾವಲಿನ ಬಾಣನಂ ಬಿಡವೇ 5 ಸಾಸಿರಗಳರವತ್ತು ಸಗರಸುತರನು ಸುಟ್ಟು ಘಾಸಿಹರಿಸಿದೆ ಜಗದೆ ಜೀವ ಜಂತುಳಿಗೆ 6 ಪಾತಕಿಯ ರಾವಣನು ಕಾರವರ ಕೊಂದೇ 7 ಬಲಿದ ಶಾಪವ ಕಳೆದು ಕಾಯ್ವ ಬಂಧೂ 8 ಸಾವುಂಡ ಶಿಶುವನು ಗುರುವಿಗೆ ನೀ ತಂದಿತ್ತೆ ನೋವುಂಡ ಇಂದ್ರಂಗೆ ಲೋಕಗಳನಳೆದೆ 9 ಅಜಕಪಾಲವ ಬಿಡಿಸಿ ಮೃತ್ಯುಂಜಯನ ಹರಸಿ ಅಜಮಿಳನ ನೀ ಮುಕ್ತಿಸ್ಥಾನಕ್ಕೆ ತಂದೆ 10 ಸರ್ವಕಾಲಗಳಲ್ಲು ಅಪರಾಧಿ ನಾನಯ್ಯ ಗರ್ವಿಯೆನಿಸದೆ ತಪ್ಪು ಕ್ಷಮಿಸಯ್ಯ ತಂದೆ 11 ಆನೆ ಅಳುವುದು ಕೇಳಿ ಮೊಸಳೆಬಾಯನು ಸೀಳ್ದೆ ನೀನೆ ಆಪದ್ಭಂದು ಕಾರುಣ್ಯಸಿಂಧು12 ಅರಗಿನ ಮನೆಯಲ್ಲಿ ಭರದಿಂದ ಬಾಂಧವರಿಗೆ ಉರಿಭಯವ ತಪ್ಪಿಸಿ ಪೊರೆದ ಪ್ರಭುವೇ13 ದ್ರುಪದ ಪುತ್ರಿಗೆ ಮಾನ ಸಂರಕ್ಷಣೆಯನು ಮಾಡಿ ಕೃಪೆತೋರಿಪಾರ್ಥಂಗೆ ಸಾರಥಿಯು ಆದೆ 14 ಕಾಲ ವಾಲಿಪ್ರಾಣಕೆ ಶೂಲ ಲೀಲೆಯಿಂ ಭಕ್ತರಂ ಪಾಲಿಸುವೆ 15 ಪಾವನದ ಪಾದಗಳನಿಂತು ಮುಡಿಯಮೇಲೆ ಭಾವಿಸುವೆ ಭವಕಳೆಯೆ ನಾತಾಳೆ ನಾಳೆ 16 ತಾಪಗಳು ಮೂರನುಂ ಹರಿಪ ಸಂಕಟದೂರ ಕಾಪಾಡು ಶ್ರೀಹರಿ ಬಂಧುಬೇರಿಲ್ಲ ಭಕ್ತಸತ್ರಾ 17 ಶರಣಸಂರಕ್ಷಣ ಬಿರುದು ಧರಸಿಹೆ ನಿತ್ಯ ಭರದಿ ಶಾಂತಿನೀಡೋ ಚರಣಕ್ಕೆ ಶರಣು 18 ಕ್ಷಾಮಡಾಮರ ಕಳೆಯೆ ಸುವೃಷ್ಟಿಯ ಕರೆವೆ ಕಾಮಿತಾರ್ಥದ ಕಾಮಧೇನು ಸ್ವಾಮಿ ತಾಯಿತಂದೆ 19 ಚಕ್ರಧರ ಚಕ್ರಧರ ಭಜಿಪ ಭಕ್ತರ ಪಾಲ ನರಸಿಂಹ ನರಸಿಂಹ 20 ಕ್ಷೇಮಕರಗರುಡನೇ ಧ್ವಜನು ವಾಹನನು ಭೀಮ ಹನುಮ ಪ್ರೇಮ ಹೆಜ್ಜಾಜಿಶ್ಯಾಮ ಸ್ವಾಮಿ21
--------------
ಶಾಮಶರ್ಮರು
(Iೂ) ಕ್ಷೇತ್ರ ವರ್ಣನೆ (1) ಶ್ರೀರಂಗ, ತಿರುಪತಿ, ಕಂಚಿ,ಮೇಲುಕೋಟೆ, ಹೆಜ್ಜಾಜಿ ಮಂಗಳವು ಶ್ರೀರಂಗ ಅಂಗನೆ ಮಣಿದೇವಿಗೆ ಪ ಅಂಗಿಯಾದ ಆದಿಶೇಷ ಉ- ತ್ತುಂಗ ವರ ವಿಭೀಷಣನಿಗೆ ಅ.ಪ ಸಪ್ತಗಿರಿ ಶ್ರೀನಿವಾಸ ಅಪ್ಪೀರ ಅಲರ್‍ಮೇಲಮ್ಮಗೆ ಗುಪ್ತವಾಗಿ ಉಭಯ ರಕ್ಷ ಸುಪ್ತ ಗೋವಿಂದರಾಜಗೆ 1 ಕಂಚಿ ವರದರಾಜನಿಗೆ ಮಂಚದ ಪೆರುನ್ದೇವಿಗೇ ಹೊಂಚಿ ಬ್ರಹ್ಮಯಜ್ಞದಲ್ಲಿ ಮಿಂಚುವ ದೇವರಾಜಗೇ 2 ಯದುಶೈಲ ಚೆಲ್ವರಾಯ ಮುದದಿ ಯದುಗಿರಿಯಮ್ಮಗೆ ಪಾದ ಸಂಪತ್ತೆ ಅದುಭುತರು ಯತಿರಾಜಗೆ 3 ಹೆಜ್ಜಾಜಿ ಕೇಶವನ ಪೀಠ ಅಜ್ಜ ಶ್ಯಾಮನ ವಿರಜೆಯಲ್ಲಿ ಮಜ್ಜನಗೈಸಿ ಸೇವೆಗಾಗಿ ಸಜ್ಜುಗೈದ ವೈಕುಂಠಕೆ 4
--------------
ಶಾಮಶರ್ಮರು
(ಅ) ಆತ್ಮನಿವೇದನಾ ಕೃತಿಗಳು ಏನು ಹೇಳಲಯ್ಯ ರಂಗ ಎಲ್ಲಿ ಹೋಗಲಯ್ಯ ನನ್ನಮನಸು ಮಂಗವಾಗಿ ದೂರ ತಳ್ಳಿಹುದಯ್ಯ ಪ ಎಲ್ಲೆಯಿಲ್ಲದ ಎನ್ನವನು ನೀ ಎಂತುನಿಂತಿಹೆ ಸುಮ್ಮನೆ ಎಲ್ಲವಾಗಿಕೂಡಿಕೊಂಡಿಹೆನಿನ್ನಚರಣಭರಿಸುಮಾಪತೇ ಕ- ಮಲಾಪತಿ ನೀ ಕರುಣದಿಂದಲಿ ನಡೆಸಲಾರೆಯಾ ನನ್ನನು ಅ.ಪ ನಡೆಯಲಾರದೆ ಕಾಲುಬಿದ್ದಿದೆ ಕೋಪಗೊಳ್ಳದೆ ಬಂದು ನನ್ನಲಿ ನಿಂತು ಸಲಹೈ ದೇವನೇ ಅಪ್ಪಶೆಲ್ವನೆ ನಿನ್ನ ಬಿಟ್ಟರೆ ಕಾದು ಕುಳಿತಿಹರಾರಯ್ಯ 1
--------------
ಸಂಪತ್ತಯ್ಯಂಗಾರ್
(ಅಃ) ಕಾಮದೇವ ಕರುಣದಿಂದಲಿ ಒಲಿದು ಕಂಡನಾತುರದಲಿ ಪ ಇಂದ್ರಸಮಾನ ದೇವತೆಯೆ ರತಿಪತಿಯೇ | ಮಾರ || ಬಂದು ಕಲ್ಪದಲಿ ಸುಂದರನೆನಿಸಿಕೊಂಡಿರ್ದ | ಬಂಧುವೇ ಅಹಂಕಾರ ಪ್ರಾಣನಿಂದಧಿಕನೆ 1 ವನಜ ಸಂಭವನು ಸೃಷ್ಟಿ ಸೃಜಿಪಗೋಸುಗ | ಮನದಲ್ಲಿ ಪುಟ್ಟಿಸೆ ಚತುರ ಜನರ || ಮುನಿಗಳೊಳಗೆ ನೀ ಸನತ್ಕುಮಾರನಾಗಿ ಜನಿಸಿ | ಯೋಗ ಮಾರ್ಗದಲ್ಲಿ ಚಲಿಸಿದ ಕಾಮಾ 2 ತಾರಕಾಸುರನೆಂಬ ಬಹು ದುರುಳತನದಲ್ಲಿ | ಗಾರುಮಾಡುತಲಿರಲು ಸುರಗಣವನು || ಗೌರಿಮಹೇಶ್ವರರಿಗೆ ಪುತ್ರನಾಗಿ ಪುಟ್ಟಿ | ಧಾರುಣಿಯೊಳಗೆ ಸ್ಕಂದನೆನಿಸಿದೆ 3 ಮತ್ಸ್ಯ ಉದರದಲಿ | ಪೊಕ್ಕು ಶಿಶುವಾಗಿ ಸತಿಯಿಂದ ಬೆಳೆದು || ರಕ್ಕಸ ಶಂಬರನೊಡನೆ ಕಾದಿ ಗೆದ್ದು ಮರಳಿ | ಚಕ್ಕನೆ ಸಾಂಬನೆನಿಸಿದೆ ಜಾಂಬವತಿಯಲ್ಲ 4 ಜನಪ ದಶರಥನಲ್ಲಿ ಭರತನಾಗಿ ಪುಟ್ಟಿದೆ | ಮನೋ ವೈರಾಗ್ಯ ಚಕ್ರಾಭಿಮಾನಿ || ಎನಗೊಲಿದ ವಿಜಯವಿಠ್ಠಲರೇಯನಂಘ್ರಿ | ಅರ್ಚನೆ ಮಾಡುವ ಸುಬ್ರಮಣ್ಯ ಬಲು ಧನ್ಯ 5
--------------
ವಿಜಯದಾಸ
(ಅಂ) ಪಾರ್ವತೀದೇವಿ ಉಮಾ ಕಾತ್ಯಾಯನೀ ಗೌರಿ ದಾಕ್ಷಾಯಣಿ | ಹಿಮವಂತ ಗಿರಿಯ ಕುಮಾರಿ ಪ ನಿತ್ಯ | ಅಮರವಂದಿತೆ ಗಜಗಮನೆ ಭವಾನಿ ಅ. ಪ. ಪನ್ನಗಧರನ ರಾಣಿ ಪರಮಪಾವನಿ | ಪುಣ್ಯಫಲ ಪ್ರದಾಯಿನಿ || ಪನ್ನಗವೇಣಿ ಶರ್ವಾಣಿ ಕೋಕಿಲವಾಣಿ | ಉನ್ನತ ಗುಣಗಣ ಶ್ರೇಣಿ | ಎನ್ನ ಮನದ ಅಭಿಮಾನ ದೇವತೆಯೆ | ಸ್ವರ್ಣಗಿರಿ ಸಂಪನ್ನೆ ಭಾಗ್ಯ ನಿಧಿ || ನಿನ್ನ ಮಹಿಮೆಯನು ಬಿನ್ನಾಣದಲಿ ನಾ | ಬಣ್ಣಿಸಲಳವೆ ಪ್ರಸನ್ನ ವದನಳೆ 1 ಮುತ್ತಿನ ಪದಕ ಹಾರ ಮೋಹನ ಸರ | ಉತ್ತಮಾಂಗದಲಂಕಾರ || ಜೊತ್ಯಾಗಿ ಇಟ್ಟ ಪಂಜರದೋಲೆ ವಯ್ಯಾರ | ರತ್ನಕಂಕಣದುಂಗುರ || ತೆತ್ತೀಸ ಕೋಟಿ ದೇವತೆಗಳ್ ಪೊಗಳುತ | ಸತ್ತಿಗೆ ಚಾಮರವೆತ್ತಿ ಪಿಡಿಯುತಿರೆ || ಸುತ್ತಲು ಆಡುವ ನರ್ತನ ಸಂದಣಿ | ಎತ್ತ ನೋಡಿದರತ್ತ ಕಥ್ಥೈ ವಾದ್ಯ2 ಕಂಚುಕ ತಿಲಕ | ನಾಸಿಕ || ಕಳಿತ ಮಲ್ಲಿಗೆ ಗಂಧಿಕ ಮುಡಿದ ಸೂಸುಕ | ಸಲೆ ಭುಜ ಕೀರ್ತಿಪಾಠಿಕ || ಇಳೆಯೊಳು ಮಧುರಾ ಪೊಳಲೊಳು ವಾಸಳೆ | ಅಳಿಗಿರಿ ವಿಜಯವಿಠ್ಠಲ ಕೊಂಡಾಡುವ || ಸುಲಭ ಜನರಿಗೆಲ್ಲ ಒಲಿದು ಮತಿಯನೀವ | ಗಳಿಕರ ಶೋಭಿತೆ ಪರಮಮಂಗಳ ಹೇ 3
--------------
ವಿಜಯದಾಸ
(ಅ) ಶ್ರೀಹರಿಸ್ತುತಿಗಳು ಏಳಯ್ಯ ಕಾರುಣ್ಯನಿಧಿ ಕಮಲದಳ ನೇತ್ರ ಏಳಯ್ಯ ಪರಮ ಪಾವನ ಮುನಿಜನ ಸ್ತೋತ್ರ ಪ ಏಳಯ್ಯ ಕರಿರಾಜವರದ ವಿಜಯಮಿತ್ರ ಏಳು ದೇವಕಿಯ ಪುತ್ರ ಅ.ಪ ಏಳು ಹರಿರಥ ಶತಕೋಟಿ ಪ್ರಕಾಶನೇ ಏಳೆರಡು ಲೋಕಗಳು ಉದರದಲಿ ಧರಿಸಿದನೇ ಏಳು ಗೂಳಿಯಕಟ್ಟಿ ಕಾಂತೆಯನು ವರಿಸಿದನೇ ಏಳು ಮುನಿನುತ ವಂದ್ಯನೇ ಸ್ವಾಮಿ 1 ಏಳು...(?)ಗಳೊಳು ಗಂಗೆಯನು ಪಾದದಲಿ ಪಡೆದೇ ಏಳು ಪೆಡೆಯವನ ಮಡುಹಿನಲಿ ದೊತ್ತಳದುಳಿದೇ ಏಳುತ್ತ ನಿಮ್ಮ ನಾಮವನೊಮ್ಮಗೆ ನಡದೇ ಏಳು ಜನ್ಮದ ಭವಹರಾ ಸ್ವಾಮಿ 2 ಏಳು ಜಿಹ್ವೆಯನುಳ್ಳವನ ಮುಖವಾದೆ ಮ ತ್ತೇಳ್ಮೂರು ಸೂಳಿನಲಿ ಕ್ಷತ್ರಿಯರ ಮರ್ದಿಸಿದೇ ಏಳು ತಾಳೆಗಳನೊಂದಂಬಿನಲಿ ಛೇದಿಸಿದೇ ಏಳು ಸಮರನ ಕೊಲಿಸಿದೇ ಸ್ವಾಮಿ 3 ಏಳು ಶರಧಿಯಲಿ ಪಾಲ್ಗಡಲಲ್ಲಿ ಪವಡಿಸಿದೆ ಏಳು ವ್ಯೂಹದಲಿ ಪಾರ್ಥನ ನುಡಿಯ ಪಾಲಿಸಿದೆ ಏಳು ದಿಕ್ಪಾಲಕರು ನಿನ್ನ ಪೊಗಳುತಲಿಹರೇ ಏಳು ದ್ವೀಪಕ್ಕೊಡೆಯನೇ ಸ್ವಾಮಿ 4 ಏಳು ಶಕ್ತಿದೇವತೆಯರೂಳಿಗವ ಕೇಳಿ ಹರಿ ದೇಳೆರಡು ಲೋಕ ಹರಿ ತಾನಲ್ಲದಿಲ್ಲೆಂಬ ಏಳಿಗೆಯ ಹಮ್ಮಿನೊಳಿದ್ದ ದಶಕಂಧರನ ಏಳಿಸಿದೆ ಸುರಲೋಕಕೇ ಸ್ವಾಮಿ 5 ಏಳು ಸ್ವರ ಮುಟ್ಟಿ ತುಂಬುರುನಾರದರು ಬಳಿ ಕೇಳು ತಾಳಂಗಳಲಿ ನಿನ್ನ ಪೊಗಳುತಲಿಹರೇ ಏಳುನಗರಕ್ಕಧಿಪವೆನಿಪ ಸುರಪುರವಾಸ ಏಳು ಲಕ್ಷ್ಮೀನಿವಾಸ ಸ್ವಾಮಿ 6
--------------
ಕವಿ ಲಕ್ಷ್ಮೀಶ
(ಅಕ್ರೂರನ ಒಸಗೆ) ರಥವೋಗದಾ ಮುನ್ನ ಗೋಕುಲಕೆ ಮನ್ಮನೋ- ರಥ ಹೋಗಿರುವುದೇನೆಂಬೇ ಪ ಅತಿ ಕೌತುಕವದಾಯ್ತು ಖಳರಾಯನೊಲಿದು ಯದು- ಪತಿಯ ಕರೆತರುವುದೆಂದೆನಗೆ ಪೇಳಿರಲಿಕ್ಕೆ ಅ.ಪ. ಪತಿತರ್ಗೆ ನಾಮ ದುರ್ಲಭವಲಾ ಎನಗೆ ಶ್ರೀ- ಪತಿ ಸೇವೆ ತಾನಾಗಿ ದೊರೆತೂ ಶತಸಹಸ್ರಾನಂತ ಜನುಮಗಳ ಸು- ಕೃತಕೆ ಫಲವಾಯಿತೆಂದರಿತೂ ಗತ ಕಿಲ್ಬಿಷನಾದೆನೆಂಬುದಕಿದೇ ಸಾಕ್ಷಿ ಪಥದೊಳಗೆ ತಾವೆ ಮುಂದುವರಿದೂ ಮಿತಿಯಿಲ್ಲದಲೆ ಮಹಾ ಶಕುನಂಗಳಾಗುತಿವೆ ಪ್ರತಿ ಇಲ್ಲವೀ ಶುಭೋದಯಕೆ ಸೂರ್ಯೋದಯಕೆ 1 ಶ್ರೀ ಪದ್ಮಜಾದಿಗಳು ಸೇವಿಸುವ ಚರಣ ಯಮು- ನಾಪುಳಿನದಲಿ ಮೆರೆವ ಚರಣಾ ಗೋಪೀಯರ ಪೀನ ಕುಚಕುಂಕುಮಾಂಕಿತ ಚರಣಾ ತಾಪತ್ರಯಾವಳಿವ ಚರಣಾ ಗೋಪುರದ ಶಿಲತೃಣಾಂಕುರುಹ ತೋರುವ ಚರಣಾ ಆಪದ್ಬಾಂಧವನ ಚರಣಾ ಣಾ ಪೂರ್ಣಾ ಎನಗಭಯಕೊಡುವಾ ಪಿಡಿಲಾ 2 ನೋಡುವೆನು ನೀರದಶ್ಯಾಮಸುಂದರನ ಕೊಂ- ಡಾಡುವೆನು ಕವಿಗೇಯನೆಂದೂ ಮಾಡುವೆನು ಸಾಷ್ಟಾಂಗದಂಡ ಪ್ರಣಾಮ ಕೊಂ- ಡಾಡುವೆನು ಕೈ ಮುಗಿದು ನಿಂದೂ ಬೇಡುವೆನು ಭುವನೈಕದಾತನೆಂದಲ್ಲಿ ಕೊಂ ಡಾಡುವೆನು ದಾಸ್ಯ ಬೇಕೆಂದೂ ಈಡಿಲ್ಲದಿಂದಿನಾ ಮನಕೆನ್ನ ಬಯಕೆ ಕೈ- ಗೂಡುವುದು ನಿಸ್ಸಂದೇಹ ದೈವ ಸಹಾಯ 3 ಇರುವನೋ ಏಕಾಂತದೊಳಗಿರುವ ಕೇಳದಿರು ಬರುವನೋ ಬಂದವನ ಕಂಡೂ ಕರೆವನೋ ಕಿರಿಯಯ್ಯ ಬಾರೆಂದು ಬಿಗಿದಪ್ಪಿ ಬೆರೆವನೋ ಬೆರಸಿಯದನುಂಡೂ ಒರೆವನೋ ಒಡಲ ಧರ್ಮವನೆಲ್ಲ ವರಗಿನೇ ಜರಿಯನೋ ಜಗದೀಶ ಹಗೆಯವನೆನುತ ಬಗೆಯ 4 ಗೋಧೂಳಿಲಗ್ನಕೆ ಗೋಕುಲಕೆ ಬಂದು ಬೆರ- ಗಾಗಿ ಹೆಜ್ಜೆಗಳ ನೋಡಿ ಭೂದೇವಿಗಾಭರಣವೆನುತ ತೇರಿಳಿದು ಶ್ರೀ ಪಾದರಜದೊಳಗೆ ಪೊರಳಾಡೀ ಗೋದೋಹನದೊಳಿದ್ದ ರಾಮಕೃಷ್ಣರ ಕಂಡು ನಾ ಧನ್ಯ ಧನ್ಯನೆಂದಾಡೀ ಶ್ರೀದವಿಠಲ ಎರಗುವನಿತರೊಳು ಬಿಗಿದಪ್ಪಿ ಸಾದರಿಸಿದನು ಇದೆ ಸದನದಲಿ ಸ್ವಪ್ನದಲಿ 5
--------------
ಶ್ರೀದವಿಠಲರು
(ಅನಂತೇಶ್ವರ ದೇವರನ್ನು ನೆನೆದು) ಯಾಕಿಲ್ಲಿ ಬಂದು ಮಲಗಿದೆಯೊ ಎಲಾ ಹರಿಯೇ ಲೋಕೋತ್ತಮಾನಂತೇಶ್ವರ ದೇವಾಲಯದಿ ಪ. ಬಿಡದೆ ಪಾಲ್ಗಡಲೊಳಗೆ ಕಡು ವೈಭವದಿ ತಡಿಗೆ ಝಡಿದು ಬರುತಿಹುದು ಭೋರ್ಗುಡಿಪ ತೆರೆಯ ಝಡಿವ ನಾದಕೆ ಒಡಂಬಡದೇಕಾಂತದಿ ಬಂದು ಮಡದಿ ಶ್ರೀದೇವಿ ಸಹಿತೊಡನೆ ಮಲಗಿದೆಯೋ 1 ನೀರೊಳಗೆ ಮುಳುಗಿ ವೇದವÀ ತಂದು ಬೆನ್ನಿನೊಳು ಭಾರವನು ಪೊತ್ತು ಬಹಳಾಲಸ್ಯವೋ ಧಾರುಣಿಯ ಸಲಹೆ ಭೋರ್ಗುಡಿಸಿ ಸ್ತಂಭದಿ ಬಂದ ಕ್ರೂರತನಕಿದುವೆ ವಿಸ್ತಾರ ಸಮಾಧಾನತೆಯೋ 2 ರೂಢಿಗೊಡೆಯ ತಾನಾಗಿ ಮೋಡಿಯೊಳು ಭೂದಾನ- ಬೇಡಿದೆನು ಎಂಬ ನಾಚಿಕೆಯ ಮನವೋ ಖೋಡಿ ನೃಪತಿಯರ ಹೋಗಾಡಿಸುತ ಕಾಡಿನೊಳು ಕೋಡಗರ ಕೂಡಿ ರಥ ಓಡಿಸಿದ ಬೇಸರವೋ 3 ಲೋಲಾಕ್ಷಿಯರ ವ್ರತವ ಹಾಳುಮಾಡುತ ಕಲಿಯ ಕಾಲದೊಳು ಗೈವಂತಮೇಲುಕಾರಿಯದ ಕಾಲೋಚಿತವ ಮನದೊಳಾಲೋಚಿಸುತ್ತಹಿಯ ಮೇಲೆ ಪವಡಿಸಿ ನಿದ್ರಾಲೋಲನಾಗಿಹೆಯೋ 4 ಯುಗಯುಗದೊಳವತಿರಿಸ ಜಗದ ಭಾರವನಿಳುಹಿ ಬಗೆಬಗೆಯ ನಾಟಕದಿ ಮಿಗೆ ಪಟ್ಟ ಶ್ರಮವ ತೆಗೆಯಲೋಸುಗ ಚರಣಯುಗವ ಮೃದುಕರದಿ ಶ್ರೀ ಸೊಗಸಿನಿಂದೊತ್ತುವ ಸೊಂಪೊಗರಿತೋ ನಿನಗೆ 5 ಲಲಿತ ವೈಕುಂಠದೊಳಗೆ ಜಲಜಭವಮುಖ್ಯಸುರ- ಗಲಭೆಯುಂಟೆಂದಲ್ಲಿ ನಿ¯ದೆ ಈಗ ಲಲನೆಯಳ ಕೂಡೆ ಸರಸಗಳನಾಡಲು ತನಗೆ ಸ್ಥಳವಿಲ್ಲವೆನುತಿಲ್ಲಿ ನೆಲಸಿಕೊಂಡಿಹೆಯೋ 6 ಸೇರಿರ್ದ ಶರಣ ಸಂಸಾರಿ ನೀನೆಂದು ಶ್ರುತಿ ಸಾರುವುದು ಕರುಣವನು ತೋರೆನ್ನ ದೊರೆಯೇ ದಾರಿದ್ರ್ಯದೋಷವಪಹಾರಿಸುತ ಇಷ್ಟಾರ್ಥ- ಸೇರಿಸೈ ಶ್ರೀ ಲಕ್ಷ್ಮೀನಾರಾಯಣನೆ ಹರಿಯೇ 7
--------------
ತುಪಾಕಿ ವೆಂಕಟರಮಣಾಚಾರ್ಯ