ಒಟ್ಟು 988 ಕಡೆಗಳಲ್ಲಿ , 95 ದಾಸರು , 726 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎರಡನೆಯ ಸಂಧಿ ಶ್ರೀಕಾಂತನ ಕರುಣವುಳ್ಳವಗೆ ಕುಂತಳಪುರಕೆ ಕಳುಹಿದನು 1 ಗಂಧಾಕ್ಷತೆ ಫಲಪುಷ್ಪದಿಂದ ಸಾಕ್ಷಾತು ಗಣಪತಿಗರ್ಪಿಸಿ ತರಳನ ಶಿಕ್ಷಾಗುರುವಿಗೆ ಒಪ್ಪಿಸಿದ2 ಮಣ್ಣ ಹರಹಿ ಅಕ್ಷರವ ಬರೆದು ಎನ್ನಣ್ಣನೀ ತಿದ್ದು ಬಾ ಎನಲು ಎನ್ನೊಡೆಯ ಶರಣೆಂದು ಬರೆದ 3 ನಿನ್ನ ಜ್ಞಾನ ಬೇರೆ ಚಿತ್ತ ಬೇರೆ 4 ಎಂದು ಧಿಕ್ಕರಿಸಿ ಹೇಳಿದನು 5 ಚಾತುರ್ಯದ ಬುದ್ಧಿ ಬೇರೆ ತೊಡರು ತಾತಗೆ ಒಯ್ದು ಒಪ್ಪಿಸಿದ 6 ಮುಕುಂದನ ಭಜಕನೆಂದೆನದೆ ಬಂದ ಹಾಂಗಿರಲೆಂದು ಸುತನ 7 ಧ್ರುವ ಪ್ರಹ್ಲಾದ ಅಕ್ರೂರಾಂಬರೀಷ ಮಾಧವ ಮುರಾರಿಯನ್ನು ಭಜಿಸಿ ಭವ ಭಯಾದಿಗಳಿಲ್ಲ ನಮಗೆ 8 ಕಟ್ಟಿಕೊಟ್ಟರು ಕರಲೇಸು ಎನುತ ಕಟ್ಟೆದರ್ ವೇದೋಕ್ತದಲಿ 9 ಓದಿಸಿದರು ಗುರುಮುಖದಿ ಮಾಧವನಲ್ಲದೆ ಅನ್ಯತ್ರರಿಲ್ಲವೆಂದು ಭೇದಾಭೇದವನೆಲ್ಲ ತಿಳಿದು 10 ಹೊಳೆವ ಶ್ರೀ ಮುದ್ರಿಕೆಯಿಟ್ಟು ಗೆಳೆಯರೆಲ್ಲರಿಗೆ ಬೋಧಿಸಿದ 11 ಪತಿತರಾದಪಗತಿ ಕುಮಾರರಿಗೆಲ್ಲ ಸದ್ಗತಿಯಾಗಬೇಕೆಂದೆನುತ ಮಾಡಿಸಿದನಾಜೆÉ್ಞಯಲಿ 12 ದ್ವಾದಶ ನಾಮವ ಹಚ್ಚಿ ಸಾದಿ ಸಾಧಿಸಿರಿ ಏಕಾದಶಿ ವ್ರತವೆಂದು ಬೋಧಿಸಿದನು ಎಲ್ಲರಿಗೆ13 ಜಾಗರ ಮಾಡಿ ಫುಲ್ಲನಾಭನ ಭಜಿಸುವರು ಪರಗೋಷ್ಠಿಯಿಲ್ಲ 14 ಬೆಳೆಸುವ ಹÀರಿಭಕ್ತರೊಡನೆ ಪರಾಕ್ರಮಿಯೆನಿಸಿದನು 15 ಇಮ್ಮಡಿಯನು ಗೆದ್ದು ಹೇರಿಸಿದನು ತನ್ನ ಪುರಕೆ 16 ತಂದು ಆರತಿಗಳನೆತ್ತಿ ಚರಣಕ್ಕೆರಗಿದನು 17 ಜಗದಧಿಪತಿಯಾಗು ಎಂದು ಹರುಷವನೆ ತಾಳಿದಳು 18 ಲೇಸಾದ ಶುಭಲಗ್ನವ ಕಟ್ಟಿ ಸುತನ ಸಿಂಹಾಸನದಲ್ಲಿ ಕುಳ್ಳಿರಿಸಿ ಭೂಸುರ ಬಂಧುಗಳೆಲ್ಲರು ನೆರೆದಿಂದುಹಾಸಗೆ ಪಟ್ಟಗಟ್ಟಿದರು19 ಪರಿ ಪಾಲಿಸುತ್ತ ರಾಜ್ಯನೀತಿಯಿಂದಾಳುತಲಿಹನು 20 ಲಾಲಿಸು ಕುಂತಳೇಶ್ವರಗೆ ಕಾಲಕಾಲಕೆ ಕಪ್ಪವ ಕೊಟ್ಟು ಬಹೆವು ಆಲಸ್ಯವಾಯಿತು ಎಂದ21 ಉದಾರಬುದ್ಧಿಯಲಿಂದುಹಾಸ ವಿಚಾರಿಸಿದನು ತನ್ನಪಿತನ 22 ಜೋಯಿಸ ಪುರೋಹಿತಗೆ ಕಾಂತಿಗೊಡದ ಕನಕಾಭರಣವೆಲ್ಲವ ಅಂತಸ್ಥದಿಂದ ಕಟ್ಟಿದನು23 ಜ್ಞಾನವುಳ್ಳ ಭೃತ್ಯರೊಡನೆ ದಾನವಾಂತಕನ ಕಿಂಕರನು 24 ತೆರಳಿದರಲ್ಲಿಂದ ಮುಂದೆ ಹೆಬ್ಬಾಗಿಲ ಮುಂದೆ 25 ದಿಟ್ಟರಾರೆಂದು ಕೇಳಿದನು ಅಟ್ಟಿದೆನ್ನೊಡೆಯ ಪುಳಿಂದ 26 ಮಂದಿರಕಾಗಿ ಕರೆಸಿದ ಕರವ ಮುಗಿದರು 27 ಕಡೆಗಣ್ಣಲಿ ನೋಡಲಿಲ್ಲವರೊಳು ಮಾತನುಡಿಯದೆ ಸನ್ಮಾನಿಸದೆ ಝೇಂಕರಿಸಿ ಕೇಳಿದನು 28 ಜೀಯ ಹಸಾದ ನಿಮ್ಮಡಿಗೆ ಇಂದಿನ ವಾಯಿದ ಕಟ್ಟಿದ ಧನವು ದೇವರು ಕೈಕೊಂಬುದೆನಲು 29 ನಗ ನಾಣ್ಯ ದೇವಾಂಗವನು ನಗ ನಾಣ್ಯ ದೇವಾಂಗವನು 30 ಸೊಗಸಾಗಿ ಮಾಡಿಸು ಎಂದ ನಗೆಮುಖದಿಂದ ಹೇಳಿದನು 31 ಸಣ್ಣ ರಾಜಾನ್ನದಕ್ಕಿಯನ್ನ ಶಾಕವು ಅಣ್ಣೆವಾಲೆರೆದ ಪಾಯಸವು ಉಣ್ಣೇಳಿರೆಂದು ಕರೆದರು 32 ನಿರಾಹಾರವು ನಮಗೆ ಎಂದು ಕೇಳಿದನು 33 ಎಮ್ಮೊಡೆಯನ ಸುಕುಮಾರ ತಮ್ಮ ರಾಜ್ಯದಲ್ಲಿ ಏಕಾದಶಿವ್ರತ ನಿರ್ಮಾಣವನ್ನೆ ಮಾಡಿದನು34 ಸತಿ ಎಂದೆಲ್ಲರು ಹೇಳುತಲಿಹರು ಎಲ್ಲಿದ್ದ ಆತಗೆ ಸುತನು 35 ಹಿಂದಟ್ಟಿ ಹೋದನು ಪುಳಿಂದ ಅಟ್ಟಡವಿಯೊಳಗಿರಲು 36 ಪೋಷಣೆಯನು ಮಾಡಿದರು ಭೂಸುರರನೆ ಪಾಲಿಸುವನು 37 ನಟ್ಟಂದದಿ ಮನದೊಳು ಮರುಗಿ ಎಂದು ತಾ ಮನದೊಳು ತಿಳಿದ 38 ಅನುಕೂಲವಾದ ಕಾರ್ಯವು ಮನದಲ್ಲಿ ಚಿಂತೆ ಮಾಡಿದನು 39
--------------
ಹೆಳವನಕಟ್ಟೆ ಗಿರಿಯಮ್ಮ
ಎಲ್ಲಾ ಶಾಸ್ತ್ರದ ಸಾರದ ತಿಳಲ್ಮನ ದಲ್ಲಿ ಹರಿಯನು ಕಾಂಬುದಕೆ ಪ. ಮನದಲಿ ಹರಿಯನು ಕಾಂಬುವ ಸೊಬಗು ಬಲ್ಲಿದ ವೈಕುಂಠಕೋಡ್ವದಕೆ ಅ. ವಿಧಿನೀಷೇಧಗಳಾಚರಿಸುವುದು ವಿಧ ವಿಧ ಜೀವರ ಸಾಧನಕೆ ವಿಧ ವಿಧ ಸಾಧನ ನಂತರ ತಿಳಿವುದು ವಿಧಿ ಜನಕನ ಪದಪಿಡಿವುದಕೆ 1 ಸ್ನಾನಜಪಾಹ್ನೀಕಗಳೆಲ್ಲವು ತನ್ನ ಧ್ಯಾನಕೆ ಶ್ರೀಹರಿ ನಿಲ್ವುದಕೆ ಧ್ಯಾನಕೆ ಶ್ರೀಹರಿ ನಿಂತ ಮೇಲೆ ಸು ಜ್ಞಾನದಿಂದ ತನ್ನರಿವುದಕೆ 2 ನೆಲೆ ಇಲ್ಲದ ಕರ್ಮಾಳಿಗಳ್ ದೇಹದ ಮಲಿನ ತೊಳೆದು ಶುದ್ಧಿಗೈವುದಕೆ ಮಲಿನ ತೊಳೆದು ಮನಶುದ್ಧದಿ ಹೃದಯದಿ ಇಳೆಯರಸನ ನೆಲೆ ಅರಿವುದಕೆ 3 ಅಗ್ನಿ ಹೋತ್ರಯಜ್ಞಾದಿ ಕಾರ್ಯಗಳ್ ಶೀಘ್ರದಿ ಹರಿಯನು ಕಾಂಬುದಕೆ ಶೀಘ್ರದಿ ಹರಿಯನು ಕಂಡ ಮ್ಯಾಲೆ ಇವು ಅಗ್ರಜವಲ್ಲೆಂದರಿವುದಕೆ 4 ರಂಗನ ಮೂರ್ತಿಯನಿಟ್ಟು ಪೂಜಿಸುವುದು ಅಂಗÀದಲ್ಲಿ ತಾನು ಕಾಂಬುದಕೆ ಅಂಗದಲ್ಲಿ ತಾನು ಕಂಡ ಮೇಲೆ ಇವು ಅಂಗಡಿ ಎಂತೆಂದರಿವುದಕೆ 5 ನಿತ್ಯ ನೈಮಿತ್ತಿಕ ಕರ್ಮಗಳೆಲ್ಲವು ಚಿತ್ತದಿ ಹರಿಯನು ತೋರ್ಪುದಕೆ ಚಿತ್ತದಿ ಹರಿಯನು ಕಂಡ ಮೇಲೆ ಇವು ಮತ್ರ್ಯರಿಗೆಸಗಿ ಮೌನಾಗ್ವುದಕೆ 6 ಚಾಂದ್ರಾಯಣ ವ್ರತ ಉಪವಾಸಗಳು ಇಂದ್ರಿಯ ನಿಗ್ರಹ ಮಾಡ್ವದಕೆ ಇಂದ್ರಿಯ ಚಲಿಸದೆ ಮನ ಧೃಡವಾಗಲು ಹಿಂದಿನ ಹಂಬಲ ತ್ಯಜಿಪುದಕೆ 7 ಮಧ್ವಶಾಸ್ತ್ರದ ಸಾರತತ್ವ ಮನ ಶುದ್ಧಿಯಗೈಸುತ ಸುಖಿಪುದಕೆ ಶುದ್ಧರಾದ ಶ್ರೀ ಗುರು ಕರುಣವು ಅನಿ- ರುದ್ಧನ ಹೃದಯದಿ ತೋರ್ವದಕೆ 8 ನೇಮದಿ ದ್ವಾದಶ ನಾಮಧಾರಣೆ ಹರಿ ನಾಮದ ದೇಹ ಬೆಳಗ್ವದಕೆ ಕಾಮಕ್ರೋಧವ ಬಿಡುವುದು ವಳಗಿನ ಶ್ರೀ ಮನೋಹರನನು ಕಾಂಬುದಕೆ 9 ಹೊರಗಿನ ವಸ್ತು ದೃಷ್ಟಿಸುವುದು ಶ್ರೀ ಹರಿ ವರ ವಿಶ್ವರೂಪವ ತಿಳಿವುದಕೆ ವರ ವಿಶ್ವರೂಪಧ್ಯಾನದಿಂದ ತನ್ನ ವರ ಬಿಂಬನ ಕಂಡು ನಲಿವುದಕೆ 10 ಅರಗಣ್ಣ ಮುಚ್ಚುವ ಅಭ್ಯಾಸಗಳೆಲ್ಲ ಸ್ಥಿರಮನವಾಗುವ ಕಾರಣಕೆ ಸ್ಥಿರಮನ ಶ್ರೀ ಹರಿ ದಯ ಮಾಡಲು ನೇತ್ರ ತೆರೆಯದೆ ಬಿಂಬನ ಕಾಂಬುದಕೆ 11 ಶಾಸ್ತ್ರದಿ ಪೇಳುವ ಧ್ಯಾನ ಪ್ರಕರಣವು ಶ್ರೋತ್ರದಿ ಕೇಳುತ ತಿಳಿವುದಕೆ ಗಾತ್ರದಿ ಶ್ರೀ ಗುರು ಕೃಪೆ ಮಾಡಲು ವಳ ನೇತ್ರದಿ ಸರ್ವವು ಕಾಂಬುದಕೆ 12 ಪಕ್ಷಮಾಸ ವ್ರತ ಪಾರಾಯಣ ಅಪ- ರೋಕ್ಷ ಪುಟ್ಟಲು ದಾರಿ ತೋರ್ವದಕೆ ಶಿಕ್ಷ ರಕ್ಷಕರಾದ ಗುರುಕರುಣವು ಅಪ- ರೋಕ್ಷ ಪುಟ್ಟಿಸಿ ನಿಜವರಿವುದಕೆ13 ಪರಿ ಜನರನು ಸೇವಿಸುವುದು ತನ್ನ ಪರಮಾರ್ಥತೆ ದೂರಾಗ್ವದಕೆ ಗುರುಚರಣವ ಸೇವಿಸುವುದು ಶ್ರೀ ಹರಿ ಅರಘಳಿಗಗಲದೆ ಪೊರೆವುದಕೆ 14 ಡಾಂಭಿಕ ಸಾಧನವೆಲ್ಲವು ಶ್ರೀ ಹರಿ ಡಿಂಬದೊಳಗೆ ಮರೆಯಾಗ್ವದಕೆ ನಂಬಿ ಶ್ರೀ ಹರಿ ಗುರು ಚರಣವ ಪೊಗಳ್ಪದು ಡಿಂಬದೊಳಗೆ ಹರಿ ಕಾಂಬುದಕೆ15 ಕರ್ಮ ವೈರಾಗ್ಯಗಳೆಲ್ಲವು ಪುಟ್ಟಿಸಲೂ ಭಕ್ತಿ ಜ್ಞಾನಕ್ಕೆ ಪುಟ್ಟಲು ಭಕ್ತಿ ಜ್ಞಾನ ಪಾಂಡುರಂಗ ವಿಠ್ಠಲನೊಬ್ಬನ ಪಿಡಿವುದಕೆ 16 ಯಾತ್ರೆ ತೀರ್ಥ ಚರಿಪುದು ಶ್ರೀ ಹರಿ ತನ್ನ ಗಾತ್ರದಲ್ಲಿರುವನೆಂದರಿವುದಕೆ ಗಾತ್ರವೆ ಕ್ಷೇತ್ರವೆಂದರಿತ ಮೇಲೆ ಸ ರ್ವತ್ರದಿ ವಿಠಲನ ಕಾಂಬುದಕೆ17 ಎಂತೆಂತೋ ಮಾರ್ಗಗಳರಸುವುದು ಚಿಂತನೆಗೆ ಹರಿ ನಿಲ್ವುದಕೆ ಚಿಂತನೆಗೆ ಹರಿ ನಿಂತ ಮೇಲೆ ತಾನು ಶಾಂತನಾಗಿ ಜಡನಾಗ್ವದಕೆ 18 ಹೊರಗಿನ ಸಂಸ್ಕಾರಗಳೆಲ್ಲವು ತನ್ನ ವಳಗಿನ ಸಂಸ್ಕಾರ ತೆರೆವುದಕೆ ವಳಗಿನ ಸಂಸ್ಕಾರ ತೆರೆದಮ್ಯಾಲೆ ತನ್ನ ಇರವರಿತು ಸುಖ ಸುರಿವುದಕೆ19 ಸಾಸಿರ ಜನ್ಮದ ಸಾಧನಗಳು ಹರಿ ದಾಸನಾಗಿ ತಾನು ಮೆರೆವುದಕೆ ದಾಸನಾದ ಮೇಲೆ ಕ್ಲೇಶಕೆ ಸಿಲುಕದೆ ಶ್ರೀಶನ ಹೃದಯದಿ ಕಾಂಬುದಕೆ 20 ಸಾರತತ್ವವನು ಅರಿವುದು ಗುರು ಮಧ್ವ- ಚಾರ್ಯರ ಮಾರ್ಗವ ಪಿಡಿವುದಕೆ ಪ್ರೇರಕ ಗೋಪಾಲಕೃಷ್ಣವಿಠಲ ಮನ ಸೇರಲು ಕಂಡು ತಾ ನಲಿವುದಕೆ 21
--------------
ಅಂಬಾಬಾಯಿ
ಎಲ್ಲಿದ್ದರು ಕಾಯ್ವ ಯದುಕುಲತಿಲಕ| ಭಕ್ತ ರೆಲ್ಲಿದ್ದರು ಕಾಯ್ವ ಯದುಕುಲತಿಲಕ ಪ ಅಡವಿಯೊಳಿರಲು ಅರಣ್ಯದೊಳಿರಲು ಮಡುವಿನೊಳಿರಲು ಮರದ ಮೇಲಿರಲು ಪೊಡವಿಗೀಶ್ವರ ತಾನು ದೃಢಭಕ್ತನಂ ಬಿಡದೆ ರಕ್ಷಿಸುವ ಯೆಂತೆಂಬೊ ಬಿರುದು 1 ತಂದೆಯ ಬಾಧೆಗೆ ಕಂದ ನಿಮ್ಮನು ಕರೆಯೆ ಬಂದು ಕಂಭದಲಿ ನೀ ಕಾಯ್ದೆ ಗೋವಿಂದಾ ಅಂದು ದ್ರೌಪದಿ ಹಾಯೆಂದು ಬದರಲು ಕೇಳಿ ಆ ನಂದದಿಂದಕ್ಷಯವನಿತ್ತ ರಂಗನು ನೀನು 2 ಭರದೆ ಭಗದತ್ತನು ಅಸ್ತ್ರ ಬಿಡಲು ಕೊರಳ ಚಾಚಿದನಾಗ ಕರುಣಾವಾರಿಧಿಯು ವರುಣಗದೆಯನಾಗ ಮರುಳತನದಿ ಬಿಡೆ ಮರಳಿ ಅವನ ಉರುಳಿಸಿತು ಶೃತಾಯುವು 3 ಸಿಂಧುರಾಜನ ಶಿರವ ಅವನ ತಂದೆ ಕೈಯಲಿ ಹಾಕಿ ಬಂದ ಭಾರವನೆಲ್ಲಾ ಕಾಯ್ದೆ ಗೋವಿಂದ ಕರ್ಣ ಅಪ್ರಮೇಯನು ಭೂಮಿ ಕ್ಷಿಪ್ರದಿಂ ಒತ್ತಿದಾ 4 ಅಂದು ಅರ್ಜುನ ತನ್ನ ಕಂದನೊಡನೆ ಕಾದೆ ಹಿಂದಿನ ವೈರದಿಂ ಶಿರವನ್ನು ಹರಿಯೆ ಬಂದು ಮುಕುಂದ ಸಂಧಿಸಿ ಶಿರವನ್ನು ಆ ಇಂದಿರೆ ರಮಣ5 ಉತ್ತರೆ ಗರ್ಭವು ಬತ್ತಿ ಬೀಳಲು ಆಗ ಉತ್ತಮ ಋಷಿಗಳೆಲ್ಲರ ನೋಡಿ ನಿತ್ಯಬ್ರಹ್ಮಚಾರಿಗಳು ಪಾದದೀ ಮೆಟ್ಟಿದರೆ ಬದುಕುವುದೆಂದನು ಕೃಷ್ಣ 6 ಸನತ್ಕುಮಾರರು ಶೌನಕರು ಮೊದಲಾಗಿ ಪರುಶುರಾಮ ಹನುಮಾದಿಗಳು ಬ್ರಹ್ಮಚರ್ಯವು ನಮಗಿಲ್ಲವೆನುತ ಬ್ರಹ್ಮಚರ್ಯಕ್ಕೆ ಆಧಾರ ನೀನೆನ್ನಲು ವಾಮಪಾದದಿ ತುಳಿದೆಬ್ಬಿಸಿದನು ಶಿಶುವ 7 ಸರಸಿರುಹನಯನಾ ಫಣಿರಾಜಶಯನ ಶರಣಾಗತದುರಿತಾಪಹರಣ ದೈತೇಯಸಂಹರಣ ಗೋವರ್ಧನೋದ್ಧರಣ ಪೀತಾಂಬರಾಭರಣ ಕೌಸ್ತುಭಾಭರಣ 8 ಅಶ್ವತಾಮನ ಅಸ್ತ್ರ ವಿಶ್ವವನು ಸುಡುತಿರೆ ವಿಶ್ವನಾಯಕ ಶಮನ ಮಾಡಿ ಕಾಯ್ದು ಅಸಮಸಾಹಸದಿ ಚಕ್ರವ ಪಿಡಿದು ಗರ್ಭದ ಶಿಶುವನ್ನು ಕಾಯ್ದ ಕುಶಲಿ ವೆಂಕಟಕೃಷ್ಣ 9
--------------
ಯದುಗಿರಿಯಮ್ಮ
ಏನಾದರೇನಲ್ಲಿ ಇರಕೂಡದು ಹೋಗಿ ಆನಂದ ಕಾನನದೊಳಿರೆ ಸುಖವದು ಪ ನರಮನುಜರೊಳಗಿಲ್ಲಿ ಜನಿಸಿಭೂತಳಕೆಲ್ಲ ದೊರೆಯೆನಿಸಿ ಭೋಗ ಪಡಿಸುವುದರಿಂದಲು ಮಣಿ ಕರ್ಣಿಕೆಯ ಸರಸಿಯೊಳು ಚರಿಸಿ ಮಡಿದರೆ ಮುಕ್ತಿಯಹುದು 1 ಕೊಕ್ಕದಲಿ ವನಿತೆ ಮನೆಮಕ್ಕಳಲಿ ಪಶುಗಳಲಿ ಹೆಕ್ಕಳದೊಳಿಲ್ಲಿ ಸಾವುದರಿಂದಲು ಹೊಕ್ಕು ಮನೆ ಮನೆ ಬಿಡದೆ ಕಾಶಿಯಲಿ ತಿರಿದುಂಡು ಡೊಕ್ಕೆಯನು ಬಿಡೆ ಮೋಕ್ಷ ಪದವಿಯಹುದು 2 ಹರಿ ಸುತನ ಕೋಣೆ ಲಕ್ಷ್ಮೀಪತಿಯ ಪಾದ ಸರಸಿರುಹದಲಿ ಜನಿಸಿರ್ದ ಜಾಹ್ನವಿಯಲಿ ನರ ಮುಳುಗಿ ಕಾಶಿ ವಿಶ್ವೇಶ್ವರನ ಸನ್ನಿಧಿಯೊಳೊರಗಿದರೆ ಮರಳೆ ಜನ್ಮಕೆ ಬಾರೆನೋ 3
--------------
ಕವಿ ಪರಮದೇವದಾಸರು
ಏನಿದ್ದರೇನು ಈ ಮಾನವನಿಗೆ ಜಗದಲ್ಲಿ ದಾನವಾಂತಕನ ಗುಣಜ್ಞಾನವನು ಪೊಂದದಲೆ ಪ ಕಾನನದಿ ಬೆಳಗುತಿಹ ಬೆಳದಿಂಗಳಂದದಲಿ ಜ್ಞಾನ ಹೀನನಿಗೆ ಈ ಮಾನವನ ಜನುಮ ಅ.ಪ ದಾನ ಮಾಡಿದರೇನು ಧರ್ಮ ಮಾಡಿದರೇನು ಸ್ನಾನ ಮಾಡಿದರೇನು ನದಿನದದಲಿ ಜ್ಞಾನವಿಲ್ಲದ ಕರ್ಮಗಳ ರಚಿಸಲೇನುಂಟು ವಾನರಗೆ ಕರದೊಳಿಹ ಮಣಿಗಳಿಂದೇನು ಫಲ 1 ಯಾತ್ರೆ ಮಾಡಿದರೇನು ಕಾಶಿ ರಾಮೇಶ್ವರದ ಕ್ಷೇತ್ರಗಳ ವಾಸದಿಂದೇನು ಫಲವು ಚಿತ್ರ ಚರಿತನಲಿ ದೃಢಭಕುತಿಯನು ಪೊಂದದಿರೆ ನೇತ್ರರಹಿತನಿಗುಂಟೆ ಚಿತ್ರಗಳ ಫಲವು 2 ಹೊನ್ನಿನ ಮದದಿಂದ ಹೆಮ್ಮೆಗೋಸುಗ ಬಹಳ ಅನ್ನಛತ್ರಗಳ ರಚಿಸಿದರೇನು ಫಲವು ತನ್ನವರ ದೃಢಭಕುತಿಯನ್ನರಿವ ಸತತ ಪ್ರ ಸನ್ನ ಹರಿದಾಸರಿಗೆ ಇನ್ನೇನು ಬೇಕು 3
--------------
ವಿದ್ಯಾಪ್ರಸನ್ನತೀರ್ಥರು
ಏನು ಇದ್ದರೇನು ನಿನ್ನ ಸಂಗದ ಸಂಗಡ ಬಾರದೇನು ದಾನ ಧರ್ಮವ ಮಾಡಿದ್ದೊಂದು ಬೆನ್ನಬಿಡದದೇನು ಪ ಆಳು ಕಾಳು ಮಂದಿ ಮನುಷರು ಬಹಳವಿದ್ದರೇನು ಮಾಳಿಗೆ ಕೈಸಾಲೆ ಚಂದ್ರಶಾಲೆಯಿದ್ದರೇನು ನೀಲ ಮುತ್ತು ಕೆಂಪಿನುಂಗುರ ಕೈಯಲಿದ್ದರೇನು ಕಾಲನವರು ಎಳೆಯುತಿರಲು ನಾಲಗೆಗೆ ಬಾರದೇನು 1 ನೆಟ್ಟ ಹತ್ತಿಲು ತೋಟ ತೆಂಗು ಎಷ್ಟುತಾನಿದ್ದರೇನು ಮಹಿಷಿ ಸಾವಿರವಿದ್ದರೇನು ಪಟ್ಟೆ ಶಾಲು ಚಿನ್ನದ ಕುಳದ ಘಟ್ಟಿಯಿದ್ದರೇನು ಕಟ್ಟಿಯಿಟ್ಟ ಗಂಟುನಿನ್ನ ಸಂಗಡ ಬಾರದೇನು 2 ಲಕ್ಷವಿತ್ತ ಜಯಿಸಿ ರಾಜ್ಯ ಪಟ್ಟವಾದರೇನು ಕಟ್ಟಿದಾನೆ ಮಂದಿ ಕುದುರೆ ಹತ್ತಿರಿದ್ದರೇನು ನೆಟ್ಟನೆ ಜೀವಾತ್ಮ ಗೂಡ ಬಿಟ್ಟು ಪೋಗದೇನು ಕುಟ್ಟಿ ಕೊಂಡಳುವುದರೆ ಮಂದಿ ಎಷ್ಟು ಇದ್ದರೇನು 3 ಮಕ್ಕಳು ಮೊಮ್ಮಕ್ಕಳು ಹೆಮ್ಮಕ್ಕಳಿದ್ದರೇನು ಚಿಕ್ಕ ಪ್ರಾಯದ ಸತಿಯು ಸೊಸೆದಿಕ್ಕಳಿದ್ದರೇನು ಲೆಕ್ಕವಿಲ್ಲದ ದ್ರವ್ಯ ನಿನಗೆ ಸಿಕ್ಕುಯಿದ್ದರೇನು ಡೊಕ್ಕೆ ಬೀಳೆ ಹೆಣವ ಬೆಂಕಿಗಿಕ್ಕಿ ಬರುವರೋ 4 ಹೀಗೆ ಎಂದು ನೀನು ನಿನ್ನ ತಿಳಿದು ಕೊಳ್ಳಬೇಕೋ ಆಗೋದ್ಹೋಗೋದೆಲ್ಲ ಈಶ್ವರಾಜÉ್ಞ ಎನ್ನ ಬೇಕೋ ವೈರಿ ಕೋಣೆ ಲಕ್ಷ್ಮೀರಮಣನ ಭಜಿಸಬೇಕೋ ಯೋಗ ಮಾರ್ಗದಿಂದ ನೀನು ಮುಕ್ತಿ ಪಡೆಯ ಬೇಕೋ 5
--------------
ಕವಿ ಪರಮದೇವದಾಸರು
ಏನು ಕಾರಣ ಬಂದೆ ಗಂಗೆ | ನಾನೇನು ಪುಣ್ಯವನು ಮಾಡಿದವನಲ್ಲ ಪ ಕಾಸೀಪುರದಿಂದಲಿ ದೇಶ ನೋಡಲು ಬಂದ್ಯೋ | ಬೀಸಿ ಬಿಸುಟುವಂಥ ಅಸ್ಥಿಗಾರದೆ ಒಂದ್ಯೋ | ದಾಸರ ಮಹಿಮೆಯನು ನೋಡುವೆನೆಂದು ಬಂದ್ಯೋ | ದೋಷವರ್ಜಿತ ವಾರಣಾಸಿ ಕಡಿಯದಲೆ | ಲೇಸಾಗಿ ತಿಳಿಪುವದು ಭೀಷ್ಮನ ಜನನೀ 1 ತಿಲನೀರು ಕುಡಿದು ಧರಿಸಲಾರದೆ ಬಂದ್ಯೋ | ಮಲಜನರ ದೋಷವನು ಕಳೆವೆನೆಂದು ಬಂದ್ಯೋ | ಕಲಿಯುಗಕೆ ಈ ಕೃಷ್ಣಾ ಅಧೀನಳೆಂದು ಬಂದ್ಯೋ | ಸುಲಭ ತ್ರಿದದೇಶ್ವರಿ ಗಂಗೆ ತಡೆಯದಲೆ | ನೀರಜ ನಯನೇ 2 ನಿತ್ಯ ಕರ್ಮಗಳು ನೋಡಲಿ ಬಂದ್ಯೋ | ಮಜ್ಜನವ ಮಾಡಿಸಿ ಎನ್ನ ಪೊರಿಯಲು ಬಂದ್ಯೋ | ಮೂಜಗದೊಳು ಪೆಸೆರಾಗಿಪ್ಪೆನೆಂದು ಬಂದ್ಯೋ | ನಿರ್ಜನ ತಟನಿ ನಿರ್ಗುಣಸಾಂದ್ರೆ ತಡಿಯದಲೆ | ನಿಜವ ತಿಳುಪುವದು ವಿಜಯವಿಠ್ಠಲಸುತೆ 3
--------------
ವಿಜಯದಾಸ
ಏನು ವರ್ಣಿಸಿದ ಕವೀಶ್ವರ ನಾರಿಯಜ್ಞಾನಕೆ ಹಾನಿಯ ಮುಕ್ತಿಗೆ ಮೃತ್ಯುವಕಾನನ ರೂಪು ನರಕ ಕುಂಡವೆಂಬಳತಾನು ಕೆಡಲು ಸುಳ್ಳು ಸ್ತುತಿ ಮಾಡಿದ ಪ ಗುದ್ದಲಿ ಮೂಗನು ಸಂಪಿಗೆ ನನೆ ಎಂದಬುದ್ದಲಿ ಮುಖವನು ಪದ್ಮಮುಖವೆಂದಇದ್ದಲಿ ತನುವನು ಇಂದ್ರನೀಲವೆಂದಹದ್ದಿನ ಕೈಯನು ಹರಿ ಸುಂಡಲೆಂದ 1 ಬೆಳ್ಳುಳ್ಳಿ ಹಲ್ಲನು ದಾಳಿಂಬ ಬಿತ್ತವೆಂದಹುಲ್ಲೆಗಣ್ಣೆಂದನು ಸುಳಿಗಣ್ಣಮಲ್ಲಿಗೆ ಮೊಳೆಯೆಂದನು ಮುರುಕಿ ಮಾತುಗಳನ್ನುಜೊಲ್ಲು ಸುರಿವುದಕೆ ಅಮೃತವೆಂದನು 2 ಕುಂಭ ಕುಚವೆಂದನು ಮಾಂಸದ ಮುದ್ದೆಯಬಿಂಬಾಧರವೆಂದನು ಹಂದಿಯ ತುಟಿಯಕಂಬ ಬಾಳೆ ಎಂದನು ಕೊರಡು ತೊಡೆಯನುಬಿಂಬ ಕನ್ನಡಿ ಎಂದನು ಕುಣಿಗಲ್ಲವ 3 ಕಲಹಂಸ ನಡಿಗೆಯೆಂದ ಕೋಣನ ನಡಿಗೆಯಅಳಿಕುಂತಳವೆಂದ ಮುರುಟು ಕೂದಲನುಬಲು ಸಿಂಹನಡುವೆಂದ ಮೊಸಳೆ ನಡುವನ್ನುಹೊಳೆವ ಬೊಂಬೆಯೆಂದ ಕೊಳಕು ಮೈಯನ್ನು 4 ಹೊಲಸು ಮೂಳಿಗೆ ನಾನಾ ಹೋಲಿಕೆಗಳನಿಟ್ಟುತಿಳಿದಂತೆ ಕವಿತಾನು ವರ್ಣಿಸಿದ ಕೊಂಡಾಡಿಸುಲಭ ಚಿದಾನಂದ ಸುಪಥವ ಕಾಣದಲೆಕಳಕೊಂಡ ಕವಿತಾನು ಬಹು ಪುಣ್ಯ ಪಥವ 5
--------------
ಚಿದಾನಂದ ಅವಧೂತರು
ಏನೆಂದರಿಬೇಕೀ ಆಟಾ ಘನಗುರು ಮಾಡಿದ ಮಾಟ ಅನುಮಾನಳಿಸಿದ ನೋಟ ಅನುಭವಕಾಯಿತು ನೀಟ ಧ್ರುವ ರಂಜಕ ಬಲುಕೊಂಡಿತು ನೋಡಿ ಅಂಜಿಕಿ ಭವಭಯ ಈಡ್ಯಾಡಿ ಪ್ರಾಂಜಲ ಸದ್ಗುರು ದಯಮಾಡಿ ಅಂಜನ ಹಚ್ಚಿದ ದುವುಡಿ 1 ಕಾಣದ ಕಂಡೆವು ಕಣ್ಣಿಲಿ ಖೂನಕ ಬಾರದು ಘನಲೀಲೆ ಜಾಣರು ಬಲ್ಲರು ಮನದಲಿ ನೆನದರು ತಾಂ ವರಿಕಿಲೆ 2 ಆಶ್ವರ್ಯವು ತಾನಾಗ್ಯದೆ ನಿಶ್ಚಯದೋರುತಲ್ಯದೆ ಪಶ್ಚಿಮಕೆ ಭಾಸುತದೆ ಸ್ವಚ್ಛವು ನೋಡಿದರದೆ 3 ರಚ್ಚಿಗೆ ತಾಂ ಬಾಹುದೆಲ್ಲ ಮುಚ್ಚಿಟ್ಟಡೆÉ ಬಾಳು ಸವಿಬೆಲ್ಲ ಅಚ್ಚಳಿಯದ ಭಕ್ತನೆ ಬಲ್ಲ ನೆಚ್ಚಿದ ಮಹಿಪತಿ ಸೊಲ್ಲ4
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಏನೆಂಬೆನು ಪವಮಾನ ದೇವನಲಿ ಶ್ರೀನಿವಾಸ ಕರುಣಾ ತಾನಾಗೀತನಕಡೆಯಲಿ ಬಹ ಲಕ್ಷ್ಮೀಮಾನ, ದೀನ ಶರಣಾ ಪ. ದುರುಳ ದಶಾಸ್ಯನ ಸೆರೆಯೊಳಗಿಕ್ಕಿದ ಸುರವರನಣುಗನನೂ ನೆರೆಯದೆ ಮಾರುತಿ ಇರುವ ನಿಮಿತ್ತದಿ ಕರಿಸಿದ ರವಿಜನನು ತಿರುಗಿ ದ್ವಾಪರದಿ ಬರಲಾರ ರವಿಜನ ನರನಿಂದೊರಸಿದನು ಎರಡು ಯುಗದೊಳೀ ತೆರದಲಿ ಭಾರತಿ ವರನನು ಸೇರಿದನು 1 ಶ್ರೀಕರ ಜೀವರಿಗೇಕೀ ಭಾವವ ಪೋಕ ಮೃಗಗಳಂದೂ ಕಾಕರಟನದಂತೊರೆವದನರಿತು ದಿ- ವೌಕಸಗಣಬಂದು ಶ್ರೀಕಮಲಾಸನ ವಂದ್ಯನೆ ಸಲಹೆನೆ ಸಾಕುವ ತಾನೆಂದೂ ಈ ಕಲ್ಯಾಣ ಗುಣಾಢ್ಯನ ಭೂಮಿಗೆ ತಾ ಕಳುಹಿದನಂದು 2 ಅದರಿಂ ತರುವಾಯದಲಿ ಸುಖಾಂಭುದಿ ಒದಗಿದ ತ್ವರೆಯಿಂದ ಪದುಮನಾಭ ಮೂರುತಿಯ ಕೆಲದಿ ನಿಂ- ದದುಭುತ ಭರದಿಂದಾ ವಿಧಿಭವ ಲೋಕಾದ್ಯಧಿಕೃತ ಪುಣ್ಯಾ ಸ್ಪದ ತೋರುವೆನೆಂದಾ ವಿಧಿ ಪದ ಯೋಗ್ಯನ ಚದುರತನಕೆ ಮೆಚ್ಚಿ ಪೂರ್ಣಾನಂದ 3 ವರ ವೈಕುಂಠವ ರಜತ ಪೀಠ ಸ- ತ್ಪುರದೊಳಗಿರಿಸಿಹನು ವಿರಜೆಯ ಮುನಿಕಡತ ಸರಸಿಗೆ ಕರೆಸಿದ ಮುರದಾನವಹರನು ಚರಣಾಂಬುಜಕಿಂಕರವರ ಚಂದ್ರೇ- ಶ್ವರನಲಿ ಕರುಣವನು ಇರಿಸಿ ಭಜಿಪ ಸುರತರುವೆನಿಸಿದ ಶ್ರೀ- ವರನ ಮಹಾತ್ಮೆಯನು 4 ಜ್ಞಾನಾನಂದಾಂಬುಧಿ ಶೇಷಾದ್ರಿಯ ಶ್ರೀನಿವಾಸನಿವನು ತಾನಾಗಿಲ್ಲಿಗೆ ಬಂದಿಹ ಭಕ್ತಾ- ಧೀನ ದಯಾಕರನು ಮಾನಸಗತ ಮಾಲಿನ್ಯವ ಕಳೆದನು ಮಾನವ ಬಿಡಿಸುವನು ನಾನಾಭೀಷ್ಟವ ನಿರವಧಿ ಕೊಡುತಿಹ ಮೌನಿ ಜನಾರ್ಚಿತನು 5
--------------
ತುಪಾಕಿ ವೆಂಕಟರಮಣಾಚಾರ್ಯ
ಒಡಲೆರಡಂತೆ ಅಸುವೊಂದಂತೆ ನುಡಿಯಿದು ನಿಜವೇ ಪೇಳೇ ಗೋಪಮ್ಮ ಪ ನಡೆ ನುಡಿ ಭಾವಗಳೊಂದೇಯಂತೆ ಹುಡುಗನೇನೇ ಕೃಷ್ಣ ಪೇಳೇ ಗೋಪಮ್ಮ ಅ.ಪ ಸೋದರಿಯರು ಇದ ಹೇಳುವರಮ್ಮ ನಾದ ನರ್ತನ ದೇಹಕಾಂತಿಗಳಲ್ಲಿ ಭೇದವಿಲ್ಲೆಂಬರು ನಿಜವೇನಮ್ಮಾ 1 ಬಾಲೆಯು ತಾನೆ ಗೋಪಾಲನೆನುವಳಂತೆ ಬಾಲಕೃಷ್ಣನು ರಾಧೆ ತಾನೆಂಬನಂತೆ ಬಾಲನಾರಿದರಲ್ಲಿ ಬಾಲೆಯಾರಿವರಲ್ಲಿ ಮೂಲತತ್ವವ ನೀನೆ ಹೇಳೇ ಗೋಪಮ್ಮ 2 ಯುಗ ಯುಗದಲ್ಲಿ ತಾನವತರಿಸುವ ಕೃಷ್ಣ ಜಗದೀಶ್ವರನೆ ತಾದಿಟವಮ್ಮ [ಮಿಗೆ] ಭಾಗ್ಯವೆ ನಿನ್ನದಾಗಿಹುದಮ್ಮ 3 ನಿರುಪಮ ಭಕ್ತಿಯಮೂರ್ತಿಯು ರಾಧೆ ಮುರಳೀಧರನಲಿ ಒಂದಾಗಿಹಳು ಅರಿತುದ ಪೇಳ್ವೆನು ಮಾಂಗಿರಿರಂಗನ ಶರಣರಿಗೀತತ್ವ ಕರಗತವಮ್ಮಾ 4
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಒಡಿಯಾ ನಿನ್ನಡಿಗಳಿಗೆ ಬಿಡದೆ ನಾ ನಮೋ ಎಂಬೆ ಕೊಡು ಎನಗೆ ದೃಢ ಪದವಿ ಕಡಲಶಯನಾ ಪ ಪಿತನ ತೊಡಿಯ ಮೇಲೆ ಕುಳಿತಿರಲು ಮಲತಾಯಿ ಅತಿ ರೋಷದಿಂದವನ ಹೊಯಿದೆಬ್ಬಿಸೆ ಖತಿಯಿಂದ ವನಕೆ ಪೋಗಿ ನಿನ್ನ ಪೂಜಿಸಲು ಮತಿವಂತನ ಮಾಡಿ ಧ್ರುವಪದವಿ ಕೊಡಲಿಲ್ಲವೆ 1 ತಂದೆ ಬಾಧಿಸೆ ಧೃತಿಗೆಡದೆ ನರಹರಿ ಗೋ ವಿಂದ ನಾರಾಯಣ ಕೃಷ್ಣ ವಿಷ್ಣು ಇಂದಿರಾರಮಣ ಇನಕುಲತಿಲಕ ಎಂದೆನಲು ಕಂದನಿಗೆ ಕೈವಲ್ಯಪದವಿ ಕೊಡಲಿಲ್ಲವೇ2 ಜಾತಿಧರ್ಮವ ಬಿಟ್ಟು ಅಜಮಿಳನು ಚಂಡಾಲ ಜಾತಿ ವಧುವಿಗೆ ಸೋತು ಕೆಟ್ಟು ಯಮನ ದೂತರನ ನೋಡಿ ಕಂಗೆಟ್ಟು ಮಗನನು ಕರಿಯೆ ಪ್ರೀತಿಯಲಿ ವೈಕುಂಠ ಪದವಿ ಕೊಡಲಿಲ್ಲವೇ 3 ವನಿತೆ ಪತಿವ್ರತವಾನಂತನನುಚರಿಸಿ ಬಂದಿರಲು ಮನದ ಖೇದವ ತಾಳಿ ಹರಿದು ಬಿಸುಟೆ ಮುನಿಪುಂಗ ಅಡವಿಯನು ತೊಳಲಿ ನೆಂದು ಬಿದ್ದಿರಲು ಪುನರ್ವಸು ಸ್ಥಾನವು ಕೊಡಲಿಲ್ಲವೆ4 ಶೌರ್ಯದಲಿ ಅಬ್ಧಿಯನು ಹಾರಿ ಲಂಕೆಯ ಸುಟ್ಟು ಧೂರ್ಯದಲಿ ರಕ್ಕಸರನೊರಿಸಿ ಬಿಸುಟೂ ಕಾರ್ಯದಲಿ ಹನುಮಂತ ನಿನ್ನ ಮೆಟ್ಟಿಸೆ ಒಲಿದು ಸೂರ್ಯಭಾಂದವಗೆ ಜನಪದವಿ ಕೊಡಲಿಲ್ಲವೆ 5 ಸೋದರಗೆ ಬುದ್ದಿಯನು ಪೇಳೆ ಕೇಳದೆಯಿರಲು ಪಾಧಾರಿ ದಾಟಿ ನಿಮ್ಮ ಸೇವಿಸಿ ಕಾದಿ ರಾವಣನ ಛೇದಿಸಿ ಲಂಕಾಪುರ ಪದವಿ ಪರಿಯಂತ ಕೊಡಲಿಲ್ಲವೆ 6 ಚಿತ್ತದೊಳು ಆವಾಗ ನಿನ್ನ ಧ್ಯಾನವ ಮಾಡಿ ವಿತ್ತಾದಿ ದಾನಗಳು ಮಿತಿಯಿಲ್ಲದೇ ಅತ್ಯಂತ ಕೊಡುವವನ ಮೂರು ಪಾದವ ಬೇಡಿ ಭಕ್ತಗೆ ನಲಿದು ಸುರಪದವಿ ಕೊಡಲಿಲ್ಲವೆ 7 ಮಾನಿನಿಯ ಸೀರಿಯನು ಸಭೆಯೊಳಗೆ ದುರುಳರು ಅಭಿ ಮಾನ ಭಂಗವ ಮಾಡಿ ಸುಲಿವುತಿರಲು ಶ್ರೀನಾಥ ಕೇಶವ ಮುಕುಂದನೆಂದು ಮೊರೆ ಇಡೆ ನೀನರಿತು ಅಕ್ಷಯಾಂಬರ ಕೊಡಲಿಲ್ಲವೆ8 ಬಡತನ ಉಳ್ಳವನಾಗಿ ಕ್ಲೇಶದಲಿ ಸುಧಾಮ ನಡುಗುತಲಿ ನಿನ್ನ ಪಟ್ಟಣಕೆ ಬರಲು ಹಿಡಿತುಂಬಿ ಅವಲಕ್ಕಿಗೆ ಸಂತೃಪ್ತನಾಗಿ ಕಡೆಯಿಲ್ಲದೈಶ್ವರ್ಯ ಪದವಿ ಕೊಡಲಿಲ್ಲವೆ 9 ಸರಸಿಯೊಳು ಬಾಲಕನ ನೆಗಳಿ ಪಿಡಿದು ನುಂಗೆ ಗುರುದಕ್ಷಿಣವ ಬೇಡೆ ಸಾಂದೀಪನು ಭರದಿಂದ ಪೋಗಿ ಕೃತಾಂತನೊಳು ಭೂ ಸುರಗೆ ಸುಪುತ್ರ ಪದವಿ ಕೊಡಲಿಲ್ಲವೆ 10 ಭುಜಕರೆಲ್ಲರು ನಿನಗೆ ಭಾಗ್ಯವನು ಕೊಡಲಿಲ್ಲ ಭಜಿಸಿದರವರು ತಮ್ಮ ತಕ್ಕ ತೆರದಿ ಭಜಿಸುವೆನು ನಿನ್ನ ತಕ್ಕಂತೆ ದೃಢ ಪದವಿಕೊಡು ಸಿರಿ ವಿಜಯವಿಠ್ಠಲನೆ11
--------------
ವಿಜಯದಾಸ
ಒಂದು ಪಥವ ಹೊಂದಲರಿಯರೀ ಮನುಜರು ಇಂದಿರೇಶನ ಪಾದವ ಕಾಣದೆ ಕೆಡುವರು ಧ್ರುವ ಒಂದರೆ ಘಳಗಿ ನಾನೆವೆ ಮಾಡಿದೆನೆಂಬರು ಒಂದರೆ ಘಳಗಿ ಪ್ರಾಚೀನವೆಂಬರು ಒಂದರೆ ಘಳಗಿ ಈಶ್ವರ ಸೂತ್ರವೆಂಬರು ಒಂದರೆ ಘಳಗಿ ತಾ ಏನೋ ಎಂತೆಂಬರು 1 ಒಮ್ಮೆ ಜಾಗೃತಿಯೊಳಿದೇ ನಿಜವೆಂಬರು ಖರೆ ಎಂಬರು ಒಮ್ಮೆ ಸುಷುಪ್ತ್ತಿಯೊಳಿದೇ ಸತ್ಯವೆಂಬರು ಒಮ್ಮೆ ಇದರ ಶುದ್ಧಿ ತಿಳಿಯದಂತಿಹರು 2 ಒಂದು ತಿಳಿದರ ಸಕಲವು ಒಂದಾಗಿ ದೋರುವದು ಒಂದರೊಳಗ ಸಕಳ ದೊರೆಕೊಂಬುದು ಒಂದಾಗಿ ಸಲಹುವ ಮಹಿಪತಿ ಸ್ವಾಮಿಯ ತಂದೆ ಸದ್ಗುರು ಭಾಸ್ಕರ ಕೋಟಿ ತೇಜನು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಒಂದೇ ಮಂತ್ರವು ಸಾಕೋ ಶ್ರೀರಾಮ ಎಂಬ ಪ ಒಂದುಸಾಸಿರ ಮಂತ್ರಕೊಂದೇ ಸಾಟಿಯು ಎಂದು ಇಂದುಶೇಖರ ಪೇಳ್ವ ಶ್ರೀರಾಮ ನಾಮವೆಂಬ ಅ.ಪ ಮಾಹೇಶ್ವರ [ನುತ] ಮಂದರೋದ್ಧಾರ ಕೇಶವ ಶ್ರೀಹರಿ ಭೂದೇವಿಯುತ ಮೃಗೇಂದ್ರ ವರದಾ ರೋಹಿಣಿಪುತ್ರ ವೇಣುವಿಶಾರದ ಬಾಧಾಪಹಾರಕ ಕೇಶವ ನಾಮಂಗಳೆಲ್ಲಕೆ 1 ನಾರಾಯಣಾಚ್ಯುತ ಗೋವಿಂದ ಮಾಧವ ನೀರೇಜಭವತಾತ ದಾಮೋದರ ಕ್ಷೀರಾಬ್ಧಿ ಮಂದಿರ ಖಗೇಂದ್ರವಾಹನ ಶ್ರೀರಂಗ ಮಾಂಗಿರಿಯ ಕೋದಂಡಧರನೆಂಬ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಒಲ್ಲೆ ಸಂಪದವನೆಲ್ಲವನು ತೆಗೆದುಕೊ ಚೆಲ್ವ ವೇಲಾಪುರೀಶಾ ಸ್ವಾಮಿ ಪ ಬಲ್ಲವರು ನಿನಗೆ ಸರಿಯಿಲ್ಲೆಂದು ಪೊಗಳುತಿಹ ಸೊಲ್ಲ ನಾ ಕೇಳಲಾರೆ ಸ್ವಾಮಿ ಅ.ಪ ಪೆತ್ತಯ್ಯ ತಿರುಮಲಾರ್ಯರು ವರ್ಣಕರ ಚಕ್ರ ವರ್ತಿಯೆಂಬಾ ಬಿರುದನು ಒತ್ತಿ ಪೊಗಳಿಸಿಕೊಂಡುದೇನಂದದಲಿ ತಿರು ಗುತ್ತಿರ್ದಡೇನು ಭಾಗ್ಯಾ ಮತ್ತದೆನಗಾರ್ಜಿತವೆ ಸತ್ತವರ ಸಂಪದವ- ನತ್ತಲೇ ಕಳುಹಿಕೊಡದೆ ಇತ್ತಪರೆ ನಿನ್ನ ದಾಸನುದಾಸರಿಗೆ ಸೇ ವ್ಯೋತ್ತಮನೆ ಕೆಡಿಸಬೇಡಾ ಸ್ವಾಮಿ 1 ಹರಿಯೆ ನೀ ಒಲಿದೂಳಿಗವನು ಮಾಡಲು ಬಳಿಕ ಕಿರುನುಡಿಯ ಮೀರದಿರಲು ಕರುಣದಿಂದಾಗಾಗ್ಯೆ ಕರೆದುಡುಗೊರೆಯ ಕೊಡಲು ಬಿರುದುಗಳು ಮೆರೆಯುತಿರಲೂ ಸ್ಥಿರವಿಲ್ಲದಷ್ಟ ಮಹದೈಶ್ವರ್ಯವಿರುತಿರಲು ಪಿರಿಯರೆಲ್ಲರು ಪೊಗಳಲೂ ಮೆರೆಯನೇ ಮಿಗೆ ಅಹಂಕರಿಸನೇ ಬೆರೆಯನೇ ನರಕಕಿಳಿಯನೇ ಮರಳಿ ಜನಿಸನೇ ಸ್ವಾಮಿ 2 ಸುಖವಿಲ್ಲ ಸುಖವಿಲ್ಲ ಸುಖವಿಲ್ಲ ಭಾಗ್ಯದಾ ಸಕರೆಯನು ನಾನೊಲ್ಲೆನೂ ಭಕತವತ್ಸಲನೆ ಭಾಗವತಲೋಲುಪನೆ ದುಃ ಖಕೆ ಕಾರಣವಿಲ್ಲವೆ ಅಕಳಂಕ ಚರಿತನೆ ಆದಿನಾರಾಯಣನೆ ಮಕರಧ್ವಜನ ತಾತನೆ ಸುಖವೀಯೊ ವೈಕುಂಠ ವೇಲಾಪುರಾಧೀಶ ಭಕುತಿಯನು ಕೊಟ್ಟು ಸಲಹೊ ಸ್ವಾಮಿ 3
--------------
ಬೇಲೂರು ವೈಕುಂಠದಾಸರು