ಒಟ್ಟು 200 ಕಡೆಗಳಲ್ಲಿ , 60 ದಾಸರು , 178 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ರಥವಾನೇರಿದ ಶ್ರೀ ಹನುಮಂತ | ಭೀಮ ಬಲವಂತ ಪ ಗತ ಶೋಕನ ಪದ | ರತಿ ಇಚ್ಛಿಪರಿಗೆಹಿತದಿಂದಲಿ ಸದ್ | ಗತಿಯ ಕೊಡುವೆನೆಂದು ಅ.ಪ. ಪತಿ ಕರಿಸೆನ್ನಲು |ಪ್ರತಿ ಪ್ರತಿ ತತುವರು | ಗತ ವಿಭವದಲಿರೆಪ್ರತಿ ನಿನಗಿಲ್ಲೆಂದೆ | ನುತಲಿ ತೋರಿದ 1 ಗರ ಉದುಭವಿಸಲುಹಿತದಿಂದಲಿ ಜಗ | ಪತಿಯಾಣತಿಗಳ |ಪತಿ ಕರಿಸುತ ನೀ | ಪಾತ್ರಗ ಗರವನುಮತಿ ವಂತನೆ ಕುಡಿ | ದತಿಶಯ ತೋರಿದೆ 2 ಮೂರು - ಕೋಟಿಯ ರೂಪ - ಧರನೆ | ಮೂರ್ವಿಕ್ರಮ ಸೇವಕನೆಮೂರು ಲೋಕಂಗಳ ವ್ಯಾಪಕನೆ | ರಕ್ಕಸಾಂತಕನೆ ||ಆರು ಮೂರುಗಳು | ಎರಡೊಂದನೆ ದಶನೂರು ಮೇಲೆ ಆ | ರ್ನೂರ್ ಜಪಗಳ |ಮೂರು ಭೇದ ವಿಹ | ಜೀವರುಗಳಲಿವಾರ ವಾರಕೆ ನೀ | ಗೈಯ್ಯುವೆ ಗುರುವೇ 3 ವಿಶ್ವ ಕ ಕರ್ಮ ಸಮೂಹವಸಾಕ್ಷಾತ್ತಾಗಿ ತಾನೆ | ಗೈಯ್ಯುವೆನೆಂದು 4 ಆನನ ಕಮಲಕೆಭಾನುವೆನಿಸುತಲಿ | ದುಶ್ಯಾಸನನಗೋಣ ಮುರಿದುರದಿ | ಕೋಣನ ವಿರಚಿಸಿಶೋಣಿತ ಕುಡಿದಂತೆ | ಕಾಣುವೆನೆಂದು 5 ಚಕ್ರಧರ | ಅಂಬುಜ ನಯನನಬೆಂಬಿಡದಲೆ ನೀ | ಸಂಭಮ್ರದಲಿ ನಿನ |ಅಂಬಕದಲಿ ನಿನ | ಬಿಂಬನ ಕಾಣುತತ್ರ್ಯಂಬಕನಿಂ ಸಂ | ಭಾವನೆ ಗೊಳ್ಳುತ 6 ಮಾಘ ಶುದ್ಧವು ನವಮಿಯ ದಿನದಿ | ಪಾರ್ಥಿವ ವತ್ಸರದಿಸಾಗರ ಕಟ್ಟೆ ಯತಿ ಸಮ್ಮುಖದಿ | ಕುಳ್ಳಿರುತಲಿ ರಥದಿ ||ನಿಗಮಗಳಿಗೆ ಸಿಗ | ದಗಣಿತ ಗುಣಮಣಿಖಗವರ ಗುರು ಗೋ | ವಿಂದ ವಿಠ್ಠಲನ |ಸುಗುಣ ಗಣಂಗಳ | ಬಗೆ ಬಗೆಯಿಂದಲಿಪೊಗಳುವರಘಗಳ | ನೀಗುವೆನೆನ್ನುತ 7
--------------
ಗುರುಗೋವಿಂದವಿಠಲರು
ರಾಘವೇಂದ್ರ ತೀರ್ಥ ಬೋಧಿಸುಭಾಗವತ ಗತಾರ್ಥರಾಘವ ಪದಾಂಬುಜ ಲಬ್ದಾರ್ಥ ಸರಾಗದಿ ಪಾಲಿಸು ನಿಜ ಪುರುಷಾರ್ಥ ಪ ತುಂಗಾತಟವಾಸ ರಾಘವಸಿಂಗನ ನಿಜದಾಸಪಂಗು ಬಧಿರ ಮುಖ್ಯಾಂಗ ಹೀನರನಪಾಂಗ ನೋಟದಿ ಶುಭಾಂಗರ ಮಾಡಿ 1 ಪಾದೋದಕ ಸೇವಾರತರಿಗಗಾಧ ಫಲಗಳೀವಬೂದಿ ಮುಖದ ದುರ್ವಾದಿಗಳೋಡಿಸಿಸಾಧು ಜನರಿಗಾಲ್ಹಾದ ಬಡಿಸುತಿಹ 2 ಭುಜಗಧರಾಧಿಪನಾ ವೊಲಿಸಿದಸುಜನ ಶಿರೋಮಣಿಯೇನಿಜ ಪದ ಯುಗಳವ ಭಜಿಸುವ ಜನರಿಗೆ(ವಿಜಯದ ನೆನಿಸುವ ದ್ವಿಜಕುಲನಂದನ)ವಿಜಯದ ಗೋಪತಿ ವಿಠಲ ನಂದನ 3
--------------
ಗೋಪತಿವಿಠಲರು
ರಾಘವೇಂದ್ರ ಸ್ವಾಮಿಗಳು ಅಂತರಂಗದಿ ಹರುಷವಾಂತೆವೈ ಗುರುವೆ ಪ ಸಂತಸದಿ ಸೇವೆಗಳ ಸ್ವೀಕರಿಸು ಪ್ರಭುವೆ ಅ.ಪ ಮಂಗಳಾಂಗಿಯರೆಲ್ಲ ಮಿಂದು ಮಡಿಗಳನ್ನುಟ್ಟು | ಮಂಗಳಾತ್ಮಕ ನಿನಗೆ ಮಜ್ಜನವ ಗೈಸೆ || ಅಂಗಳದಿ ದಧಿಕ್ಷೀರ ಘೃತಕುಂಭಗಳಧರಿಸಿ | ಸಿಂಗರದಿ ನಿಂದಿಹರೊ ಗುರುರಾಘವೇಂದ್ರ 1 ಧಾರುಣೀಸುರರೆಲ್ಲ ಧೀರಯತಿವರ ನಿನಗೆ | ಚಾರುವಿಭವದಿ ಕವಚ ಧಾರಣೆಯ ಗೈಸೆ || ಸೇರಿ ನುತಿಸುತೆ ನಿನ್ನ ಸಾರಗುಣ ಸಂಪನ್ನ | ಸಾರಿಹರೊ ನಿನ್ನಡಿಗೆ ಗುರುರಾಘವೇಂದ್ರ 2 ನಿಂದು ಭೂಸುರರೆಲ್ಲಾ ಜಯಜಯ ಜಯವೆನಲು| ಮಂದಹಾಸದಲವರ ಸೇವೆಯನು ಕೊಂಡೆ || ಇಂದು ಬೃಂದಾವನದಿ ನಿಂದು ದರ್ಶನವಿತ್ತೆ | ಕುಂದದಿಷ್ಟವ ಸಲಿಸೊ ಗುರುರಾಘವೇಂದ್ರ 3 ಉಡುರಾಶಿಗಳ ಮಧ್ಯೆ ಉಡುಪ ಮೆರೆಯುವ ತೆರದಿ | ಉಡುಗಣಿಕ್ಷೇತ್ರದೊಳು ನಿಂದು ಮೆರೆದೆ || ಕಡುಮಮತೆಯಲಿ ನಿನ್ನ ಸಡಗರದಿ ಸೇವಿಪರ | ಎಡರುಗಳ ಪರಿಹರಿಸೊ ಗುರುರಾಘವೇಂದ್ರ4 ನರಹರಿಯ ಮೆಚ್ಚಿಸಿದೆ ಪ್ರಹ್ಲಾದನೆನಿಸುತಲೆ | ಸಿರಿಕೃಷ್ಣನೊಲಿಸಿದಿಯೊ ವ್ಯಾಸಮುನಿ || ಸಿರಿರಾಮಚಂದ್ರಪ್ರಿಯ ಗುರುರಾಘವೇಂದ್ರನೆ | ಕರುಣದಲಿ ತೋರೀಗ ಶ್ರೀಶಕೇಶವನ5
--------------
ಶ್ರೀಶ ಕೇಶವದಾಸರು
ರಾಘವೇಂದ್ರಸ್ವಾಮಿಗಳ ಸ್ತೋತ್ರ ಕಂಡು ಧನ್ಯನಾದೆ ಗುರುಗಳ - ಕಣ್ಣಾರೆ ನಾಕಂಡು ಧನ್ಯನಾದೆ ಈ ಗುರುಗಳ ಪ ತುಂಗಾತಟದಿ ಬಂದು ನಿಂತ ಪಂಗು ಬಧಿರಾದ್ಯಂಗ ಹೀನರಅಂಗಗೈಸಿ ಸಲಹುವಾ - ನರಸಿಂಗನಂಘ್ರಿ ಭಜಕರಿವರ 1 ಗುರುವರ ಸುಗುಣೇಂದ್ರರಿಂದಪರಿಪರಿಯಲಿ ಸೇವೆಗೊಳುತವರಮಂತ್ರಾಲಯ ಪುರದಿ ಮೆರೆವಪರಿಮಳಾಖ್ಯ ಗ್ರಂಥಕರ್ತರ 2 ಸೋ ಅಹಂ ಎನ್ನದೆ ಹರಿಯ ದಾಸೋ ಅಹಂ ಎನ್ನಲು ಒಲಿದು ವಿಜಯಮೋಹನ ವಿಠ್ಠಲನ್ನ ಪರಮಸ್ನೇಹದಿಂದ ತೋರುವವರ 3
--------------
ಮೋಹನದಾಸರು
ರಾಜರ ನೋಡಿದಿರಾ _ ಗುರು _ ರಾಜರ ನೊಡಿದಿರಾ ಪ ರಾಜರ ನೊಡಿ _ ಭಕುತಿಯ ಮಾಡಿ ಗೋಜನ ಕರುಣಕೆ _ ಭಾಜನ ರಾದೀರಾ ಅ.ಪ. ತುಂಗ ಮಹಿಮರು _ ನರ - ಸಿಂಗ ಭಕ್ತರು ಭಂಗರಹಿತರು _ ಸುರ _ ಸಂಘ ಮಾನಿತರು 1 ಯೋಗಿ ವರ್ಯರು _ ಬಹು _ ತ್ಯಾಗಶೀಲರು ಭವ _ ರೋಗ ವೈದ್ಯರು 2 ತಂತ್ರ ಮಲ್ಲರು _ ಬಹು _ ಗ್ರಂಥಕರ್ತೃಗಳು ಮಂತ್ರ ಸಿದ್ಧರು _ ಮ _ ಹಂತ ಮಠದವರು 3 ಶಾಂತ ಮೂರ್ತಿಗಳು _ ವೇ _ ದಾಂತ ಬಲ್ಲವರು ದಾಂತ ಶೇಖರರು _ ಏ _ ಕಾಂತ ಭಕ್ತರು 4 ರಾಘವೇಂದ್ರರು _ ಇವರೆ _ ವ್ಯಾಸರಾಜರು ಭಾಗ್ಯವಂತರು _ ಪ್ರ _ ಹ್ಲಾದರಾಜರು 5 ದೂಡು ಸಂಶಯಾ ನೀ _ ಮಾಡು ಭಕುತಿಯಾ ಬೇಡು ಬಯಕೆಯಾ ಪೋ _ ಗಾಡು ದುಃಖವಾ 6 ಸೃಷ್ಠಿ ನಾಯಕಾ _ ಶ್ರೀ _ ಕೃಷ್ಣವಿಠಲನ ಶ್ರೇಷ್ಠ ಭಕ್ತರೂ _ ಸಂ-ತುಷ್ಠಿ ನೀಡುವರು 7
--------------
ಕೃಷ್ಣವಿಠಲದಾಸರು
ರಾಮ ಜಾನಕೀರಮಣ ರಾಜೀವದಳನಯನ ಧಾಮ ನಿಧಿವಂಶ ಸೋಮನಿಗೆ ಪ ಪದುಮಶಾಲೆಯೊಳಗೆ ಪದುಮಗದ್ದುಗೆ ಹಾಕಿ ಪದುಮನಾಭನು ಬಂದು ಕುಳಿತನು ಪದುನುನಾಭನು ಬಂದು ಕುಳಿತನು ಎಡದಲ್ಲಿ ಪದುಮಾಕ್ಷಿ ಪದುಮ ಸಾಧನೆ ಲಕುಮಿ ಒಪ್ಪಿದಳು. 1 ವಾರುಣಿ ಗಿರಿಜೆ ಮೀನಕೇತನ ರಾಣಿ ಇಂದ್ರಾಣಿ ಮಿಕ್ಕಾನಲಿದಾಡುತಲಿ ಮೀನಕೇತನ ರಾಣಿ ಇಂದ್ರಾಣಿ ನಕ್ಕು ನಲಿದಾಡುತಲಿ ಆನಂದದಿ ಬಂದು ಕುಳಿತರು ತಮ್ಮ ಠಾಣೆಗೆ 2 ಚಿನ್ನದ ತಳಿಗೇಲಿ ಎಣ್ಣೆ ಅರಿಶಿಣ ಗಂಧ ಸಣ್ಣ ಕುಂಕುಮ ಜಾತಿ ಕಸ್ತೂರಿ ಪೊಂಗಳಸ ಸಣ್ಣ ಕುಂಕುಮ ಜಾತಿ ಕಸ್ತೂರಿ ಪೊಂಗಳಸ ಹೆಣ್ಣುಗಳ ಮಧ್ಯೆ ಇಳಿಸಿದರು3 ತಂದೆ ತಾತನ ಬಳಿಯ ಮಂದಾಕಿನಿ ವಾಗ್ವಿಯ- ರೊಂದಾಗಿ ಒಡಗೂಡಿ ರಂಗಯ್ಯನ ಕೈಗೆ ಒಂದಾಗಿ ಒಡಗೂಡಿ ರಂಗಯ್ಯನ ಕೈಯೊಳಗೆ ತಂದು ಅರಿಶಿಣ ಎಣ್ಣೆ ಗಂಧವಿತ್ತು4 ತಡಮಾಡಲಾಗದು ಕಡಲಶಯನ ನಿಮ್ಮ ಮಡದಿಯಂಗಕ್ಕೆ ತೊಡೆವುದೆನಲು ಮಡದಿಯಂಗಕ್ಕೆ ತೊಡೆವುದು ಎನಲಾಗಿ ಕಡು ಹರುಷದಿ ಸತಿಯಳ ನೋಡಿದನು 5 ಎನ್ನರಸಿ ಹೊನ್ನರಸಿ ಪ್ರಾಣದರಸಿ ಪಟ್ಟದರಸಿ | ಕನ್ಯೆ ಶಿರೋಮಣಿ ಪಾವನ ದೇಹಿ || ಕನ್ಯೆ ಶಿರೋಮಣಿ ಪಾವನ ದೇಹಳೆ ನಿನ್ನ | ಕನ್ನಡಿ ಮುಖವ ತೋರರಿಷಿಣವ ನಾ ಹಚ್ಚುವೆ 6 ತಂದೆ ನಂದನರಿಗೆ ಬಂಧು ಬಳಗ ಸುತ್ತ | ಹೊಂದಿದ ಜನರಿಗೆ ಹಲವರಿಗೆ || ಹೊಂದಿದ ಜನರಿಗೆ ಹಲವರಿಗೆ ಕದನ | ತಂದು ಹಾಕುವಳೆಂದು ಹಚ್ಚಿದನು 7 ತೂಗಿಸಿಕೊಂಬುವಳೆ ದೌತ್ಯಕ್ಕೆ ಸಲ್ಲುವಳೆ | ಬಾಗಿಲ ಕಾಯಿಸುವಳೆ ಬಲ್ಲಿದರ || ಬಾಗಿಲಕಾಯಿಸುವಳೆ ಬಲ್ಲಿದರನು ಬಿಡದೆ | ಸಾಗರನ ಮಗಳು ಎಂದು ತೊಡೆದನು 8 ಇಂದಿರಾದೇವಿ ಬಾ ಮಂದಿರಾಂಬುಜ ರಾಮ | ಸುಂದರ ಶ್ರೀವಾರಿ ಮಂಗಳಗಾತ್ರೆ || ಸುಂದರ ಶ್ರೀನಾರಿ ಮಂಗಳಗಾತ್ರೆ ಯೆಂದು | ಅಂಗಜ ಜನಕನು ನಗುತಲಿದ್ದ 9 ರಮಣಿಯ ದೇಹಕ್ಕೆ ಕಮಲನಾಭನು ಎದ್ದು | ವಿಮಲಕಸ್ತೂರಿ ಗಂಧವರಿಷಿಣ ಎಣ್ಣೆ || ವಿಮಲ ಕಸ್ತೂರಿ ಗಂಧವರಿಷಿಣ ಎಣ್ಣೆಯ | ಕ್ರಮದಿಂದ ಲೇಪಿಸಿ ಊಟಣಿಸಾರಿ 10 ಸಾಕಾರಗುಣವಂತಿ ತ್ರಿಲೋಕದ ಜನನಿ | ನಾಕಜವಂದಿತಳೆ ನಾಗಗಮನೆ || ನಾಕಜವಂದಿತಳೆ ನಾಗಗಮನೆ ಏಳೂ | ಶ್ರೀಕಾಂತನ ಸೇವೆಯ ಮಾಡೆಂದರು 11 ಅಂದ ಮಾತನು ಕೇಳಿ ಗಂಧ ಅರಷಿಣ ಕೊಂಡು | ನಿಂದು ಸಮ್ಮುಖದಲ್ಲಿ ರಂಗನ ನೋಡಿ | ನಿಂದು ಸಮ್ಮುಖದಲ್ಲಿ ರಂಗನ ನೋಡಿ ಹಿಗ್ಗಿ | ಚಂದ್ರವದನೆ ಪತಿಗೆ ಹಚ್ಚಿದಳು 12 ಗೋವಳರ ಎಂಜಲು ಆವಾಗ ತಿಂದವನೆ | ಮಾವನ್ನ ಕೊಂದವನೆ ಮಾಯಾಕಾರ || ಮಾವನ್ನ ಕೊಂದವನೆ ಮಾಯಾಕಾರನೆ ನಿನ್ನ | ಸೇವೆಗೆ ಶಕ್ತಳೆನುತ ಹಚ್ಚಿದಳು 13 ಬೆಣ್ಣೆ ಮೊಸರು ಕದ್ದು ಹೆಣ್ಣುಗಳ ಕೆಡಿಸಿ | ಮುನ್ನೆ ತೊತ್ತಿನ ಮಗನ ಮನಿಯ ಉಂಡ || ಮುನ್ನೆ ತೊತ್ತಿನ ಮಗನ ಮನಿಯಲುಂಡ ಹಿಂದೆ | ಹೆಣ್ಣಾಗಿ ಇದ್ದವನೆಂದು ಹಚ್ಚಿದಳು 14 ಎನ್ನರಸ ಚೆನ್ನರಸ ಪ್ರಾಣದರಸ ಪಟ್ಟಣದರಸ | ಭಿನ್ನವಖಿಳ ಜೀವಕ್ಕೆನ್ನ ಒಡೆಯ || ಭಿನ್ನವಖಿಳ ಜೀವಕ್ಕೆನ್ನ ಒಡೆಯ ಸಲಹಿಂದು | ಚೆನ್ನಾಗಿ ಅರಿಷಿಣ ಗಂಧ ಹಚ್ಚಿದಳು 15 ನಿತ್ಯ ಕಲ್ಯಾಣ ಪುರುಷೋತ್ತಮ ಸರ್ವೇಶ | ಸತ್ಯಸಂಕಲ್ಪ ಸಿದ್ಧ ಅಪ್ರಮೇಯಾ || ಸತ್ಯಸಂಕಲ್ಪ ಸಿದ್ಧ ಅಪ್ರಮೇಯನೆಂದು | ಮಿತ್ರೆ ಸರ್ವಾಂಗಕ್ಕೆ ಹಚ್ಚಿದಳು 16 ದೇವಿ ದೇವೇಶಗೆ ಈ ಉರುಟಣೆಯಿಲ್ಲ | ಆವಾವ ಬಗೆ ಎಲ್ಲ ತೋರಿಸುತ್ತ || ಆವಾವ ಬಗೆ ಎಲ್ಲ ತೋರಿ ವಧು-ವರಗಳಿಗೆ | ಹೂವು ಬಾಸಿಂಗವ ರಚಿಸಿದರು17 ಅಸುರ ವಿರೋಧಿ ವಸುದೇವನಂದನ | ಪಶುಪತಿ ರಕ್ಷಕ ಪರಮ ಪುರುಷ || ಪಶುಪತಿ ರಕ್ಷಕ ಪರಮ ಪುರುಷ ಎಂದು | ಹಸನಾಗಿ ಲೇಪಿಸಿ ಇತ್ತ ಜನರ 18 ಶೃಂಗಾರವಂತೇರು ರಂಗ ಶ್ರೀಲಕುಮಿಗೆ | ಮಂಗಳಾರತಿ ಎತ್ತಿ ಹರಸಿದರು || ಮಂಗಳಾರತಿ ಎತ್ತಿ ಹರಸಿ ದೇವರಮನೆಗೆ | ಅಂಗನೆಯಳ ಸಹಿತ ನಡೆಯೆಂದರಾಗ 17 ಎತ್ತಿಕೊಂಡನು ರಂಗ ಚಿತ್ತದ ವಲ್ಲಭೆಯ | ಮತ್ತೆ ಸುಗಂಧಿಯರು ಹೊಸ್ತಿಲೊಳಗೆ || ಮತ್ತೆ ಸುಗಂಧಿಯರು ಹೊಸ್ತಿಲೊಳಗೆ ನಿಂದು | ಪತ್ನಿಯ ಹೆಸರು ಪೇಳೆಂದರು ಆಗ 20 ಬೇಗ ಮಾರ್ಗವ ಸಾರಿ ತೂಗಲಾರನು ಇವಳ | ಸಾಗಿ ಪೋಗುವನೆಂದು ಪೇಳುತಿರಲು || ಸಾಗಿ ಪೋಗುವನೆಂದು ಪೇಳುತಿರಲು ಸ್ತ್ರೀ ಕೂಟ | ತೂಗವದೆಂತು ನಾಳೆ ನುಡಿಯೆಂದರು 21 ನಕ್ಕು ಸಂತೋಷದಲಿ ರುಕ್ಮಿಣಿ ಎಂದನು | ಅಕ್ಕಯ್ಯ ಪೇಳೆಂದು ಹೆಮ್ಮಕ್ಕಳೆಲ್ಲ || ಅಕ್ಕಯ್ಯ ಪೇಳೆಂದು ಹೆಮ್ಮಕ್ಕಳೆಲ್ಲ ಎನಲು | ಚಕ್ರಪಾಣಿ ಎಂದು ಪೇಳಿದಳು ಲಕುಮಿ 22 ಗಂಡ ಹೆಂಡತಿ ಪೋಗಿ ದಂಡ ಪ್ರಣಾಮಮಾಡಿ | ಮಂಡಲದ ಚರಿತೆ ತೋರಿದರು ಆಗ || ಮಂಡಲದ ಚರಿತೆ ತೋರಿ ವಧು-ವರಗಳಿಗೆ | ಕಂಡವರಿಗೆ ಮದುವೆಯೆನಿಸಿದರು 23 ದಂಪತಿಗಳು ಒಲಿದು ಇಂಪಾಗಿ ಉರುಟಣಿ | ಸೊಂಪಾಗಿ ಮಾಡಿದರು ಅನೇಕವಾಗಿ || ಸಂಪತ್ತು ಕೊಡುವನು ವಿಜಯವಿಠ್ಠಲರಾಯಾ 24
--------------
ವಿಜಯದಾಸ
ರಾಮ ರಾಮೆನ್ನಿರೊ ಸೀತಾಪತಿ ರಾಮ ರಾಮೆನ್ನಿರೊಪ. ಗಂಗೆಯೊಳ್ ಮುಳುಗಲ್ಯಾಕೆ ನಡೆದು ಬಲು ಭಂಗವ ಪಡುವುದ್ಯಾಕೆ ಮಂಗಲದಾತ ನರಸಿಂಗನ ನಾಮವ ಹಿಂಗದೆ ನೆನೆದರಿಷ್ಟಂಗಳ ಕೊಡುವ1 ಉಪವಾಸ ಮಾಡಲ್ಯಾಕೆ ಕಪಟದೊಳು ಗುಪಿತದಿ ಕುಳ್ಳಲ್ಯಾಕೆ ಉಪಮೆರಹಿತ ಶ್ರೀಪತಿ ಕೃಷ್ಣರಾಯನ ಜಪಿಸಿ ಬಂದರೆ ಜನ್ಮ ಸಫಲವಾಗುವುದಲ್ಲೋ2 ಧ್ರುವನು ಸದ್ಗತಿ ಪಡೆದ ಕರುಣದಿಂದ ಪವಮಾನಿಗೆ ಒಲಿದ ಭುವನ ಈರಡಿ ಮಾಡಿ ಬಲಿಯನ್ನು ಸಲಹಿದ ಬವರದೊಳಗೆ ದಾನವರನ್ನು ಮಡುಹಿದ3 ಯಾತ್ರೆಗೆ ಪೋಗಲ್ಯಾಕೋ ಕಾವಡಿ ಪೊತ್ತು ತೀರ್ಥಸ್ನಾನಗಳ್ಯಾತಕೋ ಮಾಧವ ಶತಪತ್ರನಾಭನ ಸಂ- ಕೀರ್ತನಾದಿಗಳೆ ಪರತ್ರಸಾಧನವಲ್ಲೊ4 ಭೂರಿಯಾಯಾಸವ್ಯಾಕೋ ಬರಿದೆ ಸಂ- ಸಾರವ ನಂಬಲ್ಯಾಕೋ ಮಾರಾರಿಸಖ ಲಕ್ಷ್ಮೀನಾರಾಯಣನನ್ನು ಸೇರಿ ಭಜಿಪರ ಉದ್ಧಾರಮಾಡುವ ಶ್ರೀ5
--------------
ತುಪಾಕಿ ವೆಂಕಟರಮಣಾಚಾರ್ಯ
ರಾಮಚಂದ್ರನೇ ರಘುಕುಲೋತ್ತಮನೇ ಕಾಮಿತ ಫಲದಾಯಕನೇ ಏಳೈ ಬೇಗನೇ ಪ ಜಾನಕಿ ದೇವಿಯು ಪನ್ನೀರ ತುಂಬಿದ ಚಿನ್ನದ ಕಲಶವನು ಧರಿಸಿ ಹರಿ ನಿನ್ನಯ ಸನ್ನಿಧಿಯಲ್ಲೇ ನಿಂತಿಹಳು ಇನ್ನಾದರು ಮುಖವನು ತೊಳೆಯಲೇಳೊ ಅ.ಪ. ದುಷ್ಟ ರಾವಣನ ಕುಟ್ಟಿ ಕೆಡಹಿದ ಸೃಷ್ಟೀಶನೇ ಏಳೋ ಕಷ್ಟಾಗಿರುವುದು ಯುದ್ಧದಿ ನಿನಗೆ ದಯಾಳೋ ಪಟ್ಟವನೇರಲು ಇಟ್ಟಿಹುದು ಮುಹೂರ್ತವ ಇಂದಿನ ದಿನದೊಳು ಕೆಂಪಾಯಿತು ಮೂಡಲೊಳು ಅಷ್ಟೈಶ್ವರ್ಯದಿ ಪಟ್ಟಕ ಸಿಂಗರಿಸಿಟ್ಟು ವಶಿಷ್ಠಾದಿಗಳು ವಿಶಿಷ್ಟರು ನೋಡುತ ಕುಳಿತಿಹರೋ 1
--------------
ಹನುಮೇಶವಿಠಲ
ರುದ್ರದೇವರು ಗಂಗಾಧರ ಮಹಾದೇವ ಶಂಭೊಶಂಕರ ಪ. ಗಂಗಾಧರಾ ನಿನ್ನ ನಂಬಿದ ಭಕ್ತರಘ ದ್ಹಂಬ ಕಡಿದು ಹರಿ ಇಂಬ ತೋರೆ ಜಗ ಕಂಬಾರಮಣ ನಿನ್ನ ಸಂಭ್ರಮದಿ ಸ್ತುತಿಪೆ ಅ.ಪ. ಚಾರು ಚರ್ಮಾಂಬರ ಧೀರ ಧರಿಶಿ ಮೆರೆವ ಚಾರು ಭೂತಗಣ ಸಂಚಾರ ಭಸ್ಮಧರಾ ಹಾರ ಕೇಯೂರ ಮಧ್ಯ ಥೋರ ಸರ್ಪ ಭೂಷ ನಿನ್ನ ಚಾರು ರೂಪ ವರ್ಣಿಸಲಳವೆ ಸಾರಸಾಕ್ಷ ಪಾರ್ವತಿಪ್ರಿಯ ಕರುಣಾಕರಸ ದೊರಕದೆ ಶ್ರೀರಮಣನು ಸಿಗ ಕೋರೆ ಹರಿಯ ನಿನ್ನ ಪಾದಪಂಕಜ ಹಾರೈಸುವೆ ಸಂಸಾರ ಶರಧಿಂ 1 ಪರಮಪುರುಷ ಶ್ರೀ ರಾಮನ ತಾರಕ ವರಮಂತ್ರ ಜಪಿಸುವ ವರ ಪಾರ್ವತಿಗರುಹಿ ಧರೆಯೊಳು ಮನುಜರ ವರಮನ ಪರಿಪರಿ ಬೇಡುವೆ ಹರಿಸ್ಮರಣೇಯ ಎನಗೀಯೋ ಕರುಣದಿ ಮಾರ್ಕಂಡೇಯಗೆ ವರವಿತ್ತು ಚಿರಂಜೀವತ್ವವ ಪರಿಪಾಲಿಸಿದಂತೆ ಪರಿಪರಿ ಭಕ್ತರ ಪೊರೆದಂತೆ ಪೊರೆಯೆನ್ನ ಪರಿ ಇತ್ತು 2 ಪಾಶಾಂಕುರಧರ ಪರಮಪವಿತ್ರನೆ ಈಶ ಭಕ್ತರ ಭವಪಾಶದಿಂದುದ್ಧರಿಪೆ ಶ್ರೀಶ ಶ್ರೀ ಶ್ರೀನಿವಾಸನಾಸಕ್ತಿಯಲಿ ಭಜಿಪ ದೋಷರಹಿತ ಮನ ಭಾಸಿ ಪಂಥದಿ ಈವೆ ಕಾಶೀಶ್ವರ ನಿನ್ನ ಲೇಸು ಭಕ್ತಿಲಿ ಸ್ತುತಿಪಾ ದಾಸ ಸಂಗದೊಳಿರಲು ಲೇಸು ಮನವ ಕೊಡು ವಾಸುಕಿಶಯನ ಸುತನ ಸುತನೆ ನಿನ್ನ ಏಸು ದಿನದಿ ಸ್ತುತಿಸುತ ಹಾರೈಸುವೆ 3
--------------
ಸರಸ್ವತಿ ಬಾಯಿ
ಲಕ್ಷ್ಮೀದೇವಿ 13 ಭಾಗ್ಯವ ಕೊಡು ತಾಯೆ ಪ ಭಾರ್ಗವಿ ನಿನ್ನಯ| ಪದಯುಗಕೆರಗುವೆ| ಭಾಗ್ಯದ ಲಕ್ಷ್ಮೀ ಸೌ| ಭಾಗ್ಯದ ನಿಧಿಯೇ ಅ. ಪ ಸಾಗರಸಂಜಾತೆ| ದೇವಿ| ನಾಗವರದಪ್ರೀತೆ || ಯೋಗಿಜನಾವಳಿ| ಮಾನಸಪೂಜಿತೆ | ಅಗಣಿತಗುಣಮಣಿ| ತ್ರಿಜಗದ್ವಂದಿತೆ 1 ಸುರುಚಿರಸುಮಗಾತ್ರೆ | ದೇವಿ| ಹಿಮಕರನಿಭವಕ್ತ್ರೆ || ಕಿನ್ನರ | ಸುರಮುನಿ ಪೂಜಿತೆ | ಕಾಮಿತವೀಯುವ || ಕರುಣಾಕರೆಯೆ 2 ಜನನಿಯೆ ನಿರತವು ನೀ | ಪ್ರೇಮವ | ನಿರಿಸುತಲೆನ್ನೊಳು ನೀ | ಕನಕದ ವೃಷ್ಟಿಯ | ಕರೆಯುತಲನುದಿನ | ಮನ್ಮನದಿಷ್ಟವು | ಸಿದ್ಧಿಸುವಂದದ 3 ಅಹಿಪತಿ ಶಯನನಿಗೆ | ಮೋಹದ | ಮಹಿಷಿಯು ನೀನಾಗೆ || ಮಹಿಮಾಕರೆ ನೀ | ಮಹಿಯೊಳಗನಿಶವು | ಇಹಪರ ಸುಖವನು | ಭವಿಸುವ ತೆರದಾ 4 ಅಜಭವಸುರವಿನುತೆ | ದೇವಿ | ಸುಜನಾವಳಿಪ್ರೀತೆ || ಗಜವಾಹಿನಿ ವರ | ಮದಗಜಗಮನೆಯೆ | ವಿಜಯವಿಠಲಪ್ರಿಯೆ ಶ್ರೀ ಗಜಲಕ್ಷ್ಮಿಯೆ 5 ಶುಭ | ಮಂಗಳೆ ಸುಪವಿತ್ರೆ || ಮಂಗಳಾಂಗಿ ನರ | ಸಿಂಗನ ರಮಣಿಯೆ | ಮಂಗಳಕಾರ್ಯಗ | ಳನುದಿನವೆಸಗುವ 6 ಪಂಕಜದಳನೇತ್ರೆ | ದೇವಿ | ಕಿಂಕರನುತಿಪಾತ್ರೆ || ಶಂಖಚಕ್ರಾಂಕಿತ | ಶ್ರೀ ವೈಕುಂಠನ |ಅಂಕದಿ ಮೆರೆವಖಿ | ಳಾಂಕ ಮಹಿಮಳೇ 7
--------------
ವೆಂಕಟ್‍ರಾವ್
ವನಭೋಜನ ಊರ್ವಶಿ: ಇದೀಗ ಮನವು ಇಂದಿರಾಕ್ಷಿ ಇದೀಗ ಮನವುಪ. ಮಧುಸೂದನ ತನ್ನ ಸದನದಿಂದಲಿ ಒಮ್ಮೆ ಒದಗಿ ಪಯಣಗೈದು ಪದುಳದಿ ಮಂಡಿಪ1 ವಾಸುದೇವ ತಂಪಾಶುಗದಿಂದಾ- ಯಾಸವ ಬಿಡಿಸಿ ಸಂತೋಷಪಡಿಸುವಂತಿದೀಗ2 ಭಾಗವತರು ಅನುರಾಗದಿ ಕೂಡಿ ಸ- ರಾಗದಿ ಯೋಗಾರೋಗಣೆಮಾಡುವದೀಗ3 ಸತ್ಪಾತ್ರ ವಿಯೋಗ ಸು- ಕ್ಷೇತ್ರ ಸುಧಾಮಯ ಕೀರ್ತಿಯೆಂದಿನಿಸುವ 4 ತರುಗುಲ್ಮಾವಳಿ ಸುರಮುನಿಗಳು ಕಾಣೆ ಉರು ಪಾಷಾಣವೆಲ್ಲವು ಸಚ್ಚರಿತವು5 ರಂಭೆ : ಪೋಗಿ ಬರುವ ವನಕ್ಕಾಗಿ ನಾಗವೇಣಿ ಲೇಸಾಗಿ ಬೇಗ ನಾವುಪ. ಭಾಗವತಾದಿ ಸಮಾಗಮವಾದರೆ ಭಾಗ್ಯವಂತೆಯರ್ನಾವಾಗಿ1 ಹರಬ್ರಹ್ಮಾದಿ ನಿರ್ಜರರಿಗಸಾಧ್ಯವು ಹರಿಪ್ರಸಾದವೆಂದು ಸಾಗಿ ಬೇಗ2 ನಾರಿ ನಿನ್ನ ಉಪಕಾರ ಮರೆಯೆ ನಾ ಭೂರಿ ಪುಣ್ಯವಶಳಾಗಿ3 ಕಾಣದಿರಲು ಯೆನ್ನ ಪ್ರಾಣ ನಿಲ್ಲದು ಕಾಣೆ ಶ್ರೀನಿವಾಸನ ಭೇಟಿಗಾಗಿ4 ಊರ್ವಶಿ : ಅಭಿಷೇಕವನು ಗೈದರಾಗ ಮನಸಿಗನುರಾಗ ಪ. ವಿಭುಧೋತ್ತಮರೆಲ್ಲರು ಕೂಡುತ್ತ ಶುಭ ಋಗ್ವೇದೋಕ್ತದಿ ನಲಿಯುತ್ತಅ.ಪ. ಕ್ಷೀರಾರ್ಣವದೊಳಗಾಳಿದವಂಗೆ ಕ್ಷೀರಾಬ್ಧಿಯ ದುಹಿತೆಯ ಗಂಡನಿಗೆ ನೀರಜನಾಭನ ನಿಖಿಲ ಚರಾಚರ ಪೂರಿತ ಕಲ್ಮಷದೊರಗೆ ಕ್ಷೀರದ1 ಚದುರತನದಿ ಗೊಲ್ಲರೊಳಾಡಿದಗೆ ದಧಿಪಾಲ್ ಬೆಣ್ಣೆಯ ಸವಿದುಂಡವಗೆ ಮದನಜನಕ ಮಹಿಮಾಂಬುಧಿ ಕರುಣಾ- ಸ್ಪದ ಸತ್ಯಾತ್ಮ ಸನಾಥಗೆ ದಧಿಯ2 ಶ್ರುತಿಸ್ಮøತಿತತಿನುತ ರತಿಪತಿಪಿತಗೆ ಅತುಲಿತಗುಣ ಸೂನೃತಭಾಷಿತಗೆ ದಿತಿಸುತಹತ ಶೋಭಿತ ಮೂರುತಿ ಶಾ- ಶ್ವತವಾಶ್ರಿತ ವಾಂಛಿತಗೆ ಘೃತವ3 ಮಧುಸೂದನ ಮಂದರಗಿರಿಧರೆಗೆ ಮೃದುವಾಕ್ಯಗೆ ಮಂಗಲಾಂಗನಿಗೆ ಪದಮಳಾಕ್ಷ ಪರಾತ್ಪರವಸ್ತು ನೀ- ರದ ಶ್ಯಾಮಲ ನಿತ್ಯಾತ್ಮಗೆ ಮಧುವಿನ4 ಕರುಣಾಕರ ಕಮಲಜತಾತನಿಗೆ ದುರುಳ ಸುಬಾಹು ತಾಟಕಿ ಮರ್ದನಗೆ ನರಕಾಂತಕ ನಾರಾಯಣ ಸಕಲಾ- ಮರಪೂಜಿತಗೆ ಸರ್ವಾತ್ಮಗೆ ಸಕ್ಕರೆ5 ಎಳೆತುಳಸೀವನಮಾಲಾಧರಗೆ ಫಲದಾಯಕ ಪರಬ್ರಹ್ಮರೂಪನಿಗೆ ಕಲುಷರಹಿತ ನಿರ್ಮಲಚಾರಿತ್ರ್ಯ ನಿ- ಶ್ಚಲಿತಾನಂದ ನಿತ್ಯನಿಗಳ ನೀರಿನ6 ಕನಕಾಂಬರಧರ ಶೋಭತನಿಂಗೆ ಮನಕಾನಂದವ ಪಡಿಸುವನಿಂಗೆ ಚಿನಮಯ ಪರಿಪೂರ್ಣ ವಿಶ್ವಂಭರ ಜನಕಜಾ ವರನಿಗೆ ಕನಕಾನನೀಕದ7 * * * ವೆಂಕಟೇಶ ಕಣ್ಣ ಮುಂದೆ ನಿಂತಿದಂತಿದೆಪ. ಶಿರದೊಳು ರತ್ನಕಿರೀಟದ ಝಳಕ ಮೆರೆವ ಲಲಾಟದಿ ಕಸ್ತೂರಿತಿಲಕ ವರ ಕರ್ಣಕುಂಡಲಗಳ ಮಯಕನಕ ಚೆಲುವ ಚರಾಚರಭರಿತಜ ಜನಕ1 ಕಂಬುಕಂಠದಿ ಕೌಸ್ತುಭವನಮಾಲ ಇಂಬಾಗಿಹ ಭೂಷಣ ಶುಭಲೋಲ ಸಂಭ್ರಮಿಸುವ ಮೋಹನ ಗುಣಶೀಲ ಅಂಬುಜನಾಭಾಶ್ರಿತಜನಪಾಲ2 ಶಂಖಸುದರ್ಶನಗದಾಪದ್ಮ ಧಾರಿ ಕಂಕಣವೇಣುವಡ್ಯಾಣವಿಹಾರಿ ಬಿಂಕದ ಬಿರುದಾಂಕಿತ ಕಂಸಾರಿ ಶಂಕೆಯಿಲ್ಲದ ಭೂಷಣಾಲಂಕಾರಿ3 ಎಡಬಲದಲಿ ಮಡದಿಯರ ವಿಲಾಸ ಕಡುಬೆಡಗಿನ ಪೀತಾಂಬರಭೂಷ ಕಡಗ ಕಾಲಗೆಜ್ಜೆ ಅಂದುಗೆಯಿಟ್ಟು ತೋಷ ಒಡೆಯ ಶ್ರೀನಾರಾಯಣ ಸರ್ವೇಶ4 ಈ ರೀತಿಯಲಿ ಶೃಂಗಾರನಾಗುತ್ತ ಭೂರಿಭಕ್ತರ ಕಣ್ಮನಕೆ ತೋರುತ್ತ ನಾರದಾದಿ ಮುನಿವರ ಗೋಚರದ ಚಾರುಚರಣವನು ತೋರಿಸಿ ಪೊರೆದ5 * * * ಆರೋಗಣೆಯ ಗೈದನು ಶ್ರೀರಂಗ ಸಾರಸವಾದ ಸಮಸ್ತ ವಸ್ತುಗಳ ಪ. ಧೂಪದೀಪನೈವೇದ್ಯವಿಧಾನ ಶ್ರೀಪರಮಾತ್ಮ ಮಂಗಲಗುಣಪೂರ್ಣ1 ಸುರತರುವಿನ ಸೌಭಾಗ್ಯದ ತೆರನ ಮರಕತಮಯ ಹರಿವಾಣದೊಳಿದನ2 ಭಕುತರ ಸೌಖ್ಯವಿನ್ನೇನೆಂಬುವೆನು ಶಕುತ ಶ್ರೀಮಾಧವ ನಿರತ ತೋರುವನು3 * * * ಆರತಿ ಶ್ರೀನಿವಾಸಂ ಶ್ರೀವೆಂಕಟೇಶಂ ಗಾರತಿ ಶ್ರೀನಿವಾಸಂಪ. ಮಂಗಲಾಂಗ ನರಸಿಂಗ ಮನೋಹರ ರಂಗರಾಯ ಶ್ರೀಗಂಗಾಜನಕಗೆ1 ಮಾಧವ ಮಧುಹರ ಮೋದಭರಿತ ಜಗ- ದಾಧಾರ ವೇಣುನಾದವಿನೋದಗೆ2 ನಿತ್ಯನಿರಂಜನ ಸತ್ಯಸ್ವರೂಪಗೆ ಪ್ರತ್ಯಗಾತ್ಮಪರತತ್ತ್ವಸ್ವರೂಪಗೆ3 ಭೋಜನವ ಗೈದರು ಪ. ಮೂಜಗತ್ಪತಿಯ ಪ್ರಸಾದಪ್ರತಾಪದಿ ನೈಜವಾಗಿಹ ಪಾಪ ಮಾಜಿ ಹೋಗಾಡುತ್ತ1 ಜಿಹ್ವೆಗೆ ರುಚಿಕರವಪ್ಪುದ ಮಿಗಿಲಾದ ಶಾಕಪಾಕಗಳನ್ನು ಪಾತ್ರದಿ ತೆಗೆದು ಸಂತೋಷ ಬೆಡಗುಗಳ ತೋರುತ್ತ2 ಹಪ್ಪಳ ಸಂಡಿಗೆಯು ತಪ್ಪು ಒಗರ ಶಾಲ್ಯನ್ನಗಳೆಲ್ಲವ ತಪ್ಪದೆ ಸವಿದು ಬಾಯ್ ಚಪ್ಪರಿಸಿದರಾಗ3 ಹೋಳಿಗೆಯು ಕಾಯದ ಜಡಗಳು ಮಾಯಕವಾದವು ಆಯುರಾರೋಗ್ಯ ಸುಶ್ರೇಯ ಕಾರಣವಾಯ್ತು4 ಸುರರು ಉರಗ ಮಾನವರೆಲ್ಲರೂ ದೊರೆಯ ಪ್ರಸಾದವು ದೊರಕಿತು ಎನುತ ವಿ- ಸ್ತರವಾದ ತೋಷದಿ ಭರದಿಂದೊದಗುತಲಿ5
--------------
ತುಪಾಕಿ ವೆಂಕಟರಮಣಾಚಾರ್ಯ
ವನಭೋಜನ ಊರ್ವಶಿ:ಇದೀಗ ಮನವು ಇಂದಿರಾಕ್ಷಿ ಇದೀಗ ಮನವು ಪ. ಮಧುಸೂದನ ತನ್ನ ಸದನದಿಂದಲಿ ಒಮ್ಮೆ ಒದಗಿ ಪಯಣಗೈದು ಪದುಳದಿ ಮಂಡಿಪ 1 ವಾಸುದೇವ ತಂಪಾಶುಗದಿಂದಾ- ಯಾಸವ ಬಿಡಿಸಿ ಸಂತೋಷಪಡಿಸುವಂತಿದೀಗ 2 ಭಾಗವತರು ಅನುರಾಗದಿ ಕೂಡಿ ಸ- ರಾಗದಿ ಯೋಗಾರೋಗಣೆಮಾಡುವದೀಗ 3 ಸತ್ಪಾತ್ರ ವಿಯೋಗ ಸು- ಕ್ಷೇತ್ರ ಸುಧಾಮಯ ಕೀರ್ತಿಯೆಂದಿನಿಸುವ 4 ತರುಗುಲ್ಮಾವಳಿ ಸುರಮುನಿಗಳು ಕಾಣೆ ಉರು ಪಾಷಾಣವೆಲ್ಲವು ಸಚ್ಚರಿತವು 5 ರಂಭೆ : ಪೋಗಿ ಬರುವ ವನಕ್ಕಾಗಿ ನಾಗವೇಣಿ ಲೇಸಾಗಿ ಬೇಗ ನಾವು ಪ. ಭಾಗವತಾದಿ ಸಮಾಗಮವಾದರೆ ಭಾಗ್ಯವಂತೆಯರ್ನಾವಾಗಿ 1 ಹರಬ್ರಹ್ಮಾದಿ ನಿರ್ಜರರಿಗಸಾಧ್ಯವು ಹರಿಪ್ರಸಾದವೆಂದು ಸಾಗಿ ಬೇಗ 2 ನಾರಿ ನಿನ್ನ ಉಪಕಾರ ಮರೆಯೆ ನಾ ಭೂರಿ ಪುಣ್ಯವಶಳಾಗಿ 3 ಕಾಣದಿರಲು ಯೆನ್ನ ಪ್ರಾಣ ನಿಲ್ಲದು ಕಾಣೆ ಶ್ರೀನಿವಾಸನ ಭೇಟಿಗಾಗಿ 4 ಊರ್ವಶಿ :ಅಭಿಷೇಕವನು ಗೈದರಾಗ ಮನಸಿಗನುರಾಗ ಪ. ವಿಭುಧೋತ್ತಮರೆಲ್ಲರು ಕೂಡುತ್ತ ಶುಭ ಋಗ್ವೇದೋಕ್ತದಿ ನಲಿಯುತ್ತ ಅ.ಪ. ಕ್ಷೀರಾರ್ಣವದೊಳಗಾಳಿದವಂಗೆ ಕ್ಷೀರಾಬ್ಧಿಯ ದುಹಿತೆಯ ಗಂಡನಿಗೆ ನೀರಜನಾಭನ ನಿಖಿಲ ಚರಾಚರ ಪೂರಿತ ಕಲ್ಮಷದೊರಗೆ ಕ್ಷೀರದ1 ಚದುರತನದಿ ಗೊಲ್ಲರೊಳಾಡಿದಗೆ ದಧಿಪಾಲ್ ಬೆಣ್ಣೆಯ ಸವಿದುಂಡವಗೆ ಮದನಜನಕ ಮಹಿಮಾಂಬುಧಿ ಕರುಣಾ- ಸ್ಪದ ಸತ್ಯಾತ್ಮ ಸನಾಥಗೆ ದಧಿಯ 2 ಶ್ರುತಿಸ್ಮøತಿತತಿನುತ ರತಿಪತಿಪಿತಗೆ ಅತುಲಿತಗುಣ ಸೂನೃತಭಾಷಿತಗೆ ದಿತಿಸುತಹತ ಶೋಭಿತ ಮೂರುತಿ ಶಾ- ಶ್ವತವಾಶ್ರಿತ ವಾಂಛಿತಗೆ ಘೃತವ 3 ಮಧುಸೂದನ ಮಂದರಗಿರಿಧರೆಗೆ ಮೃದುವಾಕ್ಯಗೆ ಮಂಗಲಾಂಗನಿಗೆ ಪದಮಳಾಕ್ಷ ಪರಾತ್ಪರವಸ್ತು ನೀ- ರದ ಶ್ಯಾಮಲ ನಿತ್ಯಾತ್ಮಗೆ ಮಧುವಿನ 4 ಕರುಣಾಕರ ಕಮಲಜತಾತನಿಗೆ ದುರುಳ ಸುಬಾಹು ತಾಟಕಿ ಮರ್ದನಗೆ ನರಕಾಂತಕ ನಾರಾಯಣ ಸಕಲಾ- ಮರಪೂಜಿತಗೆ ಸರ್ವಾತ್ಮಗೆ ಸಕ್ಕರೆ 5 ಎಳೆತುಳಸೀವನಮಾಲಾಧರಗೆ ಫಲದಾಯಕ ಪರಬ್ರಹ್ಮರೂಪನಿಗೆ ಕಲುಷರಹಿತ ನಿರ್ಮಲಚಾರಿತ್ರ್ಯ ನಿ- ಶ್ಚಲಿತಾನಂದ ನಿತ್ಯನಿಗಳ ನೀರಿನ 6 ಕನಕಾಂಬರಧರ ಶೋಭತನಿಂಗೆ ಮನಕಾನಂದವ ಪಡಿಸುವನಿಂಗೆ ಚಿನಮಯ ಪರಿಪೂರ್ಣ ವಿಶ್ವಂಭರ ಜನಕಜಾ ವರನಿಗೆ ಕನಕಾನನೀಕದ 7 * * * ವೆಂಕಟೇಶ ಕಣ್ಣ ಮುಂದೆ ನಿಂತಿದಂತಿದೆ ಪ. ಶಿರದೊಳು ರತ್ನಕಿರೀಟದ ಝಳಕ ಮೆರೆವ ಲಲಾಟದಿ ಕಸ್ತೂರಿತಿಲಕ ವರ ಕರ್ಣಕುಂಡಲಗಳ ಮಯಕನಕ ಚೆಲುವ ಚರಾಚರಭರಿತಜ ಜನಕ1 ಕಂಬುಕಂಠದಿ ಕೌಸ್ತುಭವನಮಾಲ ಇಂಬಾಗಿಹ ಭೂಷಣ ಶುಭಲೋಲ ಸಂಭ್ರಮಿಸುವ ಮೋಹನ ಗುಣಶೀಲ ಅಂಬುಜನಾಭಾಶ್ರಿತಜನಪಾಲ 2 ಶಂಖಸುದರ್ಶನಗದಾಪದ್ಮ ಧಾರಿ ಕಂಕಣವೇಣುವಡ್ಯಾಣವಿಹಾರಿ ಬಿಂಕದ ಬಿರುದಾಂಕಿತ ಕಂಸಾರಿ ಶಂಕೆಯಿಲ್ಲದ ಭೂಷಣಾಲಂಕಾರಿ 3 ಎಡಬಲದಲಿ ಮಡದಿಯರ ವಿಲಾಸ ಕಡುಬೆಡಗಿನ ಪೀತಾಂಬರಭೂಷ ಕಡಗ ಕಾಲಗೆಜ್ಜೆ ಅಂದುಗೆಯಿಟ್ಟು ತೋಷ ಒಡೆಯ ಶ್ರೀನಾರಾಯಣ ಸರ್ವೇಶ 4 ಈ ರೀತಿಯಲಿ ಶೃಂಗಾರನಾಗುತ್ತ ಭೂರಿಭಕ್ತರ ಕಣ್ಮನಕೆ ತೋರುತ್ತ ನಾರದಾದಿ ಮುನಿವರ ಗೋಚರದ ಚಾರುಚರಣವನು ತೋರಿಸಿ ಪೊರೆದ 5 * * * ಆರೋಗಣೆಯ ಗೈದನು ಶ್ರೀರಂಗ ಸಾರಸವಾದ ಸಮಸ್ತ ವಸ್ತುಗಳ ಪ. ಧೂಪದೀಪನೈವೇದ್ಯವಿಧಾನ ಶ್ರೀಪರಮಾತ್ಮ ಮಂಗಲಗುಣಪೂರ್ಣ 1 ಸುರತರುವಿನ ಸೌಭಾಗ್ಯದ ತೆರನ ಮರಕತಮಯ ಹರಿವಾಣದೊಳಿದನ 2 ಭಕುತರ ಸೌಖ್ಯವಿನ್ನೇನೆಂಬುವೆನು ಶಕುತ ಶ್ರೀಮಾಧವ ನಿರತ ತೋರುವನು 3 * * * ಆರತಿ ಶ್ರೀನಿವಾಸಂ ಶ್ರೀವೆಂಕಟೇಶಂ ಗಾರತಿ ಶ್ರೀನಿವಾಸಂ ಪ. ಮಂಗಲಾಂಗ ನರಸಿಂಗ ಮನೋಹರ ರಂಗರಾಯ ಶ್ರೀಗಂಗಾಜನಕಗೆ 1 ಮಾಧವ ಮಧುಹರ ಮೋದಭರಿತ ಜಗ- ದಾಧಾರ ವೇಣುನಾದವಿನೋದಗೆ 2 ನಿತ್ಯನಿರಂಜನ ಸತ್ಯಸ್ವರೂಪಗೆ ಪ್ರತ್ಯಗಾತ್ಮಪರತತ್ತ್ವಸ್ವರೂಪಗೆ3 ಭೋಜನವ ಗೈದರು ಪ. ಮೂಜಗತ್ಪತಿಯ ಪ್ರಸಾದಪ್ರತಾಪದಿ ನೈಜವಾಗಿಹ ಪಾಪ ಮಾಜಿ ಹೋಗಾಡುತ್ತ1 ಜಿಹ್ವೆಗೆ ರುಚಿಕರವಪ್ಪುದ ಮಿಗಿಲಾದ ಶಾಕಪಾಕಗಳನ್ನು ಪಾತ್ರದಿ ತೆಗೆದು ಸಂತೋಷ ಬೆಡಗುಗಳ ತೋರುತ್ತ 2 ಹಪ್ಪಳ ಸಂಡಿಗೆಯು ತಪ್ಪು ಒಗರ ಶಾಲ್ಯನ್ನಗಳೆಲ್ಲವ ತಪ್ಪದೆ ಸವಿದು ಬಾಯ್ ಚಪ್ಪರಿಸಿದರಾಗ 3 ಹೋಳಿಗೆಯು ಕಾಯದ ಜಡಗಳು ಮಾಯಕವಾದವು ಆಯುರಾರೋಗ್ಯ ಸುಶ್ರೇಯ ಕಾರಣವಾಯ್ತು 4 ಸುರರು ಉರಗ ಮಾನವರೆಲ್ಲರೂ ದೊರೆಯ ಪ್ರಸಾದವು ದೊರಕಿತು ಎನುತ ವಿ- ಸ್ತರವಾದ ತೋಷದಿ ಭರದಿಂದೊದಗುತಲಿ 5 ಭೋಗವಿನ್ನಂತೆಯಿಲ್ಲಿ ರೋಗ ದುರಿತವೆಲ್ಲ ನೀಗಿತು ಎನುತನು- ರಾಗದಿ ಸವಿದುಂಡು ತೇಗಿದರೆಲ್ಲರು 6 ಪುಣ್ಯ-ಫಲದಿಂದ ದೊರಕಿತಲ್ಲೇ ನಲವಿಂದಾನತರು ಕೈ ತೊಳೆದ ನೀರಿನೊಳಿದ್ದ ಜಲಜಂತು ಸಹವು ನಿರ್ಮಲಿನವಾದವು ಕಾಣೆ 7 ಪಾವನವಾದರು ಹಿಂಡು ಉದ್ದಂಡ ಮೃಗಗಳೆಲ್ಲ &ಟಿb
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ವಾದೀಂದ್ರ ಗುರುರಾಜ ನಿನ್ನ ಪಾದವ ತೋರಿಸಯ್ಯಾ ವಾದೀಂದ್ರ ಗುರು ನಿನ್ನ ಪಾದವ ನಂಬಿದೆ ಮೋದವÀ ಕೊಡುವುದು ಮದಗಳೋಡಿಸಿ ಪ ಉಪೇಂದ್ರ ಕರಕಮಲಜಾತ ಪಾಪಗಳೋಡಿಸಯ್ಯ ಪಾಪರಾಶಿಯ ಸುಟ್ಟು ದ್ರೌಪದೀವರದನ ಕೃಪೆಯಾಗುವಂತೆ ಮಾಡೋ ಶ್ರೀಪತಿ ಪ್ರಿಯನೆ 1 ಮೂಲರಾಮರ ಪಾದಪದುಮದಿ ಅಳಿಯಂತಿಪ್ಪ ಧೀರ ಶೀಲಾದಿ ಗುಣವಿತ್ತು ಶ್ರೀ ಲೋಲನಂಘ್ರಿಯ ಮಲಿನ ಮನವ ಕಳದು ಪೊಳೆಯುವಂತೆ ಮಾಡೋ2 ನಿತ್ಯ ಭಂಗಗಳೋಡಿಸುವಿ ಶೃಂಗಾರ ತುಳಸಿಯ ಮಂಗಳ್ಹಾರವ ಧರಿಸಿ ತುಂಗಮಹಿಮ ನರಸಿಂಗ ಮೂರುತಿ ತೋರೊ 3
--------------
ಪ್ರದ್ಯುಮ್ನತೀರ್ಥರು
ವಿಶೇಷ ಸಂದರ್ಭದ ಹಾಡುಗಳು ರಂಗನತೇರಿಗೆ ಬನ್ನಿರೋ ತೆಂಗು ಹೂ ಹಣ್ಣುಗಳ ತನ್ನಿರೋ ಬಂಗಾರದ ಗಿರಿಯಪ್ಪ ಎನ್ನಿರೋ ರಂಗ ಪರ್ಸಾದವ ಕೊಳ್ಳಿರೊ 1 ತೆಂಗಿನಮರ್ದುದ್ದ ತೇರೈತೆ ಅಲ್ಲಿ ರಂಗಿನ ಬಾವುಟ ಹಾರೈತೇ ಸಿಂಗಾರದಬಟ್ಟೆಯೇರೈತೇ ಹಂಗೂ ಹಿಂಗೂ ಜನ ಸೇರೈತೇ 2 ಬಾಳೆಕಂಬಗಳನು ಕಟ್ಟವ್ರೇ ತೋಳುದ್ದ ಹೂಸರ ಬಿಟ್ಟವ್ರೇ ತಾಳಮ್ಯಾಳ್ದೋರೆಲ್ಲಾ ನಿಂತವ್ರೇ ಬಾಳತುತ್ತೂರ್ಗೋಳನೂತ್ತವ್ರೇ 3 ತೇರಿನ ಗದ್ದುಗೆ ಬಂಗಾರ ತೋರಗಲ್ದಪ್ಪ ಅಲಂಕಾರ ಹಾರುವರ ಬಾಯಲ್ಲಿ ಓಂಕಾರ ರಂಗಪ್ಪಗಾಗೈತೆ ಸಿಂಗಾರ 4 ಭಟ್ಟರು ಮಂತ್ರವ ಹೇಳ್ತವ್ರೆ ಕಟ್ಟುನಿಟ್ಟಾಗಿ ನಿಂತವ್ರೇ ಬಟ್ಟಂದ ಹೂಗೊಳ ಹಾಕ್ತವ್ರೇ ಸಿಟ್ಟಿಲ್ಲದೆ ರಂಗ ನಗತವ್ನೇ 5 ಇಂಬಾಗಿ ಹೂರ್ಜಿಯ ಹಿಡಿದವ್ರೆ ದೊಂಬರೆಲ್ಲ ಕುಣಿತವ್ರೆ ಹಿಂಬದಿಯಲಿ ತೇರ ನಡೆಸವ್ರೇ 6 ಹಣ್ಣು ಜನ್ನವ ತೇರಿಗೆಸಿತಾರೆ ತಣ್ಣನೆ ಪಾನಕ ಕೊಡುತಾರೆ ಸಣ್ಣೋರೆಲ್ಲ ಕೈಮುಗಿತಾರೆ, ಹಣ್ಣು ಕಾಯ್ಗಳ ಗಾಲಿಗಿಡುತಾರೆ7 ತಕ್ಕೋ ಹಣ್ಕಾಯ ಎಂಬೋರು ಕೆಲವರು ನಕ್ಕು ಕುಣಿಯುವರೆಲ್ಲ ನೂರಾರು ಜನರು 8 ರಂಗಪ್ಪನ ತೆಪ್ಪ ತೇಲುತಿವೆ ಸಂಗೀತ ವಾದ್ಯ ಕೇಳುತಿವೆ ರಂಗುವiತಾಪು ಹೊಳೆಯುತಿವೆ ಮಂಗಳಾರತಿ ದೀಪ ಕಾಣುತಿವೆ 9 ಜೋಮಾಲೆ ಸರಗಳು ಹೊಳೆಯುತಿವೆ ನಾಮ ಮಂತ್ರಗಳೆಲ್ಲ ಮೊಳಗುತಿವೆ 10 ರಂಗಿನದೀಪ ಉರಿಯುವುದಣ್ಣ ಮಾಂಗಿರಿರಂಗನೆ ಬಲುಸೊಗಸಣ್ಣ 11
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ವೃಂದಾವನ ನೋಡಿದೆ | ಸತ್ಯ ಪ್ರೀಯರವೃಂದಾವನವ ನೋಡಿದೇ ಪ ಸತ್ಯ ಪೂರ್ಣ ಕರಜರೆನಿಸಿ | ಸುತ್ತಿಕ್ಷೇತ್ರಗಳನೆಲ್ಲಮತ್ತೆ ಬರಲು ಶ್ರೀರಂಗಕ್ಕೆ | ಫತ್ತೇಸಿಂಗ ಭೇಟಿಯಾದ 1 ಶತೃಗಳ ಗೆದ್ದು ಬಂದು | ಸತ್ಯಪ್ರಿಯರಿಗೆರಗಿ ಅವನೂ ಇತ್ತು ಊರುಗಳನೆರಡು | ನೆತ್ತಿ ಚಾಚಿ ನಮಿಸೀದ 2 ಮಾನಮಧುರಿ ಊರಿನಲ್ಲಿ | ಪ್ರಾಣೋತ್ಕ್ರಮಣ ಸಮಯದಲ್ಲಿಜ್ಞಾನಿ ರಾಮಾಚಾರ್ಯರಿಗೆ | ದಾನ ಮಾಡ್ದ ತುರ್ಯಾಶ್ರಮ 3 ಮಾಧವನ ದಯದಿಂದೆ | ಸಾಧಿಸುತ ಬದರಿ ಯಾತ್ರೆವೇದವತಿ ತೀರದಲ್ಲಿ | ಸಾಧುಗಳ ವೃಂದಾವನ 4 ವೇದ ವೇದ್ಯನಾದ ಗುರು | ಗುರುಗೋವಿಂದ ವಿಠಲನಮೋದದಿಂದ ಭಜಿಸುತ್ತ | ಆದರದಿ ಧ್ಯಾನಾಸಕ್ತ 5
--------------
ಗುರುಗೋವಿಂದವಿಠಲರು