ಒಟ್ಟು 462 ಕಡೆಗಳಲ್ಲಿ , 72 ದಾಸರು , 294 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪವಮಾನ ಪಾವನ ಚರಿತ ಪದ್ಮ ಭವನ ಪದಾರ್ಹನೆ ನಿರುತ ಅಹ ಪ ಶ್ರವಣಾದಿ ಭಕುತಿ ಜ್ಞಾನವಿತ್ತು ಸಲಹೊ ಮೂ ರವತಾರಾತ್ಮಕ ತತ್ವ ದಿವಿಜನಿಯಾಮಕ ಅ.ಪ. ಪ್ರಾಣೋಪಾನ ವ್ಯಾನೋದಾನ ಹೇ ಸ ಮಾನ ರೂಪಕನೆ ವಿಜ್ಞಾನ ತತ್ವ ಗೀರ್ವಾಣ ಅಹ ಸೇನಾಧಿಪತಿ ನಿನ್ನ ಜ್ಞಾನಸಾರದಲಿಪ್ಪ ಮಾನವರನು ಕಾಯೋ ಮೌನಿ ಧ್ಯಾನಗಮ್ಯ 1 ನಾಗಕೂರ್ಮ ದೇವದತ್ತ ಕೃಕಳ ಯೋಗಿವರಿಯ ಮುಕ್ತಾಮುಕ್ತ ಕ್ಲುಪ್ತ ಭೋಗಗಳೀವ ಸುಶಕ್ತಾ ತಲೆ ಬಾಗಿ ಬೇಡುವೆ ಸರ್ವೋದ್ರ್ರಿಕ್ತ ಅಹ ಜಾಗುಮಾಡದೆ ನಿಜ ಭಾಗವತರೊಳಿಡೊ ಮೈಗಣ್ಣಪದನಾಳ್ದ 2 ಮೂರುಕೋಟಿ ರೂಪಧರನೆ ಲೋಕ ಧಾರಕ ಲಾವಣ್ಯಕರನೆ ಸರ್ವ ಪ್ರೇರಕ ಭಾರತಿವರನೆ ತ್ರಿಪು ರಾರಿಗೆ ವಜ್ರಪಂಜರನೆ ಆಹ ನೀರಜ ಜಾಂಡದಿ ಮೂರೇಳು ಸಾವಿರ ದಾರು ನೂರು ಜಪ ಬೇರೆ ಬೇರೆ ಮಾಳ್ಪ 3 ಆಖಣಾಶ್ಮ ಸಮಚರಣ ಪದ್ಮ ಲೇಖರ ಮಸ್ತಕಾಭರಣ ಕಲ್ಪ ಶಾಖೆಯಂತೆ ಅತಿಕರುಣಾದಿಂದ ಈ ಖಂಡದೊಳು ಮಿಥ್ಯಾವರಣ ಆಹಾ ನೀ ಖಂಡಿಸಿದಿ ದಂಡ ಮೇಖಲ ಭೂಷಣ ಆಖುವಾಹನಪಿತ ಆಖಂಡಲರ್ಚಿತ 4 ಶ್ರೀವಲ್ಲಭಗೆ ಪ್ರತಿಬಿಂಬನಾಗಿ ಜೀವವೇದ ಕಾಲಸ್ತಂಭಗತ ಆವಾಗ ಹರಿರೂಪ ಕಾಂಬ ಶಕ್ತ ನೀ ಒಬ್ಬನಹುದೋ ನಾನೆಂಬೆ ಆಹಾ ವಿಭವ ಜಗ ನಿತ್ಯ 5 ದಕ್ಷಿಣಾಕ್ಷಿಗತ ವತ್ಸಾ ರೂಪಿ ದಕ್ಷನಹುದೋ ಪರಮೋಚ್ಚಾ ಚಾರು ತ್ರ್ಯಕ್ಷಾದಿ ಸುರರೊಳಧ್ಯಕ್ಷಾ ಸರ್ವಾ ಪೇಕ್ಷರಹಿತನೆ ಸ್ವೇಚ್ಛಾ ಆಹಾ ಮೋಕ್ಷಾದಿ ದ್ವಾತ್ರಿಂಶ ಲಕ್ಷಣ ಪುರುಷ ನಿ ರೀಕ್ಷಿಸಿ ಕರುಣದಿ ರಕ್ಷಿಸೋ ಎನ್ನನು 6 ಮೂಲೇಶನಂಘ್ರಿ ಸರೋಜ ಭೃಂಗ ಏಳೇಳು ಲೋಕಾಧಿರಾಜಾ ಇಪ್ಪ ತ್ತೇಳು ರೂಪನೆ ರವಿತೇಜಾ ಲೋಕ ಪಾಲಕರಾಳ್ವ ಮಹೋಜಾ ಆಹಾ ಕಾಳಿರಮಣ ನಿನ್ನ ಕಾಲಿಗೆರಗುವೆ ಕೃ ಪಾಳು ಭಕ್ತಿ ಜ್ಞಾನವಾಲಯ ಕರುಣಿಸು 7 ಅಧಿಭೂತ ಅಧ್ಯಾತ್ಮಗತನೇ ವಿಮಲ ಅಧಿದೈವರೊಳು ಪ್ರವಿತತನೆ ಕಲಿ ವದನದಿ ನಿಲಿಸೋ ಮಾರುತನೆ ಆಹಾ ಬದರಿಕಾಶ್ರಮದೊಳು ಹದಿನಾರು ಸಾವಿರ ಸನ್ನುತ 8 ಮಾತರಿಶ್ವ ಮಹಾಮಹಿಮ ಸರ್ವ ಚೇತನ ಹೃದ್ಗತ ಹನುಮ ಭೀಮ ಭೂತಳದೊಳು ಮಧ್ವ ನಾಮಾದಿಂದ ಜಾತನಾಗಿ ಜಿತಕಾಮಾ ಆಹಾ ಆ ತಿಪ್ಪಣ್ಣಾದಿ ವಿಖ್ಯಾತ ಮಾಯ್ಗಿಳ ಗೆದ್ದ ಸೀತಾರಮಣ ಜಗನ್ನಾಥ ವಿಠ್ಠಲ ದೂತ 9
--------------
ಜಗನ್ನಾಥದಾಸರು
ಪಾದ ಪದುಮವ ನಿತ್ಯದಿ | ಭಜಿಸುವರ ಸತ್ಯಲೋಕೇಶನ ಪೆತ್ತ ಪರಮಾತ್ಮನು | ನಿತ್ಯದಿ ಕರಪಿಡಿವ ತಿಳಿ ಮಾನವಾ ಪ ರವಿಸನ್ನಿಭಾಂಗರು | ಭುವಿ ದಿವಿಜೇಂದ್ರರು | ಕವಿಗಣ ಸನ್ನುತರು | ಭವದೂರರು | ಭುವನದೋಳ್ ಧೃಡಚಿತ್ತದವರಾಗಿ | ತಪದಲ್ಲಿ ಧ್ರುವನಂತೆ ತೋರುವರು ಮಹಾತ್ಮರು1 ಭುಜಗಾಧಿಪನಯಂತೆ ಯೋಗ ಸುಸಾಧಕರು ಭುಜಗ ಭೂಷಣನಂತೆ ವಿಜಯಾನಂದದಿ | ದಿಗ್ವಿಜಯ ಶಾಲಿಗಳಿವರು 2 ನೇಮಪೂರ್ವಕವಾಗಿ | ನಿತ್ಯದಲ್ಲಿ ಶಾಮಸುಂದರ ಸೀತಾ ರಾಮನರ್ಚಿಸುತಲಿ | ಭೂಮಿಯೋಳು ಮೆರೆದಿಹರು ಸುಧೀರರು 3
--------------
ಶಾಮಸುಂದರ ವಿಠಲ
ಪಾದುಕೆಗಳ ದಯಪಾಲಿಸು ಪರಮ ಪಾವನ ಮಹಿಮ ಸುದೇವ ಲಲಾಮ ಪ ನೀ ದಯದಿಂ ತವಪಾದ ಪಯೋಜಗ ಳಾದರದಲಿ ಕೊಡು ಹೇ ದಯಧಾಮ ಅ.ಪ. ಅಜನವ್ಯಯನಪ್ರಾಕೃತ ಮಹಿಮನು ಅಜನಪಿತನು ತನ್ನಿಚ್ಛೆಯೊಳು ಅಜಸುತ ದಶರಥ ಸುತನೆಂದೆನಿಸಿದ ತ್ರಿಜಗ ನೋಡೆ ಆಶ್ಚರ್ಯದೊಳು 1 ತುಂಗಮಹಿಮ ತವ ಮಂಗಳಕರ ಚರ ಣಂಗಳು ಈ ತ್ರಿಜಗಂಗಳ ಪಾಲಿಪುವು ಅಂಗಜಕೋಟಿ ಶುಭಾಂಗನೆ ತವಪದ ಭೃಂಗನೆನಿಸಿ ಕೃಪಾಪಾಂಗದಿ ಈಕ್ಷಿಸೊ ಮಂಗಳಕರ ರಘುಪುಂಗವ ಕರಿಗಿರಿ ರಂಗ ನೃಸಿಂಹ ಸೀತಾಂಗನೆಯರಸ 2
--------------
ವರಾವಾಣಿರಾಮರಾಯದಾಸರು
ಪಾರಾಯಣ ಮಾಡಿರೋ ಭವ ಪಾರಾವಾರದೊಳುತ್ತಾರಕವಿದು ನೋಡಿರೋಪ ಶರೀರನೆಚ್ಚಿರಬೇಡಿರೋ ಸಾರುವ ಮೃತ್ಯುವ ದಾರಿಗೆ ಗೋಚರ ಧಾರಿಣಿಯಲಿ ಪೇಳಿರೋ1 ಸಾಹಸ ಪಡಬೆಡಿರೋ ದೇಹಗೇಹಂಗಳನೂಹಿಸಿ ಸಂಗಡ ಬಾಹವೆಂದಿರ ಬೇಡಿರೊ2 ದೇಹರಕ್ಷಣೆಗೆಂದು ಗೇಹವನಿರ್ಮಿಸಿ ನೇಹದಿ ನಾರಿಯೊಳು ಗೇಹಿನಿಯೆಂದತಿ ಮೋಹದಿ ಕೆಡುವನು ದೇಹಿಸಂಸಾರದೊಳು3 ಮಾರಿಯಲ್ಲವೆ ಕೇಳಿರೋ ನಾರಿಯಾರಿಗೆ ಮಕ್ಕಳಾರಿಗೆ ಜೀವಿತದಾರಿಯೆಲ್ಲಿಗೆ ಪೇಳಿರೋ4 ಬಾರಳು ಕಂಚುಕನ್ನಡಿಬಾರದೀ ಸಂಚಿತ ದ್ರವ್ಯದಿ ಕೊಂಚವು ಬಾರದು ವಿಸಂಚಿಗೆ ದೇಹವಿದು5 ಹಲವು ಸಾಹಸದಿಂದ ಘಳಿಸಿದರ್ಥಗಳೆಲ್ಲ ಬಳಸಿನ ಬಾಂಧವರು ಒಲಿದುಕೊಂಡಾಡುವರು6 ಅರ್ಥವಿದ್ದವನ ಸಮರ್ಥನೀತನ ಜನ್ಮಸಾರ್ಥಕವೆಂಬುವರು ಜನ್ಮವ್ಯರ್ಥವೆಂದುಸುರುವರು 7 ರೊಕ್ಕವಿದ್ದರೆ ಕೈಲಿ ಸಕ್ಕರೆ ಮಾತಿನೊಳಕ್ಕರೆ ಪಡಿಸುವರು ರೊಕ್ಕವಿಲ್ಲದವನ ಮಕ್ಕಳು ಮಡದಿಯರು ಲೆಕ್ಕಿಸದಿರುತಿಹರು 8 ಮರಣವ ಪೊಂದುವರು ಮರಳು ಜಗಳಕೆ ತರಳರು ಚಾಚುತೆ ಕೊರಳನು ಕೊಯ್ಯುವರೋ 9 ಬಂಧುಗಳನ್ನು ಕೊಲ್ವರು ಒಂದಿಗೆ ಜನಿಸಿದರೆಂದು ನೋಡರುನಿಜ ದಂದುಗಕ್ಕೊಳಗಹರು10 ನಂಟರು ನಮಗಿವರುಂಟೆಂದು ಮೋಹದ ಗಂಟುಕಟ್ಟಿರೆ ಮನದಿ ಕಂಟಕ ಯಮಬಂದು ಗಂಟಲಬಿಗಿವಾಗ ನಂಟರಿಲ್ಲವು ಜಗದಿ11 ಅಪತ್ತುಬಂದಾಗ ಪಾಪಿಯು ಮನದನು ತಾಪದಿ ನೆನೆಯುತಿರೆ ಕಾಪಾಡುವನಾಗ ಶ್ರೀಪತಿ ಪುಲಿಗಿರಿ ಭೂಪನು ನಮ್ಮದೊರೆ12 ನೊಂದ ಗಜೇಂದ್ರನ ಕಂದ ಪ್ರಹ್ಲಾದನ ಬಂದವಿಭೀಷಣನ ಚಂದಿರಮುಖಿ ನೃಪನಂದನ ಧ್ರುವರನು ಚಂದದಿ ಸಲಹಿದನ 13 ಅಜಮಿಳಗೊಲಿದನ ಕುಜನರ ತರಿದನ ಸುಜನರನಾಳಿದನ ಭಜಕರದಾತನ ತ್ರಿಜಗಕ್ಕೆ ನಾಥನ ವಿಜಯನ ರಥಸೂತನ14 ಅಂಗಜಜನಕನ ಮಂಗಳ ಮಹಿಮನ ಗಂಗೆಯ ಪಡೆದವನ ರಂಗನ ಸುಗುಣ ತರಂಗನ ಶಂಖರಥಾಂಗವ ಪಿಡಿದಿಹಿನ15 ಖ್ಯಾತ ಪಾದಾಂಬುಜನ ವಾತನ ಮಗನೊಳು ಪ್ರೀತಿಯ ಬೆಳಸಿದ ಸೇತು ವಿಧಾತನ16 ರಾಮನ ಜಗದಭಿ ರಾಮನ ದೈತ್ಯವಿರಾಮನ ಭಜಕಜನಾ ರಾಮನ ದಶರಥರಾಮನ ಸೀತಾರಾಮನ ಗುಣಧಾಮನ17 ಪಂಕಜನೇತ್ರನ ಪರಮ ಪವಿತ್ರನ ಶಂಕರನುತಿಪಾತ್ರನ ವೆಂಕಟರಮಣನ ಕಿಂಕರ ಶರಣನ ಸಂಕಟ ಹರನಾಮನ18 ವರದ ವಿಠಲ ದೇವನ ಪೊರೆಯುವದಾನರನ 19
--------------
ಸರಗೂರು ವೆಂಕಟವರದಾರ್ಯರು
ಪಾಲಯಮಾಂ ಶ್ರೀ ರಾಮಾ ಮೂಲ ಸುಗುಣ ಶೀಲನೆ ಪ ನೀಳ್ಗರೆವ ಹೃದಯನಿವಾಸಾ ಕಾಲಾಂತಕ ಕರ್ಮನಾಶಾ ಚಾಳಿಕ ಚಿನ್ಮಯ ಸುರೇಶ ಹರೀ ಲೋಲಗುಣಾತೀತನೆ 1 ಚಂಡಕಿರಣ ಕುಲಜರಾಘವಾ ಸುಂದರಶ್ರೀ ಸೀತಾಧವಾ ಛಂಧ ನಿಜಾನಂದ ವೀಯುವಾ ಬಂದಭಯನಿವಾರನೇ ನೀ 2 ದಶಮುಖರಾವಣ ನಿವಾರಣಾ ಅಸುರಾಸುರ ನಿಕ್ರಂದ ನಾ ಋಷಿಯಾಗವ ಕಾಯ್ದ ದೇವಾ 3 ಅಂಬುಜಾಕ್ಷಾನಂತರೂಪಾ ತುಂಬಿಹ ಸದ್ಗುರು ಸ್ವರೂಪಾ ನಂಬಿದ ಭಕ್ತರನೆ ಪಾಲಿಪಾ ಚಿದಂಬರ ಶಾಂತಿದಾಯಕಾ 4
--------------
ಶಾಂತಿಬಾಯಿ
ಪಾಲಿಸೆನ್ನನೂ ರಾಮ ಪಂಥವ್ಯಾತಕೋ ಪ ಕಾಲವೈರಿ ಕಪಟನಾಟಕ | ಆಲಿಸೆನ್ನ ಬಿನ್ನಪವಂ ಚಾಲನೆ ಶ್ರೀಲೋಲನೇ ನೀಂ ಅ.ಪ ರಕ್ಷಕಾಮಣಿ ಸಾಧುಜನ ರಕ್ಷಾಮಣಿ ಅಕ್ಷಯ ಸುಜನರಾಶ್ರಿತÀ ನಿನ್ನ ಭಿಕ್ಷವನಾಂಬೇಡುವೆನೈ ಪಕ್ಷಿವಾಹನ ಜಗದಧ್ಯಕ್ಷನೇ ಸೀತಾರಾಮ 1 ಪಂಡಿತಾಮಣಿ ಜ್ಞಾನಕುಂಡಲಿನಗರೀಶ ನೀ ನಂಡಜ ವಾಹನನಹುದೊ ಪಂಡರಿಪುರನಾಯಕ ಚಾ ಮುಂಡಿ ವರದಾಯಕ ನೀಂ [ಶ್ರೀರಾಮ] 2 ಶಾಶ್ವತ ಜನಭಾಷಾ ಭಾಸ್ಕರಕೋಟಿ ತೇಜಾ ಈಶ್ವರ ಮತ್‍ಗುರು ತುಲಶೀರಾಮಾ 3
--------------
ಚನ್ನಪಟ್ಟಣದ ಅಹೋಬಲದಾಸರು
ಪಾಹಿಮಾಂ ರಾಮಚಂದ್ರ ಅಚಲಾಂ ಭಕ್ತಿಂ ದೇಹಿ ಕಲ್ಯಾಣಸಾಂದ್ರ ಪ. ಶ್ರೀಹರಿ ನಾಗಾರಿವಾಹನ ಶ್ಯಾಮಲ- ದೇಹ ರಾಕ್ಷಸ ಸಮೂಹ ವಿದಾರಕ ಅ.ಪ. ಸಜ್ಜನ ಕಲ್ಪವೃಕ್ಷ ಪಾಪಾಂಕುರ- ಭರ್ಜನ ವಿಬುಧಪಕ್ಷ ಧೂರ್ಜಟಿಸಖ ದೂಷಣಾರಿ ದ್ಯುಮಣಿಕೋಟಿ- ಪ್ರಜ್ವಲಿಪ ಪರಮ ಜಗಜ್ಜೀವನಧಾಮ ಪೂರ್ಣಬ್ರಹ್ಮ ರಘುವಂ- ಜಯಾಕಾಂತ ಪ್ರಭುವೆ 1 ವರಾಹ ಪ್ರ- ಹ್ಲಾದವರದ ಗುಣಧಾಮ ಸಾಧುವಟುವೇಷವಿನೋದ ಭಾರ್ಗವ ಬಹು ಕ್ರೋಧಿ ಕ್ಷತ್ರಿಯಕುಲ ಭೇದಿ ರಾವಣಾಂತಕ ಕುವಾದಿಜನದುರ್ಬೋಧಬದ್ಧವಿ- ಶ್ರೀಧರ ರಮಾಮೋದಮಾನಸ 2 ಕಾಶಿಮಠಸ್ಥ ಯತಿ ಪರಂಪರ್ಯ- ಭೂಷಣ ಶುದ್ಧಮತಿ ಶ್ರೀ ಸುಕೃತೇಂದ್ರ ಸನ್ಯಾಸಿ ಪೂಜಿತಪಾದ ವಾಸುದೇವ ತವ ದಾಸ್ಯವ ಪಾಲಿಸು ಸುಭದ್ರ ಶ್ರವಣ ಪ- ಭವ ರುಗ್ಭೇಷಜನೆ ನರಕೇಸರಿಯೆ ಶ್ರೀ ವ್ಯಾಸ ರಘುಪತಿ 3 ಪಾರಗಾಣರು ನಿನ್ನಯ ಬ್ರಹ್ಮಾದ್ಯರು ಭೂರಿಗುಣದ ಮಹಿಮೆಯ ಸೂರಿಜನಪ್ರೀತ ಸೀತಾನಯನ ಚ- ಕೋರಚಂದ್ರನು ಮಹೋದಾರ ಶಾಙ್ರ್ಗಧರ ಮೀರಣಾತ್ಮಜವರದ ನತಮಂದಾರ ಕೈರವಶ್ಯಾಮ ರಾಮನ 4 ಪ್ರಣವರೂಪ ನಿರ್ಲೇಪ ನಿತ್ಯಾತ್ಮದು- ರ್ಜನವನೋದ್ದಹನೋದ್ದೀಪ ಮನುಕುಲಮಣಿ ಮುನಿಗಣ ಸಮಾಹಿತ ಜನಾ- ರ್ದನ ಬ್ರಹ್ಮಾದ್ಯಖಿಳ ಚೇತನರು ನಿನ್ನಾಧೀನ ಚಿದಾನಂದೈಕ ದೇಹನೆ ಭಕುತಿ ಭಾಗ್ಯವನು ಪಾಲಿಸು 5
--------------
ತುಪಾಕಿ ವೆಂಕಟರಮಣಾಚಾರ್ಯ
ಪೀತಾಂಬರಧರ ದಶರಥಬಾಲಾ ಸೀತಾ ಮನೋಹರ ದಶಶಿರಕಾಲಾ ಪ ಭೀತಜನಾಶ್ರಯ ಮಣಿಮಯ ಮಾಲಾ ಶೀತಕರೋಪಮ ವದನವಿಶಾಲಾ ಅ.ಪ ಗೌತಮ ಮುನಿಸಂಪೂಜಿತ ಚರಣಾ ಖ್ಯಾತ ವಿಭೀಷಣ ಪರಮಾಭರಣಾ ಪಾತಕಹರ ದಾನವ ಸಂಹರಣಾ ವಾತಾತ್ಮಜಸಂಸೇವಿತ ಚರಣಾ1 ಮಂಗಳಮೂರ್ತಿ ಗರುಡ ತುರಂಗ ಸಂಗರಭೀಮ ಶುಭಾಂಗ ಕೃಪಾಂಗ ಗಂಗಾಧರನುತ ದಿವ್ಯರಥಾಂಗ ಮಾಂಗಿರಿರಂಗ ಮೋಹನಾಂಗ ನೀಲಾಂಗ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಪೂಜಿಸ ಬಲ್ಲೆನೆ ನಾನು ನಿನ್ನಂಘ್ರಿಯ ರಾಜೀವದಳ ನಯನ ಪ ಭಂಜನ ಭವ ರಾಮಚಂದ್ರ ಸೀತಾ ಹೃತ್ಕುಮುದ ಚಂದ್ರ ಅ.ಪ ಪಾರಿಜಾತ ಪುನ್ನಾಗ ಬಕುಳ ಮಂ- ದಾರ ಮಲ್ಲಿಕ ಕೇತಕೀ- ಸಾರಸ ಜಾಜಿ ಚಂಪಕ ತುಳಸಿಯುಕರ- ವೀರವೇ ಮೊದಲಾದ ದಿವ್ಯ ಪುಷ್ಪಗಳಿಂದ 1 ವಿಶ್ವಾದಿ ಸಾಹಸ್ರನಾಮಂಗಳಿಂ ನಿನ್ನ ಶಾಶ್ವದ್ರೂಪವ ತಿಳಿದು ಅಶ್ವಮುಖಾನಂದಮಯ ಪರಮಾತ್ಮ ನಿ- ನ್ನರ್ಚಿಸುವಡೆ ಚಪಲ ಚಿತ್ತಗೆ ಸಾಧ್ಯವೆ 2 ಸೂರ್ಯ ಚಂದ್ರರು ದೀಪ ನೀರೆಲ್ಲ ಅಭಿಷೇಕವೂ ತೋರೂವದಿಗ್ವಸ್ತ್ರ ಪೃಥ್ವಿಗಂಧವು ಸರ್ವ ಸಾರ ಭೋಕ್ತಗೆ ಗುಣಗಳ ತಾಂಬೂಲಾದಿಗಳಿಂದ3 ಕಮಲ ಸದನ ಹಂಸಾಖ್ಯ ಕು- ಡಿದ ನೀರು ಅಭಿಷೇಕವೂ ಮುದದಿ ನಿತ್ಯದಿ ಉಂಬುವುದೆ ನೈವೇದ್ಯವು ಪ್ರತಿ ಪದ ಪ್ರದಕ್ಷಣೆ ಮಲಗುವದೆ ವಂದನೆಯೆಂದು 4 ಒಂದು ಅರಿಯದ ಉಭಯಾಂಧನು ನಾನು ಗೋ- ವಿಂದ ನಿನ್ನಯ ಭಕ್ತಾರಾ ಸಂದೋಹದೊಳಗಿಟ್ಟೆನ್ನರ್ಚನೆ ಕೈಕೊಂಡು ತಂದೆ ಪಾಲಿಸೋ ಗುರುರಾಮ ವಿಠಲ ಸ್ವಾಮಿ 5
--------------
ಗುರುರಾಮವಿಠಲ
ಪೂತ ಚರಿತೆ ಭೂಮಿಜಾತೆ ಸೀತಾದೇವಿಯೇ ಪ ಪಾತಕಗಳ ಕಳೆದು ಯಮ್ಮನು ಪಾಲಿಸು ತಾಯೆ ಅ.ಪ ದೇವ ವೈರಿಯ ಕೈಯಲಿ ಸೇರಿ ಭೂವರ ಜನಕರಾಯಗೊಲಿದೌ ಭೂವಿವರದೊಳಿಡಲು ಮಾಯದಿ 1 ವಸುಧೆ ಸುರನಿಂದೋಲೆ ಕಳುಹಿಸಿ ಬಿಸಜಾಕ್ಷ ಕೃಷ್ಣನೊಲಿಸಿ ಕೈಪಿಡಿದೆ 2 ಶರಧಿರಾಜನ ಮಗಳೆ ಚಂದ್ರಸೋ ಗುರುರಾಮ ವಿಠಲನರ್ಧಾಂಗಿಕರುಣಿಸಮ್ಮ ಕೃಪಾ ಪಾಂಗಿ 3
--------------
ಗುರುರಾಮವಿಠಲ
ಪೊರೆದ್ಯಾಕೋ ಸೀತಾನಾಥ ತಂದೆ ಮಂದರಧರ ಎನ್ನೊಳ್ದಯ ಮಾಡಲೊಲ್ಲ್ಯಾಕೋ ಸೀತಾನಾಥ ಪ ಕರಿರಾಜ ನಿಮ್ಮಯ ಚರಣ ಸರೋಜಕ್ಕೆ ಸೀತಾನಾಥ ಹರಿ ಬರೆದೋಲೆ ನಿನ್ನನು ಕರೆಕಳುಹಿದನೇನೊ ಸೀತಾನಾಥ ತರುಣಿ ದ್ರೌಪದಿ ತನ್ನ ಅವಮಾನಕಾಲಕ್ಕೆ ಸೀತಾನಾಥ ಸಿರಿವರ ನಿನ್ನ್ವೊಯ್ಕುಂಠಕೆ ತಾರು ಕೊಟ್ಟಿರ್ದಳೇ ಸೀತಾನಾಥ 1 ಕಂಬದಿ ಬಾರೆಂದಂಬುಧಿಗೆ ಬಂದ್ಹೇಳ್ದನೇ ಸೀತಾನಾಥ ಡೊಂಬೆ ಮಾಡುವ ದೂರ್ವಾಸಮುನಿಯಂದು ಸೀತಾನಾಥ ನಿನ್ನ ಬೆಂಬಲಿಟ್ಟು ಅಂಬರೀಷ ವ್ರತಗೈದನೇ ಸೀತಾನಾಥ 2 ವರಧ್ರುವ ಧರೆಯೊಳು ಜನಿಸುವ ಕಾಲಕ್ಕೆ ಸೀತಾನಾಥ ದೇವ ಕರವ ಪಿಡಿದು ನಿಮ್ಮ ಜೊತೆಲಿ ಕರೆತಂದನೇ ಸೀತಾನಾಥ ಪರಮಪಾಪಿ ಅಜಮಿಳನಗೆ ಪದವಿಯು ಸೀತಾನಾಥ ದೇವ ಕರುಣಿಸಿದವನಿನಗೆ ನೆರವಾಗಿರ್ದನೇನೊ ಸೀತಾನಾಥ 3 ಛಲದ ರಾವಣನಳಿದು ವರವಿಭೀಷಣನಿಗೆ ಸೀತಾನಾಥ ಲಂಕ ಕರುಣಿಸಿ (ದಿವೈಕುಂ) ಠ ಬಾಗಿಲೊಳಿರ್ದನೇ ಸೀತಾನಾಥ ಸೀತಾನಾಥ ಅವ ಇಳೆಯೊಳು ನಿಮಗೆ ಪಕ್ಷದ ಗೆಳೆಯನೆ ಸೀತಾನಾಥ 4 ಹಿಂದಿನ ಹಿರಿಯರವರನು ದುರಿತದಿಂ ಸಲಹಿದಿ ಸೀತಾನಾಥ ಇದು ಚೆಂದವೆ ನಿನಗೆ ಕಂದನ ಬಿಡುವುದು ಸೀತಾನಾಥ ಕಂಟಕ ಬೇಗ ಬಯಲ್ಹರಿಸಯ್ಯ ಸೀತಾನಾಥ ರಂಗ ಸಿಂಧುಶಯನ ಮಮ ತಂದೆಯೇ ಶ್ರೀರಾಮ ಸೀತಾನಾಥ 5
--------------
ರಾಮದಾಸರು
ಪೌರಾಣಿಕ ಕಥನ ಸೃಷ್ಟಿಯಲಿ ಕಡು ದುಷ್ಟ ರಾವಣ ಕಟ್ಟಳೆಯ ಕಂಗೆಡಿಸಲು ಅಷ್ಟರೊಳು ಭಯಪಟ್ಟು ದಿವಿಜರು ಒಟ್ಟುಗೂಡುತ ಸ್ತುತಿಸಲು ಥಟ್ಟನೆ ದಯವಿಟ್ಟು ದಶರಥಪಟ್ಟಮಹಿಷಿಯೊಳುದಿಸಲು ದಿಟ್ಟ ಕೌಶಿಕನಿಷ್ಟಿಯನು ಕೈಗೊಟ್ಟು ಸಲಹಿದ ಶ್ರೇಷ್ಠಧನುಜಘರಟ್ಟಗಾರತಿಯ ಬೆಳಗಿದರು1 ಪಾದರಜದಿಂ ಪೊರೆಯುತ ಸಾಧಿಸಿದ ಧನು ಭೇದಿಸುತ ಹಿತಳಾದ ಸೀತೆಯ ಒಲಿಸುತ ಕ್ರೋಧದಿಂದೆದುರಾದ ಪರಶುವನಾ ದಯಾನಿಧಿ ಗೆಲ್ಲುತ ಸಾಧುಮಾರ್ಗವಿನೋದ ಸೀತಾಹ್ಲಾದ ಪಾಪವಿರೋಧ ದಾನವಸೂದನಗಾರತಿಯ ಬೆಳಗಿದರು 2 ಚಿಕ್ಕ ತಾಯಿಯ ಸೊಕ್ಕುನುಡಿಗತಿಸೌಖ್ಯವನು ಹೋಗಾಡುತ ಘಕ್ಕನನುಜನ ನಿಜಸತಿಯತಾ ಸೌಖ್ಯದಿಂದೊಡಗೂಡುತ ವನಕ್ಕೆ ತಾ ಸಂಚರಿಸುತ ಮಿಕ್ಕಿ ಬಂದಾ ರಕ್ಕಸಿಯ ಕುಚದಿಕ್ಕೆಲವ ಖಂಡಿಸಿದ ಪ್ರಭುಗೆ ಮಾಣಿಕ್ಯದಾರತಿಯ ಬೆಳಗಿದರು 3 ಧೂರ್ತ ಖರತ್ರಿಶಿರಾದಿ ದಾನವ ಮೊತ್ತವನು ಸಂಹರಿಸುತ ದೈತ್ಯಮಾಯಾವೃತ್ತಿಮೃಗವನು ಮತ್ತಕಾಶಿನಿ ಬೇಡುತ ಸತ್ತ್ವನಿಧಿ ಬೆನ್ನಟ್ಟಿ ಸೀತೆಯ ದೈತ್ಯಪತಿ ಕೊಂಡೋಡುತ ಮತ್ತೆ ಕಾಣದೆ ಕೋಪದಿಂದರಸುತ್ತ ಬಂದ ಮಹಾತ್ಮ ರಾಮಗೆ ಮುತ್ತಿನಾರತಿಯ ಬೆಳಗಿದರು 4 ತೋಯಜಾಕ್ಷಿಯ ಸುದ್ದಿ ಪೇಳ್ದ ಜಟಾಯುವಿಗೆ ಗತಿ ತೋರುತ ವಾಯುತನುಜಸಹಾಯದಿಂ ಕಪಿರಾಯ ಸಖ್ಯವ ಮಾಡುತ ನ್ಯಾಯಗರ್ಭಿತ ಸಾಯಕದಿ ಮಹಕಾಯ ವಾಲಿಯ ಕೊಲ್ಲುತ ಪ್ರಾಯಶದಿ ಗಿರಿಯೊಡ್ಡಿ ಶರಧಿಗುಪಾಯದಿಂ ಬಂಧಿಸಿದ ಜಾನಕೀಪ್ರಿಯಗಾರತಿಯ ಬೆಳಗಿದರು 5 ಮನವಿವೇಕವ ನೆನೆದು ಬಂದಾ ಧನುಜಪತಿ ಸೋದರನಿಗೆ ಇನಶಶಿಗಳುಳ್ಳನಕ ಲಂಕಾವನಿಯ ಪಾಲಿಸುತ ಮಿಗೆ ರಣದಿ ರಾವಣಕುಂಭಕರ್ಣರ ಹನನಗೈಯುತ ಲೋಕಕೆ ಸೀತೆಯ ವಿನಯ ಗೈದಗೆ ಮೇರುಗಿರಿನಿಭ ಇಂದ್ರಪುಷ್ಪಕಾವೇರಿ ತಾ ಸಾಕೇತಕೆ ಸೇರಿ ಸಾನುಜರಿಂದ ಧರ್ಮದ ಮೇರೆದಪ್ಪದೆ ಸುಜನಕೆ ಸಾರಸಂಪದವಿತ್ತು ಲೋಕೋದ್ಧಾರನಾಗುತ್ತಖಿಳಕೆ ನೀರಜೇಕ್ಷಣ ಕರುಣಪಾರಾವಾರ ಶರಧೀಗಂಭೀರ ಲಕ್ಷುಮೀ ನಾರಾಯಣ ರೂಪ ಜಯ ಜಯ 7
--------------
ತುಪಾಕಿ ವೆಂಕಟರಮಣಾಚಾರ್ಯ
ಪ್ರಸನ್ನ ರಾಮಾಯಣ ಸುಂದರಕಾಂಡ ಜಯ ಜಯ ಜಯ ರಾಮಚಂದ್ರ ಜಯ ರಾಮಭದ್ರ ಸರ್ವೇಶ ಜಯ ಜಯ ಜಯ ರಾಮ ಸ್ವರತ ಆಹ ಜಯ ಸೀತಾರಮಣ ನೀ ಭಯಬಂಧ ಮೋಚಕ ಜಲ ಸಂಭವಮುಖ ಸುರಸೇವ್ಯ ನಮೋ ನಮೋ ಪ ಶಾಶ್ವತ ಸುಗುಣಾಬ್ಧಿ ರಾಮ ಸವೇಶ್ವರನೆ ಬಲವೀರ್ಯ ಸಂಪೂರ್ಣಾರ್ಣವ ನಿನ್ನ ನಮಿಸಿ ಆಹ ಶೀಘ್ರ ಆ ಗಿರಿಯೆತ್ತಿ ಹನುಮ ಹಾರಲು ಆಗ ಸಾಗರ ಸರ್ವವು ಕಲಕಿ ಓಡಿತು ಕೂಡ 1 ಹಿಂದೆ ಪರ್ವತಗಳ ಪಕ್ಷ ಹನನ ಕಾಲದಿ ವಾಯು ತನ್ನ ಹಿತದಿ ರಕ್ಷಿಸಿದನು ಎಂದು ಆಹ ಹಿಮಗಿರಿಸುತ ಮೈನಾಕನು ಮೇಲೆ ಬಂದಾಗ ಹನುಮಗೆ ನಮಿಸಿ ವಿಶ್ರಮಿಸಿಕೊಳ್ಳೆಂದ2 ಶ್ರಮರಹಿತನು ಎಂದೂ ಹನುಮ ಶ್ರಮ ನಿವಾರಣ ಅನಪೇಕ್ಷ ಆಶ್ಲೇಷಿಸಿ ನಗವರನ ಆಹ ನಿಸ್ಸೀಮ ಪೌರುಷ ಬಲಯುತ ಹನುಮನು ನಿಲ್ಲದೆ ಮುಂದೆ ತಾ ಸುರಸೆಯೊಳ್ ಹೊಕ್ ಹೊರಟ 3 ಪರೀಕ್ಷಿಸೆ ಸುರಸೆಯ ಸುರರು ಪ್ರೇರಿಸಿ ವರವನ್ನು ಕೊಡಲು ಆಹ ಫಣಿಗಳ ತಾಯಿ ಅವಳು ಬಾಯಿ ತೆರೆಯಲು ಪೊಕ್ಕು ಲೀಲೆಯಿಂ ಹನುಮ ಹೊರಹೊರಟ4 ಸುರರು ಆನಂದದಿ ಆಗ ಸ್ತುತಿಸಿ ಹನುಮನ ಕೊಂಡಾಡಿ ಸುರಿಯಲು ಪುಷ್ಪದ ಮಳೆಯ ಆಹ ಶೀಘ್ರ ಪವನಜನು ಮುಂದೆ ತಾ ಹೋಗುತ್ತ ಸಿಂಹಿಕಾ ರಾಕ್ಷಸಿ ಛಾಯಾಗ್ರಹವ ಕಂಡ 5 ಸರಸಿಜಾಸನ ವರಬಲದಿ ಸಿಂಹಿಕಾ ಲಂಕಾ ಪೋಗುವರ ಸೆಳೆದು ತಾ ನಿಗ್ರಹಿಸುವಳು ಆಹ ಸೆಳೆಯೆ ಆ ರಾಕ್ಷಸಿ ಹನುಮನ ಛಾಯೆಯ ಸೀಳಿದ ಹನುಮ ಅವಳ ಶರೀರದಿ ಪೊಕ್ಕು 6 ತನ್ನ ನಿಸ್ಸೀಮ ಬಲವನು ತೋರಿಸಿ ಈ ರೀತಿ ಹನುಮ ಧುಮುಕಿದ ಲಂಬ ಪರ್ವತದಿ ಆಹ ತೋರ್ಪುದು ಲಂಕಾ ಪ್ರಕಾರದೊಲï ಈ ಗಿರಿ ತನ್ನ ರೂಪವ ಸಣ್ಣ ಹನುಮ ಮಾಡಿದನಾಗ 7 ಆಗಿ ಬಿಡಾಲದೊಲ್ ಸಣ್ಣ ಅಸಿತ ಕಾಲದಿ ಪೋಗೆ ಪುರಿಗೆ ಅಲ್ಲಿದ್ದ ಲಂಕಿಣಿ ತಡೆಯೆ ಆಹ ಅವಳ ಹನುಮ ಮುಷ್ಟಿಯಿಂದ ಕುಟ್ಟಿ ಜಯಿಸಿ ಅನುಮತಿಯಿಂದಲ್ಲೆ ಲಂಕೆಯೊಳ್ ಪೋದ 8 ಶ್ರೀಘ್ರ ಅಶೋಕ ವನದಲಿ ಶಿಂಶುಪಾವೃಕ್ಷ ಮೂಲದಲಿ ಸೀತಾ ಅಕೃತಿಯನು ಕಂಡ ಆಹ ಸೀತೆಗೆ ಏನೇನು ಭೂಷಣ ಉಂಟೋ ಸೀತಾ ಆಕೃತಿಗೂ ಸಹ ಅದರವೊಲಿತ್ತು 9 ಅವನಿಯೋಳು ನಿನ್ನ ವಿಡಂಬ ಅರಿತು ಅನುಸರಿಸಿ ಹನುಮ ಅದರಂತೆ ಪರಿಪಂಥಾವಳಿಗೆ ಆಹ ಅವಶ್ಯ ಮಾತುಗಳಾಡಿ ಅಂಗುಲೀಯಕವೀಯೆ ಚೂಡಾಮಣಿ ನಿನಗೆಂದು ಕೊಟ್ಟಳು 10 ಅರಿಯರು ರಾಕ್ಷಸರಿದನು ಅಮರರು ಕಲಿಮುಖರೆಲ್ಲ ಅವಲೋಕಿಸಿದರು ಈ ಕಾರ್ಯ ಆಹ ಅಮರರು ಲೋಕವಿಡಂಬವಿದೆಂದರಿಯೆ ಅಧಮ ಕಲ್ಯಾದಿಗಳ್ ಮೋಹಿತರಾದರು 11 ಕೃತಕೃತ್ಯವಾಗಿ ತಾ ಹನುಮ ಕೋವಿದೋತ್ತಮ ಬಲವಂತ ಕಾಣಿಸಿಕೊಳ್ಳುವ ಮನದಿ ಕಿಂಚಿತ್ತೂ ಭಯವೇನೂ ಇಲ್ಲದೆ ವನವನು ಕಡಿದು ಧ್ವಂಸವ ಗೈದ ಆ ಶಿಂಶುಪವ ಬಿಟ್ಟು 12 ಕುಜನ ರಾಕ್ಷಸರನು ಕೊಲ್ಲೆ ಕೂಗಿ ಆರ್ಭಟಮಾಡೆ ಹನುಮ ಕೇಳಿ ಚೇಷ್ಟೆಗಳ ರಾವಣನು ಆಹ ಕಪ್ಪು ಕಂಠನ ವರ ಆಯುಧಯುತರು ಕೋಟಿ ಎಂಬತ್ತರ ಮೇಲ್ ಭೃತ್ಯರ ಕಳುಹಿದ 13 ಆರ್ಭಟದಿಂದ ಘೋಷಿಸುತ ಅವರು ಆವರಿಸಿ ಹನುಮನ ಆಯುಧಗಳ ಪ್ರಯೋಗಿಸಲು ಆಹ ಪವನಜ ಮುಷ್ಟಿಪ್ರಹರದಿ ಆ ವೀರರೆಲ್ಲರ ಹಿಟ್ಟು ಮಾಡಿದ ಬೇಗ 14 ಕಡುಕೋಪದಿಂದ ರಾವಣನು ಕಳುಹಿದನು ಏಳು ಮಂತ್ರಿ ಕುವರರ ವರ ಬಲಯುತರ ಆಹ ಖಳರು ಈ ಏಳ್ವರ ಮೆಟ್ಟಿ ಷಿಷ್ಟವ ಮಾಡೆ ಕುಮತಿ ರಾಕ್ಷಸ ಸೈನ್ಯ ತೃತೀಯ ಭಾಗವು ಹೋಯ್ತು 15 ಅನುಪಮ ಬಲಕಾರ್ಯಕೇಳಿ ಅಧಮ ರಾವಣ ತನ್ನ ಸುತನ ಅಕ್ಷನ ಕಳುಹಲು ಹನುಮ ಆಹ ಅಕ್ಷನ ಚಕ್ರಾಕಾರದಿ ಎತ್ತಿ ಸುತ್ತಾಡಿ ಅವನ ಅಪ್ಪಳಿಸಿ ನೆಲದಿ ಚೂರ್ಣ ಮಾಡಿದ 16 ಅತಿ ದುಃಖದಿಂದ ರಾವಣನು ಅಕ್ಷನಗ್ರಜ ಇಂದ್ರಜಿತನ ಒಡಂಪಟ್ಟ ಸ್ವೇಚ್ಛದಿ ಹನುಮ ಬ್ರಹ್ಮಾಸ್ತ್ರಕೆ 17 ರಾವಣನಲಿ ಕೊಂಡು ಪೋಗೆ ರಾವಣ ಪ್ರಶ್ನೆಯ ಮಾಡೆ ರಾಮಗೆ ನಮಿಸಿ ಹನುಮನು ಆಹ ರಘುವರ ರಾಮ ದುರಂತ ವಿಕ್ರಮ ಹರಿ ರಾಕ್ಷಸಾಂತಕ ದೂತ ಮಾರುತಿ ತಾನೆಂದ 18 ರಘುವರ ಪ್ರಿಯೆಯನು ಬೇಗ ರಾಮಗರ್ಪಿಸಲೊಲ್ಲೆ ಎನ್ನೆ ಹನುಮ ಪ್ರಕೋಪದಿ ಅವನ ಆಹ ರಾಜ್ಯ ಮಿತ್ರ ಬಂಧು ಸರ್ವನಾಶ ರಾಘವ ಮಾಡುವನೆಂದು ಪೇಳಿದನು 19 ಅಜ ಶಿವ ಮೊದಲಾದ ಸರ್ವ ಅಮರೇಶ್ವರರು ತಾವು ತಡೆಯ ಆಶಕ್ತರು ರಾಮಬಾಣವನು ಆಹ ಅಂಥ ಬಾಣವ ಅಲ್ಪಶಕ್ತ ರಾವಣ ತಾಳೆ ಅಸಮರ್ಥನೆಂದ ಪ್ರಭಂಜನ ಸುತನು 20 ಪ್ರಭಂಜನ 1 ಸುತ ಮಾತು ಕೇಳಿ ಪ್ರಕುಪಿತನಾಗಿ ರಾವಣನು ಪ್ರಯತ್ನಿಸೆ ಹನುಮನ ಕೊಲ್ಲೆ ಆಹ ಪ್ರಕೃಷ್ಟ ಮನದಿ ವಿಭೀಷಣ ಬುದ್ಧಿ ಪೇಳಲು ಪುಚ್ಛಕ್ಕೆ ಬೆಂಕಿ ಹಚ್ಚೆಂದ ರಾಕ್ಷಸರಾಜ21 ಆತಿಭಾರ ವಸ್ತ್ರ ಕಟ್ಟುಗಳಿಂ ಅಧಮರು ಸುತ್ತಿ ಬಾಲವನು ಅಗ್ನಿಯ ತೀವ್ರದಿ ಹಚ್ಚೆ ಆಹ ಅಗ್ನಿಯ ಪರಸಖ ವಾಯು ಆದುದರಿಂದ ಅಂಜನಾಸುತ ನಿರಾಮಯನ ಸುಡಲೇ ಇಲ್ಲ 22 ಅಧಮ ರಾಕ್ಷಸರ ಚೇಷ್ಟೆಗಳ ಅಸಮ ಬಲಾಢ್ಯನು ಹನುಮ ಅನುಭವಿಸಿ ಕುತೂಹಲದಿ ಆಹ ಅಲ್ಲಲ್ಲಿ ಹಾರಿ ಆ ಲಂಕಾಪುರಿಯ ಸುಟ್ಟು ಅತಿ ಮುದದಲಿ ಗರ್ಜಿಸಿದ ರಾಮದೂತ 23 ಅಧಮ ಸಪುತ್ರ ರಾವಣನ ಅಲ್ಪ ತೃಣೋಪಮ ಮಾಡಿ ಅವರೆದುರಿಗೆ ಪುರಿ ಸುಟ್ಟು ಆಹ ಅಬ್ಧಿಯ ದಾಟೆ ವಾನರರು ಪ್ರಪೂಜಿಸೆ ಉತ್ತಮ ಮಧುವುಂಡು ಪ್ರಭುವೇ ನಿನ್ನಲಿ ಬಂದ 24 ಸಮಸ್ತ ವಾನರ ವರರೊಡನೆ ಸಮರ್ಥ ಹನುಮ ಧೀರ ಬಂದು ಶುಭಸೂಚಕ ಚೂಡಾಮಣಿಯ ಆಹ ಶ್ರೀಶ ನಿನ್ನಯ ಪಾದದ್ವಂದ್ವದಿ ಇಟ್ಟು ತಾ ಸನ್ನಮಿಸಿದ ಭಕ್ತಿಭರಿತ ಸವಾರ್ಂಗದಿ 25 ಭಕ್ತಿ ಸವೈರಾಗ್ಯ ಜ್ಞಾನ ಪ್ರಜ್ಞಾ ಮೇಧಾ ಧೃತಿ ಸ್ಥಿತಿಯು ಪ್ರಾಣ ಯೋಗ ಬಲ ಇಂಥಾ ಆಹ ತುಂಬಿ ಇರುವುವು ಈ ಪ್ರಭಂಜನ ವಾಯು ಹನುಮನಲಿ ಸರ್ವದಾ 26 ಸರ್ವೇಶ ರಾಮ ಅಗಾಧ ಸದ್ಗುಣಾರ್ಣವ ನೀ ಹನುಮನ ಸಂಪೂರ್ಣ ಭಕ್ತಿಗೆ ಮೆಚ್ಚಿ ಆಹ ಸಮ ಯಾವುದೂ ಇಲ್ಲದೆ ನಿನ್ನನ್ನೇ ನೀ ಕೊಟ್ಟೆ ಸುಪ್ರಮೋದದಿ ಹನುಮನ ಆಲಿಂಗನ ಮಾಡಿ27 ನೀ ನಿಂತು ನುಡಿಸಿದೀ ನುಡಿಯು ನಿನ್ನಡಿಗಳಿಗೆ ಅರ್ಪಣೆಯು ನಮ್ಯ ಮಾರುತಿ ಮನೋಗತನೆ ಆಹ ನೀರಜಾಸನ ತಾತ ಪ್ರಸನ್ನ ಶ್ರೀನಿವಾಸ ನಿನಗೆ ಪ್ರೀತಿಯಾಗಲೊ ಸುಹೃದ ಸಂತೃಪ್ತ 28
--------------
ಪ್ರಸನ್ನ ಶ್ರೀನಿವಾಸದಾಸರು
ಪ್ರಾಣನಾಥ ನಮಾಮಿ ಸಾಷ್ಟಾಂಗ ಪಾತುಮಾಂ ಪವಮಾನಿ ಕೃಪಾಂಗ ಪ. ದಾತಾರ ರಘುನಾಥದೂತ ವಿಖ್ಯಾತ ಸೀತಾಮಾತಾಪದಾಬ್ಜ ಪ್ರಣೀತಾ- ನೇಕವಾನರಯೂಥ ಸುಶೀಲ ಭೂತಳ ಭೂರಿಜೀವನಪಾಲ 1 ಆಂಜನೇಯ ಸುರಂಜನ ಮೂರ್ತಿ ಕಂಜನಾಭದಾಶ್ರಯವರ್ತಿ ಭಂಜನಾಸುರನಿಕರ ನಿರ್ಲೇಪ ರಂಜನಾತ್ಮ ನಿರಂಜನರೂಪ 2 ಕರಕೃತಾಂಜಲಿಮನೋಹರ ಶುಭಕಾಯ ವರ ಲಕ್ಷ್ಮೀನಾರಾಯಣ ಪ್ರೀಯ ಪರಮ ಪಾವನ ನೇತ್ರಾವತಿ ನದೀತೀರ ವರ ಮಣಿಪುರಮುಖ್ಯ ಪ್ರಾಣ ಸಾಕಾರ 3
--------------
ತುಪಾಕಿ ವೆಂಕಟರಮಣಾಚಾರ್ಯ
ಪ್ರಾಣನಾಥ ಪ್ರಾಣನಾಥ ತ್ರಿಭುವನಚೇಷ್ಟ ಪ್ರದಾತಾ ಪ ಅಖಿಲನೇತಾ ಸುಗುಣಜಾತಾ ಶೂರ ಸೀತಾರಾಘವದೂತ ಅ.ಪ ನೂರು ಯೋಜನ ಶರಧಿಯ ಹಾರಿ ಲಂಕಾಪುರವ ಸೇರಿ ಹರುಷದಿ ಜನಕಕುಮಾರಿಗುಂಗುರವಿತ್ತ 1 ದುಷ್ಟ ದಶಕಂಧರನನು ಮುಷ್ಟಿತಾಡನದಿಂದ ಚೇಷ್ಟರಹಿತನ ಮಾಡಿ ದಿಟ್ಟತನದಲಿ ಮೆರೆದ 2 ಗಂಧಮಾದನ ಗಿರಿಯನು ಒಂದು ಕರದಲಿ ಸುಖದಿ ಪಾದ ದ್ವಂದ್ವಕೆರಗಿದ ಮುಖ್ಯ 3 ಕ್ರೂರನಿಶೇಚರಪತಿ ಪರಿವಾರವನು ಸದೆ ಬಡಿದು ಮೂರು ಜಗಂಗಳ ಮೀರಿದ ಕೀರುತಿಯ ಪೊಂದಿದ 4 ಇನ್ನು ಎರಡವತಾರಗಳನ್ನು ಧರಿಸುತ ಜಗದಿ ಪ್ರ ಸನ್ನ ಮಾಧವವ್ಯಾಸರನ್ನು ಸೇವೆಯ ಮಾಡಿದ 5
--------------
ವಿದ್ಯಾಪ್ರಸನ್ನತೀರ್ಥರು