ಒಟ್ಟು 8035 ಕಡೆಗಳಲ್ಲಿ , 127 ದಾಸರು , 4382 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಜಯದೇವ ಜಯದೇವ ಜಯ ಸದ್ಗುರುವೆಂದುಜಯವೆಂದು ಬೆಳಗಿದಳು ಬಗಳಾಂಬನಿಂದು ಪ ಬಿಗಿದ ಹೆದೆ ಬೆನ್ನಿಂಗೆ ಧನು ಶರಗಳ ಸೆಕ್ಕಿತಗತಗನೆ ಹೊಳೆಯುತಿಹ ಖಡ್ಗವ ಹೊರಗಿಕ್ಕಿಝಗಝಗನೆ ಆಭರಣ ಹೊಳೆಯಲು ಕಳೆಯುಕ್ಕಿಮಿಗಿಲೆನಿಪ ಆರುತಿಯೊಳ್ ಮುಕ್ತಾಕ್ಷತೆಯನಿಕ್ಕಿ 1 ಹತ್ತು ಕೈಯೊಳು ಹೊತ್ತು ನೆಗೆಹಿದಳು ಚದುರೆರತ್ನಖಚಿತದ ನತ್ತು ಹಣೆಬಟ್ಟು ಬೆದರೆಮತ್ತೆ ಕಿರುಬೆರಳ ಮುತ್ತು ಮುತ್ತುದುರೆಎತ್ತತ್ತಲೂ ಆರತಿಯ ಬಲು ಬೆಳಕು ಚದುರೆ 2 ಎತ್ತಿ ಹಾಡುತ ಒಲಿದು ಬಗಳೆ ಗುರುವಿಂಗೆತಥ್ಥೆಯ್ಯ ತಥ್ಥೆಯ್ಯ ತಥ್ಥೆಯ್ಯ ಕುಣಿದುಎತ್ತಲಾಯಿತೋ ದೇಹ ಪರವಶವದಾಗೆಮತ್ತೆ ಕಂಡಳು ತನ್ನ ಚಿದಾನಂದಾತ್ಮಗೆ 3
--------------
ಚಿದಾನಂದ ಅವಧೂತರು
ಜಯದೇವ ಜಯದೇವ ಜಯಗುರು ಮಹೇಶಾ ಭಯವನಿವಾರಿಸಿ ಶ್ರಯಕುಡು ನೋಡದೆ ಗುಣದೋಷಾ ಪ ಶಿವಶಿವಶಿವಶಿವಯೆಂದು ನೆನಿಯಲು ದೃಡವಾಗಿ ಅವನಿಲಿಹಿಂಗುದು ಪೂರ್ವದ ದುಷ್ಕøತಗತವಾಗಿ ಭವಭವ ಭವಭವಯನಲಾಮ್ಯಾಲನಿಶ್ಚಲನಾಗಿ ಜವದಲಿ ಹರಿವುದುದುರ್ಧರ ಭವಭಯಭಯಾಗಿ 1 ಅನನ್ಯ ಭಾವದಿಹೊಕ್ಕು ಶರಣವ ನಿಮ್ಮಡಿಗೆ ತನುಮನಧನವನು ಅರ್ಪಿಸಿ ವಂಚನೆ ನಿಲದ್ಹಾಗೆ ಅನುದಿನ ಮಾಡಿಲು ಧ್ಯಾನಾಸ್ವರೂಪಹೃದಯದೊಳಗೆ ಘನ ತರದಿಹನಿಜಸ್ಥಾನವು ಸುಲಬಾಗುವದೀಗೆ2 ನಿನ್ನಾ ಮಹಿಮೆಯುತಿಳಿಯದು ನಿಗಮಕ ಶ್ರೀಗುರವೇ ಇನ್ನು ಅಂತಿಂತೆಂಬುದು ನರಗುರಿಗಳಿಗಳವೇ ಎನ್ನಾನಯನದಿನೋಡಿ ಸುಮ್ಮನು ಸುರದಿರುವೇ ಭಿನ್ನವಿಲ್ಲದೆ ಸಲಹು ಮಹಿಪತಿ ಸುತಪ್ರಭುವೇ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಜಯದೇವ ಜಯದೇವ ಜಯಗೋಪಾಲಕೃಷ್ಣಾ | ಜಯ ಜಯಯೋಗೀ ಮಾನಸ ಮೋಹನ ಘನಕರುಣಾ ಪ ದೇವಕಿವಸುದೇವರ ಭಾವನೆ ಪೂರಿಸಲಿ | ಶ್ರಾವಣ ಕೃಷ್ಣಪಕ್ಷದ ಅಷ್ಟಮಿರೋಹಿಣಿಲಿ || ತೀವಿದ ಚಂದ್ರೋದಯ ರಾತ್ರಿಯ ಕಾಲದಲಿ | ಭುವನದಿ ಅವತಾರವ ಮಾಡಿದೆನೀ ವೇಗದಲಿ 1 ಸೊಕ್ಕಿದ ಕಂಸನ ಕೊಂದು ದುಷ್ಕ್ರತನಾಶನವಾ | ಮುಖ್ಯಮಾಡು ಕಾರಣ ಧರ್ಮ ಸ್ಥಾಪನವಾ || ಸಖ್ಯದಿ ಕಟ್ಟಲು ಉಗ್ರಶೇನಗೆ ಪಟ್ಟವಾ | ಅಕ್ಕರದಿಂದಲಿ ಬೆಳೆದೆ ಗೋಕುಲದಲಿ ದೇವಾ 2 ಕುರುಕುಲಾನ್ವಯ ಜೀವನರೆಲ್ಲರ ಸೆಬಡಿದೆ | ಚರಣವನಂಬಿದ ಪಾಂಡವರನು ಸ್ಥಾಪನಗೈದೆ | ಪರಪರಿಯಿಂದಲಿ ಭಜಿಸುವ ಭಕ್ತಾವಳಿ ಪೊರೆದೇ | ಗುರುವರಮಹೀಪತಿ ಸುತ ಪ್ರಭುಸಲಹೆನ್ನನು ಬಿಡದೇ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಜಯದೇವ ಜಯದೇವ ಜಯಜಯ ಹನುಮಂತಾ | ದಯದೊಲವಿಂದಲಿ ಸಲಹು ಜಯ ಕೀರುತಿವಂತ ಪ ಅಂಜನೆ ಉದರದಿ ಬಂದು ಮೌಂಜೀಬಂಧನದಿ | ಕಂಜ ಸಖನ ಮಂಡಲ ತುಡಕಲು ಹವಣಿಸಿದಿ | ಭಂಜನೆ ಇಲ್ಲದೆ ರಾಮರ ಸೇವೆಗೆ ತತ್ಪರದಿ | ರಂಜಿಸುವಂದದಿ ಮಾಡಿದೆ ಇಳೆಯೊಳು ತನುಮನದಿ 1 ರಘುಪತಿ ಮುದ್ರೆಯ ಕೊಂಡು ಸಾಗರ ಲಂಘಿಸಿದೆ| ಭುಕುತಿಲಿ ಜಾನಕಿದೇವಿಗೆ ಅರ್ಪಿಸಿ ಕೈಮುಗಿದೆ | ಯಕುತಿಲಿ ವನವನೆ ಕಿತ್ತಿ ಲಂಕೆಯ ಸದೆಬಡಿದೆ| ಮಗುಳೆ ಪ್ರತಾಪದಿ ಬಂದು ಅಜಪದವಿಯ ಪಡೆದೆ 2 ಮೂರವತಾರ ನೀ ಆಗಿ ಪರಿಪರಿ ಚರಿತೆಯನು | ದೋರಿದೆ ಜಗದೊಳು ಅನುಪಮ ಹರಿಪ್ರಿಯನಾದವನು | ಚಾರು ಭಕ್ತೀಭಾವ ಪ್ರೇಮವ ಕಂಡವನು | ಅನುದಿನ ಮಹೀಪತಿನಂದನು ನಿಮ್ಮವನು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಜಯದೇವ ಜಯದೇವ ಜಯದೀನದಯಾಳಾ ಜಯಜಯ ಶ್ರೀಗುರು ಮಹಿಪತಿ ಭವತಾರಕ ಲೀಲಾ ಪ ಮರವಿನ ಕತ್ತಲಿಯೊಳಗೆ ಮುಂದುಗಾಣದಲಿರಲಿ ಅರವಿನದೀಪವ ಹೆಚ್ಚಿ ದೋರುತಲೀ ಸ್ಥಿರವನು ಗೊಳ್ಳದ ಚಿತ್ತವ ಭಜನಿಗೆಲಿಸುತಲಿ ಹರಿಸಿದ ವಿದ್ಯದಗೃಂಥಿಯ ಸಂಶಯ ಬಿಡಿಸುತಲಿ 1 ಪರಿಪರಿಯಿಂದಲಿಗರದು ಬೋಧನಾಮೃತನುಡಿಯಾ ಅರಹಿಸಿಯೋಗದ ಮಾರ್ಗವ ಸಾಂಖ್ಯದನಿಲ್ಲ ಕಡಿಯಾ ಕರಣೀಂದ್ರಿಯಗಳ ವಡದಾಸ್ವಾನಂದದಯಡಿಯಾ ಕರುಣಿಸಿ ವಿಶ್ವಂಭರಿತದ ತೋರಿದೆ ಇತ್ಥಡಿಯಾ 2 ನಿನಗುತ್ತೀರ್ಣವಕಾಣದೇ ತನುವಾರತಿ ಮಾಡೀ ಮನವೇದೀಪವು ಸದ್ಭಾವನೆ ಆಜ್ಯನೀಡಿ ಅನುದಿನ ಬೆಳಗುವ ನಂದನುಮಹಿಮೆಯ ಕೊಂಡಾಡಿ ಚಿನುಮಯಸುಖದೊಳು ಬೆರೆದಾಹಂಭ್ರಮ ಈಡಾಡಿ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಜಯದೇವ ಜಯದೇವ ಜಯಮಹಾಂಗಿರೀಶಾ ಸ್ವಯಂಜ್ಯೋತಿ ಬೆಳಗುವೆ ಸಚ್ಚಿತ್ಸುಖತೋಷಾ ಪ ಸರ್ವರಲಿ ನೋಡಿದರೂ ನೀನಲ್ಲದೆ ಇಲ್ಲಾ ಉರ್ವಿಯಾಕಾಶ ದಶದಿಕ್ಕುಗಳೆಲ್ಲಾ ಸರ್ವೇಶ್ವರವೆಂಬದು ಸರ್ವಾಂಗದೆÉಲ್ಲಾ ಪಾರ್ವತೀಶ್ವರನೆಂಬುದು ಬಲ್ಲವನೆ ಬಲ್ಲಾ ಜಯದೇವ 1 ಸಕಲ ಸುಖದುಃಖವೆಂಬುದು ನಿನ್ನ ಲೀಲೆ ಅಖಿಲ ಅಂಡಗಳೆಂಬ ಭೋಜನಶಾಲೆ ಭಕುತಿ ಭಾಗ್ಯೆಂಬ ಜ್ಞಾನದ ದೀಪಜ್ವಾಲೆ ಪ್ರಕಟಿಸುವಂತೆ ಎತ್ತುವೆ ನಿನ್ನ ಮೇಲೆ ಜಯದೇವ 2 ಪರಿಶುದ್ಧಾತ್ಮಕದೇವಾ ನಿರುತ ನಿರ್ದೋಶಾ ಸಕಲಜನರ ಹೃದಯಕಮಲ ನಿವಾಸಾ ದುರಿತದಾರಿದ್ರ್ಯ ಭವದುಃಖವಿನಾಶಾ ಗುರು ವಿಮಲಾನಂದ ಶ್ರೀ ಮಹಾಂಗಿರೀಶಾ 3
--------------
ಭಟಕಳ ಅಪ್ಪಯ್ಯ
ಜಯದೇವ ಜಯದೇವ ಜಯರಾಮಲಿಂಗಾ ಜಯಜಯವೆಂದು ಬೆಳಗುವೆ ಆರತಿ ಸುರತುಂಗಾ ಪ ಸ್ವಾನಂದದ ನಿಜಕಾಶೀಪುರದಿಂದ ಅತ್ಯರಳಿ ನಾನಾಸ್ಥಳಗಳ ನೋಡುತ ಬಂದು ನೀತೀರ್ಥದಲಿ ದೀನೋದ್ದಾರ ಕಾಪಾಪನಾಶನಿ ಹರಿಸುತಲಿ ಖೂನವ ತೋರಿದೆ ಓಂಕಾರೇಶ್ವರನೆನಿಸುತಲಿ 1 ಕಾಲ ಕೆರಾಘವಸುಖದರುಕ್ಷಣಲೆಂದು ತಳಿಯೊಳುಖ್ಯಾತಿಗೆ ಬಂದು ರಾಮೇಶ್ವರನೆಂದು ನಲಿದರುಗಿರಿಜಾನಂದಿಸರ್ವದೇವರು ಬಂದು ಸಲುಹುವೆ ಭಕ್ಷರಿಗಿಷ್ಟಾರ್ಥವ ನೀಡುತಲಿಂದು 2 ನಿನ್ನಯ ಮಹಿಮೆಯ ಹೊಗಳಲು ಮನುಜರಿಗಳವಲ್ಲಾ ಮುನ್ನಾಭರಣವ ಆಗಿಹಶಶಿನೇತಾಬಲ್ಲಾ ಎನ್ನೊಳು ಬೀರುತರಕ್ಷಿಸುಘನ ತಾರಕನೊಲ್ಲಾ ಸನ್ನುತ ಮಹಿಪತಿ ನರದನ ಪ್ರಭು ಪಾರ್ವತಿನಲ್ಲಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಜಯದೇವಿ ಜಯದೇವಿ ಜಯ ಆದಿಶಕ್ತಿ| ಜಯಜಯಚಂದ್ರಲೆಮಾತೆ ರವಿಶತ ನಿಜದೀಪ್ತಿ ಪ ಸುರಮುನಿ ಸೇವಿತವಾದಾ ಚಾರುವಿಲಾಸದಲೀ | ಇರುತಿರೆ ನಾರಾಯಣಮುನಿ ಭಕುತಿಗೆ ಪ್ರೇಮದಲೀ | ಕರುಣದಿಭೀಮರಥಿಯಾ ಬಂದು ನೀ ತೀರದಲಿ | ದಾರಿ ತಪ್ಪಿದ ದುರುಳನ ಮರ್ದಿಸಿ ಭೃಮರದಲಿ 1 ಅಂದಿಗಿಂದಿಗೆ ನಿಂತು ಪ್ರಸನ್ನತಿ ಗ್ರಾಮದಲಿ | ದ್ವಂದ್ವಚರಣವ ದೋರಿ ಮುಕುತಿಗೆ ಖೂನದಲಿ | ಬಂದವ ದರ್ಶನ ಸ್ಪರ್ಶನ ಪೂಜನ ಮಾಡುತಲಿ | ಚಂದದಿ ಇಹಪರ ಸುಖವಾ ಪಡೆದರು ಸುಲಭದಲಿ2 ವಿವೇಕ ಹರಿವಾಣದಿ ಭಾವದಾರತಿ ನಿಲಿಸಿ | ತೀವಿದ ಸಮ್ಮಜ್ಞಾನದ ಜ್ಯೋತಿಯ ಪ್ರಜ್ವಲಿಸಿ | ಆವಗುಬೆಳಗುವ ಮಹೀಪತಿ ನಂದನತಾನಮಿಸಿ | ಅನುದಿನ ಅಪರಾಧವ ಕ್ಷಮಿಸಿ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಜಯದೇವಿ ಜಯದೇವಿ ಜಯ ಪಾವನಗಂಗೇ | ಜಯಜಯ ತ್ರಿಪಥಗಾಮಿನಿ ಜಯ ತುಂಗತರಂಗೇ ಪ ಆದಿಲಿ ಶ್ರೀಹರಿ ಕೋಮಲ ಪದನಖದಿಂದೊಗದು | ಸಾಧಿನಿ ವಾರಿಜಭವನಾ ಕರಪಾತ್ರಕೆ ಬಂದು | ಸಾದರದಿಂದಾಶಿವನ ಕೆಂಜೆಡೆಯೊಳು ನಿಂದು | ಮೇದಿನಿಗಿಳಿದು ನೀಬಂದೆ ಭಗೀರಥನೃಪಗೊಲಿದು 1 ಕಾಶಿಪ್ರಯಾಗದಿ ನಿಂದು ಉದ್ದರಿಸುತ ಕೆಲರಾ | ಆಶೆಯ ಪೂರಿಸಲಾಗಿ ದಕ್ಷಿಣ ದಿಶೆದವರಾ | ರಾಶಿಯ ಕನ್ಯಾ ಮೆಟ್ಟಲು ಸುರಗುರು ಗಂಭೀರಾ | ಭಾಶಿಶಿ ತೋರಿದೆ ಬಂದು ಕೃಷ್ಣವೇಣಿಲಿ ಸದರಾ 2 ಹರಿಹರ ದೇವರು ದ್ರವರೂಪದಿ ಹರಿವುತಲೀ | ನೆರೆನೀಕೂಡಿದ ಸಂಭ್ರಮ ಏನೆಂದುಸುರಲಿ | ದರುಶನ ಮಾತ್ರದಲಾದೆನು ಮುಕ್ತನು ಭವದಲಿ | ಗುರು ಮಹೀಪತಿಸುತ ಎನ್ನನು ರಕ್ಷಿಸು ಕರುಣದಲಿ |3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಜಯದೇವಿ ಜಯದೇವಿ ಜಯ ಬಗಳಾಮುಖಿಯೇಜಯವೆಂದು ಬೆಳಗುವೆನು ಜಯಭಕ್ತ ಸಖಿಯೇ ಪ ನಿತ್ಯ ಪೀತೋಪಚರಣೆಪೀತಕುಂಡಲ ಹಾರಪೀತ ವರ್ಗಾವರಣೆಪೀತಮೂರ್ತಿಯ ನೆನೆವೆ ಪೀತ ಪ್ರಿಯೆ ಸ್ಮರಣೆ 1 ಬತ್ತೀಸಾಯುಧ ಪಿಡಿದೆ ಭಯಂಕರಿ ಉಗ್ರೇಶತ್ರುನಾಶಕಿ ನೀನು ಭಕುತ ಸಾಹಸ್ರೇಮತ್ತೆ ಹುಡುಕುತ್ತಿರುವೆ ದುಷ್ಟರನು ಶೀಘ್ರೆನಿತ್ಯ ನಾ ಭಜಿಸುತಿಹೆ ಮನವ ಏಕಾಗ್ರೇ 2 ಬ್ರಹ್ಮ ಚಿದಾನಂದ ಬಗಳಾಮುಖಿ ರಾಣಿಹಮ್ಮಳಿದ ಮಹಿಮರಾ ಮೆಚ್ಚಿನ ಕಟ್ಟಾಣಿಬ್ರಹ್ಮರಂಧ್ರದೊಳು ವಾಸಿಸುತಿಹ ದಿನಮಣಿಬಿಮ್ಮನೆ ನಮಗೊಲಿಯೆ ಶೀಘ್ರದಿಂ ಕೃಪಾಣಿ 3
--------------
ಚಿದಾನಂದ ಅವಧೂತರು
ಜಯದೇವಿ ಜಯದೇವಿ ಜಯಭಗವದ್ಗೀತೆ | ಶ್ರಯ ಸುಖದಾಯಕಮಾತೇ ಶೃತಿ ಸ್ಮøತಿ ವಿಖ್ಯಾತೇ ಪ ಮೋಹ ಕಡಲೋಳಗರ್ಜುನ ಮುಳುಗುತ ತೇಲುತಲಿ | ಸೋಹ್ಯವ ಕಾಣದೆತನ್ನೊಳು ತಾನೇ ಮರೆದಿರಲೀ| ಬೋಧ ಪ್ರತಾಪದಲೀ| ಮಹಾ ಸುಜ್ಞಾನದ ತೆಪ್ಪದಿ ದಾಟಿಸಿದವನಿಯಲಿ 1 ಅಂದಿಗಿಂದಿಗೆ ಋಷಿ ಮುನಿ ಸಜ್ಜನ ಮೊದಲಾಗಿ | ಕುಂದದಿ ಪಂಡಿತರೆಲ್ಲರು ಮತಿ ಯುಕ್ತಿಯಲೊದಗಿ | ಸುಂದರ ಟೀಕೆಯ ಮಾಡುತ ಪಾಡುತ ಅನುವಾಗಿ | ಚಂದದಿ ನಿಂತರು ಅನುಭವದಲಿ ವಿಸ್ಮಿತರಾಗಿ 2 ಆವನು ಭಾವದಿ ಪೂಜಿಸಿ ಓದಿಸಿ ಕೇಳುವನು| ಸಾವಿರ ಸಾಧನವೇತಕೆ ಜೀವನ್ಮುಕ್ತವನು | ದೇವಮನುಜರಿಗೆ ತಿಳಿಯದು ಪದಪದ ಮಹಿಮೆಯನು | ಆವಗು ಸ್ಮರಿಸುವ ಮಹೀಪತಿ ನಂದನು ನಿಮ್ಮವನು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಜಯದೇವಿ ತನಯಗೆ ಮಂಗಳಂ ಶುಭ ಮಂಗಳಂ ಯುಗ ಯುಗದಿ ಪುಟ್ಟಿ | ಜಿಗಿದು ಗಗವ ಮೆಟ್ಟಿ ಹಗಲೊಡೆಯನ ಫಲ ಬಗೆಯ ಬಕ್ಷಿಸಿ ಮಿಗೆ ಭಕುತಿಲಿಂದ ರಘುಪನೊಲಿಸಿನಾ ಲ್ಮೊಗನ ಪದವಿ ಪಡೆದ ಸುಗುಣ ನಿಧಿಗೆ 1 ಪುನಃ ದ್ವಾಪರದಲ್ಲಿ ಇನಜನ ತನುಜಗೆ ಅನುಜನೆಂದೆನಿಸಿ ಹರಿಯಾಜ್ಞೆಯಿಂದಲಿ ಮಣಿಮಂತ ಮೊದಲಾದ ದನುಜರ ಗಣವೆಲ್ಲ ರಣದೊಳು ಹಣಿದಂಧ ಘವವೀರನೆ 2 ಬಂದು ಭೂಮಿಯಲ್ಲಿ ಮಧ್ಯಮಂದಿರ ನಂದನನಾಗಿ ಮಂದ ಮಾಯ್ಗಳ ಮತ ಖಂಡಿಸುತಲಿ ಶಿಂಧುತೀರದಿ ಮೆರೆವ ಇಂದುಕ್ಷೇತ್ರದಿ ಶಾಮ ಸುಂದರ ಸ್ಥಾಪಿಸಿದಾನಂದಮುನಿಗೆ 3
--------------
ಶಾಮಸುಂದರ ವಿಠಲ
ಜಯಮಂಗಳೆನ್ನಿರೆ ದೇವಗೆ | ಸಂಗೀತದಿಂದಲಿ ಶ್ರೀಶಯನಿಗೆ ಪ ನಾಗವೇಣಿಯರು ನಾರದವರದಗೆ 1 ರಾವಣಾರಿ ರಘುವೀರನಿಗೆ 2 ಸೀಮಂತಿನಿಯರು ಕೋಮಲಾಂಗಗೆ 3
--------------
ಶಾಮಸುಂದರ ವಿಠಲ
ಜಯರಾಮಾ ಜಯರಾಮ ರಘುವಂಶಾಬ್ಧಿ ಸೋಮ ಪ. ವೈದೇಹಿ ಮನೋಹರ ವೇದವೇದ್ಯ ಶ್ರೀಕರ ಮಾಧವ ಮುರಹರ ಜಯಶೌರೇ ದಿತಿಜಾರೇ ಪರಿಪಾಹಿ ನೃಹರೇ 1 ಸದನ ವಾರಾಶಿಬಂಧನ ಅಕ್ಷಯಸುವಚನ ಸ್ಮರತಾತಾ ವರದಾತಾ ರಮಾಸಮೇತ 2 ಕ್ಲೇಶಪಾಶವಿಮೋಚನ ವಾಸವಾರ್ಚಿತಚರಣ ಶ್ರೀಸತ್ಯಭಾಮಾಧವ ಜಯದೇವಾದ್ಭುತಪ್ರಭಾವ 3
--------------
ನಂಜನಗೂಡು ತಿರುಮಲಾಂಬಾ
ಜಯರಾಯ ಭವಹರಣ ಪಾಲಿಸೆಮ್ಮ ಪ ಜಯದೇವಿಪ್ರತಿ | ರೂಪ ಗುಣಕ್ರಿಯ ರತಯತಿಯೆ ಅ.ಪ. ಅಮರೇಶ ಸ್ವರ್ಗಪದ ತೃಣಮಾಡಿ ಕ್ಷಿತಿಯಲಿ ಪಾದ ಸೇವೆಗಾಗಿ ಅಮಿತ ಭಾಗ್ಯವಿದೆಂದು ಪಶುವಾಗಿ ನೀನಿಂದು ಕಮಲ ಮಧು ಸೇವಿಸಿದೆ 1 ತೃತಿ ಈಶರೆನಿಸುವ ಅಗ್ನಿ ಗರುಡ ಮಹರುದ್ರ ಪ್ರತಿ ಕ್ಷಣದಿ ಅತಿ ಭಕುತಿ ಭಾರದಿಂದ ನತಿಸಿ ಸೇವಿಪ ಪರಮ ಗುರುಚರಣವಾಶ್ರೈಸಿ ದತಿ ಸುಕೃತನಿಧಿ ನಮ್ಮ ಅತಿದಯದಿ ಈಕ್ಷಿಪುದು 2 ಶ್ರೀ ಭೂಮಿ ದುರ್ಗೇಶನ ಮತ ಮಂಗಳ ಮೂರ್ತಿ ಶೋಭನಾಂತ ಗುಣಕ್ರಿಯ ನಿವಹಗಳನು ಅದ್ಭುತದಿ ಧರಿಸಿಹಾ ಮಧ್ವಕೃತ ಗ್ರಂಥಗಳ ಸದ್ಭಕ್ತಿಯಲಿ ಪೊತ್ತೆ ಸೌಭಾಗ್ಯನಿಧಿ ಗುರುವೆ 3 ಪವಮಾನರಾಯನಾ ಕೃಪೆಯೆಷ್ಟೊ ನಿನ್ನಲ್ಲಿ ಅವನಿಯೊಳು ಸಿದ್ಧಾಂತ ಗ್ರಂಥಗಳ ಟೀಕೆ ಕವಿಶ್ರೇಷ್ಠನಿರಲಾಗಿ ನಿನ್ನಿಂದ ರಚಿಸಿದ ತ್ರಿ ಭುವನ ಮಾನ್ಯನೆ ಧನ್ಯ ಧನ್ಯತೆಲಿ ಪೊರೆ ಎಮ್ಮ 4 ಪಾರ್ಥನಾದಂದು ಶ್ರೀ ಯದುಪತಿಯ ಸಖ್ಯವನು ಪೂರ್ತಿಪೊಂದಿದೆ ಸರ್ವ ಪುರುಷಾರ್ಥವೆಂದು ಸ್ವಾರ್ಥಮತಿಯ ಹರಿಯ ಒಲಿಸಿದಾ ಮಹಾನಿಪುಣ ಪಾದ ಪಾಂಶು ರಕ್ಷಿಸಲೆನ್ನ 5 ದೇವಕೀಸುತ ನಿನ್ನ ಸಖನೆಂದು ಪವಮಾನ ದೇವ ನಿನ್ನಲ್ಲಿ ಮಾಡಿದ ಪರಮ ಪ್ರೀತಿ ಪತಿ ದಾಸ್ಯ ಪೂರ್ಣಪ್ರದ ಆರೂಢ ಕೇವಲಾ ಕೃಪೆ ಮಾಡು ಹರಿದಾಸ ಮಣಿಗುರುವೆ 6 ಭಾರತೀಪತಿಗೊಡೆಯ ಜಯೇಶವಿಠಲನ ವೈರಾಗ್ಯ ಸಿದ್ಧಿಯಲಿ ಏಕಾಂತ ಪೊಂದಿ ಭವ ತರಣ ಸತ್ಪಾತ್ರ ವೃಷ್ಟಿ ಹರಿಗುರುಗಳೊಲಿವಂತೆ 7
--------------
ಜಯೇಶವಿಠಲ