ಒಟ್ಟು 2546 ಕಡೆಗಳಲ್ಲಿ , 116 ದಾಸರು , 2099 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮತಿತಪ್ಪಿ ನಡೆದೆಯಲ್ಲ ಶ್ರೀಲಕುಮೀ ಪತಿಯನು ನೆನೆಯಲಿಲ್ಲ ಹಿತವಾದ ಪಥವು ಸಂತತ ತೋರದೆ ನೀನು ಖತಿಗೊಂಡು ವೆಂಕಟಪತಿಯನು ನೆನೆಯದೆ ಪ ಕೃತ ತ್ರೇತ ದ್ವಾಪರ ಕಲಿಯುಗ ಚತುರ್ವಿಧ ಜೊತೆಯಾಗಿ ಪೋಗಲು ಸಾವಿರ ಬಾರಿಯು ಚತುರಾಸ್ಯ ಬ್ರಹ್ಮಗೆ ಹಗಲೊಂದು ಸಲುವುದು ಗತಿಯ ಕಾಣೆನು ಶ್ರುತಿಯ ಅಯುತ ಕಾಲದೊಳು 1 ಹಿಂದಣ ಭವದೊಳಗೆ ಬಂದ ಭವದೊಳಗೆ ಸಂ - ಬಂಧವಾಗಿಹ ಸತಿಯರೆಷ್ಟು ಮಂದಿಯೋ ಕಾಣೆ ಕಂದರನು ಪಡೆದುದಕೆ ಲೆಕ್ಕ ಸಂಖ್ಯೆಗಳಿಲ್ಲ ತಿಂದ ಅನ್ನವು ಮೇರುವಿಗಿಂತ ಇಮ್ಮಡಿಯು 2 ಕಾಯ ಬಿಡಿಸಿಕೊಂಬುದು ಜೀವ ಅಡಿಗಡಿಗೆ ಹುಟ್ಟುತ್ತ ಸಾವಾಗಯೆನ್ನುವನು ಕಾಲ ಮನದಿ ಬೇಸರಗೊಳಲು ಜಡತೆಕಿಕ್ಕದೆ ಮುಂದೆ ಕಡೆ ಹಾಯು ಮನವೆ 3 ಬಲೆಯ ಕಾಣದೆ ಪಕ್ಷಿ ಮೇವಿನಾಸೆಗೆ ಪೋಗಿ ತಲೆ ಸಿಕ್ಕಿ ಪ್ರಾಣವನು ಕಳಕೊಂಬ ತೆರನಂತೆ ಕುಲವೃಕ್ಷದೊಳಗಿರ್ದ ಫಲದ ಮಮತೆಗಳಿಂದ ಜಲಜನಾಭನ ಬಿಟ್ಟು ಹೊಲಬುದಪ್ಪಿತಲ 4 ಸ್ನಾನಕ್ಕೆ ಚಳಿ ಹುಟ್ಟಿ ಧ್ಯಾನಕ್ಕೆ ಮರವೆಯು ಮೌನಕ್ಕೆ ಕೋಪದ ಬೀಜವಂಕುರಿಸಿತು ದಾನಕ್ಕೆ ಲೋಭವು ಮಾನಕ್ಕೆ ಪಿಸುಣರು ಏನ ಮಾಡಿದರಿವರು ಬಿಡರಲ್ಲೊ ಮನವೆ 5 ಸಂಗಡದಿ ಬರುತಿಪ್ಪ ಶುಭಗಳನು ಕಡೆಗಿಟ್ಟು ಅಂಗಸುಖವ ತಾಳ್ದು ಗೊಂಗುಡಿಯ ಹೊದ್ದು ಕಂಗಳಿಗೆ ಚೆಲುವಾದ ಅಂಗನಾಮೋಹದಿ ಶ್ರೀ- ರಂಗನ ನಾಮದ ಅಂಗಿಯ ಸಡಲಿಸಿದೆ 6 ಹರಿಧ್ಯಾನ ಹರಿಪೂಜೆ ಹರಿನಾಮ ಕೀರ್ತನೆಯು ಹರಿಭಕ್ತಿ ನರ್ತನೆಯು ಹರಿಯ ಸೇವೆಗಳು ಎರವುದೋರದೆ ನೀನು ವರಾಹತಿಮ್ಮಪ್ಪನನು ಸ್ಥಿರವಾಗಿ ನಿಲುವಂತೆ ಕರಕೊಳ್ಳೊ ಮನವೆ 7
--------------
ವರಹತಿಮ್ಮಪ್ಪ
ಮಂತ್ರಪುಷ್ಪವ ಸಮರ್ಪಿಸುವೆನೊಲವಿನಲಿಯಂತ್ರವಾಹಕ ನಿನ್ನ ದಿವ್ಯಚರಣದಲಿ ಪಮಂತ್ರಂಗಳುದಿಸಿದವು ಮುಖಕಮಲದಲಿ ನಿನ್ನಮಂತ್ರಗಳ ಬ್ರಹ್ಮನಿಗೆ ಕೊಟ್ಟೆ ನೀ ಮುನ್ನಮಂತ್ರಂಗಳನು ಜಪಿಸಿ ನವಬ್ರಹ್ಮರಾದಿಯಲಿಮಂತ್ರಮೂರ್ತಿಗಳಾದರದರಿಂದಲೀ ವಿಧದ 1ಮಂತ್ರಹೃದಯದಿ ನಿಂದು ಮಂತ್ರಿಸಿದ ಜೀವನನುಮಂತ್ರಾರ್ಥವಸ್ತು ಪರಬ್ರಹ್ಮವನೆ ಮಾಡಿಯಂತ್ರತ್ವವನು ಬಿಡಿಸಿ ಯಂತ್ರಿ ತಾನೆಂದೆನಿಸಿಸಂತತಾನಂದಸಾಗರವ ಸೇರಿಸುವ 2ಹಿಂಸಾದಿ ದೋಷಗಳನುಳಿದು ನಿರ್ಮಲವಾಗಿಹಂಸನೊಳು ಬೆರಸಿ ಗುಣಕರಣ ಪುಷ್ಪಗಳಹಂಸಮಂಡಲರೂಪ ತಿರುಪತಿಯಲಿಹ ಪರಮಹಂಸ ವೆಂಕಟರಮಣ ನೀನೆ ನಾನೆಂಬ 3ಓಂ ಗೋವಿಂದಾಯ ನಮಃ
--------------
ತಿಮ್ಮಪ್ಪದಾಸರು
ಮಂತ್ರಾಲಯನಿವಾಸ ಉತ್ತಮ ಹಂಸ | ಸಂತಾಪ ಪರಿಹರಿಸ ಕೊಡು ಎನಗೆ ಲೇಸÀ ಪ ಯತಿಗಳ ಶಿರೋರನ್ನ ಯೋಗಸಂಪನ್ನ | ಕ್ಷಿತಿಯೊಳಗೆ ನಿನಗೆ ಸರಿಗಾಣೆನೊ || ನುತಿಸುವೆ ಭಕ್ತಿಯಲಿ ಬಿಡದೆ | ಮುಕುತಿಯಲಿ ಸತತಾನಂದದಲಿಪ್ಪ 1 ಕಪಿಲ ತೀರ್ಥದಲಿ ಶರಣ ಶುದ್ಧಿಯಲ್ಲಿ | ತÀಪವ ಮಾಡುವ ಜ್ಞಾನಿ ಸೌಮ್ಯಜ್ಞಾನಿ || ಕೃಪೆಮಾಡಿ ಕೊಡು ಗುರುವೆ ಶಿಷ್ಯಸುರತÀರುವೆ 2 ತಮೋಗುಣ ಕಾರ್ಯ ಪೋಗಲಾಡು ವ್ಯಾಪ್ತಿಯಾ | ಶಮೆದಮೆಯಲ್ಲಿ ಉಳ್ಳ ಮಹಿಮೆಯಾ || ನಮಗೆ ಪೇಳುವೆ ವೇದಬಲ್ಲ ವಿನೋದ | ಸುಮನ ಸುಗುಣವ ಮೆಚ್ಚೆ ದುರ್ಮತಕೆ ಕಿಚ್ಚೆ 3 ಕಾಶಿ ಸೇತುವೆ ಮಧ್ಯೆ ಮೆರೆವೇ ಜನರಲ್ಲಿ | ಭೇದ ವಿದ್ಯಾ ಸಜ್ಜನಕೆ ತಿಳಿಸು ಮನಸು ನಿಲ್ಲಿಪೆ || ಪೋಷಿಸುವೆ ಅವರ ಅಟ್ಟುವ ಮಹದುರ | ದೋಷವ ಕಳೆವಂಥ ವಿಮಲ ಶಾಂತ4 ವರಹಜ ತೀರದಲ್ಲಿದ್ದ ಸುಪ್ರಸಿದ್ದ | ಮರುತ ಮತಾಂಬುಧಿ ಸೋಮ ನಿಸ್ಸೀಮ || ನರಸಿಜಾಪತಿ ನಮ್ಮ ವಿಜಯವಿಠ್ಠಲನಂಘ್ರಿ | ಸ್ಮರಿಸುವ ಸುಧೀಂದ್ರ ಸುತ ರಾಘವೇಂದ್ರ 5
--------------
ವಿಜಯದಾಸ
ಮತ್ಸ್ಯಾದಿ ದಶಾವತಾರಗಳು ಮತ್ಸ್ಯಾದ್ಯವತಾರವನು ತಾಳ್ದು ನೀ ಪರದೇವ ಮನ್ವಂತರ ಪ್ರಳಯಜಲಧಿಯನು ಪೊಕ್ಕು ಸೂರ್ಯಪುತ್ರನ ಮನುವ ದೋಣಿಯಲ್ಲಿರಿಸಿ ನೀನ್ ನೀರಾಟವಾಡಿದೆಯ ಲೀಲೆಯಿಂದಲಿ ನೀಂ 33 ಮಂದರ ಪೊಕ್ಕೆ ಕೂರ್ಮರೂಪವ ತಾಳ್ದು ಕಡಲಿನಡಿ ಸೇರಿ ದೇವತೆಗಳಿಗೆಯಮೃತ ಕಲಶವನು ತೆತ್ತು ನೀನ್ ದೈತ್ಯರನು ವಂಚಿಸಿದೆ ಮೋಹಿನಿಯದಾಗಿ34 ಸೂಕರದ ರೂಪವನು ತಾಳ್ದು ನೀನ್ ಸಿರಿವರನೆ ಚಿನ್ನ ಕಣ್ಣಿನ ದೈತ್ಯಸೇವಕನ ಕೊಂದು ದೈತ್ಯನಾತ್ಮಜ್ಯೋತಿಯನು ತನ್ನಲಿಯಿರಿಸಿ ವಾರಾಹ ರೂಪದಿಂದಲಿ ಆಟವಾಡ್ದೆ35 ಶಿಲ್ಪಿಯಿಂ ರೂಪುಗೊಂಡಿಹ ಕಂಬದಲಿಯಿದ್ದು ವಿಷ್ಣುವೇ ಪ್ರಹ್ಲಾದ ಮಗುವನುದ್ಧರಿಸೆ ನಂಬಿದೆಡೆಯೆಲ್ಲೆಲ್ಲು ಇರುವೆನೆಂಬುದ ತಿಳಿಸೆ ನರಸಿಂಹ ರೂಪವನು ತಾಳ್ದೆ ಪರಮಾತ್ಮ 36 ಇಂದ್ರಾವರಜನೊಮ್ಮೆ ವಟುವಾಮನನು ಬಂದು ಬಲಿಯ ಯಾಗದ ಸಮಯ ಮೂಹೆಜ್ಜೆ ಬೇಡೆ ರಾಜ ಕೊಡಬಯಸಲದ ಗುರು ಶುಕ್ರತಡೆದಾಗ ದಾನಿ ಬಲಿ ಕೊಟ್ಟವನು ಸಿದ್ಧಿಯನು ಪಡೆದಾ 37 ಸಂಹಾರ ಲೀಲೆಯನು ತೋರಲವ ಪರಮಾತ್ಮ ಪಿತೃವಾಕ್ಯಪಾಲನೆಗೆ ತಾಯ ತಲೆ ಕಡಿದು ಮಾತೆಯನು ಬದುಕಿಸುತ ದುಷ್ಟರಾಜರ ತರಿದು ರಾಜವಂಶವನು ನಿರ್ವಂಶ ಮಾಡಿದನು 38 ಎದೆಯೊಳಿಹ ಸೀತೆಯನು ಕಾಡೆಲ್ಲ ಹುಡುಕುತ್ತ ಜಲಧಿಗೇ ಕಟ್ಟಿ ಸೇತುವೆಯ ಸಿರಿವರನು ಕಪಿ ಸೈನ್ಯದೊಡಗೂಡಿ ಲಂಕೆಯನ್ನೈದುತ್ತ ರಾವಣನ ಕೊಂದು ಸೀತೆಯ ಮರಳಿ ತಂದೆ 39 ಇಬ್ಬರನು ತಾಯಂದಿರನು ರಮಿಸಿ ಮಗುವಾಗಿ ಪದಿನಾರು ಸಾಸಿರದ ಸತಿಯರನು ಒಲಿಸಿ ಏಕಕಾಲದಲಿ ಎಲ್ಲರನು ಮೆಚ್ಚಿಸಿದ ಹರಿ ಆನಂದರೂಪದವ ಪರಮಾತ್ಮ ನಿಜವು 40 ತಾಮಸದ ಜೀವರನಧೋಗತಿಗೆಯಿಳಿಸುತಲಿ ಬುದ್ಧ ರೂಪದಲಿ ತ್ರಿವಿಧ ಜೀವಂಗಳಿಗೆ ಯೋಗ್ಯತೆಗೆ ತಕ್ಕಂತೆ ಗತಿಯಾಗಿಸುವದೆ ನಿನ್ನ ಸಂಕಲ್ಪವದಲಾ 41 ಧರ್ಮವದು ನಶಿಸುತಲಿ ದುಷ್ಟರಾಜರು ತುಂಬೆ ಕಲಿಯುಗದ ಕೊನೆಯಲ್ಲಿ ಕಲ್ಕಿ ರೂಪದಲಿ ಅಶ್ವವನ್ನೇರುತಲಿ ದುಷ್ಟರನು ಸಂಹರಿಸಿ ಕೃತಯುಗವ ಮಾಡಿದೆಯ ಪರಮಾತ್ಮ ನೀನು 42 ಕಾಣದಾ ದೇವರಿಗೆ ಭಕ್ತಿಯಿಂ ಪೂಜಿಸಲು ಹತ್ತು ರೂಪಗಳಿವುಗಳೇ ಮುಖ್ಯವದರಿಂ ಅವತಾರ ರೂಪಗಳ ಪ್ರತಿಮೆಗಳ ಪೂಜಿಸುತ ಸರ್ವಾರ್ಥಸಿದ್ಧಿಗಳ ಪಡೆಯುವರು ಜನರು 43 ವೇದೋಕ್ತ ಪದಗಳಿಗೆ ಮುಖ್ಯಾರ್ಥ ಹರಿಯಿಹನು ಅಗ್ನ್ಯಾದಿ ನಾಮಗಳು ದೇವರಿಗೆಯಿಹವು ದೇವತೆಗಳಿಗೆಲ್ಲ ಅಗ್ರಣಿಯು ತಾನಾಗಿ ಅಗ್ನಿನಾಮವು ನಿನಗೆ ಒಪ್ಪುವುದು ಹರಿಯೆ 44 ಇಂದ್ರಿಯಂಗಳೆ ಕುದುರೆ ಬುದ್ಧಿಯೇ ಸಾರಥಿಯು ಮನವೆಂಬ ಕಡಿವಾಣ ಹಿಡಿದೋಡಿಸುವವನು ಜೀವನೇ ರಥಿಕನವ ವಿಷಯಬೇಟೆಗಳಲ್ಲಿ ಪರಮಾತ್ಮನರಿವೆಂತು ಮೂಡುವುದು ಅವಗೆ 45 ವಾಸದಿಂ ಬೆಳಗಿಸುವ ವಾಸುದೇವನು ತಾನು ವರುಣನಂತರ್ಗತನು ಶಿರದಲ್ಲಿಯಿಹನು ಸಪ್ತರಂಧ್ರಗಳಲ್ಲಿ ವಿದ್ಯುತ್ತ ಹರಿಸುತಲಿ ಜ್ಞಾನವನ್ನೊದಗಿಪನು ಶ್ರೀಕೃಷ್ಣನವನು 46 ವಿಜ್ಞಾನಿ ಭಗವಂತ ಹೃದಯ ಗುಹೆಯಲ್ಲಿಹನು ಅನಿರುದ್ಧ ಯಜ್ಞೇಶ ಮೊದಲಾದ ಪೆಸರಿಂ ಪ್ರಾಣವಾಯುಗಳ ಜೊತೆ ಪಾಕವನು ಗೈಯುತ್ತ ರಕ್ತರೂಪವ ಮಾಡಿ ಪಾಲಿಸುವ ನಮ್ಮ47 ಪ್ರಾಕೃತ ಜ್ಯೋತಿಯಾದೊಡೆ ದೇಹ ಸುಡದಿರದು ಅಪ್ರಾಕೃತ ಜ್ಯೋತಿ ಯಜ್ಞೇಶಗಿಹುದು ಭಕ್ಷ್ಯಭೋಜ್ಯಗಳೆಂಬ ಲೇಹ್ಯಪೇಯಗಳೆಂಬ ನಾಲ್ಕುವಿಧ ವಸ್ತುವಿನ ಪಾಕ ಮಾಡುವನು 48 ವಾಯುವಂತರ್ಗತನು ನೀಲರೂಪದ ದೇವ ಪ್ರದ್ಯುಮ್ನನಾಮಕನು ನಾಭಿಯಲ್ಲಿಹನು ಕಾಮರೂಪಿಯು ಅವನಪಾನಕ್ಕೆ ಒಡೆಯನವ ಪುರುಷರಿಂದಲಿ ಸೃಷ್ಟಿಗವನೆ ಕಾರಣನು 49 ಪೃಥ್ವಿವಿಯಪ್ ತೇಜಸ್ಸು ಮೂರು ದೇಹದ ಮೂಲ ಶ್ರೇಷ್ಠ ವಾಯುವು ಸೇರಿ ದೇಹಕ್ಕೆ ಚಲನೆ ಹೃದಯದಲ್ಲಾಗಸವು ಇರುವ ಕಾರಣದಿಂದ ಪಂಚಭೂತಂಗಳಿವು ದೇಹದಲ್ಲಿಹವು 50 ವಾಯುವಿನ ಜೊತೆಗೂಡಿ ದೇಹಚಾಲಕನು ಯಂತ್ರರೂಪದಲ್ಲಿದ್ದು ಯೋಗ್ಯತೆಗೆ ತಕ್ಕಂತೆ ಕಾರ್ಯವನು ಮಾಡಿಸುತ ಫಲವನ್ನು ಕೊಡುವ 51
--------------
ನಿಡಂಬೂರು ರಾಮದಾಸ
ಮಂದರಧರ ಗೋವಿಂದ ಮುಕುಂದ ಸ ನಂದವಂದ್ಯನೆ ಲಾಲಿಸೋ ಪ ಕುಂದರದನ ಶರದಿಂದುವದನ ಮುಚು ಕುಂದ ವರದನೆ ಪಾಲಿಸೋ ಅ.ಪ ಸಾರಸಭವನುತ ಸಾರಚರಿತ ಸಂ ಸಾರಪಯೋನಿಧಿ ಪಾರದನೆ ವಾರಿಧಿ ಶಾರೀರ ವಿಹಾರ ವಿಶಾರದನೆ 1 ಪಾಶ ವಿಮೋಚನ ಪಟುಚರಿತ ವಿನುತ ಕೇಶವ ಸದ್ಗುಣ ಗಣಭರಿತ 2 ಧರೆಯೊಳು ಶ್ರೀ ಪುಲಿಗಿರಿಯೊಳು ನೆಲೆಸಿಹ ಶರಣರ ಸಲಹುವ ಶ್ರೀಧರನೆ ಚಕ್ರಧರ ವರನೆ 3
--------------
ವೆಂಕಟವರದಾರ್ಯರು
ಮಂದರೊದ್ಧಾರ ಮುಚುಕುಂದವರದ ಮುಕುಂದ ಇಂದಿರಾನಂದ ಗೋವಿಂದ ವರದ ಕಂದನತಿ ದೈನ್ಯದಿಂ ತಂದೆ ಬಾರೆನ್ನಲಾ ನಂದದಿಂ ಭದಿಂ ಬಂದೆ ಭರದಿಂ ನಂದಾತ್ಮ ಸಂಜಾತನೆಂದೆನಿಸಿ ನಲವಿನಿಂ ಬೃಂದಾವನದಿ ನಿಂದೆ ವರದನೆಂದೆ ನಂದಮಂ ಕೃಪೆಗೆಯ್ದುದರರೆ ಪಿರಿದು ಅಚ್ಚುತಾನಂತ ಚಿದ್ರೂಪ ವಿಭವ ಪಚ್ಚಕರ್ಪೂರದಿಂ ಮಿಳಿತವಾಗಿ ಪೆರ್ಚೆ ಪರಿಮಳ ವೀಳ್ವಮಿದನುಕೊಂಡು ಮೆಚ್ಚಿ ಪೊರೆಯೆನ್ನ ಶೇಷಾದ್ರಿರನ್ನ
--------------
ನಂಜನಗೂಡು ತಿರುಮಲಾಂಬಾ
ಮಂದಾಸಲ ರಗಳೆ ರಾಮ ಪದಾಂಬುಜ ಭೃಂಗಗೆ ಜಯ ಜಯ ತಾಮಸ ಕುರುಕುಲ ಧ್ವಂಸಕ ಜಯ ಜಯ ಶ್ರೀ ಮತ್ಪೂರ್ಣ ಪ್ರಜ್ಞಗೆ ಜಯ ಜಯ 1 ವಾಸುದೇವ ಸುನಾಮಕ ಜಯ ಜಯ ದೋಷ ಜ್ಞಾನ ವಿನಾಶಕ ಜಯ ಜಯ ಸೂರ್ಯ ವ್ಯಾಸ ಸುಭೋಧೆಯ ದರ್ಪಣ ಜಯ ಜಯ 2 ಶುಭಗುಣಲಕ್ಷಣ ಶೋಭಿತ ಜಯ ಜಯ ಭವ ಮೋಚಕ ಜಯ ಜಯ ಇಭವರದಾಜ್ಞಾಧಾರಕ ಜಯ ಜಯ ವಿಭುಧ ಸುಖಾಂಬುಧಿ ಸೋಮನೆ ಜಯ ಜಯ3 ನಿತ್ಯ ಸದಾಗಮ ಕೋಶಗೆ ಜಯ ಜಯ ಸತ್ಯವತೀಸುತ ಪ್ರೀಯಗೆ ಜಯ ಜಯ ಸತ್ಯಾಖ್ಯಾತ ಸುಮಿತ್ರಗೆ ಜಯ ಜಯ ಸುರತರು ಜಯ ಜಯ 4 ಅಚ್ಚುತ ಪ್ರೇಕ್ಷರ ಶಿಷ್ಯಗೆ ಜಯ ಜಯ ಸ್ವಚ್ಚಗುಣಾರ್ಣವ ಋಜುಪತಿ ಜಯ ಜಯ ಕೆಚ್ಚೆದೆ ವೀರಾಗ್ರೇಸಗೆ ಜಯ ಜಯ ಪಾವಕ ಜಯ ಜಯ 5 ಶೃತಿತತಿ ವಿಮಲ ಸುಭೋದಕ ಜಯ ಜಯ ರತಿಪತಿ ಪಿತವರ ದೂತಗೆ ಜಯ ಜಯ ಕ್ಷಿತಿಧರ ದ್ವಿಜಶಿವವಂದಿತ ಜಯ ಜಯ 6 “ಶ್ರೀ ಕೃಷ್ಣವಿಠಲ” ಸದಾರತ ಜಯ ಜಯ ಲೋಕ ಹಿತಪ್ರದ ನಿಜಗುಣ ಜಯ ಜಯ ಶ್ರೀಕರ ಶುಭಕರ ಜಯಕರ ಜಯ ಜಯ ಆಕಮಲಾಸುತ ರಯೀಪತಿ ಜಯ ಜಯ 7
--------------
ಕೃಷ್ಣವಿಠಲದಾಸರು
ಮನ ಒಲಿದೆನ್ನನು | ಪಾಲಿಸು ಜನನಿ ಪ. ಘನ ವಿದ್ಯಾದಾಯಿನಿ | ಜಲಜಾಂಬಕಿ ನೀ ಅ.ಪ ವಿದ್ಯಾವಿದಾತೆ ಬುದ್ಧಿಪ್ರದಾತೆ || ಶ್ರದ್ಧೆಯ ಬೇಡುವೆ | ಸದ್ಗುಣಭರಿತೆ 1 ಗಾನವಿಲೋಲೆ | ವಿನಮಿತಪಾಲೆ || ಜ್ಞಾನಪ್ರದಾಯಿನಿ | ಘನಗುಣಶೀಲೆ 2 ಆಡುವ ನುಡಿ ಕೈ | ಗೂಡುವ ತೆರದಲಿ || ಮಾಡೌ ಬೇಡುವೆ | ನಡಿಗಳಿಗೆರಗಿ 3 ಮನ್ಮನದಿಷ್ಟವ | ನಿತ್ತೆನ್ನ ಪೊರೆ ನೀ || ಬೊಮ್ಮನ ರಾಣಿ | ನಿತ್ಯಕಲ್ಯಾಣಿ4
--------------
ವೆಂಕಟ್‍ರಾವ್
ಮನ ಬಲಿಯದನಕ ಅನುಕೂಲಾಗದನುಭವ ಧ್ರುವ ಮನವೇ ಮರೆಯ ಮಾಡೇದೆ ನೆನವಿಗೆ ತಾಂ ತಂದು ತೋರದೆ ಹೆಣ್ಣ ಹೊನ್ನದಾಶೆ ಹಚ್ಚ್ಯಾದೆ ಘನತನಗರಸದೆ 1 ಹುಚ್ಚಮಾಡಿಬಿಟ್ಟದೆ ಎಚ್ಚರ ಎಡಿಯಗೊಡದೆ ಕಚ್ಚಿ ವಿಷಯಕೆ ಬಿದ್ದದೆ ಬೆಚ್ಚಿ ಬೆದರದೆ 2 ಮನಸಿಗೆ ಮನಸಿನಿಂದ ಅನುಭವವಾಗಬೇಕಾನಂದ ಘನ ಗುರುವಿನ ಕೃಪೆಯಿಂದ ಮನ ಬಲಿವುದು ಚೆಂದ 3 ಮನೋನ್ಮನವಾಗಿ ತಾ ಘನ ಬೆರೆದು ಸ್ವಹಿತ ಙÁ್ಞನಕಿದೇ ತಾ ಸನ್ಮತ ಮುನಿಜನರ ಸುಪಥ 4 ಮನಬಲಿದು ನೀ ನೋಡೋ ಘನಸುಖ ಮಹಿಪತಿಗೊಡೊ ಅನುಭವಾಮೃತ ಸೂರ್ಯಾಡೊ ಅನುಮಾನೀಡ್ಯಾಡೊ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಮನವೆ ಎಲೆ ಮನವೆ ನೀನು ಯೋಚಿಸಿ ಕೆಡುವುದು ಅನುಚಿತವಲ್ಲೆ ಪ ನೀ ಮನನಮಾಡಿದ ಸಂಸಾರಿರದು ಕಾನನದ ಬೆಳದಿಂಗಳು ಇದು ಪರಿ ತಿಳಿದು ಹೀನಯೋಚನೆ ಬಿಟ್ಟು ಧ್ಯಾನಕವಚ ತೊಟ್ಟು ಜ್ಞಾನವೆಂಬಾಯುಧಪಾಣಿಯಾಗೆಲೊ ಬೇಗ 1 ಈ ದೇಹವೆಂಬುವ ಕಾಂತಾರ್ಹೊಕ್ಕು ಉಪಾ ಯುದ್ಹುಲಿಗಳ ತರಿದ್ಹಾಕು ಮಹಮಾಯ ಕೋಣಗಳೆಂಟು ನೂಕು ದಾಯಾದ್ಯೈವರ ಕೊಂದು ಜೀವಘಾತಕರಾದ ಮೂವರಂ ಭಂಜಿಸಿ ದ್ವಯಮಾರ್ಗ ಗೆಲಿಯೆಲೊ 2 ಕಂಟಕ ಬದಿಗಿಟ್ಟು ಬಹ ಆರೊಂದು ನದಿಗಳ ದಾಂಟು ಭೋರ್ಗರೆವ ಸರ್ಪನ ಹೆಡೆ ಮೆಟ್ಟು ಮಾರಾರಿ ವಿನಮಿತ ಧೀರ ಶ್ರೀರಾಮಪಾದ ವಾರಿಜಕ್ಕೆರಗಿ ಗಂಭೀರ ಸುಖದಿ ಮೆರಿ 3
--------------
ರಾಮದಾಸರು
ಮನವೆ ನಿನಗೇಕಿನ್ನು ಲಜ್ಜೆದೋರದು ಬಳಿಕಕನಲಿ ನಿಂದಿಸುವೆ ಜನರನಿತರಾ ಪಘನಘೋರಮಲಜನಿತ ತನುವಿನೊಳುನೀನಿರುತಲನವರತ ತೊಳಲಬಹುದೇ ಬರಿದೆ ಅ.ಪಓದಿ ಗ್ರಂಥಗಳನು ಪಠಿಸಿಯದರರ್ಥವನುಬೋಧಿಸುವೆ ಪರರಿಗೆಲ್ಲಾ ಸೊಲ್ಲಾಸಾದರದಿ ತನ್ನಿಷ್ಠೆಯಲಿ ನಡೆಯುತನುಭವವನೀದಿನಕು ತಂದುದಿಲ್ಲವಲ್ಲಾಬೋಧೆವಡದಿಹ ಯೋಗಿಗಳ ಜರೆವ ಬಗೆಯಲ್ಲಿನೀ ದೊಡ್ಡ ಜಾಣನಲ್ಲಾ ಬಲ್ಲಸಾಧಿಸಿದ ವಿದ್ಯವನು ವಾದದಲಿ ನೀಗಾಡಿಬೀದಿಯಲಿ ನಿಂತೆಯಲ್ಲಾ ನಲ್ಲಾ 1ಧನಧಾನ್ಯ ದಾಸ ಕತಿಯೊಳಗೊಂದಿಕೊಂದಿರುವಜನರಲವಿವೇಕ ವಿಡಿದೂ ಜರಿದೂತನು ಪಾಶ ಬದ್ದದಲಿ ನರಕ ಭಾಜನರಾಗಿದಿನವ ಕಳೆಯುತ್ತಲಿಹರೂ ುವರೂಎನುತಲನುತಾಪದಲಿ ನೀ ಮತ್ತೆಯನವರತಧನಿಕರಿದ್ದೆಡೆಗೆ ಬಂದೂ ನಿಂದೂಧನವ ಕೊಡಿ ಸತ್ಪಾತ್ರನಾನೆಂದು ವೊಂದುವರೆಹಣವ ಕೈಯೊಡ್ಡಿ ಕೊಂಡೂ ಉಂಡೂ2ತೋರುವ ಜಗತ್ತಿದುವೆ ಪರಮಾತ್ಮನಿಂದಲೆತೋರುವದು ಭ್ರಮೆಗೆ ಹಲವೂ ಕೆಲವೂತೋರದಡಗದ ನಿತ್ಯ ವಸ್ತುವೆ ತಾನೆÀಂದುಧೀರತನದಿಂದಲಿರವೂ ಅರಿವೂಈ ರೀತಿಯಲಿ ತಿಳಿದು ಮುಕ್ತನಾಗದೆ ಬರಿಯಕ್ರೂರ ಬುದ್ದಿಯಲಿ ುರವೂ ಮರವೂದಾರಿಗಾಣದೆ ನಿನ್ನ ಅನುಭವವ ನೀ ಮತ್ತೆಹೊರುವುದೆ ನಿನಗೆ ಮತವೂ ದೃಢವೂ 3ಇಂದ್ರಿಯಂಗಳ ಸುಖವನೆ ಮೆಚ್ಚಿ ನೀನವರಹಿಂದುಗೊಂಡೆರಗಿ ಬಿಡದೆ ಪಡೆದೆಸಂದ ಭೋಗದ ಸವಿಯನೆನನೆನದು ಮತ್ತದನುಮುಂದು ಬೇಕೆಂದು ಹೊರೆದೆ ಬೆರೆದೆಕಂದಿ ಕಾಮಕ್ರೋಧದಗ್ನಿಯಲಿ ನೀ ಬೆಂದುಹೊಂದಿ ನೀಂ ಜನ್ಮಪಿಡಿದೆ ಮರೆದೆಹಿಂದುಗಳೆವಾತ್ಮನನು ಹಿತವೆಂದು ಮಿಥ್ಯವನುನೊಂ[ದು] ನೋಡದೆ ಬರಿದೆ 4ಚದುರ ವಿದ್ಯವ ಕಲಿತೆನೆಂಬುದೊಂದೇ ಘನತೆಸುದತಿ ಸಂಪತ್ತಿನಲ್ಲೆ ರಮತೆಒದಗಿ ಬಹಳೋದ್ಯೋಗಗಳ ಮಾಡಿ ಬಹುದಿವಸಬದುಕಿದವ ನೆಂಬುದರಲೆ ುರತೆಇದ ನಾನು ಸಂಪಾದಿಸಿದೆನೆನ್ನ ಶೌರ್ಯತೆಗೆಇದಿರಿಲ್ಲವೆಂದು ಇದಕೆ ಬೆರತೆಮುದದಿ ಗುರು ವಾಸುದೇವಾರ್ಯವೆಂಕಟರಮಣನೊಡಮೂಡದಿತರ ನಡತೆ ಜಡಕೆ 5
--------------
ತಿಮ್ಮಪ್ಪದಾಸರು
ಮನವೆ ನೋಡೋ ನಿನ್ನೊಳಗಿಹ್ಯ ನಿಜವ ಪಡಿದೊ ಕೂಡೋ ಗೂಡಿನೊಳರಿಯದೆ ನಾಡಗೊಡವೆ ನಿನಗ್ಯಾಕೊ ಮನವೆ ಧ್ರುವ ಸುಖಿಯಾಗೊ ಕೂಡೊ ಮನವೆ 1 ಮನ ಕರಗಿ ಘನ ಸಮರಸವಾಗೊ ತನುವಿನ ಕಳವಳಗಳೆದು ಅನುದಿನ ತೋರಿದ ಫಲವೇನು 2 ತನ್ಮಯ ತಾರಕ ಬ್ರಹ್ಮಾನಂದವು ಭಿನ್ನವಿಲ್ಲದೇ ನೀ ನೋಡೊ ಸುಖಸಾರವಿದು ಮನವೆ 3 ಅಲ್ಪದೆ ಮಹಿಪತಿ ಮನವೆ ಆಶಾಪಾಶಕೆ ಸಿಲುಕಿಲಿಬ್ಯಾಡೊ ಕೂಡೊ ಮನವೆ 4
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಮನವೆ ಪೇಳುವೆ ಪ ಅಂತರಂಗದಲಿ ಚಿಂತಿಪರಘಶುಲಧ್ವಾಂತ ದಿವಾಕರನಾ ಶ್ರೀವರನಾ ಅ.ಪ ಎಂತು ಸುಕೃತವೂ ಸಿರಿಕಾಂತನುಯನ್ನೊಳು ನಿಂತಿರುವನು ಎನುತ ಪರ್ವತ ಸಂತೋಷದಲಿರುವಂತೆ ತೋರುವದು ಸು- ಕಾಂತ ಶಿಖರದಿಂದ ಛಂದ 1 ವರಶಿಲೆಯೊಳಿರುವ ಹರಿಯ ಶೇವಿಸಲು ಹರುಷದಿ ಸುರನಿಕರ ಭಾಸುರ ತರುಲತೆರೂಪದಿ ಇರುತಿಹರೆನ್ನುತ ಮೆರೆವನು ಗಿರಿರಾಜಾ ಸುತೇಜಾ2 ಗಿರಿನಾಥಾ ತೋರುತ ಅರಳಿದ ಪೂವಿನ ಪರಿಮಳ ಬೀರುವ ಸುರಚಿರ ತರುವ್ರಾತಾ ಶೋಭಿತ3 ಪವನ ಶೇವಿತನು ಭುವನೋದರ ತಾ ದಿವಿಜರಿಂದ ಸಹಿತ ಸೇವಿತ ಅವನಿಧರನು ಮಾಧವನ ತೆರದಿ ತೋ ರು ವೆನೆಂಬುಗರ್ವಾದಿಂದಿರುವ 4 ಸಿದ್ಧಚಾರಣ ತಪೋವೃದ್ಧರಿದೇ ಸ್ಥಳ ಸಿದ್ಧಿದಾಯಕವೆಂದೂ ಬಂದೂ ಪದ್ಮಾಕ್ಷನ ಪದಪದ್ಮವ ಧ್ಯಾನಿಸು- ತಿದ್ದರು ಗುಹೆಗಳಲಿ ಪೂರ್ವದಲಿ5 ಮುನಿ ಮಾರ್ಕಾಂಡೇಯನು ಬಹುದಿನದಲಿ ಘನ ತಪವಾಚರಿಸಿ ಸೇವಿಸಿ ವನಜನಾಭನ ಪದವನಜ ಮಧುಪ ನೆಂ ದೆನಿಸುತಲಿರೆ ಗುಹದಿ ತಪೋನಿಧಿ6 ಗಿರಿಯ ಬಲದಿ ಅಹೋಬಲ ನರಸಿಂಹನ ದರ್ಶನವನು ಕೊಳುತ ನಿರುತ ಇರುತಿರಲೊಂದಿನ ಬರಲಾಷಾಢದ ಹರಿವಾಸರ ವೃತವಾ ಚರಿಸುವ 7 ದ್ವಾದಶಿ ಸಾಧನೆ ಬರಲು ಪ್ರತಿದಿನದಿ ಶ್ರೀದನ ದರ್ಶನದಾ ನೇಮದ ಸಾಧನೆ ವಿಷಯದಿ ಯೋಚಿಸುತಿರೆ ಹರಿ ಮೋದದಿ ಮುನಿಗೊಲಿದಾ ಸೂಚಿಸಿದಾ 8 ಅರುಣೋದಯದಲಿ ಸುರಗಂಗೆಯು ತಾ ವರ ಪುಷ್ಕರಣಿಯೊಳು ಬರುವಳು ತರುರೂಪದಿ ನಾ ಬರುವೆನು ಬಿಡದಿರು ಮರುದಿನದಾ ಚರಣೆ ಪಾರಣೆ9 ಎಂತು ಕರುಣವೊ ನಿರಂತರ ಭಜಿಪರ ಚಿಂತಿತ ಫಲವೀವ ಕೇಶವ ಇಂತು ಹರಿಯ ಗುಣ ಚಿಂತಿಸುತಿರಲು ನಿ ಶಾಂತದಿ ಸರೋವರದಿ ವೇಗದಿ10 ಭಾಗೀರಥಿ ಜಲದಾಗಮ ವೀಕ್ಷಿಸಿ ರಾಗದಿ ವಂದಿಸಿದ ತುತಿಸಿದ ಯೋಗಿವರನುತ ಸ್ನಾನವಮಾಡಿ ಬರುವಾಗಲೆ ಧ್ಯಾನಿಸಿದ ಹರಿಪದ11 ಆ ತರುವಾಯದಿ ಪಾರಿಜಾತ ತರು ವ್ರಾತವ ನೋಡಿದನು ವಂದಿಸಿದನು ಈತನೆ ನರಮೃಗನಾಥನೆನುತ ಮುನಿ ಪ್ರಾತ:ಪಾರಣವ ಮಾಡಿದ ಜವ12 ಮೀಸಲು ಮನದಲಿ ಶೇಷಶಯನಗಾ- ವಾಸಗಿರಿಯ ಸೇವಾ ಮಾಡುವ ಭೂಸುರ ಗಣದಭಿಲಾಷೆಗಳನು ಪೂರೈಸಿ ಪೊರೆವನೀತಾ ಪ್ರಖ್ಯಾತಾ 13 ಶ್ರೀಯುತ ಮಾರ್ಕಾಂಡೇಯರ ಚರಿತೆಯ ಗಾಯನ ಫಲವಿದನು ಪೇಳುವೆನು ಶ್ರೇಯಸ್ಸಾದನ ಕಾಯದಿ ಬಲದೀ- ಮಾನವ 14 ಸುರತರು ಕಾರ್ಪರ ಶಿರಿ ನರಸಿಂಹನೆ ಈತ ಎನ್ನುತ ನಿರುತ ಅನಂತನ ಗಿರಿಯ ಮಹಿಮೆಯನು ಸ್ಮರಿಸುವ ನರಧನ್ಯಾ ಸನ್ಮಾನ್ಯ 15
--------------
ಕಾರ್ಪರ ನರಹರಿದಾಸರು
ಮನವೇ ಕೊಬ್ಬ ಬ್ಯಾಡ ಉಬ್ಬ ಬ್ಯಾಡಾ ಪ ನೆನುವಿನೊಳಿಟ್ಟು ಮಾನುಭಾವರ ಚರಣ ಕಮಲವನು ಜನುಮ ಸಾರ್ಥಕವನು ಮಾಡು ಕಂಡ್ಯಾ ಅ.ಪ ವಿದ್ಯೆ ವಶವಾದರೆ ನೀ ತಿದ್ದಿ ಕಲಿಸು ಆರ್ತರಿಗೆ | ಬುದ್ಧಿವಂತರ ಕೂಡಾ ತರ್ಕಸ್ಯಾಡ ಬೇಡಾ ನೋಡಬ್ಯಾಡಾ | ಉಧೃತ ಶಕ್ತಿಯ ಬಲದಿಂದ ಸಂತ ಸೇವೆ ಮಾಡು | ಗುದ್ದಿ ಹೆಟ್ಟಿ ಪರರ ಪೀಡಿ ಕುಡಬ್ಯಾಡಾ ಮಾಡಬ್ಯಾಡಾ | ಮುದ್ದಿ ಘನವಾದರ ಸತ್ಪಾತ್ರಕ ನಿವೇದಿಸು | ಮದ್ದು ತಿಂದು ನುಡಿವವನಂತ ಪರರ ದೋಷ ಗುಣಾ | ಬದ್ಧವಚನವ ನುಚ್ಚರಿಸದಿರು 1 ರಾಜಮುದ್ರಿಯ ನೆವದಿ ಉದರ ತುಂಬಲಾಗಿ ನೀತಿ ಬಿಟ್ಟು | ಈ ಜನರನಾ ದಂಡಿಸುವದಲ್ಲಾ ಇದುಸಲ್ಲಾ | ಆ ಜನ ಹೊಟ್ಟೆ ಹಾಕಿ ಬರೆಗೈಯ್ಯ ಹೋಗುವಂತೆ | ನೀ ಜಯಿಸಿ ಬಂದದಲ್ಲಾ ಸಂದದಲ್ಲಾ | ತ್ಯಾಜದಿಂದ ದೊಡ್ಡವ ನೀನೆಂದು ಸೆಜ್ಜಿ ತೆನೆಯಂತೆ | ಸುಜನರೊಳಗ ಗರ್ವ ಹಿಡಿಯದಿರು ಪಡೆಯದಿರು | ವಾಜಿಯಲಿ ನವಣಿ ತೆನೆಯಂತ ಬಾಗಿ ನಡೆದರೆ| ಶ್ರಿ ಜನಾರ್ಧನ ರಕ್ಷೀಸುಚ ಕಂಡ್ಯಾ 2 ಜರಿದು ಕೈಯಲ್ಲಿಂದ ಸಬಕಾರ ನೀರೊಳಗ ಬಿದ್ದ | ತೆರದಿಂದ ತಿರುಗಿ ತಿರುಗಿ ಯಾತಿಗಳನು | ಭರದಿಂದ ಕಡಿಯಲಿ ಪುಣ್ಯ ಫಲ ವಶದಿಂದ| ನರದೇಹವನು ತಾಳಿ ಬಂದಿ ನೀನು ತಿಂದಿ ನೀನು | ತ್ವರಿತ ಸುತಪ್ರಿಯ ಗುರು ಮಹಿಪತಿ ಚರಣಕ | ಮೊರೆ ಹೊಕ್ಕು ಗತಿ ಪಡೆ ಭಾವದಿಂದ ಜೀವದಿಂದ | ಧರೆಯೊಳು ಗಾಳಿಯೊಳಗಿನ ದೀಪ ತೋರುವಂತೆ | ಸ್ಥಿರವಲ್ಲಾ ಆಗಲ್ಹೋ ಈಗಲಿದು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಮನವೇ ಚಿಂತಿಸು ಹರಿ ಮುರಾರಿಯ ಪ ಮಾಯಾ ಮನುಜಾಕಾರವ ತಾಳ್ದ ಸನಕಾದಿ ಸನ್ಮುನಿವಿನುತಪದ ವನಜಾತಯುಗಳನನು ಅ.ಪ ಪುರುಹೂತರಿಗೆ ತಾತನ ರತಿದೇವಿ ಸರಸಿಜಾಸನನಿಗೆ ಕರುಣಿಸಿವೇದವÀ ತರಳಗಭಯವನಿತ್ತು ತರಿದು ನೃಪರನು ದುರುಳರಾವಣ ಹರಣ ನೀಲಾಂಬರ ಯದುವರ ತುರಗವಾಹನ 1 ಸುಗುಣ ಗಣಾರ್ಣವನ ಸಜ್ಜನರಿಗೆ ಸುಗತಿಯಪಾಲಿಪನ ಸುರಪಾಲನ ನಿಗಮಚೋರನಕೊಂದು ಮೃಗನರವ ರೂಪವ ತಾಳಿ ಜಗವನಳೆದನ ಭೃಗುಜ ಶಾಖಾ ಮೃಗವ ವಧಿಸಿ ಹಲನೇಗಿಲನು ಪಿಡಿ ನಿಗಮನುತ ಕಲಿಯುಗದ ವೈರಿಯ 2 ಒಲಿದು ಪೂಜೆಯ ಕೊಂಬನ ಕುಂಭಜಶಾಪ ಕಲುಷವ ಕಳೆದವನ ವ್ಯಾಘ್ರಾಚಲದಲಿ ನಿಂತು ಭಕ್ತರ ಸಲಹುವ ಕಾರುಣ್ಯನಿಲಯ ಸಜ್ಜನಮನೋ ನಿಲಯ ಶ್ರೀನಿವಾಸನ ಜಲಜನೇತ್ರನ ಜಲಜಗಾತ್ರನ ವಿಲಸಿತಾಂಬುಜ ಮಾಲ ಭಕ್ತರಿ ಗೊಲಿವ ಶ್ರೀ ವರದಾರ್ಯವಿಠಲನ 3
--------------
ವೆಂಕಟವರದಾರ್ಯರು