ಒಟ್ಟು 18204 ಕಡೆಗಳಲ್ಲಿ , 138 ದಾಸರು , 7712 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಏನು ಕಾರಣ ಕೃಷ್ಣಾ ಏನು ಕಾರಣ ಪ ಏನು ಕಾರಣ ಎನ್ನ ಕಣ್ಣಿಗೆ ನೀನು ತೋರದಿರುವುದು ಇದು ಅ.ಪ ಖಗ ಮೃಗಾದಿಗಳಿಗೆ ನೀನು ರಘು ಕುಲೇಶ ದರ್ಶನವಿತ್ತೆಸೊಗಸು ಮೋಕ್ಷವಿತ್ತೆ ಅದಕುಖಗವರೂಢ ಕಡಿಮೆಯೇನು 1 ಶಬರಿ ಎಂಜಲುಂಡು ವನದಿಅಬುಜ ಶಯನ ದರುಶವಿತ್ತೆಕುಬುಜೆ ಕೂಡಿದೆಲ್ಲೊ ಅದಕುವಿಬುಧ ವಂದ್ಯ ಕಡಮೆನೋವಾ 2 ಮುರಲಿನೂದಿ ವನದಿ ಹರಿಯುತರುಲತಾದಿಗಳಿಗೆ ದರ್ಶನವಿತ್ತು ಕಾಯ್ದುಅದಕು ಪರಮ ಪುರುಷ ಕಡಿಮೆ ನೋವಾ3 ಹಾದಿಲ್ಹೋಗೋ ಕೀಟನಿಗೆವೇದನಾಥ ದರುಶನಿತ್ತಿಆದಿ ವರ್ಣದವನು ಅದಕುಬಾದರಾಯಣ ಕಡಿಮೆ ಏನೋ 4 ಎಷ್ಟು ಎಷ್ಟು ಜನರಿಗೀಗಭೆಟ್ಟಿ ನೀಡಿ ಸುಖವನಿತ್ತೆಶ್ರೇಷ್ಠನೆಂದು ಸ್ತುತಿಪೆ ನಿನ್ನ ಕೃಷ್ಣ ಕರುಣಿ ಬೇಗನೆ ಬಾ 5 ಇಂಥಾ ಜನುಮದಲ್ಲಿ ನಿನ್ನಕಂತು ಪಿತನೆ ಕಾಣದಿರಲುಪಂಥಗಾಣೆ ಮುಂದಿನ ತನುಎಂಥದಾಗುವುದೋ ತಿಳಿಯೆ 6 ಇಂದಿರೇಶ ಮುರಲಿ ಶೋಭಿತಇಂದು ಬಿಂಬ ವಿಜಯ ವದನತಂದು ತೋರಿಸೆನ್ನ ಮನಕಾ-ನಂದಿಸೀಗ ನಂದನಸುತ 7
--------------
ಇಂದಿರೇಶರು
ಏನು ಕಾರಣ ಬಾಯಿ ತೆರೆದಿ - ಪೇಳೆಲೊದಾನವಾಂತಕ ಅಹೋಬಲ ನಾರಸಿಂಹನೆ ಪ ನಿಗಮ ಚೋರನ ಕೊಲಲು ತೆರೆದೆಯೋ ಈ ಬಾಯನಗವ ಬೆನ್ನಲಿ ಹೊತ್ತು ನಡುಗಿ ತೆರೆದೆಯೋ ಬಾಯ ಭೂ-ಮಿಗಳ್ಳನ ಕೊಂದು ಬಳಲಿ ತೆರೆದೆಯೋ ಬಾಯಜಗವರಿಯೆ ಪೇರುರವಿರಿದ ಪ್ರಹ್ಲಾದವರದಅಹೋಬಲ ನಾರಸಿಂಹನೆ1 ಬಲಿಯ ದಾನವ ಬೇಡಲೆಂದು ತೆರೆದೆಯೊ ಬಾಯಛಲದಿಂದ ಕ್ಷತ್ರಿಯರ ಕೊಲಲು ತೆರೆದೆಯೊ ಬಾಯಕುಲಸತಿಯ ಅರಸಿ ಕಾಣದೆ ತೆರೆದೆಯೊ ಬಾಯಮರೆತು ಮಾವನ ಕೊಂದು ನಿಂದೆ - ಇಂಥಇಳಿಯ ಬಾರದ ಭೂಮಿಗಿಳಿದ ನಾರಸಿಂಹ2 ನಾರಿಯರ ಚೆಲ್ವಿಕೆಯ ನೋಡಿ ತೆರೆದೆಯೊ ಬಾಯಏರಿ ಅಶ್ವವ ಮೆಟ್ಟಿ ಅಳಲಿ ತೆರೆದೆಯೊ ಬಾಯಮಾರಪಿತ ಕಾಗಿನೆಲೆಯಾದಿಕೇಶವ ರಂಗಧೀರ ಶ್ರೀನಾಥ ಭವನಾಶ ಪೇಳೋ ಪೇಳುಏತಕೆ ಅಹೋಬಲ ನಾರಸಿಂಹನೆ 3
--------------
ಕನಕದಾಸ
ಏನು ಕಾರಣ ಮತಿಯಿಲ್ಲ ಮನವೆ ಪ ಹೀನಾಯವಾಡದಿರು ಪರರ ಗುಣಗಳ ಎಣಿಸಿ ಅ.ಪ ಅವನ ಗೊಡವೆಯೇಕೆ ಅವನಾರು ನೀನಾರು | ಅವನ ಪಾಪಕ್ಕೆ ನೀ ಭಾಗಾದಿಯೆ | ಅವನುತ್ತಮನಾದಡವನೆ ಬದುಕಿದ ಕಾಣೊ ಅವ ಪುಣ್ಯಮಾಡಿದರೆ ಅವನ ಕುಲ ಉದ್ಧಾರ 1 ನಿನಗೆ ಕೊಡುವುದರೊಳಗೆ ಬೇಡ ಬಂದವನಲ್ಲ | ನಿನಗೆ ಅವನಿಗೆ ಏನು ಸಂಬಂಧವೊ | ಮನೆ ಒಡವೆ ವಸ್ತುಗಳ ಹಂಚಿಕೊಂಬುವುದಲ್ಲ | ಕ್ಷಣ ಕ್ಷಣಕೆ ಕ್ಲೇಶವನು ಮಾಡಿಕೊಂಬುದು ಸಲ್ಲ 2 ನಿನ್ನ ಗತಿ ಮಾರ್ಗಕ್ಕೆ ಅವನಡ್ಡ ಬಾಹನೆ | ನಿನ್ನಿಂದ ಪರಲೋಕ ಅವನಿಗುಂಟೆ | ನಿನ್ನೊಳಗೆ ನೀ ತಿಳಿದು ವಿಜಯವಿಠ್ಠಲನ್ನ | ಸನ್ನುತಿಸಿ ಭವರೋಗ ಬನ್ನವನು ಕಳೆಯೊ 3
--------------
ವಿಜಯದಾಸ
ಏನು ಕಾರಣವೆಮ್ಮ ದೂರಕೆ ನೀನು ನೂಕಿದನೆನಿಸಿದೆಹಾನಿ ವೃದ್ಧಿಗಳನ್ನು ಕಾಣಿಸಿ ದೀನಧೀರರ ಮಾಡಿದೆ ಪಎಲ್ಲರೊಳು ನೀ ಪೂರ್ಣ'ರುತಿಲ್ಲವೆಮ್ಮೆಡೆಯೊಳಗೆನುವ ಭ್ರಮೆಯಲ್ಲಿ ಬಂದುದು ಎಮಗೆ ಠಾ'ನ್ನೆಲ್ಲಿ ನಿನ್ನನಗಲುವರೆಉಳ್ಳವನೆ ನಿನಗಿಂತು ಬರುತಿರುವಲ್ಲಿ ನ'್ಮುರವನ್ನು ಪೇಳ್ವದುಜಳ್ಳು ನೀನಿದಿರಿಟ್ಟು ತೊಲಗಿದೆಯಲ್ಲ ಶ್ರೀಗುರುವರ್ಯನೆ 1ಹಲವು ಪರಿಯಲಿ ಚಿತ್ತಪಾಕವ ತಿಳಿದು ಶ್ರುತಿತಾ ಸಾರಿದರ್ಥವುಹೊಳೆಯದೊಂದೊಂದರ್ಥದಲಿ ಮನತೊಳಲಿ ಮಾರ್ಗವ ಕಾಣದೆನಲುಗಿ ಭವಮೃತಿಯೊಂದಿ ಜೀವರು ಬಳಲುತಿರಲವತರಿಪನೆಂಬರುತಿಳಿ'ಯಗಲುವನೆಂದರ ನುಡಿಯಳವಡದು ಗುರುವರ್ಯನೆ 2ಕೊರಗಿ ಕರಗುವ ಜೀವರಾರೈ ಬರುವೆ ನೀನೆಲ್ಲಿಂದ ಸಮಯಕೆಇರುವೆ ನೀನಾವೆಡೆಯೊಳಜ್ಞತೆ ಬರುವದಿವರಿಂಗೇತಕ್ಕೆಹರೆವದೆಂತದರಂದತೋರದು ಧರಿಸುತಿಹೆ ನೀನೆಂತು ತನುವನುಮರೆಯ ಮಾಳ್ವೆಯದೇಕೆ ಮೂರ್ತಿಯ ಕರುಣಿಸೈ ಗುರುವರ್ಯನೆ 3ನಿನ್ನ ನಿನ್ನೊಳು ನೀನೆ ನಾನೆಂದೆನ್ನದೆಂಬುದರಿಂದ ತಿಳಿದರೆನನ್ನ ನಿನ್ನೊಳು ಕಾಣ್ಬೆ ಅಂದು ಪ್ರಸನ್ನನಾಗಿಯೆ ಕರುಣಿಸಿಎನ್ನೊಳಗೆ ಸರ್ವವನು ಸರ್ವರೊಳೆನ್ನ ತಿಳಿದನ್ಯಾರ್ಥವನೆ ಮರತುನ್ನತಾಮಲ ಪೂರ್ಣನಹೆಯೆಂದಿನ್ನು ತೋರದು ದೇವನೆ 4ಸಾಕು ಸನಿಯವ ಸೇರಿಸೆಮ್ಮೊಳು ನೂಕು ಕ'ದಿಹ ತಮವ ಸುಖವನುಸೋಕಿಸೈ ಕಡೆಗೊಳಿಸು ಚಿಂತೆಯ ಬೇಕು ನಿನ್ನಡಿ ಸೇವೆಯುಶ್ರೀಕರನೆ ಚಿಕನಾಗಪುರ ವರದರಸನೆ ಗುರುವಾಸುದೇವನೆತಾಕು ತಡೆ ಬರದಂತೆ ನಿನ್ನೊಳಗೇಕತೆಯ ದಯಮಾಡಿಸೈ 5
--------------
ವೆಂಕಟದಾಸರು
ಏನು ಕೊಟ್ಟನೆ ಮಗಳಾ ಉದಾ | ಸೀನದಿ ಭಿಕ್ಷುಕ ಶಿವಗೀಂದು ಗಿರಿಜಾ ಪ ಹೆತ್ತವಳಿಲ್ಲಾ ಸೀ ಹುಟ್ಟತ ಪರದೇಶೀ | ನೆತ್ತಿಗೆ ಎಣ್ಣಿಲ್ಲಾ ನೆರೆಬಿಸಿ ನೀರಿಲ್ಲಾ | ದೊತ್ತಿದ ಕೂದಲು ದುರ್ಜಟಿ ಯಾಗಲು | ಹೊತ್ತಿದ ತಲೆಯಿಂದ ಹಣೆ ಉರಿಗಣ್ಣಾದ | ಇತ್ತಿ ಹೊದಿಯಲಿಲ್ಲಾದೀ ಭಸ್ಮ ಲೇಪನಾ | ಮೆತ್ತಿದ ಗುಣದಿಂದ ಮೈ ಯಲ್ಲ ಬೆಳ್ಚಾದಾ | ಎತ್ತ ನೇವುವನು ಭೂತ ಗಣಾ | ಯೋಗಿ - ಕು | ಲೋತ್ತ ಮನೆನಿಸಿದನು ಇಂಥ | ಹತ್ತು ಭುಜವ ತಾಳಿ ದೈದು ಮೊರೆಯುಗವ 1 ಶರಥಿ ಮಥನದಲ್ಲಿ ಸಲೆ ವಿಷ ಹೊರಡಲಿ | ಸುರರ ಮಾತು ಕೇಳಿ ಶೀಘ್ರದಿ ಸುರಿಯಲಿ | ಉರಿಹೆಚ್ಚಿ- ಮೈಯ್ಯಲಿ ಉಬ್ಬಸ ಗೊಳುತಲಿ | ಸುರಗಂಗಿಯ ಹೊತ್ತ ಸೀತಾಂಶು ಕಳೆವತ್ತ | ಮರುಳವೆ ತಿರುಗುವ ಮತ್ತೆ ಭೋಳಾದೇವ | ತ್ವರಿತವ ಕೋಪದಯ ಮನಿಯೊಳು ಹಿಡಿದಿಹ | ಸುರರಿಗೆ ವಲಿದಿಹನು ಬೇಡಿದ | ವರಗಳನ್ನು ಕೊಡತಿಹನು ಬೆನ್ನಟ್ಟಿ | ಬರೆ ದುಷ್ಟ ಓಡಿದನು ಶ್ರೀ ವಿಷ್ಣು | ಕರುಣದಿ ಶರೆಯ ಬಿಡಿಸೆ ಕೊಂಡವನಿಗೆ 2 ಕರಿಚರ್ಮ ತಾಳಿದಾ ಕಾಡೊಳು ಸೇರಿದಾ | ಉರಗ ಭೂಷಣನಿವ ಊಧ್ರ್ವರೇತಾದವ | ಹೊರೆ ಹುಲಿದೊಗಲಾ ಹಾಸಿಗೆ ಮಾಡಿದಾ | ಕೊರಳಳು ರುಂಡಮಾಲಾ ಕರದೊಳು ಕಪಾಲಾ | ಧರಿಸಿದ ನೀತನು ದೊರೆಯಲ್ಲದಾತನು | ನೆರೆದುಣ - ಲುಡಿಲಿಲ್ಲಾ ನರಸುರ ರೊಳಗಲ್ಲಾ | ಪರಕ ಪರೆನಿಸುವರು ಸ್ಮರಿಸಿದಾ ಆ ಗುರುವರ ಮಹಿಪತಿ ಪ್ರಭು ಸಾಂಬನೆಂಬವನಿಗೆ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಏನು ಖೋಡ್ಯಾದಲ್ಲೋ ಸಂಸಾರ ನಾನು ನೋಡಿದ್ದಿಲ್ಲ ಪ ಏನು ಖೋಡಿದು ವಿಚಾರ ತಪ್ಪಿಸಿ ಎನ್ನ ಶ್ವಾನದಂದದಿ ಖೂನವಿಲ್ಲದೆ ಕೂಗಿಸಿತೇನು ಅ.ಪ ತಾನೆ ನಿಜವಿಲ್ಲ ಎನ್ನನು ಏನು ಕೆಡಿಸಿತಲ್ಲ ನಾನಾಪರಿಲಿ ಮಾಯಮೋಹದಿ ಮುಳುಗಿಸಿ ಜ್ಞಾನ ಕೆಡಿಸಿ ಹೀನಬವಣೆಗೆ ತಂದಿತ್ತು 1 ಕನಸಿನಪರಿಯಂತೀಜಗಸುಖ ಕ್ಷಣಹೊತ್ತಿನ ಸಂತಿ ಇನಿಸು ತಿಳಿಗೊಡದೆನ್ನ ಮನಸು ಸೆಳೆದುಕೊಂಡು ಕುಣಿಸಿ ಕುಣಿಸಿ ಮಹ ನರಕಿಯೆನಿಸಿತ್ತು 2 ಸತ್ಯಮಾರ್ಗ ಮರೆಸಿ ಎನ್ನನಸತ್ಯಮಾರ್ಗಕೆಳಸಿ ನಿತ್ಯನಿರ್ಮಲನ ಸತ್ಯ ಚರಿತೆಗಳ ಗುರ್ತು ತಿಳಿಸದೆಮಮೃತ್ಯುತೀಡೆನಿಸಿತ್ತು3 ಮರವೆಯು ಮುಚ್ಚಿತ್ತು ಭವಪಾಶ ಕೊರಳಿಗೆ ಹಾಕಿತ್ತು ಅರಿವಿನ ಕುರುಹನು ತೋರಿಸದೆ ಪರದಿರವು ಮರೆಸಿ ಧರೆಭೋಗ ಅಹುದೆನಿಸಿತ್ತು 4 ನೇಮನಿತ್ಯಕೆಡಿಸಿ ಎನಗೆ ಶ್ರೀರಾಮಪಾದಮರೆಸಿ ಕಾಮಿಸಬಾರದ ಕಾಮಿತಗಳಿಂದ ಪಾಮರನೆನಿಸೆನ್ನ ಕೊಲ್ಲುತಲಿತ್ತು 5
--------------
ರಾಮದಾಸರು
ಏನು ಚೆಲುವಿಯೋ ಅಂಬುಜ ನಿಲಯಳೇನು ಚಲುವಿಯೋ ಪ ಕರ್ಣ ಭೂಷದಿಮಸ್ತಕದಿ ಮಣಿಯು ಪುರುಟ ಭೂಷದಿತರಣಿ ಕೋಟಿಯಂತೆ ಪೊಳೆವ ಶರಧಿನಾಥ ಸ್ತುತಿಯ ಕೇಳಿಮರುಳುಗೊಂಡ ಹರಿಯು ವಕ್ಷಸ್ಥಳದೊಳಿಟ್ಟು ಸಾಕುತಿಹನು 1 ಕರವ ಪಿಡಿದನುಹರನ ಧನುವ ಮುರಿದು ಸರಯೂನಲ್ಲಿ ಸುಖಿಪ 2 ಮಂದಗಮನಿಯೋನಿ ಅಹೇಂದ್ರವಾದ ಮಂದಶಯನಿಯೊವಿದರ್ಭರಾಜನಂದ ತನುಜೆಯೋ ಸಭಕ್ತರಿಗೆ ಬಂಧಕ ಮುನಿಯೊದ್ವಂದ್ವ ಭಾಗದೊಳಗೆ ರಾಜವೃಂದ ನಿಂತು ಕಾಯುತಿರಲುಇಂದಿರೇಶನ ಪಾಣಿಪಿಡಿದು ಸುಂದರಾಂಗಿ ಮದುವೆಯಾದ 3
--------------
ಇಂದಿರೇಶರು
ಏನು ತಿಳಿವುದೋ ಮೂರ್ಖರಿಗೇನು ತಿಳುವುದೋತಾನೇ ತಾನಾದ ತತ್ವವ ಹೇಳಲು ತನ್ನ ತಲೆಯನು ತೂಗುತಿರುವಗೆ ಪ ಮಂಕರಿ ಹೊರುವ ಕೋಣನ ಮುಂದೇ ಮಹಾವೀಣೆಯನು ಹಿಡಿದುಕಿಂಕಿಣಿ ಕಿಣಿ ಕಿಣಿ ಎಂದು ಬಾರಿಸೆ ತಿಳಿಯುವುದೇಓಂಕಾರದ ಮಹಿಮೆಯನು ಒಲಿದು ಹಿರಿಯರು ಹೇಳುತಿರಲುತಂಕದಿ ಕೇಳುತ ಹೋ ಹೋ ಎಂದು ತಲೆಯನು ತೂಗುವರಿಗೆ1 ಮೂಟೆಯ ಹೊರುವ ಕತ್ತೆಯ ಮೂಗಿಗೆ ಮಘ ಮಘಿಪ ಕಸ್ತೂರಿಯ ಹಚ್ಚಲುಗಾಳಿಯ ಪರಿಮಳ ಸುಗಂಧಗಳ ಅದು ತಿಳಿಯುವದೇಲಾಲಿಪ ಬ್ರಹ್ಮಾನಂದದ ಲಕ್ಷಣ ಲಕ್ಷ್ಯವ ಹಿರಿಯರು ಹೇಳುತಿರಲು ಕೇಳಿದಾಗಲೇಹೋ ಹೋ ಎನ್ನುತ ತಲೆಯ ತೂಗುವವರಿಗೆ 2 ಸತ್ಯಾನಂದರೆ ಅವರೇ ಗುರುಗಳು ಸತ್ಯ ಸಂಧರು ಅವರೇ ಭಕ್ತರುಸತ್ಯ ಜ್ಞಾನವ ತಿಳಿಯಲಿಕೆ ಅವರೇ ಯೋಗ್ಯರುಸತ್ಯವಸ್ತು ಚಿದಾನಂದ ಸಾಕ್ಷಾತ್ ರೂಪವೇ ಹೇಳುತಿರಲುಚಿತ್ತದಿ ಕೇಳು ಹೋ ಹೋ ಎಂದು ತಲೆಯ ತೂಗುವರಿಗೆ 3
--------------
ಚಿದಾನಂದ ಅವಧೂತರು
ಏನು ದುಷ್ಕøತ ಫಲವೋ ಸ್ವಾಮಿ ಶ್ರೀನಿವಾಸನೆ ಪೇಳೋ ಪ. ಏನು ಕಾರಣ ಭವಕಾನನದೊಳು ಬಲು ಹಾನಿಯಾಗಿ ಅವಮಾನ ತೋರುವದಿದು ಅ.ಪ. ಹಂಬಲವೂ ಹಿರಿದಾಯ್ತು ಎನ್ನ ನಂಬಿಕೆಯೂ ಕಿರಿದಾಯ್ತು ಸಂಭ್ರಮವಲ್ಲ ಕುಟುಂಬಿಗೆರೆನ್ನಯ ಹಂಬಲಿಸರು ನಾನೆಂಬುವದೇನಿದು 1 ಹಣವಿಲ್ಲಾ ಕೈಯೊಳಗೆ ಸ- ದ್ಗುಣವಿಲ್ಲಾ ಮನದೊಳಗೆ ಜನಿತಾರಭ್ಯದಿ ತನುಸುಖವಿಲ್ಲೈ ಘನದಾಯಾಸವ ಅನುಭವಿಸುವದಾಯ್ತು 2 ಪೋದರೆಲ್ಲ್ಯಾದರು ಅಪ- ವಾದವ ಪೇಳ್ವರು ಜನರು ಆದರವಿಲ್ಲೈ ಶ್ರೀಧರ ತವ ಚರ- ಣಾಧಾರವೆ ಇನ್ನಾದರೂ ಕೃಪೆಯಿಡು 3 ಗೋಚರವಿಲ್ಲೆಲೊ ರಂಗ ಎನ್ನ ಪ್ರಾಚೀನದ ಪರಿಭಂಗ ನಾಚಿಕೆ ತೋರದ ಯಾಚಕತನವ- ನ್ನಾಚರಿಸುವ ಕಾಲೋಚಿತ ಬಂದುದು 4 ಸೇರಿದೆನೆಲೊ ರಂಗ ಕೃಪೆ ದೋರೆನ್ನೊಳ್ ನರಸಿಂಗ ಭಾರವೆ ನಿನ್ನ ಮೈದೋರಿ ರಕ್ಷಿಸುವುದು ನಾರದನುತ ಲಕ್ಷ್ಮೀನಾರಾಯಣ ಗುರು 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಏನು ದುಷ್ಕøತ ಫಲವೋ ಸ್ವಾಮಿ ಶ್ರೀನಿವಾಸನೆ ಪೇಳೋ ಪ. ಏನು ಕಾರಣ ಭವಕಾನನದೊಳು ಬಲು ಹಾನಿಯಾಗಿ ಅವಮಾನ ತೋರುವದಿದು ಅ.ಪ. ಹಂಬಲವೂ ಹಿರಿದಾಯ್ತು ಎನ್ನ ನಂಬಿಕೆಯೂ ಕಿರಿದಾಯ್ತು ಸಂಭ್ರಮವಲ್ಲ ಕುಟುಂಬಿಗೆರೆನ್ನಯ ಹಂಬಲಿಸರು ನಾನೆಂಬುವದೇನಿದು 1 ಹಣವಿಲ್ಲಾ ಕೈಯೊಳಗೆ ಸ- ದ್ಗುಣವಿಲ್ಲಾ ಮನದೊಳಗೆ ಜನಿತಾರಭ್ಯದಿ ತನುಸುಖವಿಲ್ಲೈ ಘನದಾಯಾಸವ ಅನುಭವಿಸುವದಾಯ್ತು 2 ಪೋದರೆಲ್ಲ್ಯಾದರು ಅಪ- ವಾದವ ಪೇಳ್ವರು ಜನರು ಆದರವಿಲ್ಲೈ ಶ್ರೀಧರ ತವ ಚರ- ಣಾಧಾರವೆ ಇನ್ನಾದರೂ ಕೃಪೆಯಿಡು 3 ಗೋಚರವಿಲ್ಲೆಲೊ ರಂಗ ಎನ್ನ ಪ್ರಾಚೀನದ ಪರಿಭಂಗ ನಾಚಿಕೆ ತೋರದ ಯಾಚಕತನವ- ನ್ನಾಚರಿಸುವ ಕಾಲೋಚಿತ ಬಂದುದು4 ಸೇರಿದೆನೆಲೊ ರಂಗ ಕೃಪೆ ದೋರೆನ್ನೊಳ್ ನರಸಿಂಗ ಭಾರವೆ ನಿನ್ನ ಮೈದೋರಿ ರಕ್ಷಿಸುವುದು ನಾರದನುತ ಲಕ್ಷ್ಮೀನಾರಾಯಣ ಗುರು5
--------------
ತುಪಾಕಿ ವೆಂಕಟರಮಣಾಚಾರ್ಯ
ಏನು ಧನ್ಯರೋ ಜಗದಿ ಎಂಥ ಮಾನ್ಯರೋ | ಮೌನಿ ಶ್ರಿ ರಘುಪ್ರೇಮತೀರ್ಥರು ಪ ಕಲಿಯುಗದಿ ಕÀ್ರತುಗೈದ ಇಳಿಯ ಜನಕ ಸಾಧ್ಯವೆಂದು ಕುಲಿಶಪಾಣಿಯಂತೆ ತೋರ್ಪರು 1 ಧೂರ್ತರಿಂದ ದೂರವಿದ್ದು | ಸ್ವಾರ್ಥರಹಿತರಾಗಿ | ಸಕಲ ತೀರ್ಥಕ್ಷೇತ್ರ ಚರಿಸಿ ಜನ್ಮ ಸಾರ್ಥಕೆನಿಸಿದ ಯತಿಯು 2 ಸದನ ತೃಣಸಮಾನವೆನಿಸಿ ಮುದದಿ | ವಿನಯಶೀಲ ದ್ವಿಜರಿಗಿತ್ತು ಮುನಿಯೆನಿಸಿ ವಿರುಕ್ತರು 3 ಚತುರಾಶ್ರಮ ವ್ರತದಿ ನೇಮ ಸತತಾ ಚರಿಸುತಲಿ | ಶಿಷ್ಯರಾದಿಗೆ ವ್ರತಬೋಧವೃಷ್ಟಿ ಹಿತದಿಗರೆದು ಪೊರೆವ ಯತಿಯು 4 ಶ್ರೀಮಧ್ವಸುಮತವಾರಿಧಿ ಸೋಮನೆಂದೆನಿಸಿ | ಜಿತ ಕಾಮರಾಗಿ ಕಠಿಣ ತಪದಿ | ಶ್ರೀ | ಶಾಮಸುಂದರನ ವಲಿಸಿದವರು 5
--------------
ಶಾಮಸುಂದರ ವಿಠಲ
ಏನು ಪವಮಾನಿ | ಏನು ಪವಮಾನಿ | ಈ ನಿಧಿಯಲಿ ಬಂದು ನಿಂದ ಕಾರಣ | ಮಾಣದೆ ಪೇಳು ನಿ | ದಾನದಿಂದಲಿ | ಮಾನಸದಲಿ | ದಾನವಾರಿಯ | ಧ್ಯಾನ ಮಾಡುವ ಜಾಣ ಜಗದ ಪ್ರಾಣ ಸುಂದರಾ | ನಾನಾ ಮಹಿಮಾ ಗುರುವೆ ಪ ಕೇಸರಿನಂದನ ಪಾಶವಿನಾಶ ನಿರ್ದೋಷ | ಭಾರತೀಶ ಈಶಾ | ಶೇಷಾದ್ಯರಿಗುಪದೇಶದ ಕರ್ತಾ | ಲೇಸು ಸದ್ಗುಣಗಣ ಕೋಶ ಸರಸಿಜಾಸನ ಪದವಿಗೆ ಸೇರುವಾತಾ || ದೇಶದೊಳು ಬಲುಭೂಷಣ ಪಾಕಶಾಸನ ಶರದ ಶರೀರ | ದಾಶರಥಿ ಪಾದಾಸರವಿಡಿ | ದೇಸು ಬಗೆಯಲಿ | ಮೋಸ ಪೋಗದಾಯಾಸಬಡದಲೆ | ಮೀಸಲ ಮನ ಸೂಸು ವನರಾಸಿ ಲಂಘಿಸಿ 1 ಪರಿಸರ ಪೋಗಲಾಸಮಯದಲ್ಲಿ | ಭಾಸುರ ಲಂಕೆ | ಯ ಶೋಧಿಸಿದನಾ ಗೋ | ಸಾಸಿರವಿತ್ತು ಕೂಸಿನಂದದಲಿ || ಭಾಷಿಯನಾಡಿ ಪದ್ಮಾಸನಿಗೆ ಸಂ | ಸವರಿ ಫಲ ಸವಿದು ಖಳನ ನಗುತ | ನಾಶಗೊಳಿಸಿದ ಸಮರ್ಥನೆ 2 ಹಿಂದೆ ಪ್ರಳಯದಲ್ಲಿಂದಿರೇಶನು ಸುರ್ವೃಂದ ಉದರದೊಳು | ಪೊಂದಿಟ್ಟುಕೊಂಡು ಆಗ | ಅಂದು ನೀನೊಬ್ಬನೇ ಮಂದನಾಗದೆ ನಯದಿಂದಲಿ ಎಚ್ಚತ್ತು | ಪೊಂದಿಕೊಂಡು ಇದ್ದೆ | ಇಂದು ಕದನದೊಳು ಇಂದ್ರಜಿತನು ಕರದಿಂದ ಸೆಳೆದÀ ಶರ | ದಿಂದಲಿ ಸಿಗಿಬಿದ್ದು | ಬಂಧಿಸಿಕೊಂಡಂಜಿನಿಂದಂತೆ ಮೈದೆಂದಿಗಿಲ್ಲದಂತೆ ನಂದವ ತೋರಿದೆ ಇಂದು ಮೌಳಿಯ ಪೊಂದಿದದಶ | ಕಂಧರನ ಮೊಗ ಮುಂದೆ ಭಂಗಿಸಿ | ಬಂದು ಗುದ್ದಿಲಿನೊದ್ದನು ಅವನಿರೆ | ಮಂದಹಾಸದಲಿಂದ ನಗುತ 3 ಪುರವನುರುಹಿ ಅಸುರರ ಸದೆದು ತೀ | ವರದಿಂದ ಶರಧಿಯ ಮರುಳೆ ಹಾರಿ ಬಂ | ದುರವಣಿಯಿಂದ ಶ್ರೀ | ಹರಿ ಚರಣಕ್ಕೆರಗಿ ಪೊಡಮಟ್ಟು | ಕರವನೆ ಮುಗಿದು | ಚೂಡಾಮಣಿ ಇಡೆ ಮುಂದೆ ವಿವರಿಸಿದೆ | ರಿಪುಗಳಾ | ಗರದ ವಿಸ್ತಾರ | ಸುರರು ಭಾಪುರೆ ಎಂದಂಬರದಲಿವಾದ್ಯ | ಬೆರೆದಲ್ಲಿ ಮೊರೆಯಾಗಿ ಅರಮರೆಯಿಲ್ಲದೆ | ತರಿಸಿ ಮಾರ್ಗವಸರದಲಿ ವಿಸ್ತರಿಸಿ | ಧುರದೊಳಗರಿಗಳಿಂದಲಿ ಮರಣವಾದವರನ ಎಬ್ಬಿಸಿ 4 ಪಾತಾಳದೊಳು ಹತ್ತು ತಲೆಯವನಿರಲು ಕಾತುರದಿಂದ ಹೋ ಮಾತುರಕಾರ್ಚಿಸೆ | ಮಾತು ಮುಂಚದ ಮುನ್ನ ಭೀತಿ ಇಲ್ಲದೆ ಪೋಗಿ | ಪಾತಕನವಧಾನ | ದಾತಗೆ ದಿವ್ಯವರೂಥವೆಂದೆನಿಸಿ ವಿ| ಧೂತ ರಾವಣನ ವಿ | ಪಾತನ ಗೈಸಿದೆ | ಪ್ರೀತಿ ಬಡಿಸಿ ನಿಜಾರಾತಿ ವಿಭೀಷಣಗೆ ತಪ್ಪದೆ ಲಂಕಾ | ನಾಥನ ಮಾಡಿ ನೀ | ರಘುನಾಥನ ಯಡೆ ನೀ ತೆಗೆದುಂಡೆ | ಶ್ರೀ ತರುಣೇಶ ವಿಜಯವಿಠ್ಠಲನ ದೂತಾ ಹನುಮಾ 5
--------------
ವಿಜಯದಾಸ
ಏನು ಪೇಳಲಿ ನಿನ್ನ ತನಯನ ಚರ್ಯವ ಮಾನಿನಿಮಣಿಯೆ ಯಶೋದೆಯ ಕೇಳೆ 1 ವಾರಿಧಿಯೊಳು ಪೊಕ್ಕು ವಿಹರಿಸುವನೆ ಮತ್ತು ಭಾರಿಯಾದ ಕ್ಷಿತಿಧರೆಯನೆ ಹೊರುವನೆ 2 ಕುಂಭಿಣಿಯನೆ ಅತಿ ಸಂಭ್ರಮದಲ್ಲಿ ತಂದು ಸ್ತಂಭವ ಭೇದಿಸಿ ಸಂಭವಿಸಿದನಲ್ಲಿ 3 ಮೂರು ಹೆಜ್ಜೆಯ ಭೂಮಿ ಬೇಡಿದನೇ ಏಳು ಮೂರು ಬಾರಿ ನೃಪತಿಗಳ ಭೇದಿಸಿದನು 4 ವಾನರರನು ಸೇರಿ ಜಾನಕಿಯನೆ ತಂದೆ ಮಾನವ ಕುಲಕೆ ಸನ್ಮಾನವ ತಂದನೆ 5 ಘೋರ ಪೂತನಿ ಪ್ರಾಣ ಹಾರ ಮಾಡಿದ ಜಾರ ಚೋರತನದಿ ಶೂರನಾದನೆ ನೋಡೆ 6 ಬತ್ತಲೆ ನಿಂತನೆ ಸಸ್ತಿಯನೇರಿದ ಮತ್ತು ನಾಮಗಿರಿ ನರಹರಿ ಇವನೆ 7
--------------
ವಿದ್ಯಾರತ್ನಾಕರತೀರ್ಥರು
ಏನು ಪೇಳಲಿ ಹರಿಯ ಚರ್ಯ ಎಂತು ಪೊಗಳಲಿ ಪ ಗಾನಲೋಲ ಜ್ಞಾನಪೂರ್ಣ ಶ್ರೀನಿವಾಸನ ಅ.ಪ ಭಾರ ಪೊತ್ತನ ಖಳನ ಮಡುಹಿ ವೇದರಾಶಿ ಅಜಗೆಯಿತ್ತನ 1 ಕರದಿಕೊಡಲಿ ಪಿಡಿದು ಅಡವಿ ಚರಿಸಿದಾತನ 2 ಪುಣ್ಯ ಮೂರುತಿ ಕಲ್ಕಿ ಗುರುರಾಮವಿಠಲನ 3
--------------
ಗುರುರಾಮವಿಠಲ
ಏನು ಬಂದ್ಯೋ ಜೀವವೆ ಶರೀರದೊಳು ವ್ಯರ್ಥವಾಗಿಪ. ದಾನಧರ್ಮ ಮಾಡಲಿಲ್ಲ ದಯಬುದ್ಧಿ ಪುಟ್ಟಲಿಲ್ಲಜ್ಞÁನವರಿತು ಹರಿಪೂಜೆ ಮಾಡಲಿಲ್ಲಜ್ಞಾನಿ ಸುಜ್ಞಾನಿಗಳಸನ್ನಿಧಿಯಲ್ಲಿರಲಿಲ್ಲ ನಿರ್ಮಲಮನದಲಿ ಒಂದುದಿನವಿರಲಿಲ್ಲ 1 ಸತಿ ಪುರುಷರು ನಾವು ಸಂತೋಷದಿಂದಿರಲಿಲ್ಲಯತಿಯಾಗಿ ತೀರ್ಥಯಾತ್ರೆ ಮಾಡಲಿಲ್ಲಶ್ರುತಿಶಾಸ್ತ್ರ ಪುರಾಣಗಳ ಕಿವಿಗೊಟ್ಟು ಕೇಳಲಿಲ್ಲಮೃತವಾಗೋಕಾಲ ಬಂತು ಬರಿದೆ ಮುಪ್ಪಾದೆನಲ್ಲ 2 ಉಂಡು ಸುಖಿ ಅಲ್ಲ ಉಟ್ಟು ತೊಟ್ಟು ಪರಿಣಾಮ ಇಲ್ಲಕೊಂಡು ಕೊಟ್ಟು ಹರಿಸೇವೆ ಮಾಡಲಿಲ್ಲದುಂಡು ನಾಯಿಯಂತೆ ಮನೆಮನೆಗಳ ತಿರುಗಿ ಕೆಟ್ಟೆಮೊಂಡಜೋಗಿಗುಣಂಗಳ ಬಿಡಿಸೊ ಹಯವದನ 3
--------------
ವಾದಿರಾಜ