ಒಟ್ಟು 4552 ಕಡೆಗಳಲ್ಲಿ , 126 ದಾಸರು , 2958 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಿರವದ್ಯ ಪ ಸದ್ಗುಣಪೂರ್ಣ ನೀನೇನೊ ಮೂಢ ಅ.ಪ ಬ್ರಹ್ಮಜಿಜ್ಞಾಸದ ಕ್ರಮವ | ನಿರ- ಸಮ್ಯಕ್ ಶೋಧಿಸದೇ ಅಹಂ ಬ್ರಹ್ಮಾಸ್ಮಿ ಎಂಬುವ ಆಮ್ನಾಯ ವಾಕ್ಯಕೆ ಅರ್ಥವ ತಿಳಿಯದೆ 1 ಕಾಕುಮಾಡುತಲರ್ಥ ಪೇಳ್ವುದಧರ್ಮ ಏಕವಾವುದು ಇನ್ನು ಏಕವಾವುದು ಎಂದು ನೀಕಳವಳಿಸುತ ನಿಜತತ್ವವರಿಯದೆ 2 ಆತ್ಮನಾತ್ಮಗಳೆಂದರೇನೊ | ಪರ- ಮಾತ್ಮ ಜೀವಾತ್ಮರೊ ಜೀವದೇಹಗಳೊ ಸ್ವಾತ್ಮಾನುಸಂಧಾನದಿಂದಲಿ ನೋಡ- ಧ್ಯಾತ್ಮ ವಿದ್ಯಾಭ್ಯಾಸ ಮಾಡದೆ ಬಾಯೊಳು 3 ರವಿ ಗಣಪತಿ ಶಿವ ಶಕ್ತಿ | ಭೈ- ರವ ವಿಷ್ಣು ಎಂಬುವ ಷಣ್ಮತಯುಕ್ತಿ ಎವೆ ಮಾತ್ರ ಸ್ವಾತಂತ್ರ್ಯವಿಲ್ಲ ಕೇಳ್ ಸರ್ವಶ- ಬ್ದವುಯಾವನಲ್ಲಿ ಸಮನ್ವಯವರಿಯದೆ 4 ಜೀವ ಜೀವರಿಗೆಲ್ಲ ಭೇದ | ವಿದುಸ್ವ ಭಾವವಾಗಿರುವುದು ಯಾತಕೀವಾದ ಜೀವರೂಪದಿ ಸರ್ವಜೀವರೊಳಗಿದ್ದು ದೇವಸಕಲ ಕರ್ಮಗಳ ಮಾಡಿಸುವನು 5 ಕರ್ಮವೆಂಬುದು ಅವನಿಗೆ ಲೋಪವಿಲ್ಲ ನಿರ್ಮಲ ಸಚ್ಚಿದಾನಂದ ಬ್ರಹ್ಮ ಎಂದು ನೀನೆ ಪೇಳುವೆಯಲ್ಲ ನಿನಗೆ ನಿಜವಿಲ್ಲ 6 ಸೂರ್ಯ | ಚಂದ್ರ ಕಿನ್ನರ ಸಿದ್ಧ ಸಾಧ್ಯ ನರತಿರ್ಯಕ್ ಪಶುಪಕ್ಷಿ ಕೀಟಾದಿ ನಾಮಗಳು ಪರಮಾತ್ಮನಲಿ ಸಮನ್ವಯವರಿಯದೆ 7 ಮಾಯಾ ಪ್ರಪಂಚವಿದೆನ್ನುತ | ನಿ- ಮಾಯೆಯಧಿಷ್ಠಾನದೊಳನಂತ ಜೀವನಿ- ಕಾಯವು ಗುಣಗಳಿರುವ ಮರ್ಮವರಿಯದೆ 8 ಸಾರ ಭೇದವಬದ್ಧ ಅಭೇದ ನಿಶ್ಚಯವೆಂದು ವಾದಿಸುವುದಕೇನಾಧಾರ ನಿನಗುಂಟೊ 9 ಜೀವಬ್ರಹ್ಮೈಕ್ಯವೆ ಮುಕ್ತಿ | ವೇ- ದಾವಳಿಗಳ ಪರಮಾರ್ಥದ ಉಕ್ತಿ ಜೀವನಿಂದೇನಾಗುವುದೆಂಬುದರಿಯದೆ 10 ದ್ವಾಸುಪರ್ಣವೆಂಬುವುದಕೆ | ವಿಷ- ಯಾಸಕ್ತ ಜೀವ ಆತ್ಮನು ಸಾಕ್ಷಿಯದಕೆ ನೀಸರ್ವೋತ್ತಮನಾದರೆ ಇನ್ನು ಮಹದಾದಿ ಈ ಸೃಷ್ಟಿ ಸ್ಥಿತಿಲಯವೇತಕೆ ತಿಳಿ ಜೋಕೆ 11 ಅಂಧ ಪರಂಪರವಾದ | ಬಿಟ್ಟು ಚಂದಾಗಿ ಪರಿಶೋಧಿಸು ಭÉೀದಾಭÉೀದ ತಂದೆತಾಯಿಗು ಮಗನಿಗೂ ಎಷ್ಟು ಭÉೀದ ಆ- ಪರಿ ತಿಳಿದರೆ ನಿರ್ವಾದ 12 ಪೂರ್ವೋತ್ತರ ವಿರೋಧವಿಲ್ಲ | ದಂತೆ ಸರ್ವಶೃತಿಗಳರ್ಥ ತಿಳಿದು ನುಡಿಸೊಲ್ಲ ಗರ್ವವೇತಕೆ ನಿನಗಿದರೊಳೇನಿಲ್ಲ ನೀ ಸರ್ವಜ್ಞನೊ ಕಿಂಚಜ್ಞನೊ ನೋಡು ದೃಢಮಾಡು 13 ಯೋಗ ಒದಗಿದಾಗ ಒಂದೆ ಎಂಬುವರೆ ಈಗೇನು ಆಗೇನು ಇಲ್ಲೇನು ಉಂಟೆ ನಾ- ವಾಗಲು ಜೀವರಿಗೆ ಹರಿಕರ್ತನಾಗಿರೆ 14 ಕಾಲಕರ್ಮ ಸ್ವಭಾವ ಜೀವ | ಹರಿಯ ಆಲಸ್ಯ ಬಿಟ್ಟು ಅವನಿಗೆ ದಾಸನಾಗದೆ 15 ಆಲೋಚಿಸಿದರರ್ಥ ನಿಜವಾಗಿ ತಿಳಿಯದೆ 16 ಜ್ಞಾನವೆ ನಾನು ಕರ್ಮವೆ ಮಿಥ್ಯವೆಂದು ನೀನಾಡುವುದಕೇನು ನೆಲೆ ಮೂಲ ಯಾವುದು ಸ್ವಾನುಭವವೋ ಶಾಸ್ತ್ರವೊ ಮನಕೆ ತೋರಿದ್ದೊ 17 ಹೋಮ ಜಪವು ಸ್ನಾನ ದಾನ | ನಿತ್ಯ ಭೃತ್ಯ ನ್ಯಾಯವರಿಯದವನು ಶುದ್ಧ ತತ್ವಾರ್ಥಿ ಎನಿಸುವನೆ 18 ಕರ್ತನು ನೀನೆಂದು ಭೃತ್ಯನು ನಾನೆಂದು ತೀರ್ಥಪಾದನ ದಿನದಿನದಿ ಸಂಸ್ತುತಿಸದೆ 19 ಪಾದ ವನಜಕೊಪ್ಪಿಸಿ ಸಂಸಾರದ ಕರಕರೆಯ ಮನದಿ ಲೆಕ್ಕಿಸದೆ ಚಿಂತನಗೈದು ಸರ್ವತ್ರ ಘನಮಹಿಮನ ದಿವ್ಯಗುಣರಾಶಿ ಪೊಗಳದೆ 20 ಹೊರಗಣ್ಣ ಮುಚ್ಚಿ ಮೋದದಲಿ | ಒಳ- ಗಿರುವಾಧಾರಾದಿ ಚಕ್ರಗಳ ಸ್ಥಾನದಲಿ ಸರಸಿಜಭವ ಶಂಕರಾದಿ ಸುರರ ನೋಡಿ ತರತಮವಾಗಿ ಮುಂದಿನ ಪರಿಯ ತಿಳಿಯದೆ 21 ಮಂಗಳ ಮೂರ್ತಿಯ ನೋಡಿ ಕೊಂಡಾಡಿ ಅ- ನಂಗಗೆ ಸಿಲುಕದೆ ಅರ್ಥಿಯ ಪೊಂದದೆ 22 ಎಪ್ಪತ್ತೆರಡು ಸಹಸ್ರನಾಡಿ | ಗಳೊ- ಳೊಪ್ಪುವ ಭಗವದ್ರೂಪಗಳನು ನೋಡಿ ಅಪ್ಪ ನೀನೆಂದು ಭಕ್ತಿಯಲಿ ಕೊಂಡಾಡಿ ಪುನ- ರಾವರ್ತಿರಹಿತ ಶಾಶ್ವತ ಸುಖಿಯಾಗನೆ 23 ವಿಪರೀತ ಮತಿಪುಟ್ಟದಂತೆ | ಧ್ಯಾನ- ಗುಪಿತವಾಗಿರುತ ಜನರಿಗೆ ಹುಚ್ಚನಂತೆ ಅಪವರ್ಗಾಪೇಕ್ಷಯಿಂ ನಿಷ್ಕಾಮಿಯಾಗದೆ24 ಆಪಾದಮಸ್ತಕ ದೇಹ | ದಿಸು ರಾಪದಜನಕ ಶ್ರೀಗುರುರಾಮವಿಠಲ ವ್ಯಾಪಾರವೆಲ್ಲ ಮಾಡಿಸುವನೆಂದರಿತರೆ ಸಾಫಲ್ಯನಾಗಿ ಜೀವನು ಧನ್ಯನಾಗುವ 25
--------------
ಗುರುರಾಮವಿಠಲ
ನಿರುತದಿ ಭಜಿಪೆನಾ ಭರತನ ರಾಣಿಯೇ ಭಾರತಿಯೇ ಪ ಗುರುವರಂತರ್ಗತ ಹರಿಭಕ್ತಿ ಪಾಲಿಸೇ ಭಾರತಿಯೇ ಅ.ಪ ಕಾವೋದು ಬಾಲನ ಸೇವೆ ನೀಕರಿಸದೆ ಭಾರತಿಯೇ ಶಿವಮುಖ ಸುರ ಸಂಸ್ತವಕೆ ಸುಪ್ರೀತಳೆ ಭಾರತಿಯೇ 1 ಕಾಳೀದ್ರೌಪದಿ ಶಿವಕನ್ಯಳೆಂದೆನಿಸಿ ಭಾರತಿಯೇ ನಳನಂದಿನಿ ಮನ ಕೊಳೆಯ ತೊಳೆಯಬೇಕೇ ಭಾರತಿಯೇ 2 ವಂದಿಪೆ ನಿನಗಿಂದ್ರೇಶನಳೆಂದೆನಿಸಿದಿ ಭಾರತಿಯೇ ಕಂದನ ಕುಂದುಗಳೊಂದೆಣಿಸದೆ ಕಾಯೇ ಭಾರತಿಯೇ 3 ಕಾಲಾಭಿಮಾನಿಯೆ ಶೈಲಜೆ ಶ್ಯಾಮಲ ಭಾರತಿಯೇ ವಾಲಗ ಕೈಕೊಂಬೆ ಭಾರತಿಯೇ 4 ಹರಿಯ ಹಿರಿಯ ಸೊಸಿ ಪರಮ ಪದಕೆ ಬರುವಿ ಭಾರತಿಯೇ ಕರುಣಾದಿ ಭಾರತಾದ್ಯರ್ಥವರುಹೆ ನಿತ್ಯಾ ಭಾರತಿಯೇ 5 ಯೋಗಿ ವಿನುತ ಚರಣಳೆ ಎನ್ನ ಭಾರತಿಯೇ ಹೀನ ಬುದ್ಧಿಯ ಕಳಿ ಜ್ಞಾನಮಾರ್ಗವ ತೋರೆ ಭಾರತಿಯೇ6 ಮಾನಾಭಿಮಾನ ನಿನ್ನಾಧೀನ ಎನಗೆ ನೀ ಭಾರತಿಯೇ ಪಾದ ಮನದಿ ತೋರಿಸೇ ನಿತ್ಯಾ ಭಾರತಿಯೇ 7
--------------
ಪ್ರದ್ಯುಮ್ನತೀರ್ಥರು
ನಿರ್ಜರ ಸಾರ್ವ ಭೌಮಾ ದನುಜಕುಲಭೀಮಾ ಭೀಮಾ ರಘು ಸದ್ವಂಶದೊಳು ದ್ದಾಮಾ ಕಾದುಕೋ ನಿನ್ನ ಭಕ್ತ ಸ್ತೋಮ ಮಂಗಳನಾಮ ಹನುಮ ತ್ಪ್ರೇಮಾತಮ ಸೀತಾ ಮನೋಭಿರಾಮ ಪ ಸರಸಿಜೋದ್ಭವನ ಮಂದಿರದೊಳರ್ಚನೆಗೊಂಡು ನಿರುತಾ ಪಾವನತರ ಚರಿತಾ ಸರ್ವದೇವರ ದೇವ ಇಷ್ಟಾಕರ ರಸನ್ವಯ ನೃ ಪರಕರವಾರಿರುಹ ಪೂಜಿತನಾಗಿ ದಶರಥಾ ನರಸಿ ಜಠರದಿ ಜನಿಸಿ ಮೆರೆದಿಹ ರಾಮಾ 1 ಗಾಧಿನಂದನನ ಸುಮೇಧಾ ರಕ್ಷಿಸಿದಾ ಗಾಧನಂದ ಬಲಬೋಧಾ ಮೇದಿನಿ ಜಾತಳನೊಲಿಸಲು ನೀಲ ಪ ಯೋಧರ ಶಾಮಲ ಸುಮನಸ ವಿ ರೋಧಿ ಲೋಕಮಯ ಸದೆದ ರಘುರಾಮಾ 2 ಚತುರವಿಂಶತಿ ದಶಶತ ಸಹಸ್ರ ಜಿತಾದ್ಯಮಿತಾ ಆದ್ಯಮಿತ ರೂಪ ಜಗನ್ನಮಿತಾ ಅತುಳ ಭುಜಬಲ ರಾವಣನ ಸಂ ತತಿ ಸವರಿ ಲಂಕಾಧಿಪತ್ಯ ನತ ವಿಭೀಷಣಗಿತ್ತಾ ವರದೇಂದ್ರ ಯತಿ ವರದ ಜಗನ್ನಾಥ ವಿಠ್ಠಲ ರಾಮಾ 3
--------------
ಜಗನ್ನಾಥದಾಸರು
ನಿರ್ಮಲ ಹೃದಯ ಮಂಟಪದೊಳಗೆ ನಿಶ್ಚಲ ಮಣಿಯಿಟ್ಟುಧರ್ಮ ಪಟ್ಟಾವಳಿಯ ಹಸೆ ಹಾಸಿಧರ್ಮ ಪಟ್ಟಾವಳಿಯ ಹಸೆ ಹಾಸಿ ಮುಕ್ತಿಯನುಕರ್ಮ ಹರೆಯರು ಕರೆದರು 1 ಪರಮ ಪುರುಷ ಬಂದು ಪರಿಣಾಮದಿ ಕುಳಿತು ಇಹನುಪರಮ ಪಾವನೆ ಹಸೆಗೇಳುಪರಮ ಪಾವನೆ ಹಸೆಗೆ ಏಳೆಂದು ಮುಕ್ತಿಯನುಪರಮ ಶಾಂತಿಯರು ಕರೆದರು 2 ನಿತ್ಯತೃಪ್ತನು ಬಂದು ನಿಜದಲ್ಲಿ ಕುಳಿತಿಹನುನಿತ್ಯ ಆನಂದೆ ಹಸೆಗೆ ಏಳುನಿತ್ಯ ಆನಂದೆ ಹಸೆಗೆ ಏಳೆಂದು ಮುಕ್ತಿಯನುನಿತ್ಯ ಸತ್ಯೆಯರು ಕರೆದರು 3 ಮಂಗಳ ಮೂರುತಿ ಬಂದು ಮಂಗಳವಾಗಿ ಕುಳಿತಿಹನುಮಂಗಳ ಮುಖಿಯೇ ಹಸೆಗೇಳುಮಂಗಳ ಮುಖಿಯೇ ಹಸೆಗೇಳು ಎಂದು ಮುಕ್ತಿಯನುಮಂಗಳ ಮುಖಿಯರು ಕರೆದರು 4 ರೂಪ ರಹಿತನು ಬಂದು ರೂಪವಾಗಿ ಕುಳಿತಹನುರೂಪ ಮಹಾ ರೂಪೇ ಹಸೆಗೇಳುರೂಪ ಮಹಾ ರೂಪೇ ಹಸೆಗೇಳು ಎಂದು ಮುಕ್ತಿಯನುರೂಪವತಿಯರು ಕರೆದರು 5 ಅಚ್ಯುತನೆ ತಾ ಬಂದು ಅಚ್ಚಾರಿಯಲಿ ಕುಳಿತಿಹನುಅಚ್ಯುತ ರೂಪಳೆ ಹಸೆಗೇಳುಅಚ್ಯುತ ರೂಪಳೆ ಹಸೆಗೇಳೆಂದು ಮುಕ್ತಿಯನುನಿಶ್ಚಿತ ಮತಿಯರು ಕರೆದರು 6 ಸಾಕ್ಷಿರೂಪನೆ ಬಂದು ಸಾಕ್ಷಾತ್ತು ಕುಳಿತಿಹನುಸಾಕ್ಷಿಭೂತಳೆ ನೀನು ಹಸೆಗೇಳು ಸಾಕ್ಷಿಭೂತಳೆ ನೀನು ಹಸೆಗೇಳೆಂದು ಮುಕ್ತಿಯನುಸೂಕ್ಷ್ಮಮತಿಯರು ಕರೆದರು7 ವೇದಾತೀತನೆ ವೇದ್ಯವಾಗಿ ಕುಳಿತಿಹನುವೇದಮಾತೆಯೆ ನೀನು ಹಸೆಗೇಳುವೇದಮಾತೆಯೆ ನೀನು ಹಸೆಗೆ ಏಳೆಂದು ಮುಕ್ತಿಯನುವೇದಸ್ಮøತಿಯರು ಕರೆದರು8 ಜ್ಯೋತಿ ಚಿದಾನಂದನೆ ಬಂದು ಜೋಕೆಯಲಿ ಕುಳಿತಿಹನುಜ್ಯೋತಿ ಪ್ರದೀಪೆಯೇ ಹಸೆಗೇಳುಜ್ಯೋತಿ ಪ್ರದೀಪೆಯೇ ಹಸೆಗೇಳು ಏಳೆಂದು ಮುಕ್ತಿಯನುಜ್ಯೋತಿರ್ಮತಿಯರು ಕರೆದರು 9
--------------
ಚಿದಾನಂದ ಅವಧೂತರು
ನಿಲಯ ಐಕೂರು ಗ್ರಾಮಾಲಯ | ಸ್ತಂಭೋಧ್ವವ ದೇವ ನಾಮಧೇಯ ಧ್ವಯಭಾರ್ಯ ಸುಮನಸಪ್ರಿಯ ಸದ್ಭಕ್ತಾರ್ತಿವಿದೂರ ವಿಮಲ ಹೃದಯ ಅತ್ಯಂತ ಕರುಣಾಮಯ | ಅಸ್ಮದ್ ಸದ್ಗುರುವರ್ಯ ನಿತ್ಯ ಸನ್ಮಂಗಳ 1 ಸಾರೋದ್ಧಾರ ಸಂಗೀತ ಭಾರತಿಯುತ ವೇದಾರ್ಥ ಸಂಪೂರಿತ | ಸಹ್ಲಾವಂಶಜ ದಾಸವರ್ಯ ವಿರಚಿತ ಶ್ರೀಶೌರಿ ಸುಕಥಾಮೃತ ಸಾರಜ್ಞಂ ಸುಶೀಲೇಂದ್ರತಿರ್ಥರ ಮಮತ ಸಂಪೂರ್ಣ ಸಂಪಾದಿತ ಅಸ್ಮದಗ ಸದ್ಗುರುವರ್ಯ ನಿತ್ಯ ಸನ್ಮಂಗಳ 2 ಅಷ್ಟಪದಲೋಷ್ಟ ಭಾವಸಮತ | ಕರತಧೀರ ಸನ್ಮಾನಿತ ಅಷ್ಟ್ಯೆಕಾಮಲ ಭಕ್ತಿ ಜ್ಞಾನ ಭರಿತ ವೈರಾಗ್ಯ ಸಂಶೋಭಿತ | ಸೃಷ್ಟ್ಯಂತರ್ಗತ ಮೂರ್ತಿ ಸತತ | ಸಂದರ್ಶನಾನಂದಿತ ನಿತ್ಯ ಸನ್ಮಂಗಳ 3 ಶೃಂಗಾರಾಂಗ ಸುನಾಮದ್ವಾದಶಧೃತ ಮುದ್ರಾಕ್ಷತಾಲಾಂಕೃತ ಕಮಲ ಜಪಿತ ಪದ್ಮಾಕ್ಷಮಾಲಾಂದ್ರಿತೆ ಇಂಗಿತಜ್ಞ ಸುಸಾಧು ಸಂಗ ಸಹಿತ ಮುಕ್ತ್ಯಂಗನಾಲಿಂಗಿತ ನಿತ್ಯ ಸನ್ಮಂಗಳ4 ತಾಪತ್ರಯದೂರ ಪಾಪರಹಿತ | ಕೋಪಾದಿಗುಣವರ್ಜಿತ | ಶಾಪಾನುಗ್ರಹಶಕ್ತ ಸುಜನಪ್ರೀತ ಸಂಸಾರ‌ಘನ ಮಾರುತ ಗೂಡಾರ್ಥ ಸಂಬೋಧಿತ ಅಸ್ಮದ್ ಸದ್ಗುರುವರ್ಯ ಈಯೋ ನೀ ನಿತ್ಯಸನ್ಮಂಗಳ 5 ಆಧ್ಯಾತ್ಮ ಸುವಿಚಾರ ಸತತ ಶೃತ್ಯರ್ಥಬಹು ಗರ್ಭಿತ | ಸತ್ಯವಲ್ಲಭ ಸತ್ಯದೇವ ಚರಿತ ವಕ್ತಾರ ಬುಧ ಸಮ್ಮತ | ನಾಡ್ಯಾಂತರ್ಗತ ಸರ್ವತೀರ್ಥ ಸ್ನಾತ | ತನ್ಮೂರ್ತಿ ಪ್ರತ್ಯಕ್ಷತ ನಿತ್ಯ ಸನ್ಮಂಗಳ 6 ಧರ್ಮಾಚಾರ ವಿಚಾರಶೀಲ ನಿರತ | ಷಟ್ಕರ್ಮ ಸಂಭೂಷಿತ | ನಿರ್ಮತ್ಸರ ಮೋಹ ದೇಹ ಮಮತ ಸುಶರ್ಮಕುಲರಾಜಿತ | ಧಮೋದರವಾತಜಾತ ಪೋತ ಜಾತಾರಿಖತಿವರ್ಜಿತ | ಅಸ್ಮಾದ್ ಸದ್ಗುರುವರ್ಯ ಈಯೋ ನಮಗೆ ಸತತ ನೀ ಸನ್ಮಂಗಳ 7
--------------
ಶಾಮಸುಂದರ ವಿಠಲ
ನಿಲ್ಲದೋ ನಿಲ್ಲದೋ ಮನವಿದು ಸಲ್ಲದೋ ಸಲ್ಲದೋ ಪ ಸ್ನಾನ ಸಂಧ್ಯಾದಿ ಮೌನ ವಿಡದು ಅನು | ಷ್ಠಾನ ಜಪವ ಮಾಡಲಿ ಕುಳಿತರೆ | ತಾನಾಗ ಹೊರಡುತಲಿ ತಿರಗÀುತ | ನಾನಾ ದುರ್ವಿಷಯದಲಿ ತಂದು ಮಹಾನಿದ್ರೆ ಒಡ್ಡುತಲಿ1 ಘಾಸಿ ಬಡುವರೆಂಬ | ದೀ ಶಾಸ್ತ್ರಗಳ ಬಲ್ಲದು ಸದ್ಗುಣ | ಧ್ಯಾಸ ವೆಂದಿಗು ಮಾಡದು ದುವ್ರ್ಯತ್ತಿ | ಹೇಸದಾ ಚರಿಸುವದು2 ಆವಗತಿಯೋ ಯೆನಗಾವ ಜನುಮವೋ | ಆವಬವಣೆಯಂಬುದು ತಿಳಿಯದು | ದೇವನೇ ಸಲಹುವದು ಮನ | ವಿವೇಕದಿ ತಿದ್ದುವದು | ಗುರು ಮಹಿಪತಿ ಸುತಗೊಲಿದು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನಿಲ್ಲು ನಿಲ್ಲೆಲೋ ನಿನ್ನ ಚಲ್ವಮೋರೆಯ ನೋಡಿ ಕಳ್ಳ ನಿನ್ನಯ ಬಿಡೆನೋ ಶ್ರೀ ಕೃಷ್ಣ ಪ ಬೆಣ್ಣೆ ಪಾತ್ರೆಯೊಳೇಕೆ ನಿನ್ನ ಕರವನಿಟ್ಟೆ ಸಣ್ಣತನವಿದಲ್ಲವೇ ನಂದಕುಮಾರ ಅ.ಪ ಕೋಮಲಾಂಗಿಯೇ ಇಂಥ ಸಾಮಾನ್ಯ ವಿಷಯದ ನೀ ಮರೆತುದು ತರವೇ ಯೋಚಿಸಿ ನೋಡು ಈ ಮೃದುವಸ್ತುವು ಕಲ್ಲು ಎದೆಯ ನಿನ್ನ ಧಾಮದಲ್ಲಿರಬಹುದೇ ಯೋಚಿಸಿ ನೋಡು 1 ನಾ ಕರುಣಾಮಯ ಲೋಕ ಸುಂದರನೆಂದು ಏಕೆ ಹೆಮ್ಮೆಯ ತೋರುವೆ ಗೋಕುಲನಾಥ ಆ ಶಕಟನ ಪುಡಿ ಮಾಡಿ ಪಾದಗಳಿಂದ ನೀ ಕೋಮಲನೆಂಬುದ ನಾ ಕಾಣೆನೇ 2 ಕೇಳಿ ಕೋಪಿಸಬೇಡ ಬಾಲನೆನ್ನನು ಎತ್ತಿ ಲಾಲನೆಯನು ಮಾಡಿದಿ ಪ್ರಸನ್ನಳು ಬಾಲೆ ನಿನ್ನಯ ಇಷ್ಟು ಸ್ಥೂಲ ಕುಚವು ತಗಲಿ ಕಾಲು ಕಠಿಣವಾಯಿತೇ ಪೇಳುವೆ ನಿಜ 3
--------------
ವಿದ್ಯಾಪ್ರಸನ್ನತೀರ್ಥರು
ನಿಲ್ಲು ಬಾರೊ ದಯಾನಿಧೆ ಪ ನಿಲ್ಲು ಬಾರೋ ಸರಿಯಲ್ಲ ನಿನಗೆ ಲಕ್ಷ್ಮೀ ವಲ್ಲಭ ಮನ್ಮನದಲಿ ಬಿಡದೆ ಬಂದು ಅ ಅತಿ ಮೃದುವಾದ ಹೃತ್ಯತ ಪತ್ರಸದನದಿ ಶಾ ಶ್ವತವಾಗಿ ಭವ್ಯ ಮೂರುತಿ ಭಕ್ತವತ್ಸಲ 1 ತನುಮನಧನದ ಚಿಂತೆಯ ಬಿಟ್ಟು ತ್ವತ್ಪದ ವನರುಹ ಧೇನಿಪೆ ಮನುಮಥನಯ್ಯ 2 ಆಶೆಪುಟ್ಟಿತು ನಿನ್ನಲ್ಲೀ ಸಮಯದಲಿ ಪಾ ರಾಶರವರದ ಪೂರೈಸು ಬಯಕೆಯ 3 ನಾನಾವ್ರತಂಗಳ ನಾನನುಕರಿಸಿದೆ ಶ್ರೀನಿಧಿ ನಿನ್ನಂಘ್ರಿ ಕಾಣಬೇಕೆನುತಲಿ4 ಯಾತರ್ಯೋಚನೆ ಮನಸೋತ ಬಳಿಕ ಪುರು ಹೂತವಂದಿತ ಜಗನ್ನಾಧವಿಠ್ಠಲರೇಯ 5
--------------
ಜಗನ್ನಾಥದಾಸರು
ನಿಷ್ಠೆಯಿಂದ ನಿಂತ ಈ ಪುಟ್ಟ ಕಪಿಯ ನೋಡೆ ಪ. ಎಷ್ಟು ಮೌನ ಧರಿಸಿದಂಥ ಪುಟ್ಟ ಕಪಿಯ ನೋಡೆ ಅ.ಪ. ವಾರಿಧಿಯ ದಾಟಿದಂಥ ಪುಟ್ಟ ಕಪಿಯ ನೋಡೆ ಹೀರಿದ ಕುರುಪರ ರಕ್ತ ಪುಟ್ಟ ಕಪಿಯ ನೋಡೆ 1 ತೂರಿದ ಅನ್ಯರ ಮತ ಪುಟ್ಟ ಕಪಿಯ ನೋಡೆ ಸಾರಿ ಹರಿ ಸರ್ವೋತ್ತಮನೆಂದ ಪುಟ್ಟ ಕಪಿಯ ನೋಡೆ2 ಶೌರ್ಯವೆಲ್ಲ ಉಡುಗಿದಂಥ ಪುಟ್ಟ ಕಪಿಯ ನೋಡೆ ಹಾರಿ ಯಂತ್ರದಲ್ಲಿ ಶಿಲ್ಕಿದ ಪುಟ್ಟ ಕಪಿಯ ನೋಡೆ 3 ಮಾನ ಉಳಿಸಿಕೊಳ್ಳಲು ಮೌನದ ಪುಟ್ಟ ಕಪಿಯ ನೋಡೆ ಧ್ಯಾನ ಮುದ್ರಾಂಕಿತದಿ ಶೋಭಿಪ ಪುಟ್ಟ ಕಪಿಯ ನೋಡೆ 4 ಯೋಗಾಸನದಿ ಪದ್ಮಾಸನವು ಪುಟ್ಟ ಕಪಿಯ ನೋಡೆ ವಾಗೀಶನ ಪದಕ್ಹೋಗುವ ತಪದ ಪುಟ್ಟ ಕಪಿಯ ನೋಡೆ 5 ವ್ಯಾಸರಿಗೊಲಿದ ವೇಷಧಾರಕ ಪುಟ್ಟ ಕಪಿಯ ನೋಡೆ ಮೋಸವೊ ಧ್ಯಾನವೊ ಅರಿಯೆ ಪುಟ್ಟ ಕಪಿಯ ನೋಡೆ 6 ಕಷ್ಟದ ಭವಕಟ್ಟು ಬಿಡಿಸುವ ಪುಟ್ಟ ಕಪಿಯ ನೋಡೆ ಕಟ್ಟಿನೊಳ ಸಿಲ್ಕಿ ಗುಟ್ಟು ತಿಳಿಸದ ಪುಟ್ಟ ಕಪಿಯ ನೋಡೆ 7 ಸಿದ್ಧ ಸಾಧನ ಬುದ್ಧಿ ಬಲಿದ ಪುಟ್ಟ ಕಪಿಯ ನೋಡೆ ಉದ್ಧಾರಕ ಪ್ರಸಿದ್ಧ ಪುರುಷ ಪುಟ್ಟ ಕಪಿಯ ನೋಡೆ 8 ಸ್ವಾಪರೋಕ್ಷಿ ಜಗದ್ವ್ಯಾಪಕನಾದ ಪುಟ್ಟ ಕಪಿಯ ನೋಡೆ ಗೋಪಾಲಕೃಷ್ಣವಿಠ್ಠಲನ ದಾಸನೀ ಪುಟ್ಟ ಕಪಿಯ ನೋಡೆ 9
--------------
ಅಂಬಾಬಾಯಿ
ನೀ ಕರುಣದಿ ಕಾಯಬೇಕೀ ವಾಕು ಪ. ಭವ ಮಡುವಿನೊಳಗಿರುವೆನು ದಡಕೆ ಸೇರಿಸು ನೀನು ಅ.ಪ. ಆರು ಕಾಯುವರಿಲ್ಲಾ ಸೇರಿದೆ ನಿನಗಲ್ಲಾದೆ ಸಂಸಾರ ಶರಧಿಯೊಳು ಈಸಲಾರೆನು ಘಾಸಿಪಡಿಸಲಾಗದು ನೀನು ಆಶಾ ತೋರಿಸಿ ಮೋಸ ಮಾಡುವದು ಇದು ತರವೇ ಗುರುವೇ 1 ಯಂದಿಗೆ ಬರುತೀಯೋ ಸುಂದರ ಮೂರುತಿಯೆ ಪಂಚ ವೃಂದಾವನ ಛಂದಾನೋಳ್ಪರಿಗೆ ಸಂದರುಶನ ಕೊಡು ಇಲ್ಲಿ 2 ಅನಾಥನು ನಾನು ಯನ್ನ ಪೊರೆವ ದಾತನು ನೀನು ಋಜುಗಣಧ್ವರಿಯೇ ಕಾಳಿಮರ್ದನಕೃಷ್ಣನ ಮರಿಯೆ 3
--------------
ಕಳಸದ ಸುಂದರಮ್ಮ
ನೀ ಮುನಿದು ಇಳೆಯೊಳಗೇ| ಸುರಮುನಿ ಜನಪಾಲನ ಮನದಲಿ ಬಂದದಿ ನೆರೆಯದೇ ಸಾರುವದೀಗ ಪ ನಿನ್ನಯ ಒಪ್ಪುವ ಮಾರ್ಗವ ನೋಡುತ| ಮುಚ್ಚನು ಕುಡಿಗಂಗಳ ಯವಿಯಾ| ಪನ್ನಗವೇಣೀ ನಿನ್ನವಿಯೋಗ ದುಗುಡದೀ| ಕುಳಿತನುಡಗಿ ಅವಯವ ಸೋಹ್ಯಾ 1 ನಿನ್ನ ಕಾಣುವೆ ನೆಂಬಂಥ ವಾಣಿಯಲೆದ್ದು ಲಜ್ಜಿಸಿ ಹಿಂದಕ ಕಾಲೆಳೆದಾ| ಘನ್ನ ವಿರಹ ತಾಪದ ದೆಶೆಯಿಂದಲಿ ಕಿಡಿ ಕಿಡಿ ಜ್ವಾಲಾಂಗನು ಆದಾ 2 ಕಪಟದಿ ಬಂದು ನೋಡುವೆ ನಿನ್ನೆನುತಲಿ ಯಾಚಕ ರೂಪತಾಳಿದನು| ವಿಪುಳಾಂಗ ತಾಳಲಾದರದೇ ನಿನ್ನ ಕುವರಿಯ ತೊರೆಂದೆ ಚಂದನು ಶರಧಿಯನು3 ದಿನದೊಳಗರಗಳಗಿ ಗಮಿಸದು ಯನುತಲಿ ವನದೋಳು ಪೋಗಿ ಹೊತ್ತುಗಳೆವಾ|ಮನಿ ಮನಿ ಪೊಕ್ಕು ಗೋಕುಲದಲಿ ನಿನ್ನನು ಅರಸುತಿಹನು ಪಾವನ ದೇವಾ4 ಕ್ಷತ್ರೀಯರು ನಿಷ್ಠುರರೆಂದು ನಿನ್ನಮ್ಯಾಲಿನ ಕೋಪದಿ ಕಂಡ ವೃತವಳದಾ| ಅತಿತವನೋಡದೇ ತಾನಾಗಿ ಬಂದನು ಹಯವೇ ನೋಡೆ ಜೀವನ ಜಗದಾ 5 ಕುವಲಯ ಲೋಚನೆ ಕೂಡಿದ ನಿಮ್ಮಿರ್ವರ ಹಾಸ್ಯದ ಮುಖವನು| ಜವದೀ ಅವನಿಲಿ ಕಂಡೆನು ಧನ್ಯಧನ್ಯಾದೆನು ಮಹಿಪತಿ ಸುತ ಪ್ರಭುವಿನ ದಯದೀ6
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನೀಚಕೃತ್ಯದ ಮನಸೇ ನಿನಗೆ ತುಸು ನಾಚಿಕಿಲ್ಲಲೆ ಹೊಲಸೆ ಪ ಪ್ರಾಚೀನಹಿರಿಯರ ಯೋಚಿಸಿನೋಡದೆ ನೀಚತನದ ಆಲೋಚನೆಯೊಳು ಬಿದ್ದು ಅ.ಪ ಕುಂತಿಸುತನ ರಥವ ನಡೆಸಿದನು ಅ ತ್ಯಂತ ಕೃಪೆಯಿಂದ ಹರಿಯು ಕಂತುಜನಕ ಭಕ್ತ ಚಿಂತಾಯಕನೆಂದು ಅಂತರಂಗದಿ ಭಜಿಸಿ ಸಂತಸ ಪಡುವಲ್ಲಿ 1 ಅಂಬರೀಷನೆಂಬುವ ನೃಪಗೆ ಮುನಿ ಡೊಂಬೆಯಿಂಬ (?) ಶಾಪಿಸಲು ಅಂಬುಜಾಸನ ಬಂದು ಬೆಂಬಲಿಸಿ ನೃಪನನ್ನು ಇಂಬಿಟ್ಟು ಪೊರೆದದ್ದು ನಂಬಿ ಭಜಿಸವಲ್ಲಿ 2 ಭೂಮಿಪ ಬಲಿಚಕ್ರನ ಬಾಗಿಲ ಕಾಯ್ದ ಪ್ರೇಮದಿಂ ರಮೆಯರಸನು ಪ್ರೇಮದಿಂ ಭಕುತರ ಕಾಮಿತವೀಯಲು ಕಾಮಧೇನೀತನೆಂದು ನೇಮದಿಂದರವಲ್ಲಿ 3 ಗೌತಮ ಮುನಿಸತಿಯು ಪಾಷಾಣವಾಗಿ ಕ್ಷಿತಿಮೇಲೆ ಎರಗಿರಲು ಕ್ಷಿತಿಜಾತೆಪತಿ ತಾನು ಅತಿಹಿತದ ಕೃಪೆಯಿಂದ ಪತಿತಗೈದವನೆಂದು ಸ್ತುತಿಸಿ ಒಲಿಸವಲ್ಲಿ 4 ಹನುಮಂತನೊಡೆಯನಾದ ಜನಕಜೆಪತಿ ವನಜಾಕ್ಷ ಶ್ರೀರಾಮನ ಘನತರಮಹಿಮೆಯ ಅನುದಿನಕೊಂಡಾಡು ಘನಮುಕ್ತಿ ಸಾಮ್ರಾಜ್ಯ ಕನಿಕರದಿಂ ಕೊಡುವ 5
--------------
ರಾಮದಾಸರು
ನೀಚನಲ್ಲವೇ ಇವನು ನೀಚನಲ್ಲವೇ ಪ ಕೀಚಕಾರಿಪ್ರಿಯನ ಗುಣವ ಯೋಚಿಸದಲೆ ಯಾಚಿಸುವÀನು ಅ.ಪ. ಶ್ರೀಕಳತ್ರನಂಘ್ರಿ ಕಮಲವೇಕಚಿತ್ತದಲ್ಲಿ ಮನೋ ವ್ಯಾಕುಲಗಳ ಬಿಟ್ಟು ಸುಖೋದ್ರೇಕದಿಂದ ಭಜಿಸದವನು 1 ಲೋಕವಾರ್ತೆಗಳಲಿ ಏಡ ಮೂಕರೆನಿಸಿ ವಿಷಯಗಳವ ಲೋಕಿಸದಲೆ ಶ್ರೀಶಗಿವು ಪ್ರತೀಕವೆಂದು ತಿಳಿಯದವನು 2 ಜನನಿ ಜನಕರಂತೆ ಜನಾರ್ದನನು ಸಲಹುತಿರಲು ಬಿಟ್ಟು ಧನಿಕರ ಮನೆಮನೆಗಳರಸಿ ಶುನಕನಂತೆ ತಿರುಗುವವನು 3 ಹರಿಕಥಾಮೃತವ ಬಿಟ್ಟು ನರ ಚರಿತ್ರೆಯಿಂದ ದ ರ್ದುರಗಳಂತೆ ಹರಟೆ ದಿವಸ ಬರಿದೆ ಕಳೆಯುತಿಪ್ಪ ಮನುಜ4 ಕರ್ಮ ತೊರೆದು ಪರರ ಗೃಹಗಳಲ್ಲಿ ಸಂಚರಿಸುತ ನಿಂದಿಸುವ ಮನುಜ5 ಬಹಳ ದ್ರವ್ಯದಿಂದ ಗರುಡ ವಾಹನನಂಘ್ರಿ ಭಜಿಸಿ ಅನು ಗ್ರಹವ ಮಾಡು ಎಂದು ಬೇಡಿ ಐಹಿಕಸುಖವ ಬಯಸುವವನು 6 ಕರಣ ಜನ್ಯ ಪುಣ್ಯಪಾಪವೆರಡು ಹರಿಯಧೀನವೆಂದು ಸ್ಮರಿಸುತಲತಿ ಭಕುತಿಯಿಂದ ಹರುಷಪಡದಲಿಪ್ಪ ಮನುಜ 7 ಜೀವನ ಕರ್ತೃತ್ವ ಬಿಟ್ಟು ದೇವನೊಬ್ಬ ಕರ್ತೃ ರಮಾ ದೇವಿ ಮೊದಲುಗೊಂಡು ಹರಿಯ ಸೇವಕರೆಂದರಿಯದವನು 8 ವಾತಜನಕನೆನಿಪ ಜಗನ್ನಾಥವಿಠ್ಠಲನ ಪದಾಬ್ಜ ಭವ ವೈತರಣಿಯ ದಾಟದವನು 9
--------------
ಜಗನ್ನಾಥದಾಸರು
ನೀಚಮತಿ ಎಲೆ ನೀಚಮತಿ ಊಚನೆನಿಸಿಕೊಂಬ ಯೋಚನೆ ಬಿಡುಕಂಡ್ಯ ಪ ತರಿಯದೆ ಕುಟಿಲತ್ವ ಮರೆಯದೆ ದುಶ್ಚಟ ಧರೆಯ ಭೋಗವ ನೆಚ್ಚಿ ಶರಣರ್ವೇಷÀವÀ ತಾಳಿ ಮರವೆ ಮಾಯದಿ ಬಿದ್ದು ಒರಲುವ ನರರಿಗೆ ಬರಿದೆ ಬೋಧಿಪೆನೆಂಬ ಭ್ರಮೆಯಿಂದ ಫಲವೆ 1 ಮಾಯಮೋಹಿಗಳ ಉಪಾಯದಿ ಕೂಡಿಸಿ ಸೇವಿಸದಾಹಾರ ಸೇವಿಸುತನುದಿನ ಕಾಯಬಲಿಸಿ ಕುಣಿವ ಮಾಯಮೋಹಿಯ ಬರಿ ಬಾಯ ಬ್ರಹ್ಮತ್ಯಬಂಧ ಬಯಲಪ್ಪುದೇನೆಲೆ 2 ಧರಿಸಿದ ಲಾಂಛನ ಅರಿಯದೆ ಮೇಲೆ ನೀ ಬರಿದೆ ಕಾವಿಯನ್ಹೊದ್ದು ಕರದಿ ಕಮಂಡಲ ಧರಿಸಿ ಮರುಳರಿಗೆಲ್ಲ ಪರತತ್ತ್ವವರಿಯಲು ಜರೆಮರಣದು:ಖವು ಪರಹಾರಮೆಂತೆಲೆ 3 ಭವಭವದಲಿ ಬಟ್ಟಬವಣೆಯ ಸ್ಮರಿಸಿದೆ ಭವಗೆಲಿಸುವ ಅನುಭವ ತಿಳಿಯದೆ ಸ ದ್ಭವಿಗಳ ನೆರೆಯಿಸಿ ಕವಿತೆ ಬಿಡಿಸಿ ಬಹು ಸವಿಮಾತ್ಹೇಳಲು ಮೂಲಭವಭೀಜಳಿಯುವುದೆ 4 ತನ್ನ ತನ್ನದುಯೆಂಬ ಭಿನ್ನವಿಲ್ಲದೆಸದಾ ತನ್ನ ಸ್ವರೂಪ ಪರರನ್ನು ಬಗೆದು ನಿತ್ಯ ಸನ್ನುತ ಶ್ರೀರಾಮನುನ್ನತಂಘ್ರಿಗೆ ಪೊಂದಿ ಧನ್ಯರಾಗದೆ ನರಕುನ್ನಿಯೆನಿಸುವರೇನೋ5
--------------
ರಾಮದಾಸರು
ನೀಚಮನಸೆ ನೀ ಯೋಚಿಸಿ ಕೆಡಬೇಡ ಬರಿದೆ ಪ ಸಾರವಿಲ್ಲದ ನಿಸ್ಸಾರ ಸಂಸಾರವೆಂಬುದು ಮಾಯಾಬಜಾರ ತೋರಿ ಅಡಗುತಿಹ್ಯದು ನಿಮಿಷ ನೀರಮೇಲಿನ ಗುರುಳೆತೆರದಿ ಪರಿ ಸ್ಥಿರವಲ್ಲದನರಿದು ನೋಡೋ 1 ಕಾರಣಲ್ಲದ ಕಾಯವಿದು ಮೂರುದಿನದಸುಖವ ಬಯಸಿ ಮೀರಿಸಿ ಗುರುಹಿರಿಯರ್ವಚನ ಪಾರಮಾರ್ಥವಿಚಾರ ಮರೆಸಿ ಸೂರೆಗೈದು ಸ್ವರ್ಗಭೋಗ ಘೋರನರಕಕೆಳಸುತಿಹ್ಯದು 2 ಆಶಾಬದ್ಧನಾಗಿ ಭವಪಾಶದೊಳಗೆ ಸಿಲುಕಬೇಡೆಲೊ ವಾಸನಳಿದು ಐಹಿಕಸುಖದ ಕ್ಲೇಶನೀಗಿ ಸುಶೀಲನಾಗಿ ಬೇಸರಿಲ್ಲದೆ ಶ್ರೀಶಜಗದೀಶ ಶ್ರೀರಾಮನಂಘ್ರಿ ಭಜಿಸು 3
--------------
ರಾಮದಾಸರು