ಒಟ್ಟು 1764 ಕಡೆಗಳಲ್ಲಿ , 105 ದಾಸರು , 1296 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಡಿ ಮಡಿ ಮಡಿಯೆಂದು ಅಡಿಗಡಿಗೆ ಹಾರುವೆ |ಮಡಿ ಮಾಡುವ ಬಗೆ ಬೇರುಂಟು ಪ.ಪೊಡವಿ ಪಾಲಕನ ಧ್ಯಾನ ಮಾಡುವುದು |ಬಿಡದೆ ಭಜಿಸುಮದು ಅದು ಮಡಿಯಾ ಅಪಬಟ್ಟೆಯ ನೀರೊಳಗಿಟ್ಟು ಒಣಗಿಸಿ |ಉಟ್ಟರೆ ಅದು ತಾ ಮಡಿಯಲ್ಲ ||ಹೊಟ್ಟೆಯೊಳಗಿನ ಕಾಮ - ಕ್ರೋಧಗಳ |ಬಿಟ್ಟರೆ ಅದು ತಾ ಮಡಿಯೊ 1ಪರಧನ ಪರಸತಿ ಪರನಿಂದೆಗಳನು |ಜರೆದಹಂಕಾರಗಳನೆ ತೊರೆದು ||ಹರಿಹರಿಯೆಂದು ದೃಢದಿ ಮನದಲಿಇರುಳು ಹಗಲು ಸ್ಮರಿಸಲು ಮಡಿಯೋ 2ಎಚ್ಚರವಿಲ್ಲದೆ ಮಲ ಮೂತ್ರ ದೇಹವ |ನೆಚ್ಚಿ ಕೆಡಲು ಬೇಡಲೊ ಮನವೆ ||ಅಚ್ಚುತಾನಂತನ ನಾಮವ ಮನಗೊಂಡು |ಸಚ್ಚಿಂತೆಯಲಿರುವುದೆ ಮಡಿಯೊ 3ಭೂಸುರರು ಮಧ್ಯಾಹ್ನಕಾಲದಲಿ |ಹಸಿದು ಬಳಲಿ ಬಂದರೆ ಮನೆಗೆ ||ಬೇಸತ್ತು ನಮಗೆ ಗತಿಯಿಲ್ಲ ಹೋಗೆಂದು |ಹಸನಾಗಿ ಉಂಬುವುದು ಅದು ಮಡಿಯೊ ? 4ದಶಮಿ - ದ್ವಾದಶಿಯ ಪುಣ್ಯಕಾಲದಲಿ |ವಸುದೇವ ಸುತನ ಪೂಜಿಸದೆ ||ದೋಷಕಂಜದೆ ಪರರನ್ನು ಭುಜಿಸಿ ಯಮ - |ಪಾಶಕೆ ಬೀಳ್ವುದು ಹುಸಿಮಡಿಯೊ ? 5ಸ್ನಾನ -ಸಂಧ್ಯಾನ ಮೊದಲಾದ ಕರ್ಮಗಳೆಲ್ಲ |ಜಾÕನ -ಮಾನ - ಸುಮ್ಮಾನದಿಂದ ||ದೀನವಂದ್ಯನಸುಜನ ಸಂತರ್ಪಣ |ಅನುದಿನಮಾಡುವುದು ಘನಮಡಿಯೊ6ಗುರು ಹಿರಿಯರ ಹರಿದಾಸರ ನೆನೆದು |ಚರಣಕೆರಗಿ ಭಯ ಭಕ್ತಿಯಿಂದ ||ಪರಿಪರಿ ವಿಧದಲಿ ಪುರಂದರವಿಠಲನ |ನೆರನೆಂಬುವುದು ಉತ್ತಮ ಮಡಿಯೊ 7
--------------
ಪುರಂದರದಾಸರು
ಮತ್ತವನಲ್ಲೊ ಮುರಾರಿ ನಿನಗೆ ನಾಮತ್ತವನಲ್ಲೊ ಮುರಾರಿ ನಿನ್ನಭೃತ್ಯರ ಭೃತ್ಯರ ಭೃತ್ಯರ ಭೃತ್ಯನಿಗೆತ್ತಣ ಸ್ವಾತಂತ್ರ್ಯ ಸಲಹಯ್ಯಶೌರಿಪ.ರಂಗಾ ನೀ ಕೊಳ್ಳದ ಬಂಗಾರ ತಳಿಗ್ಯೂಟನುಂಗುವ ಮತ್ತವನಲ್ಲೊರಂಗಾ ನಿನ್ನ ಮರೆದಂಗನೆಯರನಾಲಂಗಿಸಿ ಮತ್ತವನಲ್ಲೊರಂಗಾ ನಿನ್ನೊಲುಮೆಯ ಡಿಂಗರರಂಘ್ರಿಗೆರಂಗದೆ ಮತ್ತವನಲ್ಲೊರಂಗಾ ನಿನ್ನೆಂಜಲೆನ್ನಂಗೈಯೊಳುಂಡು ರಾಜಂಗಳನುಡುಗುವ ಬಡವ ನಾನಲ್ಲದೆ 1ನಾಥನೆ ನಾನೆಂದು ಮಾತು ಕಲಿತುಖಳವ್ರಾತಸಂಗದಿ ಮತ್ತವನಲ್ಲೊನಾಥ ನಿನ್ನ ಮೀರಿದಾತನುಂಟೆಂದು ನಿರ್ಭೀತಿಲಿ ಮತ್ತವನಲ್ಲೊನಾಥ ನಿನ್ನ ಗುಣಖ್ಯಾತಿ ಹೊಗಳದನ್ಯಸ್ತೌತ್ಯದಿ ಮತ್ತವನಲ್ಲೊನಾಥ ನಿನ್ನಡಿಯ ತೀರಥವೆ ಗತಿಯೆಂದುಯಾತನೆಗಂಜುವ ಬೆದರುಗುಳಿಯಲ್ಲದೆ 2ತಂದೆ ನೀ ಮಾರಿದರೊಂದೊಪ್ಪು ಕೊಂದರೊಪ್ಪೆಂದಿಗೆ ಮತ್ತವನಲ್ಲೊತಂದೆ ನಿನ್ನ ಮನೆ ಹೊಂದಿದಟ್ಟಣೆಗೈದಿಬಂಧಿಸು ಮತ್ತವನಲ್ಲೊತಂದೆ ನಿನ್ನಾಯುಧ ಸಂದು ಸಂದಿಗೆ ಕಾಸಿತಂದಿಡು ಮತ್ತವನಲ್ಲೊತಂದೆ ಪ್ರಸನ್ನವೆಂಕಟಿಂದಿರೇಶನೊಬ್ಬ ಅಹುದೆಂದ ಸೊಕ್ಕೊಂದುಳ್ಳವನಲ್ಲದೆ 3
--------------
ಪ್ರಸನ್ನವೆಂಕಟದಾಸರು
ಮಂದಗಮನೆ, ಇವನಾರೆ ಪೇಳಮ್ಮ |ಮಂದರಧರಗೋವಿಂದ ಕಾಣಮ್ಮಪಕೆಂದಳಿದನಖಶಶಿಬಿಂಬ ಪಾದಪದ್ಮ |ಅಂದುಗೆಯಿಟ್ಟವನಾರು ಪೇಳಮ್ಮ ||ಅಂದು ಕಾಳಿಂಗನ ಪೆಡೆಯ ತುಳಿದ ದಿಟ್ಟ |ನಂದನ ಕಂದ ಮುಕುಂದ ಕಾಣಮ್ಮ 1ಉಡುಗೆ ಪೀತಾಂಬರ ನಡುವೀಣೆ ಉಡುದಾರ |ಕಡಗ-ಕಂಕಣವಿಟ್ಟವನಾರಮ್ಮ ||ಮಡದಿ ಕೇಳ್ ಸಕಲಲೋಕಂಗಳ ಕುಕ್ಷಿಯೊಳ್ |ಒಡನೆ ತೋರಿದ ಜಗದೊಡೆಯ ಕಾಣಮ್ಮ 2ನೀರದನೀಲದಂತೆಸೆವ ವಕ್ಷದಿ ಕೇ-|ಯೂರ-ಹಾರಗಳನಿಟ್ಟವನಾರಮ್ಮ ||ನೀರೆ ಕೇಳು ನಿರ್ಜರರಾದವರಿಗೆ |ಪ್ರೇರಿಸಿ ಫಲವಿತ್ತು ದಾರಿ ಕಾಣಮ್ಮ 3ಶಂಖ ಚಕ್ರವ, ಗದೆ-ಪದ್ಮ ಕೈಯೊಳಗಿಟ್ಟ-|ಲಂಕೃತನಹನೀತನಾರಮ್ಮ ||ಪಂಕಜಮುಖಿಶ್ರೀಭೂದೇವಿಯರರಸನು |ಶಂಕೆಇಲ್ಲದೆ ಗೋಪೀತನಯ ಕಾಣಮ್ಮ4ಕಂಬುಕಂಧರಕರ್ಣಾಲಂಬಿತಕುಂಡಲ|ಅಂಬುಜಮುಖದವನಾರೆ ಪೇಳಮ್ಮ ||ರಂಭೆ ಕೇಳೀತ ಪುರಂದರವಿಠಲ |ನಂಬಿದ ಭಕ್ತಕುಟುಂಬಿ ಕೇಳಮ್ಮ 5
--------------
ಪುರಂದರದಾಸರು
ಮದ್ದಿನ ಹವಾಯಿ ನೀನೋಡುಬಗಳಮದ್ದಿನ ಹವಾಯಿ ನೀನೋಡುಮದ್ದಿನ ಹವಾಯಿ ಹೃದಯ ಬಯಲಲ್ಲದೆಎದ್ದಿರು ಚತುಷ್ಟ ತನುವಿಗೆ ಬೇರೆಯುಪತೂರ್ವುತಲಿದೆ ಬಿರಿಸಾಕಾಶದ ತುದಿಗೇರ್ವುತಲಿದೆಅಂಬರಬಾಣಬೀರ್ವುತಲಿದೆ ಚಕ್ರದ ಕಿಡಿಯಗಲಕೆಜಾರ್ವುತಲಿದೆ ಅಜ್ಞಾನದಖೂನ1ಗಡಿಗ ಬಾಣದ ಗತಿಯನೆನೋಡುಗಜುಗಿಂಗಳ ಕಾಯಬ್ಬರವಗಿಡುಗಳು ಹಾರ್ವವು ಜಿನಿಸು ಜಿನಿಸುಗಳುಭಡಲ್ ಭಡಲ್ಲಿಹ ಸಪ್ಪಳವು2ಅಂತರ ದೌಸು ಸರಬತ್ತಿಗಳುಅಗಸೆಯ ಹೂವಿನ ಅಚ್ಚರಿಯಕಂತುಕ ಪೆಟಲವು ಮುತ್ತಿ ಸೇ-ವಂತಿಗೆ ಕವಳೆಯ ಹೂವಿನ ಸುರಿಮಳೆಯು3ಕೋಳಿಯು ಮುಳುಗುತಲೇಳುತಲಿರುತಿರೆಕೋಣ ಆನೆಗಳ ಕಾದಾಟಬಾಳೆಯ ಗೊನೆಗಳು ಬೆಳ್ಳಿಯ ಚುಕ್ಕೆಯುಬೆಳ್ಳನೆ ಜ್ಯೋತಿಯ ಕಡಕದಾಟ4ನಿನ್ನ ಕಾಂತಿ ಇವು ನೀನೇ ನೋಡುತಲಿರುತನ್ಮಯ ದೃಷ್ಟಿಯನಿಟ್ಟುಚೆನ್ನ ಚಿದಾನಂದ ಬಗಳೆ ನೀ ಸಾಕ್ಷಿಯಿರೆ ಚೈ-ತನ್ಯಾತ್ಮಕ ಶುದ್ಧನವ5ಸೂಚನೆ :ದೀಪಾವಳಿ ಮುಂತಾದ ಸಂದರ್ಭಗಳಲ್ಲಿ ಹಾರಿಸುವ ಮದ್ದಿನ ವಸ್ತುಗಳ ಬೆಳಕಿಗೆ ದೇವಿಯನ್ನು ಹೋಲಿಸಿದ್ದಾಗಿದೆ. ಇದರಲ್ಲಿ ಬಂದಿರುವಕೆಲವು ಮದ್ದಿನ ಪದಾರ್ಥಗಳ ಹೆಸರುಗಳು ಆಗಿನ ಕಾಲದವು.
--------------
ಚಿದಾನಂದ ಅವಧೂತರು
ಮನವೆ ಚಂಚಲ ಮತಿಯ ಬಿಡು - ನಮ್ಮ |ವನಜನಾಭನ ಪಾದಭಜನೆಯಮಾಡುಪ.ಬಡಮನುಜಗೆ ಬಾಯಬಿಡುವ ದೈನ್ಯದಲವನ |ಅಡಿಗಳಿಗೆರಗಲು ಕೊಡುವನೇನೊ ||ಕಡಲಶಯನ ಜಗದೊಡೆಯನ ನೆನೆಯಕ್ಕೆ - |ಪಿಡಿದು ತಾ ಸಲಹುವ ಬಿಡದಲೆಅನುಗಾಲ1ಬಲ್ಲಿದ ಭಕುತರ ಬಲ್ಲವ ಬಹುಸಿರಿ |ಯುಳ್ಳ ಕರುಣಿ ಲಕ್ಷ್ಮೀನಲ್ಲನಿರೆ ||ಕ್ಷುಲ್ಲಕರನು ಕಾಯಸಲ್ಲದೆಂದೆಂದಿಗುನಿಲ್ಲು ಹರಿಯ ಪಾದದಲ್ಲಿ ತಲ್ಲಣಿಸದೆ 2ಮುಗಿಲು ಮೇಲದೆಗಡೆ ಅಗಣಿತವಾದಾಪ - |ತ್ತುಗಳು ಬಂದಡರಲು ನಗುತಲಿರು ||ಜಗದಧೀಶನ ಮಹಿಮೆಗೆ ನಮೋ ನಮೋ ಎಂದು |ಪೊಗಳುತ ಬಾಳು ನೀ ಅಘಗಳ ಗಣಿಸದೆ 3ಆವಾವ ಕಾಲಕೆ ದೇವನಿಚ್ಛೆಯಿಂದ |ಆವಾವುದು ಬರೆ ನಿಜಸುಖವೆನ್ನು ||ಶ್ರೀವರ ಅನಾದಿಜೀವರ ಕ್ಲಪ್ತದಂತೆ |ಈವನು ನಿಜಸ್ವಭಾವ ಬಿಡದೆನಿತ್ಯ4ಕೇಶವಾಚ್ಯುತ ಶ್ರೀನಿವಾಸ ಮುರಾರೇ |ದೋಷರಹಿತ ದೀನ ಪೋಷಕನೆನ್ನು ||ಮೋಸಗೊಳಿಪ ಭವಪಾಶವ ಖಂಡಿಪ |ಶ್ರೀಶ ಪುರಂದರವಿಠಲನು ಜಗಕಿರೆ 5
--------------
ಪುರಂದರದಾಸರು
ಮನವೆ ಶ್ರೀನಾರಾಯಣನನು ಸ್ಮರಿಸದೆಮಾಯಾಪಾಶಕೆ ಸಿಲುಕುವರೇ ಪ.ವನಜನಾಭನ ಪದ ವನರುಹಯುಗ್ಮವಅನುದಿನನೆನೆಯದೆ ಒಣಗುವರೇವನಿತಾಲಂಪಟನಾಗುತ ಸಂತತಮನಸಿಜಯಂತ್ರಕೆ ಮನಮರಗುವರೇ ಅ.ಪ.ತುಂಡು ಸೂಳೆಯರ ದುಂಡುಕುಚವ ಪಿಡಿದುಗಂಡಸುತನವನು ಕೆಡಿಸುವರೆದಂಡಧರನ ಬಾಧೆ ಹೆಂಡತಿಯನು ಪಡಕೊಂಡು ವೇದನೆಯನು ತಾಳುವರೆಕಂಡು ಕಂಡು ನೀ ಗುಂಡಿಗೆ ಬಾಳ್ವರೆಹೆಂಡಿರ ಸುಖರಸ ಉಂಡರು ಸಾಲದೆ 1ಬಂದ ಸುಖಕೆ ನೀ ಮುಂದುವರೆಯುತಲಿಮಂದಅಸಮ ದುಃಖ ತಾಳುವರೇಬಂದುದೆನ್ನ ಕಣ್ಣ ಮುಂದೆಯನುಭವಿಪೆಎಂದಿಗೆನ್ನಾಜೆÕಯು ಬಂದಪುದೋ ನಿಜ 2ಇಷ್ಟು ದಿನದಿ ನೀ ಭ್ರಷ್ಟೆಯರಲಿ ಮೋಹಪಟ್ಟ ಭಾಗ್ಯವನೆಲ್ಲ ತೋರೊ ನೀನುಕಷ್ಟ ಮಾನಧನ ನಷ್ಟವಲ್ಲದೆ ಎಳ್ಳಿ-ನಷ್ಟು ಸುಖವನ್ನು ಕಾಣೆನಿನ್ನುಇಷ್ಟಾರ್ಥಗಳೆಲ್ಲ ದೊರೆಕುವುದೈಪರಮೇಷ್ಠಿ ಪಿತನ ಮನಮುಟ್ಟಿ ನೀವ್ ಭಜಿಸಿರೊ 3ವಿಷಯ ಪಳಂಚಿತನಾಗುವ ಸಂತತಪಂಚಡಕೀರನು ಆಗುವರೇಮುಂಚೆ ಮಾಡಿದಕರ್ಮಸಾಲದೆಂದೆನುತಲಿಸಂಚಿತಪಾಪವ ಸಂಗ್ರಹಿಸುವರೇಚಂಚಲಾಕ್ಷಿಯರ ಚಪಲದ ಮಾತನುವಂಚನೆ ಎಂಬುದು ತಿಳಿಯದೆ ಇರುವರೆ 4ಸಾರಿಸಾರಿ ಕೈ ಮುಗಿದು ಬೇಡುವೆನು ವಿ-ಕಾರ ದುರ್ಬುದ್ಧಿಯ ಬಿಡು ಎಂದುಭಾರಿ ತಪ್ಪುಗಳ ಕ್ಷಮಿಸಿಕಾವಲಕ್ಷ್ಮೀನಾರಾಯಣ ನೀನೇ ಗತಿಯೆಂದುಪಾರಮಾರ್ಥಿಕ ವಿಚಾರವ ಮಾಡುತಶ್ರೀ ರಮೇಶನ ಚರಣಾರವಿಂದವ ಸೇರೋ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಮರುಳಾಟವ್ಯಾಕೆ ಮನುಜಗೆ ಮರುಳಾಟವ್ಯಾಕೆಹರಿಭಕ್ತನಲ್ಲದವಗೆ ಹಲವಂಗವ್ಯಾಕೆ ಪ.ಮೃತ್ತಿಕಾಶೌಚವಿಲ್ಲದೆ ಮತ್ತೆ ಸ್ನಾನ ಜಪವ್ಯಾಕೆಹತ್ತು ಕಟ್ಟದವಗೆ ಅಗ್ನಿಹೋತ್ರವ್ಯಾತಕೆತೊತ್ತುಬಡಕಗೆ ಬಹು ತತ್ವವಿಚಾರವ್ಯಾಕೆಕರ್ತಕೃಷ್ಣನ್ನೊಪ್ಪದ ವಿದ್ವತ್ತವ್ಯಾತಕೆ1ಹಸಿವೆತೃಷೆತಾಳದವಗೆಹುಸಿವೈರಾಗ್ಯವ್ಯಾತಕೆವಿಷಮ ಚಿತ್ತಗೆ ಪರರ ಕುಶಲ ಬಯಕ್ಯಾಕೆದಶ ಜಪ ಮಾಡಲಾರ ಮುಸುಕಿನ ಡಂಬವ್ಯಾಕೆಕುಶಶಾಯಿಗರ್ಪಿಸದ ಅಶನವ್ಯಾತಕೆ 2ಮೂಲಮಂತ್ರವರಿಯದ ಮೇಲೆ ದೇವಾರ್ಚನೆ ಯಾಕೆಸಾಲಿಗ್ರಾಮವಿಲ್ಲದ ತೀರ್ಥವ್ಯಾತಕೆಸೂಳೆಗಾರಗೆ ತುಳಸಿಮಾಲೆ ಶೃಂಗಾರವ್ಯಾಕೆಮೇಲೆ ಮೇಲೆ ಹರಿಯೆನ್ನದ ನಾಲಿಗ್ಯಾತಕೆ 3ಊಧ್ರ್ವಪುಂಡ್ರಿಲ್ಲದಾಸ್ಯ ತಿದ್ದಿನೋಡಬೇಕ್ಯಾಕೆಶುದ್ಧ ಸಾತ್ವಿಕವಲ್ಲದ ಬುದ್ಧಿ ಯಾತಕೆಕದ್ದು ಹೊಟ್ಟೆ ಹೊರೆವವಗೆ ಸಿದ್ಧ ಶೀಲವೃತ್ತಿಯಾತಕೆಮಧ್ವ ಮತವÀ ಬಿಟ್ಟಿತರ ಪದ್ಧತ್ಯಾತಕೆ 4ಕಂಡ ನಾರೇರಿಚ್ಛೈಸುವ ಲೆಂಡಗೆ ಪುರಾಣವ್ಯಾಕೆಭಂಡು ಮಾತಿನ ಕವಿತ್ವ ಪಾಂಡಿತ್ಯಾತಕೆಕುಂಡಲಿಪ್ರಸನ್ವೆಂಕಟ ಮಂಡಲೇಶನ ಶ್ರೀಪಾದಪುಂಡರೀಕಬಿಟ್ಟವನ ವಿತಂಡವ್ಯಾತಕೆ5
--------------
ಪ್ರಸನ್ನವೆಂಕಟದಾಸರು
ಮಲವು ತೊಳೆಯಬಲ್ಲುದೆಮನವ ತೊಳೆಯದನಕ ಪಹಲುವು ನೀರಿನೊಳಗೆ ಪೊಕ್ಕುಹಲುಬಿದರಿನ್ನೇನು ಫಲ? ಅಪಬೋಗಫಲವನುಂಡು ವಿಷಯ ಭೋಗದಿಂದ ಮತ್ತರಾಗಿಭೋಗಬೇಡಿ ಜನರು ಜೀವಕಾಗಿ ಮುನಿವರುಯೋಗಿಯಂತೆ ಜನರ ಮೆಚ್ಚುಗಾಗಿ ಹೋಗಿ ಉದಯದಲ್ಲಿಕಾಗೆಯಂತೆ ಮುಳುಗಿದರೆ ಅಮೋಘ ಫಲವು ಬಾಹೊದೆ? 1ಪರರ ಕೇಡಬಯಸಿಗುರು - ಹಿರಿಯರನ್ನು ನಿಂದಿಸುತಪರಮ ಸೌಖ್ಯದಿಂದ ಪರಸ್ತ್ರೀಯರನ್ನ ಆಳುತಪರಮಯೋಗನಿಷ್ಟೆಯೆಂದು ಧರೆಯ ಮೇಲೆ ಡಂಭತೋರಿಹರಿವ ನದಿಯ ತೀರದಲ್ಲಿ ಪರಿಯು ಬಕ ಧ್ಯಾನದಂಥ 2ತಂದೆ - ತಾಯಿ ತಿರುತಿನ್ನಲು ಒಂದು ದಿವಸ ಕೇಳಲಿಲ್ಲಮಂದಗಮನೆಯರೊಡನೆ ಆನಂದದಿಂದ ನಲಿಯುತತಂದೆಯ ಹೆಸರಿನಿಂದ ನೂರು ಮಂದಿಗುಣಿಸಿ ಹರುಷದಿಂದತಂದೆ ತೃಪ್ತನಾದನೆಂಬ ಮಂದಮತಿಯ ಜನರುಗಳ 3ಕಾಸವೀಸಕ್ಕಾಗಿ ಹರಿಯದಾಸನೆಂದು ತಿರುಗಿ ತಿರುಗಿದೇಶದಿಂದ ದೇಶಕಿಳಿದು ಕಾಶಿಯಾತ್ರೆ ಮಾಡಲುಆಶಾಪಾಶ ಬಿಡದ ಮನದ ಕೂಸಿನಂತೆ ಕಾಡುತಿಪ್ಪವೇಶಧಾರಿಗಳಿಗೆ ಆ ಕಾಶಿಯ ಫಲ ಬಾಹೊದೆ? 4ಏನು ಮಾಡಲೇನು ಫಲ - ಏನು ನೋಡಲೇನು ಫಲಜ್ಞಾನವಿಲ್ಲದಚ್ಯುತನ ಧ್ಯಾನವಿಲ್ಲದವರಿಗೆಮೌನ ನೇಮ ನಿಷ್ಠೆ ಪರಾಧೀನವೆಂಬುದ ತಿಳಿದುಕೊಂಡುದೀನನಾಥ ಪುರಂದರವಿಠಲನ ನಿಲುಕಲೊಲ್ಲದೆ 5
--------------
ಪುರಂದರದಾಸರು
ಮಹಾದೇವ ಶಿತಿಕಂಠ ದಾಸ ಕಲ್ಪಮಹೀಜ ಬಿನ್ನವಿಪೆ ನಿರ್ದೋಷ ||ಆಹಾ ||ಕುಹಕಾರಿ ಹರಿಪಾದ ಮಹಿಮೆ ಕೊಂಡಾಡಿಸೊ |ಗಹನವಿಕ್ರಮಭೀಮ ಮಹೀಧರಪ ಜಾಧವ ಪಸ್ಫಟಿಕಾಭ ಶ್ರೀಕಂಠ ದಕ್ಷ ಧ್ವಂಸಿ |ನಿಟಿಲಲೋಚನ ಸುರಪಕ್ಷ ಹೇ || ಧೂ |ರ್ಜಟ ಹೀನ ವಿಷಯಾಖ್ಯ ಕಕ್ಷವಹ್ನಿ|ಕುಟಿಲತ್ವ ಬಿಡಿಸತಿ ದಕ್ಷ ||ಆಹಾ||ಕಠಿಣ ಸಂಸಾರದಿತ್ರುಟಿಮಾತ್ರ ಸುಖ ಕಾಣೆ |ವಟುರೂಪಿ ಭಕುತರ ಕಟಕದೊಳಿರಿಸೆನ್ನ1ಇಳಿರಥ ನಗಶರಸೋಮಮೌಳಿ|ನಳನಂದಿನಿಪ ಸುತ ರಾಮ ನಾಮಾ |ನಲಿದು ಪಾಡುವ ಗುಣಧಾಮ ರೌಪ್ಯಾ |ಬಲಾವಾಸಾನಂಗ ವಿರಾಮಾ ||ಆಹಾ||ಹಲವರಾಶ್ರಯಿಸಿ ನಾ ಬಲು ನೊಂದೆನೋರ್ವರು ಕಾಯ್ವ |ಸುಳಿವು ಕಾಣೆನೋ ಹೇ ಗರಳಕಂಠ ಪೊರೆಯೆನ್ನ 2ಪಂಚ ಸುಸ್ಮಿತ ಯುಕ್ತ ವದನಾ ನಿಷ್ಪ್ರ |ಪಂಚ ಗಜಾಸುರ ಹನನಾ ಏಕಪಂಚಾಸ್ಯ ಜನಕ ಕೇಶವನಾ ಪ್ರೀತಿ |ಮಂಚ ನೀನಾಹೆ ಖಳರನಾ ||ಆಹಾ||ಹಿಂಚಾಗಿ ಅಳಿವಂಥ ಹಂಚಿಕೆಯಲಿವರ|ಮುಂಚೆ ಕರೆದು ಕೊಟ್ಟು ವಂಚಿಪೆ ಅತ್ರಿಜ 3ಅಹಂಕಾರಾಧೀಶ ನಭೇಶತಾತ|ಮಹಾ ಮುನಿ ವಂದ್ಯಾಮರಾಸ್ಯ ಚಂದ್ರ |ದಿನಪತೇಕ್ಷಣನೆ ಅಶೇಷಾಮೋದ|ಬಹುಮೋದಸಕ್ತಾಯನ್ನಾಶಾ ||ಆಹಾ||ದಹಿಸೊಜಠರಪೋಷ ವಹಿಸಿ ಬೆಂಡಾದೆನೊ |ಅಹಿಮಲಾಂಧಕಾಸುರ ಗುಹಹ ಅಶ್ವತ್ಥಾಮ 4ಶಕ್ರಾವರಜ ಶ್ರೀ ಪ್ರಾಣೇಶ ವಿಠ್ಠಲ |ನಕ್ರಾಹನಂಘ್ರಿಯನಿಶದಲ್ಲಿ |ವಕ್ರವಿಲ್ಲದೆ ಸೇವಿಪೀಶ ಹೇ ತ್ರಿ- |ವಿಕ್ರಮಕರವ್ಯೋಮಕೇಶ||ಆಹಾ||ಶುಕ್ರಪೂಜಿತಪಾದಅಕ್ರೂರಯನ್ನೊಳಿ |ದ್ದ ಕ್ರಮವೆಣಿಸದೆ ಸುಕೃತವೊದಗಿಸೊ5
--------------
ಪ್ರಾಣೇಶದಾಸರು
ಮಾಯೆಯನ್ನು ಗೆದ್ದೆನೆಂದು ಮುರುಕಿ ಮುರುಕಿ ಕಿರುಚುವಮೂರ್ಖನವನಮಂದಮತಿಯನೇನ ಹೇಳಲಿರಾಯರಾದ ಮೂರು ಮಂದಿ ಮೊರೆಯ ಹೊಕ್ಕಿಹರು ಬಗಳಮಾಯೆಯನ್ನು ಗೆದ್ದೆನೆನಲು ಲಜ್ಜೆಯಿಲ್ಲವೆಪಮೋಡದಾ ಮಿಂಚಿನಂತೆ ಮೋಹಕವೆ ಬೆಳಗುತಿರಲುಗೂಢವಿಹ ಮುನಿಯು ತಪಿಸಿ ಮುಳುಗಿಹೋದರುರೂಢಿಯಲ್ಲ ಮೋಹನದಿ ಮುಳುಗಿ ತೇಲಲು ಆ-ರೂಢ ಆರಕ್ಷಕರುದಯದಲಾದರು1ತಾನದಾರು ತಾನದೆಲ್ಲಿ ತನ್ನ ಸ್ಥಳವು ಎತ್ತಲುತಾನು ನಾನು ಎಂಬುದಕ್ಕೆಠಾವುಇಲ್ಲವುತಾನು ಗೆದ್ದೆ ಗೆದ್ದೆನೆಂದು ಹೇಳಿಯಾಡೆಏನು ರೂಪು ನಾಮಕ್ರಿಯೆ ಜೀವ ಶಿವರು ಮಾಯೆಯು2ತಾನೆ ಸಾಕ್ಷಿಯಾಗಿ ಪ್ರಪಂಚ ನಾಶವಾಗಿಏನೇನುವಾಸನೆಹುಟ್ಟದಾಗಿಯುತಾನು ಜಗವು ಸರ್ವವಾಗಿ ಸರ್ವಜಗವುತಾನೆಯಾಗಿ ತಾನೆ ಚಿದಾನಂದ ಬಗಳೆ ತಾನಾದರಲ್ಲದೆ3
--------------
ಚಿದಾನಂದ ಅವಧೂತರು
ಮಾಯೆಯು ಎಂತಿಹುದೆಂಬೆಯ ಮಗನೆಮಾಯೆಯು ಸ್ತ್ರೀಯೇಮಾಯೆಮಾಯೆಯಗುರುಕರುಣದಿ ತಾಗೆ ಅದರೆಮಾಯೆಯೆಲ್ಲವೂ ನಿರ್ಮಾಯೆಪಎಸಳಿನ ಕಂಗಳ ಓರೆನೋಟಕೆಎದೆಗುಂದುವುದೇಮಾಯೆಮುಸುಕನೇ ಹಾಕಿ ಹಲ್ಲನು ತೆರೆಯಲುಮುಂದುಗೆಡಿದುವುದೇಮಾಯೆಕುಸುಮದ ಸೂಡಿದ ಮುಡಿಯಾಭಾವಕೆಕುಸಿಯುತಲಿಹುದೇಮಾಯೆಮುಸಿ ಮುಸಿ ನಗುತ ಮುದ್ದು ಮಾತಾಡಲುಮರುಳಾಗುವುದೇಮಾಯೆ1ಚೆಳ್ಳು ಪುಳ್ಳು ಎಂದೆಂಬ ಅಂದುಗೆಗೆಚಿತ್ತುಡುಗುವುದದೇಮಾಯೆಬಳ್ಳಿಯ ತೆರದಲಿ ಬಳುಕುವ ತನುವಿಗೆಬಾಯಿ ಬಿಡುವುದೇಮಾಯೆಮೆಲ್ಲನೆ ಹೆಜ್ಜೆಗೆ ಜಗ್ಗುವ ನಡಿಗೆಗೆಮರುಗುತಲಿಹುದೇಮಾಯೆಗಲ್ಲದ ನುಣುಪಿಗೆ ಚಿಬುಕದ ಸಿರಿಗೆವಶವಾಗುವುದೇಮಾಯೆ2ಮೋರೆಯ ಮುರುಕಿಸೆ ಹುಬ್ಬನು ಏರಿಸೆಮುಳುಗಿಹೋಗುವುದೇಮಾಯೆತೋರ ಹರಡಿಯ ತಿರುಹುವ ಬಗೆಗೆದೃಢಗೆಡುವುದೆಮಾಯೆಸೀರೆ ಸಿಂಗಾರಕೆ ಒಲವು ಒಯ್ಯಾರಕೆಸಿಕ್ಕಿಹೋಗುವುದೇಮಾಯೆಹಾರವ ಎತ್ತಿ ಎದೆ ಬದಿ ತೋರಿಸೆಹುಚ್ಚನಾಗುವುದೇಮಾಯೆ3ಕಂಚುಕಿ ತೆರೆದು ನಡುವನು ಸಡಿಲಿಸೆಕಾಲುಡುಗುವುದೇಮಾಯೆಚಂಚಲ ದೃಷ್ಟಿಯ ಆಲಿಯ ಹೊರಳಿಸೆಚೇತನಗುಂದುವುದುಮಾಯೆಗೊಂಚಲ ನಾಗೋತ್ತರ ಚಳತುಂಬಿಗೆ ಮಾರುಹೋಗುವುನೇಮಾಯೆಮಿಂಚುವ ಮೋರೆಯ ಮೀಟಿನ ಬಣ್ಣಕೆಮುಳುಗಿಯಾಡುವುದೇಮಾಯೆ4ಸತಿಯಿಂದಲಿಸುತ ಸುತನಿಂದಲಿ ಸೊಸೆಸರಗೊಳಿಸುವುದೇಮಾಯೆಮಿತಿಯಿಲ್ಲದೆ ವಾಸನೆಯಲಿ ಜನ್ಮವಮುಂದುವರಿಸುವುದೇಮಾಯೆಪಥಗಾಣದೆ ಅನಂತ ಯೋನಿಯಲಿಪುಡಿಯಾಗುವುದೇಮಾಯೆಚಿದಾನಂದನ ತಿಳುವಿಗೆ ಮುಳುಗಿಸಿಪಸರಿಸಿ ಇಹುದೆಮಾಯೆ5
--------------
ಚಿದಾನಂದ ಅವಧೂತರು
ಮಾವಗೆ ನೀ ಮತ್ತೆ ಮಾವನಾದೆಯೊ ರಂಗ |ಮಾವನ ಮಗಳ ನೀ ಮದುವೆಯಾದೆಯೊ ರಂಗ ||ಭಾವಗೆ ನೀ ಮತ್ತೆ ಭಾವನಾದೆಯೊ ರಂಗ |ಭಾವಜವೈರಿಗೆ ಸಖನಾದೆಯೊ ರಂಗ 2ಅತ್ತೆಯ ಅರ್ಥಿಯಿಂದಾಳಿದೆಯೋ ರಂಗ |ಅತ್ತೆಯ ಮಗಳ ನೀ ಮದುವೆಯಾದೆಯೊ ರಂಗ ||ಮತ್ತೊಬ್ಬರಿಗುಂಟೆ ಈಪರಿಮಹಿಮೆಯು |ಕರ್ತೃ ಶ್ರೀ ಪುರಂದರವಿಠಲನಿಗಲ್ಲದೆ3
--------------
ಪುರಂದರದಾಸರು
ಮುದಕಿಯ ಕಂಡರೆ ಸೇರದೆನಗೆ ಮುದಕಿಯ ಕಂಡರೆ ಸೇರದೋಸದಮಲಪರತತ್ವದ ಗುರಿಯ ತೋರದಂತೆ ಮಾಡಿದಪಒಬ್ಬನನೊಯ್ದಿಬ್ಬರ ಮಾಡಿ ಓಡಿಶ್ಯಾಡುವ ಮುದಕಿಹಚ್ಚಿಕೊಂಡು ಜಗವೆನಲ್ಲ ಹರಿದು ಆಡುವ ಪಾಡುವ ಮುದುಕಿ1ನಿಲ್ಲದೆ ಸ್ವರ್ಗಕೆ ನರಕಕೆ ಮನಜರನೆಲ್ಲರ ತಿರುಗಿಪ ಮುದುಕಿಎಳ್ಳಷ್ಟೂ ಎಚ್ಚರ ಹುಟ್ಟಿಸದ ಎಡವಟ್ಟಾದ ಮುದುಕಿ2ಇಂದ್ರಜಾಲವ ಖರೆಯಂದದಲಿ ಎಸಗಿಕೊಂಡಿಹ ಮುದುಕಿಬಂಧಿಸಿಯಿಹಳು ಊನವಿಲ್ಲದಲೆ ಬಾಜಿಗಾರ ಮುದುಕಿ3ಏನೇನಿಲ್ಲವು ತನಗದು ರೂಪವು ಎಲ್ಲವು ಆದ ಮುದುಕಿತಾನಾರೆಂದು ತನ್ನನ್ನು ತಿಳಿಯೆ ತನ್ನೊಳಗಡಗಿಹ ಮುದಕಿ4ಮುನ್ನ ಅನಾದಿಯು ಎನಿಸಿಕೊಂಡರು ಮೂಲಮಾಯೆ ತಾ ಮುದುಕಿತನ್ಮಾತ್ರಾದ ಚಿದಾನಂದ ಬ್ರಹ್ಮದಿ ತೋರುತ ಅಡಗುವ ಮುದಕಿ5
--------------
ಚಿದಾನಂದ ಅವಧೂತರು
ಮುಳುಗಿದನುಯೋಗಿಮುಳುಗಿದನುಒಳ್ಳೆ ಬಲಹುಳ್ಳ ನಾದ ಸಮುದ್ರ ಮಧ್ಯದಿಯೋಗಿಪಸತಿಮೂವರ ಸಮನಿಸಲಾರದೆಪಿತರೀರ್ವರ ಕರಕರೆಯನುನೀಗಿಸುತರೈವರೆನಿಪರು ಮಾತು ಕೇಳದಿರೆಮತಿಯೇನು ಹೇಳಲಿ ಎಲ್ಲ ಸಂಗವ ಬಿಟ್ಟು1ಜೇಷ್ಟರಾರುವರ ಕಾಟವ ತಾಳದೆದುಷ್ಟನಾದಿನಿಯ ನಾಲ್ವರ ತೊರೆದುಅಷ್ಟಮಾತುಳರಪ್ರಯೋಜಕವೆಂದುಕಷ್ಟರಿವರು ಎಂದು ಮನವ ಭೀತಿಯ ಬಿಟ್ಟು2ಇಂತು ಎಲ್ಲವ ಬಿಟ್ಟು ಚಿಂತಕ ತಾನಾಗಿಭ್ರಾಂತು ಎಳ್ಳಿನಿತು ಒಬ್ಬರೊಳಿಲ್ಲದೆಚಿಂತಕನು ಚಿದಾನಂದ ಮೂರುತಿಯನುಅಂತು ಬಲಿದು ಎನ್ನ ದೇಹ ಮರೆವಗಿಳಿ3
--------------
ಚಿದಾನಂದ ಅವಧೂತರು
ಮೂರ್ಖರಾದರು ಇವರು ಲೋಕದೊಳಗೆಏಕದೈವವ ಬಿಟ್ಟು ಕಾಕುದೈವವ ಭಜಿಸಿ ಪ.ಒಂಟಿಯಲಿ ಹೆಂಡತಿಯ ಬಿಡುವಾತನೇ ಮೂರ್ಖಗಂಟನೊಬ್ಬನ ಕೈಯಲಿಡುವವನೆ ಮೂರ್ಖನಂಟರಿಗೆ ಸಾಲವನು ಕೊಡುವಾತ ಮೂರ್ಖ - ಜಗಕಂಟಕನಾದವನು ಕಡು ಮೂರ್ಖನಯ್ಯಾ 1ಮುಪ್ಪಿನಲಿ ಹೆಂಡತಿಯ ಮಾಡಿಕೊಂಬವ ಮೂರ್ಖಸರ್ಪನಲಿ ಗಾರುಡವ ನಡಸುವನೆ ಮೂರ್ಖಇಪ್ಪತ್ತು ಒಂದು ಕುಲ ಉದ್ಧರಿಸದವ ಮೂರ್ಖಅಪ್ಪ ರಂಗಯ್ಯನನು ನೆನೆಯದವ ಮೂರ್ಖ 2ಸತ್ತ ಕರುವಿನ ತಾಯ ಹಾಲು ಕರೆವವ ಮೂರ್ಖಒತ್ತೆಯಿಲ್ಲದೆ ಸಾಲ ಕೊಡುವವನೆ ಮೂರ್ಖಹತ್ತೆಂಟು ಬಗೆಯಲಿ ಹಂಬಲಿಸುವವ ಮೂರ್ಖಹೆತ್ತ ತಾಯ್ ಬೈವವನು ಕಡು ಮೂರ್ಖನಯ್ಯ 3ಪಡೆದ ಮಗಳನುಮಾರಿ ಒಡಲಹೊರೆವವ ಮೂರ್ಖಮಡದಿ ಹುಟ್ಟಿದ ಮನೆಯೊಳಿರುವವನೆ ಮೂರ್ಖಬಡತನವು ಬಂದರೆ ಬಯಸಿಕೊಂಬವ ಮೂರ್ಖದೃಡಬುದ್ಧಿಯಿಲ್ಲದವ ಕಡು ಮೂರ್ಖನಯ್ಯ 4ರಾಮನಾಮವ ಸ್ಮರಿಸದಿದ್ಧಾತನೇ ಮೂರ್ಖಹೇಮವನು ಗಳಿಸಿ ಉಣದಿದ್ದವನೆ ಮೂರ್ಖನೇಮದಲಿ ಹಿರಿಯರನು ನೋಡದವ ಮೂರ್ಖ ದುರ್ನಾಮವನು ಕೊಂಬಾತ ಕಡು ಮೂರ್ಖನಯ್ಯ 5ಕಾಶಿಯಲಿ ದೇಹವನು ತೊಳೆಯದಿದ್ದವ ಮೂರ್ಖಭೂಸೂರರಿಗನ್ನವನು ಕೊಡದವನೆ ಮೂರ್ಖಶೇಷಪತಿ ಕೃಷ್ಣನ ನೆನೆಯದವ ಮೂರ್ಖಹರಿದಾಸನಾಗಿರದವನು ಕಡು ಮೂರ್ಖನಯ್ಯ 6ಉಂಡ ಮನೆಗೆರಡನ್ನು ಬಗೆವಾತನೇ ಮೂರ್ಖಕೊಂಡೆಯವ ಪೇಳಿ ತಿರುಗುವವ ಮೂರ್ಖಪುಂಡರೀಕಾಕ್ಷ ಶ್ರೀ ಪುರಂದರವಿಠಲನಕೊಂಡು ಭಜಿಸದ ಮನುಜ ಕಡು ಮೂರ್ಖನಯ್ಯ 7
--------------
ಪುರಂದರದಾಸರು