ಒಟ್ಟು 1564 ಕಡೆಗಳಲ್ಲಿ , 99 ದಾಸರು , 1235 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹೆಸರು ತಂದಿರ್ಯಾ ಭಿಕ್ಷಕೆ |ಹೆಸರು ತಂದಿರ್ಯಾಪಅಸಮವೀರರೆಂಬ ಹೆಸರು |ಕುಶಲಗಾರರೆಂಬ ಹೆಸರುಶಶಿಯಂತೆ ಶೋಭಿಸುವ ಶಿಶುವು |ಕುಲಕೆ ಯೋಗ್ಯನೆಂಬ ಹೆಸರು ||ಹೆಸರು||1ದಾನಶೀಲರೆಂಬ ಹೆಸರು |ಮಾನವಂತರೆಂಬ ಹೆಸರು |ಸಾನುರಾಗದಲ್ಲೂ ಆತ್ಮ |ಜ್ಞಾನಿಗಳೆಂದೆಂಬ ಹೆಸರು2ಹಿರಿಯ ಮನೆತನದ ಹೆಸರು |ಗುರುಗಳಾ ಭಕ್ತಿಯಲಿ ಹೆಸರು |ಪರಮಭಾಗವತರ ತೆರದಿ |ಹರಿಯ ಶರಣರೆಂಬ ಹೆಸರು3ಪುತ್ರವತಿಯರೆಂಬ ಹೆಸರು |ಸತ್ಯಶೀಲೆಯರೆಂಬ ಹೆಸರು |ಪತಿಯ ಸೇವೆಯಲ್ಲಿನಿರತ|ಪತಿವ್ರತೇಯರೆಂಬ ಹೆಸರು4ಸತ್ಯಸಂಧರೆಂಬ ಹೆಸರು |ತತ್ವಜÕರೆಂದೆಂಬ ಹೆಸರು |ಚಿತ್ತ ಶುದ್ಧರೆನಿಸಿ | ಗೋವಿಂದಾನ |ದಾಸರೆಂಬ ಹೆಸರು5
--------------
ಗೋವಿಂದದಾಸ
ಹೇಗಿಹನು ಹಾಗಿಹನು ಪರಿಪೂರ್ಣ ಬ್ರಹ್ಮಹೇಗಿಹನು ಹಾಗಿಹನುಹೇಗಿಹನು ಎಂತೆಂದು ಕೇಳುವರು ಯಾರುಹೀಗಿಹನು ಎಂತೆಂದು ಹೇಳುವರು ಯಾರುಪಹಸಿವೆಯಾಗಿರಲು ಹಸಿವೆಯಂತಿಹನುತೃಷೆಯು ತಾನಾಗಿರಲು ತೃಷೆಯಂತೆ ಇಹನು1ದುಃಖಿಯಾಗಿರಲು ದುಃಖಿಯಂತಿಹನುಸುಖಿಯು ತಾನಾಗಿರಲು ಸುಖಿಯಂತೆ ಇಹನು2ದುಷ್ಟ ತಾನಾಗಿರಲು ಅವ ದುಷ್ಟನಾಗಿಹನುಶಿಷ್ಟನಾಗಿರಲು ಅವ ಶಿಷ್ಟನಾಗಿಹನು3ಜೀವನಾಗಿರಲು ಅವ ಜೀವನಾಗಿಹನುಶಿವನಾಗಿರಲು ಅವ ಶಿವನಾಗಿ ಇಹನು4ಚಿತ್ತಕ್ಕೆ ಬುದ್ಧಿಗೆ ತಾನಿಹನು ದೂರಸತ್ಯ ಚಿದಾನಂದ ಗುರುವೆಂಬಾತನು5
--------------
ಚಿದಾನಂದ ಅವಧೂತರು
ಹೇಗೆ ಅರ್ಚಿಸಲಿ ಮೆಚ್ಚಿಸಲಿ ನಿನ್ನನಾಗಶಯನ ನಾರದವಂದಿತನೆ ದೇವಾ ಪಮಂಗಳಾಭಿಷೇಕಕೆಉದಕತರುವೆನೆನೆಗಂಗೆಯ ಅಂಗುಟದಿ ಪಡೆದಿಹೆಯೊ ||ಸಂಗೀತ ಕೀರ್ತನೆ ಪಾಡುವೆನೆಂದರೆಹಿಂಗದೆ ತುಂಬುರ ನಾರದರು ಪಾಡುವರೊ 1ಪುಷ್ಪವ ತಂದು ನಿನಗರ್ಪಿಸುವೆನೆಂದರೆಪುಷ್ಪ ಫುಲ್ಲಯಿಸಿದೆ ಹೊಕ್ಕುಳಲಿ ||ಮುಪ್ಪತ್ತು ಮೂರ್ಕೋಟಿ ದೇವತೆಗಳು ನಿನಗೊಪ್ಪಯಿಸೆ ನೈವೇದ್ಯ ನಿತ್ಯತೃಪ್ತನು ನೀನು 2ಕೋಟಿಸೂರ್ಯರ ಕಾಂತಿ ಮಿಗಿಲಾದವನಿಗೊಂದುಮೋಟು ದೀವಿಗೆ ಬೆಳಗೆ ಬೆಳಕಹುದೆ? ||ಸಾಟಿಗಾಣದಸಿರಿಉರದೊಳು ನೆಲಸಿರೆಪೋಟುಗಾಸನು ಎಂತು ಕಾಣಿಕೆಯಿಡಲಯ್ಯ 3ಹಾಸಿಗೆಯನು ನಿನಗೆ ಹಾಸುವೆನೆಂದರೆಶೇಷನ ಮೈಮೇಲೆ ಪವಡಿಸಿಹೆ ||ಬೀಸಣಿಕೆಯ ತಂದು ಬೀಸುವೆನೆಂದರೆಆಸಮೀರಣ ಚಾಮರವ ಬೀಸುತಿಹನೋ4ನಿತ್ಯಗುಣಾರ್ಣವ ನಿಜಸುಖ ಪರಿಪೂರ್ಣಸತ್ತು ಚಿತ್ತಾನಂದ ಸನಕಾದಿ ವಂದ್ಯ ||ಮುಕ್ತಿದಾಯಕ ನಮ್ಮಪುರಂದರವಿಠಲನುಭಕ್ತಿಪ್ರಿಯನು ಎಂದು ಭಜಿಸಿ ಕೊಂಡಾಡುವೆ 5
--------------
ಪುರಂದರದಾಸರು
ಹೇರೊಡಲ ತವ ಪಾದವಾರಿಜದ್ವಯ ಮನೋ -ನೀರಜಾಲಯದಿ ಭಜಿಪೆÉ ಪಸಾರಿದವರಘಸ್ತೋಮ ದೂರ ಓಡಿಸಿ ಬಯಕಿಪೂರೈಸಿ ಪೊರೆವೊದಾತಾ- ಖ್ಯಾತಾಅ.ಪಪ್ರದ್ಯುಮ್ನ ಪೌತ್ರಸುತ ಮುದ್ದುಗಣರಾಯಾ 1ಮಗ್ನವಾಗಲಿ ಚಿತ್ತ - ಭಗ್ನದಂತನೆ ನಿನ್ನಲಿಲಗ್ನಮನವಿತ್ತು ನಿರ್ವಿಘ್ನಕೃತಿನುಡಿಸೋ 2ಪ್ರೀತಿಯಿಂದಲಿ ಸ್ತುತಿಪೆ ನೀತಗುರುಜಗ -ನ್ನಾಥವಿಠಲ ಪಾದದೂತ ನೀ ಬಹು ಖ್ಯಾತಾ 3
--------------
ಗುರುಜಗನ್ನಾಥದಾಸರು
ಹೋಯಿತಲ್ಲಾಯುಷ್ಯ ಹೋಯಿತಲ್ಲಯ್ಯಸಾಯಸಬಟ್ಟೆನು ಭವದಿ ಶ್ರೀಯರಸನ್ನ ನಂಬದೆ ಪ.ಪಶ್ಚಿಮ ಜಾಗರದಿ ಕಾಕುತ್ಸ್ಸ್ಥನ ಪ್ರೀತಿಗೋಸುಗದುಶ್ಚಿತ್ತ ವೃತ್ತಿಯನೀಗಿನಿಶ್ಚಿತನಾಗಿಸಚ್ಚಿದಾನಂದಕಾಯನ ಆಶ್ಚರ್ಯಕರ ನಾಮವಉಚ್ಚರಿಸದೆ ನಿದ್ರೇಲಿ ಮೆಚ್ಚಿ ಘುರುಘುರಿಸುತ 1ತುಲಸಿ ಮಂಜರಿ ಪುಷ್ಪ ಅಲಸದೆ ತಂದು ಶ್ರೀನಳಿನನೇತ್ರನ್ನ ನಾಮಾವಳಿಗಳಿಂದಸಲೆ ಅವನಂಘ್ರಿಕಮಲಕರ್ಪಿಸದೆ ಸದಾಲಲನೆಸಂಪದಾಬ್ಧಿಲಿ ಮುಳುಗಿ ದುರಾಶೆಯಲ್ಲಿ2ಸತತ ಶಕ್ತ್ಯಾನುಸಾರ ವ್ರತಧರ್ಮಾಚರಿಸದೆಅತಿಥÀರೊಳೀತನ ನಂಟನೆಂದರೆಅತಿಸ್ನೇಹ ಬಳಸುತ ಹಿತಬಿಟ್ಟೆ ವೃಥಾ ಕೆಟ್ಟೆಗತಿಕಾಣಿಸಿನ್ನಾರೆ ಶ್ರೀಪತಿ ಪ್ರಸನ್ವೆಂಕಟಯ್ಯ3
--------------
ಪ್ರಸನ್ನವೆಂಕಟದಾಸರು