ಒಟ್ಟು 2030 ಕಡೆಗಳಲ್ಲಿ , 114 ದಾಸರು , 1572 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸಿದ್ದಮಾಡಿಕೊ ಹರಿನಾಮ ಬದ್ಧನಾಗದಲೆ ಶುದ್ಧಬುದ್ಧಿಯು ನಿನ್ನೊಳಿದ್ದ ಸಮಯದಲ್ಲೇ ಪ ಕಿತ್ತಿ ಅರ್ಭಟಿಸುತ ಸುತ್ತಿದ ಮಹ ಧನುರ್ವಾಯ ಪಿತ್ತ ಕಫ ಮೇಲಕ್ಕೆ ಒತ್ತಿಕೊಂಡೊಯ್ದು ಕುತ್ತಿಗೆ ಅಡರಿಕೊಂಡೆತ್ತೆತ್ತ ಬೊಗಳಿಸುವ ಹೊತ್ತಿಗ್ಗೆ ಹರಿನಾಮ ಮತ್ತಾಗಿ ಬರದು 1 ನಾಲಗೆ ಸೆಳೆಯುವುದು ಆಲಿಗಳು ತಿರುಗುವುವು ಮೇಲಕ್ಕ್ಹರಿವುವು ನಯನ ನೀಲಗೊಂಬೆಗಳು ಕಾಲಚಕ್ರನಿಗಂಜಿ ಮಲ ಒಸರುತಿರುವಾಗ ನೀಲಶ್ಯಾಮನ ನಾಮ ನಾಲಗ್ಗೆ ಬರದು 2 ಎಂಟೆರಡು ವಾಯುಗಳ ಕಂಠನಾಳಕೆ ಸೇರಿ ಸುಂಟರಗಾಳ್ಯಂತೆ ಅಂಟಿ ಸುಳಿಸುತ್ತೆ ಮೀಂಟಿ ಕರ್ಣದಿ ಒದರಿ ಹೊಂಟೋಗ್ವ ಸಮಯ ದ್ವೈ ಕುಂಠ ನಾಮವು ತಂಟೆಗೆ ಬರದು 3 ಅಡವು ಬಂದು ಅವಯವ ಕೂಡಿಕೊಳ್ಳಲು ಸೊನ್ನೆ ಕಾಯ ನಾಡಿಗಳು ಕುಂದಿ ನೋಡಿ ಸತಿಸುತರಂ ಮಾತಾಡೇನೆಂದೆನಲಾಗ ರೂಢಿಗೀಶನ ಧ್ಯಾನ ಕೂಡಿ ಬರದಯ್ಯ 4 ಮೂಳನಾಗಿ ಸಮಯ ಹಾಳುಮಾಡಿಕೊಳ್ಳದೆ ಕಾಲನಾಳಿನ ಮಹ ಧಾಳಿಯನು ಗೆಲಿಯೊ ಕಾಲಿಮರ್ದನ ಜಗತ್ಪಾಲ ಶ್ರೀರಾಮನಡಿ ಕಾಲತ್ರದಲಿ ದೃಢದಿ ಮೇಲಾಗಿ ಭಜಿಸಿ 5
--------------
ರಾಮದಾಸರು
ಸಿದ್ಧಬಸವ ಪ್ರಸಿದ್ಧನ ಮಹಿಮೆಯ ಕೇಳಿರಿ ನೀವಿನ್ನು |ವಿದ್ಯಾ ಬುದ್ಧಿ ಧನ ಧಾನ್ಯವನು ಸಿದ್ಧಿಸುವವಿನ್ನೂ ಪ ಶಿವನ ಅಪ್ಪಣೆ ತೆಗೆದುಕೊಂಡು ಶಿವಕಂಚಿಯೊಳಗೆ |ಪಾವನ ಚರಿತ ಬ್ರಾಹ್ಮಣನಲ್ಲಿ ಪುಟ್ಟಿದನು ಬೇಗ ||ದಿವಸ ದಿವಸಕೆ ಬೆಳೆದನು ಬಿದಗಿ ಚಂದ್ರಮನ ಹಾಗೆ |ಜಾವ ಜಾವಕೆ ಶಿವನ ಧ್ಯಾನವ ಮಾಡುವ ಮನದೊಳಗೆ1 ಮುಂಜಿ ಮಾಡಿಸಿಕೊಂಡನು ಸಿದ್ಧನು ಮದುವೆಯಾಗಲಿಲ್ಲ |ರಂಜಿಸುತಿಹನು ಸೂರ್ಯನಂತೆ ತೋರುವ ಜಗಕೆಲ್ಲ ||ಬಂಜೆ ಒಬ್ಬಳು ಇದ್ದಳು ಆಕೆಗೆ ಮಗನ ಕೊಟ್ಟನಲ್ಲ |ಸಂಜೆ ಹಗಲು ಕಾಣದ ಕುರುಡಗ ಕೊಟ್ಟನು ಕಣ್ಣುಗಳ 2 ತಂದೆ ತಾಯಿಗೆ ಹೇಳಿದನಾಗ ಪೋಗುವೆ ನಾನೆಂದು |ಕಂದ ನಮ್ಮನು ಬಿಟ್ಟು ಪೋಗುವದುಚಿತವೆ ನಿನಗೆಂದು ||ಅಂದ ತಾಯಿಗೆ ವಂದಿಸಿ ಹೇಳಿದ ಮಗನಾಗುವೆನೆಂದು |ಸಂದೇಹವು ಬೇಡೆಂದು ಪೇಳುತ ತೆರಳಿದ ದಯಾಸಿಂಧು 3 ಮಹಾಶಿವಾಲಯ ಕಂಡನು ಸಿದ್ಧನು ದೇಶ ತಿರುಗುತಲಿ |ಆ ಸೀಮೆಯಲಿ ಹಳ್ಳದ ನೀರು ನಿರ್ಮಲ ನೋಡುತಲಿ ||ಆಸನ ಹಾಕಿ ಕುಳಿತನು ಶಿವನ ಧ್ಯಾನವ ಮಾಡುತಲಿ |ಆ ಸಮಯದಿ ಬಂದನು ಕರಣಿಕ ಹೊಲಗಳ ನೋಡುತಲಿ 4 ಉದ್ದಂಡ ಸಂತತಿ ಆಗಲಿ ಇನ್ನು 5 ನಿನ್ನಯ ಪೂಜೆಯ ಮಾಡುವದ್ಹೇಗೆ ಹೇಳೋ ನಮಗೀಗ |ಮನ್ನಿಸಿ ಅವಗೆ ಪೇಳಿದ ಸಿದ್ಧ ಪುರುಷನು ತಾ ಬೇಗ ||ಸಣ್ಣ ಬಿಂದಿಗೆಯನಿಟ್ಟು ದ್ವಿಜರ ಪಾದೋದಕವೀಗ |ಸಂಖ್ಯೆಯಿಲ್ಲದ ಕೊಡಗಳ ಹಾಕಲು ತುಂಬದು ಎಂದೀಗೆ 6 ಅಂದಿಗೆ ಉಂಟು ಇಂದಿಗೆ ಇಲ್ಲ ಎನಲಾಗದು ನೀನು |ಸಂದೇಹವಿಲ್ಲ ಆಶ್ವೀನ ವದ್ಯ ದ್ವಿತೀಯದ ದಿನವು ||ಇಂದಿಗೆ ಕರಣಿಕ ವಂಶದವರು ಮಾಡುತಾರೆ ಇನ್ನೂ |ಮುಂದಕೆ ತೆರಳಿ ಕೊಳಕೂರಕೆ ಬಂದ ಸಿದ್ಧ ತಾನು 7 ಗಾಣಿಗರ ಮನೆಯೊಳಗಿದ್ದು ಗಾಣಾ ಹೂಡಿದನು |ಪ್ರಾಣ ತೊಲಗಿದ ಹೆಣ್ಣುಮಗಳಿಗೆ ಪ್ರಾಣವನಿತ್ತಾನು ||ಗೋಣಿಯೊಳಗೆ ಹೊಲಿದು ನದಿಯಲಿ ಪಾಚ್ಛಾ ಹಾಕಿದನು |ಕಾಣಿಸದಂತೆ ಬೇಗನೆ ಹೊರಗೆ ಹೊರಟು ಬಂದಾನು 8 ಹೆಸರು ನಿನ್ನದು ಏನು ಎಂದು ಪಾಚ್ಛಾ ಕೇಳಿದನು |ಹೆಸರು ನನಗೆ ಬಸವನೆಂದು ಕರೆತಾರೆ ಇನ್ನು ||ಪಶು ನೀನಾದರೆ ಸೊಪ್ಪಿಯ ಬೇಗ ತಿನಬಾ ಎಂದನು |ನಸು ನಗುತಲಿ ಸೊಪ್ಪಿಯ ತಿಂದು ಡುರಕಿ ಹೊಡೆದಾನು 9 ಗೊಂಬಿಗೆ ವಸ್ತಾ ಸೀರೆಯನುಡಿಸಿ ಸಿಂಗಾರ ಮಾಡಿದನು |ರಂಭೆಗೆ ಸರಿ ಈ ಹೆಣ್ಣು ಮಗಳಿಗೆ ಮದುವ್ಯಾಗೋ ನೀನು ||ಅಂಬುಜ ಮುಖಿ ಬಾರೆಂದು ಕರೆದನು ಸಿದ್ಧ ಮುನೀಶ್ವರನು |ತುಂಬಿದ ಬಸುರೊಳು ಮಗನ ಪಡೆದಳು ವಂಶಾದೆ ಇನ್ನು 10|| ನೇಮವ ಮಾಡಿ ಕೊಳಕೂರದಿ ಇರುವೆನು ನಾನೆನುತ |ಈ ಮಹಿಮೆಯೊಳಗೆ ಭೀಮಾ ದಕ್ಷಿಣವಾಹಿನಿ ಮಹಾಕ್ಷೇತ್ರ ||ಗ್ರಾಮಸ್ಥರನು ಕರೆದು ಹೇಳಿದನು ಅಡಗುವೆ ನಾನೆನುತ |ನೀವು ಮಾತ್ರ ನಾವಿದ್ದ ಸ್ಥಳವನು ನೋಡಬೇಡೆನುತ 11 ಕಲಿಕಾಲವನು ಕಂಡು ಸಿದ್ಧನು ಅದೃಶ್ಯನಾದನು |ತಿಳಿದು ಭಕ್ತಿ ಮಾಡಿದವರಿಗೆ ವರಗಳ ಕೊಡುತಿಹನು ||ಸುಳಿವನು ಕಣ್ಣಿಗೆ ಸತ್ಪುರುಷರಿಗೆ ಸಿದ್ಧ ಬಸವ ತಾನು |ಹಲವು ಹಂಬಲ ಮಾಡಲು ಬೇಡರಿ ಇರುವೆ ನಾನಿನ್ನೂ 12 ಹನ್ನೆರಡು ನುಡಿ ಸಿದ್ಧನ ಸ್ತೋತ್ರವ ಕೇಳಿದವರಿಗೆ |ಮುನ್ನ ಮಾಡಿದ ಪಾಪವು ನಾಶಾಗಿ ಹೋಗುವದು ಬೇಗ ||ಧನ್ಯನಾಗುವ ಕೀರ್ತಿ ಪಡೆಯುವ ಲೋಕದ ಒಳಗ |ಚನ್ನಾಗಿ ಶ್ರೀಪತಿ ಗುರುವಿಠ್ಠಲನು ಒಲಿವನು ತಾ ಬೇಗ 13
--------------
ವಿಶ್ವಪತಿ
ಸಿದ್ಧಾಂತವಿದು ನೋಡಿ ಸದ್ಗುರುವಿನ ಕೃಪೆಯು ಬುದ್ಧಿವಂತರು ಬಲ್ಲರಾಧ್ಯಾತ್ಮ ಸುಖವು ಧ್ರುವ ಕಾಲಿಲ್ಲದಾಕಳವು ಬಾಲಮುಖದಲಿ ಬಂದು ಕಾಳರೂಪದ ಹುಲಿಯನೆ ನುಂಗಿತು ಮೇಲವರಿಯಲಿ ಬಂದು ಜಲದೊಳಗಿನ ಕಪ್ಪೆ ಮೂಲ ಸರ್ಪದ ಹೆಡೆಯ ನುಂಗಿದದು ನೋಡಿ 1 ಬಾಲ ಇಲ್ಲದ ಇಲಿಯು ಜಾಲಹಾಕುತ ಬಂದು ಸ್ಥೂಲ ಬೆಕ್ಕಿನ ತಲೆಯನೆ ಮುರಿಯಿತು ನಾಲಿಗಿಲ್ಲದ ಮೊಲವು ನಿಲುಕಿ ಜಪವ ಹಾಕಿ ಭಲೆ ಶ್ವಾನನ ಗಂಟಲ್ಹಿಡದಿಹುದು ನೋಡಿ2 ದಿವ್ಯ ಯೋಗದ ಮಾತು ಕಿವಿ ಇಲ್ಲದವಕೇಳಿ ಕಣ್ಣಿಲ್ಲದವ ಕಂಡು ಬೆರಗಾದನು ಕೌತುಕವು ಕಂಡು ಮಹಿಪತಿಯು ತನ್ನೊಳು ತಾನು ತ್ರಾಹಿ ತ್ರಾಹಿಯಿಂದ ಮನದೊಳು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸಿಂಧು ಶಾಯಿವಾಸುದೇವ ನೊಂದೆನಯ್ಯ ತಾಪತ್ರಯದಿ | ಪಾಲಿಸಯ್ಯ ಹರಿಯೇ ಪಾಲಿಸಯ್ಯ ಪ ಧ್ಯಾನ ವರಿಯೆ ಜ್ಞಾನವರಿಯೆ | ಮೌನವರಿಯೆ ನಾ ನಾನಂಬಿದೆ ಹರಿಯೆ ನಾನಂಬಿದೆ 1 ಸಾರವೆಂಬೊ ಸಂಸಾರ | ಶರಧಿಯಲ್ಲಿ ಮುಳುಗಿರುವೆ ನಾರಾಯಣ ಶ್ರೀಮನ್ನಾರಾಯಣ 2 ಆಸೆಯೆಂಬ ಪಾಶಕಡಿಯೊ | ದಾಸನೆಂದು ನೀ ಎನ್ನ | ಫೋಷಿಸಯ್ಯ ಹರಿಯೆ ಪೋಷಿಸಯ್ಯ 3
--------------
ಶಾಮಸುಂದರ ವಿಠಲ
ಸಿಂಧುಶಯನನೆ ಸರ್ವಬಂಧುಬಳಗ ನೀನೆ ತಂದೆ ನೀ ಬಿಟ್ಟರೆ ಬಂಧುಗಳ್ಯಾರಿಲ್ಲ ಪ ಒಂದು ವೃಕ್ಷದಿ ಬಂದು ಪಕ್ಷಿಗ ಳ್ವøಂದ ಗೂಡಗಲ್ಹೋಗುವಂದದಿ ಒಂದಕೊಂದು ಸಂಬಂಧವಿಲ್ಲದ ಬಂಧುವೆಂಬುವರೆಲ್ಲ ಪುಸಿಯು ಅ.ಪ ಕೊಳದಿ ಮಕರಿಗೆ ಸಿಲ್ಕಿ ಬಳಲುತಿರುವ ಕÀರಿಯ ಬಲವಾಗುಳಿಸಿದರಾರು ಬಳಗ ಹಿಂಡುಗಳಿರ್ದು ನಳಿನಲೋಚನ ನೀನೆ ಗತಿಯೆನೆ ಒಲದು ಆ ಕ್ಷಣ ಕರಿಯನುಳುಹಿದಿ ತಿಳಿದು ಭಜಿಸುವ ದಾಸಜನಕತಿ ಸುಲಭನೆಲೊ ನೀ ಜಲಜನಾಭ 1 ಕುರುಪತಿಸಭೆಯೊಳು ಇರುತಿರೈವರು ಪರಿ ದುರುಳ ಕೊಳ್ಳುತಲಿರೆ ನೆರೆದ ಪತಿಗಳು ಸುಮ್ಮನಿರುತಿರೆ ಹರಿಯೆ ಗತಿಯೆಂದು ತರುಣಿ ಮೊರೆಯಿಡೆ ಮಾನವ ಕಾಯ್ದಿ ಚರಣಭಕ್ತರ ನಿರುತರಸುರಧೇನು 2 ದೃಢದಿ ಶ್ರೀಹರಿಯೆಂದು ನುಡಿಯುವ ಬಾಲಗೆ ಹಿರಣ್ಯ ಕಡುವೈರಿಯಾಗಿ ಗಡನೆ ತೋರ್ಹರಿ ಮೂಢ ಎಲ್ಲೆನೆ ಒಡನೆ ಕಂಬದಿ ಮೂಡಿ ದುರುಳನ ಒಡಲ ಬಗಿದು ಪಿಡಿದು ಭಕ್ತನ ಬಿಡದೆ ಸಲಹಿದಿ ಕಡುದಯಾನಿಧೆ 3 ಇಳೆಪತಿ ಪಿತನಿದಿರೊಳ್ ಮಲತಾಯಿಕೃತಿಯಿಂದ ಬಲುನೊಂದು ಧ್ರುವರಾಜ ಕಳವಳಗೊಂಡು ಜಲಜನಾಭನ ಮೊರೆಯನಿಟ್ಟು ಚಲಿಸದೆ ಮನಮುಟ್ಟಿ ತಪಿಸಲು ಒಲಿದು ಧ್ರುವಪದವಿತ್ತಿ ಭಕ್ತರ ಕಲ್ಪಿತವನೀವ ಕಲ್ಪತರು ನೀನು 4 ಪ್ರಾಣೇಶ ಶ್ರೀರಾಮ ಧ್ಯಾನಿಪರಿಗೆ ಸತ್ಯ ನಾನಾದೈವದ ಬಲವು ನೀನೆಯಾಗಿರುವಿ ಕಾನನದಿ ಕಲ್ಲನ್ನು ತುಳಿದು ದಾನ ಕೊಟ್ಟೆಯ ಜೀವ ಸುದತಿಗೆ ಜ್ಞಾನವಿಲ್ಲದಧಮ ಎನಗೇನು ಶಕ್ಯ ನಿನ್ನ ಮಹಿಮೆ ಪೊಗಳಲು 5
--------------
ರಾಮದಾಸರು
ಸಿರಿ | ವಕ್ಷ ಕಮಲದಳಾಕ್ಷ ಕೇಶವ | ಪಕ್ಷಿವರಗಮನಾ ರಕ್ಷಿಸೋ ಎನ್ನಾ ಪ ಭಂಗ ಬಿಡಿಸಿದ ವಂಗ ವಿಷಯಕ | ರಂಗ ತಿರುವೆಂಗಳೇಶನೆ | ಇಂಗಿತವನರಿದು | ಭವ ಭಯ | ಹಿಂಗಿಸುವ ಸಾಧು ಸಂಗವನುದಿನ | ಸಂಗಡಿಸು ಎನ್ನಗೆ 1 ಧ್ಯಾನ ಮೌನಗಳೇನು ಅರಿಯದ | ಹೀನ ನಾನೆಂದು ಅನತಾದ ಮಾನ | ನಿನ್ನದಲೈ | ಖೂನಿಡುವ ಶೃತಿಗೇನು ಗತಿಯಮ್ಮ | ನೀನುದ್ಧರಸದೇ 2 ನಂದ ಕಂದ ಗೋವಿಂದ ಸಚ್ಚಿದಾ | ನಂದ ಅನಿಮಿತ್ತ ಬಂಧು ಯೆಂಬುವಾ | ನೇಂದ್ರಿಯದ ನೆಲಿಗೇ || ಕುಂದ ಕೊರತೆಯಾ | ಇಂದು ಪಾಲಿಸು | ತಂದೆ ಮಹಿಪತಿ ನಂದನೊಡಿಯ ಮು | ಕುಂದ ಮುನಿವಂದ್ಯನೆ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಸಿರಿ | ಉರಗಾದ್ರಿ ವಾಸಾ ಪ ಭವ | ವಾರಿಧೀಯ ಅ.ಪ. ಸುತ್ರಾಮ ವಂಧ್ಯಾ 1 ಭಕ್ತ ವತ್ಸಲ ಕೃಷ್ಣ | ಮುಕ್ತಿದಾಯಕ ಹರಿಯೆ |ಸಕ್ತವಾಗಿಸು ನಿನ್ನ ಪ್ರಸಕ್ತಿಲೀ |ದೃತ - ಭೋಕ್ತø ಭೋಗ್ಯಗ ಮುಕ್ತರಾಶ್ರಯ |ಭಕ್ತಿ ಪುಟ್ಟಿಸಿ ನಿನ್ನ ಪದದಲಿಯುಕ್ತ ರೀತಿಲಿ ವ್ಯಕ್ತವಾಗ್ವುದು |ಭಕ್ತವತ್ಸಲ ಅವ್ಯಕ್ತ ಮೂರ್ತೇ 2 ಊರು ಒಂದೆನಗಿಲ್ಲಾ | ಗಾರಗಳ್ಮಿತಿಯಿಲ್ಲಮರಳಿ ಬರುವ ರೋಗ | ಪಾರ ಗಾಣಿಸೊ ದೇವ ||ದೃತ - ಬಾರಿ ಬಾರಿಗೆ | ಮೊರೆಯ ನೀಡುವೆನು |ಧೀರ ಗುರು ಗೋವಿಂದ ವಿಠಲನೆಸೂರಿಗಮ್ಯ | ಸುಖಾತ್ಮ ಚಿನುಮಯಚಾರು ರೂಪವ | ತೋರೊ ಬೇಗ3
--------------
ಗುರುಗೋವಿಂದವಿಠಲರು
ಸಿರಿ ಇಂದಿರೇಶ ದಾಸಜನಪೋಷ ದಾಸನಾಶೋತ್ತರಕೆ ಬೇಸರಿಯಬೇಡ ಪ ಭೇದಭಾವನೆ ಬಿಡಿಸು ವಾದಮತಿ ಪರಿಹರಿಸು ಸಾಧುಸಜ್ಜನರ ಸುಬೋಧನುಡಿಗಲಿಸು ಕ್ರೋಧ ತಾಮಸ ಕಡಿಸು ವೇದವಾಕ್ಯವ ತಿಳಿಸು ಸಾಧನದಿ ಪರಲೋಕ ಹಾದಿಯೊಳು ನಡೆಸು 1 ಶಾಂತಿ ಸದ್ಗುಣ ಕಲಿಸು ಶಾಂತಿನುಡಿಗಳು ನುಡಿಸು ಶಾಂತಿ ಮಂತ್ರವ ಬೋಧಿಸು ಶಾಂತಿಸ್ಥಿರಗೊಳಿಸು ಶಾಂತರೊಡನಾಟವಿರಿಸು ಶಾಂತಿಸುಖ ಕರುಣಿಸು ಶಾಂತಜನಪ್ರಭುವೆ ವೇದಾಂತ ಎನಗೊಲಿಸು 2 ಕಾಸಿನಾಸೆಯು ಬಿಡಿಸು ಹೇಸಿ ಬವಣೆಯ ಗೆಲಿಸು ಮೋಸಮಯಪಹರಿಸು ದೋಷದೂರೆನಿಸು ದೋಷನಾಶನ ಜಗದೀಶ ಶ್ರೀರಾಮ ನಿನ್ನ ಸಾಸಿರ ನಾಮ ಎನ್ನ ಧ್ಯಾಸದೊಳು ನಿಲಿಸು 3
--------------
ರಾಮದಾಸರು
ಸಿರಿ ಚರಣದಲ- ಪಾರ ಭಕುತಿಯನೀಯೋ ತವ ಸೇವಕನೆನಿಸಿ ಕೀರುತಿಯನು ಪಡೆಯೋ ಭವಕ್ಲೇಶ ಕಳೆಯೊ ಪ ಸೂರಿ ಸುಬ್ಬಣಾಚಾರ್ಯಕರಸ- ರೋರು ಹಗಲಲಿ ಪೂಜೆಗೊಳುತಲಿ ಚಾರುತರ ಶ್ರೀ ಜಯಮಂಗಳಿಯ ತೀರದೊಳಿರುವ ವೀರ ಮಾರುತಿ ಅ.ಪ. ಪ್ರತಿ ವರುಷ ಮಾಘಸಿತ | ನವಮಿ ದಿನದೊಳು ನೀ- ನತಿವಿಭವದೊಳು ನಗುತ | ಭಕುತರಿಷ್ಟವ ಸಲಿಸೆ ರಥದೊಳಗೆ ಕುಳ್ಳಿರುತ | ವಿಧ ವಿಧ ವಾದ್ಯಗಳ ತತಿಯನಾಲೈಸುತ | ಅತಿ ಮೋದಬಡುತ ಪರಿ ಸಂ- ಸ್ತುತಿಸೆ ಹಿಗ್ಗುತಲವರ ಸ್ವಮನೋ- ರಥಗಳ ನೀ ಸಲಿಸುವೆನೆನುತಲಿ ಅತುಳ ವಿಕ್ರಮದಭಯ ಹಸ್ತದಿ ಕೃತಿರಮಣ ಸಿರಿವರ ಹರಿಯನನು ಮತವ ಪಡೆಯುತ ರಥವ ನಡೆಸಿ ಚತುರ ದಿಕ್ಕಲಿ ಬಿಜಯ ಮಾಡುತ ಸತತ ಹರುಷವಗರೆವ ದೇವ 1 ರಕ್ಕಸಕುಲ ತಮ ಭಾನು | ತಾಮಸರ ಧ್ಯಾನಕೆ ಸಿಕ್ಕುವನಲ್ಲ ನೀನು | ಸುಜನರ ಹೃದಯದೊಳು ಅರ್ಕನೊಲು ಪೊಳೆವನು | ಹರಿಸಿರಿಗಾಳುಳಿದು ಬಕ್ಕ ದಿವಿಜರಿಗಿನ್ನು | ಗುರುಬಲ್ಲೆ ನಾನು ಚಿಕ್ಕ ರೂಪವಗೊಂಡು ಲಂಕೆಯ ಪೊಕ್ಕು ರಾಮನ ಸತಿಯ ಕಂಡು ತುಕ್ಕಿ ವನವನು ಸೂರೆ ಮಾಡಿ ಉಕ್ಕಿನ ಧ್ವಜಸ್ತಂಭದಿಂದ ಸೊಕ್ಕಿ ಬಂದ ದನುಜವ್ರಾತವ ಕುಕ್ಕಿ ಕೆಡಹಿ ಪುರವನುರಹಿ ಅಕ್ಕರದ ಮಣಿಸಹಿತ ಬಂದು ಪಕ್ಕಿದೇರನಿಗೆರಗಿ ನಿಂದೆ 2 ತುತಿಸ ಬಲ್ಲೆನೆ ನಾನು | ನಿನ್ನಯ ಸುಗುಣಗಳ ತತಿಗಳೆಲ್ಲವನು | ತ್ರಿಪುರ ಸುಂದರಿ ಪಾ- ರ್ವತಿ ಪತಿಯ ಪಡೆದವನು | ರಂಗೇಶವಿಠಲಗೆ ಅತಿಪ್ರೀತಿಸುತ ನೀನು | ನಿಷ್ಕಾಮಯುತನು ಪತಿತರನುದ್ಧರಿಸಲು ನೀ ಸಿರಿ ಪತಿಯ ಮತದೊಳು ಹನುಮ ಭೀಮ ಯತಿಯ ರೂಪವ ತಾಳಿ ಹರುಷದಿ ಕ್ಷಿತಿಯ ಭಾರವ ಹರಸಿ ಸಲಹಿದೆ ಅತುಳ ಮಹಿಮ ನಿನ್ನಪರಿಮಿತ ಶ ಕುತಿಗೆ ನಮೊ ನಮೊ ವಾಯುತನಯನೆ ಸತತ ಮುದದೊಳು ನಿನ್ನ ಸ್ಮರಿಸುವ ಮತಿಯ ಪಾಲಿಸು ಪತಿತ ಪಾವನ 3
--------------
ರಂಗೇಶವಿಠಲದಾಸರು
ಸಿರಿ ಪಾಂಡುರಂಗನಾ ಪಾಡಿದೆನೊ ಜಗದಂತರಂಗನ ಖಗ ತುರಂಗನ ಬೇಡಿದೆನೊ ಗುಣಾಂತರಂಗನಾ ಪ ಕಪಿಲ ವಿಭುಹರಿ ಸಾರ್ವಭೌಮ ಸು ತಪನಂದನ ಕೃಷ್ಣ ಕೃಷ್ಣ ಗೀರ್ವಾಣ ತಪಯಜ್ಞ ಜಿತದತ್ತ ಧನ್ವಂತ್ರಿ ವಿನುತ ವೃಷಭ ಹಯ ಲಪನ ವೈಕುಂಠ ಹಂಸ ತಪನಾ ಕುಪಿತ ಜಿತ ಮುನಿ ನರನಾರಯಣ ಅಪರಿಮಿತ ರೂಪ ಧರಿಸಿದಾನಂದ ಗುಪಿತ ಮಹಿಮನ 1 ಮುನಿವನ ಜಿತ ಚಿತ್ತ ಶುದ್ಧದಿ ಜನನಿ ಜನಕನ ಚರಣ ಸೇವೆಯ ಅನುದಿನದಿ ಘನವಾಗಿ ಮಾಡುತ ಗುಣಗಳಿಂದಲಿಯಿರಲು ಇತ್ತಲು ಮುನಿ ನಾರದನು ಗಾಯನವ ಗೈಯುತ ಇನಿತು ಸೋಜಿಗ ನೋಡಿ ತನ್ನಯ ಜನಕಗರುಹಲು ನಗುತಲಾ ಮನದಿ ಕೈಕೊಂಡ ಮೂಲ ಮೂರ್ತಿಯ 2 ಪೊಡವಿಯೊಳು ನೀನವತರಿಸಿ ಆ ದೃಢü ಬಕುತನಿಗೆ ದರುಶನವೆ ಇ ತ್ತಡಿಗಡಿಗೆ ಸುಖಬಡಿಸಿ ಅಲ್ಲಲ್ಲಿ ಬಿಡದೆ ನಿಲ್ಲುವೆ ನಿಮ್ಮ ಸಹಿತಲಿ ವಿನುತ ಕಳುಹಿದ ಒಡನೆ ಸಲ್ಲಿಪೆನೆಂದ ಯಮುನಾ ತಡಿಯ ಜನಿಸಿದ ಜಗನ್ಮೋಹನಾ 3 ನಿಧಿಯ ನೋಡುವೆನೆನುತ ಗೋವುಗಳ ಮುದದಿ ಮೇಯಿಸಿಕೊಳುತ ಕಾವುತ ಒದಗಿ ಗೋವಳರೊಡನೆ ಬಂದನು ವಿಧಿ ಸಂಭವಾದ್ಯ ಭಕ್ತನ ಎದುರಲಿ ನೋಡಿದನು ಹೋ ಹೋ ಇದೇ ಸಮಯವೆಂದು ನಿಂದಾ ಹಿಂಭಾ ಗದಲಿ ಭಕ್ತಿಗೆ ಮೆಚ್ಚಿ ಬಲು ವೇಗಾ4 ತಿರುಗಿ ನೋಡದಲಿರಲು ಭಕುತನ ಮರಳೆ ಮಾತಾಡಿಸಲು ಇಟ್ಟಿಗೆ ಭರದಿ ಹಿಂದಕೆ ಒಗಿಯೆ ವಿಠ್ಠಲ ಹರುಷದಲಿ ವಶವಾಗಿ ನಿಲ್ಲಲು ಕರುಣರಸ ಸಂಪೂರ್ಣ ದೇವನ ನಿರೀಕ್ಷಿಸಿದ ಜಯವೆಂದು ಪೊಗಳಿ ವರವ ಬೇಡಿದ ಪುಂಡರೀಕನು ಗಿರಿಯನೆತ್ತಿದ ಗೋಕುಲೇಶನ 5 ಭಕುತ ಮನೋರಥ ಎನ್ನ ಪೆಸರಿಲಿ ಸಕಲ ಲೋಕದೊಳಗೆ ನೀನೆ ಮುಕುತಿ ಕೊಡುತಲಿ ಇಲ್ಲೆ ನಿಲುವದು ಅಖಿಳ ಬಗೆಯಿಂದ ಭಜನೆಗೊಳುತ ನೀ ರುಕ್ಮಿಣಿಪತಿ ಒಲಿದು ಪಾಲಿಸಿ ವ್ಯಕುತವಾದನು ಪೂರ್ವಮುಖನಾಗಿ ಸುಖವಯೋನಿಧಿ ಮೆರೆಯುತಲಿ ಇಂದೂ 6 ಕ್ರೋಶ ಯೋಜನ ಯೋಜನತ್ರಯ ದೇಶ ಪರಿಮಿತ ಕ್ಷೇತ್ರವಿಪ್ಪುದು ವಾಸ ಒಂದಿನಮಲ ಮನುಜರನ ಲೇಸು ಪುಣ್ಯಗಳೆಣಿಸಿ ಸರಸಿ ಜಾಸನನು ಬೆರಗಾಗಿ ನಿಲ್ಲುವ ದೋಷ ವರ್ಜಿತ ಹರಿಯ ನೆನೆಸುತ ಆ ಸೇತು ಮಧ್ಯದಲಿ ವಿಶೇಷವಾಗಿದ್ದ ಈ ಕ್ಷೇತ್ರ ಮೂರ್ತಿಯಾ 7 ನಂದಾ ಮಂದಾಕಿನಿ ಮಧ್ಯಾಹ್ನಕೆ ನಿಂದಿರದೆ ಬರುತಿಪ್ಪ ಪ್ರತಿದಿನ ಚಂದ್ರಭಾಗಾ ಪ್ರಸೂನುವತಿ ಅರ ಕುಂಡಲ ಚತುರ ದಿಕ್ಕಿನಲಿ ಪೊಂದಿಪ್ಪವು ಓರ್ವನಾದರು ಮಿಂದು ತೀರ್ಥದಲಿ ಆ ನಂದ ಸತ್ಕರ್ಮ ಚರಿಸಲಾಕ್ಷಣ ಇಂದಿರೇಶನು ಒಲಿವ ನಿಶ್ಚಯಾ 8 ದ್ವಾರಸ್ಥ ಜಯ ವಿಜಯ ನಾರದ ಭಾರತಿ ಪಂಚ ಕೋಟಿ ದೇವರು ಶ್ರೀರಮಣಿ ಮಿಕ್ಕಾದ ಜನರೆಲ್ಲ ಈರೆರಡು ದಿಕ್ಕಿನಲಿಯಿಹರು ಸುತ್ತಲಿ ಪಾಡುತ್ತ ಕುಣಿಯುತ್ತ ಹಾರುತಲಿ ಹಾರೈಸಿ ನಾನಾ ವಿ ಹಾರದಲಿ ಪುರಿ ಪ್ರದಕ್ಷಣಿ ವಿ ಸ್ತಾರ ಮಾಡುತಲಿಪ್ಪ ಸೊಬಗನಾ 9 ಎರಡು ವಿಂಶತಿ ಗುದ್ದು ಮೊಳವೆ ಕರಿಸಿ ಕೊಂಬೊದೊಂದೆ ನಿಷ್ಕವು ಇರದೆ ಇವು ನಾನೂರುಯಾದಡೆ ವರಧನಸ್ಸು ಪ್ರಮಾಣವೆನಿಸೊದು ಗುರುತು ತಿಳಿವದು ಇಂಥ ಧನಸ್ಸು ಅರವತ್ತು ಪರಿಮಿತಾ ಈ ಭೀಮಾ ಸರಿತೆಗಳು ಪರಿಪರಿ ತೀರ್ಥಗಳಕ್ಕು ನಿರೀಕ್ಷಿಸಿ ವಂದನೆಯ ಮಾಡುತಾ 10 ಜ್ಞಾತಿ ಗೋತುರ ಹತ್ತದೊಂದೆ ಮಾತು ಮನ್ನಿಸಿ ಕೇಳಿ ಸುಜನರು ವಾತದೇವನ ಕರುಣತನವನು ನೀತಿಯಲಿ ಪಡಕೊಂಡು ಸತ್ವದಿ ಜ್ಞಾತ ಅನುಷ್ಠಾನದಲಿ ನಡೆದು ಪು ಮಾನವ ಬಂದರಾದಡೆ ಆತುಮದೊಳು ಹರಿ ಪೊಳೆದು ಬಲು ಕೌತುಕವ ತೋರಿಸುವ ರಂಗನಾ 11 ಶಯ್ಯಾ ಹರಿ ದಿನದಲಿ ಮಾನವ ಕಾಯ ನಿರ್ಮಳನಾಗಿ ಫಂಡರಿ ರಾಯ ರಾಜೀವನೇತ್ರ ತ್ರಿಭುವನ ನಾಯಕನ ಕ್ಷೇತ್ರಕ್ಕೆ ಮನಮುಟ್ಟಿ ಗಾಯನವ ಮಾಡುತಲಿ ಬಂದ ನಿ ರ್ಮಾಯದಲಿ ಕೊಂಡಾಡಿ ದಮ್ಮಯ್ಯ ಕೈಯ ಪಿಡಿಯನೆ ಕರುಣದಿಂದ ಸಾ ಹಾಯವಾಗುವ ವಾಣಿ ಜನಕನಾ 12 ಮಕುಟ ಕುಂಚಿ ಕುಲಾಯ ಕುಂತಳ ಕುಂಡಲ ಮಣಿ ಕಿರಣ ಸ ನ್ನುಖ ಮುಕರ ಸೋಲಿಸುವ ಕಾಂತಿ ಚಂ ನಾಸಿಕ ಮುಖ ಮೃಗನಾಭಿ ಸಣ್ಣ ತಿ ಲಕ ಕೌಸ್ತುಭಗಳ ತುಲಸಿ ಮಾಲಿಕಾ ನಖ ಪದಕ ಕಟೆಕಂಬು ಕರದ್ವಯ ನಖ ಪಾದ ಭೂಷಣ ಮಾ ಣಿಕ ಇಟ್ಟಿಗೆ ಮೇಲೆ ನಿಂದ ವಿಠ್ಠಲನ 12 ಸಂಗಮ ಸುರ ಮಥನ ಕಾಳಿಂಗ ಭಂಗ ಭಾವುಕ ಭಕ್ತಜನಲೋಲ ಶೃಂಗಾರಾಂಬುಧಿ ರೋಮ ಕೋಟಿ ಕೋಟಿ ಲಿಂಗಧರ ಗೌರೀಶ ಸುರಪ ನಂಗ ಮಿಗಿಲಾದ ಮುನಿವಂದಿತಾ ಮಾ ತುಂಗ ವರದ ಗೋವಿಂದ ವರದೇಶ ಸಂಗ ನಿಃಸಂಗ ಸುಪ್ರಸನ್ನ ನೀ ಅನುದಿನ 14 ಪೇಳಲೊಶವೇ ಲೋಹದಂಡಿ ಹಿ ಯ್ಯಾಳಿ ಕ್ಷೇತ್ರದ ಮಹಿಮೆ ಸಾವಿರ ನಾಲಿಗಿಂದಲಿ ಪೊಗಳಿ ಸುಮ್ಮನೆ ವ್ಯಾಳಪತಿ ಬೆರೆಗಾಗಿ ನಿಲ್ಲುವ ಸಲಿಗೆ ನಾ ಮಾಳ್ಪರು ವಿಲಿಂಗರು ಮೇಲು ಮೇಲೀ ಭುವನದೊಳಗಿದ್ದು ಹೇಳಿ ಕೇಳಿದ ಜನರಿಗಾನಂದಾ ಬಾಲಾ ವಿಜಯವಿಠ್ಠಲರೇಯನಾ 15
--------------
ವಿಜಯದಾಸ
ಸೀತಾಪತಿವಿಠಲ ದಾಸಳ ನಿರ್ಯಾಣ ಪದ ಮಾಧವನಾ ಪುರ ಸೇರಲು ಬೇಗ ಪ. ಪುಟ್ಟಿದಾರಭ್ಯದಿ ನಿಷ್ಟೆನೇಮದೊಳಿದ್ದು ಕಷ್ಟಪರಂಪರೆ ಸಹಿಸುತ ಜಗದಿ ಹರಿಯ ಕರುಣದಿ ಗುರುಕೃಪೆ ಪಡೆದಿ 1 ಹಿರಿಯೂರೆನ್ನುವ ಪುರ ವರ ವೇದಾವತಿ ತೀರ ಪರಮ ಸಾತ್ವಿಕರಲ್ಲಿ ಜನುಮ ತಳೆದಿ ತುಳಸಿಯ ವರದಿ ಮುದ್ದಿನಿಂ ಬೆಳೆದಿ 2 ಶಿಷ್ಟ ಸಂಪ್ರದಾಯ ಕಟ್ಟಿನೊಳಗೆ ನಿನ ಗಷ್ಟಮ ವರುಷದಿ ಮದುವೆಯ ಮಾಡಿ ಹರುಷವಗೂಡಿ ಹರಿಯ ಕೊಂಡಾಡಿ3 ಸತಿ ರುಕ್ಮಿಣೀಬಾಯಿ ಹೆಸರಿನಿಂ ಬಾಳ್ವೆಯ ಬಹು ಅಲ್ಪಕಾಲ ಕೊಟ್ಟನೆ ಸಿರಿಲೋಲ ಮುಸುಕಿತು ಮಾಯಜಾಲ 4 ಸಂಸಾರ ಕೈಕೊಂಡು ವಂಶಕೊಬ್ಬನ ಪಡೆದು ಕಂಸಾರಿ ಕರುಣದಿ ಇರುತಿರೆ ನೀನು ವಿಧಿ ತಂದೊಡ್ಡಿದನು 5 ಎರಡು ವರ್ಷದ ಮಗುವ ಕರದಲ್ಲಿ ಕೈಕೊಂಡು ಪರಿಪರಿ ಕಷ್ಟದಿ ಶಿಶುವ ಬೆಳೆಸಿದೆ ವಿದ್ಯೆ ಕಲಿಸಿದೆ ಪುತ್ರಗ್ಹರಸಿದೆ 6 ಒಬ್ಬ ಆ ಮಗನರ್ಥಿ ಸಂಸಾರವನೆ ಕಂಡು ಉಬ್ಬಿ ಹರುಷಾದಲ್ಲಿ ಇರುತಿರೆ ನೀನು ಮೊಮ್ಮಕ್ಕಳನು ಪಡೆದೆ ನಾಲ್ವರನು 7 ಘಟಿಸುತ ಸ್ವಪ್ನದಿ ಸೇವೆಗೈಯ್ಯೆಂದು ಅಭಯವನಂದು ಕೊಡಲು ದಯಸಿಂಧು 8 ಮರುದಿನ ಮನೆಯಲ್ಲೆ ಭರದಿ ಸೇವೆಯ ಕೊಂಡು ಹರಿವಾಯುಗಳನಿಟ್ಟು ಸುತ್ತುವರಿಯುತ್ತ ಎಡವಿ ಬೀಳುತ್ತ ಪ್ರದಕ್ಷಿಣೆ ಬರುತಾ 9 ಒಲಿದು ಆ ಭಕ್ತಿಗೆ ವರನೇತ್ರವಿತ್ತನು ನಳಿನನಾಭನ ಭಕ್ತ ಘಟಿಕಾಚಲನಿಲಯ ಭಾರತಿಪ್ರೀಯ ದಿವಿಜರ ಒಡೆಯ 10 ಭಕ್ತಿ ವಿರಕ್ತಿ ಜ್ಞಾನವು ಚಿತ್ತದಿ ಮೂಡಿ ಸೋತ್ತಮರಾದ ಶ್ರೀ ವಿಬುಧರ ದಯದಿ ಮೋಕ್ಷಸಾಧನದಿ ದಿನಗಳ ಕಳೆದಿ 11 ಶ್ರವಣ ಕೀರ್ತನ ಸ್ಮರಣೆ ಮನನಾದಿಗಳನೆಲ್ಲ ತವಕದಿ ಕೈಕೊಂಡು ಮೋದದಿ ಮೆರೆದಿ ಕಷ್ಟವ ಮೆರೆದಿ ಹರಿಗುರು ದಯದಿ 12 ಪ್ರಥಮ ಯಾಮದಲೆದ್ದು ಜಿತಮನದಿಂದ ಶ್ರೀ ಪತಿಯ ಸ್ತೋತ್ರಗಳನ್ನು ವದನದಿ ಸತತ ಪರಿಯಂತ 13 ಉಚ್ಛಸ್ವರದಿ ನೀನು ಪಾಡಿದ್ಹಾಡುಗಳಿಂದು ಅಚ್ಚಳಿಯದೆ ನಮ್ಮ ಸ್ಮರಣೆಯೊಳ್ನಿಂತು ಹರುಷವನಾಂತು ಮರೆಯುವುದೆಂತು 14 ವೃದ್ಧಾಪ್ಯ ತಲೆದೋರೆ ಇದ್ದೊಬ್ಬ ಪುತ್ರನು ಪದ್ಮನಾಭನ ಪುರ ಸೇರಿ ನಿನ್ನಗಲಿ ದುಃಖದಿ ಬಳಲಿ ತೊಳಲಿದೆ ಬಳಲಿ 15 ಪೌತ್ರರಿಬ್ಬರು ನಿನ್ನ ಹೆತ್ತಮ್ಮನಂದದಿ ಚಿತ್ತದಿ ತಿಳಿದಿನ್ನು ಸಲಹುತ್ತಿರಲು ಹರಿದಯ ಬರಲು ದುಃಖ ಮರೆಯಲು 16 ಕಲ್ಯಾಣನಗರದಿ ಕಿರಿಯ ಮೊಮ್ಮಗನಿರೆ ಆಹ್ಲಾದದಿಂದ ನೀನವನಲ್ಲಿ ಇರಲು ಸದ್ಗುರು ಬರಲು ಜ್ಞಾನವೆರೆಯಲು 17 ಹರಿದಾಸಕೂಟದ ವರ ಅಂಕಿತವ ಕೊಂಡು ಗುರುಕರುಣವ ಪೊಂದಿ ನೀ ನಮಗೆಲ್ಲ ಸನ್ಮಾರ್ಗಕ್ಕೆಲ್ಲ ಮೊದಲಾದೆಯಲ್ಲ 18 ಶ್ರೀ ತಂದೆ ಮುದ್ದುಮೋಹನದಾಸರ ದಯದಿ ಸೀತಾಪತಿವಿಠ್ಠಲನ್ನ ಒಲಿಸಿದೆ ಧ್ಯಾನದೋಳ್ತಂದೆ ಆನಂದಪಡೆದೆ 19 ಕಂಚಿ ಕಾಳಹಸ್ತಿ ಶ್ರೀ ರಂಗಯಾತ್ರೆಯ ಸಂಚಿಂತನೇಯಿಂದ ಗೈದೆಯೆ ನೀನು ಗಳಿಸಿದೆ ಇನ್ನು ಭಕುತಿಯ ಪೊನ್ನು 20 ಉಡುಪಿ ಮಂತ್ರಾಲಯ ಸೇತು ರಾಮೇಶ್ವರ ಕಡು ಭಕ್ತಿಯಲಿ ತಿರುಪತಿ ಕ್ಷೇತ್ರ ಚರಿಸಿ ಕಷ್ಟವ ಸಹಿಸಿ ಶ್ರೀ ಹರಿಗೆ ಅರ್ಪಿಸಿ 21 ಕಡುಕೃಪೆಯಿಂದಂದು ಕಣ್ಣನ್ನೆ ಕೊಟ್ಟಂತ ಮೃಡಪಿತ ಘಟಿಕಾಚಲೇಶನ್ನ ಕೂಡಿ ಕಣ್ತುಂಬ ನೋಡಿ ತನುವನೀಡಾಡಿ22 ಅಂತರಂಗದ ಬಿಂಬ ಸರ್ವಾಂತರ್ಯಾಮಿ ಎಂ ತೆಂಬಂಥ ಚಿಂತನೆ ಸಂತತಗೈದೆ ಅಭಿಮಾನ ತೊರೆದೆ ದ್ವಂದ್ವ ಸಹಿಸಿದೆ 23 ವ್ರತನೇಮ ಜಪತಪ ಸತತದಿಗೈಯ್ಯುತ್ತ ಕ್ಷಿತಿವಾರ್ತೆಗೆಳಸಾದೆ ಮನವನ್ನೆ ಸೆಳೆದು ಹರಿಪಾದಕ್ಕೆರದು ಹಿತವನ್ನೆ ಮರೆದು 24 ಭಾಗವತಾದಿ ಸಚ್ಛಾಶ್ತ್ರ ಶ್ರವಣಗೈದು ಜಾಗ್ರತಳಾದಿ ಭೂಸುರರ ಸೇವೆಯಲಿ ಸೂಕ್ಷ್ಮಧರ್ಮದಲಿ ಪುಣ್ಯಗಳಿಸುತಲಿ 25 ಸತತಬಿಂಬಕ್ರಿಯ ವ್ರತವಂದೆ ಕೈಕೊಂಡು ಜತನದಿ ಮರೆಯದೆ ಪ್ರತಿಕಾರ್ಯದಲ್ಲಿ ಅರ್ಪಿಸಿ ಹರಿಯಲ್ಲಿ ಇದ್ದೆ ಮೋದದಲಿ 26 ಮುಖ್ಯಪ್ರಾಣನ ದಯ ಮುಖ್ಯಮಾಡುತ ಇನ್ನು ಅಕ್ಕರೆ ಭಕ್ತಿಯ ತೋರಿದೆ ನೀನು ಬೆನ್ನು ಬಿಡದವನು ನಿನ್ನ ಸಲಹಿದನು 27 ಭಾರತಿಪತಿ ಮುಖ್ಯಪ್ರಾಣಾಂತರ್ಗತನೆಂಬ ವಾರುತಿ ಇಲ್ಲದ ವಚನವೆ ಇಲ್ಲಾ ನಿನ್ನ ಈ ಸೊಲ್ಲ ಮರೆಯಲೊಶವಲ್ಲ 28 ಶ್ರೀ ರಾಮಚಂದ್ರನ ಆರಾಧನೆಯಗೈದು ಸಾರತತ್ವವ ತಿಳಿದು ಸಾಧಿಸಿ ಪಥವ ಸಹಸ್ರಾರು ಜಪವ ಗೈದೆ ತಪವ 29 ನೀ ಹಾಡಿದ ಸ್ತೋತ್ರ ನಿನ್ನ ಸನ್ಮಾರ್ಗವ ನನ್ನೆಯಿಂದಲಿ ಎರೆದೆ ಹೆಣ್ಣು ಮಕ್ಕಳಿಗೆ ಸ್ಮರಿಸುವರೀಗೆ ಸತ್ಕೀರ್ತಿಯದಾಗೆ 30 ಹರಿ ಗುರು ವರತತ್ವ ದಿವಿಜರಭಿಮಾನಿಗಳ ನಿರುತದಿ ಚಿಂತಿಸಿ ಸಾಧನಗೈದೆ ಕಾಲವ ಕಳೆದೆ ಹರಿಪಾದಕ್ಕೆರೆದೆÀ 31 ಬಿಂಬಾನು ಸಂಧಾನ ಚತುರಳಾಗಿ ನೀನು ಸಂಭ್ರಮದಿಂದ ಶ್ರೀ ಮಧ್ವಶಾಸ್ತ್ರದಲಿ ಮನಸ ನೀಡುತಲಿ ಸುಖ ಸುರಿಯಲಿ 32 ಒದ್ದು ತಾಪತ್ರಯ ಸದ್ಗುರು ಕೃಪೆ ಪೊಂದಿ ಗೆದ್ದೆ ನೀ ಸುಲಭದಿ ಭವದ ಬಂಧನವ ಪಡೆದೆ ಹರಿ ದಯವ ಕೊಟ್ಟಿತೆ ಮುದವ 33 ಪೇಳಲೋಶವೆ ಹೇ ದಯಾಳು ನಿನ್ನಯ ಗುಣ ಬಾಳಿದೆ ಧರೆಯೊಳು ತೊಂಬತ್ತೈದೊರುಷ ವೃದ್ಧಾಪ್ಯದೋಷ ನಿನಗಿಲ್ಲ ಲೇಶ 34 ಇಂದ್ರಿಯಂಗಳು ಎಲ್ಲ ಒಂದು ಕುಗ್ಗದೆ ಒಬ್ಬ ರಿಂದಲು ಸೇವೆಯ ಕೊಳದೆ ಲವಲವಿಕೆ ಯಿಂದಿರುವ ಬಯಕೆ ಸಲಿಸೀತೆ ಮನಕೆ 35 ಕಿರಿಯ ಮೊಮ್ಮೊಗ ರಮಾಕಾಂತನಲ್ಲಿರುತಿರೆ ಕರೆಹೇಳಿ ಕಳುಹಿದ ಹರಿ ತನ್ನ ಪುರಕೆ ಕ್ಲಿಪ್ತಕಾಲಕ್ಕೆ ಆಗೆ ಮನವರಿಕೆ 36 ತೊರೆದೈದು ದಿನ ಅನ್ನ ಹರಿಧ್ಯಾನಂಗತಳಾಗಿ ವರ ಗಂಗೆ ವದನದಿ ಪ್ರಾಶನಗೈದು ಅಭಿಮಾನ ತೊರೆದು ಭ್ರಾಂತಿಯ ಮೆರೆದು 37 ವರಹಜೆ ತುಂಗ ತೀರದಿ ಪ್ರಾಣನಾಥನ ಚರಣಮೂಲದಿ ಶಿವಮೊಗ್ಗ ಕ್ಷೇತ್ರದಲಿ ಹರಿಸ್ಮರಣೆಯಲಿ ಪ್ರಾಣ ಸಲಿಸುತಲಿ 38 ಸ್ವಭಾನುವತ್ಸರ ಭಾದ್ರಪದ ಬಹುಳ ಇದ್ದ ದಶಮಿ ದಿನ ಗುರುವಾರದಲ್ಲಿ ಮಧ್ಯರಾತ್ರಿಯಲಿ ತನು ತೊರೆದಿಲ್ಲಿ 39 ಕೇಶವದೂತರು ಮೀಸಲಿಂದಲಿ ನಿನ್ನ ಘಾಸಿಗೊಳಿಸದೆ ಕರೆದೊಯ್ದರೇನಮ್ಮ ಪೇಳೆ ಎನ್ನಮ್ಮ ಎಲ್ಲಿ ಪೋದ್ಯಮ್ಮ 40 ಹೆತ್ತಮ್ಮಗಿಂತಲೂ ಹೆಚ್ಚಾಗಿ ನಮ್ಮನ್ನು ಅರ್ಥಿಯಿಂ ಬೆಳೆಸಿದೆ ಅಭಿಮಾನದಿಂದ ಅನುರಾಗದಿಂದ ಬಹುಮಾನದಿಂದ 41 ಮೊಮಕ್ಕಳೆಂದರೆ ಬಹು ಪ್ರೀತಿ ನಿನಗಲ್ಲೆ ಒಮ್ಮೆ ನಾಲ್ವರು ಬಂದು ಇರುವೆವು ನಾವು ಆಲ್ಪರಿಯುವೆವು ಅಗಲಿ ಸೈರಿಸೆವು 42 ಅರ್ಥಿಲಿ ರಮಾಕಾಂತ ವಿಠಲಾಂಕಿತ ಕೃಷ್ಣ ಮೂರ್ತಿಯು ಪುತ್ರಗಿಂತಧಿಕದಿ ನಿನ್ನ ಅಂತ್ಯಕ್ರಿಯವನ್ನ ಮಾಡಿದ ಧನ್ಯ 43 ಶ್ರದ್ಧೆಯಿಂದಗ್ರಜನಿಂದ ಕೂಡುತ ನಿನ್ನ ಶುದ್ಧಭಾವದಿಗೈದ ಅಂತ್ಯಸೇವೆಯನು ಸ್ವೀಕರಿಸಿ ನೀನು ಹರಸಿ ಹಿತವನ್ನು 44 ತಿಳಿದು ತಿಳಿಯದೆ ನಾನು ಗೈದಪರಾಧವ ನಲವಿಂದ ಕ್ಷಮಿಸಿ ನಮ್ಮನು ಮನ್ನಿಸಿದೆ ಸಹನವ ತಳದೆ ಬಹು ಪ್ರೀತಿಗೈದೆ 45 ಎಲ್ಲ ಪರಿಯಲಿ ನಮ್ಮ ಕ್ಷಮಿಸಿ ಕಾಪಾಡಮ್ಮ ಬಲ್ಲಿದಳು ನೀನು ಆಶೀರ್ವದಿಸುವುದು ಸುಖವ ತೋರುವುದು ಕೃಪೆಯ ಮಾಡುವುದು 46 ಅಂಜನೆಕಂದ ನಿನ್ನವನೆಂಬ ಅಭಿಮಾನ ರಂಜಿಸೆ ಸಹಜದಿ ನಿನ್ನೊಳು ಮಾತೆ ಜಗದಿ ವಿಖ್ಯಾತೆ ಹರಿಗತಿಪ್ರೀತೆ 47 ಪತಿಗುರು ಪವನ ಹೃದ್ಗತಮೂರ್ತಿ ಚಿಂತನ ರತಳೆ ನಿನ್ನಯ ಚರಿತೆ ಪೇಳ್ದೆ ತಿಳಿದನಿತು ತಪ್ಪನು ಮರೆತು ಲಾಲಿಸು ಮಾತು 48 ಗೋಪಾಲಕೃಷ್ಣವಿಠಲನ ಸದ್ಭಕ್ತಳೆ ಶ್ರೀ ಪಾದಕ್ಕೆರಗಿ ನಾ ಜಯವ ಪಾಡುವೆನು ಧನ್ಯಳೇ ನೀನು ಮಾನ್ಯಳೆ ನೀನು 49
--------------
ಅಂಬಾಬಾಯಿ
ಸುಖಖರ ನೀನೆನ್ನುತಾ ಸೂರಿಗಳು ಭಜಿಸುವರೊ ನಿನ್ನ ಪ ಭವಭಯಗಳನೀಡಾಡುತ ಪಾಪರಹಿತರಾಗಿಹರು ಅ.ಪ ಭೂತದಯೆ ಪಶ್ಚಾತ್ತಾಪವಿಖ್ಯಾತಿಯಶೋದಾನ ನೀತಿಮನಃ ಪ್ರೀತಿಧ್ಯಾನ ನಿತ್ಯಾನುಸಂಧಾನ ಶ್ರೀ ತರುಣಿವರ ಪ್ರಾಣಿ ವ್ರಾತಗಳಿಗೆ ಕರ್ತನು ಯಂ ದಾತುರವಿಲ್ಲದೆ ಸರ್ವದ ಜಾತಿ ಧರ್ಮಾಚಾರದಲ್ಲಿ 1 ತನ್ನಂತಿತರರ ನೋಡುತ ಮನ್ನಣೆಯಲಿ ಸತತ ನನ್ನದು ನಾನೆಂಬುದ ಬಿಟ್ಟನ್ಯರ ನಿಂದಿಸದಲೆ ಹರಿ ನಿನ್ನಾಜ್ಞೆಯೊಳಾದುದೆಲ್ಲ ನಿನಗೆ ಸಮರ್ಪಣೆಗೈಯ್ಯುತಾ 2 ಮತಿಗೆಡದೆ ಎಚ್ಚರಿಕೆಯಿಂ ಸುಮಾರ್ಗದಿ ಸಮ್ಮುದದಿ ಪ್ರತಿ ದಿನದಲಿ ಶೃತಿ ಸ್ಮøತಿ ಸಂಮತದಿ ಸತ್ಸಂಗದಿ ಸೀತಾ- ಪತಿ ಗುರುರಾಮ ವಿಠಲ ಯಂದತಿಶಯದಲಿ ಚಿಂತಿಸುತ3
--------------
ಗುರುರಾಮವಿಠಲ
ಸುಖದಿ ಜೀವಿಸು ಬಾಲೆ ಸುಗುಣ ಶೀಲೆ ಸುಖದಿ ಜೀವಿಸು ಬಾಲೆ ಪ ಸುಖದಿ ಜೀವಿಸು ಬಾಲೆ | ಸುಕುಮಾರಿ ಗುಣಲೀಲೆ ರುಕುಮಿಣೀಶನ ಭಕುತಳೆನಿಸಿದ ಸಖುದೇವಿಯಂತೆ ಸಕಲ ಭಾಗ್ಯದಿ ಅ.ಪ ಭೂಸುರೋತ್ಮರಿಂದಲಿ | ಗುರುಮಂತ್ರೋಪ ದೇಶವಗೊಳ್ಳುತಲಿ | ಪ್ರತಿದಿವಸ ತಪ್ಪದೆ ಬ್ಯಾಸರಿಯದೆ ಹರುಷದಲಿ | ಸದ್ಭಕ್ತಿ ಪೂರ್ವಕ ದಾಸರ ಪದ ನಿತ್ಯದಲಿ | ನೀ ಪಾಡುತಲಿ ಸುಜನ ವೃಂದಕೆ ದೂಷಿತ ಬಹು ದೋಷಕಂಜುತ ವಾಸುದೇವನ ವಾಸರದಿ ಉಪ ವಾಸವನು ಲೇಸಾಗಿ ಮಾಡುತ 1 ಭಾವ ಭಕುತಿಲಿರುವ | ಗೋ ತುಳಸಿ ವೃಂದಾವನ ಪೂಜಿಸುತ | ವಿನಯದಿ ಅತ್ತಿ ಪತಿ ಪರ ದೇವನು ಎಂದೆನುತ | ಸಲೆ ಸೇವಿಸುತ್ತ ಕಾಲ ಕಪಟ ಮತಿಗಳ ಠಾವಿಗ್ಹೋಗದೆ ಪರರ ಒಡವೆಯ ಬೇವಿನಂದದಿ ಭಾವಿಸುತ ಸಂ ಭಾವಿತಳು ನೀನಾಗಿ ಜಗದೊಳು 2 ಮಂದ ಮತಿಯರ ಕೂಡದೆ | ಎಂದೆಂದಿಗು ಪರ ನಿಂದೆ ಮಾತುಗಳಾಡದೆ ಅವರೊಲುಮೆಯಿಒಂದಲಿ ಪಡಿ ಪ್ರೇಮದಿ | ಸಂದೇಹ ಪಡದೆ ತಂದೆ ತಾಯಿಗೆ ಕುಂದು ತಾರದೆ ನಂದ ಕಂದ ಮುಕುಂದ ಶಾಮ ಸುಂದರನ ಶುಭನಾಮ ಬಿಡದಲೆ ಒಂದೆ ಮನದಲಿ ಧ್ಯಾನಿಸುತ ಚಿರ 3
--------------
ಶಾಮಸುಂದರ ವಿಠಲ
ಸುಗುಣಾಬ್ಧಿಯತಿ ರಾಯಾ ನಿನ್ನಯ ಪಾದಯುಗಳ ನಂಬಿಹರಯ್ಯ ಪ. ನೀನೆಲ್ಲಿಯಿರುವೆಯೊ ತಾನಲ್ಲಿ ಬರುವನು ಶ್ರೀನಿವಾಸನು ದಯದಿ ಯೀ ನುಡಿ ನಿಜವೆಂದು ಧ್ಯಾನಿಸುವದಕನುಮಾನವಿಲ್ಲವು ಜಗದಿ ಭಾನುತನುಜನ ತ್ರೇತೆಯೊಳು ಪರಮಾನುರಾಗದಿ ಪೊರೆದವನು ಕ ರ್ಣಾನುಜನ ದ್ವಾಪರದಿ ಸೇರಲಿಕೇನುಫಲ ಪವಮಾನ ಪೇಳೆಲೊ 1 ಇದರಿಂದ ನಿನ್ನಯ ಪದ ಕಮಲವ ಸೇರಿ ಬದುಕುವೆನೆಂಬಾಸೆಯಾ ಹೃದಯದಿ ದೃಢವಾಗಿ ವಹಿಸಿರುವೆನು ಬೇಗ ಒದಗಿ ರಕ್ಷಿಸು ಭಾಷೆಯ ಹರಿಯು ಕೃಪೆ ಮಾಡುವಂದದಿ ಜಲನಿಧಿ ಸೇರುವಂದದಿ 2 ಮಂದಮತಿಯ ಮತದಿಂದ ಸಂಗರದೊಳಗಿಂದ್ರಾರಿತವಕ- ದಿಂದಾ ಮಹಾಸ್ತ್ರವ ಬಂಧಿಸೆ ಬೇಗದಿಂದಾ ಆ ಲಂಕೆಯಿಂದಾ ಒಂದೇ ಹಾರಿಕೆಯಿಂದಾಲೌಷಧಿ ತಂದು ಹರಿಗಳ ಕಾಯ್ದ ಪೂರ್ಣ- ನಂದ ರಾಮಾವತಾರಿ ಶೇಷಗಿರೀಂದ್ರ ಕರುಣವ ಸೂರೆಗೊಂಡಿಹ 3
--------------
ತುಪಾಕಿ ವೆಂಕಟರಮಣಾಚಾರ್ಯ
ಸುತೀರ್ಥರು ಸಾರಲೆನ್ನಳವಲ್ಲ ಗುಣಶಾಲಿ ಸುರಪ ಸುತೀರ್ಥ ಯತಿವರ ಪ ತವ ಸಂಚಾರ ಚರಣ ಸಮೀರಯುತ ವಿಸ್ತಾರ ಮಹಿಮೆಯ ಅ.ಪ. ಇಂದು ದಾರಿಯಲಿಂದ ಬರುತಿರೆ ಸುಂದರಂದಣವೇರಿ ಯದರಿಗೆ ಬಂದು ಶರಣರ ಸೇವೆಗೊಂಡು ಶೃಂಗಾರ ಕವಚವನಿತ್ತು ನವಸುಖ ಮಾರಮರ್ಮನ ಬಯಸಿ ದ್ಯುತಿವರನಂಘ್ರಿಕಮಲವ 1 ಧನ್ಯನಾದೆನೊ ನಿನ್ನ ನೋಡಿ ಮಾನ್ಯನಾಗುವೆ ಮೌನಿ ಜನರೊಳು ಗಾನ ಮಾಡುವೆ ಜ್ಞಾನಗಯ್ಯನ ಧ್ಯಾನ ಮಾಡಭಿಮಾನ ತೊರೆಯುತ ನಂಬಿ ನಿನ್ನಯ 2 ಸಂಗಮಾಡಿಸು ಡಿಂಗಿಯರ ಕಡೆ ಕಂಗಳಿಂಗದಲಿ ಶೋಭಿಪಡುವ ಸುಶಾಮಗೊರಳನ ಪೊಡದ ತಂದೆವರದಗೋಪಾಲವಿಠಲನ ಪ್ರೇಮಗುರುಮಣ 3
--------------
ತಂದೆವರದಗೋಪಾಲವಿಠಲರು