ಒಟ್ಟು 3078 ಕಡೆಗಳಲ್ಲಿ , 118 ದಾಸರು , 1747 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶೃಂಗೇರಿ ಮಂಗಳಂ ಸರಸಿಜೋದ್ಭವನರಸಿಗೆ ಪ ಭಕ್ತರಿಗೆ ತಾನೊಲಿದು ಬಂದು ಪ್ರತ್ಯಕ್ಷಳಾದ ಶಾರದದೇವಿಗೆ 1 ಶಾರದದೇವಿಗೆ 2 ಕೆತ್ತನೆ ಅಡ್ಡಿಕೆ ಮುತ್ತಿನಕಟ್ಟಾಣಿ ಹಸ್ತಕಡಗ ಹರಡಿ ವಂಕಿನಿಟ್ಟು ಕಮಲ ಗಿಣಿ ಪುಸ್ತಕಕಂಠವು ಭಕ್ತರಿಗಭಯವ ತೋರುವ ದೇವಿಗೆ 3 ಅಂದುಗೆ ಇಂದಿರೆರಮಣನಸೊಸೆ ಶಾರದೆಗೆ 4 ಶ್ರೀನಿವಾಸನಪಾದ ತೋರ್ಪ ಶಾರದೆಗೆ 5
--------------
ಯದುಗಿರಿಯಮ್ಮ
ಶೇಷಮೂರುತಿ ಪೋಷಿಸೆನ್ನ ಹಾಸಿಗೆಯಾಗಿ ನೀ ಹರಿಯ ಪೊತ್ತಿರುವಿ ಪ ಶ್ವೇತದ್ವೀಪದ ಮಧ್ಯದಲ್ಲಿ ದೇವನರಸಿಯ ಕೂಡುತ್ತಲಿರಲು ಭಕ್ತಿಯಿಂದಲಿ ಕಂಗಳಿಂದ ಬಿಡದೆ ನೋಡುತಲಿಪ್ಪ ಸಮಯ1 ಮಗಳ ಲಜ್ಜೆಯ ಕಂಡು ಪಿತನು ಹಾಲಿನ ತೆರೆಯಿಂದ ಕಣ್ಣನೆ ಮುಚ್ಚಿಸಿಹನು ಮಗಳ ಮೇಲಿನ ಪ್ರೀತಿ ಪಿತಗೆ ಯೆಣಿಸಲಾಗದು ಲೋಕದೊಳಗೆ 2 ರಾಜೇಶ ಹಯಮುಖ ಹರಿಗೆ ಮಂಚವೆಂದರೆ ನೀನೆ ಖರೆಯು ರಾಜರಾಜರಿಗಿಂಥ ಮಂಚ ದೊರಕದೆಂದೆಂದಿಗೂ ದೇವ 3
--------------
ವಿಶ್ವೇಂದ್ರತೀರ್ಥ
ಶೇಷಾಚಲ ಮಂದಿರ-ಇಂದಿರೇಶ ಪ. ಪಾದ ಸ್ಮರಣೆಯಿತ್ತು ಅ.ಪ ಕರಣಕ್ರಿಯಕರ್ಮಂಗಳೆಲ್ಲವು ಜಡವು ಕರ್ಮ ನಿನ್ನ ನಿಯಮನವಿಹುದು ನಿರುತ ಪರವಶನಾಗಿ ನಾ ಮಾಳ್ಪೆನೆಂಬ ಈ ದುರಭಿಮಾನದಿ ನಾ ಭವಕೊಳಗಾದೆನೊ 1 ವಿಷಯಂಗಳೆಲ್ಲ ಜ್ಞಾನಗೋಳಕದಿ ಬಂದು ಎನ್ನ ವಿಷಮಗೊಳಿಸಿತು ಮನ ಅಭಿಮಾನದಿಂದಲಿ ಹೃಷೀಕಪನೆ ಎನ್ನ ಮನವಿಷಮತೆಯ ಹರಿಸಿ ಪೋಷಿಸೊ ನಿರುತ ಕೃಪಾಕರ ಮೂರುತೇ 2 ದೋಷದೂರನೆ ನಿನ್ನ ವಿಸ್ಮರಣೆಯಿಂದಲಿ ವಾಸುಕೀಶಯನ ನೀ ಭೂತಾವಾಸ ನೀನಾಗಿರೆ ಮೋಸಹೋದೆನ್ನನು ಪೋಷಿಸಬೇಕಯ್ಯ 3 ಕುಟಿಲ ಮನದಲಿ ನಿನ್ನ ಭಕುತನೆಂದೆನಿಸಿದೆ ವಟಪತ್ರಶಾಯಿ ನೀ ಹಟ ಸಾಧನಕ್ಕೆ ಒಲಿಯೆ ದಿಟಭಕುತಿಯ ಕೊಟ್ಟು ಕಡೆ ಹಾಯಿಸಯ್ಯ 4 ತನುಛಾಯೆ ಕ್ರಿಯೆಯು ತನ್ನ ತನುವನಾಶ್ರೈಸಿದಂತೆ ನಾ ನಿನ್ನ ಪ್ರತಿಬಿಂಬನಾಗಿರಲು ಸದಾ ಎನ್ನ ಕ್ರಿಯೆಗಳೆಲ್ಲಾ ನಿನ್ನ ಆಣತಿಯಂತಿರೆ ಘನಮಹಿಮನೆ ನಿನ್ನಾಕ್ರಿಯವನರಿಯದೆ ಹೋದೆ5 ಪನ್ನಗಾಚಲನಿಲಯ ಆಪನ್ನರಕ್ಷಕ ನೀನಿರೆ ಬನ್ನಬಡಲ್ಯಾಕಯ್ಯ ಅನ್ಯರನಾಶ್ರಯಿಸಿ ಮನೋವಾಕ್ಕಾಯ ಕರ್ಮವನರ್ಪಿಸಲು ಸನ್ಮತಿಯನೆ ಇತ್ತು ಸತತ ಸಲಹಯ್ಯ 6 ಸರ್ವಸತ್ತಾಪ್ರದನೆ ಸರ್ವಪ್ರವೃತ್ತಿಪ್ರದನೆ ಸರ್ವರಂತರ್ಯಾಮಿ ಮಮಕುಲಸ್ವಾಮಿ ಉರಗಾದ್ರಿವಾಸವಿಠಲ ನಿನ್ನಯ ದಿವ್ಯ ಚರಣಸ್ಮರಣೆಯನಿತ್ತು ಕಾಯೊ ಕಮಲಾಕಾಂತ7
--------------
ಉರಗಾದ್ರಿವಾಸವಿಠಲದಾಸರು
ಶೇಷಾದ್ರಿಯನು ನೋಡಿರೊ-ಸೇವಕ ಪರಿ- ತೋಷಾದ್ರಿಯಿದು ಕಾಣಿರೋ ಪ ಶೇಷಾದ್ರೀಶನ ಪರಿತೋಷದಿಂ ಪಾಡಿ ಅ.ಪ. ಸಣ್ಣದಾದರು ಗಿರಿ ರನ್ನವ ಪೊಲುವ- ದರ್ಣವಶಯನನ ಕಣ್ಣಿಲಿ ಕಾಣಿಪ 1 ಬಗೆಬಗೆ ವೃಕ್ಷಗಳು-ಬನಂಗಳು-ಬಗೆಬಗೆ ¥ಕ್ಷಿಗಳು ಬಗೆಬಗೆಮೃಗಗಳು ಸೊಗಸಿನೊಳಿರೆಬಹು ಬಗೆಬಗೆ ಧಾತುಗಳಿಗೆ ನೆಲೆಯಾಗಿಹ 2 ಯುಗಗಳ ಸಂಖ್ಯೆಯೊಳು-ನಾಮಂಗಳು- ಯುಗಮೊದಲೊಳಗೆ ಪನ್ನಗಗಿರಿಯೆನೆ ತ್ರೇತಾ ಯುಗದಲ್ಲಿ ಹೇಮದ ನಗವೆಂಬ ಪೆಸರಿನ 3 ದ್ವಾಪರಯುಗದೊಳಗೆ-ವೆಂಕಟನಾಮ- ವೀಪರ್ವತಕ್ಕೊದಗೆ ಶ್ರೀ ಪುಲಿಗಿರಿಯೆಂಬ ರೂಪವೀಯುಗದೊಳು ಶ್ರೀಪತಿಯಿತ್ತನಿರೂಪದೊಳೊಪ್ಪುವ 4 ದೂರದಿ ಶೋಭಿಸುವ ದುರ್ಜನರಿಗೆ-ದೂರನಮಂದಿರವ ವರದ ವಿಠಲ ನಿಹ 5
--------------
ಸರಗೂರು ವೆಂಕಟವರದಾರ್ಯರು
ಶೋಭನವೆ ಹರಿ ಶೋಭನವುವೈಭವಾಮಲ ಪಾವನ ಮೂರುತಿಗೆಶೋಭನವೆ ಶೋಭನವು ಪ. ಕುಂಡಲಿ ನಗರದ ರುಕ್ಮಿಣಿ ಸ್ವಯಂವರಗಂಡಕಿ ಕ್ಷೋಣಿಯ ತೀರದಲಿ ಚಂದ್ರಮಂಡಲ ಕ್ಷೋಣಿಜಾತೆ ಪ್ರಭೆದುಂದುಭಿ ಪಾರಿಜಾತ ಎಸೆಯೆ 1 ಕನ್ನಡಿ ಕಲಶವು ಕನಕದುಪ್ಪರಿಗೆ ಸು-ವರ್ಣ ಮಾಣಿಕದ ಗಗನದಲೆಸೆಯೆರನ್ನದ ಕಿಟಕಿ ಉಜ್ವ[ಲ]ಪನ್ನಗಾಸ್ಯಲಿ ಸು-ವರ್ಣ ಮಾಣಿಕದ ತೋರಣವೆ 2 ಪಚ್ಚದ ಪರಿಮಳ ತಳಿರುತೋರಣ ಕಟ್ಟಿನಿ[ಚ್ಚ]ಕಲ್ಯಾಣ ನೀಲವರ್ಣಉ[ಚ್ಚ]ಹವಾಯಿತು ಇರುಳಿನ ಚರಿತ್ರಾಅಚ್ಚುತನೆ ಗಮ್ಮನೆ ಬಾಹುದು 3 ಭೀಷ್ಮಕ ರುಕ್ಮಿಣಿ ಶಿಶುಪಾಲ[ಗೀವೆ]ನೆಂದುಸೇಸೆಯ ತಳೆದು ಧಾರೆನೆರೆಯೆಆ ಸಮಯದಲಿ ದ್ವಾರ[ಕೆ]ಕೃಷ್ಣಗೆಲೇಸಾದ ಓಲೆಯ ಬರೆದಳಾಕೆ 4 ಬರೆದೋಲೆಯ ಕಾಣಿಸಿ ತೆಗೆದೋದಿಪುರೋಹಿತ ಗಗ್ರ್ಯಾಚಾರ್ಯರುನಿರೂಪ ಕೊಡು ನಮಗೆ ನಿಗಮಗೋ- ಚರನು ಗರುಡವಾಹನ ಗಮ್ಮನೆಬಾಹೋನು 5 ಗವರಿಯ ನೋನುವ ಮದುವೆಯ ಸಡಗರಭುವನೇಶ ತಾ ತಡೆದನ್ಯಾಕೆಂದುತಾ ಚಿಂತಿಸಿದಳು ತಾವರೆಗಂಗಳೆಹವಣಿಸಿದಳು ವಿಲಕ್ಷಣಗಾಗಿ6 ಚಂದದಿ ರುಕ್ಮಿಣಿ ಮುತ್ತೈದೆರಿಗೆಲ್ಲಸಂಭ್ರಮದಿಂದ ಬಾಗಿಣ[ಬೀರೆ ಐ]ತಂದು ತಾಳಿಯ ಮಂಗಳಸೂತ್ರ ಮು-ಕುಂದ ಕಟ್ಟಿ ಕಲ್ಯಾಣವಾದ 7 ಅಂಬಿಕೆಗುಡಿಯಲಿ ಚಂದದಿಂದ ಪೂಜೆಯ ಮಾಡಿರಂಗ[ನ] ಕೂಡಿದ ಸಂಭ್ರಮದಿಂದಮಂದಾರಮಾಲೆಯ ಚಂದದಿಂದಲಿ ತಂದುರಂಗನ ಕೊರಳೊಳು ಹಾಕಿದಳು8 ಹಿಂದಿಂದ ಬಹ ರುಕುಮನ ಕಂಡುಭಂಗಿಸಿ ಕರೆದು ಭಂಗವ ಮಾಡಿಹಿಂದಿಂದ ಕರೆದು ಮುಂದಕೆ ಕಟ್ಟಿ ಮು-ಕುಂದ ಹಯವದನ ದ್ವಾರಕೆ ಪೊಕ್ಕ9
--------------
ವಾದಿರಾಜ
ಶೌರಿ ಪ ನಂದವ ಸೇವಕ ಬೃಂದ ತೋರಿ ಅ.ಪ ಕುಂದಮುಕುಳದಿಂದಾ ಕುಮುದ ಸುಗಂಧಿಯಗಳಿನಿಂದಾ ಕೆಂದಾವರೆ ಶ್ಯಾವಂತಿಗೆ ಜಾಜಿಯಿಂದ ರಚಿಸಿ ಸೊಗ ಸಿಂದಲಿ ಮೆರೆಯುವ 1 ಸ್ವಸ್ತಿಕಾದಿ ಬಹು ಚಿತ್ರದಿ ಶೋಭಿಪ 2 ಸೂರ್ಯ ಶಶಾಂಕ ಸುರೇಖೆಗಳಾ ಶಂಖ ಚಕ್ರ ಬಿರುದಾಂಕಿತ ದಿವ್ಯ ವಿಟಂಕದಿಂದ ಬಲು ಬಿಂಕದೊಳೆಸೆಯುವ3 ಕೋಟೆಯತೆನೆಗಳಲಿ ದಿವ್ಯವಧೂಟಿಯರೊಲವಿನಲಿ ನಾಟಕ ರಚನೆಯ ಪಾಠಕರಂದದಿ ನೋಟಕರಿಗೆ ಬಹು ದೀಟಿಯಲಿ ತೋರುವ 4 ಶಾರದಾಭ್ರನೀಲ ಶರೀರದಿ ಹೈರಣ್ಮಯ ಚೇಲಾ ಹಾರಮಕುಟ ಕೇಯೂರ ಕಟಕಮಂ ಜೀರಭೂಷಣೋದಾರ ವಿಹಾರ 5 ಮಂಗಳರವÀದೊಳಗೆ ಶಂಖ ಮೃದಂಗ ಧ್ವನಿಯೊಳಗೆ ಸಂಗತ ಸುರವಾರಾಂಗನೆಯರು ಗಾನಂಗಳಿಂದ ನಾ ಟ್ಯಂಗಳ ರಚಿಸಲು 6 ವರವಿಪ್ರರು ಪೊಗಳೆ ಛತ್ರಚಾಮರಗಳ ನೆಳಲೊಳಗೆ ಪರಿಪರಿ ಜ್ಯೋತಿಗಳೆಸೆಯಲು ಪುಲಿಗಿರಿನ ವರದವಿಠಲನು ವರಗಳ ಬೀರುತ 7
--------------
ವೆಂಕಟವರದಾರ್ಯರು
ಶೌರಿ ಪ ಬೃಂದಾರಕವರದಿಂದ ಶೌರಿಯಾನಂದವ ಸೇವಕ ಬೃಂದಕೆ ತೋರಿ ಅ.ಪ. ಕುಂದಮುಕುಳದಿಂದಾ ಕುಮುದಸು ಗಂಧಿಯಗಳಿನಿಂದಾ ರಚಿಸಿಸೊಗಸಿಂದಲಿ ಮೆರೆಯುವ 1 ಸುತ್ತಿರೆ ಹಸ್ತಿಗಳೂ-ಕೂರ್ಮನು ಪೊತ್ತಿರೆ ಮಧ್ಯದೊಳು ಮತ್ತೆಫಣೀಂದ್ರನ ಮಸ್ತಕದಲ್ಲಿರೆ ಸ್ವಸ್ತಿಕಾದಿಬಹು ಚಿತ್ರದಿ ಶೋಭಿಪ 2 ಪಂಕಜ ಚಿಹ್ನೆಗಳಾ-ಸೂರ್ಯಶ-ಶಾಂಕ ಸುರೇಖೆಗಳಾ ಬಹುಬಿಂಕದೊಳೆಸೆಯುವ3 ಕೋಟೆಯ ತೆನೆಗಳಲಿ ದಿವ್ಯವಧೂಟಿಯರೊಲವಿನಲಿ ಬಹುದೀಟಿಲಿ ತೋರುವ 4 ಶಾರದಾಭ್ರನೀಲ-ಶರೀರದಿ- ಹೈರಣ್ಮಯಚೇಲಾ ಜೀರಭೂಷಣೋದಾರ ವಿಹಾರ 5 ಮಂಗಳರವದೊಳಗೆ-ಶಂಖಮೃದಂಗ-ಧ್ವನಿಮೊಳಗೆ ನಾಟ್ಯಂಗಳರಚಿಸಲು6 ವರ ವಿಪ್ರರು ಪೊಗಳೆ-ಛತ್ರಚಾಮರಗಳ ನೆಳಲೊಳಗೆ ವರದವಿಠಲನು ವರಗಳ ಬೀರುತ 7
--------------
ಸರಗೂರು ವೆಂಕಟವರದಾರ್ಯರು
ಶೌರಿ ಪ ಸರ್ವಮಂಗಳಮಯನೆ ವಿಧಿತಾತ ಮುದವೀತೊ ಅ.ಪ. ಉದ್ಧವನ ಗುರುವರ್ಯ ನಿರ್ದೋಷ ಗುಣವನಧಿ ನಿದ್ದೆ ಮಾಡುವಗೊಲಿದು ಮುಕ್ತಿ ಇತ್ತೆ ಹದ್ದುಮೀರಿ ಭವದಿ ಬಿದ್ದು ಮೊರೆ ಇಡುತಿಹೆನೊ ಹೃದ್ಧಾಮದಲಿ ನಿನ್ನ ದರುಶನವ ನೀಡೆಯ್ಯ 1 ಮನದಲ್ಲಿ ಮಹಪೂಜೆಕೊಳ್ಳಯ್ಯ ಎನ್ನಿಂದ ಪ್ರಣೀತಪಾಲಕ ಕೃಷ್ಣಪೂರ್ಣ ಪುರುಷ ತೃಣಮೊದಲು ಬ್ರಹ್ಮಾಂಡ ಸರ್ವರಲಿ ಸ್ವಾತಂತ್ರ್ಯ ಅನಿಲಾತ್ಮ ಆನಂದ ಖಣಿ ಕರುಣ ಮಾಡಯ್ಯ 2 ಕೆಸರು ಕಲ್ಕಿದಜ್ಞಾನಕಳವಡುವುದೇ ನಿನ್ನ ಅಸಮ ಮಂಗಳ ಸುಗುಣ ಶ್ರುತಿ ವಿನುತನೆ ದಶಮತಿಯ ಮನದೈವ ನೀ ಕೂತು ಮನದಲ್ಲಿ ವಿಶದ ತಿಳಿಮತಿಯಿತ್ತು ವೈಭವವ ತೋರೆನಗೆ 3 ಜೀವಜಡರಲಿ ಪೊಕ್ಕಾಡುವೆ ಬಹುಲೀಲೆ ಭಾವಸೂತ್ರದಿ ನಮ್ಮ ಕಟ್ಟಿ ಕುಣಿಸಿ ಈ ವಿಧವ ಬಲ್ಲವರ ಮೇಲಾಗಿ ಪಾಲಿಸುವಿ ತಾವೀಶರೆಂಬುವರು ಮುಳುಗುವರು ದುಃಖದಲಿ 4 ದುಷ್ಟಜನ ಸಹವಾಸ ಅಷ್ಟತತ್ವಗಳಲ್ಲಿ ವೃಷ್ಣೀಶ ಬಿಡಿಸಯ್ಯ ಬಂಧ ಕಡಿದು ಇಷ್ಟಾನಿಷ್ಟ ಜೀವರಲಿ ನಿಂತು ನಟಿಸುವ ಗುಟ್ಟುತೋರಿ ಜಯೇಶವಿಠಲನೆ ಕೃಪೆಮಾಡು 5
--------------
ಜಯೇಶವಿಠಲ
ಶೌರಿ ಬಾರೋ ಶ್ರೀಹರಿ ಪ ಬಾರೋ ಬಾರೋ ಕರುಣಾನಿಧಿ ನಿನ್ನನು ಬಾರಿ ಬಾರಿಗೆ ಸಿರಬಾಗಿ ನಮಿಸುವೆನು ಅ.ಪ ಮಾರನಯ್ಯನೆ ಮಂಗಳರೂಪ ತೋರೊ ಬೇಗನೆ ಸಾರಸಾಕ್ಷ ಸನ್ಮಂಗಳ ಮಹಿಮನೆ ತೋರೋ ನಿನ್ನ ಮಹಾ ಮೀನರೂಪವನು 1 ಸುಂದರಾನನ ಚಂದಿರವದನ ಮಂದಹಾಸನೆ ದುರಿತ ಕಳೆವಂದದಿ ಬೆನ್ನಿಲಿ ಮಂದರವೆತ್ತಿದ2 ಆದಿದೈತ್ಯನು ಭೂದೇವಿಯಪಹಾರ ಗೈದನು ಆ ದಿತಿಜರ ಸಂಹಾರ ಮಾಡಲು ನೆಲ ವರಾಹ ಬೇಗ 3 ಕಂದನಾಡಿದ ಆ ನುಡಿ ಕೇಳಿಯಾನಂದ ತಾಳಿದ ಮಂದರೋದ್ಧರ ಮುಚುಕುಂದ ವರದ ಸುರ- ಗಂಗೆಯ ಪಿತ ನರಸಿಂಗರೂಪದಿ 4 ಬಾಲರೂಪದಿ ಬೇಡಿದ ದಾನ ಭೂಮಿ ಮಾತ್ರದಿ ಬೇಡಿದುದನೆ ಕೊಟ್ಟಾಮಹೀಪಾಲನ ದೂಡಿ ಪಾತಾಳಕ್ಕೆ ಬಾಗಿಲ ಕಾಯ್ದೆ 5 ಶೂರ ರಾಜರ ಸಂಹಾರ ಮಾಡಿ ತೋರಿ ಶೌರ್ಯವ ಸಾಗರಶಯನಗೆ ತೋರಿ ಪರಾಕ್ರಮ ಶೂಲಿಯ ಧನುವಿತ್ತೆ ರೇಣುಕಾತ್ಮಜ 6 ವಾನರಾಧಿಪ ಹಗಲಿರುಳು ಭಕ್ತಿಮಾಡಿ ಧ್ಯಾನಿಪ ಶ್ರೀ ಮಾನಿನಿಯಳ ಕೈಪಿಡಿಯುತ ಅಯೋಧ್ಯದಿ ಮೆರೆದ ಶ್ರೀರಾಮ ಚಂದಿರನೆ 7 ಪಾಂಡುನಂದನ ಮಾಡಿದ ನಿನ್ನ ಬಂಡಿ ಬೋವನ ಸಂದೇಹಿಸದಲೆ ಅಂದು ಅವರ ಮನೆ ಎಂಜಲ ಬಳಿದ ಮುಕುಂದನೆ ಬೇಗದಿ 8 ಮಂಗಳಾತ್ಮಕ ತ್ರಿಪುರರ ಮದ ಭಂಗನಾಶಕ ಮಂಗಳಮಹಿಮ ವಿಹಂಗವಾಹನ ಸುರ ಸಂಗೀತಲೋಲ ಕೃಪಾಂಗ ದಯಾನಿಧೆ 9 ತೇಜಿಯನೇರುತ ಸುಜನರು ಮಾಳ್ಪಪೂಜೆಗೊಳ್ಳುತ ರಾಜೀವಾಕ್ಷ ರಕ್ಕಸ ಸಂಹಾರಕ ಅ- ಪಾರ ಮಹಿಮ ರಥವೇರುತ ತವಕದಿ 10 ಕಂಜಲೋಚನ ಕಮಲಾಯತಾಕ್ಷ ಮಂಜುಭೂಷಣ ಕಂಜದಳಾಂಬಕ ಕಮಲನಾಭ ವಿಠ್ಠಲಝಗಝಗಿಸುವ ಮದ್ಹøದಯ ಮಂಟಪಕೇ 11
--------------
ನಿಡಗುರುಕಿ ಜೀವೂಬಾಯಿ
ಶೌರಿ ಅಡಿಗಳನು ಧ್ಯಾನಿಸುವ ಮತಿ ಕೋರಿ ಪ ಮೃಡ ಪುರಂದರರೊಡೆಯ ಶ್ರೀಹರಿ ಕಡಲಶಯನನ ಬಿಡದೆ ಭಜಿಪರ ಸಡಗರದಿ ಸನ್ಮಾರ್ಗ ತೋರುವ ಬಡವರ ಆಧಾರಿ ನರಹರಿ ಅ.ಪ ನಿನ್ನ ದಾಸರ ಸಂಗದೊಳಿರಿಸೆನ್ನ ಬೇಡುವೆನು ನಿನ್ನ ನಿನ್ನ ನಾಮಸ್ಮರಣೆ ಅನುದಿನ ನಿನ್ನ ಚರಣವ ಭಜಿಪ ಭಕ್ತರನು ಕೊಂಡಾಡುವಂಥ ಅ- ಚ್ಛಿನ್ನ ಭಕ್ತರ ಕೂಟದಲಿರಿಸೆನ್ನ ಸನ್ನುತಾಂಗನೆ ಸರ್ವವ್ಯಾಪಕ ನಿನ್ನ ಮೊರೆ ಹೊಕ್ಕಿರುವೆ ಪಾಲಿಸು ಪನ್ನಗಾದ್ರಿವಾಸ ವೆಂಕಟ ಆ- ಪನ್ನ ಜನರನು ಪೊರೆವ ಕರುಣಿಯೆ 1 ಗಜ ನೀ ಕೇಳಿ ತ್ವರದೊಳು ಬಿಡದೆ ರಕ್ಷಿಸಿ ಪೊರೆದ ಕರುಣಾಳು ಬಡವ ವಿಪ್ರಗೆ ಒಲಿದೆ ಕ್ಷಿಪ್ರದೊಳು ಸೌಭಾಗ್ಯವಿತ್ತೆ ಹುಡುಗ ತಪವಿರೆ ಅಂದು ಅಡವಿಯೊಳು ತಡೆಯದಲೆ ನೀನೊಲಿದೆ ಭಕುತಿಗೆ ಒಡೆಯರೈವರ ಮಡದಿ ಮೊರೆ ಕೇಳಿ ಬಿಡದೆ ಅಕ್ಷಯವೆಂದು ಸಲಹಿದೆ ದೃಢ ಭಕುತರನು ಬಿಡದೆ ಪೊರೆಯುವೆ 2 ರಂಗನಾಥ ನಿನ್ನಂಘ್ರಿ ಕಮಲಗಳ ಭಜಿಸುವವರ ಭವ ಹಿಂಗಿಸುತ ಪೊರೆದಂಥ ಚರಿತೆಗಳ ಸಂಗರಹಿತನೆ ಬಿಡಿಸು ಬಂಧಗಳ ಸಲಹೆಂದು ಪ್ರಾರ್ಥಿಪೆ ಅಂಗಜನಪಿತ ತರಿದೆನ್ನಪರಾಧ ಮಂಗಳಾಂಗ ಪ್ಲವಂಗ ವತ್ಸರ ಗಂಗಾಜನಕ ನಿನ್ನಂಘ್ರಿ ಭಜಕರ ಹಿಂಗದಲೆ ಪಾಲಿಸುತ ಪೊರೆ ಕೃಪಾ-ಪಾಂಗ ಕಮಲನಾಭ ವಿಠ್ಠಲನೆ 3
--------------
ನಿಡಗುರುಕಿ ಜೀವೂಬಾಯಿ
ಶೌರಿ ನಿನ್ನಯ ಭಕ್ತ ನಾನೆನ್ನಿಸೊ ಪ ಇಂದುವರನಂದದಲಿ ಬಂದೆ ನೀ ಕನಸಿನಲಿ ಇಂದಿರಾಪತಿಯೆಂದೆ | ಹುಸಿನಗೆಯಲಿ ಒಂದು ಶಿವಚರಿತೆ ಪೇಳೆಂದು ಗುರುರೂಪದಲಿ ಅಂದಿತ್ತ ದರ್ಶನವೆ ಸಾಕು ಎನಗೆ 1 ವಾರಿನಿಧಿಯೊಳು ಮುಳುಗಿ ದಾರಿಕಾಣದ ಮುನಿಗೆ ತೋರಿದಾ ಶಿಶುರೂಪ ಸಾಕು ಎನಗೆ ಘೋರ ಕಾನನದಲ್ಲಿ ಜಾನಿಸಿದ ಬಾಲನಿಗೆ ಸಿರಿ ಮೊಗವೆ ಸಾಕು ಎನಗೆ 2 ಅರಸಿಯಾಲಿಂಗನವ ಅರೆಘಳಿಗೆ ಬಿಡದವಗೆ ಕರುಣದಿಂ ನೀತೋರ್ದ ಚರಣ ಸಾಕೆನಗೆ ಪರರ ದಂಡಿಸಿ ಧನವ ಅಪಹರಿಸಿದಾತಂಗೆ ಗುರುವೆನಿಸಿದಾ ರೂಪ ಸಾಕು ಎನಗೆ 3 ಘೋರ ರೂಪವ ಗಳಿಸಿ ನಾರಣಾಯೆಂದವಗೆ ತೋರಿದಾ ಕಾರುಣ್ಯವಿರಲಿ ಎನ್ನೊಳಗೆ [ಹದಿ ನಾ]ರು ಸಾಸಿರ ಜನರ ಗುಂಪಿಂದಲೈತಂದು ತೋರಿದಾ ದ್ವಿಜರೂಪ ಸಾಕು ಎನಗೆ4 ರಂಗನಾಥನು ನೀನೆ ಗಂಗಾಧರನು ನೀನೇ ಮಾಂಗಿರಿಯ ಶೃಂಗಾರ ನಿಲಯ ನೀನೇ ಅಂಗಜನ ಪಿತನೀನೆ | ಅಂಗಜಾರಿಯು ನೀನೆ ಮಂಗಳಾಂಗನೆ ಭವದ ಹಂಗ ಬಿಡಿಸೋ 5
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಶ್ರವಣ ಮಂಗಳನೀವುದೊ ಎನ್ನ ಕರ್ಣಗಳಿಗಾ- ನಂದ ಕೊಡುವುದು ಶರಣ ಜನರಿಗೆ ಬಂದ ದುರಿತಗಳ್ಹರಣ ಮಾಡುವುದು 1 ಭರಣ ಭೂಷಿತನಾದ ಲಕ್ಷ್ಮೀರಮಣ ನೀಲಾ- ವರಣ ನಿನ್ನ ಝಣ ಝಣಂದಿಗೆ ನಾದ ನೂಪುರ ಚರಣಕ್ವಂದಿಸುವೆ 2 ಕಮಲನಾಳದಿ ಪುಟ್ಟಿದಾತನ ಜನನಿ ಪತಿ ಜಗಜ್ಜನಕ ನಿನ್ನ ವನಜಪಾದಕೆ ನಮಿಸುವೆನೊ ಈ ಮನವು ನಿನ್ನಲ್ಲಿ 3 ನಿಲಿಸಿದರೆ ನಾ ನಿನ್ನ ನಾಮವ ನೆನೆಸಿದರೆ ಫÀಲಫಲಿಸಿ ಬಾಹೋದು ಒಲಿಸುವನು ವೈಕುಂಠಪತಿ ನೀ ಮನಸು ಮಾಡುವರೆ 4 ಘನಮಹಿಮ ಗಾಂಧಾರಿ ಸುತರನು ಹನನ ಮಾಡಿದ ಪವನ ಪ್ರಿಯನೇ ಜನುಮ ಜನುಮದಿ ನಿನ್ನ ಬಿಡೆ ನಾ ಜಗದ ವಲ್ಲಭನೆ 5 ಪತಿ ನಿನ್ನ ಸುಂದರಾಂಗವನು ತೋರದಲೆ ಭವ ಭಂಗ ಬಿಡಸುವು- ದ್ಯಾತಕೋ ಶ್ರೀರಂಗ ಪೇಳಿನ್ನು 6 ಚಕ್ರದಂದದಿ ತಿರುಗೊ ಎನಮನ ಚಕ್ರಧಾರಿಯೆ ನಿನ್ನ ಕಾಣದೆ ಶಕ್ರಸುತನ ಸಖನೆ ದಯಮಾಡ್ಹಕ್ಕಿವಾಹನನೆ 7 ಅನ್ನದಾತನು ಇರಲುಕಾಣದೆ ಅನ್ಯರಿಗೆ ಬಾಯ್ತೆರೆಯಲ್ಯಾತಕೆ ಪನ್ನಗಾದ್ರಿಶಯನ ನೀ ಸಲಹೆನ್ನ ಶ್ರೀಹರಿಯೆ 8 ಸರ್ವಗುಣ ಸಂಪನ್ನ ಸರ್ವೋತ್ತಮನೆ ಸರ್ವ ವ್ಯಾಪಾರಗಳನು ಸರ್ವಕಾಲದಿ ನಡೆಸುತಿರುವ ಸರ್ವರಾಧಾರಿ 9 ವರಮಹಾಲಕ್ಷ್ಮೀಪತಿಯೆ ವಾರಣವರದ ನಿನ್ನ ಸುರ ವಿರಿಂಚನಾ ಹರನು ವೀಣಾ- ಪಾಣಿನಾರದ ಬರಿದೆ ನಮಿಸುವರೆ 10 ಪರಮ ಕರುಣಾಶರಧಿ ಎನ್ನ ದುರಿತಗಳ ನೀ ದೂರ ಮಾಡುವೆ ಬಿರುದು ನಿನ್ನದÀು ಬಿಡದೆ ಭೀಮೇಶಕೃಷ್ಣ ಸಲಹೆನ್ನ 11
--------------
ಹರಪನಹಳ್ಳಿಭೀಮವ್ವ
ಶ್ರೀ ಅಂಗಾರಕ ಸ್ತೋತ್ರ ಗಂಗಾಜನಕ ಜಯೇಶ ಪ್ರಿಯತರ ಮಂಗಳ ನಮೋ ನಮೋ ಪಾಲಯಮಾಂ ಪ ತುಂಗ ಮಹಿಮ ವರಾಹಧರಾಸುತ ಮಂಗಳಪ್ರದತೇ ನಮೋ ನಮೋ ಅಪ ಸಾಧು ಜನಪ್ರಿಯ ವೃಷ್ಟಿಕೃದ್ ವೃಷ್ಟಿ ಹರ್ತಾದುರ್ಜನ ಭೀಕರ ಭೋ ವಿದ್ಯುತ್ತೇಜ ಕುಮಾರ ನಮೋ ನಮೋ ಶಕ್ತಿಪಾಣೇ ತ್ವಂ ಪಾಲಯಮಾಂ 1 ಸಾಮಗಾನ ಪ್ರಿಯ ದೇಹಿಮೇ ಸಪ್ತ - ಸಾಮಭಕ್ತಿ ಪ್ರತಿಪಾದ್ಯ ಹರೌ ನಿರ್ಮಲ ಭಕ್ತಿಂ ಸಜ್ಜನ ಸಂಗಂ ಜ್ಞಾನಾಯುರ್ಬಲಾದ್ವೈಶ್ವರ್ಯಂ 2 ವಾಗೀಶಪಿತ ಶ್ರೀ ಪ್ರಸನ್ನ ಶ್ರೀನಿವಾಸ ವಿಶ್ವರೂಪನು ನಿನ್ನೊಳ್ ಜ್ವಲಿಸುತಿಹ ಅಂಗಾರಕ ನಮೋ ಭೂಮಿಜ ಕೇವಲ ಕೃಪಯಾ ಸಂತತ ಪಾಲಯಮಾಂ 3 ಪ
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ಅಷ್ಟಾಕ್ಷರ ವಾಮನಮಂತ್ರ ಅಮಲ ಗುಣಪರಿಪೂರ್ಣ ಅಮೃತಸಖ ಚಿನ್ಮಯನೆ ವಾಮನ ಸುಮಂಗಳನೆ ನಮೋ ನಮೋ ನಮಸ್ತೆ ಪ ಅಮಿತ ಸುಂದರರೂಪ ಕಮಲಾದಿ ಸ್ತ್ರೀಯರಿಗು ಬ್ರಹ್ಮಾದಿ ಭಕ್ತರಿಗು ಸ್ವಾಮಿ ಸರ್ವಾಶ್ರಯನೆ ಅ ಪ ಸರ್ವದಾ ಸರ್ವತ್ರ ಸರ್ವ ಸ್ವಾಮಿಯು ನೀನು ಕೇವಲ ಸುನಿಷ್ಕಳನು ಸರ್ವ ಉತ್ಕøಷ್ಟ ಸರ್ವ ವೇದಾದಿಗಳಿಂ ಸರ್ವಜ್ಞ ನೀ ಜÉ್ಞೀಯ ಸರ್ವವಂದ್ಯನೆ ನಮೋ ಪ್ರಣವ ಪ್ರತಿಪಾದ್ಯ 1 ಉದಿತಭಾಸ್ಕರನಿಭ ಸ್ವಕಾಂತಿಯಲಿ ಜ್ವಲಿಸುವೆ ಸುದರ್ಶನವು ಶಂಖವು ಗದಾ ಜ್ಞಾನಮುದ್ರೆ ಪದುಮೆ ಸಹ ಸರ್ವ ಜಗದಂತರ್ಬಹಿವ್ರ್ಯಾಪ್ತ ಅಜ ಮಂತವ್ಯ ವಿಷ್ಣು 2 ಔದಾರ್ಯದಲಿ ಬಲಿಯ ಬೇಡಿ ಇಳಿಸಿ ಉಳಿಸಿ ಪಾದದಿಂದಲಿ ವಿಯದ್ಗಂಗೆಯನು ಪಡೆದೆ ಒದಗಿಸಿದೆ ಇಂದ್ರನಿಗೆ ಸ್ವರ್ಗಾಧಿಪತ್ಯವನು ಪದುಮಜನ ಪಿತ ನಮೋ ಪ್ರಸನ್ನ ಶ್ರೀನಿವಾಸ 3
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ಕೃಷ್ಣ ಚರಿತ್ರೆ ಅಧ್ಯಾಯ ಒಂದು ರಾಗ:ಸೌರಾಷ್ಟ್ರ ತಾಳ:ತಿವಿಡೆ ಸ್ವರ ಋಷಭ ಶ್ರೀ ರಮಣ ಚರಣಾರವಿಂದವ ಆರಡಿ ಪರಿಯಾಗಿ ಸೇವಿಸಿ ಶ್ರೀ ರಮಾ ಬ್ರಹ್ವಾದಿ ಗುರುಪದ ಸೇರಿ ಸೇವಿಸುವೆ| ನಾರಿಮಣಿ ಶಿರಿದೇವಿ ಅಪಾರ ಮಹಿಮೆಯ ತಿಳಿವುದಕೆ ಪೂರ ಮನಗಂಡಿಲ್ಲ ಮತ್ತಿನ್ನಾರು ಬಲ್ಲವರು 1 ಆರಗೊಡವಿನ್ನೇನು ಮತ್ತಿನ್ನಾರು ದೂರಿದರೇನುಸರ್ವವು ಪೂರಮಾಡುವ ನಮ್ಮ ಗುರುಗಳ ಪೂರದಯವಿರಲು| ಮನದಲಿ ಘೋರತರ ಅಭಿಲಾಷೆ ಯೋಗ್ಯತೆ ಮೀರಿ ಇರುವುದು 2 ಮನಸಿನಲಿ ಮಾತ್ಸರ್ಯವಿಲ್ಲದೆ ಘನಕವೀಶ್ವರಗಳಿಗೆವಂದಿಸಿ ಅನುಸರಿಸಿ ಭಾಗವತವನು ಬಹುವಿನುತ ದಶಮ ಸ್ಕಂದದರ್ಥವ ಕನ್ನಡಿ ತೋರಿಸಿದಂತೆ ಸ್ಪಷ್ದದಿ ಕನ್ನಡಿಲ್ಹೇಳುವೆನು 3 ಪದ್ಯ ಭಾರ ಆಘೋರದುಃಖವನು ಶ್ರೀ ರಮೇಶನ ಸ್ತುತಿಸುತಿರುವ ಕಾಲದಲಿ| ಸಾರ ಸಾರಿ ಹೇಳಿದನು ವೃಂದಾರ ಕರುಗಳಿಗೆ 1 ಪದ, ರಾಗ:ಯರಕಲಕಾಂಬೋದಿ ಅಟತಾಳ ಸ್ವರಧೈವತ ಕೇಳಿರೋ ಭೋ ದೇವತೆಗಳಿರಾ ಹೇಳುವೆ ಹರಿಭಾವವ ಹೇಳಿರೋ ನಿಮ್ಮವರಿಗೆಲ್ಲಾ ಭಾಳ ಸಂತೋಷದಿಂದಲೇ ಪ ಇಷ್ಟುದಿವಸ ಭೂದೇವಿ ಕಷ್ಟವ ಬಟ್ಟಳು ಬಹಳ ಸ್ಪಷ್ಟವಾಗಿ ಆಕೆಯಾ ಕಷ್ಟವು ದೂರಾಗುವುದಿನ್ನು || ವಿಷ್ಣುನಾಜ್ಞೆಯಲಿ ನೀವು ವೃಷ್ಣಿ ಕುಲದಲ್ಹುಟ್ಟಿರೋ|| ವಿಷ್ಣುತಾ ದೇವಕಿಯಲ್ಲಿ ಕೃಷ್ಣನಾಗಿ ಹುಟ್ಟುವಾ1 ಪದ ಈ ವಚನವ ಕೇಳಿ ದೇವತಿಗಳಾಗ ಹರಿಸೇವೆ ಆಗಲಿಯೆಂಬೋ ಭಾವದಲಿ ಜನಿಸಿದರು| ಈ ವಸುಧಿಯೊಳಗವರು ಭಾವಕನು ಕಶ್ಯಪ ವಿಭಾವಸುವನ ಪೋಲ್ವ ವಸು ದೇವನಾದನು ಅದಿತಿದೇವಿ ತಾ ಜನಿಸಿದಳು ದೇವಕಿಯು ಆಗಿ| ದೇವ ಪೂಜಕನು ವಸುದೇವ ತಾ ಪ್ರೀತಿಯಲಿ ದೇವಕಿಗೆ ಕೊಟ್ಟ ಸದ್ಭಾವದಲಿ ಬೇಕಾದ್ದು ದೇವಕಿಯಲಿ ವಸುದೇವ ರಥವೇರಿದನು ಆವಾಗ ಕಂಸ ತಾ ತೀವ್ರ ನÀಡಿಸಲಾವತ್ತಿಗಾಯಿತಲ್ಲೆ ವಿಯದ್ವಾಣಿ ಪದ, ರಾಗ(ದೇಸಿ) ಅಟತಾಳ, ಸ್ವರಷಡ್ಜ ಕೇಳು ಕಂಸನೆ ನಿನಗೇಳುವೆ ನಾ ಬಂದು| ಕೇಳು ಕಂಸಾ|| ಬಹಳ ದಿವಸ ಬಾಳಿ ಇರುವವನಲ್ಲ ಕೇಳು ಕಂಸ ಪ ಮಂಗಳಾಂಗಿಯು ಈಕೆ ತಂಗಿ ಎಂದೆನಬೇಡ ಕೇಳು ಕಂಸಾ| ತಂಗಿಯ ಮಗನೇ ನಿನ್ನಂಗಕ್ಕೆ ವೈರಿಯು ಕೇಳು ಕಂಸಾ|| 1 ಭಂಡ ನಾನೆಂದು ಉತ್ಕಂಠಿದಿಂದರ ಬೇಡ ಕೇಳು ಕಂಸಾ| ಎಂಟನೆಯವ ನಿನ್ನ ಘಂಟಸಿ ಕೊಲ್ಲುವನು ಕೇಳು ಕಂಸಾ|| 2 ವೈರಿ ದಾವಾತಿದ್ದಾನೆಂದೆನ ಬೇಡ ಕೇಳು ಕಂಸಾ| ಶುದ್ಧ ಅನಂತಾದ್ರೀಶ ಅವತಿಳಿ ಕೇಳು ಕಂಸಾ|| 3 ಪದ್ಯ ನುಡಿದಿರುವ ಆ ಸತ್ಯವಾಣಿಯ ಕೇಳಿ ಮೃತ್ಯುಗಂಜಿಕೀನ್ನ ಹೊತ್ತುಗಳೆಯದಲೆ ಆ ಹೊತ್ತು ಕೊಲಬೇಕೆಂದು ಸತ್ವರದಿ ಕೇಶದಲಿ ಒತ್ತಿ ಹಿಡಿದು ಕತ್ತಿ ಹಿರಿದೆತ್ತಿದನು ಕÀಂಸಾ| ಆ ವೃತ್ತಿಯನು ತಿಳಯುತಲೆ ಅತ್ಯಂತವಾಗಿ ತನ್ನ ಚಿತ್ತದಲಿ ಮಿಡುಕಿ ಮದಮತ್ತ ಕಂಸಗೆ ನುಡಿದ ಒತ್ತಿ ಈ ಪರಿಯಾ || 1 ಪದ, ರಾಗ:ಆನಂದಭೈರವಿ ಆದಿತಾಳ ಬೇಡಲೊ ನೋಡಿ ಈಕೆಯಲಿ ಮಾಡು ಮಮತೆಯನು ಮಾಡಬೇಡ ಹಿಂಸಾ|| ಪ ಯಾಕೆಕೊಲ್ಲುವಿಯೋ ನೀ ಕರುಣಿಸು ಸಣ್ಣಾಕಿ ನಿರ್ಮಲಾಂಗಿ|| 1 ಕೊಂದರೆ ಎನಗೆ ಕೇಡು | ಮತ್ತದರಿಂದ ನಿನಗೆ ಕೇಡು ತಿಳಿದು ನೋಡು|| 2 ಏಸು ದಿವಸ ನೀನು ಬದುಕುವಿ ನಾಶವಿಲ್ಲವೇನು| ಮೋಸವಾಗದಿರು ಶ್ರೀಶ ಅನಂತಾದ್ರೀ ಕೋಪಿಸುವನು 3 ಆರ್ಯಾ ಬಹಳ ರೀತಿಯಲಿ ಹೇಳಿಕೊಂಡರೂ ಕೇಳಲಿಲ್ಲ ಕಂಸನು ಶೌರಿಯು ಹೀಗೆ || 1 ಪದ, ರಾಗ:ಅನಂದ ಭೈರವಿ ತಾಳ:ಆದಿ ಬೇಡಿದ್ದು ಕೊಡುವೆನು ನಾನು| ಪ ಜೇವ ಹತ್ಯವೇ ಮುಂಚೆ ಕೇವಲ ನಿಂದ್ಯದು ಸ್ತ್ರೀ ವಧಕಂತು ಇನ್ನು ದಾವುದು ಸರಿಯದು || 1 ಹುಟ್ಟುದರೀಕೆಯ ಹೊಟ್ಟೆ | ಮಕ್ಕಳು ಘಟ್ಟಿ ಮನಸು ಮಾಡಿ ಕೊಟ್ಟುಬಿಡುವೆನು ಕೇಳು || 2 ಬಲ್ಲಿದಾನಂತಾದ್ರಿವಲ್ಲಭನ ಆಣಿ|| 3 ಪದ, ರಾಗ:ಯರಕಲಕಾಂಬೋಧಿ ಶೌರಿಯ ವಚನವ ಕೇಳಿ ವೈರಿಯ ಕಂಸನು ಆಗ ಮೋರೆಯ ತೆಗ್ಗಿಬಿಟ್ಟನು ನಾರಿಯ ಕೊಲ್ಲುವದು | ವೈರಿಯ ಭಯ ಕಳೆವುತ ನಾರಿಯ ಕರಕೊಂಡು ||1 ಮುಂದಾ ದೇವಕಿಯಲಿ ಕಂದನು ಆದಾಕ್ಷಣಕೆ ತಂದೊಪ್ಪಿಸಿದನು ಕಂಸಗೆ ನೊಂದ ವಸುದೇವ| ಮುಂದಾ ಕಂಸನ ನೋಡಿ| ಮನನ ಹಾಸ್ಯದಿ ಮತ್ತ ಕಂದನ ತಿರಿಗಿ ಒಪ್ಪಿಸಿ ಆಗಂದನು ಈ ಪರಿಯು || 2 ಶಿಷ್ಟನೆ ನೀಕೇಳೈ ಬಂದಿಷ್ಟಿಲ್ಲಿವನಿಂದೆನಗೆ| ಸ್ಪಷ್ಟದಿ ನಿನಗ್ಹೇಳುವೆ ಎನಗಷ್ಟಮನೇ ವೈರಿ| ದುಷ್ಟನ ಮಾತಿಗೆ ಶೌರಿಯು ತುಷ್ಟನು ಇದು ಎಂದು || 3 ಪದ, ರಾಗ:ಕನ್ನಡ ಕಾಂಬೋದಿ ತಾಳ:ಬಿಲಂದಿ ಮುಂದ ಶೌರಿಯು ತನ್ನ ಮಂದಿರಕ್ಕೆ ಪೋಗಲು ಬಂದ ನಾರದನು ಆಗಲ್ಲೆ ಕಂಸ ಇದ್ದಲ್ಲೆ || 1 ಮಾಡಿದಾ | ಮಾತನಾಡಿದಾ|| 2 ಸುದ್ದಿಯಂಬೋದ್ಹುಟ್ಟಿತು | ಕೆಲಸ ಕೆಟ್ಟಿತು|| 3 ದಾವ ಮೊತೇನ್ಹೇಳಲಿ ದೇವದೇವ ಶ್ರೀಹರಿ ದೇವಕಿಯಲ್ಲಿ ಪುಟ್ಟುವಾ| ನಿನ್ನ ಕೊಲ್ಲುವಾ|| 4 ಅಸುರರಾದವರುಗಳಾ ಅಸುಗಳನ್ನೆ ಹೀರುವಾ ವಸುಧಿ ಭಾರವನಿಳಿಸುವಾ ಕೀರ್ತಿ ಬೆಳಿಸುಮವಾ|| 5 ನಂದಗೋಪಾದಿUಳೆÀಲ್ಲ ನಂದ ಬಾಂದವರು ಮತ್ತು ಮುಂದ ವಸುದೇವಾದಿಗಳು | ದೇವತಿಗಳು|| 6 ಇನ್ನಕೇಳು ಇವರ ಹೊರ್ತು ಅನ್ನರಾದವರು ಎಲ್ಲಾನಿನ್ನ ಅನುಸರಿಸೆ ಇರುವುವರು | ಅಸುರರೇ ಅವರು|| 7 ಮೂಲದಲ್ಲೇ ಮುಂಚೆ ನೀ ಕಾಲನೇಮಿಯೆನಿಸಿ ಈ ಕಾಲಕ್ಕೆ ಕಂಸನಾಗಿರುವಿ | ಮೈಮರ್ತು ಇರುವಿ || 8 ನಿನ್ನ ಪೂರ್ವ ವೈರಿಯು ಚನ್ನಿಗಾನಂತಾದ್ರೀಶಾ ನಿನ್ನ ಕೊಲ್ಲುವನೆಂಬುದದು |ನಿನಗೆ ತಿಳಿಯದು || 9 ಧಿಟ್ಟ ನಾರದನು ಮುನಿಮುಟ್ಟಿ ಬಂದ್ಹೀಂಗನಲು ಥಟ್ಟನೆ ಕಂಸ ಭಯಬಟ್ಟು ಅವರಿಬ್ಬರಿಗೆ ಘಟ್ವ ಬೇಡಿಯ ಬಿಗಿದು ಹುಟ್ಹುಟ್ಟದವರನ್ನ ಬಿಟ್ಟು ಬಿಡುದಲೆÀ ಕೊಂದ ಹುಟ್ಟಿದಾಕ್ಷಣಕೆ|| ಹುಟ್ಟುಗ್ರ ಸೇನನಲಿ ಹುಟ್ಟಿದಾರಭ್ಯ ಬಹು ದಿಟ್ಟಾದ ಸ್ನೇಹವನು ಬಿಟ್ಟ ಆ ಕಂಸ ಕಂಗೆಟ್ಟು ಬಹುಕಾಸೋಸಿ ಬಟ್ಟವನ ಬಂದಿಯ ಲ್ಲಿಟ್ಟುತಾನೆ ಆದ ಪಟ್ಟಕಾಧಿಪತಿಯು|| 1 ಪದ:ರಾಗ:ಶಂಕರಾಭರಣ ಸ್ವರ:ಷಡ್ಜ, ತಾಳ:ಆದಿ ಯೂದವರನ್ನು ಬಹುಪೀಡಾ ಬಡಿಸೀದಾ || 1 ದುಷ್ಟನ ಕೈಯೊಳು ಸಿಕ್ಕು ಶಷ್ಟ ಬಡಲಾರೆವು ಎಂದು ಅಷ್ಟೂರು ನಿಲ್ಲದೆ ದೇಶಭ್ರಷ್ಟರಾಸರು|| 2 ಅನುಬಂಧಿಗಳೆಂಬುವರು ಅನುರಾಗದಿಂದಲ್ಲೆ| ಅವನ ಅನುಸರಿಸಿಕೊಂಡಿರುತಿಹರು ಅನುದಿನದಲ್ಲಿ||3 ಕ್ರೂರಾಗಿ ಇರುವೊನು ಕಂಸಾ ನಾರಿ ದೇವಕ್ಕಿ ದೇವಿಯು ಆರು ಮಹಾಕಾಳಿಯ ಹರೊ ಆಜ್ಞೆಯಿಂದ ಕೀಳುತು ರೋಹಿಣಿ ಗರ್ಭದೊಳಿಟ್ಟಳು|| 4 ದೇವಕಿದೇವಿಯು ವಸುದೇವಾದಿಗಳೆಲ್ಲ ಗರ್ಭ ಸ್ರಾವವಾಯಿತೆಂದೊದರಿದರು ಆ ವ್ಯಾಳ್ಯದಲ್ಲಿ|| 5 ಎಂಟನೆ ಗರ್ಭಾಗಿ ಶ್ರೀ ವೈಕುಂಠೇಶ | ನಿಂತಾನು ಸಾಧು ಕಂಟಕರನ್ನು ಕೊಲ್ಲುವೆ ನೆಂದುತ್ಕಂಠದಿಂದಲಿ || 6 ಶಂಜಾಕ್ಷಿ ದೇವಕಿ ದೇವಿ ಶಂಜನಾಭನುದರವೆಂಬೋ ಪಂಜರದೊಳಿರಲು ತೇಜಃ ಪುಂಜಳಾದಳು7 ಇಂಥಾಕಿಯ ಕಂಡು ಕಂಸಾನಂತಾದ್ರೀಶ ಗರ್ಭದಲ್ಲಿ ನಿಂತಾನೆಂದು ತಿಳದೀಪರಿ ಚಿಂತಿ ಮಾಡಿದಾ|| 8 ಪದ:ರಾಗ:ಶಂಕರಾಭರಣ ಏನು ಮಾಡಲಿ | ನಾ ಇನ್ನೇನು ಮಾಡಲಿ | ಏನು ಮಾಡಲೇನು ವಿಷ್ಟು ತಾನೆ ಬಂದಿನ್ನೇನು ಗತಿ ಇನ್ನೇನು|| ಪ ವೀರರೊಳಗೆ ಸೇರಿ ಎನ್ನ ಮಾರಿ ಹ್ಯಾಂಗ ತೋರಲಿನ್ನೇನು ||1 ತಂಗಿ ವಧ ಜಗಂಗಳೊಳಗೆ ಅಮಂಗಳಿದು ಸು
--------------
ಅನಂತಾದ್ರೀಶ - ಕಥನಕಾವ್ಯಗಳು