ಒಟ್ಟು 1814 ಕಡೆಗಳಲ್ಲಿ , 99 ದಾಸರು , 1349 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮನವೆ ಶ್ರೀನಾರಾಯಣನನು ಸ್ಮರಿಸದೆಮಾಯಾಪಾಶಕೆ ಸಿಲುಕುವರೇ ಪ.ವನಜನಾಭನ ಪದ ವನರುಹಯುಗ್ಮವಅನುದಿನನೆನೆಯದೆ ಒಣಗುವರೇವನಿತಾಲಂಪಟನಾಗುತ ಸಂತತಮನಸಿಜಯಂತ್ರಕೆ ಮನಮರಗುವರೇ ಅ.ಪ.ತುಂಡು ಸೂಳೆಯರ ದುಂಡುಕುಚವ ಪಿಡಿದುಗಂಡಸುತನವನು ಕೆಡಿಸುವರೆದಂಡಧರನ ಬಾಧೆ ಹೆಂಡತಿಯನು ಪಡಕೊಂಡು ವೇದನೆಯನು ತಾಳುವರೆಕಂಡು ಕಂಡು ನೀ ಗುಂಡಿಗೆ ಬಾಳ್ವರೆಹೆಂಡಿರ ಸುಖರಸ ಉಂಡರು ಸಾಲದೆ 1ಬಂದ ಸುಖಕೆ ನೀ ಮುಂದುವರೆಯುತಲಿಮಂದಅಸಮ ದುಃಖ ತಾಳುವರೇಬಂದುದೆನ್ನ ಕಣ್ಣ ಮುಂದೆಯನುಭವಿಪೆಎಂದಿಗೆನ್ನಾಜೆÕಯು ಬಂದಪುದೋ ನಿಜ 2ಇಷ್ಟು ದಿನದಿ ನೀ ಭ್ರಷ್ಟೆಯರಲಿ ಮೋಹಪಟ್ಟ ಭಾಗ್ಯವನೆಲ್ಲ ತೋರೊ ನೀನುಕಷ್ಟ ಮಾನಧನ ನಷ್ಟವಲ್ಲದೆ ಎಳ್ಳಿ-ನಷ್ಟು ಸುಖವನ್ನು ಕಾಣೆನಿನ್ನುಇಷ್ಟಾರ್ಥಗಳೆಲ್ಲ ದೊರೆಕುವುದೈಪರಮೇಷ್ಠಿ ಪಿತನ ಮನಮುಟ್ಟಿ ನೀವ್ ಭಜಿಸಿರೊ 3ವಿಷಯ ಪಳಂಚಿತನಾಗುವ ಸಂತತಪಂಚಡಕೀರನು ಆಗುವರೇಮುಂಚೆ ಮಾಡಿದಕರ್ಮಸಾಲದೆಂದೆನುತಲಿಸಂಚಿತಪಾಪವ ಸಂಗ್ರಹಿಸುವರೇಚಂಚಲಾಕ್ಷಿಯರ ಚಪಲದ ಮಾತನುವಂಚನೆ ಎಂಬುದು ತಿಳಿಯದೆ ಇರುವರೆ 4ಸಾರಿಸಾರಿ ಕೈ ಮುಗಿದು ಬೇಡುವೆನು ವಿ-ಕಾರ ದುರ್ಬುದ್ಧಿಯ ಬಿಡು ಎಂದುಭಾರಿ ತಪ್ಪುಗಳ ಕ್ಷಮಿಸಿಕಾವಲಕ್ಷ್ಮೀನಾರಾಯಣ ನೀನೇ ಗತಿಯೆಂದುಪಾರಮಾರ್ಥಿಕ ವಿಚಾರವ ಮಾಡುತಶ್ರೀ ರಮೇಶನ ಚರಣಾರವಿಂದವ ಸೇರೋ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಮನ್ನಿಸೆನ್ನ ಮಹಾಲಿಂಗದೇವೋತ್ತುಂಗಪುಣ್ಯಶ್ಲೋಕ ನಿನ್ನ ವರ್ಣಿಪೆ ಮುಕ್ಕಣ್ಣ ಪ.ಭಕ್ತಪಾರಿಜಾತ ಶಕ್ತಿದೇವಿಪ್ರೀತಸತ್ಯಧರ್ಮಯೂಥ ಸ್ವಾಮಿಲೋಕನಾಥ 1ವಂದನೀಯ ಕೃಪಾಸಿಂಧು ದಿವ್ಯರೂಪಚಂದ್ರಚೂಡ ಸಾಂದ್ರಾನಂದ ವೈಷ್ಣವೇಂದ್ರ 2ಮಾರವೈರಿ ಲಕ್ಷ್ಮೀನಾರಾಯಣಪ್ರೇಮಿಸಾರತತ್ತ್ವಬೋಧ ಸಾಧುಸುಪ್ರಸೀದ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಮರೆಯದಿರು ಶ್ರೀ ಹರಿಯನು ಪ.ಮರೆಯದಿರು ಶ್ರೀ ಹರಿಯ ಮರಣಾತುರದಿ ಮಗನಕರೆದವಗೆ ಸಾಯುಜ್ಯವಿತ್ತ ನಾರಾಯಣನಸ್ಮರಣೆಯನು ಮಾಡುವರಚರಣ ಸೇವಕರಿಂಗೆಪರಮಪದವೀವ ಹರಿಯಅಪದೇವಕಿಯ ಬಂಧುವನು ಪರಿದವನ ಪೂತನಿಯಜೀವರಸವೀಂಟಿದನ ಮಾವನನು ಮಡುಹಿದನಪಾವನ ತರಂಗಿಣಿಯ ಪದನಖದಿ ಪಡೆದವನಗೋವರ್ಧನೋದ್ಧಾರನ ||ದಾವಾನಲನ ಪಿಡಿದು ನುಂಗಿದನ ಲೀಲೆಯಲಿಗೋವತ್ಸ ಗೋಪಾಲ ರೂಪವನು ತಾಳ್ದವನದೇವಮುನಿ ಮುಖ್ಯ ಸುರರಾರಾಧಿಸುವನ ಶ್ರೀ ಪಾದವನುಭಜಿಸು ಮನವೆ 1ಕಂಜಸಂಭವಪಿತನ ಕರುಣಾಪಯೋನಿಧಿಯಕುಂಜರನ ನುಡಿಕೇಳಿ ಒದಗಿದನ ರಣದೊಳು ಧ-ನಂಜಯನ ಜೀವವಂ ಕೃಪೆಯಿಂದ ಕಾಯ್ದವನಆಂಜನೇಯನ ನಾಳ್ದನ ||ರಂಜಿಸುವ ಕೌಸ್ತುಭವಿಭೂಷಣನ ಜಲಧಿಯಲಿನಂಜಿನೊಡೆಯನ ಮೇಲೆ ಮಲಗಿದನ ತಮದೊಳಗೆ ಪ -ರಂಜ್ಯೋತಿಮಯನಾಗಿ ಬೆಳಗುವನಶ್ರೀ ಚರಣಕಂಜವಂ ಭಜಿಸು ಮನವೆ 2ವಾರಿಧಿಯೊಳಾಡಿದನ ವರಗಿರಿಯ ತಾಳಿದನಧಾರಿಣಿಯ ತಂದವನ ದೈತ್ಯನನು ಕೊಂದವನಮೂರಡಿಯಲಳೆದವನ ಮೊನೆಗೊಡಲಿ ಪಿಡಿದವನ ನೀರಧಿಯಬಂಧಿಸಿದನ||ದ್ವಾರಕೆಯನಾಳ್ದವನ ತ್ರಿಪುರಗಳ ಜಗುಳ್ದವನಚಾರುಹಯವೇರಿದನ ಸಕಲ ಸುಜನರ ಪೊರೆವಧೀರ ಪುರಂದರವಿಠಲನ ಚರಣಕಮಲವನುನಂಬಿ ನೀ ಭಜಿಸು ಮನವೇ 3
--------------
ಪುರಂದರದಾಸರು
ಮರೆಯಲಿನ್ನೆಂತುಪಕಾರ ಮಾರುತಿಮರೆಯಲಿನ್ನೆಂತುಪಕಾರ ಪ.ವಿಧಿಮುಂತಾದ ತ್ರಿದಶರಿಂದೆನ್ನಯಸದಮಲಪ್ರಾಣಾಧಾರ 1ಬ್ರಹ್ಮಚರ್ಯವ್ರತಧರ್ಮನಿಯಾಮಕನಿರ್ಮಲ ವಜ್ರಶರೀರ 2ದಾಸವರ್ಯ ಗುಣರಾಶಿ ತ್ವದೀಯ ವಿ-ಶ್ವಾಸವಿನ್ನೆಷ್ಟೊಗಭೀರ3ವ್ಯಾಪ್ತಮಾದಾಪದಕಾಪ್ತ ನಿನ್ನುಪಕೃತಿಸಪ್ತಸಾಗರದಿಂದಪಾರ 4ಶ್ರೀಲಕ್ಷ್ಮೀನಾರಾಯಣನು ಹನುಮನಆಲಿಂಗಿಸಿದನುದಾರ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಮಹಾಮಾಯೆಗೌರಿ ಮಾಹೇಶ್ವರಿಪ.ವiಹಾದೇವಮನೋಹಾರಿ ಶಂಕರಿಮಹಾಪಾಪಧ್ವಂಸಕಾರಿ ಶ್ರೀಕರಿಮಾಂಪಾಹಿಪಾಹಿ ಶೌರಿಸೋದರಿಅ.ಪ.ಕಾಮಕೋಟಿಸುಂದರಿ ಶುಭಕರಿ ಕರಿಕುಂಭಪಯೋಧರಿಕಾಮಿತಪ್ರದೆ ಕಂಬುಕಂಧರಿಹೇಮಾಲಂಕಾರಿ ಹೈಮವತಿ ಕುವರಿ 1ಭಾನುಕೋಟಿಭಾಸ್ಕರಿ ಭವಹರಿ ಭಜಕಾಮೃತಲಹರಿಸ್ಥಾಣುವಲ್ಲಭೆ ದನುಜಸಂಹಾರಿಜ್ಞಾನಾಗೋಚರಿ ಜಗತ್ರಯೇಶ್ವರಿ 2ಪೂರ್ವದೇವಭೀಕರಿ ಭ್ರಾಮರಿ ಪುಳಿನಾಖ್ಯ ಪುರೇಶ್ವರಿಸರ್ವಲಕ್ಷ್ಮೀನಾರಾಯಣೇಶ್ವರಿಸರ್ವಸಹಚರಿ ಶಶಾಂಕಶೇಖರಿ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಮಾತೆ ಸರಸ್ವತಿ ಮಂಜುಳ ಮೂರುತಿಚೇತನಾತ್ಮಕಿಭಾರತಿಪ.ಪ್ರೀತಿಯಿಂದೀವುದು ಪೀತಾಂಬರಧರನಸಾತಿಶಯದ ಭಕುತಿ ಅ.ಪ.ಗುರುಹಿರಿಯರ ಕಂಡು ಬಿರುನುಡಿ ನುಡಿಸದೆಕರುಣಿಸೆನಗೆಸನ್ಮತಿಪರಮಪಾವನ ವೈಷ್ಣವರ ಪಾದಾಂಬುಜ ಮಧು-ಕರದಂತಿರಲಿ ಮದ್ರತಿ 1ಶ್ರೀಶನಮೂರ್ತಿತಾರೇಶನಂದದಿ ಹೃದಯಾ-ಕಾಶದೊಳು ಕಾಣುತಿದೂಷಣ ಕಾಮಾದಿ ಕ್ಲೇಶವ ಬಿಡಿಸುತ್ತಗೈಸಮ್ಮ ಹರಿಯ ಸ್ತುತಿ 2ಮನುಜರ ರೂಪದಿ ದನುಜರು ಭೂಮಿಯೊಳ್ಜನಿಸಿದರ್ಜಲಜನೇತ್ರಿಅನಘಲಕ್ಷುಮಿನಾರಾಯಣನ ದಾಸರಿಗೆಲ್ಲಜನನಿಯೆ ನೀನೆಗತಿ3ಭಾರತಿದೇವಿಯ ಸ್ತುತಿ
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಮಾಧವಭವಂತು ತೇ ಮಂಗಳಂಮಧುಮುರಹರತೇ ಮಂಗಳಂಪ.ದಶರಥನಂದನ ತಾಟಕಿಭಂಜನದಾನವ ಸಂಹಾರ ದಯಾನಿಧೇಆದಿದೇವ ಸಕಲಾಗಮ ಪೂಜಿತಯಾದವ ಕುಲಮೋಹನರೂಪಾವೇದೋದ್ಧರ ತಿರುವೇಂಕಟನಾಯಕನಾದಪ್ರಿಯ ನಾರಾಯಣತೇ ನಮೋ ನಮೋ 1ಗೋವಿಂದ ರಾಮಕೃಷ್ಣÀ ನಮೋ ನಮೋಗೋವಿಂದ ಸೀತಾರಾಮ ನಮೋಗೋವಿಂದಮಾಧವಗೋಪಾಲ ಕೇಶವಗೋವಿಂದ ನಾರಸಿಂಹಾಚ್ಯುತ ನಮೋ 2ರಾಮಾಗೋವಿಂದ ರಾಮ ರಾಘವಾರಾಮಾ ರಾಜೀವಲೋಚನಕಾಮಿತ ಫಲದಾಯಕ ಕರಿವರದಾರಾಮಕೃಷ್ಣ ತುಳಸಿವರದಗೋವಿಂದ3
--------------
ತುಳಸೀರಾಮದಾಸರು
ಮಾಮವ ಮಮ ಕುಲಸ್ವಾಮಿ ಗುಹನತಜನ ದುರಿತಾಪಹ ಪ.ಭೀಮವೀರ್ಯ ನಿಸ್ಸೀಮಪರಾಕ್ರಮಧೀಮತಾಂವರ ನಿರಾಮಯ ಜಯ ಜಯ ಅ.ಪ.ಜ್ಞಾನಶಕ್ತಿ ಶತಭಾನುಭಾಸುರ ಪ್ರಸನ್ನಪಾವನ್ನಮೀನಕೇತನಸಮಾನ ಸಹಜ ಲಾವಣ್ಯಗಾನಲೋಲ ಕರುಣಾನಿಧಿ ಸುಮನಸ-ಸೇನಾನಾಥ ಭಾವನಿಸುತ ಸುಹಿತ 1ಪಟುತರಶಕ್ತಿ ಕುಕ್ಕಟ ಕುಲಿಶಾಭಯಶಯ ನಿರಪಾಯನಿಟಿಲಾಕ್ಷತನಯ ನಿಗಮಜÕ ಬಾಹುಲೇಯಕುಟಿಲ ಹೃದಯ ಖಲಪಟಲವಿದಾರಣತಟಿತ್ಸಹಸ್ರೋತ್ಕಟರುಚಿರಮಕುಟ2ಪಾವಂಜಾಖ್ಯ ಪವಿತ್ರ ಕ್ಷೇತ್ರಾಧಿವಾಸ ಸರ್ವೇಶದೇವ ಲಕ್ಷ್ಮೀನಾರಾಯಣಸ್ಮರಣೋಲ್ಲಾಸಸೇವಕ ವಿಬುಧಜನಾವಳಿಪಾಲಕಕೇವಲ ಸುಖಸಂಜೀವ ಜೀವನದ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಮಾಯಾಮಯ ಜಗವೆಲ್ಲ ಇದ-ರಾಯತ ತಿಳಿದವರಿಲ್ಲ ಪ.ಕಾಯದಿಂ ಜೀವನಿಕಾಯವ ಬಂಧಿಸೆನೋಯಿಸುವಳು ಸುಳ್ಳಲ್ಲ ಅ.ಪ.ತಿಳಿದು ತಿಳಿಯದಂತೆ ಮಾಡಿ ಹೊರ-ಒಳಗಿರುವಳು ನಲಿದಾಡಿಹಲವು ಹಂಬಲವ ಮನದೊಳು ಪುಟ್ಟಿಸೆನೆಲೆಗೆಡಿಸುವಳೊಡಗೂಡಿ 1ಯೋಷಿದ್ರೂಪವೆ ಮುಖ್ಯ ಅ-ಲ್ಪಾಸೆಗೆ ಗೈವಳು ಸಖ್ಯದೋಷದಿ ಪುಣ್ಯದವಾಸನೆತೋರ್ಪಳುಜೈಸಲಾರಿಂದಶಕ್ಯ 2ಕರ್ತಲಕ್ಷ್ಮೀನಾರಾಯಣನಭೃತ್ಯರ ಕಂಡರೆ ದೂರಚಿತ್ಪ್ರಕೃತಿಯಿಂದ ಪ್ರೇರಿತಳಾಗಿ ಪ-ರಾರ್ಥಕೆ ಕೊಡಳು ವಿಚಾರ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಮುರಹರನಗಧರನೀನೆಗತಿಧರಣಿ ಲಕ್ಷ್ಮೀಕಾಂತ ನೀನೆಗತಿಪಶಕಟ ಮರ್ದನ ಶರಣಾಗತ ವತ್ಸಲಮಕರಕುಂಡಲಧರ ನೀನೆಗತಿ||ಅಕಳಂಕ ಚರಿತನೆ ಆದಿನಾರಾಯಣರುಕುಮಿಣಿಪತಿ ಕೃಷ್ಣ ನೀನೆಗತಿ1ಮನೆಮನೆಗಳ ಪೊಕ್ಕು ಕೆನೆ ಹಾಲು ಬೆಣ್ಣೆಯದಿನ ದಿನ ಮೆದ್ದಹರಿನೀನೆಗತಿ||ಅನುದಿನಭಕುತರ ಬಿಡದೆ ಕಾಯುವಘನಮಹಿಮನೆ ಕೃಷ್ಣ ನೀನೆಗತಿ2ಪನ್ನಗಶಯನ ಸುಪರ್ಣಗಮನನೇಪೂರ್ಣ ಚರಿತಹರಿನೀನೆಗತಿ||ಹೊನ್ನ ಹೊಳೆಯಲಿಹಪುರಂದರವಿಠಲಚೆನ್ನ ಲಕ್ಷ್ಮೀಕಾಂತ ನೀನೆಗತಿ3
--------------
ಪುರಂದರದಾಸರು
ಯಾಕೆನ್ನೊಳು ಪಂಥಾ ಶ್ರೀಕಾಂತಾ ಪ.ಯಾಕೆ ಪಂಥ ಲೋಕೈಕನಾಥ ದಿ-ವಾಕರಕೋಟಿಪ್ರಭಾಕರ ತೇಜನೇ ಅ.ಪ.ಪೂರ್ವಾರ್ಜಿತ ಕರ್ಮದಿಂದಲಿಇರ್ವೆನು ನರಜನ್ಮ ಧರಿಸುತಗರ್ವದಿಂದ ಗಜರಾಜನಂತೆ ಮತಿಮರ್ವೆಯಾಯ್ತು ನಿನ್ನೋರ್ವನ ನಂಬದೆಗರ್ವಮದೋನ್ಮತ್ತದಿ ನಡೆದೆನುಉರ್ವಿಯೊಳೀ ತೆರದಿ ಇದ್ದೆನಾದರೂಸರ್ವಥಾ ಈಗ ನಿಗರ್ವಿಯಾದೆಯಹಪರ್ವತವಾಸ ಸುಪರ್ವಾಣ ವಂದಿತ 1ಯಾರಿಗಳವಲ್ಲಮಾಯಾಕಾರ ಮಮತೆ ಸಲ್ಲ ಸಂತತಸಾರಸಾಕ್ಷ ಸಂಸಾರಾರ್ಣವದಿಂದಪಾರಗೈದು ಕರುಣಾರಸ ಸುರಿವುದುಭಾರವಾಯ್ತೆ ನಿನಗೆನತಮಮಕಾರ ಹೋಯ್ತೆ ಕಡೆಗೆ ಏನಿದುಭಾರಿ ಭಾರಿಶ್ರುತಿಸಾರುವುದೈ ದಯವಾರಿಧಿನೀನಿರಲ್ಯಾರಿಗುಸುರುವುದು2ಬಾಲತ್ವದ ಬಲೆಗೆ ದ್ರವ್ಯದಶೀಲವಿತ್ತೆ ಎನಗೆ ಆದರೂಪಾಲಿಸುವರೆ ನಿನಗಾಲಸ್ಯವೆ ಕರು-ಣಾಳು ಶ್ರೀಲಕ್ಷ್ಮೀಲೋಲ ಮಮ ಮನಕೆಸಾಲದೆರಡು ಮೂರು ನಿನ್ನಯಮೂಲ ಸಹಿತ ತೋರು ಮುನಿಕುಲಪಾಲ ಶ್ರೀಲಕ್ಷ್ಮೀನಾರಾಯಣಗುಣಶೀಲ ಕಾರ್ಕಳ ನಗರಾಲಯವಾಸನೇ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಯಾಕೊ ದಯಬಾರದುಹರಿನಿನಗ್ಯಾಕೊ ದಯಬಾರದುಪ.ಶ್ರೀಕರ ಲೋಕೇಶ ಏಕಾನೇಕ ಸ್ವರೂಪ ಅ.ಪ.ಕಾಮಿತಾರ್ಥದಾಯಕರ ಸ್ವಾಮಿ ಲೋಕನಾಯಕಭೀಮವಿಕ್ರಮ ಶ್ರೀರಾಮ ನಿರಾಮಯ 1ಸುಂದರಿನಾಥ ಸುರೇಂದ್ರವಂದಿತಕಂದನ ಕಂದಾರವಿಂದದಳನಯನ 2ಅಕ್ಷರಬ್ರಹ್ಮ ಸಂರಕ್ಷಿಸು ನಮ್ಮಪಕ್ಷೀಂದ್ರವಾಹನ ಲಕ್ಷ್ಮೀನಾರಾಯಣ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಯಾದವ ನೀ ಬಾ ಯದುಕುಲನಂದನಮಾಧವಮಧುಸೂದನ ಬಾರೋಪಸೋದರ ಮಾವನ ಮಥುರಿಲಿ ಮಡುಹಿದ ಯಶೋದೆಯ ನಂದನ ನೀ ಬಾರೋ ಅ.ಪಕಣಕಾಲಂದುಗೆ ಗಣಗಣಕೆನುತಲಿತನನನವೇಣುನಾದದಲಿ ||ಚಿಣಿಕೋಲು ಚಂಡು ಬುಗುರಿಯನಾಡುತಸಣ್ಣ ಸಣ್ಣ ಗೋವಳರೊಡಗೂಡಿ 1ಶಂಖ ಚಕ್ರವು ತೋಳಲಿ ಹೊಳೆಯುತಬಿಂಕದ ಗೋವಳ ನೀ ಬಾರೋ ಅಕ- ||ಳಂಕ ಮಹಿಮನೆ ಆದಿನಾರಾಯಣಬೇಕೆಂಬ ಭಕ್ತರಿಗೊಲಿಬಾರೋ 2ಖಗವಾಹನನೆ ಬಗೆ ಬಗೆ ರೂಪನೆ |ನಗೆ ಮೊಗದರಸನೆ ನೀ ಬಾರೋ ||ಜಗದೊಳು ನಿನ್ನಯ ಮಹಿಮೆಯ ಪೊಗಳುವೆ |ಪುರಂದರವಿಠಲ ನೀ ಬಾರೋ3
--------------
ಪುರಂದರದಾಸರು
ಯಾರೂ ಸಂಗಡ ಬಾಹೋರಿಲ್ಲನಾರಾಯಣ ನಿಮ್ಮ ನಾಮವೊಂದಲ್ಲದೆ ಪ.ಹೊತ್ತು ನವಮಾಸ ಪರಿಯಂತರವು ಗರ್ಭದಲಿಹೆತ್ತು ಬಲು ನೋವು ಬೇನೆಗಳಿಂದಲಿತುತ್ತು ಬುತ್ತಿಯ ಕೊಟ್ಟು ಸಲಹಿದಂಥ ತಾಯಿಅತ್ತು ಕಳುಹುವಳಲ್ಲದೆ ನೆರೆಬಾಹಳೆ 1ದೇವವಿಪ್ರರು ಅಗ್ನಿಸಾಕ್ಷಿಯಿಂದಲಿ ತನ್ನಭಾವಶುದ್ಧಿಯಲಿ ಧಾರೆಯೆರಿಸಿಕೊಂಡದೇವಿ ತನ್ನ ತಲೆಗೆ ಕೈಯಿಟ್ಟುಕೊಂಡು ಇನ್ನಾವ ಗತಿಯೆಂದೆನುತ ಗೋಳಿಡುವಳಲ್ಲದೆ 2ಮತ್ತೆ ಪ್ರಾಣನು ತನುವ ಬಿಟ್ಟು ಹೋಗುವಾಗಎತ್ತಿವನ ಹೊರಗೊಯ್ಧ ಹಾಕೆಂಬರುಎತ್ತಿದ ಕಸಕಿಂತ ಕಡೆಯಾಯಿತೀ ದೇಹವಿತ್ತವೆಷ್ಟಿದ್ದರೂ ಫಲವಿಲ್ಲ ಹರಿಯೆ 3ಪುತ್ರಮಿತ್ರರು ಸಕಲ ಬಂಧು ಬಳಗಗಳೆಲ್ಲಹತ್ತಿರ ನಿಂತು ನೋಡುವರಲ್ಲದೆಮೃತ್ಯುದೇವಿಯ ಬಂದು ಅಸುಗಳನು ಸೆಳೆವಾಗಮತ್ತೆ ತನ್ನವರಿದ್ದು ಏನು ಮಾಡುವರು 4ಯಮನ ದೂತರು ಬಂದು ಪಾಶಂಗಳನೆ ಎಸೆದುಮಮತೆಯಿಲ್ಲದೆ ಪ್ರಾಣ ಎಳೆಯುತಿರಲುವಿಮುಖನಾಗಿ ತಾನು ವ್ಯಥೆಯಿಂದ ಪೋಪಾಗಕಮಲಾಕ್ಷ ಪುರಂದರವಿಠಲ ನೀನಲ್ಲದೆ * 5
--------------
ಪುರಂದರದಾಸರು
ಯೋಗಧರತಾತಕಘ ಲೋಕಪತಿ ದೇವ6ಪಾಹಿನಾರಾಯಣನೆಪಾಹಿವಾಸುಕಿಶಯನ |ಪಾಹಿಗರುಡಧ್ವಜನೆಪಾಹಿಕಮಲಾಕ್ಷ ಪಸಂವತ್ಸರಾಂಬರಧರ ನತಜನ ಪಾಲ |ಸಂವತ್ಸರ ಹರೇ ಕಾರುಣ್ಯ ನಿಧಿಯೇ ||ಸಂವತ್ಸರಕೆ ನಿನ್ನ ಸಮರಾರೊ ತ್ರಿಜಗದಿ |ಸಂವತ್ಸರ ಜಲಜಕೆ ಸಂವತ್ಸರುಪಮಾ1ಸಂವತ್ಸರಾಕ್ಷಸುತ ಗಜವೈರಿ ಸಂಹರನೆ |ಸಂವತ್ಸರಾದಿ ಸಂವತ್ಸರರಿಪು||ಸಂವತ್ಸರ ಕುವರನೆ ಸಂವತ್ಸರನೆ ಯನ್ನ |ಸಂವತ್ಸರವಳಿದು ಕೊಡು ಸಂವತ್ಸರ ಮತಿ2ಸಂವತ್ಸರ ಸಮಗ್ರ ಪ್ರಾಣೇಶ ವಿಠಲನೆ |ಸಂವತ್ಸರ ಸ್ವಾಮಿ ದೋಷ ದೂರ ||ಸಂವತ್ಸರ ಪಿತಸಿರಿಸಂವತ್ಸರನೇಕ್ಲೇಶ|ಸಂವತ್ಸರಮಾಡುದೀನ ಕಲ್ಪತರು3
--------------
ಪ್ರಾಣೇಶದಾಸರು