ಒಟ್ಟು 4560 ಕಡೆಗಳಲ್ಲಿ , 125 ದಾಸರು , 2918 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪಾಪೇಂದ್ರಿಯಗಳಿಗೆರಗಿ ಪರಹಿತಾರ್ಥವ ಮರೆದು ವ್ಯಾಪಾರ ವಿಷಯಂಗಳಲ್ಲಿರೆ ಯಮನೊಯ್ದು ಕೋಪಾಟೋಪದಲಿಂದ ದಂಡಿಸಿ ತಮಸಿನ ಕೂಪದಲ್ಲಿ ಹಾಕದಲೆ ಬಿಡುವನೆ ಮರುಳೆ ಪ ಉಡಿಗೆ ತೊಡಿಗೆ ಇಡಲು ಮಡದಿಯಳ ಮುಖ ನೋಡಿ ಕಡು ಹಿಗ್ಗಿ ಹುಗ್ಗಿ ಪಡಗದಂತೆ ಹಿರ್ರನೆ ಪಿಡಿದು ಗಲ್ಲವ ಮುಟ್ಟಿ ಮುಡಿಗೆ ಮುಡಿವಾಳವನು ತಡಿಯದಲೆ ಮುಡಿಸುತ್ತಲಿ ಕಕ್ಕಸ ಕುಚ ವಡನೊಡನೆ ನೋಡಿ ಸುಖಬಡುತಾ ಬಿಡದೆ ಕಾಳ್ಯಾಡುವುದು ಸುಡುಸುಡು ಮಾಡಿದರಿನ್ನಾವ ಗತಿ ಮರುಳೇ 1 ನೆಂಟರು ಮನೆಗೆ ಬರಲು ವಂಟಿಯಂತೆ ಮೊಗವ ಸೊಂಟ ಮಾಡಿಕೊಂಡು ಕಂಠವನು ತರ್ಕೈಸಿ ಕುಂಟವಾರ್ತೆಯ ಕೇಳಿ ಬಂಟನು ನಾನೆಂದು ತೊಂಟತನ ಬಗೆ ತೋರುತಾ ಉಂಟಾದ ಗೋಧಿಯ ಸೊಂಟೆ ಬೆಲ್ಲನು ತಂದು ಹೆಂಟಿಯಂತೆ ಹದಿನೆಂಟು ಕಡುಬನೆ ಕೊರಿಸಿ ವಂಟಿಲಿ ಕುಳಿತು ಸುಂಡಿಗೆಯನ್ನು ಚಾಚುತ್ತಾ ಎಂಟು ಮಡಿಸದೆ ವಾರ್ತಿ ಪೇಳುತಲಿ ಮರುಳೇ 2 ಇಂದು ನಮ್ಮನೆ ಪ್ರಸ್ತÀವೆಂದು ಆರಾದರೂ ಬಂದು ಪೇಳಲು ಊರ ಹಂದಿಯಂತೆ ಕಾಯಿದು ಒಂದು ಕಾಳು ತಿನದೆ ಸಂದಿಗೊಂದಿ ಸುತ್ತಿ ಸಂಧ್ಯಾಕಾಲ ವಾನರಾಗುತ್ತ ಚಂದದಿಂದ್ಯುಕ್ತಿಯೊಳು ದ್ವಂದ್ವದಲಿ ಕುಳಿತಿವರು ತಂದೆ ತಾಯಿ ಕಡೆ ಬಂಧುಬಳಗವೆಂದೂ ಒಂದಿಷ್ಟು ಕಡಿಮೆ ತಿನ್ನದೆ ಪರರ ಒಡವೆಯನು ತಿಂದು ಡರ್ರನೆ ತೇಗಿ ನಸುವ ನಗುವ ಮರುಳೇ3 ನಾಡಾಡಿ ಚಾಡಿ ಮಾತಾಡಬೇಕಾದರೆ ಖೋಡಿ ನಾಲಿಗೆ ದೊಡತಾಗಿ ಬಾಹಿನೀ ನಿಡಿ ಲಟಲಟವೆನುತಾ ಕೋಡಗದಂತೆ ಕುಳಿತು ಹೇಡಿ ಪರನಿಂದೆಗಳಿಗೆ ಬಾಡದಲೆ ಬತ್ತದಲೆ ಮಾಡಿದ ಮಹಾಪುಣ್ಯ ಕಾಡಿಗೊಪ್ಪಿಸಿ ಕೊಟ್ಟ ಮೂಢ ಗಾರ್ಧಬನಂತೆ ಓಡಾಡಿ ಬಳಲಿ ನಾಡಾಡಿ ಸುದ್ದಿಗಳಿಗೆ ಬಿಡಿ ಬಿಡಿಂದಾ ತಿರುಗುವಾ ಹೀನ ಮರುಳೇ 4 ಸಂಸಾರವೆಂಬಾ ಸಾರಾ ಸಾಗರ ಮಧ್ಯ ಹಿಂಸನಾಗದೆ ಬಿಟ್ಟು ಇದರಂತೆ ಭಕುತಿ ಮರು ದಂಶ ಗುರು ಮಧ್ವಮುನಿರನ್ನನಾ ಶ್ರೀ ಚರಣ ಸಂಶಯವಿಲ್ಲದಲೆ ನಂಬಿ ಸಂಸಾರ ಉತ್ತರಿಸು ಸಂದೇಹ ಇದಕಿಲ್ಲ ಕಂಸಾಸುರನ ಪ್ರಾಣಹರ ಎನ್ನ ಮನಸ್ಸಾ ಹಂಸ ಶ್ರೀ ವಿಜಯವಿಠ್ಠಲನ್ನ ಪಾದದಾ ಪಾಂಶವೊ ಮಾಡಿ ಗತಿಯಲಿ ಬಾಳು ಮರುಳೇ5
--------------
ವಿಜಯದಾಸ
ಪಾಪೋಸು ಹೋದುವಲ್ಲಾ ಪ ಅಪಾರ ಜನ್ಮದಿಂದ ಆರ್ಜನ ಮಾಡಿದ ಅ.ಪ. ಉರುಗಾದ್ರಿಯಲ್ಲಿ ಸ್ವಾಮಿ ಪುಷ್ಕರಣಿ ಮೊದಲಾದಪರಿಪರಿ ತೀರ್ಥ ಸ್ನಾನಗಳ ಮಾಡಿಹರಿದಾಸರ ಕೂಡ ಶ್ರೀನಿವಾಸ ಮೂರ್ತಿದರುಶನದಲಿ ಮೈಮರೆತು ಇದ್ದೆನು ಎನ್ನ 1 ಪರಮ ಭಾಗವತರು ಹರಿಕಥೆ ಹೇಳಲುಪರಮ ಹರ್ಷದಿಂದ ಕೇಳುತಿದ್ದೆಪರಮ ಪಾಪಿಷ್ಠರ ಪಾಲಾಗಿ ಹೋದಾವುಪರಮಾತ್ಮನ ಚಿತ್ತಕೆ ಬಂದಿತೀಗೆನ್ನ 2 ಮಾಯಿ ಒಲಿದು ಎನಗೆ ಕೊಂಡು ಕೊಟ್ಟಿದ್ದಳುದಾಯಿಗಾರರು ನೋಡಿ ಸಹಿಸಲಿಲ್ಲಾಮಾಯಾರಮಣ ನಮ್ಮ ಮೋಹನ್ನ ವಿಠಲನ್ನಮಾಯದಿಂದಲಿ ಮಟ್ಟವಾಯಿತು ಎನ್ನ 3
--------------
ಮೋಹನದಾಸರು
ಪಾರು ಮಾಡೋ ಕೃಷ್ಣಾ | ಪಾರು ಮಾಡೋ ಪ ಭವ ಅ.ಪ. ನಿಗಮ ಗೋಚರ ತವಬಗೆ ಬಗೆ ಮಹಿಮಗಳವಗತ ಮಾಡುತ 1 ರಸವೆನಿಪುದು ಭೂ | ವಸುಮತಿ ಪಂಚಕೆರಸವಹುದದರಿಂದ | ರಸವೆನಿಪಾಪಾ |ರಸವಾಚ್ಯ ವರುಣ ನಾ | ರಸವೆನಿಸುವ ಸೋಮಔಷಧಿ ದೇವನಿಂದ | ರಸವೆನಿಸುವ ರುದ್ರ 2 ಈಶಗಿಂದಧಿಕ ವಾ | ಗೀಶನ ಭಾರ್ಯೆಯುಈ ಸರಸ್ವತಿಯಿಂದ | ಆಸಾಮನಾಮಾ |ಆ ಸಾಮುಖ್ಯನಿಲಗು | ಈಶ ಉದ್ಗೀಥನೆಹೇ ಸರ್ವೋತ್ತಮೋತ್ತಮ | ಭಾವಿಸಿ ಮನದಲಿ 3 ಪರ | ರಸತಮ ವೆನಿಪಳುಸುಸಮ ಪರಮ ಪರರ್ಥ | ರಸತಮ ಪದ ಪಡೆದ 4 ಭವ 5
--------------
ಗುರುಗೋವಿಂದವಿಠಲರು
ಪಾರುಗಾಣಿಸೊ ಎನ್ನ ಪಾವನಕಾಯ ಶ್ರೀ ಗುರು ರಾಘವೇಂದ್ರಾರ್ಯನೇ ಪ. ಶ್ರೀ ರಮಾಪತಿ ಗುಣವ ನೀ ಮನದೊಳು ತಿಳಿಸಿ ಭವ ಬಂಧ ಬಿಡಿಸೋ ಅ.ಪ. ಮಿಂಚಿನಂತಿಹ ಎನ್ನ ಚಂಚಲ ಮನದಲ್ಲಿ ಸಂಚಿತನೆ ಎನೆ ನೆಲಸೋ ಸಂಚಿತಾಗಮಿಗಳು ಕೊಂಚ ಉಳಿಯದ ತೆರದಿ ಪಂಚ ಭೇದಾರ್ಥ ತಿಳಿಸೊ ಪಂಚವಕ್ತ್ರನ ತಾತ ಮಿಂಚಿನಂದದಿ ಪೊಳೆವೊ ಹಂಚಿಕೆಯ ಎನಗೆ ತೋರೋ | ಮನಕ್ಹರುಷ ಬೀರೋ 1 ಶ್ರೀ ನರಹರಿ ಕೃಷ್ಣ ರಾಮ ವ್ಯಾಸರ ಪದವ ನೀ ನಿರ್ಮಲದಲಿ ನೆನೆವೆ ಮಾನನಿಧಿ ಮುರಹರಿಯ ಧಾಮತ್ರಯಗಳ ಮಾರ್ಗ ಕಾಮಿಸಿದ ಭಕ್ತಗೀವೆ ನಾನಧಮೆ ನಿನ್ನಡಿಗೆ ಬಾಗಿ ಭಜಿಸುವೆ ಗುರುವೆ ನೀನಿತ್ತ ನೋಡಿ ಪೊರೆಯೊ | ನೀ ದಯವ ಗರೆಯೊ 2 ತರಳತನದಲಿ ಶ್ರೀ ನರಹರಿಯ ಭಜಿಸುತ್ತ ಉರುತರದಿ ಭಾದೆ ಸಹಿಸಿ ಹರಿಯು ಸರ್ವತ್ರ ವ್ಯಾಪಕನೆಂಬೊ ಮಹಿಮೆಯ ಉರ್ವಿಯೊಳಗೆಲ್ಲ ನೆಲಸಿ ಸಿರಿ ಕೃಷ್ಣನಾ ಭಜಿಸಿ ಮರುತ ಮತವನೆ ಸ್ಥಾಪಿಸಿ | ಗುರುರಾಯನೆನಸಿ 3 ತುಂಗ ತೀರದಿ ನಿಂದು ಮಂಗಳರೂಪದಲಿ ಪಂಗು ಬಧಿರರ ಸಲಹುತ ಸಂಗೀತ ಪ್ರಿಯನೆನಿಸಿ ಶೃಂಗಾರರಾಮನ ಮಂಗಳರೂಪ ಭಜಿಸಿ ಹಿಂಗದೇ ಸುಜನರಿಗೆ ವರವ ಕೊಡುವೊ ಬಿರುದು ರಂಗನಾ ಪದದೊಲುಮೆಯೋ | ನಿನ್ನಯ ಮಹಿಮೆಯೋ 4 ಗೋಪಾಲಕೃಷ್ಣವಿಠ್ಠಲನ ಪರಿಪರಿಯಿಂದ ಪಾದ ಮೌಳಿ ನೋಳ್ಪೆ ಶ್ರೀ ಪತಿಯ ತೋರೆನಗೆ ಪಾಪ ಕಲುಷವ ಕಳದು ತಾಪಪಡಲಾರೆ ಭವದಿ ಕಾಪಾಡುವವರಿಲ್ಲ ನೀ ಕೃಪಾನಿಧಿಯೆಂದು ಪರಿ ಕೇಳ್ದೆ ಗುರುವೆ | ಭಕ್ತರ ಕಲ್ಪ ತರುವೆ5
--------------
ಅಂಬಾಬಾಯಿ
ಪಾರ್ಥಸಾರಥಿ ನಿಮ್ಮ ಸೇವೆಯ ಮಾಡಿ ಸಾರ್ಥಕವಾದೆನು ಪ ವಾರ್ಥಿಪುರುಷನೆ ನಿಮ್ಮ ಕೀರ್ತಿಯ ಕೊಂಡಾಡಲೆನಗೆ ಶಕ್ತಿಯ ವಿಸ್ತರಿಸೆನಗೆ ಯುಕ್ತಿಯ ಅ.ಪ ಆಚಾರ್ಯರಿಗೆ ಅಭಿವಂದನೆ ಮಾಡಿ ಅಜನರಾಣಿಯ ಭಜಿಸುವೆ ಅನಾದಿಕ್ರಮವನು ಪೇಳುವೆ 1 ಕೈರವಿಣಿಯಲ್ಲಿ ಸ್ನಾನವಮಾಡಿ ಕೈಮುಗಿದು ಮಾರುತಿಗೆ ನಾ ಕರುಣಿಆಚಾರ್ಯರಿಗೆ ವಂದಿಸಿ ಕರಿಯಬಳಿಗೆ ನಾ ಬಂದೆನು ನಾ ಕರಿಯ ಬಳಿಗೆ ಬಂದೆನು 2 ದವನೋತ್ಸವದ ಮಂಟಪಂಗಳು ಭಾಗವತರ ಭವನವು ಬಲವಬಳಸಿ ಭಕ್ತವತ್ಸಲನ ಚೆಲುವರಥವನು ನೋಡಿದೆ ನಾ ಶೇಷರಥವನು ಸೇವಿಸಿ 3 ಮೂಡಬೀದಿಯ ಸುತ್ತಿಬಂದು ಮಹದಾಹ್ವಯರನು ಸೇವಿಸಿ ಮಹಾನುಭಾವನ ವಿಮಾನವನು ನೋಡಿ ಮಾನವನ್ನು ಬಿಟ್ಯೆನೊ ದೇಹಾಭಿಮಾನವನ್ನು ಬಿಟ್ಯೆನೊ 4 ಕಾರಿಮಾರಿ ಪುತ್ರರಿಗೆ ಬಾರಿಬಾರಿಗೆ ವಂದಿಸಿ ವಾರಿಜಾಕ್ಷನ ಗೋಪುರವ ನೋಡಿ ಘೋರಪಾಪವ ಕಳೆದೆನೊ ಯನ್ನ ಘೋರಪಾಪವ ಕಳೆದೆನೊ 5 ಗರುಡಕಂಭವ ದೀಪಸ್ತಂಭವು ವಾಹನದ ಮಂಟಪಂಗಳು ವಾರಿಜನಾಭನ ಪಕ್ಷಿವಾಹನನ ನೋಡಿ ವಂದನೆಯ ಮಾಡಿದೆ ಅಭಿವಂದನೆಯ ನಾ ಮಾಡಿದೆ 6 ತೋರಣದ ಬಾಗಿಲನು ದಾಟಿ ವಾರುಣದೆದುರಲಿ ವಂದಿಸಿ ವಾರಿಜಾಕ್ಷಿ ಶ್ರೀವೇದವಲ್ಲಿಯ ಸಾರೂಪ್ಯವನು ನಾ ಬೇಡಿದೆ ಸಾಯುಜ್ಯವನು ನಾ ಬೇಡಿದೆ 7 ಭಕ್ತಿಸಾರರ ಚರಣಕೆರಗಿ ಹಸ್ತಗಿರೀಶನ ವಂದಿಸಿ ಸುತ್ತಿ ಗರುಡಕಂಬವನ್ನು ಮತ್ತೆ ಸಿಂಹನ ಸೇವಿಸಿ ದಿವ್ಯ ನಾರಸಿಂಹನ ಸೇವೆಸಿ 8 ವಿಷ್ಣುಚಿತ್ತರ ಪುತ್ರಿಯನ್ನು ಅರ್ಥಿಯಿಂದಲೆ ಸೇವಿಸಿ ಮುಕ್ತಿದಾಯಕ ರಂಗನ ಪಾದಕೆ ಮುದದಿ ವಂದನೆ ಮಾಡಿದೆ ನಾ ಮುದದಿ ವಂದನೆ ಮಾಡಿದೆ 9 ಯಾಮುನಾಚಾರ್ಯರಿಗೆ ವಂದಿಸಿ ಕಾಂಚೀಪೂರ್ಣರಿಗೆರಗುವೆ ವೇದಾಂತಾಚಾರ್ಯರ ವಂದನೆ ಮಾಡಿ ಅನಾದಿ ಪಾಪವ ಕಳೆದೆನೊ ನಾ ಅನಾದಿ ಪಾಪವ ಕಳೆದೆನೊ 10 ಭಾಷ್ಯಕಾರರ ಚರಣಕೆರಗಿ ವರಯೋಗಿಗಳಿಗೆ ವಂದಿಸಿ ಕುಲೇಶ ದಾಶರಥಿಗೆ ವಂದಿಸಿ ದ್ವಾರಪಾಲಕರ ನೋಡಿದೆ ನಾ ದ್ವಾರಪಾಲಕರ ನೋಡಿದೆ 11 ಗಂಟೆಬಾಗಿಲ ದಾಟಿ ಶ್ರೀವೈಕುಂಠವಾಸನ ಭಕ್ತರು ಹದಿ ನೆಂಟು ಆಳ್ವಾರುಗಳ ಸೇವಿಸಿ ಕಂಟಕಗಳ ಕಳೆದೆನೊ ಭವ ಕಂಟಕಗಳ ಕಳೆದೆನೊ 12 ಮಾಧವ ಅನಂತ ಶ್ರೀಪದ್ಮನಾಭನ ಸೇವಿಸಿ ಶ್ರೀರಾಮ ಲಕ್ಷ್ಮಣ ಭರತ ಶತ್ರುಘ್ನ ಸೀತೆಯನು ನಾ ನೋಡಿದೆ ಲೋಕಮಾತೆಯನು ನಾ ಬೇಡಿದೆ 13 ಆದಿಶೇಷನ ಮೇಲೆ ಮಲಗಿದ ಅನಾದಿರಂಗನ ಸೇವೆಗೆ ಕುಲ ಶೇಖರರ ಸ್ಥಾನದಲಿ ನಿಂದು ಯದುಕುಲೇಶನ ನೋಡಿದೆ ನಾನೆದುಕುಲೇಶನ ನೋಡಿದೆ 14 ಅನಿರುದ್ಧ ಸಹಿತಲೆ ಎಡದಿ ಸಾತ್ಯಕಿ ಪಂಚಮೂರ್ತಿಗಳ ನಡುವೆ ಪಾರ್ಥಸಾರಥಿ ಯೆಡಬಲದಿ ಶ್ರೀದೇವಿ ಭೂದೇವಿ 16 ಆದಿಶೇಷನ ಮೇಲೆ ತನ್ನಯ ಪಾದವನ್ನು ಪ್ರಸÀರಿಸಿ ವಿ ಅಂದುಗೆ ಗೆಜ್ಜೆ ಕುಂದಣದ ಪಾಡಗಗಳು ಆನಂದದ ಪಾಡಗಗಳು 17 ಕನ್ನಡಿಯಂದದಿ ಕಣಕಾಲುಗಳು ಉನ್ನತವಾದ ಪೀತಾಂಬರವು ಪನ್ನಗಶಯನನ ವಡ್ಯಾಣದಲಿ ಪರಮಮೂರ್ತಿಯ ಸರಗÀಳು ಶ್ರೀಮೂರ್ತಿ ಸರವನು ಸಿಕ್ಕಿಸಿ 18 ದುಷ್ಟನಿಗ್ರಹವನ್ನು ಮಾಡಿ ಶ್ರೇಷ್ಠರನ್ನು ಪರಿಪಾಲಿಪ ಶ್ರೀ ಕೃಷ್ಣಮೂರುತಿಯ ಎಡದ ಭಾಗದಿ ಶ್ರೇಷ್ಠವಾದ ಖಡ್ಗವು ಸರ್ವಶ್ರೇಷ್ಠವಾದ ಖಡ್ಗವು 19 ಸಿಂಧುರಾಜನ ಕೊಲ್ಲುವುದಕಾಗಿ ಅಂದು ಚಕ್ರವ ಕಳುಹಿದೆ ಒಂದು ಕೈಯಲಿ ಪಾದವ ತೋರುತ ಮತ್ತೊಂದು ಕೈಯಲಿ ಶಂಖವು ಅನಂದದಿಂದಲೆ ಶಂಖವು 20 ಸೃಷ್ಟಿಯೆಳಗ್ಹದಿನಾಲ್ಕು ಲೋಕವ ಪಕ್ಷಿವಾಹನವಂ ಬಿಟ್ಟು ವಕ್ಷಸ್ಥಳದಲಿ ಲಕ್ಷ್ಮಿದೇವಿಯ ರತ್ನಾದ್ಹಾರದಪದಕವು ನವರತ್ನದ್ಹಾರದ ಪದಕವು 21 ಕಂಠದೊಳಗಿಟ್ಟ ಕೌಸ್ತುಭಮಣಿ ಎಂಟುಪುಷ್ಪದ ಹಾರವು ವೈ ಕುಂಠವಾಸನ ಸೇವಿಸಿದರೆ ಕಂಟಕಂಗಳು ಕಳೆವುದು ಭವಕಂಟಕಗಳು ಕಳೆವುದು 22 ಕುಂದಕುಸುಮದಂತೆ ದಂತವು ಪವಳದಂತೆ ಅಧರಕಾಂತಿಯು [ಚೆಂದದಿ] ಪೊಳೆವ ಕರ್ಣಕುಂಡಲ ಚೆಲುವ ನಾಸಿಕದಂದವು ತಿಲಕುಸುಮನಾಸಿಕದಂದವು 23 ದೀಪದಂದದಿ ಕರುಣನೇತ್ರವು ಚಾಪದಂದದಿ ಪುಬ್ಬುಗಳಲಿ ವಿವೇಕವಾಗಿ ತೋರ್ಪುದು 24 ಪದುಮನಾಭನ ಸೇವಿಸಿದವರಿಗೆ ಒದಗಿ ಬರುವುದು ಮುಕ್ತಿಯು ಎಲ್ಲರಿಗೊದಗಿ ಬರುವುದಿಷ್ಟಾರ್ಥವು 25 ಪಾದದಿ ಕೇಶದ ಸೇವೆಯನು ಮಾಡಿ ಅನಾದಿಪಾಪವ ಕಳೆದೆನೊ ವೇದಮೂರುತಿ ವೆಂಕಟಕೃಷ್ಣನೆ ಪಾದವನ್ನು ತೋರಿಸು ನಿಮ್ಮ ಶ್ರೀ ಪಾದವನ್ನು ತೋರಿಸು 26
--------------
ಯದುಗಿರಿಯಮ್ಮ
ಪಾರ್ಥಸಾರಥಿ ಪಾಲಿಸೆನ್ನ ಶ್ರೀಹರಿಯೆ ಪ ಅಂದು ಗಜನು ತಾನು ಬಂದು ತಾ ಬಂಧು ಬಳಗವ ಕೂಡಿ ಸೊಂಡಿ- ಲಿಂದ ನೀರನು ಕಲಕಲಾಕ್ಷಣ ಒಂದು ಮಕರ್ಹಲ್ಲಿಂದ ಪಿಡಿಯೆ ಮು- ಕುಂದ ನೀನೆ ಗತಿಯೆಂದರಾಕ್ಷಣ ಬಂದು ಒದಗಿದ್ಯೊ ಸಿಂಧುಶಯನನೆ 1 ದುರುಳಾಸುರನು ತನ್ನ ಕರುಳ ತನ ಕರುಳನಿಟ್ಟುರಿಯಲ್ಲಿ ಗರಳ ಹಾಕಿ ಬಾಧಿಸಲು ಖಳನು ಕಾರಣ ಕಂಬದಲಿ ಬಂದೆಳೆದು ಅವನುರ ಕರುಳ ಮಾಲೆಯ ಕರಾಳವದನವ ತೆರೆದು ತನ್ನಯ ಕೊರಳಲ್ಲಿರಿಸಿದ ಕೋಮಲಾಂಗನೆ 2 ಪಿತನ ತೊಡೆಯಲಿದ್ದ ಸುತನ ಕಂಡು ಸುತನ ಸುರುಚಿಯು ತಾನಾಗ ಹಿತದಂತ್ವಾಕ್ಯಗಳನು ನುಡಿಯಲು ಅತಿಬ್ಯಾಗದಲಜಸುತನ ನುಡಿ ಕೇ ಳುತಲಿ ತಪವನು ಚರಿಸಲಾಕ್ಷಣ ಪತಿತಪಾವನ ಪರಮ ಕರುಣದಿ ಸುತ ಧ್ರುವಗೆ ಸುಖವಿಟ್ಟ ಶ್ರೀಹರಿ3 ಬಾಡಿ ಬಳುಕುವ ದ್ವಿಜನ ನೋಡಿ ತಾ ನೋಡಿ ತಂದವಲಕ್ಕಿ ಬೇಡಿ ಆಡಿ ಭಕ್ತನ ಕೂಡ ನಯನುಡಿ ಮಾಡಿ ಕರುಣವ ತನ್ನ ದಯ ಸೂ- ರ್ಯಾಡಿ ಸಖಗೀಡಿಲ್ಲದರ್ಥವ ನೀಡಿದ್ಯೊ ಬಹು ರೂಢಿಗಧಿಕನೆ 4 ಕಡುಚÉಲ್ವೆಕರೆಯಲುಟ್ಟುಡುಗೆ ಉಟ್ಟ ಉಡುಗೆ ಸೆಳೆಯಲು ಕೃಪ್ಣೆ(ಯಿ)ದ್ದೆಡೆಗೆ ನಡೆದಸುರ ಪಿಡಿದೆಳೆಯೆ ಸೀರೆಯ ಕಡೆಯ ಕಾಣದೆ ಖಳನು ಧರೆಯೊಳು ಯುಡುಗೆಗಕ್ಷಯ ನುಡಿದ ಕೃಷ್ಣನೆ 5 ಸಿಂಧುಶಯನಾರವಿಂದನಯನಾರ- ವಿಂದ ನಯನ ಅಸುರರಿಗತಿ ಭಯಂಕರನಾ- ಗೆಂದಿಗಾದರು ನಿನ್ನ ನಾಮಸುಧೆ ಯಿಂದ ಸುಖ ಸುರಿವಂತೆ ಮಾಡು ಮು- ಕುಂದ ಭೀಮೇಶಕೃಷ್ಣ ನಿನ್ನ ಪ- ದಾಂಬುಜವ ತೋರಾನಂದದಿಂದಲಿ 6
--------------
ಹರಪನಹಳ್ಳಿಭೀಮವ್ವ
ಪಾರ್ವಟೆ ಉತ್ಸವಗೀತೆ ನೋಡಿದೆ ನೋಡಿದೆ ಪಾರ್ವಟೆ ಉತ್ಸವವ ರೂಢಿಗೊಡೆಯ ರಂಗನ ಪರಮಸಂಭ್ರಮವ ಪ. ಮುದದಿ ವಿಜಯದಶಮಿಯಲಿ ಭುಜಗಶಯನ ರಂಗ ವಿಧವಿಧವಾದ ಆಭರಣ ವಸ್ತ್ರಗ[ಳಿಂದ] ಮದನನಯ್ಯನು ತಾನು ಶೃಂಗಾರವಾಗಿ ಒದಗಿ ಪಲ್ಲಕ್ಕಿ ಏರಿ ಬರುವ ವೈಭೋಗವ 1 ಮುತ್ತಿನಕಿರೀಟ ಮುಗುಳುನಗೆಯ ನೋಟ ರತ್ನದ ಪದಕಗಳ ಹತ್ತುಅಳವಟ್ಟು ಬಟ್ಟಲಲಿ ಭಕ್ತರು ಬಿಟ್ಟ ಉಭಯವನ್ನೆಲ್ಲ ಗ್ರಹಿ ಸುತ್ತ ನರಸಿಂಹನಪುರದ ಮಂಟಪದಲ್ಲಿ 2 ಅಂಬುಮಾಲೆ ಆನೆಮೇಲೆ ನೇಮದಿಂದಲೆ ತಂದು ನೀಲವರ್ಣಗೆ ಕೊಡಲು ಪೂಜೆಯನು ಮಾಡಿ ಅಂಬು ನಾಗಶಯನ ಬಹರಿನೇರಿ ಲೀಲೆಯಿಂದ ಬರುವ ಪರಮವೈಭೋಗವ 3 ಶರಧಿಯಂತೆ ಪುರುಷೆ ಭೋರ್ಗರೆಯುತ ಬರುತಿರೆ ಮುರುಜ ಮೃದಂಗ ಭೇರಿವಾದ್ಯ ಘೋಷಗಳು ಗಜ ಸಿಂಹ ವೃಷಭ ಶಾರ್ದೂಲನಡೆಯಿಂದ ಬಂದ ವಸುದೇವಪುತ್ರನ 4 ಬಂದು ಅಶ್ವವನಿಳಿದು ಅರ್ಥಿಯಿಂದಲೆ ನಿಂದು ಗಾಯಿತ್ರಿಮಂಟಪದಲ್ಲಿ ಮಿತ್ರರು ಸಹಿತ ಇಂದಿರೆ ಸಹಿತಲೆ ನಿಂದ ವೆಂಕಟರಂಗ ಮಂದಿರದೊಳಗೆ 5
--------------
ಯದುಗಿರಿಯಮ್ಮ
ಪಾರ್ವತಿದೇವಿ ಗಿರಿಜೆ ನೀ ಒಲಿಯುವರೇ ಪರಶಿವನು ತಕ್ಕ ವರನೆಂದು ಮೆರೆಯುವರೆ ಪ ಪರಮ ವೈಷ್ಣವ ಭಕ್ತಾಗ್ರಣಿಯಾದ ಶಿವನಿಗೆ ಇರುತಿಹ ಕೊರತೆಗಳರಿಯದೆ ಗರುವದಲಿ ಅ.ಪ ಮನ್ಮಥನ ವೈರಿಗೆ ವಾಸಕೆ ಯೋಗ್ಯ ಮನೆಯಿಲ್ಲದಿರುವಾತಗೆ ಮನೆಯು ಮಶಾಣವೆನ್ನುತ ಪೇಳುತಿಹರಿನ್ನು ಸುಮನಸರೊಡಯನೆ ಸಖನಂತೆ ಇದು ಕೇಳು ಮನಸಿನ ಅಭಿಮಾನಿ ಶಿವನು ಘನತರದ ವಿಷಪಾನಗೈದನು ಮನದಿ ಶ್ರೀ ರಘುವರನ ಸ್ಮರಿಸುತ ವೃಷಭ ವಾಹನವೇರಿ ಚರಿಪಗೆ 1 ರುಂಡಮಾಲೆಯ ಧರಿಸಿದ ಕೊರಳೊಳಗೆ ಸರ್ಪ ದಂಡೆ ಅಲಂಕರಿಸಿರುವ ಮಂಡೆಯೊಳಗೆ ಚಲುವ ಗಂಗೆಯ ಧರಿಸಿಹ ಚಂದ್ರಶೇಖರ ಶಿವನೆಂದು ಕರೆಸಿಕೊಂಬ ಕೆಂಡಗಣ್ಣಿನ ಕ್ರೂರರೂಪನ ಕಂಡು ಹರುಷದಿ ಹಿಗ್ಗಿ ನಲಿಯುವಿ ಮಂಡೆಯಲಿ ಕೆಂಜಡೆಯ ಸುತ್ತಿಹ ಹಿಂಡು ವಿಷ ಸರ್ಪಗಳಲಂಕೃತನಿಗೆ 2 ಕರಿಚರ್ಮಾಂಬರನುಡುವ ಕೈಯಲ್ಲಿ ಕಪಾಲ ತಿರಿದುಂಡು ಹರುಷಿಸುವ ಪರಿ ದೈತ್ಯ ಪಿಶಾಚಯಕ್ಷರ ಕೂಡಿ ಚರಿಸುತ್ತ ಕುಣಿಯುತ್ತ ಗೊರವನಂತಿರುತಿಹ ಪರಮ ವೈರಾಗ್ಯವನು ಧರಿಸಿ ಫಣೆಯ ಗಣ್ಣನು ಬಳಿದು ಭಸುಮವ ಚರಿಸುವನು ರುಷಿವರರ ತೆರದಲಿ ಎಣಿಸಿ ಮಣಿಗಳ ಒಲಿಸಿ ಹರಿಯನು 3 ರಾಮಮಂತ್ರವ ಜಪಿಸಿ ರಮಣಿಗೆ ದಿವ್ಯ ರಾಮಚರಿತೆಯ ಬೋಧಿಸಿ ಕಾಮಹರನು ಕೈಲಾಸಪತಿಯು ಮತ್ತೆ ಕಾಮದೇವನು ಎಂಬ ನಾಮಸ್ಮರಿಸುವ ಆ ಮಹಾಗಣಪತಿಯು ಪುತ್ರನು ವೀರಭಕ್ತನು ಸುತನು ಶಿವನಿಗೆ ಪ್ರೇಮದಲಿ ಷಣ್ಮುಖನು ಸುತನೆಂ- ದೀ ಮಹಾಮಹಿಮೆಗಳು ತಿಳಿಯದೆ4 ಸುಂದರಾಂಗಿ ನಿನ್ನಯ ಚಲುವಿಕೆಗೆ ತಕ್ಕ ಚಂದದ ವರನೇ ಕೇಳು ಮಂದರೋದ್ಧರ ಶ್ರೀ ಮುಕುಂದನ ಭಜಿಸಲು ಚಂದದ ವರಗಳ ಕುಂದದೆ ಕರುಣಿಪ ಕಂದುಗೊರಳನು ಶಿವನು ಕಮಲ ನಾಭ ವಿಠ್ಠಲನ ಭಜಿಪ ಸಂತತ ಮಂದಗಮನೆಯ ಇಂದುಧರನಿಗೆ ಚಂದದಲಿ ವನಮಾಲೆ ಹಾಕುತ 5
--------------
ನಿಡಗುರುಕಿ ಜೀವೂಬಾಯಿ
ಪಾರ್ವತೀತನಯ ಪಾಲಿಸು ಎನ್ನಾ ಪ. ಪಾರುಗಾಣಿಸುತೆನ್ನ ಮನದಲ್ಲಿನಿಂದು ಅ.ಪ. ರಜತಾದ್ರಿವಾಸನ ರಮಣಿ ಪುತ್ರನೆ ನಿನ್ನ ತ್ರಿಜಗÀ ಪೂಜಿಸುವುದೆಂದರಿತು ನಿನ್ನ ಭುಜಗ ಭೂಷಣ ಸುತನೆÀ ಕದನವ್ಯಾತಕೊ ದೇವಾ ಕಡೆಹಾಯಿಸೊ ಗಣಪಾ 1 ಗಂಗಜನಕÀನ ನಾಮ ಹಿಂಗದಲೆ ನುಡಿಸೆನಗೆ ಭೂ ಜಂಗುಳಿಗೆ ವಿದ್ಯಾಧಿದೇವದೇವಾ ಹಿಂಗಿಸುತಲಜ್ಞಾನ ರಂಗನಾ ಮರಿಮಗನೆ ಕಂಗಳಿಂದಲಿ ನೋಡಿ ಸಲಹೆನ್ನನು ದೇವಾ 2 ಶ್ರೀ ಶ್ರೀನಿವಾಸನ್ನ ತೋರುತ ಮನದಲಿ ಶ್ರೀಕರನೆ ಕರುಣಿಪುದು ಸ್ತುತಿಪ ಮತಿಯಾ ಏಕಭಕುತಿಯಲಿ ಸ್ತುತಿಸುವಾ ನರರಿಗೆ ಶ್ರೀಕಮಲನಾಭನ್ನ ತೋರುವಾ ಗಣಪ 3
--------------
ಸರಸ್ವತಿ ಬಾಯಿ
ಪಾಲಿಪರೊಬ್ಬರಿಲ್ಲ ಪ ದಂಡಾದಿ ರಾಜ್ಯವು ಕೆಟ್ಟು ಪೋಕ ಪುಂಡರು ಹೆಚ್ಚಿ ಮಾರ್ಗವತೋರಿ ಕೊಟ್ಟು ಪೆಂಡಾರರಿಗೆ ಸುಲಿಗೆ ಕೊಟ್ಟು ಭೂ ಮಂಡಲದೊಳಗಣ ಜನರೆಲ್ಲ ಕೆಟ್ಟು 1 ಎತ್ತು ಮುಟ್ಟುಗಳೆಲ್ಲ ಹೋಗಿ ಬೀಳು ಬಿದ್ದು ಗದ್ದೆಯ ಪೈರು ನಿಸ್ಥಳವಾಗಿ ತುತ್ತುರಿಗಳು ಸುಟ್ಟು ಹೋಗಿ ದಂಡು ನಿತ್ತು ಪ್ರಜೆಗೆ ಮನೆ ಮುಖವಿಲ್ಲದಾಗಿ 2 ಕರಿದೋ ಬಿಳಿದೋ ಕಾಣೆ ಕ್ಷೀರ ಕೊಡುವ ತರುಗಳಿಲ್ಲವು ಮರ ಒಣಗಿ ಅರಮನೆ ಯತ್ತಣಿಂ ಘೋರ ಕರೆ ಕರೆಯೊಳು ಬಂದಿತಯ್ಯ ಗ್ರಹಚಾರ 3 ಗಂಜಿ ಗಾಸ್ಪದವಿಲ್ಲವಾಯ್ತು ಮೂರು ಸಂಜೆಯ ದೀಪಕೆ ಕೊಳ್ಳಿ ಬೆಳಕಾಯ್ತು ಅಂಜನ ಪಾತ್ರೆ ಹೆಚ್ಚಾಯ್ತು ಬದುಕಲು ನಾಲ್ಕು ವರ್ಣ ಒಂದಾಯ್ತು 4 ಕಾಲಗತಿಯು ಬಲು ಬಿರುಸು ಮುಂದೆ ಬಾಳುವ ಜನರಿಗೆ ನೃಪರಿಂದ ಹೊಲಸು ಶೂಲಿ ಸಾಯುಜ್ಯವ ಬಯಸು ಲಕ್ಷ್ಮೀ ಲೋಲನ ನಾಮವ ಮನದೊಳುಚ್ಚರಿಸು 5
--------------
ಕವಿ ಪರಮದೇವದಾಸರು
ಪಾಲಿಪುದು ನಯನಗಳ ನಾಲಿಗೆಯ ನೀನು ಶ್ರೀಲೋಲ ಸಾರ್ವಭೌಮನೇ ಪ ನೀಲಮೇಘಶ್ಯಾಮ ಬೇಲಾಪುರಾಧೀಶ ಶೀಲ ಅಚ್ಚುತದಾಸಗೆ ಸ್ವಾಮಿ ಅ.ಪ ಪರಮಪದನಾಥ ಇಂದಿರೆಯರಸ ಸಕಲ ನಿ ರ್ಜರರು ಪೂಜಿಸುವಂಘ್ರಿಯಾ [ವರ]ನೇಮದಿಂ ಪಾಡೀ ಆಡೀ ದುರಿತಭವ ಶರಧಿಯಾ ಪಿರಿದು ದಾಟುವೆನೆಂದು ಭರದೊಳೈದಿದವಗಾ ಶ್ಚರ್ಯದಾಪತ್ತಡಸಿತ್ತೇ ಸ್ವಾಮಿ 1 ಹಿಂದೆ ಮಾಡಿದ ಕರ್ಮವೆಂಬದಕೆ ಜನನವಾದು ದಿಂದು ಊನನಲ್ಲಾ ಪೊಂದಲೀ ನಗರವನು ಪೋಗಲಾಕ್ಷಣದಿ ವಾಗ್ಬಂಧವತ್ವವೆರೆಡು ಮುಂದಕಡಿಯಿಡಲು ಇಂದಿನದೊಲಚ್ಚುತನ ದಾಸ ನಂದವಳಿದುಬ್ಬಸದೊಳು ಇಂದು ನೀ ಸಲಹಿದಡೆ ಪೂರ್ವಾರ್ಜಿತ ಕರ್ಮ ವೃಂದಗಳು ನಿಂದಿರುವವೆ ಸ್ವಾಮಿ 2 ಮನುಜ ಮಾಡಿದ ಪಾತಕಗಳನು ಎಣಿಸುವಡೆ ಘಣಿರಾಜಗಳವಡುವುದೇ ಗುಣ ತರಂಗಿಣಿಯೆ ದುರ್ಗುಣಗಳೆಣಿಸಲು ಶ ರಣಜನರೊಳೇಂಪುರುಳಿರುವುದೇ ಚಿನುಮಯನೆ ಭಕ್ತವತ್ಸಲನೆ ಅಚ್ಚುತz ಸನವಗುಣಗಳನೀ ಮರೆದು ಗುಣನಿಧಿಯೆ ಚೈತನ್ಯವಿತ್ತುಳುಹೆ ಬೇಗ ನಾ ಧನ್ಯನೆಲೊ ವೈಕುಂಠರಮಣಾ 3
--------------
ಬೇಲೂರು ವೈಕುಂಠದಾಸರು
ಪಾಲಿಸಯ್ಯ ವರವ ಹರಿಹರಿ ಪಾಲಿಸಯ್ಯ ವರವ ಪ ಪಾಲಿಸಯ್ಯ ವರ ಬಾಲಗೆ ಬೇಗನೆ ಕಾಲಕಾಲದಿ ನಿನ್ನ ಲೀಲಾನಂದವ ಅ.ಪ ಸತತದಿ ತವಭಜನೆ ಅಗಲಿಸ ದತಿ ಗುಪ್ತ ತತ್ವವನು ಯತಿತತಿ ಪೊಗಳುವ ಸ್ಮøತಿಶಾಸ್ತ್ರರ್ಥವನಿತ್ತು ಸುತಗೆ ಮಹಗತಿಯ ಪಥಕೆ ಹಚ್ಚು 1 ಮತಿ ಮಾನ್ಯರು ಸದಾ ಪೊಗಳುವ- ಪಾದ ಸತತ ನುತಿಪ ಅತಿಹಿತ ಮತಿಯಿತ್ತು ಪತಿತ ಪಾವನ ಮಾಡು ರತಿಪತಿಪಿತನೆ 2 ಜಡ ಬಡತನ ಕಡಿದು ಗಡನೆ ನ್ನೊಡಲಾಶೆಯ ತೊಡೆದು ನುಡಿನುಡಿಗಡಿಗಡಿಗೆಡಬಡದಲೆ ನಿ ನ್ನಡಿಧ್ಯಾನ ಕೊಡು ಎನ್ನೊಡೆಯ ಶ್ರೀರಾಮ 3
--------------
ರಾಮದಾಸರು
ಪಾಲಿಸು ಅವಾಂತರೇಶಾ ಪಾವನ ಕೋಶಾ ಪಾಲಾಬ್ದಿ ಶಯನನ ದಾಸಾ ಕಾಲ ಜನಕ ವಿಶಾಲಮಹಿಮಾರೈಯಿ ಲೋಲಾ ಜೀವೋತ್ತಮ ಕಾಲಕಾಲಕೆ ಎನ್ನ ಪ ಪುಣ್ಯಗಾತುರ ಮಾರುತಾ ಪುಂಜಿತ ಜೀವಾ ಗಣ್ಯರಹಿತ ಗುಣಜಾತಾ ಮನ್ಯುದಾನವ ಕುಲಘಾತಾ ಮಹಾತತ್ವ ದಾತಾ ಸನ್ನ್ಯಾಯಮಣಿ ಶ್ರುತಿಗೀತಾ ಧನ್ಯನ ಮಾಡೊ ಅನ್ಯನೇನೊ ನಾನು ಕಾ ರುಣ್ಯದಿ ದುರಿತಾರಣ್ಯ ಮನ್ಮಥ ಲಾ ಗುಣ್ಯ ಮನದಾ ಕಾರ್ಪಣ್ಯವ ಓಡಿಸಿ 1 ದ್ವಿತೀಯ ನಿರ್ಜರವರೇಣ್ಯ ದೀನನುಗಣ್ಯ ದಿತಿಜಾವಳಿಗೆ ಕಾಠಿಣ್ಯ ಸತತ ಅಪ್ರತಿರಾಜ್ಯನ್ಯಾಸ ಚರಾಚರಮಾನ್ಯಾ ತುತಿಸುವೆ ಕೇಳು ದೈನ್ಯ ಗತಿ ನೀನೆ ಕ್ಷಿತಿಯೊಳಗಿತರರ ಕಾಣೆನೊ ಸತಿಪತಿ ಮಿಗಿಲಾದ ತುತುವೇಶ ತತಿಗಳ ಜಿತ ಸದ್ಗುರು ಭಾರಿತ ಪ್ರತಿಪಾದ್ಯ ಮಾರುತಿ ಮತಿಯಲಿ ನಿನ್ನ ಮತದಲಿ ಪೊಂದಿಸಿ 2 ವಿಕಸಿತ ಸದನಾ ಜ್ಞಾನ ವಿಶೇಷ ಧ್ಯಾನಾ ಅಖಿಳ ವಿಚಾರ ನಿದಾನಾ ಅಕಳಂಕವಾದ ಬಹುಮಾನಾ ಅಮೃತಪ್ರಾಣಾ ಸಕಲಕ್ಕು ನೀನೇ ಪವಮಾನಾ ಸುಖಸಾಗರ ಸುರನಿಕರವಿನುತ ಮಹಾ ಭಕುತ ಭವಾಬ್ಧಿತಾರಕ ವಿಷಭಂಜನ ಲಕುಮಿವಲ್ಲಭ ನಮ್ಮ ವಿಜಯವಿಠ್ಠಲನ್ನ ನಖ ಕೊನೆ ಪೊಗಳುವ ಉಕುತಿ ನೀಡಿಂದು 3
--------------
ವಿಜಯದಾಸ
ಪಾಲಿಸು ನಮ್ಮನು ಪರಬ್ರಹ್ಮ ಶ್ರೀ- ಲೋಲಾನಂತ ಗುಣಾಲಯನೇ ಪ. ನೀಲಾಭ್ರದಾಭ ಕಾಲನಿಯಾಮಕ ಮೂಲೇಶ ಪುರುಷ ಮೂರ್ಲೋಕಾಧಿಪ ಅ.ಪ. ಉತ್ತಮ ಗುಣಗಳು ಬತ್ತಿಪೋದುವೈ ದೈತ್ಯರ ಗುಣವು ಪ್ರವರ್ಧಿಪುದು ಚಿತ್ತಸಾಕ್ಷಿ ತವ ಭಕ್ತಿಕಥಾಮೃತ ನಿತ್ಯ ಸವಿಸುತ್ತ ಹಿಂಬಾಲಿಸೆ1 ಭಾಗವತ ಜನರ ಯೋಗಕ್ಷೇಮ ಸಂ ಯೋಗೋದ್ಯೋಗಿ ನೀನಾಗಿರಲು ಕೂಗುವಾಸುರರ ಕೂಡೆ ಕೂಡಿಸದೆ ಭೋಗಿಶಯನ ಭವರೋಗಭೇಷಜನೆ2 ಪಾವನಕರ ನಾಮಾವಳಿ ವರ್ಣಿಪ ಸೇವಕ ಜನರ ಸಂಭಾವಿಸುವ ಕೇವಳಾನಂದ ಠೀವಿಯ ಪಾಲಿಸು ಶ್ರೀವಾಸುದೇವ ದೇವಕೀತನಯ]3 ಶುದ್ಧತಮೋಗುಣಬದ್ಧ ದೈತ್ಯ ಪ್ರ- ಸಿದ್ಧರಾಗಿಹರು ಮದ್ಯಪರು ಬುದ್ಧಿಜ್ಞಾನ ಸಮೃದ್ಧಿ ಭಕ್ತಿಯಿಂ- ದುದ್ಧರಿಸೈ ಗುರು ಮಧ್ವವಲ್ಲಭನೆ4 ಕೇಶವಾಚ್ಯುತ ಪರೇಶ ಹೃದ್ಗುಹನಿ- ವಾಸ ವಾಸವಾದ್ಯಮರನುತ ಶ್ರೀಶ ಶ್ರೀವೆಂಕಟೇಶ ಭಕ್ತಜನ ರಾಶ್ರಯಸ್ಥಿತ ದಿನೇಶ ಶತಪ್ರಭ 5 ಮಂಗಲ ಜಗದೋತ್ತುಂಗರಂಗ ಮಾ ತಂಗವರದ ನೀಲಾಂಗ ನಮೋ ಅಂಗಜಪಿತ ಲಕ್ಷ್ಮೀನಾರಾಯಣ ವಿಹಂಗ ತುರಂಗನೆ 6
--------------
ತುಪಾಕಿ ವೆಂಕಟರಮಣಾಚಾರ್ಯ
ಪಾಲಿಸು ಪಾಲಿಸು ಪಾಲಿಸು ಸುಮನಾ ಪಾರ್ವತಿ ತಾಯೇ ಪ. ಪಾಲಿಸು ಶ್ರೀ ರಜತಾದ್ರಿನಿವಾಸಿ ಶೀಲಮೂರುತಿ ಶಿವಶಂಕರಿ ದೇಹಿಮೆ ಅ.ಪ. ಮನಕಭಿಮಾನಿ ಮಾನುನಿರನ್ನೆ ಸರ್ವ ತನುಮನನಿನಗರ್ಪಿಸಿಹೆನೆ ತಾಯೆ ಕಾಯೆ ಅನುದಿನ ನಿನ್ನಯ ಚರಣವ ಪೂಜಿಪ ಮನವಿತ್ತು ಕರುಣದಿ ನಿನ್ನ ತನುಜರಿಗೇ ನೀಡೆ 1 ಪಂಕಜಗಂಧಿನಿ ಪಂಕಜಾಕ್ಷಿಯೆ ಶಿವ ನಂಕದಿ ಅಲಂಕೃತ ಮಾತೆ ಸುಗೀತೆ ತಾಯೆ ಅಂಕುರವಾಗುವ ತೆರ ನಿನನಾಮವ ಕಿಂಕರರಿಗೆ ನೀಡಿ ದಯಮಾಡೆ ತಾಯೆ 2 ಶ್ರೀಶ ಶ್ರೀ ಶ್ರೀನಿವಾಸ ಸಹೋದರಿ ಈಶನೈಯ್ಯನೈಯ್ಯನೊಲಿಸುವ ಮರೆಯ ಶಂಕರಿ ಶುಭಕರಿ 3
--------------
ಸರಸ್ವತಿ ಬಾಯಿ