ಒಟ್ಟು 1726 ಕಡೆಗಳಲ್ಲಿ , 116 ದಾಸರು , 1424 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ದಮ್ಮಯ್ಯ ಸೆರಗ ಬಿಡೊ | ಶ್ರೀಕೃಷ್ಣಯ್ಯ | ಕರಮುಗಿವೆ |ಸಮ್ಮತವಲ್ಲಿದು ನಿನಗೆ | ನಿನ್ನಮ್ಮನೊಳ್ ಪೇಳುವೆ ಹೀಗೆ ||ಧರ್ಮವೆ ಪತಿವ್ರತ ಕರ್ಮಕೆ ಎನ್ನಯ |ಅಮ್ಮನು ಕೇಳಿದರ್ ಸುಮ್ಮನೆ ಇರುವಳೆ 1ಸುಮನಸರು | ತೋಷಿಪರೆ |ನಿನ್ನ ರಮಣಿಯು ತಾನ್ ಕೋಪಿಸಳೇ ||ಸಮವೆಂದೂ ಪೇಳುವನೇ | ಎನ್ನ ರಮಣನಿದ ತಾಳುವನೇ |ಭ್ರಮಿತ ಕೋಪದಿ ಎನ್ನ | ಯಮನೆಡೆಗಟ್ಟನೇ |ಸಮಯವಲ್ಲಿದು ಕೇಳ್ | ಕಮಲದಳಾಕ್ಷನೆ 2ಇಂದೆನ್ನ ಕುಲವೆರಡೂ |ತಾವ್ ಹೊಂದದೆ ದುರ್ಗತಿ ಜರದೂ |ನಿಂದೆಗೆ ನಾ ಗುರಿಯಾಗಿ |ಯಮಬಂಧಕೇ ಸಿಲುಕೆನೆ ಪೋಗಿ |ಇಂದೆನ್ನಯ ವ್ರತ ಕುಂದದ ತೆರದಲೀಚಂದದಿ ಪೊgÉ UÉೂೀವಿಂದದಾಸನ ಪ್ರಿಯಾ3
--------------
ಗೋವಿಂದದಾಸ
ದಯಮಾಡೋ ದಯಮಾಡೋ ದಯಮಾಡೋ ರಂಗ ಪದಯಮಾಡೋ ನಾ ನಿನ್ನ ದಾಸನೆಂತೆಂದು ಅ.ಪಹಲವು ಕಾಲವು ನಿನ್ನ ಹಂಬಲವೆನಗೆಒಲಿದು ಪಾಲಿಸಬೇಕುವಾರಿಜನಾಭ1ಇಹಪರದಲಿ ನೀನೆ ಇಂದಿರೆರಮಣಭಯವೇಕೋ ನೀನಿರಲು ಭಕ್ತರಭಿಮಾನಿ 2ಕರಿರಾಜವರದನೆ ಕಂದರ್ಪನಯ್ಯಪುರಂದರವಿಠಲ ಸದ್ಗುಣ ಸಾರ್ವಭೌಮ 3
--------------
ಪುರಂದರದಾಸರು
ದಾರಿಯ ತೋರೊ ಮುಕುಂದ - ಹರಿ-|ನಾರಾಯಣ ಗೋವಿಂದ ಪಬಂದೆನು ಬಹುಜ್ಮನದಲಿ -ನಾ-|ಬಂಧನದೊಳು ಸಿಲುಕುತಲಿ ||ಮುಂದಿನದಾವುದು ಪಯಣ -ತೋರೊ-|ಇಂದುನೀ ಇಂದಿರೆರಮಣ1ಗತಿಯಿಲ್ಲದವರಿಗೆ ನೀನೆ -ಸದ್-|ಗತಿಯೆಂದು ಸ್ತುತಿಮಾಡಿದೆನೊ ||ಗತಿಯೆಂದು ನಂಬಿದೆ ನಿನ್ನ |ಸತುವ ತೋರು ನರಹರಿಯೆ ಗೋವಿಂದ 2ಮಡವಿನೊಳಗೆ ಧಮುಕಿದೆನೆ -ಇನ್ನು-ಕಡಹಾಯಿಸುವರ ನಾ ಕಾಣೆ ||ಹಡೆದ ತಾಯಿ - ತಂದೆ ನೀನೆ -ಕೈ-|ಹಿಡಿದು ಸಲಹೊ ಎನ್ನೊಡೆಯ ಮುರಾರಿ 3ಮಿಕ್ಕಿ ಬರುವ ಹೊಳೆಯೊಳಗೆ -ನಾನು-|ಸಿಕ್ಕಿದೆ ನಡುನೀರೊಳಗೆ ||ಕಕ್ಕುಲಾತಿನಿನಗಿರದೆ |ಭಕ್ತವತ್ಸಲ ನೀ ದಯಮಾಡೋ 4ಕುಕ್ಷಿಯೊಳಗೆ ಇಂಬಿಟ್ಟು -ಎನ್ನ-|ರಕ್ಷಿಸಿ ಸಲಹಬೇಕು ||ಅಕ್ಷಯಅನಂತ ಮಹಿಮನೆ - ನೀನು |ಪಕ್ಷಿವಾಹನನೆಪುರಂದರವಿಠಲ5
--------------
ಪುರಂದರದಾಸರು
ದಾಸರ ನಿಂದಿಸಬೇಡಲೊ ಪ್ರಾಣಿ -ಹರಿ<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ದಾಸರ ನಿಂದಿಸಬೇಡ ಪ.ಮೋಸವಾಯಿತೊ ಮನದೊಳು ಗಾಢ |ಲೇಸಾಗಿ ಇದ ತಿಳಕೊ ಮೂಢ ಅಪರಾಮನ ನಿಂದಿಸಿ ರಾವಣ ಕೆಟ್ಟ |ತಮ್ಮಗಾಯಿತು ಸ್ಥಿರಪಟ್ಟ ||ತಾಮಸದಿಂದಲಿ ಕೌರವ ಕೆಟ್ಟ |ಧರ್ಮಗೆ ರಾಜ್ಯವ ಬಿಟ್ಟ 1ಮನದೊಳಗಿನ ವಿಷಯದ ವಿಷ ಬಿಟ್ಟು |ಅನುದಿನ ಹರಿಯ ನೆನೆಯಿರಣ್ಣ ||ಸನಕಾದಿವಂದ್ಯನ ಪೂಜಿಸಿದರೆ ನೀವ್ |ಘನಪದವಿಯ ಕಾಣುವಿರಣ್ಣ2ಕನಕದಾಸನು ಕಬ್ಬಲಿಗನು ಎಂದು |ಅಣಕಿಸಿ ನುಡಿಬೇಡಿರಣ್ಣ |ಜನರಂತೆ ನರನಲ್ಲ ತುಂಬುರನೀತನು |ಜನಕಜೆರಮಣನ ಪಾದಸೇವಕನು 3ಉಡಿಯ ಒಳಗೆ ಕಿಡಿ ಬಿದ್ದರೆ ಅದು ತಾ |ಸುಡದನಕಾ ಬಿಡದಣ್ಣ ||ಬಡವನಾಗಿ ಕೆಡುಬುದ್ದಿಯ ಬಿಟ್ಟು |ನಡೆಯ ಕಂಡು ಪಡೆದುಕೊಳ್ಳಣ್ಣ 4ದೇವಕಿ ಸೆರೆಯನು ಬಿಡಿಸಿದ ದೇವನ |ಸೇವಕರು ನರರೆ ನಿಮಗವರು ||ಭಾವಜನಯ್ಯನ ಪದವ ನೆನೆದರೆ |ಪಾವನ ಮಾಡುವ ಪುರಂದರವಿಠಲ 5
--------------
ಪುರಂದರದಾಸರು
ದೇವ ಬಂದ ನಮ್ಮ ಸ್ವಾಮಿ ಬಂದನೋದೇವರ ದೇವಶಿಖಾಮಣಿಬಂದನೋಪಉರಗಶಯನ ಬಂದ ಗರುಡಗಮನಬಂದನರಗೊಲಿದವ ಬಂದ ನಾರಾಯಣ ಬಂದ 1ಮಂದರೋದ್ಧಾರ ಬಂದಮಾಮನೋಹರಬಂದವೃಂದಾವನಪತಿಗೋವಿಂದ ಬಂದ2ನಕ್ರಹರನು ಬಂದ ಚಕ್ರಧರನು ಬಂದಅಕ್ರೂರಗೊಲಿದ ತ್ರಿವಿಕ್ರಮ ಬಂದ 3ಪಕ್ಷಿವಾಹನ ಬಂದ ಲಕ್ಷ್ಮಣಾಗ್ರಜ ಬಂದಅಕ್ಷಯಫಲದ ಶ್ರೀ ಲಕ್ಷ್ಮೀ ರಮಣ ಬಂದ4ನಿಗಮಗೋಚರ ಬಂದನಿತ್ಯತೃಪ್ತನು ಬಂದನಗೆ ಮುಖಪುರಂದರವಿಠಲ ಬಂದನೋ5
--------------
ಪುರಂದರದಾಸರು
ದೇವ ಬಾರೊ ಶ್ರೀನಿವಾಸದೆÉೀವನೆ ಬಾರೊ ನನ್ನದಾವದಾವಪರಿಯ ತಪ್ಪ ಕಾವನೆ ಬಾರೊಪ.ಜೀವನ ಪಾವನವ ಮಾಡುವನೆ ಬಾರೊ ನನ್ನಭಾವದ ಬಯಕೆ ಪೂರೈಸುವನೆ ಬಾರೊ 1ಧ್ಯಾನಿಸಲೊಮ್ಮ್ಯಾರೆ ದಯದಿ ನೀ ನಿಲ್ಲಬಾರೊ ಅಜ್ಞಾನ ನಾಶ ಮಾಡುವ ಕೃಪಾನಿಧಿ ಬಾರೊ 2ಹಡೆದ ತಾಯಿ ತಂದೆಗುರುಒಡೆಯನೆ ಬಾರೊ ಎನ್ನನಡೆ ನುಡಿ ವಿಷಮೆನ್ನದೆ ಕೈ ಪಿಡಿಯಲು ಬಾರೊ 3ತೆರೆ ತೆರೆ ಬಪ್ಪಾಸೆಯ ಚರಿಸಲು ಬಾರೊ ಆತುರದ ಕಾಮಾದ್ಯರ ನೀನೊರೆಸಲು ಬಾರೊ 4ಕ್ಷುಲ್ಲನುದಾಸಿಸುದುಚಿತಲ್ಲವೊ ಬಾರೊ ಪ್ರಾಣದೊಲ್ಲಭ ಬಿರುದು ನಿನ್ನದಲ್ಲೇನೋ ಬಾರೊ 5ಪಾಪಗಳು ಘನ್ನವಾದರೇನಯ್ಯ ಬಾರೊಕೃಪಾಪಾಂಗದಲ್ಲವು ಉಳಿಯಲಾಪವೆ ಬಾರೊ 6ಶ್ರೀರಮಣ ಎಂದಿಗಾಪ್ತರಾರಿಲ್ಲೊ ಬಾರೊ ಸುಖತೀರಥೇಶ ಪ್ರಸನ್ವೆಂಕಟರಾಯ ಬಾರೊ 7
--------------
ಪ್ರಸನ್ನವೆಂಕಟದಾಸರು
ದೇವರ ಗಿರಿಯ ಅಪ್ಪಯ್ಯನವರುದೇವದುರ್ಗಸ್ಥಳದಲ್ಲಿಹರುಪ<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ತಿಮ್ಮಯ್ಯನ .................................................................................................................................................ಸುಮ್ಮನೇ ನರವಪು ಧರಿಸಿಹರು1ಶೇಷಶಯನ ಕೃಪೆ ಪಡೆದಿಹರು |ದಾಸ ಮುಕುಟಮಣಿಎನಿಸಿಹರು |ಕ್ಲೇಶಪಂಚಕಗಳನಳಿದಿಹರು |ತೋಷಿಸಿ ಭಕ್ತರ ಸಲಹುವರು2ವೆಂಕಟ ರಮಣಗೆ ಹೋಗುವರು |ಸಂಕಟ ಜನ ಪರಿಹರಿಸುವರು ||ಸಂಖ್ಯೆಯಿಲ್ಲದ ಅಪೂಪ ನೀಡುವರು |ಶಂಕರ ಸಖಗೆ ಬೇಕಾಗಿಹರು3
--------------
ಜಕ್ಕಪ್ಪಯ್ಯನವರು
ದೇವರ ನಾಮ(ಶ್ರೀಶ ಸ್ತೋತ್ರ)38ಶ್ರೀಕರಾರ್ಚಿತ ಶ್ರೀಶ ಶ್ರೀ ಶ್ರೀನಿವಾಸಭಕುತವತ್ಸಲ ನಮೋ ಕಾರುಣ್ಯ ಶರಧೇ ಪಲೌಕೀಕ ವಿಷಯದಲಿ ಕಾಯಮನದಿಂಚರಿಸಿ |ಶ್ರೀಕರನೆ ನಿನ್ನನಾ ಸಂಸ್ಮರಿಸಲಿಲ್ಲಾಲೋಕ ಬಂಧುವೇ ಶರಣು ಶರಣು ಕರುಣಾಂಬುಧಿಯೇನೀಕಾಯಬೇಕೆನ್ನ ತಪ್ಪು ಎಣಿಸದಲೆ 1ನಾರಾಯಣವಾಸುದೇವಸಂಕರುಷಣಪ್ರದ್ಯುಮ್ನ ಅನಿರುದ್ಧ ಆತ್ಮಾಂತರಾತ್ಮಶ್ರೀ ಕೃಷ್ಣ ಕಪಿಲನೆ ಸರ್ವಕರ್ತನು ನೀನೆಸರ್ವ ಪ್ರೇರಕ ಸರ್ವ ಸ್ವಾಮಿ ಮಮ ಸ್ವಾಮಿ 2ವಿಶ್ವವಿಷ್ಣು ವಷಟ್ಕಾರ ಶ್ರೀಭೂರಮಣವಿಶ್ವತೋಮುಖ ಸರ್ವ ವಶಿ ವಿಶ್ವನಾಥವಿಶ್ವಪಾಲಕ ನಮೋ ಶ್ರೀರಾಮ ವಿಧಿತಾತವಿಶ್ವರೂಪನೇ ಶ್ರೀ ಪ್ರಸನ್ನ ಶ್ರೀನಿವಾಸ3
--------------
ಪ್ರಸನ್ನ ಶ್ರೀನಿವಾಸದಾಸರು
ದೇವರನ್ನು ಹಸೆಗೆ ಕರೆದ ಪದಗಳುವೇದ ಉದ್ಧರಿಸೀದಾ ಮತ್ಸ್ಯಾವತಾರನೇ |ಆದಿತ್ಯಾರಿಗೊಲಿದಮೃತ ನೀಡಿದನೇ ||ಮೇದಿನಿಯನು ಪೊತ್ತ ವರಹವತಾರನೆ |ಆ ದೈತ್ಯನಳಿದು ಪ್ರಹ್ಲಾದಗೊಲಿದನೇ ||ಭೂ ದೇವಾ ರೂಪೀ ಹಸಿಗೇಳೂ 1ಭೃಗು ಕುಲೋದ್ಭವನೇ ಭೀಷ್ಮನ ಬೆಳಸಿದನೇ |ನಗಜ ರಮಣನ ಕಾರ್ಮೂಕ ಮುರಿದವನೇ ||ಹಗೆಯನಳಿದು ಪಾಂಚಜನ್ಯ ಘಳಿಸಿದನೆ |ಇಗಡ ದೈತ್ಯರ ಬುದ್ಧಿ ಭೇದ ಮಾಡಿದನೇ ||ಅಗಣಿತಮಹಿಮಾ ಹಸಿಗೇಳೂ 2ಕುದರೀಯೇರಿ ಕುಜನರಾ ಕುಲ ತರಿದವನೇ |ಬುಧರಗೋಸುಗ ಹತ್ತಾವತಾರವಾದವನೇ ||ಸುದರೂಶನ ಶಂಖ ಗದ ಜಲಜ ಧರನೇ |ವಿಧಿಪಿತಶ್ರೀ ರಮಣ ಪ್ರಾಣೇಶ ವಿಠ್ಠಲನೆ ||ಸುಧಿಗಡಲಾಲಯನೆ ಹಸಿಗೇಳೂ 3
--------------
ಪ್ರಾಣೇಶದಾಸರು
ದೇವಿ ಅಂಬುಜವಲ್ಲಿ ರಮಣನೆ ಭೂವರಾಹ ದಯಾನಿಧೆಪವಮಾನನ ದಿವ್ಯ ಕರದಲಿ ಸೇವೆ ಸಂತತಗೊಳ್ಳುವಿಅವನಿಯೊಳು ಶ್ರೀಮುಷ್ಣಕ್ಷೇತ್ರದಿ ನೀ ವಿಹಾರವ ಮಾಡುವಿಅತ್ಯಗಾಧ ಸುಶೀಲಜಾಹ್ನವಿಸುತ್ತು ಷೋಡಶತೀರ್ಥದಿಮತ್ತು ವರ್ಣಿಪೆ ತೀರ್ಥ ತಟದಲಿ ಉತ್ತಮಾಗ್ನೇಯಭಾಗದಿಕರಗಳೆರಡು ಕಟಿಯಲಿಟ್ಟು ಕೋರೆಹಲ್ಲನೆ ತೋರುತಘನ್ನಶ್ವೇತವರಾಹಮೂರುತಿ ಎನ್ನ ಪೂರ್ವದ ಪುಣ್ಯದಿಸುಂದರಾನನ ಕಂಜಮಧುಪನಇಂದುನೋಡಿದ ಕಾರಣಮಲ್ಲಮರ್ದನವೈಕುಂಠದಿಂದ ಮೆಲ್ಲಮೆಲ್ಲನೆ ಬಂದೆಯಸೂಕರಾಸ್ಯನೆ ನಿನ್ನ ಪಾದಕನೇಕ ವಂದನೆ ಮಾಡುವೆ
--------------
ಗೋಪಾಲದಾಸರು
ದ್ರೌಪದಿ ಕೃಷ್ಣಾ ಪಾಂಚಾಲಿ | ದೇವಿ |ಗೋಪತಿಧ್ವಜವಂದ್ಯೆಕಾಳಿ | ಆಹಾ |ಪಾಪಗಳೆಣಿಸದೆಲೇ ಪುನೀತನ | ಮಾಡೆ |ಶ್ರೀ ಪವನನ ಕರುಣಾಪಾತ್ರೆ ಸುಚರಿತ್ರೆ ಪವಾಣಿ ಭಕ್ತಿಗೆ ಅಭಿಮಾನಿ | ತಾಯಿನೀನೆ ಗತಿಯೆಲೆ ಸುಶ್ರೋಣಿ | ಶ್ರೀಶಧ್ಯಾನವ ಮಾಡಲು ಮನ ಪೋಣಿಸುವ |ದೇನನೊಲ್ಲೆನು ಪೂರ್ಣಜ್ಞಾನಿ| ಆಹಾ ||ದೀನ ರಕ್ಷಕೆ ಮಿಕ್ಕ ಹೀನ ದೇವರಪಾದ|ಕ್ಕೆ ನಮಿಸುವ ಮತಿಯನೆಂದು ಕೊಡದಿರೆ 1ಶಾರದೆ ಹರಿಯ ಕುಮಾರಿ | ನಿನ್ನ |ಸಾರಿದೆ ಕುಜನ ಕುಠಾರಿ | ದಯಾ |ವಾರಿಧೆ ಸುಜನೋಪಕಾರಿ | ತೋರೆ |ಸಾರೆಗರಿದು ಮುಕ್ತಿ ದಾರಿ | ಆಹಾ ||ಶ್ರೀ ರಮಣ್ಯುಳಿದೆಲ್ಲ ನಾರೀ ಶಿರೋಮಣಿ |ಆರಾಧಿಸುವೆ ಯೆನ್ನ ದೂರ ನೋಡಲು ಬೇಡ 2ಹಲವರಿಗೆಲ್ಲ ಬಾಯ್ದೆರೆದು | ಬೇಡಿ |ಕೊಳುವದೇನದೆ ದಿನ ಬರಿದು | ಸಾಧು |ನೆಲೆಯದೋರರು ಹತ್ಯಾಗರೆದು | ಬುದ್ಧಿ |ಕಲಿಸೆ ಭಾರತಿಯೆನ್ನ ಮರೆದು | ಆಹಾ |ಇಳೆಯೊಳು ಶ್ರಮಪಡಿಸಲು ಸಲ್ಲ ದಿತಿಜರ |ನಳಿದ ಪ್ರಾಣೇಶ ವಿಠಲಗಚ್ಛಿನ್ನ ಭಕ್ತಳೆ 3
--------------
ಪ್ರಾಣೇಶದಾಸರು
ದ್ವಂದ್ವವೆ ವಸಂತದ ಹಬ್ಬದ್ವಂದ್ವವೆ ಇಹಪರದಲ್ಲಿ ಹಬ್ಬ ಪ.ದ್ವಂದ್ವಾಮೃತ ಕ್ಷೇಮಅಭಯವಸಂತದ್ವಂದ್ವ ಜೀವೇಶರ ತಿಳಿದವ ಶಾಂತದ್ವಂದ್ವದ ನಡೆನುಡಿ ಬಲ್ಲವ ಸಂತದ್ವಂದ್ವವರಿಯದನ ಗತಿಯೆ ವಸಂತ 1ದ್ವಂದ್ವ ಶೀತೋಷ್ಣ ಸಮಾನವ ಕಂಡುದ್ವಂದ್ವ ನಿಂದಾಸ್ತುತಿ ಸರಿಯಿಟ್ಟುಕೊಂಡುದ್ವಂದ್ವವಮಾನವಹಿಡಿದರೆ ಭಂಡುದ್ವಂದ್ವ ಪಕ್ಷಿಗಳ ಬಗೆಯ ಕೇಳಿಕೊಂಡು 2ಫಾಲ್ಗುಣ ಪೌರ್ಣಿಮೆ ಬಂದಿತಿಳೆಗೆಬಾಲಕರೆಲ್ಲ ನೆರೆವುದೊಂದು ‌ಘಳಿಗೆಹೋಳಿಯನಾಡುವ ಸಂಭ್ರಮದೊಳಗೆಕಾಳಗಬೇಡಿರೊ ನಿಮ್ಮ ನಿಮ್ಮೊಳಗೆ3ಅಜೆÕೈಕ್ಯ ಪ್ರತಿಪದ ಹಿಂದಾದರಿಂದಸುಜ್ಞಾನ ದ್ವಿತಿಯಕ್ಕೆ ತೋರುವ ಚಂದ್ರಒಗ್ಗೂಡಿ ಗೆಳೆಯರೊಮ್ಮತದಿಂದಲಗ್ಗೆಕಾರರು ಮುಂದೆ ನಡೆವುದೆ ಚಂದ 4ಭಕ್ತೆಂಬೊ ಪುರದಲ್ಲಿ ಒಂಬತ್ತು ಬೀದಿ ವಿರಕ್ತಿರಂಹಸ ಬ್ರಹ್ಮದ್ಹಾದಿಯ ಐದಿವ್ಯಕ್ತವಾಗುವ ವಸ್ತು ಓದಿಕೆ ಓದಿರಿಕ್ತದ ನುಡಿಗಳು ತಮಸಿನ ಹಾದಿ 5ದಿನಪತಿ ಅಡಗಿರೆ ಮಲಗದೆ ಎದ್ದುಮನೆಯವರನು ಎಚ್ಚರಿಸಬ್ಯಾಡಿ ಸದ್ದುನೆನೆವ ವಿಷಯಗೋಡೆ ಏರುತ್ತ ಬಿದ್ದುಮನೆ ಮನೋವಾರ್ತೆಯ ಕುರುಳನೆ ಕದ್ದು 6ಹಾರುವರ ಕೇರಿಯ ಹೊಗಬ್ಯಾಡಿಕೇಳಿಬೇರೂರವರ ಬಿಟ್ಟು ಬಿಡಿ ದೂರದಲ್ಲಿದೂರುವರೊಡನಾಟ ದುರ್ದೆಶೆಫಲವು ವಸ್ತುದೋರುವ ಮನೆಯೇವೆ ಸರಸ ವೆಗ್ಗಳವು 7ಧೂಳಿ ನೀರುರಿಗಾಳಿ ಬಯಲೊಳಗಾಡಿಮ್ಯಾಲೆ ಮೂರುರಿಯೊಳು ಮತಿಗುಂದಬ್ಯಾಡಿಹಾಳು ತುರುಕರ ಕೇರಿಯೊಳು ನಿಷ್ಫಲವುಜಾಲಗಾರರ ಕೇರಿ ಹೊಕ್ಕರೆ ಫಲವು 8ಹಿಂಚಾದ ಹಿರಿಯರ ಮಾತಲೆ ನಡೆದುವಂಚಕ ಮೂವರ ಸಂಗವ ಕಡಿದುಮಿಂಚುವ ಮಾನ್ಯರ ಪ್ರೀತಿಯ ಪಡೆದುಸಂಚಿತಪ್ರಾರಬ್ಧಾಗಾಮಿಯ ಒಡೆದು9ಮುಚ್ಚಿದ ಕದವೆರಡನು ಮುರಿಹೊಯ್ದುಇಚ್ಛೆ ಮೂರೆಂಬ ನಾಯಿಗಳಜಿಹ್ವೆಕೊಯ್ದುಬೆಚ್ಚದೆ ಮನೆ ಮೆಲ್ಲನೆ ಹೊಗಿರಣ್ಣಸಚ್ಚಿದ ಗೋರಸ ಸೂರ್ಯಾಡಿರಣ್ಣ 10ಏಕಾಧಿಪತಿಯಾಜÕ ಅಭಯವು ಬೇಕುನಾಕು ಝಾವಿನ ರಾತ್ರಿ ನಲವಿರಬೇಕುಪೋಕಕಳ್ಳಾರ್ವರ ಮೆಟ್ಟ್ಯಾಳಬೇಕುಭೂಕಾಂತಗೆ ಸೇವೆಯೊಪ್ಪಿಸಬೇಕು 11ರಮಣನೊಲ್ಲದ ಆರ್ವರ ಸಂಗವಿಡಿದುರಮಿಸುವ ಬುದ್ಧಿಜಾರಿಯ ಗಟ್ಟಿವಿಡಿದುಅಮಿತ ವೈರಾಗ್ಯಹಗ್ಗದಿ ಕೈಯಕಟ್ಟಿಶ್ರೀರಮಣನಂಘ್ರಿಗೆ ಒಪ್ಪಿಸಲು ಕಾರ್ಯ ಗಟ್ಟಿ 12ಎಲ್ಲೆಲ್ಲ್ಯಜ್ಞಾನಾಹಿ ವಿಷಯ ತೇಳುಗಳುಎಲ್ಲೆಲ್ಲಿ ನಿರ್ಜಲಸೃತಿಯ ಬಾವಿಗಳುಎಲ್ಲೆಲ್ಲಿನಿರಯಕಮ್ಮರಿ ಮಿಟ್ಟೆಗಳುಎಲ್ಲ ತಪ್ಪಿಸಿ ಜ್ಞಾನ ಬೆಳದಿಂಗಳೊಳು 13ವ್ಯಾಳ್ಯವರಿತು ತತ್ವಸಂಧಿಯ ಒಲಿದುಸೂಳಿ ಮದೆಂಟರ ಕೈಸೆರೆವಿಡಿದುಕಾಲಾಖ್ಯ ತಳವಾರನಾಳಿಗೆ ಕೊಟ್ಟುಮ್ಯಾಳದ ಗೆಳೆಯರು ಸಂತೋಷಪಟ್ಟು 14ಎಂಬತ್ತು ನಾಲ್ಕು ಲಕ್ಷಾಗಾರ ಹೊಗುತಡೊಂಬಿಯಿಲ್ಲದೆ ಬಂದ ಬನ್ನವಬಡುತಕುಂಭಿಣಿಸುರ ಕುಲ ಭೂಮಿಗೆ ಬಂದುದಂಭ ಮಾಡದಲೆ ಕುರುಳ ಒಯ್ಯಿರೆಂದು 15ರಾಗ ಮತ್ಸರಗೂಡಿದರ ಕುರುಳನೊಟ್ಟಿಭೂಗಗನ ಹೊಗುವ ಕಾಮವಕಟ್ಟಿಯೋಗವಾಗಿರುವ ಹುಬ್ಬಿನ ಕ್ಷೇತ್ರದಲಿಮ್ಯಾಗ ವಿಜ್ಞಾನಗ್ನಿ ಹಾಕಬೇಕಲ್ಲಿ 16ಲೋಭ ಹೋಳಿಕೆಯ ಹೋಳಿಗೆ ತುಪ್ಪ ಸವಿದುಲಾಭಕ್ಕೆ ಕುಣಿಯಲು ವೇತ್ರರು ಹೊಯ್ದುಶೋಭನ ರಸ ಬೊಬ್ಬೆಯ ಸಾಧುಹಿಂಡುತ್ರಿಭುವನಪತಿಕಾಮನಯ್ಯನ ದಂಡು17ಸ್ವರ್ಧುನಿಜನಕನ ಗುಣಗಣಕೀರ್ತಿಊಧ್ರ್ವಸ್ವರದಿ ಹಾಡಿ ಹೊಗಳುವಅರ್ಥಿನಿರ್ಧೂಮಜ್ವಾಲೆಯ ಬೆಳಗಲಿ ಸುತ್ತಿದುರ್ದೇಹಿಗಳ ಕಿವಿಧಾರೆಯ ಕಿತ್ತಿ 18ಅವಿದ್ಯ ಕಾಮ್ಯಕರ್ಮದ ಹೋಳಿ ಸುಟ್ಟುಹ್ಯಾವಿನ ಮೈಯ ಬೂದಿಯ ಮಾಡಿಬಿಟ್ಟುಕೋವಿದರ ಚಾತುರ್ಯಕೆ ಒಡಂಬಟ್ಟು ಚಿದ್ಭಾವ ಮಂದಿರದ ಬ್ರಹ್ಮಕೆ ಲಕ್ಷ್ಯವಿಟ್ಟು 19ಹಂಗಿಲೆ ಬೆಳೆದ ವೃಕ್ಷದ ಮೂಲ ಮುರಿದೂಧ್ರ್ವಾಂಗಕ್ಕೆ ಸುತ್ತುವ ಜಾಣರ ಬಿರಿದುರಂಗು ಮುತ್ತಿನ ಮೂಗುತಿ ಹೆಣ್ಣವಿಡಿದುಶೃಂಗಾರ ಚೇಷ್ಟೆಯ ಮಾಡಿರೊಜಡಿದು20ಬೆಳಗಿನ ಝಾವದಿ ಬೂದಿ ಚಲ್ಲ್ಯಾಡಿಗೆಳೆಯರು ನೆರೆವುದೊಂದೆ ತಾಣ ನೋಡಿಜಲಜಾಕ್ಷನುದ್ಯಮದಂಗಡಿಯಲ್ಲಿನಲಿವ ಸ್ವಾನಂದದೂಟವ ಬೇಡಿಕೊಳ್ಳಿ 21ತಿರುತಿರುಗಿ ಬಂದು ದಣಿದು ನೀವಿಂದುಹರಿಯ ಮೈ ಬೆವರಿನ ಹೊಳೆಯಲ್ಲಿ ಮಿಂದುಥರ ಥರದ್ಹದಿನಾರು ವರ್ಣಗಳಿಂದತರುಣ ತರಣಿಯಂತೆ ಹೊಳೆವುದು ಚಂದ 22ಆನಂದಮಯವಾಸುದೇವನ ಕಂಡುಆನಂದಪುರದಿ ಭಕ್ತಿಯ ನೆರೆಗೊಂಡುಆನಂದ ತೀರ್ಥಗುರು ಕೃಪೆಯಿಂದಸ್ವಾನಂದದೋಕುಳಿಯಾಡುವ ಚಂದ 23ಈ ವಿಧ ಅಧ್ಯಾತ್ಮ ಹೋಳಿಯ ಭೇದಭಾವುಕ ಜನರಿಗೆ ಪರಮಾಹ್ಲಾದದೇವ ಋಷಿಕುಲದೈವ ಮುಕುಂದಕಾವನು ಕರುಣಾಬ್ಧಿಕೇಳಿಗೋವಿಂದ24ವೇದನ ತಂದ ಹಯಾಸ್ಯನ ಹೋಳಿಭೂಧರಧರಿಸಿದಮರ ಕಾರ್ಯಕೇಳಿಮೇದಿನ ತರಲಡ್ಡಾದವನೊಮ್ಮೆ ಹೋಳಿ ಪ್ರಹ್ಲಾದನಿಷ್ಠೆಗೆಹರಿಉದಿಸಿದಕೇಳಿ25ನಾನೆಂಬೊ ದಾನವೇಂದ್ರನ ಮದ ಹೋಳಿಹೀನರಿಗಾಗಿ ಕೊಡಲಿ ಹೊತ್ತಕೇಳಿಜಾನಕಿ ತಂದ ದಶಾಸ್ಯನ ಹೋಳಿಮಾನಿನಿಯರಾಳ್ದ ವಿಡಂಬನಕೇಳಿ26ಸನ್ಮಾರ್ಗ ಬಿಟ್ಟ ಖಳರ ಮತಿ ಹೋಳಿಉನ್ಮತ್ತಕಲಿಯನರಸಿ ಕೊಂದಕೇಳಿಚಿನ್ಮಯಮೂರ್ತಿ ಭೂಭಾರವ ಹೋಳಿಜನ್ಮಿಸಿಬಹುದೆಲ್ಲ ಮೋಹನಕೇಳಿ27ಅನಂತದುರಿತರಾಶಿಗಳನ್ನು ಹೋಳಿಆನಂದ ಸುಖವೀವ ನೆನೆದರೆಕೇಳಿಅನಂತ ಅನವದ್ಯಗುಣ ಪರಿಪೂರ್ಣಅನಂತಾದ್ಭುತಕರ್ಮದೀನ ದಯಾರ್ಣ28ಈಪರಿವಿಜ್ಞಾನವಸಂತದಾಟಚೌಪದಿ ರತ್ನಮಾಲಿಕೆ ಮಾಡಿ ಪಾಠಶ್ರೀಪ್ರಸನ್ವೆಂಕಟ ಕಿಟಿರೂಪಿ ಕೃಷ್ಣತಾ ಪರಿಪಾಲಿಪ ಪುರುಷವರಿಷ್ಠ 29
--------------
ಪ್ರಸನ್ನವೆಂಕಟದಾಸರು
ನಂದನ ಕಂದ ಗೋವಿಂದ ಮುಕುಂದಇಂದಿರಜವಂದಿತ ಇಂದುಕುಲೇಂದ್ರ ಪ.ಗೋರಸಚೋರ ಗೋಪೀರಮಣ ಧೀರಗೋರಜಪೂರಿತಚಾರುಅಲಂಕಾರಗೋರಕ್ಷ ಕ್ರೂರಸಂಹಾರ ಉದಾರವೀರ ಸುಯಮುನಾತೀರ ವಿಹಾರ 1ಶೇಷಶೀರ್ಷನೃತ್ಯ ಹಾಸ ವಿಲಾಸವಾಸವಮದನಾಶ ವ್ರಜಪೋಷ ನಿರಾಶರಾಸಕ್ರೀಡಾಸುಖಾಧೀಶ ರಮೇಶದಾಸಾಕ್ರೂರಾಶ್ರಯ ಕಂಸವಿನಾಶ 2ಪುಣ್ಯಗುಣಾನ್ವಿತ ಸುವರ್ಣವೇಣುಗಾಯನ್ನಚಿನ್ಮಯಪನ್ನಗನಾಗನಿಲಯ ಪೂರ್ಣಮನ್ನಿಸು ನಿನ್ನ ಭೃತ್ಯನ್ನ ಪ್ರಸನ್ವೆಂಕಟ ಧನ್ಯ ಇವ ನನ್ನವನೆನ್ನೆ 3
--------------
ಪ್ರಸನ್ನವೆಂಕಟದಾಸರು
ನಂಬಿದೆ ನಿನ್ನ ಗಣೇಶ ಜಗ-ದಂಬಿಕಾತನಯ ವಿಶ್ವಂಭರದಾಸ ಪ.ಲಂಬೋದರ ವಿಘ್ನೇಶ ಶರ-ಣೆಂಬುದು ಸುರನಿಕುರುಂಬ ಮಹೇಶ ಅ.ಪ.ತರುಣಾದಿತ್ಯಪ್ರಕಾಶ ನಿನ್ನಶರಣಾಗತನಾದೆ ಮೋಹನ ವೇಷಸುರುಚಿರಮಣಿಗಣಭೂಷ ಜಗದ್ಗುರುವೆ ಗುಹಾಗ್ರಜ ಪೊರೆಯೋನಿರ್ದೋಷ1ಸಂತಜನರ ಮನೋವಾಸ ಮೋಹಭ್ರಾಂತಿಯಜ್ಞಾನಧ್ವಾಂತವಿನಾಶಶಾಂತಹೃದಯ ಸುಗುಣೋಲ್ಲಾಸ ಏಕದಂತ ದಯಾಸಾಗರ ದೀನಪೋಷ 2ಲಕ್ಷ್ಮೀನಾರಾಯಣನೆ ವ್ಯಾಸಗುರುಶಿಕ್ಷಿತ ಸುಜ್ಞಾನ ತೇಜೋವಿಲಾಸಅಕ್ಷರಬ್ರಹ್ಮೋಪದೇಶವಿತ್ತುರಕ್ಷಿಸು ದನುಜಾರಣ್ಯಹುತಾಶ3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ನಂಬಿದೆ ನಿನ್ನ ಪಾದವ - ವೆಂಕಟರಮಣನಂಬಿದೆ ನಿನ್ನ ಪಾದವ || ಪನಂಬಿದೆ ನಿನ್ನ ಪದಾಂಬುಜಯುಗಳವಇಂಬಿತ್ತು ಸಲಹಯ್ಯ ಶಂಖ-ಚಕ್ರಧರನೆ . ಪತಂದೆಯು ನೀನೆ ತಾಯಿಯು ನೀನೆಬಂಧು ಬಳಗವು ನೀನೆ ||ಬಂದ ದುರಿತವೆನ್ನ ಹೊಂದಿಕೊಳ್ಳದಂತೆತಂದೆ ಸಲಹೊ ಮುಕುಂದ ಮುರಾರಿ 1ಚಿಕ್ಕಂದು ಮೊದಲು ನಾನು ನಿನ್ನಯಪಾದಹೊಕ್ಕು ಜೀವಿಸುತಿಹೆನು ||ಗಕ್ಕನೆ ಜ್ಞಾನವನಕ್ಕರೆಯಲಿ ಕೊಡುಮಕ್ಕಳ ಮಾಣಿಕ್ಯ ರುಕ್ಮಿಣಿಯರಸಾ 2ಮರೆತು ನಾ ಮಾಯೆಯೊಳು ಮುಳುಗಿದೆ ಅದನರಿತು ಅರಿಯದಾದೆ ||ಮರೆಯದೆ ಎನ್ನನು ಪೊರೆಯೆ ಕೃಪಾನಿಧಿವರದ ಶ್ರೀವೆಂಕಟಪುರಂದರವಿಠಲ3
--------------
ಪುರಂದರದಾಸರು