ಒಟ್ಟು 2438 ಕಡೆಗಳಲ್ಲಿ , 114 ದಾಸರು , 1739 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶ್ರೀಹರಿಸ್ತುತಿ ಅಪ್ಪವೆಂಕೋಬನ ನೇತ್ರದಲಿ ನೋಡಿ ಪವಿತ್ರಳಾದೆನೋ ಇಂದಿಗೆ ತಪ್ಪುಗಳೆಲ್ಲ ನಿನಗರ್ಪಿಸುವೆ ನಾನೀಗ ಒಪ್ಪಿಕೋಬೇಕೋ ತಿಮ್ಮಪ್ಪ ಕರುಣಾನಿಧಿಯೆ ಹೆದÀರದೆ ಭೃಗುಋಷಿಯು ಒದೆಯೆ ಪಾದಗಳಿಂದ ಎದೆಯ ಮೇಲಿರುವ ಲಕ್ಷ್ಮಿ ಕದನಮಾಡುತವೆ ಕೊಲ್ಲಾಪುರಕೆ ನಡೆತರಲು ಒದಗಿ ವೈಕುಂಠ ಬಿಟ್ಟು ಯದುನಾಥ ಯಾರಿಲ್ಲದಂತೆ ಗುಡ್ಡವ ಸೇರೆ ಇದು ನಿನಗೆ ಸದನಾಯಿತೊ ದೇವ 1 ಹುತ್ತಿನೊಳಗಡಗಿ ನೀ ಗುಪ್ತದಿಂದಿರುತಿರಲು ಉತ್ತಮ ಗೋವು ಬಂದು ನಿತ್ಯದಲ್ಲಿ ಕ್ಷೀರವನು ಕರೆಯೆ ಗೋವಳನಿಂದೆ ನೆತ್ತಿಯನೊಡೆದುಕೊಂಡು ಸಿಟ್ಟಿನಿಂದಲಿ ಚೋಳರಾಯಗೆ ಶಾಪವನು ಕೊಟ್ಟು ಕಿರೀಟವನು ಇಟ್ಟು ಮೆರೆಯುವ ದೇವ 2 ಮಾಯಾರಮಣನೆ ನಿನ್ನ ಗಾಯದೌಷಧಕ್ಹೋಗಿ ಭೂರಮಣನ್ವರಾಹನಿಂದ ನೂರುಪಾದ ಭೂಮಿಕೊಟ್ಟರೆ ಸಾಕೆಂದು- ಪಾಯದಿಂದದನ್ವ್ಯಾಪಿಸಿ ತಾಯಿ ಬಕುಳಾದೇವಿಯಿಂದ ಪೂ ಜೆಯಗೊಂಬೊ ಶ್ರೀಯರಸು ನಿನಗೆ ಸರಿಯೆ ದೇವ 3 ನಾಟಕಧಾರಿ ಕಿರಾತರೂಪವ ಧರಿಸಿ ಬೇಟೆಗೆನುತಲಿ ಪೋಗಲು ತೋಟದಲಿ ಚೆಲ್ವೆ ಪದ್ಮಾವತಿಯ ಕಡೆಗಣ್ಣ ನೋಟದಲಿ ಮನಸೋಲಿಸಿ ಬೂಟಕತನದಿ ಜಗಳಾಟವನ್ನೆ ಮಾಡಿ ಪಾಟುಬಟ್ಟು ಕಲ್ಲಲೇಟುತಿಂದೆಯೋ ದೇವ 4 ಗದಗದನೆ ನಡುಗುತಲಿ ಕುದುರೆಯನು ಕಳಕೊಂಡು ಪದ್ಮಾವತಿ ವಾರ್ತೆಯನ್ನು ಬಳಿಯ ಲಿದ್ದ ಬಕುಳಮಾಲಿಕೆಗೆ ಬೋಧಿಸಿ ಕಳಿ ಸಿದಾಕಾಶನಲ್ಲಿ ಚದುರಮಾತಿನ ಚಪಲ ಕೊರವಂಜಿ ನೀನಾಗಿ ಕಣಿಯ ಹೇಳಲು ಎಲ್ಲಿ ಕಲಿತೆಯೊ ಮಹದೇವ5 ಬಂಧುಬಳಗವ ಕೂಡಿ ಭಾರಿ ಸಾಲವ ಮಾಡಿ ಕರ ವೀರದಿಂದೆ ಅಂಡಲೆದು ಕರೆಸಿ ಕಾಣುತಲಿ ಲಕ್ಷ್ಮಿಯನಪ್ಪಿ ಕೊಂಡು ಪರಮ್ಹರುಷದಿಂದ ಮಂದಗಮನೆಯೆ ನಿನ್ನ ಮಾತುಲಾಲಿಸಿ ಮಾಡಿ ಕೊಂಡೆ ಪದ್ಮಾವತಿಯ ಅಂದೆಯೊ ಎಲೆ ದೇವ 6 ಆಕಾಶರಾಜ ಅನೇಕ ಹರುಷದಿ ಮಾಡೆ ತಾ ಕನ್ಯಾದಾನವನ್ನು ಹಾಕಿದ ರತ್ನಮಾಣಿಕ್ಯದ ಕಿರೀಟವನು ಬೇಕಾದಾಭರಣ ಭಾಗ್ಯ ಸಾಕಾಗದೇನೊ ಬಡವರ ಕಾಡಿ ಬೇಡುವುದು ಶ್ರೀಕಾಂತ ನಿನಗೆ ಸರಿಯೆ ದೇವ 7 ಹೇಮಗೋಪುರದಿ ವಿಮಾನ ಶ್ರೀನಿವಾಸ ದೇವರನು ನೋಡಿ ನಮಿಸಿ ಕಾಮಿಸಿ ಕಂಡೆ ಹೊನ್ನ್ಹೊಸ್ತಿಲು ಗರುಡ ಗಂಬದ ಸುತ್ತ ಪ್ರಾಕಾರವೊ ಸ್ವಾಮಿಪುಷ್ಕರಣಿಯಲಿ ಸ್ನಾನ ಪಾನವ ಮಾಡಿ ನೋಡಿದೆನು ನಿನ್ನ ಭಕುತರ ದೇವ 8 ಪÀನ್ನಗಾದ್ರಿ ವೆಂಕಟನ್ನ ರಥ ಶೃಂಗಾರ ವರ್ಣಿಸಲಳವೆ ನಮಗೆ ಕಣ್ಣಾರೆಕಂಡೆ ಗರುಡೋತ್ಸವದಲಂಕಾರ ಇನ್ನೆಲ್ಲು ಕಾಣೆ ಜಗದಿ ಎನ್ನ ಕಿವಿಗಾನಂದವೊ ದೇವ 9 ಪಾದದಲ್ಲೊಪ್ಪೋ ಪಾಗಡ ರುಳಿ ಕಿರುಗೆಜ್ಜೆ ಮೇಲಲೆವೊ ಪೀತಾಂಬರ ಮಾಲೆ ಶ್ರೀವತ್ಸದ್ಹಾರ ಮೇಲಾದ ಸರಿಗೆ ಸರ ಪದಕವೊ ಕಮಲ- ದಳಾಯತಾಕ್ಷನ ನೋಡಿದೆ ದೇವ 10 ಕರಗಳಲ್ಲಿಟ್ಟು ಕಂಕಣ ಕಡಗ ಭುಜಕೀರ್ತಿ ವರ ಶಂಖ ಚಕ್ರಧಾರಿ ಗಿರಿಯ ಭೂವೈಕುಂಠವೆಂದು ತೋರುತ ನಿಂತ ಶಿರದಿ ಕಿರೀಟ ಧರಿಸಿ ಬಿಳಿಯ ತ್ರಿನಾಮ ಭೀಮೇಶಕೃಷ್ಣನ ಮುಖದಿ ಹೊಳೆವ ಮೂರ್ತಿಯ ನೋಡಿ ಹೇ ದೇವ11
--------------
ಹರಪನಹಳ್ಳಿಭೀಮವ್ವ
ಶ್ರೀಹರಿಸ್ತುತಿ ಈ ಮಹಾಮಹಿಯ ಪ ವೇದವನು ಸಾಧಿಸುತ 1 ಹರುಷದೊಳಾ ಗಿರಿಯನೆತ್ತಿ 2 ಹರಣವನು ಹೀರುತಲಿ 3 ವರ ಪ್ರಹ್ಲಾದನಿಗೊಲಿದು 4 ಈರಡಿಯ ಮಾಡುತಲಿ 5 ಕುಲವನು ತಾನಳಿಸುತಲಿ 6 ಶರಣಶಿಖಾಮಣಿಗೊಲಿದು7 ಸರಸದೊಳಾತುರುಗಳನು 8 ವಧಿಸುತಲಾ ತ್ರಿಪುರರನು 9 ಕಳೆವನು ಭೂಭಾರವನು 10 ಕಿಂಕರರಿ ಗೊಲಿದವನು11
--------------
ವೆಂಕಟ್‍ರಾವ್
ಶ್ರೀಹರಿಸ್ತುತಿ ಜೈ ಹರಿ ವಿಠ್ಠಲ ಪಾಂಡುರಂಗ 1 ರಕುಮÁಯೀಧವ ಪಾಂಡುರಂಗ 2 ಸಾಧುಜನಾರ್ಚಿತ ಪಾಂಡುರಂಗ 3 ಕಾಲಾಂತಕಪ್ರಿಯ ಪಾಂಡುರಂಗ 4 ಕರಿರಾಜವರದ ಪಾಂಡುರಂಗ 5 ವನಜಾಸನನುತ ಪಾಂಡುರಂಗ 6 ಕುಟಿಲಾಂತಕಹರೆ ಪಾಂಡುರಂಗ 7 ಭಾವಜಪಿತಹರೆ ಪಾಂಡುರಂಗ 8 ಫಣಿಪತಿಶಯನ ಪಾಂಡುರಂಗ9 ದುರಿತವಿದೂರ ಪಾಂಡುರಂಗ 10 ವನಜನಾಭಹರೆ ಪಾಂಡುರಂಗ 11 ವಾತಾತ್ಮಜನುತ ಪಾಂಡುರಂಗ 12 ಜಗದೋದ್ಧಾರ ಪಾಂಡುರಂಗ 13 ಪುಂಡರೀಕವರದ ಪಾಂಡುರಂಗ 14 ದೀನಮಂದಾರ ಪಾಂಡುರಂಗ 15 ಸಿಂಧುಶಯನಹರೆ ಪಾಂಡುರಂಗ 16 ಶ್ರೀಕರಸೇವಿತ ಪಾಂಡುರಂಗ 17 ನರಕಾಂತಕಹರೆ ಪಾಂಡುರಂಗ 18 ಸಾಮಗಾನಪ್ರಿಯ ಪಾಂಡುರಂಗ 19 ಕ್ಷಾತ್ರಕುಲಾಂತಕ ಪಾಂಡುರಂಗ | ಧಾತ್ರೀರಮಣ ಪಾಂಡುರಂಗ 20 ಕಾಮಿತಫಲದ ಪಾಂಡುರಂಗ 21 ಪಾವನಚರಿತ ಪಾಂಡುರಂಗ 22 ಉತ್ತಮದೇವನೆ ಪಾಂಡುರಂಗ 23 ಸೋಜಿಗಪುರುಷನೆ ಪಾಂಡುರಂಗ24 ಭಾನುಪ್ರಕಾಶ ಪಾಂಡುರಂಗ 25 ಸುರಭಿನಿವಾಸ ಪಾಂಡುರಂಗ 26 ಭಕುತಪೋಷಕ ಪಾಂಡುರಂಗ27 ತ್ರಿಗುಣಾತೀತಾ ಪಾಂಡುರಂಗ 28 ಚಂದ್ರಮೌಳಿಹಿತ ಪಾಂಡುರಂಗ26 ಸುರಮುನಿಸನ್ನುತ ಪಾಂಡುರಂಗ30 ದಾನವಾಂತಕ ಪಾಂಡುರಂಗ 31 ಭೂಸುರವಂದಿತ ಪಾಂಡುರಂಗ32 ಸೃಷ್ಟಿಗೊಡೆಯ ಶ್ರೀ ಪಾಂಡುರಂಗ 33 ಉರ್ವಿರಮಣ ಪಾಂಡುರಂಗ 34 ಶೃತಿತತಿವಿನುತ ಪಾಂಡುರಂಗ 35 ಜೀವೋತ್ತಮನುತ ಪಾಂಡುರಂಗ36 ನಾಕಾಧಿಪನುತ ಪಾಂಡುರಂಗ 37 ಮೋದದಾಯಕ ಪಾಂಡುರಂಗ38 ಭಾಗವತಪ್ರಿಯ ಪಾಂಡುರಂಗ39 ಕರುಣಿಗಳರಸನೆ ಪಾಂಡುರಂಗ40 ತಾಪತ್ರಯಹರೆ ಪಾಂಡುರಂಗ41 ಕರ್ಮಾಧಿಪತೆ ಪಾಂಡುರಂಗ42 ಕಪಟನಾಟಕ ಪಾಂಡುರಂಗ43 ಬಾದರಾಯಣ ಪಾಂಡುರಂಗ44 ಮುಂದೆ ದಾರಿಯೇನೋ ಪಾಂಡುರಂಗ 45 ಪಾಶಪರಿಹರಿಸೊ ಪಾಂಡುರಂಗ 46 ಎಷ್ಟು ಪೊಗಳಲೋ ಪಾಂಡುರಂಗ 47 ಇಷ್ಟದಾಯಕ ಪಾಂಡುರಂಗ 48 ಜನುಮ ನೀಗಿಸೊ ಪಾಂಡುರಂಗ 49 ಘನ್ನಮಹಿಮನೆ ಪಾಂಡುರಂಗ 50 ದೀನವತ್ಸಲನೆ ಪಾಂಡುರಂಗ 51 ಪಾದ ಪಾಂಡುರಂಗ52 ಶುಭಮಂಗಳಹರೆ ಪಾಂಡುರಂಗ 53 ಶ್ರೀಶಕೇಶವ ಪಾಂಡುರಂಗ 54
--------------
ಶ್ರೀಶ ಕೇಶವದಾಸರು
ಸಂಕರುಷಣ ಮೂರ್ತಿಯೇ ಪ ನಿಷ್ಕಳಂಕ ಬಿರುದಾಂಕ | ಶಶಾಂಕ ಶೇಖರ ಶ್ರೀ ಅ.ಪ ನಿರವದ್ಯ ಶೃತಿವಂದ್ಯ 1 ಪಂಚಾತ್ಮನಾಗಿ ಪ್ರಪಂಚ ವ್ಯಾಪಿಸಿ ನಿ- ರ್ವಂಚನೆಯಿಂದ ನೀ ವಂಚಿಪೆ ವಂಚಕರ 2 ಶಿವರಾತ್ರಿದಿನದಿ ನಿನ್ನವರು ತವಪೂಜೆಯಿಂ ಭವ ನೀಗುವರು ಓ ಗುರುರಾಮ ವಿಠಲ ಸಖ 3
--------------
ಗುರುರಾಮವಿಠಲ
ಸಕಲ ಸದ್ಗುಣಪೂರ್ಣ ಶ್ರೀನಿವಾಸ ವಿಕಸಿತ ಕಮಲವದನ ಮಕರ ಕುಂಡಲಮಣಿ ಮಕುಟ ಕೌಸ್ತುಭಾ ಹಾರ ಅಖಿಳ ಜಗದಾಧಾರ ಅಂಬುಜಾಕ್ಷ ಸಿರಿ ನಲ್ಲ ನಿನ್ನ ಸಮಾನ ರಿಲ್ಲವೆಂಬುದ ಸರ್ವ ಶ್ರುತಿ ತತ್ವವ ಬಲ್ಲ ಬುಧರಿಂದರಿದು ಸೊಲ್ಲಸೊಲ್ಲಿಗೆ ತ್ರಿಜಗ ಪಾದ ಪಲ್ಲವವÀ ನಂಬಿದೆನು 1 ಚಕ್ರ ಶಂಖಾಬ್ಜಧರ ವಿಕ್ರಯ ವಿರಾಟರೂ- ಪಾ ಕ್ರಾಂತ ಸಕಲ ಭೂಚಕ್ರವನ್ನು ಶಕ್ರಗೊಲಿದಿತ್ತತಿಪರಾಕ್ರಮ ತ್ರಿವಿಕ್ರಮನೆ ಶುಕ್ರ ಶಿಷ್ಯನಿಗಧಿಕ ಶುಭವ ಪಾಲಿಸಿದಿ 2 ಜಯ ಜಯ ಜಗನ್ನಾಥ ಜಾನಕೀವರ ಸರ್ವ ಭಯ ನಿವಾರಣ ಭಕ್ತ ಕಲ್ಪತರುವೆ ಲಯದೂರ ಲಾವಣ್ಯ ಚಯಮಮಾಲಯದಲ್ಲಿ ದಯವಾಗು ಜ್ಞಾನ ಸುಖಮಯ ವೆಂಕಟೇಶ 3
--------------
ತುಪಾಕಿ ವೆಂಕಟರಮಣಾಚಾರ್ಯ
ಸಂಕ್ಷೇಪ ರಾಮಾಯಣ ಶ್ರೀಜಾನಕೀಮನೋಹರ ಚರಿತೆಯನು ಮುನಿ ರಾಜವಾಲ್ಮೀಕರಿಗೆ ನಾರದಂಪೇಳ್ದನದು ರಾಜೀವನೇತ್ರ ಪೇಳಿಸಿದಂತೆ ಸಂಕ್ಷೇಪದಿಂ ಪೇಳ್ವೆನಾಲಿಸುವುದು ವರಮುನಿಯಯಾಗಮಂ ಕಾಯ್ದುತಾಟಕಿಯಸಂ ಮುರಿದು ಭೂಸುತೆಯ ಕರಪಿಡಿದಯೋಧ್ಯಾಪುರಿಗೆ ಬರುತ ಭಾರ್ಗವನ ಗರ್ವವಸೆಳೆದು ತಂದೆಯಂ ಹರುಷಪೊಂದಿಸಿದಂರಘುದ್ವಹಂ ರಾಮಚಂದ್ರನು ಬಾಲಕಾಂಡದಲಿ 1 ಮಾತೆಯನುಡಿಗೆ ಪಿತನಭಾಷೆಯಂ ಸಲಿಸಲ್ಕೆ ತಾತಮ್ಮಲಕ್ಷ್ಮಣ ಧರಾತ್ಮಜೆಯರ್ಸಹಿತ ಪ್ರ ಭರತಬಂದು ಜಾತಂಗೆ ಪಾದುಕವನಿತ್ತು ಮನ್ನಿಸಿಮುನಿ ರಘುವರನಯೋಧ್ಯಾಕಾಂಡದಿ 2 ದಂಡಕಾರಣ್ಯದಿ ವಿರಾಧನಂ ಸಂಹರಿಸಿ ಚಂಡಿ ಶೂರ್ಪಣಖಿ ಕಿವಿಮೂಗನಂ ಕೊಯಿಸಿಯು ಮಾಯಾಮೃಗದವ್ಯಾಜದಿಂ ರಾವಣಂ ಕೊಂಡೊಯ್ಯೆಸೀತೆಯಂಅರುಣಸುತನಿಂದಕೋ ದೀಕ್ಷಾಚಾರ್ಯ ಕೇಳ್ದಸತಿವಾರ್ತೆಯಂ ಕಂಡು ಶಬರಿಯನು ಪಂಪಾತಟಕೆಬಂದ ನಾರಣ್ಯಕಾಂಡದೊಳ್ರಾಮನು 3 ಮರುತಾತ್ಮಜನಕಂಡು ಸುಗ್ರೀವಸಖ್ಯವಾ ಚರಿಸಿ ವಾಲಿಯ ಮುರಿದು ಕಪಿರಾಜ್ಯದೋಳ್ ದಿವಾ ಸೀತೆಯಕುಶಳವಂತಹುದೆನೆ ತೆರಳಲು ಚತುರ್ದಿಕ್ಕಿಗಾಗವಾನರರುಮೂ ವರುಬಂದುಪೇಳ್ದರೆಲ್ಲಿಯು ಕಾಣೆವೆಂದು ವನ ಕಿಷ್ಕಿಂಧಕಾಂಡದಲಿ 4 ಶರಧಿಯದಾಟಿ ಲಂಕೆಯ ಪೊಕ್ಕುಲಂಕಿನಿಯ ಮುರಿದು ಪುರವೆಲ್ಲಮುಂ ತಿರುಗಿವನದೊಳಗೆರಘು ವನಭಂಗಮಂಗೈಯ್ಯುತ ಪರಮ ಸಂಭ್ರಮದೊಳಕ್ಷಾದ್ಯರಂಕೊಂದುವಿಧಿ ಶರಕೆ ಮೈಗೊಟ್ಟುಲಮಂಕಾಪುರವಸುಟ್ಟುಬಂ ಪತಿಗೆಸುಂದರಕಾಂಡದಲ್ಲಿ ಹನುಮಾ 5 ವನಧಿಯೊಳ್ಸೇತುವೆಯಗಟ್ಟಿ ಧುರದೊಳಗೆರಾ ವಣ ಕುಂಭಕರ್ಣಾದ್ಯರೆಲ್ಲರಂ ಸದೆದುತ ಪೊಗಳಲು ಜನಕನಂದನೆಯ ಪಾವಕನಿಂ ಪರಿಗ್ರಹಿಸಿ ಘನಪುಷ್ಪಕವನೇರಿಬರುತ ವಹಿಲದಲಿ ಭರ ಯುದ್ಧಕಾಂಡದಲಿ 6 ಪರಮಧರ್ಮದಲಿ ರಾಜ್ಯವಾಳುತಲಿ ಕಲಿರಾಮಭೂ ವರನು ಹನ್ನೊಂದುಸಾವಿರಲವಣನಂ ಪುತ್ರರಿಗೆ ರಾಜ್ಯವಿತ್ತು ಪುರಜನವ ಪಶುಪಕ್ಷಿ ಕೀಟವ್ರಜ ಸಹಿತ ತೆರಳಿದಂದಿವಿಗೆದೇವರ್ಕಳರಳಿನಮಳೆಯ ಸುರಿದು ಜಯಜಯವೆಂದು ಪೊಗಳಿದರುಹರಿ ಯನುತ್ತರಕಾಂಡದಲಿ ತಿಳಿವದು 7 ಇಪ್ಪತ್ತುನಾಲ್ಕುಸಾವಿರ ಶ್ಲೋಕ ಕಾಂಡಗ ಳೊಪ್ಪುವುದು ಸಪ್ತವೈನೂರುಸರ್ಗಗಳೆಂದು ವಾಲ್ಮೀಕಿ ಮುನಿವಿರಚಿಸಿದನು ತಪ್ಪದೇ ಪಠಿಸುವಗಮುದಿನಂ ಗಾಯತ್ರಿ ಇಪ್ಪತ್ತು ನಾಲ್ಕುಲಕ್ಷದ ಜಪದಫಲಬಹುದು ಚರಿತಸಜ್ಜನ ಕಲ್ಪವೃಕ್ಷವಿದುವೆ 8 ಇಂತಪ್ಪ ಮಹಿಮೆಯುಳ್ಳೀಕಥೆಯ ಸಂಕ್ಷೇಪ ದಿಂ ತರಳನಾಂ ಪೇಳ್ದೆತಪ್ಪಿದ್ದಡೆಯು ತಿದ್ದಿ ಸೇವಕಂಸೇವ್ಯನವನು ಎಂತಾದಡೆಯು ಹರಿಯನಾಮಾಮೃತದರುಚಿಮ ಹಾಂತರರಿವರು ದುರ್ಜನರು ನಿಂದಿಸಿದಡೇನು ಸಂಕ್ಷೇಪರಾಮಾಯಣಂ 9
--------------
ಗುರುರಾಮವಿಠಲ
ಸಂಚಿತ ಕರ್ಮವಂತೆ ಕಂತೆ ಮುಂಗಡ ಪ ಬರೆದ ಬರೆಹ ತೊಡೆದ ಮೇಲೆ ಕರೆದರಾಗ ಹೋಗಬೇಕುನೆರೆದು ಸುತ್ತಮುತ್ತ ಕುಳಿತ ಪರಮ ಬಂಧುವರ್ಗವೆಲ್ಲಇರಿಸಬೇಡಿ ಸುಡುಸುಡೆಂಬರು ಸುಟ್ಟಬಳಿಕಭರದಿ ಬಂದು ಮನೆಯೊಳೆಂಬರು ಪಾಪಿ ಸತ್ತತರುಣಿ ಕೆಟ್ಟಳೆಂದುಕೊಂಬರು ಆತ್ಮ1 ಸತಿಯು ಸುತರು ಪುತ್ರಿ ಮಿತ್ರರತಿಶಯದೊಳು ತಂದೆ ತಾಯಿಅತಿ ವಿನೋದಗೈಯುವ ಭಾವ ಜತನವೆಂಬೊ ಅತ್ತೆ ಮಾವಜೊತೆಗೆ ಹುಟ್ಟಿದಣ್ಣ ತಮ್ಮ ಈ ದೇಹ ತಾನುಸತ್ತ ಗಳಿಗೆ ಮುಟ್ಟಲಮ್ಮರು ಬರಿದೆ ನಾವುವ್ಯಥೆಗೆ ಸಿಕ್ಕಿದೆವೆಂಬರು ಆತ್ಮ 2 ಕಟ್ಟಿದರ್ಧ ಕರೆವ ಎಮ್ಮೆ ಕೊಂಡುಕೊಂಡ ಸಾಲಕದನುಪೋಟು ಮಾಡಿ ಮಕ್ಕಳೊಡನೆ ಅಷ್ಟು ಹೇಳಿ ಸಾವತನಕದುಷ್ಟ ಜನರು ಸುಮ್ಮನಿರುವರೆ ಕೈಯಲೊದಗಿದಷ್ಟು ಧರ್ಮವನ್ನು ಮರೆವರೆ ಆದಿಕೇಶವನ್ನಮುಟ್ಟಿ ಭಜಿಸಿ ಕಡೆಗೆ ಬಿಡುವರೆ ಆತ್ಮ 3
--------------
ಕನಕದಾಸ
ಸಚ್ಚಿದಾನಂದಾತ್ಮ ಪರಿಪಾಹಿ ಪಾಹಿ ಪರಮಾತ್ಮ ಪ ಸಚ್ಚಿದಾನಂದಾತ್ಮ ಮುಕುಂದ ಅಚ್ಯುತಾನಂತ ಗೋವಿಂದ ಆನಂದಾ ಅ.ಪ ಜನರುದ್ಧಾರ ನೀರಜಾಂಡ- ಚರ ಬಾಹಿರಾಂತರ ನಿರುತ ಚರಾಚರದೊಳಗೆ ಸಂಚಾರಾ ಗಂಭೀರ ಗಂಭೀರ ಗಂಭೀರ ವಾರಿವಿಹಾರ ಮಂದರೋದ್ಧಾರಾ ಧರಣಿಸೂಕರ ನರಮೃಗಾಕಾರ ಯಾಚಕ ಧೀರ ನರಪರ ಶಿರತರಿದೆತ್ತಿ ಬಿಲ್ಲನು ದಶಕತ್ತನು ಕ್ಷಣದೊಳು ಕ- ತ್ತರಿಸಿ ತುರುಗಳ ಕಾಯ್ದ ಬತ್ತಲೆ ನಿಂದ ತೊರೆಯುತ ಬಂದ ಗೋವಿಂದಾ ಈ ಭೂ- ಧರದೊಳು ನಲವಿಂದ ಕ್ರೀಡಿಪ ಪರಿಪರಿಯಿಂದ ಸುರಮುನಿಗಣ ಸಂಸ್ತುತಿಯಿಂದ ಗೋವಿಂದ ಗೋವಿಂದ 1 ಕಾಂತಾ ಕಾಂತಾ ಕಾಂತಾ ಕಾಂತಾ ಜಗದಾ- ದ್ಯಂತ ನಿರುತ ನಿಶ್ಚಿಂತ ಗುಣಗಣಭರಿತ ಸಂತತ ನಿನ್ನ ವಾಕ್ ತಂತಿನಾಮ ಧಾಮದಿ ಈ ಜಗ ಬಂಧಿಸಿಹುದು ಆದ್ಯಂತ ಶ್ರೀಕಾಂತ ಶ್ರೀಕಾಂತ ಶ್ರೀಕಾಂತ ಶ್ರೀಕಾಂತ ಶ್ರೀಕಾಂತಾ ಶ್ರೀಕರಾರ್ಚಿತತ್ರಿಗುಣವರ್ಜಿತ ಅನುಪಮಚರಿತ ಆದ್ಯಂತರಹಿತ ಸ್ವರಸಸುಭೋಕ್ತ ಸ್ವಗತಭೇದವಿವರ್ಜಿತ ಅಚ್ಯುತ ಮಚ್ಛಕಚ್ಛಪಾದ್ಯಜಿತಾದಿರೂಪನಿ- ನ್ನಿಚ್ಚೆಯಂತೆ ಸಿರಿಮೆಚ್ಚಿಸಿ ನಿನ್ನ ವಿಚಿತ್ರಕರ್ಮಗಳ ನಿಚ್ಚದಿ ನೋಡಿ ನಲವಿಂದ ಈ ಸೃಷ್ಟಿಲೀಲೆ- ಯ ಚಂದಾ ಚತುಷ್ಟಾತು ನಿನ್ನಯ ದಯದಿಂದ ಈ ಜಗಬಂಧಕ ಶಕುತಿ ನಿನ್ನಿಂದ ಗೋವಿಂದ 2 ದೇವ ದೇವ ದೇವ ದೇವಾದಿವಿಜಯವಂದ್ಯಸ್ವಭಾವ ದೇವ ನಿಜಸದ್ಭಾವ ಭಜಕರ ಕಾವ ಅಭಯವ- ನೀವ ವಿಶ್ವಾದಿ ರೂಪದಿಂದ ಜೀವರ ಭೋ- ಗಾವಸ್ಥಾತ್ರಯದಲಿ ನಡೆಸುತ್ತಿರುವ ಭೂ ದೇವ ಶ್ರೀ- ದೇವ ಭೂದೇವ ದುರ್ಗಾಧವ-ದುರ್ಗಾಧವಾ ನೀವ್ಯಾಪ್ತನು ಸರ್ವ-ತತುವರ ಕ್ರಿ- ಯವಾ ಪ್ರೇರಿಸಿ ನಡೆವ ದೇವ ವ್ಯಾಪಾ ರವ ಮಾಡಿ ಮಾಡಿಸಿ ಎತ್ತಲು ಚೇತನಚಿ- ತ್ತವಿತ್ತು ಪ್ರವೃತ್ತಿಗೈಸಿ ಫಲವಿತ್ತು ಜನು- ಮವ ಸುತ್ತಿಸುತ್ತಿಸಿತಂದಿತ್ತಪೆ ಶ್ರೀಪುರುಷೋತ್ತಮ ನೀನಿರ್ಲಿಪ್ತ ನೀನಂಚಿತ್ಯ ಅನಂತ ಶ್ರೀ ವೇಂಕಟೇಶ ನಿನ್ನಂಥ ಪೊರೆವರಕಾಣೆ ಉನ್ನಂತ ಉರಗಾದ್ರಿವಾಸವಿಠಲ ಶಾಂತ ಮಹಂತ3
--------------
ಉರಗಾದ್ರಿವಾಸವಿಠಲದಾಸರು
ಸಡಿಲ ಬಿಡದೆ ಕೈಯ ಪಿಡಿದು ಉದ್ಧರಿಸಯ್ಯ ಬಡವನು ನಾನೈಯ್ಯ - ಕೊಡು ನಿನ್ನ ಸೇವೆಯ ಪ ಒಡಲಿಗೋಸುಗ ಪರರಡಿಗಳ ಪಿಡಿಯುತೆ ಭವ ಕಡಲಿನೊಳಗೆ ಅ.ಪ. ಪಡೆದು ವರಗಳನು ಕಡು ಖೂಳ ರಾವಣ ನಡುಗಿಸಿ ಸುರನರ ಭುಜಗರೊಡೆಯರನ್ನು ಹಿಡಿದು ಮುನೀಶರ ಹೊಡೆದು ಬಡಿದು ಹಿಂಸೆ - ಪಡಿಸುತ್ತ ಯುವತೇರ ದುಡುಕು ಮಾಡುತ್ತಲಿರೆ ಗಡಣೆಗಾರದೆ ಪಾಲ ಕಡಲ ತಡಿಗೆ ಬಂದು ದೃಢ ಭಕ್ತಿಯಲಿ ನಿಂದು ಜಡಜ ಭವಾದ್ಯರು ಪೊಡಮಟ್ಟು ಬೇಡಲು ಕೊಡುತೆ ಅಭಯವನು ಮಡದಿಯನೊಡಗೂಡಿ ಪೊಡವಿಗಿಳಿದು ಬಂದೆ 1 ಸತಿ ಕೌಸಲ್ಯದೇವಿಯ ಬಸುರೊಳು ಸಂಜನಿಸಿ ದಶದಿಶದೊಳು ಯಶ ಪಸರಿಸಿ ಅಸುರೆಯ ಅಸುವನು ಹಾರಿಸಿ ಕುಶಿಕ ಸುತನ ಯಜ್ಞ ಹಸನಾಗಿ ಪಾಲಿಸಿ ನಸುನಗುತಲಿ ಪದಸರಸಿಜ ಸೋಕಿಸಿ ಅಶಮವಾಗಿದ್ದ ಮುನಿಸತಿಯನುದ್ಧರಿಸಿ ಪಶುಪತಿ ಧನುಭಂಗವೆಸಗಿ ಸೀತೆಯ ಕರ ಬಿಸಜವ ನೊಶಗೈದ ಅಸಮ ಸಮರ್ಥ 2 ಚಂದದಿಂ ಶಾಙ್ರ್ಞವನೊಂದಿ ಅಯೋಧ್ಯೆಗೆ ಬಂದು ಪತ್ನಿಯಗೂಡಿ ನಂದದಿಂದಿರುತಿರ್ದು ಬಂದ ಕಾರ್ಯಕೆ ನೆವ ತಂದು ವನಕೆ ಬಂದು ನಿಂದಿರೆ ಜಾನಕಿ ಲಕ್ಷ್ಮಣರೊಡಗೊಂಡು ನೊಂದು ನೃಪನು ದಿನವನ್ನು ಹೊಂದಲು ಕರೆ- ತಂದು ಭರತನಿಗೆ ಅಂದು ರಾಜ್ಯವನೀಯೆ ಬಂದೊಲ್ಲದೆ ಬೇಗ ಬಂದು ವಂದಿಸೆ ಪದ ದ್ವಂದ್ವದ ಪಾದುಕವಂದದಿಂದೊಲಿದಿತ್ತೆ 3 ಚಿತ್ರಕೂಟಾದ್ರಿಯಿಂದತ್ತ ನಡೆದು ನೆಲ ಕೊತ್ತಿ ವಿರಾಧನ್ನ ವತ್ಸ ಲಕ್ಷ್ಮಣ ಸೀತಾ ಯುಕ್ತನು ನೀನಾಗಿ ಪೊರೆಯಲು ಇತ್ತು ಅಭಯವನ್ನು ಉತ್ತಮ ದಂಡಕದಿ ಸ್ತುತ್ಯ ಕುಂಭಜ ಮುನಿಯಿತ್ತ ಧನುವನಾಂತು ಕುತ್ಸಿತ ದನುಜೆಯ ಶಿಕ್ಷಿಸಿ ಖರ ಬಲ ಕತ್ತರಿಸುತೆ ಬೆನ್ಹತ್ತಿ ಮಾರೀಚನ್ನ ತುತ್ತು ಮೂರಾಗಿಸಿದತ್ಯಂತ ಶಕ್ತ 4 ಮೈಥಿಲಿಯಾಡಿದ ಮಾತಿಗೆ ಸೌಮಿತ್ರಿ ಪಾತಕಿ ದಶಮುಖ ಸಾತ್ವೀಕ ವೇಷದಿ ಸೀತೆಯ ನೊಯ್ದೆನೆಂದು ಆರ್ತ ಸ್ವರದಿ ಪೇಳಿ ಮೃತಿಯೊಂದೆ ಖಗಪತಿ ಆತಗೆ ಸದ್ಗತಿಯಿತ್ತು ನಡೆದು ಖಳ ಪೋತಕ ಬಂಧನ ತೋಳ್ಗಳ ಖಂಡಿಸಿ ಪ್ರೀತಿಲಿ ಶಬರಿಗೆ ಮುಕ್ತಿಯ ಪಾಲಿಸಿ ವಾತಸುತನ ಮನ ಪ್ರಾರ್ಥನೆ ಸಲಿಸಿದೆ 5 ಚರಣದಿಂದೊಗೆದು ದುಂದುಭಿಯ ಶರೀರವನ್ನು ತರುಗಳೇಳನು ಒಂದೇ ಸರಳಿನಿಂದುರುಳಿಸಿ ತರಣಿಸುತನ ಭಯ ಹರಿಸಿ ವಾಲಿಯ ಗರ್ವ ಮುರಿಸಿ ವಾನರ ರಾಜ್ಯ ದೊರೆತನ ಸಖಗಿತ್ತೆ ತರುಚರ ತತಿಗಳ ಕೆರಳಿಸಿ ಹರುಷದಿ ಪರನು ಭಕುತನನ್ನು ಕರೆದು ಕುರುಹುಗಳ ನೊರೆದು ಮುದ್ರಿಕೆಯಿತ್ತೆ ಕರುಣವಾರಿಧಿಯೆ 6 ತಿಂಗಳು ಮೀರಿತೆಂದು ಅಂಗದ ಪ್ರಮುಖರು ಕಂಗೆಟ್ಟು ಕುಳಿತಿರೆ ಭಂಗನ ಕಳೆದು ತ - ರಂಗಿಣಿ ಪತಿಯನ್ನು ಲಂಘಿಸಿ ಹನುಮನು ಕಂಗೊಳಿಸುವ ಲಂಕಾ ಪ್ರಾಂಗಣದಲಿ ನಿಂದು ಭಂಗಿಸಿ ಲಂಕಿಣಿಯನು ಸೀತಾಂಗನೆ - ಗುಂಗುರವಿತ್ತುತ್ತಮಾಂಗದ ಮಣಿಯಾಂತು ಕಂಗೆಡಿಸ್ಯಸುರರ ಜಂಗುಳಿಯನು ಭಕ್ತ ಪುಂಗವ ಬರೆ ನಿನ್ನಂಗ ಸಂಗವನಿತ್ತೆ 7 ಹರಿವರರನು ಕೂಡಿ ಶರಧಿಗೆ ಪಯಣಮಾಡಿ ಶರಣ ವಿಭೀಷಣನಿಗೆ ಸ್ಥಿರ ಪಟ್ಟವನು ನೀಡಿ ಭರದಿ ಸೇತುವೆಗಟ್ಟಿ ಅರಿಯ ಪಟ್ಟಣ ಮುಟ್ಟಿ ಧುರಕೆ ದೂತನ್ನ ಅಟ್ಟಿ ಪರಬಲವನು ಕುಟ್ಟಿ ಪುರಕೆ ಉರಿಯನಿಕ್ಕಿ ಶರವರ್ಷಂಗಳ ಕರಿ ರಥಾ ತುರಗ ಪದಾತಿಗ- ಳುರುಳಿಸಿ ದಶಶಿರನುರವನು ಇರಿದು ಪರಮ ಸಾಧ್ವಿಯ ಕರಸರಸಿಜ ಪಿಡಿದೆ 8 ಭಕ್ತ ವಿಭೀಷಣಗೆ ದೈತ್ಯಾಧಿಪತ್ಯವಿತ್ತು ಕೃತ್ತಿವಾಸನ್ನ ಸೇತು ಹತ್ತಿರ ಸ್ಥಾಪಿಸಿ ಪತ್ನಿ ಸಹೋದರ ಮಿತ್ರ ಭೃತ್ಯರ ಕೂಡಿ ಉತ್ತಮ ಪುಷ್ಪಕದಿ ಚಿತ್ರಕೂಟಕೆ ಬಂದೆ ಭಕ್ತನ ಕಳುಹಿ ಸದ್ವøತ್ತವ ಭರತಗೆ ಬಿತ್ತರಿಸಿ ಮಹದುತ್ಸವದಿ ಪುರ ಮತ್ತೆ ಪ್ರವೇಶಿಸಿ ರತ್ನ ಸಿಂಹಾಸನ ಹತ್ತಿ ಶ್ರೀಕಾಂತನೆ ನಿತ್ಯದಿ ಸಲಹುವೆ 9
--------------
ಲಕ್ಷ್ಮೀನಾರಯಣರಾಯರು
ಸಂತರೆನಬಹುದು ಸಜ್ಜನರಿವರನಾ ಪ ಇಂಥ ಗುಣಗಳಿಂದ ಯುಕ್ತರಾಗಿಪ್ಪರ ಅ.ಪ. ಸ್ವಾಂತಸ್ಥಾ ನುತ ಸರ್ವಾಂತರಾತ್ಮಕನೆಂದು ಚಿಂತಿಸುತ ಮನದೊಳು ನಿರಂತರದಲಿ ನಿಂತಲ್ಲಿ ನಿಲ್ಲದೆ ದುರಂತ ಮಹಿಮನ ಗುಣವ ಸಂಸ್ತುತಿಸುತನವರತ ಶಾಂತರಾಗಿಹರಾ 1 ಲೇಸು ಹೊಲ್ಲೆಗಳು ಪ್ರದ್ವೇಷ ಗೇಹಗಳು ಸಂ ತೋಷ ಕ್ಲೇಶಗಳಿಗವಕಾಶ ಕೊಡದೆ ದೋಷ ವರ್ಜಿತ ಹೃಷಿಕೇಶ ಮಾಡುವನೆಂದು ಭೇಶನಂದದಲಿ ಪ್ರಕಾಶಿಸುತಲಿಹರಾ 2 ಮೇದಿನಿ ದಿವಿಜರೊಳು ಸಾಧು ಜನರೊಳು ಧರ್ಮಕರ್ಮಗಳೊಳು ಶ್ರೀದನೊಳು ಗೋವುಗಳೊಳಗೆ ದ್ವೇಷಿಪರಿಗೆ ಅ ನ್ನೋದಕಗಳೀಯದೆ ನಿಷೇಧಗಯ್ಯುತಲಿಹರಾ 3 ಎನ್ನ ಪೋಲುವ ಪತಿತರಜ್ಞಾನಿಗಳು ಜಗದೊ ಳಿನ್ನಿಲ್ಲ ಪತಿತ ಪಾವನನೆನಿಸುವ ಜಾಹ್ನವೀ ಜನಕಗಿಂದಧಿಕರ್ಯಾರಿಲ್ಲೆಂದು ಉನ್ನತೋತ್ಯಂಶದಿಂದ ಸನ್ನುತಿಸುತಿಪ್ಪವರ 4 ಸತ್ಯ ಸಂಕಲ್ಪ ಏನಿತ್ತಿದ್ದೆ ಪರಮ ಸಂ ಪತ್ತು ಎನಗೆನುತ ಸದ್ಭಕ್ತಿಯಿಂದಾ ನಿತ್ಯದಲಿ ಕೀರ್ತಿಸುತ ಪುತ್ರಿಮಿತ್ರಾದಿಗಳು ಭೃತ್ಯಾನುಭೃತ್ಯರೆಂದರ್ತಿಯಲಿ ಸ್ಮರಿಸುವರಾ 5 ಜನುಮ ಜನುಮಗಳಲ್ಲಿ ಎನಗೆ ಜನನೀ ಜನಕ ಅನುಜ ತನುಜಾಪ್ತ ಪೋದನ ಭೂಷಣಾ ಅನಿಮಿತ್ತ ಬಂಧು ಒಬ್ಬನೇ ಎನಿಸುತಿಪ್ಪ ಸ ಪರ ಸೌಖ್ಯ ರೂಪನೆಂಬುವರಾ 6 ನಾಗೇಂದ್ರಶಯನ ಭವರೋಗಾಪಹರ್ತ ಪಾ ವಜ್ರ ಅಮೋಘ ಶೌರ್ಯ ತ್ರೈಗುಣ್ಯ ವರ್ಜಿತ ಜಗನ್ನಾಥ ವಿಠಲಗೆ ಕೂಗಿ ಕೈಮುಗಿದು ತಲೆಬಾಗಿ ನಮಿಸುವರಾ 7
--------------
ಜಗನ್ನಾಥದಾಸರು
ಸತಿ ಮದ್ಬಾರ ನಿನ್ನದಮ್ಮಾ | ಕರುಣದಿ ಪೊರೆಯಮ್ಮ ಪ ಸರಸಿಜಾಕ್ಷ ಹರಿಭಕುತಿ ನೀಡೆ ತಾಯೇ | ಆರತರನು ಕಾಯೇ ಅ.ಪ. ಕಾಳಿ ದ್ರೌಪತಿ ಶಿವಕನ್ಯೆ | ಮನ್ಮನದಲಿ ನಿಲು ಘನ್ನೆಫಾಲಾಕ್ಷನ ಪ್ರಿಯ ಜನನೀ | ದಯದಲಿ ಪೊರೆ ಕರುಣೀ ||ನಳನಂದಿನಿ ಇಂದ್ರಸೇನೆ ತಾಯೇ | ಕಲಿ ಕಲ್ಮಷ ಕಳೆಯೇಏಳಲ ಮಾಡದೆ ನೀಲವರ್ಣನ ತೋರೇ | ಕರುಣಾರಸ ಬೀರೇ 1 ಭವ ಖಗ ಪನ್ನಗ ಭವ ದೂರೇ2 ಕೃತಿ ರಮಣನ ಪ್ರಿಯ ಪುತ್ರಿ | ನರಹರಿ ಗುರುಭಕ್ತೀಪ್ರಥಮಾಂಗನ ಪ್ರಿಯರಾಣೀ | ನಮಿಸುವೆ ಬ್ರಹ್ಮಾಣಿ ||ಪತಿತನ ಪಾಲಿಸೆ ಪರಮ ಕಲ್ಯಾಣಿ | ಪಾವನೆಯ ಭಾವಿವಾಣಿಗತಿಪ್ರದ ಗುರು ಗೋವಿಂದ ವಿಠಲನ್ನ | ಪದ ತೋರಿಸೆ ಘನ್ನ 3
--------------
ಗುರುಗೋವಿಂದವಿಠಲರು
ಸತಿ ಸಹಿತ ಕಶ್ಯಪರು ರತುನದಾರತಿ ಪಿಡಿದು ರತಿಪತಿಪಿತನಿಗೆ ಅತಿಹರುಷದಿ ಅತಿಶಯದ ಮಹಿಮೆಗಳ ಪೊಗಳುತಲಿ ಶ್ರೀಹರಿಗೆ ಕುಶಲದಾರತಿ ಎತ್ತಿಬೆಳಗಿದರು ನಿತ್ಯ ಶುಭ ಮಂಗಳಂ 1 ಅನಸೂಯ ಸಹಿತ ಅತ್ರಿಯರು ಬೇಗನೆ ಬಂದು ನಳಿನಾಕ್ಷನ ಚರಣಕ್ಕೆರಗಿ ನಿಂದು ವಿಧವಿಧದ ಆಟಗಳ ಆಡಿದ ಶ್ರೀಹರಿಗೆ ಪದುಮದಾರತಿ ಎತ್ತಿ ಬೆಳಗಿದರು ನಿತ್ಯ ಶುಭಮಂಗಳಂ 2 ಶೀಲವತಿಯಾದ ಸುಶೀಲೆ ಸಹಿತ ಭಾರದ್ವಾಜ ಋಷಿಗಳು ತಮ್ಮ ಆಶ್ರಮದಲಿ ಶ್ರೀಲಕುಮಿವಲ್ಲಭಗೆ ಶೀಘ್ರದಿಂದಲಿ ತಾವು ಗೋಮೇಧಿಕದಾರುತಿ ಬೆಳಗಿದರು ನಿತ್ಯ ಶುಭಮಂಗಳಂ 3 ಕುಮುದ್ವತಿ ಸಹಿತ ವಿಶ್ವಾಮಿತ್ರ ಋಷಿಗಳು ಕನಕ ಮಂಟಪದಿ ಮೆರೆಯುವ ದೇವಗೆ ಸನಕಾದಿವಂದ್ಯನಿಗೆ ವನಜಾಕ್ಷಿಯರಸನಿಗೆ ಕನಕದಾರತಿ ಎತ್ತಿ ಬೆಳಗಿದರು ನಿತ್ಯ ಶುಭಮಂಗಳಂ 4 ಪ್ರಹ್ಲಾದವರದನಿಗೆ ಅಹಲ್ಯೆಯ ಸಹಿತದಿ ಫುಲ್ಲಲೋಚನಪ್ರಿಯಗೆ ಋಷಿಗೌತಮ ಮಲ್ಲಿಗೆಹಾರಗಳು ಧರಿಸಿ ಶೋಭಿಪ ಹರಿಗೆ ಚಲ್ವನವರತ್ನದಾರತಿ ಎತ್ತುತಾ ನಿತ್ಯ ಶುಭಮಂಗಳಂ 5 ರೇಣುಕಾ ಸಹಿತ ಜಗದಗ್ನಿ ಋಷಿಗಳು ತಮ್ಮ ಧ್ಯಾನಗೋಚರನಾದ ಪರಮಾತ್ಮನ ಮಾನಿನಿಮಣಿ ಲಕುಮಿಯೊಡನೆ ಶ್ರೀಕೃಷ್ಣನಿಗೆ ನೀಲಮಾಣಿಕ್ಯದ ಆರತಿ ಎತ್ತುತ ನಿತ್ಯ ಶುಭಮಂಗಳಂ 6 ಸತಿ ಸಹಿತ ವಶಿಷ್ಠ ಋಷಿಗಳು ಇಷ್ಟಮೂರುತಿಯಾದ ವರಕಮಲನಾಭ ವಿಠ್ಠಲನ ಸ್ಮರಿಸುತ ನಿತ್ಯ ನವರತ್ನದಾರತಿ ಬೆಳಗಿದರು ನಿತ್ಯ ಶುಭಮಂಗಳಂ 7 ಮಂಗಳಂ ಸಪ್ತಋಷಿಗಳು ಪರ್ಣಶಾಲೆಯೊಳು ಗಾಂಗೇಯನುತನ ಪೂಜಿಸಿ ಹರುಷದಿ ಸಂಗೀತಲೋಲನಿಗೆ ಶೃಂಗಾರ ಪುರುಷನಿಗೆ ರಂಗಿನಾರತಿಯೆತ್ತಿ ಬೆಳಗಿದರು ನಿತ್ಯ ಶುಭಮಂಗಳಂ 8
--------------
ನಿಡಗುರುಕಿ ಜೀವೂಬಾಯಿ
ಸತ್ಕವೀಂದ್ರ ಬಾಬೇಂದ್ರೆ ಸುಗುಣಸಾಂದ್ರ ಪ. ನಮ್ಮ ಮಾನವಿ ಸ್ಥಳದಿ ಅಚ್ಚಗನ್ನಡ ನುಡಿಯ ಸಮ್ಮಿಲನ ಸಾಗಿಸಲು ನಿಶ್ಚಯಿಸಿದೆ ನಿಮ್ಮ ಬರುವಿಗೆ ಬಯಕೆ ಇಮ್ಮಡಿಸಿದೆಮಗೆ ಸಮ್ಮತಿಸಿ ಬಾರಯ್ಯ ಸತ್ಕವೀಂದ್ರ ಶ್ರೀ ಬೇಂದ್ರೆ ಸುಗುಣೇಂದ್ರ 1 ಅಚ್ಚಗನ್ನಡ ತಾಯಿಗಚ್ಭದ ಮನೆಂದು ಹೆಚ್ಚಾಗಿ ನಿಮ್ಮನ್ನು ಮೆಚ್ಚುವೆವೋ ಮುಚ್ಚುಮರಿಯಾಕೆ ಈ ಉತ್ಸವಕೆ ಬರದಿರೆ ವಾಗ್ದೇವಿ ಸತ್ಕವೀಂದ್ರ 2 ದಾತರಾದವರಾರ್ತರಾತುರದಿ ತ್ವರದಿಂದ ಪ್ರೀತಿಯಲಿ ಪೂರ್ತಿಸಲು ಒಪ್ಪಿರೆಂಬಾ ನೀತಿ ಮಾತನು ನೀ ತಿಳಿಯದಾತನೆ ಹಾತೊರೆಯುತಿದೆ ಮನವು ಸತ್ಕವೀಂದ್ರ 3 ಕನ್ನಡದ ನುಡಿ ಸುಧೆಯ ಕನ್ನಡಿಗರಿಗೆ ಬೀರಿ ಕನ್ನಡ ನಾಡೆಂಬ ಪಾಲ್ಗಡಲಕೆ ಜೇನ್ನೊಡಲನೆಂದೆನಿಸಿ ಕನ್ನಡಿಗರಿಂ ಮನ್ನಣೆಯ ಪಡೆದಂಥ ಸತ್ಕವೀಂದ್ರ 4 ಉಸಿರಲೆನ್ನಯ ಮತಿಗೆ ವಶವಲ್ಲವೈನಿನ್ನ ರಸವತ್ಕವಿತಾ ಪ್ರತಿಭಾಚಾರ್ತುರ್ಯವಾ ಹೊಸಗನ್ನಡ ನುಡಿ ರಸದ ಮಾಧುರ್ಯಮಂ ರಸಿಕರಿಗೆ ನೀ ನೀಡು ಸತ್ಕವೀಂದ್ರಾ 5 ಕನ್ನಡ ನುಡಿ ಸಾರಿ ಕನ್ನಡಕುಪಕಾರಿ ಕನ್ನಡದ ಜಯಭೇರಿ ಹೊಡೆದ ನಗಾರಿ ಕನ್ನಡದ ಹೊಸ ಸಿರಿಯು ಕನ್ನಡ ರಸಝರಿಯು ನಿನ್ನಿಂದ ಲಭಿಸಿತೈಸತ್ಕವೀಂದ್ರಾ6 ನಿನ್ನಿಂದ ಕನ್ನಡದ ಮ್ಲಾನತೆಯು ದೂರಾಯಿತು ನಿನ್ನಿಂದ ನಮಕವನ ಕವಲೊಡೆದು ಸರ್ವತ್ರ ಉನ್ನತೆಯ ನೈದಿತೈ ಸತ್ಕವೀಂದ್ರಾ 7 ವೃತ್ತಪತ್ರಿಕೆಗಳಲಿ ಮತ್ತೆ ಸಮ್ಮೇಳನದಿ ನಿತ್ಯ ಓದುವ ಮನೆ ಶಾಲೆಯಲ್ಲಿ ಚಿತ್ತಪೂರ್ವಕ ನಿನ್ನ ಉತ್ತಮೋತ್ತಮ ಕವನ ಮತ್ತೆ ಪೇಳುವರು ಸತ್ಕವೀಂದ್ರಾ8 ನುಡಿಯಣ್ಣನೊಲುಮೆಯೋ | ನುಡಿಯೊಡೆಯನನುಗ್ರಹವೋ ಪಡೆದ ಮಾತೆಯ ಜೀತನೋಪಿ ಫಲವೋ ಕಡು ಸರಳ ಬಿಡಿವೃತ್ತ ಸಡಗರದಿ ರಚಿಸುತ್ತ ಪೊಡೆವಿಯೊಳು ಪಸರಿಸಿದ ಸತ್ಕವೀಂದ್ರಾ 9 ಪ್ರೇಮದಿಂದಲಿ ನಿನ್ನ ಪ್ರೇಮಿತಾರ್ಥವಗರೆದು ಶಾಮಸುಂದರವಿಠಲ ಸಲಹೋ ಎಂದು ನಾ ಮುದದಿ ಪ್ರಾರ್ಥಿಸುವೆ ನೀಮಾಡ್ವ ಉಪಕಾರ 10
--------------
ಶಾಮಸುಂದರ ವಿಠಲ
ಸತ್ಯವೋ ಏನು ಮಿಥ್ಯವೋ ಚಿತ್ತಜಪಿತ ಭಕ್ತವತ್ಸಲನೆಂಬೋಕ್ತಿ ಪ ಕಷ್ಟನಿವಾರ ಭಕ್ತರಿಷ್ಟದಾಯಕನೆಂದು ಅಟ್ಟಹಾಸದಿ ವೇದ ಕಟ್ಟಳಿಲ್ಲದೆ ಕೂಗ್ವುದು 1 ಧಾತ್ರಿತ್ರಯಕೆ ತಾನೆ ಸೂತ್ರಧಾರಕನೆಂದು ಸ್ತೋತ್ರ ಪೊಗಳಿದು ಮನು ಗೋತ್ರರ್ವಚನಂಗಳು 2 ಭಕ್ತವತ್ಸಲ ನೀನು ಸತ್ಯವಾಗಿರ್ದೊಡೆ ಭೃತ್ಯನ ಮನಕೀಗ ಪ್ರತ್ರ್ಯಕ್ಷಾಗಲಿ ರಾಮ 3
--------------
ರಾಮದಾಸರು
ಸತ್ರಾಜಿತ ಕುಮಾರಿ ಗೃಹಕೆ ಪಕ್ಷಿವಾಹನ ತನ್ನ ಅಚ್ಛದ ಸತಿಯ ಕಾರಣನೆಲ್ಲೂ ಭಾಮೆ ಇಚ್ಛೆಯಿಂದಲಿ ಬಂದನಿಲ್ಲೆ 1 ಮಚ್ಛಲೋಚನೆ ನಗುತ ಅಚ್ಚಮುತ್ತಿನ ದ್ವಾರ್ಯ ಮುಚ್ಚುಕದವ ತೆಗೆಯದೆ ಭಾಮೆ ಅಚ್ಚುತನ ಕೂಡ ವಿನಯದಿ 2 ಮದಗಜಗಮನೆ ಕೇಳೆ ಗಜವರದನು ನಾನೆ ಕದವ ತೆಗೆಯೆ ಕಮಲಾಕ್ಷಿ ಭಾಮೆ ಮುದದಿ ನೋಡೆನ್ನ ನಿರೀಕ್ಷೆ 3 ಗಜವರದನೆ ಗಜವ ವಧೆ ಮಾಡಿದವನು ನಿನ್ನ ನೆಲೆಯ ಬಲ್ಲವರು ನಾವಲ್ಲ ಕೃಷ್ಣ ಕದವ ತೆಗೆಯೋರ್ಯಾರಿಲ್ಲ4 ಉದಕÀದೊಳು ಮುಣುಗಿ ಬ್ಯಾಗ ಮದಕದಿಂದ್ಹಯನ ಕೊಂದು ತವಕದಿ ವೇದವ ತಂದೆ ನಾನು ಭಾಮೆ ಮತ್ಸ್ಯ ನಾನೆ 5 ಹೊಳೆವೊ ಮತ್ಸ್ಯನಾದರೆ ಶರಧಿ ಹುಡುಕುತ ಹೋಗೊ ನಿನಗಾವಾಸಸ್ಥಾನಯಿದಲ್ಲ ಕೃಷ್ಣ ಜಲವೆನ್ನ ಮನೆಯೊಳಗಿಲ್ಲ 6 ಅಂಬುಧಿ ಮಥಿಸಿ ಅಮೃತ ತಂದು ಸುರರಿಗಿಟ್ಟು ಮಂದರವ ಬೆನ್ನಲಿ ತಾಳಿದೆನೆ ಭಾಮೆ ಸುಂದರ ಕೂರ್ಮನು ನಾನೆ 7 ಸುರರಸುರರ ಯುದ್ಧ ಬಿಟ್ಟು ಮೋಹಿನ್ಯಾಗಲ್ಲಿ ನಡೆ ನಾ ಸ್ತ್ರೀರೂಪ ನೋಡೋಳಲ್ಲ ಕೃಷ್ಣ ಛಲದಿಂದ್ವಂಚಿಸು ಹೋಗವರನೆಲ್ಲ 8 ಮಣ್ಣು ಕೆದರುತಲ್ಹೋಗ್ಹಿ- ರಣ್ಯಾಕ್ಷನ್ನ ಸೀಳಿ ಮನ್ನಿಸ್ಯವನಿಯ ತಂದೆ ನಾನೆ ಭಾಮೆ ವರಾಹ ನಾ ಬಂದೀನೆ 9 ವರಾಹ ನೀನಾದರೆ ಗರಿಗಂಹರವ ಸೇರೊ ಮನೆಗೆ ಬರುವೋದುಚಿತಲ್ಲ ಕೃಷ್ಣ ಮೆಲುವ ಬೇರೆನ್ನ ಮನೆಯೊಳಿಲ್ಲ 10 ತರಳ ಕರೆಯಲು ಕಂಬ ಒಡೆದಸುರನ ಒಡಲ ಕಡು ಕೋಪವನ್ನು ತಾಳಿದನೆ ಭಾಮೆ ವರಲಕ್ಷ್ಮೀನರಸಿಂಹ ನಾನೆ 11 ಕರುಳಾಧಾರಕ ಕೇಳೊ ಕರಾಳವದನಕ್ಕಂಜುವೆನು ಕಡುಕೋಪ ಎನ್ನೊಳು ತರವಲ್ಲ ಕೃಷ್ಣ ತರಳರಂಜುವರು ಲಕ್ಷ್ಮೀನಲ್ಲ 12 ಅಂಜೋದ್ಯಾತಕೆ ಚಿಕ್ಕ ಕÀಂದ ವಟುವು ಚೆಲ್ವ ಸುಂದರ ವಾಮನನು ನೋಡೆ ಭಾಮೆ ಬಂದೆನ್ನ ಗುಣವ ಕೊಂಡಾಡೆ 13 ಕಪಟ ರೂಪದಿ ದಾನ ತ್ರಿಪಾದ ಭೂಮಿ ಬೇಡಿದ ವಿಪರೀತ ಮಾಯವ ಕಂಡವಳಲ್ಲ ಕೃಷ್ಣ ಅಪರ್ಮಿತ ಗುಣ ಬಲಿ ಬಲ್ಲ 14 ಸರಸಿಜಮುಖಿ ಕೇಳೆ ನಿರುತ ಜಪತಪಾಚರಿಸಿ ಪರಶುರಾಮನು ನಾ ಬಂದೆನೆ ಭಾಮೆ ಶರಥ ಮಾಡದಿರೆನ್ನೊಳು ನೀನೆ 15 ನಿರುತ ನಿಷ್ಠೆಯ ಬಲ್ಲೆ ಗುರುತು ಮಾತೆಯ ಕೊಂದೆ ಸರಸವಾಡುವೋಳು ನಾನಲ್ಲ ಕೃಷ್ಣ ಶರಥÀ ಕ್ಷತ್ರಿಯರಲ್ಲಿದು ಹೋಗೆಲ್ಲ 16 ಎರಡೈದು ಶಿರಗಳ ಕಡಿದು ಜಾನಕಿದೇವಿ ಒಡಗೊಂಡಯೋಧ್ಯವನಾಳಿದೆನೆ ಭಾಮೆ ಪೊಡವಿಗೊಡೆಯ ರಾಮ ನಾನೆ 17 ಅಡವಿ ಅರಣ್ಯ ತಿರುಗಿ ಮಡದಿಗಪನಿಂದ್ಯವ ಕಟ್ಟಿ ಅಡವಿಗಟ್ಟ್ಯಂತಃಕರಣವಿಲ್ಲ ಕೃಷ್ಣ ಬಿಡು ನಿನ್ನ ಸುಳ್ಳು ವಚನವಿದೆಲ್ಲ 18 ಯದುವಂಶದೊಳು ಜನಿಸಿ ವಧೆಮಾಡಿ ದೈತ್ಯರ ನಿರ್ಭಯದಿಂದ ಬೆಳೆದೆನೆ ಭಾಮೆ ಮಧು ಮುರಾಂತಕÀ ಕೃಷ್ಣ ನಾನೆ 19 ಕಲಹ ಮಾಡುತ ಕಾಲ- ಯಮನಿಂದಲೋಡಿ ಬಂದು ನಿರ್ಭಯದಿಂದ ಬೆಳೆಯಲು ನಿಂದೆಲ್ಲ ಕೃಷ್ಣ ಮಲಗಿದ ಮುಚುಕುಂದ ಬಲ್ಲ 20 ನಿಗಮ ನಿಂದ್ಯವ ಮಾಡಿ ಬಗೆಯಿಂದ ತ್ರಿಪುರರ ಚೆದುರೆಯರನು ಒಲಿಸಿದೆನೆ ಭಾಮೆ ಸುಗುಣ ಶರೀರ ಬೌದ್ಧ ನಾನೆ 21 ತ್ರಿಪುರ ಸತಿಯರನೆಲ್ಲ ವಶಮಾಡಿದಂಥ ಶೂರ ವಸನರಹಿತಾಗಿ ತಿರುಗೋದÀಲ್ಲ ಕೃಷ್ಣ ಶಶಿಮುಖಿಯರು ನಗುವರೆಲ್ಲ 22 ಚೆಲುವ ತುರುಗನೇರಿ ಹೊಳೆವೋ ಕತ್ತಿಯ ಶೂರ ಖಳರ ಮರ್ದನ ಮಾಡುವೆನೆ ಭಾಮೆ ಥಳಥಳಿಸುವ ಕಲ್ಕ್ಯ ನಾನೆ23 ಕಲಿಯ ಸಂಹಾರ ಕೇಳೊ ನಿನ್ನ ಕತ್ತಿಗಂಜುವರ್ಯಾರೊ ಕಟಿಪಿಟ್ಯೆನ್ನೊಳು ತರವಲ್ಲ ಕೃಷ್ಣ ಕಲಿಗಳೆನ್ನರಮನೆಯೊಳಿಲ್ಲ 24 ಜಾಂಬವಂತನ್ನ ಗೆದ್ದು ತಂದೆ <
--------------
ಹರಪನಹಳ್ಳಿಭೀಮವ್ವ