ಒಟ್ಟು 5542 ಕಡೆಗಳಲ್ಲಿ , 129 ದಾಸರು , 3523 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಮಿಸುವೆನು ಭುವನೇಂದ್ರ ಗುರುರಾಯರ ಅಮಿತ ಮಹಿಮಗೆ ಅಹೋರಾತ್ರಿಯಲಿ ಬಿಡದೆ ಪ ಸಿದ್ಧಾರ್ಧಿ ನಾಮ ಸಂವತ್ಸರದ ವೈಶಾಖ ಶುದ್ಧೇತರ ಪಕ್ಷ ಸಪ್ತಮಿಯಲಿ ವಿದ್ವತ್ಸಭಾ ಮಧ್ಯದಲಿ ರಾಮವ್ಯಾಸರ ಪದದ್ವಯವನೈದಿದ ಮಹಾಮಹಿಮರನ ಕಂಡು 1 ರಾಜವಳ್ಳಿ ಎಂಬ ಪುರದಿ ಕರುಣದಿ ಪಾರಿ ವ್ರಾಜಕಾಚಾರ್ಯ ವರವತಂಸ ಪಾದ ರಾಜೀವಯುಗಳ ಧೇನಿಸುತಿಪ್ಪರಿಗೆ ಕಲ್ಪ ಭೂಜದಂದದಿ ಬೇಡಿದಿಷ್ಟಾರ್ಥ ಕೊಡುವರಿಗೆ 2 ಶ್ರೀ ತುಂಗ ಭದ್ರಾ ತರಂಗಿಣೀ ತೀರದಲಿ ಪಾದ ಮೂಲದಲ್ಲಿ ಪ್ರೀತಿ ಪೂರ್ವಕವಾಗಿ ವಾಸವಾದರು ಜಗ ನ್ನಾಥ ವಿಠಲನ ಕಾರುಣ್ಯಪಾತ್ರರ ಕಂಡು 3
--------------
ಜಗನ್ನಾಥದಾಸರು
ನಮೋ ನಮೋ ಕಮಲಾಲಯೆ ಸರ್ವೋ ತ್ತುಮ ನಾರಾಯಣನಂಕದ್ವಯ ಸಮುಪಸ್ಥಿತೆ ಸುಂದರ ಮದಗಜ ಗಮನೆ ಗುಣಪೂರ್ಣೆ ಶೋಭಾನೆ ಪ ಕಂಗಳ ಕುಡಿನೋಟದಿ ಕಂಜಜ ಗಂಗಾಧರ ಸುರಮುಖ ಸುಜನರ ಇಂಗಿತ ಫಲ ಪೂರೈಸಿಕೊಡುವ ಮಂಗಳ ಸುಚರಿತ್ರೆ ಭೃಂಗಾಳಿಗಳಂದದಿ ಸೊಗಯಿಪ ಮುಂಗುರುಳಿಂದೊಪ್ಪುವ ನಿಜಪತಿ ಸಂಗಡ ಬಾ ಹಸಿಯ ಜಗಲೀಗೆ 1 ಜಲಜಾಕ್ಷನ ವಿಮಲಾಂಗದಿ ಪ್ರತಿ ಫಲಿಸಿದ ರೂಪಗಳನೆ ನೋಡುತ ಪುಳಕೋತ್ಸವದಿಂದಲಿ ಪಾಡುತ ಹೊಲಬು ಗಾಣದಲೆ ತಲೆದೂಗುತ ಮಿಗೆ ಸಂತೋಷದಿ ಗಳರವದಿಂ ಪಾಡುತ ಶ್ರೀ ಭೂಲಲನೆ ಬಾ ಹಸಿಯ ಜಗಲೀಗೆ 2 ಪ್ರತಿಫಲಿಸಿಹ ರೂಪಗಳೆನ್ನವು ಕತಿಪಯರೂಪಗಳೆನಗಿಂದಲಿ ಅತಿಶಯವೆ ತೋರುತಲಿಪ್ಪವು ಪ್ರತಿ ಪ್ರತಿಕ್ಷಣದಿ ಶ್ರುತಿ ಪ್ರತೀಕನು ದಯದಿಂದೆನ ಗ್ಹಿತದಿಂದಲಿ ತೋರಿದನೆನುತಲಿ ನತಿಸುತ ನಗುತಿಪ್ಪ ಲಕ್ಷ್ಮೀ ಹಸಿಗೇಳು 3 ಆ ಬ್ರಹ್ಮಾಂಡಗಳೊಳ ಹೊರ ಗುಪಮರು ನಿನಗಿಲ್ಲವಾಗಲು ಅಪರಾಜಿತನಮಲ ಸುರೂಪ ಗಳಪರೋಕ್ಷಣದಿ ಕಾಂಬ ಚಪಲಾಂಬಕ ಕೃಪಣರ ಸಲಹಲು ಸ್ವಪತಿಯ ಶಿಪಿವರನಂಸಗೆ ಸುಫಲದೆ ಬಾಹಸಿಯ ಜಗುಲೀಗೆ 4 ವೀತಭಯನ ವಕ್ಷಸ್ಥಳವೆ ಪು ರಾತನ ಮನೆಯೆನಿಪುದು ಅವಿನಾ ಭುತರು ನೀವಿರ್ವರು ಅಮೃತಾ ಜಾತರು ಎಂದೆಂದೂ ಭೌತಿಕ ಮಂದಿರದೊಳು ನೆಲೆಸಿ ಪು ನೀತರ ಮಾಳ್ಪುದೆಮ್ಮ ಜಗ ನ್ನಾಥ ವಿಠಲನರ್ಧಾಂಗಿ ಜಗ ನ್ಮಾತೆ ವಿಖ್ಯಾತೆ ಬಾಹಸಿಯ ಜಗುಲೀಗೆ 5
--------------
ಜಗನ್ನಾಥದಾಸರು
ನಮೋ ನಮೋ ಗುರು ಸುಶೀಲೇಂದ್ರ | ಶ್ರೀ ಸಂ ಯಮಿ ಕುಲೋತ್ತಮ ಮಧ್ವಮತ ಸುಮತಾಬ್ಧಿ ಚಂದ್ರ ಪ ಶ್ರೀ ಸುವೃತೀಂದ್ರ ಕುಮಾರ | ಜಿತ ಪೂತರ ಭಾಸುರ ಚರಿತ ಉದಾರ ಭೂಸುರ ಸೇವಿತಧೀರ | ಮೂಲ ದಾಶರಥಿಯ ಪಾದಾಂಭೋಜಭಾರ 1 ಶ್ರೀರಾಘವೇಂದ್ರ ಪ್ರಿಯ ಗುರುವರದ ತೀರ ಶೋಭಿಪರಿತ್ತಿ ಸುಕ್ಷೇತ್ರ ನಿಲಯ ಭವ | ದೂರ ದಯಾಂಬುಧಿ ದ್ವಿಜಕುಲ ಪರಿಯ 2 ಶಮಸುಂದರ ದಾಸಾಗ್ರಣಿಯೆ | ಬುಧ ಸ್ತೋಮವಂದಿತ ಪದನತ ಸುರಮಣಿಯೆ ಈ ಮಹಿಯೊಳು ನಿನಗೆಣೆಯೆ | ಮಮ ಸ್ವಾಮಿ ಕುಮತ ಕುಲತಮಗೆ ದ್ಯುಮಣಿಯೆ 3
--------------
ಶಾಮಸುಂದರ ವಿಠಲ
ನಮೋ ನಮೋ ನಮೋ ಎಂಬೆ ನಿನಗೆ ಸ್ವಾಮಿ ರಘುರಾಮಾ| ಶಮಲ ಹಾರಿಸಿ ವಿಮಲ ಮತಿಯ ಕೊಡುವ ಪುಣ್ಯ ನಾಮ ಪ ಮುನ್ನ ಮಾಡಿದ ಕೋಟಿ ಜನುಮದ ಪುಣ್ಯ ಒದಗಿತೆಂದು| ಕಮಲ ಕಂಡೆ ಧನ್ಯನಾದೆನಿಂದು 1 ಪರಮ ಪುರುಷನೆಂಬುದರಿಯ ಮಾಡಿದಪರಾಧವ ಕರುಣದಿಂದ ಕ್ಷಮಿಸಿ ಹೊರಿಯಬೇಕು ಪೂರ್ಣಬೋಧಾ 2 ಇಂದು ಮೊರೆಯಹೊಕ್ಕೆ ಸಲಹು ನಿಮ್ಮ ಸೇವೆಯಿಂದು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನಮೋ ನಮೋ ನರಹರಿಪ್ರಿಯಾನರಸಿಂಹಾರ್ಯ ಪಗಲಗಲಿ ಶ್ರೀ ನರಸಿಂಹಾರ್ಯ ಕರುಣದಿಪೊರೆಸದ್ಗುರುವರ್ಯಾ ಶರಣು ಬಂದೆನು ತಂದೆಮಾಡೊ ದಯಾ ತಂದೆ ಮಾಡೊ ದಯಾಪುನರ್ಜನ್ಮ'ತ್ತ ಮಹಾರಾಯಾ 1ನಿಮ್ಮ ಚರಿತ್ರವೆನಗೆ ಸ್ಪೂರ್ತಿನಿಮ್ಮ ಸ್ಮರಣೆ ಜ್ಞಾನದ ಜ್ಯೋತಿನಿಮ್ಮ ಅನುಗ್ರಹವೆ ಕೀರ್ತಿನಿಮ್ಮ ಪಾದವೇ ಎನಗೆ ಗತಿ 2ನಿ'್ಮುಂದಲೇ ಗಾಲವ ಕ್ಷೇತ್ರನಿಮ್ಮ ಮನೆಯು ಸದಾ ಅನ್ನಛತ್ರನಿಮ್ಮ ಆಶ್ರಯವೇ ಜ್ಞಾನ ಸತ್ರನಿಮ್ಮ ಸಂಚಾರವೇ ಮಹಾಯಾತ್ರಾ 3ಅಷ್ಟೋತ್ರ ಶತಕುಂಭ ಸ್ನಾನಾ ನಿತ್ಯ ಅಷ್ಟೋತ್ರರ ಶತ ಕುಂಭಸ್ನಾನಾಕೃಷ್ಣಾ ಭಾಗೀರಥಿ ನನ್ನಿಧಾನಾ ಸೀತಾರಾಮ ಪ್ರತಿಮಾರ್ಚನಾನಿತ್ಯ ರಾತ್ರಿ ಸುಭೋಜನಾ 4ಮುದ್ಗಲಾರ್ಯ ಬಾಬಾರ್ಯನಮೋ ಸದ್ಗುರು ನರಸಿಂಹಾರ್ಯ ನಮೋಸದ್ಭಕ್ತಪ್ರಿಯ ಭೂಪತಿ'ಠ್ಠಲ ಗಲಗಲಿ ನರಹರಿತೊರ'ಯ ನರಹರಿ ಶೂರ್ಪಾಲಿಯ ನರಹರಿ ನಮೋ ನಮೋ 5
--------------
ಭೂಪತಿ ವಿಠಲರು
ನಮೋ ನಮೋ ರಾಮ | ರಘೂತ್ತಮ ಪ ನಮೋ ನಮೋ ಶಿವ | ಮನಾಭಿರಾಮಾ ನಮೋ ನಮೋ ಭವವಿನಾಶ ನಾಮಾ ಅ.ಪ ಸತ್ಯಕಾಮ ರವಿವಂಶಲಲಾಮ ಸತ್ಯಪೂರ್ಣ ಭುವನೇಶ್ವರ ರಾಮ ಭೃತ್ಯಪಾಲ ಮಾಂಗಿರಿ ರಾಮ 1
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ನಮೋ ನಮೋ ವೆಂಕಟೇಶ ಪ ವೈಕುಂಠ ಮಂದಿರವನು ಬಿಟ್ಟು ಶೇಷಾಚಲದಲಿ ಬೇಕೆಂದು ಮಾಡಿದೆ ನೆಲೆವಾಸಾ 1 ಶ್ರೀದೇವಿ ಸಂಗಡಸ್ವಾಮಿ ಪುಷ್ಕರಣಿ ತೀರದಲಿ ಮೋದದಿ ಕ್ರೀಡಿಸುವ ವಿಲಾಸ 2 ಧರೆಯೊಳು ಪೂರಿಪೆ ಮನದಾಶಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನಮೋ ನಮೋ ಶ್ರೀ ಮಧ್ವಾಚಾರ್ಯ ಆರ್ಯಾ ಪ ಭೃಗು ಕುಲೋತ್ತಮ ರಾಮ ಭೂಸುರರಿಗೆ ಸರ್ವ ಜಗವೆಲ್ಲ ಧಾರಿಯನು ಯೆರದು ಸಂಹ್ಯಾ ನಗದಲ್ಲಿ ನಿಂದು ಸಮುದ್ರನ್ನ ಹಿಂದಕ್ಕೆ ತೆಗಿಸಿ ಈ ಭೂಮಿಯನು ಸಾಧಿಸಿದನು1 ಮೂರ್ತಿ ಅಲ್ಲಿಗಲ್ಲಿಗೆ ಕ್ಷೇತ್ರ ಗತಿ ತಪ್ಪಿದಂತೆ ನಿರ್ಮಾಣ ಮಾಡಿ ಸತಿಪತಿಯ ಉದ್ಧರಿಸಿ ಬರುತ ಕಂಡನು ಉ ನ್ನತವಾದ ಪರ್ವತವು ಯೋಜನವಿರೆ 2 ಬೆರಗಾಗಿ ಪರಶುರಾಮನು ಬಂದು ಈ ಗಿರಿಯಲ್ಲಿ ನಿಂದು ಅಗ್ರಭಾಗವೈದೆ ತರಹರಿಸಲಾರದೇ ಭೂಮಿಗಿಳಿಯಿತು ಅದ್ರಿ ನಿರೀಕ್ಷಿಸಿ ಸುಜನರು ಇದ್ದನಿತು3 ಸಿರಿರೂಪ ದುರ್ಗಾನಾಮಕಳಾದ ದೇವಿಯನು ಕರದು ಈ ಸ್ಥಾನದಲಿ ಇರ ಹೇಳಿದಾ ಅರವು ಮಾಡದೆ ಮುಂದೆ ಕಲಿಯುಗದಲಿ ನೆರದು ದುರುಳರಾತಿಯರ ಸಂಹರಿಸುಯೆಂದು 4 ಅನಿತರೊಳಾಕಾಶದಲಿ ಜಯ ಜಯವೆಂದು ಅನಿಮಿಷರು ಕೊಂಡಾಡಿ ನಗುತ ದಿವ್ಯ ಮಣಿಮಯ ವಿಮಾನದಿಂದಾ ಗಿರಿಗೆ ವೇಗದಿ ಸು ಮ್ಮನರಾಗಿ ಬಂದು ತುತಿಸಿದರು ಹರಿಯಾ 5 ಅಂದಿನಾರಭ್ಯವಾಗಿ ಇದೇ ವಿಮಾನಗಿರಿ ಯೆಂದು ಕರೆಸಿತು ಶ್ರುತಿ ಯುಕ್ತಿಯಲ್ಲಿ ಎಂದೆಂದಿಗೆ ಇದನೆ ನೋಡಿದವರಿಗೆ ದೋಷ ಗಂಧವಾದರು ಇಲ್ಲಾ ಇಲ್ಲ ಇಲ್ಲಾ6 ಈ ಮಹಿಮೆಯನು ಕೇಳಿ ಧರ್ಮ ತಪವನು ಮಾಡಿ ಸೋಮಾರ್ಕ ಪ್ರಭಯಂತೆ ಕೀರ್ತಿಯನು ಪಸರಿಸಿ ಪಾಮರರ ಉದ್ಧರಿಸಬೇಕು ಯೆಂದು7 ಪರಿ ಶ್ರೀಹರಿಯ ಧ್ಯಾನವನು ಮಾಡಲು ಶ್ರೀಪತಿ ವರವಿತ್ತ ಮುಂದೆ ಮಹ ಪಾಪಿ ಪುಟ್ಟುವನು ಅವನಗೋಸುಗ ವಾಯು ತಾ ಪರಮ ಪ್ರೀತಿಯಲಿ ಜನಿಸುವನು 8 ಅಂದ ಮಾತಿಗೆ ಯಮನು ಬಹುಕಾಲದಲಿದ್ದ ಛಂದದಿಂದದಿ ಪೋದ ತನ್ನ ಪುರಕೆ ಇಂದಿರಾಪತಿ ನೇಮಿಸಿದ ಪರಿಯಂತೆ ಆ ನಂದತೀರ್ಥರಾಗಿ ಜನಿಸಿದರು 9 ಏನು ಪೇಳಲಿ ಪುಣ್ಯ ಚರಿತಯನು ಚನ್ನಾಗಿ ಜ್ಞಾನದಲಿ ಅಧಿಕಾರಾಗಿ ಇಷ್ಟಾನಿಷ್ಟ ಪುಣ್ಯ ಮಾನದಲಿ ಕೊಂಡಾಡಿ ಸುಖಿಪರಲ್ಲಿ10 ಹುರಳಿ ಗುಗ್ಗರಿ ಮೆದ್ದ ಅದ್ಧುತವ ಕೇಳಿದರೆ ಉರಳಿ ಹೋಗುವದು ಜನ್ಮಾಂತರದ ದುಷ್ಕರ್ಮ ಮರಳಿ ಬಲಿ ಬಾಲವನು ಪಿಡಿದದು ನೆನಸಿದರೆ ಸುರರು ಮುಕ್ತಿಯಿನಿತ್ತು 11 ಧರಣಿಧರದಿಂದ ಧುಮುಕಿದ ಪಾದಯುಗ ನೋಡೆ ಎರಡೊಂದು ಏಳು ಕುಲತೃಪ್ತರಹರೊ ಅರೆ ಮ್ಯಾಲೆ ಸಾಲವನು ತಿದ್ದಿದಾ ವಾರ್ತಿ ಕೇಳಿ ಎರಡೊಂದು ಋಣದಿಂದ ಕಡೆಗಾಗುವ 12 ತಲೆಕೆಳಕಾಗಿ ಬೆಳೆದಾ ವೃಕ್ಷವನು ನೋಡಿ ಬಲಿವನು ಸುರದ್ರುಮದಂತೆ ರಂಗ ಛಲದಿಂದ ಸರ್ಪನ ವರಸಿದ ಸ್ಥಳ ಕಾಣೆ ಬಲು ವಿಷಗಳು ಪೋಗಿ ನಿರ್ಮಲಹರೋ 13 ಧೂಳಿ ಅಕ್ಷರ ಬರೆದ ಪ್ರದೇಶ ನೋಡಲು ವಾಲಯಾ ಶುಭವಿದ್ಯ ಫಲಿಸುವದು ಲೀಲೆಯಿಂದ ಗ್ರಂಥ ಅಭ್ಯಾಸಕೆ ಪೋಗಿ ಬರುವ ಶೀಲತೆಯು ಕೇಳೆ ಮನೋ ವಾಯುವೇಗ 14 ಬುತ್ತಿಯ ಉಂಡ ಸ್ಥಳವನ್ನು ಕೊಂಡಾಡಲು ತೃಪ್ತನಾಗುವ ಮನುಜ ಮೃಷ್ಟಾನ್ನದಿ ನಿತ್ಯ ಬಾಲಕ್ರೀಡೆ ಆಡಿದ್ದು ಪಾಡಲು ಪುತ್ರೋತ್ಸವಗಳಿಂದ ಬಾಳುತಿಪ್ಪ15 ಚಾಪ ಗದ ಪದುಮ ಎರಡೊಂದು ತೀರ್ಥಗಳು ಇರುತಿಪ್ಪ ವಾಸುದೇವನೆಂಬೊ ನಾಮಾ ಸರೋವರದಲಿ ಮಿಂದು ಸ್ತೋತ್ರ ಮಾಡಿದ ನರಗೆ ವಿರಜೆಯಲಿ ಸ್ನಾನ ಸಂದೇಹವಿಲ್ಲ 16 ಜನಿಸಿ ಮೊದಲು ಮಹಾ ಬದರಿಗೆ ಪೋದಾರಭ್ಯ ಎಣಿಕೆ ಇಲ್ಲದೆ ಚರಿತೆ ಅನುದಿನದಲಿ ಗುಣಿಸಿ ಗುಣದಲಿ ತಿಳಿದು ಕೀರ್ತನೆಯನೆಸಗಿದಾ ಮನುಜರಿಗೆ ಸತ್ಕೀರ್ತಿ ಬರುವುದಯ್ಯಾ 17 ಮಧ್ವ ಮಧ್ವ ಎಂಬೋ ನಾಮವನು ನುಡಿದರೆ ಬದ್ಧವಾಗಿದ್ದ ಭವಾಬ್ಧಿಯಿಂದ ಎದ್ದು ಕಡಿಗೆ ಬಿದ್ದು ಸಂಚಿತಾಗಾಮಿಯಿಂದ ಗೆದ್ದು ಚರ್ಮ ದೇಹದಿಂದ ನಲಿವ 18 ಶ್ರೀ ಪೂರ್ಣಬೋಧ ಗುರುಶೇಖರ ಸುಗುಣಧಾಮ ಆಪನ್ನ ಪರಿಪಾಲ ಅಮೃತಫಲದ ವ್ಯಾಪುತ ನಾನಾ ಸ್ಥಾನ ಹನುಮ ಭೀಮ ಸರ್ವ ರೂಪಾತ್ಮಕ ಪ್ರಾಣ ಭಾರತೀಶ19 ಕೇಳಿ ಹರುಷಿತನಾಗಿ ಬಂದ ವೈಭವದಂತೆ ಕಾಲ ಹಿಂಗಳಿಯದೇ ನಿತ್ಯದಲ್ಲಿ ಲೀಲೆಯಲಿ ವಾಸವಾಗಿರಲೆಂದು ಅಂದು ಪೇಳಲಾ ಮೌಳಿಯನು ತೂಗಿ ಸರ್ವರು ನಿಂತರು20 ಪುಂಜಕಾಸ್ಥಳ ಬಂದು ತಪವು ಮಾಡಲು ಕ್ಷೇತ್ರ ರಂಜನವಾಯಿತು ಇದೇ ನಾಮದಲ್ಲಿ ಕುಂಜರ ವರದ ನಮ್ಮ ವಿಜಯವಿಠ್ಠಲನಂಘ್ರಿ ಕಂಜವನು ಭಜಿತ ಗುರುರಾಜ ಜಯತು 21
--------------
ವಿಜಯದಾಸ
ನಮೋ ನಮೋ ಶ್ರೀ ರಾಘವೇಂದ್ರ | ಸದ್ಗುಣ ಸಾಂದ್ರ ಕಮಲ ನಾಭನ ದಾಸ ಕಮಲಾಪ್ತ ಭಾಸಾ ಪ ಶೇಷ ಜನರಿಗಳಿಗಿಷ್ಟ ಸಲ್ಲಿಸುವ ವಿಶಿಷ್ಟಾ ಭಾಸುರ ಚರಿತನೆ ಭಜಿಸುವೆನು ಅನವರತ 1 ಭೂರಿ ಬಲತರತರ್ಕ ವಾದಿಶೈಲ ಕುಲಶ ವರಹಸುತೆ ವಾಸಾ ಅಘ ಜೀರ್ಣ ಮಾಡು ಗುರುವರ ಪೂರ್ಣ ಭೂರಿ ಪ್ರಖ್ಯಾತ 2 ನತಜನಾಶ್ರಯ ಪ್ರೀಯ ನೆರೆ ನಂಬಿದೆನೋ ಮಾಯ ಕದಳಿ ಗಜೇಂದ್ರ ವಿಬುಧಾಬ್ದಿ ಚಂದ್ರ ಕ್ರತು ಭುಕು ಜಗನ್ನಾಥ ವಿಠಲನ ನಿಜದೂತ ತುತಿಸಲಾಪೆನೆ ನಿನ್ನ ಯತಿಶಿರೋರನ್ನ 3
--------------
ಜಗನ್ನಾಥದಾಸರು
ನಮೋ ನಮೋ ಹನುಮ | ನಮೋ ನಮೋ ಭೀಮ| ನಮೋ ನಮೋ ಮಧ್ವರಾಯ ಸುಪ್ರಿಯ || ಅಂಬುಧಿಯ ಪೋರ್ದು | ನಿಜ ಡಿಂಭದೊಳ್ ಬೆರೆದು | ಚೆರ್ಬಿಂಬಳಂ ತರಿದು | ದಶಬಿಂಬನಾಪುರ ಪೊಕ್ಕು | ಗಂಟುಗಳ ದಾಟಿ | ಮೂರ್ಜಂಬಳಂತೋರಿ ಎಲ್ಲಂಬಳಂ ನಳಿದು ಅಂಬುಜಾಕ್ಷೆಗೆ ಮುದ್ರೆಯಿತ್ತ ಹನುಮಂತ 1 ಸತಿಯೆ ಹಂಬತ್ತಿದ ನತಿಗಳೇದು ಕೃತಕೋಪ ವೃತನಾಗಿ ಮಶತಂತುರದೆ ಹತಿಯೆ ಮೋಹತಿಯೆ | ಸಂಪತಿಯ ತೊಲಗಿ ಅಗತರಾಗಿಗತಿಯಲಿರುತಿಹ | ಮತಿಹೀನ ಬಕನಕೊಂದ ಭೀಮನಿಸ್ಸೀಮ 2 ಮಧ್ಯಗೇಹನುದರದಿಂದುದ್ಭವಿಸಿ ಜಗದ್ಭಲ ಭರಿತರಾಗಿ ಶಾಸ್ತ್ರ ಶುದ್ಧವನೆ ಕೈ ಕೊಂಡು ಮಧ್ವ ಮತದಲ್ಲಿ ಬಲು ಶುದ್ಧನಾಗಿ ಅದ್ವೈತಗಳ ನಳಿದು ಸದ್ವೈತ ಮಾರ್ಗದೊಳ್ | ಪೂರ್ಣಗುಣತೇಜ3
--------------
ಹೆನ್ನೆರಂಗದಾಸರು
ನಮ್ಮ ಕುಲದೈವೀತ ಬೊಮ್ಮನ ಪಡೆದಾತ ಸಾಮಗಾಯನ ಪ್ರೀತ ಸ್ವಾಮಿನೀತ ಧ್ರುವ ವೇದ ಉದ್ಧರನೀತ ಮೇದಿನಿಯ ಪೊತ್ತಾತ ಸಾಧುಜನ ವಂದಿತ ಸದ್ವಸ್ತುನೀತ 1 ಧಾರುಣಿಯ ಗೆದ್ದಾತ ತರಳಗೊಲಿದಹನೀತ ದಾತ ಕರುಣಿ ಈತ 2 ಮೂರು ಪಾದಳಿದಾತ ಪರಶುಧರನಹುದೀತ ಸುರಜನರ ಪೂಜಿತ ಸರ್ವೋತ್ಮನೀತ 3 ಪವನಸುತಗೊಲಿದಾತ ಮಾವನ ಮಡುಹಿದಾತ ಭುವನತ್ರಯಲೀತ ದೇವನೀತ 4 ಬೆತ್ತಲೆಯು ಸುಳಿದಾತ ಉತ್ತಮ ಹಯವನೇರಿದಾತ ಭಕ್ತರಿಗೆ ಹೊರೆವಾತ ಶಕ್ತನೀತ 5 ಅಣುರೇಣುದೊಳೀತ ಅನುಕೂಲವಾದಾತ ಆನಂದೋ ಬ್ರಹ್ಮ ಅನಂತನೀತ 6 ಮಹಾಮಹಿಮನಹುದೀತ ಬಾಹ್ಯಾಂತ್ರಪೂರಿತ ಮಹಿಪತಿಯ ಸಾಕ್ಷಾತ ವಸ್ತುನೀತ 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನಮ್ಮ ಗುರುರಾಯನೇ | ಸ್ಮರಿಸಿದಾಗಲಿಹನೇ ಪ ಮನುಜನಾಗಿ ಬಂದನೇ | ಮತ್ರ್ಯದೊಳು ನಿಂದನೇ | ಜನನ ಮರಣ ಸಂದನೇ | ಜರಿಸಿ ಕೊಟ್ಟಾ ನಂದನೇ1 ಚಿತ್ತದ ಮೈಲಿಗೆ ಕಳಿಸಿದನೇ | ಚಿದ್ಘನಾಮೃತ ಗರದನೇ | ಸತ್ಯ ವಾಕ್ಯಾ ಬಿತ್ತಿದನೇ ಸತ್ವದ ಹೊಲ ಬೆಳಸಿದನೇ2 ಮಹಿಪತಿ ನಂದನ ಪ್ರಾಣನೇ | ಮಹಾಪ್ರಜ್ಞಾಪೂರ್ಣನೇ | ಇಹಪರ ಕೊಡುವ ತ್ರಾಣನೇ | ಮಹಿಮೆಗೆ ಎಣೆಗಾಣೆನೇ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನಮ್ಮಪ್ಪನ ಕಂಡೆ ಅಪಾರ ಮಹಿಮೆಯುಳ್ಳನ ಧ್ರುವ ಅಪ್ಪನ ಕಂಡೆನಗೆ ತಾ ಅಪಾರ ಸಂತೋಷವಾಯಿತು ಅಪ್ಪಿಕೊಂಬ್ಹಾಗೆ ಎನಗೆ ಅರ್ಪಿಸಿ ಪ್ರಾಣವ 1 ತುಂಬಿ ತುಳುಕಿತಾನಂದ ಗುಂಭಗುರುತ ಕಂಡಿನ್ನು ಕುಂಭಿನಿಯೊಳಗೆ ಪೂರ್ಣ ಅಂಬುಜಾಕ್ಷನ 2 ಗುಪ್ತಲಿದ್ದ ಧನ ತಾ ಪ್ರಾಪ್ತ ವ್ಯಾನಂತವಾಯಿತು ತಪ್ಪದೆ ಮಹಿಪತಿಗೆ ತೃಪ್ತಿ ಹೊಂದಿತು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನಮ್ಮಯ್ಯ ಗುರು ನಾ ನಿಮ್ಮ ಮನಿಯ ಶ್ವಾನ ಹೆಮ್ಮೆಯೆಂಬ ಹಲ್ಲು ಮುರಿದೆ ಪೂರ್ಣ ಸುಮ್ಮನಿರುವೆ ಕಂಡು ಸಂತತ ಚರಣ ಒಮ್ಮನದಿಂದೆ ತೃಪ್ತ್ಯಾಯಿತು ಜೀವನ 1 ಸದ್ಭೋಧದನ್ನ ನೀಡಲು ಓಡಿಬಂದೆ ಸದ್ಗುರುವೆ ಒಡೆಯ ನೀನಹುದೆಂದೆ ಬಿದ್ದುಕೊಂಡಿಹೆ ನಾ ನಿಮ್ಮ ಮನೆಯ ಮುಂದೆ ಬುದ್ಧಿವಂತರು ಬೆನ್ನಟ್ಟಿ ಹೋಗೆ ಹಿಂದೆ 2 ಹಳಿಯೆಂದರೆ ನಾ ಹೋಗೆ ಎಂದೆಂದಿಗೂ ಬಿಟ್ಟು ಗುಹ್ಯ ವಾಕ್ಯದ ಹೆಜ್ಜೆ ಮೆಟ್ಟು ಸುಳವುದೋರಲು ನಿಮ್ಮ ಸದ್ಗತಿ ಮುಕ್ತಿಯುಂಟು ತಿಳದ್ಹಾಕಿಹನಾ ನಿಮ್ಮ ಪಾದರಕ್ಷಕೆ ಗಂಟು 3 ಬಾಗಿಲಕಾಯಿಕೊಂಡು ಬಿದ್ದಿಹ್ಯ ನಿಮ್ಮ ಶ್ವಾನ ಹಗಲಿರುಳು ನಾ ನಿಮ್ಮ ಬೊಗುಳವೆ ನಿಜಗುಣ ಜಾಗಿಸುವದೆನ್ನೊಳು ನಮ್ಮಯ್ಯ ನಿಮ್ಮ ಖೂನ ಸುಗುಮದಿಂದ ದೊರೆಯಿತು ನಿಜ ಸ್ಥಾನ 4 ಹಿಡಿದು ಕಚ್ಚಿಹೆ ನಿಮ್ಮ ಪಾದರಕ್ಷ ಸಂಪೂರ್ಣ ಬಿಡೆ ಎಂದೆಂದು ನಾ ಹೋದರೆ ಜೀವ ಪ್ರಾಣ ಪಿಡಿದು ಮಾಡುವೆ ನಾ ಜತನ ಮೂಢ ಮಹಿಪತಿಗಿದೆ ಸುಖಸಾಧನ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನರಜನ್ಮವನು ಕೊಟ್ಟು ಸಲಹಿದೆ ಯೆನ್ನನು ಕೊರತೆಯೇನಿಲ್ಲವೋ ಗೋವಿಂದಾ ಪ ಉರುತರ ಜನ್ಮವ ಸುರುಚಿರಾಂಗಗಳನ್ನು ಅರಿವು ಇಂದ್ರಿಯಗಳ ಸ್ಮರಣೆಯಿಂ ಕೂಡಿದ ಅ.ಪ ನಿನ್ನಧ್ಯಾನವ ಗೈವವೊಲೆನ್ನ ಈ ರಸನೆಯು ನಿನ್ನ ಮೂರ್ತಿಯ ನೋಡಲಿ ಈ ನೇತ್ರಾ ನಿನ್ನ ಪೂಜಿಸೆ ಹಸ್ತ ನಿನ್ನ ಚರಿತೆಗೆ ತರ್ಕಾ ನಿನ್ನ ನಮಿಸಲು ಶಿರವು ನಿನ್ನಾಲಯಕೆ ಕಾಲು 1 ನಿನ್ನ ಪಾದದ ತುಳಸಿಯನ್ನು ಘ್ರಾಣಿಸ ಇನ್ನೇನು ಬೇಡವಯ್ಯ ಸನ್ನುತಾಂಗ ಗೋಪಾಲ 2 ಧನಕನಕಾಂಬರ [ವಸ]ನದ ಧರ್ಮ ಮೋಕ್ಷದೊ ಳಿನಿತಾಸೆಯೆನಗಿಲ್ಲ ಕೇಳಯ್ಯ ಜನುಮ ಜನುಮದೆ ನಿನ್ನ ಘನಪುಣ್ಯ ನಾಮವ ನೆನೆವ ಭಕ್ತಿಯು ಮಾತ್ರ ಮನದೆ ನೆಲೆಗೊಳಿಸಯ್ಯ 3 ದೇವದೇವನೆ ನಿನ್ನ ಸೇವಕರಿಗೆ ಯೆನ್ನ ಸೇವಕನೆನಿಸದೆ ಬಿಡಬೇಡಾ ದಾಸರಸೇವಿಸಲೆನ್ನ ಜೀವ ತುಡಿಯುವುದೊ ವಿಸಲೆ ದಾಸರದಾಸ ಶ್ರೀ ಮಾಂಗಿರಿಯರಸ 4
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್