ಒಟ್ಟು 9384 ಕಡೆಗಳಲ್ಲಿ , 131 ದಾಸರು , 5285 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕೈಯ ತೋರೋ ರಂಗ ಕೈಯ ತೋರೋ ಪ. ಕೈಯ ತೋರೋ ಕರುಣೆಗಳರಸನೆ ಅ.ಪ. ಶರಧಿ ಮಥನದಿ ದೇವಾಸುರರಿಗೆ ಮೋಹಿನಿಯೋಲ್ ಸುರರಿಗೆ ಸುಧೆಯಿತ್ತು ಸುರರಿಗಾಸರೆಯನಿತ್ತಾ 1 ಶಿರಮಂ ಸದ್ಗತಿವೊಂದಿಸಿ ಹರನಂ ನಲವಡಿಸಿದ 2 ಹರನ ವರದಿ ಭಸ್ಮಾಸುರ ಗರ್ವಿತನಾಗಿ [ಆ] ಹರನಂ ಬೆನ್ನಟ್ಟಿ ಬರೆ ದುರುಳನ ದಂಡಿಸಿದಾ 3 ತರಳಧ್ರುವ ತಾಯ ಬಿರುನುಡಿಗೆ ಮನನೊಂದು ಶರಣೆನೆ ಮೈದೋರಿ ತರಳನ ಮೈದಡಹಿದ4 ಕಂದ ಪ್ರಹ್ಲಾದನ ತಂದೆಯುಗ್ರದಿ ಜಡಿಯೆ ಕಂಬದಿಂ ಬಂದು ಖಳನ ಕರುಳನು ಕಿತ್ತೆಸೆದಾ 5 ಮೊಸಳೆ ಬಾಯೊಳು ಸಿಕ್ಕಿ ಬಸವಳಿದು ಬಾಯ್ಬಿಡುತಿರೆ ಎಸೆದ ಚಕ್ರದಿ ಸೀಳಿ ನಕ್ರನ ಕರಿಯನುದ್ಧರಿಸಿದ 6 ಚಕ್ರಧರ ರುಕ್ಮಿಣಿಯ ಕೈಪಿಡಿದ7 ತರುಣಿಯಭಿಮಾನವ ನೆರೆಕಾಯ್ದು ನರನಿಗೆ ವರಸಾರಥಿಯಾಗಿ ತೇರನೆ ನಡೆಸಿದ 8 ವರಶೇಷಗಿರಿಯಲ್ಲಿ ಸ್ಥಿರವಾಗಿ ಶರಣರ ಕರೆದಾದರಿಸಿ ವರಗಳ ಕೊಡುತಿಪ್ಪ 9
--------------
ನಂಜನಗೂಡು ತಿರುಮಲಾಂಬಾ
ಕೈಯ ಬಿಡುವರೇ ಕೃಷ್ಣ ಕೈಯ ಬಿಡುವರೇ ಪ ಹೇಯ ವಿಷಯದಲ್ಲೆ ಇರಿಸಿ ಜೀಯ ನಿನ್ನ ವಿಷಯ ಮರೆಸಿ ಭವ ಸಮುದ್ರ ಅ.ಪ ಬಿಂಬ ನೀನು ಸಿದ್ಧಪ್ರತಿಬಿಂಬ ನಾನು ಸಿಧ್ದವಿರಲು ತುಂಬಿ ಪರಿವ ನದಿಯ ಮಧ್ಯೆ ಅಂಬಿಗನೆ ತ್ಯಜಸಿದಂತೆ 1 ಕಲಿಯ ಕಾಟ ವಿಷಯ ದಾಟಗೆಲುವ ಶಕ್ತಿ ಎನಗೆ ಉಂಟೆ ಒಲಿಯದಿರಲು ನೀನೆ ದಯದಿ ಸುಲಭದೇವ ನೆನಿಸಿ ಹೀಗೆ 2 ತಾಯಿ ಬಿಡುವಳೇನು ಶಿಶುವ ಮಾಯೆ ಸುಳಿಯಲ್ಲಿರಲು ಸಹಾಯ ಮಾಡದೇನೆ ಬದಿಗ 3 ಶಿಷ್ಟನಲ್ಲ ದುಷ್ಟಕರ್ಮ ಭ್ರಷ್ಟನೆಂಬ ಮಾತು ಮೂಟೆ ಕಟ್ಟಿಪೇಳು ಬಿಟ್ಟು ನಿನ್ನ ಎಷ್ಟು ಕರ್ಮಮಾಡಲಾಪೆ 4 ಹಿಂದಿನವರು ತಾವೆ ಮುಂದೆ ಬಂದರೇನೊ ಬಿಟ್ಟು ನಿನ್ನ ಒಂದು ತೃಣವು ಚಲಿಸದಲ್ಲ ತಂದೆ ಮನವ ಮಾಡದಿರಲು 5 ನಾನು ಎಂದು ಹೀನನಾದೆ ನೀನು ಸ್ವಾಮಿ ನಾನು ಭೃತ್ಯ ಶ್ರೀನಿವಾಸ ಶರಣು ಶರಣು ಜ್ಞಾನವಿತ್ತು ಕಾಯೊ ಮುಂದೆ 6 ನಿನ್ನ ನಂಬಿ ಇರುವೆ “ಶ್ರೀ ಕೃಷ್ಣವಿಠಲ” ಸತ್ಯಸತ್ಯ ಅನ್ಯರನ್ನು ಕಾಣೆನಪ್ಪ ನಿನ್ನ ಚಿತ್ತ ನನ್ನ ಭಾಗ್ಯ 7
--------------
ಕೃಷ್ಣವಿಠಲದಾಸರು
ಕೈಲಾಸನಾಥ ಮಹೇಶ ಈಶ ಶೈಲೇಶ ತನಯೇಶ ಬಾಲಾರ್ಕ ಸಮಭಾಸ ಪ ಶೂಲಾಕ್ಷ ಡಮರುಗಳಿಂದ ಶೋಭಿಪ ಹಸ್ತ ತಾಲಾಂಕನನುಜನೊಳ್ಸಮರಗೈದೀರ್ಪ ಫಾಲಾಕ್ಷದಿಂದಲಿ ಕಾಮನ ದಹಿಸಿರ್ಪ ಶೂಲಿಯ ಮಹಿಮೆಯನೇನು ಬಣ್ಣಿಸಲಿ 1 ವಿಷ್ಣುಭಕ್ತರೊಳಗತಿ ಪ್ರೇಮವಿರುವ ಕೃಷ್ಣ ದ್ವೈಪಾಯನರ ಸುತರಾಗಿ ಶೋಭಿಪ ಸನಕಾದಿಗಳ ಶಿಷ್ಯ ದುರ್ವಾಸರೆನಿಪ 2 ನಂಜುಂಡನೆನಿಸಿರ್ಪ ಪ್ರಖ್ಯಾತ ಮಹಾದೇವ ಕಂಜಜಾತನ ಸುತನೆನಿಸಿರ್ದ ದೇವ ರಾಜೇಶ ಹಯಮುಖ ಭಕ್ತಪುಂಗವ ನೀನು ಅಂಜಲಿ ಬಂಧದಿಂ ನಮಿಪೆ ನಿನ್ನಡಿಗೆ 3
--------------
ವಿಶ್ವೇಂದ್ರತೀರ್ಥ
ಕೈವಲ್ಯ ಇದೇವೆ ದೇವಾಲ್ಯ ತ್ರಾಹಿ ತ್ರಾಹಿ ತ್ರಾಹಿ ಎಂದು ನೋಡಿಮನದ ವೈಶಾಲ್ಯ ಧ್ರುವ ಮಹಾಮಹಿಮೆ ದೋರುವ ಇದೆ ದೇವದ್ವಾರ ಸೋಹ್ಯದೋರಿ ಕುಡುತಿಹ ಪುಣ್ಯ ಸಹಕಾರ ಬಾಹ್ಯಾಂತ್ರ ಭಾಸುತಿಹ ಸದ್ಗುರು ಸಹಕಾರ ದೇಹ ಅಭಿಮಾನ ಬಿಟ್ಟು ಮಾಡಿ ಜಯ ಜಯಕಾರ 1 ಮಾರ್ಗ ಸುಪಥವಿದೆ ನೋಡಿ ಸಾಕ್ಷಾತ್ಕಾರ ವರ್ಗ ಷಡ್ವೆರಿಗಳ ಮಾಡಿ ಬ್ಯಾಗೆ ದೂರ ದೀರ್ಘದಂಡ ಹಾಕಿ ಗುರುವಿಗೆ ನಮಸ್ಕಾರ ಸ್ವರ್ಗ ಸುಖಗೊಳ್ಳಲಿಕೆ ಇದೇವೆ ಸಹಕಾರ 2 ಸ್ವರ್ಗ ಭೂಕೈಲಾಸ ವೈಕುಂಠವಿದೆ ನೋಡೆವೈ ಪಾದ ಪದ್ಮಕೂಡಿ ಯೋಗ ಇದೆ ಸುಗಮ ಸಾಧನವ ಮಾಡಿ ಸುಙÁ್ಞನ ಸೂರೆಗೊಂಡು ಮಹಿಪತಿ ನಿಜಗೂಡಿ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕೈವಲ್ಯ ಮನದ ವೈಶಾಲ್ಯ ಧ್ರುವ ಅದ್ವೈತಾಗಮ್ಯಗೋಚರನದ್ವಿತೀಯ ಅಧ್ಯಾತ್ಮ ವಿದ್ಯದಾಗರ ಸಿದ್ಧರಪ್ರಿಯ ಸದ್ಗತಿ ಸುಖಸಾಗರ ಸದ್ಗುಣಾಲಯ ಬೋಧ ಪೂರ್ಣೋದಯ 1 ಆದಿತ್ಯಕೋಟಿ ಪ್ರಕಾಶ ಸದೋದಿತ ಸಾಧು ಹೃದಯನಿವಾಸ ಭೇದಾತೀತ ಶುದ್ಧಾತ್ಮ ಸುಖಸಂತೋಷ ಸದಾ ಸುಶಾಂತ ಸದಮಲಾನಂದಘೋಷ ಆದಿದೇವ ಸಾಕ್ಷಾತ2 ಕೈವಲ್ಯನಿಧಿ ನಿಶ್ಚಯ ದೇವಾಧಿದೇವ ಅಕ್ಷಯ ಶ್ರೀವಾಸುದೇವ ಭವಾತ್ಮ ಭಜಕಹೃದಯ ಸರ್ವರೊಳಿ ಹ್ಯ ಬಾಹ್ಯಾಂತ್ರ ಭಾಸುತಿಹ್ಯ ಮಹಿಪತಿ ಮನದೈವ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕೈವಲ್ಯ ಕೃಪೆಯ ಸುಜ್ಞಾನ ಸಾಧುಜನರ ನಿಜಸ್ಥಾನ ಅನುದಿನ 1 ವರ್ಣದೋರುವದನೇಕ ತುಂಬಿ ವರಮುನಿಗಳಿಗೆ ಕೌತುಕ ಪರಿಪೂರ್ಣಗಿಹ್ಯ ಮೂರು ಲೋಕ ದೋರುತಿಹದು ಬ್ರಹ್ಮಸುಖ 2 ಎನ್ನೊಳಗಾನಂದ ಭರಿತ ಜನವನದೊಳು ತಾ ಸಾಕ್ಷಾತ ತನ್ನೊಳಗದೆ ತಾ ಸ್ವಹಿತ ಕೈವಲ್ಯನಿಧಿ ಗುರುನಾಥ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕೊಟ್ಟಿಗೋತ್ಸವ ಗೀತೆ ಕೊಟ್ಟೊಗೋತ್ಸವ ನೋಡಿ ಸೃಷ್ಟಿಗೀಶ್ವರನ ಪ. ವಾಸುದೇವನ ಸಹಸ್ರಸ್ತಂಭಮಂಟಪವ ದಾಸರು ಬಂದು ಶೃಂಗಾರವ ಮಾಡಿ ದೇಶದ ಮೇಲುಳ್ಳ ಬೊಂಬೆಗಳನು ರಚಿಸಿ ಲೇಸಾದ ಮೇಲುಕಟ್ಟುಗಳ ಕಟ್ಟಿದರು 1 ಸೃಷ್ಟಿಗೀಶ್ವರನಾದ ರಂಗನಾಥನಿಗೆ ಕೊಟ್ಟಿಗೋತ್ಸವವನ್ನು ನಡೆಸಬೇಕೆನುತ ಕಟ್ಟಿ ಕಂಕಣವನ್ನು ನಾಲ್ಕುವೇದಗಳಿಂದ ಭಟ್ಟರು ಓದಿ ಪೇಳಿದರು ಸಂಭ್ರಮದಿ 2 ವಜ್ರದ ಕಿರೀಟವಿಟ್ಟು ರತ್ನದಂಗಿಯ ತೊಟ್ಟು ಅರ್ಜುನಸಖ ಸಂಭ್ರಮದಲಿ ಪೊರಟು ಸ್ವರ್ಗದ ಬಾಗಿಲೊಳಗೆ ತಾ ನಿಂದು ಮೂರ್ಜಗವೆಲ್ಲ ಮೋಹಿಸುತಲೆ ಬಂದು 3 ಮಂದಹಾಸದಲಿ ನಿಂದು ಮಂಟಪದಲಿ ಬಂದ ಆಳ್ವಾರರಿಗಾಸ್ಥಾನವಿತ್ತು ಚಂದದಿಂದ ದಿವ್ಯ ಪ್ರಬಂಧವ ಕೇಳಿ ಒಂದುಅಂಕಣ ಬಿಡದೆ ಬಂದ ಶ್ರೀರಂಗ 4 ಸಂಕ್ರಾಂತಿಯಲಿ ಶಂಕರನ ಪ್ರಿಯನು ಶಂಕೆ ಇಲ್ಲದೆ ಆಭರಣವನು ಧರಿಸಿ ಪಂಕಜಮುಖಿಯರೊಡಗೊಂಡು ಹರುಷದ ಲಂಕಾರವಾಗಿ ಬಂದನು ಮಂಟಪಕೆ 5 ಮತ್ತೆ ಮರುದಿನದಲ್ಲಿ ಭಕ್ತವತ್ಸಲನು ಮುತ್ತಿನಅಂಗಿ ಮುಂಡಾಸನಳವಡಿಸಿ ಮುತ್ತಿನಛತ್ರಿ ಚಾಮರ ಸೂರೆಪಾನದಿ ಮುತ್ತರಸಿಯ ಮಂಟಪಕೆ ನಡೆತಂದ 6 ಅರ್ಥಿಯಿಂಬಂದು ತಾ ಅಶ್ವವನೇರಿ ಮತ್ತೆ ಬೇಟೆಯಮೃಗವನೆ ಕೊಂದು ಸಂ ಕ್ರಾಂತಿಯ ಪಾರ್ವೇಟೆಯನಾಡಿ ಸಂತೋಷದಿ ಬಂದ 7 ನಾರಿವೇಷವ ಆಳ್ವಾರರಿಗೆ ಧರಿಸಿ ಪೇರಿಯ ತಾ ಬಿಟ್ಟು ತೇಜಿಯನೇರಿ ಚೋರತನವ ಮಾಡಿದ ಭಕ್ತರಿಗೆ ಮೂಲಮಂತ್ರವ ಪೇಳಿ ಮುಕ್ತಿಯನಿತ್ತ 8 ಮಿಂದು ಮಡಿಯನುಟ್ಟು ಅಂದು ರಾತ್ರಿಯಲಿ ಹ ನ್ನೊಂದು ವಿಧ ಭಕ್ಷ್ಯಗಳನು ತಾ ಗ್ರಹಿಸಿ ಬಂದ ಆಳ್ವಾರರಿಗೆ ಮುಕ್ತಿಯನಿತ್ತು ಬಂದು ಆಸ್ಥಾನದಿ ನಿಂದ ಶ್ರೀರಂಗ 9 ಭಕ್ತರು ಮಾಡಿದ ಪ್ರಬಂಧವನೆಲ್ಲ ಭಕ್ತಿಯಿಂದಲೆ ಪೇಳಿದ ಆಚಾರ್ಯರಿಗೆ ಯುಕ್ತಿ ತೋರಿದ ಪರಾಶರವ್ಯಾಸರಿಗೆ ಬ್ರಹ್ಮ ರಥವನಿತ್ತ ಬ್ರಹ್ಮಾಂಡರೂಪ 10 [ಶೌ]ರಿಯು ತಾನಿರಲು ಮೇಘಮಂಡಲದಂತೆ ತೋರುವುದು ತಾರಕೆಯಂತೆ ಮೈಯುಡುಗೆ ವಾರಿಜನಾಭನ ಮುತ್ತಿನಂಗಿಯ ನೋಡು ವವರಿಗೆ ತಾ ಆನಂದವಾಗಿಹುದು 11 ಕ್ಷೀರಸಾಗರದಲ್ಲಿ ಪವಡಿಸಿಹ ಹರಿಗೆ ಕ್ಷೀರಬಿಂದುಗಳು ಮೈಯೊಳಗೆ ಬಿದ್ದಂತೆ ವಾರಿಜನೇತ್ರಗೆ ವಜ್ರದನಾಮವು ಧರಿಸಿದರು ಹೇಮದ ಪಾದಹಸ್ತಗಳ 12 ಮುತ್ತಿನಂಗಿಸೇವೆ ನೋಡಬೇಕೆನುತ ಹತ್ತುಸಾವಿರ ಪ್ರಜೆ ಬಂದು ನಿಂತಿರಲು ಇತ್ತು ಕಾಣಿಕೆಯನು ನೋಡಿ ವೆಂಕಟರಂಗನ ಮುಕ್ತರಾದೆವೆಂದು ಭಕ್ತರು ನುಡಿದರು 13
--------------
ಯದುಗಿರಿಯಮ್ಮ
ಕೊಟ್ಟು ಕೊಂಡಾಡ ಬೇಕು ಘಟ್ಟಿಕೊಂಡು ಗುರುಭಕ್ತಿ ಗುಟ್ಟಿನೊಳು ನೋಡ ಬೇಕು ಇಟ್ಟು ದೋರುತದ ಮುಕ್ತಿ ಧ್ರುವ ಕೊಟ್ಟು ಗುರುವಿಗೆ ಮನಕೊಳ್ಳಬೇಕು ನಿಜಘನ ಇಟ್ಟಾದೆ ನಿಜಧನ ಪಡಿಬೇಕು ಸಾಧನ ಕೊಟ್ಟಾಂಗ ಕೊಂಬು ಖೂನ ಹೇಳಿ ಕೊಡುವ ಗುರು ಜ್ಞಾನ ಮುಟ್ಟಿ ಭಜಿಸುದು ಪೂರ್ಣ ಸ್ವಾಮಿ ಶ್ರೀನಾಥಾರ್ಪಣ 1 ಕೊಟ್ಟು ಕೊಂಡು ನೋಡಿ ನೇಮ ಸೃಷ್ಟಿಯೊಳು ಸುಧಾಮ ಕೊಂಡ ದಿವ್ಯಗ್ರಾಮ ಕೊಟ್ಟು ಶ್ಯಾಖದಳವಮ್ಮ ದ್ರೋಪದ್ಯಾದಳು ಸಂಭ್ರಮ ಕೃಷ್ಣಗಿದೆ ಅತಿ ಪ್ರೇಮ ಶಿಷ್ಟ ಜನರ ಸುಕ್ರಮ 2 ಮುಕ್ತಿಗಿದೇ ಮೇಲು ಭಕ್ತಿನೋಡಿ ಸಜ್ಜನರ ಯುಕ್ತಿ ಭೋಕ್ತ ಬಲ್ಲ ಗುರುಮೂರ್ತಿ ಮಾಡಬೇಕು ಭಾವ ಭಕ್ತಿ ಮುಕ್ತ ಜನರಿಗಿದೇ ಗತಿ ಕೊಟ್ಟು ಕೊಂಡಾಡುವ ಶಕ್ತಿ ಅರ್ತು ಇದೇ ಮಹಿಪತಿ ಕೊಂಡಾಡೋ ಗುರುಸ್ತುತಿ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕೊಡಲು ನೀನಾರು ಬಿಡಲು ನೀನಾರುಪೊಡವಿಗೊಡೆಯ ಶ್ರೀಹರಿ ಲೀಲೆಯದು ಪ ಪಾಡುವ ಪದ್ಯಗಳಲಿ ಭಾವವಾಗಿರುವನೋಡುವ ನೋಟಗಳ ನೋವು ಗ್ರಹಿಸುವನುಡಿವ ನುಡಿಯ ತಾತ್ಪರ್ಯವನರಿವನಾಡಿ ನರಗಳಂತೊಲಿವ ಆದಿಕೇಶವರಾಯ 2
--------------
ಕನಕದಾಸ
ಕೊಂಡಾಡಬಹುದೆ ಯತೀಂದ್ರ ಎನ್ನಾ ಪಾಂಡವಪ್ರಿಯನಾಭಜಕ ವಾದಿರಾಜಯತಿ ಪ ನಾನಾ ಜನುಮದಾ ಯೋನಿಮುಖದಲಿ ಬಂದು ಮಾನವಳಿದು ಜ್ಞಾನಶೂನ್ಯನಾಗಿಹ ಶ್ವಾನಮನದ ಮೂಢಮನುಷ್ಯನಾಗಿ ಹೀನ ಅಹಂಕಾರಪೂರಿತ ದೋಷಿಂiÀi1 ಅರಿಷಡ್ವರ್ಗದೊಳು ಸಿಲುಕಿ ನರಗುರಿಯಾಗಿ ಪರರವಾರ್ತೆಯ ಸವಿವ ಹಗಲು ಇರಳೂ ದುರುಳ ದುಶ್ಚೇಷ್ಟಿಕನು ಬಹುದುರಾತ್ಮನು ನಾನು ಗುರುಹಿರಿಯರಿಗೆ ಎರಗದ ಗೂಢಪಾಪಿಯನು 2 ಒಡೆಯ ವೈಕುಂಠ ವಿಠಲನ ಭಜಿಸದೆ ಪೊಡವಿಯೊಳು ಕ್ಷುದ್ರ ದೈವಗಳಿಗೆಲ್ಲ ಪೊಡಮಡುತಿಹೆ ಸ್ವಾಮಿದ್ರೋಹಿ ಗರುವಿಯಾ ಕಡುಪಾತಕನ್ನ ನಡತೆಯನು ನೀನರಿಯದಲೇ 3
--------------
ಬೇಲೂರು ವೈಕುಂಠದಾಸರು
ಕೊಂಡಿರ್ಯಾ ನೀವು ಕೊಂಡಿರ್ಯಾ ಮಂಡಲದೊಳು ವಸ್ತು ಕೊಂಡಿರ್ಯಾ ಧ್ರುವ ಕೊಳಬೇಕಾದರ ನೀವು ತಿಳಿದುಕೊಂಡು ಬನ್ನಿ 1 ತಿಳಿಯದಿದ್ದರೆ ಖೂನ ಕೇಳಿ ಸದ್ಗುರುವಿನ 2 ಬೆಲೆಯು ಹೇಳುವದಲ್ಲ ನೆಲೆಯ ತಿಳಿಯುವದಲ್ಲ 3 ಕೊಳಗ ಎಣಿಸುವುದಲ್ಲ4 ತೂಕ ಮಾಡುವುದಲ್ಲ ಲೆಕ್ಕ ಇಡುವುದಲ್ಲ 5 ಇಟ್ಟು ಮಾರುವದಲ್ಲ ಕೊಟ್ಟರ್ಹೋಗುವುದಲ್ಲ 6 ಪಂಡಿತರಿಗೆ ಪ್ರಾಣ ಕೊಂಡವರಿಗೆ ತ್ರಾಣ 7 ಹೇಳಿದ ನಾ ನಿಮಗೊಂದು ಸುಲಭವಾಗಿಂದು 8 ಒಮ್ಮನವಾದರ ಸುಮ್ಮನೆಬಾಹುದು 9 ಸಾಧುಸಜ್ಜನರಿಗೆ ಸಾಧ್ಯವಾಗುದಿದು 10ಸಾರಿ ಚೆಲ್ಲೇದ ಮಹಿಪತಿ ವಸ್ತುಮಯಮಿದು11
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕೊಡು ಕಂಡ್ಯಾ ಹರಿಯೇ | ಶ್ರೀಪತಿ ಉತ್ತಮರ ಸಂಗತಿಯಲೆನ್ನಯಿಟ್ಟು ಪ ಬಂದು ಕುಳ್ಳಿರುವಲ್ಲಿ ಸಿಂಹಾಸನನಾಗುವೆನು | ನಿಂದಲ್ಲಿ ಮೆಟ್ಟುವ ಹಾವಿಗೆಯಾಗುವೆ | ಮಿಂದ ಬಚ್ಚಲಿಗೆ ಹಚ್ಚಿದ ಶಿಲೆಯಾಗುವೆ | ಗಂಧವಾಗುವೆ ನಿನ್ನ ಅಂಗಾಲಿಗೆ 1 ಉಂಬಲ್ಲಿ ಬಿದ್ದ ಎಂಜಲ ತಿಂದು ಬದುಕುವೆ | ಕರವ ತೊಳಿವೆ | ಅಂಬುಜ ಕುಸುಮವಾಗಿ ಹಾಸಿಕೆಯಾಗುವೆ ಬಾಯ | ದೊಂಬಲಿಗೆ ಕರವಡ್ಡಿ ಛಲ ಹೊರುವೆ2 ಪವಡಿಸುವ ಮನೆಯೊಳಗೆ ಸೂಜ್ಯೋತಿಯಾಗುವೆ | ಸಿರಿ ವಿಜಯವಿಠ್ಠಲ | ಜವನ ದೂತರನೊದದು ಸುಶುಚಿಯಾಗುವೆ3
--------------
ವಿಜಯದಾಸ
ಕೊಡು ಕೊಡು ಕೊಡೋ ವರವಾ ತಡವ್ಯಾಕೋ ದೇವಾ ನೀ ಪ ಒಡೆಯ ನಿನ್ನಯ ಯುಗ ಅಡಿಗಳ ಭಜಿಸುವೋ ಸು ಧೃಢ ಭಕುತಿ ಜ್ಞಾನವನ್ನು ತಡೆಯದೆ ಎನಗೆ ನೀ ಅ.ಪ ಪೊಡವಿ ಪಾಲಕ ನೀನೆಂದು ಭಿಡೆಯವನ್ನು ನಾ ಮಾಡೆ ಕಡಲಶಯನ ಸುಮ್ಮನೆ ಮಡದಿಸಹಿತಾಗಿ ನೀ 1 ಜಡಜಲೋಚನ ದೇವಾ ಹುಡಗ ನೀನೆಂದು ನಾ ನುಡಿದ ಮಾತುಗಳ ನಿ ನ್ನೊಡಲೊಳಗಿಡದೆ ನೀ 2 ಚಟುಲಗುರು ಜಗನ್ನಾಥಾ ವಿಠಲ ನಿನ್ನ ನಾ ಕÀರಾ ಪುಟದಿ ಬೇಡುವೆ ಮಮ ಹೃ ತ್ಪುಟದಿ ತೋರುವೆನಿಂದು ನೀ 3
--------------
ಗುರುಜಗನ್ನಾಥದಾಸರು
ಕೊಡು ತಾಯೆ ವರವ ಧೃಡವಾಗಿರುವ ಕೊಡು ತಾಯೆ ವರವಾ ಪ. ಕೊಡೆ ವರ ತಡಮಾಡದೆ ಧೃಡ ಭಕ್ತಿ ಎಂಬ ಮಾಂಗಲ್ಯ ಭಾಗ್ಯ ಧೃಡವಾಗಿರುವಂತೆ ಅ.ಪ. ಪರಿಪರಿ ಧ್ಯಾನಿಸೆನ್ನ ಮನಮಂದಿರವೆಂಬ ವರಗೃಹದಲಿ ಯೆನ್ನಯ ಭಕ್ತಿಮಂಟಪದಿ ಹರದಿ ಲಕುಮಿ ನಿನ್ನ ಪೂಜಿಸಿ ನಮಿಸಲು ವರ ಅಘ್ರ್ಯಪಾದ್ಯ ಆಚಮನವಿತ್ತು ನಲಿವೆ 1 ನವವಿಧ ಭಕ್ತಿಯೆಂಬ ನವರತ್ನ ಮಂಟಪದಿ ನವವಧು ಹರಿಗೆ ನೀನೆಂದು ಕುಳ್ಳಿರಿಸಿ ನವವಿಧ ಪಂಚಾಮೃತ ಸ್ನಾನಗೈಸಿ ನವನೀತಚೋರ ನಿನಗೆ ವಸ್ತ್ರಾಭರಣವನಿಟ್ಟು ನವವಿಧ ಭಕುತಿಲಿ ಪೂಜಿಪೆ 2 ಜಾಜಿ ಮಲ್ಲಿಗೆ ರೋಜ ಸಂಪಿಗೆ ರಾಜಿಪಲಕ್ಷ್ಮಿಗೆ ಮಲ್ಲಿಗೆ ದಂಡೆ ಮುಡಿಸಿ ಜಡೆಗೆ ಕಮಲ ಕೆಂಪಿನ ತಿರುಪಿನ ಹೂವ ತಿರುಗಿಸಿ 3 ಅರಿಶಿನ ಕುಂಕುಮ ಪರಿಮಳ ಗಂಧದಿ ವರಮಹಾಲಕ್ಷ್ಮಿಗೆ ಪೂಜಿಸುವೆ ವರಲಕ್ಷ್ಮಿಗೆ ಪರಿಪರಿ ಪುಷ್ಪ ಅಷ್ಟೋತ್ತರಗಳಿಂದರ್ಚಿಸೆ ಕೊಡು ವರ ದೃಢಭಕ್ತಿಯೆಂದು ಬೇಡುವೆ 4 ಷಡ್ರಾಸಾನ್ನ ಪಾಯಸ ಭಕ್ಷ್ಯಗಳ ಷಡ್ವಿಧ ದದಿಘೃತ ಪಾಲು ಸಕ್ಕರೆ ಬಗೆಬಗೆ ಉಂಡೆಗಳ ಷಡ್ವಿದ ಫಲಗಳನರ್ಪಿಸಿ ಧೂಪ ದೀಪದಿ ವರ ಅಷ್ಟ ಮಂಗಳಾರತಿ ಬೆಳಗಿ ಪಾಡುತ ನಮಿಸುವೆ 5
--------------
ಸರಸ್ವತಿ ಬಾಯಿ
ಕೊಡು ತೊಡಿಯ ಮೇಲೆ ನೋಡು ಗಿಣಿಯು ತನ್ನಗೂಡಿನೊಳಗೆ ಹ್ಯಾಂಗೆ ಆಡುತಲಿಹುದು ಪ ಅತ್ತರೆ ನೀನು ಎನ್ಹತ್ತಿರನಿರುವನು ಗುಮ್ಮಾಪಟ್ಟಣದೊಳಗೆ ಪುತ್ರರನೊಯ್ಯುವನು 1 ಓಡಿ ಬರುತಲುಣ್ಣು ಜೋಡು ಮಾವಿನ ಹಣ್ಣುನೀಡುವೆ ರಂಗಣ್ಣಿ ನೋಡು ಬಾ ಸಖಿಯೆ 2 ಬುತ್ತಿ ಉಣ್ಣಿಸುವೆನು ವಕ್ರ ತೇಜಿಯನೇ ಎನ್ನಹಿತ್ತಲ ಗುಬ್ಬಿಯೇ ಎನ್ನ ಹತ್ತಿರ ಕೂಡೋ 3 ಪುಟ್ಟ ಮಗುವೆ ನೀರು ಗುಟುಕು ಕುಡಿದು ಉಣ್ಣುಕೊಟ್ಟು ಹೋಗೆಲೋ ಉಮ್ಮ ಅಷ್ಟು ಹುಡುಗರೊಳು 4 ಕೂಸು ಪಡೆದವಳಿಂಥಾ ಏಸು ತಪಸು ಮಾಡಿಬೇಸರಾಗದೆ ಇಂದಿರೇಶನ ಸಲಹುವಳು 5
--------------
ಇಂದಿರೇಶರು