ಒಟ್ಟು 10968 ಕಡೆಗಳಲ್ಲಿ , 138 ದಾಸರು , 6102 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕೃಪೆಯ ತೋರಬಾರದೇನೋ | ಗೋಪಾಲರಾಯ ಪ ತಾಪತ್ರಯ ಬಲು ದೀಪನವಾಗಿದೆನೀ ಪರಿಹರಿಸದೆ ಮತ್ತೋರ್ವರನರಿಯೆ ಅ.ಪ. ಸೂನು ಶ್ರೀನಿವಾಸಾ |ಸಾರುತ ತವಪದ ಸೇವಿಸಿ ಭಕುತಿಲಿ |ದೂರೋಡಿಸಿದನು ಜವನವರಾ 1 ಗಿರಿಜಾತೆಯ ಪ್ರಿಯ ಕುವರಾ | ನೃಪವರದಶರಥ ಸುತ ಭರತಗೆ ಅವರಾ |ಮಾರುತಿ ಮತವನು ಅರುಹುತ ನೀ ಸಂಸಾರಕೆ | ತಾರಕ ನೆನಿಸಿದ ಧೀರಾ 2 ಭೋಗಿ ಶೀಲಾ | ನೀನಘದೂರ ಕಳೆಯೊ ಮೋಹಜಾಲಾ |ಭೋಗಿಶಯನ ಗುರು ಗೋವಿಂದ ವಿಠಲನಬಾಗಿ ಭಜಿಸುವಂಥ ಭಾಗ್ಯವ ನೀಯೋ 3
--------------
ಗುರುಗೋವಿಂದವಿಠಲರು
ಕೃಪೆಯಾಗೆನ್ನೊಳು ಜಗತ್ಪತಿ ಶ್ರೀ ಗೋವಿಂದ ಪ ಸತಿ ಮಾಯಾ ಧಾತ ನಿರ್ಭೀತ ಅನಾಥ ಸಂಜೀವಾ 1 ನಿತ್ಯ ಕರ್ತು ಮೈದೋರೋ 2 ವೆಂಕಟರಾಯನೆ ದಯಮಾಡಯ್ಯಾ 3 ದಾತ ಪಾದ ಸಾಮೀಪ್ಯ ಸಾಲೋಕ್ಯವಿತ್ತೂ 4 ಳ್ತರಳನ ಸಲಹಯ್ಯ ದೊರೆ ಶ್ರೀನಿವಾಸಾ 5
--------------
ಸದಾನಂದರು
ಕೃಪೆಯಿರಲಿ ಸ್ವಾಮಿ ಕೃಪೆಯಿರಲಿ ಅಪರಿಗಣ್ಯ ಸುಗುಣಾಂಬುಧಿ ಹರಿ ನಿನ್ನ ಪ. ಬೇರಿಗೆ ದಿವ್ಯ ಕಾವೇರಿ ನದಿಯ ಜಲ ಧಾರೆಯಿರಲು ಕೊಂಬೆಗಳುಬ್ಬಿ ಸಾರಭರಿತ ಫಲದೋರುವ ತರುವಂತೆ ಧಾರುಣಿಪರು ಕೈ ಸೇರುವರು 1 ಶತ್ರುಗಳಂಜಿ ಬಗ್ಗುವರು ಕಾಳ ಕೂಟ ಪಥ್ಯವಾಗುವುದು ನಿನ್ನಣುಗರಿಗೆ ನಿತ್ಯ ಮಾಡುವಾ ದುಷ್ಕøತವೆಲ್ಲವು ಪರ- ಮೋತ್ತಮ ಧರ್ಮಕರ್ಮಗಳಾಹಲೂ 2 ಕನಸು ಮನಸಿನಲ್ಲಿ ನೆನೆಸುವ ಕಾರ್ಯಗ- ಳನುಕೂಲವಾಗುವದನುದಿನವು ಮನಸಿಜನಯ್ಯ ನೀನನುವಾಗಿರೆ ಸರ್ವ ಜನರೆಲ್ಲರು ಬಹು ಮನ್ನಿಸುವರು 3 ಋಗ್ಯಜುಸ್ಸಾಮಾಥರ್ವಣಗಳೆಂಬ ವೇದ ಸ- ಮಗ್ರ ನೀ ಕರುಣಿಸಿ ಒಲಿದಿರಲು ಸುಜ್ಞಾನ ಭಕ್ತಿ ವೈರಾಗ್ಯ ಸಹಿತವಾಗಿ ಭಾಗ್ಯದೇವತೆ ಕೈ ಸೇರುವಳು 4 ಈ ಕಾರಣದಿಂದನೇಕರ ಬಯಸದೆ ಶ್ರೀಕರ ನೀ ಕರುಣಿಸಿದರಿಂದು ಸಾಕೆಂದೊದರುವೆನೇಕಮನದಲಿ ದ- ಯಾಕರ ವೆಂಕಟರಮಣನಿಂದು 5
--------------
ತುಪಾಕಿ ವೆಂಕಟರಮಣಾಚಾರ್ಯ
ಕೃಪೆಯಿಲ್ಲ ವ್ಯಾಕೊ ಎನ್ನ ಮ್ಯಾಲೆ ಕೃಷ್ಣಮೂರುತೀ ಅಪರಾಧವೆಲ್ಲ ಕ್ಷಮಿಸಿ ಸಲಹೊ ಪಾರ್ಥಸಾರಥಿ ಪ ನೀನಲ್ಲದನ್ಯರಿಲ್ಲವೆಂದು ನಿಖಿಲ ನಿಗಮವು ನಾನಾ ಪರಿಯಲಿ ಸಾರುವದು ಸಕಲಶಾಸ್ತ್ರವು 1 ಮನಾದಿಗಳಿಗಗೋಚರನೆಂದೆಲ್ಲ ಪೇಳ್ವರು 2 ಅನಾಥ ರಕ್ಷಕಾಪ್ರಮೇಯ ಆದಿಪುರುಷನೇ ಸನಂದನಾದಿ ಸಕಲಯೋಗಿ ವಂದ್ಯ ಚರಣನೇ 3 ನಿರಪರಾಧಿಗಳನು ಪೊರೆಯಲೇಕೆ ಸಂಶಯ ಸುರೇಶರುದ್ರ ಬ್ರಹ್ಮಜನಕ ನೀನೆ ನಿಶ್ಚಯ 4 ಕರುಣದಿ ನೀನೆ ಕಾಯಬೇಕು ಮರೆಯದೆನ್ನನು ಗುರುರಾಮ ವಿಠಲ ಬಿಡದಿರುಕೈದಾಸದಾಸನು 5
--------------
ಗುರುರಾಮವಿಠಲ
ಕೃಷ್ಣ ಎಂಥಾದೊ ನಿನ್ನ ಕರುಣ ಶಿಷ್ಯ ಜನರುದ್ದೇಶಬಂದ್ಯೊ ನೀ ಕರುಣ ದುಷ್ಟಜನರ ಮಾಡಿದ್ಯೊ ನೀ ಮರ್ದನಿ ದೃಷ್ಟಿಸಿ ಮಾಡುವೆ ಸಾಧು ಸಂರಕ್ಷಣೆ 1 ಹುಟ್ಟಿ ವಸುದೇವನಲ್ಲಿ ಬಂದು ಹೊಳೆದ್ಯೊ ದಿಟ್ಟತನದಲಿ ನಂದಗೋಕುಲದಿ ಬೆಳೆದ್ಯೊ ಮೆಟ್ಟಿ ವಿಷದ ಹಾವಿನ ಹೆಡೆಯ ತುಳಿದ್ಯೊ ಕುಟ್ಟಿ ಕಂಸಾಸುರನ ಪ್ರಾಣವೆಳೆದ್ಯೊ 2 ಮೊಲಿಯನುಂಡು ಕೊಂಡಿ ಪೂತನಿ ಪ್ರಾಣ ಕಾಲಿಲೊದ್ದು ಕೊಂದ್ಯೋ ಶಕಟಾಸುರನ ಬಾಲತನದಲಿ ಕೆಡಹಿದ್ಯೊ ಮಾವನ ನೆಲೆಯು ತಿಳಿಯದು ಇನ್ನೊಬ್ಬರಿಗೆ ಪೂರ್ಣ 3 ತುರುಗಳ ಕಾಯ್ದ್ಯೊ ನೀ ಗೋವಿಂದ ಬೆರಳೆಲೆತ್ತಿದ್ಯೊ ಹಿರಿಯ ಮುಕುಂದ ಮರುಳು ಮಾಡಿದ್ಯೊ ಗೋಪಿಕೇರ ವೃಂದ ಹರುಷಗೈಸಿದೆ ಅನೇಕ ಪರಿಯಿಂದ 4 ಹಾಲು ಬೆಣ್ಣೆ ಕದ್ದು ತಿಂಬು ನಿನ್ನಾಟ ಬಾಲಗೋಪಾಲರ ಕೂಡಿ ನಿನ್ನೂಟ ಚಲುವ ನಾರೇರ ನೋಡುವ ನಿನ್ನೋಟ ಒಲಿದು ಕುಬ್ಜಿಯ ಬೆನ್ನ ಮಾಡಿದ್ಯೊ ನೀಟ 5 ಗುರುಮಗನ ತಂದುಕೊಟ್ಯೋ ನೀ ಪ್ರಾಣ ಸುರಬ್ರಹ್ಮಾದಿಗಳರಿಯರು ನಿನ್ನ ತ್ರಾಣ ಶರಣಾಗತರ ವಜ್ರಪಂಜರು ಪೂರ್ಣ ವರಮುನಿಗಳಿಗಾಗಿಹೆ ನೀ ನಿಧಾನ 6 ಒಲಿದು ಪಾಂಡವರಿ ಗಾದಿ ಸಹಕಾರಿ ಬಲವ ಮುರಿದ್ಯೊ ನೀ ಕೌರವರ ಸಂಹಾರಿ ಪರಿ ಅಟ ನಿನ್ನದೊ ಶ್ರೀ ಹರಿ ಪರಿ 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕೃಷ್ಣ ಕೃಪಾಲ ಕರುಣಾದಾಯಕ ಕರುಣಾದಾಯಕ ದುಷ್ಟಮರ್ದನ ಶಿಷ್ಟಜನಪಾಲಕ ಧ್ರುವ ಮಾಧವ ಮಧುಸೂದನ ಮಧುಸೂದನ ಪಂಕಜನಾಭ ಪತಿತಪಾವನ ಶಂಖಚಕ್ರಧರ ಸಂಕರುಷಣ ಸಂಕುರಷಣ ಪತಿ ರಾಜೀವನಯನ 1 ಕಸ್ತೂರಿತಿಲಕ ಕೌಸ್ತುಭಭೂಷಣ ಕೌಸ್ತುಭಭೂಷಣ ಮಸ್ತಕ ಮುಗುಟ ಮದನಮೋಹನ ಭಕ್ತವತ್ಸಲ ಹರಿ ನಾರಾಯಣ ನಾರಾಯಣ ವಸ್ತುಪರಾತ್ಪರ ನಿಜನಿರ್ಗುಣ 2 ಗರುಡಗಮನ ಉರಗಶಯನ ಉರಗಶಯನ ಸುರಬ್ರಹ್ಮಾದಿ ವಂದಿತಚರಣ ಕರುಣಾನಂದ ಪರಿಪೂರಣ ಪರಿಪೂರಣ ತರಳ ಮಹಿಪತಿ ಜೀವಜೀವನ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕೃಷ್ಣ ಕೃಪಾಳೋ ಕೃಷ್ಣ ಕೃಪಾಳೋವ್ಣೃ ಕುಲೋದ್ಭವ ಕೃಷ್ಣ ಕೃಪಾಳೋ ಪವಸುದೇವ ನಂದನ ವರ ರತ್ನ ಭೂಷಣಕುಶಲಕರೇಕ್ಷಣ ಕೃಷ್ಣ ಕೃಪಾಳೋ 1ಭುವನತ್ರಯಾಧಾರ ಬಹುಗೋಪಿಕಾ ಜಾರನವನೀತ ದಧಿ ಚೋರ ಕೃಷ್ಣ ಕೃಪಾಳೋ 2ಮುರಳೀನಾದ ವಿನೋದ ವಿಶ್ವಾತ್ಮಕವಿರಳೀಕೃತಲೀಲ ಕೃಷ್ಣ ಕೃಪಾಳೋ 3ಗುಂಜಾಭರಣ ಸುರಂಜಿತ ಮಣಿಮಯಮಂಜೀರ ಪದಪದ್ಮ ಕೃಷ್ಣ ಕೃಪಾಳೋ 4ರಾಗಾದಿ ದೋಷ ಕಲುಷಮನಸೋ ಮೇಕಾಗತಿರಧುನಾ ಕೃಷ್ಣ ಕೃಪಾಳೋ 5ಆರ್ತಸಂರಕ್ಷಕ ಪಾರ್ಥಸಹಾಯಕಕೀರ್ತಿವಿಧಾಯಕ ಕೃಷ್ಣ ಕೃಪಾಳೋ 6ಕಾಮಸಂಪುಟದಿವ್ಯನಾಮಜಪನಶೀಲಕಾಮಿತಾರ್ಥಪ್ರದ ಕೃಷ್ಣ ಕೃಪಾಳೋ 7ಕಾಳೀಯ ಫಣ ಮಾಣಿಕ್ಯ ರಂಜಿತ ಪಾದಕಾಳಿಂದೀ ಪಾವನ ಕೃಷ್ಣ ಕೃಪಾಳೋ 8ಮಾಮವಲೋಕಯ ಮಾಧವ ಮುರಹರತಾಮಸಮಪಹರ ಕೃಷ್ಣ ಕೃಪಾಳೋ 9ತವ ಸತ್ಕಥಾ ಶ್ರವಣೇ ಕೀರ್ತನೇ ಮಮಶಿವಸುಧಿಯಂ ದೇಹಿ ಕೃಷ್ಣ ಕೃಪಾಳೋ 10ತಿರುಪತಿ ಕ್ಷೇತ್ರನಿಲಯ ಕರುಣಾಲಯವರದ ಶ್ರೀ ವೆಂಕಟಕೃಷ್ಣ ಕೃಪಾಳೋ 11 ಓಂ ಕೃಷ್ಣಾವ್ಯಸನಕರ್ಷಕಾಯ ನಮಃ
--------------
ತಿಮ್ಮಪ್ಪದಾಸರು
ಕೃಷ್ಣ ದ್ವೈ ಪಾಯನ ಕೃಪಣವತ್ಸಲ ಪರ ಮೇಷ್ಠಿ ಜನಕನ ತೋರೊ ಪ ಅನಿಮಿಷ ಕುಲಗುರು ಆನಂದತೀರ್ಥ ಸ ನ್ಮುನಿಮತ ವಿಮಲಾಂಬುಜಾ ಅ.ಪ. ದಿನಕರ ದಯದಿ ನೋಡೆನ್ನನು ಬಾದರಾ ಯಣ ನಾಮಧೇಯರ ತನಯ ಸಂಯಮಿ ವರ 1 ಭೀಮ ತರಂಗಿಣಿ ಬದಿಗನೆನಿಸಿ ಸೀತಾ ಕರ್ಮ ಗುಣಕೀರ್ತನಗೈವ ನಿರ್ಮಲಾತ್ಮಕನ ಸತ್ಪ್ರೇಮದಿ ಸಲಹುವ ಸುಜನ ಶಿರೋಮಣಿ 2 ವಿಗತದೇಹಾಭಿಮಾನಿಯೆ ನಿಮ್ಮೊಡನೆ ನಿತ್ಯ ಹಗೆಗೊಂಬ ಪಾಪಿಗಳ ವಿಗಡಕರ್ಮಗಳೆಲ್ಲ ಮರೆದು ವಿಶ್ವವ್ಯಾಪಿ ಜಗನ್ನಾಥ ವಿಠಲ ಸ್ವತಂತ್ರ ಕರ್ತಯೆಂಬಾ 3
--------------
ಜಗನ್ನಾಥದಾಸರು
ಕೃಷ್ಣ ಮುರಾರಿ ಕೇಶವ ಮುರಾರಿಅಚ್ಚುತಾನಂತ ಗೋವಿಂದ ಮುರಾರಿಪ. ವೇಷಧಾರಿಯಾಗಿ ಬಂದು ಅಸುರರ ಸಂಹರಿಸಿಭೂಸುರರಿಗ್ವೊರವನಿತ್ತ್ಯೋ ಕೇಶವ ಮುರಾರಿ 1 ನಾ ತಾಳಲಾರೆನೊ ಲೋಕಾಧಿಪತಿಯೆ ಕಾಯೊಅನಾಥರಕ್ಷಕ ನಾರಾಯಣನೆ ಮುರಾರಿ 2 ಮಾಧವ ಮುರಾರಿ3 ಅನೇಕ ಗೋವ್ಗಳ ಕಾಯ್ದ ಗೋಪಾಲಮೂರುತಿಗೋಪಿಯರರಸ ಗೋವಿಂದ ಮುರಾರಿ 4 ಕಟ್ಟಿದ ಕಾಮನೆಯ ಬಿಟ್ಟು ಕಳಚಿ ಮನ-ದಿಷ್ಟಾರ್ಥವನೀವ ವಿಷ್ಣು ಮುರಾರಿ 5 ಮಧುರವಾಕ್ಯಗಳಿಂದ ಮಂದಿರಕಾಗಿ ಬಾರೊಮನಸಿಜನಯ್ಯ ಮಧುಸೂದನ ಮುರಾರಿ 6 ತಿದ್ದಿದ ಕಸ್ತುರಿತಿಲಕ ತಿಗುರಿದ ಪರಿಮಳಗಂಧಮುದ್ದು ನಸುನಗೆಯ ತ್ರಿವಿಕ್ರಮ ಮುರಾರಿ7 ಕಾಮಿನಿ ಅಗಲಿಬಂದು ಸೀಮೆನಾಳುವೆÀನೆಂದುನೇಮವಾಕ್ಯದಿ ನಿಂದ ವಾಮನ ಮುರಾರಿ 8 ಶ್ರೀಯರಸ ಮೇಳದಿ ರಮಿಸಿ ಬಹುಕಾಲದಿಸಿಂಧುಶಯನ ಶ್ರೀಧರನೆ ಮುರಾರಿ 9 ಋಷಿಗಳಿಗ್ವರವಿತ್ತು ಬೃಂದಾವನದಲ್ಲಿ ನಿಂದುಹರುಷವಾರಿಧಿ ಹೃಷಿಕೇಶ ಮುರಾರಿ 10 ಪಾವನ್ನ ಮೂರುತಿ ಪರಮದಯಾಳು ನೀನೆಪಾಲಿಸೊ ಶ್ರೀಪದ್ಮನಾಭ ಮುರಾರಿ11 ದಾನವರ ಮರ್ದಿಸಿ ಸುಮನಸರಿಗೊಲಿದದಾನದತ್ತನೆ ದಾಮೋದರನೆ ಮುರಾರಿ 12 ಶಂಕೆಯಿಲ್ಲದೆ ಗೆಲಿಸು ಶಂಖಚಕ್ರವ ಧÀರಿಸಿ ಅ-ಲಂಕಾರವಾದ ಸಂಕರ್ಷಣನೆ ಮುರಾರಿ 13 ವಾಸುದೇವ ಮುರಾರಿ 14 ಇದ್ದ ಗೋಪೇರಮನೆಯ ಕದ್ದು ಬೆಣ್ಣೆಯ ಮೆದ್ದಪದ್ಮದಳಾಕ್ಷ ಪ್ರದ್ಯುಮ್ನ ಮುರಾರಿ 15 ಅನಿರುದ್ಧ ಮುರಾರಿ16 ಪುನಗು ಕಸ್ತೂರಿಗಂಧ ಪರಿಮಳಪುಷ್ಪದಿಂದ ಪುಣ್ಯಮೂರುತಿ ಪುರುಷೋತ್ತಮನೆ ಮುರಾರಿ 17 ಅವನಿ ಅಧೋಕ್ಷಜ ಮುರಾರಿ 18 ನಾನೇನ ಪೇಳಲಿ ನಗೆನಗೆಯಲ್ಲಿ ಅಕ್ಷಿಕ್ರೂರವಾಯಿತು ನಾರಸಿಂಹ ಮುರಾರಿ 19 ಮೆಚ್ಚಿದೆ ನಾ ನಿನ್ನ ಪಕ್ಷಿವಾಹನ ಸ್ವಾಮಿಮುಚ್ಚುಮರೆಗಳ್ಯಾಕೊ ಅಚ್ಚುತ ಮುರಾರಿ 20 ಜಾಣತನದಿ ಪೋಗಿ ಜಾರಸ್ತ್ರೀಯರನ್ನುಒಡಗೂಡಿ ಆಡಿದ ಜನಾರ್ದನ ಮುರಾರಿ21 ಉಗುರಲ್ಲಿ ಹಿರಣ್ಯಕನ ಸೀಳಿ ಉರದಲ್ಲಿ ಮಾಲೆಯ ಧರಿಸಿಉಬ್ಬಲ್ಲಿ ಮೆರೆದ ಉಪೇಂದ್ರ ಮುರಾರಿ 22 ಹಿರಣ್ಯಾಕ್ಷತನಯನಂದು ಕರೆಯೆ ಕಂಬದಿ ಬಂದಗರುವದಿಂದಲೆ ನರಹರಿಯೆ ಮುರಾರಿ 23 ಅಟ್ಟಡವಿಯ ತಪಸು ಎಷ್ಟುದಿನವೊ ಸ್ವಾಮಿಪಟ್ಟಣಕಾಗಿ ಬಾರೊ ಕೃಷ್ಣಮುರಾರಿ 24 ಎಲ್ಲರ ಸಲಹಿದ ಫುಲ್ಲಲೋಚನ ಸ್ವಾಮಿಪಾಲಿಸೊ ಶ್ರೀಹಯವದನ ಮುರಾರಿ 25
--------------
ವಾದಿರಾಜ
ಕೃಷ್ಣ ರುಕ್ಮಿಣಿ ವಿವಾಹದೈದು ದಿನದಲ್ಲಿ ಅರ್ಥಿ(ಯಿಂ)ಂದೋಕುಳಿಯನಾಡಿ ಕುಂಕುಮ ಗಂಧ ಬುಕ್ಕಿ ್ಹಟ್ಟಲೂ(ಲುರು?) ಟಣಿಯ ಮಾಡಿ ಆರತಿನೆತ್ತಿ ಮುತ್ತೈದೇರು ಪಾಡಿ ವೀಳ್ಯಗಳ ನೀಡಿ ಸರ್ಪಶಯನನು ತನ್ನ ಸತಿಯ ಎತ್ತಿ ಬರುವೋ ಕಾಲದಲ್ಲಿ ಚಿಕ್ಕ ಸುಭದ್ರೆ ತಾ ಬಾಗಿಲು ಕಟ್ಟಿ ತಾ ನಗುತ ನುಡಿದಳು 1 ಪಟ್ಟದರಸಿಕೂಡ ಮತ್ತೆಲ್ಲಿ ಪಯಣ ಈ ವಾರ್ತೆ ಹೇಳುವುದೆನಗೆ ಕೇಳುವೆ ಕೊಟ್ಟು ಎನಮನ ಕಾಮಿತಾರ್ಥವ ದಯಮಾಡಣ್ಣಯ್ಯ ಶ್ರೀಕೃಷ್ಣಯ್ಯ 2 ನಾರಿಮಣಿಯೆ ನವರತ್ನದ ಹೆರಳು ಬಂ- ಗಾರ ರಾಗಟೆಯು ಗೊಂಡ್ಯ ಕಂಕಣ ವಂಕಿ ದ್ವಾರಾ ಹರಡಿಯು ಚೆಂದ ಒಪ್ಪುವ ಗೆಜ್ಜೆ ನಾಗಮುರಿಗೆಯು ಕಾಲ ಪೈಜಣ ಗೆಜ್ಜೆ ರುಳಿ ವೈಡೂರ್ಯದ್ವೊಡ್ಯಾಣವನೆ ಮಾಣಿಕ್ಯದ್ವಾಲೆ ಮೋಹನ್ಮಾಲೆ ಕೊಡುವೆನು ಕದವ ಬಿಡು ತಂಗಿ ಕೋಮಲಾಂಗಿ 3 ಪಚ್ಚಮಾಣಿಕದ ಗೊಂಡ್ಯಗಳು ಬಾಜುಬಂದು ರತ್ನಹ್ಹೆರಳುಬಂಗಾರ ಕಂಕಣವಂಕಿ ಹಸ್ತಕಡಗವು ದ್ವಾರ್ಯ ಪುತ್ಥಳಿ ಏಕಾವಳಿಯ ಸರ ಚಿಂತಾಕು ಸರಿಗೆ ತೆತ್ತಿಸಿಯರಚಂದ್ರರಾಗಟೆÉ ಮತ್ತೆ ಎನಗಮ್ಮಯ್ಯಕೊಡುವಳು ಅರ್ಥಿಯಿಂದೀಗೆನ್ನ- ಮನೋರಥ ದಂiÀiಮಾಡಣ್ಣಯ್ಯ ಶ್ರೀಕೃಷ್ಣಯ್ಯ 4 ಹರದಿ ನಿನಗೆ ಹವಳದ ಕಾಲ್ವಜ್ರದ ಮಂಚ ಜರದ ಸುಪ್ಪತ್ತಿಗೆಯು ಹಾಸಿಕೆ ಲೋಡು ವರಪೀಠ ವಸನಂಗಳು ಚ- ಪ್ಪರ ಮಂಚಕ್ಕೊಲೆವೋ ಮುತ್ತಿನ ಗೊಂಚಲು ರವಿಪೋ- ಲ್ವ ರಥವು ಕರಿತುರಗ ಕರೆವೆಮ್ಮೆ ಗೋವ್ಗಳು ತರತರದ ಛತ್ತರಿಗೆ ಚಾಮರ ಜರತಾರಂಚಿನ ಸೀರೆ ಕೊಡುವೆನು ಕದವ ಬಿಡು ತಂಗಿ ಕೋಮಲಾಂಗಿ 5 ಪನ್ನಂಗಶಯನ ಕೇಳೆನ್ನ ಗಲ್ಲದಲೊಪ್ಪೋ ಸಣ್ಣ ಮುತ್ತಿನ ಗೊಂಚಲು ದ್ರಾಕ್ಷಿಯ ಬಳ್ಳಿ ಹೊನ್ನಾ ್ವಲೆ ಸರಪಳಿಯು ಹೊಸ ಪ್ರೀತಿಯಲಿನ್ನು ನಾ ಬೇಡಿದ್ದು ಕೊಡುವನು ಮನ್ಮಥನ ಪಿತ ಎನ್ನ ಮನೋರಥ ದಯಮಾಡಣ್ಣಯ್ಯ ಶ್ರೀಕೃಷ್ಣಯ್ಯ 6 ಮುದ್ದು ಸುಭದ್ರ ಮೇಲಾದ ಜೊತೆಯ ಮುತ್ತು ವÀಜ್ರ ಕೆಂಪನು ಕೆತ್ತಿಸಿ ಕೊಡುವೆನೀಗ ತಿದ್ದಿ ಮಾಡಿದ ಮೂಗುತಿ ಪಾರ್ಥನ ರಥಕಿದ್ದು ಆಗುವೆ ಸಾರಥಿ ನಡೆಸುವೆನು ಕೀರ್ತಿ ಉಗ್ರಸೇನಗೆ ಹೇಳಿ ಇದರೊಳ- ಗರ್ಧ ರಾಜ್ಯವ ಕೊಡಿಸಿ ನಾ ನಿನ್ನುದ್ದ ಹಣ ಬಿಡು ತಂಗಿ ಕೋಮಲಾಂಗಿ 7 ಅಚ್ಚುತ ಬಲರಾಮರೆಂಬೊ ಎನಗೆ ಜೋಡು ಹೆಚ್ಚಿನ ಭುಜಗಳಿನ್ನು ಯಶೋದ ದೇವಕ್ಕಿ ರೋಹಿಣೀದೇವೇರು ಇರಲು ತಂದೆ ಶ್ರೇಷ್ಠನಾದ್ವಸುದೇವನು ನೀ ಕೊಡುವುದೇನು ಮುತ್ಯನಾಗಿದ್ದುಗ್ರಸೇನನು ಮತ್ತೆ ನಾ ಬೇಡಿದರೆ ಈ ಕ್ಷಣ ಕೊಟ್ಟು ಬಿಡನೇ- ನಧರ್À ರಾಜ್ಯವ ದಯಮಾಡಣ್ಣಯ್ಯ ಶ್ರೀಕೃಷ್ಣಯ್ಯ 8 ಎಷ್ಟು ಹೇಳಿದರು ಸನ್ಮತವಿಲ್ಲೆ ಸುಭದ್ರೆ ಮತ್ತೇನು ಕೊಡಲೆ ನಾನು ಮನಕೆ ಬೇಕಾದಿಷ್ಟವ ಬೇಡೆ ನೀನು ಭಾರ ಎಷ್ಟು ತಡೆಯಲಾರೆನೆ ನೀನು ಕೈಬಿಟ್ಟು ಬಿಡುವೆನು ಬೆಟ್ಟವನು ಕಿರು ಬೆಟ್ಟಿಲಿಂದೆ ಎತ್ತಿನಿಂತಿದ್ದೇಳು ದಿವಸ ಕದವ ಬಿಡು ತಂಗಿ ಕೋಮಲಾಂಗಿ 9 ಪಕ್ಷಿವಾಹನ ನಿನ್ನ ಚೊಚ್ಚಲಮಗಳ ಎನ್ನಚ್ಛದ ಅಭಿಮನ್ಯುಗೆ ಮಾಡುವುದು ಅ- ಪೇಕ್ಷವಾಗೇದೆ ಎನಗೆ ಬೇಡುವೆನು ನಿಶ್ಚಯ ಮಾಡಿ ಜನರೊಳಗೆ ಕೊಡು ಕೀರ್ತಿ ನಿನಗೆ ಪಟ್ಟದರಸಿಯ ಸಹಿತ ನೀ ಒಡಂಬಟ್ಟು ಎನಗ್ವಚನವನೆ ಪಾಲಿಸು ಕಟ್ಟಿದ್ಹಾದಿಯ ಬಿಟ್ಟು ಪೋಗುವೆ ದಯಮಾಡಣ್ಣಯ್ಯ ನೀ ಕೃಷ್ಣಯ್ಯ 10 ತರವಲ್ಲೆ ರುಕ್ಮಣಿ ಬೀಗತನವ ಭಾಳ ಪರಿ- ಯಾಲೋಚನೆ ಮಾಡು ರುಕುಮನ ಗಡ್ಡ ಶಿರ ಪಟ್ಟಿ ಪನ್ನಿ ನೋಡು ದೊರೆ ಶಿಶುಪಾಲ ವರನವಸ್ಥೆಯ ಕೊಂಡಾಡು ಧೈರ್ಯವನೆ ಮಾಡು ಬರೆದು ಓಲೆಯ ಕಳಿಸಿ ಎನ್ನ ಕರೆಸಿ ಬೆನ್ನ ್ಹತ್ತೋಡಿಬಂದ ಬಿರುದನರಿಯೇ ನ್ವರ ಶುಭಾಂಗಿನಿ ಕದವ ಬಿಡು ತಂಗಿ ಕೋಮಲಾಂಗಿ 11 ಕೃಷ್ಣ ಸುಭದ್ರೆ ಮಾತುಗಳ ರುಕ್ಮಿಣಿ ಕೇಳಿ ಮತ್ಯಾತಕೆನ್ನ ದೂರು ಯತಿಗಳ ಬೆನ್ನ ್ಹತ್ತಿ ಹೋದವರು ದಾರು ಕೃತ್ಯವ ನಡೆಸಿದರೆನ್ನ ನಾದಿನೇರು ಚಿತ್ರಾಂಗಿಯೇರು ಹಸ್ತಿನಾವತಿ ಅರಸು ಧರ್ಮರು ಹೆಚ್ಚಿನ್ಹಿರಿ ಯಣ್ಣಯ್ಯ ಭೀಮನು ಪಾರ್ಥಸುತ ಎನ್ನ ಸೋದರಳಿಯಗೆ ಕೊಟ್ಟೇನು ತೌರುಮನಿಗ್ಹೆಣ್ಣು 12 ರಂಗ ಸುಭದ್ರೆ ಮಾತಿಗೆ ಬಪ್ಪಿ ್ವ್ವಳ್ಯವ ಕೊಟ್ಟು ಚಂದ್ರಗಾವಿಯ ಕುಪ್ಪಸ ಜರದ ಪೀ- ತಾಂಬ್ರದುಡುಗೊರೆ ಕೊಡುತ ಮುತ್ತಿನ ಹಾರ ತಂದು ಕೊರಳಿಗೆ ಹಾಕುತ ರುಕ್ಮಿಣಿಯ ಸಹಿತ ಬಂದ ಭೀಮೇಶ ಕೃಷ್ಣ ಪಾರ್ಥನ ರಂಭೆ ಕನ್ಯವಗೆದ್ದಳೆನುತಲಿ ಸಂಭ್ರಮದಿ ದೇವೇಂದ್ರ ಬ್ಯಾಗನೆ ಚೆಂದದÀಲ್ಹೂಮಳೆಯ ಕರೆದರು 13
--------------
ಹರಪನಹಳ್ಳಿಭೀಮವ್ವ
ಕೃಷ್ಣದ್ವೈಪಾಯನ ಗುರುರಾಜರ ಚರಣ ಕಮಲಕಾನಮಿಪೆ ಶಿರಬಾಗಿ ಬಿನ್ನೈಪೆ ಪ ವೇದವ್ಯಾಸರ ಕರಕಮಲಜರೆನಿಸಿ ವೇದೇಶರ ಮುಖದಿ ವೇದಾಂತ ಸುಶಾಸ್ತ್ರ ಜ್ಞಾನವ ಘಳಿಸಿ ಮೇದಿನಿಯೊಳು ಚರಿಸಿ ಮೇದಿನಿ ಸುರರಿಗೆ ಮೋದವ ಗರೆದ 1 ಧರಿಜಾರಮಣನ ಪದಪೂಜಿಸಿದಂಥ ಶ್ರೀ ವ್ಯಾಸರ ಮಂತ್ರ ಧರಿಯೊಳು ಜಪಿಸಿದರಿವರೆ ಮಹಾಂತರೆನಿಸಿದರತಿ ಶಾಂತ ವರುಣಿಸಲೊಶವೆ ಗುರುವರ ಮಠದಲಿ ಸುರಗಂಗೆಯು ಬಂದಿರುವ ಮಹಿಮೆಯನು 2 ವರ ಭೀಮಾತಟದಿ ವಿರಾಜಿಸುವಂಥ ಕುಸುಮೂರುತಿ ಸಂಸ್ಥ ಶರಣಾಗತ ಜನರಿಗೆ ಸಕಲಾಭೀಷ್ಟ ಗರಿಯುವ ಸುಸಮರ್ಥ ಧರೆಯೊಳು ಮೆರೆಯುವ 'ಶಿರಿ ಕಾರ್ಪರ ನರಹರಿ' ಯ ನೊಲಿ-ಸಿರುವ ಪರಮ ಮಹಾತ್ಮ3
--------------
ಕಾರ್ಪರ ನರಹರಿದಾಸರು
ಕೃಷ್ಣನ ನೋಡಿ ಸಾಷ್ಟಾಂಗವ ಮಾಡಿದೆಕಷ್ಟವ ಪರಿಹರಿಸೀಷ್ಟವನೀವನ ಅ.ಪ ಶಿಷ್ಯನ ನೋಡಿದೆ - ವರ ನಿರ್ದುಷ್ಟನ ನೋಡಿದೆಹೃಷ್ಟ ಪುಷ್ಟ ಸಂತುಷ್ಟನ ಶ್ರೇಷ್ಠನ ಶಿಷ್ಟರ ಕಷ್ಟ ನಿವಿಷ್ಟನ - ದೇವನ 1 ಭವ ಭಂಗನ ನೋಡಿದೆ 2 ದೇವನ ನೋಡಿದೆ ಮುಕುತಿಯೀವನ ನೋಡಿದೆಗೋವ ಕಾವ ಭೂದೇವ ವಂದಿತ ಬಲ-ದೇವಾನುಜ ಹಯಗ್ರೀವನ ನೋಡಿದೆ 3 ಧೀರನ ನೋಡಿದೆ- ಜಗದ ಉದ್ಧಾರನ ನೋಡಿದೆವೀರ ಶೂರ ಪರಾತ್ಪರ ತಾನ-ಕ್ರೂರ ವರದ ಸಿರಿಧಾರನ ನೋಡಿದೆ 4 ಶ್ಯಾಮನ ನೋಡಿದೆ - ಬಲು ನಿಸ್ಸೀಮನ ನೋಡಿದೆವಾಮನ ರಾಮನ ಕಾಮನ ಅಯ್ಯನಸಾಮನ ಸೀಮನ ಸೋಮನ ನೋಡಿದೆ 5 ಕಾಲ ವನಮಾಲನ ನೋಡಿದೆ 6 ಅಗಣಿತ ಪ್ರಾಣರ ಪ್ರಾಣನವೇಣುಗೋಪಾಲ ವಿಠ್ಠಲ ಕಲ್ಯಾಣನ 7
--------------
ವೇಣುಗೋಪಾಲದಾಸರು
ಕೃಷ್ಣನ ಮೂರ್ತಿಯ ಮನದಿ ನೆನೆವುದುತೃಷ್ಣೆಯ ಬಿಡಿಸುವುದು ಎನ್ನ ಘನ್ನ ತೃಷ್ಣೆಯ ಪ. ಕುಂಡಲ ತತಿಯ ಈ ಚೆಲ್ವಿನಸದ್ರತ್ನತಿಲಕದ ಸೊಬಗನ ಕಂಡೆರಗದವನಾವ ಸುಖಿ ಗೋಕುಲದೊಳಗಿದ್ದ ಮಾನವನೆ ಸುಖಿ ಅಮ್ಮ ನಮ್ಮ 1 ಬೊಮ್ಮ ನೋಡು ನೋಡು2 ವರ್ತುಳೋರು ಜಾನು ಜಂಘಗಳ ಸಂ-ಪತ್ತ ನೋಡು ಕರಿಕರದರತ್ನದರ್ಪಣದ ಕಾಮನ ಬೆನ್ನಿಲೊಪ್ಪುವಬತ್ತಳಿಕೆಯ ಚೆಲುವ ಪೋಲುವ ಬೆರ-ಳರ್ಥಿಯಿಂದಲಿ ಪೊಳೆವ ಚಿತ್ರ ಚಾರಿತ್ರಚಿತ್ತಜನಯ್ಯನ ಚರಣಕಮಲವೆನ್ನಚಿತ್ತದಿ ನೆಲೆಸಿಪ್ಪುದು ಅದರಿಂದ ಸ-ರ್ವತ್ರ ಸುಖವು ತಪ್ಪದು ಹಯವದನ್ನ3
--------------
ವಾದಿರಾಜ
ಕೃಷ್ಣರಾಯ ತಾ ಬಂದಾ ಕೃಷ್ಣರಾಯ ತಾ ಬಂದಾ ಗೋಕುಲದಿಂದಾ ಬಿಡಿಸ್ಯಾನು ಬಂಧಾ ಪ ಶಂಖ ಚಕ್ರ ದೋರ್ದಂಡ ಶಂಖ ಚಕ್ರದೋರ್ದಂಡ ಉದ್ದಂಡ ಖಲಕಂಡ ಕೃಷ್ಣರಾಯಾ 1 ಆನಂದ ಗುಣಪರಿಪೂರ್ಣ ಆನಂದ ಗುಣಪರಿಪೂರ್ಣ ವಪ್ಪುವಾಭರಣ ಲಿಂಗಸಂಪೂರ್ಣ ಭಕ್ತಜನ ಕರುಣಾ ಕೃಷ್ಣರಾಯಾ 2 ಶರಣಜನ ಪರಿಪಾಲಾ ಶರಣಜನ ಪರಿಪಾಲಾ ಗಾನವಿಲೋಲ ಭಕ್ತವತ್ಸಲ ನರಸಿಂಹವಿಠಲ ಕೃಷ್ಣರಾಯಾ 3
--------------
ನರಸಿಂಹವಿಠಲರು
ಕೃಷ್ಣರಾಯನೆ ನಿನ್ನ ಕೃತ್ಯಗಳೆಲ್ಲ ಸೃಷ್ಟಿಯೊಳಗೆ ನಾ ಬೀರಲ್ಯಾ ಪ ಕಷ್ಟ ಬಿಡಿಸದೆ ಸುಮ್ಮನಿದ್ದೆಯಾ ಸ್ವಾಮಿ ಅ.ಪ. ಜನನ ಮರಣ ಶೂನ್ಯನೆನಿಸಿಕೊಂಡು ಗೋಪಿ ತನಯನಗಿದ್ದುದ ಹೇಳಲ್ಯಾ ಸನಕಾದಿಸೇವ್ಯ ಪೂಜ್ಯನೆ ತುರುಗಳ ಹಿಂಡು ವನದಲ್ಲಿ ಕಾಯ್ದದ್ದು ಹೇಳಲ್ಯಾ ನಾನು 1 ದನುಜ ಭಂಜನನಾದ ‌ಘನ ಮಹಿಮನೆ ಮಾಗ ಧನಿಗಂಜಿ ಓಡಿದ್ದು ಹೇಳಲ್ಯಾ ಎಣೆಯಿಲ್ಲದಾ ಶೂರ ರಣದೊಳು ಪಾರ್ಥಗೆ ಅನುಗನಾಗಿದ್ದದ್ದು ಹೇಳಲ್ಯಾ ನಾನು 2 ಸತತ ತೃಪ್ತನಾಗಿ ಕ್ಷಿತಿಯೊಳು ಬೆಣ್ಣೆಯ ಮಿತವಾಗಿ ಕದ್ದದ್ದು ಹೇಳಲ್ಯಾ ಕೃತಿದೇವಿರಮಣನೆ ಅತಿ ಪ್ರೀತಿಯಲಿ ಗೋಪ ಸತಿಯರ ಕೂಡಿದ್ದು ಹೇಳಲ್ಯಾ ನಾನು 3 ಶ್ರುತಿತತಿಗಳಿಗಭೇದ್ಯ ಪ್ರತಿಯಿಲ್ಲದೆ ದೇವ ಸತಿಗೊಶನಾದದ್ದು ಹೇಳಲ್ಯಾ ಶತಕೃತು ವಿಧಿವಂದ್ಯ ಸುತರಾಪೇಕ್ಷಿಸಿ ಭೂತ ಪತಿಯನ್ನು ಬೇಡಿದ್ದು ಹೇಳಲ್ಯಾ ನಾನು 4 ಭೂತಳದೊಳು ದೇವತೆಗಳೊಡÀನೆ ಇಂಥ ರೀತಿಲಿ ಚರಿಸಿದ್ದು ಹೇಳಲ್ಯಾ ಭೀತಿರಹಿತ ಜಗನ್ನಾಥವಿಠ್ಠಲನೆ ಅ ದ್ಭುತ ಮಹಿಮನೆಂದು ಹೇಳಲ್ಯಾ ನಾನು 5
--------------
ಜಗನ್ನಾಥದಾಸರು