ಒಟ್ಟು 1871 ಕಡೆಗಳಲ್ಲಿ , 107 ದಾಸರು , 1559 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸ್ಮರಿಸಿದದರಘನನಾಶನ ಸ್ಮರಿಸಿದವರಘನಾಶಸ್ಮರನಯ್ಯನಂಘ್ರಿ ಯುಗ ಸರಸಿಜವ ಪೂಜಿಸುವಗುರು ವಿಜಯರಾಯರ ಚರಣಾಬ್ಜ ಸಾರಿದವದುರಿತಾಬ್ಧಿ ಮೀರಿದವ ಹರಿಪುರವ ಸೇರಿದವನೊ ಪ ಅಘ ಬಂಧ ಪರಿಹರ ಮಾಡುತಾ ಜನರು 1 ಇನಿತು ಜನಸಮುದಾಯದೊಳು ಯಿರುತಿರ್ದ ಇಭವರದ ನನುದಿನವು ಗಾಯನದಿ ಕೊಂಡಾಡಿ ಮನಮುಟ್ಟಿವಿನಯಾತಿಶಯದಲ್ಲಿ ಗುರುವರ್ಯರಾ ಸೇವೆ ಘನವಾಗಿ ಮಾಡಿ ಮುದದಿ ||ತನುವೆತ್ತಿ ವರಸರಿತ ತೀರದಾ ಅಣು ಬದರಿಜನ ಶ್ರೇಷ್ಠರೊಳು ಹರಿಯ ದಾಸ ಪೆಸರಲಿ ಬಂದುಘನ ಯಾದವಾದ್ರಿ ಪಟ್ಟಣದೊಳಗೆ ಯಿದ್ದು ಬಗೆ ಜನನಿ ಅನುಜಾತಿ ಸಹಿತ 2 ಕೆಲವು ದಿನ ಸಂಸಾರ ಗಲಭಿಯೊಳು ಯಿರುತಿರ್ದುಜಲದೊಳಗೆ ಅಂಬುಜವು ಮಿಳಿತವಾಗಿದ್ದ ತೆರಹಳಿದು ದುಷ್ಟಾಸಿಯನು ಕಳೆದು ಕಡು ಮಮತೆಯನು ಪುಳಕೋತ್ಸ ಮನದಿ ತಾಳಿ ||ಜಲದೊಳುತ್ತಮವಾದ ಭಾಗೀರಥೀ ಯಾತ್ರಿಛಲ ಭಕುತಿಯಿಂದಲಿ ಮಾಡಿ ಮೋದದಿ ಹರಿಯಹಲವು ಬಗೆ ಲೀಲೆಯನು ಹರುಷದಿಂದಲಿ ಯಿನ್ನು ತಿಳಿದು ಗುರು ಕರುಣ ಬಲದಿ 3 ಮೂರ್ತಿ ಮನದೊಳು ಕಂಡು ಸುಖವನಧಿಯಲ್ಲಿ ಲೋಲ್ಯಾಡಿಕೊಳುತ ||ಅಲ್ಲಿಂದ ತೆರಳಿ ಗಿರಿಯಲ್ಲಿದ್ದ ವೆಂಕಟನಸಲ್ಲುವಾ ಭಕುತರೊಳು ಸಲೆ ಶ್ರೇಷ್ಠನೆಂದೆನಿಸಿಮಲ್ಲ ಮರ್ದನನಾದ ಮುರಹರನ ಮಹಿಮೆ ಮನ ಬಲ್ಲನಿತು ವಿಸ್ತರಿಸುತ ಜನರು 4 ಈ ತೆರದಿ ಇಭವರದನಾತುಮದೊಳಗೆ ತಂದುಭೂತಳದ ಬಲು ವಿಧದ ತೀರ್ಥಕ್ಷೇತ್ರಗಳಲ್ಲಿಪ್ರೀತಿಯಿಂದಲಿ ಪರಮ ಪುರುಷನ್ನ ಧೇನಿಸುತ ಖ್ಯಾತಿ ಮಹಿಯೊಳಗೆ ಮೆರದು ||ವಾತಜಾತನ ಮತದ ವೊಳಗಿಪ್ಪ ವೈಷ್ಣವರತಾತನೆಂದೆನಿಸಿ ಸುಖವ್ರಾತದೊಳಗಿಡುವಲ್ಲಿಚಾತುರ್ಯದಿಂದ ಬಲುದಾತನೆನಿಸುತಲಿ ಭವತೀತರನ ಮಾಡಿ ಪೊರವ ಜನರು 5 ಆ ಬಗೆಯಲೀ ಕಮಲನಾಭ ಕರುಣಿಸಿ ಯಿವರಈ ಭುವನದೊಳು ಯಿಟ್ಟು ಜನರ ವುದ್ಧರಿಸುವಲೋಭದಿಂದಲಿ ಸಕಲ ಸಜ್ಜನರ ಸನ್ಮಾರ್ಗ ಲಾಭದೊಳು ಸೇರಿಸಿದನೊ ||ತ್ರ್ರಿಭುವನದೊಡೆಯನ್ನ ಕಥೆಯ ತಿಳಿಸುವ ಜನಕೆಶೋಭಿಸುವ ಗಾಯನದ ಸೊಬಗಿನಿಂದಲಿ ಕೇಳಿಶ್ರೀಭೂರಮಣ ವೊಲಿದು ಪಾಲಿಸುವನಾಮೇಲೆ ಶೋಭನ ಗತಿಯ ನೀವನೊ 6 ಕಲುಷ ವಾಕು ವುಪಜೀವರಿಗೆ ಏಕ ಮನದಿಂದಿರುವದೇ ಈ ಕಲಿಯುಗದಲಿಸಾಕಾರ ಗುಣಪೂರ್ಣ ಶ್ರೀನಿವಾಸನು ಬಿಡದೆ ಸಾಕುವನು ಸಮ್ಮೊಗದಲಿ ಜನರು 7 ದೇವಮುನಿ ನಾರದನು ಜೀವಿಗಳನುದ್ಧರಿಪಭಾವದಲಿ ಯಮಪುರಿಯ ದೇವನಲ್ಲಿಗೆ ಪೋಗಿಸಾವಧಾನದಿ ಸಕಲ ಸತ್ಕಾರಕೊಳಗಾಗಿ ನೋವು ಬಡವರನೀಕ್ಷಿಸಿ || ಸಾವಧಾನದಿ ಕೇಳಿ ಕಲಶಾರುಣೀ ಭಕ್ತ- ರಾವಳಿಯ ಸಲಹುವ ದೇವ ದೇವೇಶನನುತಾ ವದರಿ ಕೂಗಲಾ ಜೀವರೆಲ್ಲರು ಕೇಳಿ ಪಾವಿತ್ರವನೆಗೈದರೊ ಜನರು 8 ಭವ ಸಿರಿ ಚರಣಕೆ ಜನರು 9 ಸಿರಿ ತರಣಿ ಶರಧಿ ಶಯನನ ತೋರುವ ಜನರು 10 ದಾನವಾಂತಕ ದನುಜರನ್ನು ಸಂಹರಿಸುವಾಜ್ಞಾನಪೂರ್ಣನು ಗುಪ್ತ ತಾನಾಗಿ ಜಗದೊಳಗೆಹಾನಿ ವೃದ್ಧಿಂಗಳಿಗೆ ಹೊರಗಾಗಿ ಜೀವಿಗಳ ಮಾಣದಲೆ ಪರಿಪಾಲಿಪ ||ಕ್ಷೋಣಿಯೊಳು ಭಕುತರಘ ಹಾನಿಗೈಸುವ ಬಗಿಗೆಈ ನಿರುದ್ಧಕೆ ಯಿವರಧೀನ ಮಾಡಿದ ನಮಗೆವೇಣುಗೋಪಾಲ ವಿಠಲರೇಯ ತಾನೊಲಿದು ಸ್ವಾನಂದವನೆ ವುಣಿಸುವ ಜನರು 11
--------------
ವೇಣುಗೋಪಾಲದಾಸರು
ಸ್ಮರಿಸುವ ನರನೇ ಧನ್ಯ ಸನ್ಮಾನ್ಯ ಪ ಸ್ಮರಿಸುವರಿಗೆ ಸುರತರುಕಲ್ಪ ವಿಭರಾಮ ಪುರದಿ ಶ್ರೀಹರಿ ಧ್ಯಾನಪರ ಶ್ರೀ ಕೃಷ್ಣಾಚಾರ್ಯರ ಅ.ಪ ಭರತ ಭೂಮಿಯೊಳವತರಿಸಿ ದೇವಾಂಶದಿ ಪುರುಹೂತನಂತೆ ಗಜಾಂತ ವೈಭವದಿಂದ ಮೆರೆಯುತ ತಮ್ಮಯ ಚರಣಾರಾಧಕರನು- ದ್ದರಿಸಲೋಸುಗದಿ ಸಂಚರಿಸುತ ಮುದದಿ ಸಂದರುಶನದಿಂಧಾಘವ ಕಳೆದು ಬಲು ಕರುಣದಲಿಷ್ಟಾರ್ಥವ ಗರಿದು ಬಹು ಶರಣು ಜ- ನರ ಪೊರೆವ ಭೂಸುರರೊಳು ಮರುತ ಮತಾಬ್ಧಿ ಚಂದಿರನೆನಿಸಿದವರ 1 ವರ್ಣಿಸಲೊಶವಲ್ಲ ಚರಣಯುಗ್ಮಾರಭ್ಯ ಶಿರಪರಿಯಂತರ ಗುರುಗಳಾಕೃತಿಯನ್ನು ನಿರುತ ಧ್ಯಾನಿಪರಿಗೆ ಪರಮ ಮಂಗಳವೀವ ಪರಿಶೋಭಿಸುವ ರತ್ನಾಭರಣದಿಂದೋಪ್ಪುವ ಸ್ವರ್ಣತುಲಸಿ ಮುಕ್ತಹಾರ ಭೂಷಿತ ಕಂಧರ ಸುಂದರವಾದ ಮುಖದೊಳು ಮಂದಸ್ಮಿರ ಕಸ್ತೂರಿಯಂತೆ ಪರಿಮಳಾನ್ವಿತ ಶರೀರ ಮಂತ್ರಾಲಯ ಗುರುರಾಘವೇಂದ್ರರ ಕರುಣಾಸುಪಾತ್ರರ2 ಚಿರಕಾಲ ಶೇವಿಪ ಪರಮ ವಂಧ್ಯರಿಗೆಲ್ಲ ವರಪುತ್ರ ಸೌಖ್ಯವ ಕರುಣಿಸುವರು ಸತ್ಯ ಅಪರಿಮಿತ ಮಹಿಮರೆಂದರಿಯದೆ ಇವರನ್ನು ಜರಿಯಲಾಕ್ಷಣದಲಿ ಅರಿತು ಭೀಕರವಾದ ಉರಗರೂಪವ ತೋರುತ ತ್ಯಜಿಸಿ ಮತ್ತೆ ನಿಜರೂಪದಿಂದಿರುತ ನೋಳ್ಪರಿಗತ್ಯಾಶ್ಚರ್ಯ ಸದ್ಗುಣ ಭರಿತ ಕಾರ್ಪರ ನರಹರಿಯ ಪರೋಕ್ಷದಿ ನಿರುತ ಸುಖಿಪರಂಘ್ರಿ 3
--------------
ಕಾರ್ಪರ ನರಹರಿದಾಸರು
ಸ್ಮರಿಸುವರ ಪಾಲಿಪ ಬಿರುದು ಭಕುತರ ಪೊರೆವ ಕರುಣಿಯೆಪ ಪರಿಪರಿವಿಧದಲಿ ಪರಿತಪಿಸುವರನು ಕರವಿಡಿದುದ್ಧರಿಸುತ ಸಂತೈಸುವ ಉರಗಾದ್ರಿವಾಸ ವಿಠ್ಠಲ ಸಂತೈಸು ಚರಣಕಮಲಗಳಿಗೆರಗಿ ಭಿನ್ನೈಸುವೆ1 ಮಂದಮತಿಯು ನಾನೆಂದು ವಂದಿಪರ ಬಂಧನ ಕಳೆಯುತ ಮುಂದೆ ಗತಿಯು ತೋರಿ ತಂದೆ ವೆಂಕಟೇಶ ವಿಠ್ಠಲ ಭಕುತರ ಸಂದಣಿ ಪೊರೆಯುವರೆಂಬ ಬಿರುದು ದೇವ 2 ಆಶಾಪಾಶಗಳಿಗೊಳಗಾಗಿಹ ಮನ- ದಾಸೆ ಪೂರೈಸುತ ನೀ ಸಲಹೈ ಗುರು ವಾಸುದೇವ ವಿಠ್ಠಲ ಹರಿ ಭಕುತರ ದಾಸ್ಯವ ಕೊಟ್ಟು ಉಲ್ಲಾಸ ಒದಗಿಸುತ 3 ಮೊದಲೆ ನಿನ್ನಯಪಾದ ಹೃದಯದಿ ಭಜಿಸದೆ ಒದಗಿದ ಪಾಪದಿ ಹೆದರÀುತಲಿದೆ ಮನ ಪದುಮಜಾಂಡ ಸೃಜಿಸಿದ ಪರಮಾತ್ಮನಿ- ಗದ್ಭುತವೇ ಪಾಮರರನು ಪೊರೆವುದು 4 ಮಣಿದು ಬಿನ್ನೈಸುವೆ ಪವನಮತವÀ ತೋರಿ ಬಿನಗು ಬುದ್ಧಿಗಳ ಗಮನಕೆ ತಾರದೆ ಕಮಲನಾಭ ವಿಠ್ಠಲ ತವ ಕರುಣದಿ ಮನದ ಕ್ಲೇಶಗಳ ಕಳೆದು ಉದ್ಧರಿಸುತ 5
--------------
ನಿಡಗುರುಕಿ ಜೀವೂಬಾಯಿ
ಸ್ಮರಿಸುವರಘಹರ ರಾಘವೇಂದ್ರ ಗುರುಆರುಮೊರೆ ಇಡುವೆನು ತವಪದದಲ್ಲೀ ಪ ಸುರತರು ನಿನ್ನನು | ನಿರುತದಿ ನುತಿಸುವವರವನೆ ಕರುಣಿಸು | ಗುರು ರಾಘವೇಂದ್ರ ಅ.ಪ. ಕೃತ ಯುಗದೊಳು ತಾ | ಮುನಿ ಕಶ್ಯಪನಸುತನಲಿ ಮೋದದಿ | ಸುತನಾಗಿ ಜನಿಸುತ |ಪಿತನತಿ ಬಾಧೆಗೆ | ಅಳುಕದೆ ಮನ್ಮಥಪಿತನಧಿಕೆಂದು ಬಹು | ಸಾರಿದೆ ಗುರುವರ 1 ಜನಪ ಪ್ರತೀಪನ | ಸುತ ವರನೆನಿಸುತಜನಿಸುತ ಪ್ರೀತಿಲಿ | ದ್ವಾಪರದಲ್ಲೀ |ಘನಬಲ ಬಾಹ್ಲೀಕ | ನೆನಿಸುತ ನೀನೂಅನಿರುದ್ಧ ಮೂರ್ತಿಯ | ಸೇವಿಸಿ ಮೆರೆದೆ 2 ನ್ಯಾಯಾ ಮೃತ ಚಂ | ದ್ರಿಕೆಗಳ ರಚಿಸುತಮಾಯ ಮತವನು | ಪರಿಪರಿ ಜೆರೆಯುತ |ಕಾಯ ಜನಯ್ಯನ | ಕೀರ್ತಿಯ ಬೀರುತತೋಯಜಾಕ್ಷ ಹರಿ | ಅಧಿಕೆಂದು ಸಾರಿದೆ 3 ಸಂಗವ ತೊರೆದು | ಸುಧೀಂದ್ರರ ಕರಜನೆತಂಗಾತೀರದಿ | ಮಂತ್ರಾಲಯದಲಿ |ಮಂಗಳ ಮಹಿಮನ | ಧ್ಯಾನವ ಗೈಯುತತುಂಗ ವಿಕ್ರಮ ಹರಿ | ಪರನೆಂದು ಸಾರಿದೆ 4 ವಾತನ ಮತ ವಿ | ಸ್ತರಿಸಿದ ಧೀರನೆದ್ವೈತ ದುಂದುಭಿಯ | ಮೊಳಗಿಸಿದಾತನೆ |ದೂತರ ಪ್ರಿಯ ಗುರು | ಗೋವಿಂದ ವಿಠಲನಪ್ರೀತಿಲಿ ಭಜಿಸುವ | ದಾಸಾಗ್ರಣಿಯೇ 5
--------------
ಗುರುಗೋವಿಂದವಿಠಲರು
ಸ್ಮರಿಸುವೆನು ಗುರುರಾಯ ವರಮಂತ್ರ ಪುರಾಧಿಪ ಪೊರೆಯೊ ಎನ್ನನು ಜೀಯಾ ತವ ಮಹಿಮ ವರ್ಣಿಸ ಲರಿಯ ಮುರಹರಪ್ರೀಯಾ ಅಧ ಮಾಧಮನ ಮಮ ಪರಿಯ ನೀ ಬಲ್ಲೆಯ್ಯಾ ತೋರಯ್ಯಾ ದಯ ವರದ ಚರಿತೆಯ ಅರುಹುವದಕೆ ಪರವಾಕ್ಯರಣಿಯನು ಪಾಲಿಸಿ ನಿರುತ ಹರಿಗುರು ಚರಣದಲಿ ರತಿ ತ್ವರಿತ ಕರುಣಿಸು ರಾಘವೇಂದ್ರನೆ ಪ ಹಿಂದೆ ಕೃತಯುಗದಲಿ ಪ್ರಹ್ಲಾದ ನಾಮದಿ ತಂದೆ ಹಿರಣ್ಯಾಕ್ಷನಲಿ ಸರ್ವೋತ್ತಮನು ಹರಿ ದ್ವಂದ್ವ ಕರ್ಮವನಲಿ ಅರ್ಪಿಸಲು ಮಹದಾ ನಂದ ಪೊಂದುವರಲ್ಲಿ ಎಂದು ಪೇಳುತಿರೆ ಮಂದ ದೈತ್ಯವನಂದ ಮಾತಿಗೆ ಬಂಧನಾದಿಗ ಳಿಂದ ಶಿಕ್ಷಿಸೆ ಬಂದ ದುರಿತವನಂದು ಕಳೆದಾ ಕಂದನನು ಹರಿಪೊರೆಯೆ ದಿತಿಜನು ಒಂದೂ ತಿಳಿಯದೆ ಮಂದಿರ ಗೋವಿಂನೆಲ್ಲಿಹ ನೆಂದು ಕೇಳುತ ಮಂದರರೋದ್ಧಾರ ನಿಲ್ಲದಿಹ ಸ್ಥಳ ವಂದೂ ಇಲ್ಲವೂ ಎಂಂದು ಸಾರಿದೆ ತಂದು ತೋರಿಸು ಸ್ತಂಭದಲಿ ತವ ಇಂದಿರಾಪತಿಯೆಂದು ಗರ್ಜಿಸೆ ಕಂದನಾಡಿದ ಮಾತುಗಳನು ನಿಜ ವೆಂದು ನರಹರಿ ಪೊರೆದೆ 1 ಶ್ರೀಶನಾಜ್ಞೆಯ ವಹಿಸಿ ದ್ವಿತೀಯಾವತಾರದಿ ವ್ಯಾಸರಾಯನು ಎನಿಸಿ ಬ್ರಹ್ಮಣ್ಯರÀಲಿ ಸ ನ್ಯಾಸವನು ಸ್ವೀಕರಿಸಿ ಸರ್ವಜ್ಞ ಶಾಸ್ತ್ರಾಭ್ಯಾಸವನು ಪೂರೈಸಿ ವ್ಯಾಸತ್ರಯ ರಚಿಸಿ ದೇಶದೇಶಗಳನ್ನು ಚರಿಸುತ ಆ ಸಮಸ್ತ ಕುವಾದಿಗಳ ಮತ ನಾಶಗೊಳಿಸಿ ರ ಮೇಶ ಶ್ರೀ ವೆಂಕಟೇಶನನು ಬಹುದಿನವು ಪೋಜಿಸಿ ವಾಸಿಸುತ ಗಜರಾಮ ಪುರಧಾಧೀಶರಾಯನ ಕುಹಯೋಗವ ಪುರಂದರ ದಾಸರಿಂದೊಡಗೂಡಿ ಕೃಷ್ಣನುಪಾಸನೆಯ ಭಕ್ತಿಯಲಿ ಗೈಯುತ ವಾಸುದೇವನ ಶಿಲ್ಪ ಶಾಸ್ತ್ರದ ಶಾಸನಕೆ ಪ್ರತಿಯಾಗಿ ನಿಲ್ಲಿಸಿ ತೋಷಿಸಿದ ಸೌಭಾಗ್ಯ ವೈಭವ 2 ಪದುವ ಸಂಭವ ಜಾತ ಶ್ರೀ ರಾಘವೇಂದ್ರ ಸು ಪದವ ಪಡೆದ ಪ್ರಖ್ಯಾತ ಜಯತೀರ್ಥ ಮುನಿಕೃತ ಸುಧೆಗೆ ಪರಿಮುಳ ಗ್ರಂಧ ರಚಿಸಿ ಮೆರೆದಾತ ಬಧಿರ ಮೂಕಾಂಧ ವ್ಯಂಗ್ಯರು ವಿಧ ವಿಧಿದ ಘನರೋಗಗ್ರಸ್ತರು ಸದಯ ನೀಗತಿಯೆಂದು ಸೇವಿಸೆ ತ್ರಿದಶ ಭೂರುಹದಂತೆ ಸಲಹುವಿ ಕುಧರ ತೀರದಿ ಮೂಲ ರಘುಪತಿ ಪದವ ಪೂಜಿಸುತಲಿ ಸಜೀವದಿ ಮುದದಿ ವೃಂದಾವನ ಪ್ರವೇಶಿಸಿ ಪದುಮನಾಭ ಶ್ರೀ ಶಾಮಸುಂದರ ಮಧು ವಿರೋಧಿಯನು ಧ್ಯಾನಿಸುತ ಶಿರಿ ಸದನನು ವಲಿಸುತ್ತ ಕರುಣಾ ನಿಧಿಯು ಭಜಕರ ಪೊರೆವ ಮಹಿಮೆಯ 3
--------------
ಶಾಮಸುಂದರ ವಿಠಲ
ಸ್ಮರಿಸುವೆನು ಸದ್ಭಕ್ತಿಯಲಿ ಶ್ರೀರಾಮನ ಗುಣಧಾಮನ ಸಿರಿವಿರಿಂಚಾದ್ಯಮರಗಣ ಸಂಸ್ತುತ್ಯನ ಸಂತೃಪ್ತನಾ ಪ ಆದಿಯಲಿ ಝಷನಾಗಿ ನಿಗಮವ ತಂದನ ಮುನಿವಂದ್ಯನ ಭೂಧರಾಧರ ದಿವಿಜರಿಗೆ ಸುಧೆಗರೆದನ ಸುರವರದನ ಕಾದು ಕಿಟರೂಪದಲಿ ಭೂಮಿಯ ತಂದನ ಗುಣವೃಂದನ ಬಾಧಿಸಿದ ರಕ್ಕಸನ ತರಿದು ಪ್ರಲ್ಹಾದನ ತಾ ಪೊರೆದನ 1 ತುಳಿದನ ಅವಗೊಲಿದನ ಕೊಡಲಿ ಪಿಡಿದಾ ಕ್ಷತ್ರಿಕುಲ ವಿರಾಮನ ಭೃಗು ರಾಮನ ಮೃಡನೊರದಿ ಯುನ್ಮತ್ತ ದೈತ್ಯರು ಬಾಧಿಸೆ ಧರಿ ಪ್ರಾರ್ಥಿಸೆ ಜಡಜ ಪೀಠಾದ್ಯಮರರಾ ಮೊರೆ ಕೇಳ್ದನ ಧರೆಗಿಳಿದನ 2 ದಶರಥನ ಸತಿಯುದರದಲಿಯವತರಿಸಿದ ಮುದಗರಿಸಿದ ಬಿಸರುಹಾಪ್ತನ ವಂಶವನು ಉದ್ಧರಿಸಿದ ಮೈಮರಸಿದ ದಶದಿಶೆದಿ ಸುರರೆಲ್ಲ ಪೂಮಳೆಗರೆದರು ಸುಖಸುರಿದರು ಅಸಮಲೀಲೆಯ ತೋರ್ದರಘುಕಲಚಂದ್ರನ ಸುಖಸಾಂದ್ರನ 3 ಗಾಧಿಸುತನಧ್ವರವ ಕಾಯ್ದ ಸಮರ್ಥನ ಜಗಕರ್ತನ ವೇದಧನು ಮೊದಲಾದ ಕಲೆಗಳ ತಿಳಿದನ ಮುನಿಗೊಲಿದನ ಹಾದಿಯಲಿ ಶಿಲೆಯಾದ ಅಹಲ್ಯಳ ಪೊರೆದನ ಸಿರಿವರದನ ಮೋದದಲಿ ಹರಧನು ಮುರಿದ ಗಂಭೀರನ ಬಹುಶೂರನ 4 ಜನಕಭೂಪತಿ ತನುಜಳೆನಿಸಿದಸೀತೆಯ ಭೂಜಾತೆಯಾ ಘನಹರುಷದಲಿ ವಲಿಸಿಕರವನು ಪಿಡಿದನ ಯಶಪಡೆದನ ದನುಜರುಪಟಳತೋರಲಾಕ್ಷಣ ಸೀಳ್ಪನ ಸುರರಾಳ್ದನ ತನಗೆ ತಾನೇ ಸೋಲಿಸಿದ ಜನಮೋಹನ ಖಗವಾಹನ 5 ಜನಕನಾಜ್ಞವ ಪಾಲಿಸಿದ ದಯವಂತನ ಅಘಶಾಂತನ ಅನುಜಸತಿಸಹ ಪುರದಿ ತಾಪೊರಮಟ್ಟನ ಅತಿಧಿಟ್ಟನ ವನದಿ ಬಹು ಮುನಿಗಳ ಕಾರಾರ್ಚಿತನಾದನ ಸುಪ್ರಸಾದನ ಅನುಜ ಭರತಗೆ ದಯದಿ ಪಾದುಕೆ ಕೊಟ್ಟನ ಸಂತುಷ್ಟನ 6 ಮನುಜರಂದದಿ ಸತಿವಿಯೋಗವತೋರ್ದನ ಕುಜನಾರ್ದನ ವನಿತೆಯಂಜಲ ಫಲಗಳನು ತಾಮೆದ್ದನ ಶ್ರುತಿಸಿದ್ಧನ ದನುಜರಿಪು ಹನುಮಂತನನು ಸಾರೆ ಗರೆದನ ಕರುಣಿಸಿದನ ವನಜ ಸಖಸುತನೊಡನೆ ಸಖ್ಯವ ಮಾಡ್ಡನ ವರನೀಡ್ಡನ 7 ಲೀಲೆಯಿಂದಲಿ ತಾಳ ಮರಗಳ ಸೀಳ್ದನ ನೆರೆಬಾಳ್ದನ ವಾಲಿಯನು ಸಂಹರಿಸಿದತಿಬಲವಂತನ ಶ್ರೀಕಾಂತನ ಮೇಲೆನಿಪ ರಕ್ಕಸರನೆಲ್ಲರ ತುಳಿದನ ಅಸುಸೆಳೆದನ ಶ್ರೀಲತಾಂಗಿಯ ಕ್ಷೇಮವಾರ್ತೆಯ ಕೇಳ್ದನ ಮುದತಾಳ್ದನ 8 ಗಿರಿಗಳಿಂದಲಿ ಶರಧಿಯನು ಬಂಧಿಸಿದನ ಸಂಧಿಸಿದನ ಹರಿಗಳೆಲ್ಲರ ಕೂಡಿಲಂಕೆಯ ಸಾರ್ಧನ ರಣದಿರ್ದನ ಉರುಪರಾಕ್ರಮಿ ರಾವಣನ ಶಿರಕಡಿದನ ಹುಡಿಗೆಡೆದನ ವರವಿಭೀಷಣ ಭಕ್ತಗಭಿಷೇಚಿಸಿದನ ಪೋಷಿಸಿದನ 9 ಸಿರಿಸಹಿತ ಪುಷ್ಪಕವನೇರಿದ ಚಲುವನ ಅತಿ ಪೊಳೆವನ ತ್ವರದಿಶೃಂಗರಿಸಿದ ಅಯೋಧ್ಯಕೆ ಬಂದನ ಅಲ್ಲಿ ನಿಂದನ ಭರತ ಪ್ರಾರ್ಥಿಸಲಾಕ್ಷಣದಿ ಮೊರೆ ಕೇಳ್ದನ ಧರಿಯಾಳ್ದನ ಸರಸಿಜಾಸನ ಪ್ರಮುಖರಾರ್ಚನೆ ಕೊಂಡನ ಕೋದಂಡನ 10 ಮರುತಸುತನಿಗೆ ಅಜನ ಪದವಿಯನಿತ್ತನ ಬಹುಶಕ್ತನ ಚರಣಸೇವಕ ಜನಕಭೀಷ್ಟದಾತನ ವಿಖ್ಯಾತನ ನಿರುತ ಸನ್ಮುನಿಹೃದಯ ಮಂದಿರ ವಾಸನ ಜಗದೀಶನ ಸ್ಮರಣೆ ಮಾತ್ರದಿ ದುರಿತರಾಶಿಯ ತರಿದನ ಸುಖಗರೆವನ 11 ದೇವಕೀ ವಸುದೇವ ಸುತನೆಂದೆನಿಪನ ಜಗಕಧಿಪನ ಮಾವನನು ಸಂಹರಿಸಿ ಶಕಟನ ಕೊಂದನ ಆನಂದನ ಗೋವು ಕಾಯುತ ಗಿರಿಯ ಬೆರಳಲಿ ಆಂತನ ಬಹುಶಾಂತನ ಗೋವ್ರಜದಿ ಗೋಪಿಯರ ವಸನವ ಕಳೆದನ ಅಹಿತುಳಿದನ 12 ಲೋಕನಾಥನು ಪಾರ್ಥಸಾರಥಿಯಾದನ ಸುಪ್ರಮೋದನ ನೇಕ ಪರಿಭಗವತ್ಸುಗೀತೆಯ ಪೇಳ್ದನ ತಮಸೀಳ್ದನ ಆ ಕುರು ಕುಲವ ತರಿದ ಪಾಂಡವ ಪ್ರಾಣನ ಸುಪ್ರವೀಣನ ಆಕುರುಪ ಭೀಷ್ಮನಿಗೆ ಮುಕ್ತಿಯ ಕೊಟ್ಟನ ಅತಿಶ್ರೇಷ್ಟನ 13 ಕಪಟನಾಟಕ ನಗ್ನರೂಪದಿ ನಿಂತನ ನಿಶ್ಚಿಂತನ ತ್ರಿಪುರದಲಿ ಜಲಜಾಕ್ಷಿಯರ ವ್ರತ ಭÀಂಗನ ನಿಸ್ಸಂಗನ ಕೃಪಣವತ್ಸಲ ತುರಗವೇರಿ ತಾನಡೆದನ ಅಸಿಪಿಡಿದನ ಅಪರಿಮಿತ ಬಹುಕ್ರೂರ ಯವನ ವಿಘಾತನ ಪ್ರಖ್ಯಾತನ 14 ಈ ವಿಧದಿ ಬಹುಲೀಲೆ ಗೈವ ಸುಚರಿತನ ಜಗಭರಿತನ ಭಾವಶುದ್ಧಿಲಿ ಭಜಿಸುವವರಘಕಡಿವನ ಗತಿಕೊಡುವನ ಪಾವಮಾನಿ ಮತಾನುಗರ ಕರಪಿಡಿವನ ಭವತಡೆವನ ದೇವತತಿ ಸದ್ವಿನುತ ವರದೇಶ ವಿಠಲನ ನಿಷ್ಕುಟಿಲನ 15
--------------
ವರದೇಶವಿಠಲ
ಸ್ಮರಿಸೆಲವೋ ಸ್ಮರಿಸೆಲವೋ ಮನವೇ | ನಿರುತದಿ ಗುರುಮಹೀಪತಿ ಪಾದಾ ಪ ಆದ್ಯಾತ್ಮದಘನ ವಿದ್ಯೆಯ ಸಾಧಿಸಿ | ಸಿದ್ಧರ ನಡುವೆ ಪ್ರಸಿದ್ಧರಾದವರ 1 ನೆಟ್ಟನೆ ಶರಣರ ಪುಟ್ಟಿಸಿರಧಿಕಾ | ಬಿಟ್ಟುಪದೇಶವ ಕೊಟ್ಟು ಸಾಕುವರಾ 2 ಧಾರುಣಿಯೊಳು ಸಂಸಾರ ಮಾಡಿದರ | ಸಾರಸಜಲದಂತೆ ರಚಿಸಿದರಾ 3 ಯೋಗಧಾರುಣದಿ ಸಾಗಿಪದಿನಗಳು | ಭಾಗವತಾಗ್ರಣಿ ಎನಿಪಶ್ರೀಗುರುಪಾದಾ4 ವಿತ್ತಜನರು ತಂದಿತ್ತರೆ ಹಿಡಿಯದೆ | ನಿತ್ಯವ್ಯಯವ ಪವಡಿಸುತಿಹರವರಾ5 ಯುಕ್ತದಿ ವಿಷಯಾಸಕ್ತಿಯತ್ಯಜಿಸಿ | ವಿ ರಕ್ತಿ ಬೆಳಿಸಿ ಸುಮುಕ್ತಿ ಪಡೆದವರಾ 6 ಸ್ವಸ್ಥದಿ ನಾಲ್ಕು ಅವಸ್ಥೆಯ ಮೀರಿ | ಸ ಮಸ್ತರಲಿ ನಿಜ ವಸ್ತು ಕಂಡವರಾ7 ಕಾಖಂಡಕಿ ಸ್ಥಳ ಶ್ರೀಕರವಂದ್ಯೆ | ನಿ ರಾಕರಿಸದೆ ಅಂಗೀಕರಿಸಿದರಾ 8 ಎಂದೆಂದಿಗೂ ಹೊರಗೊಂದಿನ ಹೋಗದೆ | ಮಂದಿರದೊಳಗಾನಂದದಲಿಹರಾ9 ತಾಪತೃಯದಾ ಭವಪರಿಹರಿಸುತ | ತಾಪೋರೆದನು ಗುರು ಶ್ರೀಪತಿಗುರುಪಾದಾ 10 ಅಂಕಿತ-ಗುರುಶ್ರೀಪತಿ
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಸ್ಮರಿಸೊ ಹರಿನಾಮ ಏ ಮನುಜಾ ಸ್ಮರಿಸೋ ಹರಿನಾಮ ನಿರವಧಿ ಸುಖಧಾಮ ಪರಮ ಪುರುಷಗಿದು ಪರಿಪೂರ್ಣ ಪ್ರೇಮ ಪ. ತರಳ ಪ್ರಹ್ಲಾದನ ಪೊರದು ಪಾಂಚಾಲಿಗೆ ತ್ವರಿತದೊಳಕ್ಷಯವಿತ್ತು ಸರಸಿಯೊಳಗೆ ಕರಿರಾಜನ ಸಲಹಿದ ನರ ಕಂಠೀರವ ಕರುಣಿಸುವನು ಬೇಗ 1 ಹಲವು ಜನ್ಮಗಳಲ್ಲಿ ಗಳಿಸಿದ ದುಷ್ಕøತ ಗಳನೆಲ್ಲ ನಿರ್ಮೂಲಗೊಳಿಸುವುದು ಜಲಜ ಸಂಭವ ಮಾಳ್ಪ ಕೆಲಸದಿ ಸಿಲುಕದೇ ನೆಲೆಗೊಂಡು ಸೌಖ್ಯವ ಸಲಿಸಬೇಕಾದರೆ 2 ಕಲಿಕೃತ ಕಲ್ಮಷ ಬಲೆಯಿಂದ ಮೋಚನ- ಗೊಳಿಸಲು ಹರಿನಾಮವಲ್ಲದಿನ್ನು ಚಲಿತ ಚಿತ್ತದ ಕರ್ಮಬಲದಿಂದಲಾಹದೆ ನಳಿನನಾಭನೇ ನೀ ಬೆಂಬಲನಾಗು ತನಗೆಂದು 3 ಉದಯಾರಂಭಿಸಿ ಮತ್ತೊಂದು ದಯ ಪರ್ಯಂತ ವಿಧಿವಿಹಿತಗಳೆಲ್ಲ ಸದರವೇನೊ ಪದುಮನಾಭನ ನಾಮ ಒದಗಿದರದು ಪೂರ್ಣ- ವದರಿಂದ ಸರ್ವರ ಹೃದಯ ನೀ ಮರೆಯದೆ 4 ಸಂಚಿತಾಗಾಮಿಗಳಂಚುವಂ ದಿತಿಜರ ಸಂಚಯಕನುದಿನ ಸ್ಮರಿಸುವರ ಕಿಂತಿತಾರಬ್ದ ಪ್ರಪಂಚವ ತ್ವರಿತದಿ ಮಿಂಚಿನಂದದಿ ತೋರಿ ಪರಿಹಾರಗೊಳಿಪರೇ 5 ಕರುಣಾಭಿಮಾನಿಗಳರಿತು ಮಾಡಿಸುತಿಹ ನಿರತ ಕೃತ್ಯಗಳೊಂದು ಮೀರದಲೆ ಹರಿಯಾಜ್ಞೆ ಇದು ಯೆಂದು ಚರಿಸುತಲನುದಿನ ಪರಮೋತ್ತಮ ಕಾರ್ಯಧುರವಿದೆ ತನಗೆಂದು 6 ನಾಗ ಗಿರೀಂದ್ರನ ನೆನೆದರೆ ಇಹಪರ ಭೋಗ ಸಾಮ್ರಾಜ್ಯವು ಸ್ಥಿರವಾಹುದು ವಾಗೀಶನ ಪರಮಾಗಮ ಸಿದ್ಧಾಂತ- ವಾಗಿಹದಿದೆಯೆಂದು ನೀ ಗುರುತವನಿಟ್ಟು 7
--------------
ತುಪಾಕಿ ವೆಂಕಟರಮಣಾಚಾರ್ಯ
ಸ್ಮರಿಸೋ ಆದರಿಸೋ ಆನಮಿಸೊ, ಮಾನವನೆ ಗುರುಪದವ ಪೊಂದು ಮುದವ ಹೇ ಮನವೇ ನೀ ಸ್ಮರಿಸೋ ಪ ದುರಿತ ತಿಮಿರಕೆ ತರಣಿ ಸಮರೆಂದೆನಿಸಿ ದ್ವಿಜರೊಳು ಮೆರೆದು ವಿಭವದಿ ಕರೆದು ಛಾತ್ರರ ಪೊರೆದ ಐಕೂರು ನರಶಿಂಹಾರ್ಯರ ಅ.ಪ ವರವೆಂಕಟಾರ್ಯರ ತರುಣಿ ಸೀತಾಗರ್ಭ ಶರಧಿಯಿಂದ ಜನಿಸಿದ ಶಶಿಯ ತೆರದಿ ಧರಿಸಿ ವಿಪ್ರತ್ವವನು ಶೀಘ್ರದಿ ಇರಿಸಿ ದ್ವಿತಿಯಾಶ್ರಮದಿ ಪದವನು ಚರಿಸುತಲೆ ಸಾಧನಸುಮಾರ್ಗದಿ ಕರೆಸಿದರು ವರಭಾಗವತರೆಂದು 1 ಹರಿಪದದಲಿ ಮನವಿರಿಸಿ ದುರ್ವಿಷಯಧಿಃ ಕರೆಸಿ ಧಿ:ಕರಿಸಿ ಪ್ರಿತಾಜ್ಞಾನುಸರಿಸಿ ಧರಣಿಯೊಳು ಗುರುಕರುಣದಿಂದಲಿ ಮರುತ ಶಾಸ್ತ್ರವನರಿತು ಕರುಣದಿ ಸರಸದಲಿ ಸಚ್ಛಾಸ್ತ್ರ ಮರ್ಮವ- ನರುಹಿ ಜನರನುಧ್ಧರಿಸಿದವರನು 2 ಕರ್ಮ ಹರಿಯೆ ಮೂಡಿಸುವನೆಂದರಿದು ಅರಿದು ಧ್ಯಾನಿಸುತ ಮೈಮರೆದು ಹರಿಯ ಗುಣಗಳ ಪೊಗಳಿ ಹಿಗ್ಗುತ ಶರಣು ಜನ ಮಂದಾರ ಕಾರ್ಪರ ಶರಣಶಿರಿ ನರಹರಿಯ ಪುರವನು ತ್ವರದಿ ಸೇರಿದವರ ಸುಚರಿತೆಯ 3
--------------
ಕಾರ್ಪರ ನರಹರಿದಾಸರು
ಸ್ವಾಗತ ಸುಗುಣಗೆ ಸ್ವಾಗತ ಕರುಣಿಗೆ ಸ್ವಾಗತವು ನವಸಚಿವರಿಗೆ | ಸ್ವಾಗತ ಸ್ವಾರ್ಥ ವಿದೂರರಾದ ಜಗನ್ನಾಯಕ ನಾಮ ರಾಯರಿಗೆ || ತರಳತನದಿ ಇವರು ಸರಳ ಮನಸ್ಸಿನಲ್ಲಿ ಸರಸ್ವತಿದೇವಿಯನೊಲಿಸಿದರು | ಪರಮಪೂಜ್ಯ ಮಹತ್ವರ ತತ್ವ ತಿರುಳು ತಿಳಿದು ಆಚರಿಸಿದರು 1 ಪ್ರಾಂತದ ಬಡವರ ಚಿಂತೆಕಡಿಯಲು ಸ್ವಾಂತದಿ ಪಂಥವ ಗೈದವರೋ || ಕ್ರಾಂತಿಯ ಹೂಡುತ ಶಾಂತಿ ಸಂಗರದಿ ನಿಂತು ಹೋರಾಡಿದ ಯೋಧರು 2 ದುರುಳರಾಳಿಕೆಯಲಿ ಜರಿದು ಧಿಃಕರಿಸಿ ಸೆರೆಮನೆ ಕಷ್ಟವ ಸಹಿಸಿದರು | ದೊರೆಯ ಸ್ವತಂತ್ರವು ಬಹುಮತದಲಿ ಸ್ವೀಕರಿಸಿದರು ಮಂತ್ರಿಪದವಿಯನು 3 ಉಚ್ಚನೀಚವೆಂಬ ಕುತ್ಸಿತ ಭಾವವ | ಕೊಚ್ಚಿ ಬೀಸಾಡಿದ ಜಾಣರು | ಅಚ್ಚಗನ್ನಡದ ವೀರ ಜನನಿಗೆ ಅಚ್ಭದ ಪ್ರೀಯ ಸುಕುಮಾರರು 4 ಈ ಮಹಾಚತುರನ ಪಡೆದ ಚಂಡ್ರಿಕಿ ಗ್ರಾಮದೇವಿ ಬಹುಪುಣ್ಯವತಿ | ಪ್ರೇಮ ದಿಂದಿವರ ನೇಮವ ನಡೆಸುವ ಶಾಮಸುಂದರನು ದಿನಂಪ್ರತಿ5
--------------
ಶಾಮಸುಂದರ ವಿಠಲ
ಸ್ವಾತಂತ್ರ್ಯವೆನಗುಂಟೆ ಸರ್ವಾಂತರ್ಯಾಮಿ ಪ ನಿಂತು ನೀ ನಡೆಸುವಿಯೊ ಜೀವಾಂತರ್ಯಾಮಿ ಅ.ಪ ಜೀವ ಸ್ವರೂಪದಲಿ ಜೀವನಾಕಾರದೊಳಿದ್ದು ಅನಾದಿಕರ್ಮ ಜೀವರಿಗೆ ಪ್ರೇರಿಸಿ ಜೀವಕೆ ಚೇತನ ಕೊಟ್ಟು ಜೀವಕ್ರಿಯೆಗಳನ- ಭಿವ್ಯಕ್ತಿ ಮಾಡಿ ಸತತ ಪೊರೆಯುವ ಕರುಣಿ 1 ದತ್ತಸ್ವಾತಂತ್ಯ ತನಗಿತ್ತಿಹನು ದೇವನೆಂದು- ನ್ಮತ್ತತನದಿ ತಾ ಕರ್ತನೆಂದೆನಿಸಿ ಸುತ್ತಲಹ ನಿತ್ಯ ಅವಸ್ಥೆಗಳ ಪರಿಹರಕೆ ಶಕ್ತನಾಗನು ಏಕೆ ಆಪತ್ತುಗಳು ಬರಲು 2 ಪೂರ್ಣವಾಗಿ ತಾ ಜಡನಂತಿಹಾ ಕರಣದಲಿ ಶ್ರೀರಮಣ ಸೇರಿ ಚೇತನ ಕೊಟ್ಟು ಕ್ರೀಡೆಗೋಸುಗ ಬಿಡುವ ಸರ್ವ ಜೀವರನಾ 3 ಅನಾದಿಕರ್ಮ ಎನ್ನದೆಂದಿಗು ಸರಿಯೆ ಮುನ್ನ ಪ್ರಳಯದಿ ನಿನ್ನ ಘನ್ನೊಡಲೊಳಿಂಬಿಟ್ಟೆ ಎನ್ನ ಕರ್ಮಗ್ರಂಥಿ ಎನ್ನಿಂದ ಬಿಡಿಸೊ 4 ಅನಿರುದ್ಧ ಲಿಂಗಾ ಅಂಗೋಪಾಂಗದಲಿ ನೀನ್ಹಾಂಗೇ ಮೆರೆವೆ 5 ಹೃಷೀಕಪನೆ ನಿನಗೆ ಇದು ಸಂತೋಷವೇನೊ ಈಷಣತ್ರಯ ಹರಿಸಿ ಪೋಷಿಸೋ ದೇವಾ 6 ತರಣಿ ತರಣಿಕಿರಣನನುಸರಿಸಿ ವೃತ್ತಿಯಹುದೊ ತ್ವರಿತದಲಿ ಸ್ಥೂಲದಲಿ ಕಾರ್ಯಾಭಿವ್ಯಕ್ತಿಯೊ 7 ನಾನತ್ತು ಫಲವೇನೊ ಸ್ಥಿತಿಕಾಲದಿ ನೀನಿಲ್ಲದಿನ್ನಿಲ್ಲ ಪ್ರತಿಬಿಂಬ ಕಾರ್ಯವಹುದೋ 8 ಹೆಚ್ಚು ಮಾತೇನು ಜೀವನಿಚ್ಛೆಯನನುಸರಿಸಿ ಅಚ್ಯುತ ತಾನೆ ಸ್ವೇಚ್ಛಚರಿಸಿ ಎಚ್ಚರಿಸಿ ಸ್ಥೂಲದಿಂದೆಚ್ಚರದಿ ನಡೆವುದೊ 9 ನಿನ್ನ ಸಂಕಲ್ಪವಲ್ಲದಿನ್ನಿಲ್ಲ ಅನ್ಯಥಾಗುವುದುಂಟೆ ಇನ್ನು ಹರಿಸೋದೇವಾ 10 ಶ್ರೀದನಿಂ ದತ್ತಸ್ವಾತಂತ್ರ್ಯ ಸಮ್ಮತವೇನು ಆದರಿಸಿ ಸಲಹಯ್ಯ ಮೋದತೀರ್ಥಾ- ರಾಧ್ಯ ಶ್ರೀ ವೇಂಕಟೇಶಾ11
--------------
ಉರಗಾದ್ರಿವಾಸವಿಠಲದಾಸರು
ಸ್ವಾಮಿ ವೆಂಕಟರಮಣ ಭೂಮಿಪಾಲಕ ದೇವ ಸಂಜೀವ ಪ ಸುರರು ಅಸುರರೆಲ್ಲ ಶರಧಿಯ ಮಥಿಸಲು ಸಿರಿಯು ಜನಿಸಿ ಬಂದು ಹರಿಯ ಸೇರಿದಳು 1 ಸತಿ ಕುಸುಮಮಾಲೆಯನು ಅತಿ ಹರುಷದಿ ಜಗತ್ಪತಿಗೆಯಿಕ್ಕಿದಳು 2 ವಾರಿಧಿಯಾಕ್ಷಣ ಧಾರೆಯನೆರೆಯಲು ವಾರಿಜಾಂಬಕ ಲಕ್ಷ್ಮಿ ಒಡನೆ ನಿಂದಿರಲು 3 ಫಣ್ಭಿಹ್ತ್ರ1ಸೆಮಣಿಯೊಳು ರಮಣಿಯನೊಡಗೊಂಡು ಗುಣನಿಧಿಯು ಒಪ್ಪಿರಲು ತರುಣಿಯರೆಲ್ಲ 4 ಪಚ್ಚವ ಧರಿಸಿ ನವ ಸ್ವಚ್ಛವಾಗಿಯೆ ತುಳಿದು ಅಚ್ಯುತ ಮಹಾಲಕ್ಷ್ಮಿಗಚ್ಚಬೇಕೆನುತ 5 ಸಣ್ಣ ಮಲ್ಲಿಗೆ ಎಣ್ಣೆ ಬಣ್ಣವಾದರಿಸಿನವ ಪುಣ್ಯವಂತೆಗೆ ಕೈಗರ್ಣವ ಕೊಡಲು 6 ಸಿರಿ ತನ್ನ ತಲೆಗೆ ಪ್ರೋಕ್ಷಿಸಿಕೊಳಲು ಹರಿಯು ಮೆಚ್ಚಿದನು 7 ಗಟ್ಟಿಯಾದರಿಸಿನವ ಬಟ್ಟಲೆಣ್ಣೆಯಗೂಡಿ ಮುಟ್ಟಲಂಜಿಯೆ ನಿಲಲು ಸೃಷ್ಟಿಪಾಲಕನ 8 ಅಂಗೈಯ ಅರಿಸಿಣವ ಮುಂಗೈಗೆ ಒರಸುತ್ತ ರಂಗನ ಸಿರಿಮೊಗವ ಕಂಗಳಿಂದೀಕ್ಷಿಸುತ 9 ಅಭಯ ಹಸ್ತವನಿತ್ತ ತ್ರಿಭುವನದೊಡೆಯನು ಅಬುಜಲೋಚನೆ ಮುಖಾಂಬುಜಕೆ ತಿಮುರಿದಳು 10 ಸತಿ ಕೈಯ ಅರಿಶಿಣವ ಪತಿಯಾದಿಕೇಶವನ ನುತಿಸಿ ಊರಿದಳು 11 ಸಿರಿಯೆನೆತ್ತಿದ ಕೈಯ ಹರಿ ತಾನು ತೋರಿಸಲು ಸಿರಿ ನಾರಾಯಣ ಎಂದು ಅರಿಶಿಣವ ತಿಮುರೆ 12 ಶಂಖವ ಧರಿಸಿದ ಪಂಕಜಾಕ್ಷನೆ ವಿಷ್ಣು ವೆಂಕಟೇಶನ ಕರಪಂಕಜಕೆ ತಿಮುರೆ 13 ಕದನದೊಳ್ ಖಳರನು ಸದೆದು ಮರ್ದಿಸಿ ಗೆಲಿದು ಮಧುಸೂದನ ಶ್ರೀವತ್ಸದೆದೆಯ ತೋರೆನುತ 14 ಚಕ್ರವ ಪಿಡಿದು ಪರಾಕ್ರಮಿಯೆನಿಸಿಯೇ ಅಕ್ರೂರಗೊಲಿದ ತ್ರಿವಿಕ್ರಮಗೆ ತಿಮುರೆ 15 ವಾಮನನನಾಗೆ ಶ್ರಮವನು ಪಟ್ಟೆನುತ ಭೂಮಿಯ ಅಳೆದ ಪಾದವಿತ್ತಲು ತಾರೆನುತ16 ಕಾದಲನು ಕಾಣುತ್ತ ಪಾದವನಿತ್ತನು ಶ್ರೀಧರನೆನುತಲಿ ಅರಸಿನವ ತಿಮುರೆ 17 ವಾಮಪಾದವ ಕಂಡು ಭಾಮಿನಿ ತಾರೆನೆಲು ಸೋಮಸನ್ನಿಭ ಹೃಷಿಕೇಶ ತಾನಿತ್ತ 18 ಪದ್ಮಬÁಂಧವ ತೇಜ ಪದ್ಮಸಂಭವ ಪೂಜ ಪದ್ಮನಾಭಗೆ ಪದ್ಮಗಂಧಿ ತಾ ತಿಮುರೆ 19 ಆ ಮಹಾ ನಾಮದ ದಾಮೋದರನ ಕಂಡು ಭಾವೆ ಮಹಾಲಕ್ಷುಮಿ ವೀಳ್ಯವ ಕೊಡಲು 20 ವಾಸುದೇವನು ತನ್ನ ಅರಸಿ ಮಾಲಕ್ಷ್ಮಿಗೆ ಪೂಸಿದನರಿಸಿನದ ಎಣ್ಣೆಯ ಮೊಗಕೆ 21 ಪಂಕಜಾಕ್ಷನ ಕಂಡು ಕಂಕಣದ ಹಸ್ತವನು ಕುಂಕುಮದೆಣ್ಣೆಯ ಸಂಕರ್ಷಣ ತಿಮುರೆ 22 ಬುದ್ಧಿವಂತೆಯ ಎಡದ ಮುದ್ದು ಹಸ್ತವ ನೋಡಿ ಉದ್ಧರಿಸಿ ನವ ಪ್ರದ್ಯುಮ್ನ ನಗುತ 23 ಅನಿರುದ್ಧ ನಗುತಲೆ ಘನಕುಚಮಂಡಲಕೆ ಅರಿಸಿನವ ತಿಮುರೆ 24 ಪುರುಷರೊಳು ಉತ್ತಮನು ಹರುಷವನು ತಾಳಿಯೆ ಅರಸಿ ಮಹಾಲಕ್ಷುಮಿಗೆ ಅರಿಸಿನವ ತಿಮುರೆ 25 ಅಧೋಕ್ಷಜನು ತನ್ನ ತುದಿವೆರಳ ಅರಿಸಿನವ ಪದುಮನೇತ್ರೆಯ ಪದದೊಳಗೆ ಮಿಡಿದಿರ್ದ 26 ನಾರಸಿಂಹನು ಸತಿಯ ಮೋರೆಯಿಂದಾರಭ್ಯ ಓರಣವಾಗಿಯೇ ಅರಿಸಿನವ ತಿಮುರೆ 27 ನೆಚ್ಚಿಯೆ ಹರಿ ತಾನು ಅಚ್ಚ ಕರ್ಪೂರದೆಲೆಯ ಅಚ್ಯುತ ಕೊಡಲು 28 ಮನದಿ ಲಜ್ಜಿತೆಯಾಗಿ ಘನಮಹಿಮ ಮುನಿವಂದ್ಯ ತನಗೆ ವಲ್ಲಭ ನಿಜನಾದನೆನುತ 29 ಆ ಪರಮಹಿಮನು ರೂಪಸಂಪನ್ನ ದ- ಯಾಪರನಾಗಿಯೆ ಉಪೇಂದ್ರ ತಾನೊಲಿದು 30 ಹರಯೆಂಬ ನಾಮದಿ ಹರದಿ ಮಾಲಕ್ಷ್ಮಿಯ ವರಸಿದ ಶ್ರೀಹರಿಯು ಹರದಿಯರ್ಪೊಗಳೆ31 ಬೆಟ್ಟದೊಡೆಯನೆನಿಸಿ ದೃಷ್ಟಿಗೋಚರವಾದ ಶ್ರೀಕೃಷ್ಣ ಮಾಲಕ್ಷುಮಿಗೆ ಆರತಿಯ ತಿಮುರೆ 32 ವರಮಹಾಲಕ್ಷುಮಿಗೆ ವರಾಹತಿಮ್ಮಪ್ಪಗೆ ಅರಸಿನದೆಣ್ಣೆಯ ರಚಿಸಿದ ಪರಿಯು 33
--------------
ವರಹತಿಮ್ಮಪ್ಪ
ಹತ್ತು ಸಾರೆ ಬಾರದಲೆ ತೊಲಗೆನಮ್ಮಪ ನಿರಾಧಾರಾದಿ ನಿದ್ರೆ ಬಾರದಮ್ಮ ವಿ ಚಾರಿಸು ತಾಯಿ ಪಾಲುವಲ್ಲೆನಮ್ಮ ಧಾರುಣಿ ಸಂಬಂಧ ಎನಗಾಗದಮ್ಮ ಇದಕ್ಕೆ ಸಾರಿ ಸಾರಿಗೆ ಬಾಯಿ ತೆರೆವೆನಮ್ಮ 1 ದೇಹಿ ಎಂಬೊದೆನ್ನ ಜಾತಿಧರ್ಮವಮ್ಮ ನಾನು ಕರ ಚಾಚೆನಮ್ಮ ಆಹಾರಕ್ಕೆ ಬಲುದಿನ ಮೀರಿತಮ್ಮ ಸಂ ದೇಹವಿಲ್ಲದೆ ನಾರೇರು ಬಡಿಸಲಮ್ಮ 2 ಇದೇ ಕೇಳಿದೆನು ಇನ್ನು ಮೌನವಮ್ಮ ಬಲು ಸದಮಲ ಜ್ಞಾನಿಗಳಿಗೆ ಪ್ರೀತಿಯಮ್ಮ ಮಧುಹರಿ ವಿಜಯವಿಠ್ಠಲ ಪೂರ್ಣನಮ್ಮ ಸರ್ವರ ಹೃದಯದೊಳಗಾನಂದವಾಸನಮ್ಮ 3
--------------
ವಿಜಯದಾಸ
ಹದಿನಾಲ್ಕು ಲೋಕವನಾಳುವ ತಂದೆಗೆ | ಮುದದಿಂದ ನಾನೊಬ್ಬ ಭಾರವಾದೆನೆ ಪ ಸುರಗಿರಿಯು ಶರಧಿಯೊಳು ಕಡೆವಾಗ ಮುಣಗಲಾ || ಭರದಿಂದ ಪೋಗಿ ಚೆನ್ನಾಂತು ಪೊತ್ತೆ || ಧರಣಿಯು ಮೊರೆಯಿಡಲು ತೆರಳಲ್ಲಿ ಬಂದು | ಭೂತರುಣಿಯನು ಸೆರೆಬಡಿಸಿ ಉಳುಹಿಕೊಳ್ಳಲಿಲ್ಲವೆ 1 ಸುರಪತಿ ಮುನಿದೇಳು ಹಗಲಿರುಳು ಮಳೆಗರೆಯೆ | ಬೆರಳಲಿ ಧರಿಸಿ ಕಾಯ್ದು ನಿಜದೆ || ವರಮುನಿ ಪಸವನು ಬೇಡಲಾಗಿ ಬೆದರಿ ನರ- | ನರಸಿ ನಿನ್ನ ಕರೆಯೆ ಕರುಣದಲಿ ಪಾಲಿಸಿದೆ 2 ಜಲಜಾಕ್ಷ ಬೆಟ್ಟವನು ಪೊತ್ತು ಬಳಲಿದಾಗ | ಸಲಹಬೇಕೆಂದು ಬೇಸರಿಸಲಿಲ್ಲಾ || ಸುಲಭದಲಿ ಶೇಷಾಚಲನಾಗಿಪ್ಪ | ಒಲಿದೆನ್ನ ಸಂರಕ್ಷಿಸೊ ವಿಜಯವಿಠ್ಠಲನೆ 3
--------------
ವಿಜಯದಾಸ
ಹನುಮ - ಭೀಮ - ಮಧ್ವರು ಆದರ್ಶಕನೋ ಹರಿ ತನ್ನಾಧರಿಸಿದವರಿ ಗಾದರ್ಶಕನೋ ಹರಿ ಪ. ಈ ಧರೆಯೊಳು ತನ್ನಾಧರಿಸಿದ ಪಾದ ಸೇವಕ ಪಾಂಡವರಿಗೆ ಹರಿ ಅ.ಪ. ತನುಮನಧನ ನಿನದೆನೆ ಹರುಷಿಪ ಹನುಮನೇನಿತ್ತನೋ ಘನರಾಮ ರಾಘವಚಂದ್ರಗೆ ವನರುಹಲೋಚನ ಇನಕುಲಚಂದ್ರನ ತನ ಹೃದಯದಿ ದಿನ ನೆನೆದನಲ್ಲದೆ 1 ಕುರುಕುಲ ಧ್ವಂಸನು ಕುರುಹು ಕೃಷ್ಣನೇ ಎನೆ ಭೀಮ ನೆರೆದಾ ನೃಪ ನಿಸ್ಸೀಮನನ ಕರಿಬಲ ಸಮ ಕರುಣಿಸಿ ಭೀಮಗೆ ಕರೆದಾದರಿಶಿದ ರಣ ಅಧ್ವರದಲಿ ಹರಿ 2 ಮಧ್ವಾಂತರ್ಗತ ಮುದ್ದು ಶ್ರೀ ಶ್ರೀನಿವಾಸ ಇದ್ದ ಸ್ಥಳವು ಶುದ್ಧ ಎನುತ ಪೇಳಿ ಸದ್ವೈಷ್ಣವರ ಉದ್ಧರಿಸಲವರ ಹೃದ್ಗಮಲದಿ ಕೃಷ್ಣಾ ಇದ್ದಾನೆಂದು 3
--------------
ಸರಸ್ವತಿ ಬಾಯಿ