ಒಟ್ಟು 3520 ಕಡೆಗಳಲ್ಲಿ , 124 ದಾಸರು , 2206 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಯಾತಕಿನ್ನಾಥನೆಂಬುವದೂ ಕರುಣಾಳು ಜಗ - ನ್ನಾಥದಾಸರ ಸೇರಿಕೊಂಬುವದೂ ಪ ಭೀತಕರ ಬಹು ಜನ್ಮಕೃತ ಮಹಾ ಪಾತಕಾದ್ರಿಗಳನು ಭೇದಿಸಿ ಮಾತುಳಾಂತಕನಂಘ್ರಿ ಕುಮುದ ನೀತ ಭಕ್ತಿಯ ನೀಡಿ ಸಲಹುವ ಅ.ಪ. ಘೋರಸಂಸಾರ ಪಾರಾವಾರ ದಾಟಿಸುವಾ ಲಕ್ಷ್ಮೀ ನಿತ್ಯ ಭಾರ ವಹಿಸಿರುವಾ ಮೂರು ಲೋಕೋದ್ಧಾರ ದುರಿತೌಘಾರಿ ಕೃಷ್ಣ ಕಥಾಮೃತಾಬ್ಧಿಯ ಸಾರ ತೆಗೆದು ಬೀರಿ ಕರುಣವ ಬೀರಿ ಸುಜನೋದ್ಧಾರ ಮಾಡಿದ 1 ವೇದಶಾಸ್ತ್ರ ಪುರಾಣವೆಲ್ಲವ ತೋರಲಿಟ್ಟಿಹರು ಬಹು ವಿಧ- ವಾದ ದುರ್ಮತವಾದಿಗಳ ಮಾರ್ಗದಿ ಕಟ್ಟಿಹರೊ ಮೋದತೀರ್ಥ ಮತಾನುಗತ ಸದ್ವಾದಪೂರ್ಣ ಪರಮಾತ್ಮದರ್ಶನ ಶ್ರೀದನೊಲಿದು ಕೃಪಾಕಟಾಕ್ಷ ಪ್ರಸಾದ ಒಲಿವ ವಿನೋದಗೊಳಿಸುತ2 ಶ್ರೀರಮಾಪತಿ ಸರ್ವಸುಗುಣಾಧಾರ ದಯದಿಂದಾ ಮುರಲಾ ಸೇರಿ ಬರುವದು ಸರ್ವಸಂಪತ್ಪಾರವಾನಂದ ಕಾರುಣಿಕತನದಿಂದಲಿಂತುಪಕಾರವ ಮಾಡಿ ದೀನ ಜನರಿಗೆ ಧೀರ ಶ್ರೀದವಿಠಲನ ತೋರಿದರು ನಿಜಭಕ್ತಜನರಿಗೆ 3
--------------
ಶ್ರೀದವಿಠಲರು
ಯಾತಕೆ ಮರೆತೆನ್ನ ಯತಿಕುಲ ತಿಲಕನೆ ಪ್ರೀತಿಯ ಬಯಸುತ ಬಂದೆ ಪ ವಾತಸುತಗತಿಪ್ರಿಯ ದೂತನೆ ನಾಥನೀನೆಂತೆಂದು ನಂಬಿದೆ ಖ್ಯಾತಗುರು ಶ್ರೀ ರಾಘವೇಂದ್ರನೆ ಅ.ಪ. ದೇಶದೇಶದಿ ಬರುವ ದಾಸಜನರÀಘ ನಾಶಗೈಸಿ ಪೊರೆವೊ ದಾಶರಥಿ ಕಿಂಕರಾ ಶೇಷಶಯನನ ದೋಷ ಜ್ಞಾನ ವಿಶೇಷದಿಂದಲಿ ನ್ಯಾಸಮಾಡಿದೆ ಭೂಸುರೋತ್ತಮ 1 ಛಲದಿ ಭಕ್ತಿಯ ಮಾಡಿ ಒಲಿಸಿ ಹರಿಯ ಪಾದ ಲಲಿತಕೀರ್ತಿಲಿ ಮೆರೆದೆ ಭಳಿರೆ ಭಳಿರೆ ಗುರುವೇ ಗೊಲ್ಲಕೃಷ್ಣನ ಚೆಲ್ವ ನಾಟ್ಯದಿ ನಿಲ್ಲಿಸಿದ ನಿನಗೆಲ್ಲಿ ಸರಿಯೈ ನಲ್ಲ ಯತಿವರ ಕಾಲಿಗೆರಗುವೆ ಶೀಲಭಕುತಿಯ ಪಾಲಿಸೀಗಲೆ 2 ವ್ಯಾಸಮುನಿಯು ಎನಿಸಿ ಶ್ವಾಸಮತವ ಮೆರೆಸಿ ದೋಷ ಹರಿಸಿ ಧೊರೆಗೆ ದಾಸ ದೀಕ್ಷೆಯ ತೋರ್ದೆ ಈಶದಾಸರ ಭೇದ ವಾದವ ಆಶುಕವಿತದಿ ವಿಶದಪಡಿಸಿದೆ ಶ್ರೀಶಶಯನನಾವೇಶ ಸಂಯುತ ಭೇಶಕಾಂತಿ ವಿಶಾಲಕರುಣಿಯೆ 3 ದಾತ ಈತನೆಂಬ ಖ್ಯಾತಿ ಬಿರುದು ನಿನಗೆ ಪ್ರೀತಿಯಿಲ್ಲವೇ ಗುರುವೇ ಜೋತು ಬಂದೆ ಅಡಿಗೇ ಬೋಧೆಯ ನೀತಿ ಪೇಳಿದೆ ಏತಕೀತಡ ಮಾತಲಾಲಿಸು ದೂತನಿನ್ನವ ಪೂತಕಾಯನೆ4 ಪರಮ ಭಕ್ತರ ವೃಂದ ನಿರುತ ನಮಿಪ ಚೆಂದ ಅರಿಯೆ ವರ್ಣನೆ ಎಂದ ಸುರಿಸು ಭಕ್ತಿಯ ಗಂಧ ಸೂರಿ ಬೀರಿಕರುಣವ ಭಾರತೀಶನ ಸಾರಶಾಸ್ತ್ರದಿ ತೋರು ತತ್ವಾರ್ಥ 5 ಲೋಕ ಹರಕೆ ನೀಡಿ ಸಾಕಿ ಸಲಹೆ ಹೆಜ್ಜೆ ನೂಕಿ ದುರಿತರಾಶಿ ಸಾಕುಹರಿಯ ತೋರಿ ಶ್ರೀಕರಾರ್ಚಿತ ಪಾದಪಲ್ಲವ ಪಾಕನಾಶನ ಏಕ ವೀರನ ನಾಕ ಋಷಿಗತಿಪ್ರಿಯ ಶಿಷ್ಯನೆ 6 ಪಾಹಿ ಜ್ಞಾನದ ಖಣಿಯೆ ಪಾಹಿ ಭಕ್ತರ ನಿಧಿಯೆ ಪಾಹಿ ಮತಿಮತಸ್ಥಂಭ ಪಾಹಿ ಶ್ರೀ ಹರಿಯ ದೂತ ಪಾಹಿಸುಗುಣೋದಾರ ಮಹಿಮನೆ ಪಾಹಿನತಜನ ಭಾರವಹಿಪನೆ ಪಾಹಿಜಯಮುನಿ ವಾಯುವಂತರ ಗೇಹ ಸಿರಿಕೃಷ್ಣವಿಠಲ ಭಜಕ 7
--------------
ಕೃಷ್ಣವಿಠಲದಾಸರು
ಯಾತರ ಸುಖವಯ್ಯಾ ಇದು ಇನ್ಯಾತರ ಸುಖವಯ್ಯಾ ಪ ಶ್ರೀ ತರುಣೀಶನ ಮರೆತು ಸಂಸಾರದಿ ಬಾಳುವುದೆಂತೆನೆ ಅ.ಪ. ಹಣ ಉಳ್ಳ ಮನುಜಂಗೆ ಗುಣವುಳ್ಳ ಸತಿಯಿಲ್ಲ ಗುಣವುಳ್ಳ ಸತಿಯಿರೆ ಗುಣಡೊಂಕುಪತಿಯು ಅನುಕೂಲವಿರೆಎರಡು ತನಯರೊಬ್ಬರು ಇರರು ಗುಣಿಸಿ ನೋಡಲು ಎಲ್ಲು ನ್ಯೂನತೆ ಸರಿಯೈ 1 ವಿತ್ತವಿದ್ದರೆ ಹಿತರು ಬಂಧು ಬಳಗವೆಲ್ಲ ವಿತ್ತವಿಲ್ಲಾದಿರಲು ನಿಂದಿಸಿ ನಗುತಿಹರು ಬತ್ತಲೆ ಬಂದುದು ಬತ್ತಲೆ ಪೋಪುದು ಮತ್ತೆ ಮಮತೆ ಯಾಕೊ ಮಧ್ಯೆ ಮತ್ತಿದ್ದುದಕೆ 2 ಸಂತೆಯತೆರಸರಿ ಸತಿಸುತ ಪರಿಜನ ನಿಂತು ಪೋಪರು ತಮ್ಮಯ ಋಣತೀರೆ ಅಂತ್ಯವಿಲ್ಲ ಸಂಸಾರದ ಶರಧಿಗೆ ಸಂತಸಪ್ರದವೆಂಬ ಭ್ರಾಂತಿಯ ನೀಗಯ್ಯ 3 ಜನನ ಮರಣವೆಂಬ ದುಃಖವೆ ತಾಕಿರೆ ದಿನದಿನ ಪ್ರತಿದಿನ ರೋಗದ ಕಾಟಗಳು ಗುಣಿಸಿ ನೋಡಲು ಮತ್ತೆ ಮನಕೆ ನೆಮ್ಮದಿ ಇಲ್ಲ ಅನಿಲ ಮಂದಿರ ನೊಲಿಸಿ ಗುಣದೂರನಾಗಯ್ಯ 4 ಕಾಲನೆಡೆಗೆ ಜನ ಬೀಳ್ಪುದು ನೋಡಿಯು ಬಾಳು ಸ್ಥಿರವೆಂದು ಕೇಳಿಲಿ ಮುಳುಗುವುದೇ ಬಾಲ ಯೌವ್ವನ ಮತ್ತೆ ಮುಪ್ಪಿಲಿ ಬೀಳುವ ಸ್ಥೂಲ ಶರೀರವೆ ಗೋಳಿನ ಸೆರೆಮನೆಯೈ5 ಊಟ ತಿಂಡಿಗೆ ಮೇಲ್ನೋಟದ ಕೀಟಗೆ ಕರ್ಮ ಮೂಟೆಯ ಘಳಿಸುವರೇ ಭವ ಕಾಟಕ ದಾಟಲು ಘೋಟಕಾಸ್ಯನ ಪದವಾರಿಜ ಪಿಡಿಯೈಯ್ಯ 6 ಮಂದನಾಗದೆ ಬಹು ಮುಂದಿನ ಗತಿ ನೋಡು ವಂದಿಸಿ ಜಯತೀರ್ಥ ವಾಯ್ವಾಂತರ್ಗತ ಪತಿ ಕೃಷ್ಣವಿಠಲನ ಭಜಿಸಲು ಕುಂದುಗಳಿಲ್ಲದೆ ಶಾಶ್ವತಾನಂದವು ಕೇಳಯ್ಯ 7
--------------
ಕೃಷ್ಣವಿಠಲದಾಸರು
ಯಾರ ಕೃತಕವು ಇದು ವಿಚಾರವನು ಮಾಡಿ ಕಾರಣೀಕದ ಸ್ವಪ್ನ ಕಾಣುತಿದೆ ನೋಡಿ ಪ ಕಾಳ ಮೇಘಧ್ವನಿಯು ಗಾಳಿ ಮಳೆ ಮಿಂಚುಗಳು ಧಾಳಿ ಇಡುತಿಹ ಸಿಡಿಲು ಬಹಳ ಕತ್ತಲೆಯು ಹಾಳೂರ ಮಧ್ಯದೊಳು ಬೀಳುತಿಹ ವಾರಿಗಳು ಮೃಗ ಮೈಮೇಲೆ ಬೀಳುವುದ 1 ವೃಷ್ಟಿ ತೀರುವ ತನಕ ಇಟ್ಟೆಡೆಯೊಳಿರುತಿರ್ದು ಕೆಟ್ಟ ಪಥದಲಿ ಚಾರುಗಟ್ಟಿವಿಳಿದು ಗಟ್ಟಿಯಾಗಿಹ ಚಳಿಯು ಹುಟ್ಟಿ ಕೈಕಾಲುಗಳು ಒಟ್ಟಾಗಿ ಕೂಡಿರ್ದು ದೃಷ್ಟಿ ಬಿಡುತಿಹುದು 2 ಬಿಸಿನೀರ ಮಳೆಯೊಳಗೆ ನುಸಿತ ಗುಣೆಯಸೆಯೊಳಗೆ ಎಸೆದು ತೋರುವ ಉರಿಯ ಹಸಿಯ ಮೆಣಸಿನೊಳು ಗಸಣಿಯನು ಕೈಕೊಂಡು ಕಸಮುಸುರೆಯಾಗಿರ್ದು ಉಸುರಲಾರದೆ ತೃಷೆಯ ಹಸಿದ ಬಳಲಿಕೆಯ 3 ನಿಂದೆಯಾಗಿಹ ಮೃಗದ ಚಂದವನು ಮೈಗೊಟ್ಟು ಬಂದುದೆನಗೈಶ್ವರ್ಯ ಎಂದು ಹರುಷಿಸುತ ಮಂದಹಾಸದ ಒಳಗೆ ಬಂಧನದಲಿರುತಿರ್ದು ಮುಂದುವರಿದು ವ್ಯಸನದೊಳು ಬಂದಿರ್ದ ಬಗೆಯ 4 ಮೂರು ಮಂದಿಯು ಬಂದು ಸೇರಿದರು ದೂರಿಡುವ ಆರು ಕರೆದರು ತಾನು ಬಾರೆನೆಂಬ ಮೇರೆಯಾಗಿಯೆ ಬಪ್ಪ ಮೂರಾರು ತಾ ಬಿಡುವ ಸಾರಿ ಚೋರತ್ವದಲ್ಲಿ ಪರವೂರ ಸುಲಿವ 5 ಮೇಲು ದುರ್ಗವ ಕಂಡು ಗಾಳಿಗೋಪುರವನ್ನು ಆಳ ಬಲುಹುಳ್ಳವನು ಅವಸರದೊಳು ನೂಲಯೇಣಿಯನಿರಿಸಿ ಏರಿಳಿದು ಬಾಹಾಗ ಕಾಲು ಜಾರಿಯೆ ಬಸಿದ ಶೂಲದೊಳು ಬೀಳುವುದು 6 ಹೀಗಿರುವ ಕೃತ್ಯಗಳು ನಾಗಶಯನನಿಗರುಹು ಬೇಗದೊಳು ಪರಿಹರಿಪ ಯೋಗವನು ಕೊಡುವ ನಾಗಗಿರಿವಾಸನಹ ವರಾಹತಿಮ್ಮಪ್ಪ ತೂಗುವನು ತೊಟ್ಟಿಲೊಳು ಆಗುವುದನಿತ್ತು 7
--------------
ವರಹತಿಮ್ಮಪ್ಪ
ಯಾರಿಗೆ ದೂರುವೆನು ವೆಂಕಟರಾಯ ಚಾರದ ಮಹಿಮೆಯನು ಪ ಈರಾರು ಸ್ಥಳವಲ್ಲಿ ಮೂರಾರು ಸೇರಿಸಿ ಹೋರಾಟವನಿತ್ತು ಮಾರಿದೆಯೆನ್ನನು ಅ.ಪ ತೇಜವುಳ್ಳವನೊಬ್ಬನು ಐದನೆಯಲ್ಲಿ ಮೋಜಾಗಿ ಒಳಹೊಕ್ಕನು ಹೂಜಿ ತುಂಬಿದ್ದುದ ಸೋಜಿಗದೊಳು ಕದ್ದು ಪಾಜಿ ಮಾಡಿದನೆನ್ನ ಮೂಜಗದೊಡೆಯ 1 ಸೀತವಾದವನೊಬ್ಬನು ಅಷ್ಟಮದದಲ್ಲಿ ಕಾತುರದೊಳು ಬಂದನು ಘಾತಕತನ ಮಾಡಿ ಭೀತಿಗಳನು ತೋರಿ ದಾತ 2 ಮೂರನೆಯವನೊಬ್ಬನು ಏಳನೆಯಲ್ಲಿ ಸೇರಿಯೆ ಕಳುತಿದ್ದನು ಏರಿ ಬಂದುದನೆಲ್ಲ ಆರಿಸಿ ಮಾರಿಸಿ ಸೂರೆಗೊಂಡನು ಎನ್ನ ವಾರಿಜನಾಭ 3 ಅತ್ರಿಯ ಮೊಮ್ಮಗನು ನಾಲ್ಕನೆಯಲ್ಲಿ ಶತ್ರುವಾಗಿಯೆ ನಿಂತನು ಗೋತ್ರದಿ ಕಲಹವ ಬೆಳಸಿಯೆಯಿದ್ದಂಥ ಪಾತ್ರವÀ ತೀರಿಸಿ ಗಾತ್ರವ ಕೆಡಸಿದ 4 ಸುರಗುರುವೆಂಬುವನು ಮೂರನೆಯಲ್ಲಿ ಸ್ಥಿರವಾಗಿ ನಿಂತಿಹನು ಗುರುಗಳ ಮುಖದಿಂದ ಕರಕರೆ ಹತ್ತಿಸಿ- ದರು ಪಾಡಿ ಹರಿಯನ್ನು ತಿರುಕನಾದೆನು ನಾನು 5 ಆರನೆ ಮನೆಯೊಳಗೆ ದೈತ್ಯರ ಆ- ಚಾರಿಯನು ನಿಂತಿಹನು ಹಾರುಮಾತುಗಳೇಕೆ ತೂರಿದನೆಲ್ಲವ ಪಾರಾದೆನು ನಾನು ವಾರಿಜನೇತ್ರ 6 ಆದಿತ್ಯ ಪುತ್ರನಾದ ಶನೈಶ್ವರ ಬಾಧಿಪ ಮನೆಗಳಾರು ದ್ವಾದಶ ಆದಿಯು ದ್ವಿತೀಯ ಪಂಚಮದಲ್ಲಿ ವೇದಗಳೆಲ್ಲವು ಏಳುಯೆಂಟಿರಲಿ 7 ನಾಡನಾಳುವ ರಾಯರ ಕೆಡಿಸಿ ಮುಂದೆ ಕಾಡಿಗೆ ಸೇರಿಸಿದ ಈಡಿಲ್ಲ ಈತಗೆ ಜೋಡಿಲ್ಲ ಗ್ರಹರೊಳು ಪಾಡೆಲ್ಲ ಕೆಡಿಸಿದ ರೂಢಿಗೆ ಒಡೆಯ 8 ವಾರಿಧಿ ಮಥನದಲಿ ಸುಧೆಯನ್ನುಂಡು ಸೇರಿದ ಗೃಹರೊಳಗೆ ಮೀರಿದರಿಬ್ಬರ ಪಾರುಪತ್ಯಗಳನ್ನು ಮಾರ ಸನ್ನಿಭನೆ 9 ಸಂಧಿ ಸಂಧಿಯಲಿವರು ಬಂದೆನ್ನನು ದಂದುಗ ಬಡಿಸುವರು ಇಂದ್ರಾದಿ ದೇವರಿಗಳವಲ್ಲ ಇವರೊಳು ಹಿಂದು ಮುಂದರಿಯೆನು ಬಂದ ಬವರವನ್ನು 10 ಶುಭದಲ್ಲಿ ಶುಭವಿತ್ತರು ವೆಂಕಟರಾಯ ಶುಭ ತೋರಿಸೊ ಅಭಯವನಿಪ್ಪಂಥ ವರಾಹತಿಮ್ಮಪ್ಪನೆ ಪ್ರಭುವೆಂದು ನೀ ಹೇಳಿ ವಿಭವಗಳೆನಗೀಯೊ 11
--------------
ವರಹತಿಮ್ಮಪ್ಪ
ಯಾರಿರಬಹುದೀತ ಗೆಳತೀ ಯಾರಿರಬಹುದೀತ ಪ ಯಾರೆಂದರಿಯದೆ ಪೋಗದೆ ಕೊರತೆ ಯಾರಿರಬಹುದೀತ ಅ.ಪ ಸಾವಿರ ಸಂಖ್ಯೆಯ ಗೋವಳರಿದ್ದರೂ ಯಾವನಿಗೀ ವಿಧ ಠೀವಿಯಿರುವುದೇ ಹಾವಭಾವಗಳ ನೋಡಲು ಈತನ ಗೋವಳ ವೇಷವದಾವ ಕಾರಣವೋ 1 ನಮಗೇತಕೆ ಈತನ ಗೋಜೆಂದರು ಕಮನೀಯನ ನೋಡುತ ನೋಡುತ ಬಲು ಮಮತೆಯು ಮನದಲಿ ಏರುತಲಿರುವುದು ಕಮಲನಯನೆ ನಾ ನಮಿಸುವೆ ಪೇಳೆ 2 ಸರಳನೋ ದುರುಳನೋ ಅರಿಯುವುದೆಂತೇ ಕರೆಯದೆ ಹೋದರೆ ಜರಿಯಲುಬಹುದೇ ಮುರಳಿಯ ನಾದದ ಕರೆ ಬಂದರೆ ನಾ ಬರವೆನೆಂದರು ಹೇ ಸರಸ ಪ್ರಸನ್ನ 3
--------------
ವಿದ್ಯಾಪ್ರಸನ್ನತೀರ್ಥರು
ಯೆಂದಿಗೆ ಬರುತೀಯೆ ಸುಂದರ ಭಾರತಿ ಮಂದರೋದ್ಧರನ ತೋರಿಸೆಂದೆ ನಾ ಬಂದೆ ಪ. ಅಂಧಕಾರಣ್ಯದೊಳು ನಿಂದು ತತ್ತರಿಸುವೆನು ತಾಯೆ ಕುಂದುಗಳೆಣಿಸಾದಿರು ಆನಂದ ತೋರು ಅ.ಪ. ಹರಿಗೆ ಕಿರಿಯ ಸೊಸಿ ವಾತನಸತಿಯು ನೀನು ಪ್ರಖ್ಯಾತಿವಂತಳೇ ಏಕಾಂತ ಭಕ್ತಳೇ ತ್ರಿವಿಧ ಜೀವರೊಳಗೆ ನಿಂತು ತ್ರೀವಿಧ ಪ್ರೇರಣೆ ಮಾಡುವಿ ದೇನಿ ನಿನ್ನಾ ಮಹಿಮೆಗೆ ನಮೋ ಎಂಬೆ ಪುತ್ಥಳಿಯಾ ಬೊಂಬೆ 1 ಮಂದರೋದ್ಧರನ ಪಾದಸೇವಕಳೇ ನಿನಗೀಡೆ ನಲಿದಾಡೆ ಒಂದನಾದರೂ ಮಾತನಾಡೆ ವರಗಳ ನೀಡೆ ದಯಮಾಡಿ ನೋಡೆ ತವಪಾದವ ಕೊಡೆ ಕರವ ಜೋಡಿಸಿ ಬೇಡುವೆನಿಂದು ನಾ ಬಂದು 2 ಗರುಡ, ಶೇಷ ರುದ್ರಾದಿಗಳೊಡೆಯಳೇ ನೀನು ನಿನ್ನಡಿಗಳಿಗೆರಗುವೆ ನಾನು ತಡಮಾಡ ಬ್ಯಾಡಮ್ಮಾ ನಡೆದು ಬಾರಮ್ಮ ಭವ ಮಡುವಿನೊಳಗಿರುವೆನು ತೋರಿಸೋ ದಯಪಾಲಿಸೋ 3
--------------
ಕಳಸದ ಸುಂದರಮ್ಮ
ಯೆಂದು ಪಿಡಿಯುವಿ ಕೈಯ್ಯ ಇಂದಿರೇಶ ಚಲುವ ಕೃಷ್ಣನೆ ಪ ಮುಂದೆ ಹೋಗಲು ಬಂಧಮಾಡುತ ಕುಂದು ಅಳಿಯುತ ತಂದೆ ದಯೆತೊರಿ ಅ.ಪ ಮಂದ ನಾನಯ್ಯ ಕಂದಿ ಕುಂದಿದೆ ಭವದಿ ಕೇಳಯ್ಯ ಬಂಧು ಬಳಗವು ಯಾರು ಇಲ್ಲಯ್ಯ ನಿಂದು ಮುಂದಿನ ದಾರಿ ನಡೆಸಯ್ಯ ಜೀಯಾ ಅಂದು ಸಭೆಯೊಳು ಮಂದಗಮನೆಯ ಒಂದು ನೊಡದೆ ಬಂದು ಸಲಹಿದ ಸಿಂಧು ಶಯನಾನಂದ ಮೂರುತಿ ನಂದನಂದನ ಶ್ಯಾಮಸುಂದರ ಬಂಧು ಸರ್ವರ ಬಂಧಮೋಚಕ ಮಂದರಾದ್ರಿ ಧರನೆ ಯದುಕುಲ ಚಂದ್ರ ಶೋಭಾಸಾಂದ್ರ ಕೃಷ್ಣನೆ ಬಂದು ಚಂದದಿ ಸಲಹಿ ಎನ್ನನು 1 ಬಾಲತನದಲ್ಲಿ ಲೀಲೆಗೋಷ್ಠಿಲಿ ಮೆರೆದೆ ನಾನಲ್ಲಿ ಮೇಲೆ ಯೌವನ ಒಡನೆ ಬಂತಲ್ಲಿ ಲಲನೆ ಕೇಳಿಲಿ ಮುಳುಗಿ ಹೋದೆನು ಅಲ್ಲಿ ಮೆಲ್ಲಮೆಲ್ಲನೆ ಮುಪ್ಪು ಬಂತಲ್ಲಿ ಕಾಲಕಳೆದೆನು ಪಗಡೆ ಜೂಜಿನಲಿ ಮಲ್ಲಮರ್ದನ ಮಾತುಲಾಂತಕ ಚಲ್ವಸೂಕರ ಪುಲ್ಲಲೊಚನ ಪುಲ್ಲನಾಭನೆನಲ್ಲ ಸರ್ವರ ಬಿಂಬರೂಪನೆ ಎಲ್ಲ ಕಾಲದಿ ಎಲ್ಲಮಾಡುತ ನಿಲ್ಲದೆಜಗ ಸಾರ ಶ್ರೀ ನಲ್ಲ ನಿನ್ನಯ ಎಲ್ಲ ಬಲ್ಲವರಿಲ್ಲ ಎಲ್ಲಿಯೂ ಬುದ್ಧ ಕಲ್ಕಿಯೆ ಸೊಲ್ಲು ಲಾಲಿಸಿ ಒಲಿದು ಬಂದ ನಾರಸಿಂಹನೆ ಇಲ್ಲ ಸಮರು ಅಧಿಕರೈಯ್ಯ ಪೂರ್ಣದೇವನೆ2 ಮೂರು ತಾಪವ ಹರಿಪ ಬಗೆಯೇನೋ ವೈರಿ ಆರರ ಭರದಿ ತರಿ ನೀನೂ ಮೂರು ಋಣಗಳು ಉಳಿಯೆಗತಿಯೇನು ಮೂರು ಕರ್ಮದಿ ಬಿಡಿಸಿ ಹೊರೆಯನ್ನು ಭಕ್ತಸುರಧೇನು ಸಾರಸಜ್ಜನ ಪ್ರಾಪ್ಯ ಶುಭಗುಣ ಸಾರ ಕರುಣಾ ಪೂರ್ಣವಾರಿಧಿ ಮಾರಜನಕನೇ ಋಷಭಮಹಿದಾಸ ತೋರು ಜ್ಞಾನವ ಬಾದರಾಯಣ ಮೀರಲಾರೆನು ವಿಷಯವಾಸನೆ ಭಾರತೀಶನ ಒಡೆಯ ಕೃಷ್ಣನೆ ಭಾರ ನಿನ್ನದು ಎನ್ನ ಪೊರೆವದು ಮತ್ಸ್ಯ ವಾಮನ ಧೀರ ಧೃವನಾ ಪೊರೆದ ವರದನೆ ಬೀರಿ ಭಕ್ತಿ ಜ್ಞಾನ ವೈರಾಗ್ಯ 3 ಎನ್ನ ಯೋಗ್ಯತೆ ನೋಡಿ ಫಲವೇನು ನಿನ್ನ ಘನತೆ ತೋರಿ ಪೊರೆ ನೀನು ನಿನ್ನ ದಾಸನ ಮಾಡು ಎನ್ನನ್ನು ಅನ್ಯಹಾದಿಯ ಕಾಣೆ ನಾ ನಿನ್ನು ಬೆನ್ನು ಬಿದ್ದೆನು ಇನ್ನೂಮುನ್ನೂ ಮಾಧವ ವಿಶ್ವ ತೈಜಸ ಪ್ರಾಜ್ಞತುರಿಯ ಹಂಸ ವಿಷ್ಣುವೇ ಜ್ಞಾನ ಭೋಧಕ ಸನತ್ಕುಮಾರನೇ ಮೌನಿ ದತ್ತಾತ್ರೇಯ ಹಯಮುಖ ದೀನವತ್ಸಲ ಯಜ್ಞ ಧನ್ವಂತ್ರಿ ಶ್ರೀನಿವಾಸ ರಾಮ ಕಪಿಲನೆ ಜ್ಞಾನ ನಿಧಿ ಮುನಿ ನಾರಾಯಣನೆ ನೀನೆ ಅನಿರುದ್ಧಾದಿ ರೂಪನು ಧ್ಯಾನಗೊಚರ ಶಿಂಶುಮಾರನೆ ಸಾನುಕೂಲದಿ ನೀನೆ ವಲಿಯುತ ಕರ್ಮ ಸಂಚಯ4 ಆದಪೊದ ಮಾತು ಏಕ್ಕಯ್ಯ ಮಧ್ವರಾಯರ ಪ್ರೀಯ ಶೃತಿಗೇಯ ಮೋದದಾಯಕ ಮುಂದೆ ಸಲಹೈಯ್ಯ ಪಾದಪದ್ಮದಿ ಶರಣು ಅಲ್ಲದೆ ಏನು ಮಾಡಲಿ ಜೀಯ ಅಯ್ಯ ತಿದ್ದಿ ಮನವನು ಕದ್ದು ಅಘವನು ಒದ್ದು ಲಿಂಗವ ಶುದ್ಧಜ್ಞಾನದ ಸಾಧು ಜಯಮುನಿ ವಾಯುವಂತರ ಮಾಧವ ಶ್ರೀ ಕೃಷ್ಣವಿಠಲನೆ ಪಾದ ಮಧುಪರ ವೃಂದ ಮಧ್ಯದಿ ವೇದ ಸಮ್ಮತ ಗಾನ ಸುಧೆಯನು ಶುದ್ಧಭಕ್ತಿ ಜ್ಞಾನದೊಡಗೂಡಿ ಮೆದ್ದು ಪಾಡುತ ಕುಣಿವ ಭಾಗ್ಯವ ಮುದ್ದು ಕೃಷ್ಣನೆ ನೀನೆ ಎನಗಿತ್ತು 5
--------------
ಕೃಷ್ಣವಿಠಲದಾಸರು
ಯೋಗನಿದ್ರೆಯ ಮಾಡುತಿಹನು ಕ್ಷೀರಸಾಗರಮಧ್ಯದಿ ಭೋಗಿಶಯನನು ಪಏಳು ಸುತ್ತಿನ ಪುರವಿದನೂ ಎಂಟುಪಾಲಾಗಿ ರಮಣಿ ತಾ ಕಾದಿರಲದನುಬಾಲಕನೊಬ್ಬ ಪಾಲಿಪನೂ ಮಂತ್ರಿನಾಲುವರೊಪ್ಪಿರೆ ಶ್ರೀಹರಿ ತಾನು 1ಕಾಲಜ್ಞಾನಿಗಳೈವರಿಹರೂ ಅವರೂಳಿಗಕೈವರು ಕಾದುಕೊಂಡಿಹರುವೇಳೆ ವೇಳೆಯ ಬಲ್ಲ ಭಟರು ತಮ್ಮಊಳಿಗವನು ಬಂದು ಪೇಳುತ್ತಲಿಹರು 2ಸಕಲ ಲೋಕಂಗಳ ಸೃಜಿಸಿ ಅಲ್ಲಿ ಸಕಲ ಲೋಕೇಶನು ತಾನೆ ವಿಶ್ರಮಿಸಿಸಕಲವ ತನ್ನೊಳಗಿರಿಸಿುೀಗಮುಕುತಿದಾಯಕ ವೆಂಕಟೇಶ ಶ್ರೀ ವೆರಸಿ 3ಕಂ||ಹರಿ ಪವಡಿಸೆ ಹರೆದೋಲಗಸುರರೆಲ್ಲರ್ ಸ್ಥಾನಕೈದಲಾನಂದಾಂಬುಧಿತೆರೆುಳಿದು ತಿರುಪತೀಶನಚರಣವೆ ತಾನಾಗಿ ನಿಂದುದೆನ್ನೆದೆಮನೆಯೊಳ್ ಓಂ ವೇದವೇದ್ಯಾಯ ನಮಃ
--------------
ತಿಮ್ಮಪ್ಪದಾಸರು
ಯೋಗಿ ವೇಷ ನೀಚನಾಯಿ ನಿನಗ್ಯಾತಕೆ ತತ್ವ ಭಾಷಾ ಹುಚ್ಚನಾಯಿ ನಿನಗೇತಕೆ ವಸ್ತ್ರ ಕಾಷಾ ಮುರುಕುನಾಯಿ ನಿನಗೇತಕೆ ಗುರುಪಾದವಾಸ ಹೊಲಸ ಪ ಕೊರಳಿಗೆ ಕಪನಿ ತೊಟ್ಟು ಜಪಸರವನೆ ಮುಂಗೈಯಲಿಟ್ಟು ತತ್ವಬರಿನುಡಿ ಸಾಲು ಸಾಲಿಟ್ಟು ಕಾಲಕೆರವನೆ ಇವನ ಬಾಯೊಳಗೆ ವಷಟ್ಟು ಭ್ರಷ್ಟಾ1 ನೀರೊಳಗೆ ನೆರಳನೆ ನೋಡಿ ಹಣೆಗೆಗೀರುವೆ ಗಂಧವ ತೀಡಿ ಪೋರಪೋರರ ಜೋಡನೆ ಕೂಡಿ ನಿನ್ನಮೋರೆಯ ಮೇಲೆ ಹುಯ್ಯಬೇಕು ಕಸ ಪುಡಿಕೆ ಕಡುಗ 2 ಅತ್ತ ಸಂಸಾರ ಕೆಟ್ಟುಮತ್ತಿತ್ತ ಗುರುಪಾದವ ಬಿಟ್ಟು ನೀನತ್ತತ್ತ ಉಭಯ ಭ್ರಷ್ಟಾ ನಿನಗೆಸತ್ತಿಹರು ಅರಮನೆಯ ಗೌಡೆಯರೆಷ್ಟು ಜಾಣ3 ಕಂಡ ಕಂಡಲ್ಲಿಯೇ ಉಂಡುದೊಡ್ಡ ಹೊಟ್ಟೆಯ ಬೆಳೆಸಿಕೊಂಡುಬಾಡದಂಡೆಯ ಮನೆಗಂಟಿಕೊಂಡು ನಿನ್ನಮಂಡೆಯ ಹೊಡಿಬೇಕು ಪಾಪಾರಿಕೊಂಡು ಹೊಲೆಯ 4 ಇಂದು ಕೆಟ್ಟಾ5
--------------
ಚಿದಾನಂದ ಅವಧೂತರು
ಯೋಗಿ ವಲ್ಲಭನ ಅನುರಾಗವನು ಪಡೆದವಗೆ ಲಾಗವೆಲ್ಲವು ದೊಡ್ಡ ಯೋಗವಾಗುವುದು ಪ ಹೋಗಿ ಗಂಗೆಯ ತೀರದಲಿ ಬಾವಿ ತೋಡಿದರೂ ಬೇಗ ಸಿಗುವುದು ದಿವÀ್ಯ ಬಲಮುರಿಯ ಶಂಖವು ಅ.ಪ ಮಾಧವನ ಪರಮ ಕರುಣವ ಪಡೆದ ಮನುಜನಿಗೆ ಹೋದ ಕಡೆಗಳಲಿ ದೊರೆಕುವುದಾದರೆ ಮೂದಲಿಸುವರ ಮನವು ಕಾದ ಬೆಣ್ಣೆಯು ಕರಗಿ ಹೋದ ತೆರದಲಿ ಕ್ಷಣದಿ ಸಾಧುವಾಗುವುದು 1 ವೇದಾಂತ ರಾಜ್ಯದಲಿ ಜ್ಞಾನಭಕುತಿಗಳಿಂದ ಮೋದ ಪಡಿಸುವನು ಕಾದ ಮರುಭೂಮಿಯಲಿ ಸಕಲ ಸಂಪತ್ತುಗಳ ಸಾಧಿಸುವ ಬೇಧಿಸುವ ವಿಘ್ನರಾಶಿಗಳನ್ನು 2 ಕುರುಡ ನೋಡುವನೆಲ್ಲ ಕಿವುಡ ಕೇಳುವನೆಲ್ಲ ಗುರುವರ ಪ್ರಸನ್ನ ನೀ ಮರುಕ ತೋರಿದರೆ ಕರಡಿ ಕೈ ಗೊಂಬೆಯಾಗುವುದು ಕೈಗೊಂಬೆಯು ತ್ವರಿತದಲಿ ಕಲ್ಪತರುವಾಗಿ ಕೊಡುವುದು ಫಲವ 3
--------------
ವಿದ್ಯಾಪ್ರಸನ್ನತೀರ್ಥರು
ಯೋಗಿಯಾಗೆಲೆ ಇಲ್ಲ ತ್ಯಾಗಿಯಾಗೆಲೆ ಪ ಹಾಗೂ ಹೀಗೂ ಆಗದೆ ಭವ ರೋಗಿಯೆನಿಸದರೆಲೆ ಗೂಗಿ ಅ.ಪ ಮಾತುಮಾತಿಗೆ ನೀತಿವಚನ ಆತುರಕ್ಕಾಗಿ ಕೂಗಿ ಕೂಗಿ ಪಾತಕದೊಳಗೆ ಬಿದ್ದು ಯಮನ ಯಾತನಕಿಳಿಯಬೇಡ ಭವಿ 1 ಕಾವಿಕಪನಿಲಾಂಛನ್ಹೊದ್ದು ಸೇವೆಗೊಂಡು ಭಾವಗೆಟ್ಟು ಸಾವುಹುಟ್ಟು ಬಲೆಗೆ ಬಿದ್ದು ನೋಯಬೇಡೆಲೆ ನೀಚಮತಿ2 ನಿತ್ಯ ನಿತ್ಯವೆನಿಪ ಪರ ಮಾರ್ಥತತ್ತ್ವಗುರ್ತುಯಿಲ್ಲದೆ ಕತ್ತೆಯಂತೆ ಒದರಿ ವ್ಯರ್ಥ ಮೃತ್ಯುಹೊಂದ ಬೇಡ ಮೂರ್ಖ 3 ಸೋಗುಹಾಕಿ ಸಾಧುಯೆನಿಸಿ ಕಾಗೆಯಂದದಿ ತೀರ್ಥಮುಳುಗಿ ಜಾಗರ ಮಾಡಿ ಪೋಗದಿರಲೆ ನರಕಕಧಮ 4 ಭೂಮಿ ಪ್ರೇಮ ತಾಮಸ ನೀಗಿ ಕಾಮ ಕ್ರೋಧ ಲೋಭ ಜೈಸಿ ಭೂಮಿತ್ರಯಂಗಳೊಡೆಯ ಶ್ರೀ ರಾಮನಾಮ ಭಜಿಸಿ ಮುಕ್ತನಾಗೆಲೊ 5
--------------
ರಾಮದಾಸರು
ರಕ್ಷಮಾಂ ರಂಗೇಶ ಪ ರಕ್ಷಮಾಂ ರಂಗೇಶ ರವಿಕೋಟಿಸಂಕಾಶಪಕ್ಷಿವಾಹನ ಶ್ರೀಶ ಭವ್ಯಗುಣಕೋಶಅಕ್ಷರಾದಿ ಪಿಪೀಲಿಕಾಂತ ಸಂ-ರಕ್ಷಕಾಮಯಹರಣ ಸರ್ವಲಕ್ಷಣ ಪರಿಪೂರ್ಣ ಪರಮೇಶ ದಕ್ಷಿಣಾಧೀಶ ಅ.ಪ. ಕಮಲದಳ ನೇತ್ರ ಕಮಲಾರಿ ಸಮವಕ್ತ್ರಕಮಲಾವಿರಚಿತ ಸ್ತೋತ್ರ ಕರಧೃತ ಗೋತ್ರಕಮಲಜ ನುತಿಪಾತ್ರ ಕರಿರಾಜಯಾತ್ರಕಮಲಧರ ಕರಕಮಲ ಸಮಪದಕಮಲ ಸಂನಿಭವಿನುತ ಕಂಧರಕಮಲ ಸಂನಿಭ ಸುಗಾತ್ರ-ಕಮಲಾಕಳತ್ರ 1 ಅನಿಮಿಷ ಸುಪ್ರೀತಾಖಿಳ ದೋಷ ನಿರ್ಧೂತಸನಕಾದಿ ಶೃತಿಗೀತ ಅರ್ಜುನಸೂತದಿನಮಣಿಕುಲಜಾತ ದೇವಕೀ ಪೋತಕನಕವಸನ ಕೀರೀಟಧರ ಕೋ-ಕನದ ಹಿತ ಕಮಲಾಪ್ತ ನಯನವನದವಾಹನವೈರಿಕುಲಘಾತ ವನಜಭವ ತಾತ2 ಅಂಗನಾಂಬರಹರಣಾನುಪಮ ಸಪ್ತಾವರಣಮಂಗಳ ಕರಚರಣ ಭಕ್ತ ಸಂರಕ್ಷಣಗಾಂಗೇಯಕೃತಸ್ಮರಣ ಕರುಣಾಭರಣರಂಗವಿಠಲ ಭುಜಂಗಶಯನ ತು-ರಂಗಧರ ಕಾವೇರಿ ತೀರ ಶ್ರೀ-ರಂಗನಿಲಯ ತುರಂಗ ಸಂಚರಣ-ಗಂಗಾಚರಣ3
--------------
ಶ್ರೀಪಾದರಾಜರು
ರಕ್ಷಿಸು ಗುರುನಾಥಾ ಕೇಶವ ನೀನೇ ರಕ್ಷಿಸು ಸಿರಿನಾಥಾ ಪ ಅಕ್ಷಯ ದ್ರೌಪದಿಗಿತ್ತ ಶ್ರೀಕಾಂತನೇ ಶಿಕ್ಷಕ ನೀನೇ ಕನಕ ವಂದಿತನೇ ಅ.ಪ. ತರಳ ಪ್ರಲ್ಹಾದನಿಗೊಲಿದು ಧಾರುಣಿಯಲ್ಲಿ ಮೆರೆದ ಕಶ್ಯಪುವನ್ನು ಕೆಡಹಿದ ಹರಿಯೇ ದುರುಳ ಕಂಸನು ತನ್ನ ಪ್ರಜೆಗಳ ಹಿಂಸಿಸೆ ತರಿದು ಸಜ್ಜನರನ್ನು ಪೊರೆದ ಶ್ರೀಧರನೇ 1 ಭಜಿಸಲು ಕನಕನು ಉಡುಪಿ ಗ್ರಾಮದಲಾಗ ರಜನಿ ಮಧ್ಯದಿ ದಾಸಗೊಲಿದ ಶ್ರೀ ಹರಿಯೇ ಗಜವನ್ನು ರಕ್ಷಿಸಿ ಬಿರುದನು ತೋರಿದ ಭಜಕರ ಲೋಲನೆ ನೆರೆ ನಾರಾಯಣನೇ2 ಕಷ್ಟವ ನೀಗಿ ತಾ ಶಿಷ್ಟರ ಸಲಹಲು ಶ್ರೇಷ್ಠ ಮೂರುತಿ ರಂಗ ಬಹರೂಪವೆತ್ತೀ ಶಿಷ್ಟರ ರಕ್ಷಿಸಿ ಭ್ರಷ್ಟರ ಕೆಡಹಿದ ಸೃಷ್ಟಿಗೀಶನೆ ರಂಗ ಚನ್ನಕೇಶವನೇ 3
--------------
ಕರ್ಕಿ ಕೇಶವದಾಸ
ರಕ್ಷಿಸೆನ್ನ ರಮಣ ಪಂಚಪರಣಾ ಜಗತ್ಪಾವನಾ | ಮೋಕ್ಷದಾಯಕ ಯಂತ್ರೋದ್ಧಾರಕ ಹನುಮಂತಾ ಪ ಗತಿಯ ಕಾಣೆನೊ ಸದಾ ಗತಿಯೊ ಎನ್ನ ಮನಸು | ನಿನ್ನ ನಾಮವ ಬೇಡಿದೆ | ಹಾಡಿ ಪಾಡಿದೇ | ಪ್ರತಿದಿನ ದಯ ಮಾಡಿದೆ ವರವನ ಬೇಡಿದೆ | ಅತಿಶಯದಿಂದಲಿ ವಿಪ್ರಜಿತು ವಿರೋಧಿಯ ವಿಪ್ರ1 ವೀಣಾರೋಚನಾ ವಿಜ್ಞಾನಾಭಿಮಾನಿ ನಿ | ದಾನ ತ್ರಿಜಗದ್ಗುರುವೆ ಸುರತರುವೇ | ಕರವ ಮುಗಿದು ಕರವೇ | ಧ್ಯಾನದಿಂದಲಿ ಬೆರವೆ ಸುತ್ಯನ್ಯರವೇ | ಜನನವ ಬಿಡಿಸೋದು ಗಾನವ ನುಡಿಸೋದು 2 ಭಾಷಿಸುವ ಮಾತಂಗ ಪರ್ವತದಲಿ ತುಂಗಾ | ವಾಸವ ವಿನುತ ಸತ್ವಕಾಯಾ | ನಿತ್ಯ ಜಪಿತಾ | ಲೇಸು ಸುದರುಶನ ತೀರ್ಥ ತೀರದಲ್ಲಿಪ್ಪಾ |ಶ್ರೀಶ ವಿಜಯವಿಠ್ಠಲನ ದಾಸನ ಮಾಡಿ ಮುನ್ನಾ 3
--------------
ವಿಜಯದಾಸ