ಒಟ್ಟು 3549 ಕಡೆಗಳಲ್ಲಿ , 130 ದಾಸರು , 2602 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಾರೋ ನಲಿದಾಡೋ ಜಿಹ್ವೆಯಲಿ ಮೂರಧಿಕಾರೊಡೆಯನೆ ಬಾರೋ ನಲಿದಾಡೋ ಜಿಹ್ವೆಯಲಿ ಪ ದಾಸಾ ಬಹು ಮೋಸಕ್ಕೊಳಗಾಗಿಹೆನು ಶ್ರೀಶಾ ಕರಪಿಡಿಯೆನ್ನ ದೋಷ ಮಹದಾಶಾ ವಹಿಸಿರುವೇನು ಘಾಸಿಯಾದೇನು ಮಾಡೋ ಕರುಣಾರ್ಣವದಿ ಈಶಾ ಘನವೇಷಾ ಬಹುತೋಷ ದಾಸನ ಮಾಡಿಕೊ ಎನ್ನ 1 ಕಂದೀ ನಾ ಕುಂದೀ ಗೃಹದೊಳಗೆ ಮಂದಿಯಾ ಶೇರಿದೆ ನೊಂದೇ ಬಹು ಬೆಂದೇ ಮನದೊಳಗೆ ಬಂಧನದೊಳು ಶಿಲ್ಕಿ ಸುಂದರ ಮೂರುತಿ ಸಂದಣಿಯದೆ ನಾ ಹೊಂದಿದೆನಿನಭವ ಭವ ನಾಯಿಂದೂ ದ್ವಂದ್ವಾಪದವಿಡಿದಿದೆ 2 ಘೋರಾ ನಿಸ್ಸಾರ ಭವದೊಳಗೆ ದಾರಿಗಾಣೆನು ಮಾರಾ ಬಹುದೀ ರಾಮನದೊಳಗೆ ಶೇರಿ ಕುಣಿವಾನು ಮಾರಜನಕ ನಿನ್ ಹಾರೈಶನುದಿನ ಶೇರಿ ಭಜಿಸಿ ನಿನ್ನ ನರಸಿಂಹವಿಠ್ಠಲ ಸಾರಿ ನಿನ ಕೋರಿ ಪದಶೇರಿ ಆರಾಧಿಸುವೀಗಳೆ 3
--------------
ನರಸಿಂಹವಿಠಲರು
ಬಾರೋ ನೂತನ ಗೃಹಕೆ ಹರಿಯೆ ಸಿರಿ ಮಾರುತ ಮುಖಸುರರೊಡಗೂಡಿ ಧೊರಿಯೆ ಪ ಯಾರು ಕೇಳದಲಿಹ ಸ್ಥಳವ ನೀನೆ ಪ್ರೇರಿಸಿ ಗೃಹವ ನಿರ್ಮಿಸಿದೆಯೋ ದೇವ ನೂರಾರು ಪರಿರೂಪಾಂತರವ ಪೊಂದಿ ಈ ರೀತಿ ನವಸುಸಂಸ್ಕøತವಾದ ಗೃಹವ 1 ಈರಪ್ಪÀ ಬಡಿಗನೆಂಬುವನು ಮನಿಯ ಚಾರುತನದಲಿಂದ ನಿರ್ಮಿಸಿರುವನು ತೋರುವ ಸಿಂಹಾಸನವನು ಮಧ್ಯಾ ಗಾರದಿನಿನಗಾಗಿ ವಿರಿಚಿಸಿಹನು 2 ಸುತ್ತಲು ನಿರ್ಭಯವಿಹುದು ವಂ - ಭತ್ತು ದ್ವಾರಗಳಿಂದ ಶೋಭಿಸುತಿಹುದು ಹತ್ತಿರೆ ಗುರುಗೃಹ ವಿಹುದು ಮುಂದೆ ಚಿತ್ತಜನಯ್ಯನ ಮಂದಿರ ವಿಹುದು 3 ಉತ್ತಮ ಗೃಹವೆನಿಸುವದು ಇ - ಪ್ತತ್ತುನಾಲಕುವಸ್ತುಗಳಕೂಡಿಹುದು ಸುತ್ತೇಳು ಪ್ರಾಕಾರವಿಹುದು ಸುತ್ತು ಮುತ್ತಲು ದ್ವಿಜಜನಹೊಂದಿ ಕೊಂಡಿಹುದು 4 ಗೃಹವುನಾಲ್ಕು ವಿಧವಿಹುದು ಸೂಕ್ಷ್ಮ ಗೃಹ ನಿನಗಾಗಿಯೆ ನೇಮಿಸಿಯಿಹುದು ಬಹಿರದಿ ಪಾಕಗೃಹ ವಿಹುದು ಅಲ್ಲಿ ಗೃಹಿಣಿಯಿಂ ತ್ರಿವಿಧಾನ್ನ ಪಕ್ವಗೈತಿಹುದು5 ನಡುಮನೆ ದೊಡ್ಡದಾಗಿಹುದು ಅಲ್ಲಿ ಸಡಗರದಲಿ ಬ್ರಹ್ಮವೃಂದ ಕೂಡುವದು ಬಿಡದೆ ಸತ್ಕಥೆನಡೆಯುವದು ಮುಂದೆ ಪಡಸಾಲೆಯಲಿ ಸರ್ವಜನ ಸಭೆಯಹುದು 6 ಶ್ವಸನ ಮಾರ್ಗವಲಂಬಿಸಿರುವೆ ಮನಿಯ ಹಸನ ಮೆಹದೀನಾದಿಯಿಂ ಮಾಡಿಸಿರುವೆ ಹೊಸಸುಣ್ಣವನು ಹಚ್ಚಿಸಿರುವೆ ಏಕಾ ದಶ ಸೇವಕರ ನಿನ್ನ ವಶದೊಳಿರುಸುವೆ 7 ನಾನಾಧನ ನಿನಗರ್ಪಿಸುವೆನು ತನು ಮಾನಿನಿಸಹ ನಿನ್ನಾಧೀನ ಮಾಡುವೆನು ಜ್ಞಾನಭಕ್ತಿಯೆ ಇಚ್ಛಿಸುವೆನು ನಿನ್ನ ಧ್ಯಾನಾನಂದದಿ ಧನ್ಯನೆಂದಿನಿಸುವೆನು8 ಹರಿಯೆ ಲಾಲಿಸು ಎನ್ನ ಸೊಲ್ಲಾ ಮುಂದೀ - ಪರಿಗೃಹದೊರೆವುದು ಸುಲಭವೇನಲ್ಲಾ ¨ರೆ ನಿನ್ನ ಬಿಡೆನೊ ಶ್ರೀ ನಲ್ಲಾ ಎನ್ನ ಮೊರೆಯ ನಾಲಿಸಿ ನೋಡೋ ವರದೇಶವಿಠಲಾ9
--------------
ವರದೇಶವಿಠಲ
ಬಾರೋ ಬಾರೋ ಬಾರಯ್ಯ ಬಾರೊ ಸದ್ಗುರುಸ್ವಾಮಿ ಬಾರಯ್ಯ ಬಾರೊ ಮದ್ಗುರು ಸ್ವಾಮಿ ಬಾರಯ್ಯ ಬಾರೊ ಧ್ರುವ ಸ್ವರೂಪಸುಖ ನಿಜವನ್ನು ತೋರೊ ಹರುಷಾನಂದದನುಭವ ಬೀರೊ ಗುರುತವಾಗ್ಯೆನ್ನೊಳು ನಿತ್ಯವಿರೊ ತರಣೋಪಾಯದ ನಿಜಬೋಧ ನೀ ಸಾರೊ 1 ಕಣ್ಣುಕೆಂಗೆಂಡುತಾವೆ ಕಾಣದೆ ನಿಮ್ಮ ಪುಣ್ಯಚರಣ ತೋರೊ ಘನ ಪರಬ್ರಹ್ಮ ಚಿಣ್ಣಕಿಂಕರ ಅತಿದೀನ ನಾ ನಿಮ್ಮ ಧನ್ಯ ಧನ್ಯಗೈಸುವದೆನ್ನ ಜನುಮ 2 ಚಾಲ್ವರುತಾವೆ ಮನೋರಥಗಳು ಆಲೇಶ್ಯ ಮಾಡದಿರು ನೀ ಕೃಪಾಳು ಮೇರೆದಪ್ಪಿ ಹೋಗುತಿದೆ ದಿನಗಳು ಬಲು ಭಾಗ್ಯೊದಗಿಬಾಹುದು ನೀ ದಯಾಳು 3 ಹಾದಿ ನೋಡುತಿದೆ ಹೃದಯ ಕಮಲ ಸಾಧಿಸಿಬಾಹುದು ಮುನಿಜನ ಪಾಲ ಸಾಧುಹೃದಯ ನೀನಹುದೊ ಸಿರಿಲೋಲ ಛೇದಿಸೊ ನೀ ಬಂದು ಭವಭಯಮೂಲ 4 ಬಾರದಿದ್ದರೆ ಪ್ರಾಣ ನಿಲ್ಲದೊ ಎನ್ನ ಕರುಣಿಸಿಬಾಹುದು ಜಗನ್ಮೋಹನ ತರಳ ಮಹಿಪತಿಗೆ ನೀ ಜೀವಜೀವನ ಕರೆದು ಕರುಣ ಮಳೆಗೈಸು ಪಾವನ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಬಾರೋ ವೆಂಕಟಗಿರಿನಾಥ| ದಯ- ದೋರೈ ಭಕುತರ ಪ್ರೀತ ಪ. ಮಾರಪಿತ ಗುಣಹಾರ ಮಂದರ- ಧಾರ ದೈತ್ಯಸಂಹಾರ ಸುಜನೋ ದ್ಧಾರ ಮಮಹೃದಯಾರವಿಂದಕೆ ಬಾರೋ ಕೃಪೆದೋರೋ ವೆಂಕಟ ಅ.ಪ. ವೃಷಭಾಸುರನೊಳು ಕಾದಿ ಸಾ- ಹಸವ ಮೆರೆಸಿದ ವಿನೋದಿ ವಶಗೈದು ದೈತ್ಯನ ಶಿರವ ಕತ್ತ- ರಿಸುತಲಿ ನೀನಿತ್ತೆ ವರವ ವಸುಧೆಯೊಳಗಿಹ ಸುಜನರನು ಮ- ನ್ನಿಸುತಲಿಷ್ಟವನಿತ್ತು ಕರುಣಾ- ರಸದಿ ಸಲಹುವ ಬಿಸಜನಾಭ ಶ್ರೀ- ವೃಷಭಾಚಲವೊಡೆಯ ವೆಂಕಟ 1 ಅಂಜನೆಯೆಂಬಳ ತಪಕೆ ಭಕ್ತ- ಸಂಜೀವನೆಂಬ ಶಪಥಕೆ ರಂಜಿಪ ಪದವಿತ್ತೆ ಮುದದಿ ಖಿಲ- ಭಂಜನಮೂರ್ತಿ ಕರುಣದಿ| ಮಂಜುಳಾಂಗ ಶ್ರೀರಂಗ ಸುರವರ ಕಂಜಭವವಿನುತಾದಿ ಮಾಯಾ- ರಂಜಿತಾಂಘ್ರಿ ಸರೋರುಹದ್ವಯ ಅಂಜನಾಚಲವೊಡೆಯ ವೆಂಕಟ 2 ಶೇಷನ ಮೊರೆಯ ತಾ ಕೇಳಿ ಬಲು ತೋಷವ ಮನಸಿನೊಳ್ತಾಳಿ ದೋಷರಹಿತನೆಂದೆನಿಸಿ ಕರು- ಣಾಶರಧಿಯ ತಾನೆ ಧರಿಸಿ ಶ್ರೀಶ ಹರಿ ಸರ್ವೇಶ ನತಜನ- ಪೋಷ ದುರ್ಜನನಾಶ ರವಿಶತ- ಭಾಸ ಕೌಸ್ತುಭಭೂಷ ವರ ಶ್ರೀ- ಶೇಷಾಚಲವಾಸ ವೆಂಕಟ 3 ಮಾಧವವಿಪ್ರ ವಿರಹದಿ ಭ್ರಷ್ಟ ಹೊಲತಿಗಳನು ಸೇರ್ದ ಮುದದಿ ಸಾದರದಲಿ ನಿನ್ನ ಬಳಿಗೆ ಬರೆ ನೀ ದಯಾನಿಧಿ ಕಂಡು ಅವಗೆ ಶೋಧಿಸುತ ಪಾಪಗಳೆಲ್ಲವ ಛೇದಿ ಬಿಸುಡುತ ನಿಂದು ವೆಂಕಟ- ಭೂಧರದ ನೆಲೆಯಾದ ನಾದವಿ- ಭೇದಬಿಂದು ಕಲಾದಿಮೂರುತಿ 4 ಧನಪತಿಯೊಳು ತಾನು ಸಾಲ ಕೊಂಡ ಘನಕೀರ್ತಿಯಿಂದ ಶ್ರೀಲೋಲ ವನಿತೆ ಪದ್ಮಾವತಿಪ್ರೀತ ಭಕ್ತ- ಜನಸುರಧೇನು ಶ್ರೀನಾಥ ವನಧಿಶಯನ ಮುರಾರಿ ಹರಿ ಚಿ- ಧ್ವನಿನಿಭಾಂಗ ಸುಶೀಲ ಕೋಮಲ ವನಜನಾಭ ನೀಯೆನ್ನ ಕೃಪೆಯೊಳ- ಗನುದಿನದಿ ಕಾಯೊ ಕೃಪಾಕರ 5 ಛಪ್ಪನ್ನೈವತ್ತಾರು ದೇಶದಿಂದ ಕಪ್ಪವಗೊಂಬ ಸರ್ವೇಶ ಅಪ್ಪ ಹೋಳಿಗೆಯನ್ನು ಮಾರಿ ಹಣ- ಒಪ್ಪಿಸಿಕೊಂಬ ಉದಾರಿ ಸರ್ಪಶಯನ ಕಂದರ್ಪಪಿತ ಭಜಿ- ಸಿರ್ಪವರ ಸಲಹಿರ್ಪ ಕುಜನರ ದರ್ಪಹರಿಸುತ ಕಪ್ಪಕಾಣಿಕೆ ಒಪ್ಪಿಗೊಂಬ ತಿಮ್ಮಪ್ಪಶೆಟ್ಟಿಯೆ 6 ಚಾರುಚರಣತೀರ್ಥವೀಂಟಿ ನಿನ್ನೊ- ಳ್ಸಾರಿ ಬರುವ ಪುಣ್ಯಕೋಟಿ ಸೇರಿದೆ ಕೊಡು ಮನೋರಥವ ಲಕ್ಷ್ಮೀ- ನಾರಾಯಣನೆನ್ನೊಳ್ದಯವ ತೋರು ನಿರತ ಸಮೀರಭವ ವರ- ದಾರವಿಂದದಳಾಕ್ಷ ತಿರುಪತಿ ವೀರ ವೆಂಕಟರಮಣ ಮದ್ಬಹು-ಭಾರ ನಿನ್ನದು ಪಾಲಿಸೆನ್ನನು 7
--------------
ತುಪಾಕಿ ವೆಂಕಟರಮಣಾಚಾರ್ಯ
ಬಾರೋ ವೆಂಕಟರಮಣ ಭವದುರಿತ ಸಂಹರಣ ಪ ನೀರಜದಳಾಂಬಕನೇ ಪುರುಷೋತ್ತಮ ವರನೇ ದುರಿತ ಬಿರುದಿನಭಿಮಾನಿ ನಿಸ್ಸೀಮ 1 ಕಲಿಯುಗದಿ ನಿನ್ನ ನಾಮ ಹಲವುರೂಪದಲಿಹುದು ಬಲು ಬಗೆಯ ಭಕುತ ಜನರನು ಸಲಹುತ ಒಲುಮೆಯಿಂದಲಿ ಕಾಣಿಕೆಯನು ಕೊಳ್ಳುತ 2 ಚಲದಂಕ ನೀನೆಂದು ಒಲುಮೆಯಿಂದಲಿ ಬರಲು ಚಲಿಸದೆ ವರಗಳನಿತ್ತೆಯೋ ಅವರಿಗೆ ಚಲುವ ಶ್ರೀ ತಿರುಪತಿ ವೆಂಕಟರಮಣ 3
--------------
ಕವಿ ಪರಮದೇವದಾಸರು
ಬಾರೋ ಶ್ರೀ ಕೃಷ್ಣವಿಠಲ ಮನ್ಮನ ದೈವ ಪ ಮೆಲ್ಲಮೆಲ್ಲನೆ ಪದ ಪಲ್ಲವ ವಿಡುತಲಿ ಗುಲ್ಲು ಮಾಡದೆ ಭವ ದಲ್ಲಣಗೊಳಿಸು ವಲ್ಲಭ ಸಿರಿಸಹ ನಿಲ್ಲದೆ ಮನೆಯೊಳು ಬಲ್ಲಿದರಿಗೆ ಬಹು ಬಲ್ಲಿದನೆನಿಸಿಹ ಅ.ಪ. ನೆಗೆಯುವ ನಿಲ್ಲುತೆ ಚಿಗರಿಯ ತೆರೆದನು ರಾಗದಿನೋಡುತ ಬಗೆ ಬಗೆ ಹರ್ಷದ ನಗೆಮೊಗಹಾಸದಿ ಬಿಗಿಯುತ ಮನ ಅಗಣಿತ ಗುಣನಿಧಿ 1 ಸಾಗರನಳಿಯನೆ ಸಾಗರಶಯನನೆ ಯಾಗ ಸುಭೋಕ್ತನೆ ಯೊಗಿಗಳರಸನೆ ಬಾಗುವೆ ಚರಣದಿ ಸಾಗುತ ಮನ ಬಡ ಬಡ ನೀಗಿಸಿ ಮಲಮನದಾಗಸಗೀಗಲೆ 2 ಕುಣಿಸುತ ಹುಬ್ಬನು ಉಣಿಸುತ ಭಕ್ತಿಯ ತನುಮನವೆಲ್ಲವ ಮಿನುಗಿಸಿ ಜ್ಞಾನವÀ ಧಣಧಣ ತಾಳಕೆ ಅಭಿನಯಸಹಿತದಿ ಕುಣಿಯುತ ಕುಣಿಸುತ ದಣಿಸದೆ ಕರುಣದಿ 3 ಕರ್ಜಿಸಿ ರಾಮದ ಕಜ್ಜಿಯಮನದಿಂ ಮಜ್ಜನಗೈಸುತ ಭಕ್ತಿಯಕಡಲಲಿ ಗೆಜ್ಜೆಯಕಟ್ಟಿಸಿ ಹೆಜ್ಜೆಹೆಜ್ಜೆಗೆ ಪೂ- ರ್ವಾರ್ಜಿತವೆಲ್ಲವ ಭರ್ಜನೆ ಗೈಸಲು 4 ಇಂದಿರೆಯರಸನೆ ಚಂದ್ರನ ಹಳಿವನೆ ಛಂದಸುವೇದ್ಯನೆ ಬಂಧ ಸುಮೋಚಕ ಬಂಧುವೆ ಸರ್ವರ ಮಂದಜಭವಪಿತ ತಂದೆಯೆ ವಿಶ್ವದ ನಂದವ ನೀಡಲು 5 ವೇದವ ತಂದವ ವೇದನ ಪೊರೆದವ ಭೂಧರ ಪೊತ್ತವ ಮಾಧವನಾದವ ಮೋದವ ತಂದವ ಖೇದವ ತರಿದವ ಮೇದಿನಿ ಪೊರೆದವ ಛೇದಿಸಿ ಬಂದವ 6 ಮೇದಿನಿ ಇತ್ತವ ಮೇದಿನಿಸುತೆಯಳ ಮೋದದಲಾಳ್ದವ ಮೇದಿನಿಸುತಹರ ವೇದವ ಕಾಯ್ದವ ಛೇದಿಸಿ ಕಲಿಗಣ ಹಾದಿಯ ತೊರುವ 7 ನಂದನಂದ ಅರವಿಂದ ನಯನ ಬಹು ಸುಂದರತಮಶ್ರೀ ಮಂದಿರ ಗೋಕುಲ ಚಂದಿರ ಶುಭಗುಣಸಾಂದ್ರ ಮಹೋಜಸ ಇಂದ್ರನ ಹಳಿದ ಮಹೇಂದ್ರ ಪರಾತ್ಪರ8 ಗೋಪಿಕಂದ ಬಹು ಗೋಪಿಕಾಮಸ್ತ್ರೀ ರೂಪಧಾರಿ ನಗಚಾಪವರದ ಶಿವ ಭಂಗ ಹರಣ ನಿ- ರ್ಲೇಪ ದುಃಖ ಸುಖಲಾಪ ಚರಿತ ಭಗ 9 ವಾಸುದೇವ ಸಂತೋಷದಾತ ಗೋಕೇಶವೇದ್ಯ ವಾಗೀಶ ಜನಕ ನಿಜದಾಸಪೋಷ ಖಳ- ದಾತ ಮಹಿ- ದಾಸಪೂರ್ಣವಿಭು 10 ವೈರಿ ಕುರುವಂಶ ಧ್ವಂಸ ನಿಜ ಹಂಸರೂಪ ಯದುವಂಶ ಚಂದ್ರ ನೀ- ಲಾಂಶುಧಾಮ ಗರುಡಂಸಗಮನ ಭವ ದಮನ ದೇವಾಂಶಗಣಪೋಷ 11 ತುಂಬಿರೆಜಯಜಯ ದುಂಧುಭಿನಾದವು ಅಂಬರಸುರಗಣ ವರ್ಷಿಸೆಕುಸುಮವ ಸಂಭ್ರಮದಾರತಿ ಎತ್ತಲ್ ಸ್ತ್ರೀಗಣ ಕಂಬು ಚಕ್ರಾಂಕಿತ ಪಾಣಿಯೆಸರಸರ 12 ಮಂಗಳಮೂರ್ತಿಯೆ ಮಂಗಲ ದಾತನೆ ಅಂಗಜರಿಪುಗಳ ಭಂಗವ ಹರಿಸುತ ತಿಂಗಳು ಬೆಳಕಿನ ತುಂಗ ಸುರೂಪವ ಕಂಗಳು ಮನಸಿನ ಸಂಗದಿ ತೋರುತ13 ಸಾಸಿರ ಶಿರಮುಖ ಸಾಸಿರ ನೇತ್ರನೆ ಸಾಸಿರ ಬಾಹುವೆ ಸಾಸಿರನಾಮಕ ಸಾಸಿರಕೀರ್ತಿನಿರ್ದೋಷ ಸುಖಪೂರ್ಣ ಶ್ವಾಸವಿನುತ ವಿಶ್ವಾಸವ ಬೀರುತ 14 ಜಯಮುನಿ ಹೃದಯಗ ವಾಯು ವಿನಾಯಕ ಜೀಯ ಶ್ರೀ ಕೃಷ್ಣವಿಠಲ ಮಹಾಂತನೆ ಪ್ರೇಮದ ಮನವಳಿದ ಹೇಯದು ನಿನ್ನಯ ಧೇಯವೆ ನಡೆಸುತ ಶ್ರೀ ಯವ ನೀಡಲು 15
--------------
ಕೃಷ್ಣವಿಠಲದಾಸರು
ಬಾರೋ ಹೃದಯ ಸದನಾ ಮುಖ್ಯ ಪ್ರಾಣ ಪ ಬಾರೋ ಹೃದಯದೊಳು ವಾರಿಜಾಸನ ಪದಏರುವಾತನೆ ದಿವ್ಯ ಕಾರುಣ್ಯ ಸಾಗರ ಅ.ಪ. ಹರಿಭಕ್ತರೊಳು ನೀನು ಹಿರಿಯನೆಂಬುವ ವಾರ್ತೆಪರಿಪರಿ ಕೇಳುತ ಶರಣು ಬಂದೆನೊ ನಿನ್ನ1 ಮಂದಗಮನೆ ಕೊಟ್ಟ ಇಂದ್ರಮಾಣಿಕ ಮಾಲೆಕಂಧರದೊಳಗಿಟ್ಟ ಇಂದ್ರಶಯನ ಪ್ರೀಯಾ 2 ಕಾಳಿ ರಮಣ ಧರ್ಮನಾಳೆ ಎನಲು ಧನ-ನೀಲ ಮಾಣಿಕ್ಯ ಭೂಷಲೋಲ ಭೂಸುರಗಿತ್ತೆ 3 ಮಾಧವನಾಜ್ಞದಿ ಮೇದಿನಿಯೊಳು ಬಂದುಬಾದರಾಯಣ ಮತ ಸಾಧನೆ ಮಾಡಿದ 4 ಪಾದ ಮುಂದೆ ಸೇವಿಸಿ ನಿತ್ಯಾನಂದತೀರ್ಥರೇ ನೀವು ಸಂದೇಹವಿಲ್ಲದೆ 5
--------------
ಇಂದಿರೇಶರು
ಬಾಲಚಂದ್ರನ ರೂಪಾ ಭಯನಿವಾರಣ ನೋಡೋ ಬಾಲೆಯರೆಲ್ಲರು ಬಂದು ಕಾದಿರುವಾ ಲೊಲಾನವನ್ನು ಕಂಡು ಹೇಳಲು ನಾ ಬಂದೆ ಆಲಯಕ್ಕೆ ನೀ ಬಾ ಹಸೆಗೇಳೋ ಸೋಬಾನೆ 1 ಪನ್ನಂಗಶಯನ ಬಾರೊ ಚನ್ನಕೇಶವನಲ್ಲ ದಿನ್ನು ಬೇಕಾದ ಹೆಸರನ್ನು ಪಡೆದಿರುವೆ ಕನ್ನೆ ಸೀತೆಗೆ ಕೊಟ್ಟ ಹೊನ್ನವುಂಗರ ಕೊಡುವೆ ಬಿನ್ನಾಣದಿಂದ ಹಸೆಗೇಳೋ ಸೋಬಾನೆ 2 ಸುದತಿಯರೈವರು ಕದಳಿಹುವ್ವಿನ ಪೀಠ ಹದಮಾಡಿ ಕುಂತಿರುವರದೆ ಹೇಳಬಂದೆ ಮದನ ಜನಕ ಹಸೆಗೊದಗಿ ಅಲ್ಲಿನ ದಿವ್ಯ ಚದುರತನವನೋಡೊ ಹಸೆಗೇಳೋ ಸೋಬಾನೆ 3 ಋಷಿಗಳೆಲ್ಲರು ಜ್ಞಾನದೋಯ ಹಾಸನದೊಳೂ ಬಿಸಜಾಕ್ಷಿವರದನೆ ಗುರುವು ತುಲಸಿರಾಮಾ ಪಶುಪತಿಯಾದೆಯಾ ಹಸೆಗೇಳೋ ಸೋಬಾನೆ 4
--------------
ಚನ್ನಪಟ್ಟಣದ ಅಹೋಬಲದಾಸರು
ಬಾಳು ಸೌಖ್ಯದಿಂ ತನಯನೆ ಬಾಳು ಸೌಖ್ಯದಿಂ ಪ ಲೀಲೆಯೊಳನುದಿನ ಸಂತಸವಾಂತು ನೀಂ ಅ.ಪ. ಮುರಹರ ಪರಮಾಯುಷ್ಯವ ನೀಯಲಿ ಪೊಂದುತ ನಲಿಯುತ 1 ಇಂದ್ರನಂತೆ ವರ ಭೋಗವ ಪೊಂದುತ ಮಂದಿರಕಾನಂದವನಿತ್ತು 2 ಧರ್ಮ ಕಾರ್ಯವನ್ನಾಚರಿಸುತ ನೀಂ ಪೊಂದುತ ಸುಜನರ ಸೇವಿಸಿ 3 ಕೀರ್ತಿವಂತ ನೀನಾಗಿರು ಸರ್ವದ ಆರ್ತರನ್ನು ರಕ್ಷಣೆಯ ಗೈಯುತ 4 ಶಾರದೆ ನಿನ್ನಯ ಸೇರಲಿ ಸತತಂ ನಿತ್ಯವು ಸಲಹಲಿ ನಿನ್ನನು 5 ಅನ್ನಧಾನ ಧೇನುದಾನವ ಗೈಯುತ ಕನ್ಯಾದಾನವ ವಿರಚಿಸುತ ಮನ್ನಿಸಿ ಹಿರಿಯರ ಗುರುಗಳ ಸೇವಿಸಿ 6 ಮಾನವಂತ ನೀನಾಗಿರು ಸರ್ವದ ಜ್ಞಾನವಂತನಾಗಿರು ನಿರತಂ ಧೇನುಪುರೀಶನ ಶ್ರೀಶನ ಸ್ಮರಿಸುತ 7
--------------
ಬೇಟೆರಾಯ ದೀಕ್ಷಿತರು
ಬಿಟ್ಟು ಬನ್ನಿರೊ ಸಂಸಾರದ್ಹಂಬಲ ಪ. ಸೃಷ್ಟಿಪತಿಯ ಸೇರಿ ನೀವು ಸುಖಿಸಬನ್ನಿರೊ ಅ.ಪ. ಹೆಂಡಿರುಮಕ್ಕಳು ಎಂಬೋ ಹಂಬಲ ಬೇಡಿರೊಕೊಂಡವರಲ್ಲ ಕೊಡುವರಲ್ಲ ಮುಂದಿನ ಗತಿಯನು 1 ಎಷ್ಟು ಮಾಡಿ ಗಳಿಸಿ ತಂದರು ಸಾಲದೆಂಬರೊನಷ್ಟಮಾಡಿ ಇವನ ಬದುಕು ಎಲ್ಲ ತಿಂಬರು 2 ನಡುಬೀದಿಯಲಿ ಇವನ ಎಳೆದು ಸೆಳೆವರೊಕಡೆಗಣ್ಣು ಕುಡಿಹುಬ್ಬು ನೋಟದಿಂದಲಿ 3 ಉಂಡು ಉಟ್ಟು ಗುಂಡಿನಂತೆ ಮನೆಯಲಿರುವರೊಚಂಡ ಯಮನದೂತರು ಬಂದು ಎಳೆದು ಒಯ್ವರೊ4 ಮುಟ್ಟಿ ಭಜಿಸಿರೊ ಹಯವದನನಂಘ್ರಿಯನೆಟ್ಟನೆ ಮುಕ್ತಿಮಾರ್ಗ ತೋರಿಕೊಡುವೆನೊ 5
--------------
ವಾದಿರಾಜ
ಬಿಡಬೇಡೆಲೆ ಮನಸೆ ಶ್ರೀಹರಿಪಾದ ಹಿಡಿ ಬಿಗಿಯಲೆ ಮನಸೇ ಪ ಹಿಡಕೋ ಕಡಕಿಂ ಕಡಲಕಡಿದಮರರ ಪಾದ ಅ.ಪ ಅನುದಿನ ಸಿರಿಯರೊತ್ತುವ ಪಾದ ಪರತರ ಭಕುತಿಯಿಂ ಸುರರುಪೂಜಿಪ ಪಾದ ನೆರೆದು ಋಷಿಸ್ತೋಮರರಸಿನಲಿಯುವ ಪಾದ ಪರಮನಾರದ ತುಂಬುರರು ಪಾಡುವ ಪಾದ ಪಾದ 1 ನೀಲಬಣ್ಣದಪಾದ ಪಿಡಿದೆತ್ತಿ ಮೂಲೋಕಾಳುವ ಪಾದ ತಾಳಿ ವಿಲಸಿತರೂಪ ಖೂಳನ ಎದೆಮೆಟ್ಟಿ ಸೀಳಿ ಉದರಮಂ ಬಾಲನ್ನಪ್ಪಿಕೊಂಡು ಪಾಲಿಸಿದಂಥ ಮಹ ಮೇಲಾದಮಿತಪಾದ ಸುಜನ ತಲೆಮೇಲೆ ಹೊತ್ತಪಾದ 2 ಬಲಿಯತುಳಿದಪಾದ ಮುನಿಯಾಗ ಒಲಿದು ಕಾಯ್ದಪಾದ ಶಿಲೆಯನೊದೆದಪಾದ ವನಕೆ ಪೋದಪಾದ ಖಳರಥಳಿಸಿ ಮುನಿಕುಲವ ಸಲಹಿದಪಾದ ಜಲಧಿದಾಂಟಿ ಸ್ಥಿರಪಟ್ಟ ಭಕ್ತನಿಗೆ ಸುಲಭದೊದಗಿಕೊಟ್ಟ ಚೆಲುವ ಸುದಯಪಾದ 3 ಪಾದ ಬಹು ಜರಮರಣ ನಿವಾರ ಪಾದ ತರಳಗೆ ಸ್ಥಿರವರ ಕರುಣದಿತ್ತ ಪಾದ ಭರದಿಗರಡನೇರಿ ಸರಸಿಗಿಳಿದ ಪಾದ ತರುಣಿಮಣಿಯರವ್ರತ ಹರಣಗೈದ ಪಾದ ಸಿರಿ ಪಾದ 4 ಪಾದ ಭಕುತರ ಮೊರೆಯ ಕೇಳ್ವ ಪಾದ ದುರುಳ ಕುರುಪನ ಗರುವಕಂಡ ಬುವಿ ವಿಶ್ವ ಪಾದ ಪರಮ ತುರಗವೇರಿ ಮೆರೆವ ವಿಮಲ ಪಾದ ಪಾದ 5
--------------
ರಾಮದಾಸರು
ಬಿಡು ಬಿಡು ಚಿಂತೆಯ ಮೂಢಾ ನ- ಮ್ಮೊಡೆಯನುಪೇಕ್ಷೆಯ ಮಾಡ ಬಡವರ ತಪ್ಪನು ನೋಡ ಸಂ- ಗಡಲಿಹ ಗರುಡಾರೂಢ ಪ. ನೆನೆವರ ಮನದಲ್ಲಿರುವ ನಿಜ ಜನಕೆ ದಯಾರಸ ಸುರಿವ ಕನವಿಕೆ ಎಂಬುದ ತರಿವ ಸ್ಮರ ಜನಕ ಸಿರಿಯ ಕರೆತರುವ 1 ಮಾಡುವ ಕರ್ಮಗಳೆಲ್ಲ ಫಲ ಕೊಡಿಸುವನು ಸಿರಿನಲ್ಲ ರೂಢಿಪರೊಳಗಿರಬಲ್ಲ ಬೇ- ರಾಡುವ ಮಾತೇನಿಲ್ಲ 2 ನೋಡಲು ಸಿಕ್ಕುವನಲ್ಲ ಬೇ- ಗೋಡಿ ಪಿಡಿಯಲೊಶನಲ್ಲ ದೂಡುವ ದೈತ್ಯರನೆಲ್ಲ ದಯ ಮಾಡಲಿವಗೆ ಸರಿಯಿಲ್ಲ 3 ಸರ್ವತ್ರದಲಿ ಸ್ಮರಿಸುವನು ರಿಪು ಪರ್ವತಗಣ ದುಶ್ಚ್ಯವನ ಗರ್ವಿ ದೈತ್ಯವನದವನ ಸುರ ಸಾರ್ವಭೌಮನೆಂಬುವನ 4 ಸತಿಸುತ ಗ್ರಹ ಭೂಧನಕೆ ಶ್ರೀ- ಪತಿಯೆ ಪಾಲಕನಿದಕೆ ವ್ಯಥೆಗೊಳದಿರು ದಿನದಿನಕೆ ಸ- ಮ್ಮತಿನಹಿಗಿರಿಪತಿ ಘನಕೆ 5
--------------
ತುಪಾಕಿ ವೆಂಕಟರಮಣಾಚಾರ್ಯ
ಬಿಡು ಬಿಡು ವಾಜಿಥರವಲ್ಲಾ | ಪ್ರಾಣಿ ಪ ಕಡಲಶಯನೆಚ್ಚರ ಗಳದೆಲ್ಲಾ | ಬಿಡದೇ ನಿನ್ನ ನೀ ಮರೆವುದು ಸಲ್ಲಾ | ಎಡಬಲ ನೋಡದೆ ನೀ | ವಿಡಿ ಗುರುಗಳ ಅಡಿಗಳ | ಪಡಿ ನಿಜಗತಿಯಾ 1 ಏಸು ಜನ್ಮವ ಸುತ್ತಿ ಬಂದ್ಯೋಯತ್ತಿ | ನ್ನೇಸು ಜನ್ಮವ ತಾಳಬೇಕು ಮುಂದ | ಹೇಸಲಿಲ್ಲವನೊಂದು ಘಾಸಿಯಿಂದ | ಅಶನ ವ್ಯಸನ ತೃಷಿ ಭಸಿಯೊಳು ನಿಶಿದಿನ | ಪಶುವಿನ ಪರಿಯಲಿ ದೆಶೆಗೆಡ ಬ್ಯಾಡಾ 2 ಎಂತು ಹೇಳಲಿನ್ನು ಮನವೇ ನಾನು | ಸಾಧು | ಸಂತರ ಸಂಗದಿ ಬಾಳು ನೀನು | ಅಂತರಂಗದಿ ಹರಿ ಮೂಡುವನು | ಹಿತಾಹಿತ ನರಿತು ಸುಮತಿಯಲಿ ಗುರು ಮಹೀ | ಪತಿ ಸುತ ಪ್ರಭು ಸ್ತುತಿರತಿಯಲಿ ಬಾಳು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಬಿಡುಮನವೆ ಬಿಡದಿಹ್ಯ ಸಂಸಾರ ಪಡಕೊಂಬುದು ಮಾಡು ನೀ ಸುವಿಚಾರ 1 ವಿಚಾರದೊಳಗದ ಬಲು ವಿವೇಕ ಸೂಚಿಸಿಬಾಹುದು ಸ್ವಾತ್ಮದ ಸುಖ2 ಸ್ವಾತ್ಮದ ಸುಖ ತಿಳಿದವ ಸ್ವತ:ಸಿದ್ಧ ಮತ್ತೆಲ್ಲಿಹದವಗೆ ಭವಬಂಧ 3 ಭವಬಂಧವ ತಿಳಿಯಲುಪಾಯ ಭುವನದಲ್ಯದ ಶುಕನಳಿಕನ್ಯಾಯಾ 4 ನ್ಯಾಯವ ತಿಳಿದರೆ ನೋಯವನೆಂದು ಶ್ರಯ ತಿಳಿಯಲು ತಾ ಬಂಧು 5 ಬಂಧು ಹಗೆಯು ತನಗೆ ತಾಯೆಂದು ಸಂಧಿಸಿ ಪಾರ್ಥಗ್ಹೇಳಿದ ಹರಿ ಬಂದು 6 ಹರಿವಾಕ್ಯವೆ ಗುರುಗುಹ್ಯದ ಗುಟ್ಟು ಪರಮಾನಂದದ ಹೆಜ್ಜೆಯ ಮೆಟ್ಟು 7 ಹೆಜ್ಜೆಲೆ ನಡೆವನು ಕೋಟಿಗೊಬ್ಬವನು ಸಜ್ಜನ ಶಿರೋಮಣೆನಿಸಿಕೊಂಬುನು 8 ಶಿರೋಮಣೆನಿಕೊಂಬುದು ಗುರುಕರುಣ ಗುರುಚರಣಕೆ ಬ್ಯಾಗನೆಯಾಗು ಶರಣು 9 ಶರಣ ಹೊಕ್ಕವಗೆಲ್ಲಿಹುದು ಮರಣ ಮರಣಕ ಮರಣವ ತಂದವ ಜಾಣ 10 ಜಾಣನೆ ಜನ್ಮರಹಿತ ವಾದವನು ಜನವನ ಸಕಲ ಸಮವಗಂಡವನು 11 ಸಮಗಂಡವಗಳದಿಹ್ಯ ಶ್ರಮವೆಲ್ಲಾ ರಾಮ ವಸಿಷ್ಠರೊಳಾಡಿದ ಸೊಲ್ಲ 12 ಸೊಲ್ಲಿಗೆ ಮುಟ್ಟಿದವ ಪ್ರತಿಯಿಲ್ಲ ಎಲ್ಲರೊಳಗ ವಂದಾದವ ಬಲ್ಲ 13 ಬಲ್ಲವನೆ ಬಲ್ಲನು ಬಯಲಾಟ ಎಲ್ಲರಿಗಿದೆ ಅಗಮ್ಯದ ನೋಟ 14 ನೋಟಕ ನೀಟ ಮಾಡಿದವನು ಧನ್ಯ ನೀಟಿಲೆ ನಡೆದವ ಕೋಟಿಗೆ ಮಾನ್ಯ 15 ಕೋಟಿಗೆ ಒಬ್ಬನು ತತ್ವಜ್ಞಾನಿ ನೋಟವಗಂಡಿಹ್ಯ ಮಹಾ ಸುಜ್ಞಾನಿ 16 ಸುಜ್ಞಾನಿಗೆ ಘನಮಯ ಸುಕಾಲ ಸುಗಮ ಸುಪಥವಾಗಿಹುದನುಕೂಲ 17 ಅನುಕೂಲದ ನಿಜ ಮಾತನೆ ಕೇಳು ಅನುದಿನ ಘನಗುರು ಸೇವಿಲೆ ಬಾಳು 18 ಪರಿ ಲೇಸು ಕಳೆವುದು ಮಿಕ್ಕಿನ ಭ್ರಾಂತಿಯ ಸೋಸು 19 ಸೋಸ್ಹಿಡಿದರ ಇದೊಂದೇ ಸಾಕು ವೇಷವದೋರುವದ್ಯಾತಕೆ ಬೇಕು 20 ಬೇಕೆಂಬ ಬಯಕೆಯ ಈಡ್ಯಾಡು ಸೋಕಿ ಶ್ರೀ ಸದ್ಗುರು ಪಾದದಿ ಕೂಡು 21 ಪಡೆವುದಿದೇ ಸ್ವಸುಖ ಸಾಧನ 22
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಬಿಡೆ ಬಿಡೆನೋ ನಿನ್ನಾ|ಅಡಿಗಳ ಯುಗಳನ್ನಾ ಪ ಬಿಡೆ ಬಿಡೆನೋ ನಿನ್ನಾ|ಅಡಿಗಳ ಯುಗಳನ್ನಾ ಬಿಡದಿಹ ಪಾವನ್ನಾ| ಪೊಡವಿಯೊಳಗೆ|ಮೃಡ ಅಜರಿಗೆ ವಡಿಯ ನೀನೀಗ| ಒಡಲ ಹೊಕ್ಕೆನು ಕರುಣಾ ನಿನಗ 1 ಹಲವು ಜನ್ಮಂಗಳನು|ಬಲುತೆರ ಸೂಸಿದೆನು| ನೆಲೆಗಾಆಣದೆ ನಾನು|| ಸುಲಭದಿ ದೊರೆಕಿತು ದೀನೊದ್ದರನೆ 2 ಮುನ್ನ ಮಾಡಿದ ಪರಿ|ಬನ್ನ ಬಡಿಸದೆ ಸಾರಿ| ಚನ್ನಾಗೊಲಿಹರಿ| ಯನ್ನ ಹೃದಯದಲಿ ಇನ್ನು ನಿಶಿದಿನಲಿ|ನೆನೆವ ಭಕುತಿಲಿ| ಸನ್ನುತ ಮಹಿಪತಿ ನಂದನ ಪ್ರಭುವೇ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು