ಒಟ್ಟು 2249 ಕಡೆಗಳಲ್ಲಿ , 115 ದಾಸರು , 1615 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹರಿಯೆ ಚಿತ್ರಲೀಲೆಗಳನು ಅರಿಯಲಳವೇ ಸುಲಭದಿ ಪ ನಿರತ ಸೇವೆ ಮಾಡುತಿರುವ ಸಿರಿಯು ತಾನಚ್ಚರಿಯಲ್ಲಿರಲು ಅ.ಪ ಪೊಡವಿಯಲಿ ದುರಿತಗಳನ್ನು ನಡೆನುಡಿಗಳಿಂದರಿಯದಿರುವ ಹುಡುಗರಾಗಿ ನಲಿಯುವರನ್ನು ಸಿಡಿಲಿನಿಂದ ತನ್ನಡಿಗಳಿಗೆಳೆವ 1 ಕ್ಲೇಶದಿಂದ ಗಳಿತವಾದ ಹೇಸಿಗೆಯ ದೇಹದಲ್ಲಿ ಆಸೆ ತೊರೆದು ನರಳುವರಲಿ ಲೇಶ ಕರುಣ ತೋರದೆ ಇರುವ2 ಸತ್ಯ ಸಂಕಲ್ಪನೆಂದರಿತು ನಿತ್ಯನನ್ನು ನೆನೆದು ತಮ್ಮ ಕೃತ್ಯಗಳನು ರಚಿಸಿ ಮುದದಿ ತೃಪ್ತನಾಗುವ ಭಕ್ತರ ಪ್ರಸನ್ನ 3
--------------
ವಿದ್ಯಾಪ್ರಸನ್ನತೀರ್ಥರು
ಹರಿಯೆ ನಿನ್ನದ್ಭುತ ಚರಿಯವನರಿವುದು ವರಗುರಿಯಿಂದಹರೆ ಕರುಣಿಸೆನ್ನೊಳು ದೊರೆಯೆ ಪ. ನಾನಾ ಯೋನಿಗಳಲ್ಲಿ ಪೋಗುವ ಸೂನುಗಳಿಂತು ಮಾಳ್ಪ ಶಿವ ಭಾನು ನಾಮಗಳಿಂದಲಿ ಸಾನುರಾಗದಿ ಕೊಂಡು ಸಕಲಪಿತರುಗಳಿಗಾನಂದ ಪಾಲಿಸುವಿ 1 ಬುದ್ಧಿಪೂರ್ವಕವಾಗಿ ಮಾಡುವ ಕರ್ಮವ ಶುದ್ಧಭಾವಗಳಿಂದಲಿ ತದ್ದಿನ ಕಾಲದಿ ನಡೆಸುತ ತಾನೆಂಬ ಬದ್ಧಹಂಕೃತಿ ತಾಳದೆ ವಾಸುದೇವ ನೀನುದ್ಧರಿಸೆನ್ನನುತ ತಿದ್ದಿ ಸಮರ್ಪಣೆ ಗೈದವರೆಲ್ಲ ಸರಿ ಶುದ್ಧ ಮಾಡುವ ವಿತತ 2 ಈ ವಿಧದಲಿ ಕರ್ಮಕೋವಿದರಾಡಿದ ಭಾವವೆ ನಿಜವೆನ್ನುತ ಸಾವಧಾನದಿ ನಿನ್ನ ಪಾದಕಂಜವೆ ಭವನಾವೆವೆಂಬೆನು ಸತತ ಶ್ರೀವರ ಶೇಷಾದ್ರಿ ಶಿಖರಾದ್ರಿವಾಸ ಪರಾಪರಗಣ ವಿನುತ ಕಾವಾತ ನೀನೆ ಕರ್ಮಗಳ ಕುಂದುಗಳಿಂದ ಪಾವನಾತ್ಮಕ ಸ್ವರತ 3
--------------
ತುಪಾಕಿ ವೆಂಕಟರಮಣಾಚಾರ್ಯ
ಹರಿಯೆ ಮೂಜಗದ ದೊರೆಯೆ ನಿನಗಿದು ಸರಿಯೆ ಪ. ಹರಿಯೆ ಮೂಜಗದ ದೊರೆಯೆ ನಿನ್ನನೆ ಮರೆಯಪೊಕ್ಕವರಲ್ಲಿ ಈ ಪರಿ ಬರಿಯ ಪಂಥದಿ ಮರುಗದಿರ್ಪುದು ಸರಿಯೆ ನಿನಗದು ಸರಸವಲ್ಲದುಅ.ಪ. ಉಕ್ಕಿನ ಕಂಬದಿಂದ ಉದಿಸಿ ಬಂದು ರಕ್ಕಸನುರವ ಸೀಳಿ ಕರುಳನು ಬಗೆದು ಉಕ್ಕುವ ಕೋಪದಿಂದ ರಕುತವು ಸುರಿಯೆ ಭಕ್ತ ಪ್ರಹ್ಲಾದನಾದರದಿ ಕಾಯ್ದು ಭಕ್ತ ವತ್ಸಲನೆನಿಸಲಹುದು ಶಕ್ತಿಹೀನತೆಯಿಂದ ಮರೆಹೊಕ್ಕ ಎನ್ನನು [ಕಾಯು]ವುದು 1 ಒಪ್ಪಿಡಿಯವಲಕ್ಕಿಯ ಒಪ್ಪಿಸಿನಿಂದ ವಿಪ್ರನ ನಲವಿಂದ ನೋಡುತಲಂತು ವಿಪುಲಸಂಪದವನ್ನು ಕರುಣಿಸಿದಂಥ ಅಪ್ರತಿಮ ಸಾಹಸಿಯೆನುತೆ ನಿನ್ನೊಳು ತಪಿಸಿ ಬೇಡುವ ಎನ್ನೊಳೀಪರಿ ಒಪ್ಪದೊಪ್ಪದೆನ್ನಪ್ಪ ಕೇಳಿದು ಸರಿಯೇ ಶ್ರೀನರಹರಿಯೇ 2 ಮಾನಿತÀಧ್ರುವ ಬಾಲನಂ ಮನ್ನಿಸಿ ಪೊರೆದೆ ಮಾನಿನಿ ಪಾಂಚಾಲಿಯ ಮಾನದಿ ಕಾಯ್ದೆ ಸಾನುರಾಗದಿಂ ಗಜನಂ ಉದ್ಧರಿಸಿದೆ ಕ್ಷೋಣಿಯೊಳಗತಿ ದೀನರಾದರ ಸಾನುರಾಗದಿ ಪೊರೆವ ಶ್ರೀಧರ ದಾನವಾಂತಕ ಶೇಷಗಿರೀಶನೆ ಸೂನುವೆಂಬಭಿಮಾನ ನಿನಗಿರೆ [ಮಾಣದೆನ್ನನು ಕಾಯೊ] ಹರಿಯೇ ಶ್ರೀನರಹರಿಯೇ3
--------------
ನಂಜನಗೂಡು ತಿರುಮಲಾಂಬಾ
ಹರಿಯೆ ಸರ್ವೋತ್ತಮ ಪರದೈವವೆಂತೆಂಬ ಮರುತ ಮತವ ಸಾರಿರೊ ಪ. ಗರುವಿಕೆಯನೆ ಬಿಟ್ಟು ಪರಮತವನೆ ಸುಟ್ಟು ಹರಿಯ ಸೇವಕರಾಗಿರೊ | ಈ ಜಗದೊಳು ಅ.ಪ. ಪಂಚ ಭೇಧವ ತಿಳಿದು ಪಂಚೇಂದ್ರಿಯವ ಸೆಳೆದು ಪಂಚ ಮೂರ್ತಿಯ ಭಜಿಸಿರೊ ಪಂಚ ಸಂಸ್ಕಾರದಿ ಪಂಚಯಜ್ಞವ ರಚಿಸಿ ಪಂಚ ಮಾರ್ಗವ ಸಾರಿರೊ | ವೈರಾಗ್ಯದಿ 1 ಎಂಟು ಮದಗಳನಳಿದು ಎಂಟು ಮೂರ್ತಿಯ ತಿಳಿದು ಎಂಟು ದಳದಿ ಕಾಣಿರೊ ಎಂಟು ಕರ್ತೃತ್ವವ ಎಂಟು ತತ್ವದಿ ಮಾಳ್ಪ ಎಂಟಕ್ಷರನ ಪಾಡಿರೊ | ಕೊಂಡಾಡಿರೊ 2 ಮೂರು ಗುಣಗಳಿಂದ ಮೂರು ಮಾಳ್ಪ ಜಗವ ಮೂರು ರೂಪವ ನೆನೆಯಿರೊ ಮೂರು ಮೂರು ಭಕ್ತಿ ಮೂರು ಮಾರ್ಗದಿ ರಚಿಸಿ ಮೂರು ಲೋಕವ ಸಾರಿರೊ | ಮೂರನೆ ಗೆದ್ದು 3 ಕಂಡ ದೈವಗಳಿಗೆ ಮಂಡೆಯ ಬಾಗಿಸುತ ಬೆಂಡು ಆಗಲಿ ಬೇಡಿರೊ ಹಿಂಡು ದೈವಗಳಿಗೆ ಗಂಡ ಹರಿಯ ಭಜಿಸಿ ಗಂಡುಗಲಿಯಾಗಿರೊ | ಧೈರ್ಯವ ತಾಳಿ 4 ಗುರುಗಳಿಂದಲಿ ತತ್ವ ಸರ್ವಕಾಲದಿ ತಿಳಿದು ಉರ್ವಿಯೊಳಗೆ ಬಾಳಿರೊ ಸರ್ವಾಂತರ್ಯಾಮಿ ಶ್ರೀ ಗೋಪಾಲಕೃಷ್ಣವಿಠ್ಠಲ ಸರ್ವಬಿಂಬನೆನ್ನಿರೊ | ಮೂಲರೂಪಿ 5
--------------
ಅಂಬಾಬಾಯಿ
ಹರಿಯೆ ಸ್ವತಂತ್ರ ಚತುರದಶ ಭುವನಕೆ | ಪರಮೇಷ್ಠಿ ಶಿವಾದ್ಯರಾತಗೆ ದಾಸರೆನ್ನು ಪ ಹರಿಹರರ ಒಂದೇ ಸ್ಥಾನದಲಿ ಕಾಣುವೆನೆಂದು | ಪರಮ ಭಕುತಿಯಿಂದ ಕ್ರೋಧಮುನಿಪ || ಧರಣಿಯೆಲ್ಲ ತಿರುಗಿ ಶುಕ್ಲವತೀ ತೀರಕೆ ಬರಲು | ವಸಂತ ಕಾಲದಂತೆ ಪೊಳಿಯೇ1 ತಪಸಿ ತಪವನೆ ಮಾಡುತಿರಲು ಖರಾಟಖಳ | ಉಪಹತಿ ಕೊಡುತಿಪ್ಪ ವರಬಲದಿ || ವಿಪುಳದೊಳಗಿವಗೆಲ್ಲಿ ಎದುರಾರು ಇಲ್ಲದಿರೆ | ಸುಪರ್ಣಾದಿ ಮೊರೆ ಇಡಲು ಬೊಮ್ಮಗೆ2 ಪರಮೇಷ್ಠಿ ಹರಿಯ ಬಳಿಗೆ ಬಂದು | ಖಳನ ಕೋಲಾಹಲವ ಬಿನ್ನೈಸಲು || ಪುಲಿತೊಗಲಾಂಬರನ ಸಹಿತ ಸರ್ವೋತ್ತಮನ | ಒಲಿಮೆಯಿಂದ ಬಂದು ಸುಳಿದರಾಗಂದು 3 ದಾನವನ ಕೊಂದು ದೇವತೆಗಳ ಸುಖಬಡಿಸಿ | ಜ್ಞಾನಕ್ರೋಢಮುನಿ ಮನಕೆ ಪೊಳೆದು || ಆನಂದದಿಂದಲಿ ನಿಂದು ಮೆರೆದ ಲೀಲೆ | ಏನೆಂಬೆನಯ್ಯ ಹರಿಹರ ವಿಚಿತ್ರಾ 4 ಪ್ರವಿಷ್ಠ ಕೇ| ಶವನು ತಾನೆ ಕಾಣೊ ಸ್ವಾತಂತ್ರನು || ಇವರು ಶಂಕರನಾರಾಯಣನೆಂಬೊ ಪೆಸರಿನಲಿ | ಅವನಿಯೊಳು ಪ್ರಖ್ಯಾತರಾಗಿ ನಿಂದಿಹರೋ 5 ಎರಡು ಮೂರುತಿಗಳು ನೋಳ್ಪರಿಗೆ | ಶ್ರೀ ನಾರಾಯಣಗೆ ಈಶ ಸಮನೇ 6 ಚಕ್ರ ಶಂಖ ಗದೆ ಪದುಮ ಹರಿಗೆ ನೋಡು | ಮುಕ್ಕಣ್ಣಗೆ ಡಮರುಗ ತ್ರಿಶೂಲವು || ಮುಖ್ಯ ದೇವತಿ ಹರಿ ಅವಾಂತರ ಶಿವನು | ಶಕ್ರಾದ್ಯರೊಲಿದು ಭೇದವನು ಪೇಳುವರು 7 ಸತ್ಯಂ ವದವೆಂಬ ಶ್ರುತಿವರದು ಪೇಳುತಿದೆ | ಭೃತ್ಯ ರುದ್ರನು ಕಾಣೊ ಲಕುಮಿವರಗೆ || ಸತ್ಯದಲಿ ಸಿದ್ಧವಯ್ಯ ಎಂದು ತಿಳಿದು | ಸ್ತೌತ್ಯ ಮಾಡಿದವಗೆ ವೈಕುಂಠ ಪದವಿ 8 ಕ್ರೋಢ ಪರ್ವತವಿದೆ ತೀರ್ಥ ಪಾವನಕರ | ನಾಡೊಳಗೆ ಕ್ಷೇತ್ರ ಉತ್ತಮ ಮಾನವಾ || ಪಾಡಿದರೆ ವಿಜಯವಿಠ್ಠಲರೇಯ ಒಲಿದು |ಕೂಡಾಡುವನು ದೃಢ ಭಕುತಿಯಿತ್ತು ಅನುದಿನಾ 9
--------------
ವಿಜಯದಾಸ
ಹರಿಯೇ ನಿನ್ನಯ ಸಿರಿಯನು ಬಣ್ಣಿಸೆ ನರನಾದೆನಗಳವೇ ಪ ಕರುಣಾಳುವೆ ನಾಂ ಕರಗಳ ಮುಗಿವೆ ಪÀರವಾಸುದೇವ ಪರಮಾತ್ಮಾ ಅ.ಪ ಸತಿಶ್ರೀದೇವಿಯು ನುತಚತುರಾನನ ಪತಿತೋದ್ಧರೆ ಗಂಗೆಯು ಮಗಳು ಸ್ತುತಿಗೈಯುವವೇದ ತತಿಯಿಂ ನಿತ್ಯ ಭೃತ್ಯರು ಸುರಗಣ ಸರ್ವೇಶಾ 1 ಸಾಗರ ಮಧ್ಯದಿ ಭೋಗಿಯನೊರಗಿ ಯೋಗೀಜನರ ಹೃದಯದಿ ನೆಲಸಿ ಆಗಮ ಪೂಜೆಯ ರಾಗದಿ ಪಡೆವ 2 ಶಂಖಸುದರ್ಶನ ಪಂಕಜಧರಶ್ರೀ ವೆಂಕಟವರದ ಶೀರಂಗ ಕಿಂಕರ ಪಾಲಕ ಜಾಜೀಶಾ 3
--------------
ಶಾಮಶರ್ಮರು
ಹರಿವಾಯುಗಳು ಮೂರಕ್ಕರದ ದೇವ ಮೂರು ವಸ್ತುವ ಬೆರಸಿ ಮೂರು ಮೂರಾಗಿಸೆಯೆ ಪಾಲಿಸುವ ನಮ್ಮ ಎರಡು ವಸ್ತುವು ಸೇರಿ ದೇಹಕ್ಕೆ ಚಲನೆಯದು ಹರಿವಾಯುಗಳ ಒಲುಮೆ ದೇಹ ರಕ್ಷಕವು4 ಅವ್ಯಾಕೃತಾಕಾಶ ರೂಪದಲಿ ತಾನಿಹನು ವಿಶ್ವಂಭರಾತ್ಮಕನು ದೇವ ನಿಜದಿಂದ ಸೃಷ್ಟಿಗವನೇ ಮೂಲ ವಾಸುದೇವಾತ್ಮಕನು ಮಧ್ವಹೃದಯನಿವಾಸಿ ಸರ್ವಮೂಲನವ 5 ಪೃಥಿವಿಯಪ್ ತೇಜಸ್ಸು ಮೂರು ಭೂತಾಣುಗಳು ತುಂಬಿಯಾಗಸದಲ್ಲಿ ವ್ಯಾಕೃತವದಹುದು ತುಂಬಿ ವಾಯುವಿನಣುಗಳ್ ಒಂದೆಡೆಯೆ ತಾನಹುದು ವ್ಯಾಕೃತಾಕಾಶ 6 ಆಗಸದಿ ವಾಯುವಿನ ಪರಮಾಣು ಒತ್ತಡವೆ ದೃಶ್ಯವಾಯುವು ತಾನೆ ಹರಿವುದಾಗಸದಿ ದೃಶ್ಯವಾಯುವಿನ ಪರಮಾಣುವೊತ್ತಡದಿ ನಿಜ ತೇಜವುದಯಿಸುವುದದರಲ್ಲಿ ಮೂರಿಹವು 7 ತೇಜದಿಂದಲೆ ನೀರು ಜಗಕೆಯಾಧಾರವದು ನೀರಿನಿಂದಲೆ ಭೂಮಿ ಉದಯಿಸುವದದರಿಂ ಪಂಚಭೂತಂಗಳಿವು ಭೂಮಿಯಲಿ ತೋರುವವು ಪಂಚಭೂತಾತ್ಮದ ಪ್ರಕೃತಿಯಿದು ಸತ್ಯ 8 ಇವುಗಳಿಗೆ ಒಡತಿಯಾ ಪ್ರಕೃತಿದೇವಿಯು ಸತ್ಯ ಪ್ರಕೃತಿಯೆದೆಯಲ್ಲಿರುವ ದೇವರೂ ಸತ್ಯ ಪ್ರಕೃತಿ ಪುರುಷರ ಲೀಲೆ ಮಧ್ವಮತದಾ ತಿರುಳು ಮಧ್ವ ಸದ್ಗ್ರಂಥಗಳು ಸರ್ವಮೂಲಗಳು 9 ಭೂತಕೃತ್ತೂ ಅವನೆ ಭೂತಪಾಲಕನವನೆ ಭೂತಭಾವದಲಿದ್ದು ಪ್ರೇರಕನು ಅವನೆ ಆತ್ಮಾಂತರಾತ್ಮವೆಂದೆರಡು ರೂಪಗಳವಗೆ ಹೃದಯದಾಕಾಶದಲಿ ವಾಸವಾಗಿಹನು 10 ಪಂಚಭೂತಗಳು ಪಂಚೇಂದ್ರಿಯಗಳು ಪಂಚ ಕರ್ಮೇಂದ್ರಿಯಗಳ ರಚಿಸಿ ಹರಿಯು ಪಂಚಾತ್ಮಕನು ದೇವ ಪಂಚವಾಯುಗಳಿಂದ ಪಂಚತನ್ಮಾತ್ರಗಳ ಜ್ಞಾನವೊದಗಿಪನು11 ಸುಖ ರತಿ ಪ್ರೇರಕನು ತಾನಾಗಿ ಸಿರಿವರನು ಶಾರೀರ ಪುರದಲ್ಲಿ ನೆಲೆಯಾಗಿ ಇಹನು ಬೆಳಗುತ್ತ ದೇಹವನು ಬೆಳಗಿಸುವ ದೇವತೆಗ ಳವನ ಬಳಿಯಿದ್ದು ಸೇವೆಯ ಗೈಯುತಿಹರು 12 ವಿಶ್ವ ದರ್ಶನಕಾಗಿ ವಿಶ್ವಜನರೊಳು ಕಣ್ಣಿನಲ್ಲಿ ನೆಲೆನಿಂತು ವಿಶ್ವಸಾಕ್ಷಿಯು ಸೂರ್ಯನಲ್ಲಿಯೂ ತಾನಿದ್ದು ವಿಶ್ವವನು ಬೆಳಗಿಸುತ ಜ್ಞಾನವೊದಗಿಪನು 13 ಸೂರ್ಯನೊಂದೆಡೆಯಿದ್ದು ತಾನ್ ಬೆಳಗಿ ಲೋಕವನು ತನ್ನ ಕಿರಣಂಗಳಿಂ ಬೆಳಗಿಸುವ ತೆರದಿ ಕಣ್ಣು ಮೊದಲಾದಿಂದ್ರಿಯಗಳಲಿ ತಾನಿದ್ದು ಅವುಗಳನು ಬೆಳಗಿಸುತ ರಕ್ಷಿಪನು ನಮ್ಮ14 ತೈಜಸದ ದೇವನವ ತೇಜದಾರೂಪದಲಿ ಕಂಠಗತನಾಗಿದ್ದು ದೇಹದಲಿ ಬೆಳಗಿ ಹುಲಿ ಕರಡಿ ಮೊದಲಾದ ಜಂತುಗಳ ಸೃಷ್ಟಿಸುತ ಸ್ವಪ್ನಲೋಕವನು ಮಾನಸಕೆ ತೋರಿಸುವ 15 ಪ್ರಾಜ್ಞರೂಪದ ದೇವನಪ್ಪಿ ಜೀವಾತ್ಮನನು ಮಾಯೆಯಾ ಮುಸುಕಿನಿಂದಜ್ಞಾನಬರಿಸಿ ಜೀವನಿಗೆ ತೋರದುದರಿಂದ ಪ್ರಾಜ್ಞನದಾಗಿ ಜಗಕೆ ತನ್ನಯ ಮಾಯೆಯನು ತೋರಿಸುವನು 16 ನಾಲ್ಕನೆಯ ರೂಪವದು ತುರ್ಯ ನಾಮದಲಿಹುದು ಮುಕ್ತರಿಗೆ ಮಾತ್ರವೇ ತೋರುವುದು ಪೇಳ್ವೆ ಜಾಗರಾದಿಯವಸ್ಥೆಗಳ ನಾಲ್ಕು ಪೇಳಿದನು ಮಾಯಾವಿ ಪರಮಾತ್ಮನದು ಲೀಲೆಗಳಿವು 17
--------------
ನಿಡಂಬೂರು ರಾಮದಾಸ
ಹರಿವಾಸರದುಪವಾಸದ ಫಲವು ಕಂಡವರಿಗೆ ದೊರಕುವುದೆ ಪ. ಹಿರಿದು ಜನ್ಮಗಳಲಿ ಹರಿಯನಾರಾಧಿಪ ಪರಮ ಭಾಗವತರ ಭಕ್ತರಿಗಲ್ಲದೆ ಅ.ಪ. ಸ್ನಾನಸಂಧ್ಯಾನವು ಮೊದಲಾದ ಕರ್ಮ ನ್ಯೂನದ ಪಾಪಂಗಳು ದೀನತ್ವದಿಂದ ತುಚ್ಛರಕೈಯ ಹಿಡಿದ ದು ರ್ದಾನದ ಪಾಪಂಗಳು ಭಾನುಬಿಂಬವ ಕಂಡ ಹಿಮದಂತೆ ಚಿದಾನಂದವಾದ ವ್ರತಕೆ ಸರಿ ಬಾರದು 1 ಪರಸತಿಯರ ನೋಡಿ ಮನವಿಟ್ಟ ಪಾಪವು ಪರದೂಷಣೆಯ ಪಾಪವು ಪರಮಾತ್ಮನ ಹೊಗಳುವ ನಾಲಗೆಯಲ್ಲಿ ನರರ ಹೊಗಳುವ ಪಾಪವು ಪರ ವಸ್ತುಗಳನಪ- ಹರಿಸುವ ಪಾಪಂಗಳು ಕರಿ ಓಡುವಂತೆ ದುರಿತ ಕೋಟಿಗಳನು ಪರಿಹರಿಸುವ ಶ್ರೀ 2 ಆಡುವ ಅನೃತವಾಕ್ಯಗಳಿಂದ ಸಂಭವವಾಗುವ ಪಾಪಂಗಳು ನೋಡಿಕೊಳ್ಳದೆ ದುರಾನ್ನವನುಂಬ ದುರ್ದಾನದ ಪಾಪಂಗಳು ಮಾಡಬಾರದ ದಿನದಲಿ ಸ್ತ್ರೀಗೋಷ್ಠಿಯ ಮಾಡಿದ ಪಾಪಂಗಳು ಓಡುವುದಘಸಂಘ ಉತ್ತಮವಾಗಿಹ3 ಮತ್ತೆ ಈ ಬಹಳ ಪಾಪಗಳಿಗೆಲ್ಲ ತಾ ಪಕ್ಷ ಪ್ರಾಯಶ್ಚಿತ್ತವು ಉತ್ತಮವಾದ ವ್ರತಗಳಿಗೆಲ್ಲ ತಾ ಉತ್ತಮವೆನಿಸುವುದು ಚಿತ್ತಶುದ್ಧಿಯನಿತ್ತು ಜ್ಞಾನವೈರಾಗ್ಯದಿ ಭಕ್ತಿ ಮಾರ್ಗವನೀವುದು ಮುಕ್ತಿಗೆ ಸೋಪಾನವಾಗಿ ಭವಾಭ್ಧಿಯ ದಾಟಿಸಿ ಹರಿಯ ಸನ್ನಿಧಿಗೆ ದಾರಿಯನೀವ 4 ತೋರುವ ದಶಮಿ ದ್ವಾದಶಿಗಳು ಸಂಪುಟಾಕಾರದಿ ಹರಿದಿನವು ಮೂರುದಿನದ ವ್ರತ ನಾಲ್ಕು ಹೊತ್ತಿನ ಆಹಾರಗಳು ವರ್ಜಿತವು ಊರುದಾರಿಗಳ ನಡೆಯದೆ ತಾಂಬೂಲ ಚರ್ವಣಂಗಳೊರ್ಜಿತವು ಜಾಗರ ಮಾಡಿ ವ್ರತವಾಚರಿಸುವ 5 ಅತಿಶಯವಾದ ಶ್ರೀಹರಿದಿನದಿ ಪಿತೃತರ್ಪಣಗಳು ವಜ್ರ್ಯವು ಪ್ರತಿವರುಷದಲಿ ಆಚರಿಸುವ ತಾಯಿತಂದೆ ತಿಥಿಗಳೆಲ್ಲ ವಜ್ರ್ಯವು ಸತತವು ಮಾಡುವ ಯಜ್ಞಪುರುಷಗೆ ಆಹುತಿಗಳೆಲ್ಲ ವಜ್ರ್ಯವು ಇತರ ಭೋಗ ಕೃತ್ಯಗಳನೆಲ್ಲ ವರ್ಜಿತಮಾಡಿ ಈ ವ್ರತವನಾಚರಿಸುವ 6 ಹಲವು ವ್ರತಗಳಾಚರಿಸಿ ದಾನಂಗಳ ಹಲವು ಮಾಡಿದರೇನು ಹಲವು ಪುಣ್ಯತೀರ್ಥನದಿಯಲ್ಲಿ ಸ್ನಾನವÀ ಮುದದಿ ಮಾಡಿದರೇನು ಹಲವು ಪುರಾಣಂಗಳ ಹಲವು ಶಾಸ್ತ್ರಂಗಳ ಹಲವು ಕೇಳಿದರೇನು ಶ್ರೀಹಯವದನನ್ನ ದಿನಕೆ ಸರಿಬಾರದು 7
--------------
ವಾದಿರಾಜ
ಹರಿಸೇವೆ ಕೈಂಕರ್ಯ ಪರಮ ನಿಷಾತೆ |ಪರಿಹರಿಸು ಭವತಾಪ ಜಾಂಬುವತಿ ಮಾತೇ |5 ಭೃತ್ಯ ಜಾಂಬುವಂತನ ತನುಜೆಶ್ರೀ ಮಹಿಳೆಯಂದದಲಿ ಕೃಷ್ಣ ಪ್ರಿಯಳಾದೇ 1 ಮಿಕ್ಕ ಮಹಿಳೆಯರಿಂದ ಲಕ್ಕುಮಿಯ ಆವೇಶಪೊಕ್ಕು ನಿನ್ನಲಿ ಅಧಿಕ ಸರ್ವಕಾಲದಲೀ |ಅಕ್ಕರದಿ ಇದಕೆ ಮಿಗೆ ಲಕ್ಕುಮಿಯು ಇರಲಾಗಚೊಕ್ಕ ಮಾತೆಯು ನೀನು ಶೇಷ ಸಮಳೆನಿಪೇ 2 ಆವೇಶ ನಿನ್ನಲ್ಲಿ ಇಲ್ಲದಿಹ ಸಮಯದಲಿದೇವಿಯರು ಮಿಕ್ಕೈದು ಮಂದಿ ಸಮ ನೀನು |ದೇವಿ ಶಿರಿ ಆವೇಶ ಅಲ್ಪವಿಹ ಸಮಯದಲಿದೇವ ಕಾಮಾದಿಗಳಿಗಧಿಕ ವಿಂಶತಿ ಗುಣದೀ 3 ನಿರ್ಮಲೈ ಕಾಂತಿತ್ವ ವಿಮಲ ಭಕ್ತ್ಯಾದಿಗುಣಅಮಮ ನಿನ್ನಲಿ ಇಹುದು ನೈಜರೂಪಾ |ವಿಮಲ ಸಚ್ಚಾರಿತ್ರೆ ಈ ಮಹಿಯ ಸಂಚಾರನಿರ್ಮಮದಿ ಗೈದಿರ್ಪೆ ಬಧಿರಾಂಧರಂತೇ 4 ದೇಹ ಮಮತೆಯಲಿಂದ ಮನಸೋತು ಕಷ್ಟಕ್ಕೆವಾಹನಾದಿಗಳೇರಿ ತೀರ್ಥಯಾತ್ರೆಗಳಾ |ಬಹುವಾಗಿ ಗೈದಾಗ್ಯು ಪುಣ್ಯ ಹೀನವು ಎಂದುಮಹಿಳೆ ನೀ ವರ್ಣಿಸಿಹೆ ಭಕುತರುಪಕಾರೀ 5 ಪಾದ ದರ್ಶನವೆಂದುಸಾರ್ವಕಾಲದಿ ನೀನು ಚಿಂತಿಸುತಲಿರಲೂ 6 ಕಂಡು ಶ್ರೀಹರಿಯನ್ನು ಅಪರೋಕ್ಷದಲಿ ನೀನುಬಂಡುಣಿಯು ಹರಿಪಾದ ಕಮಲಕ್ಕೆ ಆಗೀ |ಹಿಂಡು ದೈವರ ಗಂಡ ಪಾಂಡುರಂಗನೆ ಎಂದುಮಂಡಿಸಿದೆ ಪರತತ್ವ ತೊಂಡರುಪಕಾರೀ 7 ಕರದಲ್ಲಿ ಧನ್ವಂತ್ರಿ ಪಿಡಿದಮೃತ ಕಲಶದಲಿಹರಿನಯನ ಆನಂದ ಜಲಬಿಂದು ಉದರೇ |ತುರರೂಪಿಯಾದ ಶ್ರೀ ತುಳಸಿಯಲಿ ನೀನರಲುಹರಿ ನಿನ್ನ ಅಗಲದಿಹ ಸರ್ವ ಪೂಜೆಯಲೀ 8 ಶಾಂಭವಿಯುನುತೆ ದೇವಿ ಜಾಂಬುವತಿ ಶ್ರೀ ಹರಿಯಕಾಂಭಂಥ ಸುಜ್ಞಾನ ಭಕುತಿ ವೈರಾಗ್ಯ |ಹಂಬಲದಿ ನಿನ್ನಂಘ್ರಿ ನಮಿಪೆ ತೋರ್ವುದು ಹೃದಯಅಂಬರದಲಿಹ ಗುರು ಗೋವಿಂದ ವಿಠ್ಠಲನ 9
--------------
ಗುರುಗೋವಿಂದವಿಠಲರು
ಹರುಷದಿಂದಲಿ ಮನವೇ | ಪ ಭವ ಜಲದಿಂದಲಿ ದಾಟಿಸುವನು ಕಣ್ಣವರಿಸುತಲಿದ್ದು|ಅಚ್ಯುತಾನಂತ ಹರಿ| ಯನ್ನದೆವೆ ಕಂಡ ಚಿಂತೆಯನು ಮಾಡಿ| ಬನ್ನ ಬಡುತಲಿ ಉದರ|ಧಾವತಿಯವಳಗಾಗಿ| ದಣ್ಣನೇ ದಣಿದು ಬಂದು ಬಯಿಗೋರಗುವೇ 1 ಬಳ್ಳಿನೊರಳಗ ತೊಡರಿದ|ಕಾಲಿನಂತೆ ಭವಾ ತಳ್ಳಿಯೊಳುಸಿಲ್ಕಿ ಬಳಲುತಾ ಗುಂದುತಾ| ನಿಲ್ಲದೆವೆ ತಿರುಗುತಿಹೆ ಸಾಧು ಸಂಗಕಬರಲು ಯಳ್ಳಿಸಿತು ಅವಕಾಶ ಕಾಣೆ ನಾನು 2 ಕೆರೆಯ ನೀರನು ಕೆರೆಗೆ ಚೆಲ್ಲಿ|ವರವಪಡಿಯಲಿಕ್ಕೆ ಭರದಿಂದ ಬಂದ ಅಲತ್ಯ ನೋಡ್ಯಾ| ಹರಿನಾಮ ಹರಿಗರ್ಪಿಸಿ ಗತಿ ಪಡಿಯಲೊಲ್ಲಿ ಹರ ಹರಾ ನಿನಗೆಂತು ಮತಿ ವದಗಿತೋ 3 ಹಾಡಿ ಕೊಂಡಾಡಿದರ ಹರಿನಾಮ ನಾಲಿಗ್ಗೆ ಬಾಡಿಗೆಯು ಬೀಳುವದೋ ನಾನರಿಯೆ ನೋ ಮೂಢ ಪಾಮರನೆಮರ ಹುಟ್ಟಿ ಮರಬಿದ್ದಂತೆ ನೋಡು ನರ ದೇಹದಲಿ ಬಂದಾಯಿತು 4 ಹಿಂದಿನಪರಾಧಗಳಯೇನಾದರಾಗಲಿ ಮುಂದೆ ಇನ್ನಾರ ಸ್ವಹಿತ ವಿಚಾರಿಸೋ ತಂದೆ ಮಹಿಪತಿಸ್ವಾಮಿ ದ್ವಂದ್ವ ಚರಣಕ ಹೊಂದಿ ಇಂದಿರೇಶನ ವಲಮೆ ಪಡೆದು ಸುಖಿಸೋ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಹರೇ ಹರೇ ಕೃಷ್ಣ ಹರೇ ಕೃಷ ಹರೇ ಹರೇ ಹರೇ ಪ ಕೌಸಲ್ಯ ವರವಂಶೋದ್ಭವ ಸುರ ಸಂಸೇವಿತ ಪದರಾಮ ಹರೇ ವಂಶೋದ್ಭವ ಶ್ರೀ ಕೃಷ್ಣಹರೇ 1 ಮುನಿಮಖರಕ್ಷಕ ದನುಜರಶಿಕ್ಷಕÀ ಘಣಿಧರ ಸನ್ನುತರಾಮಹರೇ ಘನವರ್ಣಾಂಗ ಸುಮನಸರೊಡೆಯ ಶ್ರೀ - ವನಜಾಸನ ಪಿತ ಕೃಷ್ಣ ಹರೇ 2 ಶಿಲೆಯ ಪಾದರಜದಲಿ ಸ್ತ್ರೀ ಮಾಡಿದ ಸುಲಲಿತ ಗುಣನಿಧಿ ರಾಮ ಹರೇ ಬಲುವಕ್ರಾಗಿದ್ದ ಬಲೆಯ ಕ್ಷಣದಲಿ ಚಲುವೆಯ ಮಾಡಿದ ಕೃಷ್ಣ ಹರೇ 3 ಹರಧನುಭಂಗಿಸಿ ಹರುಷದಿಜಾನಕಿ ಕರವಪಿಡಿದ ಶ್ರೀರಾಮ ಹರೇ ಸಿರಿ ರುಕ್ಮಿಣಿಯನು ತ್ವರದಲಿ ವರಿಸಿದ ಶರಣರ ಪಾಲಕ ಕೃಷ್ಣ ಹರೇ 4 ಜನಕ ಪೇಳೆ ಲಕ್ಷ್ಮಣ ಸೀತಾ ಸಹ ವನಕೆ ತೆರಳಿದ ರಾಮ ಹರೇ ವನಕೆ ಪೋಗಿ ತನ್ನಣುಗರೊಡನೆ ಗೋ - ವನು ಪಾಲಿಪ ಶ್ರೀ ಕೃಷ್ಣ ಹರೇ5 ತಾಟಕೆ ಖರಮಧು ಕೈಟಭಾರಿಪಾ ಪಾಟವಿ ಸುರಮಖ ರಾಮಹರೇ ಆಟದಿ ಫಣಿಮೇಲ್ ನಾಟ್ಯವನಾಡಿದ ಖೇಟವಾಹ ಶ್ರೀ ಕೃಷ್ಣ ಹರೇ 6 ಚದುರೆ ಶಬರಿಯಿತ್ತ ಬದರಿಯ ಫಲವನು ಮುದದಿ ಸೇವಿಸಿದ ರಾಮ ಹರೇ ವಿದುರನ ಕ್ಷೀರಕೆ ವದಗಿ ಪೋದ ಶ್ರೀ ಪದುಮನಾಭ ಜಯ ಕೃಷ್ಣ ಹರೇ 7 ಸೇವಿತ ಹನುಮ ಸುಗ್ರೀವನ ಸಖಜಗ - ತ್ಪಾವನ ಪರತರ ರಾಮಹರೇ ದೇವ ದೇವ ಶ್ರೀ ಕೃಷ್ಣ ಹರೇ 8 ಗಿರಿಗಳಿಂದ ವರಶರಧಿ ಬಂಧಿಸಿದ ಪರಮ ಸಮರ್ಥ ಶ್ರೀರಾಮ ಹರೇ ಗಿರಿಯ ತನ್ನ ಕಿರಿ ಬೆರಳಿಲೆತ್ತಿ ಗೋ - ಪರನ ಕಾಯ್ದ ಶ್ರೀ ಕೃಷ್ಣ ಹರೇ 9 ಖಂಡಿಸಿದಶಶಿರ ಚಂಡಾಡಿದ ಕೋ - ದಂಡಪಾಣಿ ಶ್ರೀ ರಾಮ ಹರೇ ಪಾಂಡುತನಯರಿಂ ಚಂಡಕೌರವರ ದಿಂಡುಗೆಡಹಿಸಿದ ಕೃಷ್ಣ ಹರೇ 10 ತವಕದಯೋಧ್ಯಾ ಪುರಕೈದಿದ ತ - ನ್ಯುವತಿಯೊಡನೆ ಶ್ರೀ ರಾಮ ಹರೇ ರವಿಸುತ ತನಯಗೆ ಪಟ್ಟವಗಟ್ಟಿದ ಭವತಾರಕ ಶ್ರೀ ಕೃಷ್ಣ ಹರೇ 11 ಭರತನು ಪ್ರಾರ್ಥಿಸಲರಸತ್ವವ ಸ್ವೀ - ಕರಿಸಿದತ್ವರದಲಿ ರಾಮ ಹರೇ ವರಧರ್ಮಾದ್ಯರ ಧರಿಯೊಳು ಮೆರೆಸಿದ ಪರಮಕೃಪಾಕರ ಕೃಷ್ಣ ಹರೇ 12 ಧರೆಯೊಳಜ್ಞಜನರನು ಮೋಹಿಪುದಕೆ ಹರನ ಪೂಜಿಸಿದರಾಮ ಹರೇ ಹರನ ಪ್ರಾರ್ಥಿಸಿವರವನು ಪಡೆದಾ ಚರಿತೆಯಗಾಧವು ಕೃಷ್ಣ ಹರೇ 13 ಅತುಳಮಹಿಮ ಸದ್ಯತಿಗಳ ಹೃದಯದಿ ಸತತ ವಿರಾಜಿಪÀರಾಮಹರೇ ಸಿತವಾಹನ ಸಾರಥಿಯೆನಿಸಿದ ಸುರತತಿ ಪೂಜಿತ ಪದ ಕೃಷ್ಣ ಹರೇ 14 ರಾಮ ರಾಮ ಯಂದ್ನೇಮದಿ ಭಜಿಪರ ಕಾಮಿತ ಫಲದ ಶ್ರೀ ರಾಮಹರೇ ಪ್ರೇಮದಿ ಭಕ್ತರ ಪಾಲಿಪ ಶ್ರೀ ವರ - ದೇಶವಿಠಲ ಶ್ರೀ ಕೃಷ್ಣ ಹರೇ 15
--------------
ವರದೇಶವಿಠಲ
ಹಳೆಯದಾಯಿತು ಕಾಯಾ ಇನ್ನಾರೇ | ತಿಳಿ ಸ್ವಹಿತೋಪಾಯಾ ಪ ಬಾಲಕನಾಗಿ ಕೆಲವು ದಿನ ಕಳೆದೀ | ಮೌಲ್ಯ ಯೌವ್ವನದಲಿ ಉನ್ಮತ್ತನಾದಿ 1 ಸಡಿಲುತ ಬಂದವು ಅಂಗಮಾಟಗಳು | ವಡಮೂಡದು ವಿವೇಕ ಬುದ್ಧಿಗಳು 2 ಮಂಡೂಕ ಸರ್ಪ ನೋಡದೆ ಭರದಿ | ಅಂಡಲುವದು ನೊಣಕದೇ ಪರಿಯಾದಿ 3 ಏನಾದರಾಗಲಿ ಹಿಂದಿನ ಕರಣೆ | ಜ್ಞಾನದೆಚ್ಚರ ಹಿಡಿ ಮನದೊಳು ಪ್ರಾಣಿ 4 ಗುರುವರ ಮಹಿಪತಿ ನಂದನ ಪ್ರಿಯನಾ | ಅರಿತರೆ ಬಂದದೆ ಸಾರ್ಥಕ ಖೂನಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಹಾದಿಯ ಕೊಡುಹರಿ ಪರಗತಿಯಾ ಸಾಧಿಸಿ ಬಂದೇ ಕೇಳಿ ಕೀರುತಿಯಾ ಪ ಕ್ಷಿತಿಯೊಳು ಭರತ-ಖಂಡದ ದೇಶದ ಪತಿತರ ತಾಂಡೆಯದ ನಾಯಕನು ಮತಿ ಹೀನ ಕಾಮಕ್ರೋಧರಾಗಿಹ ಪುಂಡರು ಪಥ ನಡೆಗುಡಿಸರು ಅತಿಬಲರು 1 ಆದಿಲಿ ಅಜಮಿಳಾ ತಾಂಡ್ಯ ಹೋದ ಬಳಿಕಾ ಹಾದಿ ಮುಗ್ಗಿತಿ ಕಡೆ ಬಹುದಿನದೀ | ಸಾದರಲೆನಗನಿ ಅಭಯವ ಕೊಟ್ಟರ | ಭೇದಿಸಿ ಜನರನು ನೆರಹುವೆನು 2 ಏನಾರೆ ಗೋಣಿಗೆ ಭಾವದ ಲಹರೆ ಕÉೂಂಡು ಮಾನು ಭಾವರ ಪ್ಯಾಟಿ ಹೋಗಿಸುವುದು ಘನಗುರು ಮಹಿಪತಿ ನಂದನ ಸಾರಥೀ ದೀನ ವತ್ಸಲನೆಂಬ ಬಿರುದಹುದು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಹಾವಿಗೆಯ ಮಹಾಪೂಜೆ ನೋಡಿ ಪಾಪಾಖ್ಯ ನಿತ್ಯ ಹಾಡಿ ಪ ಮನುಜನ್ನ ಭೋಕ್ತರಿಕಾಯೈದಿ ಧನದಾತ ಸವಸನ ಭೂಷಣ ವಿದ್ಯಾ ಕನಕ ವಿನಯದಿಂದಲಿ ಇಲ್ಲಿ ತನಕ ಬಂದು ಘನವಾಗಿ ಬೇಡುವರು ಮುಕ್ತಿ ಅಹಿಕಾ 1 ಪಾದ ಕರ್ಮ ಭೂ ಮಿವಾಸ ಮಾಳ್ಪೆನೆಂದಲ್ಲಿಂದ ಇಳಿದು ಪಾವಮಾನಿ ಮತ ಪೊಕ್ಕು ಸುಳಿದು 2 ಒಂದೊಂದು ಪರಿಯಲ್ಲಿ ಸಾಗಿ ಸಾರಿ ನಿಂದಿರದೆ ಇಪ್ಪದು ಕಾವ ಲೇಸಾಗಿ ಅಂದದಿಂದಲಿ ಮೌಳಿ ತೂಗಿ ವೇಗ ಕುಂದನಿಷ್ಟವಾಯಿತು ತಾನೆ ಪೋಗಿ3 ಬೇಕಾದರ್ಥವ ಕೊಡುವದು ವಾಕುವರ ಸಿದ್ಧಿ ಲೋಕ ತುಂಬಿದೆ ಇದೆ ಸುಧಿಕೀರ್ತಿ ತಾ ಕೊಂಡಾಡಿದರಾಗೆ ಬಲು ಚಿತ್ತ ಶುದ್ಧಿ 4 ಸತ್ಯಾಗಿ ಸತ್ಯಬೋಧಯತಿ ಕೈಯ ಗುರು ಸತ್ಯಪ್ರೀಯ ಸ್ತೌತ್ಯರಾಮನ್ನ ಹಾವಿಗೆಯ ನಂಬೆ ಭೃತ್ಯವತ್ಸಲ ವಿಜಯವಿಠ್ಠಲ ಸಹಾಯ5
--------------
ವಿಜಯದಾಸ
ಹಿತ ನೋಡಿ ಸಂತರ ಕೂಡೀ ಪ ಹಿತ ನೋಡಿ ಸಂತರ ಕೂಡೀ | ಮತಿ ನಿಜ ಮಾಡಿ | ಶ್ರೀ ಪತಿಯ ಕೊಂಡಾಡಿ 1 ದುರಿತ ವಿಭಂಗಾ | ನೆರೆ ಕರುಣಾಂಗದಿ | ಹೊರೆವನು ರಂಗಾ 2 ಪರಿ | ರಂಜಿಸುತಿಹ ತೇಜಃ | ಪುಂಜನ ನೋಡಿ 3 ಕಂಡಪದಕ ಹರಿದಂಡಲಿಯದೆ ನೆಲೆ | ಗೊಂಡ ವಿವೇಕದ | ಪಂಡಿತರಾಗಿ 4 ತಂದೆ ಮಹಿಪತಿನಂದನು ಸಾರಿದಾ | ಬಂದ ಜನುಮಕಿದು | ಛಂದದು ನೋಡಿ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು