ಒಟ್ಟು 1215 ಕಡೆಗಳಲ್ಲಿ , 94 ದಾಸರು , 965 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇರಬಾರದೊ ಬಡವ ಜಗತ್ತಿನೊಳಗೆ | ಪರದೇಶಿ ಮಾನವಗೆ ದಿಕ್ಕು ಮತ್ತಾವನು ಪ ಪೊಡವಿಪತಿ ದೃಷ್ಟಿಗಳು ಒಳ್ಳೆವಲ್ಲಾವೆಂದು | ಬಿಡದೆ ಜನ ಪೇಳುವುದು ಸಿದ್ಧವಯ್ಯಾ | ಬಡವ ನಾನಯ್ಯ ನಾನಾ ಕಷ್ಟಬಟ್ಟೆರಡು | ಒಡವೆ ಸಂಪಾದಿಸಲು ಅಪಹರಿಸಿದ ನೋಡು 1 ದಿನ ಪ್ರತಿ ದಿನದಲ್ಲಿ ಕರಳು ಕಟ್ಟಿಕೊಂಡು | ಹಣದಾಸಿಯಿಂದ ನಾ ಘಳಿಸಿದ್ದೆನೊ | ಮನೆವುಗೆ ಬಂದು ಮಾಡಿಕೊಂಡೊಯ್ದಿಯಾ ಧರ್ಮವೇ | ವನಜನಾಭನೆ ನಿನ್ನ ದೊರೆತನಕೆ ಶರಣೆಂಬೆ2 ದೊರೆಗಳಾ ಲಕ್ಷಣವಿದೆ ಎಂದೆಂದಿಗೆ ತಮಗೆ | ಸರಿಬಂದ ಕಾರ್ಯಮಾಡುವರಲ್ಲದೇ | ನೆರೆಯವರದೇ ತಪ್ಪೇ ವಿಜಯ ವಿಠ್ಠಲರೇಯ | ಮರಳೆ ಮಾತಾಡಿದರೆ ಅಪರಾಧ ಹೊರಿಸುವರು 3
--------------
ವಿಜಯದಾಸ
ಇಲ್ಲವೋ ಮುಕ್ತಿ ಇಲ್ಲವಿಲ್ಲವೋ ಮೆಲ್ಲ ಮೆಲ್ಲನೆ ದೃಷ್ಟಿನಿಲ್ಲಿಸಿಮೇರು ಶಿಖರವ ನೋಡುವತನಕ ಪ ಚಕ್ರವಾರ ಮೆಟ್ಟಿನಿಂತು ಚಂಚಲಿಸದಂತೆ ದೃಷ್ಟಿಯಿಟ್ಟುವಿಕ್ರಮದಲಿ ಬ್ರಹ್ಮರಂದ್ರ ಪೊಕ್ಕು ತೇಜ ಕಾಣುವತನಕ 1 ದೃಢಚಿತ್ತದಲಿದ್ದು ಮಾರುತನ ಮೇಲಕೆ ಊದಿಒಡನೆ ಕೂಡಿಸಿ ವಾಯುಮನವನು ಅಸುವನು ಕಾಣುವತನಕ2 ಓಂಕಾರ ಧ್ವನಿಯ ಕೇಳಿ ಒತ್ತೊತ್ತು ಬೆಳಗಿನೊಳುಶಂಕರನೆನಿಪ ಚಿದಾನಂದ ಬ್ರಹ್ಮವನೆ ಕಾಣುವ ತನಕ 3
--------------
ಚಿದಾನಂದ ಅವಧೂತರು
ಇಲ್ಲೆಂದೆ ಇಲ್ಲೆಂದೆ ಭಕ್ತಜನಕೆ ಭಯ ಇಲ್ಲೆಂದೆ ಇಲ್ಲೆಂದೆ ಪ ಪಾದ ಎಲ್ಲ ಸಂಪದವೆಂದು ಬಲ್ಲಂಥ ಭಕ್ತರಿಗೆಲ್ಲರೀತಿಲಿ ಭಯಅ.ಪ ವಂದಿಸಿ ನುಡಿದರೆ ಬಂತೇನೆಂದೆ ನಿಂದಿಸಿ ನುಡಿಯಲು ಕುಂದೇನೆಂದೆ ಸಿಂಧುಶಯನನ ತಂದು ಮಾನಸವೆಂಬ ಮಂದಿರದಿಟ್ಟವರಿಗೆಂದೆಂದಿರದು ಭಯ 1 ಬಡತನ ಬಂದರೆ ಮಿಡುಕೇನೆಂದೆ ಕಡುಸಿರಿಯಿರ್ದರೆ ನಿಜವೇನೆಂದೆ ಜಡಭವ ಕನಸೆಂದು ದೃಢವಹಿಸೊಡಲೊಳು ಮೃಡಸಿಧರನೆ ನಿಮ್ಮ ಆಡುವರಿಗೆ ಭಯ 2 ಪೊಡವಿಪ ಮೆಚ್ಚಲು ಕೊಡುವುದೇನೆಂದೆ ಕಡುಕೋಪಗೊಂಡರೆ ಕೆಡುವುದೇನೆಂದೆ ಪೊಡವೀರೇಳನು ಒಡಲೊಳಗಿಟ್ಟವನಡಿ ಬಿಡುದಿರುವರಿಗಿಡಿ ಭುವನದ ಭಯ 3 ಸತಿಸುತರಿದ್ದರೆ ಹಿತವೇನೆಂದೆ ಸತಿಸುತರಿಲ್ಲದಿರೆ ಅಹಿತವೇನೆಂದೆ ರತಿಪತಿಪಿತನಡಿ ಸತತದಿ ಗೂಡಿಟ್ಟು ನುತಿಪ ಭಕ್ತರಿಗೆ ಕ್ಷಿತಿಮೇಲೇತರ ಭಯ 4 ಭೂಷಣ ಮಾಡಲದೊಂದೇ ಅಂದೆ ದೂಷಣ ಮಾಡಲದೊಂದೇ ಅಂದೆ ಶ್ರೀಶ ಶ್ರೀರಾಮನ ಸಾಸಿರ ನಾಮದ ಧ್ಯಾಸದಿಟ್ಟವರಿಗೇಸು ಕಾಲದಿ ಭಯ 5
--------------
ರಾಮದಾಸರು
ಇಷ್ಟು ಸುಳ್ಳೆಂಬೋದು ತಿಳಿಯಲಿಲ್ಲ | ಕಷ್ಟವಿದರೊಳಗು ಎಳ್ಳಷ್ಟು ಸುಖವಿಲ್ಲ ಪ ಮಡದಿ ಮಕ್ಕಳು ಮನೆಮಾರೆಲ್ಲ ಸುಳ್ಳು | ಹಡೆದ ತಾಯಿ ತಂದೆ ಮೊದಲೇ ಸುಳ್ಳು | ಒಡ ಹುಟ್ಟಿದ ಅಣ್ಣ-ತಮ್ಮಂದಿರು ಸುಳ್ಳು |ಒಡವೆ ವಸ್ತುಗಳೆಲ್ಲ ಕಡೆ ತನಕ ಸುಳ್ಳು 1 ಆನೆ ಕುದುರೆ ಸೇನೆ ದೌಲತು ಸುಳ್ಳು | ನಾನು ನೀನೆಂಬ ಅಜ್ಞಾನವೇ ಸುಳ್ಳು | ಮೌನ ಹಿಡಿವುದು ಸುಳ್ಳು | ಸ್ವಾನುಭವಕೆಲ್ಲ ಸುಳ್ಳು 2 ಕೊಟ್ಟು ಕೊಂಡೋದು ಸುಳ್ಳು | ಕೆಟ್ಟದೊಳ್ಳೇದೆಂಬುವದು ಸುಳ್ಳು | ಧಿಟ್ಟ ಭವತಾರಕನ ಮುಟ್ಟಿ ಪೂಜಿಸಿನ್ನು | ಬಟ್ಟ ಬಯಲಾಗಿ ತಾ ಘಟ್ಟ್ಯಾದನು 3
--------------
ಭಾವತರಕರು
ಈ ದೇಹ ಬಲು ಸಾಧನ ಭೂದೇವ ಜನ್ಮದಲಿ ಬಂದ ಕಾರಣ ನಮಗೆ ಪ ಶ್ವಸನ ಮತವೆ ಪೊಂದಿ | ನಸು ಚಿತ್ತದಲಿ ಯಿದ್ದು | ವಿಷಯಂಗಳೆಲ್ಲ ನಿರಾಕರಿಸಿ | ಋಷಿಮಾರ್ಗದಲಿ ನಡೆದು ವಿಹಿತಾರ್ಥದ ಸತ್ಯ | ನಿತ್ಯ ಸಜ್ಜನರ ಒಡಗೂಡು1 ಬಾಹುದ್ವಯದಲಿ ಶಂಖ ಚಕ್ರ ಧರಿಸಿ ಉ | ತ್ಸಾಹದಲಿ ದ್ವಾದಶ ಪುಂಡ್ರಗಳನಿಟ್ಟು | ಸ್ನೇಹಭಾವದಲಿ ಸತತ ಭಕುತಿಯ ಮಾಡು | ಇಹಲೋಕದಲಿ ಇಷ್ಟಾರ್ಥ ಬೇಡುತಲಿರು 2 ಅನಿಷಿದ್ದ ಕರ್ಮಗಳು ಆಚರಿಸಿ ಭೂತದಯ | ಅನುಗಾಲ ಇರಲಿ | ಬಂಧುಗಳ ಕೂಡಾ | ಮನಮೆಚ್ಚು ನಡೆದು ನೀ ಮಂದಮತಿಯನು ಕಳೆದು | ಘನಜ್ಞಾನದಲಿ ನಡೆದು ಗುಣವಂತನಾಗು 3 ಧರ್ಮೋಪದೇಶವನೆ ಮಾಡುತಲಿರು ನೀನು | ಪೇರ್ಮೆಯುಳ್ಳವನಾಗು ಪೃಥವಿಯೊಳಗೆ | ನಿರ್ಮತ್ಸರನಾಗು ವೈಷ್ಣವ ಜನರ ಕೂಡ | ದುರ್ಮತವ ಪೊಂದದಿರು ಅನಂತ ಜನ್ಮಕ್ಕೆ 4 ಕರ್ಣ ತುಲಸೀ ದಳ | ಬೆರಳಲ್ಲಿ ಪವಿತ್ರದುಂಗರವನಿಟ್ಟು | ಪರಮ ವಿರಕುತಿಯಲಿ ದೇಹವನು ದಂಡಿಸುವ | ಹಿರಿದಾಗಿ ಭಾಗವತನಾಗು ವ್ಯಾಕುಲವ ಬಿಡೋ 5 ವದನದಲಿ ಹರಿಸ್ಮರಣೆ ಮರೆಯದಿರು ಕಂಡಕಡೆ | ಉದರಕ್ಕೆ ಪೋಗಿ ಚಾಲ್ವಯದಿರು ಅಧಿಕರ ಆಪೇಕ್ಷಗಳ ಮಾಡದಿರು ಹರಿಯಿತ್ತ ದದು ಭುಂಜಿಸಿ | ಬಂದ ಕಾಲವನು ಹಿಂಗಳಿಯೊ 6 ತೀರ್ಥಯಾತ್ರೆಯ ಚರಿಸು ಕಥಾಶ್ರವಣವನು ಕೇಳು | ಅರ್ಥವನೆ ಬಯಸದಿರು ಬಾಕಿ ಬಸಿದು ವ್ಯರ್ಥ ನಿನ್ನಾಯುಷ್ಯ ಪೋಯಿತೆಂದೆನಿಸದೆ | ಪ್ರಾರ್ಥನೆಯ ಮಾಡು ಪ್ರತಿಕ್ಷಣಕೆ ಶ್ರೀ ಹರಿಚರಣ 7 ಪರಿಯಂತ | ಮಿತ ಆಹಾರ ಮಿತ ನಿದ್ರಿ ಮಿತ ಮಾತನು | ಸತತ ಮೀರದಲಿರು ಶೋಕಕ್ಕೊಳಗಾಗದಿರು | ಸತಿ ಸುತರು ಎಲ್ಲ ಶ್ರೀ ಹರಿಗೆ ಸೇವಕರೆನ್ನು 8 ಜಾಗರ ಗಾಯನ | ಮರಳೆ ಮರಳೆ ಮಂತ್ರ ಪಠನೆಯಿಂದ | ಧರೆಯೊಳಗೆ ಪುಣ್ಯವಂತನಾಗಿ ಸರ್ವದ | ಇರಬೇಕು ಇಹಪರಕೆ ಲೇಸು ಎನಿಸಿಕೊಂಡು9 ಸುಖ ದು:ಖ ಸೈರಿಸುತ ಅರಿಗಳಿಗೆ ಭಯಪಡದೆ | ನಖಶಿಖವಾಗಿ ಆನಂದ ವಿಡಿದೂ | ಮುಖದಲ್ಲಿ ಹರಿನಾಮ ಅಮೃತವೆ ಸುರಿಸುತ್ತ | ಸಖರೊಳಗೆ ಲೋಲಾಡು ಹರಿಗುಣವ ಕೊಂಡಾಡು10 ಸಕಲಾಧಿಷ್ಠಾನದಲಿ ಹರಿಯೆ ಲಕುಮಿ ತತ್ವ | ಕರ ಮುಗಿದು ತಿಳಿದು | ಮುಕುತಿ ಕರದೊಳಗಿಡು ವಿಜಯವಿಠ್ಠಲರೇಯನ | ವಿಕಸಿತ ಮನದಲ್ಲಿ ಭಜಿಸು ಬಲು ವಿಧದಿಂದ11
--------------
ವಿಜಯದಾಸ
ಈಗುಂಟೋ ಆಗುಂಟೋ ಈ ದೇಹ ಏಗಬಲ್ಲರು ಯಾರು ಈ ಜಗದ ಗುಂಟ ಪ ನಾಲ್ಕು ದಿನ ಇರುವಾಗ ಚೆನ್ನಾಗಿ ಇರಬೇಕು ನಾಲ್ಕಾರು ಜನರಿಗೆ ಉಪಕಾರ ಮಾಡಬೇಕು ಬಾಲೆ ಸರಸತಿಗೆ ಪರಧನಕೆ ವಸ್ತುವಿಗೆ ಏಕೆ ಹಾಳು ಮನವನು ನಿಲಿಸಿ ಕೆಡಿಸಬೇಕು 1 ಹಾರುವ ಮನವನ್ನು ಕಟ್ಟಿ ಹಾಕಬೇಕು ಹಾರುವನ ಕಂಡರೆ ತಡೆಯಬೇಕು ಹಾರಲೇಕೆ ಪರರ ಒಡವೆ ಕಂಡೊಡನೆಯೆ ಬಾರಿಬಾರಿಗೆ ಬರಿದೆ ಕೆಣಕಲೇಕೆ 2 ವಿಚಾರಿಸಿಕೋ ದೇವ ಶಿಷ್ಟರ ಭಂಟ ಊರೊಳಗೆ ಉಚಾಯಿಸುತಿದ್ದಾರೆ ಐದಾರು ಮಂದಿ ಎಚ್ಚರಿಕೆ ಹಾಕುತ್ತ ಇದ್ದಾರೆ ದುಷ್ಟ ಮಂದಿ ಎಚ್ಚರಿಸೊ ಉದ್ಧರಿಸೊ ನೆಂಟ ಜಾಜಿಪುರೀಶ3
--------------
ನಾರಾಯಣಶರ್ಮರು
ಈತನೆಂಥಮಹಿಮೆ ನೊಡಿರೆ ರಂಗಯ್ಯ ರಂಗ ಈತನೆಂಥ ಮಹಿಮ ನೋಡಿರೆ ಪ ಈತನೆಂಥ ಮಹಿಮ ಓರ್ವ ಮಾತೆಯುದರದಿ ಜನಿಸಿ ಮತ್ತೊಬ್ಬ ಮಾತೆಕೈಯಿಂದ ಬೆಳೆದು ಗೋಕುಲ ನಾಥ ನವನೀತಚೋರನೆನಿಸಿದ ಅ.ಪ ಕಾಳಕೂಟ ವಿಷವ ಕುಡಿಸಿದ ಆ ಮಾಯದೈತ್ಯಳ ಕಾಲನ ಆಲಯಕೆ ಕಳುಹಿದ ಮಡುವನ್ನು ಧುಮುಕಿ ಕಾಳಿ ಹೆಡೆಮೆಟ್ಟಿ ನಾಟ್ಯವಾಡಿದ ಗೋವುಗಳ ಕಾಯ್ದ ಬಾಲನೆಂದೆತ್ತೊಯ್ಯಲು ಬಂದ ಖೂಳ ಶಕಟನ ಸೀಳಿ ಒಗೆದು ಕಾಳಗದಿ ಧೇನುಕನ ತುಳಿದು ಬಾಲಲೀಲೆಯ ತೋರಿ ಮೆರೆದ 1 ಪರಿಪರಿಯ ಮಾಯದಿಂ ಕಾಡ್ವ ಭೂಭಾರಿಯಾಗಿ ಧರಣಿಜನರತಿಶಯದಿ ಬಳಲಿಸುವ ಪರಮಕಂಟಕ ದುರುಳ ಕಂಸನೆಂಬುವನ ಶಿರವ ತರಿದ ಮಾಧವ ಧರಣಿತಾಪವನ್ನೆ ಕಳೆದು ಸೆರೆಯ ಬಿಡಿಸಿದ ಜನನಿ ಜನಕರ ಮಹಿಮೆ ತೋರ್ದ 2 ಗೊಲ್ಲ ಬಾಲರ ಸಮೂಹವನು ನೆರೆಸಿ ಮನೆಯಲ್ಲಿ ಯಾರು ಇಲ್ಲದ ಸಮಯವನೆ ಸಾಧಿಸಿ ಮೆಲ್ಲಮೆಲ್ಲನೆ ಎಲ್ಲ ಬಾಲರ ಒಳಗೆ ತಾ ಹೊಗಿಸಿ ಪಾಲ್ಮೊಸರು ಸವಿಸಿ ಕಳ್ಳ ಕೃಷ್ಣೆಮ್ಮ ನಿಲ್ಲಗೊಡನೆಂದು ಗೊಲ್ಲಸ್ತ್ರೀಯರು ಗುಲ್ಲುಮಾಡಲು ನಿಲ್ಲದೋಡಿ ತಾ ಪುಲ್ಲನಾಭನು ಎಲ್ಲಿ ನೋಡಿದರಲ್ಲೆ ತೋರುವ 3 ಶಿಶುವು ಈತನೆಂದು ಮುದ್ದಿಸುವಾಗ ಕುಶಲದಿಂದಪ್ಪಿ ಅಧರ ಸವಿಯುವ ಎಂಥ ಶಿಶುವನೆ ಹಸುಮಗಾಗೆಳೆದೊಯ್ದು ರಮಿಸುವ ಮಿಸುಗಗೊಡನಿವ ಕಸಿದು ಭಾಂಡ ದೆಸೆದೆಸೆಗೆ ಎಳೆದು ವಸುಧೆಯೊಳು ತನ್ನ ಅಸಮ ಮಹಿಮೆಯ ಪಸರಿಸಿದ ಹರಿ4 ಮಣ್ಣು ತಿಂದು ತಾಯ ಬಳಿಗೈದಕಂದ ಏನಿದು ಮಣ್ಣು ತಿನ್ವರೆ ಉಗುಳೆಂದೆಶೋದೆ ಕಣ್ಣು ತಿರುವÀಲು ತನ್ನ ಬಾಯೊಳ್ಬ್ರಹಾಂಡ ತೋರಿದ ಭಿನ್ನವಿಲ್ಲದ ತನ್ನ ತಾನು ಅರಿಯದೆಶೋದಿನ್ನು ಈರೂಪವಡಗಿಸೆನ್ನಲು ಸಣ್ಣಮಗುವಾಗಿ ಚಿಣುಫಣುವಿಡಿದುನ್ನ - ತೋನ್ನತ ಆಟವಾಡಿದ 5 ಪರಿಪರಿಯಲಿ ಕಾಡ್ವ ಕೃಷ್ಣನ್ನ ವರದೇವಿ ತಡೆಯದೆ ಸರವೆನಡುವಿಗ್ಹಚ್ಚಿ ತರಳನ್ನ ಸರಸರನೆ ಬಿಗಿದು ಒರಳಿಗ್ಹಾಕಿ ಕಟ್ಟಿ ಮುರಹರನ ಮರೆಯಾಗಲಾಕ್ಷಣ ಊರುತಂಬೆಗಾಲು ಊರಬೀದಿಲಿ ಒರಳನೆಳೆಯುತ ಹೊರಗೆ ಹೋಗಿ ತರಗುಳಿರಕಿಲದೊರಳ ಸೇರಿಸಿ ಮುರಿದು ಶಾಪದಿಂ ಮುಕ್ತಮಾಡಿದ 6 ಪುಂಡತನದಿಂ ಸೊಕ್ಕಿಮರೆಯುವ ಆ ರುಗ್ಮನಿಡಿಕೈಯ ಬಂಡಿಗಾಲಿಗೆ ಕಟ್ಟಿ ಶ್ರೀಧರ ರುಗ್ಮಿಣಿಯನ್ನು ಕೊಂಡು ಗೋಕುಲ ಸೇರಿ ವೈಭವ ನಡೆಸಿ ಯಾದವ ರ್ಹಿಂಡಲಿಗೂಡಿಸಿ ಪುಂಡದೇವಿಯುದ್ದಂಡತನದಿ ಕೈ ಕೊಂಡ ಕಲ್ಯಾಣ ಗಂಡುಗಲಿಗಳ ಗಂಡನೆನಿಸಿದ ಹಿಂಡುದೇವರ ಸಾರ್ವಭೌಮ 7 ಚರಣದಾಸರ ಒಡೆಯ ತಾನಾದ ವರ್ಣಿಸಲಳವಲ್ಲ ಚರಣದಾಸರ ದಾಸನೆನಿಸಿದ ಪುಸಿಯಲ್ಲ ಕೇಳಿರಿ ನರನ ಕುದುರೆಯ ವಾಘೆಯನು ಪಿಡುದು ರಥವ ನಡೆಸಿದ ಕರೆಯಲೋಡಿದ ಸರಸಿಯಲ್ಲಿಗೆ ಭರದಿ ಒದಗಿದ ಕುರುಪಸಭೆಯಲ್ಲಿ ಪರಮ ನಿಗಮಗಳ್ಗಿರುವನಗೋಚರ ಸ್ಮರಿಸಿದವರಿಗೆ ಭರದಿ ನೆರವಾದ 8 ತಾಳಿಬಂದ ನಾರಾಯಣಾವತಾರ ಪಾಲಿಸಲು ಜಗವಂ ಬಾಲಗೋಪಾಲ ಭಕ್ತರಾಧಾರ ಗೊಲ್ಲನೆನಿಸಿ ಲೀಲೆನಡೆಸಿದ ಶಾಮಸುಂದರ ಭವಜಾಲಪರಿಹರ ಕಾಳರಕ್ಕಸರೊಳು ಕಾದಿ ನಿರ್ಮೂಲಮಾಡಿ ಜಗಪಾಲಿಸಿದ ತ್ರಿ ಜಾನಕಿಲೋಲ ಶ್ರೀರಾಮ 9
--------------
ರಾಮದಾಸರು
ಉಗಾಭೋಗ ಬಡವನಾದವನ ಭವಮಡುವಿನೊಳಗೆನೂಕಿ ಮಿಡುಕಿಸೀನೋಡುವುದು ಥರವೇನೋ ಒಡಲಿಗೋಸುಗ ನಿನ್ನ ಬೇಡ ಬಂದವನಲ್ಲ ದೃಢಭಕ್ತಿ ಜ್ಞಾನಕೊಟ್ಟು ರಕ್ಷಿಸೋಧೊರಿಯೆ ಕಡಲಶಯನ ನಮ್ಮ ಮುದ್ದುಮೋಹನವಿಠಲ ಗಾಢರತಿಯ ಪಾಲಿಸು ಸುಲಭದಿಂದಾ
--------------
ಮುದ್ದುಮೋಹನವಿಠಲದಾಸರು
ಉಡುಪಿ ಪರಿಸರದ ದೇವತೆಗಳು ಕಣ್ವ ಋಷಿ ತಪಗೈದ ಅಜ್ಜರ್ಕಾಡೆಂಬಲ್ಲಿ ಅವನಿಗೊಲಿದಿರುವ ದುರ್ಗೆ ವಾಸವಾಗಿಹಳು ಒಳಕಾಡು ಎಂಬ ತಾನವೆ ಚಂದ್ರನ ತಪೋ ಭೂಮಿ ಇಲ್ಲಿಯೇ ಸಕಲ ವಿದ್ಯಾಲಯವಾಯ್ತು 132 ಬೆಳ್ಳಿ ಮಂಚದ ಕಾಲುಗಳು ನಾಲ್ಕು ಎಂಬಂತೆ ಆರ್ಮೊಗನ ರೂಪಗಳು ನಾಲ್ಕು ದೆಸೆಗಳಲಿ ಮಾಂಗೋಡು ತಾಂಗೋಡು ಆರಿತೋಡು ಮುಚ್ಲಿಕೋಡು ನಾಮದಿಂ ಬೆಳಗುವವು ಷಷ್ಠಿದಿನದಂದು 133 ಕಡಿಯಾಳಿ ಎಂಬಲ್ಲಿ ಮಹಿಷಮರ್ದಿನಿಯಾಗಿ ದುರ್ಗಾಲಯವು ಉಡುಪಿ ಪೂರ್ವದ್ವಾರದಲ್ಲಿ ಪುತ್ತೂರು ಬೈಲೂರು ಬಡಗು ತೆಂಕು ದೆಸೆಯಲ್ಲಿ ಕೃಷ್ಣ ಸೇವೆಗೆ ದುರ್ಗೆ ಕಟಿಬದ್ಧಳಿಹಳು 134 ಸತ್ಯ ನುಡಿಯಲ್ಲಿರಲಿ ಧರ್ಮ ನಡೆಯಲ್ಲಿರಲಿ ಸ್ವಾಧ್ಯಾಯದಲಿ ಎನಗೆ ಎಚ್ಚರವದಿರಲಿ ಅಜ್ಞಾನದಂಧಕಾರದ ದಿಕ್ಕಿನಿಂದೆನ್ನ ನಿನ್ನ ಬೆಳಕಿನ ಕಡೆಗೆ ಕರೆದೊಯ್ಯು ದೇವಾ 135 ಪರಶುರಾಮಕ್ಷೇತ್ರ ಹುಟ್ಟುಭೂಮಿಯು ಎನಗೆ ಪರಶುರಾಮನು ನೀನೆ ನಿನ್ನ ಕ್ಷೇತ್ರವಿದು ಪರಮಹಂಸಾಖ್ಯಯತಿಗಳ ಮಾನಸಹಂಸ ಸೋಹಂ ಎನ್ನುವ ಬ್ರಹ್ಮ ಎನ್ನೊಳಗೆ ಇರುವೆ 136 ಕೃಷ್ಣಾರ್ಪಣವದಿಲ್ಲದಾವುದು ಫಲ ಕೊಡದು ಅದರಿಂದ ಕೃಷ್ಣನಿಗೆ ಕೃತಿಯನರ್ಪಿಸುತ ಸಾಲೋಕ್ಯ ಸಾಮೀಪ್ಯವನ್ನು ಬಯಸುವೆ ನಾನು ಯೋಗ್ಯತಾನುಗುಣವಾಗಿ ಫಲವ ಕೊಡು ಹರಿಯೆ137 ಪರಶುರಾಮನು ರಾಮ ಪರಶು ರಾಮನು ಕೃಷ್ಣ ರಾಮದಾಸನು ನಾನು ಕೃಷ್ಣದಾಸನಿಹೆ ಬರೆದ ಕೃತಿಯಿಂದ ನೀನ್ ಸುಪ್ರಸನ್ನತೆ ಪಡೆದು ಭಕ್ತಿ ಮುಕ್ತಿಗಳ ಕೊಟ್ಟು ರಕ್ಷಿಸು ಶ್ರೀಶ 138 ಉಡುಪಾನ್ವಯಜ ನಾನು ಉಡುಪಾನ್ವಯದ ನೀನು ಉಡುಪಿ ಹುಟ್ಟೂರೆನಗೆ ನೀನುಡುಪಿಗತಿಥಿ ಮಧ್ವ ಹೃದಯವು ನಿನಗೆ ವಾಸದ ಸ್ಥಾನವಿರೆ ಮಾಧ್ವಕೋಟಿಗಳಲ್ಲಿ ಕೀಟನಾಗಿಹೆ ನಾನು 139 ವಿಷ್ಣು ಪದದೊಳಗಿರುವ ಜ್ಯೋತಿಲೋಕದ ಒಡೆಯ ಆ ಜ್ಯೋತಿಲೋಕಕ್ಕೆ ಕರೆದೊಯ್ಯುತ ನನ್ನ ಭಕುತರಿಗೆ ಮುಕುತಿ ಕೊಡುವುದೆ ನಿನ್ನ ಸಂಕಲ್ಪ ಅದರಿಂದ ನಿನ್ನನ್ನು ಶರಣು ಶರಣೆಂಬೆ 140 ಚಾಂದ್ರಮಾನದ ಪಿಂಗಳಾಖ್ಯ ಸಂವತ್ಸರದಿ ಚೈತ್ರ ಮಾಸದ ನವಮಿಯ ದಿನದಲ್ಲಿ ಕಾಲ ಇದನರ್ಪಿಸುತ ನಾನು ಕೃತಕೃತ್ಯನಾದೆ ಶ್ರೀಕೃಷ್ಣ ಕಾಪಾಡು 141
--------------
ನಿಡಂಬೂರು ರಾಮದಾಸ
ಉದಯಕಾಲದೊಳೆದ್ದು ಗೋಪಿಯು ದಧಿಯ ಮಥಿಸುವ ಎಂಬ ಸಮಯದಿ ಉದರಗಣ್ಣನು ಎದ್ದು ತೊಟ್ಟಿಲೊಳ್ ತೊದಲು ನುಡಿಗಳಿಂ ಕರೆದ ತಾಯಿಯ 1 ನುಡಿಯ ಲಾಲಿಸಿ ನಳಿನನೇತ್ರನು ಕರೆದ ಹಾಲನು ಕೊಡುವೆನೆಂದರೆ ಕೊಡುವೆನೆಂದರೆ ಕಣ್ಣಮುಚ್ಚನು ಒಡನೆ ಮಲಗುವ ಮಲಗದೇಳುವ 2 ನಿದ್ರೆ ತೀರದೆ ನೀ ಎದ್ದ ಕಾರಣ ಬುದ್ಧಿ ಸಾಲದು ಮುದ್ದು ಮಗುವಿಗೆ ಒದ್ದು ಕೆಲಸವ ತಿದ್ದಿ ಉನ್ಮತ ಅಮ್ಮ ಬಾರೆಲೆ ಎನ್ನಗಲಬೇಡವೆ 3 ಗುಮ್ಮ ಬರುತದೆ ಗುಸುಗುಸೆನುತದೆ ಶ್ರೀದವಿಠಲನಾ ಶ್ರೀಲತಾಂಗಿಯು ಮೋದಪಡಿಸುವ ಮಾನವೀಯಳೇ ವೇದಗೋಚರ ನೀ ಏಳಬೇಡವೋ ಪಾದಕೆರಗುವೆ ಪವಡಿಸೆಂದಳು 4
--------------
ಶ್ರೀದವಿಠಲರು
ಉದಿಸೀದಾ ರವಿಯು ತಾನುದಿಸಿದ ಪ ಉದಿಸಿದ ರವಿಯು ತಾನೆನಿಸೀ | ಗುರುಮುದಮುನಿ ಮತವ ವಿಸ್ತರಿಸೀ | ಆಹಬುಧಜನರಂತಸ್ಥ ಬಹು ವಿಧ ತಿಮಿರವಒದೆದು ಛೇದಿಸುವಂಥ ವಿಜಯಾರ್ಯ ತರಣಿಯು ಅ.ಪ. ಸುರಮುನಿ ಪಾದವ ಭಜಿಸೀ | ಯುಗವೆರಡರೊಳ್ ಸುರಲೀಲ ನೆನಿಸೀ | ಯುಗಮೂರರೊಳ್ ನಿಕಂಪನೆನಿಸೀ | ಯುಗಮೂರೊಂದರಲಿ ಕರುವೆನಿಸೀ | ಆಹಪುರಂದರ ದಾಸರ ಗೃಹದೊಳಗುದಿಸುತ 1 ಕರಣೀಕ ಶೀನಪ್ಪ ತನು | ತನ್ನವರಪ್ರಿಯ ಸತಿಕೂಸಮ್ಮನು | ಬಲುಪರಿಪರಿ ಸೇವಿಸಿ ವರವನು | ಪೊಂದಿಎರಡೊಂದು ತನಯರುಗಳು | ಆಹಪರಿ ಪಾಲಿಸುತ್ತಲಿ ಪರಿಪರಿ ಭವಣೇಲಿಪೊರೆಯವು ಉದರವ ಸರಿಯಿತು ಕಾಲವು 2 ಬಡತನ ಭವಣೇಲಿ ಬಂದೂ | ಒಂದುಕುಡಿತೆ ಗಂಜಿಗಾಗಿ ನೊಂದೂ | ಛಾಗಿಒಡೆಯನ ಮನೆಯೊಳಗಂದೂ | ಮೆದ್ದುಒಡಲ ತುಂಬಿಕೊಂಡು ಬಂದೂ | ಆಹಬಡಗ ದಿಕ್ಕಿನ ಗಂಗೆ ಮಡುವ ಕಾಣುವೆನೆಂದುಸಡಗರದಲಿ ಪೋದ ಬಡ ಕೂಸೀಮಗದಾಸ 3 ವತ್ಸರ ತರಳ | ತನ್ನಹಿರಯರಿಗ್ಹೇಳದೆ ಪೊಳಲ | ಬಿಟ್ಟುತಿರುಗುತ ತೀರ್ಥ ಕ್ಷೇತ್ರಗಳ | ಮಿಂದುಮರಳಿ ತಾ ಮಾತಾ ಪಿತೃಗಳ | ಆಹಬೆರೆದು ಮಾನವರಂತೆ ಸಂಸಾರ ವೃತ್ತಿಲಿಚರಿಸಿದವೆರಡುಂಟು ವರುಷವ ಕಳೆಯುತ 4 ಮತ್ತೆ ತಾ ವೈರಾಗ್ಯದಲ್ಲಿ | ಹರಿಪೆತ್ತ ಗಂಗೆಯ ಸ್ನಾನದಲ್ಲಿ | ಮನತೆತ್ತು ಗಯಾದೇಶದಲ್ಲಿ | ಪಿಂಡವಿತ್ತು ವಾರಣಾಸಿಯಲ್ಲಿ | ಆಹಉತ್ತಮರ ಸಂಗ ನಿತ್ಯಸ್ನಾನ ಸಂಧ್ಯಕೃತ್ಯವನೆಸಗಿ ಸುಚಿತ್ತದಿ ಮಲಗಿರೆ 5 ಸತ್ಯ ಸ್ವಪ್ನದಿ ನರಹರಿಯು | ತನ್ನಪುತ್ರನೆಬ್ಬಿಸಿದಂತೆ ಪರಿಯು | ದಾಸರಂತೆ ರೂಪವ ತಾಳಿ ಹರಿಯು | ತನ್ನಹತ್ತಿರ ಕರೆಯುತ ಧೊರೆಯು | ಆಹಚಿತ್ತಜ ಪಿತ ಪೆತ್ತ ಸರಿತವ ದಾಂಟಿಸಿಉತ್ತಮ ಕಾಶಿಯ ವ್ಯಾಸರ ಕಂಡವ 6 ಪರಿ ಪರಿಯ | ಆಹಅಚ್ಚ ಕವನ ಪೇಳಿ ನೆಚ್ಚಿನ ಮನದವರಸ್ವಚ್ಛತನಕೆ ತಿದ್ದಿ ಅಚ್ಚ್ಯುತಗಿಂತವ 7 ಎರಡೊಂದನೇ ಬಾರಿ ಪೋಗಿ | ಕಾಶಿಪುರದಿ ಗಂಗಾಸ್ನಾನಕಾಗಿ | ಕೂಡೆಸುರನದಿ ಪೆಚ್ಚಿ ಮೇಲಾಗಿ | ಸಿರಿವರದ್ವಿಜಗಭಿಷೇಕವಾಗಿ | ಆಹಸರಿತವು ಮುಂಚಿನ ಪರಿಯಂತೆ ಪ್ರವಹಿಸೆಸುರನರೋರುಗರೆಲ್ಲ ಪರಿಪರಿ ಕೊಂಡಾಡೆ 8 ತುತಿಸುತಲಲ್ಲಿಂದ ಸೇತು | ಸ್ನಾನರತಿಯಿಂದ ಗೈಯ್ಯುತ ಹೊತ್ತು | ಹರಿಕಥೆಗಳ ಪೇಳಿ ಯಾವತ್ತು | ಜನತತಿಗೆ ಸನ್ಮಾರ್ಗವನಿತ್ತು | ಆಹತೀರ್ಥ ಕ್ಷೇತ್ರಂಗಳ ನತಿಸುತ ದಶಮತಿಮತವ ಬೀರಿದನೀತ ಸುಜನರ ಪೊರೆಯಲು 9 ಸಾರ | ಸೊಳ್ಹಾದಿಗಳ್ ಮೊದಲಾದ ಹಾರ | ದಿಂದಭೇದ ವಾದಿಯ ಮತೋದ್ಧಾರ | ಗೈದುಶ್ರೀಶ ಗೊಪ್ಪಿಸೀದ ಧೀರ | ಆಹನಾದ ಮೂರುತಿ ಗುರು ಗೋವಿಂದ ವಿಠಲನಪಾದವ ಸ್ಮರಿಸುತ್ತ ಮೋದವ ಪಡುತ್ತಿದ್ದ 10
--------------
ಗುರುಗೋವಿಂದವಿಠಲರು
ಉಪಕಾರವ ನೋಡೋ ಮಾಡಿದ ಪ ಕೃಪೆ ಬೇಡುವುದತಿಶಯವೇ ಪೇಳೊ ಅ.ಪ ಪಾಲಕ ನೀ ಹದಿನಾಲ್ಕು ಜಗಂಗಳಿಗೆ ಮೂಲೆಯ ಗ್ರಾಮದಲಡಗಿ ಬೇಸರದಿ ಕಾಲಕಳೆಯುವುದ ನೋಡಿ ಮರುಕದಲಿ ಬಾಲ ಮೂರುತಿಯ ಜಗಕೆ ತೋರಿಸಿದ 1 ಅಡಕು ಮಣೆಗಳಲಿ ಪೂಜೆಯಗೊಳ್ಳುತ ಒಡಕು ತೊಗರಿ ಹುಳಿಯನ್ನವ ಮೆಲ್ಲುತ ಬಡತನದಲಿ ಜೀವನ ಕಳೆಯುತಿರೆ ಪೊಡವೀಶನ ಭೋಗಗಳನು ಉಣಿಸಿದ 2 ಮಣಿ ಮಂದಿರ ವಿಧ ವಿಧ ಅಂದದ ಮುತ್ತಿನ ಹಾರ ಪದಕಗಳು ತಂದೆ ಪ್ರಸನ್ನನೇ ಸಾಸಿರ ಸಾಸಿರ ಮಂದಿಗಳಿಗೆ ವೈಭವಗಳ ತೋರಿದ 3
--------------
ವಿದ್ಯಾಪ್ರಸನ್ನತೀರ್ಥರು
ಉಂಬುವ ಬನ್ನಿರೋ ಅನಂದದೂಟವ ಹಂಬಲಿಸಿ ಸವಿದು ತುತ್ತು ಕೊಂಬ ಬನ್ನಿರೋ ಧ್ರುವ ಬಡಿಸಿಹಿದು ನೋಡಿ ಅನೇಕ ಪರಿಯಲಿ ಎಡಬಲಕೆ ನೋಡಲಾಗದಾನಂದ ಘನಲೀಲೆ 1 ಇಡಿದು ತುಂಬಿದೇ ನಿಧಾನದೂಟವು ನೋಡಲಿಕ್ಕೆ ತೃಪ್ತಿಗೈಸುತಿಹುದು ನೋಟವು 2 ಬೇಡಿಸಿಕೊಳ್ಳದೆ ಬಡಸುತಿಹ್ಯನು ಮೂಢ ಮಹಿಪತಿ ಒಡೆಯ ಭಾನುಕೋಟಿತೇಜನು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಉಯ್ಯಾಲೆ ಉತ್ಸವಗೀತೆ ಜೊ ಜೊ ಜೊ ಜೊ ಶ್ರೀರಂಗನಾಥ ಜೊ ಜೊ ರಂಗನಾಯಕಿರಮಣನೆ ಭೂಮಿಕಾಂತ ಪ. ಮಂಟಪವನು ಶೃಂಗರಿಸಿದರಂದು ಎಂಟುದಿಕ್ಕಿಗೆ ಪುಷ್ಪಗಳಲಂಕರಿಸಿ ವೈ ಕುಂಠವಾಸನ ಉಯ್ಯಾಲೆಮಂಟಪವನ್ನು ಭಂಟರು ಬಂದು ಶೃಂಗಾರ ಮಾಡಿದರು 1 ಆಶ್ವೀಜ ಮಾಸದ ಶುಕ್ಲಪಕ್ಷದಲ್ಲಿ ಆ ತುಲಾ ಮಾಸದ ಆರುದಿವಸದಲ್ಲಿ ವಾರಿಜಮುಖಿಯರ ಒಡಗೊಂಡು ರಂಗ ವೈ ಯ್ಯಾರದಿಂದಲೆ ಬಂದನು ಮಂಟಪಕೆ 2 ಮತ್ತೆ ಮರುದಿನದೊಳಗಚ್ಚುತನಂತ ಕುತ್ತನಿಅಂಗಿ ಕುಲಾವಿ ಧರಿಸಿ ರತ್ನದ ಪಾನುಪಟ್ಟಿಯು ಅರಳೆಲೆ ಕಟ್ಟಿ ಭಕ್ತವತ್ಸಲನಾಡಿದನುಯ್ಯಾಲೆ 3 ಮೂರುದಿವಸದಲಿ ಮುರವೈರಿ ತಾನು ಭಾರಿ ವಜ್ರದ ಮಕರಕಂಠಿಯಾ ಧರಿಸಿ ನೀರಜನೇತ್ರನು ನಿಗಮಗೋಚರನು ವೈ ಯ್ಯಾರದಿಂದಲಿ ಆಡಿದನುಯ್ಯಾಲೆ 4 ನಾಲ್ಕು ದಿವಸದಲಿ ನಂದನಕಂದ ನವ ರತ್ನದ ಮಕರಕಂಠಿಯಧರಿಸಿ ಧರಿಸಿ ನಾಗಶಯನನಾಡಿದನುಯ್ಯಾಲೆ 5 ಐದು ದಿವಸದಲಿ ಅಕ್ರೂರವರದಗೆ ಕರಿ ದಾದ ಕುಲಾವಿ ಕಲ್ಕಿಯ ತುರಾಯಿ ಗಂಡಭೇರುಂಡಪಕ್ಷಿಯ ಪದಕವನಿಟ್ಟು ಪುಂಡರಿಕಾಕ್ಪನಾಡಿದನುಯ್ಯಾಲೆ 6 ಆರು ದಿವಸದಲಿ ಅಂಗಜನಯ್ಯಗೆ ಕೂರೆ ಕುಲಾವಿ ವೈಯಾರದಿಂಧರಿಸಿ ಹಾರ ಮಾಣಿಕ ರತ್ನ ಸರಗಳಳವಡಿಸಿ ನೀರಜನೇತ್ರನಾಡಿದನುಯ್ಯಾಲೆ 7 ಸಪ್ತದಿವಸದಲಿ ರತ್ನ ಮೌಳಿಯ ಧರಿಸಿ ಹಸ್ತದಿ ರತ್ನಹಾರ ಗಂಧವಿರಿಸಿ ಅರ್ತಿಯಿಂದಲೆ ತನ್ನ ಮಿತ್ರರು ಸಹಿತಲೆ ಬತ್ತವಳಿಸಿ ಬಂದ ಭಕ್ತವತ್ಸಲನು 8 ಓರೆಗೊಂಡೆಯ ವೈಯಾರದಿಂ ಧರಿಸಿ ನಾರಿಯರೆಡಬಲದಲಿ ಕುಳ್ಳಿರಿಸಿ ವಾರಿಜನೇತ್ರನು ನಡುವೆ ಕುಳ್ಳಿರಲು ವಾರಾಂಗನೆಯರೆಲ್ಲ ಪಾಡುತಿರಲು 9 ಅಷ್ಟಮ ದಿವಸದಿ ಅರ್ತಿಯಿಂದಲೆ ಕೃಷ್ಣಮೂರುತಿಗೆ ರಾಜಮುಡಿಯನು ಧರಿಸಿ ಹಿಂದಿನ ತೋಳಿಗೆ ಬಂದಿ ತಾಯಿತನಿಟ್ಟು ಇಂದಿರೆ ರಮಣನಾಡಿದನುಯ್ಯಾಲೆ 10 ಎಡಬಲದಲಿ ಭಕ್ತರು ನಿಂತಿರಲು ಪಿಡಿದು ಚಾಮರ ವ್ಯಜನವ ಬೀಸುತಿರಲು ಬೆಡಗಿನಿಮ್ಮ[ಡಕೆ]ಲೆ ಕರ್ಪೂರದ ಗುಳಿಗೆಯ ಎ ನ್ನೊಡೆಯಗೆ ಭಕ್ತರು ಪಿಡಿದು ನಿಂದಿರಲು 11 ದಾಸರಿಸಂದವು ಧಗಧಗನುರಿಯೆ ಸಹ ಸ್ರ ಸೂರ್ಯನಂತೆ ಪದಕಗಳೊಳೆಯೆ ಲೇಸಾದ ರತ್ನದ ಪಾದುಕೆಯನು ಧರಿಸಿ ವಾಸುದೇವನು ಆಡಿದನುಯ್ಯಾಲೆ 12 ಇಂದಿರೆ ರಮಣ ಒಂಭತ್ತು ದಿನದೊಳು ಚಂದ್ರ ಪುಷ್ಕರಣೀಲಿ ತೀರ್ಥವನ್ನಿತ್ತು ಬಂದು ಮಜ್ಜನವನ್ನು ಮಾಡಿ ವೆಂಕಟರಂಗ ಇಂದಿರೆಸಹಿತಲೆ ನಿಂದ ಹರುಷದಲಿ 13
--------------
ಯದುಗಿರಿಯಮ್ಮ
ಉರುಟಣೆ ಪದ ಜಯ ಜಯ ರಾಮ ಜಯಜಯ ಜಯ ನಮ್ಮ ಜಾನಕೀ ರಮಣಗೇ ಪ ಇಂದಿರಾದೇವಿ ರಮಣಿ ಶರಣ್ಯಮಂದರ ಗಿರಿಧರ ಶರಣ್ಯಕಂದನ ನುಡಿ ಕೇಳಿ ಕಂಬದಿಂದಲಿ ಬಂದಸಿಂಧು ಶಯನ ಸಲಹುವಾದೆನ್ನ 1 ಗುರು ವಿಜಯದಾಸರ ಚರಣಾಸರಸಿರುಹವ ಮನದೊಳಾಗಿರಿಸಿಹರಿ ಸರ್ವೋತ್ತಮ ಮಂಗಳ ಚರಿತೆಯವಿರಚಿಸುವೆನು ಸುಜನರು ಕೇಳಿ 2 ಮುತ್ತೈದೆರೆಲ್ಲಾ ಬೇಗಾದಿ ಬಂದುಅರ್ತಿಯಿಂದಲಿ ಶೃಂಗಾರವಾಗಿಚಿತ್ತಜನಯ್ಯನ ಉರುಟಣೆ ಎನುತಾಲಿಮತ್ತ ಗಮನೇರು ಬಂದರಾಗಾ 3 ಸರಸ್ವತಿ ಭಾರತಿ ಮೊದಲಾದಸರಸಿಜ ಮುಖಿಯರೆಲ್ಲಾರು ನೆರೆದುಸರಸ ಉರುಟಣಿಯ ಮೊಡಬೇಕೆನುತಾಲಿಕರೆಸಿದರಾಗ ಮುತ್ತೈದೆರಾಗ 4 ಹೇಮಮಯದ ಮಂಟಪದೊಳಗೆಪ್ರೇಮದಿಂದಲಿ ಹಾಸಿಕೆ ಹಾಕಿಸೋಮವದನನ ಗುಣವ ಕೊಂಡಾಡುತಕಾಮಿನಿಯರು ಕರೆದಾರು ಹಸೆಗೇ 5 ಕೌಸಲ್ಯಾದೇವಿ ತನಯಾನೆ ಕೇಳುಹರ್ಷದಾಯಕ ರಕ್ಷಕನೇಳುಹಂಸವಾಹನನಯ್ಯನೆ ಹಸೆಗೆ ಏಳೇಳೆಂದುಹಂಸಗಮನೆಯರು ಕರೆದರು ಹಸೆಗೆ 6 ನಿಗಮವ ತಂದಾ ಮಚ್ಚ್ಯಾನೇಳುನಗವ ಬೆನ್ನಿಲಿ ಪೊತ್ತ ಕೂರ್ಮನೇಳುಜಗವನುದ್ಧರಿಸಿದ ವರಹ ಮೂರುತಿ ಏಳುಮೃಗ ನರ ರೂಪ ಹರಿಗೇಳೆಂದಾರು 7 ಸುರನದಿಯ ಪಡೆದ ವಾಮನನೇಳುಪರಶುರಾಮ ಮೂರುತಿ ಏಳುಶರಧಿಯ ದಾಟಿ ಸೀತೆಯ ತಂದಶಿರಿ ರಾಮಕೃಷ್ಣ ಹಸೆಗೇಳೆಂದರು 8 ವ್ರತವನಳಿದ ಬೌದ್ಧನೇಳುಅತಿಬಲ ರಾಹುತನೇಳುಪೃಥಿವಿಗೊಡೆಯ ರಾಮನೇಳೆಂದುಅತಿ ಚಮತ್ಕಾರದಿ ಕರೆದರಾಗ 9 ಇಂತು ಬಗೆಯಾಲಿ ತುತಿಸಿ ಕರೆಯೇಕಂತುಜನಕನು ಹರುಷದಾಲೆದ್ದುಕಾಂತೆ ಕೈ ಪಿಡಿದು ನಡೆ ತರಲಾಗಲುನಿಂತಾರು ನಾರಿಯರೆಲ್ಲರಾಗ 10 ಎತ್ತಿಕೊಂಬುವದು ರಾಘವ ನಿಮ್ಮಪತ್ನಿಯ ನಡೆಸಲಾಗದು ಕೇಳಿನೀ ಪೃಥ್ವೀಶನಾದರೆ ನಮಗೇನೆನುತಾಲಿಸುತ್ತು ಕಟ್ಟಿದರು ವಾಮಾಕ್ಷಿಯರು 11 ಮಂಗಳಾಂಗಿಯನು ಎತ್ತಿಕೊಂಡು ರಾಮಹಿಂಗಾದೆ ದ್ವಾರದಲ್ಲಿಗೆ ಬರಲುಮಂಗಳದೇವಿಯ ಹೆಸರು ಹೇಳೆನುತಾಲಿಅಂಗನೆಯರು ಅಡ್ಡಗಟ್ಟಿದರಾಗಾ 12 ನಾಳೆ ಹೇಳುವೆನು ಇವಳ ಹೆಸರುತಾಳಲಾರೆನು ಭಾರವು ಎನಲುಶ್ರೀ ಲಕ್ಷ್ಮೀದೇವಿಯ ಹೆಸರು ಹೇಳಿದೆ ಬಿಡೆವೆಂದುಬಾಲೆಯರೆಲ್ಲಾರು ಇಟ್ಟರು ಕದವಾ 13 ಪುತ್ಥಳಿ ಗೊಂಬೆ ಹೆಸರು ಹೇಳೆನೆ ರಘು-ನಾಥಾನು ಎಂದಾಳು ಜಾನಕೀ 14 ಅಂಗಜನಯ್ಯಾ ಸತಿಯು ಸೀತೆಯ ಸಹಿತರಂಗು ಮಾಣಿಕದ ಹಾಸಿಕೆಯ ಮೇಲೆಶೃಂಗಾರದಿಂದಾಲಿ ಬಂದು ಕುಳ್ಳಿರಲಾಗಸುರರೆಲ್ಲಾ ಹಿಗ್ಗಿ ಕರೆದರು ಪೂ ಮಳೆಯಾ 15 ಸಾಸಿರ ನಾಮದ ಒಡೆಯ ಬಂದಾಶೇಷಶಯನಾ ಮೂರುತಿ ಬಂದಾಭಾಸುರಾಂಗನೆ ಸೀತೆ ಆಳಿದಾ ರವಿಕುಲಾ-ಧೀಶ ಬಂದಾನು ಎಂದಾರು ಕೇಳೆ 16 ವಾನರಾಧೀಶನೊಡೆಯಾ ಬಂದಾದಾನವಾಂತಕ ರಾಘವ ಬಂದಾ ಶ್ರೀ-ಜಾನಕೀದೇವಿ ಪ್ರಾಣದೊಲ್ಲಭ ಜಗ-ತ್ರಾಣ ಬಂದಾನು ಎಂದಾರು ಕೇಳೆ 17 ಸತ್ಯ ಸಂಕಲ್ಪ ಶ್ರೀ ಹರಿಯು ಬಂದಾಭೃತ್ಯ ಪಾಲಕ ದೊರೆಯು ಬಂದಾಮಿತ್ರೆ ಜಾನಕಿದೇವಿ ಪ್ರಾಣದೊಲ್ಲಭ ಸ-ರ್ವೋತ್ತಮ ಬಂದನೆಂದಾರು ಕೇಳೇ 18 ಸುಗ್ರೀವನ ಪರಿಪಾಲಕ ಬಂದಾ ಕ-ರಿಗ್ರಾಹ ಸಂಹಾರಿಕ ಬಂದಾವ್ಯಾಘ್ರ ಚರ್ಮಾಂಬರ ಸಖ ಸುಂದರವಿಗ್ರಹ ಬಂದಾ ಎಂದಾರು ಕೇಳೇ 19 ಇಂದ್ರನ್ನ ಪರಿಪಾಲಕ ಬಂದಾಚಂದ್ರನ್ನ ಪ್ರಭೆಯಾ ಸೋಲಿಪ ಬಂದಾಇಂದುವದನೆ ಸೀತೆ ಪ್ರಾಣದೊಲ್ಲಭ ರಾಮ-ಚಂದ್ರ ಬಂದನೆಂದಾರು ಕೇಳೇ 20 ಚಂದನ ಗಂಧೆಯರು ಎಲ್ಲಾರು ಕೂಡಿಗಂಧ ಕುಂಕುಮ ಅರಿಷಿಣ ಕಲಿಸಿಇಂದುವದನೆ ಸೀತೆಯ ಕೈ ಒಳಗಿಟ್ಟು ಶ್ರೀರಾಮ-ಚಂದ್ರಗೆ ಹಚ್ಚಿಸಿರೆಂದರಾಗ 21 ವಾರಿಜೋದ್ಭವ ಮೊದಲಾದವರುತಾರತಮ್ಯದಿಂದಾಲಿ ಕುಳಿತುವಾರಿಜಾಮುಖಿ ಸೀತೆ ನುಡಿಯೆಂದೆನುತಾಲಿಸಾರಿದರಾಗ ಸಂದಣಿಯರೆಲ್ಲಾ 22 ವಾಕು ಕೇಳಬೇಕೆಂದುಜಲಜ ಸಂಭವನು ನುಡಿದಾನು ನಗುತಾ 23 ಕಂಜವದನೆ ಜಾನಕೀದೇವಿಅಂಜಲಾಗ ನಿಮ್ಮ ಪುರುಷಾರಿಗೆಕುಂಜರ ವರದಾ ದಾಕ್ಷಿಣ್ಯ ಬ್ಯಾಡೆಂದುಅಂಜಾದೆ ನುಡಿದಾರು ನಸುನಗುತಾ 24 ದೋಷ ವರ್ಜಿತನೇ ಹರಿ ನಿಮ್ಮದೂಷಣೆ ಮಾಡಿದಳೆನ ಬ್ಯಾಡಿಮೋಸದಿಂದಲಿ ಬಲು ದೈತ್ಯರ ಕೊಂದ ಜಗ-ದೀಶ ನಿಮ್ಮ ಮುಖವಾ ತೋರೆಂದಾಳು 25 ದೇವಿ ಹಸ್ತದೊಳು ಅರಿಶಿನವ ಪಿಡಿದುಭಾವಜನಯ್ಯನ ನುಡಿದಾರಾಗದೇವರ ದೇವೋತ್ತಮ ಶಿಖಾಮಣಿದೇವಾ ನಿಮ್ಮಯ ಮುಖವಾ ತೋರೆಂದಾಳು 26 ಭಸ್ಮಾಸುರನ ಕೊಂದಾ ಬಹು ಶೂರನಾರಿಕಂಸನಳಿದಾ ಧೀರ ಅಸುರ ಹಿರಣ್ಯಕನಅಸುವ ಹೀರಿದ ದೊಡ್ಡಅಸುರಾಂತಕ ಮುಖವಾ ತೋರೆಂದಾಳು 27 ವಾಲಿಯ ಸಿಟ್ಟಿನಿಂದಾಲಿ ಕೊಂದುಕಾಲ ಯಮನಾನಸುವ ಯುಕ್ತಿಯಿಂದಾಭಳಿರೆ ಮಧುಕೈಟಭರ ಕೊಂದಾಕಾಲಾಂತಕ ಮುಖವ ತೋರೆಂದಾಳು 28 ಶ್ರೀನಾಥ ದ್ವಾರಕಾಪುರ ಮಾಡಿಆ ನಂದಿ ಗೋಮಂತಾ ಗಿರಿಗೊಲಿದೆವಾನರಾಧೀಶನಾ ಬಲು ಕೊಂಡಾಡುತ್ತದಾನವಾಂತಕಾ ಮುಖವಾ ತೋರೆಂದಾಳು 29 ಅರಿಶಿನವಾನು ಹಚ್ಚಿದಳು ಸೀತೆಅರಸನ ಫಣೆಗೆ ಕುಂಕುಮವಾ ಹಚ್ಚಿಸರಸದಿ ವದನಕ್ಕೆ ಗಂಧವಾ ಹಚ್ಚಲುಸುರರೆಲ್ಲಾ ನಕ್ಕಾರು ಕೈ ಹೊಡೆದು 30 ಪತಿ ಮೊದಲಾಗಿ ಚಪ್ಪಾಳೆನಿಟ್ಟುಹರಸಿದರಾಗ ಜಾನಕಿದೇವಿಶಿರಿಯು ಗೆದ್ದಳು ಅಯೋಧ್ಯದಅರಸು ಸೋತನೆಂದು ನಗುತೆ 31 ಬಾಹುಗಳಿಗೆ ಗಂಧವಾ ಹಚ್ಚಿಸಿಮ್ಯಾಲೆ ಪರಿಮಳಾ ಪೂಸಿದಳುಶ್ರೀ ಹರಿಯ ಚರಣಾವ ಪಾಲಿಸಬೇಕೆನುತಲಿಸರಸಾದಿಂದಾಲಿ ನುಡಿದಾಳು ಜಾನಕೀ 32 ಪಾಷಾಣ ಪೆಣ್ಣಾ ಮಾಡಿದಾ ಚರಣಶೇಷನಾ ಮ್ಯಾಲೆ ಮಲಗಿದ ಚರಣಭಾಸುರಾಂಗಿ ನಿನ್ನ ಲೀಲೆಯಾ ತೋರಿದಾಶೇಷಶಯನ ಚರಣಾ ಪಾಲಿಸೆಂದಾಳು 33 ಆಕಾಶಗಂಗೆಯ ಪಡೆದಾ ಚರಣಾಶಕಟನ ಮುರಿದೊಟ್ಟಿದ ಚರಣಾಭಕುತ ಜನರ ಸೇವೆ ಕೊಂಬ ಚರಣರಕ್ಕಸ ದಲ್ಲಣ ಚರಣಾವ ಪಾಲಿಸೆಂದಾಳು 34 ಅಂಕುಶದೊಜ್ರ ರೇಖೆಯ ಚರಣಾಕುಂಕುಮಾಂಕಿತ ರಾಶಿಯ ಚರಣಾಬಿಂಕದಿಂದ ಕುರುಪತಿಯ ಕೆಡಹಿದ ಬಿರು-ದಾಂಕ ನಿನ್ನಯ ಚರಣಾ ಪಾಲಿಸೆಂದಾಳು 36 ನಸುನಗುತ ಹರಿ ಚರಣ ವೀಕ್ಷಿಸಿಶಶಿಮುಖಿ ಸೀತೆ ಆನಂದದಿಂದಾಮಿಸಣಿಯಂತೊಪ್ಪುವ ಅರಿಶಿನೆಣ್ಣೆಯಾಎಸೆವ ಪಾದಕ್ಕೆ ಹಚ್ಚಿದಳಾಗ 37 ಪಾದ ಪದ್ಮಕ್ಕೆ ಎರಗಿಪಾಲಿಸಬೇಕೆಂದಾಳು ಅಂಗನೆ 38 ಕರಗಳ ಪಿಡಿದೆತ್ತಿದನು ರಾಮಾಹರಸಿದ ಮುತ್ತೈದಾಗೆಂದುಪರಮ ಪತಿವ್ರತೆಯೆನಿಸು ಎನುತಾಲಿಹರಿ ಹರಸೀದಾನು ಹರುಷದಲ್ಲಾಗ 39 ಅಂಡಜವಾಹ ಭಗವಂತನುಹೆಂಡತಿಯ ಮುಖವ ನೋಡೆನುತಲಿಗಂಡು ಮಕ್ಕಳ ಘನವಾಗಿ ಪಡೆಯೆಂದುಪುಂಡರೀಕಾಕ್ಷ ಹರಸಿದನಾಗ 40 ಮಂದಗಮನಿಯ ಕುಳ್ಳಿರಿಸಿಇಂದಿರೇಶ ಮುಂಗುರಳಾ ತಿದ್ದಿಎಂದೆಂದಿಗೆ ಅಗಲದಿರೆಂದು ರಾಮ-ಚಂದ್ರಾನು ಹರಸಿದನಾಗ 41 ಭೂಲೋಕದೊಡೆಯ ರಾಘವರಾಯನಶ್ರೀಲತಾಂಗಿಯ ಕುಳ್ಳಿರಿಸಿದನುಬಾಲಕಿಯರೆಲ್ಲಾರು ಗಲಿಬಿಲಿ ಮಾಡಾದಿರೆಂದುಫಾಲಾಲೋಚಾನು ನುಡಿದನು ನಗುತ 42 ಕಂತುಜನಕ ರಾಘವಾ ನಿಮ್ಮಾಪಂಥ ಸಲ್ಲಾದು ಜಾನಕಿಯೊಡನೆಯಂತ್ರವಾಹಕ ಶ್ರೀರಾಮ ಏಳೇಳೆಂದುಕಾಂತೆಯರೆಲ್ಲರು ನುಡಿದಾರು ನಗುತಾ 43 ಭಾಗೀರಥಿ ಪಾರ್ವತಿದೇವಿಬೇಗದಿ ಅರಿಷಿನ ಕೈಲಿ ಕಲಿಸಿಸಾಗರ ಶಯ್ಯನ ಕೈಯೊಳಗಿಟ್ಟುಬಾಗಿ ಸೀತೆಯ ಮುಖಕೆ ಹಚ್ಚೆಂದಾರು 44 ನಿಂದಲ್ಲಿ ನಿಲ್ಲಾದೆ ಚಂಚಳೆ ಲಕ್ಷ್ಮೀಬಂಧು ಬಳಗವನಗಲಿಸುವ ತರಳೆತಂದೆ ಮಕ್ಕಳೊಳಗೆ ಕದನವ ನಿಡುವಂಥಮಂದಹಾಸೆ ಮುಖವ ತೋರೆಂದಾನು ರಾಮಾ 45 ಅಣ್ಣನ ವಂಚಿಸಿ ಬೇಡಿದವಳೇಮನ್ನೆ ಮನ್ನೆಯರಾ ಕಳಿಸಿದವಳೇಚೆನ್ನಾಗಿ ಮನೆಯೋಳಿದ್ದು ಪೋಗುತಚೆನ್ನಾಯಿತೆ ಮುಖವ ತೋರೆಂದಾನು 46 ಭಾಷೆಯನು ಕೊಟ್ಟು ತಪ್ಪಿಸುವಳೆಕಾಸುವೀಸಾಕೆ ವತ್ತಿ ಬೀಳುವಳೆಹೇಸಿಕಿಲ್ಲದೆ ಕುಲಹೀನನ ಮನೆಯೊಳುವಾಸವಾಗಿರುವಾ ಮುಖವ ತೋರೆಂದಾನು 47 ರಾಮಚಂದ್ರಾನು ಅರಿಶಿನ ಗಂಧವಭೂಮಿಜಳಿಗೆ ಹಚ್ಚಿದನಾಗಾಸಾಮಜಗಮನೆಯ ಹಣೆಗೆ ಕುಂಕುಮ ಹಚ್ಚಿಪ್ರೇಮದಿ ಪರಿಮಳ ಪೂಸಿದಾನು 48 ಕುಸುಮ ದಂಡೆಯ ಮಾಡಿದರುಬಾಸಿಂಗವನು ಕಟ್ಟಿದಾರುಭೂಸುರರೆಲ್ಲರು ಮಂತ್ರಾಕ್ಷತೆ ತಳಿದು ನಿ-ರ್ದೋಷನಾಗೆಂದು ಹರಸಿದರು 49 ಇಂದುಮುಖಿಯರೆಲ್ಲಾರು ಕೂಡಿನಂದದಿ ಜಾನಕಿಗೆ ವೀಳ್ಯವನಿತ್ತುಅಂದಮಾಣಿಕದ ಅಕ್ಷತೆಗಳ ತಳಿದುಮಂದರೋದ್ಧರನ ಹರಿಸಿದರು 50 ದೇವಿಯನ್ನೆತ್ತಿಕೊಂಡು ರಾಮದೇವರ ಮನೆಗೆ ಬಾಹೋದು ಕಂಡುಭಾವುಕರೆಲ್ಲಾ ಹೆಸರು ಪೇಳೆಂದೆನುತದೇವಿ ರಘುನಾಥನೆಂದು ಪೇಳಿದಳಾಗ 51 ಇಂದುಮುಖಿಯರೆಲ್ಲಾರು ಕೂಡಿಇಂದಿರೇಶಾನೆ ಹೆಸರು ಪೇಳೆನಲುಎಂದಾ ಮೇಲೆ ಜಾನಕಿಯೆಂತೆಂದುಮಂದರಧರನು ನುಡಿದನಾಗ 52 ಸತಿಪತಿಯರಿಬ್ಬರು ಕೂಡಿಅತಿಶಯದಲಿ ನಮಸ್ಕರಿಸಿದಾರುಕ್ಷಿತಿಯ ಸುರರಿಗೆ ಲೀಲೆಯ ತೋರಿದ ದೇವಾಪತಿತ ಪಾವನ್ನ ಎನ್ನ ಸಲಹು ಎಂದಾನು 53 ಈ ಕಥೆಯನು ಆದರದಿಂದಾ ಬರೆದು ಹೇ-ಳಿ ಕೇಳುವ ಜನರಾಶ್ರೀಕಾಂತನೊಲಿದು ಕರುಣಿಸುವ ತಾ ಸಿದ್ಧನೇಮದಿಂದಾ ಪಾಡಿರಿ ಜನರು 54 ಕುರುಡಾನು ಈ ಕಥೆಯಾನು ಕೇಳಿದರೆಕರುಣದಿಂದಾಲಿ ಕಂಗಳ ಬರಿಸುವಶರಣವತ್ಸಲ ತನ್ನ ಶರಣರೊಳಿಟ್ಟುಪರಿಪಾಲಿಸುವನು ಶತಸಿದ್ಧ 55 ಸಿರಿ ಒದಗುವದುದಾರ ಇಲ್ಲದ ಬ್ರಹ್ಮಚಾರಿ ತಾ ಕೇಳಲುನಾರಿಯ ಸಹಿತೆ ವಾಸಿಸುವನು 56 ಉದ್ಯೋಗ ಇಲ್ಲದವನು ಕೇಳಿದರೆಸದ್ಯ ಐಶ್ವರ್ಯ ಒದಗುವದು ಸಿದ್ಧಮುದ್ದು ಸುತರಿಲ್ಲದ ಸ್ತ್ರೀಯು ಕೇಳಲುಬುದ್ಧಿವಂತ ಸುತರಾಗುವರು ಸಿದ್ಧ 57 ಮೂರ್ತಿ 58 ಕಮಲ ಧರಿಸಿಪ್ಪಪಾವನ ಮೂರುತಿ ಹೃದಯಾದಲ್ಲಿದೇವಿ ಸಹಿತವಾಗಿ ಕಾವನು ಕರುಣಾದಿನೀವೆಲ್ಲಾರು ತಿಳಿರಿ ಜನರು 59 ಜಾಹ್ನವಿ ಜನಕನುಜಯ ಜಯವೆಂದು ಮಂಗಳವ ಪಾಡೇ 60
--------------
ಮೋಹನದಾಸರು