ಒಟ್ಟು 1255 ಕಡೆಗಳಲ್ಲಿ , 103 ದಾಸರು , 1013 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎಂತು ರಕ್ಷಿಪೆ ಎನಗೆಂತು ಶಿಕ್ಷಕರಿಲ್ಲ ಪ ಸಕಳ ಸಂಶಯಗಳ ವಿಕಳವ ಮಾಡಿಸಿ ಅಕಳಂಕ ಮತಿ ಸೋಮ ಸುಕಳ ಮಾಡುವರಿಲ್ಲ 1 ಸಂತತ ನಿನಗೇನು ಅಂತರ ಸ್ಥಿತಿಯೆಂದು ಚಿಂತಿಪ ಬಂಧು ಆದ ಸಂತ ಜನರ ಕಾಣೆ 2 ಪರಿಪರಿ ಬಗೆಯಿಂದ ಪರತತ್ವಗಳನು ಅರಿದು ತಿಳಿಪದ್ಯಚ್ಚರಿಪರು ಎನಗಿಲ್ಲ3 ತುತಿ ಮಾಡಿ ಕೆಲರು ಸನ್ಮತಿಯಾಗೊಡಿಸುವರು ಕ್ಷಿತಿಯೊಳಗೆನಗುಪಕೃತಿಯ ಮಾಡುವರಿಲ್ಲ 4 ಹಲವು ಪರಿಯಲೆನ್ನ ಸಲಹುವ ಗುರುದೈವ ಕುಲಪ ವಾಸುದೇವವಿಠಲ ನೀ ಕರುಣಿಸೊ 5
--------------
ವ್ಯಾಸತತ್ವಜ್ಞದಾಸರು
ಎಂಥ ಆಟವಿದು ಕ್ಷಿತಿಜಪತಿದೆಂಥ ಆಟವಿದು ಪ ಎಂಥ ಆಟ ಶ್ರೀ ಕಂತುಜನಕ ಭ ಕ್ತಾಂತರಂಗ ಸುರಚಿಂತಾಮಣಿಯೇ ನಿನ್ನದೆಂಥ ಅ.ಪ ಮಡುವಿನೊಳಡಗಿರುವ ಉರಗನ ಹೆಡೆಮೆಟ್ಟಿ ನಾಟ್ಯಮಾಡುವ ಸಡಗರದಲಿ ಗೊಲ್ಲ ರ್ಹುಡುಗರ ಕೂಡಿಸಿ ಒಡನೆ ಬಿಲ್ಲಿನಾಟ ರಚಿಸಿ ಮಧುರಪುರ ಬಿಡದೆ ಸೇರಿ ಗಡಕಡಿದು ಮಾವನ ಶಿರ ತಡೆಯದೆಮನಪುರಪಥವ ಪಿಡಿಸಿದ್ದು 1 ಗೋವಳರೊಡಗೂಡಿ ಗೋವುಗಳ ಕಾಯಲ ಡವಿಸೇರಿ ಮಾಯವೃಷ್ಟಿ ಅತಿಭರದಿ ಗೈಯಲಾಗ ಗೋವರ್ಧನ ಗಿರಿಯೆತ್ತೆ ಏಳುದಿನ ಗೋವುಗಳನು ಮತ್ತು ಗೋವಳರೆಲ್ಲರ ಜೀವ ಸಮಾನಮಾಡಿ ಪ್ರೇಮದಿ ಸಲಹಿದ್ದು 2 ಎಷ್ಟು ಕ್ಷೀರ ನೀಡೆ ಜನನಿಗಿನ್ನಿಷ್ಟೆಂದ್ಹಟ ಮಾಡೆ ಸಿಟ್ಟಿನಿಂದ ತಾಯಿ ಕಟ್ಟಲು ಒರಳಿಗೆ ಅಟ್ಟಹಾಸದಿ ಡುರುಕಿಟ್ಟು ನಡೆದು ಶಾಪ ಪಟ್ಟು ಪಟ್ಟಣಮುಂದೆಷ್ಟೋಕಾಲದಿಂದ ಕಷ್ಟಪಡುವರ ದಯದೃಷ್ಟಿಯಿಂ ಸಲಹಿದ್ದು 3 ದುರುಳ ಭಸ್ಮನಂದು ಹರನಿಂ ಉರಿಹಸ್ತವನು ಪಡೆದು ಪರಮಪಾಪಿ ವರ ಕರುಣಿಸಿದವನಿಗೆ ಮರುಳಮಾಡವನ ಕರವೆ ಅವನ ಮೇ ಲ್ಹೊರೆಸಿ ಉರುವಿಸಿ ಹರನ ರಕ್ಷಿಸಿದ್ದು 4 ಬತ್ತಲೆ ಪುರಗಳನ್ನು ಪೊಕ್ಕು ನೀ ಸತಿಯರ ವ್ರತಗಳನು ಹತಗೈದು ತ್ರಿಪುರದ ಪಥಪಿಡಿಸೆಮಪುರ ಹಿತದಿಂ ಸುರಗಣಕತಿಸೌಖ್ಯವ ನಿತ್ತು ಜತನಗೈದಿ ಸಿರಿಪತಿಯ ಶ್ರೀರಾಮನೆ ಸತತದಿಂಥ ಮಹಪತಿತ ಮಹಿಮದಿಹ 5
--------------
ರಾಮದಾಸರು
ಎಂಥ ಪಾಪವನು ಮಾಡಿರುವೆನೋ ಶ್ರೀಹರಿಯೇಇಂಥ ದುರ್ದೆಸೆಗೆನ್ನ ಎಳೆತಂದು ಬಿಡಲಿಕ್ಕೆ ಪ ಉದಯ ಕಾಲದೊಳೆದ್ದು ಉದರ ಪೋಷಣೆಗಾಗಿಹದವನರಿಯದೆ ಬಳಲಿ ಅಂತಿಂತು ಬಡೆದಾಡಿಬದುಕು ತಂದೊಡಲ ಹೊರಕೊಂಡು ಸಲೆನನ್ನಪದವ ನೆನೆಯಲು ಸ್ವಲ್ಪ ಸಹ ವೇಳೆ ಸಿಗದಂತೆ 1 ಹಿಡಿದ ಕಾರ್ಯಗಳೆಲ್ಲ ಬಿಡದೆ ನಿಷ್ಫಲವಾಗಿಒಡವೆ ಇಲ್ಲದ ಬರಿಯ ಒಡೆತನಕೆ ಅಣಿಮಾಡಿಮಡದಿ ಮಕ್ಕಳ ಬಿರುಸು ನುಡಿಗೇಳಿ ಮನನೊಂದುಸುಡುಬಾಳ್ವೆ ಇದನೆಂದು ಮುಡುಕುವಂದದು ಗೈಸಿ 2 ನಂಬಿದವರನು ಹರಿಯು ಬೆಂಬಿಡನು ಎಂದೆಂದುಎಂಬ ಬಿರುದನು ತೊರೆದು ಇಂಬುಗೊಡದಿರಲಿಕ್ಕೆಅಂಬುಜಾಕ್ಷನೆ ನಿನಗೆ ಸಂಬಂಧವಿರದೇನುಹಂಬಲಿಪ ದುಃಸ್ಥಿತಿಗೆ ತುಂಬ ತಂದಿಡಲಿಕ್ಕೆ 3 ಅಣುಗರಿಗೆ ಉಣಿಸಲಿಕೆ ಹಣವೆತ್ತ ಗಳಿಸಲಿಫಣಿಶಯನ ನಿನಗಿನ್ನು ಗುಣವೆತ್ತ ತೋರಿಸಲಿಮಣಿಗಳನು ಎಣಿಸುತ್ತ ಪ್ರಣವೆತ್ತ ಧೇನಿಸಲಿಹಣಿವ ಭವದೊಳು ಸಿಲುಕಿ ಕ್ಷಣವು ಸಹ ಸಿಗದಾಯ್ತು 4 ಬಾಳಿನೊಳು ಸೌಖ್ಯವೇ ಆಳವೈಶ್ವರ್ಯವೆತೋಳಿನೊಳು ದಾಢ್ರ್ಯವೆ ಚಿತ್ತದೊಳು ಸ್ಥೈರ್ಯವೆಹೇಳು ಗದುಗಿನ ವೀರನಾರಾಯಣನೆ ಮಣಿವೆ 5
--------------
ವೀರನಾರಾಯಣ
ಎಂಥ ಪಾಪಿ ನಾನು ಹರಿ ಹರಿ ಪ ಕರ್ಮ ತಿಂತಿಣಿಗಳ ಬಾಧೆಗಳನು | ಅಂತ್ಯಗಾಣದಾದೆನಯ್ಯ ಅ.ಪ ಪರಹಿತಾರ್ಥ ಮನದೊಳೆಣಿಸದೆ || ನರಕದುಃಖದೊಳು ಗೋಳಿಡಲು | ಬರುವರಾರು ಕಾಣದಿರಲು 1 ಪರ ಇರುತ ಮಾಯಾಬಲೆಯೊಳಗೆ ಬಿದ್ದೆ || ಕರೆದರಾರು ಬಾರದಿನಿತು | ಪರಿಯ ಭವಕಿಲ್ಬಿಷವನುಣುವ 2 ಶ್ವಾನನಂತೆ ನಾನು ತೊಳಲಿದೆ || ತಾನು ತನ್ನದೆಂದಧರ್ಮ ನಾ | ಏನನೆಂದರು ಕೇಳರಯ್ಯ 3 ಅನ್ಯರೆಂದು ಪರರ ನಿಂದಿಸಿ | ಪುಣ್ಯಹೀನನಾದೆನಯ್ಯ 4 ಸರ್ವವಿಧದಿ ಭಜಿಸಿ ನಿಜ | ಸರ್ವೇಶ ಶ್ರೀನಿವಾಸನೆನದೆ 5
--------------
ಸದಾನಂದರು
ಎಂಥ ಶೂರನೊ ರಾಮ ಎಂಥ ಧೀರನೊ ಪ ಕಂತುಹರನ ಧನುವನೆತ್ತ ಪಂಥದಿಂದ ಮುರಿದು ಬಿಸುಟ ಅ.ಪ. ಹಲವು ಶೂರರಾಜರದನು ಚಲಿಸಲಾಗದ ಧನುವ ಸುಲಭದಿಂದಲೆತ್ತಿ ಮುರಿದು ಲಲನೆ ಸೀತೆಯೊಲಿಸಿದವನು 1 ಸಕಲ ಕ್ಷತ್ರಿಯರನು ಗೆಲಿದು ಪ್ರಕಟನಾದ ಪರಶುರಾಮ ಶಕುತಿಯನ್ನು ತಾನು ಪರಮ ಯುಕುತಿಯಿಂದ ಗೆಲಿದು ಬಂದ 2 ಸಾಲು ಶಿರನ ಕೀಟವೆಂದು ಬಾಲದಲ್ಲಿ ತಂದ ವೀರ ವಾಲಿಯನೇಕ ಬಾಣದಲಿ ಲೀಲೆಯಿಂದಲಿರಿದ ಜಾಣ 3 ಹತ್ತನಾಲ್ಕು ಲೋಕಗಳನು ಸುತ್ತಿಗೆಲಿದು ಖ್ಯಾತನಾದ ಹತ್ತು ತಲೆಯ ದುಷ್ಟನನ್ನು ಕತ್ತು ಕಡಿದು ಕೆಡಹಿದವನು 4 ರಾಸಿ ದೈತ್ಯರನ್ನು ಕೊಂಡು ದೇಶವನ್ನು ಉದ್ಧರಿಸಿದ ವಾಸವಾದಿ ಸುರನುತ ರಂ- ಗೇಶವಿಠಲರೇಯನವನು 5
--------------
ರಂಗೇಶವಿಠಲದಾಸರು
ಎಂಥವ ನಿವನಮ್ಮಾ ಬಾಲಕನಂತಿಹ ಗೋಪೆಮ್ಮಾ ಎಂಥವನಿವ ತನ್ನಂತತ ನ್ನಂತದೋರ ಗುಡದ ನಂತ ಮಹಿಮ ನರಕಾಂತಕ ದೇವಾ ಪ ವಾರಿಯೊಳಗ ಮನವಾರಿ ಕ್ರೀಡಿಸುತಿರೆ ಘೋರ ಪ್ರವಾಹದಿ ತೀರದಲೆಮ್ಮಾ ಆರು ಅರಿಯದಂತೆ ಸೀರೆನೆಗೆದು ಕೊಂಡು ಗಾರು ಮಾಡಿದ ಮರ ಸೇರಿದ ಕಾಣಮ್ಮಾ ನಾರೇರೆಲ್ಲರು ಕೂಡಿ ಸೀರೆ ಬೇಡಲು ಬಿಟ್ಟು ನೀರ ಮುಗಿದು ಕೈಯ್ಯದೋರೆರಡೆನವಾ 1 ಪುಣ್ಯ ಚರಣೆಸಳ ಗಣ್ಣ ಜಲಧರದ ಬಣ್ಣದ ಲೋಪ್ಪವ ಸಣ್ಣಪನೆಂದು ಬಣ್ಣಿಸಿ ಕರುವುತ ಹೆಣ್ಣೆಂದೊಪ್ಪುವ ತಿಣ್ಣ ಮೊಲೆಗಳನು ಉಣ್ಣೆಂದೂಡಿದಾ ಸಣ್ಣಿಸಿ ಕಳೆದ ಮುಕ್ಕಣ್ಣನ ಸಹಿನು2 ಇಂದು ವದನೆಯರು ಮುಂದಕ ಕದವನು ತಂದಿಕ್ಕಿ ಪೋಗೆರೆ ಮಂದಿರದಿಂದಾ ಸಂದಿಸ್ಯಾಗಳೆ ಆಂದದಿ ಗೋವಳ ವೃಂದ ನೆರಹಿಕೊಂಡು ಬಂದು ನೋಡಮ್ಮಾ ಛಂದದಿ ಬೆಣ್ಣೆಯನಿಂದು ಸೇವಿಸುತಿಹ ತಂದೆ ಮಹಿಪತಿ ನಂದನೋಡಿಯನು3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಎಂಥಾ ಪುಣ್ಯ ಎಂಥಾ ಭಾಗ್ಯ ಪ ಕಂತು ಜನಕ ಶ್ರೀಕಾಂತನ ದರುಶನ ಅ.ಪ ಜಗಜಗಿಸುವ ದಿವ್ಯಾಭರಣಂಗಳ ಸೊಗಸಿಲಿ ಧರಿಸುತ ನಗುವನ ದರುಶನ 1 ಹೇರು ಫಲಗಳನು ಸೂರೆಯ ಮಾಡುವ ಚಾರುವದನ ನಮ್ಮ ಶೌರಿಯ ದರುಶನ 2 ದೇಶ ತಿರುಗಿ ಆಯಾಸವೇತಕೆ ಶ್ರೀಶ ಪ್ರಸನ್ನ ಶ್ರೀ ಕೃಷ್ಣನ ದರುಶನ 3
--------------
ವಿದ್ಯಾಪ್ರಸನ್ನತೀರ್ಥರು
ಎಂದಿಗಾದರೂ ನಾನು ಮರೆಯೆ ಗುರುವಿನತಂದು ಪೂಜಿಸು ತ್ರಿನಯನ ಪ್ರಾಣದೊಡೆಯನ ಪ ಅಂಬು ಹೂಡಿದ |ತಾಮಸದ ಗುಣಗಳನು ಕಡೆಗೆ ಮಾಡಿದರಾಮ ರಾಮ ಎಂಬ ಬೀಜ ಮಂತ್ರ ನೀಡಿದ 1 ಕಾಣ ಬಂತು ಜಗವು ಎನಗೆ ರಾಮರೂಪವುತಾನು ತಾನೆ ಉದಯವಾಯ್ತು ಜ್ಞಾನದೀಪವು |ಏನು ಪೇಳಲಿ ಕರಗಿ ಹೋಯ್ತು ಮನದ ತಾಪವುಸ್ವಾನುಭಾವದಲಿ ನಾಸ್ತಿ ಪುಣ್ಯಪಾಪವು 2 ಎರಡು ಪಕ್ಷ ಮೀರಿಹ ಗುಣಾತೀತನಪರಬ್ರಹ್ಮ ಪರಂ ಜ್ಯೋತಿ ಸದೋದಿತನ |ಕರುಣಸಿಂಧು ತಂದ ಜ್ಞಾನಬೋಧ ತಾತನಹರುಷ ಪೂರ್ಣವಾಗಿ ಸುಖವ ಕೊಡುವ ದಾತನ 3
--------------
ಜ್ಞಾನಬೋದಕರು
ಎಂದಿಗೆ ಕಾಂಬುವೆ ನಿನ್ನ ಚರಣವ ಪತಿ ಘನ್ನ ಪ ಪರಧನ ಪರಸತಿಯರನು ನಾ ಬಯಸುತ ಸಿರಿಯರಸ ನಿನ್ನ ಮರೆದು ಪರಮ ನೀಚನೆಂದೆನಿಸಿರುವೆ1 ಅರಿತು ಅರಿಯದಂತೆ ದುರಿತಗಳನು ಮಾಡಿ ಗುರು ಹಿರಿಯರನು ನಿಂದಿಸಿ ಗರುವದಿಂದಲಿ ಚರಿಸುತಿರುವೆ 2 ಸರುವಂತರ್ಯಾಮಿ ಕರುಣಾಕರನಾದ ಸಿರಿ ರಂಗೇಶವಿಠಲ ನಿನ್ನ ಅರೆಕ್ಷಣ ಸ್ಮರಿಸದಿರುತಿರುವೆ 3
--------------
ರಂಗೇಶವಿಠಲದಾಸರು
ಎಂದು ಕಾಣ್ವೆನೊ ಇಂದಿರೇಶನ ದಿವ್ಯಚರಣ ಎಂದು ಕಾಣ್ವೆನು ಪ ಎಂದು ಕಂಡಾನಂದಿಸುವೆನು ಮಂದರೋದ್ಧರ ಸಿಂಧುಶಾಯಿಯ ಸುಂದರ ಪಾದಾರವಿದಂಗಳನು ನಿಂದು ಮನದಣಿ ನೇತ್ರದಿಂದ ಅ.ಪ ದನುಜಾರಿಯ ಘನಮಹಿಮೆ ಜನಕಜೆಯ ಪ್ರಾಣಪ್ರಿಯನ ಮಿನುಗುವ ದಿನಮಣಿಕೋಟಿತೇಜೋಮಯನ ಘನಕೋಮಲ ನಿಜರೂಪ ಕಣ್ಣಿಲಿಂ ನೋಡ್ಹಿಗ್ಗುವ ದಿನ 1 ಕರಿಯ ಕಾಯ್ದನ ಕರುಣದಿಂದ ತರುಣಿಗ್ವಂದನ ಶರಣೆನುತ ಮರೆಬಿದ್ದವಗೆ ಸ್ಥಿರಪಟ್ಟವ ಕರುಣಿಸಿದನ ಕಾಲ 2 ಪಕ್ಷಿಗಮನನ ಲಕ್ಷ್ಮೀನಾಥ ಸಹಸ್ರಾಕ್ಷಶಯನನ ಲಕ್ಷವಿಟ್ಟು ಭಕ್ತರನ್ನು ರಕ್ಷಿಸಿ ಭಕ್ತವತ್ಸಲನೆಂಬ ನೋಡುವ ಪದವಿ 3
--------------
ರಾಮದಾಸರು
ಎದ್ದಳೀಗಿದಕೋ ಶ್ರೀರಮಣಿ || ಎದ್ದಳೀಗಿದಕೋ ಪ ಮುದ್ದು ಶ್ರೀ ಹರಿಯಾ ತೋಳ ತೆಕ್ಕೆಯಾನುಸಳಿ ಶುದ್ಧ ರಾತ್ರಿಲಿ ಹರಿ ರತಿಯೊಳು ಮಲಗಿ ಅ.ಪ. ಸರಸಿಜ ಸಖನ ಮುಂಬೆಳಗವ ಹರಿಯಲು | ಭರದಲಿ ಹಕ್ಕಿಯು ಕಲಕಲವೆನಲು 1 ನಾರದ ತುಂಬುರ ಮಾಡುವ ಪ್ರಾತ:| ಸ್ಮರಣೆಯ ಗಾಯನ ಧ್ವನಿಯನು ಕೇಳಿ 2 ಕರತಳದಲಿಯವಿಗಳನು - ವರೆಸುತಲಿ | ತೆರೆವುತ ಮುಚ್ಚುತ ಅರೆಗಣ್ಣ ನೋಟದಿ 3 ಬಾಯೊಳಗಿನ ತಂಬುಲವ ನುಗುಳುತ | ಅಧರ ವಕೆಂಪವ ನಡಗಿಸುತ 4 ಕಿರಿಬೆಮರವ ಕೊನೆ ಯುಗುರದಿ ಹಾರಿಸಿ | ಕುರುಳು ಗೂದಲು ಬೈತಲು ನೀಟಾಮಾಡುವ5 ಸಡಲಿದ ಅಲರ ಮುಡಿಯಾತಿದ್ದಿ ಬಿಗಿವುತಾ | ಒಡನೆ ಕೊರಳಾ ಭರಣವ ತಿರುಹುತಲಿ 6 ಎಡಬಲ ಕೊಲದ ವಡ್ಯಾಣ ಸರಿಸಿ ಉಟ್ಟಾ | ಉಡಿಗಿಯಾ ನಿರಯಾ ಮುಂದಕ sಸಾಂವರಿಸುತ7 ಪ್ರಕಟದಿದೋರ್ವ ಕುಚದ ನಖಕ್ಷತಗಳ | ಯುಕುತಿಲಿ ಅಡಗಿಸಿ ಪುಟವನು ಬಿಗಿವುತ 8 ತನ್ನನಂಬಿದ ಬಾಲರ ಹೊರಿಯಲುದಯ | ಕಮಠ ನ್ಯಾಯದಲಿ9 ಈರೇಳು ಜಗದ ಜೀವನ ಪಡೆದ ಜನನಿ | ಗುರುಮಹಿ ಪತಿಸುತ ಪ್ರಭುವಿನ ಅರಸಿ10
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಎದ್ದು ನಿಂತ ಖಳರ ಕೃತಾಂತಹೊದ್ದಿದವರ ಪೊರೆವ ಧವಳಗಂಗೆ ಹನುಮಂತಪ. ಕಪಟ ದಶಮುಖನ ಮದಭಂಜನ ಮಾಳ್ಪೆನೆಂದೆದ್ದು ನಿಂತಸಂಜೀವನವ ತಂದು ಕಪಿಗಳ ಕಾಯ್ದಆಂಜನೆಯ ತನಯ ತಾನೆದ್ದು ನಿಂತ 1 ಗುದ್ದ್ದಿ ರಾವಣನ ಧರೆಯೊಳು ಕೆಡಹಿ ಅರಿಕಟಕಮರ್ದನ ಮಹಾಮಹಿಮನೆದ್ದು ನಿಂತಯುದ್ಧದಲಿ ರಘುಪತಿಯ ಹೊತ್ತು ಭಕುತಿಯ ತೋರ್ದಶುದ್ಧಸ್ವಭಾವ ತಾನೆದ್ದು ನಿಂತ2 ರಾಗಗಳ ಮೇಳೈಸಿ ಹಯವದನನೊಲಿಸಿಯೋಗಿಗಳನುದ್ಧರಿಸಲೆಂದೆದ್ದು ನಿಂತಈಗ ಧರೆಯೊಳು ಸುಜನರ ಮನೋಭೀಷ್ಟಗಳವೇಗದಲಿ ಕೊಡುವೆನೆಂದೆದ್ದು ನಿಂತ3
--------------
ವಾದಿರಾಜ
ಎನ್ನ ಬಿನ್ನಪ ಸಖಿ ಚನ್ನಾಗಿ ತಿಳಿಸೆ ಚನ್ನಿಗರರಸ ಪೋರನ್ನ ಕೃಷ್ಣನ ಮುಂದೆ ಪ ಜನನಿ ಜನಕ ಚಿಕ್ಕತನದಿಂದ ತನಗತಿ ಜನರೊಳು ಘನ ಧರ್ಮ ಧನ ಗಳಿಸಿದರಂತೆ ಅನುಸ್ಮøತಿ ಎನಗಿನ್ನು ಇನಿತಿಲ್ಲವು ಪೇಳೆ 1 ಅಂದಿಂದಾತನ ಮೊಗ ಚಂದಾಗಿ ನೋಡಿಲ್ಲವೆ ಒಂದು ಬಾರೆನ್ನ ತಾನು ಬಂದು ತೋರನೆ ಮಂದಿ ಪೇಳುವದು ಕೇಳ್ಯಾನಂದಿಸುವೆನಲ್ಲದೆ ಮುಂದೇನು ಗತಿಯೆಂದು ಇಂದುಮುಖಿಯೆ ಪೇಳೆ2 ದಿನಗಳೊದಗಿದವೆ ಜನರೆಲ್ಲ ಕಂಡಂತೆ ಬಿನಗು ಮಾತುಗಳನು ಎನಗಂಬರೆ ಎನಗೇನು ಇದರಿಂದ ತನಗೆ ಆ ಕೀರುತಿ ಮನಮುಟ್ಟಿ ನೀ ಪೇಳೆ ವನಜಾಕ್ಷಗೆ ಸಖಿ3 ಪರಿ ಪರಿ ಭೂಷಣ ಸರಿ ಬಂದರೆ ಉಪಚರಿಸುವಂತೆ ದೊರಿಯರ ಸತಿಯರ ನರರ ದೃಷ್ಟಿಯ ಬಾಧೆ ಪರಿಚಾರಕರಿಟ್ಟು ಪರಿಹರಿಸ ಪೇಳೆ 4 ಆ ಸುದತಿಯರನ್ನ ಲೇಸಾಗಿ ಭೋಗಿಸೆ ನಾ ನಸೂಯ ಅದರಿಂದ ಲೇಶ ಮಾಡೆ ವಾಸುದೇವವಿಠಲ ಈ ಸಮಯದಲಿ ಎನ್ನ ತಾ ಸುಮುಖದಿಂದ ನೋಡೆ ನಾ ಸುಖಿ ಸಖಿಯೆ5
--------------
ವ್ಯಾಸತತ್ವಜ್ಞದಾಸರು
ಎನ್ನ ಮನ ಕಂಡಕಡೆಗೆ ಎರಗುತಿದೆನಿನ್ನಲ್ಲಿ ನಿಲಿಸಿ ಕಾಯೊ ಪ ಚಕ್ಷುರಿಂದ್ರಿಯಗಳಿಂದ ಚದುರೆಯರಈಕ್ಷಿಸಿ ನೊಂದೆನೈಯಶಿಕ್ಷಕನು ನೀನೆ ಎನಗೆ ಸಿರಿಯರಸಭಕ್ಕುತರೊಳಿಟ್ಟು ಕಾಯೋ 1 ಶ್ರೋತ್ರೇಂದ್ರಿಯಗಳಿಂದ ಸತತ ದು-ರ್ವಾರ್ತೆಗಳ ಕೇಳಿ ಕೆಟ್ಟೆಕರ್ತೃ ಎನಗೆ ನಿನ್ನಯಾ ಕಥೆಗಳನುಅರ್ಥಿಯಿಂದೆರೆದು ಕಾಯೋ 2 ಘಾಣೇಂದ್ರಿಯಂಗಳಿಂದ ದುರ್ಗಂಧಗಳಘ್ರಾಣಿಸಿ ನೊಂದೆನೈಯಪ್ರಾಣೇಶ ನಿನಗರ್ಪಿತ ಪರಿಮಳವಮಾಣದೆ ಇತ್ತು ಕಾಯೋ 3 ರಸನೇಂದ್ರಿಯಂಗಳಿಂದ ಷಡ್ರಸಗಳನುಹಸಿದು ನಾ ಸೇವಿಸಿದೆನೋಬಿಸಜಾಕ್ಷನೇ ನಿನ್ನಯ ಪ್ರಸಾದವನುಆಸ್ವಾದಿಸೆನಗೆ ದೇವ 4 ತ್ವಚೇಂದ್ರಿಯಂಗಳಿಂದ ತಾಮಸರಸೋಕಿ ನಾ ಕೆಟ್ಟೆನೆಯ್ಯಕಾಕು ಮಾಡದೆ ಎನ್ನನು ಸಿರಿಕೃಷ್ಣಸಾಕಾರನಾಗಿ ಸಲಹೋ 5
--------------
ವ್ಯಾಸರಾಯರು
ಎನ್ನನು ನೀ ಜರೆವೆ ಜೀವನೆನಿನ್ನನೀ ತಿಳಿದೆನೆಂದೂಮುನ್ನ ಮಾಡಿದ ಪುಣ್ಯಕರ್ಮಂಗಳೆನ್ನಿಂದ ಮನ್ನಿಸದುಪಕಾರವಾ ಜೀವಾ ಪದೇಹವು ಹೇಯವೆಂಬೆ ಮತ್ತೀಗದೇಹದೊಳಿರುತಿರುವೆದೇಹದಾಧಾರದಲ್ಲೀ ಧ್ಯಾನಿಸಿಸೋಹಂ ಭಾವನೆ ಬಂದುದೂಉಹಾಪೋಹಗಳಲ್ಲಿ ಚದುರನು ನಾನೆಂಬೆಓಹೊ ನಾನಿಲ್ಲವೆ ಜೀವಾ 1ಚಿತ್ತೆ ತಾ ಪ್ರಕೃತಿಯಾಗೀ ಭೂತದಮೊತ್ತವೆಂದೆನಿಸಿತಲ್ಲೈಮತ್ತೆ ಭೂತಂಗಳವೂ ನಾಲ್ಕುಳ್ಳತತ್ವವಿಪ್ಪತ್ತಾುತುಹತ್ತಿಂದ್ರಿಯಂಗಳಿಂದ ವಿಕರ್ಮಗಳು ಪುಟ್ಟಿಮುತ್ತೆರನಾುತಲ್ಲೈ ಜೀವಾ 2ಕನಕವೆ ಕುಂಡಲಾದಿ ಭೂಷಣಭಣಿತೆಯ ತಾಳಿರಲುಕನಕವಲ್ಲವೆ ಭೂಷಣ ಯೆಣಿಸಲುಚಿನುಮಯಾತ್ಮಕನಿಂದಲೆಜನಿಸಿ ದೃಶ್ಯತ್ವದಿ ತೋರಿದಡೇನಾುತುತನುವಾತ್ಮನಲ್ಲವೇನೈ ಜೀವಾ 3ಮಾಡಿದ ಉಪಕಾರವ ಮರೆಯುವಮೂಢಗೆ ನರಕವೆಂದುಆಡದೆ ಶೃತಿನಿಕರ ನೀನದನೋಡದೆ ನುಡಿಯುತಿಹೆಕೂಡಿಕೊಂಡೆನ್ನನು ನಿಜದೊಳು ಬೆರೆದರೆಪ್ರೌಢ ನೀನೆನಿಸಿಕೊಂಬೆ ಜೀವಾ 4ಕಾರ್ಯಕಾರಣ ರೂಪವಾ ನೋಡಲುಕಾರ್ಯಕಾರಣವಲ್ಲವೆಸೂರ್ಯನಿಂದಾದುದಕ ಬೆರೆಯದೆಸೂರ್ಯನ ಮರಳಿ ನೋಡೂಧೈರ್ಯಶಾಲಿಯೊಳಿಪ್ಪ ಧೈರ್ಯತ್ವವಾತನವೀರ್ಯವಲ್ಲವೆ ನೋಡಲೂ ಜೀವಾ 5ರೂಪನಾಮಗಳೆರಡೂ ಸತ್ತಾನುವ್ಯಾಪಿಸಿ ಜಗವಾದುದುದೀಪದೊಳಗೆ ಕಾಳಿಕೆ ತೋರ್ಪಂತೆಈ ಪರಿಯಲಿ ಮಾಯೆಯುವ್ಯಾಪಾರಂಗಳನುಪಸಂಹರಿಸಲು ಕಾಯವ್ಯಾಪಕನೊಳು ನಿಂದುದೂ ಜೀವಾ 6ಪೊಳೆದೆನು ನಾ ಮೊದಲೂ ಆಮೇಲೆಪೊಳೆದೆ ನೀ ಪ್ರತಿಫಲಿಸಿಜಲಗತ ಪ್ರತಿಬಿಂಬವೂ ನಿಜವಲ್ಲದಳಿವಂತುಪಾಧಿುಂದಾನಿಲುವುದು ನಿಜಬಿಂಬವಾಭಾಸ ನೀ ಪುಸಿನಿಲುವೆ ನಾ ನಿಜದೊಳಗೆ ಜೀವಾ 7ಬಂಜೆಯ ಮಗ ನಿಜವೊ ಅವನಿಗೆಮುಂಜಿಯೆಂಬುದು ನಿಜವೋಅಂಜಿಕೆದೋರಿಸಿತು ರಜ್ಜುವುರಂಜಿಸಿ ಸರ್ವನಾಗಿವ್ಯಂಜಿಸಿ ಕರಣದಿ ನಿದ್ರೆಯೊಳಭಂಜಿಸಿ ಮಂಜಿನಂದದಿ ಪೋಪೆಯೈ ಜೀವಾ 8ಇರಿಸಲು ಬೇರೆನ್ನನು ತೆರಹಿಲ್ಲಬೆರೆಸಾತ್ಮನೊಳು ಬಿಡದೆಕಿರಣಂಗಳು ರವಿಯ ಬಿಟ್ಟೊಮ್ಮೆಇರಬಲ್ಲವೆ ನೋಡಲುತಿರುಪತಿನಿಲಯ ಶ್ರೀ ವೆಂಕಟರಮಣನಚರಣನಾನಲ್ಲವೇನೈ ಜೀವಾ 9 ಕಂ||ಇಂತೀ ಪರಿಯಲಿ ಜೀವನನಿಂತಿರುವವನಿಲ್ಲದವನ ನುಡಿವದು ಸಹಜವುಎಂತಾದರು ತನ್ನ ತಿಳಿಯದೆಮುಂತೋರದ ನುಡಿುದೇನೆನೆ ಮುಳಿದಂ ಜೀವಂ
--------------
ತಿಮ್ಮಪ್ಪದಾಸರು