ಒಟ್ಟು 2371 ಕಡೆಗಳಲ್ಲಿ , 107 ದಾಸರು , 1698 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆವ ತಾ ಸುಖವೊ ಮತ್ತಾವನಂದವೊ | ಈ ಉಡುಪಿ ಯಾತ್ರಿ ಮಾಡಿದ ಮನುಜಗೆ ಪ ಮನದೊಳಪೇಕ್ಷಿಸೆ ಅವನೀಗ ಹದಿನಾಲ್ಕು | ಮನುಗಳು ಭೂಮಿ ಆಳುವ ತನಕಾ | ಕನಕ ರಜತಪೀಠ ಗೋಕುಲದಿಂದ | ಸ | ಜ್ಬನ ಮಾರ್ಗದಲ್ಲಿ ಗುಣವಂತ ನೆನೆಸುವ 1 ಒಂದು ಹೆಜ್ಜೆಯನಿಟ್ಟು ಸಾಗಿ ಬರುತಲಿರೆ | ಅಂದೆ ಸುರರೊಳು ಗಣನೆ ಎನ್ನಿ | ಒಂದಕ್ಕೆ ನೂರಾರು ಯಾಗ ಮಾಡಿದ ಫಲ | ತಂದು ಕೊಡುವ ಅಜನಾದಿ ಕಲ್ಪ ಪರಿಯಂತ2 ಅರ್ಧ ಮಾರ್ಗವು ಬರಲು ಬಂದೆ ದಿವಸದಲ್ಲಿ | ಸಾಧರ್À ತ್ರಿಕೋಟಿ ದೇವತೆಗಳಲಿ | ಊಧ್ರ್ವರೇತಸನಾಗಿ ಮಿಂದ ಫಲವಕ್ಕು | ಪರಿಯಂತ 3 ಕ್ಷೇತ್ರದ ಬಳಿಗಾಗಿ ಬರಲು ಅವನ ಏಳು | ಗೋತ್ರ ನೂರೊಂದು ಕುಲದವರು | ಗಾತ್ರವ ಮರೆದು ರೋಮಾಂಚನದಿಂದಲಿ | ಪಾತ್ರವನಾಡೋರು ಮೋಕ್ಷಮಾರ್ಗವ ಸಾರಿ4 ಕರವ ಜೋಡಿಸಿ ನಿಂದು | ಸನ್ನುತಿಸಿ ದರ್ಶನ ಮಾಡಲು | ಕರವ ತಿಳಿದು ಜ್ಞಾನ ಭಕುತಿ ಸಂ | ಪನ್ನ ವಿರುಕುತಿಲಿ ಗತಿಗಭಿಮುಖನಾಹ 5 ಮಧ್ವ ಸರೋವÀರದಲ್ಲಿ ಸ್ನಾನವಗೈದು | ಸಿದ್ಧಾಂತ ಕರ್ಮಗಳನನುಸರಿಸೀ | ಶುದ್ಧಾತ್ಮ ಕೃಷ್ಣನ ದೇವಾಲಯವ ಸಾರೆ | ಪೊದ್ದಿದಾ ಸತ್ಯಲೋಕದ ಸಭೆಯೊಳಗೆ 6 ಕೃಷ್ಣ ಕೃಷ್ಣ ಯೆಂದು | ನವ ವಿಧ ಪೂಜೆಯನ್ನು | ದೃಷ್ಟಿಯಿಂದಲಿ ನೋಡೆ ಅವನೆ ಮುಕ್ತಾ | ಮುಟ್ಟಿ ಪೂಜಿಸುವರ ಸತ್ಪುಣ್ಯ ವಿಜಯ | ವಿಠ್ಠಲ ತಾ ಬಲ್ಲ ನರರೆಣಿಸಲಳವಲ್ಲಾ 7
--------------
ವಿಜಯದಾಸ
ಆವ ತ್ರಾಣವು ಎನ್ನೊಳಿನಿತಿಲ್ಲವಯ್ಯ ಭಾವಜಪಿತ ನೀನೆ ದಯಮಾಡಬೇಕೊ ಪ ಗುಡಿಯ ಕಟ್ಟಿಸಲೆ ನಾ ಒಡುಕುಕವಡೆನಗಿಲ್ಲ ಬಡವರಿಗೆ ಅನ್ನಿಟ್ಟಿಲೆ ಹಿಡಿಧಾನ್ಯವಿಲ್ಲ ಕೊಡುವೆನೆನೆ ಧರ್ಮವ ಪಡೆದು ನಾ ಬಂದಿಲ್ಲ ಬಿಡುವೆನೇ ದು:ಸ್ಸಂಗ ಅಡರಿಹ್ಯರು ರಿಣವು 1 ದೃಢಧ್ಯಾತ್ಮಗೈವೆನೆನೆ ನಡೆವ ಶಕ್ತ್ಯೆನಗಿಲ್ಲ ಮಡಿಮಾಡ್ವೆನೆನೆ ಮನವು ತಡೆವಶಕ್ತಿಲ್ಲ ಸುಡಲೆ ಕಾಮಾದಿಗಳು ತೊಡರಿಹ್ಯದು ಸಂಸಾರ ನುಡಿಯಲೆ ಸತ್ಯ ಸದಾ ಬಡವನಾಗಿಹೆನು 2 ಒಡೆಯ ಶ್ರೀರಾಮ ನಿನ್ನಡಿಯ ಗುರುತರಿಯೆ ಕಡುಮೂರ್ಖ ಜನ್ಮವನು ಪಡೆದಿಹೆನು ಜಗದಿ ಒಡೆಯ ಸರ್ವಕೆ ನೀನೆ ಜಡಮತಿಯು ಗಡ ಕಡಿದು ದೃಢಭಕ್ತಿ ಸುಖವಿತ್ತು ಪಿಡಿದು ಸಲಹಯ್ಯ 3
--------------
ರಾಮದಾಸರು
ಆವ ನ್ಯಾಯವೋ ಭಾವಜರಿಪುವಿನುತ ನಿಂದು ದಾವ ನ್ಯಾಯವೊ ಪ ಆವ ನ್ಯಾಯವೋ ದೇವ ದೇವ ಮಾವಕಂಸಜೀವಘಾತಕ ಅ.ಪ ಕಪ್ಪು ವರ್ಣನು ಭಕ್ತಜನರ ಲ್ಲಿರ್ಪೆ ಸದಾ ನೀನು ನಿ ನ್ನ ಪಾದದಿ ತಪ್ಪು ಎಲ್ಲನು ಒಪ್ಪಿಬಂದಿಹ್ಯ ಭಕ್ತಜನರ ತಪ್ಪು ಒಪ್ಪಿ ಕ್ಷಮಿಸಿ ದಯದಿ ದುರಿತ ನಿವೃತ್ತಿಗೈದು ಅಪ್ಪಿಕೊಂಡು ಸಲಹದಿರುವಿ 1 ತಂದೆ ತಾಯಿ ನೀನು ಎಂದು ನಂಬಿ ಬಂದು ಬಿದ್ದೆನು ನಿನ್ನ ಪಾದಕೆ ಮಂದಭಾಗ್ಯನು ನೊಂದು ಬೆಂದು ಸಂಸಾರವೆಂಬ ಸಿಂಧುವಿನೊಳು ತಾಪಬಡುತ ಬಂದು ಮೊರೆಯಬಿದ್ದ ಕಂದನ ಮಂದರಮಂದಿರ ಸಲಹದಿರುವಿ 2 ನಿನ್ನನರಿಯದ ಅಜಮಿಳನು ಬಿನುಗನೆನಿಸಿದ ಪಾಪಗೈದವ ಗಣನೆಯಿಲ್ಲದ ಕನಿಕರದಿಂದ ವನಿಗೊಲಿದು ಘನಪದವನಿತ್ತು ಪೊರೆದೆ ಚಿನುಮಯಾತ್ಮ ಸಿರಿಯರಾಮ 3
--------------
ರಾಮದಾಸರು
ಆವ ಬಲವಿದ್ದರೇನು - ವಾಸುದೇವನಾ ಬಲವು ನಿಜವಾಗಿ ಇರದನಕ ಪ ನೊಸಲಗಣ್ಣನ ಬಲ ನಾಲ್ಕು ತೆರದ ಬಲತ್ರಿಶುಲ ಡಮರು ಅಗ್ನಿ ಫಣಿಯ ಬಲವುಪಶುಪತಿಯ ರೂಪಿನ ಬಲದ ಶಿಶುಪಾಲನಅಸುರಮರ್ದನ ಕೃಷ್ಣ ಶಿರವ ಛೇದಿಸುವಾಗ 1 ಹರನ ಕರುಣದ ಬಲವು ಸುರರ ಗೆಲಿದಾ ಬಲವುಪರಮ ಶಕ್ತಿಯು ತನ್ನ ಭುಜದ ಬಲವುಧರೆಯನೆತ್ತಿದ ಬಲವುಳ್ಳ ಹಿರಣ್ಯಾಕ್ಷನಶಿರವ ಹರಿ ವರಾಹನಾಗಿ ತರಿವಾಗ2 ಮುನ್ನ ಗೆಲಿದ ಬಲ ಮುಕ್ಕಣ್ಣ ಹರನ ಬಲಘನ್ನ ಲಂಕಿಣಿಯ ಕಾವಲಿನ ಬಲವುತನ್ನ ವಂಶದ ಬಲವುಳ್ಳ ರಾವಣನ ಶಿರವಸನ್ನುತ ರಾಘವ ಪಟ್ಟನೆ ಪಾರಿಸುವಾಗ 3 ಲಿಂಗಪೂಜೆಯ ಬಲ ನಿಶ್ಚಿಂತನಾಗಿಹ ಬಲಹಿಂಗದೆ ಹರನು ಬಾಗಿಲ ಕಾಯ್ದ ಬಲವುಮುಂಗೈಯ ಶಕ್ತಿ ಸಾವಿರ ತೋಳ ಬಾಣನತುಂಗ ವಿಕ್ರಮ ಕೃಷ್ಣ ತೋಳ ಖಂಡಿಸುವಾಗ 4 ಈಸು ದೇವರ ಬಲಗಳಿದ್ದರೆ ಫಲವೇನುವಾಸುದೇವನ ಬಲವಿಲ್ಲದವಗೆದೇಶಕಧಿಕ ಕಾಗಿನೆಲೆಯಾದಿಕೇಶವನಲೇಸಾದ ಚರಣ ಕಮಲದ ಬಲವಿರದನಕ 5
--------------
ಕನಕದಾಸ
ಆವಳಿಗೆ ಪೆಣ್ಣೆಂದು ನುಡಿಯುವರೊ ನರರು ಅವಳೆ ಮುರಿದುತಿನ್ವ ರಕ್ಕಸ್ಯೆಂದೆನ್ನಿರೊ ಪ ಮುದ್ದು ಮುಖವನೆ ತೋರಿ ಬುದ್ಧಿನಾಶನ ಗೈದು ಶುದ್ಧಪದ್ಧತಿ ಕೆಡಿಸಿ ಇದ್ದಾಸ್ತಿಯಳಿದು ಬದ್ಧನೆನಿಸಿ ಮುಂದೆ ಬೇಡಿದ್ದು ಕೊಡದಿರೆ ಬಿಡದೆ ಒದ್ದು ನೂಕ್ವದರಿಯದೆ ಶುದ್ಧ ಮೂರ್ಖರಾಗಿ1 ತಂದೆ ತಾಯಿನಗಲಿಸಿ ಬಂಧುಬಳಗ ದೂರೆನಿಸಿ ಮಂದಿ ಮಕ್ಕಳೊಂದುಗಳಿಗೆ ಹೊಂದಿಇರಗೊಡದೆ ತಂದದ್ದೆಲ್ಲ ತಿಂದು ನಿಂದೆಯಾಡುತ ಯಮನ ಬಂಧಕ್ಕಟ್ಟುವುದರಿಯದೆ ಮಂದಮತಿಗಳಾಗಿ 2 ತನುಮನಧನ ಸೆಳೆದು ಘನತೆನಾಶಿಸಿ ಮುಂದೆ ಬಿನುಗರಲಿ ಬಿನುಗೆನಿಸಿ ತಿನುವುದೊಂದಿನದಿ ಮನದರಿತು ನೋಡದಿರು ಘನಮುಕ್ತಿಯನ್ನು ಕೊಡುವ ವನಜಾಕ್ಷ ಶ್ರೀರಾಮನಂ ಘನನೆಂದರಿಯದಲೆ 3
--------------
ರಾಮದಾಸರು
ಆವಾಹನಆವಾಹನೋಪಚಾರವು ನಿನಗೆ ವಿಭುವೆಆವರಣರಹಿತ ಪರಿಪೂರ್ಣ ಚಿತ್ಸುಖವೆ ಪಹೃದಯಕಮಲದಿ ನೆನೆದು ಪೂಜಿಸುವೆನೆಂದು ಮತ್ತೊದಗಿ ಬಿಂಬದೊಳಿಳುಹಿಯರ್ಚಿಸುವೆನೆಂದುಇದಿರಾಗಿ ನಿಲ್ಲು ಸ್ಥಾಪಿತನಾಗು ಹತ್ತಿರಿರುಹದುಳುನಾಗೆಂದೆನೀ ತಪ್ಪನೆಣಿಸದೆ ಸಲಹು 1ಅಣುಮಹತ್ಪರಿಪೂರ್ಣ ವಾಸುದೇವನೆ ನಿನ್ನಗಣಿಸಿ ನೆಲೆಗಾಣವೀ ಶ್ರುತಿಗಳೆಂಬುದನುಮನದೊಳೆಣಿಸುತಲಿಹೆನು ಸರ್ವರೊಳು ಸಮಬುದ್ಧಿಯನು ಪಾಲಿಸೆಂದು ಬೇಡುವೆನು ಜಗದೀಶಾ 2ಪರಿಪೂರ್ಣನೆಂಬ ಭಾವದಿ ಮನವು ನಿಲದಾಗಿ ಗುರಿಗೈದು ನಿನ್ನ ಮಂಗಳ ಮೂರುತಿಯನುಪರಿಪರಿಯಲುಪಚರಿಸಿ ಸ್ಥಿರಗೈವೆನೀ ಮನವತಿರುಪತಿಯೆ ಸ್ಥಿರವಾಸ ಶ್ರೀ ವೆಂಕಟೇಶಾ 3ಓಂ ಯಮುನಾವೇಗಸಂಹಾರಿಣೇ ನಮಃ
--------------
ತಿಮ್ಮಪ್ಪದಾಸರು
ಆಳ್ವಾರಾಚಾರ್ಯ ಸ್ತುತಿಗಳು 1. ವಿಶ್ವಕ್ಸೇನ ಪ್ರಾರ್ಥನೆ ಶ್ರೀನಾಥಜ್ಞಾಪ್ರಕಾರ ನಡೆಯುವ ಸೂತ್ರವತೀರಮಣ ಮಾನಿತ ಪ್ರದಾನ ಮಂತ್ರೀ ಪೂಜಿಪೆ ವಿಘ್ನೇಶಾ ನಮಿಪೆ ಪ ಬಿಳಿಯುಡೆ ತುಂಬಿದ ತಿಂಗಳ ಬೆಳಗಾ ತೊಳಗುವ ನಾಲಕು ತೋಳುಗಳ ಒಲಿದಿಹ ನಗೆಮೋಗ ವಿಷ್ಣು ನೆನೆವೆ ಸುಲಭದಿ ಕಾರ್ಯವ ಗೈಸುವನೆ1 ದ್ವಿರದವಕ್ತ್ರತಾ ಮೊದಲಾಗಿರುವ ಪರಿಜನ ನೂರ್ವರಿಂದೊಪ್ಪಿರುವೇ ಪರಿಪರಿ ತಡೆಗಳ ತರಿದೋಡಿಸುತ ಪೊರೆ ವಿಶ್ವಕ್ಸೇನಾಶ್ರಿತ ನಾನು 2 ಬಿಡುಗಣ್ಣರ ಬೆಡಗಿನ ಒಡಲುಳ್ಳ ಕುಡಿನೋಟದ ತಾವರೆಗಣ್ಣ ಪಿಡಿದಹ ಶಂಖ ಚಕ್ರ ಗದಾಯುಧ ಒಡೆಯ ಮುಕುಂದ ದ್ವಾರನಿಲಯನೇ 3 ಬೊಮ್ಮ ಭವಸುರರು ನಯದಿಂ ಮೊದಲಾರಾಧಿಪರು ಶುಭ ಫಲದಾಯಕ
--------------
ಶಾಮಶರ್ಮರು
ಇಂಥಾ ಬಾಲನೆಲ್ಲು ಕಾಣೆನೊ ಪ ಉದಿಸಿದೇಳನೆ ದಿನದಿ ತ್ರಿದಶರೊಡನೆ ಕೂಡಿ ಮದಮುಖತಾರಕ | ಸದನವನೇರಿ ಕದನವಗೈಯುತ | ಹದವಿಹ ಶಸ್ತ್ರದಿ ಅಧಮ ದೈತ್ಯನ ಯಮ | ಸದನಕಟ್ಟಿರುವಂಥ 1 ಅಸಿತನ ಶಾಪದಿ | ಅಸುರೆಯಾದದಿತಿಯು ನಿಶಿಚರ ತಮನ ವರಿಸಿಕೊಂಡು ಇರಲು | ಅಸುರ ಹರನು ಖಳ | ನನು ಸೆಳೆಯಲಿಕೆನು-ತಿಸುವದಿತಿಗೆ ಪೂರ್ವ | ದೆಸೆಯನಿತ್ತಿರುವಂತಾ 2 ದುರುಳ ರಕ್ಕಸನಾಶಿ | ಧರಣಿಯೊಳ್ತೊಳಲುವ ದೊರೆ ಸುಧರ್ಮನ ಶಾಪ | ಪರಿಹರಿಸುತಲೇ | ನಿರತ ತನ್ನಯನಾಮ | ಸ್ಮರಿಪ ದಾಸರ ಸದಾ ಪೊರೆಯೆ ಪಾವಂಜೆಯೊಳು | ಸ್ಥಿರವಾಗಿನಿಂತ ತಾ 3
--------------
ಬೆಳ್ಳೆ ದಾಸಪ್ಪಯ್ಯ
ಇದಕೊ ಕಾಶಿಯನು ಮನವೇ ಬೆದಕುಗೊಳ್ಳಲು ಬೇಡ ತೋರುವೆನು ಪ ಬಲ್ಲವನಾದರೆ ಇಲ್ಲಿಯೆ ಕಾಶಿ ಕಲ್ಲೆದೆಯಾದವನಲ್ಲವೆ ದೋಷಿ ಎಲ್ಲವ ತಿಳುಹುವೆ ಚಲ್ವ ಸಂತೋಷಿ ಸೊಲ್ಲ ಲಾಲಿಸಿ ಕೇಳು ಪೇಳ್ವೆ ನಿರ್ದೋಷಿ 1 ಕಾಶಿಯ ದರುಶನವಿಲ್ಲದ ಜನರು ವಿ- ಶೇಷವಾಗಿಯೆ ಇಲ್ಲಿ ನಡೆಕೊಂಬುತಿಹರು ದೂಷಣ ಮಾಡದೆ ಪೋಷಿಸುವವರು ಕಾಶಿಗಿಮ್ಮಡಿಯಾಗಿ ಲೇಸ ಪಡೆಯುವರು 2 ವೇದವನೋದಿದ ವಿಪ್ರನೆ ಕಾಶಿ ವಾದಗಳಿಲ್ಲದ ಸೋದರನೆ ಕಾಶಿ ಆ ಧನ ಕೈಯೊಳು ಇದ್ದರೆ ಕಾಶಿ ಮಾಧವ ಧ್ಯಾನವು ಮನದೊಳು ಕಾಶಿ 3 ಅವ್ವೆ ತಂದೆಯ ಸೇವೆ ಮಾಳ್ಪುದೆ ಕಾಶಿ ದೇವರ ಪೂಜೆಯ ನೋಳ್ಪುದೆ ಕಾಶಿ ಜೀವರಕ್ಷಣ್ಯವ ಮಾಳ್ಪುದೆ ಕಾಶಿ ಭಾವಶುದ್ಧತ್ವದಿ ಇಪ್ಪುದೆ ಕಾಶಿ 4 ಗುರುಗಳಿಗೆರಗುವ ಪರಿಯೊಂದು ಕಾಶಿ ಹಿರಿಯರ ಆಜ್ಞೆಯೊಳಿರುವುದು ಕಾಶಿ ಪರವುಪಕಾರವು ಸ್ಥಿರವಾದ ಕಾಶಿ ಕರೆದು ಮೃಷ್ಟಾನ್ನವನೆರೆವುದು ಕಾಶಿ 5 ಅರಳಿಯ ವೃಕ್ಷವ ನೆಟ್ಟರೆ ಕಾಶಿ ಕೆರೆ ಬಾವಿ ಕಟ್ಟಲು ಇಷ್ಟದ ಕಾಶಿ ಅರವಟ್ಟಿ ನೀರಿರಿಸಲು ದೃಷ್ಟ ಕಾಶಿ ಸಿರಿಲಕ್ಷ್ಮಿಯರಸನ ಕರೆವುದು ಕಾಶಿ 6 ದುಷ್ಟರ ಸಂಗವ ಬಿಡುವುದೆ ಕಾಶಿ ಕಷ್ಟದ ಮಾರ್ಗವ ತೊರೆವುದು ಕಾಶಿ ಶಿಷ್ಟರ ಸೇರುವುದು ಇಷ್ಟದ ಕಾಶಿ ಬೆಟ್ಟದ ಒಡೆಯನ ನೆನೆವುದೆ ಕಾಶಿ 7 ಏಕಾದಶಿ ಉಪವಾಸವೆ ಕಾಶಿ ಆಕಳ ದಾನವ ಮಾಳ್ಪುದೆ ಕಾಶಿ ಬೇಕಾದುದಿದ್ದರೆ ಮನೆಯೆಲ್ಲ ಕಾಶಿ ಕಾಕು ಸೇವೆಯಿಲ್ಲದ ಮನುಜನೆ ಕಾಶಿ 8 ಉದಯದಿ ಸ್ನಾನವ ಮಾಳ್ಪುದೆ ಕಾಶಿ ಪದುಮನಾಭನ ಧ್ಯಾನ ಮೃದುವಾದ ಕಾಶಿ ಕದನವಿಲ್ಲದ ಊರ ನೋಡಲು ಕಾಶಿ ಉದರವು ತುಂಬಲು ಬಡವಗೆ ಕಾಶಿ 9 ರುದ್ರ ದೇವನ ಪೂಜೆ ಇದ್ದಲ್ಲಿ ಕಾಶಿ ವಿಧ್ಯುಕ್ತ ಮಾರ್ಗದಿ ನಡೆವುದು ಕಾಶಿ ಬದ್ಧವಾಗೈವರ ಕಟ್ಟಲು ಕಾಶಿ ಶುದ್ಧವಾದ ಹೆಂಡತಿ ಮುದ್ದಿನ ಕಾಶಿ 10 ಸನ್ಯಾಸ ಮಾರ್ಗವು ಚೆನ್ನಾದ ಕಾಶಿ ಅನ್ಯಾಯವಿಲ್ಲದ ಅರಸನೆ ಕಾಶಿ ಕನ್ಯಾದಾನವು ಮುನ್ನಿನ ಕಾಶಿ ಮನ್ನಿಸಿಕೊಂಡರೆ ತನ್ನಲ್ಲೆ ಕಾಶಿ 11 ಅಧ್ಯಾತ್ಮ ವಿದ್ಯೆಯ ಹೊದ್ದಲು ಕಾಶಿ ಬದ್ಧ ನಡೆನುಡಿ ಇದ್ದರೆ ಕಾಶಿ ಮಧ್ವರಾಯನು ಕುಳಿತಿದ್ದಲ್ಲಿ ಕಾಶಿ ಪದುಮನಾಭನ ನೆನವಿದ್ದರೆ ಕಾಶಿ 12 ದಾನದೊಳಗೆ ಸಮಾಧಾನವೆ ಕಾಶಿ ಮಾನದೊಳಗೆ ಅಭಿಮಾನವೆ ಕಾಶಿ ಸ್ನಾನದೊಳಗೆ ಭಕ್ತಿ ಸ್ನಾನವೆ ಕಾಶಿ ಜ್ಞಾನದೊಳಗೆ ಶುದ್ಧಜ್ಞಾನವೆ ಕಾಶಿ 13 ದೇವರೊಳಗೆ ಸಾಲಿಗ್ರಾಮವೆ ಕಾಶಿ ಜೀವರೊಳಗೆ ಗೋವುಚಯವೆಲ್ಲ ಕಾಶಿ ಹೂವಿನೊಳಗೆ ಬಿಲ್ವಪತ್ರಿಯೆ ಕಾಶಿ 14 ಹಲವು ಮಾತುಗಳೇನೀಪರಿ ಕಾಶಿ ಛಲ ಭಕ್ತಿಯಿದ್ದರೆ ಜಲವೆಲ್ಲ ಕಾಶಿ ಒಲವುಳ್ಳ ವರಾಹತಿಮ್ಮಪ್ಪನೆ ಕಾಶಿ ಕುಲವೃಕ್ಷವೆಂಬುದು ಫಲವಾದ ಕಾಶಿ 15
--------------
ವರಹತಿಮ್ಮಪ್ಪ
ಇದನಾ ಬೇಡಿದವನಲ್ಲಾ ಬುಧರಂತರ್ಯಾಮಿ ಲಕುಮಿನಲ್ಲ ಪ ಪಾಪ ಕಾರ್ಯದ ಪಾಪ ವ್ಯಾಪಿಸಿ ದೇಹದಿ ಲೋಪಗೈಸೋದು ಸತ್ಕರ್ಮ ದೀಪ ನೀನಾಗಿರೆ ಉಪದೇಶಿಸೀ ಭವ ಕೂಪದಿಂದೆತ್ತೆಂದು ಬೇಡಿದೆನಲ್ಲದೆ 1 ವಿಷಯದೊಳ್ ಸಂಚರಿಪ ದೋಷಕಾರಿ ಮನ ಆಶೆಯೊಳು ಪೊಕ್ಕು ನಾಶಗೈಪೋದೆನ್ನ ವಿಶೇಷ ಸಾಧನಗಳ ನೀ ಪೋಷಿಸು ಎಂದು ಬೇಡಿದೆನಲ್ಲದೇ 2 ಸುಧೆ ತಂದ ವಿಜಯ ರಾಮಚಂದ್ರವಿಠಲ ನಿನ ಗೆದುರ್ಯಾರೊ ಪೇಳುವರು ಮುದದಿಂದ ಕೃಷ್ಣಾರ್ಯರೊಳು ಬೇಡಿದೆನಲ್ಲದೇ 3
--------------
ವಿಜಯ ರಾಮಚಂದ್ರವಿಠಲ
ಇಂದಿನ ದಿನವೆ ಸುದಿನ | ಗೋ ವಿಂದನ ಸ್ಮರಣೆಯ ಗೈದುದರಿಂದ ಪ ನಾಳೆ ಏಕಾದಶಿ ಹರಿದಿನವೆನಲಾ ವೇಳೆಗೆ ವುಳಿವೆವೋ ಅಳಿವೆವೋ ಅರಿಯೆವು ತಾಳವಾದ್ಯತಂಬೂರಿಗಳಿಲ್ಲವೆಂ ದಾಲೋಚಿಸೆ ಹರಿಭಜನೆಯು ದುರ್ಲಭ 1 ಗೀತವಿದ್ಯಾಕೋವಿದರಿಹರೆನ್ನುತ ಯಾತರ ದಾಸರ ಪದಗಳು ಎನುತಲಿ ಮಾತನಾಡಿ ಕಾಲವ ಕಳೆದೊಡೆ ಇ ನ್ನಿತರ ಕಾಲವು ದೊರಕುವುದಿಲ್ಲ2 ದಾಸರ ಪದದೊಳಗಿರುವ ಮಹತ್ವವು ಲೇಶವಿಲ್ಲ ಸಂಗೀತ ಸ್ವರದೊಳು ಭಾಸುರಾಂಗ ಮಾಂಗಿರಿಪತಿ ಸಲಹುವ ದಾಸರಪದ ತಾಳಗಳಿಗೊಲಿವಾ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಇಂದಿರಾರಮಣನ ಮಂದಿರದಲ್ಲೆ ನಾ- ರಂದ ತಾ ಬರುತಿರಲು ಕಂಡು ಕೃಷ್ಣನು ಕರೆತಂದು ಮನ್ನಿಸಿ ಬಂದಕಾರಣವೇನೆಂದನು 1 ಕಾರಣವೇನುಂಟು ಕಾರಣಪುರುಷನ ಕಾಣಬೇಕೆಂದೆನುತ ಕಾಮಿಸಿಬಂದೆನೊ ಕೊರಳ ತುಳಸಿ ಮಾಲೆ ನೀಡೊ ನೀ ಎನಗೆಂದನು2 ಏನು ಬೇಡಿದರು ನಾ ಕÉೂಡುವೆನು ನಾರಂದ ಪ್ರಾಣಪದಕ ತುಳಸಿ ನೀಡಲಾರೆನೊ ಮುತ್ತಿನ್ಹಾರವ ಕೊಡುವೆ- ನೆಂದು ಹೇಳುತಿದ್ದನು ಹರಿಯು 3 ನೀಡದಿದ್ದರೆ ನಾನು ಬೇಡಿ ಬಿಡುವನಲ್ಲ ನೋಡಿಕೋಯೆಂದೆನುತ ಆಡಿದ ಮಾತು ತಪ್ಪುವರುಂಟೆ ಶ್ರೀಕೃಷ್ಣ ಹೋಗಿಬರುವೆನೆಂದನು 4 ಸತ್ಯಭಾಮೆಯ ಮನೆ ಹೊಕ್ಕನು ನಾರಂದ ಹೆತ್ತಮ್ಮ ಕೇಳೆನುತ ಸುತ್ತಿಬಂದೆನು ಸುರಲೋಕದ ವಾರ್ತೆಯ ವಿಸ್ತರಿಸ್ಹೇಳುವೆನು 5 ಇಂದ್ರಲೋಕದಲಿ ದೇವೇಂದ್ರ ಶಚಿಯ ಕೂಡ್ಯಾ ನಂದದಿ ಕುಳಿತಿದ್ದನೆ ಅ- ಲ್ಲಿಂದ ಕೈಲಾಸ ಮಾರುದ್ರ ಪಾರ್ವತಿದೇವಿ ಚೆಂದವನ್ವರಣಿಸಲೆ 6 ಸತ್ಯಲೋಕದಿ ಸರಸ್ವತಿ ಕೂಡಿ ಬ್ರಹ್ಮ ಭಾ ಳುತ್ಸವದಿಂದಿದ್ದನೆ ಹಸ್ತಿನಾವತಿಯ ಪಾಂಡವರು ದ್ರೌಪದಿದೇವಿ ಅರ್ಥಿಯ ನೋಡಿ ಬಂದೆ 7 ದ್ವಾರಾವತಿಗೆ ಬಂದೆ ದೇವಿ ನಿಮ್ಮರಸನು ನಾರಿ ರುಕ್ಮಿಣಿ ಸಹಿತ ಭಾಳ ಸಂಭ್ರಮದಿಂದ ಕುಳಿತಿದ್ದ ಕಣ್ಹಬ್ಬವಾಗಿ ನಾ ಬಂದೆನಿಲ್ಲೆ 8 ಕರೆದು ರುಕ್ಮಿಣಿ ಕರದಿಂದೆ ಆಲಂಗಿಸಿ ತೊಡೆಯಮ್ಯಾಲಿಟ್ಟಿದ್ದನೆ ಅರಳುಮಲ್ಲಿಗೆ ತುರುವಿ(ಬೀ) ನಲ್ಲಿಟ್ಟು ನಿನಗಿನ್ನು ಸರಿಯಿಲ್ಲವೆಂತೆಂಬನೆ 9 ಹಾರಪದಕ ಇಬ್ಬರಿಟ್ಟಾಭರಣ ಬ್ಯಾರೆ ಬ್ಯಾರಾಗಿ ತೋರವಲ್ಲೆ ಸೂರ್ಯಚಂದ್ರರು ಕೂಡಿದಂಥ ಮುಖವು ನೋಡಿ ನಾ ಬೆರಗಾಗಿದ್ದೆನೆ 10 ಸತ್ಯಭಾಮೆಯೆ ನಿನ್ನ ಹೆತ್ತ ತಾಯಿತಂದೆ ಮಿರ್ತಾಗಿದ್ದರೆ ನಿನಗೆ ಕೊಟ್ಟರೀ ಕಪಟನಾಟಕ ದಯಹೀನಗಿ- ನ್ನೆಷ್ಟು ನಾ ಸೈರಿಸಲೆ 11 ಒಂದೊಂದು ಗುಣಗಳ ವರಣಿಸಲಿಕ್ಕೆ ಹ ನ್ನೊಂದೊ (ದ್ವ?) ರುಷವು ಸಾಲದೆ ಕಂಡು ಬಂದ್ವಾರ್ತೆಯ ಖರೆಯ ನಾ ಹೇಳುವೆ ಸಂದೇಹ ಮಾಡದಿರೆ 12 ಕೇಳಿ ಸತ್ಯಭಾಮೆ ತಾಳಲಾರದೆ ಮುನಿ ಪಾದದ ಮ್ಯಾಲೆ ಬಿದ್ದು ಹೇಳಿ ಉಪಾಯ ಮುಂದಕೆ ಪೋಗೊ ಶ್ರೀ- ಕೃಷ್ಣ ತಾನೊಲಿದಿರುವಂದದಿ13 ದಾನವಾಂತಕÀನ ನೀ ದಾನವÀ ಮಾಡಲು ದಾವಜನ್ಮಕÀು ನಿನ್ನನು ತಾನಗಲದೆ ಮುಂದೆ ಸೇರಿಕೊಂಡಿರುವೊ ಉಪಾಯ ಹೇಳುವೆನೆಂದನು 14 ರಂಗರಾಯನ ಕರೆತಂದುಕೊಟ್ಟವರಿಗೆ ಹಿಂಗದೆ ಸೌಭಾಗ್ಯವ ಎಂದೆಂದಿಗವರ ರಕ್ಷಿಸುವೋನೆಂದೆನುತಲಿ ಅಂಗನೆಯರನಟ್ಟಿದಳು 15 ದೂತೇರ ಸಹಿತಾಗಿ ಬಂದು ತಾ ಭರದಿಂದೆ ಪ್ರೀತಿಲೆ ಸತ್ಯಭಾಮ ಮಾತುಳಾಂತಕ ನಮ್ಮ ಮನೆಗೆ ಬಾರೆನುತ ಶ್ರೀ- ನಾಥನೆಯೇಳೆಂದಳು16 ಮಡದಿ ರುಕ್ಮಿಣಿ ಭಾಮೆ ಮಂದಿರಕ್ಕೊ ್ಹೀಗುವೆ ಕಡುಕೋಪ ಮಾಡದಿರೆ ತಡೆಯದೆ ನಾಳೆ ಬರುವೆನೆಂದು ಶ್ರೀಕೃಷ್ಣ ಗ- ರುಡನ ಹೆಗಲೇರಿದ 17 ವಾರಕಾಂತೆಯರು ಬಾಜಾರ ಮಧ್ಯದಿ ಸೋಳಸಾವಿರ ಸತಿಯರನೆ ವಾರೆನೋಟದಿ ನೋಡಿ ನಗುತ ಸತ್ಯಭಾಮೆ ಬಾಗಿಲ ಮುಂದಿಳಿದ 18 ಎದುರಿಗೆ ನಿಂತು ತಾ ಚೆದುರೆ ಸತ್ಯಭಾಮೆ ಪದುಮ ಪಾದಕೆ ಎರಗಿ ಮುದದಿಂದ ಮುದ್ದು ಶ್ರೀಕೃಷ್ಣನ ಮುಂಗೈಯ್ಯ ಪಿಡಿದು ತಾ ನಡೆದಳಾಗ 19 ಕೃಷ್ಣರಾಯನೆ ನಿನ್ನ ಕೊಟ್ಟೇನು ದಾ ನವ ಬಿಟ್ಟೆನ್ನ ಅಗಲದಂತೆ ಸತ್ಯಭಾಮೆಯ ನೋಡಿ ನಗುತ ಈ ಕಾರ್ಯ ಅ- ಗತ್ಯಮಾಡೆಂದೆನುತ 20 ಎರೆದು ಪೀತಾಂಬರವುಡಿಸಿ ಮಾಣ Âಕ್ಯದ ಆ- ಭರಣವ ತಂದಿಟ್ಟಳು ತರಿಸಿ ತಾಂಬೂಲ ದಕ್ಷಿಣೆಯನ್ನು ಬ್ರಾಂಬರ ಕÀರೆಸಿದಳಾಕ್ಷಣದಿ 21 ಆಚಾರ್ಯ ನೀವ್ ಬನ್ನಿ ವಾಸುದೇವನ ದಾನ ಈ ಕ್ಷಣದಲ್ಲೆ ಕೊಡುವೆ ನಾಶರಹಿತ ನಮ್ಮ ಮನೆಯೊಳಗಿರಲಿಕ್ಕೆ ಗ್ರಾಚಾರವೇನೆಂದರು 22 ವಿದ್ಯಾರ್ಥಿಗಳು ಬನ್ನಿ ಮುದ್ದು ಶ್ರೀಕೃಷ್ಣನ ವಿಧ್ಯುಕ್ತದಲಿ ಕೊಡುವೆ ಮೂರ್ಜಗದೊಡೆಯ ತಾ ಮಂದಭಾಗ್ಯರ ಮನೇಲಿದ್ದಾನ್ಯಾತಕೆ ಎಂದಾರೆ 23 ಭಟ್ಟರೆ ನೀವ್ ಬನ್ನಿ ಸೃಷ್ಟಿಪತಿಯ ದಾನ ಕೊಟ್ಟು ಬಿಡುವೆನೆಂದಳು ಅಷ್ಟದರಿದ್ರರಿಗಾಲಕ್ಷ್ಮೀವಲ್ಲಭ ದಕ್ಕುವೋನಲ್ಲೆಂದರು 24 ಯತಿಗಳೆ ನೀವ್ ಬನ್ನಿ ಪೃಥಿವಿಗೊಡೆಯ (ನನು) ಹಿತದಿ ದಾನವ ಕೊಡುವೆ ಗತಿಯಿಲ್ಲ ನಮಗೆ ಶ್ರೀಪತಿ ಸಲಹÀಲು ನಿನ್ನ ಪತಿ ಬ್ಯಾಡ ನಮಗೆಂದರು&
--------------
ಹರಪನಹಳ್ಳಿಭೀಮವ್ವ
ಇದಿರುದೋರಿ ಮರೆಯಾದ ಬಗೆುದೇನಯ್ಯಾಸದಯ ವೆಂಕಟದಾಸಾರ್ಯ ವೇಷದಾಳಿ ಗುರುವರ್ಯ ಪತೊಳಲುತಿರೆ ಭವಕೂಪದೊಳು ಮುಳುಗಿ ಮೂಢ ಜನರುಕಳಿವರೆಂತೀಯಾತನೆಯನಳಲುವರೆಂದುತಳೆದು ಕೃಪಾರಸವನ್ನು ತಿಳು' ಭಕುತಿ ವೈರಾಗ್ಯವನುಸುಲಭದಿಂ ಜ್ಞಾನವನರುಪಲೊಲಿದು ಧರೆಯೊಳವತರಿಸಿ 1 ಆ'ರ್ಭಾವಾತಿರೋಭಾವವಾವಗವೂ ಭಕ್ತರ್ಗಾಗಿ ಸ್ವಾಭಾ'ಕವೆಂದು ಪಾರಾಣ ಭಾವವನರಿತೂಸಾವಧಾನಗೈದರೂ ಮನೋ'ಕಾರ ತೊಲಗದೂಕೇವಲಾನಂದ ನಿತ್ಯನಿರಾವಲಂಬ ಸತ್ಯಾತ್ಮಕನೆ 2ಪಲವುಭವದಿಮಾಡ್ದ ಸುಕೃತ ಫಲಿಸಿತೆಂದಿದ್ದೆನೀವರೆಗುತೊಲಗಿ ತಾಪುಣ್ಯವೆಂಬಂತೆ ಚಲಿಸಿ ಚಿತ್ತವೂ ತೊಳಲುತಿದೆ ನಿನ್ನ ಸುಖಮಂಗಳರೂಪು ವಚನಗಳ ನೆನೆದುನೆಲೆಗೊಳಿಪಂದದಿ ಮತಿಯ ತಿಳುಹುವವರಾರೆಮಗಕಟ 3ಹಾನಿ ಧರ್ಮಕ್ಕೊದಗಲು ನಾನುದಿಪೆನೆಂದಭಯವನೀನೊಲಿದಿತ್ತುದಕಾಗಿ ನಾನಾ ರೂಪದೀಜ್ಞಾನ ಮಾರ್ಗವನರು' ಮಾನವರನುದ್ಧರಿಸಿದೆದೀನ ವತ್ಸಲನೆ ುೀಗಲೇನುಕಾರಣ 'ೀ ಸಮಯದಿ 4ಕರದು ಮೂಢರಜ್ಞತೆಯನು ಪರಿದು ಜ್ಞಾನಾನಂದ ಸುಧೆಯಎರದು ಹೊರದೆಯಲೈ ಚಿಕ್ಕನಾಗಪುರದಿವರದ ವಾಸುದೇವಾರ್ಯ ಸದ್ಗುರುವೆ ವೆಂಕಟದಾಸತನುವಧರಿಸಿರೆ ನಂಬಿದ್ದರೆಮ್ಮನತಿ ಪುಣ್ಯವಂತರೆಂಬಂತೆ 5
--------------
ತಿಮ್ಮಪ್ಪದಾಸರು
ಇಂದಿರೆ ಮನೋಹರನ ಪ ಒಂದು ಕ್ಷಣ ತಾಳಲಾರೆ ವಂದಿಸುವೆನೆಲೆ ನೀರೆ ಅ.ಪ ಚಂದ್ರಕಿರಣಗಳುರಿಯಂದದಿ ತೋರುತಲಿದೆ ಮಂದ ಮಾರುತಗೆ ಕಡು ಕುಂದಿದೆನೆ ಮಂದಯಾನೆ 1 ಸೇರಿದ ಸುಖವ ಮರೆಯಲಾರೆನೆ ಸರೋರುಹಾಕ್ಷಿ 2 ಭೂತಳಕಧಿಕವಾದ ನೂತನಾವರಣಪುರಿ ದಾತ ಗುರುರಾಮವಿಠಲ ಯಾತಕೆ ನಿರ್ದಯಗೈದ 3
--------------
ಗುರುರಾಮವಿಠಲ
ಇಂದಿರೇಶನ ಪದದ್ವಂದ್ವಕಮಲ ಭಜಿಪ ಶ್ರೀ ಗುರುವರ ಭೂಪ ಪ. ಬಂದೆನು ನಿಮ್ಮ ಪದ ಸಂದರುಶನಕೀಗ ನೀಗಿರಿ ಭವರೋಗ ಅ.ಪ. ಬಂದವರಯೋಗ್ಯತೆ ಅರಿತಂಕಿತವೀವ | ಕರುಣಾಳುವೆ ದೇವ ನೊಂದೆನೀಗ ಈ ಅಜ್ಞಭವದಿ ಬಿದ್ದು | ಎಂದಿಗೆ ನಾ ಗೆದ್ದು ಇಂದಿರೇಶನ ಹೃತ್ಕಮಲದಲಿ ಕಾಂಬೆ | ಗುರುವೆ ತೋರೆಂಬೆ ಬಂದ ಬಂದ ಕಷ್ಟ ಹಿಂದು ಮಾಡಿ ಪೊರೆದು | ಕೃಪೆಗೈಯ್ಯಲಿ ಬೇಕಿಂದು 1 ಮುಖ ಕಮಲದಿ ಹೊರಡುವ ವಾಕ್ಸರಣಿಗಳು | ಗಂಗಾ ಪ್ರವಾಹಂಗಳು ಅಕಳಂಕದ ತತ್ವಾರ್ಥದಿ ನಾ ಮುಳುಗಿ | ದುರಿತದ ಭವನೀಗಿ ಸುಖ ಸಾರೂಪ್ಯದ ಮುಕುತಿ ಮಾರ್ಗ ಕಂಡೆ | ಭವ ತುಂಡೆ ಭಕುತಿ ಭಾಗ್ಯವ ನಿತ್ಯದಿ ಕರುಣಿಪುದು | ಸುಜ್ಞಾನವ ನೀಡುವುದು 2 ಇಳೆಯೊಳಿಲ್ಲ ಈ ಚರ್ಯೆ ತೋರುವವರು | ಉದ್ಧರಿಪರಿನ್ಯಾರು ಪರಿ ಕರುಣಿಪುದು | ನ್ಯಾಯವೆ ನೂಕುವುದು ಪೊಳಲೊಡೆಯನ ಪರಿಪರಿ ಮಹಿಮಾದಿಗಳ | ರೂಪ ಜಾಲಗಳ ತಿಳಿದಾನಂದಪಡುವ ಗುರುವರೇಣ್ಯ | ಪೊರೆಯ ಬೇಕೀಗೆನ್ನ 3 ಕರಿಗಿರಿ ನರಹರಿ ಪದಕಮಲಗಳನ್ನು | ಹೃದ್ವನಜದೊಳಿನ್ನು ಪರಿಪರಿ ಪೂಜಿಸಿ ಪರಮಾದರದಲ್ಲಿ | ಸಂಕರ್ಷಣನಲ್ಲಿ ಇರಿಸಿಹ ಮನವನು ನರರಿಗೆ ತೋರದಲೆ | ಚರಿಸುವ ಈ ಲೀಲೆ ಅರಿತು ಪೇಳೆ ಈ ಪಾಮರಳಿಗೆ ಅಳವೇ | ಆನಂದದಲಿರುವೆ 4 ತಂದೆ ಮುದ್ದು ಮೋಹನವಿಠಲ ದೇವ | ಹೃದ್ವನಜದಲಿ ಕಾವ ಸುಂದರ ಗೋಪಾಲಕೃಷ್ಣವಿಠ್ಠಲ ನಿಮ್ಮೊಳು | ರಮಿಸುವ ನಿತ್ಯದೊಳು ಮಂದಬುದ್ಧಿಗೆ ಇಂತು ಮತಿಯನಿತ್ತು | ಸಲಹಲಿ ಬೇಕಿಂತು ತಂದೆ ಧರೆಯೊಳು ಮತ್ತೊಬ್ಬರ ಕಾಣೆ | ಕಾಪಾಡಬೇಕೆನ್ನಾಣೆ 5
--------------
ಅಂಬಾಬಾಯಿ