ಒಟ್ಟು 794 ಕಡೆಗಳಲ್ಲಿ , 42 ದಾಸರು , 702 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಂಡೆ ಕಂಡೆನೊ ಕಂಗಳಲಿ ಭೂ | ಮಂಡಲಾಬ್ಧಿಗೆ ಸೋಮನೆನಿಪ ಅ | ಖಂಡ ಮಹಿಮಾ ವಾದೇಂದ್ರ ಗುರುಗಳ ಪ ನಸುನಗಿಯ ಮೊಗ | ಪಸರಿಸಿದಾ ದ್ವಾದಶನಾಮಗಳು ಶ್ರೀ ಮುದ್ರೆ ಮುದದಿಂದ | ನೊಸಿಲಿಲೊಪ್ಪುವ ಗಂಧ ಅಕ್ಷತಿ ಎಸೆವ ಸಣ್ಣಂಗಾರ ಕಿವಿಯಲಿ ಹಸನಾದ ಎಳೆ ತುಲಸಿ ಶೋಭಿಸಿ | ಬೆಸಸುವ ಒಂದೊಂದು ಮಾತಾ | ಲಿಸಿದರದು ವೇದಾರ್ಥತುಲ್ಯಾ | ಲಸವ ಗೈಯಿಸದೆ ಬರುವ ಗುರುಗಳ1 ಮೊಸಳಿವಾಯಪಲಕ್ಕಿ ಸುತ್ತಾ ಭಾ | ರಿಸುವ ನಾನ ವಾದ್ಯಾದಾ ಘೋಷಾ | ಪುಸಿಕರೆದೆದಲ್ಲಣರು ಎಂಬಾ | ದಶ ದಿಕ್ಕಿನೊಳು ಕೀರ್ತಿ ತುಂಬಿರೆ | ಶಿಶುವು ಮೊದಲಾದವರು ತಮ ತಮ | ಬೆಸನೆ ಪೇಳಲು ಕೇಳಿ ಅವರು | ಋಷಿಕುಲೋತ್ತಮರಾದ ಗುರುಗಳ2 ಶ್ವಶನ ಮತ ವಾರಿಧಿಗೆ ಪೂರ್ಣ | ಶಶಿ ಎನಿಸಿಕೊಂಬ ಧೀರುದಾರರೆ | ಅಸಮ ತತ್ವ ಪ್ರಮೆಯದಲಿ ನಿರ್ಮಿಸಿದನೆ | ಲೋಕೇಶ ಇವರನ್ನ ವಸುಧಿ ಅಮರರು | ಪ್ರಸರ ಎಡಬಲ ಎಸದು ತುತಿಸಲು ಹಿಗ್ಗಿ ಕರುಣಾ | ರಸಭರಿತರಾಗಿ ನೋಡುತ್ತ ಮಾ | ಸನದಿ ಹರಿಪದ ಭಜಿಪ ಗುರುಗಳ3 ಕುಸುವಶರನ ಬಾಣವನು ಖಂಡ್ರಿಸಿ ಬಿಸುಟ ಸಂಪನ್ನ ವಿದ್ಯಾ | ವಸುವಿನಲಿ ಆವಾಗ ತಲೆ ತೂ | ಗಿಸುವರು ಪಂಡಿತರ ಮೆಚ್ಚಿಸಿ | ವಶವೆ ಪೊಗಳಲು ಎನಗೆ ಇವರ ದ | ರುಶನದಿಂದಲಿ ಗತಿಗೆ ಪಥನಿ | ವಿಷದೊಳಗೆ ಇದು ಸಿದ್ಧವೆಂದು ವಂ | ದಿಸಿದಿರೊ ಮರಿಯದೆ ಈ ಗುರುಗಳಾ 4 ಮಿಸುಣಿ ಮಂಟಪದೊಳಗೆ ರಂ | ಜಿಸುವ ರಾಮನÀ ಕುಳ್ಳಿರಿಸಿ ಅ | ರ್ಚಿಸುವ ಚಿತ್ತೇಕಾಗ್ರದಲಿ ವೊ | ಲಿಸುವ ತಂತ್ರ ಸಾರೋಕ್ತ ಬಗೆಯನು | ಕುಶಲರಾದ ಉಪೇಂದ್ರ ಮುನಿಕರ | ಬಿಸಜದಿಂದಲಿ ಜನಿಪ ಭಕುತಿಲಿ | ಸಿರಿ ವಿಜಯವಿಠ್ಠಲನ್ನ | ಪೆಸರುಗಳು ಎಣಿಸುವ ಗುರುಗಳ 5
--------------
ವಿಜಯದಾಸ
ಕಂಡೆ ಕನಸಿನಲಿ ನಾ ಪಾಂಡುರಂಗನ ಮಂಡೆ ಇಡುತಲಿ ಪುಂಡಲೀಕ ಚರಣದಲೀ ಪ. ಪಂಡರೀಕ್ಷೇತ್ರದಲಿ ವಿಠ್ಠಲನ ದರ್ಶನಕೆ ದಂಡೆ ಹಾರ ಕೊಂಡು ಪೋಗುತಿರಲೂ ಹಿಂಡು ಜನ ಊಟಕೆಡೆ ಅಣಿಮಾಡುತಿರಲಲ್ಲಿ ಕಂಡು ಸಾಗುತ ಮುಂದೆ ದ್ವಾರದೆಡೆ ಬಂದು 1 ನಂತರದಿ ದ್ವಾರಗಳು ಮುಚ್ಚಿರಲು ಕಂಡು ಬಹು ಚಿಂತಿಸಲು ಅಲ್ಲೊಬ್ಬ ಬರಲು ಅವಗೇ ಅಂತರಂಗವನುಸುರೆ ಕದ ತೆರೆದು ನೋಡೆನಲು ಸಂತೋಷದಿಂದೆರಡು ದ್ವಾರಗಳ ತೆರೆದೇ 2 ರತಿಪತಿಯ ಬಿಂಬ ಶ್ರೀ ಪ್ರದ್ಯುಮ್ನವಿಠ್ಠಲನ ಮೂರ್ತಿಯನೆ ಕಂಡು ಹಾರವನ್ಹಾಕಿ ನಮಿಸಿ ಅತಿ ಪ್ರೀತಿ ಭಕ್ತಿಯಲಿ ಅಪ್ಪಿ ನಾ ಮೈ ಮರತೆ ಸ್ತುತಿಸುತಲಿ ಗೋಪಾಲಕೃಷ್ಣವಿಠ್ಠಲನನಾ 3
--------------
ಅಂಬಾಬಾಯಿ
ಕದರಿ ನರಹರಿ ವಿಠಲ | ಮುದದಿ ಪೊರೆ ಇವಳಾ ಪ ಬೆದರಿ ಬೆಂಡಾಗಿ ತವ | ಪದಕೆ ಬಿದ್ದಿಹಳಾ ಅ.ಪ. ಬನ್ನ ಬವಣೆಗಳೇ ?ಇನ್ನು ಪೇಕ್ಷಿಸದೆ ಕಾ | ರುಣ್ಯ ವೀಕ್ಷಣ ತೋರೊಪನ್ನಂಗಶಯ್ಯ ಹರಿ | ಮನುಜ ಮೃಗವೇಷಾ 1 ಸ್ವಾಪದಲಿ ನೀ ತೋರ್ದ | ಆಸನಿಯ ಅಂಕಿತವ ಪ್ರಾಪಿಸಿಹೆ ಇವಳಿಗೆ | ಶ್ರೀಪತಿಯೆ ಕೇಳೋ |ನೀ ಪಾಲಿಸುತ್ತಿವಳ | ತಾಪತ್ರಯಗಳ ಕಳೆಯೆಹೇ ಪಯೋಜ ಭವನುತ | ಪಾಪಾತಿದೂರಾ 2 ಪಾದ | ಪದ್ಮಗಳ ಭಜಿಪಾಮುಗ್ದೆಯನು ಪೊರೆಯೆಂದು | ಮಧ್ವಾಂತರಾತ್ಮಕನೆಬುದ್ಧಿ ಪೂರ್ವಕ ಬೇಡ್ವೆ | ಶ್ರದ್ಧೆ ಪತಿಸುತನೇ 3 ಐಹಿಕಾಮುಷ್ಮಿಕದ | ಬಹು ಪರಿಯ ಸುಖ ಸೌಖ್ಯಶ್ರೀಹರಿಯೆ ಕರುಣಿಸುತ | ಕಾಪಾಡೊ ಇವಳಾಸ್ನೇಹ ಸತ್ಸಂಗದಲಿ | ಪಾಲಿಸುತ ನೀನಾಗಿಮೋಹ ಮಮತೆಯ ಕಳೆದು | ಸಾಧನವ ಗೈಸೋ 4 ತರಳ ಪ್ರಹ್ಲಾದನನ | ಪೊರೆಯಲಿಲ್ಲವೆ ಹರಿಯೆವರ ಧ್ರುವನನ ಪಾಂಚಾಲಿ | ಅಜಮಿಳರ ಪೊರೆದೆಮರುತಾಂತರಾತ್ಮ ಗುರು | ಗೋವಿಂದ ವಿಠ್ಠಲನೆಪೊರೆಯ ಬೇಕಿವಳ ಬಹು | ಕಾರುಣ್ಯದಲಿ ಹರಿಯೇ 5
--------------
ಗುರುಗೋವಿಂದವಿಠಲರು
ಕದವ ತೆಗೆಯೆ ಸುಂದರಿವಯ್ಯಾರಿ ಮುತ್ತಿನ ಪ ಕಡಲ ಶಯನನೆ ಮಡದಿ ಹರುಷದಿ ಸಡಗರದಿ ಮುಂದಡಿ ಇಡುತ ನಿನ್ನ ಒಡೆಯ ಬಂದಿಹನೆಂದು ಹರುಷದಿ ಬೆಡಗು ಮಾಡದೆ ಬಿಡಿಯ ಮುತ್ತಿನ 1 ಯಾರು ನಿನ್ನಯ ಪೆಸರ ಏನೆಂದು ತಿಳಿಯದೆ ಹೇಗೆ ತೆಗೆಯಲಿ ಕದವಾ ಘೋರ ರಾತ್ರಿಯ ವೇಳೆಯಲಿ ಬಂ- ದೀಗ ಬಾಗಿಲ ಬಡಿಯ ನಿಂದಿರೆ ನಾರಿಯರು ಏನೆಂದು ಕೇಳ್ಪರು ದ್ವಾರ ಬಿಡುಬಿಡುತಲಿ ಸಾಗು ಮುಂದಕೆ2 ತೆಗೆಯಲೊಲ್ಲೆನು ಕದವ ಸಮರಾತ್ರಿ ವೇಳದಿ ರುಕ್ಮನ ಅನುಜೆ ಕೇಳೆ ಪೃಥ್ವಿಯೊಳು ಎನ್ನನು ಚಕ್ರಿ ಎನ್ನುತ ಪೇಳ್ವರೆ ಅರ್ಥಿವಚನಗಳನ್ನು ಕೇಳುತ ಸತ್ವರದಿ ನೀ ಬಂದು ಮುಂದಕೆ ಮುತ್ತಿನ ಕದತೆಗೆದು ಬೇಗನೆ ರತ್ನ ಪೀಠದಿ ಕುಳ್ಳಿರಿಸೆ ಹೊಸ ಮುತ್ತಿನರಗಿಣಿ ಸತ್ಯವಾಣಿಯೆ3 ಕೇಳಿ ಹರ್ಷಿತನಾದೆನು ನಿನ್ನಯ ಮಾತ ಕೇಳಿ ನಗುವರು ಜನರು ಹೇಳಿ ಕೇಳುವರಿಲ್ಲ ನಿನ್ನ ಮನಸಾರ ಮಾತುಗಳಾಡಲೇತಕೆ ಕು- ಲಾಲ ಭವನವಿದಲ್ಲ ಸುಮ್ಮನೆ ಹೇಳ ಕೇಳದೆ ಹೊರಡು ಮುಂದಕೆ 4 ಹೀಗೆ ನುಡಿಯುವದೇತಕೆ ಈಗೆನ್ನ ಮಾತಿಗೆ ಬೇಗದಿ ತೆಗೆ ಕದವ ನಾಗವೇಣಿಯೆ ನಗುತ ಪೇಳುವೆ ಬೇಗದಲಿ ಇನ್ನೊಂದು ನಾಮವ ಈಗ ಧರಣಿಧರನು ಬಂದಿಹೆ ಸಾಗರನ ಸುತೆ ಸರ್ಪವೇಣಿಯೆ 5 ಧರಣೀಧರ ನೀನಾದರೆ ಈ ಧರೆಯನೆಲ್ಲವ ಸಿರದ ಮೇಲಿರಿಸುವೆಯ ಸರ್ವ ಜನರಿಗೆ ಭಯವ ಪಡಿಸುವ ಉರಗರಾಜ ನೀನೆಂದು ತಿಳಿದೆನು ಇರುತ ಸರ್ಪಗಳೊಳಗೆ ನೀ ಬಲು ಹರುಷದಿಂದಲಿ ಸಾಗುಮುಂದಕೆ6 ಹರಿಣಾಕ್ಷಿ ಕೇಳೆ ನೀನು ಎನ್ನನು ಜನರು ಹರಿಯೆಂದು ಕರಿಯುವರು ಕರೆ ಕರೆಯ ಮಾಡದಲೆ ಬೇಗನೆ ವರ ಕನಕ ಕದ ತೆಗೆದು ಸುಮ್ಮನೆ ಇರಿಸು ಸುಖ ಸಾಮ್ರಾಜ್ಯ ಪೀಠವ ಹರುಷದಿಂ ಕುಳಿತೆಲ್ಲ ಪೇಳುವೆ 7 ಕೋತಿ ನೀನಹುದಾದರೆ ಮಾತುಗಳ್ಯಾಕೆ ಜಾತಿ ಕಪಿಗಳ ಕೂಡುತ ಪ್ರೀತಿಯಿಂದಲಿ ಮನಕೆ ಬಂದೆಡೆ ನೀತೆರಳುತಲಿ ಪೋಗು ಮುಂದಕೆ ಕೋತಿಗಳ ಗುಂಪಿದಲ್ಲ ತಿಳಿಮಹ- ರೂಪವತಿಯರಿರುವ ಸ್ಥಳವಿದು 8 ಪ್ರೀತಿಸತಿಯೆ ನೀ ಕೇಳೆ ನಿನ್ನೊಳು ಬಹು ಪ್ರೀತಿಯಿಂದಲಿ ಬಂದೆನು ಶ್ರೀಶನ ನುಡಿಕೇಳಿ ರುಕ್ಮಿಣಿ ಆತುರದಿ ಬಾಗಿಲನೆ ತೆಗೆಯುತ ನಾಥ ಕಮಲನಾಭ ವಿಠ್ಠಲನಿಗೆ ತಾನಮಿಸಿ ವಂದಿಸುತ ಭಕುತಿಯಲಿ ಬಾಗಿಲು ತೆಗೆದಳಾಗ ಭಕುತಿಯಲಿ ಶ್ರೀಶಗೆ ಬಾಗಿಲು ತೆಗೆದಳಾಗ9
--------------
ನಿಡಗುರುಕಿ ಜೀವೂಬಾಯಿ
ಕಮಲ ಧ್ಯಾನಮಾಡಿರೋ ಅನುಮಾನ ಬೇಡಿರೋ ಪ ಬೊಮ್ಮ ಪಿತನ ನೆಮ್ಮಿ ಭಜಿಸಿರೋ ದುಷ್ಕರ್ಮತ್ಯಜಿಸಿರೋ1 ಹೆಣ್ಣು ಮಣ್ಣು ಹೊನ್ನು ಸ್ಥಿರವಿದೆನ್ನ ಬೇಡಿರೋ ನಿಜವನ್ನು ನೊಡಿರೋ 2 ಪ್ರಖ್ಯಾತ ಕೇಳಿರೋ 3 ಕಾಟಕರ್ಮ ಲೂಟಿಗೈವ ತೋಟಗಾರನಾ ಈಸಾಟಿಗಾಣೆನಾ 4 ಶಿಲೆಗೆ ದಿವ್ಯ ಲಲನಾ ರೂಪ ವೊಲಿದು ಕೊಟ್ಟನಾ ಶಾಪವಳಿದು ಬಿಟ್ಟನಾ 5 ಮಾನಿನಿಯಾ ಮಾನ ಜೋಪಾನ ಗೈದನಾ ಸ್ವಾಧೀನನಾದನ 6 ಪಿಡಿದ ಮುನಿಯ ಬಿಡಿಸಿ ಪುಲಿಯ ಬಡಿದ ಧೀರನಾ ಕೈಪಿಡಿಗೆ ಬಾರನಾ 7 ಮತ್ರ್ಯರಿವನ ಭಕ್ತಿ ಯಲ್ಲಿ ರಕ್ತಿಪಡು- ವರು ಭಕ್ತಿ ಮುಕ್ತಿ ಪಡೆವರು 8 ಶರಣಜನರ ಪೊರೆದ ಧೊರೆಯು ವರದವಿಠ್ಠಲನೆ-ಶ್ರೀಧರಣೀ ಜಟಿಲನೇ 9
--------------
ಸರಗೂರು ವೆಂಕಟವರದಾರ್ಯರು
ಕಮಲನಯನನ ಕರತಾರೆ ಕರುಣ ಸಾಗರನ ಕರಿರಾಜ ವರದನ ಪ -------ಪನ ಕಂಬುಕಂಧರನ ಲೋಕನಾಯಕ ಶ್ರೀಯದು ವೀರನಾ ರಾಕೇಂದು ಮುಖಿ ವರ ಲಕ್ಷ್ಮೀನಾಯಕನ ನೀರಜ ನಾಭನಾ 1 ಸುಜನ ವಿಲಾಸನಾ ಕಂದ ಪ್ರಹ್ಲಾದನಾ ಕಾಯ್ದದೇವನಾ ಸುಂದರ ವದನ ಗೋವಿಂದ ಮುಕುಂದನಾ ಮಾಧವ ಕೃಷ್ಣನಾ 2 ಯದುಕುಲಾಬ್ಧಿಚಂದ್ರ ವೇದಗೋಚರನಾ ಮಧÀು ಸೂದನ ರೂಪ ಮಹಿಮ ಪ್ರಕಾಶನಾ ಬುದ್ಧ ಜನರ ಸಿರಿಯ ನಾ ಪೂರ್ಣಾನಂದನ ಚದುರೆ ನೀ ಬೇಗ ಹೋಗಿ ಚಲುವ ಸಂಪನ್ನನಾ 3 ಆನಂದ ನಿಲಯನಾದ ಅಖಿಲವೈಭವನಾ ಜ್ಞಾನಿಗಳ ಪೊರೆವ ಘನ ಗಂಭೀರನಾ ಧೇನು ಪಾಲಕ ದೇವಾದಿ ದೇವನ ಗಾನಲೋಲನಾದ ವೇಣು ಗೋಪಾಲನ 4 ಗರುಡವಾಹನನಾ-----ಜನ ಕಾಯ್ದವನಾ ಸ್ಥಿರ ಹೆನ್ನ ತೀರದಿ ವಾಸವಾಗಿಹನ ದೊರೆ 'ಹೆನ್ನ ವಿಠ್ಠಲನ’ ----ದೇವನಾ ಪೊರೆವನು ನಮ್ಮ ನಿಂದು ಪರಮಹರುಷದಿಂದಾ5
--------------
ಹೆನ್ನೆರಂಗದಾಸರು
ಕಮಲೆ ನಿನ್ನನು ಭಜಿಪೆ ಕಮನೀಯಗಾತ್ರೆ ಸುಮನಸರ ಜನನಿ ನಿನ್ನಮಲಪದ ತೋರೆ ಪ. ಲೋಕಸುಂದರಿ ಎನ್ನ ಶೋಕಗಳ ತರಿದು ಅವ ಏಕಮನಸು ನೀಡೆ ಶ್ರೀ ಕಳತ್ರನ ಪದದಿ ನೀ ಕರುಣಿಸಿದನೆ ನನಗನೇಕ ಜನ್ಮದಲಿ 1 ಪತಿ ಎಂದೆಂದಿಗೆ ತೊಲಗದಂದದಲಿ ನೀಡೆ ಒಂದನರಿಯೆನೆ ಈಗ ಬಂದೆನೇ ನಿನ್ನ ಬಳಿಗೆ ನಂದಕಂದನ ತೋರಿ ಕುಂದು ಪರಿಹರಿಸೆ 2 ಗೋಪಾಲಕೃಷ್ಣವಿಠ್ಠಲನ ಹೃದಯದಿ ತೋರಿ ಕಾಪಾಡೆ ಸತತದಲಿ ಕಾರುಣ್ಯಶಾಲಿ ನೀ ಪಯೋಬ್ಧಿಯೊಳ್ ಕೈಪಿಡಿದೆ ಶ್ರೀ ಹರಿಯ ರೂಪ ರೂಪಾಂತರದ ವ್ಯಾಪಾರ ತಿಳಿಸೆ 3
--------------
ಅಂಬಾಬಾಯಿ
ಕರ ಪಿಡಿಯೊ ಬೇಗಾ ಪ ಸಿರಿ | ಮಾಧವನೆ ಭಿನ್ನವಿಪೆಕಾದುಕೊ ಬಿಡದಿವನ | ಹೇ ದಯಾಪೂರ್ಣ 1 ಪ್ರಾಚೀನ ಕರ್ಮಗಳ | ಯೋಚಿಸಲು ಯನ್ನಳವೆಮೋಚ ಕೇಚ್ಛೆಯ ತೋರೊ | ಕೀಚಕಾರಿ ಪ್ರೀಯನೀಚೋಚ್ಛ ತರತಮವ | ವಾಚಿಸಿವನಲಿ ನಿಂತುವಾಚಾಮ ಗೋಚರನೆ ಸಾಕ್ಷಿ ವೇದ್ಯಾ 2 ಭಾಗವತ ಪೀಯೂಷ | ವೇಗ ಉಣಿಸುತಲಿವನನೀಗೊ ಭವರೋಗವನು | ನಾಗಾರಿವಾಹಾಜಾಗರ ಸ್ವಪ್ನದಲಿ | ನೀಗಿ ಭ್ರಮವೆರಡನ್ನುಜಾಗು ಮಾಡದೆ ಸಲಹೋ ಭೊಗಿಶಯನಾ 3 ಭವ | ಅಂಬುಧಿಯ ದಾಂಟಿ ನೀ-ಲಾಂಬು ದಾಭ ಹರಿ ಹೃದಯಾಂಬರದಿ ತೋರಿಇಂಬಿಟ್ಟು ಭಕ್ತನ್ನ | ಸಲಹೆ ಬಿನ್ನವಿಪೆ ಕೃ-ಪಾಂಬುಧಿಯೆ ತವ ಪಾ | ದಾಂಬುಜದಲಿಡುವೆ 4 ಭಾವ ಕ್ರಿಯ ದ್ರವ್ಯದೊಳು | ಅದ್ವಯನು ನೀನೆಂಬಭಾವದನುಭವವಿತ್ತು | ಇವನ ಪಾಲಿಪುದುಕಾವ ಕರುಣಿಯೆ ಗುರು | ಗೋವಿಂದ ವಿಠ್ಠಲನೆಗೋವತ್ಸಧ್ವನಿದಾವು | ಧಾವಿಸೂವಂತೆ 5
--------------
ಗುರುಗೋವಿಂದವಿಠಲರು
ಕರಕಮಲ ತಡೆಯುವುದೆ ಕಟುಖಾರವಾ ನಿತ್ಯ ಪೂಜಿಸುವ ಕೋಮಲದಾ ಪ. ಪರಿವಾರ ಜನವು ಭೋಜನಕೆ ಕುಳಿತಿರಲು ನರ ಹರಿಗೆ ಅರ್ಪಿತದ ಹುಳಿಯಲ್ಲಿ ಕರವಿಟ್ಟು ಪರಿಪಕ್ವ ಶಾಖದ ಹೋಳುಗಳ ಬಡಿಸಲು ಕರ ಕರೆಗೆ ಸಿಲುಕೇ 1 ಮಧ್ವದುಗ್ಧಾಭ್ಧಿಯಲಿ ಜನಿಸಿದ ಸುಧಾರಸವ ಶುದ್ಧ ದೃಷ್ಟಿಯಲ್ಲೀ ಸವಿಸವಿದು ಮಧುರಾ ಹೃದ್ವಜದಲಿ ತುಂಬಲನುವಾದ ಪುಸ್ತಕವ ಮುದ್ದಾಗಿ ಪಿಡಿಯಲನುಕೂಲವಾಗಿ ಇಂಥ 2 ಗಂಧ ಕುಸುಮಾಕ್ಷತೆಗಳಿಂದ ಶ್ರೀ ತುಳಸಿದಳ ದಿಂದ ವಿಠ್ಠಲ ಕೃಷ್ಣ ಲಕ್ಷ್ಮಿನರಹರಿಯಾ ವೃಂದ ಸಾಲಿಗ್ರಾಮ ಹನುಮ ಯತಿಕುಲಜರುಗ ಳಿಂದ ಸಹಿತದಿ ಪೂಜೆ ವಿಭವದಲಿ ಗೈದಾ 3 ಮಧುರಾನ್ನ ಸವಿದು ಮಧುಸೂದನನ ಗುಣಗಳನು ವಿಧವಿಧದಿ ಮಧ್ವಗ್ರಂಥದಿ ಕಂಡು ನಲಿದೂ ಹೃದಯ ನಿರ್ಮಲದಿ ಆಲಿಸುವ ಭಕ್ತರಿಗೆ ಮಧುರ ರಸಮನದ ಎಡೆಯಲ್ಲಿ ಬಿಡಿಸುವ ಇಂಥ 4 ಗೋಪಾಲಕೃಷ್ಣವಿಠ್ಠಲನ ಭಕ್ತರು ಬಂದು ಶ್ರೀಪಾದಕೆರಗೆ ಸಿರದಲ್ಲಿ ಅಕ್ಷತೆಯಾ ಅಪಾರ ಕರುಣದಿಂದಲಿ ಸೂಸಿ ನಲಿಯುತಲಿ ಅಪತ್ತು ಕಳೆವ ಶ್ರೀ ಪ್ರದ್ನುಮ್ನತೀರ್ಥಯತಿ 5
--------------
ಅಂಬಾಬಾಯಿ
ಕರವೇ ವಂದಿಸಿ-ನಮಸ್ಕರಿಸಿ ಮಾತನುಸುರುವೆ ಪ ಪರಮಾದರದಲಿ ಕರುಣ ಎನ್ನ ಮೇಲೆ ಹರಹಿ ದುರುಮತಿಯ ಪರಿಹರಿಸುವುದು ಅ.ಪ. ವಾತತನಯ ವಾರಿಜಾತ ಬಾಂಧವ ಸಂ ಭೂತ ಸಹಾಯ ರಘುನಾಥನ್ನ ಪ್ರಿಯದೂತ ಶಾತಕುಂಭ ಮಕುಟ ಶೀತಕರ ಕುಂಡಲ- ತೀತ ಸುಂದರ ಕಾಯ-ಜಾತ ಶರವರ್ಜಿತ ದಾತನಿಂದಲಿ ಬಹಳಾತುರದಲಿ ಗು- ರುತು ಪಡೆದು ನಿರ್ಭೀತನಾಗಿ ಪೋಗಿ ಮಾತೆಗೆರಗಿ ಖಳವ್ರಾತವ ಘಾತಿಸಿ ಪ್ರೀತಿಯಿಂದಲಿ ನಿಜರಾತಿಯ ತಣಿಸಿದ 1 ಉದ್ದಂಡ ವಿಷವನುಂಡು ಕುಂಡಲಿಯಿಂದ ಕೈಗೊಂಡು ಮನ್ನಣೆಯ ಚಂಡಗದೆಯ ದಿಟ್ಟ ಗಂಡುಗಲಿ ಪ್ರಚಂಡ ಹಿಂಡು ಖಳರ ಶಿರ ಚೆಂಡಾಡಿ ಗುರು ಕೋ ದಂಡ ರುದ್ರನ ಮುಂಕೊಂಡು ಭಜಿಸಿ ರಣ ಮಂಡಲದೊಳು ಜಗಭಂಡನ ಕರುಳನು ದಂಡೆಯ ಮುಡಿಸಿದ ಖಂಡ ಪ್ರತಾಪ 2 ದ್ವಿಜನ ಉದರದಲ್ಲಿ ಸೃಜಿಸಿ ಮೆರೆದೆಯೊ ತ್ರಿಜಗದೊಳಗೆ ಶುದ್ಧ ಸುಜನಾಂಬುಧಿಗೆ ಚಂದ್ರ ಕುಜನ ಮತ ಭುಜಂಗ ದ್ವಿಜರಾಜನೆನಿಸಿದೆ ಅಜನ ಪಿತನ ಪಾದಾಂಬುಜವ ಬಿಡದೆ ನಿತ್ಯ- ಭಜಿಸುವೆ ಯತಿ ದಿಗ್ವಿಜಯ ಮೂರುತಿ ಸುರ- ಪಂಕಜ ಭವ ಪದವಿಯ ನಿಜವಾಗಿ ಕೈಗೊಂಡು ಋಜುಗಣದಧಿಪ ತಿವಿಜಯವಿಠ್ಠಲನಂಘ್ರಿರಜವನು ಧರಿಸಿದ 3
--------------
ವಿಜಯದಾಸ
ಕರಿವರದ ಗೋಪಾಲ ವಿಠಲ ಸಲಹೋ ಪ ತರಳನನು ನಿನ್ನಡಿಗೆ ಒಪ್ಪಿಸಿಹೆ ಹರಿಯೇ ಅ.ಪ. ಸ್ವಾಪದಲಿ ನರಸಿಂಹ ರೂಪದಲಿ ಕರವೆತ್ತಿಶ್ರೀಪತಿಯೆ ಅನುಗ್ರಹಿಸಿ ಕರುಣಿಸಿರುವೇಈ ಪರಿಯ ಮಹಿಮೆಗಳ ನಾ ಪೇಳಲಳವಿಲ್ಲಕೈಪಿಡಿದು ತರಳನ್ನ ಕಾಪಾಡೊ ಹರಿಯೇ 1 ಸಿದ್ಧಾಂತ ಜ್ಞಾನಗಳು ಸಿದ್ಧಿಯಾಗಲಿ ಇವಗೆಮಧ್ವ ಮತ ದೀಕ್ಷೆಯಲಿ ಶುದ್ಧವಾಗಿರಲೀಶುದ್ಧಭಕ್ತಿಯಲಿಂದ ವೃದ್ಧರನು ಸೇವಿಸಲಿಮಧ್ವ ವಲ್ಲಭ ನಿನ್ನ ಪ್ರಾಧ್ಯಾನ ವಿರಲೀ 2 ನಿತ್ಯ ಮಂಗಳದಾ 3 ಪರಿಪರಿಯ ಮಹಿಮೆಗಳ | ತೋರುತಲಿ ಇವನಲ್ಲಿಧರೆಯ ಜನಗಳಿಗೆಲ್ಲ | ತೋರಿ ಕೌತುಕವಾಮೆರೆವ ಸಂಪದವಿತ್ತು | ಮರೆಸಿದೆ ತವಸ್ಮøತಿಯಪೊರೆಯ ಬೇಕೆಂದೆನುತ | ಮೊರೆ ಇಡುವೆ ಹರಿಯೇ 4 ಅಷ್ಟ ಸೌಭಾಗ್ಯಗಳು | ಅಷ್ಟು ಸ್ಥಿರವಲ್ಲೆಂಬಸುಷ್ಠು ಮತಿಯಿಲ್ಲವಗೆ | ನಿಷ್ಠೆ ಇರಲೆಂಬಶೇಷ್ಠ ಭಿನ್ನಪಕೃಷ್ಣ | ದ್ವೈಪಾಯ ನಾತ್ಮಕನೆಕೃಷ್ಣ ಗುರು ಗೋವಿಂದ ವಿಠ್ಠಲನೆ ಸಲಿಸೋ 5
--------------
ಗುರುಗೋವಿಂದವಿಠಲರು
ಕರುಣದಿ ಕಾಯಬೇಕಿನ್ನು ಪ್ರಾಣೇಶ ಅರಿಯೆನೊ ಅನ್ಯರ ಜಗದ್ವಾಸ ಪ. ಪರಿಪರಿ ಬವಣೆಯ ಪರಿಹಾರಗೈಸುತ ತ್ವರಿತದಿ ಸಲಹೊ ಭಾರತಿಗೀಶ ಅ.ಪ. ಅನ್ನವಸನಗಳಿಗೆ ಅಲ್ಪರ ತೆರದೊಳು ಬನ್ನಬಡುತಲಿರಲು ನಿನ್ನ ಪಾದವ ನಂಬಿ ನೀ ಗತಿ ಎನುತಿರೆ ಮನ್ನಿಸಿದ ಮಹಿಮ ನಿಸ್ಸೀಮ 1 ಮನದಿ ಬಹುನೊಂದು ನಿನ್ನ ಘನತೇನೆಂದು ಅನುದಿನ ಕಾಯೊ ಎಂದು ಎನುತಿರೆ ಸ್ವಪ್ನದಿ ಹನುಮ ನಿನ್ನಭಯ ಹಸ್ತ ವನೆ ಶಿರದಿ ಇಟ್ಟೆ ಶ್ರೇಷ್ಠನೆ 2 ಉಭಯ ಹಸ್ತವು ಎನ್ನ ಶಿರದ ಮ್ಯಾಲಿಡುತಲಿ ಅಭಯ ಕೊಡುತಲಿರಲು ನಿರ್ಭಯದಿಂದ ನಾ ನಿನ್ನ ಭಜಿಪೆನಯ್ಯ ಶುಭಗುಣನಿಲಯ ಜೀಯಾ 3 ಹನುಮ ಭೀಮಾನಂದ ಮುನಿಯಾಗಿ ಜಗದಲಿ ಹನನಗೈಯುತ ದನುಜರ ವನಜಾಕ್ಷ ಹರಿಯನು ಘನವಾಗಿ ಸೇವಿಸಿ ಅನುದಿನದಲಿ ಕಾಯ್ವೆ ಸುಜನರ4 ಶ್ವಾಸಜಪವ ಮಾಡಿ ರಾಶಿ ಜೀವರ ಕಾಯ್ವೆ ಶ್ವಾಸ ನಿಯಾಮಕನೆ ಶ್ರೀಶ ಶ್ರೀ ಗೋಪಾಲಕೃಷ್ಣವಿಠ್ಠಲನಿಗೆ ಕೂಸು ಎಂದೆನಿಸಿರುವೆ ನೀ ಕಾವೆ 5
--------------
ಅಂಬಾಬಾಯಿ
ಕರುಣಿಸಯ್ಯಾ ಗುರುವರ್ಯ ಪರಮ ಸುಹೃದಯಾ | ನಿರುತ ನಿನ್ನವನೊ ನಾನು ಪುರಂದರರಾಯ ಯಿಂದು ಪ ಲೋಕದ ಜನರು ತಮ್ಮ ಸುಕುಮಾರರಿಗೆ ಪೆಸರು | ಯಾಕೆ ಯಿಡವರೊ ಜೀಯ್ಯಾ | ನೇಕ ಮಮತೆಯಲಿ || ಬೇಕೆ ಎನಗೆ ಯಿಂಥsÀ ಖ್ಯಾತಿ ನೀ ಕೊಟ್ಟ ಭಾಗ್ಯವೆಯಿರಲಿ | ವಾಕು ವ್ಯರ್ಥವಾಗದಂತೆ ಸಾಕುವದು ಬಿಡದೆ ಒಲಿದು 1 ಅಡವಿ ಹತ್ತಿ ಪೋಪ ನರನ ಒಡನೆ ಕೂಡಿಕೊಂಡು ಬಂದು | ಕಡು ಮಹೋತ್ಸವವ ಮಾಡಿ ವೇಗ ಪೊಡವಿಪತಿತನವು || ತೊಡರು ಕಳೆದು ಸರ್ವರೊಳಗೆ | ನಡತಿವಂತ ಮಾಡಿದಂತೆ ಬಡವನ್ನಾ ಉದ್ಧರಿಸು ಜ್ಞಾನಿ2 ಯಿರಲಾಗಿ ಪುತ್ರನೀಗೆ ಬರುವಾವೆ ಪಾಲಿಪದು ಎತ್ತಲಿದ್ದರೂ | ಸತ್ಯ ವಿಜಯವಿಠ್ಠಲನ್ನ | ತುತ್ತಿಸುವ ಮಹಾಮಹಿಮಾ 3
--------------
ವಿಜಯದಾಸ
ಕರುಣಿಸೆನಗಿನಿತು ಕರುಣಾರ್ಣವನೆ ನಿನ್ನ ಚರಣಾಬ್ಜದಲಿ ಭಕುತಿ ವಿಷಯದಿ ವಿರಕುತಿ ಪ ಬಿಂಬನೇ ಸರ್ವ ಪ್ರಯೋಜನವ ಮಾಡಿ ಪ್ರತಿ ಬಿಂಬರಿಗೆ ತತ್ಫಲಗಳೀವ ಕಾವ ಬಿಂಬನೆ ಸ್ವತಂತ್ರ ಪ್ರತಿಬಿಂಬಾ ಸ್ವತಂತ್ರತಮ ನೆಂಬ ಸುಜ್ಞಾನ ಪೂರ್ವಕ ನಿನ್ನ ಭಜಿಪ ಸುಖ 1 ಕಾರ್ಯ ಕಾರಣ ಅಂಶಿ ಅಂಶಾವತಾರ ಅಂ ತರ್ಯಾಮಿ ವ್ಯಾಪ್ಯ ವ್ಯಾಪಕ ಪ್ರೇರಕ ಪ್ರೇರ್ಯ ಬಾಧಕ ಬಾಧ್ಯ ಪೋಷ್ಯ ಪೋಷಕ ರೂಪ ಆರ್ಯರಿಂದರಿತು ಅನುದಿನದಿ ಸುಖಿಸುವ ಭಾಗ್ಯ 2 ತಾರತಮ್ಯದ ಜ್ಞಾನ ದುರ್ವಿಷಯಗಳಲಿ ಸ ದ್ವೈರಾಗ್ಯ ಹರಿದ್ವೇಷಿಗಳಲಿ ದ್ವೇಷಾ ಸೂರಿಗಳ ಸಂಗ ಗುಣರೂಪಕ್ರಿಯೆಗಳನು ಸುವಿ ನಿತ್ಯ ಅನುಮೋದ ಬಡುವಂತೆ 3 ಮಿಂದೋದಕಗಳೆಲ್ಲ ಮಜ್ಜನವು ದೇಹಾನು ಬಂಧಿ ಜನರೆಲ್ಲ ನಿನ್ನ ಪರಿವಾರವು ನಿಂದ್ಯ ಕರ್ಮಗಳೆಲ್ಲ ಪಾದುಕಗಳೆಂಬ ಅನು ಸಂಧಾನ ಮನಕೆ ನಿತ್ಯದಲಿ ಬರುವಂತೆ4 ಚೇತನಾಚೇತನಗಳೆರಡು ಪ್ರತಿಮೆಗಳು ಸಂ ಪ್ರೀತಿಯಲಿ ಸುರಕ್ಷಿಸುವುದು ಪೂಜೆ ಈ ತನುವೆ ಸದನವೆಂದರಿತು ನಿತ್ಯದಿ ಜಗ ನ್ನಾಥ ವಿಠ್ಠಲನೆಂಬ ವಿಷಯವೇ ಮುಖವೆಂದು 5
--------------
ಜಗನ್ನಾಥದಾಸರು
ಕರುಣಿಸೈ ಶ್ರೀ ರಾಮ ಕೌಸಲ್ಯ ಪ್ರೇಮ ಶರಣ ಜನಕನು ಪೊರೆವ ಕಾರುಣ್ಯಧಾಮ ಪ. ದಶರಥಾತ್ಮಜ ಯಜ್ಞ ಕಾಯ್ದು ಸೀತೆಯ ವರಿಸಿ ಕುಶಲದಿಂದಲಿ ಬಂದು ನಗರದಲ್ಲಿರಲೂ ಸತಿ ಅನುಜಸಹ ವನದಿ ನಸುನಗುತ ಚರಿಸಿ ರಕ್ಕಸರ ಸದೆಬಡಿದೆ 1 ಸತಿಯೆ ಕಳೆದಿರೆ ಹನುಮ ಹಿತವಾರ್ತೆ ಬಿನೈಸೆ ಹತಗೈದು ರಾವಣಾದಿಗಳನೆಲ್ಲ ಹಿತದ ರಾಜ್ಯದ ವಿಭೀಷಣ ರವಿಜರಿಗೆ ಇತ್ತು ವ್ರತ ಬಿಡಿಸಿ ಭರತನಿಗೆ ಧರಣಿಯಾಳಿದನೇ 2 ಪಟ್ಟಾಭಿರಾಮ ಮಂಗಳ ನಾಮ ಕೃಪೆಯಿಂದ ಇಷ್ಟಾರ್ಥವೀಯೊ ಸನ್ಮಂಗಳವನೂ ದಿಟ್ಟ ಶ್ರೀ ಹನುಮ ವಂದಿತ ಚರಣ ನಮಿಸುವೆನು ಶ್ರೇಷ್ಠ ಶ್ರೀ ಗೋಪಾಲಕೃಷ್ಣವಿಠ್ಠಲನೇ 3
--------------
ಅಂಬಾಬಾಯಿ