ಒಟ್ಟು 2483 ಕಡೆಗಳಲ್ಲಿ , 112 ದಾಸರು , 1812 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅವನೆವೆ ಧನ್ಯ ನೋಡಿ ಅವನ ದರುಶನ ಮಾಡಿ ಪ. ಹರಿಧ್ಯಾನ ಹೃದಯದಲ್ಲಿ | ಹರಿನಾಮ ಜಿವ್ಹದಲಿ | ಹರಿಕಥೆ ಶ್ರವಣದಲ್ಲಿ| ಹರಿಯಾ ಸೇವೆ ಅಂಗದಲ್ಲಿ1 ಹರಿಭಕ್ತಿಯೊಳು ಕೂಡಿ | ಹರಿ ಕೀರ್ತನೆಯ ಮಾಡಿ | ಹರಿ ಪ್ರೇಮ ತುಳಕಾಡಿ | ಹೊರಳುವ ನಲಿದಾಡಿ 2 ತಂದೆ ಮಹಿಪತಿ ದಯಾ ದಿಂದ ಪಡೆದು ವಿಜಯಾ ಹೊಂದುವ ತಿಳಿದು ನೆಲಿಯಾ ಛಂದವಾದಾ ಪುಣ್ಯಕಾಯಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಅಷ್ಟಮಠದ ಯತಿಗಳು ನೋಡಿ ದಣಿದವೆನ್ನ ಕಂಗಳು ಉಡುಪಿಯಲ್ಲಿರುವ ಅಷ್ಟಮಠದ ಶ್ರೀಪಾದಂಗಳವರ ಪ. ಸುಧಿಂದ್ರತೀರ್ಥ ಗುರುವರ್ಯರು ಬಂದ ಭಕ್ತರಿಗೆ ಕರುಣಾಮೃತ ಮಳೆಗರೆವರು ಶ್ರೀಹರಿಯ ತೋರುವರು ನೇಮದಿಂದಲಿ ಇವರ ನಾಮ ನೆನೆದರೆ ಸ್ವಾಮಿ ಶ್ರೀರಾಮನು ಪ್ರಸನ್ನನಾಗುವನು 1 ವಿಭುದಪ್ರಿಯತೀರ್ಥ ಗುರುವರ್ಯರು ಬಂದಾ ದುರ್ಜನರ ಮನವನು ಜಯಿಸುವರು ಮಹಾನುಭಾವರು ತರ್ಕನ್ಯಾಯ ವೇದಾಂತ ನಿಪುಣರು ಮಹಾಗುಣವಂತರು 2 ವಿದ್ಯಾಪುಣ್ಯತೀರ್ಥ ಶ್ರೀಪಾದಂಗಳವರು ಬಂದ ಸೇವಕರಿಗೆ ಬ್ರಹ್ಮವಿದ್ಯಾ ಪಾಲಿಸುವರು ರ್ದುಜನರ ದುರ್ಬುದ್ಧಿ ಒದ್ದಿ ಕೆಡಹುವವರು 3 ವಿಶ್ವೇಂದ್ರತೀರ್ಥರು ಈ ಗುರುವರ್ಯರು ವಾದಿರಾಜರ ಪೂಜಿಸುವರು ಜಗಕೆ ಸುಖವ ಸುರಿಸುವರು ಭೂತಪ್ರೇತಪಿಶಾಚಾದಿ ಮಾಡುವರು ಭಕ್ತರಘ ಕಡಿವರು4 ಇವರು ಭವಸಮುದ್ರವ ನೀಗಿಸುವರು ಶಿಷ್ಯರಿಗ್ಹರುಷ ಪಡಿಸುವುದು ಆನಂದದಿಂದಲ್ಲಿ ಹೃನ್ಮಂದಿರದಲಿ ಇಂದಿರೇಶನ ನೋಡುವರು 5 ರಘುಮಾನ್ವತೀರ್ಥ ಗುರುವರ್ಯರು ಲೋಕಮಾನ್ಯರು ಭಕ್ತರಿಗತಿಪ್ರಿಯರು ಮಹಾನುಭಾವರು ಅನ್ನದಾನದಲಿ ದೈನ್ಯರು ಆನಂದ ಭರಿತರು ಸುರರಿವರು 6 ಲಕ್ಷ್ಮೀಂದ್ರತೀರ್ಥ ಶ್ರೀಗಳವರು ಇವರು ತಮ್ಮ ತುಷೆಯೊಳಗಿಟ್ಟುಕೊಂಡು ರಕ್ಷಿಸುವರು ಲಕ್ಷ್ಮೀರಮಣನ್ನ ಪಾದಾ ಅಪೇಕ್ಷೆಯ ಮಾಡುಸುವರು ಹರಿಯ ಭಜಿಸುವರು 7 ವಿಶ್ವಮಾನ್ಯತೀರ್ಥ ಈ ಗುರುವರ್ಯರು ಬಂದ ಭೂಸುರರಿಂದ ಅನುವಾದ ಮಾಡುವರು ನೋಡುವರಿಗಾನಂದ ಪಡಿಸುವರು ಸುಜ್ಞಾನ ಯತಿವರ್ಯರು 8 ಅಷ್ಟಮಠದ ಯತಿಗಳ ಮಹಿಮೆಯನ್ನು ನಿಷ್ಠೆಯಿಂದಲಿ ಪೇಳುವನು ಅವನು ಸುರನು ಇವರ ದೋಷಿ ಎಂದವರನೇ ನರಕಾಧಿ ಬಾಧಿಸುವುದು ಕೃಷ್ಣನ ಪೂಜಿಸುವರು 9
--------------
ಕಳಸದ ಸುಂದರಮ್ಮ
ಅಹುದಹುದನಾಥ ಬಂಧು ಅಹುದಹುದನಾಥ ಬಂಧು|ಅನುಪಮ್ಯ| ಮಹಿಮೆ ಕಾರುಣ್ಯಸಿಂಧು| ಏನೆಂದು ಪೇಳೆಲೆಮ್ಮಾ|ಈ ದಯಕ| ತಾನು ಪಮೆ ಇಲ್ಲವಮ್ಮಾ| ನ್ಯೂನಾರಿಸದೆ ಬಂದನು,ಕ್ಷಮೆಯಿಂದ| ತಾನಾಗಿ ಸಲಹುತಿಹನು| ಜ್ಞಾನವಿಲ್ಲದೆ ತರಳನೆಂದಪೇಕ್ಷಿಸದೆನ್ನ| ಮನ ನೆನೆವಿನೊಳಗಿಟ್ಟು ತನ್ನ ಅಂಘ್ರಿಯದಾ 1 ಪತಿತರೊಳು ಪತಿತ ಅಧಮಾ|ಅಮೂಲ್ಯ| ಪತಿಹೀನ ಮೂಢ ಪರಮಾ| ಸುತ್ತ-ಭಕುತಿ ಮಾಡಲರಿಯೆ|ಚತೆರ ಸಂ| ಸ್ಕøತ ಮಾತನಾಡಲರಿಯೇ| ಗತಿಗೈದರೊಂದೊಂದು ವೃತದಿ ಮೊದಲಾದವರು| ಕ್ಷಿತಿಯೊಳಗೆ ಎನ್ನಂಥ ಶೂನ್ನರಾರಮ್ಮ 2 ನೆಲಿಗೆ ಮುಯ್ಯಕ ಮುಯ್ಯವು|ಈ ತೆರದಿ| ಸಲೆ ನಡೆತಿ ಉಂಟು ಕೆಲವು| ಕೊಳದೆ ಕೊಡುವವರಿಂದಿಗೆ|ಆರಿಲ್ಲಾ| ನಳಿನಜೇಂದ್ರಾದ್ಯರೊಳಗೇ ಒಲಿದು ಮಹೀಪತಿ ಸುತನ ಕರವಿಡಿದು ತನ್ನ| ದಾಸರ ದಾಸ ದಾಸನೆನಿಸಿದ ಬಿರದಿಗಿಂದು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಅಹುದಾದಡಹುದೆನ್ನಿ ಅಲ್ಲವಾದಡಲ್ಲವೆನ್ನಿಸಹಜವಿದು ಸಜ್ಜನರ ಮನಕೆ ಸಮ್ಮತವು ಪ ಕರಿಕೆಯಿಲ್ಲದ ಬಾಳು ಕರಿವರದನ ದಯೆ ಕೇಳುಅರಿತವರಿರೆ ಮನೆಯೊಳು ಅದು ಸ್ವರ್ಗವು ಕೇಳುಕರಣಿಕರೊಳಗಣ ನಂಟು ಕಟ್ಟಿದ ಹಣವಿನ ಗಂಟುಗುರುವಿನ ವಾಕ್ಯದಿ ಭಕ್ತಿ ಇಹಪರಕದು ಮುಕ್ತಿ1 ಒಕ್ಕಲಿಗಾಗದ ಗವುಡ ಮೇಲೆರಗಿ ಕುಕ್ಕುವ ಲಗಡಮಕ್ಕಳ ಪಡೆವುದು ಪುಣ್ಯ ನಲಿವು ನಗೆಗಳ ಪಣ್ಯಇಕ್ಕುವ ಅನ್ನವು ಧರ್ಮ ಇಹಪರಕದು ಅತಿ ಧರ್ಮಬಿಕ್ಕಳಿಕಿಕ್ಕಿದ ವ್ಯಾಧಿ ಯಮಪುರಕದು ಹಾದಿ2 ಕಂಡರೆ ಸೇರದ ನಾರಿ ಕೆಂಡವನುಗುಳುವ ಮಾರಿದಂಡವ ತೆರಿಸುವ ಪುತ್ರ ಹಗೆಗಳಿಗವ ಮಿತ್ರಉಂಡರೆ ಸೇರದ ತಾಯಿ ಉರಗನ ಮೆಕ್ಕೆ ಕಾಯಿಹಿಂಡನಗಲಿದ ಗೋವು ಹುಲಿಗಿಕ್ಕಿದ ಮೇವು 3 ಪರನಾರಿಯರೊಡನಾಟ ಗರಲವನಟ್ಟುಂಬಾಟಬರೆದೂ ಅರಿಯದ ಲೆಕ್ಕ ಕಡೆಯಲಿ ಬಹು ದುಕ್ಕಇರಿತಕೆ ಬೆದರುವ ಮದಕರಿ ಬಾಯ್ಕಿರಿವ ಕೋಡಗ ಮರಿಕರೆ ಬರಲರಿಯದ ಗಂಡ ಅವ ನಾಚಿಕೆ ಭಂಡ4 ಸಮಯಕ್ಕೊದಗದ ಅರ್ಥ ಸಾವಿರವಿದ್ದರು ವ್ಯರ್ಥಸವತಿಯರೊಳಗಣ ಕೂಟ ಎಳನಾಗರ ಕಾಟಅಮರರಿಗೊದಗದ ಯಾಗ ಆಡಿನ ಮೇಲಣ ರೋಗನಮ್ಮ ಆದಿಕೇಶವನ ಭಕ್ತ ಅವ ಜೀವನ್ಮುಕ್ತ 5
--------------
ಕನಕದಾಸ
ಆ ವೇಳೆಯಲಿ ಆರಾರ ಕಾಯ್ದೆಯೊ ದೇವಈ ವೇಳೆಯಲಿ ಎನ್ನ ಕಾಯ್ದರದು ನಿಜವಹುದು ಪ ಕರೆಯೆ ಕಂಬದಿ ಬಂದು ಹಿರಣ್ಯಕಶಿಪುವ ಕೊಂದೆಶರಣನನು ಪಾಲಿಸುತೆ ಕಾಯ್ದೆಯಂತೆಕರಿರಾಜ ಹರಿಯೆಂದು ಕರೆಯಲಾಕ್ಷಣ ಬಂದುಕರುಣದಿಂದಲಿ ಕಾಯ್ದೆಯಂತೆ ಹರಿಯೆ 1 ಧರೆಗಧಿಕನಾಥನಾ ತೊಡೆಯನೇರಲು ಕಂಡುಜರೆಯಲಾ ಧ್ರುವನ ನೀ ಕಾಯ್ದೆಯಂತೆದುರುಳ ದುಃಶಾಸನ ದ್ರೌಪದಿಯ ಸೀರೆಯ ಸೆಳೆಯೆತರುಣಿಗಕ್ಷಯವಿತ್ತು ಕಾಯ್ದೆಯಂತೆ ಹರಿಯೆ 2 ಮಾಧವ ಗೋ-ವಿಂದ ರಕ್ಷಿಸು ಬಾಡದಾದಿಕೇಶವರಾಯ 3
--------------
ಕನಕದಾಸ
ಆ. ಕಾರ್ತಿಕೇಯ (ಸುಬ್ರಹ್ಮಣ್ಯ) ಸ್ತುತಿ ಏಳಯ್ಯ ಕಾರ್ತಿಕೇಯ | ಬೆಳಗಾಯಿತೇಳಯ್ಯ ಕಾರ್ತಿಕೇಯ ಪ ಗೂಡಬಿಟ್ಟೋಡುವವು 1 ಧುರವನೆಸಗಲಿಕೆ ಬೇಗೇಳಯ್ಯ ಕಾರ್ತಿಕೇಯ 2 ಕರ ಲೇಳಯ್ಯ ಕಾರ್ತಿಕೇಯ 3 ವರ ದೇವಲಾಮುನಿಯ ಶಾಪದಿ ಸುಧರ್ಮನೆಂ ಕೊಡುವುದಕ್ಕೇಳಯ್ಯ ಕಾರ್ತಿಕೇಯ 4 ಪರಮ ಋಷಿಗಳು ಇತ್ತ ಶಾಪದಿಂ ಕುಷ್ಠವಂ - ನೆರೆದು ನಿಂದಿರುತಿಹರು | ಕರುಣದಿಂದವರನೀ- ಕ್ಷಿಸುತಭಯವೀಯಲಿಕ್ಕೇಳಯ್ಯ ಕಾರ್ತಿಕೇಯಾ 5 ಏಳು ಸರ್ವೇಶ್ವರನೆ ಏಳ್ ತಾರಕಾಂತಕನೆ ಏಳಯ್ಯ ಕಾರ್ತಿಕೇಯಾ 6 ಭಾವಶುದ್ಧದಲಿ ನಂಬಿದ ಭಕ್ತಜನರ ಮನೋ ಕಾವೆನೆಂದಭಯ ಹಸ್ತವನೀಯಲ್ದಯದಿಂದ- ಲೇಳಯ್ಯ ಕಾರ್ತಿಕೇಯಾ 7
--------------
ಬೆಳ್ಳೆ ದಾಸಪ್ಪಯ್ಯ
ಆತ್ಮನಿವೇದನೆ ಅಗಲಿ ನಾ ಸೈರಿಸಲಾರೆ ಪ-À್ನಗರಾಜಶಯನನ ತೋರೆ ಪ. ಖಗರಾಜಗಮನ ನಿಗಮಗೋಚರನಜಗದೇಕವಂದ್ಯನ ಜಾಣೆ ರಂಗಯ್ಯನ ಅ.ಪ. ಮಾರನು ಮನೆಗ್ಹೋದÀನಮ್ಮ ಎನ್ನಸೇರದೆ ಮುನಿದ ಕಾಣಮ್ಮಯಾರಿಗೆ ಉಸುರಲೆ ನೀರಜಾಕ್ಷಿಯೆ ಎನ್ನಬಾರದೆ ಮುನಿದು ತಾಳಲಾರೆ ನೋಡಮ್ಮ 1 ಹೆಣ್ಣುಜನ್ಮ ವ್ಯರ್ಥಕಾಣಮ್ಮ ಎನ್ನಪುಣ್ಯವಿನ್ನಿಂತಾಯಿತಮ್ಮಬಣ್ಣ ಸರವನೀವೆ ಭಾಮಿನಿರನ್ನಳೆಕಣ್ಣಾಣೆ ಕರೆತಾರೆ ಪುಸಿಯಲ್ಲ ಕೃಷ್ಣನ 2 ಅಂತರಂಗವ ತಿಳಿದೇನಮ್ಮ ಪ್ರಾಣ-ಕಾಂತ ಮನೆಗೆ ಬಂದನಮ್ಮಪಂಥವ ಬಿಟ್ಟೀಗ ಬಂದೆ ನಾ ಪಾಲಿಸುವಕಂತುಜನಕ ಹಯವದನ ರಂಗಯ್ಯನ 3
--------------
ವಾದಿರಾಜ
ಆತ್ಮನಿವೇದನೆ ಅಂಜಬ್ಯಾಡ ಅಂಜಬ್ಯಾಡೆಲೋ ಜೀವ ಭವ ಭಂಜನ ಹರಿ ಶರಣರ ಕಾವಾ ಪ ಮಾತ ಹೇಳುವೆ ನಿನಗೊಂದ ಪರರಜ್ಯೋತಿ ಕಾಣುವತನಕೀ ಬಂಧ ಭೂತ ಭೇತಾಳಗಳಿಂದ ನಿನಗೆ ಭೀತಿ ಪುಟ್ಟಲಿಲ್ಲೋ ಮತಿಮಂದ 1 ಛೇದ ಭೇದಗಳು ನಿನಗೆಲ್ಲಿ ನೀ ಅ- ನಾದಿ ನಿತ್ಯವೆಂಬುದ ಬಲ್ಲಿ ವೇದ ಬಾಹ್ಯರಾಗದೆ ಇಲ್ಲಿ ಹರಿ ಪಾದ ಇನ್ಯಾಕೆ ಪೂಜಿಸಲೊಲ್ಲಿ 2 ನೀನು ನಿನ್ನದು ಅಲ್ಲವೋ ನೋಡಾ ದೇಹ ನಾನು ನನ್ನದೆಂಬರೋ ಮೂಢಾ ಮಾನಹಾನಿ ಮಾಡಿಕೊಳಬೇಡ ಬಿಡು ಸಾನುಬಂಧಿಗಳ ಸ್ನೇಹವ ಗಾಢ 3 ಅಹಿತಾದಿ ವಿಭೂತಿಯ ನೋಡೋ ಸೋಹಂ ಎಂಬರೆ ವಿಘಾತಿಯ ನೇಹವ ಪಡೆವರೆ ಗೀತೆಯ ಕೇಳಿ ಮೋಹವ ಕಳಕೋ ವಿಜಾತಿಯ 4 ಮಧ್ವವಲ್ಲಭ ಮಾಡಿದ ಗ್ರಂಥ ದೊಳಗದ್ವೈತತ್ರಯ ತಿಳಿದಂಥ ವಿದ್ವಾಂಸರು ಚರಿಸುವ ಪಂಥವನ್ನು ಸದ್ಭಕ್ತಿಲಿ ಸಾಧಿಸು ಭ್ರಾಂತ 5 ಜಾಗರ ಸ್ವಪ್ನ ಸುಷುಪ್ತಿಗಳೊಳು ವರ ಭೋಗಿಶಯನನ ರೂಪಗಳೇಳು ಭಾಗವತ ಬಲ್ಲವರ ಕೇಳು ಬೃಹ- ದ್ಯಾಗವ ಹರಿಗರ್ಪಿಸಿ ಬಾಳು 6 ಪಂಚಾತುಮ ಸಿಲುಕವ ಷಟ್ ಪಂಚ ಪಂಚಿಕೆಗಳ ಕರ್ಮವ ಮೀಟಿ ಪಂಚಿಕೆ ತಿಳಿದುಕೊಂಡರೆ ನಿಷ್ಪ್ರ ಪಂಚನಾಗಿ ನೀ ಕಡೆದಾಟಿ7 ಜ್ಞಾನೇಚ್ಛಾ ಕ್ರಿಯಾ ಶಕ್ತಿಗಳೆಂಬ ಈ ಮ- ಹಾನುಭಾವದಿ ನಿನ್ನ ಬಿಂಬ ತಾನೇ ಸರ್ವತ್ರದಲಿ ಕಾಂಬ ಇದ- ಕೇನು ಸಂದೇಹವಿಲ್ಲವೋ ಶುಂಭ 8 ತಾಪತ್ರಯಂಗಳು ನಿನಗೆಲ್ಲಿ ಪುಣ್ಯ ಪಾಪಕ್ಕೆ ಲೇಪನಾಗೋಕೆ ಹೊಲ್ಲ ಪ್ರಾಪಕ ಸ್ಥಾಪಕ ಹರಿಯೆಲ್ಲ ಜಗ ದ್ವ್ಯಾಪಕನೆಂದರಿತರೆ ಕೊಲ್ಲ 9 ಡಿಂಭದೊಳಗೆ ಚೇತನವಿಟ್ಟು ಜಗ- ದಂಬಾರಮಣ ಮಾಡಿದ ಕಟ್ಟು ಉಂಬುಡುವ ಕ್ರಿಯೆಗಳನಷ್ಟು ನಿನ್ನ ಬಿಂಬನಾಧೀನನಾದರೆ ಇಷ್ಟ 10 ಲಕ್ಕುಮಿ ಅವನ ಪಟ್ಟದ ರಾಣಿ ದೇ- ವರ್ಕಳು ಪರಿಚಾರಕ ಶ್ರೇಣಿ ವಕ್ಕಲು ನಾವೆಲ್ಲರು ಪ್ರಾಣಿ ದಶ- ದಿಕ್ಕುನಾಳುವ ನಮ್ಮ ದೊರೆಯ ನೀ 11 ಮತ್ರ್ಯಲೋಕದ ಸಂಪದ ಪೊಳ್ಳು ಜಗ ಮಿಥ್ಯಮತವೆಂದಿಗು ಜೊಳ್ಳು ಶ್ರುತ್ಯನ್ನರ್ಥ ಪೇಳ್ವದೇ ಸುಳ್ಳು ನೀ ಭೃತ್ಯನು ಕರ್ತನಾಗದಿರೆಲೋ ಕೇಳು12 ಮಾಧವನಲಿ ತನುಮನ ಮೆಚ್ಚು ಕ್ರೋಧರೂಪದ ಕಲಿಮಲ ಕೊಚ್ಚು ಮೋದತೀರ್ಥರ ವಚನವ ಮೆಚ್ಚು ವಾದಿ ಮತಕ್ಕೆ ಬೆಂಕಿಯ ಹಚ್ಚು 13 ಸವಿವುಳ್ಳರೆ ಕೇಳೆನ್ನಯ ಸೊಲ್ಲ ನಮ್ಮ ಪವನನಯ್ಯನ ಪ್ರೇರಣೆಯಿಲ್ಲ ಎವೆಯಿಕ್ಕಲರಿಯದೀ ಜಗವೆಲ್ಲ ಎಂದು ಶಿವ ತನ್ನ ಸತಿಗೆ ಹೇಳಿದನಲ್ಲ 14 ಧ್ರುವ ಬಲ್ಯಾದಿ ರಾಯರ ನೋಡು ನಿನ್ನ ಅವಗುಣಗಳನೆಲ್ಲಾ ಈಡ್ಯಾಡೋ ಅವಶ್ಯವಾಗಿ ಕರ್ಮವ ಮಾಡೋ ಮಾ- ಧವ ನಿನ್ನವನೆಂದು ನಲಿದಾಡೋ 15 ನಿಂದಾ ಸ್ತುತಿಗಳ ತಾಳಿಕೋ ಬಲು ಸಂದೇಹ ಬಂದಲ್ಲಿ ಕೇಳಿಕೋ ಬಂದವರಿಂದಲಿ ಬಾಳಿಕೋ ಗೋ- ವಿಂದ ನಿನ್ನವನೆಂದು ಹೇಳಿಕೋ 16 ತತ್ವವಿಚಾರವ ಮಾಡಿಕೋ ನಿನ್ನ ಭಕ್ತಿಯ ಆಳವ ಅಳಿದುಕೋ ಮಾಯಾ ಮೋಹ ಕಳೆದುಕೋ ನಿನ್ನ ಹತ್ತಿರ ಹರಿಯಿರುವ ನೋಡಿಕೋ 17 ಹಿಂಡು ದೈವಗಳಿಂದ್ಹಿರಿಯನೀತ ತನ್ನ ತೊಂಡನೆಂದದವರಿಗೆ ತಾ ಸೋತಾ ದಂಡಿಸಿ ದಯಮಾಡುವ ದಾತಾ ಭೂ- ಮಂಡಲದೊಳಗೆಲ್ಲ ಪ್ರಣ್ಯತಾ 18 ನಾಡ ಖೋಡಿ ದೈವಗಳಂತೆ ತನ್ನ ಬೇಡಲು ತಾ ಬೇಡಿಕೊಳನಂತೆ ನೀಡುವ ನಿಖಿಳಾರ್ಥವದಂತೆ ನಿಜ ನೋಡಿಕೋ ನಿನಗ್ಯಾತರ ಚಿಂತೆ 19 ಏನು ಕೊಟ್ಟರೆ ಕೈಚಾಚುವ ತನ್ನಾ- ಧೀನವೆಂದರೆ ನಸುನಾಚುವಾ ದಾನವ ಕೊಡಲೂರಿ ಗೀಚುವ ತನ್ನಲಿ ತಾನೇವೇ ಮನದೊಳು ಸೂಚುವ20 ಕರಕರದಲ್ಲಿ ತಾ ಬರುವಾನು ಮರತುಬಿಟ್ಟವರ ತಾ ಮರೆಯಾನು ನಿಜ ಶರಣರ ಕಾದುಕೊಂಡಿರುವಾನು ತನ್ನ ಸರಿಯಂದವರ ಹಲ್ಲು ಮುರಿದಾನು 21 ಆರು ಮುನಿದು ಮಾಡುವದೇನು ಪ್ರೇರ್ಯ ಪ್ರೇರಕರೊಳಗಿದ್ದು ಹರಿ ತಾನು ಓರಂತೆ ಕಾರ್ಯವ ನಡೆಸೋನು ಮುಖ್ಯ ಕಾರಣ ಶ್ರೀಹರಿ ಅಲ್ಲವೇನೋ 22 ಹಲವು ಹಂಬಲಿಸಲ್ಯಾತಕೆ ಹುಚ್ಚಾ ವಿದ್ಯಾ ಕುಲಶೀಲಧನದಿಂದ ಹರಿ ಮೆಚ್ಚಾ ಕಲಿಯುಗದೊಳಗಾರ್ಯರ ಪೆಚ್ಚಾ ತಿಳಿ ಸುಲಭೋಪಾಯಾದಿಗಳ ನಿಚ್ಯಾ 23 ದುರ್ಜನರೊಳು ದೈನ್ಯ ಬಡದಿರು ಸಾಧು ಸಜ್ಜನರೊಳು ವೈರ ತೊಡದಿರು ಅರ್ಜುನಸಖನಂಘ್ರಿ ಬಿಡದಿರು ನಿ- ರ್ಲಜ್ಜನಾಗಿ ಬಾಯ್ಬಿಡದಿರು 24 ಭಯರೂಪದಿ ಒಳಹೊರಗಿದ್ದು ನಿ- ರ್ಭಯ ನಾಮಕನು ಧೈರ್ಯವನೆ ಗೆದ್ದು ಭಯದೋರುವನೆಂಬುದೆ ಮದ್ದು ಮಹಾ ಭಯಕೃದ್ಭಯಹಾರಿಯನೆ ಪೊಂದು 25 ಪರಸತಿಯರ ಸಂಗವ ಬಿಡು ಹರಿ ಸರ್ವೋತ್ತಮನೆಂದು ಕೊಂಡಾಡು ಪರಮಾತ್ಮನ ಧ್ಯಾನವ ಮಾಡು ನರ ಹರಿದಾಸರಂಗಳ ಒಡಗೂಡು 26 ಸೃಷ್ಟಿಗೊಡೆಯ ಶ್ರೀದವಿಠಲ ವಿಷ್ಟಾವಿಷ್ಟನಾಗಿದ್ದೆಲ್ಲ ಇಷ್ಟಾನಿಷ್ಟವ ಕೊಡಬಲ್ಲ ಮನ- ಮುಟ್ಟಿದವರ ಬೆಂಬಿಡನಲ್ಲಾ 27
--------------
ಶ್ರೀದವಿಠಲರು
ಆತ್ಮನಿವೇದನೆ ಅಪಮೃತ್ಯು ಪರಿಹರಿಸೊ ಶ್ರೀ ವೆಂಕಟೇಶ ಅಪರಾಧವೆಣಿಸದಲೆ ಉದ್ಧರಿಸೊ ಶ್ರೀಶಾ ಪ ಅಪರಾಧ ಸಹಸ್ರಗಳ ಮಾಡುತನುದಿನದಿ ಅಪರಿಮಿತ ಮಹಿಮ ನಿನ್ನನ್ನು ಸ್ಮರಿಸದೆ ಚಪಲ ಬುದ್ಧಿಗಳಿಂದ ತಪಿಸಿದೆನೊ ಭವದೊಳಗೆ ಗುಪಿತದಿಂ ಸಲಹಯ್ಯ ಪಿತನೆ ಕೈ ಮುಗಿವೆ 1 ಪೂರ್ವಕಾಲದೊಳೊಬ್ಬ ರಾಜಶೇಖರ ತನ್ನ ಮೋಜಿನಿಂದಲೆ ನಿನ್ನ ಸ್ಮರಣೆ ಮರೆತು ಮೂರ್ಜಗತ್ಪತಿಯ ಪೂಜಿಸದೆ ಕಾಲವ ಕಳೆಯೆ ಆ ಜವನ ದೂತರೆಳೆ ತಂದರೈ ಹರಿಯೆ 2 ಅಂದು ಯಮ ಭಟರುಗಳ ಬಂಧನದೊಳಿರೆ ನೃಪನು ಚಂದದಿಂ ಪಾಪಕರ್ಮಗಳ ನೋಡೆ ತುಂಬಿದ ಪಾಪವೆ ಬಹಳವಾಗುತಿರಲು ಇಂದಿರೇಶನ ಪೂಜೆ ಒಂದೆ ದಿನವೆನಲು 3 ಬಿಡದೆ ಇವನಿಗೆ ಶಿಕ್ಷೆ ಕೊಡಿರಿ ಎಂದೆನಲು ನುಡಿದರಾ ಭಟರುಗಳು ಮೊದಲು ಯಾವದು ಎನಲು ಮೊದಲು ಪುಣ್ಯವು ಎಂದು ನುಡಿದನಾ ನೃಪನು4 ತಕ್ಷಣವೆ ವಿಷ್ಣುದೂತರು ಬಂದು ನೃಪವರನ ಚಿತ್ತಜನಯ್ಯನಿಹ ಉತ್ತಮ ಸ್ಥಳಕೆ ಸತ್ಯವಂತರು ಬಹಳ ಕೀರ್ತಿಸುತ ಶ್ರೀಹರಿಯ ಮತ್ತೆ ವೈಕುಂಠದಲಿ ಮೆರೆಸಿದರು ಕ್ಷಣದಿ 5 ಒಡನೆ ಪುಣ್ಯವು ಮುಗಿಯೆ ನಡಿ ನರಕಕೆಂದೆನಲು ಒಡೆದು ಎದೆ ನಡುಗಿ ಕಳವಳಿಸಿ ನೃಪನು ನುಡಿದ ಹೀಗೆನುತ ಘರ್ಜಿಸುತ ಯಮದೂತರಿಗೆ ಬಿಡಿರಿ ನಿಮ್ಮಯ ಸತ್ಯ ನಿಜವಲ್ಲವೆನುತ 6 ನಾರಾಯಣನ ನೋಡಿದವರಿಗೆ ನರಕ ಭಯ ನಾರದರೆ ಈ ರೀತಿ ಸಾರಿ ಡಂಗುರವ ಹೀಗೆನಲು ನುಡಿಕೇಳಿ ಸಾರಿ ಪೇಳಿದರಾಗ ದೇವ ದೇವನೆ ಇದಕೆ ಉಪಾಯವೇನೆನಲು7 ಪರಮ ಕೃಪಾಳು ಹರಿ ಪರಮ ಭಕ್ತರನೆಲ್ಲ ಕರೆದು ಏಕಾಂತದಲಿ ಸರಸವಾಕ್ಯದಲಿ ಇರಲಿ ಈ ನರನ ವಾಕ್ಯದ ಜಾಣತನವನು ಸುರ ಲೋಕದವರು ಸ್ತುತಿ ಮಾಡಲೆಂದೆನಲು8 ಭಾಗವತ ಜನಪ್ರಿಯ ಬಾಗಿ ನಮಿಸುತಲಿ ವಂದನೆ ಮಾಡುವೆ ನಾಗಶಯನನೆ ನಿನ್ನ ಮಹಿಮೆಗೆಣೆಗಾಣೆನೊ ಬೇಗ ಪಾಲಿಸು ಕಮಲನಾಭ ವಿಠ್ಠಲನೆ 9
--------------
ನಿಡಗುರುಕಿ ಜೀವೂಬಾಯಿ
ಆತ್ಮನಿವೇದನೆ ಆತನೇ ದಾತನು ಯೆತ್ತಿಕೊಡುವವನು ಭೂತದಯೆಯುಳ್ಳಂಥ ಪುಣ್ಯಾತ್ಮನು ಪ ನಿಂದು ಕೀರ್ತಿಯೆ ಪಾಡೆ ದೇಹಿಯನ್ನುತ ಬೇಡೆ ಸಿಂಧು ಜಲದಲಿ ಮಿಂದು ಭಜಿಸಲಾಗ ಬಂಧನವ ಪರಿಹರಿಸಿ ಬಹು ಪ್ರೀತಿಯಿಂದೆನಗೆ ಬಂದಿರುವ ಕಷ್ಟಗಳ ನೀಗುವರು ಯಾರೋ 1 ನಿತ್ತು ಶ್ರೀ ಹರಿಭಜಿಸೆ ಕೂತು ಶ್ರೀ ಹರಿಸ್ಮರಿಸೆ ತಾತನೇ ಗತಿಯೆಂದು ಪಾದದಲಿ ಬೀಳೇ ಹೊತ್ತು ನೋಡದೆ ಮುದದಿ ಭಿನ್ನವೆಣಿಸದೆಯನಗೆ ಯೆತ್ತಿ ಮೋಕ್ಷವ ಬೇಗನೀವ ನಾರೋ 2 ನಾನು ಬಡವನು ಜಗದಿ ದೀನಹೀನನು ಹರಿಯೆ ಏನು ಗತಿಯೆಂದೆನುತ ಚರಣ ಮರೆ ಹೊಕ್ಕೇ ಪಾನ ಮಾಡುತಲೆನ್ನ ಅವಗುಣವ ನೀಗೆನಗೆ ತಾನೆ ಭಿಕ್ಷವು ಬೇಗನೀವ ನಾರೋ 3 ಭಜನೆ ಸ್ತೋತ್ರಗಳರಿಯೆ ಪೂಜೆ ವಿಧಿಯನು ತಿಳಿಯೇ ಅಜನ ಪಿತ ಶ್ರೀಹರಿಯ ಮೆಚ್ಚಿಸಲು ಅರಿಯೇ ಸುಜನರನು ಪೊರೆವಂತೆ ಸಲಹುವನು ಯಾರೋ 4 ನಾನು ಪಾಪಿಯು ಋಣಿಯು ಕ್ಲೇಶವನು ತೊರೆದೀಗ ಇನ್ನು ಮರೆಯದೆ ನಿನ್ನ ದಾಸನಾಗುವೆನು ಚನ್ನಕೇಶವ ಸ್ವಾಮಿ ರಕ್ಷಿಸೆಂದೊದರುತಿರೆ ಪ್ರಾಣವನು ಯತ್ತೆನ್ನ ಸಲಹುವನು ಯಾರೋ 5
--------------
ಕರ್ಕಿ ಕೇಶವದಾಸ
ಆದಿಯುಗದಿ ಮಹ ಆದಿದೈತೇಯನೊಬ್ಬ ಮೇದಿನಿಯೊಳ್ ಸ್ವರ್ಣಕಶ್ಯಪು ನಾಮದಿ ಸಾಧಿಸಿ ಬಂದವಗೊಬ್ಬ ಸೋದರ ಸ್ವರ್ಣಾಂಬಕನೆನಿಸಿ ಮೇದಿನಿ ಚೋರನಾಗಿ ಹತನಾದನು ಆದಿಶೇಷನೆ ವಿಷ್ಟಕ್ಸೇನ ತಾ- ನಾದ ಪ್ರಹ್ಲಾದ ಪ್ರಾಣಾವೇಶದಿಂದ ಸೋದರ ಜೀವಾಂಶಾಪಾನಾವಿಷ್ಟ ಸ- ಲ್ಹಾದನಾಮಕ ಮಿತ್ರನಾದ ಕ ಹ್ಲಾದ ವ್ಯಾನಾವೇಶದಿಂದ ಮೋದದಿ ಸೋಮಾಂಶೋದಾನಾಯುತ ನು- ಹ್ಲಾದ ನಾಮಕ ಸಂಭೂತನಾದ ಆದರೈವರಾದೈತ್ಯಗೆ ಪುತ್ರರು ಮೇದಿನಿ ಸುರರುದ್ಧಾರಗೋಸುಗ ಆದಿದೈವ ನಾರೇಯಣ ತಾ ನಾದಿಕಾರಣ ವಿಶ್ವಕರ್ತಾ ಮೋದಾನಂದ ಮೂರುತಿ ಸುಗುಣ ಭೋಧಪೊರ್ಣ ಸರ್ವಜ್ಞ ಸ್ವಾತಂತ್ರ ವೇದಪುರುಷಾದಿ ಜಡಾದಿ ಜಗಕೆ ಆಧಾರ ಹರಿ ಎಂಬ ಜ್ಞಾನವ ಭೋದಿಸಿ ಬೊಮ್ಮಮುಖರು ಹರಿ ಪಾದಸೇವಕರೆನುತ ನಿತ್ಯ ವಾದದಿ ವಾದಿಗಳ ಜಯಸಿದರವರ ಪಾದಸೇವಿಸಿ ಕರುಣಾಪಡೆದು ಆದಿ ಗುರು ಜಗನ್ನಾಥವಿಠಲನ್ನ ಆದರದಲಿ ಭಜಿಪೆ ಪರಮ ಸುಖ ರಾಗ :ಕಲ್ಯಾಣಿ ಅಸುರರ ಜನ್ಮದಿ ಪುಟ್ಟಿದ ಇವರಿಗೆ ಶ್ವಸನನ ಆವೇಶ ಸುರರಾವೇಶ ಬಲದಿ ಅಸಮಙÁ್ಞನ ಭಕುತಿ ವಿರಾಗವು ವಸುಧಿಯ ತಳದಿ ದಿನದಿನದಲ್ಲಿ ಪಸರಿಪ ಸೂರ್ಯನ ಪ್ರಭೆಯಂದದಲಿ ಮಿಸುಪದಕಿದೇ ಕಾರಣ ಉಂಟು ಬಿಸಜಾಂಬಕ ಹರಿಪೇಳಿದ ಇವರಿಗೆ ಅಸುರೇಶ ಹಿರಣ್ಯಕಶಿಪುವಿನಲ್ಲಿ ಶಿಶುಭಾವದಿಂದ ಜನಿಸಲು ಪೋಗಿರಿ ಪುಸಿಯಲ್ಲ ಮಚ್ಛಾಪÀ ಅಸುರಭಾವ ಪ್ರಲ್ಹಾದಾದ್ಯ ರಸಮಮಹಿಮರಾಗೀ ಜನಿಸಿರೆಂದು ಉಸುರಿದ ವಾಕ್ಯವು ಪ್ರಮಾಣ ಸಿದ್ಧವೆನ್ನಿ ವ್ಯಸನzಲೈವರು ಹರಿಯನೆ ಮತ್ತೆ ಬೆಸಗೊಂಡರೀಪರಿ ಪರಿಯಾ ಅಸುರನ ಪತ್ನಿಯ ಬಸಿರೊಳು ಪುಟ್ಟುವುದು ವಶವಲ್ಲವೋ ಸ್ವಾಮಿ ಕುಸುಮನಾಭನೆ ನಿನ್ನ ಅಸಮಲೋಕದ ಸುಖ ವಸುಧಿತಳಾದಲ್ಲಿ ಎಸಗದು ಎಸಗದು ಎಂದಿನಕಾಲಕ್ಕೂ ಮುಸುಕುವದಙÁ್ಞನ ದುಃಖದ ಭವದಲ್ಲಿ ಕಸವಿಸಿಗೊಳುತಾ ಙÁ್ಞನವನೀಗಿ ಬಿಸನಿಲಯನೆ ನಿನ್ನ ದರುಶನವಿಲ್ಲದೆ ಅಸುನಿಲ್ಲುವ ಬಗೆ ಯಾವುದು ಪೇಳೋ ಶಶಿಧರವಂದ್ಯ ಗುರುಜಗನ್ನಾಥ ವಿಠಲ ನಮ್ಮ ವ್ಯಸನವನು ಕಳೆದು ಸುಖವನು ಸಲಿಸೋ ರಾಗ - ಕಾಂಭೋದಿ ತಾಳ - ತ್ರಿವಿಡಿ ಭಕುತವಾಕ್ಯವ ಲಾಲಿಸಿ ತಾನಾಗ ಪರಿ ನುಡಿದನು ವಿಕಳ ಪೊಂದದೆ ನೀವು ತ್ವರಿತಾದಿ ಧರೆಯೊಳು ಸಕಲರು ಜನಿಸಲು ಮುಸಕದಙÁ್ಞನ ಲಕುಮಿ ಭೂಮಿಯ ಸಹಿತ ಇರುವೆನು ನಿಮ್ಮೊಳು ನಿತ್ಯ ಪರಿಪರಿ ಮಹಿಮವ ಪ್ರಕಟಮಾಡುವೆ ಮುಖ್ಯಪ್ರಾಣನಿಪ್ಪನು ಸತತ ಕಕುಲಾತಿ ಯಾಕಿನ್ನು ನಡಿರೆಂದು ಹರಿಯೆಂದ ಉಕುತ ವಾಕ್ಯದಲಿಂದ ದಿತಿಜನಲ್ಲಿ ಸುಕೃತಿಗಳೈವರು ಉದಯವೈದಿದರಾಗ ಮುಕುತಿದಾಯಕ ಗುರುಜಗನ್ನಾಥ ವಿಠಲನೆಂಬ ಭಕುತಿ ಪೂರ್ವಕ ಙÁ್ಞನವೃದ್ಧಿಯೈದಿದರು ರಾಗ - ಆರಭಿ ತಾಳ - ಅಟ್ಟ ಪಿರಿಯ ಪ್ರಲ್ಹಾದನ್ನ - ಕರದು ತೊಡೆಯ ಮೇಲೆ ಇರಿಸಿ ಪ್ರೇಮದಿ ನಿಮ್ಮ - ಗುರುವೇನು ಪೇಳ್ಯಾನೆ ಮರಿಯಾದೆ ಎನಮುಂದೆ - ಅರಹು ಎನಲು ಬಾಲ ಕಿರಿನಗೆ ಮುಖದಿಂದ - ಹರಿಯೆ ಸರ್ವೋತ್ತಮ ಹರಬೊಮ್ಮ ಮುಖರೆಲ್ಲ - ಪರಿವಾರಭೂತರು ಅರಿದಿಪ್ಪೆ ಎನ್ನಯ್ಯ ಸರಸಿಜಜಾಂಡಕ್ಕೆ ಅರಸು ತಾನಾಗಿದ್ದು ಇರುವಾದಿ ಚೇತನ ತರುವಾದಿ ಜಡಮಯ ಸರ್ವಸ್ಥಳದಲ್ಲಿ ನಿರುತದಿ ವ್ಯಾಪಿಸಿ ಇರುತಿಹ ಹರಿ ಎಂದು ಅರಿತ ಮಾನವÀÀನಿಗೆ ದೊರೆವೋನು ನಿಶ್ಚಯ ಅರಿತು ಪೇಳಿದ ತನ್ನ ತರಳಾನ ನುಡಿಕೇಳಿ ಭರದಿಂದ ಕಂಬವ ಕರದಿಂದ ಬಡಿಯಾಲು ನರಮೃಗಾಕಾರದಿ ಹೊರಗೆ ಬಂದಾದೈತ್ಯನು ದರವ ಬಗೆದು ಕರುಳಮಾಲೆಯತಾ ಕೊರಳೊಳು ಧರಿಸಿದ ಚರಜನ ಪರಿಪಾಲ ಬಿರುದು ಬೀರಿದ ನಮ್ಮ ಗುರುಜಗನ್ನಾಥವಿಠಲ ಶರಣರ ಮರೆಯನೋ ಧರಿತಳದೊಳಗೆ ರಾಗ :ಇಚ್ಛಾ :ತಾಳ - ಆದಿ ಈ ತೆರ ಪ್ರಹ್ಹಾದ ಹರಿಪಾದವ ಭಜಿಸಿ ಪ್ರೀತಿಯ ಪಡೆದು ಭೂಸುರಗಣಕೆ ಭೂತಳದೊಳಗೆ ಯತಿಗಳ ಕುಲಕೆ ನಾಥನು ವ್ಯಾಸಮುನಿ ಎನಿಸಿ ಮರಳಿ ಖ್ಯಾತ ಶ್ರೀ ರಾಘವೇಂದ್ರನೆಂದೆನಿಸಿ ಪ್ರೀತಿಯಿಂದಲಿ ಭಕ್ತರ ಪೊರೆಯಲು ನೀತಿ ಭಾವದಲಿ ಯತಿಯಾಶ್ರಮ ಪೊಂದಿ ಸೀತಾಪತಿರಾಮ ಯದುನಾಯಕ ಕೃಷ್ಣ ಭೀತಿಹರ ನರಸಿಂಹ ವ್ಯಾಸರ ಭಜಿಸಿ ದೂತರ ಮನೋರಥ ಪೂರ್ತಿಸಿ ಪೊರೆವನು ದಾತಗುರುಜಗನ್ನಾಥ ವಿಠಲನ್ನ ನೀತ ವಿಭೂತಿಯ ಪಡೆದು ನಿರ್ಭೀತನಾಗಿಹನು ಜತೆ ದೂತಜನರ ಮಹಾಪಾತಕ ಹರನೆನ್ನಿ ಪ್ರೀತಗುರುಜಗನ್ನಾಥವಿಠಲನೊಲಿವ ರಾಗ :ಶಂಕರಾಭರಣ :ತಾಳ :ಏಕ
--------------
ಗುರುಜಗನ್ನಾಥದಾಸರು
ಆದಿವರಾಹನ ಚೆಲುವಪಾದವ ಕಾಣದೆ ಕಣ್ಣುವೇದನೆಯು ಆಗಿ ಬಲು ಬಾಧಿಸುತ್ತಲಿದೆಯೆನ್ನಈ ಧರೆಯೊಳಗೆ ಶುಕ್ಲನದಿಗೆ ದಕ್ಷಿಣದಲ್ಲಿದ್ದ ಮೇ-ಣ್ ದಾಡೆ ಅತ್ತಿತ್ತಂದ ಪ. ಅಷ್ಟಾ ಸ್ವಯಂ ವ್ಯಕ್ತ ಶ್ರೀಮುಷ್ಣಅಷ್ಟಾಕ್ಷರ ಮಂತ್ರವನ್ನು ಇಷ್ಟುಮಾತ್ರ ತಿಳಿದವರೆಷ್ಟು ಪುಣ್ಯ ಮಾಡಿದಾರೊಸೃಷ್ಟಿಯೊಳಗೆ ಇವರು ಶ್ರೇಷ್ಠರೆಂದು ಅರಿತರೆಕಷ್ಟವು ಬಾರದು ಎಂದೆಂದುಅಷ್ಟದಾರಿದ್ರ್ಯ ಹೋಹುದು ಅಷ್ಟೈಶ್ವರ್ಯವು ಬಾಹುದುಇಷ್ಟು ಮಾತ್ರವಲ್ಲ ಕೇಳೊ ಅಷ್ಟಪುತ್ರರು ಆಹೊರು ದೃಷ್ಟಿಬಾರದಂತೆ ಮನದಿಷ್ಟ್ಟಾರ್ಥವ ಕೊಟ್ಟು ಕಾವಅಷ್ಟದಿಕ್ಕಿನೊಡೆಯನೊಬ್ಬ 1 ವರಾಹ ಅಂಬುಜವಲ್ಲಿ ಚೆಲ್ಲಿತ್ತಾವನದಲ್ಲಿ ಇದ್ದ್ದಾದಿವರಾಹ 3 ಮಂಡೆ ಪೂ ಬಾಡದಿಂದೆನ್ನುಪುಂಡರೀಕಾಕ್ಷ ತಾ ಸವಿದುಂಡು ಮಿಕ್ಕಪ್ರಸಾದವನಾ ಪ್ರ-ಚಂಡ ಹನುಮಂತಗೆ ಕೊಟ್ಟ 4 ಭಾರವ ಮುಗಿಪೋವ್ಯಾಳೆ ಗರುಡನ ಕಂಡು ಈಗಗುರುಮಂತ್ರ ಉಪದೇಶ ಶ್ರೀ-ಹರಿಸ್ಮರಣೆಗಳಿಂದ ನರಕಬಾಧೆÉಗಳ ಇಲ್ಲದಂತೆ ಮಾಡಿ-ದರು ಶ್ರೀಹರಿಯ ವಾಲಗದಿಂದಲಿತಿರುಪತಿ ಸುತ್ತ ಶೇಷಗಿರಿಯ ವಾಸದಲ್ಲಿಪ್ಪವರಾಹ ವೆಂಕಟೇಶನಚರಣಕಮಲವನ್ನು ಹರುಷದಿಂದಲಿ ಕಂಡುಪರಮಸುಖವನಿತ್ತ ಹಯವದನನ ನಂಬಿರೊ 5
--------------
ವಾದಿರಾಜ
ಆಧ್ಯಾತ್ಮ ಹೆಚ್ಚೇನು ಅವಿದ್ಯೆ ಕಡಿಮೆಯೇನುಆಧ್ಯಾತ್ಮ ವಿದ್ಯೆಯದು ಅನುಭವಿಸಲರಿಯದವಗೆ ಪ ಪುಸ್ತಕಂಗಳ ಪಿಡಿದು ಪುಸ್ತಕದೊಳಿದ್ದುದನುವಿಸ್ತಿರಿಸಿ ಎಲ್ಲರಿಗೆ ಹೇಳುತಿಹನುಪುಸ್ತಕದ ಅರ್ಥವನು ಮನಕೆ ತಾರದಲೆಪುಸ್ತಕದ ಅಕ್ಷರವ ಪೇಳುವವಗೆ1 ಜ್ಞಾನವನು ಹೇಳುತಿಹ ಜ್ಞಾನವನು ತಾನರಿಯಜ್ಞಾನಿಗಳ ನಡೆಯನು ಮೊದಲೆ ತಿಳಿಯಜ್ಞಾನಿಗಳನೇ ಕಂಡು ಜ್ಞಾನವಿಲ್ಲೆಂದೆಂಬಜ್ಞಾನಿ ತಾನೆಂತೆಂದು ಬರಿ ಬಣ್ಣಿಸುವಗೆ 2 ಸುಳಿ ಸುಳಿದಾಡುತಸಾಧಿಸದೆ ಪುಣ್ಯ ಪುರುಷರ ನೆಲೆಯ ತಿಳಿಯದಲೆದೇವ ತಾನೆಂದು ಬರಿ ಬೋಧಿಸುವವಗೆ 3 ಯೋಗೀಶ್ವರರ ಕಂಡು ಯೋಗದಿಂದೇನೆಂಬಯೋಗವಳವಟ್ಟ ತೆರನಂತೆ ನುಡಿದಯೋಗಾಮೃತದ ಪೂರ್ಣರಸವ ಸವಿದುಣ್ಣದೆಲೆಯೋಗಿ ತಾನೆಂದು ಬರಿ ತೋರುತಿರುವವಗೆ 4 ಮಾಡಿದಡೆ ಬಹದಲ್ಲ ಕೇಳಿದಡೆ ಬಹದಲ್ಲಆದರಿಸಿ ಒಬ್ಬರಿಗೆ ಹೇಳಿದಡೆ ತಾ ಬರದುಸಾಧಿಸಿಯೆ ಮನನದಭ್ಯಾಸದಿಂ ದೃಢವಾಗಿವಾದಹರ ಚಿದಾನಂದ ತಾನಾದರಲ್ಲದೆ5
--------------
ಚಿದಾನಂದ ಅವಧೂತರು
ಆನಂದ ಆನಂದವು ಈ ಜಗದಿ ಗೋವಿಂದನ ದಯದಿ ಪ ಆನಂದವು ಗೋವಿಂದನ ನಾಮವು ಆನಂದದಿ ಸ್ಮರಿಸುವ ಸುಜನರಿಗೆಅ.ಪ ಬಂಧು ಬಾಂಧವರೆಲ್ಲರು ಕೂಡುತಲಿ ಒಂದೇ ಮನಸಿನಲಿ ಇಂದಿರೇಶನ ಸ್ಮರಣೆಯ ಮಾಡುತಲಿ ನಂದ ಯಶೋದೆಯ ಕಂದನೆ ಪರನೆಂದು ಚಂದದಿ ಕುಣಿದಾಡುತ ಸ್ತುತಿ ಮಾಡಲು ಭವ ಬಂಧನ ಬಿಡಿಸುವ- ನೆಂದು ಮನದಿ ಆನಂದ ಪಡುವರಿಗೆ 1 ಪಕ್ಷಿವಾಹನ ಪುರುಷೋತ್ತಮ ಹರಿಯು ಆನಂದ ವತ್ಸರದಿ ರಕ್ಷಿಸಿ ಪೊರೆವನು ಭಕುತರ ತ್ವರದಿ ಅಕ್ಷರೇಢ್ಯ ಕಮಲಾಕ್ಷನೆ ಪರನೆಂ- ದೀಕ್ಷಿಪ ಭಕುತರ ರಕ್ಷಿಸಿ ಪೊರೆವ ಪ- ರೀಕ್ಷಿತಗೊಲಿದಂದದಿ ಪರಮಾತ್ಮನು ರಕ್ಷ ಶಿಕ್ಷಕನೆಂದೆನುವ ಸುಜನರಿಗೆ2 ಕಮಲಾಪತಿ ಕಾಮನ ಪಿತ ಶ್ರೀಹರಿಯು ಕಾರುಣ್ಯ ನಿಧಿಯು ಕಮಲಾಕ್ಷನು ಕಾಪಾಡುವ ಸುಜನರನು ಕಮಲಭವೇಂದ್ರಾದ್ಯಮರರು ಪೊಗಳಲು ಕಮಲನಾಭ ವಿಠ್ಠಲ ಜಯ ಜಯ ಎಂದು ಸುಮನಸರೊಡೆಯ ಸುಂದರ ಶ್ರೀಹರಿ ತಾ ಶ್ರಮ ಪರಿಹರಿಸುವನೆನುವ ಸುಜನರಿಗೆ3
--------------
ನಿಡಗುರುಕಿ ಜೀವೂಬಾಯಿ
ಆನಂದ ಗಿರಿ ವಿಠಲ | ಕಾಪಾಡೊ ಇವಳಾ ಪ ನೀನೊಲಿಯದಿನ್ನಿಲ್ಲ | ಕಾರುಣ್ಯ ಮೂರ್ತೆ ಅ.ಪ. ಮೋದ ಪಡಿಸುವ ಭಾರಾಶ್ರೀಧರನೆ ನೀನದಲ್ಲೆ | ಹೇ ದಯಾಪರನೇ |ಮಾಧವನೆ ತವದಾಸ್ಯ | ಸಾದರದಿ ಬಯಸುವಳುಹೇ ದಯಾಂಬುಧೆ ಚೆನ್ನ | ಉಪದೇಶಿಮನ್ನಿಸೋ 1 ಕಾಮಾದಿ ಅರಿಗಳನ | ನೇಮದಿಂದಲಿ ಸವರಿಭೂಮಗುಣಿತವ ಸ್ತವನ | ಕಾಮದಲಿ ಇರಿಸೀನೇಮ ಸಾಧನೆಗೈಸೀ | ಕಾಮಿತಾರ್ಥವನೀಗೋಶ್ರೀ ಮಹೀಸೇವಿತನೆ | ರಾಮಗುಣಧಾಮಾ 2 ಮೋದ ಮುನಿ ವಂದ್ಯಾ |ಬೇಧ ಸುಖದ್ವಂದಾದಿ | ಸಾದರದಿ ಅನುಭವಿಪಹಾದಿಯಲ್ಲಿರಿಸೊ ಗುರು | ಗೋವಿಂದ ವಿಠಲಾ 3
--------------
ಗುರುಗೋವಿಂದವಿಠಲರು