ಒಟ್ಟು 1818 ಕಡೆಗಳಲ್ಲಿ , 105 ದಾಸರು , 1378 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇದೇ ಇದೇ ಬ್ರಹ್ಮಮಯ ಸದಮಲಾನಂದೋದಯ ಉದಯಾಸ್ತಮಾನವಿಲ್ಲದೆ ಸದೋದಿತ ಭಾಸುತಿದೆ ಧ್ರುವ ವಸ್ತುವಿದೆ ನಿತ್ಯವಾದ ಅತ್ತ್ಯೋತ್ತಮಾನಂದಬೋಧ ಎತ್ತ ನೋಡಿದರತ್ತ ಹತ್ತಿಲೆ ಸೂಸುತಲ್ಯದೆ 1 ಸತ್ಯಸದಾನಂದೋಬ್ರಹ್ಮ ನಿತ್ಯತೃಪ್ತ ನಿರುಪಮ ಅತ್ತಿತ್ತಲಾಗದೆ ಪೂರ್ಣಮತ್ತವಾಗ್ಯೆನ್ನೊಳಗದೆ 2 ಗುಪಿತ ನಿಜ ಸಕಲಾಗಮ ಪೂರಿತ ಶುಕಾದಿಗಳೂ ಸೇವಿತ 3 ಸರ್ವಸಾಕ್ಷಿ ಸರ್ವಾಧಾರ ಸರ್ವರೊಳು ಸರ್ವೇಶ್ವರ ಸರ್ವಮಿದÀಂ ಖಲುಬ್ರಹ್ಮವೆಂದು ಶ್ರುತಿ ಸಾರುತಿದೆ 4 ಇಹಪರ ಪರಿಪೂರ್ಣ ಮಹಾಗುರು ನಿರಂಜನ ಮಹಿಪತಿ ಬಾಹ್ಯಾಂತ್ರದೊಳು ಸಹಕಾರ ಸಾಕ್ಷಾತ್ಮವಿದೆ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇದೇ ಇದೇ ಸದ್ವಸ್ತು ನಮ್ಮ ಇದೇ ಇದೇ ಧ್ರುವ ನಿಗಮ ತಂದುಳುಹಿದ ಸುಗಮ ಸುವಸ್ತು ಇದೆ ಜಗವು ಬೆನ್ನಿಲೆ ಪೊತ್ತು ನೆಗದದಿದೆ 1 ಧೀರತನವನುದೋರಿ ಧಾರುಣಿಗೆದ್ದದು ಇದೆ ನರಮೃಗನಾದ ನಿಜವಸ್ತುವಿದೆ 2 ಮೇದಿನಿ ಅಳೆದು ಮೂರುಪಾದವ ಬೇಡಿದದಿದೆ ಸಾಧಿಸಿ ಸಾಸಾರ್ಜುನನ ಮರ್ದಿಸಿದಿದೆ 3 ರಾಕ್ಷಸರನೆಲ್ಲ ಕೊಂದು ಶಿಕ್ಷೆಯುಗೈಸಿದಿದೆ ಪಕ್ಷಪಾಂಡವರಿಗ್ಯಾಗಿ ರಕ್ಷಿಸಿದಿದೆ4 ಬತ್ತಲೆ ಸುಳಿದು ಸತಿಯರ ವೃತವಳಿದುದಿದೆ ಉತ್ತಮ ತೇಜಿನೇರುವ ರಾವುತನಿದೆ 5 ಸಗುಣ ನಿರ್ಗುಣನಾದ ಜಗಜ್ಜೀವನವಿದೆ ಅಗಣಿತಗುಣಗಮ್ಯ ಗೋಚರಿವಿದೆ 6 ವಿಶ್ವತೋಮುಖನಾದ ವಿಶ್ವತೋಬಾಹುವಿದೆ ವಿಶ್ವತೋಚಕ್ಷು ವಿಶ್ವರೂಪವಿದೆ 7 ಮುನಿಗಳ ಪ್ರಿಯವಸ್ತು ಪರಾತ್ಪರವಿದೆ ವಾಸವಾಗಿ ವಿಶ್ವದೊಳು ಭಾಸುವದಿದೆ 8 ಭಾಸ್ಕರ ಕೋಟಿ ಪ್ರಕಾಶ ವಸ್ತುವಿದೆ 9
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇದೇ ನಮ್ಮ ವೃತ್ತಿ ಸದ್ಗುರುಭಾವಭಕ್ತಿ ಧ್ರುವ ಇದೇ ನಮ್ಮ ಮನೆಯ ಸದ್ಗುರು ಸ್ಮರಣಿಯ ಇದೇ ನಮ್ಮ ವರ್ತನೆಯು ಸದ್ಗುರು ಪ್ರಾರ್ಥನೆಯು 1 ಇದೇ ನಮ್ಮ ಗ್ರಾಮ ಸದ್ಗುರು ದಿವ್ಯನಾಮ ಇದೇ ನಮ್ಮ ಸ್ತೋಮ ಸದ್ಗುರು ಆತ್ಮಾರಾಮ 2 ಇದೇ ನಮ್ಮ ಭೂಮಿ ಸದ್ಗುರು ಘನಸ್ವಾಮಿ ಇದೇ ನಮ್ಮ ಸೀಮಿ ಸದ್ಗುರು ಅಂತರ್ಯಾಮಿ 3 ಇದೇ ನಮ್ಮ ದೇಶ ಸದ್ಗರು ಉಪದೇಶ ಇದೇ ನಮ್ಮಭ್ಯಾಸ ಸದ್ಗುರು ಜಗದೀಶ 4 ಇದೇ ನಮ್ಮ ವಾಸ ಸದ್ಗುರು ಸಮರಸ ಗ್ರಾಸ ಸದ್ಗುರು ಪ್ರೇಮರಸ 5 ಇದೇ ನಮ್ಮ ವ್ಯವಸನ ಸದ್ಗುರು ನಿಜಧ್ಯಾಸ ಇದೇ ನಮ್ಮ ಆಶೆ ಸದ್ಗುರು ಸುಪ್ರಕಾಶ6 ಇದೇ ನಮ್ಮಾಶ್ರಮ ಸದ್ಗುರು ನಿಜದ್ಯಾಸ ಇದೇ ನಮ್ಮುದ್ದಿಮೆ ಸದ್ಗುರು ಸಮಾಗಮ 7 ಇದೇ ನಮ್ಮ ಭಾಗ್ಯ ಸದ್ಗತಿ ಸುವೈರಾಗ್ಯ ಇದೇ ನಮ್ಮ ಶ್ರಾಧ್ಯ ಸದ್ಗುರು ಪಾದಯೋಗ್ಯ 8 ಇದೇ ನಮ್ಮ ಕುಲವು ಸದ್ಗುರು ದಯದೊಲವು ಇದೇ ನಮ್ಮ ಬಲವು ಸದ್ಗುರು ದಯಜಲವು 9 ಇದೇ ನಮ್ಮಾಭರಣ ಸದ್ಗುರು ದಯ ಕರುಣ ಇದೇ ದ್ರವ್ಯ ಧನ ಸದ್ಗತಿ ಸಾಧನ 10 ಕಾಯ ಸದ್ಗುರುವಿನುಪಾಯ ಇದೇ ನಮ್ಮ ಮಾಯ ಸದ್ಗುರುವಿನ ಅಭಯ 11 ಇದೇ ನಮ್ಮ ಪ್ರಾಣ ಸದ್ಗುರು ಚರಣ ಇದೇ ನಮ್ಮ ತ್ರಾಣ ಸದ್ಗುರು ದರುಶನ 12 ಇದೇ ನಮ್ಮ ಜೀವ ಸದ್ಗುರು ವಾಸುದೇವ ಇದೇ ನಮ್ಮ ದೇವ ಸದ್ಗುರು ಅತ್ಮಲೀವ್ಹ 13 ಇದೇ ನಮ್ಮ ನಾಮ ಸದ್ಗುರು ಸದೋತ್ತಮ ಇದೇ ನಮ್ಮ ನೇಮ ಸದ್ಗುರು ಸರ್ವೋತ್ತಮ 14 ಇದೇ ನಮ್ಮ ಕ್ಷೇತ್ರ ಸದ್ಗುರು ಬಾಹ್ಯಂತ್ರ ಗಾತ್ರ ಸದ್ಗುರು ಘನಸೂತ್ರ 15 ಇದೇ ನಮ್ಮ ತೀರ್ಥ ಸದ್ಗುರು ಸಹಿತಾರ್ಥ ಇದೇ ನಮ್ಮ ಸ್ವಾರ್ಥ ಸದ್ಗುರು ಪರಮಾರ್ಥ 16 ಇದೇ ನಮ್ಮ ಮತ ಸದ್ಗುರು ಸುಸನ್ಮತ ಪಥ ಸದ್ಗುರುಮಾರ್ಗ ದ್ವೈತ 17 ಇದೇ ನಮ್ಮ ವೇದ ಸದ್ಗುರು ಶ್ರೀಪಾದ ಇದೇ ನಮ್ಮ ಸ್ವಾದ ಸದ್ಗುರು ನಿಜಬೋಧ 18 ಇದೇ ನಮ್ಮ ಗೋತ್ರ ಸದ್ಗುರು ಸರ್ವಾಂತ್ರ ಸೂತ್ರ ಸದ್ಗುರು ಚರಿತ್ರ 19 ಇದೇ ಸದ್ಯ ಸ್ನಾನ ಸದ್ಗುರು ಕೃಪೆ ಙÁ್ಞನ ಇದೇ ಧ್ಯಾನ ಮೌನ ಸದ್ಗುರು ನಿಜಖೂನ 20 ಇದೇ ಜಪತಪ ಸದ್ಗುರು ಸ್ವಸ್ವಸೂಪ ಇದೇ ವೃತ್ತುದ್ಯೋಪ ಸದ್ಗುರು ಸುಸಾಕ್ಷೇಪ 21 ಇದೇ ನಿಮ್ಮ ನಿಷ್ಠಿ ಸದ್ಗುರು ಕೃಪಾದೃಷ್ಟಿ ಇದೇ ನಮ್ಮಾಭೀಷ್ಠಿ ಸದ್ಗುರು ದಯಾದೃಷ್ಟಿ 22 ಇದೇ ಪೂಜ್ಯಧ್ಯಕ ಸದ್ಗುರು ಪ್ರತ್ಯಕ್ಷ ಇದೇವೆ ಸಂರಕ್ಷ ಸದ್ಗುರು ಕಟಾಕ್ಷ 23 ಇದೇ ನಮ್ಮ ಊಟ ಸದ್ಗುರು ದಯನೋಟ ಇದೇ ನಮ್ಮ ಆಟ ಸದ್ಗುರು ಪಾದಕೂಟ 24 ಮಾತೃಪಿತೃ ನಮ್ಮ ಸದ್ಗುರು ಪರಬ್ರಹ್ಮ ಭ್ರಾತೃಭಗಿನೀ ನಮ್ಮ ಸದ್ಗುರು ಪಾದಪದ್ಮ 25 ಇದೇ ಬಂಧು ಬಳಗ ಸದ್ಗುರುವೆ ಎನ್ನೊಳಗೆ ಇದೇ ಸರ್ವಯೋಗ ಬ್ರಹ್ಮಾನಂದ ಭೋಗ26 ಇದೇ ಸರ್ವಸೌಖ್ಯ ಮಹಿಪತಿ ಗುರುವಾಕ್ಯ ಇದೇ ನಿಜ ಮುಖ್ಯ ಸದ್ಗತಿಗಿದೆ ಐಕ್ಯ 27
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇದೇ ನೋಡಿರೋ ಸುಜ್ಞಾನ ಸದ್ಬೋಧದಲಿಹುದು ಮನಾ ಧ್ರುವ ಙÁ್ಞನವೆಂಬುದೇ ಪುಣ್ಯನದಿ ಮನ ನಿರ್ಮಲಮಾಡುದು ನಾದಿ ಖೂನದೋರುದು ಸುಪಥದ ಹಾದಿ 1 ಮನಮೈಲ ಹೋಯಿತು ನೋಡಿ ಅನುದಿನ ಮನ ಮುಳಗ್ಯಾಡಿ 2 ನಿತ್ಯ ಸದ್ಗುರು ನಿಜಧ್ಯಾನ ಉತ್ತಮೋತ್ತಮಿದೆ ಸಾಧನ ಹಿತದೋರುತಿದೆ ನಿಧ್ಯಾನ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇದೇ ಸುಪಥನೋಡಿ ಸ್ವಹಿತ ಸಾಧು ಜನರ ಸುಸನ್ಮತ ವೇದಾಂತದ ಸುಸಾರಬೋಧವ್ಹೇಳಿದ ವಸ್ತು ಭಗವದ್ಗೀತಾ ಸಂದಿಸೀಹ್ಯದÀು ಸದೋದಿತ ಭೇದಿಸಿ ನೋಡಲು ತನ್ನೊಳಗ ತಾಂ ದೋರುತಿದೆ ಸಿದ್ದಾಂತ 1 ಮಮೈವಾಂಶೋ ಜೀವಲೋಕೇ ಜೀವಭೂತ ಸನಾತನ ಃ ಸ್ವಾಮಿ ಹೇಳಿದ್ದ ತಿಳಿಯಲಿಕ್ಕೆ ಆತ್ಮಾನುಸಂಧಾನದ ಖೂನ ನೇಮದಿಂದಲಿ ಹೇಳಿದ ಮಾತಿಗೆ ಮುಟ್ಟಿದನೊಬ್ಬರ್ಜುನ ತುಂಬೇದ ವಿಶ್ವದಿ ಪರಿಪೂರ್ಣ 2 ಏಕಾಂಶೇನ ಸ್ಥಿತೋ ಜಗತ ವೆಂಬ ವಾಕ್ಯದನುಭವ ಸೇವಿಸಿದೊಬ್ಬ ಶುಕದೇವ ನಾಲ್ಕುಶೂನ್ಯವು ಮೆಟ್ಟಿನೋಡಲು ಭಾಸುತಿದೆ ಸುಮನದೈವ ತಾನಾಗೀ ಹ್ಯದು ಜೀವ 3 ಜಾನಾತಿ ಪುರುಷೋತ್ತಮಂ ಮನುಷ್ಯರೊಳಗಧಮಾಧಮಾ ಕ್ರಮತಿಳಿದವನೆ ಪರಮಯೋಗಿ ಆತನೇ ಉತ್ತಮೋತ್ತಮಾ ತಾಂ ಕೇಳಿ ನಿಜಾಧ್ಯಾತ್ಮಾ 4 ` ಹರಿ ಃ ಓಂ ತತ್ಸದಿತಿ ' ವೆಂಬ ನಿಜ ತಿಳಯಬೇಕಿದೆ ಮುಖ್ಯ ಏಳುನೂರು ಶ್ಲೋಕದವಾಕ್ಯ ತ್ವರ ತಾಂ ತಿಳಿಯದು ಒಂದೇ ಮಾತಿನ ಬ್ರಹ್ಮಾದಿಕರಿಗಾಟಕ್ಯ ತರಳಮಹಿಪತಿಗಿದೆ ಸೌಖ್ಯ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇದೇವೆ ಬಂದದಾ ಖೂನವು | ಇದೇವೆ ಸಾರ್ಥಕ ಜನುಮವು ಪ ಹೊತ್ತು ಹೋಗದ ಬೀದಿ ಮಾತುಗಳಾಡದೆ ಚಿತ್ತಕ ಆಲೇಶ ತರಗುಡನು ಉತ್ತಮರೊಳುಕೂಡಿ ಶ್ರೀಹರಿ ಮಹಿಮೆಯಾ ನಿತ್ಯ ಕಥಾಮೃತ ಸೇವಿಪನು 1 ಹಾಲವನೆರೆದರೆ ಸರಕನೆ ಕುಡಿಯದ ಬಾಲಕನಂದದಿ ಈ ಮನವು ಕಾಲಕಾಲಕ ಸದ್ಭೋದವ ಕೇಳಿಸಿ ಮ್ಯಾಲ ಸ್ವಹಿತ ಕೊಡುವನು 2 ಉದರದ ಧಾವತಿಗನುದಿನ ಬೆರತಿರ ಇದರೊಳಗೆಚ್ಚರ ಹಿಡಿದಿಹನು ಮದಮತ್ಸರಳಿದು ಗುರುಮಹಿಪತಿ ಪದ ಪದುಮದಹಿಷ್ಠೆಯ ಜಡಿದಿಹನು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಇನ್ನೆಂದಿಗು ಮಾಡದಿರು ಶ್ರೀ ಕೃಷ್ಣ ಸರ್ವೋತ್ತಮನೆಂಬುವರಾ ಸಂಗನುದಿನ ಬಿಡದಿರು ಪ ಕೂಡಿರು ಇನ್ನು ವೇದ ಬಾಹ್ಯರ ದುರ್ಭೋಧಿಗಳ ಸಂಗೆಂದಿಗು ಹೋಗದಿರು ಶ್ರೀಧರನಂಘ್ರಿಯ ಚಿತ್ತದಿ ಬಿಡದಿರೊ ಶರಣರ ಹೊಂದಿರು ಮಂಡಲಿಸೇರದಿರು 1 ದುರ್ಮನುಜರಾದ ಈ ದುಷ್ಟದುರಾತ್ಮರ ಮಾತನೆ ಕೇಳದಿರು ಅನಿಮಿಷ ಬಿಡದಾ ಸಂತರ ಪಾದವು ಅರ್ಚಿಸುತಲಿ ಇರು ದುರ್ಗುಣವುಳ್ಳ ಪರಮ ಪತಿತ ಜನರ ಪಥವನೆ ಬಿಟ್ಟಿರು 2 ಸಕಲ ವೇದ ಶಾಸ್ತ್ರ ಮಂತ್ರ ಮರ್ಮಗಳ ಸರ್ವದಾ ತಿಳಿದಿರು ಇನ್ನು ವಿಕಟ ಕುಭಕ್ತರ ಶಾಸ್ತ್ರಗಳೆಂಬುವನೆಂದಿಗು ನೋಡದಿರು ರುಕ್ಮಿಣಿವರ ಶ್ರೀ ಹೆನ್ನೆವಿಠ್ಠಲನ ಭಕುತಿಯ ಬಿಡದಿರು ಕೂ------ಕತರಾದ ಕುಚೇಷ್ಟರ ಕೂಡಿ ಭಂಗವ ಬಡದಿರು 3
--------------
ಹೆನ್ನೆರಂಗದಾಸರು
ಇನ್ನೆಲ್ಲಿ ಪರಮುಕ್ತಿ ಸಾಧನವು ನಿಮಗೆ ಭಿನ್ನ ಭೇದವಳಿಯದ ಕುನ್ನಿಮನುಜರಿಗೆ ಪ ಆಸೆಮೊದಲಳಿದಿಲ್ಲ ಮೋಸಕೃತಿನೀಗಿಲ್ಲ ಹೇಸಿ ಸಂಸಾರದ ವಾಸನ್ಹಿಂಗಿಲ್ಲ ದೋಷಕೊಂಡದಿ ನೂಕ್ವ ಕಾಸಿನಾಸ್ಹೋಗಿಲ್ಲ ದಾಸಜನ ವ್ಯಾಸಂಗ ಕನಸಿನೊಳಗಿಲ್ಲ 1 ಸತಿಮೋಹ ಕಡಿದಿಲ್ಲ ಸುತರಾಸೆ ಬಿಟ್ಟಿಲ್ಲ ಅತಿಭ್ರಮೆ ಸುಟ್ಟಿಲ್ಲ ಹಿತಚಿಂತನಿಲ್ಲ ಸ್ಮøತಿವಾಕ್ಯ ಅರಿತಿಲ್ಲ ಅತ್ಹಿತಪಥಗೊತ್ತಿಲ್ಲ ಗತಿಮೋಕ್ಷ ಕೊಡುವಂಥ ಪವಿತ್ರರೊಲಿಮಿಲ್ಲ 2 ಹಮ್ಮು ದೂರಾಗಿಲ್ಲ ಹೆಮ್ಮೆಯನು ತುಳಿದಿಲ್ಲ ಬ್ರಹ್ಮತ್ವ ತಿಳಿದಿಲ್ಲ ಚುಮ್ಮನದಳಿಕಿಲ್ಲ ಕರ್ಮ ತುಸು ತೊಳೆದಿಲ್ಲ ಧರ್ಮಗುಣ ಹೊಳಪಿಲ್ಲ ನಿರ್ಮಲಾನಂದ ಪದವಿ ಮರ್ಮ ಗುರುತಿಲ್ಲ 3 ಸತ್ಯಸನ್ಮಾರ್ಗವಿಲ್ಲ ಭೃತ್ಯನಾಗಿ ನಡೆದಿಲ್ಲ ಉತ್ತಮರೊಳಾಡಿಲ್ಲ ಮತ್ರ್ಯಗುಣ ತೊಡೆದಿಲ್ಲ ನಿತ್ಯಸುಖ ದೊರೆವಂಥ ಸತ್ಸೇವೆಯಿಲ್ಲ4 ಮೂರಾರು ಕೆಡಿಸಿಲ್ಲ ಈರೈದು ತರಿಸಿಲ್ಲ ಆರೆರಡು ಮುರಿದಿಲ್ಲ ತಾರತಮ್ಯವಿಲ್ಲ ಸಾರಮೋಕ್ಷದೀಪ ಧೀರ ಶ್ರೀರಾಮನಡಿ ಗಂ ಭೀರ ದಾಸತ್ವ ಸವಿಸಾರ ಕಂಡಿಲ್ಲ 5
--------------
ರಾಮದಾಸರು
ಇವನ ಕಂಡಿರ್ಯಾ ಕಾವಕರುಣನ ಭಾವ ಭಾವಿಸುವ ಪರಿಯಾಗುವ ದೇವನ ಧ್ರುವ ಸಗುಣಲೀಹ್ಯನಾ ಭಕುತಿಗೊಲಿವನಾ ಸುಗಮದಿಂದ ನಿಗಮನುಳುಹಿ ನಗವ ನೆಗೆದನಾ 1 ಸಿರಿಯ ಲೋಲನಾ ವರಕೃಪಾಲನಾ ಧರಿಯನುಳುಹಿ ತರಳಗೊಲಿದು ಪ್ರಿಯವಾದನಾ2 ವರವ ಬಲಿಗೆ ಇತ್ತು ದೋರಿದ ಭಾರ್ಗವರೂಪನಾ 3 ಪರಮ ಆತ್ಮನಾ ಹರಿಸರ್ವೋತ್ತಮನಾ ಸುರರ ನೆರೆಯ ಬಿಡಿಸಿ ಹೊರಟ ಪಾಂಡವಪ್ರಿಯನಾ 4 ಹೊಳೆವ ತೇಜನಾ ಮೂಲೋಕ ಪಾವನಾ ಹಳಿದು ವ್ರತವ ನೋಡಿ ಹಯವನೇರಿ ಸುಳಿದನಾ 5 ಘನ ಮಹಿಮನಾ ದಯಾ ನಿಸ್ಸೀಮನಾ ದೀನ ಮಹಿಪತಿಸ್ವಾಮಿ ಭಾನುಕೋಟೆ ದೀಪ್ತನಾ 6
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇಷ್ಟುದಿನ ಭೂವೈಕುಂಠ ಎಷ್ಟುದೂರವೆನುತಿದ್ದೆದೃಷ್ಟಿಯಿಂದಲಿ ನಿಮ್ಮ ಕಂಡೆ ಸೃಷ್ಟಿಪತಿ ಶ್ರೀರಂಗೇಶ ಪ. ಚಿತ್ರಬೀದಿ ವಿರಾಜಿತ ಚಾರುನೂಪುರ ಶೋಭಿತಸಪ್ತ ಪ್ರಕಾರ ಸಂಪೃಷ್ಠ ಉತ್ತಮ ಶ್ರೀರಂಗಶಾಯಿ1 ಹೇಮ ಸೋಪಾನಗಳಲ್ಲಿಹೇಮಕಟಾಂಜನದಿಂದ ಗುಣಶೋಭಿತ ಶ್ರೀರಂಗೇಶ2 ಚತುರ ವೇದಗಳಲ್ಲಿ ಚತುರಮೂರ್ತಿವೀರ್ಯದಲ್ಲಿಚತುರ ದಿಕ್ಕುಗಳಲ್ಲಿ ಚದುರ ಶ್ರೀರಾಮ ರಂಗಶಾಯಿ 3 ಪಂಕಜನಾಭನೆ ಏಸು ಪಾವನವೊ ನಿಮ್ಮ ದಿವ್ಯಕುಂಕುಮಾಂಕಿತ ಚರಣ ಪಂಕಜಾಕ್ಷ ಶ್ರೀರಂಗೇಶ 4 ಪುಣ್ಯ ವಿದ್ಯಾ ದಯಾನಿಧೆ ಪನ್ನಗಶಾಯಿ ಶೋಭಿತ ಧನ್ಯ ಚಂದ್ರಪುಷ್ಕರಣ ಉನ್ನಂತ ಶ್ರೀ ಹಯವದನ 5
--------------
ವಾದಿರಾಜ
ಈ ಉಪಾಯವು ತೋರಿ ಕೊಡುವೆನು ಪ ಉದಯದಲಿ ಎದ್ದೀಗ ಊರ ವಾರ್ತಿಯ ಬಿಟ್ಟು ಮುದದಿಂದ ವೃಂದಾವನ ಸೇವಿಸಿ ವದನದಲಿ ಶ್ರೀ ಹರಿಯನಾಮ ಗುಣಕಥೆಗಳನು ಪದೋಪದಿಗೆ ಪಾಡಿ ಕೊಂಡಾಡು ನಲಿದಾಡು 1 ಆಮೇಲೆ ದೇವರೆಡೆ ರಂಗವಾಲಿಯನಿಕ್ಕಿ ಕಾಮುಕನಾಗದಲೆ ಸ್ನಾನ ಸಂಧ್ಯಾ ನೇಮ ನಿತ್ಯವ ಮುಗಿಸಿ ದೇವತಾ ಪೂಜೆಗೈದು ಪ್ರೇಮದಿಂದಲಿ ದಾನ ಕರದಲ್ಲಿ ಮಾಡೊ 2 ಮಂಗಳ ಮೂರುತಿಯ ಅಂತರಂಗದಿ ನಿಲಿಸಿ ಶೃಂಗಾರದುಡಿಗೆ ಇಡಿಗಿಯನು ತೊಡಿಸಿ ಮಂಗಳಾರುತಿ ಬೆಳಗಿ ಮನದಲ್ಲಿ ನಲಿನಲಿದು ಕಂಗಳಿಂದಲಿ ನೋಡು ಹರಿಯ ಕೂಡಾಡು 3 ಮೂಲ ಗುಣ ಅವತಾರ ಮಹಿಮೆ ಮಹ ಉನ್ನತ ಲೀಲೆ ವಿನೋದ ಅತಿ ಆಶ್ಚರ್ಯವ ವ್ಯಾಳವ್ಯಾಳೆಗೆ ಪೋಗಿ ಉತ್ತಮ ಜ್ಞಾನಿಗಳಿಂದ ಕೇಳು ಕರ್ಣದಲಿ ಪರಮ ಹರುಷದಲೆ4 ಹರಿಚರಣಕ್ಕೇರಿಸಿದ ಶಿರಿ ತುಲಸಿ ಚಂಪಕ ವರ ಜಾಜಿ ಮಲ್ಲೆ ಮಲ್ಲಿಗೆ ಕ್ಯಾದಿಗೆ ಪರಿಪರಿ ಗಂಧ ಚಂದನ ದಿವ್ಯ ಪರಿಮಳ ಸರಕು ನಾಶಿಕದಲ್ಲಿ ಕೊಳ್ಳು ಸುಖ ಬಾಳು 5 ಅಶಿವರುಣ ಮಧ್ಯ ತ್ರಿವೇಣಿ ವಿಷ್ಣುಪಾದ ಎಸೆÀವ ಕುರುಕ್ಷೇತ್ರ ಅಯೋಧ್ಯ ಮಾಯಾ ವೃಷಭ ಗಿರಿ ಶ್ರೀರಂಗ ಕಂಚಿ ಮೊದಲಾಗ್ಯುಳ್ಳ ಹೆಸರಾದ ಪುಣ್ಯನಿಧಿ ಮಟ್ಟು ದುರಿತವ ಕುಟ್ಟು 6 ಬೇಸರದಲೀಪರಿಚರಿಸಿದರೆ ಜನನಾದಿ ನಾಶನವÀ ಮಾಡಿ ನಾರದವರದನು ದಾಸ ಪುರಂದರಗೆ ವೊಲಿದಂತೆ ವಿಜಯವಿಠ್ಠ ಲೇಶ ವೆಂಕಟ ನಿನಗೆ ಪರಮ ಪದವೀಯನೀವ 7
--------------
ವಿಜಯದಾಸ
ಈ ಭಾಗ್ಯ ನೋಡ ಒಯ್ಯಾರಿನಮ್ಮ ಸೌಭಾಗ್ಯ ಶ್ರೀ ಕೃಷ್ಣ ಕೈ ಸೇರಶೌರಿ ಪ. ಅರಳು ಅರಳು ಮೊದಲಾಗಿ ಏ ನಾರಿಸಕ್ಕರೆಯ ತಂದಿಟ್ಟು ಮಾರುವವರು ಕಡೆಯಿಲ್ಲ 1 ಕುಂಕುಮ ಅರಿಷಿಣ ಅಲಂಕಾರ ದ್ರವ್ಯವಅಂಕ ಅಂಕಣಕ ನೆರವ್ಯಾವ ಏನಾರಿ ಅಂಕ ಅಂಕಣಕ ನೆರವ್ಯಾವ ಬೆಲೆ ಮಾಡೊಕಂಕಣದ ಕೈಯ ಕೆಲದೆಯರು ಕಡೆಯಲ್ಲಾ ಏ ನಾರಿ 2 ಬುಕಿಟ್ಟು ಪÀರಿಮಳ ದ್ರವ್ಯ ಪೊಟ್ಟಣ ಕಟ್ಟಿತರಹತರಹ ಏ ನಾರಿಪೊಟ್ಟಣವ ಕಟ್ಟಿ ತರಹತರದ ದ್ರವ್ಯವ ಕೊಟ್ಟು ಕೊಂಬುವರು ಕಡೆಯಿಲ್ಲ ಏ ನಾರಿ3 ಸೋಜಿಗವಾಗಿದ್ದ ಜಾಜಿ ಮಲ್ಲಿಗೆ ಹೂ ಸೂಜಿ ಮಲ್ಲಿಗೆ ಸರಗಳು ಸೂಜಿ ಮಲ್ಲಿಗೆ ಸರಗಳ ರಂಗನ ಪೂಜೆಗೊಯ್ವೊ ಪುರುಷರು ಏ ನಾರಿ4 ನಾಲ್ಕು ದಿಕ್ಕಿಗೆ ದಿವ್ಯ ಆಕಳ ಹಿಂಡುಗಳು ಸಾಕುವ ಎರಳೆ ಎಳಿಗಾವು ಏ ನಾರಿಸಾಕುವ ಎರಳೆ ಎಳಿಗಾವು ಹೂಂಕರಿಸಿ ಬಾಹೋ ಚಲ್ವಿಕೆಯ ಏ ನಾರಿ 5 ಎತ್ತೆತ್ತ ನೋಡಿದರೂ ಮುತ್ತಿನ ಪಲ್ಲಕ್ಕಿಉತ್ತಮ ರಥವ ಹಿಡಿದೇಜಿ ಏ ನಾರಿಉತ್ತಮ ರಥವ ಹಿಡಿದೇಜಿ ಮ್ಯಾಲಿನ್ನು ಹತ್ತಿ ಬಾಹುವರು ಕಡೆಯಿಲ್ಲ ಏ ನಾರಿ6 ಬಾಜಾರದೊಳಗಿನ್ನು ರಾಜಸಿಂಹಾಸನ ರಾಜ ರಾಮೇಶ ಕುಳಿತಲ್ಲಿಯೆ ಏ ನಾರಿ ರಾಜ ರಾಮೇಶ ಕುಳಿತು ಪೂಜೆಗೊಂಬೊಮೂರ್ಜಗವು ಮುದದಿಂದ ಏ ನಾರಿ7
--------------
ಗಲಗಲಿಅವ್ವನವರು
ಈತನೀಗ ಪ್ರಣವ ಪಾದ್ಯನೊ | ಭೂತ ಪ್ರೇತ ಪ್ರಮಥ ತತಿಗೆ | ನಾಥನೆನಿಪ ನಮಗೆ ನಿರುತ | ವಾಕನೊಳಗೆ ಹರಿಯ ತೋರುವ ಪ ಗಜದನುಜ ವಿನಾಶನೀತ | ಗಜವದನನ ಪೆತ್ತನೀತ | ಗಜನ ಸದದನೀತ ಪೆತ್ತಂ | ಗಜನ ಗೆದ್ದ ಗಂಭೀರನೀತ | ಗಜರಿಪುರಥ ರಮಣನೀತಾ ನಂ | ಗಜಮಾರಗೊಲಿದನೀತ | ಗಜ ವರದನ ಭಕ್ತರಘವೆಂಬೊ | ಗಜಕೆ ಕೇಸರಿಯಾಗಿಪ್ಪನೀತಾ 1 ದ್ವಿಜರಾಜ ಜುಟನೀತಸೋತ್ತಮ | ದ್ವಿಜಗೆ ಪಾಲಿಪನೀತ ಸತತಾ | ದ್ವಿಜ ಪನ್ನಗನ್ನ ಸಮಗುಣನೀತಾ | ದ್ವಿಜ ಕುಲದಲ್ಲಿ ಉದ್ಭವನೀತ | ದ್ವಿಜನ ಶಾಪವ ಕೈಕೊಂಡನೀತ | ದ್ವಿಜ ಭೂಷಣ ಯಾಗದಲಿ ಸೂರ್ಯನ | ಧ್ವಜವ ಕಿತ್ತಿದನೀತ ಕೈಲಾಸ | ದ್ವಿಜವಾಗಿವುಳ್ಳ ಉಗ್ರೇಶನೀತ2 ತ್ರಿಗುಣಾಕಾರ ನೀತ ಮೂರು | ಜಗವದಲ್ಲಣನೀತ ಮೇರು | ನಗಚಾಪನೀತ ನಾರಾಯಣಾಸ್ತ್ರದಿ | ನಗರನುರುಪಿ ಬಿಟ್ಟನೀತ | ಬಗೆಬಗೆಯ ಜೀವಿಗಳಿಗೆ ಬಿಡದೆ | ಅಗಣಿತ ಭೋಗ ಪ್ರದಾತನೀತ | ಮೃಗಲಾಂಛನದ ಮೊಗನಗೆ ಈತ | ನಿಗಮಾಶ್ರವದಗಧಿಕನೀತಾ 3 ಭಸುವ ರಾವಣ ಮಾಗಧ ಕಶ್ಯಪ | ಅಸುರಗಣಕೆ ವರವಿತ್ತನೀತ | ಪಶುವದನ ಪರಮೇಶ್ವರನೀತ | ವಿಷವ ಭಂಜನಭವ ಶಿವನೀತ | ಬಿಸಿಜ ಸಂಭವ ನಂದನನೀತ | ಅಸಮವೀರ ವೈಷ್ಣವನೀತ | ವಸುಧಿಯೊಳಗೆ ಶರಣ ಜನಕೆ | ವಶವಾಗಿಯಿಪ್ಪ ಉಗ್ರೇಶನೀತಾ 4 ಹೇಮಕೂಟಾದ್ರಿ ನಿಲಯನೀತ | ರಾಮದೇವ ವಾಸವಂದ್ಯ | ಸೋಮವರ್ಣನೀತ ಸಕಲ | ಕಾಮಿತಾರ್ಥವ ಕೊಡುವನೀತ | ಯಾಮ ಯಾಮಕೆ ಮನದೊಳು ನಿಂದು | ಕ್ಷೇಮ ಮಾರ್ಗಕ್ಕೆ ಪ್ರೇರಕÀನೀತ | ರಾಮ ವಿಜಯವಿಠ್ಠಲನಂಘ್ರಿ | ನಾಮನೆನಿಸಿ ಕೊಂಡಾಡುವನೀತಾ5
--------------
ವಿಜಯದಾಸ
ಈತನೆ ಕಾಣಿರೊ ಮಧ್ವಮುನಿ ಪ. ಪರಿಪರಿ ಶ್ರುತಿಗಳೆಂಬ ಗುಹೆಗಳಲಿ ಕೇ-ಸರಿಯಂತೆ ಚರಿಸುತ್ತಹರಿಯೆ ಸರ್ವೋತ್ತಮನೆಂಬ ಘೋಷಗಳಿಂದದುರುಳ ವಾದಿಗಳೆಂಬ ನರಿಗಳೋಡಿಸಿದಾತ 1 ಸಕಲಾಗಮಗಳೆಂಬ ಶರಧಿಯೊಳಗೆಯುಕುತಿಯಿಂದಲಿ ಮಥಿಸಿಅಕಳಂಕ ಶ್ರೀಹರಿಯೆಂಬ ರತ್ನವ ಕಂಡುಮಕುಟದೊಳಿಟ್ಟು ಲೋಕದಿ ಮೆರೆಸಿದಾತ 2 ವೇದಸಾರವೆಂಬ ಈಶತತ್ವವಾದಸುಧೆಯ ಕಲ್ಪಿಸಿಕೊಂಡುಆದಿಮೂರುತಿ ಶ್ರೀ ಹಯವದನನ ದಿವ್ಯಪಾದ ಸೇವಕನಾದ ಮಧ್ವಮುನಿಯೆಂಬಾತ 3
--------------
ವಾದಿರಾಜ
ಈಶ ನಿನ್ನ ಚರಣ ಭಜನೆ ಆಶೆಯಿಂದ ಮಾಡುವೆನುದೋಷ ರಾಶಿ ನಾಶ ಮಾಡು ಶ್ರೀಶ ಕೇಶವ ಪ ಶರಣು ಹೊಕ್ಕೆನಯ್ಯ ಎನ್ನ ಮರಣ ಸಮಯದಲ್ಲಿ ನಿನ್ನಚರಣ ಸ್ಮರಣೆ ಕರುಣಿಸಯ್ಯ ನಾರಾಯಣ1 ಕಲುಷ ಮಾಧವ 2 ಹಿಂದನೇಕ ಯೋನಿಗಳಲಿ ಬಂದು ಬಂದು ನೊಂದೆ ನಾನುಇಂದು ಭವದ ಬಂಧ ಬಿಡಿಸು ತಂದೆ ಗೋವಿಂದನೆ 3 ಭ್ರಷ್ಟನೆನಿಸ ಬೇಡ ಕೃಷ್ಣ ಇಷ್ಟು ಮಾತ್ರ ಬೇಡಿಕೊಂಬೆಶಿಷ್ಟರೊಳಗೆ ಇಟ್ಟು ಕಷ್ಟ ಬಿಡಿಸು ವಿಷ್ಣುವೆ 4 ಪಾದ ಪೂಜೆ ಮುದದಿ ಗೈವೆನಯ್ಯ ನಾನುಹೃದಯದೊಳಗೆ ಒದಗಿಸಯ್ಯ ಮಧುಸೂದನ 5 ಕವಿದುಕೊಂಡು ಇರುವ ಪಾಪ ಸವೆದು ಹೋಗುವಂತೆ ಮಾಡಿಜವನ ಬಾಧೆಯನ್ನು ಬಿಡಿಸೊ ಘನ ತ್ರಿವಿಕ್ರಮ 6 ಕಾಮಜನಕ ನಿನ್ನ ನಾಮ ಪ್ರೇಮದಿಂದ ಪಾಡುವಂಥನೇಮವೆನಗೆ ಪಾಲಿಸಯ್ಯ ಸ್ವಾಮಿ ವಾಮನ 7 ಸದನ ಮಾಡು ಮುದದಿ ಶ್ರೀಧರ 8 ಹುಸಿಯನಾಡಿ ಹೊಟ್ಟೆ ಹೊರೆವ ವಿಷಯದಲ್ಲಿ ರಸಿಕನೆಂದುಹುಸಿಗೆ ನನ್ನ ಹಾಕದಿರೋ ಹೃಷಿಕೇಶನೆ 9 ಅಬ್ಧಿಯೊಳಗೆ ಬಿದ್ದು ನಾನು ಒದ್ದುಕೊಂಬೆನಯ್ಯ ಭವದಿಗೆದ್ದು ಪೋಪ ಬುದ್ಧಿ ತೋರೊ ಪದ್ಮನಾಭನೆ10 ಕಾಮಕ್ರೋಧ ಬಿಡಿಸಿ ನಿನ್ನ ನಾಮ ಜಿಹ್ವೆಯೊಳಗೆ ನುಡಿಸುಶ್ರೀಮಹಾನುಭಾವನಾದ ದಾಮೋದರ 11 ಪಂಕಜಾಕ್ಷ ನೀನು ಎನ್ನ ಮಂಕುಬುದ್ಧಿ ಬಿಡಿಸಿ ನಿನ್ನಕಿಂಕರನ್ನ ಮಾಡಿಕೊಳ್ಳೊ ಸಂಕರುಷಣ12 ಏಸು ಜನ್ಮ ಬಂದರೇನು ದಾಸನಲ್ಲವೇನೊ ನಿನ್ನಘಾಸಿ ಮಾಡದಿರೋ ಎನ್ನ ವಾಸುದೇವನೆ 13 ಬುದ್ಧಿ ಶೂನ್ಯನಾಗಿ ನಾನು ಕದ್ದ ಕಳ್ಳನಾದೆನಯ್ಯತಿದ್ದಿ ಹೃದಯ ಶುದ್ಧಿ ಮಾಡೊ ಪ್ರದ್ಯುಮ್ನನೆ 14 ಜನನಿ ಜನಕ ನೀನೆ ಎಂದು ಎನುವೆನಯ್ಯ ದೀನಬಂಧುಎನಗೆ ಮುಕ್ತಿ ಪಾಲಿಸಿಂದು ಅನಿರುದ್ಧನೆ 15 ಹರುಷದಿಂದ ನಿನ್ನ ನಾಮ ಸ್ಮರಿಸುವಂತೆ ಮಾಡು ನೇಮಇರಿಸು ಚರಣದಲ್ಲಿ ಕ್ಷೇಮ ಪುರುಷೋತ್ತಮ 16 ಅಧೋಕ್ಷಜ 17 ಚಾರುಚರಣ ತೋರಿ ಎನಗೆ ಪಾರುಗಾಣಿಸಯ್ಯ ಕೊನೆಗೆಭಾರ ಹಾಕಿ ಇರುವೆ ನಿನಗೆ ನಾರಸಿಂಹನೆ 18 ಸಂಚಿತಾರ್ಥ ಪಾಪಗಳನು ಕಿಂಚಿತಾದರುಳಿಯದಂತೆಮುಂಚಿತಾಗಿ ಕಳೆದು ಪೊರೆಯೊ ಸ್ವಾಮಿ ಅಚ್ಯುತ19 ಜ್ಞಾನ ಭಕ್ತಿ ಕೊಟ್ಟು ನಿನ್ನ ಧ್ಯಾನದಲ್ಲಿ ಇಟ್ಟು ಎನ್ನಹೀನ ಬುದ್ಧಿ ಬಿಡಿಸೊ ಮುನ್ನ ಜನಾರ್ದನ 20 ಜಪತಪಾನುಷ್ಠಾನ ನೀನು ಒಪ್ಪುವಂತೆ ಮಾಡಲಿಲ್ಲತಪ್ಪ ಕೋಟಿ ಕ್ಷಮಿಸಬೇಕು ಉಪೇಂದ್ರನೆ 21 ಮೊರೆಯನಿಡುವೆನಯ್ಯ ನಿನಗೆ ಸೆರೆಯ ಬಿಡಿಸು ಭವದ ಎನಗೆಇರಿಸು ಭಕ್ತರೊಳಗೆ ಪರಮಪುರುಷ ಶ್ರೀಹರೇ22 ಪುಟ್ಟಿಸಲೇ ಬೇಡವಿನ್ನು ಪುಟ್ಟಿಸಿದಕೆ ಪಾಲಿಸಿನ್ನುಇಷ್ಟು ಬೇಡಿಕೊಂಬೆ ನಾನು ಶ್ರೀಕೃಷ್ಣನೆ23 ಸತ್ಯವಾದ ನಾಮಗಳನು ನಿತ್ಯದಲ್ಲಿ ಪಠಿಸುವವರಅರ್ತಿಯಿಂದ ಕಾಯದಿರನು ಕರ್ತೃ ಕೇಶವ 24 ಮರೆತು ಬಿಡದೆ ಹರಿಯ ನಾಮ ಬರೆದು ಓದಿ ಕೇಳುವರಿಗೆಕರೆದು ಮುಕ್ತಿ ಕೊಡುವ ಬಾಡದಾದಿಕೇಶವ 25
--------------
ಕನಕದಾಸ