ಒಟ್ಟು 171 ಕಡೆಗಳಲ್ಲಿ , 49 ದಾಸರು , 156 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶ್ರೀಮನೋಹರ ನಿನ್ನ ನಾಮವೇ ಯೆನ್ನುಸಿರು ಕ್ಷೇಮ ನಾಡಿಗಳಲ್ಲಿ ತಿರುಗುತಿರಲಿ ಪ ಕಾಮಾದಿ ಷಡ್ವರ್ಗವ್ಯಾಪನೆಯನೋಡಿಸುತ ಪ್ರೇಮದಿಂ ಹೃತ್ಪದ್ಮದಲಿ ತೋರು ಸತತ ಅ.ಪ ಪ್ರಾಪಂಚಿಕರ ಮನವು ವಿಷಯಗಳಿಗೆಳೆವಂತೆ ಪಾಪಹರ ನಿನ್ನೊಳಗೆ ಯನ್ನ ಮನವಿರಲಿ ತಾಪತ್ರಯಂಗಳಿಗೆ ತನಯನನು ಸಿಲುಕಿಸದೆ ಕಾಪಾಡಿಕೋ ಸ್ವಾಮಿ ದಾಸಾನುದಾಸನಂ1 ಕನಸು ಎಚ್ಚರ ನಿದ್ದೆ ಎಂಬವಸ್ಥೆಗಳಲ್ಲಿ ದಿನಕರಪ್ರಭು ಮೂರ್ತಿಯವತಾರ ತೋರಿ ಅನುನಯದಿ ಪದಯುಗವ ಶರಣು ಹೊಂದುವ ಪರಿಯ ಕನಿಕರದಿ ಕರುಣಿಸೈ ಕಮಲನಯನ 2 ಕಫವಾತ ಪಿತ್ಥಗಳ ವಿಕೃತಿಗಳು ಬಾರದೆಲೆ ಅಪರಿಮಿತ ಸುಂದರಾನಂದ ನೀಡಿ ಸಫಲಮಂತ್ರವ ನುಡಿಸಿ ಕೃಪೆಯಿಂದ ಕೈಪಿಡಿದು ಸುಪಥದಿಂ ನದಿದಾಟಿ ಸೇರಿಸಿಕೊ ಅಡಿಗೆ 3 ಹರಿಹರೀ ಹರಿಯೆಂಬೆ ತಾಯಿ ತಂದೆಯೆ ಗುರುವೆ ದೊರೆಯೆನೀ ಸೋದರನು ಸಖನು ಬಂಧೂ ಧರಣೀಧರ ಸರ್ವತ್ರ ಬೆಂಬಿಡದೆ ಸಹಕರಿಸಿ ಪೊರೆವುದೈ ಭವನಾಶ ಹೆಜ್ಜಾಜಿ ಶ್ರೀಶಾ 4
--------------
ಶಾಮಶರ್ಮರು
ಷಷ್ಠಿಯ ದಿವಸ (ಶ್ರೀ ವೆಂಕಟೇಶನ ಅವಭೃಥ ಸ್ನಾನ) ರಂಭೆ :ಸಖಿಯೆ ಕೇಳೀಗ ಸಲುಗೆವಂತಳೆ ಮುಕುತಿದಾಯಕ ಮೂಲಪುರುಷಗೆ1 ಭೇರಿಶಬ್ದವು ನಗಾರಿಘರ್ಜನೆ ಮೌರಿತಾಳವು ಮೃದಂಗಶಬ್ದವು 2 ಉದಯಕಾಲದಿ ಒದಗಿ ಭಕುತರು ಪದುಮನಾಭನ ಪಾಡಿ ಪೊಗಳ್ವರು3 ಭೂರಿಮಂಗಲಕರದ ಶಬ್ದವು ಸೇರಿ ಕಿವಿಯೊಳು ತೋರುವುದಲ್ಲೆ4 ನಿದ್ದೆಬಾರದು ನಿಮಿಷಮಾತ್ರಕೆ ಎದ್ದು ಪೇಳೆಲೆ ಏಣಲೋಚನೆ5 ಸುಮ್ಮನೀನಿರು ಸುಳಿಯಬೇಡೆಲೆ ಎಮ್ಮುವುದು ನಿದ್ರೆ ಏನ ಪೇಳಲಿ6 ಬೊಮ್ಮಸುರರಿಗು ಪೊಗಳತೀರದು ತಿಮ್ಮರಾಯನ ಮಹಿಮೆ ದೊಡ್ಡಿತು7 ನಿನ್ನೆ ದಿವಸದ ನಿದ್ರೆವಿಹುದೆಲೆ ಕಣ್ಣಿಗಾಲಸ್ಯ ಕಾಂಬುವದಲ್ಲೇ8 ಬಣ್ಣಿಸುವದೆಲೆ ಬಹಳವಿಹುದಲೆ ಪನ್ನಗವೇಣಿ ಪವಡಿಸೆ ನೀನು9 ಏಳು ಏಳಮ್ಮ ಅಲಸ್ಯವ್ಯಾತಕೆ ಕಾಲಿಗೆರಗುವೆ ಹೇಳಬೇಕಮ್ಮ10 ಜಯಜಯ ವಾಧಿಶಯನ ಜಯಜಯ ದೈತ್ಯವಿನಾಶ ಜಯಜಯ ಶ್ರೀನಿವಾಸ1 ಗಂಧಕಸ್ತೂರಿಪುಣುಗಚಂದನಪನ್ನೀರುಗಳ ಹೊಂದಿಸಿ ತೋಷದಿ ಮಂದರಧರಗೆ2 ಆಕಾಶರಾಯನ ಮಗಳು ಹರುಷದಿಂದೊಡಗೂಡಿ ಶ್ರೀಕರ ವೆಂಕಟಪತಿಯು ಸರಸವಾಡಿ3 ಮಾಧವ ಸಹಿತಲಿ ಸಾದರದಿಂದಲಿ ಸರಸವಾಡಿ4 ಬಡನಡು ಬಳುಕುತಲಿ ಎಡಬಲದಲಿ ಸುಳಿದು ಕಡಲೊಡೆಯಗೆ ಲಕ್ಷ್ಮಿ ಚೆಲ್ಲಿದಳಾಗ5 ಛಲದಿ ಪದ್ಮಾವತಿಯು ಜಲಜನಾಭನ ಮೇಲೆ ಒಲವಿನಿಂದಲಿ ಬಂದು ಚೆಲ್ಲಿದಳಾಗ6 ಭರದಿ ಶ್ರೀದೇವಿಯು ಸರಸಿಜಮುಖದಲ್ಲಿ ಪರಮ ಸುಸ್ನೇಹದಿ ಬೆರಸಿದಳಾಗ7 ಭೂದೇವಿ ಭುಲ್ಲವಿಸಿ ಮಾಧವನ ಮುಖದೊಳಗೆ ಮೋದದಿಂದಲಿ ಬಂದು ಚೆಲ್ಲಿದಳಾಗ8 ಸುತ್ತುಮುತ್ತಲು ಇವರ ಆರ್ತಿಯಿಂದಲಿ ಹರಿಯು ವೃತ್ತಕುಚವ ನೋಡಿ ಚೆಲ್ಲಿದನಾಗ 9 ಝಣಝಣಾಕೃತಿಯಿಂದ ಮಿನುಗುವಾಭರಣದ ಧ್ವನಿಯ ತೋರುತ ಬಲು ಸರಸವಾಡಿ10 ಓಕುಳಿಯಾಡಿದ ನೀರಾನೇಕಭಕ್ತರು ಮಿಂದು ಏಕಮಾನಸರಾಗಿ ಪೊರಟರು ಕಾಣೆ11 * * * ಆಡಿದರೋಕುಳಿಯ ಶರಣರೆಲ ಆಡಿದರೋಕುಳಿಯಪ. ಕಾಡುವ ಪಾಪವ ಓಜಿಸಿ ಹರಿಯೊಳ- ಗಾಡಿ ನಿತ್ಯಸುಖ ಬೀಡಿನ ಮಧ್ಯದಿ1 ಅಬ್ಬರದಿಂದಲಿ ಉಬ್ಬಿ ಸಂತೋಷದಿ ಒಬ್ಬರ ಮೈಗಿನ್ನೊಬ್ಬರು ಚೆಲ್ಲುತ 2 ಚೆಂಡು ಬುಗರಿನೀರುಂಡೆಗಳಿಂದಲಿ ಹಿಂಡು ಕೂಡಿ ಮುಂಕೊಂಡು ಪಿಡಿಯುವರು3 ಸುತ್ತುಮುತ್ತ ಒತ್ತೊತ್ತಿ ಮುತ್ತಿ ಜಲ- ವೆತ್ತಿ ಚಿತ್ತತನುನೆತ್ತಿಗೆ ಸೂಸುತ್ತ4 ರಂಭೆ : ನಾರಿ ಕೇಳೀಗ ಭೂರಿಭಕುತರು ಶ್ರೀರಮಾಧವ ಸಹಿತ ಬಂದರು1 ಭಾವ ಶ್ರೀಹರಿ ಪ್ರತಿರೂಪದೋರುತ ದೇವ ತಾನೆ ನಿದ್ರ್ವಂದ್ವನೆನ್ನುತ 2 ಹೇಮಖಚಿತವಾದಂದಣವೇರಿ ಪ್ರೇಮಿಯಾಗುತ ಪೊರಟು ಬರುವನು 3 ವಲ್ಲಭೆಯರ ಕೂಡಿ ಈ ದಿನ ಫುಲ್ಲನಾಭನು ಪೊರಟನೆತ್ತಲು4 ಊರ್ವಶಿ : ನಾರಿ ನೀ ಕೇಳಿದರಿಂದ ಈಗ ಭೂರಿಭಕುತರಾನಂದ ಶ್ರೀರಮಾಧವ ಮಿಂದ ನೀರಿನೊಳಾಡುತ್ತ ಓರಂತೆ ತುಳಸಿಮಾಲೆಯ ಧರಿಸುತ್ತ ಭೇರಿಡಂಕನಗಾರಿಶಬ್ದ ಗಂ- ಭೀರದೆಸಕವ ತೋರಿಸುತ್ತ ವೈ- ಯಾರದಿಂದಲಿ ರಾಮವಾರ್ಧಿಯ ತೀರದೆಡೆಗೆಲೆ ಸಾರಿ ಬಂದರು1 ವರದಭಿಷೇಕವ ರಚಿಸಿ ಬಕು- ತರ ಸ್ನಾನವನನುಕರಿಸಿ ಭರದಿಂದ ಪೂಜಾಸತ್ಕಾರ ಸೇವೆ ಕೈಗೊಂಡು ತ್ವರಿತದಿ ನಗರಾಂತರಕನುವಾದನು ಬರುತ ದಿವ್ಯಾರತಿಗೊಳ್ಳುತ ಚರಣ ಸೇರಿದ ಭಕ್ತರಿಷ್ಟವ ನಿರುತ ಪಾಲಿಸಿ ಮೆರೆವ ಕರುಣಾ- ಕರ ಮನೋಹರ ಗರುಡವಾಹನ2 ರಂಭೆ : ಸರಸಿಜಾನನೆ ಈ ಸೊಲ್ಲ ಲಾಲಿಸೆ ಕರವ ಮುಗಿಯುತ್ತಕೈಯ ತೋರುತ1 ಪರಮಪುರುಷ ಗೋವಿಂದ ಎನುತಲಿ ಹೊರಳುತುರಳುತ ಬರುವದೇನಿದು2 ಊರ್ವಶಿ :ಅಂಗದಾಯಾಸವೆಲ್ಲವನು ಪರಿ- ಭಂಗಿಪ ಸೇವೆಯೆಂಬುದನು ಅಂಗಜಪಿತಚರಣಂಗಳ ರಜದಲಿ1 ಹೊಂಗಿ ಧರಿಸಿ ಲೋಟಾಂಗಣ ಎಂಬರು ರಂಗನಾಥನ ಸೇವೆಗೈದ ಜ- ನಂಗಳಿಗೆ ಭಯವಿಲ್ಲವದರಿಂ- ದಂಗವಿಪ ಲೋಲೋಪ್ತಿ ಕೋಲಾ- ಟಂಗಳನು ನೀ ನೋಡು ಸುಮನದಿ2 ಕೋಲು ಕೋಲೆನ್ನಿರೊ ರನ್ನದ ಕೋಲು ಕೋಲೆನ್ನಿರೊಪ. ಪಾಲಾಬ್ಧಿಶಯನ ನಮ್ಮಾಲಯಕೆದ್ದು ಬಂದ ಲೀಲೆಗಳಿಂದ ಜನಜಾಲಗಳೆಲ್ಲರು1 ಗುಂಗಾಡಿತಮನನ್ನು ಕೊಂದು ವೇದವ ತಂದು ಬಂಗಾರದೊಡಲನಿಗಿಟ್ಟನು ನಮ್ಮ ದೇವ2 ಅಡ್ಡಿಮಾಡದೆ ಸುರವಡ್ಡಿಗೆ ಸುಧೆಯಿತ್ತು ಗುಡ್ಡೆಯ ಬೆನ್ನಿಲಿ ಧರಿಸಿದ ನಮ್ಮ ದೇವ3 ರೂಢಿಯ ಕದ್ದನ ಓಡಿಸಿ ತನ್ನಯ ದಾಡೆಯಿಂದಲೆ ಸೀಳ್ದ ಕಾಡವರಾಹನಮ್ಮ4 ಸಿಂಗನ ರೂಪತಾಳಿ ಹೊಂಗಿ ಕಂಬದಿ ಬಂದು ಬಂಗಾರಕಶ್ಯಪುವಂಗವ ಕೆಡಹಿದ5 ಗಿಡ್ಡನಾಗುತ ಕೈಯೊಡ್ಡಿ ದಾನಕೆ ಮನ- ಸಡ್ಡಿಮಾಡದೆ ಮೇಣು ದೊಡ್ಡವನಾದನಮ್ಮ6 ಕಾಮಧೇನುವಿಗಾಗಿ ಕಾರ್ತವೀರ್ಯನ ಕೊಂದು ಭೂಮಿಯ ಬುಧರಿಗೆ ಪ್ರೇಮದಿನಿತ್ತನಮ್ಮ7
--------------
ತುಪಾಕಿ ವೆಂಕಟರಮಣಾಚಾರ್ಯ
ಸತತ ನಿನ್ನ ಭಜನೆಯಲ್ಲಿ ಹಿತವ ಪೊಂದಿಸೊ ದೇವ ಪ ಅತುಲ ಮಹಿಮೆಗಳಲ್ಲಿ ಎನ್ನ ಮತಿಯ ಸೇರಿಸೊ ಶ್ರೀಪತೆ ಅ.ಪ ಕಾಲ ಕಳೆಯಿತೊ ದೇವ ನಾಳೆ ನಾಳೆಯೆಂದು ನಿನ್ನ ಪೊಗಳಲಿಲ್ಲವೊ ದೇವ 1 ಯೋಚಿಸದೆಲೆ ನಿನ್ನ ದೈನ್ಯದಿ ನೀಚ ಜನರಲಿ ನಾನು ಕರವ ಯಾಚಿಸುತ್ತ ಶೋಚನೀಯನಾದೆನೊ 2 ಸ್ಥೈರ್ಯದಿಂದ ಮನವು ನಿನ್ನೊಳು ಸೇರದಿರುವುದೋ ದೇವ ಮಾರ ಜನಕನೆ 3 ಕಾಮಕ್ರೋಧದಿಂದ ವಿಷಯ ಪ್ರೇಮಗಳಲಿ ನಾ ನಿನ್ನ ನಾಮ ಮರೆತು ಬಳಲಿದೆನೊ ಕಾಮಿತಪ್ರದ 4 ಸಣ್ಣ ಜನರ ನಡೆನುಡಿಗಳಿಂ ಖಿನ್ನನಾದೆನೊ ದೇವ ಎನ್ನಮೇಲೆ ಕರುಣದಿಂದ ಪ್ರಸನ್ನನಾಗೆಲೊ ದೇವ 5
--------------
ವಿದ್ಯಾಪ್ರಸನ್ನತೀರ್ಥರು
ಸಿಕ್ಕ ಸಮಯ ನಿಜ ತಿಳಿಯದಲೆ ಬರಿ ಕಕ್ಕುಲಾತಿ ನಿನಗ್ಯಾಕಲೆ ಮರುಳೆ ಪ ಬೊಕ್ಕಸ ಭಂಡಾರವೆಲ್ಲ ಸುಳ್ಳೆ ಸುಳ್ಳೆ ನಿನ್ನ ನಿಕ್ಕುವ ಮನೆ ಊರ್ಹೊರಗಿದೆಲೆ ಅ.ಪ ಮೇಲುಮಾಳಿಗೆಮನೆ ಸ್ಥಿರವಲ್ಲ ಬಹು ಬಾಳುವೆ ಧನಸಿರಿ ನಿನಗಿಲ್ಲ ನಾಳೆ ಬಂದೊದಗಲು ಯಮಶೂಲ ಹಿಂ ಬಾಲಿಸಿ ನಿನಗೊಂದು ಬರೋದಿಲ್ಲ 1 ಬಂಧುರ ಬುವಿಯಧಿಕಾರ ನಿಖಿಲ ಮಹ ಅಂದಣೈಶ್ವರ್ಯ ಛತ್ರ ನಂಬಿಗಿಲ್ಲ ತಂದೆ ತಾಯಿ ಬಂಧು ಬಳಗೆಲ್ಲ ನಿನ ಗೊಂದುಕೊಂದು ಸಂಬಂಧವಿಲ್ಲ 2 ಅತಿರಥರೆಲ್ಲರೀ ಭೂಮಿ ಸುಖ ನೆಚ್ಚಿ ಮತಿಗೆಟ್ಟು ಪೊಂದದಿರತಿ ದು:ಖ ಜತೆಯಲಾರ್ವೊಯ್ಯಲಿಲ್ಲಂತೆಕ್ಕ ಸುಳ್ಳೆ ವ್ಯಥೆ ಬಟ್ಟರು ತಿಳಿಯದಿದರ ಲೆಕ್ಕ 3 ಕ್ಷೋಣೆ ಪಾರುಪತ್ಯತನವೆಲ್ಲ ತಿಳಿ ಆನೆ ಕುದುರೆ ಒಂಟೆ ನಿನ್ನದಲ್ಲ ಕಾಣುವುದೆಲ್ಲ ಮಾಯಭವಜಾಲ ಮತ್ತು ಮನುಷ್ಯಜನುಮ ಸೀಗೋದಲ್ಲ 4 ನಾನು ನೀನೆಂಬುವ ದುಷ್ಟಮದ ಸುಟ್ಟು ಜ್ಞಾನದೊಡನೆ ಗೆಲಿ ಭವಬಾಧೆ ಧ್ಯಾನದಾಯಕ ಶ್ರೀರಾಮಪಾದ ನಿಜ ಧ್ಯಾನವಿಡಿದು ಪಿಡಿ ಮುಕ್ತಿಪದ 5
--------------
ರಾಮದಾಸರು
ಸಿರಿ ಹರಿಯೇ | ಎನ್ನ ದೊರೆಯೇ ಪ ಎದುರಾಳಿ ಜನ ಬಂದು | ಹದನ ಗೆಡಲು ಮನಬದಿಗ ನಾಗಿಹ ನಿನ್ನ | ಹುದುಗಿಸುತಿಹರಯ್ಯ ಅ.ಪ. ಎನ್ನ ಕಂಗಳು ನಿನ್ನಯ | ರೂಪಂಗಳಚೆನ್ನಾಗಿ ನೋಡದೆಲೆ | ವಿಷಯಾನ್ಯವ |ನನ್ನೆಯಿಂದಲಿ ನೋಡಿ | ಧನ್ಯರಾದೆವು ಎಂದುಮನ್ನಿಸುತಿಹವಯ್ಯ | ಘನ್ನ ಗೋಪಾಲನೆ1 ಕರ್ಣಗಳ್ಹದನ ಕೇಳೋ | ಶ್ರೀಹರಿ ನಿನ್ನಗುಣಗಳ ಕೇಳದಲೇ | ಯುವತೀಯರ ||ತನುಗಳೊರ್ಣನೆ ಕೇಳಿ | ಕ್ಷಣ ಕ್ಷಣಕಾನಂದಸೊನೆಯಿಂದ ತೊಯ್ದಂತೆ | ಎಣಿಸುತಿಹವು ಅಯ್ಯ 2 ಪ್ರಾಣ ಛಾದಿಯ ಪೇಳ್ವೆನೊ | ನೀ ಮುಡಿಧೂವಾಘ್ರಾಣಿಸದೆಲೆ ಕನ್ಯೇರು | ಮುಡಿದಿಹ ಪುಷ್ಪ |ಘ್ರಾಣಿಸುತ್ತಲಿ ಬಹು | ಆನಂದ ಪಡುತಲಿನಾನಾ ಜನ್ಮದಿ ದುಷ್ಟ | ಯೋನಿಗೆ ತರುವೋದು 3 ವದನದ ಪರಿಯ ಕೇಳೊ | ನಿನ್ನಯ ಗುಣಮುದದಲಿ ವರ್ಣಿಸದೆ | ಧನಿಕರ ಸ್ತುತೀ ||ವದಗಿ ಪೇಳುತ ಮುಂದೆ | ಉದರ ಕೋಸುಕವಾಗಿವಿಧಿಯ ಮಾರುತ ದುಷ್ಟ | ಸಾಧನವಾಯ್ತಯ್ಯ 4 ಸ್ಪರಿಶೇಂದ್ರಿಯರ ಸಾಧನ | ಕೇಳೆಲೊ ಹರಿಹರಿಭಕ್ತರಾಲಿಂಗನ | ಮಾಡದಲಿದ್ದುಪರಸ್ತ್ರೀಯ ಸ್ಪರಿಶಕ್ಕೆ | ಹರಿಯುವಂತಿಹುದನ್ನಪರಿಹಾರ ಗೈ ಗುರು | ಗೋವಿಂದ ವಿಠಲಯ್ಯ 5
--------------
ಗುರುಗೋವಿಂದವಿಠಲರು
ಸಿರಿದೇವಿ ಹರಿಯ ದಯವು | ಆವಾವ ಪರಿ ಪಾಲಿಸೆ ಪ ಆಲದೆಲೆಯಲಿ ಅಂದು | ನಿನ್ನಯ ಮ್ಯಾಲೆ ಮಲಗಿಪ್ಪ ಹರಿಯ ತೋಳು ಬಿಗಿದಾಲಂಗಿಸಿ | ಸೃಷ್ಟಿಯ ಲೀಲೆಯನು ಮಾಡಿಸಿದ ತಾಯೆ 1 ವಕ್ಷವಾಲಯವ ಮಾಡಿದೆ | ಆವಾಗ ದಕ್ಷಣಾದೇವ್ಯೆನಿಸಿದೆ ಲಕ್ಷ್ಯವಿಲ್ಲದೆ ಭಾಗ್ಯವ | ಭಕ್ತರಿಗೆ ವೀಕ್ಷೆಯಿಂದಲ್ಲಿ ಈವೆ 2 ದೇವತಾಜನ ಸ್ತುತಿಸೆ | ನೀ ಎನ್ನ ಭಾವ ಹರಿಯಲಿ ನಿಲ್ಲಿಸೆ ಕಾವ ಭಾರವು ನಿನ್ನದೆ | ಶ್ರೀ ವಾಸು ದೇವವಿಠಲನ್ನ ರಾಣಿ 3
--------------
ವ್ಯಾಸತತ್ವಜ್ಞದಾಸರು
ಸೀಸಪದ್ಯ ಮಕರ ಭಾದೆಗೆ ಸಿಲುಕಿ ಕರಿರಾಜ ತಾ ಕರೆಯೆ ಭರದಿ ನೀ ಬಂದೆ ತಂದೆ ಭಾಧಿಸುತಿರಲು ಕಂದ ಪ್ರಹ್ಲಾದನನು ಸಂದೇಹವಿಲ್ಲದೆಲೆ ಬಂದು ಕಾಯ್ದೆ ವಿಪಿನದಲಿ ಧ್ರುವರಾಯ ತಪವಗೈಯುತಲಿರಲು ಕೃಪೆಯಿಂದ ಮೈದೊರ್ದೆ ಕೃಪಣವತ್ಸಲನೇ ಮರಣ ಕಾಲದಿ ಮಗನ ಕರೆದಜಾಮಿಳನಂದು ಕರುಣದಿಂದಲಿ ಪೊರೆದೆ ಕರುಣ ಶರಧೆ ದುರುಳ ಸೆರಗ ಸೆಳೆಯುತಿರೆ ನೊಂದು ಚೀರಿಡಲಕ್ಷಯಾಂಬರವನಿತ್ತೆ ಇಂದು ನೀನಲ್ಲದೆಲೆ ಕಾಯ್ವರಿನ್ನಾರಿಹರು ತಂದೆ ನೀ ಮೈದೋರು ಶ್ರೀ ಕರಿಗಿರೀಶ
--------------
ವರಾವಾಣಿರಾಮರಾಯದಾಸರು
ಸುಲಭದ ಮಾತಿದು ತಿಳಿದು ಪೇಳಿ ಹೊಲಬುದಪ್ಪಲು ಬೇಡ ಸುಲಿಗೆಯಾಹುದು ಮುಂದೆ ಪ ಅಂತರಿಕ್ಷದಲೊಂದು ನಿಂತಿಹ ವೃಕ್ಷವಾ- ನಂತಾನಂತವಾದೆಲೆಗಳುಂಟು ನಿಂತಿಹ ಎಲೆಗಳು ಬೀಳುವುದನು ನೋಡಿ ಮಂತ್ರಿಯೊಬ್ಬನು ಕುಳಿತು ಎಣಿಸುವನಯ್ಯ 1 ಭೂಮಿಯ ಮೇಲೊಂದು ಭೂಮಿಯು ಜನಿಸಲು ತಾ ಮನಸೋತನು ದೊರೆಯೊಬ್ಬನು ಪ್ರೇಮದಿ ರಾಜ್ಯವನಾಳುವ ಸಮಯಕ್ಕೆ ಸೀಮೆಯ ಮೇಲೆಲ್ಲ ಗುಡಿಗಟ್ಟಿತಯ್ಯ 2 ಕಡಗೋಲು ಮಿಡುಕಿತು ಒಡೆಯಿತು ಪಾತ್ರವು ಪಿಡಿದ ಬೆಣ್ಣೆಯೊಳೊಂದು ಗಿಡ ಹುಟ್ಟಿತು ಅಡವಿಯ ಮಧ್ಯದಿ ಹುಟ್ಟಿದ ಗಿಡವಿನ ಎಡೆಯೊಳು ಗಿಣಿ ಬಂದು ಮರಿಯಿಕ್ಕಿತಯ್ಯ 3 ಬಿಲ್ಲುಗಾರನು ಬಂದು ಬಲ್ಲಿದ ಪಕ್ಷಿಯ ಮೆಲ್ಲನೆ ಕೆಡೆಯಲು ಬೇಕೆನುತ ನೆಲ್ಲಿಯ ಎಲೆಯನ್ನು ಎಣಿಸಿ ಬೀಸಾಡುವ ನಲ್ಲನೊಬ್ಬನು ಕಂಡು ಹೊರಗಿಟ್ಟನಯ್ಯ 4 ಗುಡಿಯ ಬಾಗಿಲ ಮುಂದೆ ವೃಕ್ಷದ ಗಿಣಿಯನ್ನು ಮಡದಿಯೋರ್ವಳು ಕಂಡು ಒಳಗಿಟ್ಟಳು ಗಿಡುಗನ ಹಾವಸೆ ಒಡೆಯನು ಕಾಣುತ್ತ ಒಡಲಾಳು ಸುರಭಿಯ ಕಟ್ಟಿದನಯ್ಯ 5 ಮೂಗನು ಕಾಣುತ್ತ ಕೂಗ್ಯಾಡಿ ಕರೆಯಲು ಆಗಲೇ ಕಿವುಡನು ಧ್ವನಿಯ ಕೇಳಿ ಬೇಗದಿ ಕುರುಡನು ಬಂದು ಹಾಲೆರೆಯಲು ಆಗಲೆ ಪಕ್ಷಿಯು ಉಂಡು ಹಾರಿತಯ್ಯ6 ಬುದ್ದಿಹೀನನು ಕಂಡು ಶುದ್ಧ ಸ್ವಾಮಿಯೊಳು ತಿದ್ದಿದ ಗುಡಿಗಳು ಬಿದ್ದಮೇಲೆ ಎದ್ದು ಪಕ್ಷಿಯು ಹೋಗಿ ವರಾಹತಿಮ್ಮಪ್ಪನು ಇದ್ದಲ್ಲಿಗಾಗಿಯೆ ಹಾರಿಹೋಯಿತಯ್ಯ 7
--------------
ವರಹತಿಮ್ಮಪ್ಪ
ಸೃಷ್ಟಿಗೊಡೆಯನಿಗೆ ಜಯ ಮಂಗಳಂ ಕಾಲುಂ- ಶುಭ ಮಂಗಳಂ ಶುಭ ಕ- ಮಲಾಲಯ ರಮಣನಿಗೆ ಜಯ ಮಂಗಳಂ ಬಾಲಕ ರೂಪದಿಂದಾಲದೆಲೆಯ ಮೇಲೆ ಲೀಲೆ ತೋರುವ ಗೋಪಾಲನಿಗೆ 1 ನೀಲಳಕಗಳ ಸಿರಿಮುಡಿಗಟ್ಟಿ ಮ- ರಾಳ ಸಿಂಘಗಳಿಂದದಲಂಕರಿಸಿ ಕಾಲದಿಂದಿಗೆ ಗೆಜ್ಜೆ ಘಲ ಘಲಿಸುತ ತನ್ನ ಕಾಲಕರದೊಳೆತ್ತಿ ಕುಣಿಸುವಗೆ2 ವಾರಿಜ ಭವಪಿತ ಮಾರಕೋಟಿ ಶೃಂ- ಗಾರ ಮೂರುತಿ ಮುಖವಾರಿಜವ ತೋರುವ ಸುಧಾರಸ ವಾರುಧಿ ಗೋಪಕು- ಮಾರ ಶೇಷಾಚಲಧಾರನಿಗೆ 3
--------------
ತುಪಾಕಿ ವೆಂಕಟರಮಣಾಚಾರ್ಯ
ಸೃಷ್ಟಿಯೊಳಗೆ ಶ್ರೀ ಕೃಷ್ಣಮೂರುತಿ ಇನ್ನೆಷ್ಟು ಸ್ತುತಿಸಲಿ ನಾನು ದೃಷ್ಟಿಯಿಂದಲಿ ನೋಡು ಮನಮುಟ್ಟಿ ಭಜಿಸುವೆನು ಸೃಷ್ಟ್ಯಾದಷ್ಟ ಕರ್ತಾ ವಿಠಲಗುಣಶೀಲ ಅಷ್ಟಯತಿಗಳಿಂದ ಇಷ್ಟದಿ ಪೂಜೆಗೊಂಡ ಮದವೋ ಅಟ್ಟಹಾಸದಿಂದಲಿ ಬೆಟ್ಟ ಬೆರಳಿನಿಂದಲಿನೆತ್ತಿದ ಮದವೊ ದಿಟ್ಟಮೂರುತಿ ನಮ್ಮ ಕಾಳೀಮರ್ಧನಕೃಷ್ಣ ಮನೋಭೀಷ್ಟೆಯ ಕೊಡೋ 1 ಇಂದಿರೇಶನೆ ನಿನ್ನ ಒಂದಿನವು ನಾನು ಗೋವಿಂದ ನಿನ್ನಯ ಪಾದಾರವಿಂದವ ಭಜಿಸಲಿಲ್ಲ ಆನಂದ ಮೂರುತಿ ನಿನಗಿಂತ ಸಮಾನ ಅನಿಮಿತ್ತ ಬಂಧುಗಳು ಯನಗಿಲ್ಲ ಎನ್ನಂಥ ಭಕುತರು ನಿನಗನಂತರರಿರುವರು ನಿನ್ನಂಥ ಕರುಣೆ ಇನ್ನಿಲ್ಲ ಜಗದೊಳು ಸರ್ಪಶಯನ ನಮ್ಮ ಕಾಳೀಮರ್ಧನಕೃಷ್ಣ ನಿರುತದಿ ವೊಲಿಯೇ 2 ಸುಂದರಿಯರ ಸೇರಿ ಆನಂದದಿಂದ ಕಳೆದ ಮದವೋ ಸೇವೆಗೊಂಬುವ ಮದವೋ ಸೋಳಸಾಸಿರ ಸುದತಿಯರೊಪ್ಪುವ ಮದವೊ ಮುರಳೀಧರ ನಮ್ಮ ಕಾಳೀಮರ್ಧನಕೃಷ್ಣ ಇಷ್ಟದಿ ಒಲಿಯೆ 3 ಪಾದ ಎಂದಿಗೆ ಲಭ್ಯವೊ ಕಂದನ ನುಡಿ ಕೇಳಿ ಆನಂದ ಪದವಿಯನಿತ್ತು ಮಾನವ ಕಾಯ್ದು ವಸುದೇವ ದೇವಕಿಯ ಬಂಧನವ ಬಿಡಿಸಿದಿ ಆನಂದದಿಂದಲಿ ಅಜಮಿಳಗೊಲಿದು ಮಡುವಿನೊಳಗಿರಲು ಗಜರಾಜ ಮಡದಿಗೆ ಹೇಳದೆ ಗರುಡವಾಹನನಾಗಿ ಬಂದು ಮಕರಿಯನ್ನು ಕೊಂದ ಸಿಂಧುಶಯನ ನಮ್ಮ ಕಾಳೀಮರ್ಧನಕೃಷ್ಣ ಆಪತ್-ಬಂಧೋ 4 ಬಾಲಕತನದಲ್ಲಿ ಏನೇನು ಲೀಲೆಯ ಮಾಡಿದ್ಯೊ ಗೋಪಾಲಕೃಷ್ಣ ಮೂರುತಿ ಎಂದು ವರ್ಣಿಸಲೋ ನಿನ್ನ ಕೀರುತಿ ಗೋವುಗಳ ಕಾಯ್ದುಕೊಂಡು ಎಂದಿಗೆ ಬರುತಿ ನಿನಗೇಕೋ ಇಂಥಾ ಮದವು ಪಾರ್ಥಸಾರಥಿ ಕ್ಷೀರಸಾಗರದಲ್ಲಿ ಲಕ್ಷ್ಮೀ ಸಹಿತವಾಗಿ ಆಲದೆಲೆಯ ಮೇಲೆ ಮಲಗಿರುತ್ತೀ ಥರವಲ್ಲವೋ ನಿನಗಿಂಥ ಮದವು ಬ್ರಹ್ಮಾದ್ಯಮರ ಒಂದಿತ ಮದವು ಜಾರಚೋರ ನಮ್ಮ ಕಾಳೀಮರ್ಧನಕೃಷ್ಣ ಕರುಣಾಸಾಗರ 5
--------------
ಕಳಸದ ಸುಂದರಮ್ಮ
ಸ್ವಾಮಿ ವೆಂಕಟರಮಣ ಭೂಮಿಪಾಲಕ ದೇವ ಸಂಜೀವ ಪ ಸುರರು ಅಸುರರೆಲ್ಲ ಶರಧಿಯ ಮಥಿಸಲು ಸಿರಿಯು ಜನಿಸಿ ಬಂದು ಹರಿಯ ಸೇರಿದಳು 1 ಸತಿ ಕುಸುಮಮಾಲೆಯನು ಅತಿ ಹರುಷದಿ ಜಗತ್ಪತಿಗೆಯಿಕ್ಕಿದಳು 2 ವಾರಿಧಿಯಾಕ್ಷಣ ಧಾರೆಯನೆರೆಯಲು ವಾರಿಜಾಂಬಕ ಲಕ್ಷ್ಮಿ ಒಡನೆ ನಿಂದಿರಲು 3 ಫಣ್ಭಿಹ್ತ್ರ1ಸೆಮಣಿಯೊಳು ರಮಣಿಯನೊಡಗೊಂಡು ಗುಣನಿಧಿಯು ಒಪ್ಪಿರಲು ತರುಣಿಯರೆಲ್ಲ 4 ಪಚ್ಚವ ಧರಿಸಿ ನವ ಸ್ವಚ್ಛವಾಗಿಯೆ ತುಳಿದು ಅಚ್ಯುತ ಮಹಾಲಕ್ಷ್ಮಿಗಚ್ಚಬೇಕೆನುತ 5 ಸಣ್ಣ ಮಲ್ಲಿಗೆ ಎಣ್ಣೆ ಬಣ್ಣವಾದರಿಸಿನವ ಪುಣ್ಯವಂತೆಗೆ ಕೈಗರ್ಣವ ಕೊಡಲು 6 ಸಿರಿ ತನ್ನ ತಲೆಗೆ ಪ್ರೋಕ್ಷಿಸಿಕೊಳಲು ಹರಿಯು ಮೆಚ್ಚಿದನು 7 ಗಟ್ಟಿಯಾದರಿಸಿನವ ಬಟ್ಟಲೆಣ್ಣೆಯಗೂಡಿ ಮುಟ್ಟಲಂಜಿಯೆ ನಿಲಲು ಸೃಷ್ಟಿಪಾಲಕನ 8 ಅಂಗೈಯ ಅರಿಸಿಣವ ಮುಂಗೈಗೆ ಒರಸುತ್ತ ರಂಗನ ಸಿರಿಮೊಗವ ಕಂಗಳಿಂದೀಕ್ಷಿಸುತ 9 ಅಭಯ ಹಸ್ತವನಿತ್ತ ತ್ರಿಭುವನದೊಡೆಯನು ಅಬುಜಲೋಚನೆ ಮುಖಾಂಬುಜಕೆ ತಿಮುರಿದಳು 10 ಸತಿ ಕೈಯ ಅರಿಶಿಣವ ಪತಿಯಾದಿಕೇಶವನ ನುತಿಸಿ ಊರಿದಳು 11 ಸಿರಿಯೆನೆತ್ತಿದ ಕೈಯ ಹರಿ ತಾನು ತೋರಿಸಲು ಸಿರಿ ನಾರಾಯಣ ಎಂದು ಅರಿಶಿಣವ ತಿಮುರೆ 12 ಶಂಖವ ಧರಿಸಿದ ಪಂಕಜಾಕ್ಷನೆ ವಿಷ್ಣು ವೆಂಕಟೇಶನ ಕರಪಂಕಜಕೆ ತಿಮುರೆ 13 ಕದನದೊಳ್ ಖಳರನು ಸದೆದು ಮರ್ದಿಸಿ ಗೆಲಿದು ಮಧುಸೂದನ ಶ್ರೀವತ್ಸದೆದೆಯ ತೋರೆನುತ 14 ಚಕ್ರವ ಪಿಡಿದು ಪರಾಕ್ರಮಿಯೆನಿಸಿಯೇ ಅಕ್ರೂರಗೊಲಿದ ತ್ರಿವಿಕ್ರಮಗೆ ತಿಮುರೆ 15 ವಾಮನನನಾಗೆ ಶ್ರಮವನು ಪಟ್ಟೆನುತ ಭೂಮಿಯ ಅಳೆದ ಪಾದವಿತ್ತಲು ತಾರೆನುತ16 ಕಾದಲನು ಕಾಣುತ್ತ ಪಾದವನಿತ್ತನು ಶ್ರೀಧರನೆನುತಲಿ ಅರಸಿನವ ತಿಮುರೆ 17 ವಾಮಪಾದವ ಕಂಡು ಭಾಮಿನಿ ತಾರೆನೆಲು ಸೋಮಸನ್ನಿಭ ಹೃಷಿಕೇಶ ತಾನಿತ್ತ 18 ಪದ್ಮಬÁಂಧವ ತೇಜ ಪದ್ಮಸಂಭವ ಪೂಜ ಪದ್ಮನಾಭಗೆ ಪದ್ಮಗಂಧಿ ತಾ ತಿಮುರೆ 19 ಆ ಮಹಾ ನಾಮದ ದಾಮೋದರನ ಕಂಡು ಭಾವೆ ಮಹಾಲಕ್ಷುಮಿ ವೀಳ್ಯವ ಕೊಡಲು 20 ವಾಸುದೇವನು ತನ್ನ ಅರಸಿ ಮಾಲಕ್ಷ್ಮಿಗೆ ಪೂಸಿದನರಿಸಿನದ ಎಣ್ಣೆಯ ಮೊಗಕೆ 21 ಪಂಕಜಾಕ್ಷನ ಕಂಡು ಕಂಕಣದ ಹಸ್ತವನು ಕುಂಕುಮದೆಣ್ಣೆಯ ಸಂಕರ್ಷಣ ತಿಮುರೆ 22 ಬುದ್ಧಿವಂತೆಯ ಎಡದ ಮುದ್ದು ಹಸ್ತವ ನೋಡಿ ಉದ್ಧರಿಸಿ ನವ ಪ್ರದ್ಯುಮ್ನ ನಗುತ 23 ಅನಿರುದ್ಧ ನಗುತಲೆ ಘನಕುಚಮಂಡಲಕೆ ಅರಿಸಿನವ ತಿಮುರೆ 24 ಪುರುಷರೊಳು ಉತ್ತಮನು ಹರುಷವನು ತಾಳಿಯೆ ಅರಸಿ ಮಹಾಲಕ್ಷುಮಿಗೆ ಅರಿಸಿನವ ತಿಮುರೆ 25 ಅಧೋಕ್ಷಜನು ತನ್ನ ತುದಿವೆರಳ ಅರಿಸಿನವ ಪದುಮನೇತ್ರೆಯ ಪದದೊಳಗೆ ಮಿಡಿದಿರ್ದ 26 ನಾರಸಿಂಹನು ಸತಿಯ ಮೋರೆಯಿಂದಾರಭ್ಯ ಓರಣವಾಗಿಯೇ ಅರಿಸಿನವ ತಿಮುರೆ 27 ನೆಚ್ಚಿಯೆ ಹರಿ ತಾನು ಅಚ್ಚ ಕರ್ಪೂರದೆಲೆಯ ಅಚ್ಯುತ ಕೊಡಲು 28 ಮನದಿ ಲಜ್ಜಿತೆಯಾಗಿ ಘನಮಹಿಮ ಮುನಿವಂದ್ಯ ತನಗೆ ವಲ್ಲಭ ನಿಜನಾದನೆನುತ 29 ಆ ಪರಮಹಿಮನು ರೂಪಸಂಪನ್ನ ದ- ಯಾಪರನಾಗಿಯೆ ಉಪೇಂದ್ರ ತಾನೊಲಿದು 30 ಹರಯೆಂಬ ನಾಮದಿ ಹರದಿ ಮಾಲಕ್ಷ್ಮಿಯ ವರಸಿದ ಶ್ರೀಹರಿಯು ಹರದಿಯರ್ಪೊಗಳೆ31 ಬೆಟ್ಟದೊಡೆಯನೆನಿಸಿ ದೃಷ್ಟಿಗೋಚರವಾದ ಶ್ರೀಕೃಷ್ಣ ಮಾಲಕ್ಷುಮಿಗೆ ಆರತಿಯ ತಿಮುರೆ 32 ವರಮಹಾಲಕ್ಷುಮಿಗೆ ವರಾಹತಿಮ್ಮಪ್ಪಗೆ ಅರಸಿನದೆಣ್ಣೆಯ ರಚಿಸಿದ ಪರಿಯು 33
--------------
ವರಹತಿಮ್ಮಪ್ಪ
ಹನುಮನ ಮನೆಯವರು ನಾವೆಲ್ಲರು ಹನುಮನ ಮನೆಯವರು ಪ ಅನುಮಾನಪಡದೆಲೆ ಸ್ಥಳವ ಕೊಡಿರಿ ಎಮಗೆ ಅ.ಪ ಊಧ್ರ್ವ ಪುಂಡ್ರವ ನೋಡಿ ಶ್ರದ್ಧೆ ಭಕುತಿ ನೋಡಿ ಹೃದ್ಗತವಾದೆಮ್ಮ ತತ್ವಗಳನೆ ನೋಡಿ ಇದ್ದುದನಿಲ್ಲೆಂಬ ಅಬದ್ಧ ನುಡಿವರಲ್ಲಾ ಮಧ್ವಮುನಿಯು ನಮ್ಮ ತಿದ್ದಿರುವುದ ನೋಡಿ 1 ಸತ್ಯ ಮಿಥ್ಯಗಳಿಗೆ ಅಂತರ ಬಲ್ಲೆವು ಉತ್ತಮ ನೀಚರೆಂಬುವ ಭೇದ ಬಲ್ಲೆವು ಸುತ್ತಲು ಕಂಡು ಕಾಣದೆ ಇಹ ಎಲ್ಲಕೂ ಉತ್ತಮನೊಬ್ಬನೇ ಹರಿಯೆಂದು ಬಲ್ಲೆವು 2 ಹಲವು ಲೋಕಗಳುಂಟೆಂಬುದ ಬಲ್ಲೆವು ಹಲವು ಯೋನಿಗಳಲ್ಲಿ ಜನ್ಮಗಳೊಲ್ಲೆವು ಅಲವಭೋಧರು ನಮ್ಮ ಕಳುಹಿದರಿಲ್ಲಿಗೆ ತಿಳಿಸಿ ಪ್ರಸನ್ನ ಶ್ರೀ ಹರಿಗೆ ವಿಚಾರವ 3
--------------
ವಿದ್ಯಾಪ್ರಸನ್ನತೀರ್ಥರು
ಹಯಾನನ ವಿಠಲಾ ನೀ ದಯದಿ ಸಲಹೊ ಇವಳಾ |ದಯಾಪಯೋನಿಧಿ ಎಂದು ನಿನಗೆ ಭಿನ್ನೈಪೇ ಪ ಕುಕ್ಷಿಯೊಳು ಜಗಧರಿಪ ಪಕ್ಷಿವಾಹನದೇವಲಕ್ಷಿಸದಲೇ ದೋಷ | ಲಕ್ಷವನು ಇವಳಾಈಕ್ಷಿಪುದು ಕರುಣಾಕಟಾಕ್ಷದಲ್ಲೆಂದೆನುತಲಕ್ಷ್ಮೀರಮಣನೆ ಹರಿಯೆ ಪ್ರಾರ್ಥಿಸುವೆ ನಿನಗೇ 1 ವಿನುತ | ಬಾಗಿ ಬೇಡುವೆನೋ |ಜಾಗುಮಾಡದೆಲೆ ವೈ | ರಾಗ್ಯ ಭಕ್ತಿಜ್ಞಾನಯೋಗ ಕೊಟ್ಟುದ್ದರಿಸು | ಸಾಗರಜೆ ರಮಣಾ 2 ವಾಚಾಮ ಗೋಚರನೆ | ನೀಚೋಚ್ಚಕ್ರಮ ತಿಳಿಸಿಮೋಚ ಕೇಚ್ಛೆಯ ಮಾಡೊ | ಪಾಚಕಸುವಂದ್ಯಾಪ್ರಾಚೀನ ಕರ್ಮಾಳಿ ಯೋಚಿಸಲು ಅಳವಲ್ಲಆಚರಿತ ಸಂಚಿತವ | ಮೋಚಿಸಾಗಾಮೀ 3 ಸಿರಿ | ನಲ್ಲ ನಿನಗೀಪರಿಯಸೊಲ್ಲ ಪೇಳುವುದುಚಿತೆ | ಚೆಲ್ವ ಹಯವದನಾಬಲ್ಲಿದನೆ ನೀನಾಗಿ | ಚೆಲ್ವ ರೂಪವ ತೋರೆಸಲ್ಲಲಿತ ಅಂಕಿತವ | ಸಲ್ಲಿಸಿಹೆ ದೇವಾ 4 ಭಾವುಕಾರ್ಜುನ ಬಂಡಿ | ಬೋವನಾಗುತ್ತ ಭವನೋವಕಳೆವೋಪಾಯ | ನೀವಲಿದು ಪೇಳೀತಾವಕರ ಪೊರೆದಂತೆ | ಭಾವುಕರ ಪೊರೆ ಬೇಡ್ವೆಗೋವುಗಳ ಪಾಲ ಗುರು ಗೋವಿಂದ ವಿಠಲ 5
--------------
ಗುರುಗೋವಿಂದವಿಠಲರು
ಹರಿಹರರಿಬ್ಬರು ಒಲಿದು ಮಾತಾಡಲು ಕೊಳವ ಕಂಡಲ್ಲಿ ಎಲೆತೋಟ ಕೊಳವ ಕಂಡಲ್ಲಿ ಎಲೆತೋಟದೊಳಗಾಡುವ ಹೆಣ್ಣಿನ ಕಂಡು ಹರ ಮರುಳಾದ ಪ. ತೆಂಗಿನ ತಿಳಿಗೊಳ ನಿಂಬೆ ಕಿತ್ತಲೆ ಬಾಳೆ ಹೊಂಬಾಳೆ ಅಡಿಕೆ ಬನಗಳು ಹೊಂಬಾಳೆ ಅಡಿಕೆ ಬನದೊಳಗಾಡುವ ರಂಭೆಯ ಕಂಡು ಹರ ಮರುಳಾದ 1 ಅರಿಸಿನ ತಿಳಿಗೊಳ ಹಲಸು ಕಿತ್ತಲೆ ಬಾಳೆ ಬೆರಸಿ ಮಲ್ಲಿಗೆಯ ಬನದೊಳು ಬೆರಸಿ ಮಲ್ಲಿಗೆಯ ಬನದೊಳಗಾಡುವ ಸರಸಿಜಾಕ್ಷಿಯ ಕಂಡು ಹರ ಮರುಳಾದ 2 ಮೊಲ್ಲೆ ಮಲ್ಲಿಗೆ ಜಾಜಿ ಅಲ್ಲೆ ಪಾರಿಜಾತ ನಿಲ್ಲದೆ ನುಡಿವೊ ಗಿಳಿಗಳು ನಿಲ್ಲದೆ ನುಡಿವೊ ಗಿಳಿಗಳು ನುಡಿಗಳ ಚೆಲುವೆಯ ಕಂಡು ಹರ ಮರುಳಾದ 3 ಸೋಗೆ ನವಿಲುಗಳು ಗಿಳಿಹಿಂಡು ತುರುಗಳು [ಕೋಗಿಲೆ ನಲಿಯೊ ಪಂಸೆಗಳು] [ಕೋಗಿಲೆ ನಲಿಯೊ ಪಂಸೆಯೊಳಾಡುವ] ಸೊ- ಬಗಿಯ ಕಂಡು ಹರ ಮರುಳಾದ 4 ಚೆಲುವ ಚರಣಗಳು ಜಂಘೆ ಜಾನೂರು ಕಟಿ ವಳಿಪಂಙÂ್ತ ಜಠರ ವಕ್ಷಸ್ಥಳವು ವಳಿಪಂಙÂ್ತ ಜಠರ ವಕ್ಷಸ್ಥಳಗಳ ಹೆಣ್ಣಿನ ಸ್ತನವ ವರ್ಣಿಸಲಾರಿಗಳವಲ್ಲ 5 ಕಾಲುಂಗುರ ಅಕ್ಕಿ ಪಿಲ್ಯ ಜೋಡುಮೆಂಟಿಕೆಗಳು ವೀರಮುದ್ರಿಕೆಯು ಕಿರುಪಿಲ್ಯ ವೀರಮುದ್ರಿಕೆಯು ಕಿರುಪಿಲ್ಯ ನಿಟ್ಟಿದ್ದ ಬಾಲೆಯ ಕಂಡು ಹರ ಮರುಳಾದ 6 ನಡು ಬಳುಕಿ ಮುಡಿ ಸಡಲಿ ಉಡಿಗಂಟೆ ಹೊಳೆಯುತ ಕೊರಳ ಪದಕ ಹಾರ ಒಲೆಯುತ ಕೊರಳ ಪದಕ ಹಾರ ಒಲೆಯುತ ಹೆಣ್ಣಿನ ಇರವ ವರ್ಣಿಸಲಾರಿಗಳವಲ್ಲ 7 ಹಸಿರು ಕುಪ್ಪಸಗಳು ಮುಂಗೈನಗಗಳು ನಳಿತೋಳುಬಂದಿ ಬಳೆಗಳು ನಳಿತೋಳುಬಂದಿ ಬಳೆಗಳು ಹೆಣ್ಣಿನ ಥಳುಕು ವರ್ಣಿಸಲಾರಿಗಳವಲ್ಲ8 ಹಾರ ಹೀರಾವಳಿ ಕೇಯೂರ ಕಂಕಣ ತೋಳ ಭಾಪುರಿ ಭುಜಕೀರ್ತಿ ತೋಳ ಭಾಪುರಿ ಭುಜಕೀರ್ತಿನಿಟ್ಟಿಹ ಇಂದುಮುಖಿಯ ಕಂಡು ಹರ ಮರುಳಾದ 9 ಅರಳೋಲೆ ಮೂಗುತಿ ಹಣೆಯ ಹಚ್ಚೆಯ ಬೊಟ್ಟು ಕದಪು ಕನ್ನಡಿಯು ಕುಡಿಹುಬ್ಬು ಕದಪು ಕನ್ನಡಿಯು ಕುಡಿಹುಬ್ಬು ಹೆಣ್ಣಿನ ಬೆಳಕÀ ವರ್ಣಿಸೆ ಹರಗಳವಲ್ಲ 10 ನೊಸಲು ಕಸ್ತೂರಿಗಳು ಎಸೆವ ಬೈತಲೆಗಳು ಕುರುಳು ಕೂದಲುಗಳು ಕುಂತಲಗಳು ಕುರುಳು ಕೂದಲುಗಳು ಕುಂತಲಗಳು ಹೆಣ್ಣಿನ ಜಡೆಯ ವರ್ಣಿಸಲಾರಿಗಳವಲ್ಲ 11 ಕುಂಭಕುಚದ ಮೇಲೆ ಗಂಧವ ಪೂಸಿದಳೆ ಅಂದಕೆ ಹಿಡಿದಳೆ ಕಮಲವ ಅಂದಕೆ ಹಿಡಿದಳೆ ಕಮಲವ ಕಡೆಗಣ್ಣ ಚಂದ ಬಂದ್ಹರನ ಕಂಗೆಡಿಸಿತು 12 ತÉೂೀರ ಕುಚದ ಮೇಲೆ ಸಾದು ಗಂಧವ ಪೂಸಿ ಆಯಕೆ ಹಿಡಿದಳೆ ಕಮಲವ ಆಯಕೆ ಹಿಡಿದಳೆ ಕಮಲವ ಕಡೆಗಣ್ಣ ಢಾಳ ಬಂದ್ಹರನ ಕಂಗೆಡಿಸಿತು 13 ಕಕ್ಕಸ ಕುಚದಮೇಲೆ ಅಷ್ಟಹಾರಗಳು ಹೊಳೆಯೆ ಹಸ್ತಕಟ್ಟುಗಳು ಹೊಳೆಯುತ ಹಸ್ತಕಟ್ಟುಗಳು ಹೊಳೆವುತ್ತ ಹೆಣ್ಣಿನ ದೃಷ್ಟಿ ಬಂದ್ಹರನ ಕಂಗೆಡಿಸಿತು 14 ಅಮ್ಮಾಲೆ ಆಡೋಳು ಒಮ್ಮೊಮ್ಮೆ ನೋಡೋಳು ತÀನ್ನೊಳಗೆ ತಾನು ನಗುವೋಳು ತÀನ್ನೊಳಗೆ ತಾನು ನಗುವೋಳು ಬೊಮ್ಮನ ಮಗನ ಮರುಳು ಮಾಡಿ ನಡೆದಳು 15 ನೋಡಳು ನುಡಿಯಳು ಹರನ ಕೂಡೆ ಮಾತಾಡಳು ಓಡುತ್ತ ಚೆಂಡ ಹೊಯ್ವಳು ಓಡುತ್ತ ಚೆಂಡ ಹೊಯ್ವವೇಗವ ಕಂಡು ಮೂರುಕಣ್ಣವನು ಮರುಳಾದ 16 ಕೆದರಿದ ಕೆಂಜೆಡೆ ಕೊರಳ ರುದ್ರಾಕ್ಷಿ ಕರದಿ ತ್ರಿಶೂಲ ಹೊಳೆಯುತ ಕರದಿ ತ್ರಿಶೂಲ ಹೊಳೆಯುತ ಹೆಣ್ಣಿನ ನುಡಿಸುತ್ತ ಹಿಂದೆ ನಡೆದನು 17 ರೂಢಿಗೊಡೆಯನ ಕೂಡೆ ಆಡುವ ವನಿತೆ ನೋಡೆ ನೀ ಎನ್ನ ಕಡೆಗಣ್ಣ ನೋಡೆ ನೀ ಎನ್ನ ಕಡೆಗಣ್ಣ ಹೆಣ್ಣಿನ ಕಾಡುತ ಹಿಂದೆ ನಡೆದನು 18 ಪೀತಾಂಬರದ ಮುಂಜೆರಗನು ಕಾಣುತ್ತ ಸೋತೆ ಬಾರೆಂದು ಕರೆದನು ಸೋತೆ ಬಾರೆಂದು ಕರೆದ ಧ್ವನಿಯ ಕೇಳಿ ಕಾಂತೆ ಬನದೊಳು ಮರೆಯಾದಳು 19 ಮಂಗಳ ಮಹಿಮಗೆ ಅಂಜಿಕೆ ಇಲ್ಲದೆ ಗಂಗೆ ಪೊತ್ತವನ ತಿರುಗಿಸಿದ ಗಂಗೆಪೊತ್ತವನ ತಿರುಗಿಸಿದ ತನ್ನಯ ಮುಂದಣ ಅಂದವೆಲ್ಲ ಇಳುಹಿದ 20 ಸೃಷ್ಟಿಯನೆಲ್ಲ ಹೊಟ್ಟೆಯೊಳಿಂಬಿಟ್ಟು ವಟಪತ್ರ ಶಯನನಾಗಿ ಮಲಗಿದ ವಟಪತ್ರ ಶಯನನಾಗಿ ಮಲಗಿದ ಉಡುಪಿನ ಕೃಷ್ಣನೆಂದ್ಹರನು ತಿಳಿದನು 21 ಭೂಮಿಯನೆಲ್ಲ ಈರಡಿ ಮಾಡಿದ ಆಲದೆಲೆ ಮೇಲೆ ಮಲಗಿದ ಆಲದೆಲೆ ಮೇಲೆ ಮಲಗಿದ ಶ್ರೀಹಯ- ವದನನೆಂದು ಹರ ತಿಳಿದನು 22
--------------
ವಾದಿರಾಜ
ಹ್ಯಾಗೆ ಕಾಂಬೆ ನಿನ್ನ ಪಾದವ ಶ್ರೀನಿವಾಸ ಯೋಗಿ ಗಮ್ಯ ರೂಪ ಮಾಧವಾ ರಾಗ ರೋಗ ಸಾಗರಸ್ತನಾಗಿ ಮುಳುಗಿ ಬಾಯ ಬಿಡುವೆ ನಾಗರಾಜಗೊಲಿದ ತೆರದಿ ಬೇಗಲೊದಗಿ ಬಂದು ಕಾಯೊ ಪ. ಮನಸು ಎನ್ನ ವಶಕೆ ಬಾರದೆ ಭಕ್ತಿ ಸಾ- ಧನಗಳೆನಗೆ ಸೇರಿ ಬಾಹದೆ ನೆನಸಿಕೊಳುವ ಕಾರ್ಯ ದೊರೆಯದೆ ಸರ್ವಕಾಲ ತನುವ ಕೆಡಿಸಿ ವ್ಯರ್ಥಮಾಡಿದೆ ಕನಲಿ ಕೂಗುತಿರುವ ಶಿಶುವ ಜನನಿ ಕರದೊಳೆತ್ತುವಂತೆ ಮೂರ್ತಿ ದೋರೊ 1 ಕಲಿಯ ಬಾಧೆಯಿಂದ ನೊಂದೆನು ಮಲಿನ ಮೋಹದೊಳಗೆ ನಿಂದೆನು ತ್ಯಾಜ್ಯವಾದ ಫಲಗಳೆಲ್ಲ ತಂದು ತಿಂದೆನು ಗಾಳಿಗೆ ಸಿಲುಕಿದೆಲೆಯ ತೆರದಿ ಹೊರಲುಗಾಣೆನೀ ದೇಹ ಪಾದ ನೆಳಲ ಬಯಸಿ ಬೇಡಿಕೊಳುವೆ 2 ಗಣನೆಯಿಲ್ಲವಾದ ಮರಗಳು ಇರಲು ಪುರು ತನುವಿನಂತೆ ಮುಖ್ಯವಾವದು ಅನುಭವಾತ್ಮ ಸುಖವನೀವದು ಆದರೇನು ಕನಸಿನಂತೆ ಕಾತಿರುವುದು ಪಾದ ವನಜಯುಗವನಿತ್ತು ಎನ್ನ ಮನದೊಳದಯವಾಗು ಮಾರಜನಕ ಮೂಡಲದ್ರಿವಾಸ3
--------------
ತುಪಾಕಿ ವೆಂಕಟರಮಣಾಚಾರ್ಯ