ಒಟ್ಟು 2825 ಕಡೆಗಳಲ್ಲಿ , 118 ದಾಸರು , 1964 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆ. ಧನ್ವಂತರಿ ಅಂತರಂಗದ ರೋಗ ಚಿಂತೆ ಪರಿಹರಿಸಿ ಮೋಕ್ಷಪಂಥ ಸಾಧಿಸು ಧನ್ವಂತ್ರಿ ಪ್ರಭುವೆ ಪ ಸುರರು ಅಸುರರು ಕೂಡಿ ಶರಧಿಯಾ ಮಥಿಸಲುಕರದೊಳಮೃತ ಪಾತ್ರೆ ಧರಿಸಿ ನೀ ಬಂದೆ 1 ಇಂದ್ರ ನೀಲಾಂಭ್ರಣಿ ಸನ್ನಿಭರೂಪಚಂದ್ರ ಮಂಡಲದೊಳು ನಿಂತು ರಾಜಿಸುವಿ 2 ಯೋಷಿತ ರೂಪದಿ ಸುಧೆಯನು ಕೊಟ್ಟುಪೋಷಿಸಿದೆಯೋ ಇಂದಿರೇಶ ದಿವಿಜರಾ 3
--------------
ಇಂದಿರೇಶರು
ಆಗಿನ್ನೆಂಥ ಕವತುಕ ಕಂಡೆ ಅಮ್ಮಿನ ಎಂಥ ಅಂಜಿದೆವೆ ಪ. ಮತ್ತೆ ಎರಗಲು ಹೋದೆನಮ್ಮ ಪಾದ ಕಂಡು ಕಣ್ಣು ಕತ್ತಲೆ ಹೊಯ್ದಾವೆ ಅಮ್ಮಿನ 1 ಪಂಚ ಹಸ್ತ ಕಂಡು ಮನದಲೆ ಚಂಚಲಗೈಯ್ದೆನೆ 2 ಅತ್ಯಂತ ಪ್ರೇಮದಲಿ ದ್ರೌಪತಿ ಹತ್ತು ಹಸ್ತ ಕಂಡು ಮೈಯ ಮರೆತೆನೆ ನಾನು 3 ಬಾರಿ ಬಾರಿಗೆ ಬೆದರಿಬೆಚ್ಚಿ ನಾರಿಯ ನೋಡಿದೆನೆ ನಾನು ಸೂರ್ಯನಂತೆ ಹೊಳೆವೊ ಐದುಮಾರಿ ಕಂಡೆನೆ4 ವಾರ್ತೆಯ ಹೇಳುತಲಿದ್ದೆ ಮಾರುತನ ರಾಣಿ ಭಾರತಿಯು ಆದಳೆ ಅಮ್ಮಿನ್ 5 ವಚನ ಪೇಳುತ ನಿಂತೆನಮ್ಮ ರುಚಿರರೂಪ ಅಡಗಿ ಆಗ ಶಚಿಯು ಆದಳೆ ಆಮ್ಮಿನ್ 6 ಇಂದ್ರನರಸಿ ಅಡಗಿ ಶ್ಯಾಮಲೆ ಬಂದು ನಿಂತಾಳಮ್ಮ ಕ್ಷಣದಿ ಎಂದೂ ಕಾಣದ ಸೋಜಿಗ ಒಂದೊಂದು ಕಂಡೆನೆ ಅಮ್ಮಿನ್7 ಎಂಥ ಬೆಳಕನೆ ತೋರಿಸಿದಳಮ್ಮ ಇಂಥ ಬೆಡಗು ರಾಮೇಶನ ಕಾಂತೆ ಕೇಳಮ್ಮ ಅಮ್ಮಿನ್8
--------------
ಗಲಗಲಿಅವ್ವನವರು
ಆಟವಾಡಬೇಕು ಒಳ್ಳೆ ಊಟಮಾಡಬೇಕು ಪ ಆಟ ಬಲ್ಲ ಮಾನವನಿಗೆ ರೋಗದ ಕಾಟವಿರದೆ ತಾ ಊಟ ಮಾಡುವನು ಅ.ಪ ಪಂಡಿತರಾಗಿ ಅಖಂಡ ಕಲೆಗಳನು ಚಂಡಿನಂತೆ ಕರತಲದಲಿ ಪಿಡಿಯುತ 1 ಕಣ್ಣಮುಚ್ಚಿ ಇಂದ್ರಿಯಗಳ ನಿಲ್ಲಿಸಿ ಹೃನ್ಮಂದಿರದಲಿ ಹರಿಯನು ಹಿಡಿಯುವ 2 ಈಶ ಜೀವ ಜಡರೆಂಬೊ ಮೂವರಲಿ ಈಶನೇ ಹಾಸೆಂದರಿಯುತ ಮೂರೆಲೆ 3 ಹಿಂದಿನ ದಿನ ಹರಿದಿನ ಮರುದಿನಗಳು ಇಂದಿರೆಯರಸನ ಕೂಡಿ ಏಕಾದಶಿ 4 ಸಿಕ್ಕಿದ ಸ್ಥಾನವು ದಕ್ಕದೆಂಬುದಕೆ ಭಕ್ತ ಪ್ರಸನ್ನ ತೋರಿದ ಕೊಕ್ಕಿನ5
--------------
ವಿದ್ಯಾಪ್ರಸನ್ನತೀರ್ಥರು
ಆಡುವನೀಶ್ವರ ಜೀವಪಗಡೆಯ ಕಾಯಆಡುವನವರವರ ಕರ್ಮಾನುಸಾರಆಡಿಯೆ ತನಗೆ ಬೇಸರವಾಗೆ ಕಟ್ಟುವಆಡುವ ವಿವರವ ಹೇಳುವೆ ಕೇಳಿ ಪ ಪ್ರಪಂಚ ಹಾಸಂಗಿ ಪ್ರಾರಬ್ಧ ಲತ್ತವುಪಾಪ ಅಜ್ಞಾನ ಲಿಂಗತನುವೆಂಬ ಚಿಟ್ಟೆಯುರೂಪು ನಾನಾ ಬಗೆಯ ಜೀವಕಾಯನೆ ಮಾಡಿಭಾಪು ಭಳಿರೇ ಎಂದು ಕೊಂದು ಹೂಡಾಡುತ 1 ಒಂದಕೊಂದರಬಲ ಒಂದಕೆ ಜೋಡು ಬಲಒಂದು ಜೋಡಿಗೆ ಒಂದು ಜೋಡು ಬಲ ಮಾಡಿಒಂದರಿಂದೊಂದು ಕೊಂದು ಜೋಡಿಂದ ಜೋಡು ಕೊಂದುಅಂದು ಹುಟ್ಟಿ ಸಾಯುವುದಕ್ಕೆ ಕಡೆಯಿಲ್ಲದೇ 2 ಈ ಪರಿಯಲಾಡುತ್ತ ತನಗೆ ಬೇಸರ ಹುಟ್ಟೆಪಾಪಿಗಳನೆಲ್ಲ ಪಾಪ ಚೀಲದಿ ಕಟ್ಟಿಭೂಪ ಚಿದಾನಂದನು ಆದ ಈಶ್ವರ ತಾನುರೂಪು ವಿರೂಪಾದ ನಿದ್ದೆಯಲಿ ಮಲಗುವ 3
--------------
ಚಿದಾನಂದ ಅವಧೂತರು
ಆತ್ಮಚರಿತ್ರೆ ಆರಿಗಾರಿಲ್ಲ ಆಪತ್ಕಾಲದೊಳಗೆ ಪ ವಾರಿಜಾಕ್ಷನ ನಾಮ ನೆನೆ ಕಂಡ್ಯ ಮನವೆ ಅ ಹಗೆ ಕೈಗೆ ಸಿಲುಕಿದಾಗದೆಸೆಗೆಟ್ಟು ಅಧಿಕ ವ್ಯಾಧಿಯಲಿ ಇರುವಾಗಅಸಮಾನನಾದಾಗ ಅತಿ ಭೀತಿಗೊಂಡಾಗಬಿಸಜನಾಭನ ನಾಮ ನೆನೆಕಂಡ್ಯ ಮನವೆ 1 ಸಾಲದವರೆಳೆವಾಗ ಚಾಡಿ ಮಾತಿಗೆ ಭೂಪಘಳುಘುಳಿಸುತ ಕೋಪವನು ತೋರಿದಾಗಮೇಲು ತಾನರಿಯದಯೆ ನಿಂದೆ ಹೊಂದಿರುವಾಗನೀಲಮೇಘಶ್ಯಾಮನ ನೆನೆಕಂಡ್ಯ ಮನವೆ 2 ಪಂಥದಲಿರುವಾಗ ಪದವಿ ತಪ್ಪಿರುವಾಗದಂತಿಮದವೇರಿ ಬೆನ್ನತ್ತಿದಾಗಕಂತುಪಿತ ಕಾಗಿನೆಲೆಯಾದಿಕೇಶವನ ನಿ-ಶ್ಚಿಂತೆಯಿಂದಲಿ ನೀನು ನೆನೆಕಂಡ್ಯ ಮನವೆ 3
--------------
ಕನಕದಾಸ
ಆತ್ಮನಿವೇದನೆ ಅಗಲಿ ನಾ ಸೈರಿಸಲಾರೆ ಪ-À್ನಗರಾಜಶಯನನ ತೋರೆ ಪ. ಖಗರಾಜಗಮನ ನಿಗಮಗೋಚರನಜಗದೇಕವಂದ್ಯನ ಜಾಣೆ ರಂಗಯ್ಯನ ಅ.ಪ. ಮಾರನು ಮನೆಗ್ಹೋದÀನಮ್ಮ ಎನ್ನಸೇರದೆ ಮುನಿದ ಕಾಣಮ್ಮಯಾರಿಗೆ ಉಸುರಲೆ ನೀರಜಾಕ್ಷಿಯೆ ಎನ್ನಬಾರದೆ ಮುನಿದು ತಾಳಲಾರೆ ನೋಡಮ್ಮ 1 ಹೆಣ್ಣುಜನ್ಮ ವ್ಯರ್ಥಕಾಣಮ್ಮ ಎನ್ನಪುಣ್ಯವಿನ್ನಿಂತಾಯಿತಮ್ಮಬಣ್ಣ ಸರವನೀವೆ ಭಾಮಿನಿರನ್ನಳೆಕಣ್ಣಾಣೆ ಕರೆತಾರೆ ಪುಸಿಯಲ್ಲ ಕೃಷ್ಣನ 2 ಅಂತರಂಗವ ತಿಳಿದೇನಮ್ಮ ಪ್ರಾಣ-ಕಾಂತ ಮನೆಗೆ ಬಂದನಮ್ಮಪಂಥವ ಬಿಟ್ಟೀಗ ಬಂದೆ ನಾ ಪಾಲಿಸುವಕಂತುಜನಕ ಹಯವದನ ರಂಗಯ್ಯನ 3
--------------
ವಾದಿರಾಜ
ಆತ್ಮನಿವೇದನೆ ಅಂಜಬ್ಯಾಡ ಅಂಜಬ್ಯಾಡೆಲೋ ಜೀವ ಭವ ಭಂಜನ ಹರಿ ಶರಣರ ಕಾವಾ ಪ ಮಾತ ಹೇಳುವೆ ನಿನಗೊಂದ ಪರರಜ್ಯೋತಿ ಕಾಣುವತನಕೀ ಬಂಧ ಭೂತ ಭೇತಾಳಗಳಿಂದ ನಿನಗೆ ಭೀತಿ ಪುಟ್ಟಲಿಲ್ಲೋ ಮತಿಮಂದ 1 ಛೇದ ಭೇದಗಳು ನಿನಗೆಲ್ಲಿ ನೀ ಅ- ನಾದಿ ನಿತ್ಯವೆಂಬುದ ಬಲ್ಲಿ ವೇದ ಬಾಹ್ಯರಾಗದೆ ಇಲ್ಲಿ ಹರಿ ಪಾದ ಇನ್ಯಾಕೆ ಪೂಜಿಸಲೊಲ್ಲಿ 2 ನೀನು ನಿನ್ನದು ಅಲ್ಲವೋ ನೋಡಾ ದೇಹ ನಾನು ನನ್ನದೆಂಬರೋ ಮೂಢಾ ಮಾನಹಾನಿ ಮಾಡಿಕೊಳಬೇಡ ಬಿಡು ಸಾನುಬಂಧಿಗಳ ಸ್ನೇಹವ ಗಾಢ 3 ಅಹಿತಾದಿ ವಿಭೂತಿಯ ನೋಡೋ ಸೋಹಂ ಎಂಬರೆ ವಿಘಾತಿಯ ನೇಹವ ಪಡೆವರೆ ಗೀತೆಯ ಕೇಳಿ ಮೋಹವ ಕಳಕೋ ವಿಜಾತಿಯ 4 ಮಧ್ವವಲ್ಲಭ ಮಾಡಿದ ಗ್ರಂಥ ದೊಳಗದ್ವೈತತ್ರಯ ತಿಳಿದಂಥ ವಿದ್ವಾಂಸರು ಚರಿಸುವ ಪಂಥವನ್ನು ಸದ್ಭಕ್ತಿಲಿ ಸಾಧಿಸು ಭ್ರಾಂತ 5 ಜಾಗರ ಸ್ವಪ್ನ ಸುಷುಪ್ತಿಗಳೊಳು ವರ ಭೋಗಿಶಯನನ ರೂಪಗಳೇಳು ಭಾಗವತ ಬಲ್ಲವರ ಕೇಳು ಬೃಹ- ದ್ಯಾಗವ ಹರಿಗರ್ಪಿಸಿ ಬಾಳು 6 ಪಂಚಾತುಮ ಸಿಲುಕವ ಷಟ್ ಪಂಚ ಪಂಚಿಕೆಗಳ ಕರ್ಮವ ಮೀಟಿ ಪಂಚಿಕೆ ತಿಳಿದುಕೊಂಡರೆ ನಿಷ್ಪ್ರ ಪಂಚನಾಗಿ ನೀ ಕಡೆದಾಟಿ7 ಜ್ಞಾನೇಚ್ಛಾ ಕ್ರಿಯಾ ಶಕ್ತಿಗಳೆಂಬ ಈ ಮ- ಹಾನುಭಾವದಿ ನಿನ್ನ ಬಿಂಬ ತಾನೇ ಸರ್ವತ್ರದಲಿ ಕಾಂಬ ಇದ- ಕೇನು ಸಂದೇಹವಿಲ್ಲವೋ ಶುಂಭ 8 ತಾಪತ್ರಯಂಗಳು ನಿನಗೆಲ್ಲಿ ಪುಣ್ಯ ಪಾಪಕ್ಕೆ ಲೇಪನಾಗೋಕೆ ಹೊಲ್ಲ ಪ್ರಾಪಕ ಸ್ಥಾಪಕ ಹರಿಯೆಲ್ಲ ಜಗ ದ್ವ್ಯಾಪಕನೆಂದರಿತರೆ ಕೊಲ್ಲ 9 ಡಿಂಭದೊಳಗೆ ಚೇತನವಿಟ್ಟು ಜಗ- ದಂಬಾರಮಣ ಮಾಡಿದ ಕಟ್ಟು ಉಂಬುಡುವ ಕ್ರಿಯೆಗಳನಷ್ಟು ನಿನ್ನ ಬಿಂಬನಾಧೀನನಾದರೆ ಇಷ್ಟ 10 ಲಕ್ಕುಮಿ ಅವನ ಪಟ್ಟದ ರಾಣಿ ದೇ- ವರ್ಕಳು ಪರಿಚಾರಕ ಶ್ರೇಣಿ ವಕ್ಕಲು ನಾವೆಲ್ಲರು ಪ್ರಾಣಿ ದಶ- ದಿಕ್ಕುನಾಳುವ ನಮ್ಮ ದೊರೆಯ ನೀ 11 ಮತ್ರ್ಯಲೋಕದ ಸಂಪದ ಪೊಳ್ಳು ಜಗ ಮಿಥ್ಯಮತವೆಂದಿಗು ಜೊಳ್ಳು ಶ್ರುತ್ಯನ್ನರ್ಥ ಪೇಳ್ವದೇ ಸುಳ್ಳು ನೀ ಭೃತ್ಯನು ಕರ್ತನಾಗದಿರೆಲೋ ಕೇಳು12 ಮಾಧವನಲಿ ತನುಮನ ಮೆಚ್ಚು ಕ್ರೋಧರೂಪದ ಕಲಿಮಲ ಕೊಚ್ಚು ಮೋದತೀರ್ಥರ ವಚನವ ಮೆಚ್ಚು ವಾದಿ ಮತಕ್ಕೆ ಬೆಂಕಿಯ ಹಚ್ಚು 13 ಸವಿವುಳ್ಳರೆ ಕೇಳೆನ್ನಯ ಸೊಲ್ಲ ನಮ್ಮ ಪವನನಯ್ಯನ ಪ್ರೇರಣೆಯಿಲ್ಲ ಎವೆಯಿಕ್ಕಲರಿಯದೀ ಜಗವೆಲ್ಲ ಎಂದು ಶಿವ ತನ್ನ ಸತಿಗೆ ಹೇಳಿದನಲ್ಲ 14 ಧ್ರುವ ಬಲ್ಯಾದಿ ರಾಯರ ನೋಡು ನಿನ್ನ ಅವಗುಣಗಳನೆಲ್ಲಾ ಈಡ್ಯಾಡೋ ಅವಶ್ಯವಾಗಿ ಕರ್ಮವ ಮಾಡೋ ಮಾ- ಧವ ನಿನ್ನವನೆಂದು ನಲಿದಾಡೋ 15 ನಿಂದಾ ಸ್ತುತಿಗಳ ತಾಳಿಕೋ ಬಲು ಸಂದೇಹ ಬಂದಲ್ಲಿ ಕೇಳಿಕೋ ಬಂದವರಿಂದಲಿ ಬಾಳಿಕೋ ಗೋ- ವಿಂದ ನಿನ್ನವನೆಂದು ಹೇಳಿಕೋ 16 ತತ್ವವಿಚಾರವ ಮಾಡಿಕೋ ನಿನ್ನ ಭಕ್ತಿಯ ಆಳವ ಅಳಿದುಕೋ ಮಾಯಾ ಮೋಹ ಕಳೆದುಕೋ ನಿನ್ನ ಹತ್ತಿರ ಹರಿಯಿರುವ ನೋಡಿಕೋ 17 ಹಿಂಡು ದೈವಗಳಿಂದ್ಹಿರಿಯನೀತ ತನ್ನ ತೊಂಡನೆಂದದವರಿಗೆ ತಾ ಸೋತಾ ದಂಡಿಸಿ ದಯಮಾಡುವ ದಾತಾ ಭೂ- ಮಂಡಲದೊಳಗೆಲ್ಲ ಪ್ರಣ್ಯತಾ 18 ನಾಡ ಖೋಡಿ ದೈವಗಳಂತೆ ತನ್ನ ಬೇಡಲು ತಾ ಬೇಡಿಕೊಳನಂತೆ ನೀಡುವ ನಿಖಿಳಾರ್ಥವದಂತೆ ನಿಜ ನೋಡಿಕೋ ನಿನಗ್ಯಾತರ ಚಿಂತೆ 19 ಏನು ಕೊಟ್ಟರೆ ಕೈಚಾಚುವ ತನ್ನಾ- ಧೀನವೆಂದರೆ ನಸುನಾಚುವಾ ದಾನವ ಕೊಡಲೂರಿ ಗೀಚುವ ತನ್ನಲಿ ತಾನೇವೇ ಮನದೊಳು ಸೂಚುವ20 ಕರಕರದಲ್ಲಿ ತಾ ಬರುವಾನು ಮರತುಬಿಟ್ಟವರ ತಾ ಮರೆಯಾನು ನಿಜ ಶರಣರ ಕಾದುಕೊಂಡಿರುವಾನು ತನ್ನ ಸರಿಯಂದವರ ಹಲ್ಲು ಮುರಿದಾನು 21 ಆರು ಮುನಿದು ಮಾಡುವದೇನು ಪ್ರೇರ್ಯ ಪ್ರೇರಕರೊಳಗಿದ್ದು ಹರಿ ತಾನು ಓರಂತೆ ಕಾರ್ಯವ ನಡೆಸೋನು ಮುಖ್ಯ ಕಾರಣ ಶ್ರೀಹರಿ ಅಲ್ಲವೇನೋ 22 ಹಲವು ಹಂಬಲಿಸಲ್ಯಾತಕೆ ಹುಚ್ಚಾ ವಿದ್ಯಾ ಕುಲಶೀಲಧನದಿಂದ ಹರಿ ಮೆಚ್ಚಾ ಕಲಿಯುಗದೊಳಗಾರ್ಯರ ಪೆಚ್ಚಾ ತಿಳಿ ಸುಲಭೋಪಾಯಾದಿಗಳ ನಿಚ್ಯಾ 23 ದುರ್ಜನರೊಳು ದೈನ್ಯ ಬಡದಿರು ಸಾಧು ಸಜ್ಜನರೊಳು ವೈರ ತೊಡದಿರು ಅರ್ಜುನಸಖನಂಘ್ರಿ ಬಿಡದಿರು ನಿ- ರ್ಲಜ್ಜನಾಗಿ ಬಾಯ್ಬಿಡದಿರು 24 ಭಯರೂಪದಿ ಒಳಹೊರಗಿದ್ದು ನಿ- ರ್ಭಯ ನಾಮಕನು ಧೈರ್ಯವನೆ ಗೆದ್ದು ಭಯದೋರುವನೆಂಬುದೆ ಮದ್ದು ಮಹಾ ಭಯಕೃದ್ಭಯಹಾರಿಯನೆ ಪೊಂದು 25 ಪರಸತಿಯರ ಸಂಗವ ಬಿಡು ಹರಿ ಸರ್ವೋತ್ತಮನೆಂದು ಕೊಂಡಾಡು ಪರಮಾತ್ಮನ ಧ್ಯಾನವ ಮಾಡು ನರ ಹರಿದಾಸರಂಗಳ ಒಡಗೂಡು 26 ಸೃಷ್ಟಿಗೊಡೆಯ ಶ್ರೀದವಿಠಲ ವಿಷ್ಟಾವಿಷ್ಟನಾಗಿದ್ದೆಲ್ಲ ಇಷ್ಟಾನಿಷ್ಟವ ಕೊಡಬಲ್ಲ ಮನ- ಮುಟ್ಟಿದವರ ಬೆಂಬಿಡನಲ್ಲಾ 27
--------------
ಶ್ರೀದವಿಠಲರು
ಆತ್ಮನಿವೇದನೆ ಯಾವಾಗಲೂ ನಿನ್ನ ಸೇವೆಯೊಳಿರುವಂತೆ ಕಾವುದೆನ್ನಯ ನಿಜದೀ ಕೃಪಾನಿಧೇ ಈ ಪರಿಯಿಂದನಾ ಭಾರಿ ಭವದಿ ನೊಂದೆ ತೋರೋ ನಿನ್ನಯ ಚರಣಾ ನಾರಾಯಣ ಪ ಆಶಾಪಾಶದಲಿ ನಾ ಘಾಸಿಯಾದೆನು ದೇವಾ ವಾಸನೆಯೊಳು ತೊಳಲಿ ಬಹು ಬಳಲಿ ವಾಸುದೇವನೆ ನಿನ್ನ ಪಾದದೊಳಗೆನ್ನಯ ಬೇಸರದಲೆ ರಕ್ಷಿಸೋ ನಿಜಪಾಲಿಸೋ 1 ನೀರಮೇಲಿನ ಗುಳ್ಳೆಯಂತೆ ತೋರುವ ಕಾಯ ಸೇರಿ ನಂಬಿದೆ ಭರದಿ ಬಹು ವಿಧದಿ ದೂರನಾದೆನು ನಿಜದರಿವುನಾನರಿಯದೇ ಸೇರಿಸೊ ನಿಜ ಸುಖದಿ ಪ್ರಬೋಧದಿ 2 ನಂಬಿದವರ ಕಾಯ್ವ ಸಂಭ್ರಮ ಪೊತ್ತವ ಶಂಭು ಶಂಕರ ಪ್ರಿಯನೇ ಸರ್ವೇಶನೇ ಇಂಬು ದೋರೆನ್ನಾ ಚಿದಂಬರ ನಿಜಪದ ನಂಬಿ ನಿಲ್ಲುವ ತೆರದಿ ಸದೃಢದೀ 3 ತತ್ವಮಸಿ ಮಹಾ ವಾಕ್ಯವ ಶೋಧಿಸಿ ನಿಸ್ತರಿಸುವ ಭವವಾ ಉಪಾಯವಾ ಚಿತ್ತಚೈತನ್ಯವಾಗಿ ನಿತ್ಯಶಾಂತಿಸ್ವಸುಖ ಸತ್ಯ ಸದ್ಗುರು ಸ್ವಾನಂದಾ ಸಹಜಾನಂದಾ4 ಕಡಹದಾ ಮರನೇರಿ ಮಡುವಾ ಧುಮ್ಮಿಕೃಇದ್ಯೋ ಪಿಡಿದು ಕಾಳಿಂಗನಾ ಹೆಡೆ ಕುಳಿದು ಕುಣಿದ್ಯೋ ಸಡಗರದಿಂದಲಿ ಮಾತೆಯ ತೊಡೆಯ ಮೇಲೆ ಬಂದು ಕುಳಿತೆ5 ದುರುಳ ದುಷ್ಟರ ಶಿರವ ಶರದಿಂದಾ ಕಡಿದೆಯೊ ಶರಣ ಬಂದ ದೀನರನು ಸಲಹಿದೆಯೊ ಪರಮ ಪುರುಷನೇ ನಿನ್ನ ಸ್ಮರಣೆಯೊಳಿರಿಸೆನ್ನಾ 6 ಅನ್ಯಾಯದಲಿ ಕುರುಪತಿಯ ಮಡುಹಿದೆಯೊ ಕರ್ಣನ ಕಂಠವ ಕತ್ತರಿಸಿದೆಯೊ ಧನ್ಯಧರ್ಮಾರ್ಜುನರ ಶಿರವಾ ಸನ್ಮತದಿಂದಲಿ ಕಾಯ್ದೆ 7 ಪುಂಡಲೀಕನ ಭಕ್ತಿಗೆ ಮೆಚ್ಚಿ ಪಂಡರಪುರದಲ್ಲಿ ನಿಂತೆನಿ ಹೆಚ್ಚಿ ತಂಡತಂಡದಲ್ಲಿ ಬರುವ ಹಿಂಡುಭಕ್ತರುಗಳ ಕೂಡುವ 8 ಕಂತು ನಾರಾಯಣ ಶಾಂತಿ ಪದದಲಿ ವಿಶ್ರಾಂತಿಯ ಕೊಟ್ಟಿನ್ನಾ ಭ್ರಾಂತಿಗಳನೆಲ್ಲ ತೋರಿಸಿ ಸಂತ ಸಂಗದೊಳಿರಿಸೆನ್ನಾ 9
--------------
ಶಾಂತಿಬಾಯಿ
ಆತ್ಮಲಿಂಗ ಭವನದಿಆತ್ಮಲಿಂಗ ಭವನದಲಿ ವಿಚಿತ್ರವನೆ ಕಂಡುಆತ್ಮನೆಂತಿಹನೆಂದು ಅರಸನಾ ಬಲಗೊಂಡುಆತ್ಮನಾನೆರಡೆಂಬ ಅವಿ ವಾಚ್ಯನಳಿಗೊಂಡುಆತ್ಮನಾಗಿರುತಿಪ್ಪನು ಪ ಪರಿ ಪರಿಯ ಸರಗಳನೆ ಕಂಡೆಮಾತಿಗುತ್ತರಿಸದಿಹ ಮಹಾ ಮಹಿಮೆಯ ಕಂಡೆ 1 ಈಕ್ಷಿಸಿಯೆ ವಸ್ತುವನ ಏಳು ಬಾಗಿಲು ಕಂಡೆದಕ್ಷಿಣೋತ್ತರ ಎಂಬುದರ ಬಾಗಿಲನು ಕಂಡೆಅಕ್ಷಯಾಗಿಹ ಲಕ್ಷವಹ ದಿಡ್ಡಿಯನೆ ಕಂಡೆರಕ್ಷಕನಾಗಿಹನ ರಾಗದಲಿ ಕಂಡೆ 2 ಪಂಚಇಂದ್ರಿಯಗಳೆಂಬ ಪರಿಚಾರಕರನು ಕಂಡೆಕಿಂಚ ಕೆಲಸಕ್ಕಿರುವ ಕರ್ಮೇಂದ್ರಿಯರ ಕಂಡೆಸಂಚರಿಪ ಮೂರೆರಡು ಸತ್ಪ್ರಾಣಿಗಳ ಕಂಡೆವಚನಾಂತಃಕರಣ ವರ್ತಕರ ಕಂಡೆ 3 ಸತ್ಯಗುರು ಪೂರಿತಹ ಸಾರಣೆಯ ಕಂಡೆತಥ್ಯವೆನಿಸುವ ಶಾಂತ ತೋರಣವ ಕಂಡೆಅತ್ಯಧಿಕ ಬುದ್ಧಿಯ ರಂಗವಲ್ಲಿಯ ಕಂಡೆಎತ್ತ ನೋಡಿದಡತ್ತ ಎಸೆದಿಹುದ ಕಂಡೆ 4 ಆರು ಅಂತಸ್ಥನು ಕಂಡೆ ಅಲ್ಲಿರುವವರ ಕಂಡೆಬೇರೆ ಮೂರಿಹ ಮಧ್ಯ ರಂಗಗಳ ಕಂಡೆಘೋರ ಘೋಷಣ ಪ್ರಣವ ಘಂಟನಾದವ ಕಂಡೆಸಾರವಮೃತ ಕಲಶ ಪಾನಕವ ಕಂಡೆ 5 ಜ್ಯೋತಿ ಎಂದೆನ್ನುತಿಹ ಜ್ಯೋತಿರ್ಮಯನ ಕಂಡೆಸಾತಿಶಯ ಗರ್ಭಗುಡಿ ಶೀಘ್ರದಲಿ ಕಂಡೆಆತುರದಲೊಳ ಪೊಕ್ಕು ಆತ್ಮಲಿಂಗವ ಕಂಡೆಪೂತು ರಕ್ಷಿಸು ಎಂದು ಪೂಜೆ ಕೈಗೊಂಡೆ 6 ನಿತ್ಯ ನಿಶ್ಚಲ ನಿಷ್ಕಲಂಕ ನಿಜನೆ ಎಂದುಪ್ರತ್ಯಗಾತ್ಮ ಪರಬ್ರಹ್ಮನೆ ಸ್ಥಿರವೆಂದುಸತ್ಯ ಸಂವಿದ್ರೂಪ ಸಕಲಕಧಿಪತಿ ಎಂದುಅತ್ಯಧಿಕ ಚಿದಾನಂದ ಆತ್ಮ ತಾನೆಂದು7
--------------
ಚಿದಾನಂದ ಅವಧೂತರು
ಆನಂದ ಗಿರಿ ರಾಯನೆ ಪಿಡಿಕೈಯ್ಯಾ | ನಾ ನಿನ್ನ ಪಾದಕ್ಕಾನಮಿಸುವೆ ಶರಣರ ಪ್ರಿಯ | ಭಕುತರ ಭವಣೆಯನೀ ನೋಡುತಲಿಹುದೊಳಿತೇನಯ್ಯ | ಬಂಧನ ಬಿಡಿಸಯ್ಯ ಪ ಮಾನದ ಮಾನ್ಯ ಭೂದಾನವ ಬೇಡ್ವನೆಕಾಣಿಸೊ ಮನದೊಳು ದೀನನ ಮೊರೆಗೇಅ.ಪ. ಕಲ್ಯಾಣ ಪುರಿಯಿಂದಲಿ ಪೋಗೀ | ಸಜ್ಜನರವೆರಸೇ ಕಲ್ಯಾದಿಗಳೆಲ್ಲ ದೂರಿದೆ ಸಾಗೀ | ಪೋಗುತ್ತಲಿರಲೂ ಬಲ್ಯಾದಿಗಳೊಡೆಯನ ಪುರಕಾಗೀ | ಮೂಡಬಾಗಿಲಲಿರುವಾ ವೇಳ್ಯಾದರು ನರಹರಿತೀರ್ಥವ |ಓಲೈಸುತ ಸರಿ ನಿರ್ಮಾಲ್ಯ ಪಡೆದೆವು 1 ನಿಟಲಾಕ್ಷನ ಬಿಂಬನು ನೆಲೆಸಿರುವಲ್ಲಿ | ಮತ್ತೊಂದು ಬೆಟ್ಟದಿ ಪಟು ಭಟ ತಾ ಯೋಗಾಸನದಲ್ಲಿ | ಕುಳಿತಿಹನಲ್ಲಿ ಚಟುಲ ವಿಕ್ರಮನ ಧ್ಯಾನಿಸುತಲ್ಲಿ | ಹನುಮಂತನಲ್ಲಿ ಘಟಕಾಚಲದೊಳು ಸೇವಿಸಿ ಭಕುತರ |ತಟಕ ಪೊರಟಿತು ವೆಂಕಟಗಿರಿಗೆ 2 ಹದಿನಾಲ್ಕು ಲೋಕಾಧಿಪನರಸಿ | ಪುರದೊಳು ಪೋಗಿಪದುಮ ಸರಸೋದಕ ಪ್ರೋಕ್ಷಿಸಿ | ಅಲ್ಲಿಂದ ಬಂದುಪದುಮಾವತಿ ಪಾದಾಬ್ಜಕೆ ನಮಿಸಿ | ಕುಂಕುಮಾರ್ಚಿಸಿ ||ಪದುಮೆ ಮನೋಹರ ಗೋವಿಂದ ಪುರಿಯಲಿವದಗಿ ವಸಿಸಿ ನಾವ್ ನಿಶಿಯನೆ ಕಳೆದೆವು 3 ಉದಯವಾಗದ ಮುಂದೇಳುತಲಾಗ | ಮಜ್ಜನವ ಗೈದೂಪದಚಾರಿಗಳಾಗುತಲೀ ಬೇಗಾ | ಒಡಗೂಡಿ ಗಿರಿಯಮುದದಿಂದಲೇರುವ ಯೋಗಾ | ಕೈ ಸೇರಲು ಬೇಗಾ ||ಪದತಲದಲಿ ಪಾಪತ್ಮಕ ತನು ಕ-ಳೆದಾತನ ನೆನೆದು ಸೋಪಾನವ ಕ್ರಮಿಸಿದೆ 4 ಗೋವಿಂದ ಗೋವಿಂದನೆಂಬುವ ನಾಮ | ಅಂಬರವು ತುಂಬೆಅವುಗಳ ಕಾವವನ ಗುಣ ನಾಮಾ | ಕೀರ್ತಿಸಿ ಮುದದಿಭಾವದೊಳ್ ಮೈಮರೆದು ಬ್ರಹ್ಮಾ | ಭವಸುರ ಪಾದ್ಯಾರ ||ಅವಾಗಲು ಅವರವಗುಣವೆಣಿಸದೆಕಾವನು ಎನುತಲಿ ಪಾವಟಿಗೇರೋ 5 ಪರಿ ತಿಳಿದೂತುಳಿದೂ ತುಳಿಯಲಿಲ್ಲವು ನೋಡಾ | ಸಲ್ಲುವುದೀದುತಿಳಿ ವಾದಿರಾಜರಿಗೆ ಗೂಢಾ| ನಾ ಬಲು ಮೂಢಾ |ಮಲವನು ಕಳೆಯುತ ಹುಲು ಮನುಜನ ಭವವಳಿದು ಸಲಹೊ ಹೇ ತಿರುಪತಿ ನಿಲಯ 6 ಮೆಟ್ಟಲು ಮೆಟ್ಟಲುಗಳನೇರುತ್ತಾ | ತಾಳಂಗಳನುತಟ್ಟಿ ಹರಿ ಹರಿ ಎಂದೊದರುತ್ತಾ | ಪಾಪಂಗಳ ತಲೆಮೆಟ್ಟಿ ತಂಬೂರಿಯ ಮೀಟುತ್ತಾ | ಕಾಲೊಳು ಗೆಜ್ಜೆಗಳ ||ಕಟ್ಟುತ ಘಲು ಘಲು ಘಲಿರೆನ್ನುತ ಜಗಜಟ್ಟಿ ಹನುಮನ ನೆನೆಯಲೊ ಮನವೆ 7 ಮೃಗ ಪಕ್ಷಿಗಳ ದಿವ್ಯಾ | ರೂಪಂಗಳ ಧರಿಸಿನಿರುತ ಗೈವರು ತವ ಸೇವೆಯು ಭವ್ಯಾ | ಅವುಗಳ ವರ್ಣಿಸಲು || ಉರಗರಾಜ ತನ್ನ ಸಾಸಿರ ನಾಲಿಗೆಸರಿಯಾಗದು ಎನೆ ಶಿರವನೆ ತೂಗುವ 8 ಏರೋ ಪಾವಟಿಗೆಗಳನು ಏರೋ | ಮೊಳಕಾಲು ಮುರಿಯನೇರೋ ಕುಳಿತೊಮ್ಮೆ ತುತಿಸುತ ಸಾರೋ | ಹರಿಯ ಮಹಿಮೆಯಸಾರೋ ಬಾರಿ ಬಾರಿಗೆ ನೀ ಸಾರೋ | ಗಾಳಿ ಗೋಪುರವ ||ಮೀರಿ ಬರಲು ದಿವ್ಯ ಗೋಪುರ ಕಾಣುತ |ಚೀರೊ ಚೀರೊ ಹರಿ ಗೋವಿಂದನೆನ್ನುತ 9 ಸ್ವಾಮಿ ಪುಷ್ಕರಣಿಯಲೀ ಮಿಂದೂ | ಶ್ರೀ ಭೂವರಹಾಸ್ವಾಮೀಯನೆ ಪ್ರಾರ್ಥಿಸಿ ಬಂದೂ | ಪ್ರಾಕಾರದೊಳಗಿಹವಿಮಾನ ಶ್ರೀನಿವಾಸನ ಕಂಡಂದೂ | ನಮಿಸುತ ಬಂದೂ |ಭೂಮಿಜೆವಲ್ಲಭ ವೆಂಕಟನನು ಕಂಡುಕಾಮಿಸೊ ಜ್ಞಾನ ವೈರಾಗ್ಯ ಭಕುತಿಯ 10 ದೇವಾದಿದೇವಾ ಜಗದ್ಭರ್ತಾ | ವೆಂಕಟನೆ ನಾನಾನಾಜನುಮದ ಸುಕೃತಾ | ಪೊಂದುತಲಿ ನಿನ್ನಸೇವಾ ದೊರಕಿದುದೆ ಪುರುಷಾರ್ಥಾ | ಹರಿಪುದು ಸುಜನಾರ್ತಾ | ಭಾವನ ಕಾಯ್ದ ಸದ್ಭಾವಕೆ ವಲಿವನೆಕಾವುದೆನ್ನ ಗುರು ಗೋವಿಂದ ವಿಠ್ಠಲ 11
--------------
ಗುರುಗೋವಿಂದವಿಠಲರು
ಆನಂದ ಲಹರಿ (ಪಾರಮಾರ್ಥ ಮುಯ್ಯದ ಹಾಡು ) ಗಿರಿಜೇಶ ಮನೋಜಾತಾ ಸುರಮುನಿಜನಪ್ರೀತಾ ಕರುಣಾ ಸಾಗರ ಗಣನಾಥಾ ಜಗವದನಾ ಚರಣಕೆ ಶರಣೆಂದು ಬಲಗೊಂಬೆ ಕೋಲೆ 1 ಸಕಲಾ ಮುಖದೊಳು ಯುಕುತಿಯ ನುಡಿಗಳಾ ಪ್ರಕಟದಿ ನುಡಿಸುವೆ ಜನನಿ ಸರಸ್ವತಿ ಭಕುತಿಲಿ ಶರಣೆಂಬೆ ಕಲ್ಯಾಣಿ 2 ಆಚ್ಯುತಾನಂತನೆ ಸಚ್ಚಿದಾನಂದನೆ ನೆಚ್ಚಿದ ಶರಣರ ಸುರಧೇನುವೆ ಅವಧೂತಾ ಎಚ್ಚರ ಕೊಟ್ಟು ಸಲಹಯ್ಯ 3 ಕರಿಯಾ ಮೊರೆಯ ಕೇಳಿ ಭರದಿಂದೊದಗಿ ಬಂದು ಕರದಿಂದಲೆತ್ತಿ ಸಲಹಿದೆ ಶ್ರೀಶಾ ಚರಣವದೋರಿ ಕಾಯಯ್ಯ 4 ಶರೀರ ಒಂದರಲಿದ್ದು ನರನಾರೀರೂಪದಲಿ ಚರಿತವ ದೋರದೆ ಅನುಪಮ ಶಂಕರ ಕರುಣಿಸು ಫಣಿಗಣ ಭೂಷಣಾ 5 ಅಂಜನೀಸುತನಾಗಿ ಕಂಜನಾಭವ ಸೇವೆ ರಂಜಿಸುವಂತೆ ಮಾಡಿದ ದೈತ್ಯರ ಭಂಜನ ಹನುಮಂತ ಕರುಣಿಸು6 ಚಾರು ಚರಿತಗಳ ತೋರಿದೆ ಜಗದೊಳು ಮುನಿರಾಯಾ ಸುಖತೀರ್ಥ ತಾರಕ ಶರಣರ ನಿಜಗುರು7 ಮೇದನಿಯೊಳಗುಳ್ಳ ಸಾಧು ಸಂತರ ನಿಜ ಅನುದಿನ ಜಗದೊಳು ಸಾದರದಿಂದ ನೆನೆಯುತ 8 ಶರಣವ ಹೊಕ್ಕರ ಕರುಣದಿಂದಲಿ ನೋಡಿ ತರುಣೋಪಾಯವ ತೋರುವಾ ಮಹಿಪತಿ ಗುರುರಾಯ ನಿನ್ನ ಬಲಗೊಂಬೆ9 ಕರುಣವಾಗಲು ಅವರ ಪರಮ ಮೂಕನಜ್ಜಿಹ್ವಾ ಸುರಸ ಮಾತುಗಳ ಆಡೋದು ಹುಸಿಯಲ್ಲ ಧರೆಯೊಳು ಅನುಭವವಿದು10 ಅವರಾಮಹಿಮೆಗಳ ವಿವರಿಸಿ ಹೇಳಲು ಹವಣವೆಲ್ಲಿಹುದು ಮನುಜಗ ಭಕುತರು ಅವನಿಲಿಬಲ್ಲರು ನಿಜಸುಖ 11 ಏನೆದು ಅರಿಯದಾ ಹೀನ ಅಜ್ಞಾನಿಯು ನ್ಯೂನಾರಿಸದೇ ಸಲಹಯ್ಯಾ ಮಹಿಪತಿ ದೀನೋದ್ಧಾರಕಾ ಕರುಣಿಸು 12 ಪದುಮನಾಭನ ಭಕ್ತಿ ಚದುರಾ ಮುತ್ತೈದೇರು ಒದಗಿನ್ನು ಬನ್ನಿ ಹರುಷದಿ ಮುಪ್ಪದಾ ಉದಿತಾ ನುಡಿಗಳ ಕೇಳಲು 13 ವಿವೇಕಬೋಧಿಯಂತ ನಾವಕ್ಕತಂಗೇರು ದೇವಗುರುರಾಯನ ಮಕ್ಕಳು ನಿಜಶಕ್ತಿ ಭುವನದಿ ನಮ್ಮಾ ಹಡೆದಳು 14 ಸುಜ್ಞಾನ ವೈರಾಗ್ಯ ಸಂಜ್ಞದಿ ಮೆರೆವರು ಪ್ರಾಜ್ಞರು ನಮ್ಮಣ್ಣಾ ತಮ್ಮರು ಹರಿಭಕ್ತಿ ಮಜ್ಞರು ಅವರಿಗೆ ಸರಿ ಇಲ್ಲಾ 15 ಭಕ್ತಿಯ ತೌರಮನಿ ಶಕ್ತಿಯ ಬಲದಿಂದ ಯುಕ್ತೀಲಿ ನಾವು ಬರುತೇವು ಹರಿಭಕ್ತಿ ಭೋಕ್ತರು ನೀವು ಬರಬೇಕು 16 ದಿವ್ಯಾಂಬರವನುಟ್ಟು ಸುವಿದ್ಯಾ ಇಡಗಿಯು ತೀವಿದರ ಅರಹು ಅಂಜನಾ ವನೆ ಇಟ್ಟು ಸುವಾಸನೆಯ ಪುಷ್ಪ ಮುಡಿದಿನ್ನು 17 ಈರೆರಡು ಭೇರಿಯ ಸಾರಿಸಿ ಎಡಬಲಕ ಆರು ವಂದಣಾ ನಡಸೂತ ಕಹಳೆಗಳು ಮೂರಾರು ಊದಿಸುತೆ ಬರುತೇವು 18 ಸಾಧನ ನಾಲ್ಕರ ಕುದುರೆಯ ಕುಣಿಸುತ ಒದಗಿದ ಪ್ರೇಮದ ಮದ್ದಾನಿ ಯೊಡಗೂಡಿ ಚದುರೇರು ಮುಯ್ಯ ತರುತೇವು 19 ಭಾವದ ಬಯಲಾಟ ಆವಾಗ ಆಡುತ ಸಾವಧ ಮುಯ್ಯಾ ತರುತೇವು ನುಡಿಗಳ ನೀವಾತ ಕೇಳಿ ಜನವೆಲ್ಲಾ 20 ಮೆರೆವಾಭಿಮಾನಿಯು ಇರುವ ಸೋದರ ಮಾವ ಅರಸಿ ವಿಷಯಯೆಂಬತ್ತೆರಯರ ಮನಿಗೀಗ ಭರದಿಂದ ಮುಯ್ಯ ತರುತೇವು 21 ರಾಯ ಅಭಿಮಾನಿ ಸಿರಿಯದ ಸಡಗರ ನಾ ಏನ ಹೇಳಲಿ ಜಗದೊಳು ಪಸರಿಸಿ ತಾ ಎಡ ಬಲವನು ನೋಡನು 22 ಏಳು ಸುತ್ತಿನ ಗೋಡಿ ಮೇಲಾದ ಮನಿಗಿನ್ನು ಸಾಲಾದ ಒಂಭತ್ತು ಬಾಗಿಲು ಚಲುವಾದ ಮ್ಯಾಲಿಹ ಒಂದೊಂದು ಗಿಳಿಗಳು 23 ಅಂಗಳ ಹೋಗಲಿಕ್ಕೆ ಕಂಗಳ ಲೇಸಕಂಡೆ ಮಂಗಳವಾದ ಉಪ್ಪರಿಗೆ ಥರಥರ ರಂಗ ಮಂಟಪ ನಡುವಂದು24 ಬಿಡದೆಂಟು ಕಂಬದಿ ಸಡಗರ ರಚಿಸಿದ ಒಡನಿಹ ಚಾವಡಿರಾಯನ ಸೌಖ್ಯಕ ಪೊಡವಿಲಿ ಸರಿಯಾ ಕಾಣೆನು 25 ಎಂಟು ದಿಕ್ಕಿಗೆ ನೋಡೀ ಘಂಡೆಯ ಕಟ್ಟಿದ ಎಂಟು ಆನೆಯಾ ಘಡಘಾಡಿ ತಲಿಯಲಿ ಉಂಟಾದ ಗುರುತರದ ಅಂಕೂಶಾ 26 ಬಿಡದೆಂಟು ಕಂಬದಿ ಸಡಗರ ರಚಿಸಿದ ಒಡನಿಹ ಆನೆಯಾ ಘಡಘೂಢೀ ಥಳೀಐಳೀ ಊಂಠಾಧ ಘೂಋಊಥೃಧ ಆಂಖೂಶಾ 26 ಐದೈದು ಸಾಲಕ ಐದೈದು ಕುದುರೆಯು ಐದೈದು ಭಂಟರು ಅದಕಿನ್ನು ಅನುದಿನ ಮೈದಡುವುತಾ ಏರುವರು27 ಹತ್ತು ಮಂದಿಯಾ ಆಪ್ತರು ಮನರಾಯಾ ಒತ್ತಿ ಆಳುವ ಪ್ರಧಾನಿ 28 ಅನುವಾದ ಗುಣತ್ರಯಾ ಅನುಜರು ಈತಗೆ ಅನುಭವಿ ಒಬ್ಬ ಇದರೊಳು ಹರಿನಾಮಾ ನೆನೆವನು ಅನ್ಯ ಹಂಬಲವಿಲ್ಲಾ 29 ನಾಕಾವಸ್ಥೆಗಳೆಂಬಾ ನಾಕು ಒಳ ಮನೆಗಳು ಇಕ್ಕಿಹದೊಂದು ಅದರೊಳು ಭಂಡಾರ ಬೇಕಾದವರೆ ತೆರೆವರು 30 ಈರಾಯ ನೈಶ್ವರ್ಯ ಆರು ಬಣ್ಣಿಸುವರು ಆರೊಂದು ಮಂದಿ ಮಕ್ಕಳು ಹೆಸರಾದ ಪರಿಯಾಯ ಕೇಳಿ ಹೇಳುವೆ 31 ಮೊದಲು ಕಾಮ ಕ್ರೋಧವೊದಗಿ ಲೋಭಮೋಹ ಮದಮತ್ಸರೆಂಬ ಬಾಂಧವರು ನಿಜ ತಂಗಿ ವಿದಿತ ಅಜ್ಞಾನಿ ಶಕ್ತಿಯು 32 ಬಂದು ಹೊರಗನಿಂತು ಒಂದು ಜಾವಾಯಿತು ಮುಂದಕ ನಮ್ಮ ಕರಿಯಾರು ನಾವರಸಿ ಕಂದಿದ ಮಾರೀ ತೋರಳು 33 ಪಶ್ಚಾತಾಪವೆಂಬ ಬಿಚ್ಚಿ ಹಾಸಿಗೆ ಹಾಸಿ ತುಚ್ಚರ ದೂರ ಝಾಡಿಸೀ ಬರುತೇವು ಎಚ್ಚರ ಲೋಡಾ ತಂದಿರಿಸಿ 34 ಈ ಕಲ್ಲ ಮ್ಯಾಲದ್ದು ಈ ಕಲ್ಲಿಗ್ಹಾರುವಾ ತಾ ಕೋಡಗನಾ ಗುಣದಂತೆ ಭಾವಯ್ಯ ಆ ಕಾಮಣ್ಣನ ಕರಿಯಾರೆ35 ಎಷ್ಟು ಉಂಡರ ದಣಿಯಾ ಎಷ್ಟು ಇಟ್ಟರ ದಣಿಯಾ ಎಷ್ಟು ಉಟ್ಟರ ದಣಿಯಾನು ಕಾಮಣ್ಣ ಎಷ್ಟು ಕೊಟ್ಟರ ದಣಿಯಾ 36 ಒಳ್ಳೆವರರಿಯನು ಹೊಲ್ಲವರರಿಯನು ಕೊಳ್ಳಿಕಾರನಾ ಮತಿಯಂತೆ ಭಾವಯ್ಯ ನಿಲ್ಲರು ಈತನ ಇದರೀಗೆ 37 ಈತನ ತಮ್ಮನು ಮಾತು ಮಾತಿಗೆ ಬಹಳಾ ಖ್ಯಾತಿಯ ತಾನು ಪಡೆದಾನು ಕೋಪಣ್ಣ ಆತನ ಮುಂದಕ ಕರಿಯಾರೆ 38 ನೆಂಟರ ಅರಿಯನು ಇಷ್ಟರ ಅರಿಯನು ಬಂಟರಾ ಮೊದಲೇ ಅರಿಯನು ತಪಸಿಗೆ ಕಂಟರನಾದಾ ಈತನೇ 39 ಥರ ಥರ ಕುಣಿವುತ ಘರ ಘರ ಹಲ್ಲು ತಿಂದು ನೆರೆಮೋರೆ ಕೆಂಪು ಮಾಡುವಾ ಕೋಪಣ್ಣಾ ಸ್ಮರಣೆಯಾ ತನ್ನ ಮರೆವನು 40 ಕಂಡವರಿಗೆ ತಾನು ಕೆಂಡದ ನುಡಿಯಾಡಿ ಖಂಡಿಸಿ ಬಿಡುವಾ ಗೆಳತನಾ ಕೋಪಣ್ಣ ಹಿಂಡುವ ಹಿಡಿದು ಪ್ರಾಣವ41 ತಾನಾರೆ ಉಣ್ಣನು ಜನರಿಗೆ ಇಕ್ಕನು ಜೇನಿನನೊಣದಾ ಗುಣದಂತೆ ಲೋಭೇಶಾ ದೀನನ ಮುಂದಕ ಕರಿಯಾರೆ42 ಬಿಚ್ಚಾರುವಿಯನು ವೆಚ್ಚಮಾಡೆಂದಿಗೆ ಬಚ್ಚಿಟ್ಟು ಹೂಳಿನೆಲದೊಳು ಲೋಭೇಶಾ ಹುಚ್ಚಾಗಿ ಕಾಯ್ದಾ ಫಣಿಯಂತೆ43 ಕಾಸು ಹೋದಾವೆಂದು ಅಸುವ ಹೋಗುವವರಿ ಕಾಸಾವೀಸಿಯಾ ಬಡವನು ಲೋಭೇಶಾ ಹೇಸನು ಎಂದು ಮತಿಗೇಡಿ 44 ಇಳೆಯೊಳೀ ಪರಿಯಲೀ ಗಳಿಸಿದ ಧನವನು ಕಳೆದುಕೊಂಬರು ಅರಸರು ಕಡಿಯಲಿ ಶೆಳೆದು ಕೊಂಡನು ಪುಗಸಾಟೆ 45 ಇವರಿಂದ ಕಿರಿಯನಾ ಹವಣವ ನೋಡೀರೆ ಅವಗುಣದ ರಾಶಿ ಜಗದೊಳು ಮೋಹಾಂಗಾ ಅವನಾ ಮುಂದಕ ಕರಿಯಾರೇ 46 ತಾಯಿ ತಂದೆಗಳ ನ್ಯಾಯನೀತಿಗಳಿಂದ ಸಾಯಾಸದಿಂದ ಭಕ್ತಿಯ ಮಾಡದೆ ಮಾಯದಾ ಬಲಿಗೊಳಗಾದಾ 47 ಏನು ಬೇಡಿದುದೆಲ್ಲಾ ಪ್ರಾಣವವೆಚ್ಚಿಸಿ ಮಾನಿನೀಯರಿಗೆ ಕುಡುವನು ಮೋಹಾಂಗಾ ಮನವಿಡ ಒಳ್ಳೆವರ ಸೇವೆಗೆ 48 ಲೆಕ್ಕ ವ್ಯವಹಾರವಾ ಲೆಕ್ಕದಿ ಮಾಡದೇ ಮಕ್ಕಳಾಟಕಿಯ ಮಾಡುವಾ ಕ್ರೀಡೆಯಾ ನಕ್ಕಾರೆಂಬ ಸ್ಮರಣಿಲ್ಲಾ 49 ಕಮಲದ ವಾಸನೆಗೆ ಭ್ರಮರವು ಸಿಕ್ಕಿದ ಕ್ರಮದಿಂದ ನೋಡಿ ಸೆರೆಯಾದಾ ಶ್ರೀವಧು ರಮಣನ ನಾಮಾ ನೆನಿಯನು 50 ತರುವಾಯದವನೀತಾ ದುರುಳನ ನೋಡಿರೆ ಮರಳು ಬುದ್ಧಿಯಾ ಮದರಾಯಾ ಆತನಾ ಸರಕು ಮಾಡುವಾ ಕರಿಯಾರೆ 51 ಹೊರಸು ತೊಯ್ಯದಂತೆ ಭರ್ರನೆ ಬಿಗಿವನು ಶರಣರ ಕಂಡು ಬಾಗನು ತಲೆಯನು ಅರಿತವರಿಗೇನಾ ಹೇಳಲಿ 52 ಬಗೆಯಾದೆ ಹಿತವನು ಪಗಡಿಪಂಚಿಗಳಾಡಿ ಹಗಲಿನಾ ಹೊತ್ತುಗಳೆವನು ರಾತ್ರೀಲಿ ಮುಗುಧೇಯರೊಡನೆ ಒಡನಾಟಾ 53 ಕಣ್ಣಿಲ್ಲದಾನೆಯು ಚನ್ನಾಗಿ ತಿರುಗುತ ಮುನ್ನ ಬತ್ತಿದಾ ಬಾವಿಯ ಬೀಳ್ವಂತೆ ಕಣ್ಣೆದ್ದು ಕುರುಡನಾದನು&
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಆನಂದವಾಹನ ವಿಠಲ ನೀನಿವಳ ಕಾಯಬೇಕೋ |ಜ್ಞಾನಪೂರ್ಣನೆ ನಿನ್ನ ಸುಜ್ಞಾನ ಪಾಲಿಸುತ ಹರಿಯೆ ಪ ನಿಗಮವೇದ್ಯನೆ ದೇವ ಜಗದಂತರಾತ್ಮನೆಬಗೆಬಗೆಯ ಲೀಲೆಗಳ ನಗುನಗುತ ತೋರೀ ಬಗೆಹರಿಸು ಭವರೊಗ ಭಿನ್ನೈಪೆ ನಾನಿದನನಗಚಾಪ ಪರಿಪಾಲ ಖಗವಹನೆ ದೇವಾ1 ಪಂಚರೂಪಾತ್ಮಕನೆ ಪಂಚ ಬಾಣನ ಪಿತನೆಪಂಚ ಭೇದ ಜ್ಞಾನ ಸಂಚಿಂತನೆಯನಿತ್ತು |ವಾಂಚಿತಾರ್ಥದ ಹರಿಯೆ ವೈರಾಗ್ಯ ಸದ್ಭಕುತಿವಾಂಚಿಪಳಿಗೀಯೊ | ನಿಷ್ಕಿಂಚನರ ಪ್ರೀಯಾ 2 ಪತಿಸುತರು ಹಿತದಲ್ಲಿ ಮತಿ ಮತಾಂವರರಲ್ಲಿಕೃತಿಪತಿಯೆ ನಿನವ್ಯಾಪ್ತಿ ಅತಿಶಯದಿ ತೋರುತಲಿಹಿತದಿಂದ ಸೇವಿಸುವ ಮತಿಯಿತ್ತು ನೀನಿವಳ ಗತಿಗೆ ಸಾಧನನೆನಿಸು ಪ್ರತಿರಹಿತ ದೇವಾ 3 ನಾಮ ಮಹಿಮೆಯ ತಿಳಿಸಿ ಪ್ರೇಮದಿಂದಲಿ ನಿನ್ನನಾಮದುಚ್ಛಾರಣೆಯ ನೇಮವನೆ ಪಾಲಿಸುತ |ಕಾಮಿತವ ಸಲಿಸುವುದು ಭೂಮ ಗುಣ ನಿಸ್ಸೀಮರಾಮಚಂದ್ರನೆ ಸರ್ವ ಸ್ವಾಮಿ ಎನಿಸುವನೇ 4 ಶ್ರೀವರನೆ ಭವವನಧಿ ನಾವೆ ಎಂದೆನಿಸಿಹನೆಕಾವುದಿವಳನು ಸತತ ಸರ್ವಾಂತರಾತ್ಮ |ನೀವೊಲಿಯದಿನ್ನಾರು ಕಾವವರ ನಾಕಾಣೆದೇವವರ ವಂದ್ಯ ಗುರು ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಆನಿ ಬಂತಿದೆಕೋ ಮಹ ಮದ್ದಾನಿ ಬಂತಿದಕೋ| ಸ್ವಾನಂದದಲಿ ಮೆಲ್ಲಮೆಲ್ಲನೆ ಅಡಿಗಳ| ತಾನಿಡುವುತೊಲಿವುತಲಿ ನೋಡಮ್ಮಾ ಪ ಕರಿಯ ಬಣ್ಣದ ಲೊಪ್ಪತಾ | ಕಿರಿಗುದಲು | ಸಿರದಲೀ ಹೊಳೆವುತಾ | ಪೆರೆನೊಸಲೊಳು ಕೇಶರದ ಕಸ್ತೂರಿ ರೇಖೆ | ಕರುಣ ಭಾವದ ಕಂಗಳು ನೋಡಮ್ಮಾ 1 ಝಳ ಝಳಿಪಂಬರದೀ | ಝಣ ಝಣಲೆಂಬಾ | ವಲಿದು ತನ್ನಯನಿಜ ಶರಣರ ಅನುಮತ | ದಲಿ ನಲಿದಾಡುತಲೀ | ನೋಡಮ್ಮಾ 2 ದುಷ್ಟಜನರು ತೊಲಗೀ | ಯನುತ ಮುಂದ | ಶಿಷ್ಟಭಟಿರುವದಗೀ | ಅಟ್ಟಹಾಸದಿ ಬಂದರಿದೇ | ಮಹಿಪತಿ ಜನ | ಇಷ್ಟ ದೈವತ ಎನಿಪಾ ನೋಡಮ್ಮಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಆನೆ ಬಂತಿದಕೋ ಮಹಾಮದ್ದಾನೆ ಬಂತಿದಕೋ ಸ್ವಾನಂದದಲಿ ಮೆಲ್ಲಮೆಲ್ಲನೆ ಅಡಿಗಳ ತಾನಿಡು ತೊಲವುತಲಿ ನೋಡಮ್ಮ ಧ್ರುವ ಕರಿಯ ಬಣ್ಣದಲೊಪ್ಪುತ ಕಿರಿಗೂದÀಲು ಶಿರದಲಿ ಹೊಳೆವುತ ಪೆರೆನೊಸಲೊಳು ಕೇಸರದ ಕಸ್ತೂರಿ ರೇಖೆ ಕರುಣ ಭಾವದ ಕಂಗಳು ನೋಡಮ್ಮ 1 ಝಳಝಳಿಪಂಬರದಿ ಫಣ ಫಣವೆಂಬ ಚೆಲುವ ಗಂಟÉಯರವದಿ ಒಲಿದು ತನ್ನಯ ನಿಜ ಶರಣರ ಅನುಮತ ದಲಿ ನಲಿದಾಡುತಲಿ ನೋಡಮ್ಮ 2 ದುಷ್ಟ ಜನರು ತೊಲಗಿ ಎನುತ ಮುಂದೆ ಶಿಷ್ಟ ಜನರು ಒದಗಿ ಅದ್ದಹಾಸದಿ ಬಂದರಿದೆ ಮಹಿಪತಿ ಜನ ಇಷ್ಟದೈವತ ಎನಿಪ ನೋಡಮ್ಮ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಆನೆ ಬಂದಿತಮ್ಮಾ ಮರಿಯಾನೆ ಬಂದಿತಮ್ಮಾ ಪ ಸ್ಮರಿಸಿರಿ ಸ್ಮರಿಸಿರಿ ಸರ್ವರ ರಕ್ಷಿಸುವ ಮುಖ್ಯ ಪ್ರಾಣನೆಂಬಾನೆಅ.ಪ ವಾಯು ಸುಪುತ್ರ ನೆಂದೆನಿಸ್ಯಾನೇ ವಾರಿಧಿಯನ್ನೇದಾಟ್ಯಾನೇ ಶಶಿಮುಖಿ ಸೀತೆಯ ಕಂಡಾನೇ ದಶಕಂಠನಗರ್ವ ಮುರಿದಾನೆ 1 ಪಂಚಪಾಂಡವರ ಮಧ್ಯಾನೆ ಪ್ರಚಂಡ ಪರಾಕ್ರಮಿ ಎನಿಸ್ಯಾನೇ ವಂಚಿಸಿ ಕೀಚಕನ ಕೊಂದಾನೆ ಪಾಂಚಾಲಿಗೆ ಪ್ರಿಯನಾದನೆ 2 ಮಧ್ವಮತವ ಉದ್ಧರಿಸ್ಯಾನೇ ವೆಂಕಟ ವಿಠಲನೆಂಬಾನೆ 3
--------------
ರಾಧಾಬಾಯಿ