ಒಟ್ಟು 366 ಕಡೆಗಳಲ್ಲಿ , 72 ದಾಸರು , 307 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ದಯಾಬ್ದಿ ಸಿರಿಧರಣಾ ಪಾ'ಮಾಂಭಯಕೃದ್ಭಯನಾಶನ ಹಯವದನಾ ಪಜಯಪ್ರದ ಮುರಹರ ಜಾನಕೀಶ ಅಘಕ್ಷಯ ಖಗವಾಹನ ಸಾರಸೇಕ್ಷಣ 1ಚಾತುರ್ಥದ ರಾಮಕೋಟಿಯ ಜರುಗಿಸಿಕೌತೂಹಲ ಪ್ರಜತತಿಗೆ ಲಭಿಸಿದೆ 2ಆಪದೊದ್ಧಾರಣ ಆರ್ತಶರಣ್ಯಾಭೊಪಸುಜನಗಣ ತಾಪನಿವಾರಣ 3ಪ್ಲೇಗಿನವಾಂತರ ಪರಿಹರಿಸಿಪುರಭೋಗಿಶಯನ ಪರಪಾಲಿಸು ಬೇಡುವೆ 4ಚನ್ನಪಟ್ಣಾಧೀಶ ಸ್ತೌತ್ಯವುಮೇಶಎನ್ನಪರಾಧಗಳ ಮನ್ನಿಸು ಶ್ರೀಶ 5ಯುವತೀಮಣಿಯರೆಲ್ಲ ಶಿವಕರಭಕ್ತಿುದಿಂತವನಾಮಾಮೃತ ಸ'ಗೊಲಿದರು ರಕ್ತಿ 6ಪ್ರೇಮ ತುಲಸಿಗುರುಸ್ವಾ'ು ಸೇವಕ ರಂಗಸ್ವಾ'ುದಾಸ ಹೃದಿಧಾಮ ಶ್ಯಾಮಾಂಗ 7
--------------
ಮಳಿಗೆ ರಂಗಸ್ವಾಮಿದಾಸರು
ದಶಾವತಾರ ಸ್ತೋತ್ರ ನಾರಾಯಣ ಗೋವಿಂದ | ಹರಿ |ನಾರಾಯಣ ಗೋವಿಂದ |ಪಾರಾಶರ ಸುತನಂದ | ಹರಿ |ನಾರಾಯಣ ಗೋವಿಂದ ಪ ವೇದವ ಕದ್ದೊಯ್ಯಲು ಆತಮನಾ |ಬಾಧಿಸಿ ನಿಗಮವ ತಂದ 1 ದಿವಿಜರು ಚ್ಯುತಬಲರಾಗಿರಲಮೃತವ |ದಿವಿಜರಿಗುಣಿಸಿದ ನಂದಾ 2 ಖಳನು ಭೂಮಿಯ ಕದ್ದೊಯ್ಯಲುತಾ |ಪೊಳೆವ ಕೋರಿಯಲಿ ತಂದಾ 3 ತರುಳನ ಪರಿಪರಿ ಬಾಧಿಸುತಿರಲಾ |ದುರುಳ ದೈತ್ಯನ ಕೊಂದ 4 ಬಲಿಯಪರಾಧವ ನೊಂದೆಣಿಸದೆ ತಾ |ವರಿದು ಬಾಗಿಲಲಿ ನಿಂದ 5 ಕ್ಷತ್ರಿಯ ಬಲವನೆಲ್ಲ ಸವರಿ ನಿ |(ಶ್ಚ) ಕ್ಷತ್ರರ ಮಾಡಿದ ನಂದಾ 6 ವರಮುನಿ ಶಾಪದಿ ಶಿಲೆಯಾಗಿರಲು |ದ್ಧರಿಸಿದ ಪರಮಾನಂದಾ 7 ಮಡದಿ ಗೋಪಿಯರ ಒಡನಾಡಿದ |ಪಾಲ್ಗಡಲ ಶಯನ ಮುಕ್ಕುಂದಾ 8 ತ್ರಿಪುರದ ಸ್ತ್ರೀಯರ ವೃತಗೆಡಿಸಿದ | ವಟು |ವಪು ಮೃಡಮುಖ ಸುರವಂದ್ಯಾ 9 ಪುರುಷೋತ್ತಮ ಯವನರ ಸಂಹರಿಸಿ |ತುರಗವನೇರಿ ನಿಂದಾ 10 ಶ್ರೀಶ ಪ್ರಾಣೇಶ ವಿಠಲ ಈ ಸರ್ವರ |ಪೋಷಕ ನಾನಹುದೆಂದಾ 11
--------------
ಶ್ರೀಶಪ್ರಾಣೇಶವಿಠಲರು
ದಾಸರ ನೋಡಿರೈ ಮನದಭಿಲಾಷೆಯ ಬೇಡಿರೈ | ಭಾಸುರ ಕಾರ್ಪರಾಧೀಶನಾ ಸನ್ನಿಧಿ ವಾಸ ಕೃತನತ ಪೋಷಾ || ಹಿಂದೆ ಪ್ರಲ್ಹಾದನು ಮಾತೆಯ ಗರ್ಭದೊಳಿರಲು ಮುಂದೆ ಈತ ಹರಿಭಕ್ತಾಗ್ರೇಸರನೆಂದು ಮನಸ್ಸಿಗೆ ತಂದು | ಛಂದದಿ ಹರಿಪರನೆಂಬೊ ತತ್ವ ಬೋಧಿಸಿದ ಜ್ಞಾನವ ಗರೆದ || ವೃಂದಾರಕ ಮುನಿಯೆಂದಿವರನು ಭಾವಿಸುತ ಅಭಿವಂದಿಸುತ 1 ಬೋಧ ಸಚ್ಛಾಸ್ತ್ರ ಧರ್ಮವ ಮುದದಿ ತಿಳಿಗನ್ನಡದದಿ ಸತಿ ಸುಳಾದಿ ರೂಪದಿ ವಿರಚಿಸಿ ದಯದಿ ಸಾರುತ ಜಗದಿ | ಬಲುವಿಧ ಭವದೊಳು ಬಳಲುವ ಸಜ್ಚನ ಕೊಲಿದ ಕಲುಷವ ಕಳೆದ | ಇಳೆಯೊಳು ಇವರು ಪೇಳಿದ ವಚನವು ವೇದ ದೊಳಗಿನ ಸ್ವಾದ 2 ಈ ಮಹಾಕ್ಷೇತ್ರದ ಸ್ವಾಮಿ ನರಸಿಂಹ ಪಾದ ಅರ್ಚಕರಾದ | ಭೀಮಾರ್ಯರ ಸದ್ಭಕ್ತಿಗೆ ನೆಲಸಿಹರಿಲ್ಲಿ ಅನುದಿನದಲ್ಲಿ || ನೇಮದಿ ತನ್ನನು ಸೇವಿಪ ಭಕುತರ ಕರವ ಕರುಣದಿ ಪಿಡಿವ || ಜಗದೊಳು ಮೆರೆದ 3
--------------
ಶಾಮಸುಂದರ ವಿಠಲ
ದಾಸರಿಗುಂಟೆ ಭಯಶೋಕ ಪ ವಾಸುದೇವನ ಸದಾ ಸ್ಮರಿಸುವ ಹರಿ ದಾಸರಿಗುಂಟೆ ಭಯಶೋಕ ಅ.ಪ. ಕಾಮಧೇನು ವರ ಕಲ್ಪವೃಕ್ಷ ಚಿಂ ತಾಮಣಿ ಕೈ ಸೇರಿದಕಿಂತ ನಾಮತ್ರಯದಿಂದಪ್ಪುದು ಸುಖವು ಸು ಧಾಮನೆ ಸಾಕ್ಷಿದಕೆಂಬ ಹರಿ 1 ರಾಮಚಂದ್ರ ಶಬರಿ ತಿಂದೆಂಜಲ ಜಾಮಿಳ ಮಾಡ್ದ ಕುಕರ್ಮಗಳ ಧೂಮಕೇತು ತಾ ಭುಂಜಿಸುವಂದದಿ ಮೇಧ್ಯಾಮೇಧ್ಯ ಕೈಗೊಂಬನೆಂಬ ಹರಿ 2 ನೇಮ ಮಂತ್ರ ಜಪ ದೇವತಾರ್ಚನ ಸ ಕಾಮುಕವಾಗಲು ತ್ಯಜಿಸುತಲಿ ಧೀಮಂತರಾಗತಿಪ್ರಿಯವಾಗಲು ಬಹು ತಾಮಸ ಕರ್ಮವ ಮಾಳ್ಪುವೆಂಬ ಹರಿ 3 ಏನು ಮಾಡಿದಪರಾಧವ ಕ್ಷಮಿಸುವ ಏನು ಕೊಟ್ಟುದನು ಕೈಗೊಂಬ ಏನು ಬೇಡಿದಿಷ್ಟಾರ್ಥವ ಕೊಡುವ ದ ಯಾನಿಧಿ ಅನುಪಮನೆಂಬ ಹರಿ 4 ಪ್ರಹ್ಲಾದವರದ ಪ್ರಕಟನಾಗದಲೆ ಎಲ್ಲರೊಳಿಪ್ಪನು ಪ್ರತಿದಿನದಿ ಬಲ್ಲಿದವರಿಗೆ ಬಲ್ಲದ ಜಗನ್ನಾಥ ವಿಠ್ಠಲ ವಿಶ್ವವ್ಯಾಪಕನೆಂಬ ಹರಿ 5
--------------
ಜಗನ್ನಾಥದಾಸರು
ದೀನ ಪಾಲನೆ ಗಾನಲೋಲನೆ ಸುಜನ ಪ್ರಿಯನೇ ಪ ಈ ನರಜನ್ಮದ ಕಾನನದಲಿ ಬಲು ದೀನನಾಗಿ ಗುಣಗಾನ ಮಾಡುವೆನೊ ಅ.ಪ ದುಷ್ಟಭೋಗಗಳನುಭವಿಸುತ ಸದಾ ಭ್ರಷ್ಟನಾದೆ ನಾನು ಅಷ್ಟಿಷ್ಟಲ್ಲದೆ ಮರುಗುತಿರುವೆ ಪರ ಮೇಷ್ಟಿ ಜನಕ ಎನ್ನ ನಿಷ್ಠನ ಮಾಡೊ 1 ಜಪವ ಮಾಡಲಿಲ್ಲ ತಪವ ಮಾಡಲಿಲ್ಲ ಉಪವಾಸವ ಕಾಣೆ ತಪಿಸುತಿರುವೆ ಎನ್ನ ಅಪರಾಧಗಳಿಗೆ ಕುಪಿತನಾಗದಿರೊ ದ್ವಿಪ್ರವರ ವರದ 2 ಧರ್ಮವ ಬಿಟ್ಟು ಸತ್ಕರ್ಮವ ತ್ಯಜಿಸುತ ದುರ್ಮಾರ್ಗದಲಿ ಬಲು ಹೆಮ್ಮೆ ಮಾಡಿದ ನನ್ನ ಹಮ್ಮು ಮುರಿದಿಹುದು ಬೊಮ್ಮ ಜನಕ ಸುಪ್ರಸನ್ನನಾಗೆಲೊ 3
--------------
ವಿದ್ಯಾಪ್ರಸನ್ನತೀರ್ಥರು
ದೇವ ಕರುಣಾಳು ನೀ ಕಾವಲಾಗಿರುವುದಕೆ ಆವ ವೇತನ ಕೊಡುವೆ ಶ್ರೀ ವರನೆ ನಿನಗೆ ಪ. ರೂಢ ಕೈಪಿಡಿದು ಕಾಪಾಡುತಿಹ ಬಿರುದ ಪಾಡಿ ಪೊಗಳುತ ನಮಿಸಿ ಬೇಡಿಕೊಂಬುವೆನು ನಾ ಮಾಡಿದಪರಾಧಗಳು ನೋಡಲದ್ಭುತವು 1 ನಡೆ ತಪ್ಪು ನುಡಿ ತಪ್ಪು ನಿಂತಲ್ಲಿ ಬಹು ತಪ್ಪು ಖಡುಮೋಹ ಕೃತ ತಪ್ಪು ಕಾಮಕೃತ ತಪ್ಪು ಮಾಡದಿ ಮನೆ ಮಿತ್ರ ಧನ ಒಡವೆಯಾಶೆಯು ತಪ್ಪು ಒಡೆಯನೀ ಕ್ಷಮಿಸೆಂದು ವಂದಿಸುವೆ ನಿಂದು 2 ಯುಕ್ತಾಯುಕ್ತವನರಿಯೆ ಎನ್ನಹಂಕೃತಿ ಮರೆಯೆ ಭಕ್ತಿ ಮುಕ್ತಿದ ಸರ್ವ ಶಕ್ತಿ ಶ್ರೀ ಹರಿಯೆ ಭಕ್ತವತ್ಸಲ ವೆಂಕಟಾದ್ರಿ ಶೇಖರ ಸಿರಿಯೆ ಯುಕ್ತಿಯಿಂದಲಿ ಎನ್ನ ಪಾಲಿಸುವ ದೊರೆಯೆ 3
--------------
ತುಪಾಕಿ ವೆಂಕಟರಮಣಾಚಾರ್ಯ
ದೇವಿ ಪಾಲಿಸು| ಅಂಬ| ದೇವಿ ಪಾಲಿಸು ಪ ದೇವಿ ಪರಮಪಾವನೆ ಶಂಕರಿ ಅ.ಪ ಸುರರ ಮೊರೆಯನಾಲಿಸುತಲಿ| ದುರುಳನಾದ ಅರುಣಾಸುರನ ಹರಣ ಹೀರಿ ಮೆರೆವನುಪಮ| ಚರಿತೆ ಎನ್ನಿಷ್ಟಾರ್ಥವೀಯುತ 1 ನಂದಿನಿನದಿಯ ಮಧ್ಯದಿ ನೆಲೆಸಿ | ಬಂಧುಭಾವದಿಂದ ಶರಣ|| ವೃಂದವನ್ನಾನಂದದಿಂದ | ಕಂದರಂತೆ ಸಲಹುತಿರುವೆ 2 ವಿಮಲಚರಿತೆ ಸುಗುಣಭರಿತೆ| ಅಮರವಿನುತೆ ಲೋಕಮಾತೆ|| ಕ್ಷಮಿಸುತೆನ್ನಪರಾಧಗಳನು| ಕಮಲನೇತ್ರೆ ಪರಮಮಂಗಳೆ3 ನಿನ್ನ ಹೊರತು ಪೊರೆವರಿಲ್ಲ| ನಿನ್ನ ಭಜಿಸುತಿರುವೆನಲ್ಲ|| ಎನ್ನನು ಪೊರೆವ ಭಾರವೆಲ್ಲ| ನಿನ್ನ ಪದಕೊಪ್ಪಿಸಿದೆನಲ್ಲ 4 ಪಂಕಜಾಕ್ಷಿ ಪಾಪರಹಿತೆ| ಕಿಂಕರಜನನಿ ಶಂಕರಪ್ರಿಯೆ|| ಶಂಖಚಕ್ರಧಾರಿಣಿ ದೇವಿ| ವೆಂಕಟರಮಣನ ಸೋದರಿ ಶಂಕರಿ5
--------------
ವೆಂಕಟ್‍ರಾವ್
ದೇವಿ ಲಕ್ಷಣೆ ಎಮ್ಮ ಸಲಹ ಬೇಕಮ್ಮಭಾವದಲಿ ನೀನಿದ್ದು ಭಾವನಯ್ಯನ ತೋರೀ ಪ ಪಿತನು ಬೃಹತ್ಸೇನ ನಿನಗಾಗಿ ಸ್ವಯಂವರವಹಿತದಿಂದಲೆಸಗುತ್ತ ಲಕ್ಷ್ಯವನೆ ಬಿಗಿದೂ |ಅತಿಶಯದ ಧನುವಿಗೆ ಸಜ್ಜಿಸುತ ಬಾಣವನುಚತುರತೆಲಿ ಭೇದಿಪಗೆ ಸುತೆಯ ಪಣವೆಂದ1 ಮತ್ಸ್ಯ ಯಂತ್ರವಿದಲ್ಲಔಪಚಾರಿಕವೆಲ್ಲ ಸರ್ವವಿಧ ಛನ್ನಾ |ವೈಪರೀತ್ಯದಿ ದ್ವಾರ ಉಪರಿ ಇರುವುದು ಕೇಳಿಕಾಪುರುಷಗಿದು ಕಾಂಬ ಮಾರ್ಗವೇ ಇಲ್ಲ 2 ಸೂತನುತ ಮಾಗಧನು ಕೌತುಕದ ಕೌರವರುಪಾರ್ಥನೂ ಅವನಣ್ಣ ಭೀಮಸೇನಾ |ಆತು ಧನುವನು ಲಕ್ಷ್ಯ ಭೇದಿಸಲೆ ಬೇಕೆಂದುಪೃಥಿವಿಪರು ಮತ್ತಿತರು ಬಂದು ಸೇರಿದರು 3 ಸಜ್ಜುಗೈಯಲು 5ನುವ ಆರಿಂದಲಾಗದಿರೆಲಜ್ಯೆಯಿಂದಲಿ ಮರಳಿ 5ೀಗುವರೆ ಬಹಳ |ಅರ್ಜುನನು ತಾನೊಬ್ಬ ಲಕ್ಷ್ಯವೀಕ್ಷಣ ಶಕ್ತಅರ್ಜುನಾಗ್ರಜ ಹರಿಗೆ ಅಪರಾಧವೆನೆ ಸರಿದ 4 ನೆರೆದ ಸಭೆಯಲ್ಲಿ ಪುಷ್ಪಹಾರವನೆ ಪಿಡಿಯುತ್ತಬರುತ ವೈಯ್ಯಾರದಲಿ ಶಿರಿ ಕೃಷ್ಣ ಕಂಠದಲ್ಲಿ |ಇರಿಸಿ ಪರಮಾನಂದ ಭರಿತಳಾಗಲು ಹರಿಯುಕರಪಿಡಿದು ಹೊರವಂಟ ತನ್ನ ದ್ವಾರಕಿಗೇ 5 ಪರಿ ಪರಿ ಪುಷ್ಪ ವೃಷ್ಟಿಗಳ ಗರೆಯೇ |ದುರುಳರೆದುರಾಗಿ ಸಂಗರಕೆ ಬರುತಿರಲುಹರಿ ಭೀಮರೆದುರಿಸದೆ ದುರುಳರೋಡಿದರು 6 ಮೋದ ಬಡುವಂಥ |ಧೀವರರ ಮನೋಭೀಷ್ಟ ಪೂರ್ಣವನೆ ಗೈಯ್ಯುವನುದೇವ ಗುರು ಗೋವಿಂದ ವಿಠಲ ಕೃಪೆಯಿಂದ 7
--------------
ಗುರುಗೋವಿಂದವಿಠಲರು
ದೇಹಿಯೆಂಬವನೊಡನೆ ನಾಸ್ತಿಯೆನಬೇಡ ಕಾಯೊ ವೆಂಕಟಪತಿಯೆ ಕಾರುಣ್ಯವಾರಿಧಿಯೆ ಪ ಮಾಡಿದಪರಾಧಗಳ ನೋಡಿ ಕ್ಷಮಿಸಿಯೆ ಯೆನಗೆ ರೂಢಿಯೊಳು ಬೆಳೆಸಿರಿಯ ಕೈಗೂಡಿಸಿ ಆಡಿ ತಪ್ಪಿದ ನುಡಿಯ ಕೂಡಿ ನಡೆಸುತ ಮುಂದೆ ಬೇಡಿದಿಷ್ಟವನಿತ್ತು ಮಾತಾಡಬೇಕೆನುತ 1 ನರನಾದ ಕುರಿಯಿದನು ಸಲಹಬೇಕೆಂದೆನುತ ಮೊರೆಯಿಟ್ಟು ನಿನ್ನಡಿಗೆ ಶರಣಾದೆನು ಕರುಣವಾರಿಧಿ ನಿನ್ನ ಚರಣದಾಭರಣನಿಗೆ ಹರಣವನು ಮರೆವಾಗೆ ಸ್ಮರಣೆ ನೀಡೆನುತ 2 ಗುಣವಾದ ಪತ್ರಿಕೆಯ ಕ್ಷಣದೊಳಗೆ ಹರಿದೆನ್ನ ಕಣುಮನಕೆ ದೃಢವಾದ ಗುಣವ ತೋರೆನುತ ಫಣಿಶಯನ ನಿನ್ನಡಿಗೆ ಮಣಿದು ಬೇಡುವೆ ನಾನು ಉಣಲಾಗದೋಗರವ ಉಣಿಸಬೇಡೆನುತ 3 ಕೆಟ್ಟ ಕೆಲಸವನಿದಿರು ದೃಷ್ಟಿಗಿಕ್ಕದೆÀಯೆನ್ನ ಬಿಟ್ಟು ಕಳೆಯಲು ಬೇಡ ಸೃಷ್ಟಿಪಾಲಕನೆ ಇಟ್ಟಡಿಯ ಕಮಲವನು ಮುಟ್ಟಿ ಭಜಿಸುವೆ ನಾನು ಹುಟ್ಟಿದೀ ಬವರದೊಳು ಕಷ್ಟ ಬೇಡೆನುತ 4 ಶುದ್ಧ ಸ್ನಾನವ ತೊರೆದು ಇದ್ದ ಜಪಗಳ ಮರೆದು ಕರ್ಮ ಒದ್ದು ಕಳೆದು ಉದ್ದಂಡವಾಗಿ ನಡೆದಿರ್ದ ಪಾಪಂಗಳನು ತಿದ್ದಿಟ್ಟು ಎನ್ನನುರೆ ಉದ್ಧರಿಸಬೇಕಯ್ಯ 5 ಪೊಡೆವಿಯೊಳಗೆನ್ನಂಥ ಕಡುಮೂರ್ಖರನು ಕಾಣೆ ಮಡದಿಯೆಂಬಡವಿಯೊಳು ಕೈದುಡುಕಿದು ಪಡೆದ ಮಕ್ಕಳ ಮುಂದೆ ಕಡೆ ಹಾಯುವವರಿಲ್ಲ ಒಡೆಯನಾಗಿಯೆ ಯೆನ್ನ ಬಿಡದೆ ಸಲಹೆನುತ 6 ನಾರಿ ಮಕ್ಕಳಿಗೆಲ್ಲ ಮೀರಿದಾಪತ್ತಿನಲಿ ತೋರಿಸುವೆ ನಿನ್ನ ಚರಣಂಗಳೆನುತ ಹಾರೈಸಿದ್ಹರಕೆಯಿದು ಭಾರವಾಗಿಯೆ ಶಿರದಿ ಏರಿದುದನಿಳುಹುವರೆ ದಾರಿ ತೋರೆನುತ 7 ತ್ರಾಹಿ ವೆಂಕಟರಾಯ ಕಾಯೊ ನಿನ್ನಯ ಮಾಯೆ ಮೋಹಿಸುತ ಜಗವೆಲ್ಲ ಬಾಯ ಬಿಡುತಿಹುದು ದೇಹಿಯೆನುತಿಹ ಜನಸಹಾಯನಲ್ಲವೆ ನೀನು ಮಾಯವಾಗದೆ ಮುಂದೆ ಆಯತನ ತೋರೆನುತ 8 ಸುರವಂದ್ಯ ಮುರಮಥನ ಗುರುದೈವ ಪರಮಾತ್ಮ ವರಲಕ್ಷ್ಮಿಕರವೆನಿಪ ಹರಿವೆಂಕಟೇಶ ಮರೆವಾಗದಿರು ಯೆನ್ನ ಕರೆದು ನೆರೆ ಸೌಖ್ಯವನು ಸ್ಥಿರವಾಗು ಎನ್ನೊಡನೆ ವರಾಹತಿಮ್ಮಪ್ಪ 9
--------------
ವರಹತಿಮ್ಮಪ್ಪ
ನಂದನಂದನ ಪದ್ಮಾನಂದನ ವಂದ್ಯನೇ| ತಂದೆ ಮಹಿಪತಿಸುತ ಪ್ರಭುವೇ ಮುಕುಂದ ಕೃಷ್ಣ ಪ ಸಿರಿಯಾ ಸೌಖ್ಯ ದಿಂದುಬ್ಬಿ ಮದದಿಂದ| ಸರಿಯನಗಾರು ಇಲ್ಲೆಂಬ ತಾಮಸದಿಂದ| ಮರದೆನೋ ಹರಿನಿಮ್ಮಾ ಸ್ಮರಣೆಯಾ ಮರವಿಂದ| ತಿರುಗಿ ದಣಿದೆ ನಾನು ನಾನಾಯೋನಿಗಳಿಂದ| ತರಹರಿಸಲಾರೆ ತಾಪತ್ರಯದುಃಖಗಳಿಂದ| ಶಿರಿಕೃಷ್ಣ ಸಲಹೆನ್ನ ಪರಮ ಕರುಣದಿ|1 ಮುನ್ನ ಮಾಡಿದಪರಾಧ ಸಕಲವ ನೀನು ಕ್ಷಮೆಯನುಮಾಡಿ ಚಿನ್ನ ಕಿಂಕರನೆಂದು ದಯದಲಿ ಅಭಯಕರವನು ನೀಡಿ ನಿನ್ನ ಸ್ಮರಣೆಯಕೊಟ್ಟು ಕರುಣ ಕಟಾಕ್ಷದಿಂದಲಿ ನೋಡಿ ಚಿನ್ನ ಶ್ರೀಕೃಷ್ಣ ಭವದಿಂದುದ್ಧರಿಸಯ್ಯಾ ತಾರಿಸಯ್ಯಾ ನೀನು2 ಪತಿತ ಪಾವನ ನೆಂಬಾಬಿರುದು ಸಾರುತಿದೆ ಗತಿಗೆಟ್ಟ ಅಜಮಿಳನ ತಾರಿಸಲಿಲ್ಲವೇ ಪಾಷಾಣ ಉದ್ದರಿಸಲಿಲ್ಲವೇ ಕ್ಷಿತಿಯೊಳೆನ್ನ ತಾರಿಸುವದೊಂದರಿದೇ ಶ್ರೀಕೃಷ್ಣಾ3 ಕರಿರಾಜನಂದದಿ ಹರಿತವಸ್ಮರಣೆ ಮಾಡಲರಿಯೇ ಶರಣ ಪ್ರಲ್ಹಾದನಂತೆ ಕರೆಯ ಬರಿಯೇ ನರೆನಂತೆ ನಾನಿನ್ನ ವಲಿಸಿಕೊಳ್ಳಲರಿಯೇ ತರಳ ಧ್ರುವನಂತೆ ಧ್ಯಾನಿಸಲರಿಯೇ ಶಿರಿಕೃಷ್ಣಾ ಗತಿಯಂಬದುವಿನಾ ಮತ್ತೊಂದರಿಯೇ 4 ನಿನ್ನ ನಾಮವನು ಕೊಂಡಾಡುವೆ ಪೊಗಳುವೆ ಚನ್ನಾಗ್ಯನುದಿನದಲನವರತಾ ತನ್ನಯಕರುವಿಗೆ ಕರುಣಿಪಗೋಪಂತೆ ಎನ್ನ ನೀಸಲಹುದು ಶಿರಿಕೃಷ್ಣರೇಯಾ5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನಂಬಿ ಬಂದಿಹೆನಯ್ಯಾ ಪ ನಿನ್ನನಾ ಸ್ತುತಿಸಿ ಕೊಂಡಾಡುವೆ 1 ಕುಂದಿದ ಮನದಲಿ ನಿನ್ನನಾ ನೆನೆಯುದೆ ಮುಂದೇನುಗತಿ ಎನಗೆಂದು ತಿಳಿಯದೆ ಇನ್ನಾದರೆನ್ನ ಮನನಿನ್ನಲ್ಲಿ ನಿಲಿಸು 2 ಭೂಮಂಡಲವೆಲ್ಲಾ ತಿರುಗಿದೆ ಪ್ರಭುವೇ ನಿಮ್ಮ ಶರಣು ಬಂದಿಹೆ ನಯ್ಯ ಹೇಗುರುವೇ3 ಇಂದೆನ್ನ ಮೊರೆಕೇಳಿ ಕೇಳಿಸದಂತಿರುವೆಯಾ ಪ್ರಭುವೆ 4 ಪರದೇಶಿಯೆನುತೆನ್ನ ಕೈಬಿಡಬೇಡವೋ ಬಿಡದೆ ನಿನ್ನಡಿಗಳ ಪಿಡಿದಿಹೆನಯ್ಯಾ 5 ದೃಷ್ಟಿಯಿಂಲಿ ನೋಡಿ ರಕ್ಷಿಸು ನಮ್ಮನು | ಘಟ್ಯಾಗಿ ನಿಮ್ಮಪಾದ ಮುಟ್ಟಿ ನಾ ಭಜಿಸುವೆ6 ಸರ್ವಾಪರಾಧವ ಕ್ಷಮಿಸಿ ನೀ ಕಾಯೋ ಕಾಲಮೀರದೆಮ್ಮನು ಪಾಲಿಸಬೇಕಯ್ಯ 7
--------------
ರಾಧಾಬಾಯಿ
ನಮೋ ನಮೋ ನಮೋ ಎಂಬೆ ನಿನಗೆ ಸ್ವಾಮಿ ರಘುರಾಮಾ| ಶಮಲ ಹಾರಿಸಿ ವಿಮಲ ಮತಿಯ ಕೊಡುವ ಪುಣ್ಯ ನಾಮ ಪ ಮುನ್ನ ಮಾಡಿದ ಕೋಟಿ ಜನುಮದ ಪುಣ್ಯ ಒದಗಿತೆಂದು| ಕಮಲ ಕಂಡೆ ಧನ್ಯನಾದೆನಿಂದು 1 ಪರಮ ಪುರುಷನೆಂಬುದರಿಯ ಮಾಡಿದಪರಾಧವ ಕರುಣದಿಂದ ಕ್ಷಮಿಸಿ ಹೊರಿಯಬೇಕು ಪೂರ್ಣಬೋಧಾ 2 ಇಂದು ಮೊರೆಯಹೊಕ್ಕೆ ಸಲಹು ನಿಮ್ಮ ಸೇವೆಯಿಂದು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನವವಿಧ ಭಕುತಿ ಶ್ರವಣದಿಂದಲಿ ಪಾಪಹರಣವಾಗುವುದೆಂದು ಕವಿಗಳೆಲ್ಲರು ಕೂಗಿ ಒದರುತಿಹರು ಕಿವಿಗಳಿಗಾನಂದದಾಭರಣದಂತಿಹುದು ಶ್ರೀ- ಹರಿಯ ದಿವ್ಯನಾಮಾಮೃತದರಸವು ಮಾಧವನ ಮೂರ್ತಿಯನು ನೋಡದಿಹ ಕಂಗಳು ನವಿಲು ಕಣ್ಣುಗಳೆಂದು ಪೇಳುತಿಹರು ಕಮಲನಾಭ ವಿಠ್ಠಲನ ಮಹಿಮೆ ಪೊಗಳೆ ಫಣಿರಾಜನಿಗೆ ವಶವಲ್ಲ ದೇವಾ 1 ಕೀರ್ತನವು ಮಾಡಲು ಪಾತಕವು ಪರಿಹರವು ಮಾತುಳಾಂತಕನ ಮಹಿಮೆ ಘನವು ಶ್ರೀಶನನು ಮನದಣಿಯ ಸ್ತೋತ್ರವನು ಮಾಡಲು ನಾಶಗೈವನು ದುರಿತರಾಶಿಗಳನು ಮಾಡಿದಪರಾಧಗಳ ಮಾಧವನು ಮನ್ನಿಸುವ ಶ್ರೀಧರನ ಸ್ತುತಿಸಿ ಕೊಂಡಾಡುತಿಹರ ಕರುಣಾಕರ ಕಮಲನಾಭವಿಠ್ಠಲ ದುರಿತದೂರನು ಕಾಯ್ವ ಶರಣಜನರ 2 ಸ್ಮರಣೆಯನು ಮಾಡುತಿಹ ಮನುಜರಿಗೆ ಇಹಪರದಿ ಪರಮ ಮಂಗಳನೀವ ಪರಮಾತ್ಮನು ದುರಿತ ದೂರನ ಪಾದಸ್ಮರಣೆ ಮಾಡುವರಿಗೆ ಪರಿಪರಿಯ ಸೌಖ್ಯಗಳ ಕೊಡುವ ದೇವ ಮಧುವೈರಿಯನು ಸ್ಮರಿಸೆ ಮುದದಿ ಸಂಪದವೀವ ಮೂರ್ತಿ ಶ್ರೀಮಾಧವ ಕನಕಗರ್ಭನ ಪಿತನು ಕರುಣಾನಿಧಿಯು ಕಮಲನಾಭ ವಿಠ್ಠಲ ಕಾಯ್ವ ಸುಜನರ3 ಶಿಲೆಯಾದ ಅಹಲ್ಯೆಯ ಪರಿಪಾಲಿಸಿದ ಪಾದ ಧರಣಿ ಈರಡಿಗೈದ ದಿವ್ಯಪಾದ ಫಣಿ ಹೆಡೆಯ ತುಳಿದ ಪಾದ ವರ ಋಷಿಗಳೆಲ್ಲ ವಂದಿಸುವ ಪಾದ ಇಂದಿರಾದೇವಿ ಬಹುಚಂದದಿಂದೊತ್ತುತ ಕಂದರ್ಪನಯ್ಯನಿಗೆ ಪಾದಸೇವ ಚಂದದಿಂದಲಿ ಮಾಡಿ ಮಾಧವನಿಗೆ ನಂದಗೋಪಿಯ ಕಂದ ಸಲಹುಎನಲು ಸುಂದರ ಶ್ರೀ ಕಮಲನಾಭ ವಿಠ್ಠಲನು ಒಲಿವ 4 ಅರ್ಚಿಸುತ ಮೆಚ್ಚಿಸುತ ಸಚ್ಚಿದಾನಂದನನು ಸ್ವಚ್ಛ ಭಕುತಿಲಿ ಸ್ತೋತ್ರ ಮಾಡುತಿಹರ ಅಷ್ಟ ಐಶ್ವರ್ಯಪ್ರದನು ನಿತ್ಯಮುಕ್ತಳ ಕೂಡಿ ಭಕ್ತರ ಹೃದಯದಲಿ ಪೊಳೆವ ದೇವ ಸತ್ಯ ಸಂಕಲ್ಪನಿಗೆ ಕಸ್ತೂರಿ ತಿಲಕವು ಮತ್ತೆ ಪಾವಡಿ ಥಳಥಳನೆ ಹೊಳೆಯೆ ಸುತ್ತ ಬ್ರಹ್ಮಾದಿಗಳ ಸ್ತುತಿಗೆ ದೇವ ಚಿತ್ತವಿಟ್ಟು ಕೇಳ್ವ ಮಾಧವನು ಮುದದಿ ಕರ್ತೃ ಕಮಲನಾಭ ವಿಠ್ಠಲನು ಕಾಯ್ವ 5 ವಂದನೆಯನು ಮಾಡೆ ಮುಕುಂದನು ಒಲಿವನು ಮುದದಿ ಕಂದರ್ಪನಯ್ಯ ಕಮಲಾಕ್ಷ ಹರಿಯೂ ಸುಂದರಾಂಗ ಶ್ರೀಹರಿಗೆ ಗಂಧ ಪೂಸಿದಳಾಗ ಇಂದೀವರಾಕ್ಷಿ ನಸುನಗುತ ಬೇಗ ಇಂದ್ರಾದಿ ಸುರರೆಲ್ಲ ಕೊಂಡಾಡೆ ಮಾಧವನ ವಂದಿಸುತ ಸಿರಬಾಗಿ ಚಂದದಿಂದ ಮಂದಾರ ಪಾರಿಜಾತಗಳ ತಂದು ತಂದೆ ಕಮಲನಾಭ ವಿಠ್ಠಲನ ಮುಡಿಗೆ ಸಂಭ್ರಮದಿ ಮಳೆಗರೆಯೆ ಚಂದದಿಂದ 6 ದಾಸ್ಯವನು ಕೈಕೊಂಬ ದಾಸ್ಯಜನರನು ಪೊರೆವ ಮೀಸಲಾಗಿಹನು ಹರಿದಾಸ ಜನಕೆ ಪೋಷಿಸೆಂದೆನುವವರ ದೋಷಗಳನೀಡಾಡಿ ದೋಷರಹಿತನು ಪೊರೆವ ಸರ್ವಜನರ ಪೂಸಿ ಪರಿಮಳ ದ್ರವ್ಯ ಶ್ರೀಸಹಿತ ಮೆರೆವ ವಾಸುಕೀಶಯನ ಸಜ್ಜನರ ಪೊರೆವ ಮುರಳೀಧರ ಮಾಧವನು ಕರುಣದಿಂದ ಶರಣ ಜನರನು ಪೊರೆವ ಮರೆಯದೀಗ ಕಮಲನಾಭವಿಠ್ಠಲನು ಕಾಯ್ವದೇವ 7 ಸಖ್ಯ ಸ್ನೇಹಗಳಿಂದ ಮುತ್ತಿನ್ಹಾರಗಳನು ಕೃಷ್ಣನ ಕೊರಳಿಗ್ಹಾಕುತಲಿಬೇಗ ಅರ್ಥಿಯಿಂದಲಿ ರತ್ನ ಮುತ್ತಿನ ಚಂಡುಗಳ ವಿಚಿತ್ರದಿಂದಾಡುತಿರೆ ನೋಡಿ ಸುರರು ಮುತ್ತಿನಕ್ಷತೆಗಳನು ಮಾಧವನ ಸಿರಿಮುಡಿಗೆ ಅರ್ಥಿಯಿಂದ ಸುರಿಸುತಿರೆ ಹರುಷದಿಂದ ಅಪ್ರಮೇಯನು ಶ್ರೀಶ ಶ್ರೀನಿವಾಸ ಸರ್ಪಶಯನನು ಕಮಲನಾಭ ವಿಠ್ಠಲ ನಿತ್ಯ ತೃಪ್ತನು ಪೊಳೆವ ಭಕ್ತರ ಹೃದಯದಲಿ 8 ನಿತ್ಯ ತೃಪ್ತಗೆ ಮಾಡಿ ಅರ್ಥಿಯಲಿ ಅಪ್ರಮೇಯನನು ಸ್ತುತಿಸಿ ಮುತ್ತು ಮಾಣಿಕ್ಯ ಬಿಗಿದ ತಟ್ಟೆಯಲಿ ತಾಂಬೂಲ ಅಚ್ಚುತಾನಂತನಿಗೆ ಅರ್ಪಿಸುತಲಿ ಭಕ್ತಿಯಲಿ ವಂದನೆಯ ಭಕ್ತವತ್ಸಲನಿಗೆ ನಿತ್ಯ ಮುಕ್ತಳು ಮಾಡಿ ಹರುಷದಿಂದ ಸತ್ಯ ಸಂಕಲ್ಪ ಶ್ರೀ ಮಾಧವನಿಗೆ ಮುತ್ತಿನಾರತಿ ಬೆಳಗಿ ಅರ್ಥಿಯಿಂದ ಕರ್ತೃ ಶ್ರೀ ಕಮಲನಾಭ ವಿಠ್ಠಲನ ಕೊಂಡಾಡಿ9
--------------
ನಿಡಗುರುಕಿ ಜೀವೂಬಾಯಿ
ನಾ ಮಾಡಿದತಿಶಯ ಅಪರಾಧ ಅಹಾ ಸ್ವಾಮಿದ್ರೋಹವೆ ಮಾಡಿದೆ ಪ ನೇಮವಿಲ್ಲದೆ ಪಾಪ ಕಾಮಿಸಿ ಮಾಡಿ ಹರಿ ಪ್ರೇಮಕ್ಕೆ ದೂರಾದೆ ಪಾಮರತನದಿ ಅ.ಪ ಗುರುನಿಂದೆ ಮಾಡಿದೆ ಸ್ಮರಿಸಿದೆನನುದಿನ ಸ್ಮರಿಸಬಾರದ ಸ್ತ್ರೀಯರ ಶರಣಜನರು ಕಂಡು ಶಿರವ ಬಾಗದೆ ಮಹ ಗರುವದಿಂ ಚರಿಸಿದೆ ಪರಿಪರಿ ಜಗದಿ 1 ಲಕ್ಷಿಸದೆ ಪರರರ್ಥ ಭಕ್ಷಿಸಿ ಇಲ್ಲೆನುತ ಪಕ್ಷಿಗಮನನ ಸಾಕ್ಷಿಟ್ಟು ಲಕ್ಷದಶಶತಪಾಪ ಲಕ್ಷ್ಯವಿಲ್ಲದೆ ಗೈದು ಶಿಕ್ಷೆಗೆ ಗುರಿಯಾದೆ ಮೋಕ್ಷವನರಿಯದೆ 2 ಪಿತಮಾತೆಯರ ನೂಕಿ ಇತರರ ಜತೆಯೊಳು ಮತಿಗೆಟ್ಟು ಮಮತಿಟ್ಟಿಹೆ ಮಿತಿಯಿಲ್ಲದನೃತ ಕ್ಷಿತಿಯೊಳು ಸರಿಧರ್ಮ ಹಿತಚಿಂತನಿನಿತಿಲ್ಲದತಿಭ್ರಷ್ಟನಾದೆ 3 ಮಣಿದು ದೈನ್ಯೆಂಬರಿಗೆ ಘನಹಾಸ್ಯಗೈಯುತ ಮನವ ನೋಯ್ಸಿದೆ ಬೆನ್ನ್ಹಚ್ಚಿ ಕನಿಕರೆಂಬುದು ಎನ್ನ ಕನಸಿನೊಳಿನಿತಿಲ್ಲ ಮನಸಿನಂತ್ವರ್ತಿಸಿ ಘನಕರ್ಮಿಯಾದೆ 4 ಇಂತು ಪಾಪಿಗೆ ಸುಖವೆಂತು ತ್ರಿಜಗದೊಳು ಕಂತುಜನಕ ಶ್ರೀರಾಮ ಭಕ್ತವತ್ಸಲ ನೆಂಬ ಬಿರುದು ವಹಿಸಿದಿ ಎನ್ನ ದೆಂಥ ತಪ್ಪಿರೆ ಕ್ಷಮಿಸಿ ಸಂತಸದಿಂ ಪೊರೆ 5
--------------
ರಾಮದಾಸರು
ನಾನಪರಾಧಿ ಶ್ರೀನಿಧಿ ದೇವ ಪ ನಾನಪರಾಧಿ ನೀನದನೆಣಿಸದೆ ದೀನವತ್ಸಲ ಎನ್ನ ಮಾನದಿಂದಲಿ ಕಾಯೊ ಅ.ಪ ತನಯರಿಲ್ಲದೆ ಬಲು ಮನದೊಳು ಚಿಂತಿಸೆ ಮನದಿ ಸಂಕಲ್ಪಿಸೆ ವನಜನೇತ್ರನ ದಯದಿ ತನಯಳು ಜನಿಸಲು ಧನಮದದಲಿ ಮರೆತೆ 1 ಏನ ಪೇಳುವೆ ನಾನು ಧನದ ಮಹಿಮೆಯನ್ನು ಹೀನ ಬುದ್ಧಿಯನಿತ್ತು ಹರಿಯ ಮರೆಸುವುದು ದಾನವಾಂತಕ ಹರಿ ದೀನನಾಗಿಹೆನಯ್ಯ ಸಾನುರಾಗದಿ ಸಲಹೊ ಸತ್ಯನಾರಾಯಣ 2 ಮಂಗಳರೂಪ ಕೃಪಾಪಾಂಗದಿ ನೋಡೊ ರಂಗ ಶ್ರೀ ಕರಿಗಿರಿಯನಿಲಯ ಶುಭಾಂಗ ಗಂಗಾ ಜನಕನೆ ಗಜರಾಜವರನೆ ಭಂಗ ಬಿಡಿಸಿ ಕಾಯೊ ಭಕ್ತವತ್ಸಲ ದೇವ 3
--------------
ವರಾವಾಣಿರಾಮರಾಯದಾಸರು