ಒಟ್ಟು 4316 ಕಡೆಗಳಲ್ಲಿ , 124 ದಾಸರು , 3032 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

[ಶ್ರೀ ಪ್ರಾಣದೇವರ ಅನುಗ್ರಹವಿಲ್ಲದೆ ಶ್ರೀ ಹರಿಯು ಎಂದಿಗೂ ಒಲಿಯನೆಂಬ ಪ್ರಮೇಯ. ಪೂರ್ವಜನ್ಮದಲ್ಲಿ ವಾಲಿ ಹನುಮಂತನ ಅನುಗ್ರಹವಿಲ್ಲದ ಕಾರಣ ರಾಮನು ನಿಗ್ರಹಿಸಿದ. ಅರ್ಜುನನಾದಾಗ್ಗೆ ಭೀಮನು ಅಗ್ರಜನಾಗಿ ದಯ ಮಾಡಿದುದಕ್ಕೆ ಕೃಷ್ಣನು ಸಖನಾದ. ಮೂರನೆ ಜನ್ಮ ಜಯತೀರ್ಥರಾದಾಗ್ಗೆ ಜ್ಞಾನವಿತ್ತು ಕುಮತಗಳ ನಿರಾಕರಿಸಿದಿ ಪ್ರಾಣನ ಕೃಪೆಯಿಂದ ಎಲ್ಲ ಸೌಖ್ಯ ಗಂಟು. ಈಗಾದರು ಹಿಂದಿನಂತೆ ಪೊರೆಯೊ ಎಂದು ಪ್ರಾರ್ಥನೆ.] ಧ್ರುವತಾಳ ಹಿತಮಾಳ್ಪ ಜನಕನಾಗಿ ರಕ್ಷಸು ಎಂದೆಂಬೆನೆಪಿತೃ ಸಮಾನ ಜೇಷ್ಠನೆಂದೆಂಬ ವಿಧದಿ ಪಿತನೆ ಸರಿ ಎನಗೆ ಉಪಕಾರವ್ಯಾತಕಿನ್ನುಮಾತರಿಶ್ವನೆ ದೂರ ನೋಳ್ಪದೇನೊಭಾತೃನಾಗಿ ಎನ್ನ ಪಾಲಿಸು ಎಂದೆಂಬೆನೆನೋತ ಪುಣ್ಯಗಳಿಂದ ಹರಿಯು ತಾನೆ ಸ್ವತ ಏವ ಮಾಡಿದ ಈಗ ನುಡಿವದೇನೊಮಾತೃ ನೀನೆ ದೇಹ ಪೊರೆಯುವಲ್ಲಿಅತುಳ ಗುರುವಾಗಿ ಬೋಧಿಸು ಎಂದೆಂಬೆನೆಆತ್ಮ ಗುರುವಿಗೆ ನಿಜ ಗುರುವೆನಿಸಿದೆ ನಿತ್ಯನೂತನವಾಗಿ ಯಿದನು ಬೇಡಿಕೊಂಬುವದೇನುವೀತಿ ಹೋತ್ರನೆ ದೈತ್ಯ ಸಂತತಿಗೆಪ್ರತ್ಯಂತರ ಜನುಮದ್ವಯದಿ ನಿಜ ಮುಖದಿಂದಲೆಮತಿಯು ನೀಡಿದ ಮುಖ್ಯ ಗುರು ನೀನೆ ಪ್ರತಿಯಿಲ್ಲದೆ ಇದ್ದ ಇಷ್ಟನೇನೊ ಎನಗೆಗತಿ ಪ್ರದಾತನು ನೀನೆ ಆವಕಾಲಆಪ್ತನಾಗಿ ನೀನು ಸಲಹಬೇಕೆಂಬೆನೆ ಗತ ಜನ್ಮಗಳಲಿ ನೀನು ಮಾಡಿದುಪ-ಕೃತಿಗಳೆಣಿಸೆ ಈಗ ನಿನಗಿಂದಧಿಕವಾದಆಪ್ತನಾವನು ಎನಗೆ ಅರಸಿ ನೋಡಾಮತಿಯು ರಹಿತವಾದ ಜನುಮಗಳು ಬರಲಿಅತಿ ಹಿತ ನೀನೆ ಎನಗೆ ಇಹ ಪರದಿಅತಿಶಯ ಕೃಪಾನಿಧೆ ಗುರು ವಿಜಯ ವಿಠ್ಠಲರೇಯಅತಿ ಪೀಯನಾಗುವನು ನಿನ್ನ ದಯದಿ 1 ಮಟ್ಟತಾಳ ಬಾಂಧವನು ನೀನೆ ಎರಡು ಬಗೆಯಿಂದ ತಂದೆ ನಿನ್ನುಪಕಾರ ಅನಂತ ಜನುಮದಲಿಮಂದನಾದವ ನನು ತೀರಿಸಬಲ್ಲೆನೆಬಂಧು ಅನಿಮಿತ್ಯ ಗುರು ವಿಜಯ ವಿಠ್ಠಲ ನಿ-ನ್ನಿಂದಲಿ ಎನಗೆ ಅನುಗ್ರಹ ಮಾಡುವನೊ 2 ತ್ರಿವಿಡಿತಾಳ ನಿನ್ನ ಕರುಣಪೇಕ್ಷ ಮಾಡದಲೆ ಒಂದುಜನುಮ ಹರಿ ಕರುಣವಿಲ್ಲದಲೆ ಕಳದೇಅನಂತರದಿ ಎನ್ನ ಪುಣ್ಯ ಸಾಸಿರದಿಂದಅನುಜನಾದೆ ನಿನ್ನ ಕೃಪೆಯಿಂದಲಿಮನುಜ ಕೃತಿಯಾದರು ಪ್ರತಿಮದಲ್ಲಿ ಘನ್ನ ಚೇಷ್ಟಾದಿಗಳು ತೋರಿದಂತೆ ಎನ್ನ ನಾಮಕನಾಗಿ ಎನ್ನ ರೂಪದಿಂದಎನ್ನ ಕೃತ್ಯಗಳೆಲ್ಲ ನೀನೆ ಮಾಡಿಉನ್ನತವಾದ ಕೀರ್ತಿ ತಂದು ಇತ್ತು ಎನ್ನಜನ್ನರ ಮಧ್ಯದಲಿ ಶ್ರೇಷ್ಠನೆನಸಿಪನ್ನಗ ತಲ್ಪನ್ನ ಕರವಶನೆನನಿಸಿದಿನಿನ್ನ ಕರುಣಕೆ ಎಣೆ ಆವದಯ್ಯಾಎನ್ನ ಸ್ವಭಾವದಿಂದ ಹರಿ ತಾನು ಇನಿತಾದ ಮನ್ನಣೆ ಮಾಡುವನೆ ಎಂದಿಗನ್ನನಿನ್ನುಪಕಾರವೆಂಬ ವನ್ನಧಿಯೊಳಗೆ ನಿರುತಮುಣಗಿ ಇಪ್ಪೆನಯ್ಯಾ ತೆರವಿಲ್ಲದೆ ಚನ್ನ ಪ್ರಸನ್ನ ಗುರು ವಿಜಯ ವಿಠ್ಠಲರೇಯನಿನ್ನಿಂದಲೆ ಎನಗೆ ಬಂಧುನಾದಾ 3 ಅಟ್ಟತಾಳ ದುರುಳ ಮತಗಳೆಂಬೊ ಮಾಯಿ ಗೋಮಾಯಿಗಳುಶಿರವೆತ್ತಿ ನೋಡದೆ ಪಲಾಯಧ್ವರಾದರು ಈತೆರವಾದ ಮಹತ್ಮಿ ನಿನ್ನದು ನಿನ್ನದುಮರಳೆ ಮಾತುಗಳನ್ನು ತೋರದಿದ್ದರನಿಗೆ (ರೆನಗೆ)ಕರುಣವಲ್ಲದೆ ಅನ್ಯಾಲೋಚನೆ ಇದಕ್ಕಿಲ್ಲಸುರಲೋಲ ಮಹಧೃತಿ ಗುರು ವಿಜಯ ವಿಠ್ಠಲರೇಯಪೊರೆವನು ನಿನ್ನಯ ಬಲದಿಂದಲಾವಾಗ 4 ಆದಿತಾಳ ಮೂರ್ತಿ ಗುರು ವಿಜಯ ವಿಠ್ಠಲರೇಯನಿನ್ನಿಂದ ಮಾಡಿಸುವ ವಸುಧಿಯ ವ್ಯಾಪಾರ 5 ಜತೆ ನಿಖಿಳ ಸೌಖ್ಯವೆ ಉಂಟುಉನ್ನತ ಮಹಿಮ ಗುರು ವಿಜಯ ವಿಠ್ಠಲ ಒಲಿವ || [ನಳ ನಾಮ ಸಂ|| ಚೈತ್ರ ಬ|| 12 ಆದಿತ್ಯವಾರ]
--------------
ಗುರುವಿಜಯವಿಠ್ಠಲರು
* ನೆರದು ಗೋಪಿಯರೆಲ್ಲಾರು ಕೃಷ್ಣಯ್ಯನ ಶೆರಗಪಿಡಿದುಕೊಂಡು ಅರುಹಿದರತಿ ಬೇಗದಿ ಪ. ಹಾಲು ಕರವುತಿರಲು ತೊಲೆಗೆ ನಿಚ್ಚಣಿಕೆಯ ಹಾಕದೆ ಸುರಿದಾನು ನೆಲವಿನ ಪಾಲ್ಮೊಸರಾ 1 ಅಂಮೈಯ್ಯಾ ಇಲ್ಲಾ ಕಾಣೆ ಇವಳು ಯಂನ್ನಾ ಸುಂಮ್ಮಾನೆ ದೂರುವಳು ಹುಂಮ್ಮಿಂದ ನಾನವಳ ಅಟ್ಟಕ್ಕೆ ನೆಗವೊರೆ ಬೊಮ್ಮ ಜಟ್ಟಿಗನೆ ನಾನು 2 ಮತ್ತೊರ್ವಳಿಂತೆಂದಳು ನಿಂನಮಗ ಹತ್ತಿ ಗವಾಕ್ಷಿಯಿಂದಾ ಬಚ್ಚಿಟ್ಟ ಬೆಣ್ಣೆಯನೆಲ್ಲಾವ ಮೆದ್ದಾನು ಮಕ್ಕಳಿಗಿಲ್ಲದಂತೆ 3 ಗಡಿಗೆ ಬೆಣ್ಣೆಯ ಮೆಲ್ವಾರೆ ಇವನ ಹೊಟ್ಟೆ ಕೆರೆಭಾವಿಯೇನೆ ಅಮ್ಮಾ ಹುಡುಗರಿಗೆ ಎಂದು ಬಚ್ಚಿಟ್ಟ ಬೆಣ್ಣೆಯನೆಲ್ಲಾ ಹೊಡೆದರವರ ಮಕ್ಕಳು 4 ಮಲಗೋಮಂಚದ ಮೇಲೆ ನಾ ಮಲಗೀರೆ ಮೊರೆವ ಹಾವನು ಪಿಡಿದು ಅರಿಯದಂತೆ ಬಂದು ಮುಸುಕಿ- ನೊಳಗಿಟ್ಟು ಅರಿಯಾದೆ ಹೋದನಂಮಾ 5 ಹರನಡುಗುವ ಹಾವನು ನಾ ಪಿಡಿವಾರೆ ತರಳಾನು ತಡೆಕಾರನೆ ಹರಕೆಯ ಹೊತ್ತುದವಪ್ಪಿಸದಿದ್ದರೆ ಗುರುತು ತೋರÀಲು ಬಂತೇನೊ 6 ಮಕ್ಕಳ ಪಡೆದವರುಯಿಲ್ಲದ ಕಳ ವಿಕ್ಕಲಿ ಬಹುದೆ ಕೃಷ್ಣಗೆ ಸಿಕ್ಕಿದ ತಪ್ಪು ಸಹಿತವೆ ತಂದರೆ ನಾನು ತಕ್ಕ ಬುದ್ದಿಯ ಪೇಳುವೆ 7 ಅಣುಮಯರೂಪ ಕಾಣೆ ನಿಂನಯ ಮಗ ಚಿನುಮಯ ರೂಪ ಕಾಣೆ ಚಿನುಮಯ ರೂಪ ಹೆಳ ವನಕಟ್ಟೆ ಆದಿಕೇಶವ ರಂಗನೆ8
--------------
ಹೆಳವನಕಟ್ಟೆ ಗಿರಿಯಮ್ಮ
|| ಶ್ರೀ|| ಪದ್ಯ|| ಮುಂದೆ ತುಳುಜಾ ದೇವಿ ಬಂದು ನಿಂತಿರಲು ತ್ವರದಿಂದ ನೋಡ್ಯನುಭೂತಿ ಬಂದಂಥ ದೇವಿಯ ಚಂದದ ಬಹು ತೇಜವೆಂದು ತಿಳಿಯದೆ ಎನ್ನ ಮುಂದೆದುರಿಗೆ ಏನು ಬಂದಿರುವುದೆಂದು ತ್ವರದಿಂದ ನಡುಗಿದಳು|| ಮುಂದ ಆದೇವಿ ತಾ ಮುಂದಕ್ಕೆ ಕರೆಯುತಲೇ ಕುಂದರದನಿಯೇ ಕೇಳು ಕುಂದು ನಿನ್ನಲ್ಲಿ ಇಲ್ಲ ಎಂದು ನಿನ್ನ ಭಕ್ತಿಗೆ ಚಂದಾಗಿ ಅಭಯದ ಕೂಟ್ಟಂದಳೀಪರಿಯ||1 ಪದ ರಾಗ:ಕಾನಾಡ ಆದಿತಾಳ ಬೇಡು ಬೇಕಾದ್ದು ಬ್ಯಾಗನೇ|| ಅನುಭೂತಿ|| ಬೇ|| ನೀಡುವೆ ನಾನು|| ಪ ಮಾನಸ ದುಃಖವ್ಯಾಕಿದು || ನಿನ್ನ ಭಿಮಾನವೆಂಬುದು ನನ್ನದು|| ಮಾನಿತರೊಳ್ಹಗತಿ ಮಾನವಂತೆಯೇ ಮಾನುನಿ ಮಣಿ ಅನುಮಾನವ ಬಿಟ್ಟು|| 1 ಎಷ್ಟು ಸ್ನೇಹವ ತೋರಲಿ|| ಬಂದೆ ಸಂತುಷ್ಟಳಾಗುತ ನಿನ್ನಲಿ|| ಶಿಷ್ಟಳೆ ನೀ ಕೇಳಸ್ಪಷ್ಟದಿ ನಿನಗೆ ದೃಷ್ಟಿಗೆ ಬೀಳಲು ಕಷ್ಟಗಳುಂಟೆ|| 2 ಚಿಂತಿಸಿದಿ ಯಾಕೆನ್ನನು|| ಬಂದಂತಹ ಚಿಂತೆ ಎಲ್ಲಾನೂ ಕಳೆವೆನು|| ಸಂತೋಷದಲಿ ಅನಂತಾದ್ರೀಶನ ಚಿಂತನದಿಂದಿರು ಚಿಂತೆಯನು ಬಿಟ್ಟು|| 3 ಆರ್ಯಾ ಅತಿ ಹಿತ ವಚನವನು ಕೇಳಿ || ಅತಿ ಹರುಷಿತಳಾದಳಾಗ ಆ ಬಾಲೆ ಹಿತವಾಯಿತು ಎನಗೆಂದು || ನತಿಸುತ ಮಾತಾಡಿದಳು ಹೀಗೆಂದು|| 1 ಪದ ರಾಗ:ಮುಖಾರಿ ಆದಿತಾಳ ತುಳುಜಾದೇವಿಯೇ|| ಪ ನಮೋ ಎಂಬೆ ಮತ್ತು ಜಗದ್ಥಾತ್ತಿಯೆ || ಬಹುಪ್ರಮಿತಾ ಹಿಮಾಚಲನ ಪುತ್ರಿಯೇ || ಸುಮಹಿಮ ಸುಂದರಗಾತ್ರಿಯೇ|| ಮನದಾ ಅಮಿತಾರೋಗಕ್ಕೆ ಮಹಾಮಾತ್ತಿಯೇ|| 1 ತ್ವರಿತಾದಿಂದಲೇ ಬಂದಂಥಾಕಿಯೇ || ಎಂದು ತ್ವರಿತಾ ತ್ವರಿತಾದೇವಿಯು ಎನಿಸು ವಾಕೆಯೆ|| ಮರೆತಿರಲಾರೆ ನಾ ನಿನ್ನಕಿಯೇ || ಸ್ನೇಹಾಭರಿತಾಗಿ ಭಕ್ತರನ ಸಲಹವಾಕಿಯೇ|| 2 ಚಿಂತಿ ಮಾಡಲು ಬಂದು ನಿಂತಿಯೇ || ಎನಗೆ ಚಿಂತಿಯು ಮಾಡಬ್ಯಾಡಂತಿಯೇ|| ಎಂಥಾಕಿ ನೀನು ದಯಾವಂತಿಯೇ || ವರದಾ ನಂತಾದ್ರೀಶನ ಸಖನ ಕಾಂತಿಯೇ|| 3 ಆರ್ಯಾ ಕರ ಮುಗಿದು|| 1 ಪದ ರಾಗ :ಆನಂದ ಭೈರವಿ ವರಕೊಡು ಎನಗಿದು ತ್ವರಿತದಿ ತಾಯಿ|| ಮರೆಯ ದೆಂದೆಂದೂ ಹಗಲಿರುಳು ನೀ ಕಾಯಿ|| ಪ ಮಂದ ಮತಿಯು ದೈತ್ಯ ಬಂದಿಹನೋಡು|| ಕೊಂದವನ ಎನಗಾನಂದವ ನೀಡು 1 ಮಾಡುವ ತಪಸ್ಸಿಗೆ ಕೇಡು ತಂದಿಹನು|| ಮಾಡಲಿನ್ನೇನು ನಿನಗೆ ಬೇಡಕೊಂಬುವೆನು|| 2 ಪತಿಯ ಸೇವಿಸುವಂಥ ಸತಿಯು ಬೇಡುವೆನೂ|| ಸತತಾನಂತಾದ್ರೀಶನಾ ಸ್ವøತಿಯು ಮಾಡುವೆನು|| 3 ಅನುಭೂತಿಯ ವಚನವನು || ಅನುಸರಿಸುತ ಬ್ಯಾಗಕೊಟ್ಟು ಎನಗಿಲ್ಲೆಂತ್ಯಂದಳಾಗ ಜಗದಂಬಾ|| 1 ಮಾಡಿದಳು|| ಹುಂಕಾರ|| 2 ಒಗೆದಾನು ಯುದ್ಧದಲ್ಲಿ ಜಾಣಾ|| 3 ಸಾರಶಕ್ತಿಯನು ತೆಗೆದಾ ಶೌರ್ಯದಿ ಮತ್ತಾಕೆಯಲ್ಲೇ ಒಗೆದಾ|| 4 ಎದೆಗ್ಹೊಡೆದಳು ಶೂಲದಲೆ||ಅದುರೂಪವು ಬಿಟ್ಟು|| ತನ್ನಕ ಪಟದಲೆ ಕುದುರೆಯ ರೂಪವ ಧರಿಸಿ|| ಒದರುತ ನಿಂತಾಗ ಮುಂದ ಖ್ಯಾಕರಿಸಿ|| 5 ಗಾಢನೆ ಮಹಿಷಾಗಿ ಬಂದ ಬದಿಯ್ಮಲೇ 6 ತೋರುವ ಬಹುಬೆಟ್ಟಗಳ|| ಕೊಡಗಳಿಂದಲೇ ಕೊಡಗಳ್ಹಗಳು| ಮಾಡುವ ವೃಷ್ಟಿಯದೆಷ್ಟು|| ಕಾಡುವ ಕಪಟದಿಂದ ಮತ್ತಿಷ್ಟು 7 ಶೃಂಗಗಳಿಂದ ಹಿಡಿದಳು ದÉೈತ್ಯಬಾಯಿಬಿಡುವಾ|| 8 ಅವನ ಮುರದೊತ್ತಿ 9 ಕಡೆದಳು ಆಗವನ ಬಿಲ್ಲುಬಾಣದಲೆ|| 10 ದಾನವನು|| ಹುಟ್ಟಿದ ಸೈನ್ಯವು ಎಲ್ಲಾ|| ಪೆಟ್ಟು ಹಾಕುತ ಬಂತು ಭೂತಗಳಿಗೆಲಾ||್ಲ 11 ತಡಿಯದೇ ಅವನ ಹುಡುಕುತಲಿ || ಕಡಿದಳು ಶಿರ ಕಡೆದಳು ಮತ್ತವನ ಶಿರವು ಖಡ್ಗದಲೇ|| 12 ಸುರರು ಥಟ್ಟನೆ ಕರೆದರು ಪುಷ್ಪ ದೃಷ್ಟಿಯನು|| 13 ಪದ್ಯ ರಾಗ:ದೇಶಿ ಅಟತಾಳ, ಸ್ವರ ಷಡ್ಜ ಓಡಿ xಟ್ಟನೆ ಹಿಡಿದರಾಗ|| 1 ಕುಕ್ಷಿಗಿಲ್ಲದಲೆ ಬುಭೂಕ್ಷಿತರದು ಎಲ್ಲಾ ಭಕ್ಷಣ ಮಾಡುವರು|| ಅಕ್ಷಯ ಬಲದಿಂದ ದಕ್ಷರು ಎಲ್ಲಾರು ರಾಕ್ಷಸರಾದರು|| 2 ಭೈರವಾದಿಗಳು ಎಲ್ಲಾರು ದೇವಿಯ ಪರಿಚಾರಕರಾದವರು ಸೇರಿ ಸೈನ್ಯದಲ್ಲಿ ಅಪಾರ ಸಂಭ್ರಮದಲ್ಲಿ ಹಾರ್ಯಾಡುತಿರುವರು3 ಆ ತಾಳಮೊರದಂಥ ಬೇತಾಳ ಗಣಗಳು ಪ್ರೇತ ಪಿಶಾಚಿಗಳು|| ಯಮದೂತರಸಮರವರು|| 4 ರಕ್ತ ಪಾನವ ಮಾಡಿದರು|| 5 ದುರುಳರನೆಲ್ಲನು ಹೊರಳಿಸಿ ಹೊಟ್ಟೆಯ ಕರಳವ ಬಗಟಿದರು| ಸರಳವಾದ ಆ ಕರಳ ಮಾಲೆಯ ಮಾಡಿ ಕೊರಳೊಗ್ಹಾಕಿದರು||6 ಹಾಕಿಕೊಂಡು ಕುಣಿದಾಡಿದರು||7 ಕಂಕಲಾದಿಗಳು ಭಯಂಕರರವರು ಅಸಂಖ್ಯಾಕರಾಸವರು|| ಶಾಂಕರೀ ದೇವಿಯ ಕಿಂಕರರಿಂಥ ಅಲಂಕಾರಗಳನಿಟ್ಟರು || 8 ಅವನಂತವ ಅರಿಯೇ ನಾನು|| 9 ಆರ್ಯಾ ಬಲ್ಲಿದ ದೈತ್ಯದ ಕೊಂದು || ನಿಲ್ಲದೆ ಅನುಭೂತಿ ಬದಿಯಲೇ ಬಂದು || ಅಲ್ಲಿಹಳು ಮಹಾಮಾಯಾ|| ಇಲ್ಲಿ ಗೆ ಪೂರ್ಣಾಯಿತು ಎರಡು ಅಧ್ಯಾಯಾ || ಶ್ರೀ ಹರೇಪ್ರಸೀದ||
--------------
ಅನಂತಾದ್ರೀಶ - ಕಥನಕಾವ್ಯಗಳು
1. ರಾಮಾನುಜರು ಆಚಾರ್ಯ ಪ್ರಾಚಾರ್ಯ ಪರಮಾಚಾರ್ಯಾ ನೀಚತೆ ನೀಗಿಸಿ ನಿನ್ನಂತೆ ಗೈದೇ ಪ ಸರ್ವಗುರುವೇ ನಮಿಪೆ ಧ್ಯಾನಿಪೆ ಶ್ರೀನಿವಾಸಾ ಅ.ಪ ಪಾದೋದಕದಿಂ ಪಾವನಗೈದೇ ಸಾಧು ಸಂಗತಿಗಳ ಸಂತಸದಿ ಪೇಳ್ದೇ1 ಭೇದವ ತೊರೆದೇ ವೇದಗಳೊರೆದೇ ಸಾದರದಿಂ ಸದ್ಬಂಧು ನೀನಾದೇ 2 ಪಾಪವ ಕಳೆದೇ ಗೋಪ್ಯಗಳುಸುರಿದೆ ಶ್ರೀಪತಿಮೂರ್ತಿಯ ಹೃದಯದಿ ತೋರ್ದೆ 3 ಕೃಪೆಯನ್ನು ತೋರ್ದೆ ಅಪಾರ ಮಹಿಮ ಉಪಕರಿಸುತ ಎನ್ನ ಉನ್ನತಿಗೆ ತಂದೆ 4 ಸಂಸಾರಾಂಬುಧಿ ಹಿಂಸೆ ದಾಂಟಿಸಿದೆ ಹಂಸನೆ ಸಿಂಹ ಕಿಶೋರ ನ್ಯಾಯದಿ 5 ವಿಪರೀತಮತಿಯನ್ನ ಪರಿಹರಿಸಿದೆ ನೀಂ ಸುಪಥದಿ ಸುಖದಾನಂದನಿಧಿಯಿತ್ತೇ 6 ಜಾಜೀಶನಿಗೆ ಪ್ರೇಮಪುತ್ರನು ನೀಂ ಪೂಜಿಪೆ ಪದಯುಗ ಶರಣನೆ ಕರುಣಿಸು 7
--------------
ಶಾಮಶರ್ಮರು
101. ಹರಿಹರ ಧ್ರುವತಾಳ ಹರಿಹರರಿಬ್ಬರು ಒಂದೇ ರೂಪವ ಧರಿಸಿ | ದುರುಳ ಗುಹಾಸುರನ ಕೊಂದರೆಂದೂ | ಮರಳು ಮಾನವರು ತಿಳಿಯಾದೆ ನುಡಿವರು | ಹರಿಹರರೀರ್ವರು ಏರವಾದರೆ ಅಂದು | ಹರನು ಮೈಮರೆದು ನಿಂದನ್ಯಾತಕೆ | ಧಾರುಣಿಯೊಳಗೆ ಹಿರಣ್ಯಕಶಿಪು ದೈತ್ಯ | ಸುರರ ಓಡಿಸಿ ಪ್ರಬಲನಾಗಿರೆ | ಪರಮ ಪುರುಷ ಹರಿ ನರಹರಿರೂಪವನ್ನು | ಧರಿಸಿ ರಕ್ಕಸನ್ನ ಕೊಲ್ಲುವಾಗಲಿ, ಕೇ | ಸರಿಯಾ ಬಳಿಗೆ ಪೋಗಿ ಮಾರೆಯಾ ಬೇಡಿಕೊಂಡು | ಮೆರದಾನೇನೋ ಅವತಾರ ಮಾಡಿ | ಹರಿಯ ಅದ್ಭೂತ ಶಕ್ತಿ ನಾನಾ ಲೀಲಾ ವಿನೋದ | ಚರಿಸೂವ ಪರಬೊಮ್ಮ ಗುಣಪೂರ್ಣ ನೂ | ತುರಗವದನ ಮತ್ಸ್ಯಕೂರ್ಮಸೂಕರ ವೇಷ | ಧರಿಸಿದಾತನು ಕಾಣೋ ಯುಗಯುಗದೀ | ಕರುಣಾಸಿಂಧು ನಮ್ಮ ವಿಜಯವಿಠಲರೇಯಾ | ಹರಿಹರ ರೂಪ ಧರಿಸಿದ ಕಾಣಿರೋ 1 ಮಟ್ಟತಾಳ ದೀಪದ ಉಪಕಾರ ದಿನಪಗೆ ಏನಾಹದು | ಭೂಪತಿಗಾಳಿನ ಅನುಸುಣ್ಯಾತಕೆ | ಕೋಪವನು ತಾಳಿ ಭೃಗುಮುನಿ ಕೈಯಿಂದ | ಶಾಪನ ಕೈಕೊಂಡನಂದು ಭಸ್ಮಾ ಸುರನ | ಆ ಪತ್ತಿಗಾರದೆ ಮೊರೆ ಇಡಲು ಕೇಳಿ | ಶ್ರೀಪತಿ ಮೊಗದಲಿ ಕಾಯದದ್ದು ಕಾಣದೆ | ಗೋಪಾಲ ವಿಜಯವಿಠಲ ಹರಿಹರ | ರೂಪವು ತಾನಾದ ಅನೇಕ ರೂಪನೊ 2 ತ್ರಿವಿಡಿತಾಳ ಕಂತು ಜನಕ ಶಿವನ ಬೇಡಿಕೊಂಡದ್ದು ಪುರಾ | ಣಾಂತರದಲ್ಲಿ ಪೇಳುತಿವೆ ನೋಡಿಕೊ | ಎಂತಾಹದೀ ನುಡಿ ಸಿದ್ಧವಲ್ಲವೊ ಶ್ರೀ | ನಖ ಮೌಳಿ ಅಭೀದಾನು | ವೈರಿ ಅರ್ಧಂಗವನೆ ತಾಳಿ | ನಿಂತಿಪ್ಪ ಶ್ರೀ ಹರಿಯಾ ಕೂಡಾ | ನಂತಾ ಕಲ್ಪರೆ ನಿಗಮಾ ಗೋಚರ ಸರ್ವ | ಸ್ವತಂತ್ರನು ಒಬ್ಬಾರ ಹಂಗಿಗಾನೆ | ಚಿಂತಾಮಣಿಯಾ ಬಳಿಯಾ ನಾಡ ಹರಳನೆ ತಂದು | ಸಂತತವಿಟ್ಟರೆ ಸರಿಯಾಗೋದೆ | ಸಂತೋಷ ಪೂರ್ಣಗೆ ದೈತ್ಯನ ಕೊಲ್ಲುವುದಕೆ | ಚಿಂತೆಮಾಡಿದನೆಂಬೊ ವಾರ್ತಿಯೇನೂ | ನಿತ್ಯ ಮೇಹಕವನೆ ತೋರಿ | ಅಂತು ಗಾಣದ ನರಕಕ್ಕೆ ಹಾಕೂವ | ದಂತಿ ವರದ ದೇವ ವಿಜಯವಿಠಲ ಜಗ | ದಂತರಿಯಾಮಿಗೆ ಅಸಾಧ್ಯ ಬಂದಿಲ್ಲ 3 ಅಟ್ಟತಾಳ ಹರಗೆ ಈ ಪ್ರತಿಪ ಉಳ್ಳರೆ ಭಸುಮಾ | ಸುರಗಂಜಿ ಹರಿಗೆ ಮೊರೆ ಇಡುವನೇನೊ | ಜರಸಂಧನಿಗೆ ಇತ್ತಾವರ ಮತ್ತೇನಾಯಿತು | ಮರಳಿ ರಾಮನಕೂಡ ಶರಧನು ಪಿಡಿದು ಮೈ | ಮರೆದು ನಿಂದದ್ದು ಸರ್ವ ಜಗ ವೆಲ್ಲ ಬಲ್ಲದು | ಕರಿ ರಾಜಾ ಆ ಮೂಲಾವೆಂದು ಕರೆವಾಗ | ಪರಮೇಷ್ಠಿ ಶಿವನೊ ಮತ್ತಾವನೊ ಕಾಯ್ದವ | ಸುರರೊಳಗೀತಾ ಗಿಂದಧಿಕ ದೇವರು ಇಲ್ಲಾ | ಹರಿಹರರೂಪಾ ಶ್ರೀ ವಿಜಯವಿಠಲರೇಯಾ | ಚರಿತೆಯ ತೋರುವ ಅವರ ಯೋಗ್ಯತಾದಷ್ಟು 4 ಆದಿತಾಳ ತ್ರಿಶೂಲ ಡಮರುಗ ಭಸಿತ ರುದ್ರಾಕ್ಷಿಯು | ಪಶುವಾಹನನಾಗಿ ಇಪ್ಪದಿದೆ | ಅಸುರಾರಿಯಲ್ಲದೆ ಅನ್ಯರೂಪಗಳಲ್ಲ | ಹಸನಾಗಿ ತಿಳಿದು ಈತನ ಮಹಿಮೆ ಕೊಂಡಾಡಿ | ಕೆಸರು ಕಸ್ತೂರಿಯಾದರೆ ಕೌತುಕವಲ್ಲವೇನೊ | ಶಶಿಧರ ಹರಿರೂಪ ದೊ[ಳು]ಕೂಡುವನೆ | ವಶವಾಗಿ ಇಪ್ಪನು ತದ್ರೂಪಾದಂತೆ ಕಾಣೊ | ಕುಶನ ಬಯಸುವನು ಸಮನಾಗಿ ನಿಲ್ಲುವನೆ | ಪಶುಗಳ ಕಾಯ್ದ ನಮ್ಮ ವಿಜಯವಿಠಲ ಪ | ರಶುರಾಮ ಕ್ಷೇತ್ರದಲಿ ಹರಿಹರ ರೂಪನಾದಾ 5 ಜತೆ ತುಂಗಮಹಿಮೆ ದೇವೋತ್ತುಂಗಾ ತುಂಗಾವಾಸ | ರಂಗ ವಿಜಯವಿಠಲ ಹರಿಹರ ಮೂರುತಿ 6
--------------
ವಿಜಯದಾಸ
2. ಶನೀಶ್ವರ ದಂಡಕ ಮಾಸ ಮಾನಿನಿ ಒಡಲು ಹಿಂಡು ನೆಟ್ಟನೆ ಹಗೇವದಲ್ಲಿದ್ದ ನಿಜಧಾನ್ಯ ಪಟ್ಟೆಂದು ಚಲಿಪುದು ಪರಿಪರಿಯ ವಸನಗಳು ಇಟ್ಟಲ್ಲಿ ನೆಲೆಸಿಹವಾಗಿಕಾಣಿಸದು ಅಟ್ಟೀವಹುಲಿಕರಡಿಉರಿಬಿಸಿಲು ಘನವಾಗಿ ಮಟ್ಟ ಮಧ್ಯಾಹ್ನದಲಿ ನೀರಡಿಸಿ ಕುಳಿತಿರಲು ಆರಿ[ಹ] ರೈ[ಕಾ]ವರಿಲ್ಲೆಂದು ಸಾರಸಂ [ಬಡುತ] ಕಾಡಿ [ಮೊರೆ]ಯಿಡೆ ನಿನ್ನ ಮೋಡಿ [ಮೆರೆವುದು] ಜರ್ಝರಿ ಭೂತ[ಂಗಳೆಲ್ಲಂ] ಬಿಟ್ಟು ಈ ದಂಡಕಂ ಹನ್ನೊಂದು ಬಾರಿ ಶನಿವಾರವೈದರಲಿ ಪಠಿಪರ್ಗೆ ಹನ್ನೊಂದನೆ ರಾಶಿಯೊಳಿರ್ದ ಫಲವನಿತ್ತು ಚೆಲುವ ವೇಲಾಪುರದ ವೈಕುಂಠ ವಿಠಲನ ಭಕ್ತನೆಂದೆನಿಸಿ ನಿನ್ನ ಪೆತ್ತ ಮಾತೆಯ ಪೆಸರನೆನಿತ ಧನ್ಯರಂ ಮಾಡಿಸದೆ ಅನ್ಯಾಯ[ಹಂ] ಕಾರಗಳಿಗಂಜಿ ನೀ ಬಿಡದೆ ನಿನ್ನ ಮನಬಂದ ರೀತಿಯಲಿ ಬಾಧಿಸದೈಯಾ ಸನ್ಮುನಿವಂದ್ಯ ಸರ್ವೇಶ್ವರಾನಂದ ಸಂಚಾರಿರವಿಸೂನು ಯಮ ಸಹೋದರ ವೀರಧರ್ಮ ಪರಿಪಾಲನೆ ಶನೈಶ್ವರ ಮಹಾರಾಯನೆ ತ್ರಾಹಿ ತ್ರಾಹಿ ನಮಸ್ತೆ ನಮಸ್ತೆ ನಮಃ ಶ್ರೀ ಕೃಷ್ಣಾರ್ಪಣಮಸ್ತುಃ
--------------
ಬೇಲೂರು ವೈಕುಂಠದಾಸರು
279ಹನುಮ ಭೀಮಾನಂದ ಮುನಿರಾಯ ಎನ್ನದು ಸಲಹೆಂದು ಬಿನ್ನೈಪೆವಿ ಜ್ಞಾನ ರೂಪ ವಿಜಿತಾತ್ಮ 1 280ತ್ರಿದಶವಿಂಶತಿ ರೂಪ ಸುದತಿಯಿಂದೊಡಗೊಡಿ ಪದುಮಜಾಂಡದೊಳು ಸರ್ವತ್ರ | ಸರ್ವತ್ರ ಭಕುತರಾ ಬದಿಗನಾಗಿದ್ದು ಸಲಹುವಿ 2 281ಕೋಟಿತ್ರಯ ಸ್ವರೂಪಿ ದಾಟಿಸು ಭವಾಬ್ಧಿಯ ನಿ ಭಯಹಾರಿ ರಣದೊಳು ಕಿ ರೀಟಿಯ ಕಾಯ್ದಿ ಧ್ವಜನಾಗಿ 3 282ಪ್ರಾಣನಾಯಕ ನಿನ್ನ ಕಾಣ ಬೇಕೆಂದೆನುತ ಸಾನುರಾಗದಲಿ ನಮಿಸುವೆ | ನಮಿಸುವೆನು ಮೂಜಗ ಪರಮೇಷ್ಟಿ 4 283ಚತುರವಿಂಶತಿ ತತ್ವ ಪತಿಗಳೊಳಗೆ ಗರುವ ನತಿಸುವೆನು ನಿನ್ನ ಚರಣಕ್ಕೆ | ಚರಣಕಮಲವ ತೋರಿ ಕೃತ ಕೃತ್ಯನೆನಿಸೊ ಕೃಪೆಯಿಂದ 5 284ಮೂರೇಳು ಸಾವಿರದ ಆರ್ನೂರು ಮಂತ್ರವ ಈರೇಳು ಜಗದಿ ಜನರೊಳು | ಜನರೊಳು ಮಾಡಿ ಉ ದ್ಧಾರ ಗೈಸುವಿಯೊ ಸುಜನರ 6 285ಪವಮಾನರಾಯ ನೀ ತ್ರಿವಿಧ ಜೀವರೊಳಿದ್ದು ವಿವಿಧ ವ್ಯಾಪಾರ ನೀ ಮಾಡಿ | ನೀ ಮಾಡಿ ಮಾಡಿಸಿ ಅವರವರ ಗತಿಯ ಕೊಡುತಿಪ್ಪ 7 286 ಮಿಶ್ರ ಜೀವ ರೊಳಿದ್ದು ಮಿಶ್ರಜ್ಞಾನವನಿತ್ತು ಮಿಶ್ರ ಸಾಧನವ ನೀ ಮಾಡಿ | ನೀ ಮಾಡಿ ಮಾಡಿಸಿ ಮಿಶ್ರಗತಿಗಳನೆ ಕೊಡುತಿಪ್ಪೆ 8 287ಅನಿಲದೇವನೆ ದೈತ್ಯದನುಜ ರಾಕ್ಷ ಸರೊಳಿದ್ದು ಅನುಚಿತ ಕುಕರ್ಮ ನೀ ಮಾಡಿ | ನೀ ಮಾಡಿ ಮೋಹಿಸಿ ದಣಿಸುವಿಯೊ ಅವರ ದಿವಿಜೇಶ 9 288ಕಾಲನಿಯಮಕನೆ ಕಾಲತ್ರಯಾದಿಗಳಲ್ಲಿ ಕಾಲ ಕರ್ಮ ಅನುಸಾರ | ಅನುಸಾರವಿತ್ತು ಪಾಲಿಸುವಿ ಜಗವ ಪವಮಾನ10 289ಆಖಣಾಶ್ಮನೆ ನಿನ್ನ ಸೋಕಲರಿಯವು ದೋಷ ಶ್ರೀಕಂಠ ಮುಖ್ಯ ಸುರರಿಗೆ | ಸುರರಿಗಿಲ್ಲವು ಭಾರ ತೀಕಾಂತ ನಿನಗೆ ಬಹದೆಂತೊ 11 290 ಕಲ್ಯಾದಿ ದೈತ್ಯಕುಲದಲ್ಲಣ ದಯಾಸಾಂದ್ರ ಬಲ್ಲಿದನು ಜಗಕೆ ಭಯದೂರ | ಭಯದೂರ ಭಕ್ತರ ನೆಲ್ಲ ಕಾಲದಲ್ಲಿ ಸಲಹಯ್ಯ 12 291ಕಾರುಣ್ಯನಿಧಿ ಜಗದ ಉದ್ಧಾರಕನು ನೀನೆ ಉ ದ್ಧಾರ ಮಾಡದಿರೆ ಭಕುತರ | ಭಕುತರನು ಕಾವ ರಿನ್ನಾರು ಲೋಕದಲಿ ಜಯವಂತ 13 292ತ್ರಿಜಗದ್ಗುರುವರೇಣ್ಯ ಋಜುಗಣಾಧಿಪ ಪಾದಾಂ ಬುಜ ಯುಗ್ಮಕ್ಕೆರಗಿ ಬಿನ್ನೈಪೆ | ಬಿನ್ನೈಪೆ ಮನ್ಮನದಿ ನಿಜರೂಪ ತೋರಿ ಸಂತೈಸೊ 14 293ಅನಿಲದೇವನೆ ನಿನ್ನ ಜನುಮ ಜನುಮಗಳಲ್ಲಿ ಎಂದೆಂದು ವಿಷಯ ಚಿಂ ತನೆಯ ಕೊಡದೆನ್ನ ಸಲಹೆಂದು 15 294ತಾರತಮ್ಯ ಜ್ಞಾನ ವೈರಾಗ್ಯಭಕ್ತಿ ಧಾರಡ್ಯವಾಗಿ ಇರಲೆಂದು | ಇರಲೆಂದು ಬಿನ್ನೈಪೆ ಭಾರತೀರಮಣ ನಿನಗಾನು 16 295 ಮರಣ ಜನನಗಳು ಬಂದರೆ ಬರಲಿ ಪ್ರದ್ವೇಷ ಗುರು ಹಿರಿಯರಲ್ಲಿ ಹರಿಯಲ್ಲಿ | ಹರಿಯಲ್ಲಿ ಕೊಡದೆ ಉ ದ್ಧರಿಸಬೇಕೆನ್ನ ಪರಮಾಪ್ತ 17 296ವಿಷಯದಾಸೆಗಳ ಬಿಡಿಸಿ ಅಸುನಾಥ ಎನ್ನ ಪಾ ಲಿಸಬೇಕು ಮನವ ನಿನ್ನಲ್ಲಿ | ನಿನ್ನಲ್ಲಿ ನಿಲಿಸಿ ಸಂ ತಸದಿ ಕಾಯೆನ್ನ ಮರುದೀಶ 18 297 ವಾಯು ಹನುಮದ್ಭೀಮರಾಯ ಮಧ್ವರ ಸ್ತೋತ್ರ ಬಾಯೊಳುಳ್ಳವಗೆ ಜನ್ಮಾದಿ | ಜನ್ಮಾದಿ ರೋಗಭಯ ವೀಯನೆಂದೆಂದು ಭಗವಂತ 19 298ಮಾತರಿಶ್ವನೆ ಎನ್ನ ಮಾತುಗಳ ಲಾಲಿಸಿ ಜಗ ನ್ನಾಥ ವಿಠಲನ್ನ ಮನದಲ್ಲಿ | ಮನದಲ್ಲಿ ತೋರಿ ಭವ ಭೀತಿಯನು ಬಿಡಿಸೊ ಭವ್ಯಾತ್ಮ 20 299 ನಮ್ಮ ಗುರುಗಳ ಪಾದ ಒಮ್ಮೆ ನೆನೆಯಲು ಆ ಜನ್ಮ ಕೃತ ಪಾಪ ಪರಿಹಾರ | ಪರಿಹಾರವಾಗಿ ಸ ದ್ಬೊಮ್ಮಪದವಿಯಲಿ ಸುಖಿಸುವಿ 21 300ಮೂರೇಳು ಸಾವಿರದ ಆರುನೂರು ಹಂಸ ಮೂರು ಮಂತ್ರಗಳ ಜನರೊಳು | ಜನರೊಳು ಮಾಡ್ವ ಸ ಮೀರನ ಅಡಿಗೆ ಶರಣೆಂಬೆ 22 301ಅಂಜಿದವರಿಗೆ ವಜ್ರಪಂಜರನೆನಿಪ ಪ್ರ ಭಂಜನ ಪ್ರಭುವೆ ಪ್ರತಿದಿನ | ಪ್ರತಿದಿನ ನಮ್ಮ ಭಯ ಭಂಜಿಸಿ ಕಾಯೊ ಬಹುರೂಪ 23 302ಭವಿಷ್ಯದ್ವಿಧಾತನೆ ತವ ಚರಣ ಸೇವಿಪೆನು ಶ್ರವಣ ಮನನಾದಿ ಭಕುತಿಯ | ಭಕುತಿ ನಿನ್ನಲ್ಲಿ ಮಾ ಧವನಲ್ಲಿ ಕೊಟ್ಟು ಸಲಹಯ್ಯ24 303ಕಲಿಮುಖ್ಯ ದೈತ್ಯರುಪಟಳವ ಪರಿಹರಿಸಿ ಮ ಸಿಂಧು ನಿ ನ್ನೊಲುಮೆಯೊಂದಿ ಹರಿಕಾಯ್ವ 25 304 ಭಾರತೀ ರಮಣ ಮದ್ಭಾರ ನಿನ್ನದು ಎನ್ನ ಪಾರ ದೋಷಗಳ ಎಣಿಸದೆ | ಎಣಿಸದೆ ಸಂತೈಸೊ ಸಿಂಧು ಎಂದೆಂದು 26 305ಶ್ರೀಶಸದ್ಮನೆ ಜೀವರಾಶಿಯೊಳಗೊಂದಧಿಕ ವಿಂಶತಿ ಸಹಸ್ರದಾರ್ನೂರು | ಆರ್ನೂರು ಹಗಲಿರುಳು ಶ್ವಾಸ ಜಪಮಾಡಿ ಹರಿಗೀವಿ 27 306ತಾಸಿಗೊಂಭೈ ನೂರು ಶ್ವಾಸಜಪಗಳ ಮಾಡಿ ಬೇಸರದೆ ನಮ್ಮ ಸಲಹುವಿ | ಸಲಹುವಿ ಶ್ರೀ ಭಾರ ತೀಶ ನಿನ್ನಡಿಗೆ ಶರಣೆಂಬೆ 28 307ಬಲದೇವ ನೀನೆ ಬೆಂಬಲವಾಗಿ ಇರಲು ದು ರ್ಬಲ ಕಾಲಕರ್ಮ ಕೆಡಿಸೋದೆ | ಕೆಡಿಸೋದೆ ನಿನ್ನ ಹಂ ಬಲು ಉಳ್ಳ ಜನರ ಜಗದೊಳು 29 308ಹಾಲಾಹಲವನುಂಡು ಪಾಲಿಸಿದೆ ಜಗವ ಕರು ಣಾಳು ಪವಮಾನ ವಿಜ್ಞಾನ | ವಿಜ್ಞಾನ ಭಕುತಿ ಶ್ರೀ ಲೋಲನಲಿ ಕೊಟ್ಟು ಸಲಹಯ್ಯ 30 309ವಾತಾತ್ಮಜನೆ ನಿನ್ನ ಪ್ರೀತಿಯನೆ ಪಡೆದ ಖ ಪೊರೆದಂತೆ ಪೊರೆಯೆನ್ನ ನೀನಿಂತು ಕ್ಷಣದಿ ಕೃಪೆಯಿಂದ 31 310ಅಪರಾಜಿತನೆ ಮನದೊಳಪರೋಕ್ಷವಿತ್ತೆನಗೆ ಸುಖವೀಯೊ ಭಾವಿ ಲೋ ಕಪಿತಾಮಹನೆ ಎನಗೆ ದಯವಾಗೊ 32 311 ಬುದ್ಧಿ ಬಲ ಕೀರ್ತಿ ಪರಿಶುದ್ದ ಭಕ್ತಿಜ್ಞಾನ ಸದ್ಧೈರ್ಯಾಜಾಡ್ಯ ಆಯುಷ್ಯ | ಆಯುಷ್ಯ ವಿತ್ತಭಿ
--------------
ಜಗನ್ನಾಥದಾಸರು
3. ನೀತಿಬೋಧೆ ಅಕಟಕಟ ಸಂಸಾರವನು ನೆಚ್ಚಿ ಕೆಡಬ್ಯಾಡ ಪ ವಿಕಟದಲಿ ಮಾನವರು ಕೆಟ್ಟರೆಲ್ಲರು ನಿಜ ಅ.ಪ. ಮುನ್ನ ನರಕಾಸುರನು ಬಡಿದು ಚಿಂತಾಮಣಿಯ ತನ್ನ ಮನೆಯಲ್ಲಿ ತಂದು ನಿಲ್ಲಿಸಿ ನೃಪರಕನ್ನೆಯರ ಷೋಡಶಸಹಸ್ರವನೆ ತಂದಾತಹೆಣ್ಣನೊಬ್ಬಳನೊಯ್ದುದಿಲ್ಲವೊ ನೋಡೊ 1 ಕರ ಪಡೆದ ಕಾರ್ತವೀರ್ಯಾರ್ಜುನನುಭೂವಲಯದೊಳಗೊಬ್ಬನೇ ವೀರನೆನಿಸಿರಾವಣನ ಸೆರೆಯಿಟ್ಟು ಕಾಮಧೇನುವ ಬಯಸಿಸಾವಾಗ ಏನು ಕೊಂಡೊಯ್ದನೋ ನೋಡೊ 2 ಕೌರವನು ಧರೆಯೆಲ್ಲ ತನಗಾಗಬೇಕೆಂದುವೀರ ಪಾಂಡವರೊಡನೆ ಕದನಮಾಡಿಮಾರಿಯ ವಶವೈದಿ ಹೋಹಾಗ ತನ್ನೊಡನೆಶ್ಯಾರೆ ಭೂಮಿಯ ಒಯ್ದುದಿಲ್ಲವೊ ನೋಡೊ3 ವರಯಜ್ಞಗಳ ಮಾಡಿ ನಹುಷ ಸುರಪತಿಯೆನಿಸಿಪರಮಮುನಿಗಳ ಕೈಲೆ ದಂಡಿಗೆಯ ಹೊರಿಸಿಉರಗ ಜನುಮವನೈದಿ ಹೋದಾಗ ತನ್ನೊಡನೆಸುರಲೋಕದೊಳಗೇನ ಕೊಂಡ್ಹೋದ ನೋಡೊ 4 ತುಂಗಗುಣ ಧ್ರುವ ವಿಭೀಷಣ ಹನುಮಾದಿಗಳುಮಂಗಳಾತ್ಮಕ ಹರಿಯನರಿತು ಭಜಿಸಿಭಂಗವಿಲ್ಲದೆ ಹೊರೆದರೈ ಸಕಲ ಭಾಗ್ಯವನುರಂಗವಿಠಲರೇಯನ ನೆರೆ ನಂಬಿರೋ 5
--------------
ಶ್ರೀಪಾದರಾಜರು
373ಶಿವನು ನೀನಾದರೆ ಶಿವನ ರಾಣಿ ನಿನಗೇನೊ ಅವಿವೇಕ ಮನುಜ ಈ ಮಾತು | ಈ ಮಾತು ಕೇಳಿದರೆ ಕವಿಜನರು ನಗರೆ ಕೈ ಹೊಡೆದು 1 374ಎಲ್ಲ ಬಂದೇ ಎಂಬ ಖುಲ್ಲ ಮಾನವ ನಿನ್ನ ವಲ್ಲಭೆಯ ಬೆರೆದು ಸಂತಾನ | ಸಂತಾನ ಪಡೆವೇಕೆ ಇಲ್ಲವೇ ಜನನಿ ಭಗಿನೇರು 2 375ಬಿಂಬವೊಂದೆ ಪ್ರತಿಬಿಂಬ ವೊಂದೆಂಬಿ ಈಶು ದ್ಧಾಂಬರದ ನೆರಳು ಕಪ್ಪಾಗೆ | ಕಪ್ಪಾದ ಬಳಿಕ ನೀ ನೆಂಬೊ ಈ ಮಾತು ಪುಸಿಯಲ್ಲಿ 3 376 ಎಲ್ಲ ಒಂದೆ ಎಂಬ ಸೊಲ್ಲು ಖರೆಯೆಂತೆನಲು ಖರೆಯೆಂಬ ಮಾತುಗಳು ಸುಳ್ಳೆನ್ನರೇನೊ ಸುಜನಾರು 4 377 ನಿಮ್ಮ ನಾ ಬೈದರೆ ನಮ್ಮ ನೀವ್ ಬೈದರೆ ಅದ್ವೈತ ಸುಮ್ಮನಿರಬೇಕು ಎಲೊ ಭ್ರಾಂತ 5 378 ಶುದ್ಧ ಬ್ರಹ್ಮನ ಸುಂಗುಣವ ಕದ್ದ ಪ್ರಯುಕ್ತ ಪ್ರ ಸಿದ್ಧ ಚೋರತ್ವ ನಿನ್ನಲ್ಲಿ | ನಿನ್ನಲ್ಲಿ ಪೊದ್ದಿತೊ ಉದ್ಧಾರವೆಲ್ಲೊ ಭವದಿಂದ 6 379 ಮಾಯವಾದಿಯ ಮತವು ಹೇಯವೆಂಬುದು ಸಿದ್ದ ತಾಯಿತಂದೆಗಳು ಸತಿಪುತ್ರ | ಸತಿಪುತ್ರರಗಲಿದರೆ ಬಾಯಿ ಬಿಟ್ಯಾಕೊ ಆಳುತಿದ್ದಿ 7 380 ಸುಳ್ಳಿಗಿಂತಧಿಕ ಮತ್ತಿಲ್ಲವೋ ಮಹಪಾಪ ಸುಳ್ಳು ಕಳ್ಳತನವು ನಿನ್ನಲ್ಲಿ | ನಿನ್ನಲ್ಲಿ ಉಂಟಾಯಿ ತಲ್ಲೊ ಜಾರತ್ವ ಇದರಂತೆ 8 381ಮೇ ಮಾತೆ ವಂಧ್ಯೆಯೆಂಬ ಈ ಮಾತಿನಂತೆ ಮು ಅಪುಸಿಯಿಂಬೀ ಮಾತುಗಳು ಭ್ರಾಮಕವೆ ಖರೆಯೊ ನಿಜವಲ್ಲ 9 382 ಶಶವಿಷಾಣಗಳೆಂದು ಒಪ್ಪುವರೆ ಬಲ್ಲವರು ಮೊಲೆಹಾಲು ಉಂಡಿತೋ ರಿಸೊ ಮಿಥ್ಯೆ ಸತ್ಯವಹುದೇನೊ 10 383ಸತ್ಯವೆಂದರೆ ಖರೆಯು ಮಿಥ್ಯೆಯೆಂದರೆ ಸುಳ್ಳು ನ್ಮತ್ತ ಈ ಮಾತು ನಿಜವೆಲ್ಲಿ 11 384ಭೀತಿ ನಿರ್ಭೀತಿ ಶೀತತಾಪಗಳೊತ್ತಟ್ಟು ನೀತವಾಗಿಹವೆ ಜಗದೊಳು |ಜಗದೊಳಿದ್ದರೆ ತೋರು ಜಾತಿ ಭೇದಗಳು ಇರಲಾಗಿ 12 385 ಜೀವೇಶರೊಂದೆಂಬ ಈ ಮಾತು ಕೇಳ್ವರಿಗೆ ಕೇವಲ ಶ್ರಾವ್ಯವೆಂದೆಂದು | ಎಂದೆಂದು ಬುಧರು ಪಶು ಗಾವಿ ನೀನೆಂದು ಕರೆಯಾರೆ 13 386 ಗುಣವಂತನೆಂಬ ಈ ಮಾತನು ಕೇಳಿ ಸುಖಿಸದವ ಮನುಜ ಪಶುಸಿದ್ಧ ಪುಸಿಯಲ್ಲ | ಪುಸಿಯಲ್ಲ ನಿನ್ನ ಮತ ಗಣನೆ ಮಾಡದಲೆ ಬಯ್ವೋರ 14 387ಮಲದ ಗರ್ತಕೆ ಶುದ್ಧ ಜಲಧಿ ಸಮಯವೆಂತೆಂಬಿ ಕಲುಷವರ್ಜಿತಕೆ ತೃಣಜೀವ | ತೃಣಜೀವ ಸರಿಯೆ ಸಿಂ ಬಳಕ ಗೋಘೃತವು ಸಮವಹುದೆ 15 388 ಐರಾವತಕೆ ಸರಿಯೆ ಕೂರಿಹೇನಿನ ಮರಿಯು ತೋರಿತೊ ನಿನ್ನ ಅಜ್ಞಾನ 16 389 ದ್ವಾಸುಪರ್ಣಾ ಎಂಬ ಈ ಶ್ರುತಿಗಳಲ್ಲಿ ವಿ ಶ್ವಾಸ ಮಾಡದಲೆ ಜೀವೇಶ | ಜೀವೇಶಕೈಕ್ಯೋಪ ದೇಶ ಮಾಡಿದವ ಚಂಡಾಲ 17 390ಅಜರಾಮರಣ ಬ್ರಹ್ಮ ಭುಜಗಭೂಷಣ ಪೂಜ್ಯ ತ್ರಿಜಗ ದೇವೇಶ ಹರಿಯೆತ್ತ | ಹರಿಯೆತ್ತ ನೀನೆತ್ತ ಅಜಗಜನ್ಯಾಯ ಪುಸಿಯಲ್ಲ 18 391 ಪಾಲುಗಡಲೊಳಗಿಪ್ಪ ಶ್ರೀ ಲೋಲ ಹರಿಯೆಲ್ಲಿ ಹೇಲುಚ್ಚೆವೊಳಗೆ ಹೊರಳುವ | ಹೊರಳಾಡಿ ಬಳಲುವ ಖೂಳ ಮಾನವನೆ ನೀನೆಲ್ಲಿ 19 392 ಕ್ಷೀರಾಂಬುಧಿಗೆ ಸರಿಯೆ ಕಾರಿಕೆಯ ಶ್ಲೇಷ್ಮ ಭಾ ಗೀರಥಿಗೆ ಸಮವೆ ಖರಮೂತ್ರ | ಖರಮೂತ್ರ ಜೀವ ಲ ಕ್ಷ್ಮೀರಮಣಗೆಣೆಯೆ ಜಗದೊಳು 20 393ಗುಣಪೂರ್ಣ ಸರ್ವಜ್ಞ ಅಣುಮಹದ್ಗತನ ನಿ ರ್ಗುಣ ಅಲ್ಪನೆನುತಿದ್ದಿ | ಎನುತಿದ್ದಿ ಹರಿಗೆ ದೂ ಷಣೆಯು ಬೇರುಂಟೆ ಇದಕಿಂತ 21 394 ಈಶ ನಾನೆನಲು ಕೀನಾಶನಿಂದಲಿ ದಣಿಪ ದಾಸನೆಂಬುವಗೆ ದಯದಿಂದ | ದಯದಿಂದ ತನ್ನಯಾ ವಾಸದೊಳಿಟ್ಟು ಸಲಹೂವ 22 395ಈಶತ್ವ ವೆಂಬುದು ಲಕುಮೀಶಗಲ್ಲದೆ ಜೀವ ರಾಶಿಗಳಿಗುಂಟೆ ಈ ಶಕ್ತಿ | ಈ ಶಕ್ತಿ ಸತ್ವಗುಣ ಈಶ ಬಿಟ್ಟಿಹನೆ ಜಗದೊಳು 23 396 ಉದ್ಗೀಥಶ್ರೀ ಪ್ರಾಣ ಹೃದ್ಗತನು ಜಗದೇಕ ಸದ್ಗುರುವರೇಣ್ಯನೆನುತಿಪ್ಪ | ಎನುತಿಪ್ಪರಿಗೆ ಯಮ ಗದ್ಗದನೆ ನಡುಗಿ ನಮಿಸುವ 24 397 ಸ್ವಾಮಿ ಭೃತ್ಯನ್ಯಾಯ ಈ ಮಾತಿನೊಳಗುಂಟು ಗ್ರಾಮಧಾಮಗಳು ಇದರಂತೆ | ಇದರಂತೆ ನೋಡಿಕೊ ನೀ ಮಾತ್ರ ನುಡಿಯೆ ಸಾಕೆಂಬೆ 25 398ಈಶ ನಾನೆಂದವನ ಶ್ವಾಸ ಬಿಡಗೊಡದೆ ಯಮ ಸೆಳೆದೊಯಿದು ನರಕದೊಳು ಘಾಸಿಗೊಳಿಸುವನೊ ಬಹುಕಾಲ 26 399 ಮಾತಾ ಪಿತರ ದ್ರೋಹಿ ಬಂಧು ಘಾತಕ ಬ್ರಹ್ಮ ಘಾತಕನು ನೀನು ಪುಸಿಯಲ್ಲ | ಪುಸಿಯಲ್ಲ ಶ್ರೀ ಜಗ ನ್ನಾಥ ವಿಠಲನೆ ನಾನೆಂಬಿ 27
--------------
ಜಗನ್ನಾಥದಾಸರು
4. ವೆಂಕಟವರದಾರ್ಯರ ಹಿಂದಿಮಿಶ್ರಿತ ಕೃತಿ ಶ್ರೀನಿವಾಸ ಪದ ಧ್ಯಾನಕರೋರೆ ಸಾನುರಾಗಯುತ ಮಾನಸ ಮೇರೆ ಪ ಮದಪರಿಪೂರಿತ ಹೃದಯ ಸುನೋರೆ ಸದಯ ಹೃದಯ ಪರಿಪದಮಿಳನಾರೆ 1 ಕಾಮಕ್ರೋಧ ಉಪರಾಮ ಕರೋರೆ ರಾಮಾನಾಮ ಜಪಕಾಮು ಕರೋರೆ 2 ದೇಹಗೇಹಧನ ಮೋಹನಲೇರೆ ಶ್ರೀಹರಿಚರಣ ಕಾಂಹಿ ಚಲೇರೆ 3 ಪುತ್ರ ಮಿತ್ರ ಬಹು ಶತ್ರು ಕು ಮಾರೆ ವೃತ್ರ ವೈರೀಸುತ ಮಿತ್ರನಗಾರೆ 4 ಭಂಗ ಜನ ಸಂಗ ನ ಕರೋರೆ ಮಂಗಳಾಂಗ ನರಸಿಂಹ ಭಜೋರೆ 5 ಸೂಕ್ಷ್ಮಬುದ್ಧಿ ನಿರಪೇಕ್ಷ ಭಲಾರೆ ಮೋಕ್ಷದಾತ ಕಮಲಾಕ್ಷಕು ಲಾರೆ 6 ದಾಸ ಲೋಕ ಸಹವಾಸ ಕರೋರೆ ವಾಸುದೇವ ನಿಜದಾಸಕು ಹೋರೆ 7 ಶ್ರೀಪುಲಿಗಿರಿವರ ಭೂಪ ಮುರಾರೆ ಶ್ರೀಪತಿಘನ ಚಿದ್ರೂಪಕ ಹೋರೆ8 ಪರಮಪುರುಷ ನರಹರಿ ಕರುಣೀರೆ ವರದವಿಠಲ ಕರಿವರ ಧಣೀರೆ 9
--------------
ವೆಂಕಟವರದಾರ್ಯರು
435(ಅ) ನಮೋ ಯತಿಕುಲಶಿಖಾಮಣಿಯೆ ಸುಗುಣನಿಧಿಯೆ ಮತಿಮತಾಂವರ ಮಾನಿನೇ ಪ. ಭುವನೇಂದ್ರತೀರ್ಥ ಯತಿಪ್ರವರಕರಸಂಜಾತ ಸುವಿವೇಕಿ ವರದೇಂದ್ರಕರಸಂಭವಾಯ ಗೀರ್ವಾಣ ತ- ರವ ಸುಕೃತೇಂದ್ರ ಸದ್ಗುರುವೆ ನಮೋಸ್ತುತೇ 1 ಕಾಶೀಮಠಾದಿಪತಿಯೇ ಸುಸನ್ಯಾಸಿ ಯೇ ಸ(ತ್ತ್ವ) ಗುಣಭೂಷಾಯ ತೇ ವ್ಯಾಸ ರಘುಪತಿಚರಣದಾಸವತ್ಪೂಜಕ ವಿ- ಶೇಷ ಭಕ್ತಿಜ್ಞಾನಶಾಲಿನೇ ತುಭ್ಯಂ 2 ಆಜಾನುಬಾಹುವೇ ಗೌಡಸಾರಸ್ವತ ಮ- ಹಾಜನಸಮಾಜಮಂಡಲವಾಸಿನೇ ರಾಜೀವನಯನಾಯ ನಮಿತಜನನಿಕರ ಸುರ ಭೂರಿ ರವಿತೇಜಸ್ವಿನೇ 3 ತುಷ್ಟಾಯ ಭಾಗವತನಿಷ್ಟಾಯ ದ್ವಿಜಕುಲವ ರಿಷ್ಠಾಯ ಷಡ್ವರ್ಗಜಿಷ್ಣವೇ ತುಭ್ಯಂ ದುಷ್ಟ ಜನ ದೂರಾಯ ಧೀರಾಯ ಭಕ್ತದ- ತ್ತೇಷ್ಟಾಯ ಮಹತೇ ಸಹಿಷ್ಣವೇ ಮಹತೇ 4 ಬ್ರಹ್ಮಚರ್ಯಾದಿ ವ್ರತಧರ್ಮಾತ್ಮನೇ ವಿಹಿತ ಕರ್ಮಣೇ ಸುಕೃತೇಂದ್ರ ಶರ್ಮಣೇ ತುಭ್ಯಂ ಬ್ರಹ್ಮಪಿತ ಲಕ್ಷ್ಮೀನಾರಾಯಣಾಂಘ್ರಿಧೃತಿ ಸು- ನಿರ್ಮಲಾಂತಃಕರಣ ಕರುಣನೀರಧಯೇ5
--------------
ತುಪಾಕಿ ವೆಂಕಟರಮಣಾಚಾರ್ಯ
6. ತಾತ್ವಿಕ ಪದಗಳು ಇಲ್ಲವಲ್ಲಾ ಏ ಹರಿಯೆ ಪ ಗಂಧಾರದೊಳು ---ಕೊದ ಪಶುವಂತೆ ಹಿಂದೂ ಮುಂದು ತಿರುಗಿ ತಿರುಗಿ ಬಳಲುವದೊಂದೆ ಅ.ಪ ಕೆಲವು ದಿನವು ಮೇಘದೊಳು ಕೂಡಿ ಅಲ್ಲಿ ಜಾರಿಬೀಳುತಾ ಪರಿಪರಿಯಲ್ಲಿ ಇನ್ನೂ ಚಲನೆಯಿಂದ ಮೇಘ ಜಲದಾರಿಗಳಿಂದ ನೆಲದೊಳಗೆ ಹೊಕ್ಕು ನರಳಾಡುತಾ ಒಲಿದು ಔಷಧಿಗಳ ವಶವಾಗಿ ಧಾನ್ಯದೊಳು ಕಲೆತು ಪಚನೆಯಿಂದ ಬಳಲುತ ನೀ ಅಲ್ಲಿ ಪಕ್ವಾನ್ನಗಳಿಂದ ಪುರುಷನುದರ ಸೇರಿ ನಲಿದಾಡುತಲಿ ಹೋಗೆ ಕೆಲವು ಕಾಲಾದಲ್ಲಿ 1 ಸ್ತ್ರೀ ಪುರುಷ ಸಂಯೋಗದಿಂದ ಸ್ತ್ರೀ ಗರ್ಭದಲಿ ವ್ಯಾಪಿಸಿ ಕೊಂಡಿಯ ರೂಪತೋರುತ ನೀ ತಾಪವು ಬಡುತಾಲಿ ತಾಯಿ ಉದರದಲ್ಲಿ ಪರಿ ನವಮಾಸ ಪರಿಯಂತರದಲಿ ಪರಿ ಮಾಡಿದ ಹಿಂದಿನ ದೋಷಗಳಿಂದ ತನ್ನೊಳು ತನು ತಪಿಸುತಲಿ ದೀಪವಿಲ್ಲದೆ ಗುಡಿಯೊಳಗಿನ ದೇವರಂತೆ ಕೂಪದೊಳಗೆ ಬಿದ್ದು ಕಷ್ಟವ ಪಡುತಲಿ 2 ಎಂದೆಂದು ಬಯಲಿಗೆ ಹೊರಡುವೆಯೆನುತಾಲಿ ಸಂದೇಹ ಪಡುತಾಲಿ ಸರ್ವದಲಿ ಸಂಧಿಸಿಕಾಲದಿ ತಂದೆ ತಾಯಿಗಳಿಗೆ ತನಯನಾಗಿ ಹುಟ್ಟಿ ತೋರುತಲಿ ಕಂದನಾಗಿ ಅತಿ ಕಡುಮೋಹ ತೋರುತ ಸಂದುಹೋಯಿತು ಕಾಲಸ----ದಿನವೂ ಮುಂದು ಗಾಣದೆ ಬಾಲಪ್ರಾಯದ ಹಮ್ಮಿಲಿ ಅಂದದಿ ಆಟಪಾಟಗಳಿಂದ -------ದಿನಾ 3 ವಾರಕಾಂತೇರ ಸಂಗವುದ್ಯೋಗ ವ್ಯವ- ಹಾರ ದೈನಂದಿನ ಕೆಲವು ಕಾಲಾಯಿತು ಕ್ರೂರ ಚೋರ ದುಷ್ಟ ವ್ಯಾಪಾರಗಳ ಕೂಡಿ ಮೀರಿ ಗರ್ವದಲಿನ್ನೂ ಮೈಯ ಸ್ಮರಣೆದಪ್ಪಿ ಕಾಲ ಕೆಲವಾಯಿತು ಪಾರಗಾಣದೆ ಪ್ರಪಂಚದೊಳಗೆ ಬಿದ್ದು ಹೊರಟು ಬಿಡುತಾಲಿ ಹೋಯಿತು ಕೆಲವು ಕಾಲ4 ಸತಿಸುತರ ಸಂಪತ್ತು ಅತಿಮೋಹ ವ್ಯಾಸಂಗ ಕಾಲ ಸಂದು ಹೋಯಿತು ಮಂದ ಬುದ್ಧಿಲಿ ವಾರ್ಧಿಕದಿ ಹಿತಗಳು ತಪ್ಪಿ ಮಾನ ಹೀನನಾಗಿ ಗತಿಯು ಕಾಣದೆ ಘೋರ ಕಷ್ಟಕ್ಕೊಳಗಾಗಿ ಮತಿಯಲ್ಲಿ ಹರಿನಾಮ ಮರೆದು ಹೋಗಿ ಪತಿ ಹೆನ್ನೆ ವಿಠ್ಠಲನ ಪ್ರೀತಿಯ ಪಡೆಯದೆ ಅತಿ ಘೋರತಮಸಿ ಗರ್ಹಾನು ಆಗೊ ಕಾಲಾಯಿತು 5
--------------
ಹೆನ್ನೆರಂಗದಾಸರು
6. ಶಾಮಶರ್ಮರ ಕೇಶವನಾಮ ರಸಾಯನ ಶ್ರೀಕೇಶವ ಸುರಸೇವ್ಯ ನಮೋ ಶ್ರೀಕರ ಜಾಜೀಶ ನಮೋ ಪ ನಾರಾಯಣಶ್ರೀನಾಥ ನಮೋ ನಾರದಾದಿಮುನಿವಂದ್ಯ ನಮೋ 1 ಮಾಧವ ಮಂಗಳನಾಮ ನಮೋ ಭೂದೇವಿ ಭಯನಾಶನಮೋ 2 ಭೋಗಿಶಯನ ಗೋವಿಂದ ನಮೋ ಭಾಗವತಪ್ರಿಯ ಭೋಗ ನಮೋ 3 ಜಗ ಪರಿಪಾಲಕ ವಿಷ್ಣುನಮೋ ಖಗವಾಹನ ಗುಣಪೂರ್ಣ ನಮೋ 4 ಮಧುಸೂದನ ಮತ್ರ್ಪಾಣ ನಮೋ ವಿಧಿಶಿವ ಋಷಿಗಣ ಸ್ತುತ್ಶನಮೋ 5 ವಾಮನ ಮೂರುತಿ ಸ್ವಾಮಿನಮೋ ಭೀಮಾನುಜಪ್ರಿಯ ನಿಗಮನಮೋ 6 ತ್ರಿವಿಕ್ರಮಶ್ರೀವಕ್ಷನಮೋ ಪವಿತ್ರ ಫಲದ ಶ್ಯಾಮ ನಮೋ 7 ಶ್ರೀಧರ ದೇವಾನುತ ನಮೋ ಆಧಾರಮೂರುತಿ ಅಮಿತನಮೋ 8 ಹೃಷಿಕೇಶ ಹೃದ್ವಾಸಿ ನಮೋ ಪಶುಪತಿ ಪಾವನ ಪುಣ್ಯನಮೋ 9 ಪದ್ಮನಾಭ ಪರಮಾತ್ಮನಮೋ ಶುದ್ಧ ಸತ್ವರುಚಿರೂಪನಮೊ 10 ದಾಮೋದರ ದೈತ್ಯಾರಿನಮೋ ಕಾಮಜನಕ ಕರಿವರದ ನಮೋ 11 ಸಂಕರ್ಷಣ ಶೇಷಾಂಶ ನಮೋ ಶಂಖ ಚಕ್ರಗದಾಪಾಣಿ ನಮೋ 12 ವಾಸುದೇವ ವೈಕುಂಠನಮೋ ಭೂಸುರ ಪೂಜಿತ ಪಾದನಮೋ 13 ಪರಮಪುರುಷ ಪ್ರದ್ಯುಮ್ನ ನಮೋ ಶರಣಾಗತ ಜನ ತೋಷ ನಮೋ14 ಅಖಿಲೇಶಾನಿರುದ್ಧ ನಮೋ ಸುಖದಾತಾ ಪರಬ್ರಹ್ಮನಮೋ 15 ಪುರುಷೋತ್ತಮ ಪದ್ಮಾಕ್ಷ ನಮೋ ಸರಸಿಜಭವಪಿತ ಸತ್ಯ ನಮೋ 16 ಅಧೊಕ್ಷಜನತ ರಕ್ಷನಮೋ ಅದ್ಭುತ ಮಹಿಮಾಧಿಕ್ಯ ನಮೋ 17 ಶ್ರೀಲಕ್ಷ್ಮೀನರಸಿಂಹ ನಮೋ ಬಾಲಕ ಭಕ್ತ ಪ್ರೀತ ನಮೋ 18 ಅಚ್ಯುತ ಸಚ್ಚಾರಿತ್ರ ನಮೋ ನಿಶ್ಚಲ ನಿರ್ಮಲ ಚಿತ್ತ ನಮೋ 19 ಜನಾರ್ಧನ ಜಗದೀಶ ನಮೋ ದಿನೇಶಕೋಟಿ ಪ್ರಕಾಶನಮೋ 20 ಉಪೇಂದ್ರ ವಿಶ್ವವ್ಯಾಪ್ತನಮೋ ಉಪಮಾರಹಿತ ಉದಾರಿನಮೋ 21 ಶ್ರೀಹರಿಸಕಲ ಸ್ವರೂಪನಮೋ ಸಾಹಸರಹಿತ ಸುಕಾರ್ಯ ನಮೋ 22 ಶ್ರೀಕೃಷ್ಣ ಪರಂಧಾಮ ನಮೋ ಸಾಕಾರ ಮೋಕ್ಷ ಪ್ರದಾತ ನಮೋ 23 ಜಯಮಂಗಳಂ ಶ್ರೀರಂಗನಮೋ ಜಯಮಂಗಳಂ ಭವಭಂಗನಮೋ 24
--------------
ಶಾಮಶರ್ಮರು
624ಚಿ ಇಂದು ಧನ್ಯವಾಯಿತು ಜನುಮ ಬಂದು ಕೂಡಿದ ಘನ ಮಹಿಮ ಧ್ರುವ ಏನು ಪುಣ್ಯ ಮಾಡಿದ್ದೆವೊ ಮೊದಲೆ ಖೂನಗಂಡೆವೊ ಹರಿಯ ಮನದಲಿ ಕಾಣದಿದ್ದೆವೊ ಏಸು ಜನ್ಮದಲಿ ತಾನೆ ಒಲಿದು ಬಂದು ಸುಪ್ರಸನ್ನಲಿ 1 ಬ್ರಹ್ಮಾದಿಕರಿಗೆ ದಾವ ದುರ್ಲಭ ನಮ್ಮ ನೆನವಿನೊಳಾದವ ಸುಲಭ ತಮ್ಮ ನಿಜಸುಖದ ನೆಲೆನಿಭ ಬ್ರಹ್ಮಾನಂದ ದೋರಿದ ಪ್ರಾಣದೊಲ್ಲಭ 2 ಖೂನದೋರಿತು ಮುನ್ನ ನಾ ಮಾಡಿದ ಭಾನುಕೋಟಿತೇಜನ ಕೈಗೂಡಿದ ಅನುಭವಾಮೃತಸಾರ ನೀಡಿದ ದೀನ ಮಹಿಪತಿ ಮನೋಹರ ಮಾಡಿದ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
7. ನಾರಾಯಣಶರ್ಮರ ಹೆಚ್ಚಿನ ಕೃತಿಗಳು (1) ರಾಮನುಜ ಸ್ತುತಿ ಗುರುಸ್ತುತಿಯ ಮಾಡಬೇಕಯ್ಯ ಗುರುವೆ ಗಮ್ಯ ತೋರುವನಯ್ಯ ಪ ಗುರುವಿಂದ ಹರಿಪಾದ ಸುಲಭವಯ್ಯ ಗುರುವಿಲ್ಲದೆ ಮೋಕ್ಷವಿಲ್ಲ ನೋಡಯ್ಯ ಅ.ಪ ಗುರುನಮ್ಮಯತಿರಾಜ ರಾಮಾನುಜ ಗುರುನಮ್ಮ ಕ್ಷಿತಿಪೂಜ್ಯ ಗೋದಾನುಜ ಗುರುವೆ ಸರ್ವಸ್ವ ಹರಿಸ್ವರೂಪ ಗುರುಪಾದ ದರ್ಶನವೇ ಸಾಯುಜ್ಯವೆನಿಪ 1 ದಾಸದಾಸರದಾಸರಾಳ್ವಾರರ ಪೋಷ ದೋಷರಹಿತ ದಾಸೋತ್ತಮ ಧನು ರ್ದಾಸನ ಶ್ರೀಪಾದತೀರ್ಥವ ಸೇವಿಸಿ ದಾಸಸೇವೆಯೆ ಈಶ ಸೇವೆಯೆನಿಸಿದ 2 ಚೆನ್ನ ತಮಿಳಿನ ಶ್ರೀರಂಗದಿಂ ಬಂದು ಚೆನ್ನಚೆಲುವಿನ ಮೇಲುಕೋಟೆಯಲಿ ನಿಂದು ಹನ್ನೆರಡು ವರುಷದ ಮೇಲ್ಪಟ್ಟು ಸಂದು ಇನ್ನಿಂದು ಜಾಜಿಪುರೀಶನಾದ ನಮ್ಮ3
--------------
ನಾರಾಯಣಶರ್ಮರು