ಒಟ್ಟು 199 ಕಡೆಗಳಲ್ಲಿ , 38 ದಾಸರು , 195 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮನಗೊಂಡವರಲ್ಲಿ ಘನಗೊಳ್ಳಿ ಜ್ಞಾನಾಗಮ್ಯದ ಧ್ರುವ ಮುನಿಜನರಾರಾಧಿಸುವ ನಿಧಾನ ಅನಿಮಿಷದಲಿ ನೋಡುವ ತ್ರಾಣ ಉನ್ಮನಲಿಹ ಧನ 1 ಜಾಣನೇ ಮಾಡಿಕೊಂಬನು ಪರೀಕ್ಷೆ ಸ್ವಾನುಭವದಲಿ ಪ್ರತ್ಯಕ್ಷ ಅನುದಿನದಲಿಹುದ ದಕ್ಷ ಘನಗುರು ಕಟಾಕ್ಷ 2 ಮಹಿಪತಿಸ್ವಾಮಿಯು ಪರಬ್ರಹ್ಮ ಖೂನಮಾಡವಗಿದು ಸಂಭ್ರಮ ಅನಂದೋಬ್ರಹ್ಮ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಮನದಿಂದಲಿ ಮನನೋಡಿ ಮನವರಿತು ಘನ ಕೂಡಿ ಧ್ರುವ ಮನಸಿನಿಂದ ತಾ ನೋಡುವ ಖೂನ ಮನ ಮರೆಯಲದೆ ನಿಧಾನ ಮನವರಿಯದೆ ಇಹುದ್ಯಾತರ ಜ್ಞಾನ ಮನವೇ ಸ್ವಹಿತ ಕಾರಣ 1 ಮನದ ಕೊನಿಯಲಿದೆ ಘನಸುಖದಾಟ ಅನುದಿನ ನೋಡುದು ನೀಟ ಸ್ವಾನುಭವದಲಿದು ನೋಡುವ ನೋಟ ಮುನಿಜನರ ಸುಖದೂಟ 2 ಮನೋನ್ಮನದೊಳಗದೆ ಘನಸ್ಫೂರ್ತಿ ಙÁ್ಞನಕಿದೆ ಮನೆ ವಾರ್ತಿ ಮನದೊಳಗಿಹ್ಯ ಮಹಿಪತಿ ಗುರುಮೂರ್ತಿ ಮನಕಾಗಿಹ ತಾಂ ಸಾರ್ಥಿ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಮಾಧವ ಜಯ ಜಯ ರಾಘವ ರಾಮ ಖರಾರೇ ಪ ಜಯತು ಸೀತಾಧವ ಪಾವನ ಶೌರೇ ಅ.ಪ ಜಯತು ಪೀತಾಂಬರಧರ ಶಕಟಾರಿ ಜಯ ಕನಕಾಂಬರಧರ ವಿಕಟಾರಿ ಜಯ ಜಯ ಮುರಳೀಧರ ಕಂಸಾರಿ ಜಯ ಜಯ ಶರಧರ ದಶಶಿರವೈರಿ 1 ಜಯತು ಗೋಪೀಜನಪ್ರಿಯ ಗೋಪಾಲ ಜಯತು ತಪೋಬಲ ಮುನಿಜನಪಾಲ ಜಯತು ಜಯತು ಕೌಸ್ತುಭಮಣಿಮಾಲ ಜಯ ಜಯತು ಭೂಪಾಲ ಸುಶೀಲಾ 2 ಸನ್ನುತ ನಾಮ ಜಯ ಜಯಾನತ ಮುನಿಜನ ಪ್ರೇಮಾ ಜಯತು ಜಯತು ರಾಮ ಮಾಂಗಿರಿಧಾಮಾ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಮಾಮನೋಹರಾ ಮುರಾರಿ ಬಾರೋ ಪ ಕರಿವರದಾಯಕ ಮರಚಮುಸ್ಥಾಪನ | ಶರಣಾಗತ ಸಹಕಾರಿ ಬಾರೋ | ಸರಸಿಜಾಸನ ವಂದಿತಾಂಘ್ರಿ | ದುರಿ | ತಾಚಲ ವಜ್ರಧಾರಿ ಬಾರೋ 1 ಮನೋಜನಿತ ಜನಕರವಿಂದ ಲೋಚನ | ಮುನಿಜನ ಹೃದಯ ವಿಹಾರಿ ಬಾರೊ| ಘನಮಹಿಮ ಸುದಾಮ ರಕ್ಷಕಕ | ದನುಜಾವಳಿ ಮದಹಾರಿ ಬಾರೋ 2 ಕಾಲ ಪಯೋಧರ | ಮಂದರೋದ್ಧಾರಿ ಬಾರೋ | ನಂದನಾತ್ಮಜ ದೇವ ಮಹಿಪತಿ | ನಂದನ ಪ್ರಭು ಉದಾರಿ ಬಾರೋ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಯಾವ ಹೆಸರಿನಿಂದೆ ಕರೆದರೇನುಪಾವನಾತ್ಮನೆ ಬರನೆಸ್ವಾ ಸರ್ವೋತ್ತಮನುಪ ಸಾವಿರ ಹೆಸರುಳ್ಳ ಅವನಿಗೆ ಹೆಸರಿಂದೇನುದೇವನೊಬ್ಬನೆ ಜಗಕೆ ಎಂಬ ನುಡಿ ಸುಳ್ಳೇನುಭಾವಭಕುತಿಗಳಿಂದ ಕರೆದೊಡನೆ ಬರುವನುಠಾವು ಕಾಲಗಳಿಲ್ಲಿ ಆತನಿಗೆ ಬಹಳೇನು 1 ಅಲ್ಲಾ ಎಂದರೆ ಬರುವ ಶಿವನೇ ಎಂದರೂ ಬರುವಾಗೊಲ್ಲ ಕೃಷ್ಣನೆ ಬಾರ ಎಂದರಾತನೆ ಬರುವಅಲ್ಲಿ ಇವ ಇಲ್ಲಿ ಅವ ಎಂದು ಬಡಿದಾಡಿದರೆಖುಲ್ಲರೆಂದರೇನು ಬಲ್ಲವರು ಮರುಳಾ 2 ವಿಧವಿಧ ನುಡಿಗಳಲಿ ಬೇರೆ ಶಬುದಗಳಿರಲುಅದು ಪರಾರ್ಥವೆ ಬೇರೆ ತಾನಾಗುವದೇನುಹದಿನಾರು ಪಥಗಳನೆ ಹಿಡಿದೊಂದು ಹೋದೊಡನೆ ಅದರಿಂದಲಾ ಊರು ಸೇರಿಸುವುದಿಲ್ಲವೇನು 3 ಹೃದಯದಲಿ ನಿಜವಾದ ಭಕುತಿಯನು ಬೇಡುವನುಇದನರಿತು ಪ್ರತಿದಿನದಿ ಭಜಿಸುವರು ಮುನಿಜನರುಗದುಗಿನಲಿ ವಾಸಿಸುವ ಶ್ರೀ ವೀರನಾರಾಯಣನುಮುದದಿಂದ ಸಲಹುವನು ಸಂದೇಹವೇನು 4
--------------
ವೀರನಾರಾಯಣ
ರಂಗ ನಿನ್ನ ಸಂಗ ಸೌಖ್ಯಕಾಗಿ ಕುರಂಗ ಲೋಚನೆಯು ತಾನುಭಂಗ ಬಡುವಳಂತರಂಗದಲ್ಲಿ ನಿನ್ನ ಅಂಗ ತಂದು ತೋರೈ ಪ ಕುಸುಮ ಗಂಧಿಯು ತಾನುಹಸುಮಗಳಲ್ಲವೆ ಪೊಸತಾಪ ಕಾಯಲಿಲ್ಲವೆ 1 ಕನ್ನೈದಿಲೆ ಸೌವಿಸು ಕಣ್ಣುಗಳಿಂದ ನಿನ್ನರ್ಚಿಸುವೆ ತವಕದಿ |ತನ್ನಾದ ಬೊಂಬೆ ತಾ ಎನ್ನ ನಿಮ್ಮ ಬಳಿಯಲಿಮನ್ನಿಸಿ ಕಳುಹಿದಳೈ 2 ಮುನಿದಗಲಿರುವದು ಮುನಿಜನ ವಂದ್ಯಗೆ ಮುನಿಗಳೊಪ್ಪರೀ ಮಾತನು ಕನಸಿನೊಳವಳ ಕೂಡ ಅನುಭವಿಸುವಾತಂಗೆಜನದ ನಾಚಿಕೆ ಯಾತಕೈ 3 ಅಂಚಗಮನಿ ತಾ ಮಿಂಚು ಮಂಚವ ಕಂಡುಸಂಚಿತವನು ನೆನೆವಳ ವಂಚನೆಯ ಬಿಟ್ಟುಮುಚ್ಚಾವಳ ಕೂಡೈ ನೀ ಕೆಂಚಿಯರಸರೊಲ್ಹದು 4 ಮಂದರ ಧರನೀಗ ಬಂದು ಸಂಮಿಸುವದು ರುಕ್ಮಕಂದನ ಸೊಲ್ಲಿಗೆ 5
--------------
ರುಕ್ಮಾಂಗದರು
ರಾಘವಾ ವರದಾಯಕಾ ಪ ಪ್ರೇಮಸಮಾನ್ವಿತ | ಶ್ಯಾಮನೆ ಬಾರೋ ಅ.ಪ ದೇವದೇವಾನತ | ಶರಣಾ ಭರಣ 1 ಮುನಿಜನ ತೋಷಿತ ಮಾಂಗಿರಿನಾಥ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ರಾಮಭಜೇ ತೇ ಪದಯುಗಳಂ ಸೀತಾ ಪ ರಾಮಭಜೇ ತೇ ಪದಯುಗಳಂ ರಾಮ ಸುಂದರ ಘನಶ್ಯಾಮ ರಘೂದ್ವಹ ಅ.ಪ ದಶರಥ ಹೃದಯಾನಂದಕರಂ ತ್ರಿ ದಶಗಣ ಚಿತ್ತಾಮೋದಕರಂ 1 ಪೂರಿತ ಕೌಶಿಕಜನಂ ಸಂ ತಾರಿತ ಗೌತಮ ಲಲನಾಂ 2 ಖಂಡಿತ ಶಂಕರಚಾಪಂ ಪರಿ- ದಂಡಿತ ಭಾರ್ಗವ ಕೋಪಂ 3 ಸ್ವೀಕೃತ ಜಾನಕೀಹೃದಯಂ ದೂ ರೀಕೃತ ಪಾತಕನಿಚಯಂ 4 ಪಾಲಿತ ಮಾತಾಪಿತೃ ವಚನಂ ಸಂ ಲಾಲಿತ ಮುನಿಜನ ಸ್ತುತಿರಚನಂ 5 ಭರತ ಸಮರ್ಪಿತ ನಿಜರಾಜ್ಯಂ ಮುನಿ ವರಭಾರದ್ವಾಜಾರ್ಪಿತ ಭೋಜ್ಯಂ 6 ದಂಡಕಾರಣ್ಯಂ ಪಾವನಚರಣಂ ಉ- ದ್ದಂಡ ವಿರಾಧಾ ಪಾತಕಹರಣಂ 7 ಕುಂಭಜಾರ್ಪಿತ ಶರಕೋದಂಡ ಸಂ ರಂಭ ನಿರ್ಜಿತ ರಾಕ್ಷಸದಂಡಂ 8 ಪಂಚವಟೀತಟ ಕೃತವಾಸಂ ದೃ ಗಂಚಲ ಧೃತಗಜದುಲ್ಲಾಸಂ 9 ಶೂರ್ಪನಖೀ ವಚನಾಲೋಲಂ ಸಹ ಜಾರ್ಪಿತ ವಿವಿಧಾಯುಧ ಜಾಲಂ 10 ರೂಪನಿರ್ಜಿತ ಸುಮಬಾಣಾಂಗಂ ವಿ ರೂಪಿತ ದುಷ್ಟ ಶೂರ್ಪನಖಾಂಗಂ 11 ಖರತರ ಖರದೂಷಣಕಾಲಂ ಸುರ ನರವರ ಮುನಿಗಣ ಪರಿಪಾಲಂ 12 ಮಾಯಾಮೃಗಾರ್ಪಿತ ಬಾಣವರಂ ಜ- ಟಾಯು ಸಂಪಾದಿತ ಲೋಕವರಂ13 ರಾವಣಹೃತ ನಿಜಪತ್ನೀಕಂ ಲೋ- ಕಾವನಗತ ಕೋಪೋದ್ರೇಕಂ14 ಸಾಧಿತ ಶಬರೀ ಮೋಕ್ಷಕರಂ ಕ- ಬಂಧ ಬಂಧನ ಮೋಚನ ಚತುರಂ 15 ವಾತ ತನೂಭವ ಕೃತಸ್ತೋತ್ರಂ ಪಂ ಪಾತಟ ನಿರ್ಮಿತ ಸುಕ್ಷೇತ್ರಂ 16 ಶಿಕ್ಷಿತ ಸಂಕ್ರಂದನ ತನುಜಂ ಸಂ- ರಕ್ಷಿತ ಚಂಡಕಿರಣ ತನುಜಂ 17 ಸೀತಾಲೋಕನ ಕೃತಕಾಮಂ ನಿಜ ದೂತಾಮೋದನ ಸುಪ್ರೇಮಂ 18 ನಿಜಕರ ಭೂಷಣ ದಾತಾರಂ ಧುರ ವಿಜಯ ವನಾಲಯ ಪರಿವಾರಂ 19 ಧೂತಾಹೃತ ಶುಭದೃಷ್ಟಾಂತಂ ವಿ- ಜ್ಞಾತ ನಿಜಸ್ತ್ರೀ ವೃತ್ತಾಂತಂ 20 ಭೀಷಣ ಜಲನಿಧಿ ಬಂಧಕರಂ ವಿ ಭೀಷಣ ಸಂರಕ್ಷಣ ಚತುರಂ21 ಶೋಷಿತ ರಾವಣ ಜಲಧಿಂ ಸಂ- ತೋಷಿತ ದೈವತಪರಿಧಿಂ 22 ಸೀತಾ ಸಮಾಶ್ರಿತ ವಾಮಾಂಕಂ ಪರಿ- ಪಾತಕ ನಿಜನಾಮಾಂಕಂ 23 ಸ್ವೀಕೃತ ಸಾಕೇತಾವಾಸಂ ಅಂ- ಗೀಕೃತ ಮಾನುಷವಿಲಾಸಂ 24 ವರವ್ಯಾಘ್ರ ಪ್ರಭೂಧರ ಕಲ್ಪತರುಂ ಶ್ರೀ ವರದವಿಠಲಮತಿಶಯ ರುಚಿರಂ 25
--------------
ವೆಂಕಟವರದಾರ್ಯರು
ವನಜ ಮುಖಿಯರ ಮನದಿಷ್ಟಾರ್ಥವನೀವನ - ಶ್ರೀ ಕೃಷ್ಣ ಎನ್ನಿರೊಮನು ಮುನಿಜನರನು ಅನುದಿನದೊಳು ಪೊರೆವನ - ಶ್ರೀ ಕೃಷ್ಣ ಎನ್ನಿರೊ ಪ ಪಣ್ಣ ಕೊಯ್ದನನುಜಗೆ ಸಹಾಯನಾದನ _ ಶ್ರೀ ಕೃಷ್ಣ ಎನ್ನಿರೊಸಣ್ಣ ಸೀರೆಯ ನಲ್ವೆಣ್ಣು ರೂಪಾದನ _ ಶ್ರೀ ಕೃಷ್ಣ ಎನ್ನಿರೊಅಣ್ಣನ ವೈರಿಯ ಮಗನ ಕೊಂದಾತನ _ ಶ್ರೀ ಕೃಷ್ಣ ಎನ್ನಿರೊಬಣ್ಣಿಸಲರಿಯೆ ನಾನಿವನ ಮಹಿಮೆಯ _ ಶ್ರೀ ಕೃಷ್ಣ ಎನ್ನಿರೊ 1 ಮುತ್ತಯ್ಯನಿರೆ ಮೊಮ್ಮಗಗೆ ಪಟ್ಟಗಟ್ಟಿದನ _ ಶ್ರೀ ಕೃಷ್ಣ ಎನ್ನಿರೊಹೆತ್ತವಳಿರೆ ತಾಯ ಬೇರೆ ಪಡೆದಾತನ _ ಶ್ರೀ ಕೃಷ್ಣ ಎನ್ನಿರೊಮತ್ತೇಭಗಾಮಿನಿಗಾಗಿ ವನವಾಸ ಪೋದನ _ ಶ್ರೀ ಕೃಷ್ಣ ಎನ್ನಿರೊಮತ್ತೆ ಹಿರಣ್ಯಕಗೆ ಕಂಬದಲಿ ತೋರ್ದನ - ಶ್ರೀ ಕೃಷ್ಣ ಎನ್ನಿರೊ 2 ಉಗುರು ಕೊನೆಗಳಿಂದ ನಗವನೆತ್ತಿದನ _ ಶ್ರೀ ಕೃಷ್ಣ ಎನ್ನಿರೊಬೊಗಸೆಗಂಗಳ ಬಾಲೆಯರ ತಂದಾತನ _ ಶ್ರೀ ಕೃಷ್ಣ ಎನ್ನಿರೊಮಗಳ ಗಂಡನ ಶಿರವನೆ ಛೇದಿಸಿದನ _ ಶ್ರೀ ಕೃಷ್ಣ ಎನ್ನಿರೊಸುಗುಣ ತನ್ನ ಕಾಗಿನೆಲೆಯಾದಿಕೇಶವನ _ ಶ್ರೀ ಕೃಷ್ಣ ಎನ್ನಿರೊ 3
--------------
ಕನಕದಾಸ
ವಸ್ತು ಕಂಡೆನು ಒಂದು ಕರ್ತೃ ಸದ್ಗುರುವಿನ ಕೃಪೆಯಿಂದ ಧ್ರುವ ತೇಜ:ಪುಂಜದ ರೂಪ ಮೂಜಗದೊಳಗಿದು ಅಪರೂಪ ನಿಜ ನಿರ್ವಿಕಲ್ಪ ಸುಜನರ ಹೃದಯಕ ಸದ್ಛನದೀಪ 1 ರೂಪಕ ನೆಲೆಇಲ್ಲ ವ್ಯಾಪಕವಿದು ಜಗದೊಳಗೆಲ್ಲ ಗುಪಿತಜ್ಞಾನಿಯು ಬಲ್ಲ ಜಪತಪಕಿದು ಸಿಲ್ಕುವದಲ್ಲ 2 ಙÁ್ಞನಕ ಸಾಹೀತ ಮುನಿಜನ ಹೃದಯದಿ ಸದೋದಿತ ಧ್ಯಾನಕೆ ಆಯಿತು ಮನಕಾಮನವಿದು ಪೂರಿತ 3 ಮೂರಕೆ ವಿರಹಿತ ಮೂರುಲೋಕವು ವಂದಿತ ಪರಮ ಸಾಯೋಜ್ಯತ ತಾರಕವಸ್ತು ಸಾಕ್ಷಾತ 4 ಬೈಲಿಗೆ ನಿರ್ಬೈಲ ಭಾವಿಕ ಬಲ್ಲನು ಇದರ್ಹೊಯಿಲ ಮಹಿಪತಿಗನುಕೂಲ ಜೀವನ್ಮುಕ್ತಿಗೆ ಇದು ಮೂಲ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ವಾಣಿ ಬ್ರಹ್ಮನ ರಾಣಿ ಕಲ್ಯಾಣೀ| ಫಣಿವೇಣಿ ಸದ್ಗುಣ | ಶ್ರೇಣಿ ವೀಣಾ ಪುಸ್ತಕ ಪಾಣಿ ಪ ಜಾಣೆ ಶ್ರೀ ಜಗತ್ರಾಣಿ ಶಾಸ್ತ್ರ ಪ್ರ- ವೀಣೆ ವೇದ ಪ್ರಮಾಣಿ ನಿನಗೆಣೆ | ಗಾಣೆ ಸಂತತಕೇಣವಿಡದೆನ್ನಾಣೆ | ನೆಲಸಿರು ಮಾಣದೆನ್ನೊಳು ಅ.ಪ. ತ್ರಿಜಗ ಶುಭ ಕಾಯೇ | ಓಂಕಾರರೂಪಿಣಿ | ಮಾಯೆ ಮುನಿಜನಗೇಯೆ ಸುಖದಾಯೇ || ತೋಯಜಾಂಬಕಿ ಶ್ರೀಯರ ಸೊಸೆ | ಆಯದಿಂದಲಿ ಶ್ರೇಯಸ್ಸುಖಪದ - ವೀಯೆ ಸಂತತ ಕಾಯೆ ಶತಧೃತಿ ಪ್ರೀಯೆ | ನೀನೆನಗೀಯೆ ವಾಕ್ಸುಧೆü 1 ಅಕ್ಷರ ಸ್ವರೂಪೆ ನಿರ್ಲೇಪೇ | ಮೌನಿಜನ ಮಾನಸ | ಪಕ್ಷ ಸಕಲಾಧ್ಯಕ್ಷೆ ಶುಭಚರಿತೇ | ಸೂಕ್ಷ್ಮ ಸ್ಥೂಲ ಸುಲಕ್ಷಣಾನ್ವಿತೆ | ಮುಮುಕ್ಷು ಜನ ನಿಜ | ಭಕ್ತಿ ಭುಕ್ತಿವರ ಪ್ರದಾಯಕಿ | ಮುಕ್ತಿ ಸುಖ ಸೌಖ್ಯ ಪ್ರದಾಯಕಿ 2 ಸುಂದರಾಂಗಿ ಆನಂದ ಗುಣ ಭರಿತೇ | ವಂದಿಸುವೆ ತವಪದ -| ದ್ವಂದಕಾನತನಾಗಿ ಸಚ್ಚರಿತೇ | ಯೆಂದು ಮದ್‍ಹ್ವನ್ ಮಂದಿರದಿ ನೀ | ನಿಂದು ಆಪದ್ ಬಂಧು ಕರುಣಾ | ಸಿಂಧುವನು ನಾನೆಂದು ಪೊಗಳ್ವಾ -| ನಂದವರ ಸದಾನಂದ ಪಾಲಿಸೇ 3
--------------
ಸದಾನಂದರು
ವಾಯು ಕುಮಾರ ಸುಜನೋದ್ಧಾರ ಮಾ ರಮಣ ಪ್ರಿಯ ಭಕುತವರ ಪ ಪಾರಾವಾರದಂತಿಹ ಈ ಘೋರ ಸಂಸಾರದ ಪಾರವಗಾಣಲುಪಾಯವ ತೋರೊಅ.ಪ ಇನಕುಲ ತಿಲಕನ ಅನವರತದಿ ದರು ಶನದಲಿ ಹಿಗ್ಗುವ ಅನುಭವವು ಸನಕ ಸನಂದನ ಮುನಿಜನಗಳಿಗುಂಟೆ ವಿನಯದಿ ಬೇಡುವೆ ಅನುಗ್ರಹವ 1 ಈ ಮಹಿಯೊಳು ಬಲ ಭೀಮನೆಂಬ ದಿವ್ಯ ನಾಮದಿ ಪರಿಪರಿ ಸೇವಿಸುತ ಸತ್ಯ ಭಾಮಾಕಾಂತನ ಪ್ರೇಮ ಪಾತ್ರನೆಂದು ಕಾಮಿಸುವೆನು ನಿನ್ನ ವರ ದಯುವ 2 ವರ ಯತಿ ವೇಷದಿ ಹರಿಮತವನು ಬಲು ಹರಡುತ ಧರೆಯೊಳು ಸುಜನರಿಗೆ ನರ ಹರಿ ಲೋಕಕೆ ಮಾರ್ಗವರುಹಿದ ಗುರುಗಣ ಗುರು ಮಧ್ವರಾಯ ಪ್ರಸನ್ನನಾಗೊ 3
--------------
ವಿದ್ಯಾಪ್ರಸನ್ನತೀರ್ಥರು
ವಾರಿವದನ ಗೇಹ ವಾಸಮಾಡಿಹನ ಕು ಮಾರಿ ಗಂಡನ ತಲೆ ಕಡಿದಾ ನತ್ತಿಗೆವ್ಯಯ ಸೊಸೆಮಾನ ಕಾಯ್ವನ ತಂದಿಗೆ ಸಾರೂಪದೆಶವಾನೊರದ ನಪ್ಪನ ಪೆತ್ತ ನಾರೀ ಸಖನ ಸೂತನಣ್ಣನ ಪಿತಸಹ ಮೂರು ಮೂವತ್ತುಕೋಟಿ ವಿಭುಧರಿಂಸ್ತುತಿಗೊಂಬ ಶಂಭುರಕ್ಷಿಸುದೆಮ್ಮನು 1 ಶರಣು ಧನಪತಿಮಿತ್ರ ಪಾವನತರಚರಿತ್ರ ಶರಣು ಕರ್ಪುರಗೌರ ವಂಗಗುಣ ಮಂದಾರ ಯೋಗಿ ಮನಕಾ ಭೇದ್ಯ ಶರಣು ಮಹಿಪತಿನಂದ ಮುನಿಜನ ವಂದ್ಯಶರಣು ಆನಂದ ಕಂದ 2
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ವಿದ್ಯಾವಿದ್ಯಕಮೀರಿದಾಗುಣತ್ರಯಾ ದಾವನು ಹೊಂದಾದಿಯಾ ನಿಚಯಾಸರ್ವಕ್ಕುದಾವಾಶ್ರಯಾ ಶುದ್ಧಾತ್ಮಾ ಸುಖದಾಲಯಾ ಸತುಚಿದಾನಂದೈಕರಸನಿಶ್ಚಯಾ ಸಿದ್ಧಾಂತ ಪ್ರತಿಪಾದ್ಯದಾವನುದಯಾ ಶ್ರೀ ದೇವ ದತ್ತಾತ್ರಯಾ 1 ಜಗದೋಳಾವನಸದುಗುಣಾ ನಿರಗುಣಾ ಸ್ವಾರೂಪದಾ ಲಕ್ಷಣಾ ಬಗೆ ಬಗೆಯಲಿ ಮಾಡಲು ವಿವರಣಾ ನೇತಿನೇತಿ ಶೃತಿ ವಚನಾ ಮುನಿಜನಾ ನಿಶ್ಚೈಸದಿಹ ರಾವನಾ ಪ್ರಗಟೀಸಿಹನು ನೋಡಿದೇ ನಿಜಘನಾ ಶ್ರೀದತ್ತ ನಿರಂಜನಾ 2 ನಿಶ್ಚಯಿಸದಿಹದಾವನಲಿ ತಾಂಪೌರಾಣಿತಿಹಾಸ ಭೇದಿಸುತಲೀ ನೆಲೆ ಗಾಣದೇ ನಿಲ್ಲಲೀ ಅಪದಿಂದ ಮೀಮಾಂಸತರ್ಕವರಲೀ ಬೆಂಡಾದವು ನೋಡಲೀ ಅಪರ ಘನ ಬಂದಿದೇಧರಿಯಲೀ ಬೆಂಡಾದವು ನೋಡಲೀ 3 ಪಾತಾಳಾದಿಯ ಲೋಕವೇಳುಸರಳು ದಾವನ ಪದ ಕಟಗಳು ಖ್ಯಾತಿಂದೇಭುವನೇಳು ಊಧ್ರ್ವಕಿರಲು ನಾಭಿಂದ ಸಿರವಾಗಲು ಸೀತಾಂಶು ರವಿದಾವನಂಬಕಗಳು ಅಶಾವೆ ಶ್ರೀತಂಗಳು ದತ್ತೆನಿಸಲು4 ಅಮರಂಗಣಾ ದಾವನುದರ ವಿಶ್ವಕಾಗಿ ಭುವನಾ ಶ್ರೀಮದ್ರಮಾರಮಣಾ ನಖದಾಧೀನಾ ಶ್ರೀದತ್ತ ಮನ ಮೋಹನಾ 5 ಸರ್ವೆಶ ಸರ್ವೋತ್ತಮಾ ಸರ್ವಾಧಾರನುದಾವ ದೇವಗರಿಮಾ ಪೂಜ್ಯನು ಸಕಲಾಗಮಾ ಸರ್ವಾತೀತನು ದಾವನಂಘ್ರಿ ಕಮಲಾ ಸೇವಿಸುವಳು ಶ್ರೀರಮಾ ಶ್ರೀದತ್ತ ಗುರುವೇನಮಃ 6 ಅನಸೂಯಾ ಕರರತ್ನನಾಗಿಜನಿಸೀ ಇಷ್ಟಾರ್ಥವನು ಪೂರಿಸೀ ಯೋಗಾಂಗವನು ಪ್ರಕಟಿಸಿ ಸ್ಮರಿಸೀದವರಲ್ಲಿ ಬಹುಕರುಣಿಸೀ ಶ್ರೀ ದತ್ತಪದ ಧ್ಯಾಯಿಸೀ 7 ಮೆರೆವಾ ಮುಪ್ಪುರದಿಂದೇರುವಾ ಸಾರೀ ಸಾವಿರದಳ ಪದ್ಮದಿರುವಾ ಸ್ವಾನಂದ ಭೋಗಿಸುವಾ ಮುದ್ರಾಂಕುರವ ಬೀರುವಾ ಶ್ರೀದತ್ತ ಗುರು ಎನಿಸುವಾ8 ಕಾತ್ರ್ಯವೀರ್ಯವರವಾಯದುರಾಯನುದ್ಧರಿ ಸಿದಾ ಗುರುಮಹೀಪತಿ ನುಡಿಸಿದಾ ಸ್ವಾನಂದ ಸುಖ ಬೀರಿದಾ ಸದಾ ಪಡೆವನು ಗತಿಸಂಪದಾ 9
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶಂಕರ ಶಿವಶಂಕರ ಶಿವಶಂಕರ ಶಿವಶಂಕರ ಕಿಂಕರೇಷ್ಟಪ್ರಧಾನಶೀಲ ವೃಷಾಂಕ ಮಹಲಿಂಗೇಶ್ವರ ಪ. ವ್ಯೋಮಕೇಶ ಭವಾಬ್ಧಿತಾರಕ ರಾಮನಾಮೋಪಾಸಕ ಸಾಮಜಾಜಿನವಸನಮಂಡನ ಸ್ವಾಮಿ ತ್ರಿಜಗನ್ನಾಯಕ ಭೀಮಬಲ ಸುತ್ರಾಮಮುಖ ಸುರಸ್ತೋಮ ವಿನುತಪದಾಂಬುಜ ಸೋಮಸೂರ್ಯಾನಲಯನ ನಿಸ್ಸೀಮ ಮಹಿಮ ಮಹಾಭುಜ1 ಭಜಕಜನಸೌಭಾಗ್ಯದಾಯಕ ವಿಜಯಪಾಶುಪತಾಸ್ತ್ರದ ಭುಜಗಭೂಷಣ ಭುವನಪೋಷಣ ರಜತಗಿರಿಶಿಖರಾಸ್ಪದ ವೃಜಿನಹಾಮಲ ಸ್ಫಟಿಕಸನ್ನಿಭ ಕುಜನವಿಪಿನದವಾನಲ ವಿಜಿತಕಾಮ ವಿರಾಗಿಯೋಗಿ ವ್ರಜಕುಟುಂಬ ಮಹಾಬಲ 2 ನೀಲಕಂಠ ನಿರಾಮಯಾಭಯಶೂಲಧರ ಸುಮನೋಹರ ಶೈಲರಾಜಸುತಾಧರಾಮೃತಲೋಲ ಲೋಕಧುರಂಧರ ಕರುಣಾಲವಾಲ ಮಹೇಶ್ವರ ಪಾಲಿತಾಖಿಳಸಿದ್ಧ ಮುನಿಜನಜಾಲ ಜಾಹ್ನವಿಶೇಖರ 3 ಕೃತ್ತಿವಾಸ ಗಿರೀಶ ಶ್ರುತಿತತ್ತ್ವಾರ್ಥಬೋಧ ಗುಣೋದಯ ದೈತ್ಯಮೋಹಕ ಶಾಸ್ತ್ರಕೃತ್ಪ್ರಮಥೋತ್ತಮ ವಿರತಾಶ್ರಯ ಸತ್ಯಸಂಕಲ್ಪಾನುಸಾರ ನಿವೃತ್ತಿಮಾರ್ಗ ಪ್ರವರ್ತಕ ಮೃಡ ನಮೋ„ಸ್ತು ಸುಮನನಿಯಾಮಕ 4 ಪಂಡಿತೋತ್ತಮ ಪವನಶಿಷ್ಯ ಮೃಕಂಡುತನಯಭಯಾಪಹ ಚಂಡಿಕಾಧವ ಶಿವ ದಯಾರ್ಣವ ಖಂಡಪರಶು ಸುರಾರಿಹ ಚಂಡಭಾನುಶತಪ್ರಕಾಶಾಖಂಡವೈರಾಗ್ಯಾಧಿಪ ಕುಂಡಲೀಂದ್ರ ಪದಾರ್ಹನಗ ಕೋದಂಡವಿದೃಶ ಮಹಾನ್‍ತಪ 5 ಮಂಗಲಪ್ರದ ದಕ್ಷಕೃತಮುಖಭಂಗ ಭಾಗವತೋತ್ತಮ ಜಂಗಮಸ್ಥಾವರಹೃದಿಸ್ಥ ಶುಭಾಂಗ ಸತ್ಯಪರಾಕ್ರಮ ಲಿಂಗಮಯ ಜಯಜಯತು ಗಿರಿಜಾಲಿಂಗಿತಾಂಗ ಸದೋದಿತ ಸಂಗರಹಿತಾಚ್ಯುತಕಥಾಮೃತ ಭೃಂಗವತ್ಸೇವನರತ 6 ಭರ್ಗ ಭಾರ್ಗವ ಋಷಿಪ್ರತಿಷ್ಠಿತ ಸ್ವರ್ಗಮೋಕ್ಷ ಫಲಪ್ರದ ನಿರ್ಗತಾಖಿಲದುರಿತ ಭೂಸುರವರ್ಗಪಾಲನಕೋವಿದ ದುರ್ಘಟಿತಧುರಧೀರ ಭವಸಂಸರ್ಗದೂರ ಸನಾತನ ನಿರ್ಗುಣೈಕಧ್ಯಾನಪರ ಸನ್ಮಾರ್ಗಭಕ್ತಿನಿಕೇತನ 7 ಚಾರುಪಾವಂಜಾಖ್ಯಕ್ಷೇತ್ರಾಧಾರದಾಂತದಯಾಕರ ನೀರಜಾಸನತನಯ ಲಕ್ಷ್ಮೀನಾರಾಯಣಕಿಂಕರ ವಾರಿನಿಧಿಗಂಬೀರ ದೀನೋದ್ಧಾರ ಧಾರ್ಮಿಕಜನಹಿತ ವಾರಣಾಸ್ಯಕುಮಾರಗುರು ಗೌರೀರಮಣ ಸುದೃಢವ್ರತ 8
--------------
ತುಪಾಕಿ ವೆಂಕಟರಮಣಾಚಾರ್ಯ