ಒಟ್ಟು 327 ಕಡೆಗಳಲ್ಲಿ , 55 ದಾಸರು , 312 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಂದಪುತ್ರನ ಆಜ್ಞೆಯಿಂದಲುದ್ಧವ ಬ್ಯಾಗ ಬಂದು ಗೋಕುಲ ಹೊಕ್ಕಾನಂದದಿಂದಲಿ 1 ಬಾಲನ್ವಾರ್ತೆಯ ಕೇಳೆಶೋದ ಗೋಪನು ಕೊಂ- ಡಾಡಿ ಗುಣಗಳ ಮನಕೆ ತಾಳಿದರ್ಹರುಷವ 2 ತಾಪ ಬಿಡದಲೆ ಅಗಲಿ ಶ್ರೀಪತಿ ಕಾಣದೆ ಸಂತಾಪದಿಂದಿರೆ 3 ಸತಿಯರೆಲ್ಲರು ಗೋಪಿಸುತನ ಪಾಡುತ ದಧಿಯ ಮಥಿಸಿ ಕದವನೆ ತೆಗೆಯೆ ರಥವ ಕಂಡರು 4 ದಾವ ಕಾರಣ ನಮ್ಮ ಭಾವಭಕ್ತಿಗೆ ಸ್ವಾಮಿ ತಾನೆ ಬಂದಾನೋ ತನ್ನಕ್ರೂರನ ಕಳಿಸ್ಯಾನೊ 5 ಭದ್ರೆರೆಲ್ಲರೂ ಕೂಡಿ ಎದ್ದು ಬರುತಿರೆ ಮಧ್ಯಮಾರ್ಗದಿ ಅಲ್ಲುದ್ಧವನ ಕಂಡರು 6 ಕಾಂತೇರೆಲ್ಲರು ಕೂಡೇಕಾಂತ ಸ್ಥಳದಲ್ಲಿ ನಿಂತು ಕಂತುನಯ್ಯನು ಲಕ್ಷ್ಮೀಕಾಂತ ಕ್ಷೇಮವೆ 7 ಇಂದಿರೇಶನ ಬಿಟ್ಟಗಲಿ ವ್ರಜದೊಳು ಕಾಲ ಹಿಂದೆ ಕಳೆವೋದ್ಹ್ಯಾಗಿನ್ನ ್ಹಗಲು ಇರುಳನೆ 8 ಮುಂದೆ ಕಾಣದೆ ನೇತ್ರ ಅಂಧಕರಂದದಿ ಮು- ಕ್ಕುಂದನಿಂದಲಿ ರಹಿತರೆಂದಿಗಾದೆವೊ 9 ತೊಡಿಗೆ ಬಂಗಾರ ಶಿರದಿ ಮುಡಿವೊ ಮಲ್ಲಿಗೆ ದೇಹ- ಕ್ಕುಡಿಗೆ ಭಾರವೊ ಬಿಟ್ಟು ಪೊಡವಿಗೊಡೆಯನ 10 ಉದ್ಧವ ನಾವು ಜಾಳು ಸ್ತ್ರೀಯರು ಒಲ್ಲದೆ ಕಾಳಿಮರ್ದನ ಕಾಲಲೊದ್ದು ಪೋದನು 11 ಜಾರಸ್ತ್ರೀಯರುಯೆಂದು ನಗದಿರುದ್ಧವ ಬಿಗಿದ ಮೋಹಪಾಶದಿ ಈ ವಿಚಾರ ಮಾಡಿದ 12 ಬಲೆಯಗಾರಗೆ ಸಿಕ್ಕು ಬಳಲಿದಾಕ್ಷಣ ಅದರ ಕೊ- ರಳ ಕೊಯ್ಯದೆ ಅವಗೆ ಕರುಣ ಬರುವುದೆ 13 ಎಷ್ಟು ಹೇಳಲೊ ಅವನ ಗಟ್ಟಿಯೆದೆಗಳ ಒಲ್ಲದೆ ಬಿಟ್ಟು ನಮ್ಮನು ಮಧುರಾಪಟ್ಟಣ ಸೇರಿದ 14 ಭ್ರಮರಕುಂತಳೆ ಒಂದು ಭ್ರಮರಕಾಣುತ ಬ್ಯಾಡ ಕಮಲನಾಭನ ವಾರ್ತೆ ಕಿವಿಗೆ ಸೊಗಸದು 15 ಮದನಮೋಹನ ಹೋಗಿ ಮಧುರಾಪುರಿಯಲಿ ಅಲ್ಲಿ ಚÉದುರೆರಿಂದಲಿ ಅವಗೆ ಸೊಗಸು ಸಮ್ಮತ 16 ಕ್ರೂರನೆನ್ನದೆ ಇವಗಕ್ರೂರನೆನುತಲಿ ದಾರ್ಹೆಸರಿಟ್ಟರೋ ನಮಗೆ ತೋರಿಸೊ ಅವರನು 17 ಯಾತಕ್ಹೇಳುವಿ ಅವನ ವಾರ್ತೆ ಸೊಗಸದು ಹರಿಯು ಪ್ರೀತಿ ವಿಷಯನು ನಮಗೆ ಘಾತಕನೆನಿಸಿದ 18 ಜಲನ ಭೇದಿಸಿ ಹಯನ ಕೊಂದು ವೇದವ ಹ್ಯಾಗೆ ಹರಣ ಮಾಡಿದ 19 ಕ್ಷೀರ ಮಥನವ ಮಾಡಿ ಸ್ತ್ರೀಯರೂಪದಿಂದಸುರರ ಮೋಹಿಸಿದ್ವಂಚನೆ ನಮಗೆ ಪೂರ್ಣ ತಿಳಿಸಿದ 20 ಭೂಮಿ ಬಗಿದನು ತನ್ನ ಕ್ವಾರೆಯಿಂದಲಿ ನಮ್ಮನ್ನು ಸೀಳಿ ಪೋದರೆ ಇನ್ನೀ ಘೋರ ತಪ್ಪುವುದು21 ಕಂದ ಕರೆಯಲು ಕಂಬದಿ ಬಂದು ಸಲಹಿದನೆಂದು ನಂಬಿ ಕೆಟ್ಟೆವೊ ಇನ್ನಿವನ ಹಂಬಲ ಸಾಕಯ್ಯ 22 ಕೊಟ್ಟ ದಾನವ ಬಲಿಯ ಕಟ್ಟಿ ಪಾಶದಿಂದವನ ಮೆಟ್ಟಿದ ಪಾತಾಳಕಿಂಥಾಕೃತ್ಯಮರುಂಟೇನೊ 23 ಕೊಡಲಿ ಕೈಯ್ಯೊಳು ಪಿಡಿದು ಹಡೆದ ಮಾತೆಯ ಶಿರವ ಕಡಿದ ಪುರುಷಗೆ ನಮ್ಮೊಳು ಕರುಣ ಬರುವುದೆ 24 ಬಂದ ಸತಿಯಳ ಮೋರೆ ಅಂಗ ಕೆಡಿಸಿದ ತ- ನ್ನಂಗನೆ ಕಾಣದೆ ತಿರುಗಲೆಮಗೆ ಸನ್ಮತ 25 ಪತಿಯ ಸುತರನೆ ಬಿಟ್ಟೆವಶನ ವಸನವ ಅಗಲಿದ್ವಸುನಂದನಗೆ ನಮ್ಮೆಲ್ಲರುಸುರು ಮುಟ್ಟಲ್ಯೊ 26 ಬೌದ್ಧರೂಪದಿ ಸ್ತ್ರೀಯರ ಲಜ್ಜೆಗೆಡಿಸಿದನೆಂಬೊ ಸುದ್ದಿ ಬಲ್ಲೆವೊ ನಾವಿಲ್ಲಿದ್ದವರುದ್ಧವ 27 ಕಲಿಯ ಮನಸಿರೆ ಇವಗೆ ಕಲ್ಕ್ಯನೆಂಬೋರೊ ಕತ್ತಿ ಪಿಡಿದ ಪುರುಷಗೆ ನಮ್ಮೊಳು ಕರುಣ ಬರುವುದೆ 28 ಬ್ಯಾಡವೆನುತಲಿ ಅವಗೆ ಬೇಡಿಕೊಂಡೆವೊ ಗಾಡಿಕಾರನು ನಮ್ಮ ನೋಡದ್ಹೋದನು 29 ನಮ್ಮ ವಚನವ ಹೋಗಿ ಮನ್ನಿಸುದ್ಧವ ಪನ್ನಂಗಶಯನನ ಪಾದಕ್ಕಿನ್ನು ನಮಿಸೆವೊ 30 ಬಿಟ್ಹ್ಯಾಗಿರುವೊಣೋ ಭೀಮೇಶಕೃಷ್ಣನ ನಮ್ಮ ದೃಷ್ಟಿಗೆ ತೋರಿಸೊ ಮುಕ್ತಿ ಕೊಡುವೊ ದಾತನ31
--------------
ಹರಪನಹಳ್ಳಿಭೀಮವ್ವ
ನಂಬಿದೆ ನಮ್ಮಮ್ಮನ ನಂಬಿದೆ ಪ ಕದಂಬ ಕರರ್ಚಳ ನಂಬಿದೆ ಅ.ಪ. ಕರವೀರದೊಳಗಿರುತಿಹಳು ರವಿ ಕಿರಣ ಕಾಂಚನ ಪೀಠ ನಿಧಿತಳು ಸುರತರುಣಿ ಸಂಘಾತ ಸೇವಿತಳು ಆಹಾಹರಿಯ ವಕ್ಷದಿ ಕೂತು ಕರುಣ ಕಟಾಕ್ಷದಿಪರಿವಾರ ಜನಕೆಲ್ಲ ಸುರಿವಳು ಸುಖವನ್ನು 1 ಕರದಿ ಕಂಕಣ ತೋಡೆ ಬಳೆಯು ನಾಗಮುರಿಗೆ ವಂಕಿಯುಶೋಭ ಸಿರಿಯು ಪಾದಾಭರಣದ ಕಲಕಲಧ್ವನಿಯು ಆಹಾಕರಣದಿ ವಾಲಿ ಕಂಠದಿ ಸರ ಸುರಗಿಯುಭರಮ ಮೇಖಳ ಕಾಂತಿ ಹರವಿಲಿ ಬೆಳಗೋದು 2 ಮುಖವನೋಡಲು ಸೋಮಬಿಂಬ ದಿವ್ಯ ಚಿಕುರಮ ಭ್ರಮರದಂಬನಾಸ ಮುಖದಿ ಮಣಿಯು ರವಿಬಿಂಬ ಆಹಾವಿಕಸಿತ ಸುಮಮಾಲೆ ವಿಕಸರ ಫಣಿವೇಣಿಚಕಚಕಿತಾಭರಣಳಕಳಂಕ ಚಲಿವಿಯ 3 ಕವಿ ಭುವನದೊಳಿರುವಳ 4 ದೇಶಕಾಲಗಳಿಂದಸಮಳು ಹರಿಗಾಸುಗುಣಗಳಿಂದಾಸಮಳುಸುಖರಾಶಿ ಸೌಂದರ್ಯ ಸೌಭಗಳು ಆಹಾವಾಸುದೇವನ ಭಕ್ತಿರಾಶೆ ಪೂರೈಸುತಿಂದಿ-ರೇಶನು ಚ್ಛಾಂಗದಿ ತಾ ಸುಖಿಸುವಳಂಬ 5
--------------
ಇಂದಿರೇಶರು
ನಾಳಿಗಿಲ್ಲವೆಂದು ವ್ಯರ್ಥ ಬಳಲ ಬೇಡಿರೋ |ಕಾಲ ಬೆಳಗು ನೆಚ್ಚಿ ಕೇಡು | ತಿಳಿದು ನೋಡಿರೋ ಪ ಅಂದಿಗಿದ್ದವರಿಗೆ ಸಾವು | ಇಂದಿಗಿದ್ದವರಿಗೆ ಸಾವು |ಇಂದಿರೇಶನ ಭಕುತರೆಂದೆಂದಿಗೆ ಸಾಯರೋ 1 ಆರಿಗಾರು ಕೊಡುವರಲ್ಲ | ಮೋರೆ ನೋಡಿ ನಗುವರಲ್ಲ |ಹರಿಗೆ ನಂಬಿದವರೇ ಪರಮ ಧೀರ ಧೂರ್ತರೋ 2 ಹೆತ್ತ ತಾಯಿ ಗರ್ಭದಲ್ಲಿ | ಹತ್ತು ತಿಂಗಳನ್ನಪಾನ- |ವಿತ್ತ ರುಕ್ಮಭೂಷಗೇತಕ್ಕೆ ಮರೆತಿರೋ 3
--------------
ರುಕ್ಮಾಂಗದರು
ನಿಜ ಭಕ್ತಿ ತೋರಿದನು ಜಗಕೆ ಕೃಷ್ಣ್ಣಾ ವಿಜಯನಾ ಸತಿಯರಿಬ್ಬರ ನೆವದಿ ಮುದದೀ ಪ. ಹಸ್ತಿವರದನು ತಂಗಿಯರ ನೋಡಬೇಕೆಂದು ಹಸ್ತಿನಾಪುರಕೆ ಬಂದ್ಹರುಷದಿಂದ ಚಿತ್ತ ನಿರ್ಮಲದಿ ಪಾಂಡವರು ಪೂಜೆಸೆ ನಲಿದು ಭಕ್ತಿ ಭಾವಕೆ ಮೆಚ್ಚಿ ದ್ರೌಪತಿಗೆ ವಲಿದೂ 1 ಅಣ್ಣನೆಂಬುವ ಭಾವದಲಿ ಸುಭದ್ರೆಯು ಇರಲು ಘನ್ನ ಮಹಿಮನು ಎಂದು ದ್ರೌಪತಿಯು ತಿಳಿದೂ ಸ್ವರ್ಣಗರ್ಭನ ಪಿತನು ಈರೇಳು ಜಗದೊಡೆಯ ಎನ್ನ ಭಾಗದ ದೈವ ಸಲಹೆಂದು ನುತಿಸೇ 2 ಅಂತರಂಗದ ಭಕ್ತಿ ಆನಂದಮಯ ತಿಳಿದು ಕಂತುಪಿತ ಕರಗಿದಾ ಮಮತೆ ಪ್ರೇಮದಲಿ ಶಾಂತಚಿತ್ತಳೆ ತಂಗಿ ದ್ರೌಪತಿಯೆ ಬಾರೆನುತ ಇಂತು ನುಡಿನುಡಿಗೆ ಆಡಲು ಕರುಣೆಯಿಂದ 3 ಕೇಳಿ ಇದನು ಸುಭದ್ರೆ ತಾಳಲಾರದೆ ಅಜ್ಞ ಬಾಲೆ ನಿಜ ತಂಗಿ ನಾನಿರಲು ಐವರಿಗೆ ಲೋಲೆಯಾದವಳೆ ಬಲು ಮೇಲಾದವಳೆ ಎಂದು ಬಾಲಚಂದ್ರನ ಪೋಲ್ವ ಮುಖ ಬಾಡಿಸಿರಿಲೂ 4 ಕಂಡು ಕಮಲಾಕಾಂತ ವಡಹುಟ್ಟಿದಳ ಬೆಂಡಾದ ತೆರವ ಪೇಳೆನಲು ಖತಿಯಿಂದಾ ಪುಂಡರೀಕಾಕ್ಷ ಎನ್ನುಳಿದು ನಿಜ ಭಾವದಲಿ ಕಂಡವರ ಸುತೆ ನಿನಗೆ ಮಿಗಿಲಾದಳೆನಲೂ 5 ಸಚ್ಚಿದಾನಂದ ವಿಗ್ರಹ ನಗುತ ನೆನೆದನೊಂ ದಚ್ಚರಿಯ ಕೌತುಕವ ತೋರ್ವೆನೆಂದೂ ಅಚ್ಛಿದ್ರ ಅಕ್ಲೇಶ ಆನಂದಮಯ ತಾನು ಕ್ಲೇಶ ಪಡುತ ವರಲಿದನೂ 6 ಬಾರಮ್ಮಾ ತಂಗಿ ಸುಭದ್ರೆ ಬೆರಳಲಿ ರಕ್ತ ಸೋರುತಿದೆ ಬೇಗೊಂದು ಚಿಂದಿ ತಾರೆ ತಾರೆನಲು ಗಡಬಡಿಸಿ ಮನೆಯಲ್ಲ ಹುಡುಕತಲಿ ಬಟ್ಟೆ ಕಂಗೆಡುತಾ 7 ಎತ್ತ ನೋಡಿದರತ್ತ ಪಟ್ಟೆ ಪೀತಾಂಬರವು ಕಂಚುಕ ಮಕುಟ ಮೆರೆಯೇ ಚಿತ್ರದಾ ವಸನ ಅರಮನೆಯಲ್ಲಿ ತುಂಬಿರಲು ಮತ್ತದರ ಮಮತೆ ಅಣ್ಣನಿಗೆ ಅಧಿಕವಾಗೆ 8 ಬರಲಿಲ್ಲ ಸುಭದ್ರೆ ಬಾರಮ್ಮ ದೌಪದಿಯೆ ವರ ತಂಗಿ ಬೇಗ ಕೊಡೆ ಹರಕು ಬಟ್ಟೆ ಸುರಿಯುತಿದೆ ರಕ್ತ ಬೆರಳಿಂದ ನೋಡೆಂದನಲು ಕಿರುನಗೆಯ ನಗುತ ಶರಗ್ಹರಿದು ಕಟ್ಟಿದಳೂ 9 ಬಂದಳಾ ವೇಳೆಯಲಿ ಸುಂದರಾಂಗಿ ಸುಭದ್ರೆ ನಿಂದು ನೋಡಿದಳೂ ದ್ರೌಪತಿಯ ಕೃತಿಯಾ ಮಂದಗಮನೆಯು ನಾಚಿ ಮೊಗವ ತಗ್ಗಿಸಿ ನಿಲಲು ಇಂದಿರೇಶನು ಇದರ ವಿವರ ತೋರಿದನು 10 ಬೆರಗಾದ ಪರಿತೋರಿ ಸಿರಿಕೃಷ್ಣ ಕೇಳಿದನು ಜರತಾರಿ ಸೆರಗ್ಹರಿದು ಕಿರುನಗೆಯ ನಕ್ಕಾ ಪರಿ ಏನೆ ಎಲೆ ತಂಗಿ ನರಳುವೋ ಎನ ನೋಡಿ ಪರಿಹಾಸ್ಯವಾಯಿತೆ ನಿನಗೆ ಎಂತೆಂದಾ 11 ಅಣ್ಣಯ್ಯ ನಿನಗೆ ಮಿಗಿಲಾಯಿತೇ ಈ ಶೆರಗು ಎನ್ನ ಅಭಿಮಾನ ಕಾಯುವ ದೈವ ನೀನೂ ಘನ್ನ ಮಹಿಮಾಂಗ ನಿನಗಿನ್ನು ಕ್ಲೇಶಗಳುಂಟೆ ನಿನ್ನ ಲೀಲೆಗೆ ಹರುಷ ಉಕ್ಕಿತೆಂದನಲೂ 12 ಹೇ ನಾರಿ ನಾನನಾಥರಿಗೆ ನಾಥನು ಮುಂದೆ ನೀನಿತ್ತ ವಸನ ಅಕ್ಷಯವಾಗಲೆಂದು ಶ್ರೀನಾಥ ದ್ರೌಪದಿ ಸುಭದ್ರೆಯ ಮನ್ನಿಸಿ ಮೆರೆದಜ್ಞಾನಿ ಜನಪ್ರಿಯನು ಗೋಪಾಲಕೃಷ್ಣವಿಠಲಾ13
--------------
ಅಂಬಾಬಾಯಿ
ನಿತ್ಯ ಶುಭಮಂಗಳಮಂ ಪ ಧರೆಯೊಳು ನಿನ್ನಂಥಾ ತರುಣಿ ಮಣಿಯಳಾ ಕಾಣೆಹರಿಯ ವಕ್ಷಸ್ಥಳದಿ ಇರುವೆ ನೀನುಕರವೆತ್ತಿ ಮುಗಿಯುವೆನು ಸಿರಿಯೆ ತವ ಸೌಭಾಗ್ಯಎರಡು ಕಣ್ಣಿಗೆ ತೋರೆ ವರಮಹಾಲಕ್ಷ್ಮಿ1 ಜರದ ಪೀತಾಂಬರವು ಚರಣದೊಳಗಲಿಯುತಲಿಸಿರಿವಂತೆ ಮೂರು ಹೆಜ್ಜೆ ಬರುವಳಾಗಿಸೆರಗೊಡ್ಡಿ ಬೇಡುವೇನು ಹೆರಳಿನಲಿ ಮುಡಿದಿರುವಮರುಗು ಮಲ್ಲಿಗೆ ಚಂಪಕ ಸರಗಳನ್ನು ನೀಡೆ 2 ಇಂದುಮುಖಿ ನಿನ್ನಗಾರ್ತಿಯ ತಂದು ನಿಂದಿಹೆ ನಿಜಸುಂದರಾ ಮೃದು ಕೀರ್ತಿ ಪಾಡುತಿಹೆನೆಚಂದ್ರಶೇಖರ ಸುರರಿಂದ ವಂದಿತ ಚರಣಇಂದಿರೇಶನ ಸಹ ಬಂದಿಲ್ಲೆ ತೋರಿಸುಮುಖ3
--------------
ಇಂದಿರೇಶರು
ನಿಂದಿಸಿದ್ದು ಕುಂದಾದದ್ದೇನೊ ಮಂದಮತಿಗಳು ನಿಂದು ಸುಜನರಿಗೆಲ್ಲ ಪ. ಅಂದನುವಾಗಿಲ್ಲೆ ಇಂದಿರೇಶನು ಮಂದಗಮನೆ ದ್ರೌಪದಿಗೆ ಅ.ಪ. ಕಂದನೆಂದು ಕೌರವನ ಸೇವೆಗೆ ಆ ನಂದದಿಂದ್ಯವರ ಬೇಡೆಂದ ಮುನಿ ಬಂದರತ್ನವ ಬಿಟ್ಟನ್ನವ ಬೇಡಿಬಾರೆನೆ ಇಂದು ಮುಖಿ ಕೈಯಿಂದಿಡಿಸಿದ ಕೃಷ್ಣ 1 ಖಡ್ಗ ತೋರಿ ಬಳ ಪ್ರಹ್ಲಾದನಂಜಿಸೆ ಗುಡ್ಡ ಪೊತ್ತ ನರಹರಿಯಾಗ ಹೆಡ್ಡನೆ ತೋರುವೆನೆಂದು ಕಂಬದಿ ದೊಡ್ಡ ಮೃಗರೂಪದಲಂಜಿಸಿದ 2 ತೊಡೆಯನು ಬಿಡು ಎನುತೊಡನೆ ನೂಕಲು ಪೊಡವಿಯಲ್ಲಿಹುದು ನಡೆ ಬಾಲಕನೆನೆ ಕಡುಭಯದಲಿ ಧೃವ ಒಡನೆ ಹರಿಯ ಪಾದ ಬಿಡದೆ ಧ್ಯಾನಿಸೆ ದೃಢವರವಿತ್ತ ಹರಿ (ಕಡೆ ಹಾಯಿಸಲು) 3 ಕರಿಯ ಕಂಬದ ತೆರದಿ ನಿಲಿಸೆ ನಕ್ರ ಪೊರೆದವನಾರೋ ಹರಿಯಲ್ಲದೆ ಶರಣಾಗತ ಚಿಂತಾಮಣಿ ಎನೆ ಕರಿ ಪರಿದು ಚಕ್ರನಿ ನಕ್ರನ ಬೇಗ 4 ಏಕಾದಶಿವ್ರತ ಏಕಭುಕ್ತನ ನೀರೆಡಿಸೆ ಮಾನುನಿ ಬರಲು ಹರಿತಾ ಕರುಣಿಪನೆಂದು ತರಳನ ಶಿರಕೆ ಕೈಹಾಕೆ ಶ್ರೀ ಶ್ರೀನಿವಾಸನ ಸುತತಾ ಕರುಣಿಸಿದ 5
--------------
ಸರಸ್ವತಿ ಬಾಯಿ
ನಿಂದೆ ಮಾಡುವಿ ಯಾತಕೋ | ಮಂದಮಾನವ ಶ್ರೀಗೋವಿಂದ ದಾಸಾರ್ಯರನ್ನ ಎಂದೆಂದಿಗೀಮಾತು | ಇಂದಿರೇಶನ ಭಕುತ ವೃಂದ ಮೆಚ್ಚುವದಿಲ್ಲವೋ ಮೂಢ ಪ ಬಾಲತನದಾರಭ್ಯ ಶೀಲ ಸದ್ಭಕುತಿಯಲಿ ತಾಳ ತಂಬೂರಿ ಪಿಡೆದು | ಶ್ರೀಲೋಲ ಹರಿನಾಮ ಹೇಳುತಲಿ ಸತತ | ಗೋಪಾಳ ವೃತ್ತಿಯ ಮಾಡಿ ಕಾಲವನು ಕಳೆದವರು 1 ಕುಸುಮಶರನಟ್ಟುಳಿಗೆ ವಶವಾಗದಿರಿ ಎಂದು ಉಸುರುತಲಿ ಶಿಷ್ಯಗಣಕೆ | ಅಸುರಾರಿ ಮಹಿಮೆಯನು ರಸವತ್ ಕವಿತೆಯಲಿಂದ ನಿಶಿ ಹಗಲು ವರ್ಣಿಸಿದ ಅಸಿಫ್ಯಾಳು ನಿಲಯರನು 2 ಕ್ಲೇಶ ಸುಖ ಸಮ ತಿಳಿದು ಲೇಸಾಗಿ ಗುರುಸೇವೆಗೈದು ವಾಸಸ್ಥಾನಕೆ ತೆರಳಿದೀ ಸುಗುಣರನು ವ್ಯರ್ಥ ನಿಂದೆ ಮಾಡುವಿ ಯಾಕೋ 3
--------------
ಶಾಮಸುಂದರ ವಿಠಲ
ನಿಂದೆಯಾಡಬೇಡೋ ಪರ ನಿಂದೆ ಮಾಡಬೇಡೋ ಪ ಇಂದಿರೇಶನಪಾದಗ್ಹೊಂದಿ ಭಜಿಪರಿ ಗೊಂದನೆ ಮಾಡೋ ಅ.ಪ ಕುಂದುವರಿಯಬೇಡೋ ಮನಸೇ ಮಂದನಾಗಬೇಡೋ ಎಂದಿಗಾದರು ಒಂದಿನ ಈ ಜಗ ಕುಂದಿಪೋಗುವ ಭವಬಂಧಕ್ಕೀಡಾಗಬೇಡೋ 1 ಕೋಪಗೊಳ್ಳಬೇಡೋ ಮನಸೇ ಪಾಪಕ್ಹೋಗಬೇಡೋ ಗೌಪ್ಯವಳಿಯಬೇಡೋ ಶಾಪಕೊಳ್ಳಬೇಡೋ ಆ ಪರಬ್ರಹ್ಮನ ಶ್ರೀಪಾದಪಾಡೋ 2 ಸೊಕ್ಕು ಮಾಡಬೇಡೋ ಯಮನ ಲೋಕಕ್ಹೋಗಬೇಡೋ ಏಕಚಿತ್ತದಿ ಲೋಕೈಕ ಶ್ರೀರಾಮನ ಭಕುತಿಂ ಭಜಿಸಿ ಮುಕುತಿಯ ಕೂಡೋ 3
--------------
ರಾಮದಾಸರು
ನಿರುತದಿ ಭಜಿಪೆನಾ ಭರತನ ರಾಣಿಯೇ ಭಾರತಿಯೇ ಪ ಗುರುವರಂತರ್ಗತ ಹರಿಭಕ್ತಿ ಪಾಲಿಸೇ ಭಾರತಿಯೇ ಅ.ಪ ಕಾವೋದು ಬಾಲನ ಸೇವೆ ನೀಕರಿಸದೆ ಭಾರತಿಯೇ ಶಿವಮುಖ ಸುರ ಸಂಸ್ತವಕೆ ಸುಪ್ರೀತಳೆ ಭಾರತಿಯೇ 1 ಕಾಳೀದ್ರೌಪದಿ ಶಿವಕನ್ಯಳೆಂದೆನಿಸಿ ಭಾರತಿಯೇ ನಳನಂದಿನಿ ಮನ ಕೊಳೆಯ ತೊಳೆಯಬೇಕೇ ಭಾರತಿಯೇ 2 ವಂದಿಪೆ ನಿನಗಿಂದ್ರೇಶನಳೆಂದೆನಿಸಿದಿ ಭಾರತಿಯೇ ಕಂದನ ಕುಂದುಗಳೊಂದೆಣಿಸದೆ ಕಾಯೇ ಭಾರತಿಯೇ 3 ಕಾಲಾಭಿಮಾನಿಯೆ ಶೈಲಜೆ ಶ್ಯಾಮಲ ಭಾರತಿಯೇ ವಾಲಗ ಕೈಕೊಂಬೆ ಭಾರತಿಯೇ 4 ಹರಿಯ ಹಿರಿಯ ಸೊಸಿ ಪರಮ ಪದಕೆ ಬರುವಿ ಭಾರತಿಯೇ ಕರುಣಾದಿ ಭಾರತಾದ್ಯರ್ಥವರುಹೆ ನಿತ್ಯಾ ಭಾರತಿಯೇ 5 ಯೋಗಿ ವಿನುತ ಚರಣಳೆ ಎನ್ನ ಭಾರತಿಯೇ ಹೀನ ಬುದ್ಧಿಯ ಕಳಿ ಜ್ಞಾನಮಾರ್ಗವ ತೋರೆ ಭಾರತಿಯೇ6 ಮಾನಾಭಿಮಾನ ನಿನ್ನಾಧೀನ ಎನಗೆ ನೀ ಭಾರತಿಯೇ ಪಾದ ಮನದಿ ತೋರಿಸೇ ನಿತ್ಯಾ ಭಾರತಿಯೇ 7
--------------
ಪ್ರದ್ಯುಮ್ನತೀರ್ಥರು
ನೀ ಬಾರದಿರೆ ಬಾರನು ಶ್ರೀ ನರಹರಿ ಪ ನೀ ಬಾರದಿರೆ ಬಾರ ನೀರಜಾಕ್ಷನು ಹರಿನಾನು ನಂಬಿದೆ ನಿಮ್ಮ ನೀವು ಪಾಲಿಸಬೇಕು ಅ.ಪ. ನೀನು ಆತನ ಕಾಯ್ದಿ ತಾನು ಆತನ ಕಾಯ್ದನೀನು ಬಿಡಲು ಬಿಟ್ಟ ಭಾನುಸುತನ ಕೃಷ್ಣ 1 ನಿಮ್ಮ ಮಾತುಗಳನ್ನು ಒಮ್ಮೆ ಮೀರನು ಹರಿನಮ್ಮ ಬಿಡುವುದ್ಯಾಕೊ ಬ್ರಹ್ಮ ಪದಾರ್ಹನೆ 2 ಇಂದು ನಾಳೆನ್ನದೆ ಆನಂದತೀರ್ಥರೆ ನಮ-ಗಿಂದು ತೋರಿಸು ಹರಿಯ ಇಂದಿರೇಶನ ಪ್ರೀಯ 3
--------------
ಇಂದಿರೇಶರು
ನೀನೆ ಕೃಪಾಳು ಶ್ರೀ ಚನ್ನಕೇಶವನೇ ಜ್ಞಾನಿಗಳನ್ನು ಕಾವ ಸನಕವಂದಿತನೆ ಪ ಶರಣರ ಪೊರೆಯುವ ಪ್ರಣವ ಸ್ವರೂಪನೆ ಸ್ಮರಿಸುವ ದಾಸರ ಮರೆಯ ಬೇಡಯ್ಯ ಅ.ಪ. ದೀನರ ಸಲಹುವ ಭಕ್ರವತ್ಸಲನೇ ಮಾನಿನಿ ದ್ರೌಪದಿ ಮಾನ ಕಾಯ್ದವನೇ ಮೌನದಿಂದಲಿ ನಿಂನ ಧ್ಯಾನ ತತ್ವರನಾದೇ ಪನ್ನಗಶಯನನೇ ಸಲಹೊ ಕರುಣದಲೀ1 ಸನ್ನುತ ಹರಿ ನಿಂನ ಕೀರ್ತನೆ ಪಾಡುವೆ ಜಾನ್ಹಕಿ ರಮಣ ಶ್ರೀ ಕಾಕುತ್ಸ್ಥರಾಮಾ ಹೀನನ ಮಾತನ್ನು ನಲಿಯುತ್ತ ಕೇಳಿ ನೀ ಸಾನುರಾಗದಿ ಕಾಯಾ ಧೇನು ಪಾಲಕನೇ2 ಪಂಕಜನೇತ್ರ ಶ್ರೀ ಪರಮ ಪಾವನನೇ ಲಂಕೇಶನಿಗೆ ಯಮನಾದ ಶ್ರೀಧರನೇ ಶಂಕೆಯಿಲ್ಲದೆ ಕಾಯೊ ದೂರ್ವಾಪುರೇಶನೆ ಅಮಿತ ಸದ್ಗುಣಿಯೇ 3
--------------
ಕರ್ಕಿ ಕೇಶವದಾಸ
ನೀನೆ ದಯಮಾಡಲು ನಾನುದ್ಧಾರಾಗುವೆನು ಏನೇನು ಪರಲೋಕ ನಾನರಿಯೆ ಶ್ರೀಹರಿಯೆ ಪ ಹೀನಸಂಸಾರದೊಳಗೆ ಮುಳುಗಿ ಶ್ವಾನನಂದದಿ ಕರಗಿ ಕೊರಗಿ ಜ್ಞಾನಶೂನ್ಯನಾಗಿ ಬಳಲುವೆ ಜ್ಞಾನಮೂರುತಿ ಅಭಯ ಪಾಲಿಸು ಅ.ಪ ಉದಯದಲ್ಲೇಳುತ ಸದಮಲ ತವಪಾದ ಮುದದಿಂದ ನೆನೆಯದೆ ಅಧಮತನದಿ ವಿಧವಿಧದಿ ಅಧಮಜನರ ಸುದ್ದಿ ವದನದಿಂದಾಡುತ ಮುದಿಕೋಣನಂದದಿ ಮದಮುಚ್ಚಿ ನಡೆದೆ ಎಡಬಿಡದೆ ಕುದಿದೆನನುದಿನ ಪರರ ಮನೆ ಸಂ ಪದವ ನೋಡಿ ಸಹಿಸದವರ ಸದನ ಮುರಿಯುವ ಬುದ್ಧಿ ಹುಡುಕಿದೆ ಪದುಮನಾಭಪರಾಧ ಕ್ಷಮಿಸಿ1 ಒಂದು ನಾನರಿಯದೆ ಮುಂದೆ ಭಲಾಯೆಂದು ಹಿಂದೆ ನಿಂದಿಸಿ ನಕ್ಕೆ ದ್ವಂದ್ವಕರ ಬಡಿದು ಬಲು ಜರಿದು ಹಂದ್ಯಮೇದ್ಯಕಂಡಾನಂದಿಪತೆರದನ್ಯ ಸುಂದರಿಯರ ನಯನದಿಂದ ನೋಡಿದೆ ಎವೆಯಿಕ್ಕದೆ ಇಂದಿರೇಶನೆ ನಿಮ್ಮ ಪಾದವ ಒಂದೆ ಮನದಿಂ ಭಜಿಸದೆ ಭವ ದಂದುಗದಲಿ ಬಿದ್ದು ನೊಂದವ ಕಂದನೊಳು ಕೃಪಾದೃಷ್ಟಿಯಿತ್ತು 2 ದಾಸಜನರ ಆವಾಸ ನಾ ಬಯಸದೆ ಈಷಣ ಪ್ರಪಂಚದ್ವಾಸನದಲ್ಲಿ ಬಹು ತೊಳಲಿ ಆಸೆಯೆಂಬುವ ಮಹಪಾಶದಬಲೆಯೊಳು ಘಾಸಿಯಾಗುವೆ ಸಿಲ್ಕಿ ಸೋಸಿ ನೋಡದಲೆ ಮರೆ ಮೋಸದಲಿ ದಾಸ ಬುದ್ಧಿಯಿಂದ ಮಾಡಿದ ಬಲು ದೋಷರಾಶಿಗಳೆಲ್ಲ ನಾಶಿಸಿ ಶ್ರೀಶ ಶ್ರೀರಾಮ ನಿಮ್ಮ ಪಾದ ದಾಸನಿಗೆ ನಿಜಧ್ಯಾಸ ನಿಲ್ಲಿಸು 3
--------------
ರಾಮದಾಸರು
ನೀರಜಾಕ್ಷನೆ ಚಾರುರೂಪನೆಸೇರಿ ಚಿತ್ತದೊಳು ಮೋರೆ ತೋರಿಸೀಗಾ ಪ ಎಷ್ಟು ಭಕ್ತರಾಭೀಷ್ಟ ನೀಡಿದಿವೃಷ್ಣಿವರ್ಯನೆ ಭೆಟ್ಟಿ ಪಾಲಿಸೀಗಾ 1 ಮುಷ್ಠಿ ಅವಲಿಯಾ ಕೊಟ್ಟ ವಿಪ್ರಗೆ ಕೊಟ್ಟೆ ಸಂಪದವಾಭೀಷ್ಟದಾಯಕನೆ 2 ಇಂದಿರೇಶನೆ ಬಂಧ ಮೋಚನೆ ಗೈದು ಬಂದು ಕಾಯೋ ನಂದ ಬಾಲಕನೇ 3
--------------
ಇಂದಿರೇಶರು
ನೋಡಿ ದಣಿಯವೆನ್ನ ಕಂಗಳು ಈ ಸೋದೆಲಿರುವ ಈಡು ಇಲ್ಲದುತ್ಸವಂಗಳ ಬೇಡಿದವಗೀ ಧ್ವಜಬುತ್ತಿ (?) ನೀಡಿ ದಯಸೂರ್ಯಾಡುವರ ಪ ಯತಿಗಳ ಸಮೂಹವೆಷ್ಟು ಮಿತಿಯಿಲ್ಲದ ಬ್ರಾಹ್ಮಣ್ಯವೆಷ್ಟು ಮತಿಹೀನರಿಗೆ ಗತಿಯ ಕೊಡುವ ಪೃಥಿವಿಗಧಿಕ ಗುರುಗಳನ್ನು 1 ಭೂತನಾಥಗೆರಗಿ ನಿಂತು ವಾತಸುತಗೆ ಕೈಯ ಮುಗಿದು ಆತ ನಾರಾಯಣಭೂತನೆಂಬೋ ನೀತವಾದ ದೂತನಂತೆ2 ಕೊಳಲ ಕೃಷ್ಣ ಧವಳಗಂಗಾ ಹೊಳೆಯೊ ಮುತ್ತಿನ ಗದ್ದಿಗೆ ಮ್ಯಾಲೆ ಕಳೆಯು ಸುರಿವೊ ಕಮಲಪಾದ ಇಳೆಯೊಳ್ ಇಲ್ಲೀಳಿಗೆಯ ಪೂಜೆ 3 ಸನಕಾದಿ ಸುರೇಶನೆದುರು ಕಣಕ ಹ್ವಾಲಗ (ಹೋಳಿಗೆ?)ವನ್ನೆ ಮಾಡಿ ಮನಕೆ ಬಂದ ಮೃಷ್ಟಾನ್ನವನು ಜನಕೆ ತೃಪ್ತಿಬಡಿಸುತಿರಲು 4 ಸುತ್ತ ವೃಂದಾವನದ ಮಧ್ಯೆ ಉತ್ತಮರಾದ ವಾದಿರಾಜರು ಸತ್ಯವತಿಯ ಸುತರ ಎದುರು ನಿತ್ಯಾನಂದಭರಿತರಾಗಿ 5 ಸೃಷ್ಟಿಗಧಿಕಾನಂತಾಸನವು ಶ್ವೇತದ್ವೀಪ್ವೈಕುಂಠವೆಂಬೊ ಮುಕ್ತಸ್ಥಳದಲ್ವಾಸವಾದ ಲಕ್ಕುಮಿ ತ್ರಿವಿಕ್ರಮನ 6 ನೇಮನಿಷ್ಠ ಸೇವಕ ಜನಕೆ ಬೇಡಿದ ಇಷ್ಟಾರ್ಥ ಕೊಡುವೊ ಭೀಮೇಶಕೃಷ್ಣ ದಯದಿ ನೋಡಿದೆ ಹಯವದನನಂಘ್ರಿ 7
--------------
ಹರಪನಹಳ್ಳಿಭೀಮವ್ವ
ನೋಡಿ ನಿನ್ನನು ಧನ್ಯಳಾದೆನು ಮಾಡಿ ಕೃಪೆಯನು ಮನ್ನಿಸೂಬೇಡಿಕೊಂಬೆನು ಭವವ ಮುಂದಕೆ ನೀಡದಂಘ್ರಿಯೊಳೊಂದಿಸೂ ಪಕೃಷ್ಣ ನಿನ್ನನು ಮುದ್ದನಾಡುತ ಕಷ್ಟವನು ಕಡೆಗಾಂಬೆನೂಇಷ್ಟದೈವವು ನನ್ನ ಜಠರದಿ ಪುಟ್ಟೆ ನಿನ್ನನು ಕಂಡೆನೂದುಷ್ಟಕರ್ಮಗಳೆಲ್ಲವನು ನೆರೆ ನಷ್ಟಗೈಯುವ ದೇವನೂಪುಟ್ಟಮಗುವಾಗಿರಲು ಕೇಶವ ಮುಟ್ಟಿಲಾಲಿಪಳಾದೆನೂ 1ಬಟ್ಟಚೆಲು'ನ ರತ್ನದರಳೆಲೆ ಕಟ್ಟಿ ಬೊಪ್ಪದೊಳೊಲೆಯಲೂಪುಟ್ಟ ಮಾಗಾುಗಳು ಕಿ'ಗಳವಟ್ಟು ಕದಪುಗಳೊಪ್ಪಲೂನಟ್ಟನಡು ಪಣೆಯಲ್ಲಿ ಕತ್ತುರಿಬಟ್ಟು ಬೆಡಗನು ಬೀರಲೂಇಟ್ಟ ಕಪ್ಪಿನ ಕಣ್ಗಳೆಸೆಯಲು ಬಿಟ್ಟಬಾಯಲಿ ಸ'ಯಲು 2ಮುತ್ತು ರತ್ನಗಳನ್ನು ತೆತ್ತಿಸಿ ಸುತ್ತಕಾಂತಿಯ ಬೀರುವಉತ್ತಮದ ಮಕುಟವನು ನಿನ್ನಯ ನೆತ್ತಿಗಿಡುವೆನು ಕೇಶವಮತ್ತು ಕಂಕಣಗಳನು ಕರಗಳಿಗಿತ್ತು ಕಟ್ಟುವೆ ಪವಳವಾಸತ್ಯವಂತನೆ ನೀನು ಶಿಶುತನವೆತ್ತೆ ಪಡೆದೆನು ಭಾಗ್ಯವಾ 3ಸನ್ನುತನೆ ಪದಕಗಳ ಸರಗಳ ನಿನ್ನ ಕೊರಳಿಗೆ ಕಟ್ಟಿಚಿನ್ನ ಮುಕ್ತದಿ ಪೊಳೆವ ಕೌಸ್ತುಭವನ್ನು ಉರಕಳವಡಿಸುವಾರನ್ನ ಮಾಣಿಕದುಡಿಯ ಸೂತ್ರಗಳನ್ನು ಕಟಿಯಲಿ ರಚಿಸುವಾಇನ್ನು ಬಹು'ಧವಾಗಿ ಮನ್ನಿಪುದನ್ನು ವ'ಸಿದೆ ದಾಸ್ಯವಾ 4ಕಟ್ಟಿ ಘಂಟೆಯ ಸರವ ಕಟಿಯಲಿ ಪುಟ್ಟ ಶ್ರೀಮೃದುಪಾದವಾಮುಟ್ಟಿ ಕೈುಂದಂದುಗೆಗಳ ನಾನಿಟ್ಟು ಘಲಿಘಲಿಗುಟ್ಟುವಾಬಟ್ಟಗೆಜ್ಜೆಯ ಸಣ್ಣಸಾಲ್ಗಳ ದಟ್ಟಗೊಳಿಸೀಯೆಂದವಾನೆಟ್ಟದ್ಟೃಯಲೀಕ್ಷಿಸುತ ಹೊರಗಟ್ಟಿಬಿಟ್ಟೆನು ಕ್ಲೇಶವಾ 5ಒಂದು ಸ್ತನವನು ಸ'ಯುತಲೆ ಮತ್ತೊಂದು ಸ್ತನವನು ಕರದಲಿತಂದು ವದನದೊಳಿಟ್ಟು ದಣಿಯುತ ಮಂದಹಾಸದ ಮುಖದಲಿಇಂದಿರೇಶನೆ ನಿನ್ನ ನೋಡುತ ಇಂದು ಸಲ'ದೆ ಕೃಪೆಯಲಿವಂದಿಪರು ನಿನ್ನಡಿಗೆ ಸುರಮುನಿವೃಂದ ಭಾ'ಸಿ ಮನದಲಿ 6ಸಕಲ ಲೋಕಾಧಾರನಾಗಿಯೆ ಸಕಲ ಜೀವರ ಸಾಕ್ಷಿಯೆಪ್ರಕಟವಾಗೆನಗೀಗ ತೋರಿದೆ ಮುಕುತಿದಾಯಕ ಮೂರ್ತಿಯೆಭೃಕುಟಿಯಲಿ ನಿರ್'ುಸಿದ ಮಾಯೆಯ 'ಕರಿಸುವನುಸಾರಿಯೆಚಕಿತಳಿಗೆ ನನಗೊಲಿದೆ ತಿರುಪತಿ ವೆಂಕಟನಡಿಗೆ ಸ್ವಾ'ುಯೆ7
--------------
ತಿಮ್ಮಪ್ಪದಾಸರು