ಒಟ್ಟು 1722 ಕಡೆಗಳಲ್ಲಿ , 107 ದಾಸರು , 1032 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇದರೊಳಾರೈಯ್ಯ ನೀನು ಆತ್ಮಾ ವದಗಿ ನಾನೆಂದ ಹಂಕರಿಸಿ ಓಯಂದೆಂಬೆ ಪ ನೋಡುವವನೊಬ್ಬ ತಾ ಕೇಳಲರಿಯನು ನುಡಿಯ ನೋಡಲರಿಯನು ಕೇಳುವವ ರೂಪವಾ ಆಡುವವ ನುಡಿಯೊಬ್ಬ ಪರಿಮಳಂಗಳ ತಿಳಿಯಾ ಅಡಲರುವಿಲ್ಲ ಘ್ರಾಣೇಂದ್ರಿಯವನೆ 1 ಕೊಡುವವಗೆ ನುಡಿಯಿಲ್ಲ ನಡೆವವಗೆ ಕರವಿಲ್ಲಾ ಬಿಡದೆ ಚೇಷ್ಟಿಸುವವಗ ರೂಪವಿಲ್ಲಾ ಒಡನಾರು ಮೂರು ಇಪ್ಪತ್ತೈದು ಕೂಟದಲಿ ಗಡಣದಿಂದಿಹ ಮನೆಗೆ ಕ್ಷೇತ್ರಜ್ಞನೊಬ್ಬನಿಹ 2 ತನ್ನ ನಿಜ ತಾನರಿಯ ಧನ್ಯ ತಾನೆಂತೆಂಬೊ ನಿನ್ನ ಬಲ್ಲವಿಕಿಗಿದು ನೋಡುಚಿತವೆ ಇನ್ಯಾರೆ ತಂದೆ ಮಹಿಪತಿ ಬೋಧವನು ಸವಿದು ಕಣ್ಣದರೆದಚ್ಯುತನ ನೆನೆದು ತಿಳಿಯೋ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಇಂದಿರೇಶನು ಮಣಿನಂದಿನೀ ತೀರದಿ ಚೆಂದದಿ ಕೊಳಲೂದುತಿರಲು ಹರಿ ಆ- ನಂದದಿ ಕೊಳಲೂದುತಿರಲು ಅಂಬುಜಾಕ್ಷಿಯರು ಕೇಳತಿ ಮೋಹತನದಿ ಗೋ- ವಿಂದನಿದ್ದಲ್ಲೆ ನಡೆದರು 1 ಕರ ಸಡಿಲ ಬೀಳುತಲಿರೆ ಪರವಶವಾಗಿ ನಾರಿಯರು ದೇಹ ಪರವಶವಾಗಿ ನಾರಿಯರು ಕರುಗಳ ತೊಟ್ಟಿಲೊಳಗೆಯಿಟ್ಟು ಪಾಡುತ ಭರದಿಂದ ತೂಗಿ ನಡೆದರು 2 ಉಕ್ಕುವೊ ಹಾಲಿಗೆ ಉರಿ ಮಾಡಿ ಮತ್ತಿಷ್ಟು ಮಕ್ಕಳ ಕಣ್ಣಿಗೆ ಬಿಗಿದು ಅಳುವೊ ಕೃಷ್ಣನಿದ್ದಲ್ಲೆ ನಡೆದರು 3 ಕುಂಭಿಣಿಪತಿ ನೋಡೋ ಸಂಭ್ರಮದಿಂದಲಿ ಅಂಬರವನೆ ಬಿಟ್ಟು ಕೆಲರು ತಾವು (ಉ) ಟ್ಟಂಬರವನೆ ಬಿಟ್ಟು ಕೆಲರು ಕಂಚುಕ ಕಬರಕ್ಕೆ ಸುತ್ತಿ ನಡೆದರು 4 ಪಂಚಭಕ್ಷ ಪರಮಾನ್ನ ಘೃತವು ಕ್ಷೀರ ಪತಿಸುತರಿಗೆ ಉಣ ಬಡಿಸಿ ತಮ್ಮ ಮತಿಭ್ರಾಂತರಾಗಿ ಮ್ಯಾಲೆಡೆಗಳನಿಕ್ಕದೆ ಸತಿಯರು ಸಾಗಿ ನಡೆದರು 5 ಪಂಚರತ್ನದ ಹಾರಪದಕ ಕಠಾಣಿಯ ಟೊಂಕಕ್ಕೆ ಸುತ್ತಿ ನಾರಿಯರು ಸರವ ಟೊಂಕಕ್ಕೆ ಸುತ್ತಿ ನಾರಿಯರು ಪಂಚಮುಖದ ಪಟ್ಟಿ ಕಂಠದಲ್ಲಿಟ್ಟರು ವೈ- ಕುಂಠಪತಿಯ ನೋಡೋ ಭರದಿ 6 ಕಂಕಣ ಬಳೆ(ಡೋ)ರ್ಯ ಕಾಲಿನಲ್ಲೇರಿಸಿ ಕಿಂಕಿಣಿ ಕಿರುಗೆಜ್ಜೆ ರುಳಿಯು ಕಾಲ ಕಿಂಕಿಣಿ ಕಿರುಗೆಜ್ಜೆ ರುಳಿಯು ಪಂಕಜಾಕ್ಷೇರು ನಳಿತÉೂೀಳಿನಲ್ಲೇರಿಸಿ ಅ- ಲಂಕಾರವಾಗಿ ನಡೆದರು 7 ಮುತ್ತಿನ ಬಟ್ಟರಳಲೆ ಚಂದ್ರರಾಗಟೆ ಕಟ್ಟಿದರೊಂದೊಂದು ಕಿವಿಗೆ ಚೌರಿ ಅರಳು ಮಲ್ಲಿಗೆ ಮಾಲೆ ದಿಕ್ಕಿ ಗೊಂದೊಂದುದುರುತಲಿ 8 ವಾಲೆ ಮೂಗುತಿ ವೈಯಾರದ ಬಾವುಲಿ ಕೂ- ದಲಿಗೊಂದೊಂದು ಸಿಗಿಸಿ ತಮ್ಮ ಕೂ- ದಲಿಗೊಂದೊಂದು ಸಿಗಿಸಿ ಮಾರನಯ್ಯನ ಮೋರೆ ನೋಡಲು ಮದ- ವೇರಿದ ಗಜದಂತೆ ನಡೆದರು 9 ಹಲ್ಲಿಗೆ ಕುಂಕುಮ ಗಲ್ಲಕ್ಕೆ ಕಾಡಿಗೆ ಚೆಲ್ವ ಹಣೆಗೆ ಅರಿಷಿಣವ ತೀಡಿ ಚೆಲ್ವ ಹಣೆಗೆ ಅರಿಷಿಣವ ಫುಲ್ಲಾಕ್ಷದಲ್ಲಿ ಕಸ್ತೂರಿ ತಿಲಕವನ್ನಿಟ್ಟು ಗೊಲ್ಲ ಸತಿಯರು ನಡೆದರು 10 ಭಕ್ತಿಭಾವದಿ ಚಿತ್ತ ಪರವಶವಾಗಿದ್ದ ಮಿತ್ರೆಯರನೆ ನೋಡಿ ನಗುತ ಬರುವೊ ಮಿತ್ರೆಯರನೆ ನೋಡಿ ನಗುತ ಕತ್ತಲೊಳಗೆ ದಿಟ್ಟತನದಿಂದ ಬರುವುದಿ- ದಾಶ್ಚರ್ಯವೆಂದ ಶ್ರೀಕೃಷ್ಣ 11 ಏನು ಕಾರಣ ನೀವು ಬಂದಿರಿ ವನಕಿನ್ನು ಭಾನು ತಾ ಉದಿಸದ ಮುಂದೆ ಅರುಣ ಮಾನದಿಂದಲಿ ಮನೆಗಳಿಗೆ ಹೋಗಿರಿ ಎಂದು ದಾನವಾಂತಕ ಕೃಷ್ಣ ನುಡಿದ 12 ದೇವಾಧಿದೇವ ದೇವಕ್ಕಿ ಸುತನೆ ಕೃಷ್ಣ ತ್ರಿಲೋಕ್ಯಾಧಿಪತಿ ನಿನ್ನ ಬಿಟ್ಟು ಕೇಳೊ ತ್ರಿಲೋಕ್ಯಾಧಿಪತಿ ನಿನ್ನ ಬಿಟ್ಟು ಮಾನವೆಲ್ಲಿಹುದ್ಹೇಳೊ ಮಾವನಾಂತಕನಾದ ಶ್ರೀನಾಥ ರಕ್ಷಿಸೊ ನಮ್ಮ 13 ರಂಗನೆ ನಿನ್ನಂಗಸಂಗವ ಬೇಡುವ ಅಂಗನೇರಿಗೆ ದಯ ಮಾಡೊ ನೀ ಗೋ- ಪಾಂಗನೇರಿಗೆ ದಯ ಮಾಡೊ ಕಂಗಳ ತೆರೆದು ಕಟಾಕ್ಷದಿ ನೋಡುತ ಇಂದೀ ಜಲಕ್ರೀಡೆನಾಡೊ 14 ಭಂಗಾರಾಭರಣದಿ ಕುಂದಣವಿಟ್ಟಂತೆ ಚಂದ್ರ ತಾರದಲ್ಲಿದ್ದಂತೆ ಹರಿ ತಾ ಚಂದ್ರ ತಾರದಲ್ಲಿದ್ದಂತೆ ಮಂದಗಮನೆಯರ ಮಧ್ಯ ಆಡುತ ಗೋಪೀ ಕಂದ ದೃಷ್ಟಿಗೆ ಮರೆಯಾದ 15 ಜಾಜಿ ಮಲ್ಲಿಗೆ ಸಂಪಿಗೆ ಶಾವಂತಿಗೆ ಕಮಲ ಕ್ಯಾದಿಗೆಯೆ ಕಮಲ ಕ್ಯಾದಿಗೆಯೆ ನೀವಿಲ್ಲೆ ಕಂಡಿರ ಯಾದವ ಕೃಷ್ಣನ ತೋರೆ ತೋರೆಂದ್ವೊದರುತಲಿ 16 ಕೆಂದಾವರೆ ಕೆಲದಲ್ಲಿದ್ದ ತಾವರೆ ಕುಂದಕುಸುಮ ಎಳೆ ತುಳಸಿ ತೋರೆ ಕುಂದಕುಸುಮ ಎಳೆ ತುಳಸಿ ಅಂಬುಜನಾಭನಾಲ್ಪರಿದುಡುಕುತಲಿರೆ ಕಂಡರ್ವೊಂದರವಿಂದ ನಖವ 17 ವಂಚಿತಳಾಗಿದ್ದ ವನಿತೆಯ ಮುಖ ನೋಡಿ ಚಂಚಲಾಕ್ಷನ ಸುದ್ದಿ ಕೇಳಿ ತಾವು ಚಂಚಲಾಕ್ಷನ ಸುದ್ದಿ ಕೇಳಿ ಭ್ರಾಂತರಾಗ್ವನದಿ ಶ್ರೀಕಾಂತನ ಸ್ತುತಿಸಲು ನಿಂತ ಮನ್ಮಥನಂತೆ ಬಂದು 18 ಸೂರ್ಯ ಮಧ್ಯ ಮೇಘವು ಪೊಳೆದಂತೆ ಕಾಂತೆಯರನೆ ಕೂಡ್ಯಾಡಿ ಹರಿ ತಾ ಕಾಂತೆಯರನೆ ಕೂಡ್ಯಾಡಿ ಅಂತರಂಗದಿ ನಿಶ್ಚಂಚಲ ಭಕ್ತಿಗೆ ಸಂತೋಷ ಬಡಿಸಿದ ಕೃಷ್ಣ&ಟಿb
--------------
ಹರಪನಹಳ್ಳಿಭೀಮವ್ವ
ಇಂದು ಧರನ ಸಖನಛಂದಾಗಿ ಭಜಿಪ ದೇ | ವಾಂಶ ಸಂಭೂತನೆ ಅ.ಪ. ದಣಿಸುವರ್ದನುಜರೆಲ್ಲಾ | ನೀನರೆ ಎನ್ನಮನಕಭಿಮಾನಿ ಎನಿಸೀ ||ಘನವೇನೊ ನಿನಗಿದು | ದನುಜ ದಲ್ಲಣನೆನಿಸಿಮನದ ಡೊಂಕನು ತಿದ್ದಿ | ಮನುಜ ನೆನಿಸೊಯೆನ್ನ 1 ಮುಕುತಿ ಮಾರ್ಗಕೆ ಸಾಧನಾ | ಎನಿಸಿ ಮೆರೆವ ಭಕುತಿ ವಿರಕುತಿ ಸುಜ್ಞಾನ ||ಸುಖ ತೀರ್ಥ ಮತದೊಳು | ಸುಖಿಸುವ ಸೌಭಾಗ್ಯಸುಖವ ನೀ ಪಾಲಿಸೊ | ಕಕುಲಾತಿಯನೆ ಹರಿಸೀ 2 ಪಂಕಜ ಧ್ಯಾನನಿರುತದಿ ಮಾಳ್ಪನೆ | ಕರಿಗಿರಿ ವಾಸನೇ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಇಂದು ನಿನ್ನಯ ಪಾದಾ ವಂದಿಸುವೆ ನಾನು ಛಂದದಿಂದಾ ಪ. ಮಂದಾರೊದ್ಧರನ ಪಾದಾ ಸೇವಕರೆಂದೆನಿಸಿದಿ ದುರ್ಮಾಯವಾದಿಗಳನು ಜಯಸಿದಿ ಬ್ರಹ್ಮರಾಯನೆಂದೆನಿಸೀದಿ ಅ.ಪ. ಅಂಜನಿಸುತನೆಂದೆನಿಸಿದೆ ಸಂಜೀವನವ ತಂದಿ ಕಂಜಾಕ್ಷಿಮುಖಿಗೆ ಉಂಗುರವನ್ನಿತ್ತಿ ವನವ ಕಿತ್ತಿ ಸಂಜೀವರಾಯನೆ ದುರುಳ ರಾವಣನ ಸಂಹರಿಸಿದಿ ವಿಭೀಷಣನಿಗೆ ರಾಜ್ಯಭಾರದಲ್ಲಿ ನಿಲ್ಲಿಸಿದಿ ಅಯೋಧ್ಯನಗರಿಗೆ ತೆರಳಿದಿ 1 ಕುಂತಿಯಾ ಕಂದಾ ಕೌರವಾದಿಗಳ ಕೊಂದ ಯುದ್ಧದಲ್ಲಿ ಪ್ರಚಂಡಾ ಭಾರತಿಗೆ ಗಂಡಾ ಲಂಡದುಷ್ಯಾಸನನ ತುಂಡು ತುಂಡುಮಾಡಿ ಸೀಳಿದ ವಿರಾಟ ನಗರದಿ ಸಂಚರಿಸಿದಾ ಕೀಚಕಾದಿಗಳ ಸಂಹರಿಸಿದಾ ಪಾಂಚಾಲಿಗೆ ಸೌಗಂಧೀಕುಸುಮವನೆ ತಂದಾ ಆನಂದಾ 2 ಮಧ್ಯಗೇಹನಲ್ಲಿ ಉದ್ಭವಿಸಿದೆಯೋ ನೀ ಇಲ್ಲಿ ಅದ್ವೈತ ಮತವೆಲ್ಲಾ ಕಾಲಿಲೆ ವದ್ಯೋ ಗೆದ್ಯೋ ಮಧ್ವಮತವೆಲ್ಲ ಉದ್ಧಾರ ಮಾಡಿದಾ ಬದರಿಕಾಶ್ರಮಕೆ ಪುನರಪಿ ಪೋದಾ ವ್ಯಾಸಮುನಿ ಪಾದಕೆ ಅಭಿವಂದಿಸಿದಾ ಉಡುಪಿಯೊಳು ಕಾಳಿಮರ್ಧನಕೃಷ್ಣನು ನಿಲ್ಲಿಸಿದಾ 3
--------------
ಕಳಸದ ಸುಂದರಮ್ಮ
ಇದು ಎಲ್ಲಾ ಇದು ಎಲ್ಲಾ ಏನಾರೆಂಬುದ ಬಲ್ಲ್ಯಾ ಪ ತನುವಿದು ಮೊದಲಿಗೆ ನಿನ್ನದಲ್ಲಾ || ತನು ಸಂಬಂಧದ ಗುರುತು ಬಿಡಲಿಲ್ಲಾ 1 ನಿಜವೆನುತಲಿ ಆಶೆಯ ಕಚ್ಚಿ ಅಜಹರಿಹರರಾದರು ಕೇಳೇ ಹುಚ್ಚಿ 2 ಗುರುಭವತಾರಕನ ನಿಜವಾದ ಭಕ್ತಾ | ಅರಿತು ಆದನು ಜೀವನ್ಮುಕ್ತಾ 3
--------------
ಭಾವತರಕರು
ಇಂದು ಕಾಯಲಾ ಭಕ್ತವತ್ಸಲಾ ಬಂದು ಒದಗಿ ನಿಂದು ಭಯವ ದೂರ ಮಾಡಲಾ ಧ್ರುವ ಮೊರಿಯು ಕೇಳೆಲಾ ಹರಿಯು ನಿಶ್ಚಲಾ ದುರಿತ ಹರಿಸೆಲಾ 1 ಸುಳವದೋರಲಾ ಹೊಳೆದು ವಿಠ್ಠಲಾ ಖಳರ ಕೈಯ ಸೆಳೆದುಕೊಂಡು ಬಲೆಯ ಬಿಡಿಸೆಲಾ 2 ಬಂಧುಬಳಗ ದೈವ ಕುಲಕೋಟಿ ನೀನೆಲಾ3 ಹಿಂದೆ ಶರಣರ ಬಂದು ಕಾಯ್ದೆಲಾ ಸಂದು ವಿಘ್ನದೊಳು ಬಂದು ರಕ್ಷಿಸಿದೆಲಾ 4 ಅಂದು ಒದಗಿ ನೀ ಬಂದ ಪರಿಯಲಾ ಇಂದು ಅಭಿಮಾನ ಕಾವ ಬಿರುದು ನಿನ್ನದಲ್ಲಾ 5 ದಾತ ನೀನೆಲಾ ಅಣುಗ ನಿನ್ನ ದಾಸನೆಂದು ಪ್ರಾಣನುಳುಹೆಲಾ 6 ಪುಣ್ಯಪ್ರಭೆಯಿಂದಾ ಕಣ್ಣುದೆರಿಯಲಾ ಧನ್ಯಗೈಸಿ ಮಹಿಪತಿ ಮಾತ ಮನ್ನಿಸೆಲಾ 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇಂದು ನೀ ಕರೆದು ತಾರೆ ಬೇಗನೆ ಪೋಗಿ ಚನ್ನವೆಂಕಟರಾಯನ ಮೊನ್ನೆ ಆಡಿದ ಮಾತು ಒಂದೂ ನಿಜವಲ್ಲಾ ರನ್ನೆ ಈಗಲೆಪೋಗಿ ssssssಸನ್ನೆ ಮಾಡಿಬಾರೆ ಪ. ಅಂಗಜನಯ್ಯನ ಕಾಣದೆ ನಾನು ಹಿಂಗಿರಲಾರೆ ನಮ್ಮಾ ಕಂಬುಕುಚದ ಬಾಲೆ ರಂಗನಾ ಕರತಾರೆ ರಂಗು ಮಾಣಿಕದಹರಳುಂಗುರ ಕೊಡುವೆನು 1 ಕಾಲಿಗೆ ಎರಗುವೆನೆ ಕೋಮಲಮುಖಿ ಆಲಸ್ಯ ಮಾಡದೆಲೆ ನೀಲಕುಂತಳನೀರೆ | ಲೋಲನ ಕರತಾರೆ ವಾಲೆಮೂಗುತಿ ಕಂಠಮಾಲೆಯ ಕೊಡುವೆನು 2 ಮರದಿರಲಾರೆನಮ್ಮಾ ಬೇಗನೆಪೋಗಿ ನೆರವಂತೆ ಮಾಡು ನೀನು ಯರವುತನವುಬ್ಯಾಡಾಮರೆಯಲಾರೆನೆ ನಿಮ್ಮಕರವಪಿಡಿವೆ ಹೆಳವನ ಕಟ್ಟೆರಂಗೈಯ್ಯನ3
--------------
ಹೆಳವನಕಟ್ಟೆ ಗಿರಿಯಮ್ಮ
ಇದು ವಿವೇಕವಲ್ಲಾಪ ಸತ್ಸಂಗವಾರೇ ನೀ ಬಯಸುವಿ ಮದಾ | ಮತ್ಸರಗಳಿದಿಲ್ಲಾ 1 ಬೆಲ್ಲೊಳಗಿನ ಕಲ್ಲಿನಂತಂಗದೊಳಗೆ ಖುಳ್ಳತಣವೇವೆಲ್ಲಾ 2 ಮಹಿಪತಿಜನ ನುಡಿಮನ್ನಿಸಿನ್ನಾರೇ | ಅಹಿತವಗುಣ ಸಲ್ಲಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಇಂದು ಶಿವಯೋಗಾ ಶಿವಯೋಗಾ | ಮುಂದಿಲ್ಲವು ತನು ಭೋಗಾ ಪ ಕೋಟಿ ತೀರ್ಥದಲಿ ಮುಣುಗಿ ಬಂದು | ಕೀಟಕ ಜನರರಿಯರು ಎಂದೆಂದೂ 1 ಎಲ್ಲಿಹುದರಿದರೆ ಗೋಕರ್ಣ | ಇಲ್ಲದಾಯ್ತು ದೇಹದ ವರ್ಣ 2 ಭವತಾರಕನ ಭಜಕನು ಬಲ್ಲಾ | ಭವದೊಳು ಇದ್ದರೂ ಭಯ ಅವಗಿಲ್ಲಾ 3
--------------
ಭಾವತರಕರು
ಇದು ಹೊಂದಿಕೆಯಲ್ಲಾ ಭಕುತಿಗೆ ಪ ಗುರುವೆಂದಾಡುತ ನೆರೆನರನಂಬಿ | ಪರಗತಿ ಮಾರ್ಗವ ಎಂತು ನೀ ಕಾಂಬಿ 1 ಕಲ್ಲಿನೊಳಗ ಹರಿಭಾವಿಸಿ ನುಡಿವೀ | ಇಲ್ಲಿ ನೋಡೆಂದರ ಸಂಶಯ ಹಿಡಿವೀ 2 ನುಡಿಯಾಪಸಾರ ಸಂಗಡಿಯೊಳು ಬೆರೆದು | ಧೃಡಗೊಳ್ಳಲಿಲ್ಲ ವಿವೇಕದ ಸಂದು 3 ಹಮ್ಮಿಲಿ ಕೇಳದೇ ಜ್ಞಾನದ ಗುಟ್ಟು | ಧರ್ಮ ಜರಿದು ಜನ ಹೋಯಿತು ಕೆಟ್ಟು 4 ತಂದೆ ಮಹಿಪತಿ ಕರುಣಿಸದನಕಾ | ಎಂದಿಗೆ ದೊರೆಯದು ಸ್ವಾತ್ಮದ ಸುಖಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಇದೇ ನೋಡಿರೋ ನಿಜನೋಡಿರೋ ಧ್ರುವ ನೋಡಿನೋಡಿ ನೋಡಿ ನೋಡುದರೊಳು ಕೂಡಿ ನೋಡುವದೇನೆಂದು ನೋಡಿ ನೋಡಿದ ಮ್ಯಾಲಿನ್ನು ಮೂಡಿಬಂದರ ಘನ ನೋಡುವದೇ ಖೂನ ಮಾಡಿ ಮಾಡಿದ ಮಾಟವು ಕೂಡಿಬಂದರೆ ಕೈಯ ನಾಡಗೂಡ ಹೇಳಬ್ಯಾಡಿ ಗೂಢ ಗುಹ್ಯದ ಮಾತು ಒಡೆದು ಹೇಳುವದಲ್ಲಾ ನೋಡಿ ನಿಮ್ಮೊಳು ಬೆರೆದಾಡಿ 1 ಓದಿದರೋದಬೇಕಿದೊಂದೇ ಅಕ್ಷರ ಭೇದಿಸುವಂತೆ ಬ್ರಹ್ಮಾಂಡ ಇದೇ ಸಾಧಿಸಿನ್ನು ಮೂಲವ ತಿಳಿಯದೆ ಓದುವದ್ಯಾಕೆ ಉದ್ದಂಡ ಹಾದಿ ತಿಳಿಯದಿದ್ದರೆ ಹೇಳಿಕೊಡುವನು ಸದ್ಗುರು ಘನಪ್ರಪಂಚ ಭೋದಿಸಿ ಬ್ರಹ್ಮಾನುಸಂಧಾನದ ಸುಖ ಉದಯ ಮಾಡುವ ಅಖಂಡ 2 ನಾನ್ಯ ಪಂಥವೆಂಬ ಮಂತ್ರದನುಭವ ಚನ್ನಾಗ್ಯಾಗಬೇಕು ಖೂನ ಇನ್ನೊಂದು ಬ್ಯಾರೆಂಬ ಭಿನ್ನವಳಿದ ಮ್ಯಾಲೆ ತನ್ನೊಳಾಯಿತು ಸಮ್ಯಕಙÁ್ಞನ ಧನ್ಯ ಧನ್ಯ ಧನ್ಯ ಧನ್ಯಗೈಸುವದಿದು ಕಣ್ಣಾರೆ ಕಾಂಬೊ ಸಾಧನ ಉನ್ಮತವಾಗದೆ ಸನ್ಮತದೋರದು ಇನ್ನೊಬ್ಬರ ಕೇಳುವದೇನ 3 ಸರ್ವಮಿದಂ ಖಲು ಬ್ರಹ್ಮವೆಂಬುವ ಮಾತು ದೋರ್ವಾಂಗೆ ನೆಲೆಗೊಳಬೇಕು ಸರ್ವ ಸಾಕ್ಷಿ ಸರ್ವಾಧಾರವು ತಿಳಿಯದೆ ಗರ್ವಿತಲ್ಯಾಡುವ ಮಾತು ಹೋತು ಗುರ್ವಿನಂಘ್ರಿಗಿನ್ನು ಗುರುತವ ಕೇಳದೆ ಮವ್ರ್ಹಿನೊಳೀಹುದು ಮುಸುಕು ನಿರ್ವಿಕಲ್ಪನ ನಿಜ ಸ್ಮರಿಸುವಾಂಗೆ ಕಣ್ಣ ದೆರ್ವದಿದೊಂದೇ ಸಾಕು 4 ತ್ರಾಹಿ ತ್ರಾಹಿ ತ್ರಾಹಿ ತ್ರಾಹಿ ಎಂದು ಗುರುವಿಗೆ ಕೇಳಿ ನಿಜ ವಂದ ದೇಹದ ಒಳಗಿಹ್ಯ ದ್ಯಾವರ ತಿಳಿದರ ಜನ್ಮಕೆ ಬಂದುದು ಚಂದ ಸೋಹ್ಯ ಸೊನ್ನೆಯ ಗುಹ್ಯವ ತಿಳಿದರ ಭವ ಮೂಲದಿಂದ ಬಾಹ್ಯಾಂತ್ರ ಪರಿಪೂರ್ಣ ಭಾಸುತಲ್ಯದೆ ಮಹಿಪತಿಗಿದೆ ಬ್ರಹ್ಮಾನಂದ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇದೇ ಭಕುತಿ ಮತಿಗೆ ಮುಕುತಿ | ಇದಕ್ಕಧಿಕವಾಗಿಪ್ಪ ವಿಧಿಗಳೆಲ್ಲಿಯಿಲ್ಲಾ ಪ ರತುನ ಗರ್ಭದೊಳಗೆ ತಿಳಿ | ರತುನ ಸಮಕ್ಷೇತ್ರಗಳಿಗೆ | ರತುನವೆನ್ನಿ ಯತಿವಂಶ | ರÀತುನ ಮಧ್ವಮುನಿಮಾಡಿದಾ 1 ಪದ ಜೀವಸ್ತರಿಗದೆ ಪಾ | ಪ ಜನರು ಕೃಷ್ಣರಾಯನ ಪಾದವ ನೋಡಿ ನಿತ್ಯಾ | ಸಾಧನಿ ಮನ ಮಾಡಿರಯ್ಯಾ 2 ಏಳು ಒಂದು ಮಠದ ಲೋಕರಂಸೆ ಸದನವೆನ್ನಿ | ಪೇಳಲೇನು ಅವರೇ ಯಿಲ್ಲಿ ಊಳಿಗವ ಮಾಡುತ್ತಿಪ್ಪರು 3 ಮೇರೊ ಪರ್ವತ ತುಲ್ಯವಿದೆ | ವಾರಿಜನೆ ಮಧ್ವರಾಯ | ಈ ರಜತ ಪೀಠವೆ ಮಂದಿರ ಶತಕೋಟಿ ಎನ್ನೀ4 ಮೆರೆವ ಮಧ್ವತೀರ್ಥ ಬಾಹಿರ | ವರಣ ಉದಕವೆನ್ನಿ ಇಲ್ಲಿ | ಚರಿಸುವಂಥ ಸುಗುಣ ತೃಣಾ ದ್ಯರು ಮುಕುತಿ ಯೋಗ್ಯರಹುದು5 ಉಡಪಿ ಯಾತ್ರೆ ಮಾಡಿದವನು | ಪೊಡವಿ ತುಂಬ ಯಾತ್ರೆ | ಬಿಡದೆ ಚರಿಸಿದವನೆ ಎಂದು | ಮೃಡನು ಇಲ್ಲಿ ಸಾರುತಿಪ್ಪಾ 6 ಉಬ್ಬಿ ಸರ್ವ ಇಂದ್ರಿಯಂಗಳಾ | ಹಬ್ಬವಾಗಿ ಸುಖಿಪದಕೆ | ಊರ್ಬಿಯೊಳಗೆ ಉಡುಪಿ ಯಾತ್ರೆ | ಅಬ್ಬದಲೆ ದೊರಕದಯ್ಯಾ 7 ಹಿಂಗಿ ಪೋಗದಕೆ ಇದೇ | ಅಂಗವಲ್ಲದೆ ಬೇರೆ ಇಲ್ಲ | ರಂಗ ಸುಲಭಸಾಧ್ಯಾವಾಹಾ 8 ನೂರು ಕಲ್ಪಧರ್ಮ ಮಾರನಯ್ಯ ವಿಜಯವಿಠ್ಠಲನ | ಸಾರಿ ತಂದು ಕೊಡುವಾ9
--------------
ವಿಜಯದಾಸ
ಇದೇ ಭಕ್ತವರ್ಯನ ಲಕ್ಷಣ ಪಾವನವಿದು ಕಾಣಾ ಪರಮಾತ್ಮನ ರೂಪ ಚರಾಚರದ ಜಗದಲ್ಲಿ 1 ಇದೇ ಪರಿಯಲಿ ಸ್ವರೂಪದಲ್ಲಿ ಜಗವೆಲ್ಲಾ ಕಾಂಬಾ ಆತ್ಮರೂಪ ಭಗವಂತನೆ ಸತ್ಯ ಮಿಕ್ಕವೆಲ್ಲಾ ಮೀಥ್ಯ ಲಕ್ಷ್ಯವೆಲ್ಲಾ ತನ್ನೋಳ ತಿರುಗಿಸಿ ಆನಂದವ ಪಡೆವ ಕಾಣುವನಿವ ಪರಮಾತ್ಮ ಸರ್ವಾತ್ಮ 2 ಸಂಸಾರದಲಿ ವಿಷಯದ ಭೋಗ ಪ್ರಾರಬುಧದಲಿಪಡೆ ಮಾಯೆಮಾತ್ರವಿದು ಎನ್ನುತ ತಿಳಿವಾ 3 ನಿಜಾಸಕ್ತಿ ಪಡೆಯದಲೇ ನಿರುತ ತನ್ನಯ ಹೃದಯಾಂತ ಪರಮಾತ್ಮನ ನೆನೆವ ದೇಹಾದಿಗಳ ಈ ಪರಿಣಾಮಗಳಿಗೇ ಮೋಹಗೊಳಲಾರ ಕಾಮನೆಯಾ ಬೀಜಾಂಕುರವೆಂದೂ ನಾಟದು ಇವನಲ್ಲೀ ಕಾಣುವನಿವ ಪರಮಾತ್ಮ ಸರ್ವಾತ್ಮ ಪ್ರಭೂಶಂಕರನ ರೂಪಾ 4
--------------
ಶಂಕರಭಟ್ಟ ಅಗ್ನಿಹೋತ್ರಿ
ಇದ್ದಿದ್ದೊಮ್ಮೆ ಇಂಥಾ ಕಷ್ಟ ಏನು ತಂದ್ಯೋ ಹರಿಯೆ ಪೊರೆಯಬೇಕೆಂದು ನುತಿಸುವವಗೆ ಪ ಮಧ್ಯಾಹ್ನಕ್ಕೆ ಮನೆಯ ಒಳಗೆ ಮುದ್ದಿಗೆ ಗತಿಯಿಲ್ಲಾ ವಿದ್ಯಾರ್ಥಿಗಳು ಇಷ್ಟರು ಬಂದರೆ ಇಷ್ಟೂ ಅನ್ನವಿಲ್ಲಾ ಎಂದು ಹೋಗುವೆನು ಎಲ್ಲಿಗೇನೆಂದರೆ ಎಲ್ಲಿ ಏನಿಲ್ಲಾ ಬದ್ಧ ಕಂಕಣವ ಕಟ್ಟಿಕೊಂಡು ನಿನ್ನ ಪಾದವೆ ಗತಿ ಯೆಂದಿರುವೆ ಇಷ್ಟು 1 ಭಿಕ್ಷಕೆ ಬಂದವರಿಗೆ ನೀಡಲು ಹಿಡಿ ಭತ್ತಕೆ ನೆಲೆಯಿಲ್ಲಾ ಕುಕ್ಷುಂಬರರಾಗಿ ಗೃಹಕೆ ಬಂದವರಿಗೆ ಕೂಳಿಗೆ ಗತಿಯಿಲ್ಲಾ ತುಚ್ಛ ಕುಬುದ್ಧಿ ತುಂಟರ ಕೂಡ ಉಪೇಕ್ಷೆ ಮಾಡ್ವರಲ್ಲಾ ಲಕ್ಷ್ಮೀರಮಣ ಶ್ರೀ ರಘುಕುಲ ತಿಲಕ ನೀ ರಕ್ಷಕನೆಂದಾ ಪೇಕ್ಷೆಯಲಿರುವನಿಗೆ 2 ಅತಿಥಿ ಆಭ್ಯಾಗತರು ಬಂದರೆ ಪೂಜಿಸೊ ಅಧಿಕಾರವು ಇಲ್ಲ ಸುತರು ಹಿತರು ಕೂಡುಂಬುವ ಸಂತತ ಸುಖವು ಕಾಣಲಿಲ್ಲ ಹಿತವರುದಾರಿಲ್ಲ ಪತಿ 'ಹೊನ್ನೆ ವಿಠ್ಠಲ’ ಪರಮ ಪುರುಷ ಕೃಷ್ಣಾ 3
--------------
ಹೆನ್ನೆರಂಗದಾಸರು
ಇಂದ್ರಮಾಣಿಕ ಬಿಗಿದ ಹೊಸ ಕುಂದಣದಾರತಿನೆತ್ತಿ ಶಚಿದೇವಿ ಆರತಿನೆತ್ತಿ ಇಂದ್ರಾಧಿಪತಿಯ ಚರಣಕೆ 1 ಹೊನ್ನ ಹರಿವಾಣದಲಿ ಹೊಸ ಕುಂದಣದಾರತಿನೆತ್ತಿ ಸೌಪರ್ಣಿ ಉಮಾದೇವಿ ಉಮಾದೇವಿ ಆರತಿನೆತ್ತಿ ಬ್ರಹ್ಮಾಂಡ ಒಡೆದ ಚರಣಕೆ 2 ಇಂತು ಹಯವದನನ ಎಂತು ನಾ ಪೊಗಳುವೆ ಸಂತೋಷದಿಂದ ಸುರರೆಲ್ಲ ಸುರರೆಲ್ಲ ಪಾಡಿದರು ಕಾಂತೇರಿಗೆಲ್ಲಾತನುವೆಂದು(?) 3
--------------
ವಾದಿರಾಜ